All posts by nagaraj11081993

SBI Recruitment 2025: SBIನಲ್ಲಿ 996 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗೆ ನೇಮಕಾತಿ; ಪದವೀಧರರು ಅರ್ಹರು! – Kannada News | SBI SCO Recruitment 2025: Last Date Extended for 996 Graduate Officer Posts!

ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಪದವೀಧರರಿಗೆ ಗುಡ್​ ನ್ಯೂಸ್​ ಇಲ್ಲಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ SCO ಹುದ್ದೆಯ ನೋಂದಣಿ ಗಡುವನ್ನು ವಿಸ್ತರಿಸಿದೆ. ಇನ್ನೂ ಅರ್ಜಿ ಸಲ್ಲಿಸದ ಆಸಕ್ತ ಅಭ್ಯರ್ಥಿಗಳಿಗೆ ಇದು ಸುವರ್ಣ ಅವಕಾಶ. ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಜನವರಿ 5 ರವರೆಗೆ ಅರ್ಜಿ ಸಲ್ಲಿಸಬಹುದು. ಎಸ್‌ಬಿಐ 996 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಿದೆ .

ಅರ್ಹತೆ ಮತ್ತು ವಯಸ್ಸಿನ ಮಿತಿ:

ಎಸ್‌ಬಿಐ ಹೊರಡಿಸಿದ ಅಧಿಕೃತ ಹುದ್ದೆಯ ಅಧಿಸೂಚನೆಯ ಪ್ರಕಾರ, ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಹುದ್ದೆಗೆ ಅನುಗುಣವಾಗಿ ವಯಸ್ಸಿನ ಮಿತಿ ಬದಲಾಗುತ್ತದೆ. ಅರ್ಹತೆಯ ಕುರಿತು ಹೆಚ್ಚಿನ ಮಾಹಿತಿಗಾಗಿ, ಅಭ್ಯರ್ಥಿಗಳು ಬ್ಯಾಂಕ್ ನೀಡುವ ನೇಮಕಾತಿ ಜಾಹೀರಾತನ್ನು ಪರಿಶೀಲಿಸಬಹುದು.

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು 750 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆದಾಗ್ಯೂ, ಎಸ್‌ಸಿ, ಎಸ್‌ಟಿ ಮತ್ತು ಅಂಗವಿಕಲ ವ್ಯಕ್ತಿಗಳ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸುವುದರಿಂದ ವಿನಾಯಿತಿ ಪಡೆದಿರುತ್ತಾರೆ.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್​​ನಲ್ಲಿ ಉದ್ಯೋಗವಕಾಶ; ಸಂಶೋಧನಾ ಸಹಾಯಕ ಹುದ್ದೆಗೆ ನೇಮಕಾತಿ

ಅರ್ಜಿ ಸಲ್ಲಿಸುವುದು ಹೇಗೆ?

  • ಬ್ಯಾಂಕಿನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ನೀಡಲಾದ ವೃತ್ತಿ ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
  • SBI SCO ನೋಂದಣಿ ಲಿಂಕ್ ಅನ್ನು ಇಲ್ಲಿ ಕ್ಲಿಕ್ ಮಾಡಿ.
  • ವಿವರಗಳನ್ನು ನಮೂದಿಸಿ ನೋಂದಾಯಿಸಿ ಮತ್ತು ಫಾರ್ಮ್ ಅನ್ನು ಭರ್ತಿ ಮಾಡಿ.
  • ಅಗತ್ಯವಿರುವ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  • ಅರ್ಜಿ ಶುಲ್ಕವನ್ನು ಪಾವತಿಸಿ ಸಲ್ಲಿಸಿ.

ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ?

ವೈಯಕ್ತಿಕ/ದೂರವಾಣಿ/ವಿಡಿಯೋ ಸಂದರ್ಶನಗಳ ಮೂಲಕ ಆಯ್ಕೆ ಮಾಡಲಾಗುತ್ತದೆ. ಸಂದರ್ಶನವು 100 ಅಂಕಗಳನ್ನು ಹೊಂದಿರುತ್ತದೆ. ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅರ್ಹತೆಯನ್ನು ನಿರ್ಧರಿಸಲಾಗುತ್ತದೆ. ನಂತರ ಯಶಸ್ವಿ ಅಭ್ಯರ್ಥಿಗಳು ದಾಖಲೆ ಪರಿಶೀಲನೆ ಸೇರಿದಂತೆ ಮುಂದಿನ ಆಯ್ಕೆ ಪ್ರಕ್ರಿಯೆಗೆ ಮುಂದುವರಿಯುತ್ತಾರೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಜ್ಯದಲ್ಲಿವೆ 6,675 ಏಕೋಪಾಧ್ಯಾಯ ಶಾಲೆಗಳು, 188 ಸ್ಕೂಲ್​​ಗಳಲ್ಲಿ ಶೂನ್ಯ ದಾಖಲಾತಿ – Kannada News | Karnataka Education Crisis: 6,675 Single Teacher Schools, 188 with Zero Admissions

ಬೆಂಗಳೂರು, ಡಿಸೆಂಬರ್​​ 25: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ರಾಜ್ಯದಲ್ಲಿ 6,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಲ್ಲಿ ಕೇವಲ ಒಬ್ಬರೇ ಶಿಕ್ಷಕರಿದ್ದಾರೆ. ಹಿಂದಿನ ಶೈಕ್ಷಣಿಕ ವರ್ಷಕ್ಕೆ ಹೋಲಿಸಿದರೆ ಇಂತಹ ಶಾಲೆಗಳ ಸಂಖ್ಯೆ ಸುಮಾರು 1,200ರಷ್ಟು ಹೆಚ್ಚಾಗಿದೆ ಎಂದು ಸರ್ಕಾರದ ಅಂಕಿಅಂಶಗಳು ತಿಳಿಸಿವೆ. 2024–25ನೇ ಶೈಕ್ಷಣಿಕ ವರ್ಷದಲ್ಲಿ ರಾಜ್ಯದಲ್ಲಿ 5,412 ಏಕ ಶಿಕ್ಷಕ ಶಾಲೆಗಳಿದ್ದರೆ, ಈ ಬಾರಿ ಆ ಸಂಖ್ಯೆ 6,675ಕ್ಕೆ ಏರಿಕೆಯಾಗಿದೆ. ಅಂದರೆ ಏಕೋಪಾಧ್ಯಾಯ ಶಾಲೆಗಳ ಸಂಖ್ಯೆ 1,263 ಹೆಚ್ಚಳವಾಗಿವೆ.

