All posts by nagaraj11081993

Video: ಅಂತರ ಕಾಯ್ದುಕೊಳ್ಳಿ, ಇಎಂಐ ಬಾಕಿ ಇದೆ; ಕಾರಿನ ಹಿಂಬದಿಯ ಬರಹ ವೈರಲ್ – Kannada News | Keep your distance, EMI is pending; Man warns other motorists

ಮಂಗಳೂರು, ಡಿಸೆಂಬರ್ 24: ಆಟೋ, ಬೈಕ್ (bike) ಸೇರಿದಂತೆ ಕಾರಿನ ಹಿಂಭಾಗದಲ್ಲಿ ಪ್ರೀತಿ ಪಾತ್ರದ ಹೆಸರು, ಕೆಲವರು ತಂದೆ ತಾಯಿಯ ಆಶೀರ್ವಾದ, ಕೈಕೊಟ್ಟ ಪ್ರೇಮಿಯ ನೆನಪಿನಲ್ಲಿ ಕೆಲ ಸಾಲುಗಳನ್ನು ಬರೆದಿರುವುದನ್ನು ನೋಡಿರುತ್ತಿರುತ್ತೀರಿ. ಇಂತಹ ಸಾಲುಗಳನ್ನು ನೋಡಿದಾಗ ತುಟಿಯಂಚಿನಲ್ಲಿ ಸದ್ದಿಲ್ಲದೇ ನಗು ಮೂಡುತ್ತದೆ. ಇದೀಗ ಇಂತಹದ್ದೇ ಕಾರಿನ ಹಿಂಭಾಗದಲ್ಲಿ ಬರೆದ ಸಾಲುಗಳು ನೆಟ್ಟಿಗರ ಗಮನ ಸೆಳೆಯುತ್ತಿದೆ. ಮಂಗಳೂರಿನ (Manglore) ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿ ಚಲಿಸುತ್ತಿರುವ ಮಾರುತಿ ಸುಜುಕಿ ಆಲ್ಟೋ ಕಾರ್‌ನ ಹಿಂಭಾಗದಲ್ಲಿ ಬರೆದ ಸಾಲುಗಳು ಉಳಿದ ವಾಹನ ಸವಾರರಿಗೆ ಎಚ್ಚರಿಕೆ ನೀಡಿದ್ದಂತಿದೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ ಕ್ರಿಡಿಬಲ್ ಮಂಗಳೂರು (incrediblemangloree) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಹಿಂಬದಿ ವಾಹನ ಸವಾರರು ಮಾರುತಿ ಸುಜುಕಿ ಆಲ್ಟೋ ಕಾರಿನ ಹಿಂಭಾಗದಲ್ಲಿ ಬರೆಯಲಾದ ಸಾಲುಗಳನ್ನು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಈ ಕಾರಿನ ಹಿಂಭಾಗದಲ್ಲಿ ಅಂತರ ಕಾಯ್ದುಕೊಳ್ಳಿ…ಇಎಂಐ ಬಾಕಿ ಇದೆ ಎಂದು ಬರೆದಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ:ದೇವ್ರು ಕಣ್ಬಿಟ್ರೆ ಆನಂದ, ಮನುಷ್ಯ ಕಣ್ಬಟ್ರೆ ಗೋವಿಂದ; ಆಟೋ ಹಿಂಬದಿ ಬರೆದ ಸಾಲುಗಳು ವೈರಲ್

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಪಾಪ ಈ ವಾಹನಕ್ಕೆ ಗುದ್ದುವ ಮುನ್ನ ಜೋಕೆ ಎಂದು ಹೇಳಿದ್ದಾರೆ. ಇನ್ನೊಬ್ಬರು, ತನ್ನ ಕಾರಿಗೆ ಏನಾದರೂ ಸಮಸ್ಯೆಯಾದಲ್ಲಿ ಸಾಲಕ್ಕೆ ನೀವೇ ಹೊಣೆಗಾರರು ಎಂಬಂತಿದೆ ಈ ಸಾಲು ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಈ ವ್ಯಕ್ತಿಯ ನೋವು ಕಾರಿನ ಹಿಂಭಾಗದ ಬರಹವೇ ಹೇಳುತ್ತಿದೆ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಚಿವ ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿಗೆ ಲೋಕಾಯುಕ್ತ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತು ಇದೆ ಗೊತ್ತೇ? – Kannada News | Lokayukta Raids Close Aide of Karnataka Minister Zameer Ahmed Khan Over Disproportionate Assets Allegations

ಬೆಂಗಳೂರು, ಡಿಸೆಂಬರ್ 24: ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ನಿವಾಸ ಸೇರಿದಂತೆ ಹತ್ತು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಈ ದಾಳಿ ನಡೆದಿದೆ. ಬೆಂಗಳೂರಿನ ಹಲಸೂರು ನಿವಾಸ, ಇತರ ಆರು ಮನೆಗಳು ಸೇರಿದಂತೆ ಒಟ್ಟು ಏಳು ಮನೆಗಳು, ಕೊಡಗಿನಲ್ಲಿರುವ ಎರಡು ಕಾಫಿ ಎಸ್ಟೇಟ್‌ಗಳು ಮತ್ತು ಹೆಚ್.ಡಿ.ಕೋಟೆಯಲ್ಲಿನ ಒಂದು ರೆಸಾರ್ಟ್ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಸರ್ದಾರ್ ಸರ್ಫರಾಜ್ ಖಾನ್ ವಸತಿ ಇಲಾಖೆಗೆ ನಿಯೋಜನೆಗೊಂಡಿರುವ ಅಧಿಕಾರಿಯಾಗಿದ್ದು, ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆಯ ಕುರಿತು ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಬುಧವಾರ ಬೆಳ್ಳಂಬೆಳಿಗ್ಗೆ 50ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ದಾಳಿಯನ್ನು ನಡೆಸಿದ್ದಾರೆ. ಎಲ್ಲಾ 10 ಸ್ಥಳಗಳಲ್ಲಿ ದಾಖಲೆಗಳ ಪರಿಶೀಲನೆ ಮತ್ತು ಆಸ್ತಿ ವಿವರಗಳ ಸಂಗ್ರಹ ಕಾರ್ಯ ಮುಂದುವರೆದಿದೆ.

ವರದಿ: ಪ್ರದೀಪ್ ಚಿಕ್ಕಾಟಿ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Money Plant Vastu: ಮನಿ ಪ್ಲಾಂಟ್‌ನ ಬುಡದಲ್ಲಿ ಒಂದು ನಾಣ್ಯ ಹೂತಿಡಿ; ಪ್ರಯೋಜನ ಸಾಕಷ್ಟಿವೆ – Kannada News | Money Plant Vastu: Place a Coin for Wealth and Prosperity Tips

ವಾಸ್ತು ಶಾಸ್ತ್ರದ ಪ್ರಕಾರ ಮನಿ ಪ್ಲಾಂಟ್ ಅನ್ನು ಅತ್ಯಂತ ಶುಭ ಸಸ್ಯವೆಂದು ಪರಿಗಣಿಸಲಾಗುತ್ತದೆ. ಇದನ್ನು ಸಂಪತ್ತನ್ನು ಆಕರ್ಷಿಸುವ ಸಸ್ಯ ಎಂದೂ ಹೇಳಲಾಗುತ್ತದೆ. ಮನಿ ಪ್ಲಾಂಟ್ ಗಿಡದ ಬುಡದಲ್ಲಿ ಒಂದು ರೂಪಾಯಿ ಅಥವಾ ಯಾವುದೇ ನಾಣ್ಯವನ್ನು ಇಡುವುದರಿಂದ ಅದರ ಸಕಾರಾತ್ಮಕ ಪರಿಣಾಮಗಳು ಹಲವು ಪಟ್ಟು ಹೆಚ್ಚಾಗುತ್ತವೆ ಎಂದು ಜ್ಯೋತಿಷ್ಯ ಶಾಸ್ತ್ರವು ತಿಳಿಸುತ್ತದೆ.

