All posts by nagaraj11081993

Video: ಉದ್ಘಾಟನೆಗೆ ತಡವಾಯ್ತೆಂದು ಓಡೋಡಿ ಬಂದ ಮೇಯರ್, ಕಾಯದೆ ಹೊರಟೇ ಬಿಡ್ತು ರೈಲು – Kannada News | Train Leaves on Time as Mexican Mayor Misses Inaugural Ride

ಮೆಕ್ಸಿಕೋ, ಡಿಸೆಂಬರ್ 24: ಮೇಯರ್ ಉದ್ಘಾಟನೆಗೆ ತಡವಾಗಿ ಬಂದಿದ್ದಕ್ಕೆ ರೈಲು ನಿಲ್ಲಲೇ ಇಲ್ಲ, ಮೇಯರ್​ಗೆ ಕಾಯದೆ ಹೊರಟೇ ಬಿಟ್ಟಿತ್ತು. ಈ ಘಟನೆ ನಡೆದಿದ್ದು ಮೆಕ್ಸಿಕೋದಲ್ಲಿ. ಹೊಸ ರೈಲು ಉದ್ಘಾಟನೆ ಕಾರ್ಯಕ್ರಮ ಅಂದು ನಡೆಯಬೇಕಿತ್ತು. ಸಮಯಕ್ಕೆ ಸರಿಯಾಗಿ ಬರಲಾಗದೆ ಮೇಯರ್ ತಡವಾಗಿ ಓಡುತ್ತಾ ಬಂದಿದ್ದಾರೆ. ಅವರು ಬರುತ್ತಿದ್ದಂತೆ ರೈಲು ಹೊರಟೇ ಬಿಟ್ಟಿತ್ತು. ಅವರಿಗಾಗಿ ಒಂದು ನಿಮಿಷವೂ ಕಾಯಲಿಲ್ಲ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

Bengaluru Air Quality: ಬೆಂಗಳೂರಿನಲ್ಲಿ ಉಸಿರಾಟಕ್ಕೆ ಕುತ್ತು ಗಾಳಿಯಲ್ಲಿರುವ ಈ ಅಗೋಚರ ಕಣಗಳು! – Kannada News | Bangalore Air Pollution Crisis: Bengaluru is reminding Delhi in terms of Air quality, hazardous PM level

ಬೆಂಗಳೂರಿನಲ್ಲಿ ಉಸಿರಾಟಕ್ಕೆ ಕುತ್ತು ಗಾಳಿಯಲ್ಲಿರುವ ಈ ಅಗೋಚರ ಕಣಗಳು!

ಬೆಂಗಳೂರು, ಡಿಸೆಂಬರ್ 23: ಕಳೆದ 5 ವರ್ಷಗಳಿಂದ ಬೆಂಗಳೂರಿನ ಗಾಳಿಯ ಗುಣಮಟ್ಟ (Bengaluru Air Quality) ಹದಗೆಡುತ್ತಲೇ ಇದ್ದು, ಗಾಳಿಯ PM (Particulate Matter) ಪ್ರಮಾಣ ಸಹ ಮಿತಿ ಮೀರಿದೆ. ಇಂದಿನ ಬೆಂಗಳೂರಿನಲ್ಲಿ ಗಾರ್ಡನ್ ಸಿಟಿಯ ತಂಪಾದ ಗಾಳಿಗಿಂತ ಹೆಚ್ಚಾಗಿ ‘ಧೂಳಿನ ಕಣಗಳೇ’ ನಮ್ಮನ್ನು ಆವರಿಸಿವೆ. ಇಂದಿನ ವಾಯು ಗುಣಮಟ್ಟ ಸೂಚ್ಯಂಕದ ಪ್ರಕಾರ (AQI) ಇಂದಿನ ಗಾಳಿಯ ಗುಣಮಟ್ಟ 170 ಇದ್ದು, ನಗರದ ಹಲವು ಭಾಗಗಳಲ್ಲಿ ಗಾಳಿಯು ‘ಅಪಾಯಕಾರಿ’ ಮಟ್ಟದಲ್ಲಿದೆ. ಮುಖ್ಯವಾಗಿ ಗಾಳಿಯಲ್ಲಿರುವ PM2.5 ಮತ್ತು PM10 ಪ್ರಮಾಣ ಹೆಚ್ಚಿದ್ದು, ಶ್ವಾಸಕೋಶ ಸಂಬಂಧಿ ಕಾಯಿಲೆಗಳು ಉಂಟಾಗುವ ಸಾಧ್ಯತೆಗಳನ್ನೂ ಹೆಚ್ಚಿಸಿದೆ.

ಏರ್ ಕ್ವಾಲಿಟಿ ಹದಗೆಡಿಸುತ್ತಿದೆ ಹೆಚ್ಚುತ್ತಿರುವ ವಾಹನಗಳ ಸಂಖ್ಯೆ

ಬೆಂಗಳೂರಿನ ಇಂದಿನ ಗಾಳಿಯಲ್ಲಿ PM2.5, 82 µg/m³ ಇದ್ದು, PM10 119 µg/m³ ಇದೆ. ಇದು ವಿಶ್ವ ಆರೋಗ್ಯ ಸಂಸ್ಥೆಯ (WHO) ಸುರಕ್ಷಿತ ಮಿತಿಗಿಂತ (15 µg/m³) ಸುಮಾರು 4.2 ಪಟ್ಟು ಹೆಚ್ಚಾಗಿದೆ. PM ಎಂದರೆ ಗಾಳಿಯಲ್ಲಿರುವ ಸೂಕ್ಷ್ಮ ಕಣಗಳು. PM2.5 ಎಂದರೆ ವಾಯುವಿನಲ್ಲಿರುವ ಸಣ್ಣ ಗಾತ್ರದ ಕಣಗಳಾದರೆ, PM10 ಎಂದರೆ ಸ್ವಲ್ಪ ದೊಡ್ಡ ಗಾತ್ರದ ಕಣಗಳಾಗಿವೆ.

