All posts by nagaraj11081993

ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು: ಸಚಿವ ಪ್ರಿಯಾಂಕ್ ಖರ್ಗೆ – Kannada News | Kharge Counters Mohan Bhagwat on RSS Claims, Addresses Central Governments Impact on MNREGA

ಬೆಂಗಳೂರು, ಡಿ.23: ಕರ್ನಾಟಕ ಭವನದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕುರಿತು ಸಮಾಲೋಚನಾ ಸಭೆ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ, ಈ ಸಭೆಯಲ್ಲಿ ಅರ್ಥಶಾಸ್ತ್ರಜ್ಞರು, ಸಮಾಜಶಾಸ್ತ್ರಜ್ಞರು ಮತ್ತು ಕಾನೂನು ತಜ್ಞರೊಂದಿಗೆ ಈ ಯೋಜನೆಗೆ ಸಂಬಂಧಿಸಿದಂತೆ ಭವಿಷ್ಯದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು ಎಂದು ಹೇಳಿದರು. ಕೇಂದ್ರ ಸರ್ಕಾರವು ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ನಾಶ ಮಾಡಿದೆ ಎಂದು ಖರ್ಗೆ ಆರೋಪಿಸಿದರು. ಈ ಯೋಜನೆಯು ಉದ್ಯೋಗ ಮತ್ತು ಜೀವನೋಪಾಯದ ಭರವಸೆಯನ್ನು ಕಸಿದುಕೊಂಡಿದೆ, ಪಂಚಾಯತ್‌ಗಳ ಅಧಿಕಾರವನ್ನು ಮೊಟಕುಗೊಳಿಸಿದೆ ಮತ್ತು ರಾಜ್ಯಕ್ಕೆ ಧನಸಹಾಯವನ್ನು ಬದಲಿಸಿದೆ. ಇದು ಪಂಚಾಯತ್ ರಾಜ್ ವ್ಯವಸ್ಥೆಗೆ ದೊಡ್ಡ ಹಿನ್ನಡೆಯಾಗಿದೆ ಎಂದು ಅವರು ಟೀಕಿಸಿದರು. ಇದೇ ವೇಳೆ, ಮೋಹನ್ ಭಾಗವತ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಸೂರ್ಯ ಮತ್ತು ಚಂದ್ರರ ಹುಟ್ಟು ವಿಜ್ಞಾನ. ನಮ್ಮ ದೇಶವು ಸಂವಿಧಾನದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತದೆ, ಅದು ಆರ್‌ಎಸ್‌ಎಸ್, ಬಿಜೆಪಿ ಮತ್ತು ಕಾಂಗ್ರೆಸ್ ಎಲ್ಲರಿಗೂ ಅನ್ವಯಿಸುತ್ತದೆ ಎಂದು ಹೇಳಿದರು. ಆರ್‌ಎಸ್‌ಎಸ್ ಸಂವಿಧಾನೇತರ ಸಂಸ್ಥೆಯಲ್ಲ. ಆರ್‌ಎಸ್‌ಎಸ್ ಸಂಸ್ಥೆಗೆ ನೋಂದಣಿಯ ಅಗತ್ಯವಿದೆ. ಅದರ ಆದಾಯದ ಮೂಲಗಳ ಬಗ್ಗೆಯೂ ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಭಾರತ ದೇಶವು ಯಾವುದೇ ಧಾರ್ಮಿಕ ಗ್ರಂಥಗಳಿಂದ ನಡೆಯುತ್ತಿಲ್ಲ, ಸಂವಿಧಾನದಿಂದ ನಡೆಯುತ್ತದೆ ಎಂದು ಹೇಳಿದರು. ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದಾರೆ ಎಂದು ಖರ್ಗೆ ಪ್ರಶ್ನಿಸಿದರು. 3000 ವರ್ಷಗಳಿಂದ ಇರುವ ಧರ್ಮವನ್ನು ರಕ್ಷಿಸಲು 100 ವರ್ಷವೂ ಆಗದ ಆರ್‌ಎಸ್‌ಎಸ್‌ಗೆ ಯಾರೂ ಬರೆದುಕೊಟ್ಟಿಲ್ಲ ಎಂದರು. ಕಾಂಗ್ರೆಸ್ ಪಕ್ಷವು ಆರ್‌ಎಸ್‌ಎಸ್‌ನ ಸಂವಿಧಾನಿಕ ಮಾನ್ಯತೆಯ ಬಗ್ಗೆ ಪ್ರಶ್ನಿಸುತ್ತದೆ ಎಂದು ಹೇಳಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿಯನ್ನು ಕೊಚ್ಚಿಕೊಂದ 24 ಗಂಟೆಯಲ್ಲೇ ಹಂತಕರು ಅರೆಸ್ಟ್​