ಮನಿ ಪ್ಲಾಂಟ್‌ನ ಬುಡದಲ್ಲಿ ನಾಣ್ಯವನ್ನು ಹೂತಿಟ್ಟರೆ, ಅದು ಹಣದ ಆಕರ್ಷಣೆಯನ್ನು ವೇಗಗೊಳಿಸುತ್ತದೆ ಎಂಬ ನಂಬಿಕೆಯಿದೆ. ನಾಣ್ಯವು ಸ್ವತಃ ಸಂಪತ್ತಿನ ಸಂಕೇತವಾಗಿದ್ದು, ಮನಿ ಪ್ಲಾಂಟ್ ಜೊತೆಗೆ ಅದರ ಸಂಬಂಧವು ಹಣದ ಹರಿವಿಗೆ ಹೊಸ ಅವಕಾಶಗಳು ಮತ್ತು ಮಾರ್ಗಗಳನ್ನು ತೆರೆಯುತ್ತದೆ ಎಂದು ಹೇಳಲಾಗುತ್ತದೆ.

ಜ್ಯೋತಿಷ್ಯದ ಪ್ರಕಾರ, ಮನಿ ಪ್ಲಾಂಟ್ ಸಂಪತ್ತಿನ ದೇವತೆಯಾದ ಲಕ್ಷ್ಮಿ ದೇವಿಗೆ ಸಂಬಂಧಿಸಿದ ಸಸ್ಯವಾಗಿದೆ. ಈ ಗಿಡದ ಬುಡದಲ್ಲಿ ನಾಣ್ಯವನ್ನು ಇಡುವುದರಿಂದ ಲಕ್ಷ್ಮಿ ದೇವಿಯ ಆಶೀರ್ವಾದ ವ್ಯಕ್ತಿಗೆ ದೊರೆಯುತ್ತದೆ ಎಂದು ನಂಬಲಾಗುತ್ತದೆ. ಇದರ ಪರಿಣಾಮವಾಗಿ ಮನೆಯಲ್ಲಿ ಸಂಪತ್ತು, ಸಮೃದ್ಧಿ ಮತ್ತು ಧನಸಂಪಾದನೆಯಲ್ಲಿ ಸ್ಥಿರತೆ ಇರುತ್ತದೆ ಎಂಬ ನಂಬಿಕೆ ಇದೆ.

ಇದನ್ನೂ ಓದಿ: ವಾಸ್ತು ಪ್ರಕಾರ, ಮನೆಯಲ್ಲಿ ಕಾಮಧೇನುವಿನ ವಿಗ್ರಹ ಇಡುವುದರಿಂದ ಸಿಗುವ ಅದ್ಭುತ ಲಾಭಗಳಿವು!

ಯಾವುದೇ ವ್ಯಕ್ತಿ ಸಾಲದ ಹೊರೆಯಿಂದ ಬಳಲುತ್ತಿದ್ದರೆ ಅಥವಾ ನಿರಂತರ ಹಣಕಾಸಿನ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ, ಮನಿ ಪ್ಲಾಂಟ್‌ನಲ್ಲಿ ನಾಣ್ಯವನ್ನು ಇಡುವುದು ಉಪಯುಕ್ತ ಪರಿಹಾರವೆಂದು ಪರಿಗಣಿಸಲಾಗುತ್ತದೆ. ಈ ವಾಸ್ತು ಪರಿಹಾರವು ಆರ್ಥಿಕ ಸಂಕಷ್ಟಗಳು ಮತ್ತು ಸಾಲ ಸಮಸ್ಯೆಗಳನ್ನು ಕ್ರಮೇಣ ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತದೆ.

ಮನಿ ಪ್ಲಾಂಟ್ ಉತ್ತಮವಾಗಿ ಬೆಳೆದಂತೆ, ಮನೆಯ ಆದಾಯವೂ ಹೆಚ್ಚಾಗುತ್ತದೆ ಎಂಬ ನಂಬಿಕೆಯಿದೆ. ಗಿಡದ ಬುಡದಲ್ಲಿ ನಾಣ್ಯವನ್ನು ಇಡುವುದರಿಂದ ವೃತ್ತಿ, ಉದ್ಯೋಗ ಮತ್ತು ವ್ಯವಹಾರ ಕ್ಷೇತ್ರದಲ್ಲಿ ವೇಗವಾದ ಪ್ರಗತಿ ಮತ್ತು ಯಶಸ್ಸು ದೊರೆಯುತ್ತದೆ ಎಂದು ವಾಸ್ತು ತಜ್ಞರು ಸಲಹೆ ನೀಡುತ್ತಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜಗನ್ ಹುಟ್ಟುಹಬ್ಬದಂದು ಪಟಾಕಿ ಹೊಡಿಬೇಡಿ ಎಂದಿದ್ದಕ್ಕೆ ಗರ್ಭಿಣಿ ಹೊಟ್ಟೆಗೆ ಒದ್ದ ವ್ಯಕ್ತಿ – Kannada News | Pregnant Woman Allegedly Assaulted After Objecting to Fireworks at Birthday Event

ಆಂಧ್ರಪ್ರದೇಶ, ಡಿಸೆಂಬರ್ 24: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್ ಜಗನ್​ಮೋಹನ್ ರೆಡ್ಡಿ ಹುಟ್ಟುಹಬ್ಬದ ದಿನ ತಾನು ಗರ್ಭಿಣಿ(Pregnant) ದಯವಿಟ್ಟು ಹೆಚ್ಚು ಪಟಾಕಿ ಹೊಡೆಯಬೇಡಿ ಎಂದು ಕೇಳಿಕೊಂಡಿದ್ದಕ್ಕೆ ವೈಎಸ್​ಆರ್ ಕಾಂಗ್ರೆಸ್​ನ ಕಾರ್ಯಕರ್ತ ಅಜಯ್ ದೇವ್ ಎಂಬಾತ ಮಹಿಳೆಯ ಒದ್ದಿರುವ ಘಟನೆ ಶ್ರೀ ಸತ್ಯಸಾಯಿ ಜಿಲ್ಲೆಯಲ್ಲಿ ನಡೆದಿದೆ. ಸಾರ್ವಜನಿಕರ ಆಕ್ರೋಶದ ನಂತರ ಬಲವಾದ ಕ್ರಮವಾಗಿ, ಆಂಧ್ರಪ್ರದೇಶದಲ್ಲಿ ಪೊಲೀಸರು ಮಂಗಳವಾರ ಗರ್ಭಿಣಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯನ್ನು ಮೆರವಣಿಗೆ ಮಾಡಿದರು.