ಬೆಂಗಳೂರಿನಲ್ಲಿ ಈಗ ವಾಹನಗಳ ಸಂಖ್ಯೆ 1.2 ಕೋಟಿ ದಾಟಿದ್ದು, ನಗರದ ಮಾಲಿನ್ಯಕ್ಕೆ 42% ರಷ್ಟು ಕೊಡುಗೆ ನೀಡುತ್ತಿರುವುದು ಈ ವಾಹನಗಳ ಹೊಗೆ. ಸಿಲ್ಕ್ ಬೋರ್ಡ್ ಮತ್ತು ವೈಟ್‌ಫೀಲ್ಡ್‌ನಂತಹ ಪ್ರದೇಶಗಳಲ್ಲಿ AQI ಮಟ್ಟವು ನಗರದ ಸರಾಸರಿಗಿಂತ 30% ಹೆಚ್ಚು ದಾಖಲಾಗುತ್ತಿದೆ. ಇದು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಗಾಳಿಯ ಗುಣಮಟ್ಟ 150 ದಾಟಿದರೆ ಶ್ವಾಸಕೋಶ ಕಾಯಿಲೆಯ ಜೊತೆಗೆ ಹೃದಯ ಸಂಬಂಧಿ ರೋಗಗಳೂ ಬರಬಹುದೆಂದು ತಜ್ಞರು ಹೇಳುತ್ತಾರೆ. ಹೀಗಿರುವಾಗ ಬಳ್ಳಾರಿಯ ಜನ ಮುಂಜಾಗೃತಾ ಕ್ರಮ ವಹಿಸಬೇಕೆಂದು ತಜ್ಞರು ತಿಳಿಸಿದ್ದಾರೆ.

ಯಾಕೀ ಕಣಗಳು ಅಪಾಯಕಾರಿ

PM10 ಎನ್ನುವುದು ನಮಗಿಂತ 7 ಪಟ್ಟು ತೆಳುವಾದ ಧೂಳಿನ ಕಣಗಳಾದರೆ, PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಬೆಂಗಳೂರಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ (WHO) ಮಿತಿಗಿಂತ 5 ಪಟ್ಟು ಹೆಚ್ಚಿರುವ ಸೂಕ್ಷ್ಮ ಕಣಗಳ ಪ್ರಮಾಣ ಆತಂಕಕಾರಿಯಾಗಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –170
  • ಮಂಗಳೂರು – 138
  • ಮೈಸೂರು – 123
  • ಬೆಳಗಾವಿ – 168
  • ಕಲಬುರ್ಗಿ – 119
  • ಶಿವಮೊಗ್ಗ – 79
  • ಬಳ್ಳಾರಿ –198,
  • ಹುಬ್ಬಳ್ಳಿ- 108,
  • ಉಡುಪಿ –123
  • ವಿಜಯಪುರ –97

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 8:28 am, Wed, 24 December 25

Source link

ವಿಷ್ಣುವರ್ಧನ್ ಕೊನೆಯ ವರ್ಷಗಳಲ್ಲಿ ಹಾಗೆ ನಡೆದುಕೊಂಡಿದ್ದೇಕೆ? ವಿವರಿಸಿದ ಕಿಚ್ಚ ಸುದೀಪ್ – Kannada News | Kichcha Sudeep’s Life Lesson: Praised Vishnuvardhan’s Wisdom

ಸುದೀಪ್ (Sudeep) ಅವರು ‘ಮಾರ್ಕ್’ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಡಿಸೆಂಬರ್ 25ರಂದು ಸಿನಿಮಾ ತೆರೆಗೆ ಬರಲಿದೆ. ಈ ಮಧ್ಯೆ ಸುದೀಪ್ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ. ‘ಮಾರ್ಕ್’ ಪ್ರೀರಿಲೀಸ್ ಈವೆಂಟ್​​ನಲ್ಲಿ ಮಾತನಾಡುವಾಗ ಅವರು ಆಡಿದ ಮಾತು ಚರ್ಚೆಗೆ ಕಾರಣ ಆಗಿತ್ತು. ಈ ವಿವಾದ ಮಧ್ಯೆ ಸುದೀಪ್ ಅವರು ಒಂದು ಜೀವನದ ಪಾಠ ಹೇಳಿದ್ದಾರೆ. ‘ನಮ್ಮ ಜೊತೆ ನಿಂತುಕೊಳ್ಳುತ್ತಾರೆ ಎಂಬುದು ಗೊತ್ತಿದ್ದರೆ ಮಾತ್ರ ಯುದ್ಧಕ್ಕೆ ಹೋಗಿ’ ಎಂದು ಕಿವಿ ಮಾತು ಹೇಳಿದ್ದಾರೆ ಸುದೀಪ್.