ಹುಬ್ಬಳ್ಳಿ, ಡಿಸೆಂಬರ್​ 23: ಹುಬ್ಬಳ್ಳಿ ಮರ್ಯಾದೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಪೊಲೀಸರು 24 ಗಂಟೆಗಳ ಒಳಗಾಗಿ ಒಟ್ಟು ಆರು ಆರೋಪಿಗಳನ್ನು ಬಂಧಿಸಿದ್ದಾರೆ. ನಿನ್ನೆ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಫಕೀರಗೌಡ ಪಾಟೀಲ್, ಬಸನಗೌಡ ಪಾಟೀಲ್ ಮತ್ತು ಗುರಸಿದ್ದಗೌಡ ಪಾಟೀಲ್ ಎಂಬ ಮೂವರು ಇನಾಂ ವೀರಪುರ ಗ್ರಾಮದವರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಮೃತ ಯುವತಿಯ ತಂದೆಯೂ ಒಬ್ಬರಾಗಿದ್ದಾರೆ. ಮೃತ ಯುವತಿಯ ಪತಿ ವಿವೇಕಾನಂದ ಅವರು ಸುಮಾರು 20 ಜನರ ವಿರುದ್ಧ ದೂರು ನೀಡಿದ್ದಾನೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಡಿ. 30ರಂದು ಕಸ್ಟಮ್ಸ್ ಇಲಾಖೆಯಿಂದ ಹರಾಜು: ಅತ್ಯಂತ ಕಡಿಮೆ ಬೆಲೆಗೆ ಸಿಗಲಿವೆ ಈ ವಸ್ತುಗಳು – Kannada News | Bengaluru Customs Online Auction via MSTC: Get Electronic Items, Vehicles, Furniture at Low Prices

ಬೆಂಗಳೂರು, ಡಿಸೆಂಬರ್​​ 23: ಕೇಂದ್ರ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ (CBIC) ಅಡಿಯಲ್ಲಿ ಕಾರ್ಯನಿರ್ವಹಿಸುವ ಬೆಂಗಳೂರು ಕಸ್ಟಮ್ಸ್ ಇಲಾಖೆ ವಶಪಡಿಸಿಕೊಂಡಿರುವ ದೇಶಕ್ಕೆ ಅಕ್ರಮವಾಗಿ ಸಾಗಾಟ ಮಾಡಿದ ವಸ್ತುಗಳ ಹರಾಜು ಪ್ರಕ್ರಿಯೆ ಡಿಸೆಂಬರ್​​ 30ರಂದು ನಡೆಯಲಿದೆ. ಎಕ್ಸ್​​ ಖಾತೆಯಲ್ಲಿ ಕಸ್ಟಮ್ಸ್ ಇಲಾಖೆ ನೀಡಿರುವ ಮಾಹಿತಿಯಂತೆ, ಈ ಹರಾಜಿನಲ್ಲಿ ಮೊಬೈಲ್ ಫೋನ್‌ಗಳು, ಕಂಪ್ಯೂಟರ್‌ಗಳು, ಐಪ್ಯಾಡ್‌ಗಳು ಹಾಗೂ ಟಿವಿಗಳಂತಹ ಉತ್ಪನ್ನಗಳು ಮಾರುಕಟ್ಟೆ ಬೆಲೆಗೆ ಹೋಲಿಸಿದರೆ ಬಹಳ ಕಡಿಮೆ ದರದಲ್ಲಿ ಲಭ್ಯವಾಗಲಿವೆ.

ವಸ್ತುಗಳ ಖರೀದಿ ಹೇಗೆ?

ವಿದೇಶಗಳಿಂದ ಖರೀದಿಸಿ ತಂದ ವಸ್ತುಗಳಿಗೆ ದಾಖಲೆಗಳನ್ನು ಪ್ರಯಾಣಿಕರು ಒದಗಿಸಲು ವಿಫಲವಾದಲ್ಲಿ, ಆ ವಸ್ತುಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಳ್ಳುತ್ತಾರೆ. ವಶಪಡಿಸಿಕೊಂಡ ವಸ್ತುಗಳನ್ನು ದಂಡ ಮತ್ತು ಶುಲ್ಕಗಳನ್ನು ಪಾವತಿಸುವ ಮೂಲಕ ನಿಗದಿತ ಅವಧಿಯಲ್ಲಿ ಮರಳಿ ಪಡೆಯಬಹುದು. ಆದರೆ, ಅವನ್ನು ಪಡೆಯಲು ಪ್ರಯಾಣಿಕರು ವಿಫಲವಾದಲ್ಲಿ ಆ ವಸ್ತುಗಳನ್ನು ಕಸ್ಟಮ್ಸ್ ಗೋದಾಮುಗಳಿಗೆ ಕಳುಹಿಸಲಾಗುತ್ತದೆ. ಗೋದಾಮುಗಳಲ್ಲಿ ಸಂಗ್ರಹವಾಗಿರುವ ವಸ್ತುಗಳನ್ನು ವಿಲೇವಾರಿ ಮಾಡಲು ಕಸ್ಟಮ್ಸ್ ಇಲಾಖೆ ನಿಯಮಿತವಾಗಿ ಹರಾಜುಗಳನ್ನು ನಡೆಸುತ್ತದೆ. ಇದೇ ರೀತಿಯಲ್ಲಿ, ಬೆಂಗಳೂರು ಕಸ್ಟಮ್ಸ್ ಕೂಡ ಈ ತಿಂಗಳ ಕೊನೆಯಲ್ಲಿ ಹರಾಜು ಆಯೋಜಿಸಲು ಮುಂದಾಗಿದೆ.