ಡಿಸೆಂಬರ್ 21 ರಂದು ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ ಹುಟ್ಟುಹಬ್ಬದ ಆಚರಣೆಯ ಸಂದರ್ಭದಲ್ಲಿ ಗರ್ಭಿಣಿ ಮಹಿಳೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಲಾಗಿತ್ತು.
ಶ್ರೀ ಸತ್ಯಸಾಯಿ ಜಿಲ್ಲೆಯ ಕದಿರಿ ಪಟ್ಟಣದ ಆರ್‌ಟಿಸಿ ಬಸ್ ನಿಲ್ದಾಣ ವೃತ್ತದಿಂದ ಗ್ರಾಮೀಣ ಪೊಲೀಸ್ ಠಾಣೆಯವರೆಗೆ ಸಾರ್ವಜನಿಕರ ಸಮ್ಮುಖದಲ್ಲಿ ಪೊಲೀಸರು ಪ್ರಮುಖ ಆರೋಪಿ ಅಜಯ್ ದೇವನನ್ನು ಮೆರವಣಿಗೆ ಮಾಡಿದರು.

ಅಜಯ್ ದೇವನನ್ನು ಬರಿಗಾಲಿನಲ್ಲಿ ನಡೆಯುವಂತೆ ಮಾಡಲಾಗಿತ್ತು. ಸಂಧ್ಯಾರಾಣಿ ಎಂಬುವವರು ಇಲ್ಲಿ ಹೆಚ್ಚು ಜನ ಸಂದಣಿ ಇದೆ ಸ್ವಲ್ಪ ದೂರದಲ್ಲಿ ಪಟಾಕಿ ಸಿಡಿಸಿ ಎಂದು ಮನವಿ ಮಾಡಿಕೊಂಡಿದ್ದಕ್ಕೆ ಕೋಪಗೊಂಡು ಆತ ಆಕೆಯ ಮೇಲೆ ಹಲ್ಲೆ ನಡೆಸಿದ್ದ.

ಮತ್ತಷ್ಟು ಓದಿ: 7 ತಿಂಗಳ ಗರ್ಭಿಣಿ ಹತ್ಯೆ ಪ್ರಕರಣ: ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು

ವೈಎಸ್‌ಆರ್‌ಸಿಪಿ ಕಾರ್ಯಕರ್ತ ಅಂಜಿನಪ್ಪ ಜೊತೆ ಸೇರಿ, ಆಕೆಯ ಕತ್ತು ಹಿಸುಕಿ ಕೊಂದು, ಆಕೆಯ ಗರ್ಭದಲ್ಲಿರುವ ಮಗುವಿಗೆ ಹಾನಿ ಮಾಡುವ ಉದ್ದೇಶದಿಂದ ಹೊಟ್ಟೆಗೆ ಒದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಅಜಯ್ ದೇವಾ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಪ್ರಸ್ತುತ ತಲೆಮರೆಸಿಕೊಂಡಿರುವ ಎರಡನೇ ಆರೋಪಿ ಅಂಜಿನಪ್ಪನನ್ನು ಪತ್ತೆಹಚ್ಚಿ ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ.ಈ ಹಲ್ಲೆಯನ್ನು ಸ್ಪಷ್ಟ ಕ್ರಿಮಿನಲ್ ಉದ್ದೇಶದಿಂದ ನಡೆಸಲಾಗಿದ್ದು, ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಕದಿರಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ಶಿವ ನಾರಾಯಣಸ್ವಾಮಿ ತಿಳಿಸಿದ್ದಾರೆ.

ಚಂದ್ರಬಾಬು ನಾಯ್ಡು ನೇತೃತ್ವದ ಸಮ್ಮಿಶ್ರ ಸರ್ಕಾರದ ಆಳ್ವಿಕೆಯಲ್ಲಿ ಆಂಧ್ರಪ್ರದೇಶ ಮಹಿಳೆಯರಿಗೆ ಅಸುರಕ್ಷಿತವಾಗಿದೆ ಎಂದು ವೈಎಸ್‌ಆರ್‌ಸಿಪಿ ಆರೋಪಿಸಿದ ನಂತರ ಈ ಘಟನೆ ನಡೆದಿದೆ. ಸರ್ಕಾರವು ನಾಗರಿಕರನ್ನು ರಕ್ಷಿಸುವ ಬದಲು ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಪೊಲೀಸ್ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್ – Kannada News | Anjanadri Temple Clash: Fight Between Two Swamijis Inside Hanuman Sanctum, Video Goes Viral

ಕೊಪ್ಪಳ, ಡಿಸೆಂಬರ್ 24: ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಇಬ್ಬರು ಸ್ವಾಮೀಜಿಗಳ ನಡುವೆ ಭಾರೀ ಗಲಾಟೆ ನಡೆದಿದೆ. ಆಂಜನೇಯ ಸ್ವಾಮಿಯ ಗರ್ಭಗುಡಿಯಲ್ಲಿಯೇ ಸ್ವಾಮೀಜಿಗಳ ಮಧ್ಯೆ ಮಾತಿನ ಚಕಮಕಿ ಆರಂಭವಾಗಿ ಬಳಿಕ ಹೊಡೆದಾಟದ ಮಟ್ಟಕ್ಕೆ ತಲುಪಿದೆ. ದೇವಸ್ಥಾನದ ಪೂಜಾ ಕಾರ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಅರ್ಚಕ ವಿದ್ಯಾದಾಸ ಬಾಬಾ ಸ್ವಾಮೀಜಿ, ಹಂಪಿಯ ಗೋವಿಂದಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪೂಜಾ ಸಮಯದಲ್ಲಿ ಅವಾಚ್ಯ ಪದ ಬಳಸಿ ನಿಂದನೆ ಮಾಡಲಾಗಿದೆ ಎಂದು ವಿದ್ಯಾದಾಸ ಬಾಬಾ ಆರೋಪಿಸಿದ್ದಾರೆ.

ಇಬ್ಬರ ನಡುವೆ ವಾಗ್ವಾದ ತೀವ್ರಗೊಂಡಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರ ಸಮ್ಮುಖದಲ್ಲಿಯೇ ಇಬ್ಬರು ಸ್ವಾಮೀಜಿಗಳು ಹೊಡೆದಾಡಿಕೊಂಡಿದ್ದು, ವಿಡಿಯೋ ವೈರಲ್ ಆಗಿದೆ.

ಈ ಘಟನೆಯ ಹಿನ್ನೆಲೆಯಲ್ಲಿ ವಿದ್ಯಾದಾಸ ಬಾಬಾ ಸ್ವಾಮೀಜಿ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದು, ಪೂಜಾ ಕಾರ್ಯಕ್ಕೆ ಅಡ್ಡಿಪಡಿಸಿ ನಿಂದನೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ! – Kannada News | Bengaluru Petrol Attack: A man set a mother on fire for not getting her daughter married to him!