ವಿಷ್ಣುವರ್ಧನ್ ಅವರಿಗೆ ಸುದೀಪ್ ತುಂಬಾನೇ ಆಪ್ತರಾಗಿದ್ದರು. ವಿಷ್ಣು ಅವರನ್ನು ಸುದೀಪ್ ಯಾವಾಗಲೂ ಪ್ರೀತಿಯಿಂದ ದಾದಾ ಎನ್ನುತ್ತಿದ್ದರು. ಕಿಚ್ಚ ಅವರು ವಿಷ್ಣುವರ್ಧನ್ ಕಂಡ ರೀತಿಯ ಬಗ್ಗೆ ಹೇಳಿದ್ದರು. ಅವರು ತಮ್ಮ ಕೊನೆಯ ವರ್ಷಗಳಲ್ಲಿ ತುಂಬಾನೇ ಸೈಲೆಂಟ್ ಆಗಿಯೇ ಇದ್ದರಂತೆ. ಹೀಗೇಕೆ ಎಂಬ ಪ್ರಶ್ನೆಗೆ ಸುದೀಪ್ ಉತ್ತರಿಸಿದರು.

‘ವಿಷ್ಣುವರ್ಧನ್ ದೊಡ್ಡ ವ್ಯಕ್ತಿ. ಅವರು ಬರ್ತಾ ಬರ್ತಾ ಮನೆಯಲ್ಲಿ ದೇವರು ರೀತಿ ಕೂತಿರುತ್ತಿದ್ದರು. ಅವರಿಗೆ ಇರೋ ತಾಕತ್ತಿಗೆ ಎಲ್ಲವನ್ನೂ ಬಗೆಹರಿಸಬಹುದಿತ್ತು. ಆದರೆ, ನೋಡಿ ನೋಡಿ ಸಾಕಾಗಿತ್ತು. ಅಪ್ಪಾಜಿ ಹೀಗಾಗ್ತಾ ಇದೆ ಎಂದು ಹೇಳಿದರೆ ಕಾಫಿ ಕುಡಿಯಿರಿ ಆರಾಮಾಗಿ ಇರಿ ಎನ್ನುತ್ತಿದ್ದರು. ನೀವು ಗಲಾಟೆಗೆ ಹೋದರೆ ನಿಮ್ಮ ಜೊತೆ ಇದ್ದವರು ಇರುತ್ತಲೇ ಇರಲಿಲ್ಲ’ ಎನ್ನುತ್ತಿದ್ದರು ಸುದೀಪ್.

ಇದನ್ನೂ ಓದಿ: ‘ಈ ಹಿಂದೆ ದರ್ಶನ್ ಬಗ್ಗೆ ಕೆಟ್ಟದ್ದು ಮಾತನಾಡಿದ್ರೆ ತೋರಿಸಲಿ’; ಕಿಚ್ಚ ಸುದೀಪ್ ಸವಾಲು

‘ಅದು ಅವರ ಅನುಭವ. ನಾವು ಹೇಗೆ ಇರಬೇಕು ಎಂಬುದನ್ನು ನೋಡಿಕೊಂಡರೆ ಸೊಸೈಟಿ ಇನ್ನೂ ಚೆನ್ನಾಗಿ ಆಗುತ್ತದೆ. ನಮ್ಮನೆ ಸ್ವಚ್ಛವಾಗಿಟ್ಟುಕೊಂಡರೆ ಅದರಿಂದ ಸ್ಫೂರ್ತಿ ಪಡೆದು ಪಕ್ಕದ ಮನೆಯವರು ಕ್ಲೀನ್ ಆಗಿ ಇಟ್ಟುಕೊಳ್ಳಬಹುದು. ಹೀಗೆ ಮುಂದುವರಿದು ಇಡೀ ದೇಶ ಕ್ಲೀನ್ ಆಗುತ್ತದೆ’ ಎನ್ನುತ್ತಾರೆ ಸುದೀಪ್.
‘ಮಾರ್ಕ್’ ಸಿನಿಮಾ ಡಿಸೆಂಬರ್ 25ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ವಿಜಯ್ ಕಾರ್ತಿಕೇಯನ್ ಅವರು ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:34 am, Wed, 24 December 25