ಸರ್ಕಾರದ ಅಧಿಕೃತ ವೆಬ್‌ಸೈಟ್ ಎಂಎಸ್‌ಟಿಸಿ (ಮೆಟಲ್ ಸ್ಕ್ರ್ಯಾಪ್ ಟ್ರೇಡ್ ಕಾರ್ಪೊರೇಷನ್) ಇ-ಕಾಮರ್ಸ್ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳುವ ಮೂಲಕ ಆನ್‌ಲೈನ್ ಹರಾಜಿನಲ್ಲಿ ಭಾರತೀಯ ನಾಗರಿಕರು ಈ ವಸ್ತುಗಳನ್ನು ಖರೀದಿಸಬಹುದಾಗಿದೆ. ಎಲೆಕ್ಟ್ರಾನಿಕ್ಸ್ ವಸ್ತುಗಳಷ್ಟೇ ಅಲ್ಲದೆ, ವಾಹನಗಳು, ವಿದ್ಯುತ್ ಉಪಕರಣಗಳು, ಫರ್ನಿಚರ್ ಹಾಗೂ ಉಡುಪುಗಳು ಸಹ ಎಂಎಸ್‌ಟಿಸಿ ಪೋರ್ಟಲ್‌ನಲ್ಲಿ ಮಾರುಕಟ್ಟೆಯ ಬೆಲೆಗಿಂತ ಕಡಿಮೆ ದರದಲ್ಲಿ ದೊರೆಯಲಿವೆ.

ಇದನ್ನೂ ಓದಿ: ಕೈಕೊಟ್ಟ ಕೇಂದ್ರದ ವಾಹನ್-4, ಬೇರೆ ರಾಜ್ಯಗಳಿಗೆ ತೆರಳುವ ವಾಹನ ಮಾಲೀಕರು ಪರದಾಟ

ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸೋದು ಹೇಗೆ?

ಹಂತ 1: ಎಂಎಸ್‌ಟಿಸಿ ಇ-ಕಾಮರ್ಸ್ ವೆಬ್‌ಸೈಟ್‌ಗೆ ಭೇಟಿ ನೀಡಿ.

ಹಂತ 2: ಮಧ್ಯಭಾಗದಲ್ಲಿರುವ ನೀಲಿ ಬಣ್ಣದ ‘Search Auction’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ.

ಹಂತ 3: ‘Upcoming Auction’ ಆಯ್ಕೆ ಮಾಡಿ >> ‘Select: All’ ಆಯ್ಕೆ ಮಾಡಿ ಮತ್ತು ‘from’ ಹಾಗೂ ‘to’ ದಿನಾಂಕಗಳನ್ನು ನಮೂದಿಸಿ.

ಹಂತ 4: ನಂತರ ‘Filter by Office’ ಆಯ್ಕೆ ಮಾಡಿ >> State: ಕರ್ನಾಟಕ >> City: ‘BLR-MSTC Bangalore Office’ ಆಯ್ಕೆ ಮಾಡಿ >> Item Type (ಎಡಭಾಗ): ‘Electronics’ >> Computers / Phones / Tablet / Peripherals ಆಯ್ಕೆ ಮಾಡಿ ಮತ್ತು ‘Search’ ಮೇಲೆ ಕ್ಲಿಕ್ ಮಾಡಿ.

ಹಂತ 5: ಕ್ಯಾಪ್ಚಾ ನಮೂದಿಸಲು ಕೇಳಲಾಗುತ್ತದೆ. ನಂತರ ಮುಂದಿನ ಪುಟಕ್ಕೆ ಅನುಮತಿ ದೊರಕಿದ ಮೇಲೆ, ಕೆಳಗೆ ಸ್ಕ್ರೋಲ್ ಮಾಡಿ ‘mobile/tablet’ ವಿಭಾಗವನ್ನು ಹುಡುಕಿ. ಅಲ್ಲಿ MSTC/BLR/Additional Commissioner of Customs Air Cargo Complex Division/1/Bengaluru/25-26/50088 ಎಂಬ ಲಿಂಕ್ ಕಾಣುತ್ತದೆ. ಅದರಲ್ಲಿ ‘Click Here’ ಮೇಲೆ ಕ್ಲಿಕ್ ಮಾಡಿ.