ಬೆಂಗಳೂರು, ಡಿಸೆಂಬರ್ 24: ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ್ದಕ್ಕೆ ಯುವತಿಯ ತಾಯಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭೀಕರ ಘಟನೆ ಬೆಂಗಳೂರಿನ ಬಸವೇಶ್ವರನಗರದ ಭೋವಿ ಕಾಲೋನಿಯಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಗೀತಾ ಎಂದು ಗುರುತಿಸಲಾಗಿದ್ದು, ಆರೋಪಿಯ ಹೆಸರು ಮುತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಗೀತಾ ಪ್ರಾವಿಷನ್ ಸ್ಟೋರ್ ನಡೆಸುತ್ತಿದ್ದು, ಮುತ್ತು ಎಂಬ ಯುವಕ ಅದೇ ಪ್ರದೇಶದಲ್ಲಿ ಟೀ ಸ್ಟಾಲ್ ಇಟ್ಟುಕೊಂಡಿದ್ದ.

ಒಬ್ಬರಿಗೊಬ್ಬರು ಪರಿಚಯವಾದ ಬಳಿಕ, ಗೀತಾ, ಆಕೆಯ 19 ವರ್ಷದ ಮಗಳು ಹಾಗೂ ಮುತ್ತು ಒಂದೇ ಮನೆಯಲ್ಲಿ ವಾಸವಿದ್ದರು ಎಂದು ತಿಳಿದುಬಂದಿದೆ. ಈ ವೇಳೆ ಯುವತಿಯನ್ನು ಮದುವೆ ಮಾಡಿಕೊಡುವಂತೆ ಮುತ್ತು ಗೀತಾಳ ಮೇಲೆ ಒತ್ತಡ ಹೇರುತ್ತಿದ್ದ ಎಂದು ಆರೋಪಿಸಲಾಗಿದೆ. ಆದರೆ ಗೀತಾ ಇದಕ್ಕೆ ಸ್ಪಷ್ಟವಾಗಿ ನಿರಾಕರಿಸಿದ್ದಕ್ಕೆ ಕೋಪಗೊಂಡ ಯುವಕ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆ ನಂತರ ಆರೋಪಿ ಪರಾರಿಯಾಗಿದ್ದು, ತೀವ್ರವಾಗಿ ಗಾಯಗೊಂಡ ಗೀತಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ದರ್ಶನ್ ಸಿಂಹ ಎಂದ ಧನ್ವೀರ್​ಗೆ ಟಾಂಗ್ ಕೊಟ್ಟ ವಿನಯ್ ಗೌಡ – Kannada News | Vinay Gowda share post in support of Sudeep

ದರ್ಶನ್ (Darshan) ಮತ್ತು ಸುದೀಪ್ ಅಭಿಮಾನಿಗಳ ಮಧ್ಯೆ ವರ್ಷಗಳಿಂದಲೂ ಫ್ಯಾನ್ಸ್ ವಾರ್ ನಡೆಯುತ್ತಲೇ ಇದೆ. ಆದರೆ ಸುದೀಪ್ ಇದಕ್ಕೆಲ್ಲ ಹೆಚ್ಚು ಪ್ರತಿಕ್ರಿಯಿಸುತ್ತಿರಲಿಲ್ಲ. ಆದರೆ ತಮ್ಮ ಸಿನಿಮಾಕ್ಕೆ ಬೆದರಿಕೆಗಳು ಬಂದಾಗ ಪರೋಕ್ಷವಾಗಿ ಸುದೀಪ್ ಅವರು ಎಚ್ಚರಿಕೆ ನೀಡಿದರು. ಸುದೀಪ್ ಅವರ ಸಣ್ಣ ಹೇಳಿಕೆಯನ್ನೇ ದೊಡ್ಡದು ಮಾಡಿ ಇದೀಗ ಫ್ಯಾನ್ಸ್​​ಗಳ ಜೊತೆಗೆ ದರ್ಶನ್ ಆಪ್ತರು ಸಹ ಅಖಾಡಕ್ಕಿಳಿದು ಫ್ಯಾನ್ಸ್ ವಾರ್ ಬೆಂಕಿಗೆ ತುಪ್ಪ ಸುರಿದಿದ್ದಾರೆ. ದರ್ಶನ್ ಅವರ ಪರಮಾಪ್ತ ಧನ್ವೀರ್ ಗೌಡ, ‘ಕಾಡಿನಲ್ಲಿ ಸಾಕಷ್ಟು ಪ್ರಾಣಿಗಳಿರುತ್ತವೆ, ಆದರೆ ಸಿಂಹ ಮಾತ್ರವೇ ಕಾಡಿನ ರಾಜ’ ಎಂದು ಪೋಸ್ಟ್ ಹಂಚಿಕೊಂಡಿದ್ದರು. ಧನ್ವೀರ್ ಅವರ ಈ ಪೋಸ್ಟ್ ಸುದೀಪ್ ಅವರ ಬಗ್ಗೆಯೇ ಎಂಬುದು ಎಂಥವರಿಗೂ ಅರ್ಥವಾಗುವಂತಿತ್ತು, ಇದೀಗ ಧನ್ವೀರ್​​ಗೆ ಟಾಂಗ್ ಕೊಟ್ಟಿದ್ದಾರೆ ಸುದೀಪ್ ಆಪ್ತ ವಿನಯ್ ಗೌಡ.

ವಿನಯ್ ಗೌಡ ಅವರು, ಧನ್ವೀರ್ ಅವರ ಪೋಸ್ಟ್​​ಗೆ ಎದುರಾಗಿ ಪೋಸ್ಟ್ ಹಂಚಿಕೊಂಡಿದ್ದಾರೆ. ‘ಕಾಡಿನ ರಾಜ ಸಿಂಹ ಎಂಬುದು ಗೊತ್ತು, ಆದರೆ ಆ ಸಿಂಹ ಸುದೀಪ್’ ಎಂದಿದ್ದಾರೆ. ಆ ಮೂಲಕ ದರ್ಶನ್ ಅನ್ನು ಸಿಂಹವೆಂದಿದ್ದ ಧನ್ವೀರ್​​ಗೆ ನೇರವಾಗಿ ಕೌಂಟರ್ ಕೊಟ್ಟಿದ್ದಾರೆ ವಿನಯ್ ಗೌಡ. ಆ ಮೂಲಕ ಸುದೀಪ್ ಪರವಾಗಿ ನಿಂತಿದ್ದಾರೆ ವಿನಯ್ ಗೌಡ.