Source link

ಬೆಂಗಳೂರಿನ ಗೌರಿಯಿಂದ ಆಮೀರ್ ಮನಸ್ಸಿಗೆ ಸಿಕ್ಕಿತು ಶಾಂತಿ 

ಬಾಲಿವುಡ್‌ನಲ್ಲಿ ಮಿಸ್ಟರ್ ಪರ್ಫೆಕ್ಷನಿಸ್ಟ್ ಎಂದು ಕರೆಯಲ್ಪಡುವ ಆಮಿರ್ ಖಾನ್ ತಮ್ಮ ವೃತ್ತಿಪರ ಜೀವನದಲ್ಲಿ ಮಾತ್ರವಲ್ಲದೆ ವೈಯಕ್ತಿಕ ಜೀವನದಲ್ಲೂ ಅನೇಕ ತಿರುವುಗಳನ್ನು ಕಂಡಿದ್ದಾರೆ. ಎರಡು ವಿವಾಹಗಳು ಮತ್ತು ಎರಡು ವಿಚ್ಛೇದನಗಳು ಅವರ ಜೀವನದಲ್ಲಿ ದೊಡ್ಡ ಸಂಚಲನವನ್ನು ಸೃಷ್ಟಿಸಿವೆ. ಅವರ ಮೊದಲ ಪತ್ನಿ ರೀನಾ ದತ್ತಾ ಮತ್ತು ನಂತರ ಕಿರಣ್ ರಾವ್ ಅವರೊಂದಿಗೆ ವಿಚ್ಛೇದನ ಪಡೆದರೂ, ಅವರು ಇಬ್ಬರೊಂದಿಗೂ ಸ್ನೇಹ ಸಂಬಂಧವನ್ನು ಉಳಿಸಿಕೊಂಡಿದ್ದಾರೆ ಎಂಬುದು ಅವರ ಶ್ರೇಷ್ಠ ವ್ಯಕ್ತಿತ್ವಕ್ಕೆ ಸಾಕ್ಷಿಯಾಗಿದೆ. ಆದಾಗ್ಯೂ, ಇತ್ತೀಚೆಗೆ, ಗೌರಿ ಸ್ಪ್ರಾಟ್ ಎಂಬ ಬೆಂಗಳೂರು ಮಹಿಳೆ ಜೊತೆ ಅವರು ಸುತ್ತುತ್ತಿದ್ದಾರೆ. ಗೌರಿ ಅವರ ಜೀವನಕ್ಕೆ ಶಾಂತಿ ತಂದಿದ್ದಾರೆ ಎಂದು ಆಮಿರ್ ಹೇಳಿಕೊಂಡಿದ್ದಾರೆ.

ಆಮಿರ್ ಖಾನ್ ತಮ್ಮ ವೈಫಲ್ಯಗಳನ್ನು ಎಂದಿಗೂ ಮರೆಮಾಡಲು ಪ್ರಯತ್ನಿಸಲಿಲ್ಲ. ಅವರು ತಮ್ಮ ಜೀವನದಲ್ಲಿ ಮೂವರು ಮಹಿಳೆಯರ ಕೊಡುಗೆಯನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಆಮಿರ್ ಪ್ರಕಾರ, ಅವರ ಮೊದಲ ಇಬ್ಬರು ಪತ್ನಿಯರಾದ ರೀನಾ ದತ್ತಾ ಮತ್ತು ಕಿರಣ್ ರಾವ್, ಅವರ ವೃತ್ತಿಪರ ಮತ್ತು ವೈಯಕ್ತಿಕ ಬೆಳವಣಿಗೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಅವರ ಸಹಾಯ ಮತ್ತು ಬೆಂಬಲದಿಂದಾಗಿ ಅವರು ಇಂದು ಈ ಸ್ಥಾನದಲ್ಲಿದ್ದಾರೆ ಎಂದು ಅವರು ಒಪ್ಪಿಕೊಳ್ಳುತ್ತಾರೆ. ಅವರ ವಿಚ್ಛೇದನದ ನಂತರವೂ ಅವರು ಸ್ನೇಹ ಉಳಿಸಿಕೊಳ್ಳಲು ಇದುವೇ ಕಾರಣ.

ತಮ್ಮ ಪ್ರಸ್ತುತ ಸಂಗಾತಿ ಗೌರಿ ಸ್ಪ್ರಾಟ್ ಬಗ್ಗೆ ಮಾತನಾಡುತ್ತಾ, ‘ಅವರು ನನ್ನ ಜೀವನದಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ತಂದಿದ್ದಾರೆ. ಗೌರಿಯ ಶಾಂತ ಸ್ವಭಾವ ಮತ್ತು ಸೌಮ್ಯ ವರ್ತನೆ ನನಗೆ ಸಾಂತ್ವನ ನೀಡುತ್ತದೆ’ ಎಂದಿದ್ದಾರೆ.

ಇದನ್ನೂ ಓದಿ:  ‘ಕೂಲಿ’ಯಲ್ಲಿ ಆಮಿರ್ ಖಾನ್, ‘ಜೈಲರ್ 2’ನಲ್ಲಿ ಶಾರುಖ್ ಖಾನ್?

ಆಮಿರ್ ಖಾನ್ ಅವರು ಇತ್ತೀಚೆಗೆ ಸಿನಿಮಾ ಮಾಡುವ ಕೆಲಸಗಳಲ್ಲಿ ನಿಧಾನತೆ ತೋರಿಸುತ್ತಿದ್ದಾರೆ. ಮೊದಲಿನಷ್ಟು ವೇಗದಲ್ಲಿ ಅವರು ಸಿನಿಮಾಗಳನ್ನು ಮಾಡುತ್ತಿಲ್ಲ. ಇದಕ್ಕೆ ಕಾರಣ ಏನು ಎಂಬುದು ಅವರು ವಿವರಿಸಿದ್ದಾರೆ. ಚಿತ್ರರಂಗ ತೊರೆಯೋ ಆಲೋಚನೆ ಅವರಿಗೆ ಮೊದಲು ಬಂದಿತ್ತು. ಬಳಿಕ ನಿಧಾನವಾಗಿ ಸಿನಿಮಾ ಮಾಡುವ ಆಯ್ಕೆಯನ್ನು ಅವರು ತೆಗೆದುಕೊಂಡರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ಕೆಳಗಿಳಿಯಲು ಮೆಟ್ಟಿಲುಗಳೇ ಇಲ್ಲದೆ ವಿಮಾನದಿಂದ ಜಂಪ್ ಮಾಡಿದ ಪ್ರಯಾಣಿಕರು – Kannada News | Air Congo Passengers Forced to Exit Aircraft Without Stairs at Kindu Airport