ಹಂತ 6: ಬಳಿಕ ಹೊಸ ಬಳಕೆದಾರರಾಗಿ ನಿಮ್ಮ ನೋಂದಣಿ ಆಗುತ್ತದೆ. ‘New Registration’ ಟ್ಯಾಬ್ ಪಕ್ಕದಲ್ಲೇ ನೋಂದಣಿ ಕುರಿತು ವೀಡಿಯೋ ಮಾರ್ಗದರ್ಶಿಯೂ ಲಭ್ಯವಿರುತ್ತದೆ. ನೋಂದಣಿ ವೇಳೆ ‘Buyer’ ಆಗಿ ನೋಂದಾಯಿಸಲು ಇ-ಹರಾಜಿನ ಸಾಮಾನ್ಯ ನಿಯಮಗಳು ಮತ್ತು ಷರತ್ತುಗಳನ್ನು (GTC) ಅಂಗೀಕರಿಸಬೇಕು. ಮುಂದಿನ ಪುಟದಲ್ಲಿ ‘Buyer Specific Terms and Conditions’ (BSTC) ಅನ್ನು ಅಂಗೀಕರಿಸಿ ‘Agree’ ಮೇಲೆ ಕ್ಲಿಕ್ ಮಾಡಬೇಕು.

ಹಂತ 7: ನಂತರ ಖರೀದಿದಾರರ ನೋಂದಣಿ ಫಾರ್ಮ್ ತೆರೆಯುತ್ತದೆ. ಅಲ್ಲಿ ‘General Auction’ ಆಯ್ಕೆ ಮಾಡಿ ಮತ್ತು ‘Proceed’ ಬಟನ್ ಒತ್ತಿರಿ.

ಹಂತ 8: ನಿಮ್ಮ ಇಮೇಲ್ ಐಡಿ ಮತ್ತು ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಿ, ಕ್ಯಾಪ್ಚಾ ಭದ್ರತಾ ಪರಿಶೀಲನೆ ಪೂರ್ಣಗೊಳಿಸಿ. ನಿಮ್ಮ ಇಮೇಲ್ ಮತ್ತು ಮೊಬೈಲ್ ಸಂಖ್ಯೆಗೆ OTP ಬರುತ್ತದೆ. ಮೊಬೈಲ್ OTP ಮತ್ತು ಇಮೇಲ್ OTP ನಮೂದಿಸಿದ ಬಳಿಕ ‘Submit’ ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್​​ನಲ್ಲಿ ಉದ್ಯೋಗವಕಾಶ; ಸಂಶೋಧನಾ ಸಹಾಯಕ ಹುದ್ದೆಗೆ ನೇಮಕಾತಿ

ಹಂತ 9: OTP ಪರಿಶೀಲನೆ ಯಶಸ್ವಿಯಾದ ನಂತರ, ಹೊಸ ‘Buyer Registration Form’ ವೆಬ್‌ಪೇಜ್ ತೆರೆಯುತ್ತದೆ. ಅಲ್ಲಿ ಖರೀದಿದಾರರ ಪ್ರಕಾರ (General Auction), ಸಂಸ್ಥೆಯ ಹೆಸರು (ಇದ್ದರೆ), ವಿಳಾಸ (ದೇಶ, ರಾಜ್ಯ, ನಗರ, ಪಿನ್‌ಕೋಡ್), ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಬಳಕೆದಾರ ಹೆಸರು ಮತ್ತು ಪಾಸ್‌ವರ್ಡ್ ಸೇರಿದಂತೆ ಎಲ್ಲಾ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಬೇಕು. ಜಿಎಸ್‌ಟಿ ನೋಂದಣಿ ಸಂಖ್ಯೆ ಇದ್ದಲ್ಲಿ ಅದನ್ನು ನಮೂದಿಸಬಹುದು. ಇದಲ್ಲದೆ, ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಮಾಣೀಕೃತ / ನಿರ್ಬಂಧಿತ ವಸ್ತುಗಳಿಗೆ ಸಂಬಂಧಿಸಿದ ಮಾಹಿತಿಯನ್ನೂ ಕೇಳಲಾಗುತ್ತದೆ. ಅನ್ವಯವಾಗಿದ್ದರೆ ಸೂಕ್ತ ಆಯ್ಕೆಯನ್ನು ಮಾಡಿ ಮುಂದಿನ ಹಂತಕ್ಕೆ ಸಾಗಬೇಕು. ಈ ಮೂಲಕ ನೋಂದಣಿ ಪೂರ್ಣಗೊಳ್ಳುತ್ತದೆ.