ರಾಜ್ಯದಲ್ಲಿ ಸುಮಾರು 49,000 ಸರ್ಕಾರಿ ಶಾಲೆಗಳಿದ್ದು, ಅಂಕಿ ಅಂಶಗಳ ಪ್ರಕಾರ ಏಕ-ಶಿಕ್ಷಕ ಶಾಲೆಗಳ ಸಂಖ್ಯೆ ಹಾಸನದಲ್ಲಿಯೇ ಹೆಚ್ಚಾಗಿವೆ. ನಂತರದ ಸ್ಥಾನವನ್ನು ತುಮಕೂರು ಪಡೆದಿದೆ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಸರ್ಕಾರವು 51,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿದ್ದು, ಇದು ಕಳೆದ ವರ್ಷ ನೇಮಕಗೊಂಡ ಅತಿಥಿ ಶಿಕ್ಷಕರಿಗಿಂತ ಹೆಚ್ಚು ಎಂದು ಈಗಾಗಲೇ ಶಿಕ್ಷಣ ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಕುಸಿತ; ಉಡುಪಿ-ಮಂಗಳೂರಿನ ಈ ಎಲ್ಲ ಕಾಲೇಜುಗಳು ಕ್ಲೋಸ್​​

ಏಕ-ಶಿಕ್ಷಕ ಶಾಲೆಗಳ ಪೈಕಿ ಕೆಲವೊಂದರಲ್ಲಿ ವಿದ್ಯಾರ್ಥಿಗಳ ಸಂಖ್ಯೆ 30ಕ್ಕಿಂತ ಹೆಚ್ಚಿದ್ದು, ಇವುಗಳಲ್ಲಿ ಬಹುಪಾಲು ಪ್ರಾಥಮಿಕ ಶಾಲೆಗಳಾಗಿವೆ. ಈ ಶಿಕ್ಷಕರು 1ರಿಂದ 5ನೇ ತರಗತಿಗಳವರೆಗೆ ಪಾಠ ಮಾಡಬೇಕಾಗಿರುವುದರಿಂದ, ಎಲ್ಲ ಮಕ್ಕಳನ್ನೂ ಒಂದೇ ತರಗತಿಯಲ್ಲಿ ಸೇರಿಸಿ ಪಾಠ ಮಾಡುವುದರ ಹೊರತು ಅವರಿಗೆ ಬೇರೆ ಆಯ್ಕೆಯಿಲ್ಲ. ಆದರೆ ಒಬ್ಬ ಶಿಕ್ಷಕನಿಗೆ ಎಲ್ಲ ತರಗತಿಗಳನ್ನು ನಿರ್ವಹಿಸುವುದು ಅಸಾಧ್ಯ. ಇದು ಮಕ್ಕಳ ಕಲಿಕೆಯ ಮಟ್ಟದ ಮೇಲೆ ಪರಿಣಾಮ ಬೀರುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಅತಿ ಹೆಚ್ಚು ಏಕ-ಶಿಕ್ಷಕ ಶಾಲೆಗಳಿರುವ ಜಿಲ್ಲೆಗಳು

  • ಹಾಸನ – 586
  • ತುಮಕೂರು – 426
  • ಕೋಲಾರ – 347
  • ಚಿಕ್ಕಬಳ್ಳಾಪುರ – 334

ಅತಿ ಕಡಿಮೆ ಏಕ-ಶಿಕ್ಷಕ ಶಾಲೆಗಳಿರುವ ಜಿಲ್ಲೆಗಳು

  • ಧಾರವಾಡ – 26
  • ಬೆಂಗಳೂರು ಉತ್ತರ – 39
  • ವಿಜಯನಗರ – 45
  • ಗದಗ – 46

188 ಶಾಲೆಗಳಲ್ಲಿ ಶೂನ್ಯ ದಾಖಲಾತಿ!

ವಿಧಾನಪರಿಷತ್ ಅಧಿವೇಶನದಲ್ಲಿ ರಾಜ್ಯ ಸರ್ಕಾರ ನೀಡಿದ ಮಾಹಿತಿಯ ಪ್ರಕಾರ, ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 188 ಸರ್ಕಾರಿ ಶಾಲೆಗಳಲ್ಲಿ ಒಂದೂ ಪ್ರವೇಶವಾಗಿಲ್ಲ. ಇದರಲ್ಲಿ 160 ಕಿರಿಯ ಪ್ರಾಥಮಿಕ ಶಾಲೆಗಳು, 25 ಹಿರಿಯ ಪ್ರಾಥಮಿಕ ಶಾಲೆಗಳು ಮತ್ತು 3 ಪ್ರೌಢಶಾಲೆಗಳಿವೆ. ಶೂನ್ಯ ದಾಖಲಾತಿ ಹೊಂದಿರುವ ಶಾಲೆಗಳು ತುಮಕೂರಿನಲ್ಲಿ 45 ಇದ್ದು, ನಂತರ ಕಲಬುರಗಿ 21, ಕೋಲಾರ 20, ಕೊಪ್ಪಳ 18 ಮತ್ತು ಬೀದರ್​​ನಲ್ಲಿ 17 ಇವೆ ಎಂದು ಡೆಕ್ಕನ್​​ ಹೆರಾಲ್ಡ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಜಿಗಣೆಯಿಂದ ಕಚ್ಚಿಸಿಕೊಳ್ಳುವುದರಿಂದ ಕ್ಯಾನ್ಸರ್ ಅನ್ನು ಗುಣಪಡಿಸಬಹುದೇ? ಇಲ್ಲಿದೆ ತಜ್ಞರ ಅಭಿಪ್ರಾಯ – Kannada News | Exploring Leech Therapy’s Role in Cancer Care

ಇತ್ತೀಚಿನ ದಿನಗಳಲ್ಲಿ ವಿವಿಧ ರೀತಿಯ ಕಾಯಿಲೆಗಳಿಂದ ಜನ ಬಳಲುತ್ತಿದ್ದಾರೆ. ಇದಕ್ಕೆ ಈಗಿನವರ ಜೀವನಶೈಲಿಯೇ ಕಾರಣವಾಗಿರಬಹುದು. ಕೆಲವು ರೋಗಗಳನ್ನು ಮನೆಮದ್ದಿನಿಂದ ಇನ್ನು ಕೆಲವನ್ನು ವೈದ್ಯರ ಸಲಹೆ ಮತ್ತು ಚಿಕಿತ್ಸೆಯ ಮೂಲಕ ಗುಣಪಡಿಸಬಹುದು. ಆದರೆ ಕೆಲವು ರೋಗಗಳ ಇಲಾಜಿಗೆ ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ. ಅದರಲ್ಲಿಯೂ ಅವುಗಳನ್ನು ಬುಡದಿಂದ ಕಿತ್ತು ಹಾಕುವುದರ ಜೊತೆಗೆ ದೇಹದ ಮೇಲೆ ಯಾವುದೇ ರೀತಿಯ ಅಡ್ಡಪರಿಣಾಮಗಳು ಆಗದಂತೆ ನೋಡಿಕೊಳ್ಳುವುದು ಸಹ ಮುಖ್ಯವಾಗುತ್ತದೆ. ಈ ರೀತಿ ರೋಗಗಳನ್ನು ವಾಸಿ ಮಾಡಲು ಪರಿಣಾಮಕಾರಿ ಉಪಚಾರಗಳಲ್ಲಿ ಜಿಗಣೆ ಚಿಕಿತ್ಸೆಯೂ (Leech Therapy’s) ಒಂದು. ಇದು ಅನೇಕ ರೋಗಗಳಿಂದ ಮುಕ್ತಿ ಪಡೆಯಲು ಸಹಕಾರಿಯಾಗಿದೆ. ಆದರೆ ಇದನ್ನು ಯಾವ ಕಾಯಿಲೆಗಳ ಇಲಾಜಿಗೆ ಬಳಕೆ ಮಾಡಲಾಗುತ್ತದೆ, ಕ್ಯಾನ್ಸರ್ ತಡೆಯಲು ಜಿಗಣೆ ಚಿಕಿತ್ಸೆಯನ್ನು ಬಳಸಬಹುದೇ ಎಂಬ ಅನುಮಾನಗಳಿರುತ್ತದೆ ಅಂತವರು ಈ ಸ್ಟೋರಿ ಮೂಲಕ ಮಾಹಿತಿ ಪಡೆಯಬಹುದು.