ಅಸಲಿಗೆ ವಿನಯ್ ಗೌಡ ಅವರು, ದರ್ಶನ್ ನಟಿಸಿರುವ ‘ಡೆವಿಲ್’ ಸಿನಿಮಾನಲ್ಲಿ ನಟಿಸಿದ್ದರು. ಆದರೆ ಸಿನಿಮಾದ ಪ್ರಚಾರಕ್ಕೆ ಅವರು ಹೋಗಿರಲಿಲ್ಲ. ಚಿತ್ರತಂಡದ ಜೊತೆಗೆ ವಿಶೇಷವಾಗಿ ದರ್ಶನ್ ಜೊತೆಗಿನ ಮನಸ್ಥಾಪವೇ ಇದಕ್ಕೆ ಕಾರಣ ಎಂಬ ಮಾತುಗಳು ಸಹ ಅಲ್ಲಲ್ಲಿ ಕೇಳಿ ಬಂದಿತ್ತು. ಆದರೆ ಖಾಸಗಿ ಕಾರಣಕ್ಕಾಗಿ ತಾವು ಪ್ರಚಾರಕ್ಕೆ ಹೋಗಿಲ್ಲ ಎಂದು ವಿನಯ್ ಹೇಳಿಕೊಂಡಿದ್ದರು. ಸೂಕ್ಷ್ಮವಾಗಿ ಗಮನಿಸಿದರೆ ವಿನಯ್ ಗೌಡ ಅವರು ತಮ್ಮ ಇನ್​​ಸ್ಟಾಗ್ರಾಂನಲ್ಲಿ ‘ಡೆವಿಲ್’ ಸಿನಿಮಾ ಕುರಿತಾಗಿ ಒಂದೇ ಒಂದು ಪೋಸ್ಟ್ ಸಹ ಹಂಚಿಕೊಂಡಿಲ್ಲ.

ಇದನ್ನೂ ಓದಿ:‘ಈ ಹಿಂದೆ ದರ್ಶನ್ ಬಗ್ಗೆ ಕೆಟ್ಟದ್ದು ಮಾತನಾಡಿದ್ರೆ ತೋರಿಸಲಿ’; ಕಿಚ್ಚ ಸುದೀಪ್ ಸವಾಲು

‘ಡೆವಿಲ್’ ಸಿನಿಮಾ ತಂಡ ತಮ್ಮನ್ನು ನಡೆಸಿಕೊಂಡ ರೀತಿಯ ಬಗ್ಗೆಯೂ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದ ವಿನಯ್ ಗೌಡ, ‘ನಾನು ಪೇಯ್ಡ್ ಆಕ್ಟರ್, ಸಂಭಾವನೆ ಕೊಟ್ಟರು ನಟಿಸಿದ್ದೀನಿ. ‘ಡೆವಿಲ್’ ಸಿನಿಮಾನಲ್ಲಿ ನನಗೆ ಎಷ್ಟು ಸ್ಕೋಪ್ ಇದೆ ಎಂದು ಎಲ್ಲರೂ ನೋಡಿದ್ದಾರೆ. ಬುಕ್​​ ಮೈ ಶೋನಲ್ಲಿ ‘ಡೆವಿಲ್’ ಸಿನಿಮಾದಲ್ಲಿ ನಟಿಸಿರುವ ಎಲ್ಲರ ಹೆಸರಿದೆ, ಆದರೆ ನನ್ನ ಹೆಸರಿಲ್ಲ. ಇನ್ನು ದರ್ಶನ್ ಅವರ ಬಗ್ಗೆ ನಾನು ಮಾತನಾಡಿಲ್ಲ ಎಂದು ಕೆಲವರು ಹೇಳುತ್ತಿದ್ದಾರೆ. ಮಾತನಾಡಬಾರದು ಎಂದೇ ನಾನು ಮಾತನಾಡಿಲ್ಲ. ನಾನು ಮಾತನಾಡಿ ಅವರಿಗೆ ಕಾನೂನಾತ್ಮಕವಾಗಿ ಏನಾದರೂ ಸಮಸ್ಯೆ ಆಗುವುದು ಸರಿಯಲ್ಲ ಎಂದು ಸುಮ್ಮನಿದ್ದೇನೆ’ ಎಂದಿದ್ದಾರೆ ವಿನಯ್ ಗೌಡ.

ವಿನಯ್ ಗೌಡ ಅವರು, ಸುದೀಪ್ ಅವರ ಆಪ್ತರಲ್ಲಿ ಒಬ್ಬರು. ಬಿಗ್​​ಬಾಸ್ ಸ್ಪರ್ಧಿಯಾಗಿದ್ದ ವಿನಯ್ ಅವರು ಅಲ್ಲಿ ಸುದೀಪ್ ಅವರ ಗೆಳೆತನ ಗಳಿಸಿದರು. ಇದೀಗ ಸುದೀಪ್ ವಿರುದ್ಧ ಕೆಲವರು ವಿನಾಕಾರಣ ಪೋಸ್ಟ್​​ಗಗಳನ್ನು ಹಂಚಿಕೊಳ್ಳುತ್ತಿರುವಾಗ ಸಹಜವಾಗಿಯೇ ವಿನಯ್ ಅವರು ಸುದೀಪ್ ಅವರ ಬೆಂಬಲಕ್ಕೆ ನಿಂತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 11:36 am, Wed, 24 December 25

Source link

ಎಲ್ಲರೂ ನಂಗೆ ಅಭಿಮಾನಿಗಳು; ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ – Kannada News | Sadhu Kokila, Not ready to Talk About Fans War

ಕನ್ನಡ ಚಿತ್ರರಂಗದಲ್ಲಿ ಫ್ಯಾನ್ ವಾರ್ ಬಗ್ಗೆ ಚರ್ಚೆ ನಡೆಯುತ್ತಿರುವುದು ತಿಳಿದೇ ಇದೆ. ಸುದೀಪ್ ಹಾಗೂ ದರ್ಶನ್ ಅಭಿಮಾನಿಗಳು ಸಾಕಷ್ಟು ಕಿತ್ತಾಡಿಕೊಳ್ಳುತ್ತಿರುವುದನ್ನು ನೋವು ನೋಡಿರಬಹುದು. ಈ ಬಗ್ಗೆ ಸಾಧು ಕೋಕಿಲಗೆ ಪ್ರಶ್ನೆ ಮಾಡಲಾಯಿತು. ಎಲ್ಲಾ ಸ್ಟಾರ್​​ಸ್​​ಗಳ ಫ್ಯಾನ್ಸ್ ನನಗೆ ಅಭಿಮಾನಿಗಳು. ಹೀಗಾಗಿ, ನಾನು ಈ ಬಗ್ಗೆ ಮಾತನಾಡುವುದೇ ಇಲ್ಲ ಎಂದಿದ್ದಾರೆ ಸಾಧು. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

12 ಎಕರೆ ಭೂಮಿಯಿಂದ ಲಕ್ಷಾಂತರ ರೂ. ಲಾಭ; ವಿಕಲಚೇತನ ಕೃಷಿಕನ ಸಾಧನೆ! – Kannada News | Inspiring Koppal Farmer: Disabled farmer ramanna Earns Lakhs in Seed Production

12 ಎಕರೆ ಭೂಮಿಯಲ್ಲಿ ಲಕ್ಷಾಂತರ ಲಾಭ; ವಿಕಲಚೇತನ ಕೃಷಿಕನ ಸಾಧನೆ!