ಹಂತ 10: ನಂತರ ಮತ್ತೆ ನೋಂದಣಿ ಪೋರ್ಟಲ್‌ಗೆ ಹೋಗಿ ಬಳಕೆದಾರ ಹೆಸರು ಮತ್ತು ಪಾಸ್‌ವರ್ಡ್ ನಮೂದಿಸಿ ಲಾಗಿನ್ ಆಗಬೇಕು. ಅದಾದ ಬಳಿಕ ಇ-ಪಾವತಿ ಪೋರ್ಟಲ್‌ಗೆ ಕಳುಹಿಸಲಾಗುತ್ತದೆ. ಇಲ್ಲಿ NEFT ಅಥವಾ RTGS ಮೂಲಕ ಶುಲ್ಕ ಪಾವತಿಸಬೇಕು. ಪರದೆ ಮೇಲಿನ ಸೂಚನೆಗಳನ್ನು ಅನುಸರಿಸಿ ಬ್ಯಾಂಕ್ ವಿವರಗಳನ್ನು ಭರ್ತಿ ಮಾಡಿ. ಪಾವತಿ ಮುಗಿದ ನಂತರ ಆನ್‌ಲೈನ್ ಪಾವತಿ ಚಲನ್ ಪಡೆಯಬೇಕು.

ಪಾವತಿ ಯಶಸ್ವಿಯಾದ ಬಳಿಕ ಖರೀದಿದಾರರ ಖಾತೆ ಸಕ್ರಿಯಗೊಳ್ಳುತ್ತದೆ ಮತ್ತು ನೋಂದಾಯಿತ ಹರಾಜುದಾರರ ಪೇಜ್​​ಗೆ ಪ್ರವೇಶ ದೊರೆಯುತ್ತದೆ. ನಂತರ, ಹರಾಜು ನಡೆಯುವ ದಿನ ಎಂಎಸ್‌ಟಿಸಿ ಇ-ಕಾಮರ್ಸ್ ಪೋರ್ಟಲ್‌ಗೆ ಭೇಟಿ ನೀಡಿ, ಆನ್‌ಲೈನ್ ಮೂಲಕ ಬೇಕಾದ ವಸ್ತುಗಳನ್ನು ಖರೀದಿಸಬಹುದು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 4:43 pm, Tue, 23 December 25

Source link

ICC Rankings: ನಂಬರ್ 1 ಕಿರೀಟ ಕಳೆದುಕೊಂಡ ಸ್ಮೃತಿ, ಇತಿಹಾಸ ಸೃಷ್ಟಿಸಿದ ದೀಪ್ತಿ ಶರ್ಮಾ – Kannada News | ICC Women’s Rankings: Deepti Sharma Rises, Smriti Mandhana Drops

ಐಸಿಸಿ ಬಿಡುಗಡೆ ಮಾಡಿರುವ ಮಹಿಳಾ ಕ್ರಿಕೆಟ್​ನ ಟಿ20 ಶ್ರೇಯಾಂಕದಲ್ಲಿ ಭಾರತದ ಸ್ಟಾರ್ ಆಲ್‌ರೌಂಡರ್ ದೀಪ್ತಿ ಶರ್ಮಾ ನಂಬರ್ ಒನ್ ಬೌಲರ್ ಎನಿಸಿಕೊಂಡಿದ್ದಾರೆ. ಏತನ್ಮಧ್ಯೆ, ಸ್ಮೃತಿ ಮಂಧಾನಗೆ ಹಿನ್ನಡೆಯಾಗಿದ್ದು, ಬ್ಯಾಟರ್​ಗಳ ಏಕದಿನ ಶ್ರೇಯಾಂಕದಲ್ಲಿ ತಮ್ಮ ನಂಬರ್ ಒನ್ ಸ್ಥಾನವನ್ನು ಕಳೆದುಕೊಂಡಿದ್ದಾರೆ.

Source link

Horoscope Today 24 December : ಇಂದು ಈ ರಾಶಿಯವರಿಂದ ಭವಿಷ್ಯ ನೀರೀಕ್ಷೆಗೆ ಪ್ರೋತ್ಸಾಹ, ಅಧಿಕ ಅವಲಂಬನೆ – Kannada News | Horoscope Today in Kannada on 24 December Wednesday; Dina Bhavishya Tithi Panchanga Details here

ಮೇಷ ರಾಶಿ :