ಜಿಗಣೆ ಚಿಕಿತ್ಸೆ ಹೇಗೆ ನಡೆಯುತ್ತದೆ?

ಈ ಜಿಗಣೆ ಥೆರಪಿಯಲ್ಲಿ ಜೀವಂತ ಹುಳವನ್ನು ಬಳಸಲಾಗುತ್ತದೆ. ಚಿಕಿತ್ಸೆಯ ಸಮಯದಲ್ಲಿ, ಇದು ದೇಹಕ್ಕೆ ಅಂಟಿಕೊಳ್ಳುತ್ತದೆ. ಬಳಿಕ ಅವು ರಕ್ತದಿಂದ ಕಲ್ಮಶಗಳನ್ನು ಹೀರಿಕೊಳ್ಳುತ್ತವೆ. ದೇಹದ ಮೇಲೆ 15- 20 ನಿಮಿಷಗಳ ಕಾಲ ಇರಿಸಿ ತೆಗೆಯಲಾಗುತ್ತದೆ. ನರಹುಲಿ, ಮೊಡವೆ ಸೇರಿದಂತೆ ನಾನಾ ರೀತಿಯ ಸಮಸ್ಯೆಗೆ ಇದು ಪರಿಣಾಮಕಾರಿಯಾಗಿದೆ.

ಜಿಗಣೆ ಚಿಕಿತ್ಸೆ ಯಾವ ಕಾಯಿಲೆಗಳಿಗೆ ಪ್ರಯೋಜನಕಾರಿ?

  • ಕೀಲು ನೋವು, ಸಂಧಿವಾತ
  • ಚರ್ಮ ರೋಗಗಳು
  • ರಕ್ತ ಪರಿಚಲನೆ ಸಮಸ್ಯೆ
  • ಮೈಗ್ರೇನ್‌ಗೆ ಸಹಾಯ ಮಾಡುತ್ತದೆ
  • ತಲೆನೋವಿಗೆ ಉಪಯುಕ್ತ
  • ಉರಿಯೂತದಿಂದ ಪರಿಹಾರ ಪಡೆಯಲು ಪ್ರಯೋಜನಕಾರಿ

ಇದನ್ನೂ ಓದಿ: ಅಧಿಕ ರಕ್ತದೊತ್ತಡವನ್ನು ನಿಯಂತ್ರಣಕ್ಕೆ ತರಲು ನಿಂಬೆ ನೀರು ಕುಡಿಯುವುದು ಒಳ್ಳೆಯದೇ… ಇಲ್ಲಿದೆ ತಜ್ಞರ ಅಭಿಪ್ರಾಯ

ಜಿಗಣೆ ಚಿಕಿತ್ಸೆಯು ಕ್ಯಾನ್ಸರ್ ಗುಣಪಡಿಸಬಹುದೇ?

ಜಿಗಣೆ ಥೆರಪಿಯಿಂದ ಕ್ಯಾನ್ಸರ್‌ ಗುಣಪಡಿಸಲು ಸಾಧ್ಯವಿಲ್ಲ ಎನ್ನುತ್ತಾರೆ ಆರೋಗ್ಯ ತಜ್ಞರು. ಆದರೆ ಉಬ್ಬುವುದು, ನೋವು, ಗಡ್ಡೆಗಳು ಮತ್ತು ಊತದಂತಹ ರೋಗಲಕ್ಷಣಗಳಿಂದ ಪರಿಹಾರ ಪಡೆಯಲು ಇದರ ಬಳಕೆ ಪರಿಣಾಮಕಾರಿಯಾಗಿದೆ. ಅದರಲ್ಲಿಯೂ ಇಲ್ಲಿಯವರೆಗೆ, ಜಿಗಣೆ ಚಿಕಿತ್ಸೆಯು ಕ್ಯಾನ್ಸರ್ ಅನ್ನು ಸಂಪೂರ್ಣವಾಗಿ ಗುಣಪಡಿಸುತ್ತದೆ ಎಂದು ತೋರಿಸುವ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ. ಬೇಕಾದಲ್ಲಿ ನೀವು ಇದನ್ನು ಪ್ರಯತ್ನಿಸಬಹುದು.

ಜಿಗಣೆ ಥೆರಪಿ ಯಾರಿಗೆ ಒಳ್ಳೆಯದಲ್ಲ ?

ರಕ್ತಹೀನತೆ, ರಕ್ತಸ್ರಾವದ ಅಸ್ವಸ್ಥತೆಗಳು ಅಥವಾ ದುರ್ಬಲಗೊಂಡ ರೋಗನಿರೋಧಕ ಶಕ್ತಿ ಇರುವವರಿಗೆ ಇದು ಹಾನಿಕಾರಕವಾಗಬಹುದು. ಜಿಗಣೆ ಚಿಕಿತ್ಸೆಯನ್ನು ನಿರ್ಧರಿಸುವ ಮೊದಲು ನಿಮ್ಮ ವೈದ್ಯರನ್ನು ಸಂಪರ್ಕಿಸಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Bangalore Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿಸೆಂಬರ್ 26ಕ್ಕೆ ಪವರ್ ಕಟ್ – Kannada News | Bangalore Power Cut on December 26: Electricity Outage in These Areas Due to BESCOM Maintenance

ಬೆಂಗಳೂರು, ಡಿಸೆಂಬರ್ 25: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ವ್ಯಾಪ್ತಿಯಲ್ಲಿ ಡಿಸೆಂಬರ್ 26, 2025ರಂದು ವಿದ್ಯುತ್ ವ್ಯತ್ಯಯ (Power Cut) ಉಂಟಾಗಲಿದೆ. 66/11 ಕೆವಿ ಕಗ್ಗೇನಹಳ್ಳಿ ಸಬ್‌ಸ್ಟೇಷನ್ ಕೇಬಲ್ ನಿರ್ವಹಣಾ ಕಾರ್ಯ ಹಿನ್ನೆಲೆಯಲ್ಲಿ ಈ ವಿದ್ಯುತ್ ವ್ಯತ್ಯಯ ಸಂಭವಿಸಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಜತೆಗೆ, ಎಕ್ಸ್​ ಸಂದೇಶದ ಮೂಲಕವೂ ಮಾಹಿತಿ ನೀಡಿದೆ.

ಎಷ್ಟು ಗಂಟೆಯಿಂದ ಎಷ್ಟು ಗಂಟೆ ವರೆಗೆ ಪವರ್ ಕಟ್?