ಕೊಪ್ಪಳ, ಡಿಸೆಂಬರ್ 24: ಇಂದಿನ ಕಾಲದಲ್ಲಿ ಕೈಕಾಲು ನೆಟ್ಟಗಿದ್ದರೂ ಕೆಲವರು ದುಡಿದು ತಿನ್ನಲು ಹಿಂದೆ ಮುಂದೆ ನೋಡುತ್ತಾರೆ. ಹೀಗಿರುವಾಗ ಕೊಪ್ಪಳದ (Koppal) ಓರ್ವ ಕೃಷಿಕ ಒಂದು ಕಾಲು ಕಳೆದುಕೊಂಡಿದ್ದರೂ ಕುಗ್ಗದೆ, 12 ಎಕರೆ ಭೂಮಿಯನ್ನು ಉತ್ತಿ ಬಿತ್ತಿ ಲಕ್ಷಾಂತರ ರೂ. ಗಳಿಸಿದ್ದಾರೆ. ಟೊಮೇಟೊ, ಬದನೆ ಸೇರಿ ಹಲವು ತರಕಾರಿಗಳ ಜೊತೆಗೆ ಬೀಜೋತ್ಪಾದನೆಯಲ್ಲಿ ತೊಡಗಿರುವ ಅವರು, ಯುವ ಕೃಷಿಕರಿಗೆ ಸ್ಫೂರ್ತಿಯಾಗಿದ್ದಾರೆ.

ಕೃತಕ ಕಾಲು ಅಳವಡಿಸಿಕೊಂಡೇ ಕೃಷಿ ಚಟುವಟಿಕೆ

ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಹಿರೇಅರಳಿಹಳ್ಳಿ ಗ್ರಾಮದ ರಾಮಣ್ಣ ಸಂಕಷ್ಟವನ್ನು ಶಕ್ತಿಯಾಗಿ ಪರಿವರ್ತಿಸಿಕೊಂಡ ಅಪರೂಪದ ಕೃಷಿಕ. 12 ವರ್ಷಗಳ ಹಿಂದೆ ನಡೆದ ಬೈಕ್ ಅಪಘಾತದಲ್ಲಿ ಒಂದು ಕಾಲು ಕಳೆದುಕೊಂಡರೂ, ಬದುಕಿನ ಓಟದಲ್ಲಿ ಹಿಂದೆ ಬೀಳದೆ ಸಾಧನೆಗೈದಿದ್ದಾರೆ. ಸ್ಥಳೀಯವಾಗಿ ಸಿಗುವ ಕೃತಕ ಕಾಲು ಅಳವಡಿಸಿಕೊಂಡು, ತಮ್ಮ ಜಮೀನಿನಲ್ಲಿ ಯಂತ್ರೋಪಕರಣಗಳ ನೆರವಿನಿಂದ ಕೃಷಿ ಮಾಡುತ್ತಿರುವ ರಾಮಣ್ಣ, ದೈಹಿಕ ಅಸಮರ್ಥತೆಯನ್ನು ಅಸ್ತ್ರವನ್ನಾಗಿಸಿಕೊಂಡಿದ್ದಾರೆ.

ಕೇವಲ ಟೊಮೇಟೋ ಬೀಜೋತ್ಪಾದನೆಯಿಂದ 9 ಲಕ್ಷ ರೂಪಾಯಿ ಆದಾಯ

ಟೊಮೇಟೊ, ಬದನೆ, ಮೆಣಸಿನಕಾಯಿ, ಸೌತೆ ಸೇರಿದಂತೆ ತರಕಾರಿ ಬೆಳೆಗಳ ಜೊತೆಗೆ ಬೀಜೋತ್ಪಾದನೆಯಲ್ಲಿ ತೊಡಗಿರುವ ಅವರು, ಇದೇ ವರ್ಷದಲ್ಲಿ ಕೇವಲ ಟೊಮೇಟೊ ಬೀಜೋತ್ಪಾದನೆಯಿಂದ ಸುಮಾರು 9 ಲಕ್ಷ ರೂಪಾಯಿ ಆದಾಯ ಗಳಿಸಿದ್ದಾರೆ. ಬೆಳಗಿನ ಜಾವದಿಂದಲೇ ಹೊಲಕ್ಕೆ ಕಾಲಿಡುವ ರಾಮಣ್ಣ, ಡಿಸೇಲ್ ಎಂಜಿನ್‌ಗೆ ಜೋಡಿಸಿದ ಯಂತ್ರಗಳ ಮೂಲಕ ಅಂತರಬೇಸಾಯ, ಕಳೆ ನಿಯಂತ್ರಣ, ನೀರು ಹರಿಸುವುದು, ಔಷಧ ಸಿಂಪಡಣೆ ಸೇರಿದಂತೆ ಎಲ್ಲಾ ಕೃಷಿ ಚಟುವಟಿಕೆಗಳನ್ನು ಸ್ವತಃ ನಿರ್ವಹಿಸುತ್ತಾರೆ.

ವ್ಯಂಗ್ಯವಾಡಿದವರ ಮುಂದೆಯೇ ಸಾಧಿಸಿ ತೋರಿಸಿದ ರಾಮಣ್ಣ

ಭೂಮಿತಾಯಿ ಮೇಲೆ ನಂಬಿಕೆ ಇದ್ದರೆ ಆಕೆ ನಮ್ಮ ಕೈಹಿಡಿಯುತ್ತದೆ ಎನ್ನುವ ಅವರು, ಕೃಷಿಯಲ್ಲಿಯೇ ಸಂತಸ ಕಾಣುತ್ತಾರೆ. ಕಾಲು ಕಳೆದುಕೊಂಡ ಬಳಿಕವೂ ದುಡಿಮೆಯಿಂದ ಹಿಂದೆ ಸರಿಯದ ರಾಮಣ್ಣರನ್ನು ಕೆಲವರು ವ್ಯಂಗ್ಯವಾಡಿ ನಗಿದ ಘಟನೆಗಳೂ ಇವೆ. ಆದರೆ ಅದೇ ವ್ಯಂಗ್ಯ ಇಂದು ಅವರಿಗೆ ಪ್ರೇರಣೆಯಾಗಿದೆ. ಪತ್ನಿಯ ಸಂಪೂರ್ಣ ಸಹಕಾರ ಹಾಗೂ ತಮ್ಮ ಅಚಲ ಪರಿಶ್ರಮದಿಂದ ರಾಮಣ್ಣ ಆರ್ಥಿಕ ಸ್ವಾವಲಂಬನೆ ಸಾಧಿಸಿದ್ದು, ಸಮಾಜವೂ ಅವರ ಸಾಧನೆಯನ್ನು ಗುರುತಿಸಿ ಗೌರವಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಅತಿಯಾದ ಫಾಸ್ಟ್ ಫುಡ್ ಸೇವನೆಯಿಂದ 11ನೇ ತರಗತಿ ವಿದ್ಯಾರ್ಥಿನಿ ಸಾವು – Kannada News | Amroha Fast Food Tragedy: The Silent Killer Damaging Children’s Digestion

ಹೊರಗಿನ ಆಹಾರಗಳನ್ನು ತಿನ್ನುವ ಮುನ್ನ ಸಾವಿರ ಬಾರಿ ಯೋಚನೆ ಮಾಡಬೇಕು. ಏಕೆಂದರೆ ಅದು ನಮ್ಮ ದೇಹದ ಮೇಲೆ ದೊಡ್ಡ ಪರಿಣಾಮವನ್ನು ಉಂಟು ಮಾಡಬಹುದು. ಇದೀಗ ಇದಕ್ಕೆ ಸಂಬಂಧಿಸಿದಂತೆ ಸುದ್ದಿ ಭಾರೀ ವೈರಲ್​​ ಆಗಿದೆ. ಫಾಸ್ಟ್ ಫುಡ್(Fast Food )ತಿಂದು ಇದೀಗ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ. 11ನೇ ತರಗತಿಯ ವಿದ್ಯಾರ್ಥಿನಿ ಫಾಸ್ಟ್ ಫುಡ್ ಸೇವಿಸಿ, ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾಳೆ. ಅಹಾನಾ ಎಂಬ ಬಾಲಕಿ ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗಿದೆ.