ಆಸ್ತಿ ಸಂಬಂಧಿತ ಕನಸು ಫಲಿಸುವುದು. ತಪ್ಪಿಲ್ಲದ ಕಡೆ ಭಯ ಬೇಡ. ಸರ್ಕಾರಿ ಉದ್ಯೋಗದಲ್ಲಿ ಪ್ರಾರ್ಥನೆ ಫಲಿಸುವ ಸೂಚನೆ. ಭೂಮಿಗೆ ಸಂಬಂಧಿಸಿದ ವಿಚಾರಗಳನ್ನು ಇತ್ಯರ್ಥ ಮಾಡಿಕೊಳ್ಳುವುದು ಉಚಿತ. ಉನ್ನತ ವಿದ್ಯಾಭ್ಯಾಸದ ಪ್ರಯುಕ್ತ ಹೊರಗಡೆ ಇರಲಿರುವಿರಿ. ನಿಮ್ಮ ಕಾರ್ಯವು ಆಗಬೇಕಾದರೆ ಓಡಾಟ ಅನಿವಾರ್ಯವಾಗಲಿದೆ. ಅನಾರೋಗ್ಯದ ನಡುವೆಯೂ ಉತ್ಸಾಹದಿಂದ ಇರುವಿರಿ. ಶತ್ರುಗಳ ಮುಖಾಮುಖಿ ಭೇಟಿಯ ಸಂದರ್ಭವು ಬರುವುದು. ನೀವು ಇಂದು ಯಾವ ವಿಚಾರವನ್ನು ಮಾತನಾಡುವುದಿದ್ದರೂ ಎಚ್ಚರವಿರಲಿ. ಕೃಷಿಯಲ್ಲಿ ಪ್ರಕೃತಿ ಅನುಕೂಲ. ಮಾರಾಟದಲ್ಲಿ ನಂಬಿಕೆಯ ಗ್ರಾಹಕರು. ದಾಂಪತ್ಯದಲ್ಲಿ ಪರಸ್ಪರ ಕರುಣೆ ಹೆಚ್ಚುತ್ತದೆ. ವಿದ್ಯಾಭ್ಯಾಸದಲ್ಲಿ ಕಲ್ಪನೆ ಶಕ್ತಿ ಜಾಗರೂಕವಾಗಲಿದೆ. ಒಂದೊಂದು ರೂಪಾಯಿಯನ್ನೂ ಜೊಪಾನ ಮಾಡುವಿರಿ. ಎಂತಹ ಸನ್ನಿವೇಶದಲ್ಲಿಯೂ ನೀವು ವಿಚಲಿತರಾಗುವುದಿಲ್ಲ. ಸಿಟ್ಟಗೊಂಡು ಮಾತನಾಡಬೇಕಾದ ಅವಶ್ಯಕತೆ ಇಲ್ಲ.

ವೃಷಭ ರಾಶಿ:

ಕೃಷಿಯಲ್ಲಿ ತಂತ್ರಜ್ಞಾನದ ಪ್ರಯೋಗವಾಗಲಿದೆ. ಮಾರಾಟದಲ್ಲಿ ಹೊಸ ಆಲೋಚನೆ ಫಲಕಾರಿ. ದಾಂಪತ್ಯದಲ್ಲಿ ಸ್ನೇಹಭಾವ. ಓದಿನಲ್ಲಿ ವಿಭಿನ್ನ ಆಸಕ್ತಿ. ಮಕ್ಕಳಿಂದ ಅಚ್ಚರಿ ಸುದ್ದಿ ನಿಮಗೆ ಸಂತಸ. ಆಕಸ್ಮಿಕವಾಗಿ ಆರೋಗ್ಯವು ಹದ ತಪ್ಪಬಹುದು. ವಿದೇಶದ ವ್ಯವಹಾರದಲ್ಲಿ ಪಾಲುದಾರಿಕೆ ಇರಲಿದೆ. ವೃತ್ತಿಯನ್ನು ಹೊರತುಪಡಿಸಿದ ಅವಕಾಶಗಳು ನಿಮ್ಮನ್ನು ಹುಡುಕಿ ಬರಬಹುದು. ದಾಂಪತ್ಯದ ಒಳ ಜಗಳವು ಇಂದು ವ್ಯಕ್ತವಾಗಬಹುದು. ನಿಮ್ಮನ್ನು ನಂಬಿದವರಿಗೆ ಸಹಾಯ ಮಾಡಲಾಗದು. ಉತ್ತಮ ಸಮಯದ ನಿರೀಕ್ಷೆಯಲ್ಲಿ ಸಮಾಧಾನ ಇರುವುದು. ನಿಮ್ಮಲ್ಲಿ ಇರುವ ವಸ್ತುಗಳನ್ನು ನೀವು ಯಾರಿಗಾದರೂ ಕೊಡುವುದು ಬೇಡ. ಆಸ್ತಿ ಹಂಚಿಕೆ ವಿಚಾರದಲ್ಲಿ ಗೊಂದಲ. ಸರ್ಕಾರಿ ಉದ್ಯೋಗದಲ್ಲಿ ಹೊಸ ಹೊಣೆಗಾರಿಕೆ. ಮಕ್ಕಳಿಂದ ನೆಮ್ಮದಿಯು ಪಡೆಯವಿರಿ. ವ್ಯವಹಾರವನ್ನು ಲಾಭದಾಯಕವನ್ನಾಗಿ ಮಾಡಿಕೊಳ್ಳಲು ಸೋಲಾಗಬಹುದು. ನಿಮ್ಮ ಗುರಿಯನ್ನು ತಲುಪಲು ನಿಮಗೆ ವಿಘ್ನಗಳು ಬರಬಹುದು. ಅಂದುಕೊಂಡಿದ್ದನ್ನು ಸಾಧಿಸಲಾಗದು ಎಂಬ ಅಳುಕು ನಿಮ್ಮಲ್ಲಿ ಇರುವುದು.