ಬೆಸ್ಕಾಂ ಪ್ರಕಟಣೆಯಲ್ಲಿ ನೀಡಿದ ಮಾಹಿತಿ ಪ್ರಕಾರ, ಡಿಸೆಂಬರ್ 26ರಂದು ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ. ಕಗ್ಗೇನಹಳ್ಳಿ ಸಬ್‌ಸ್ಟೇಷನ್‌ನ 9-7 ಫೀಡರ್ ವ್ಯಾಪ್ತಿಯಲ್ಲಿ ಕೇಬಲ್ ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿರುವುದರಿಂದ ಈ ಅವಧಿಯಲ್ಲಿ ವಿದ್ಯುತ್ ಪೂರೈಕೆ ಇರದು.

ಯಾವೆಲ್ಲ ಏರಿಯಾಗಳಲ್ಲಿ ಪವರ್ ಕಟ್?

ವಿದ್ಯುತ್ ವ್ಯತ್ಯಯಕ್ಕೆ ಒಳಪಡುವ ಪ್ರದೇಶಗಳಲ್ಲಿ ನಾರ್ಥ್ ಗೇಟ್ 1, 2, 3, ಎಂಬಾಸಿ, ಫೀಲಿಪ್ಸ್ ಕಂಪನಿ, ದ್ವಾರಕನಗರ, ಬಾಬಾನಗರ, ಕಗ್ಗೇನಹಳ್ಳಿ ಸುತ್ತಮುತ್ತಲ ಪ್ರದೇಶಗಳು, ಬಾಗಲೂರು ಕ್ರಾಸ್, ಮಟ್ಟು ಬಾಗಲೂರು ಮುಖ್ಯ ರಸ್ತೆ, ಮಣಿಪಾಲ ಕಾಲೇಜು, BSF, PDMS, ಬಾಗಲೂರು ಕ್ರಾಸ್ ವಿನಾಯಕನಗರ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳು ಸೇರಿವೆ.

ಇದನ್ನೂ ಓದಿ: Viral: ಪವರ್ ಕಟ್ ನೆಪ ಹೇಳಿ ಕಚೇರಿ ಕೆಲಸದಿಂದ ತಪ್ಪಿಸಿಕೊಂಡ ಉದ್ಯೋಗಿಯನ್ನು ತರಾಟೆಗೆ ತೆಗೆದುಕೊಂಡ ಮ್ಯಾನೇಜರ್

ನಿರ್ವಹಣಾ ಕಾರ್ಯ ಪೂರ್ಣಗೊಂಡ ನಂತರ ವಿದ್ಯುತ್ ಸರಬರಾಜು ಪುನಃ ಆರಂಭಿಸಲಾಗುತ್ತದೆ ಎಂದು ಬೆಸ್ಕಾಂ ತಿಳಿಸಿದೆ. ಸಾರ್ವಜನಿಕರು ಅಗತ್ಯ ಮುಂಜಾಗ್ರತೆ ವಹಿಸಿ ಸಹಕರಿಸುವಂತೆ ಬೆಸ್ಕಾಂ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಡೆವಿಲ್’ ಬಳಿಕ ರೇಟಿಂಗ್ ಕೊಡದಂತೆ ಕೋರ್ಟ್​​ನಿಂದ ಆರ್ಡರ್ ತಂದ ‘45’, ‘ಮಾರ್ಕ್​​’ – Kannada News | Kannada Films Block BookMyShow Ratings: Mark and 45 Use Court Order to Combat Hate Reviews

ಬುಕ್ ಮೈ ಶೋ ಮೊದಲಾದ ರೇಟಿಂಗ್ ನೋಡಿ ಜನರು ಸಿನಿಮಾ ವೀಕ್ಷಿಸಲು ತೆರಳೋದು ಸಾಮಾನ್ಯ. ಆದರೆ, ಈಗ ಅದಕ್ಕೆ ಬ್ರೇಕ್ ಬೀಳುತ್ತಿದೆ. ಬುಕ್ ಮೈ ಶೋನಲ್ಲಿ ಬರೋ ರೇಟಿಂಗ್ ಎಂದು ಹೇಳಲು ಸಾಧ್ಯವಾಗದ ಪರಿಸ್ಥಿತಿ ಇದೆ. ದ್ವೇಷದ ಕಾರಣಕ್ಕೆ ಅನೇಕರು ಸುಳ್ಳು ರೇಟಿಂಗ್ ಕೊಟ್ಟ ಉದಾಹರಣೆ ಇದೆ. ಇದೇ ಕಾರಣದಿಂದ ಸಿನಿಮಾ ತಂಡದವರು ಈ ವಿಷಯದಲ್ಲಿ ಎಚ್ಚೆತ್ತುಕೊಳ್ಳುತ್ತಿದ್ದಾರೆ. ಈಗ ‘45’ (45 Movie) ಹಾಗೂ ‘ಮಾರ್ಕ್’ ಟೀಂ ಇದೇ ತಂತ್ರ ಉಪಯೋಗಿಸಿದೆ.

ಡಿಸೆಂಬರ್ 11ರಂದು ತೆರೆಗೆ ಬಂದ ‘ಡೆವಿಲ್’ ತಂಡದವರು ನೆಗೆಟಿವ್ ವಿಮರ್ಶೆ ಸಿಗೋ ಭಯದಲ್ಲಿ ಕೋರ್ಟ್​​ನಿಂದ ಆರ್ಡರ್ ತಂದಿದ್ದರು. ಇದನ್ನು ಬುಕ್ ಮೈ ಶೋ ಆ್ಯಪ್​ಗೆ ಸಲ್ಲಿಕೆ ಮಾಡಿದ್ದರು. ಇದರ ಅನುಸಾರ ಬುಕ್ ಮೈ ಶೋನವರು ರೇಟಿಂಗ್ ನೀಡುವ ಆಯ್ಕೆಯನ್ನು ನಿಷ್ಕ್ರಿಯ ಗೊಳಿಸಿದ್ದರು. ಈಗ ‘ಮಾರ್ಕ್’ ಹಾಗೂ ‘45’ ಸಿನಿಮಾ ಕೂಡ ಇದೇ ತಂತ್ರ ಉಪಯೋಗಿಸಿದೆ.

‘ಮಾರ್ಕ್’ ಸಿನಿಮಾದಲ್ಲಿ ಸುದೀಪ್ ನಟಿಸಿದ್ದಾರೆ. ಈ ಚಿತ್ರದಲ್ಲಿ ಹಲವು ಕಲಾವಿದರು ಬಣ್ಣ ಹಚ್ಚಿದ್ದಾರೆ. ಪರಭಾಷಾ ಕಲಾವಿದರೂ ಸಿನಿಮಾದಲ್ಲಿ ನಟಿಸಿದ್ದಾರೆ. ಇನ್ನು, ‘45’ ಸಿನಿಮಾದಲ್ಲಿ ಉಪೇಂದ್ರ, ಶಿವರಾಜ್​ಕುಮಾರ್, ರಾಜ್ ಬಿ. ಶೆಟ್ಟಿ ನಟಿಸಿದ್ದಾರೆ. ಈ ಎರಡೂ ಸಿನಿಮಾಗಳು ದೊಡ್ಡ ಬಜೆಟ್​​ನಲ್ಲಿ ರೆಡಿ ಆಗಿವೆ. ಹೀಗಾಗಿ ಎರಡೂ ಚಿತ್ರಕ್ಕೆ ಗಳಿಕೆ ತುಂಬಾನೇ ಮುಖ್ಯವಾಗಿದೆ.