ಕಿಂದು, ಡಿಸೆಂಬರ್ 24: ಕೆಳಗಿಳಿಯಲು ಮೆಟ್ಟಿಲುಗಳೇ ಇಲ್ಲದೆ ಪ್ರಯಾಣಿಕರು ವಿಮಾನದಿಂದ ಜಂಪ್ ಮಾಡಿರುವ ಘಟನೆ ಕಿಂದು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯದ ಕಿಂದು ವಿಮಾನ ನಿಲ್ದಾಣದಲ್ಲಿ ಏರ್ ಕಾಂಗೋ ವಿಮಾನದ ಪ್ರಯಾಣಿಕರು ಗಂಟೆಗಟ್ಟಲೆ ವಿಮಾನದೊಳಗೆ ಕಾಯುವಂತಾಗಿತ್ತು. ಪ್ರಯಾಣಿಕರು ಮೆಟ್ಟಿಲುಗಳಿಲ್ಲದೆ ಬೇಸರಗೊಂಡು ಬಾಗಿಲಿನಿಂದ ಸುಮಾರು 5-6 ಅಡಿಯಷ್ಟು ಕೆಳಗೆ ಹಾರಿದ್ದಾರೆ. ಮಣಿಮಾ ಪ್ರಾಂತ್ಯದಲ್ಲಿರುವ ಕಿಂದು ವಿಮಾನ ನಿಲ್ದಾಣವು ಮೂಲಸೌಕರ್ಯಗಳ ಕೊರತೆಯಿಂದ ಬಳಲುತ್ತಿದೆ. ವಿಮಾನಯಾನ ಸಂಸ್ಥೆಯು ಸಂಪರ್ಕವನ್ನು ಸುಧಾರಿಸುವ ಗುರಿಯನ್ನು ಹೊಂದಿದ್ದರೂ, ಈ ರೀತಿಯ ಘಟನೆಗಳು ಸಣ್ಣ ವಿಮಾನ ನಿಲ್ದಾಣಗಳಲ್ಲಿನ ಕೊರತೆಯನ್ನು ಒತ್ತಿ ಹೇಳುತ್ತವೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

15 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದು ಎಲ್ಲಿ? – Kannada News | Delhi take on Andhra at the BCCI’s Centre of Excellence ground in Bengaluru

ವಿಜಯ ಹಝಾರೆ ಟೂರ್ನಿಗೆ ಇಂದಿನಿಂದ ಚಾಲನೆ ದೊರೆಯಲಿದೆ. ಮೊದಲ ದಿನವೇ 32 ತಂಡಗಳು ಕೂಡ ಕಣಕ್ಕಿಳಿಯಲಿವೆ. ಈ ಮೂವತ್ತೆರಡು ತಂಡಗಳಲ್ಲಿ ಎಲ್ಲರ ಕಣ್ಣು ನೆಟ್ಟಿರುವುದು ದೆಹಲಿ ಮತ್ತು ಆಂಧ್ರ ನಡುವಣ ಪಂದ್ಯದ ಮೇಲೆ. ಏಕೆಂದರೆ ಈ ಮ್ಯಾಚ್ ಮೂಲಕ ವಿರಾಟ್ ಕೊಹ್ಲಿ (Virat Kohli) ವಿಜಯ ಹಝಾರೆ ಟೂರ್ನಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದು ಕೂಡ ಬರೋಬ್ಬರಿ 15 ವರ್ಷಗಳ ಬಳಿಕ.

Source link

ಬೆಂಗಳೂರಿಗೆ ಬ್ರೆಡ್​ನಲ್ಲಿ ಬರುತ್ತಿತ್ತು ಡ್ರಗ್ಸ್! ನೈಜಿರಿಯಾ ಮಹಿಳೆಯ ಬಂಧನ – Kannada News | Cocaine Hidden Inside Bread, Professor Turned Thief and Daylight Burglar Nabbed: Bengaluru Police Crack Major Crime Cases

ಬ್ರೆಡ್​ನಲ್ಲಿ ಡ್ರಗ್ಸ್, ಒಳಚಿತ್ರದಲ್ಲಿ ಆರೋಪಿ ಒಲಾಜಿಡೆ ಎಸ್ತಾರ್

ಬೆಂಗಳೂರು, ಡಿಸೆಂಬರ್ 24: ಬೆಂಗಳೂರು (Bangalore) ನಗರದಲ್ಲಿ ಮಾದಕ ವಸ್ತು ಸಾಗಣೆ ಹಾಗೂ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಒಂದೇ ದಿನ ಮೂರು ವಿಭಿನ್ನ ಪ್ರಕರಣಗಳನ್ನು ಭೇದಿಸಿದ್ದು, ಆರೋಪಿಗಳನ್ನು ಬಂಧಿಸಿ ಅಪಾರ ಪ್ರಮಾಣದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಮುಖ ಪ್ರಕರಣವೊಂದರಲ್ಲಿ, ತಿನ್ನುವ ಬ್ರೆಡ್‌ನೊಳಗೆ ಕೊಕೇನ್ ಮರೆಮಾಡಿ ಮಾರಾಟಕ್ಕೆ ಯತ್ನಿಸುತ್ತಿದ್ದ ನೈಜೀರಿಯನ್ ಮೂಲದ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಒಲಾಜಿಡೆ ಎಸ್ತಾರ್, ಬ್ರೆಡ್ ಪೀಸ್‌ಗಳನ್ನು ಕಟ್ ಮಾಡಿ ಅದರೊಳಗೆ ಕೊಕೇನ್ ಇಟ್ಟು ಮುಂಬೈಯಿಂದ ಬೆಂಗಳೂರಿಗೆ ಖಾಸಗಿ ಬಸ್ ಮೂಲಕ ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದಳು. ಆ ಸಂದರ್ಭದಲ್ಲಿ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ. ಕಾರ್ಯಾಚರಣೆ ವೇಳೆ ಸುಮಾರು 65 ಲಕ್ಷ ರೂ. ಮೌಲ್ಯದ 120 ಗ್ರಾಂ ಕೊಕೇನ್ ವಶಕ್ಕೆ ಪಡೆಯಲಾಗಿದೆ.