ಮಿಥುನ ರಾಶಿ:

ಮ‌ನೆಯ ಕಾರ್ಯಗಳಿಗೆ ಮಕ್ಕಳಿಂದ ಸಹಕಾರ. ಆಸ್ತಿ ದಾಖಲೆ ತಿದ್ದುಪಡಿ. ಭಯ ನಿಧಾನವಾಗಿ ಇಳಿಮುಖ. ಸರ್ಕಾರಿ ಉದ್ಯೋಗದಲ್ಲಿ ಕಠಿಣ ಪರಿಶ್ರಮ. ನಂಬಿಕೆಯಲ್ಲಿ ದ್ರೋಹವಾಗಿದ್ದು ಯಾರನ್ನು ನಂಬಬೇಕು ಎನ್ನುವ ಗೊಂದಲ ಕಾಣಿಸುವುದು. ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆಯನ್ನು ಆಸೆ ಅತಿಯಾಗುವುದು. ವೈಯಕ್ತಿಕ‌ ಕೆಲಸಗಳು ಬಹಳಷ್ಟು ಇದ್ದು, ಮಾಡಲು ಸಮಯ ಸಾಲದು. ಮಿತ್ರರ ಸಹಾಯದಿಂದ ನಿಮಗೆ ಧನ ಸಹಾಯವು ಸಿಗಬಹುದು. ಸಾರ್ವಜನಿಕವಾಗಿ ಯಾರಾದರೂ ನಿಮ್ಮನ್ನು ಅವಮಾನ ಮಾಡುವ ಸಾಧ್ಯತೆ ಇದೆ. ನಿಮಗೆ ಪರಿಚಿತರನ್ನು ಆಪ್ತರನದನಾಗಿ ಮಾಡಿಕೊಳ್ಳುವಿರಿ. ಯಾರಿಗೋ ಸಿಗುವ ಸಂಪತ್ತು ನಿಮ್ಮ ಕೈ ಸೇರುವುದು. ಸಂಗಾತಿಯ ಭಾವನೆಗಳಿಗೆ ಸ್ಪಂದಿಸದಿದ್ದರೆ ನಿಮ್ಮ ಮೇಲೆ ಕೋಪಗೊಳ್ಳುವರು. ಕೃಷಿಯಲ್ಲಿ ಶ್ರಮ ಹೆಚ್ಚು ಫಲ ಕಡಿಮೆ. ಮಾರಾಟದಲ್ಲಿ ಸ್ಥಿರತೆ. ದಾಂಪತ್ಯದಲ್ಲಿ ಜವಾಬ್ದಾರಿ ಹೆಚ್ಚಾಗುತ್ತದೆ. ವಿದ್ಯಾಭ್ಯಾಸದಲ್ಲಿ ತಾಳ್ಮೆ ಅಗತ್ಯ. ಗೆಳೆತನದಿಂದ ಸಲ್ಲದ ಮಾತುಗಳು ನಿಮ್ಮ ಬಗ್ಗೆ ಬರಬಹುದು. ನಿಮ್ಮ ದಕ್ಷ ಕಾರ್ಯವು ಎಲ್ಲರಿಗೂ ಮಾದರಿಯಾದೀತು.

ಕರ್ಕಾಟಕ ರಾಶಿ:

ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಗುರಿ ಸ್ಪಷ್ಟ. ಮಕ್ಕಳಿಗೆ ಕೊಡುವ ಶಿಕ್ಷಣ ಚರ್ಚೆ. ಆಸ್ತಿ ಸಂಬಂಧಿತ ದೂರ ಪ್ರಯಾಣ. ಸರ್ಕಾರಿ ಉದ್ಯೋಗದಲ್ಲಿ ಅವಕಾಶದ ಸೂಚನೆ. ಶ್ರೇಷ್ಠ ವ್ಯಕ್ತಿಗಳ ಸಹವಾಸವು ನಿಮಗೆ ಸಿಗಲಿದೆ. ವಿದ್ಯಾರ್ಥಿಗಳು ಯಾರ ಬೆಂಬಲಕ್ಕೂ ಕಾಯದೇ ನಿಮ್ಮ ಪ್ರತಿಭೆಯ ಪ್ರದರ್ಶನಕ್ಕೆ ಮುನ್ನುಗ್ಗುವುದು ಸೂಕ್ತ. ನಿಮಗೆ ಇಷ್ಟವಾದ ವಿಚಾರವನ್ನು ತಕ್ಷಣ ಪಡೆಯುವಿರಿ. ಉದ್ಯೋಗವಿಲ್ಲವೆಂಬುದು ನಿಮಗೆ ಅವಮಾನದ ಸಂಗತಿಯಾಗಲಿದೆ. ಸಿಕ್ಕ ಅವಕಾಶವನ್ನು ಸದ್ಯ ಬಳಸಿಕೊಳ್ಳಿ. ನಿಮ್ಮ‌ ನಕಾರಾತ್ಮಕ ಆಲೋಚನೆಗಳಿಂದ ಕುಟುಂಬದ ಆಲೋಚನೆಯನ್ನು ಕೆಡಿಸುವಿರಿ. ನಿಮ್ಮವರನ್ನು ಅವರಷ್ಟಕ್ಕೆ ಬಿಟ್ಟು ಬಿಡಿ. ಅಪರಿಚಿತರು ನಿಮ್ಮ ಉದ್ಯೋಗಕ್ಕೆ ಸಂಬಂಧಿಸಿದಂತೆ ಸಲಹೆಯನ್ನು ಕೊಡಬಹುದು.‌ ಕೃಷಿಯಲ್ಲಿ ವಿಸ್ತರಣೆ ಯೋಚನೆ. ಮಾರಾಟದಲ್ಲಿ ದೂರದ ವ್ಯವಹಾರ ಲಾಭ. ದಾಂಪತ್ಯದಲ್ಲಿ ಆಶಾವಾದ. ಆತುರದಲ್ಲಿ ನಿಮ್ಮ ಎಲ್ಲ ಕಾರ್ಯವೂ ಮೊಟಕುಮಾಡುವಿರಿ.