45- ಮಾರ್ಕ್ ಸಿನಿಮಾಗೆ ಬರಲ್ಲ ರೇಟಿಂಗ್ ಆಪ್ಶನ್

ದ್ವೇಷದ ಕಾರಣಕ್ಕೆ ಸಿನಿಮಾಗೆ ನೆಗೆಟಿವ್ ವಿಮರ್ಶೆ ಹಬ್ಬಿಸೋ ಭಯ ತಂಡವನ್ನು ಕಾಡಿದೆ. ಈ ಕಾರಣದಿಂದ ತಂಡದವರು ಕೋರ್ಟ್​​ನಿಂದ ಆರ್ಡರ್ ತಂದಿದೆ. ಮುಂದಿನ ದಿನಗಳಲ್ಲಿ ದೊಡ್ಡ ಬಜೆಟ್​​ ಸಿನಿಮಾಗಳು ಇದೇ ಟ್ರೆಂಡ್ ಫಾಲೋ ಮಾಡೋ ಸಾಧ್ಯತೆ ಇದೆ.

ಇದನ್ನೂ ಓದಿ: ‘45’ ಸಿನಿಮಾ ಹೇಗಿದೆ? ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್

‘ಮಾರ್ಕ್’ ಹಾಗೂ ‘45’ ಎರಡೂ ಕನ್ನಡದ ಸಿನಿಮಾಗಳು. ಈ ಚಿತ್ರಗಳು ಮೊದಲ ದಿನ ಎಷ್ಟು ಕೋಟಿ ರೂಪಾಯಿ ಗಳಿಸಬಹುದು ಎಂಬ ಲೆಕ್ಕಾಚಾರ ಶುರುವಾಗಿದೆ. ಎರಡೂ ಸಿನಿಮಾಗೆ ಉತ್ತಮ ಟಾಕ್ ಪಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 1:45 pm, Thu, 25 December 25

Source link

Viral: ಕೋವಿಡ್ ತಂದ ಸಂಕಷ್ಟ; ರ‍್ಯಾಪಿಡೋ ಚಾಲಕನಾಗಿ ಬದುಕು ಕಟ್ಟಿಕೊಂಡ ಉದ್ಯಮಿ – Kannada News | Losses in the industry due to Covid; Businessman takes up Rapido driving career

ಜೀವನ ಎಂದ ಮೇಲೆ ಏರಿಳಿತಗಳು ಸಹಜ. ಬದುಕು ಕೆಲವೊಮ್ಮೆ ಒಂದರ ಮೇಲೆ ಒಂದರಂತೆ ಹೊಡೆತಗಳನ್ನು ತಂದೊಡ್ದುತ್ತದೆ. ಎಲ್ಲವನ್ನು ಎದುರಿಸಿ ನಿಲ್ಲಬೇಕು ಅಷ್ಟೇ. ಹೌದು, ಹೋಟೆಲ್ ಮ್ಯಾನೇಜ್ ಮೆಂಟ್ ಪದವಿ ಮಾಡಿ, ಸ್ಟಾರ್ಟ್‌ಅಪ್ (startup) ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದ್ದ ಉದ್ಯಮಿಗೆ ಕೋವಿಡ್ ಹೊಡೆತ ತಂದೊಟ್ಟಿತು. ಇದಾದ ಬಳಿಕ ಬದುಕಿಗಾಗಿ ಅವಲಂಬಿಸಿದ್ದು ರ‍್ಯಾಪಿಡೋ ಚಾಲಕ ವೃತ್ತಿ. ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಬುಕ್ ಮಾಡಿದ್ದ ಚಿರಾಗ್ (Chiraag) ಎಂಬ ವ್ಯಕ್ತಿಗೆ ಈ ಚಾಲಕನ ಬದುಕಿನ ಕಥೆ ಕೇಳಿ ಶಾಕ್‌ ಆಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಉದ್ಯಮಿಯಾಗಿದ್ದ ವ್ಯಕ್ತಿ ರ‍್ಯಾಪಿಡೋ ಚಾಲಕನಾಗಿ ಬದುಕು ಕಟ್ಟಿಕೊಂಡದ್ದನ್ನು ಕೇಳಿದ್ರೆ ನೀವು ಶಾಕ್ ಆಗ್ತೀರಾ. ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಚಿರಾಗ್ (Chiraaag) ಹೆಸರಿನ ಎಕ್ಸ್ ಖಾತೆಯಲ್ಲಿ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾಗಿದೆ. ಚಿರಾಗ್ ಚಾಲಕನನ್ನು ಮಾತನಾಡಿಸುವ ಪ್ರಯತ್ನ ಮಾಡಿದ್ದು ಈ ವೇಳೆ ಚಾಲಕನಾಗಿರುವ ವ್ಯಕ್ತಿಯ ಬದುಕಿನ ಅಸಲಿ ಕಥೆ ಹೊರಬಿದ್ದಿದೆ. ಈ ವ್ಯಕ್ತಿಯೂ ಅಮಿಟಿ ವಿಶ್ವವಿದ್ಯಾಲಯದಲ್ಲಿ ಹೋಟೆಲ್ ಮ್ಯಾನೇಜ್ಮೆಂಟ್ ಅಧ್ಯಯನ ಮಾಡಿದ್ದು, ಇವರ ತಂದೆ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರಂತೆ. ನಿವೃತ್ತಿಯ ಬಳಿಕ ಕುಟುಂಬವು ಉದ್ಯಮದಲ್ಲಿ ತೊಡಗಿಸಿಕೊಂಡಿದ್ದು, ಜೀವನವು ಉತ್ತಮ ರೀತಿಯಲ್ಲಿ ಸಾಗುತ್ತಿತ್ತು. ಹೀಗಿರುವಾಗ ಮಹಾಮಾರಿ ಕೋವಿಡ್ 19 ಈ ವ್ಯಕ್ತಿಯ ಬದುಕನ್ನೇ ಅಲ್ಲೋಲ್ಲ ಕಲ್ಲೋಲವಾಗಿಸಿತ್ತಂತೆ. ಹೀಗಾಗಿ ಕೆಲಸಗಾರರ ಸಂಬಳ, ಬ್ಯಾಂಕ್ ಸಾಲ ಸೇರಿ ಸರಿ ಸುಮಾರು 13-14 ಕೋಟಿ ರೂಪಾಯಿ ನಷ್ಟವಾಯಿತು ಎಂದು ಹೇಳಿಕೊಂಡಿದ್ದಾನೆ.

ವೈರಲ್ ಪೋಸ್ಟ್ ಇಲ್ಲಿದೆ

ಹೀಗಾಗಿ ಮತ್ತೆ ಉದ್ಯಮದಲ್ಲಿ ಚೇತರಿಸಿಕೊಳ್ಳುವುದು ಅಸಾಧ್ಯವಾಯಿತು. ಕೈಯಲ್ಲಿದ್ದ ಐದು ಲಕ್ಷ ರೂಪಾಯಿಯಲ್ಲಿ ನಾಲ್ಕು ಲಕ್ಷ  ರೂ ಗೆಳೆಯನೊಂದಿಗೆ ಹೂಡಿಕೆ ಮಾಡಿ ಮತ್ತೊಮ್ಮೆ ಸ್ಟಾರ್ಟ್‌ಅಪ್ ಆರಂಭಿಸಿದ್ದು, ಆದರೆ ಮತ್ತೆ ನಷ್ಟವಾಯಿತು. ಕೈಯಲ್ಲಿ ಹಣವಿಲ್ಲದೇ ತನ್ನ ಬಳಿ ಒಂದೇ ಒಂದು ಬೈಕ್ ಎಂದು ತನ್ನ ರ‍್ಯಾಪಿಡೋ ಚಾಲಕ ತನ್ನ ಬದುಕಿನ ಬಗ್ಗೆ ಹೇಳಿಕೊಂಡಿದ್ದಾನೆ.