ಈ ಪ್ರಕರಣದಲ್ಲಿ, ಮಾದಕ ವಸ್ತುಗಳನ್ನು ಆಹಾರ ಪದಾರ್ಥಗಳ ಮೂಲಕ ಸಾಗಿಸುವ ಹೊಸ ತಂತ್ರ ಬಳಕೆಯಾಗಿರುವುದು ಪೊಲೀಸರಿಗೂ ಅಚ್ಚರಿ ಮೂಡಿಸಿದೆ.

ವಾರದ ದಿನಗಳಲ್ಲಿ ಪ್ರೊಫೆಸರ್, ವಾರಾಂತ್ಯದಲ್ಲಿ ಕಳ್ಳಿ!

ಇನ್ನೊಂದು ಪ್ರಕರಣದಲ್ಲಿ, ವಾರದ ದಿನಗಳಲ್ಲಿ ಕಾಲೇಜಿನಲ್ಲಿ ಕನ್ನಡ ಪ್ರೊಫೆಸರ್ ಆಗಿ ಕೆಲಸ ಮಾಡುತ್ತಿದ್ದ ರೇವತಿ ಎಂಬ ಮಹಿಳೆಯನ್ನು ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ. ರೇವತಿ ವಾರಾಂತ್ಯದಲ್ಲಿ ಮದುವೆ ನಡೆಯುವ ಕಲ್ಯಾಣಮಂಟಪಗಳಿಗೆ ಸಂಬಂಧಿಕಳಂತೆ ಪ್ರವೇಶಿಸಿ, ಅನುಮಾನ ಬಾರದಂತೆ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದಳು. ಕಳೆದ ನವೆಂಬರ್ 25ರಂದು ಬಸವನಗುಡಿಯ ದ್ವಾರಕನಾಥ್ ಕಲ್ಯಾಣಮಂಟಪದಲ್ಲಿ ನಡೆದ ಕಳ್ಳತನದ ದೂರಿನ ಮೇರೆಗೆ ತನಿಖೆ ನಡೆಸಿದ ಪೊಲೀಸರು, ಕೆ.ಆರ್.ಪುರಂನಲ್ಲಿ ವಾಸವಾಗಿದ್ದ ರೇವತಿಯನ್ನು ಬಂಧಿಸಿ, 32 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ಇರುಳುಗಣ್ಣೆಂದು ಹಗಲಲ್ಲೇ ಕಳ್ಳತನ ಮಾಡುತ್ತಿದ್ದವ ಅರೆಸ್ಟ್

ಇನ್ನೊಂದೆಡೆ, ‘ಇರುಳು ಕುರುಡು’ ಸಮಸ್ಯೆ ಎಂದು ಹೇಳಿಕೊಂಡು ಹಗಲಲ್ಲೇ ಮನೆ ಕಳ್ಳತನ ಮಾಡುತ್ತಿದ್ದ ಮೊಹಮ್ಮದ್ ಖಾನ್ ಎಂಬಾತನನ್ನು ಜೆಪಿ ನಗರ ಪೊಲೀಸರು ಬಂಧಿಸಿದ್ದಾರೆ. ಬೀಗ ಹಾಕಿದ್ದ ಮನೆಗಳನ್ನು ಟಾರ್ಗೆಟ್ ಮಾಡುತ್ತಿದ್ದ ಖಾನ್, ಇತ್ತೀಚೆಗೆ ಕಿರುತೆರೆ ನಟ ಪ್ರವೀಣ್ ಅವರ ಮನೆಯಲ್ಲಿ ಸುಮಾರು ಒಂದೂವರೆ ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ. ತನಿಖೆ ವೇಳೆ ಖಾನ್ ವಿರುದ್ಧ ಏಳು ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದ್ದು, ಬಂಧಿತನಿಂದ 65.28 ಲಕ್ಷ ರೂ. ಮೌಲ್ಯದ 470 ಗ್ರಾಂ ಚಿನ್ನಾಭರಣ, 1.5 ಕೆಜಿ ಬೆಳ್ಳಿ ಹಾಗೂ 4.60 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಇರುಳು ಕುರುಡು ಸಮಸ್ಯೆ ಎಂದು ಹಗಲಿನಲ್ಲೇ ಕಿರುತೆರೆ ನಟನ ಮನೆಗೆ ಕನ್ನ ಹಾಕಿದ ಅಂತಾರಾಜ್ಯ ಕಳ್ಳ!