ಸುಮಾರು ದಿನಗಳಿಂದ ಅಹಾನಾ ಹೊರಗಿನ ಆಹಾರಗಳನ್ನು ಹೆಚ್ಚು ಸೇವನೆ ಮಾಡಿದ ಕಾರಣ ಆಕೆಯ ಸ್ಥಿತಿ ಹದಗೆಟ್ಟಿದೆ ಎಂದು ಏಮ್ಸ್ ವೈದ್ಯರು ತಿಳಿಸಿದ್ದಾರೆ. ವೈದ್ಯಕೀಯ ತಂಡದ ಪ್ರಕಾರ, ಆಕೆಯ ಕರುಳುಗಳು ಒಟ್ಟಿಗೆ ಅಂಟಿಕೊಂಡಿವೆ ಮತ್ತು ಅವರ ಜೀರ್ಣಾಂಗ ವ್ಯವಸ್ಥೆಯು ಸಂಪೂರ್ಣವಾಗಿ ಹಾನಿಗೊಳಗಾಗಿದೆ. ಇದಕ್ಕೆ ಚಿಕಿತ್ಸೆ ನೀಡಿದ್ರೂ ಆಕೆಯನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.

ಅಹಾನಾಗೆ ಚೌಮಿನ್, ಪಿಜ್ಜಾ ಮತ್ತು ಬರ್ಗರ್‌ ತುಂಬಾ ಇಷ್ಟ:

ಅಹಾನಾಗೆ ಚಿಕ್ಕ ವಯಸ್ಸಿನಿಂದಲ್ಲೂ ಚೌಮಿನ್, ಪಿಜ್ಜಾ ಮತ್ತು ಬರ್ಗರ್‌ಗಳಂತಹ ಫಾಸ್ಟ್ ಫುಡ್‌ಗಳನ್ನು ಇಷ್ಟಪಡುತ್ತಿದ್ದಳು. ಮನೆಯಲ್ಲಿ ಮಾಡುವ ಆಹಾರಗಳನ್ನು ಅಷ್ಟೊಂದು ಇಷ್ಟ ಪಡುತ್ತಿರಲಿಲ್ಲ. ಈ ಅಭ್ಯಾಸವೇ ಆಕೆಯ ಈ ಸ್ಥಿತಿಗೆ ಕಾರಣ, ಕೊನೆಗೂ ನಮ್ಮ ಮಗಳನ್ನು ಉಳಿಸಿಕೊಳ್ಳಲು ಆಗಿಲ್ಲ ಎಂದು ಆಕೆಯ ಕುಟುಂಬದವರು ಹೇಳಿದ್ದಾರೆ. ಈ ಘಟನೆ ಅಮ್ರೋಹಾದ ಅಫ್ಘಾನ್ ಮೊಹಲ್ಲಾದಲ್ಲಿ ನಡೆದಿದ್ದು, ಇದು ಕುಟುಂಬ ಮತ್ತು ಸ್ಥಳೀಯ ನಿವಾಸಿಗಳಲ್ಲಿ ಆಂತಕ ಸೃಷ್ಟಿಸಿದೆ.

ವೈದ್ಯರು ಹೇಳಿರುವ ಪ್ರಕಾರ, ಅತಿಯಾಗಿ ಫಾಸ್ಟ್ ಫುಡ್ ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಗೆ, ವಿಶೇಷವಾಗಿ ಮಕ್ಕಳು ಮತ್ತು ಯುವಜನರಿಗೆ ಗಂಭೀರ ಹಾನಿಯಾಗುತ್ತದೆ. ಇಂದು ನಡೆದಿರುವ ಈ ಘಟನೆಗೂ ಕೂಡ ಅದೇ ಕಾರಣ, ಅನಾರೋಗ್ಯಕರ ಆಹಾರ ಪದ್ಧತಿಗಳು ಚಿಕ್ಕ ವಯಸ್ಸಿನಲ್ಲಿಯೇ ಮಾರಕ ಪರಿಣಾಮಗಳನ್ನು ಬೀರುತ್ತವೆ ಎಂದು ಎಚ್ಚರಿಕೆ ನೀಡಿದ್ದಾರೆ. ಅಹಾನಾ ರೈತ ಮನ್ಸೂರ್ ಅಲಿ ಖಾನ್ ಅವರ ಪುತ್ರಿ, ಅವರ ಪತ್ನಿ ಸಾರಾ ಖಾನ್, ಅಹಾನಾ ಸೇರಿ ಒಟ್ಟು ಮೂರು ಮಕ್ಕಳು. ಅದರಲ್ಲಿ ಹಿರಿಯ ಮಗಳು ಮಾರಿಯಾ (23), ಮಗ ಅವನ್, ಕೊನೆಯ ಮಗಳು ಅಹಾನಾ .

ಘಟನೆ ಬಗ್ಗೆ ತಂದೆ ಹೇಳಿದ್ದೇನು?

ನವೆಂಬರ್ 28 ರಂದು ಅಹಾನಾ ಆರೋಗ್ಯದಲ್ಲಿ ಏರುಪೇರು ಕಂಡು ಬಂತು. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ತಕ್ಷಣ ಅಮ್ರೋಹಾದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಆಕೆಯ ಪರಿಸ್ಥಿತಿ ಇನ್ನು ಕೆಟ್ಟಾಗಿತ್ತು. ಅಲ್ಲಿಂದ ಮೊರಾದಾಬಾದ್‌ಗೆ ಕರೆದೊಯ್ಯಲಾಯಿತು. ಮೊರಾದಾಬಾದ್‌ನಲ್ಲಿ ನಡೆದ ವೈದ್ಯಕೀಯ ಪರೀಕ್ಷೆಗಳಲ್ಲಿ ಆಕೆಯ ಕರುಳಿಗೆ ಹಾನಿಯಾಗಿದ್ದು, ಹೊಟ್ಟೆಯಲ್ಲಿ ದ್ರವ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ. ಡಾ. ರಿಯಾಜ್ ಶಸ್ತ್ರಚಿಕಿತ್ಸೆ ನಡೆಸಿ, ಆಕೆಯ ಹೊಟ್ಟೆಯಿಂದ ಸುಮಾರು ಏಳು ಲೀಟರ್ ದ್ರವವನ್ನು ತೆಗೆದುಹಾಕಲಾಯಿತು. ಅಹಾನಾ ಇದರಿಂದ ಸ್ವಲ್ಪ ಸುಧಾರಿಸಿಕೊಂಡಿದ್ದಳು, ನಂತರ ಅಲ್ಲಿಂದ ಆಕೆಯ ಚಿಕ್ಕಪ್ಪ ಸಾಜಿದ್ ಖಾನ್ ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಗೆ ಕರೆದೊಯ್ದರು.