ಈ ಬೈಕ್ ಇಟ್ಟುಕೊಂಡು ರ‍್ಯಾಪಿಡೋ ಚಾಲಕನಾಗಿ ಈ ವೃತ್ತಿಯನ್ನು ಆರಂಭಿಸಿದೆ. ನಾನು ಯಾವುದನ್ನು ಬಿಟ್ಟುಕೊಡುತ್ತಿಲ್ಲ. ನಾನು ಇನ್ನೂ ದೇವರನ್ನು ನಂಬುತ್ತೇನೆ. ಕೊನೆಯ ಬಾರಿಗೆ ಪ್ರಯತ್ನಿಸುತ್ತೇನೆ. ನಾನು ಬಿಟ್ಟುಕೊಡುವ ಮೊದಲು ಇನ್ನೊಂದು ಹೊಡೆತ ಎಂದು ಹೇಳುತ್ತಿದ್ದಂತೆ ಈ ಪ್ರಯಾಣಿಕನ ಕಣ್ಣು ಒದ್ದೆಯಾಗಿದೆ. ನನಗೆ ಏನು ಹೇಳಬೇಕೆಂದು ತಿಳಿಯಲಿಲ್ಲ. ಸುಮ್ಮನೆ ಕುಳಿತೆ, ಆದರೆ ಅವರ ಮಾತು ನನ್ನ ಹೃದಯ ಮುಟ್ಟಿತು. ಜೀವನ ಕೆಲವೊಮ್ಮೆ ಅನ್ಯಾಯ ಮಾಡುತ್ತದೆ ಎಂದು ರ‍್ಯಾಪಿಡೋ ಚಾಲಕನ ಬದುಕಿನ ಕಥೆಯ ಕೇಳಿ ಪ್ರಯಾಣಿಕನು ಬೇಸರ ವ್ಯಕ್ತಪಡಿಸಿದ್ದಾನೆ.

ಇದನ್ನೂ ಓದಿ:ಜೀವನಕ್ಕಾಗಿ ಆಟೋನೇ ಆಧಾರ; ಇದು ದೈಹಿಕ ನ್ಯೂನತೆ ಮೆಟ್ಟಿನಿಂತ ವ್ಯಕ್ತಿಯ ಕಥೆ

ಈ ಪೋಸ್ಟ್ ಇದುವರೆಗೆ ಐದು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಈ ವ್ಯಕ್ತಿಯ ಕಥೆ ನನಗೂ ತುಂಬಾ ನೋವುಂಟು ಮಾಡಿತು.. ಬದುಕು ನಿಜಕ್ಕೂ ಅನಿಶ್ಚಿತ ಎಂದು ಹೇಳಿದ್ದಾರೆ. ಮತ್ತೊಬ್ಬರು, ಬದುಕಿನಲ್ಲಿ ಒಳ್ಳೆಯದಾಗುತ್ತೆ, ತಾಳ್ಮೆ ಇರಲಿ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಕೋವಿಡ್ ಅನೇಕ ಕುಟುಂಬಗಳನ್ನು ಆರ್ಥಿಕವಾಗಿ ನಾಶ ಮಾಡಿತು ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಚಾಮರಾಜನಗರದಲ್ಲಿ ಬೋನಿಗೆ ಬಿದ್ದ ಹುಲಿ: ಹುಲಿರಾಯನ ನೋಡಲು ಮುಗಿಬಿದ್ದ ಜನ – Kannada News | Bandipur Tiger Menace Ends: Chamarajanagar Captures Feral Big Cat in Cage

ಚಾಮರಾಜನಗರ, ಡಿ.25: ದಿನ ದಿಂದ ದಿನಕ್ಕೆ ಗಡಿ ನಾಡು ಚಾಮರಾಜನಗರದಲ್ಲಿ ಹುಲಿಯ ಉಪಟಳ ಹೆಚ್ಚಾಗಿದೆ. ಇದೀಗ ಮತ್ತೊಂದು ಹುಲಿ ದೇಪಾಪುರ ಗ್ರಾಮದ ಹೊರ ವಲಯದ ಬೋನಿಗೆ ಬಿದ್ದಿದೆ. ಇನ್ನು ಹುಲಿಯನ್ನು ನೋಡಲು ಕಿಕ್ಕಿರಿದು ಗ್ರಾಮಸ್ಥರು ಸೇರಿದ್ದಾರೆ. ಇನ್ನು ಜನರನ್ನು ನೋಡಿ ಬೋನಿನಲ್ಲಿದ್ದ ಹುಲಿ ಕೂಡ ಘರ್ಜನೆ ಮಾಡಿದೆ. ಈ ಹುಲಿ ಘರ್ಜನೆ ಹಾಗೂ ಹಾರಾಟವನ್ನು ನೋಡಿ ಜನರು ಕೂಡ ಬೆಚ್ಚಿಬಿದ್ದಿದ್ದಾರೆ. ಕಳೆದ ಎರೆಡು ಮೂರು ತಿಂಗಳಿಂದ ಆಗಾಗ ಕಾಣಿಸಿಕೊಂಡು ಭಯ ಹುಟ್ಟಿಸಿದ್ದ ಹುಲಿ, ಇದೀಗ ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಬಿದ್ದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ ಸಿಬ್ಬಂದಿ ಇದೀಗ ಸ್ಥಳಕ್ಕೆ ಧಾವಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Yearly Horoscope 2026 : 2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ – Kannada News | Scorpio 2026 Yearly Horoscope: Dr Basavaraj Gurujis Astrological Predictions

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ವೃಶ್ಚಿಕ ರಾಶಿಯವರಿಗೆ 2026ರ ವಾರ್ಷಿಕ ಫಲಾಫಲಗಳನ್ನು ವಿವರಿಸಿದ್ದಾರೆ. ಈ ವರ್ಷ ಗುರು ಗ್ರಹವು ಎಂಟನೇ ಮನೆಯಿಂದ ಒಂಬತ್ತನೇ ಮನೆಗೆ ಸಂಚಾರ ಮಾಡುವುದರಿಂದ ಅದೃಷ್ಟ ಮತ್ತು ದೈವಬಲ ಹೆಚ್ಚಾಗಲಿದೆ. ಶನಿ ಗ್ರಹವು ವರ್ಷವಿಡೀ ಪಂಚಮದಲ್ಲೇ ಇರಲಿದ್ದು, ರಾಹು ಚತುರ್ಥದಿಂದ ತೃತೀಯಕ್ಕೆ ಮತ್ತು ಕೇತು ದಶಮದಿಂದ ನವಮಕ್ಕೆ ಸಂಚಾರ ಮಾಡಲಿದೆ.