ಈ ಅಪರಾಧ ಪ್ರಕರಣಗಳ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದು, ನಗರದಲ್ಲಿ ಅಪರಾಧ ನಿಯಂತ್ರಣಕ್ಕೆ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ನೀ ನಂಗೆ ಅಲ್ಲವ’ ಹಾಡನ್ನು ಸಂಜಿತ್ ಹಾಡಿದ್ದು ಯಾರಿಗಾಗಿ? ಉತ್ತರಿಸಿದ ಗಾಯಕ – Kannada News | Sanjith Hegde’s Nange Allava: The Viral Hit Song’s Emotional Backstory

 ಸಂಜಿತ್ ಹೆಗಡೆ ಅವರು ಗಾಯನದ ಮೂಲಕ ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ. ಅವರು ಹೊಸ ಹೊಸ ಹಾಡುಗಳ ಮೂಲಕ ಗಮನ ಸೆಳೆಯುತ್ತಾರೆ. ಇತ್ತೀಚೆಗೆ ಬೆಂಗಳೂರಲ್ಲಿ ನಡೆದ ಅವರ ಕಾನ್ಸರ್ಟ್ಗೆ ಸಾಕಷ್ಟು ಜನರು ಸೇರಿದ್ದರು. ಇದು ಯಶಸ್ಸು ಕಂಡಿತ್ತು. ಇದರ ಕ್ಲಿಪ್​ಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಇದರಲ್ಲಿ ಗಮನ ಸೆಳೆದಿದ್ದು ‘ನಂಗೆ ಅಲ್ಲವ’ ಹಾಡು.

ಸಂಜಿತ್ ಹೆಗಡೆ ಈಗಾಗಲೇ ಸಾಕಷ್ಟು ಹಾಡುಗಳನ್ನು ಹೇಳಿದ್ದಾರೆ. ಆ ಪೈಕಿ ಸಾಕಷ್ಟು ಗಮನ ಸೆಳೆದಿದ್ದು, ‘ನಂಗೆ ಅಲ್ಲವ’ ಹಾಡು. ಅವರು ಯಾವುದೇ ವೇದಿಕೆ ಏರಿದರೂ ಈ ಹಾಡನ್ನು ಹಾಡುವಂತೆ ಕೇಳುತ್ತಾರೆ. ಈ ಹಾಡನ್ನು ಅವರು ಹುಡಗಿ ಒಬ್ಬರಿಗಾಗಿ ಕಂಪೋಸ್ ಮಾಡಿದ್ದರಂತೆ. ಅವರು ಈಗ ಅವರ ಜೊತೆ ಇಲ್ಲ.

ಈ ಹಾಡನ್ನು ಕಂಪೋಸ್ ಮಾಡಿದ್ದು ಸಂಜಿತ್ ಹೆಗಡೆ. ನಾಗಾರ್ಜುನ ಶರ್ಮ ಅವರು ಈ ಹಾಡನ್ನು ಬರೆದಿದ್ದಾರೆ. ಈ ಹಾಡನ್ನು ಯಾರಿಗಾಗಿ ಹೇಳಿದ್ದು ಎಂದು ಸಂಜಿತ್ ಹೆಗಡೆ ಅವರಿಗೆ ಕೇಳಲಾಯಿತು. ಈ ವೇಳೆ ಅವರು ಯಾವುದೇ ಮುಚ್ಚುಮರೆ ಇಲ್ಲದೆ ಉತ್ತರ ನೀಡಿದ್ದರು.

ನಂಗೆ ಅಲ್ಲವಾ ಸಂಜಿತ್ ಯಾರಿಗೆ ಹೇಳುತ್ತಾರೆ’ ಎಂದು ಸಂಜಿತ್​ ಅವರಿಗೆ ಕೇಳಲಾಯಿತು. ‘ನಾನು ಮಾಡುವಾಗ ಒಂದು ಹುಡುಗಿ ಇದ್ದರು. ಈಗ ಅವಳು ನನ್ನಿಂದ ದೂರಾಗಿದ್ದಾಳೆ. ಆ ಟೈಮ್ ಅಲ್ಲಿ ಅವಳಿಗೆ ಹೇಳಿದ್ದು. ಈವಾಗ ಇನ್ನೊಬ್ಬರಿಗೆ ಹೇಳ್ತೀನಿ. ನೀವು ಇನ್ಯಾರಿಗೋ ಹೇಳ್ತೀರಾ’ ಎಂದು ಸಂಜಿತ್ ಹೇಳಿದ್ದಾರೆ.

ಆ ಹುಡುಗಿಯ ಹೆಸರು ಹೇಳೋದು ಬೇಡ. ನಾನು ಆ ವಿಷಯದಲ್ಲಿ ಖಾಸಗಿ ವ್ಯಕ್ತಿ. ಈಗ ಬೇರೆ ಯಾರೋ ಇದಾರೆ’ ಎಂದು ಒಪ್ಪಿಕೊಂಡರು ಸಂಜಿತ್ ಹೆಗಡೆ. ‘ನಂಗೆ ಅಲ್ಲವ’ ಹಾಡು 2024ರ ಜೂನ್​ ಅಲ್ಲಿ ರಿಲೀಸ್ ಆಯಿತು. ಈ ಹಾಡು ಬರೋಬ್ಬರಿ 14 ಮಿಲಿಯನ್ ವೀಕ್ಷಣೆ ಕಂಡಿದೆ. ಜನರು ಸಂಜಿತ್ ಹೆಗಡೆ ಧ್ವನಿಯಲ್ಲಿ ಈ ಹಾಡನ್ನು ಕೇಳಲು ಬಯಸುತ್ತಾರೆ. ಇದು ಆಲ್ಬಂ ಸಾಂಗ್ ಎಂಬುದು ವಿಶೇಷ.