ಅಲ್ಲಿ ವೈದ್ಯರು ಆಕೆಯ ಕರುಳುಗಳು ಒಟ್ಟಿಗೆ ಅಂಟಿಕೊಂಡಿದೆ ಎಂದು ಹೇಳಿದರು. ಚಿಕಿತ್ಸೆ ನೀಡುತ್ತಿದ್ದಂತೆ ಆಕೆಯ ಸ್ಥಿತಿ ಹದಗೆಡುತ್ತಲೇ ಇತ್ತು. ಡಿಸೆಂಬರ್ 21 ರಂದು ತಡರಾತ್ರಿ, ಆಕೆ ಆರೋಗ್ಯ ತೀವ್ರವಾಗಿ ಹದಗೆಟ್ಟಿತು. ವೈದ್ಯರ ಪ್ರಯತ್ನಗಳ ಹೊರತಾಗಿಯೂ, ಅಹಾನಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.

ಫಾಸ್ಟ್ ಫುಡ್ ಆಹಾರ ಸೇವಿಸಬೇಡಿ: ವೈದ್ಯರು

ದೀರ್ಘಕಾಲದ ಫಾಸ್ಟ್ ಫುಡ್ ಸೇವನೆಯಿಂದಾಗಿ ಆಕೆಯ ಕರುಳು ತೀವ್ರವಾಗಿ ಹಾನಿಗೊಳಗಾಗಿದ್ದು, ಇದರಿಂದಾಗಿ ಆಕೆಯ ದೇಹವು ತುಂಬಾ ದುರ್ಬಲವಾಗಿದೆ ಎಂದು ವೈದ್ಯರು ಕುಟುಂಬಕ್ಕೆ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಅಹಾನಾಳ ಚಿಕ್ಕಪ್ಪ ಗುಲ್ಜಾರ್ ಖಾನ್ ಅಲಿಯಾಸ್ ಗುಡ್ಡು ಹೇಳಿದ್ದಾರೆ.ಅಮ್ರೋಹಾದ ಮುಖ್ಯ ವೈದ್ಯಾಧಿಕಾರಿ ಡಾ. ಎಸ್.ಪಿ. ಸಿಂಗ್, ಮಕ್ಕಳಿಗೆ ನಿಯಮಿತವಾಗಿ ಫಾಸ್ಟ್ ಫುಡ್ ಸೇವಿಸಲು ಅವಕಾಶ ನೀಡುವುದರ ವಿರುದ್ಧ ಪೋಷಕರಿಗೆ ಎಚ್ಚರಿಕೆ ನೀಡಿದರು. ಅಂತಹ ಆಹಾರದಲ್ಲಿ ಅತಿಯಾದ ಮಸಾಲೆಗಳು, ಕೊಬ್ಬು ಮತ್ತು ಕಾರ್ಬೋಹೈಡ್ರೇಟ್‌ಗಳಿವೆ. ತಂಪು ಪಾನೀಯಗಳು, ಚಿಪ್ಸ್ ಮತ್ತು ಫ್ರೆಂಚ್ ಫ್ರೈಗಳು ನೈಸರ್ಗಿಕ ಹಸಿವನ್ನು ನಿಗ್ರಹಿಸುತ್ತವೆ ಮತ್ತು ಮಕ್ಕಳಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಡೆಲಿವರಿ ಏಜೆಂಟ್​ಗಳಿಗಾಗಿಯೇ ಮನೆ ಮುಂದೆ ನೀರಿನ ಬಾಟಲಿಗಳನ್ನಿಟ್ಟು ಜನರ ಹೃದಯ ಗೆದ್ದ ವ್ಯಕ್ತಿ

ಇದು ನಮ್ಮ ನಿರ್ಲಕ್ಷ್ಯದಿಂದ ಆಗಿರುವುದು:

ಅಹಾನಾಗೆ ಬಾಲ್ಯದಿಂದಲೂ ಫಾಸ್ಟ್ ಫುಡ್ ತುಂಬಾ ಇಷ್ಟವಾಗಿತ್ತು ಎಂದು ಚಿಕ್ಕಪ್ಪ ಸಾಜಿದ್ ಖಾನ್ ಹೇಳಿದ್ದಾರೆ. “ಅವಳು ಮನೆಯಲ್ಲಿ ತಯಾರಿಸಿದ ಆಹಾರಕ್ಕಿಂತ ಚೌಮಿನ್, ಮ್ಯಾಗಿ, ಪಿಜ್ಜಾ ಮತ್ತು ಬರ್ಗರ್‌ಗಳನ್ನು ಹೆಚ್ಚು ಇಷ್ಟಪಡುತ್ತಿದ್ದಳು. ಪ್ಯಾಕ್ ಮಾಡಿದ ವಸ್ತುಗಳನ್ನು ಸಹ ಅವಳು ರಹಸ್ಯವಾಗಿ ತಿನ್ನುತ್ತಿದ್ದಳು. ನಾವು ಸಾಕಷ್ಟು ಗಮನ ಹರಿಸದಿರುವುದು ನಮ್ಮ ತಪ್ಪು” ಎಂದು ಅವರು ಹೇಳಿದರು.

ಇದು ಜಾಗತಿಕ ಆರೋಗ್ಯಕ್ಕೆ ಅಪಾಯಕಾರಿ:

ಗ್ಲೋಬಲ್ ಬರ್ಡನ್ ಆಫ್ ಡಿಸೀಸ್ ರಿಪೋರ್ಟ್ ಪ್ರಕಾರ, ಫಾಸ್ಟ್ ಫುಡ್ ಸೇವನೆ ಸೇರಿದಂತೆ ಅನಾರೋಗ್ಯಕರ ಆಹಾರಕ್ರಮಗಳು ಪ್ರತಿ ವರ್ಷ ವಿಶ್ವಾದ್ಯಂತ ಸುಮಾರು 11 ಮಿಲಿಯನ್ ಸಾವುಗಳಿಗೆ ಕಾರಣವಾಗುತ್ತವೆ. JAMA ನೆಟ್‌ವರ್ಕ್ ಮತ್ತು ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್‌ನಂತಹ ಜರ್ನಲ್‌ಗಳಲ್ಲಿ ಪ್ರಕಟವಾದ ವೈದ್ಯಕೀಯ ಅಧ್ಯಯನಗಳು ಫಾಸ್ಟ್ ಫುಡ್ ಹೃದ್ರೋಗ, ಕ್ಯಾನ್ಸರ್, ಜೀರ್ಣಕಾರಿ ಅಸ್ವಸ್ಥತೆಗಳು ಮತ್ತು ಕರುಳಿನ ಆರೋಗ್ಯಕ್ಕೆ ದೀರ್ಘಕಾಲೀನ ಹಾನಿಯನ್ನುಂಟುಮಾಡುತ್ತವೆ ಎಂದು ಹೇಳಿದೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Source link