ಆರ್ಥಿಕವಾಗಿ ಈ ವರ್ಷ ಪ್ರಗತಿ ಕಾಣುವ ಸಾಧ್ಯತೆ ಇದೆ. ಆದಾಯವು ಹೆಚ್ಚಾಗಿ, ಕೆಲಸ ಕಾರ್ಯಗಳಲ್ಲಿ ಶುಭ ಫಲಗಳು ದೊರೆಯುತ್ತವೆ. ಮೊದಲಾರ್ಧದಲ್ಲಿ ತೀವ್ರ ಪ್ರಯತ್ನಗಳು ಬೇಕಾದರೂ, ದ್ವಿತೀಯಾರ್ಧದಲ್ಲಿ ಗುರುಬಲದ ಅನುಗ್ರಹದಿಂದ ಹೆಚ್ಚಿನ ಯಶಸ್ಸು ಸಿಗಲಿದೆ. ಮಕ್ಕಳ ಚಿಂತೆ, ಅವರ ಶಿಕ್ಷಣ ಮತ್ತು ವಿವಾಹದ ವಿಚಾರದಲ್ಲಿ ಒಂದಷ್ಟು ಸವಾಲುಗಳು ಎದುರಾಗಬಹುದು. ತಾಯಿಯ ಆರೋಗ್ಯ ಮತ್ತು ಮನೆ ಕಟ್ಟುವ ವಿಚಾರದಲ್ಲಿ ವಿಳಂಬಗಳು ಕಂಡುಬಂದರೂ ಕಾರ್ಯ ಪೂರ್ಣಗೊಳ್ಳಲಿದೆ. ಆಂತರಿಕ ಅಸಂತೃಪ್ತಿ ಮತ್ತು ಆಪ್ತರಿಂದ ಮೋಸ ಹೋಗುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ವಹಿಸಬೇಕು.

ವಾಹನ ಚಾಲನೆ ಮತ್ತು ದೀರ್ಘ ಪ್ರಯಾಣಗಳಲ್ಲಿ ಎಚ್ಚರಿಕೆ ಅಗತ್ಯ. ಅನಾರೋಗ್ಯದ ಸಣ್ಣಪುಟ್ಟ ಸಮಸ್ಯೆಗಳು ಕಾಡಬಹುದು. ಹನುಮನ ಸ್ತೋತ್ರ ಪಠಣೆ, ಕೆಂಪು ಮತ್ತು ಕೇಸರಿ ಬಣ್ಣಗಳ ಬಳಕೆ ಹಾಗೂ 9 ಮತ್ತು 6 ಅದೃಷ್ಟ ಸಂಖ್ಯೆಗಳಾಗಿವೆ ಎಂದು ಗುರೂಜಿ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ? ತಜ್ಞ ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ ನೋಡಿ – Kannada News | Chitradurga Bus Accident: How Burnt Bodies Are Identified After Tragedy? Expert Doctors Explain the Process

ಚಿತ್ರದುರ್ಗ, ಡಿಸೆಂಬರ್ 25: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಬಸ್ ಅಪಘಾತದಲ್ಲಿ ಅನೇಕ ಮಂದಿ ಮೃತಪಟ್ಟಿದ್ದು, ಹಲವು ಮಂದಿ ಸುಟ್ಟು ಕರಕಲಾಗಿದ್ದಾರೆ. ಅವರ ಮೃತದೇಹಗಳ ಗುರುತು ಪತ್ತೆ ಮಾಡುವುದು ಸವಾಲಾಗಿದೆ. ಪ್ರಸ್ತುತ, ನಾಲ್ಕು ಮೃತದೇಹಗಳನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಅವು ಅತಿ ಹೆಚ್ಚು ಸುಟ್ಟುಹೋಗಿರುವ ಕಾರಣ ನೇರವಾಗಿ ಗುರುತಿಸಲು ಸಾಧ್ಯವಾಗುತ್ತಿಲ್ಲ.

ಮೃತದೇಗಳ ಪತ್ತೆ ಕಾರ್ಯದ ಬಗ್ಗೆ ಚಿತ್ರದುರ್ಗದ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ರವೀಂದ್ರ ಅವರು ಮಾಹಿತಿ ನೀಡಿದ್ದಾರೆ. ಮೃತದೇಹಗಳ ಗುರುತು ಪತ್ತೆಗಾಗಿ ಸಂಬಂಧಿಕರು ಮುಂದಾಗಬೇಕಿದ್ದು, ಒಂದು ವೇಳೆ ಗುರುತು ಪತ್ತೆಯಾಗದಿದ್ದಲ್ಲಿ ಡಿಎನ್‌ಎ ಪರೀಕ್ಷೆ ಅನಿವಾರ್ಯವಾಗುತ್ತದೆ. ಡಿಎನ್‌ಎ ಪರೀಕ್ಷೆಗಾಗಿ ಮೋಲಾರ್ ಟೂತ್ ಮತ್ತು ಎದೆಯ ಸ್ಟರ್ನಮ್ ಮೂಳೆಯ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತದೆ. ಈ ಪ್ರಕ್ರಿಯೆ ಸುಮಾರು ಮೂರು ದಿನಗಳನ್ನು ತೆಗೆದುಕೊಳ್ಳುತ್ತದೆ. ಅಲ್ಲಿಯವರೆಗೂ ಮೃತದೇಹಗಳನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಸಂರಕ್ಷಿಸಿಡಲಾಗುತ್ತದೆ. ವಿಧಿವಿಜ್ಞಾನ ತಜ್ಞರಾದ ಡಾ. ವೇಣು ಮತ್ತು ಡಾ. ಅಜಯ್ ಅವರು ಈ ಗುರುತು ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ. ಈ ವೈಜ್ಞಾನಿಕ ವಿಧಾನದ ಮೂಲಕ ಮೃತದೇಹಗಳ ಗುರುತು ಖಚಿತಪಡಿಸಿ ಸಂಬಂಧಿಕರಿಗೆ ಹಸ್ತಾಂತರಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಡಾ. ರವೀಂದ್ರ ತಿಳಿಸಿದ್ದಾರೆ. ಅವರ ಮಾತಿನ ವಿಡಿಯೋ ಇಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಋಣ ತೀರಿಸಲು ತಮಿಳಿಗೆ ಬರುತ್ತಿದ್ದಾರೆ ಶಾರುಖ್ ಖಾನ್: ಸಿನಿಮಾ ಯಾವುದು? – Kannada News | Shah Rukh Khan acting in Jailer 2 movie with Rajinikanth