ಇದನ್ನೂ ಓದಿ: ನಂದಿನಿ-ಸಂಜಿತ್ ಹೆಗಡೆ ಕೊಲ್ಯಾಬರೇಷನ್; ಸಖತ್ ಫನ್ ಆಗಿದೆ ಸಾಂಗ್

ಸಂಜಿತ್ ಅವರು ಕನ್ನಡದವರಿಗೆ ಮಾತ್ರವಲ್ಲ, ಪರಭಾಷೆ ಅವರಿಗೂ ಪರಿಚಯ ಇದ್ದಾರೆ. ಅವರು ಪರಭಾಷೆಯಲ್ಲಿ ಹಾಡಿದ ಹಾಡೂ ಕೂಡ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ನಿಯಂತ್ರಣ ತಪ್ಪಿ ಮಗುವಿನ ಮೇಲೆ ಪಲ್ಟಿ ಹೊಡೆದ ಟ್ರಕ್ – Kannada News | Truck Overturns at Vikarabad Junction, Multiple Vehicles Damaged

ವಿಕಾರಾಬಾದ್, ಡಿಸೆಂಬರ್ 24: ಟ್ರಕ್​ ಒಂದು ನಿಯಂತ್ರಣ ತಪ್ಪಿ ಮಗುವಿನ ಮೇಲೆ ಪಲ್ಟಿ ಹೊಡೆದ ಘಟನೆ ತೆಲಂಗಾಣದ ವಿಕಾರಾಬಾದ್​ನಲ್ಲಿ ನಡೆದಿದೆ. ವಾಹನವು ಸಮತೋಲನವನ್ನು ಕಳೆದುಕೊಂಡು, ಬಲಭಾಗದ ಟೈರ್‌ಗಳು ನೆಲದಿಂದ ಮೇಲಕ್ಕೆತ್ತಿ ಟ್ರಕ್ ವಾಹನಗಳ ಮೇಲೆ ಎಡಭಾಗಕ್ಕೆ ಉರುಳುತ್ತದೆ, ಕೆಲವು ವಾಹನಗಳು ನಜ್ಜುಗುಜ್ಜಾಗುತ್ತವೆ. ಟ್ರಕ್ ಪಲ್ಟಿಯಾಗುತ್ತಿದ್ದಂತೆ, ಭಾರವಾದ ಕಬ್ಬಿಣ ಅಥವಾ ಲೋಹದ ರ‍್ಯಾಕ್ ಕುಸಿದು ಮಗುವನ್ನು ಕೆಳಗೆ ಸಿಲುಕಿಸುತ್ತದೆ. ಆ ಕ್ಷಣ ತೀರಾ ಭಯಾನಕವಾಗಿದ್ದು ಜನರನ್ನು ಆಘಾತಗೊಳಿಸಿದೆ. ಬಿದ್ದ ಲೋಹದ ರ‍್ಯಾಕ್ ಅನ್ನು ಎತ್ತಿಕೊಂಡು ಮಗುವನ್ನು ಹೊರತೆಗೆಯುತ್ತಿರುವುದನ್ನು ಕಾಣಬಹುದು. ಅಪಘಾತದ ನಂತರ, ಸುಮಾರು ಎರಡು ಗಂಟೆಗಳ ಕಾಲ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿ, ಹೆದ್ದಾರಿಯಲ್ಲಿ ಪ್ರಯಾಣಿಕರಿಗೆ ಅನನುಕೂಲವಾಯಿತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ – Kannada News | Bengaluru temperature: Extreme cold with misty weather in Bengaluru, Dry weather elsewhere

ರಾಜ್ಯದೆಲ್ಲೆಡೆ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಬೆಂಗಳೂರು, ಡಿಸೆಂಬರ್ 23: ಬೆಂಗಳೂರಿನ ಹಲವೆಡೆ ಮೈಕೊರೆಯುವ ಚಳಿಯಿದ್ದು (Weather Forecast) , ರಾಜ್ಯದಲ್ಲೂ ಶೀತದಲೆಯ ಅಬ್ಬರ ಹೆಚ್ಚಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಸೇರಿದಂತೆ ಕರಾವಳಿಯಲ್ಲೂ ಒಣಹವೆ ಇರಲಿದ್ದು, ತಾಪಮಾನದಲ್ಲೂ ಏರುಪೇರಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಬೆಳಗಿನ ಸಮಯ ದಟ್ಟ ಮಂಜು ಕಾಣಿಸಿಕೊಲ್ಳುವ ಸಾಧ್ಯತೆ ಇದ್ದು, ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡಬೇಕೆಂದು ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ

ಈ ಮಧ್ಯೆ ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 27°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ. ಕಳೆದ ಕೆಲ ದಿನಗಳಿಂದ ರಾಜಧಾನಿಯ ವಾತಾವರಣದಲ್ಲಿ ಸಾಕಷ್ಟು ಏರು ಪೇರಾಗುತ್ತಿದ್ದು, ಚಳಿಯ ಪ್ರಮಾಣ ಹೆಚ್ಚುತ್ತಿದೆ. ಇಂದು ಎಂದಿನಂತೆ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ.

ಎಲ್ಲೆಲ್ಲಿ ಒಣ ಹವೆ

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link