ಶಾರುಖ್ ಖಾನ್ (Shah Rukh Khan) ಬಾಲಿವುಡ್​ನ ಸೂಪರ್ ಸ್ಟಾರ್ ನಟ. ‘ಪಠಾಣ್’, ‘ಜವಾನ್’, ‘ಡಂಕಿ’ ಮೂಲಕ ಸತತ ಮೂರು ಹಿಟ್ ಸಿನಿಮಾಗಳನ್ನು ನೀಡಿರುವ ಶಾರುಖ್ ಖಾನ್ ಇದೀಗ ‘ಕಿಂಗ್’ ಮೂಲಕ ಮತ್ತೊಂದು ಬ್ಲಾಕ್ ಬಸ್ಟರ್ ಸಿನಿಮಾಕ್ಕೆ ತಯಾರಿ ನಡೆಸುತ್ತಿದ್ದಾರೆ. ಶಾರುಖ್ ಖಾನ್ ಅತಿಥಿ ಪಾತ್ರಗಳಲ್ಲಿ ನಟಿಸುವುದು ಬಹಳ ಅಪರೂಪ. ಅದರಲ್ಲೂ ಪರ ಭಾಷೆಯಲ್ಲಿ ಅತಿಥಿ ಪಾತ್ರಗಳಲ್ಲಿ ಶಾರುಖ್ ಖಾನ್ ನಟಿಸುವುದೆಂದರೆ ಅದಕ್ಕೆ ವಿಶೇಷ ಕಾರಣವೇ ಇರಬೇಕು. ಇದೀಗ ಶಾರುಖ್ ಖಾನ್, ತಮಿಳಿನ ಒಂದು ಸಿನಿಮಾದ ಅತಿಥಿ ಪಾತ್ರದಲ್ಲಿ ನಟಿಸಲಿದ್ದಾರೆ. ಇದಕ್ಕೆ ಕಾರಣ ಋಣಭಾರ.

ರಜನೀಕಾಂತ್ ನಟಿಸುತ್ತಿರುವ ‘ಜೈಲರ್ 2’ ಸಿನಿಮಾನಲ್ಲಿ ಶಾರುಖ್ ಖಾನ್ ಅತಿಥಿ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಗಟ್ಟಿಯಾಗಿಯೇ ಹರಿದಾಡುತ್ತಿದೆ. ‘ಜೈಲರ್’ ಸಿನಿಮಾ ತನ್ನ ವಿಶೇಷ ಕ್ಯಾಮಿಯೋ ಪಾತ್ರಗಳಿಂದಲೇ ದೊಡ್ಡ ಹಿಟ್ ಆಗಿತ್ತು. ಶಿವರಾಜ್ ಕುಮಾರ್, ಮೋಹನ್​​ಲಾಲ್, ಜಾಕಿ ಶ್ರಾಫ್, ತಮನ್ನಾ, ಸುನಿಲ್ ಇನ್ನೂ ಕೆಲವರು ಅತಿಥಿ ಪಾತ್ರಗಳಲ್ಲಿ ನಟಿಸಿದ್ದ ‘ಜೈಲರ್’ ಸಿನಿಮಾ ಬ್ಲಾಕ್ ಬಸ್ಟರ್ ಆಗಿತ್ತು. ಇದೀಗ ‘ಜೈಲರ್ 2’ ನಿರ್ಮಾಣ ಆಗುತ್ತಿದ್ದು, ಈ ‘ಕ್ಯಾಮಿಯೋ ಗೇಮ್’ ಅನ್ನು ಇನ್ನೂ ದೊಡ್ಡ ಹಂತಕ್ಕೆ ಕೊಂಡೊಯ್ಯುವುದು ನಿರ್ದೇಶಕ ನೆಲ್ಸನ್ ಯೋಜನೆ.

ಇದನ್ನೂ ಓದಿ:ಹೃತಿಕ್ ಆಯ್ತು ಈಗ ಶಾರುಖ್ ಖಾನ್ ಜೊತೆ ನಟಿಸಲಿದ್ದಾರಾ ಜೂ ಎನ್​​ಟಿಆರ್?

ಇದೇ ಕಾರಣಕ್ಕೆ ‘ಜೈಲರ್ 2’ ಸಿನಿಮಾಕ್ಕಾಗಿ ಶಾರುಖ್ ಖಾನ್ ಅವರನ್ನೇ ಕರೆತರಲು ನೆಲ್ಸನ್ ಸಜ್ಜಾಗಿದ್ದಾರೆ. ಆದರೆ ಶಾರುಖ್ ಖಾನ್ ಈ ಆಫರ್ ಅನ್ನು ಒಪ್ಪಿಕೊಳ್ಳಲು ಕಾರಣವೂ ಸಹ ಇದೆ. ಈ ಹಿಂದೆ 2011 ರಲ್ಲಿ ಶಾರುಖ್ ಖಾನ್ ‘ರಾ ಒನ್’ ಹೆಸರಿನ ಭಾರಿ ಅದ್ಧೂರಿ ಸಿನಿಮಾ ಮಾಡಿದ್ದರು. ಆ ಸಿನಿಮಾಕ್ಕೆ ಭಾರಿ ದೊಡ್ಡ ಬಂಡವಾಳ ಹಾಕಿ, ಅದ್ಧೂರಿ ಪ್ರಚಾರ ಮಾಡಿದ್ದರು, ಅದ್ಧೂರಿ ಸೆಟ್​​ಗಳು, ಹಾಲಿವುಡ್ ಲೆವೆಲ್ ವಿಎಫ್​​ಎಕ್ಸ್ ಬಳಸಿದ್ದರು. ಆ ಸಿನಿಮಾನಲ್ಲಿ ರಜನೀಕಾಂತ್ ಅವರು ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಈಗ ‘ಜೈಲರ್ 2’ ಸಿನಿಮಾದ ಅತಿಥಿ ಪಾತ್ರದಲ್ಲಿ ನಟಿಸುವ ಮೂಲಕ ಆ ಋಣ ತೀರಿಸುತ್ತಿದ್ದಾರೆ ಶಾರುಖ್ ಖಾನ್.

ಅಲ್ಲದೆ ಶಾರುಖ್ ಖಾನ್ ಅವರಿಗೆ ತಮಿಳು ಚಿತ್ರರಂಗದೊಂದಿಗೆ ಆಪ್ತ ನಂಟಿದೆ. 2000 ರಲ್ಲಿ ಬಿಡುಗಡೆ ಆದ ತಮಿಳು ಸಿನಿಮಾ ‘ಹೇ ರಾಮ್’ನಲ್ಲಿ ಕಮಲ್ ಹಾಸನ್ ಜೊತೆಗೆ ಅತಿಥಿ ಪಾತ್ರದಲ್ಲಿ ಶಾರುಖ್ ಖಾನ್ ನಟಿಸಿದ್ದರು. ಅವರ ‘ಚೆನ್ನೈ ಎಕ್ಸ್​ಪ್ರೆಸ್’ ಸಿನಿಮಾನಲ್ಲಿ ತಮಿಳು ಚಿತ್ರರಂಗಕ್ಕೆ ವಿಶೇಷ ಉಲ್ಲೇಖಗಳನ್ನು ಮಾಡಿದ್ದರು. ಸಾಕಷ್ಟು ತಮಿಳು ನಟರು ಅದರಲ್ಲಿ ನಟಿಸಿದ್ದರು. ಶಾರುಖ್ ಖಾನ್ ಅವರ ‘ಜವಾನ್’ ಸಿನಿಮಾ ನಿರ್ದೇಶಿಸಿದ್ದು ಸಹ ತಮಿಳು ನಿರ್ದೇಶಕ ಅಟ್ಲಿ. ಈಗ ಮತ್ತೊಮ್ಮೆ ತಮಿಳು ಸಿನಿಮಾನಲ್ಲಿ ನಟಿಸಲು ಬರುತ್ತಿದ್ದಾರೆ ಶಾರುಖ್ ಖಾನ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link