ಸಿಂಹ ರಾಶಿ:

ವಿದ್ಯಾಭ್ಯಾಸದಲ್ಲಿ ಆಳವಾದ ಅಧ್ಯಯನದ ಆರಂಭ. ಮಕ್ಕಳ ಹಠವನ್ನು ನೀವು ಕಡಿಮೆ ಮಾಡಬೇಕಾಗುತ್ತದೆ. ಆಸ್ತಿ ವಿವಾದ ಎಚ್ಚರಿಕೆ. ಮನೋಭಯ ನಿಯಂತ್ರಣ. ಸರ್ಕಾರಿ ಉದ್ಯೋಗದಲ್ಲಿ ಅನಿರೀಕ್ಷಿತ ತಿರುವು. ಅಮೂಲ್ಯ ವಸ್ತುಗಳನ್ನು ಖರೀದಿಸುವುದು ಕಷ್ಟವಾದರೂ ಮಾಡುವಿರಿ. ಪಾಲುದಾರಿಕೆಯಲ್ಲಿ ಭೂ ಸಂಬಂಧದ ಕಾರ್ಯದಿಂದ ಲಾಭವಾಗಲಿದೆ. ಕಾರ್ಯದ ಒತ್ತಡವನ್ನು ಸಹಿಸಲು ಅಸಾಧ್ಯವೆನಿಸುವುದು. ಕಛೇರಿಯಲ್ಲಿ ನಾನಾ‌ ಕಡೆಗಳಿಂದ ಒತ್ತಡ ಬರಬಹುದು. ನಿಮ್ಮ‌ ಸಾಮರ್ಥ್ಯಕ್ಕೆ ಕೊಟ್ಟ ಜವಾಬ್ದಾರಿಯು ಸಣ್ಣದಾಗಿರುವುದು. ನಿಮ್ಮ ಬಂಧುಗಳ ಸಹಾಯದಿಂದ ವಿವಾಹದ ಮಾತುಕತೆಯು ಘಟಿಸುವುದು. ಪರಿಶ್ರಮಕ್ಕೆ ತಕ್ಕ ಫಲವನ್ನೂ ನೀವು ಅಪೇಕ್ಷಿಸಿ ಪಡೆದುಕೊಳ್ಳುವಿರಿ. ಕೃಷಿಯಲ್ಲಿ ಗುಪ್ತ ಸಮಸ್ಯೆ ಗಮನಿಸಿ ಆದಾಯ ಹೆಚ್ಚಳಕ್ಕೆ ಪ್ರಯತ್ನ. ಮಾರಾಟದಲ್ಲಿ ಪರೋಕ್ಷ ಲಾಭ. ದಾಂಪತ್ಯದಲ್ಲಿ ಸಂಶಯ ಬೇಡ. ಅಗತ್ಯವಿರುವ ಸಂಪತ್ತನ್ನು ಸ್ನೇಹಿತರಿಂದ ಸಾಲವಾಗಿ ಪಡೆಯುವಿರಿ. ದುರಭ್ಯಾಸವನ್ನು ಬೆಳೆಸಿಕೊಳ್ಳುವುದು ಬೇಡ. ಮನೋರಂಜನೆಗೆ ಹಣವು ಖರ್ಚಾಗುವುದು.

ಕನ್ಯಾ ರಾಶಿ:

ಓದಿನಲ್ಲಿ ಕಲಾತ್ಮಕ ವಿಷಯಗಳು ಚೆನ್ನಾಗಿ ಅರ್ಥವಾಗಲಿದೆ. ಮಕ್ಕಳೊಂದಿಗೆ ಸಮಯ ಕಳೆಯಿರಿ. ಆಸ್ತಿ ವಿಷಯದಲ್ಲಿ ಒಪ್ಪಂದ ಸಾಧ್ಯ. ಅಜ್ಞಾತ ಭಯದಿಂದ ಕಷ್ಟ. ಸರ್ಕಾರಿ ಉದ್ಯೋಗಕ್ಕೆ ನಿರೀಕ್ಷೆ. ನಿಂತ ಕಾರ್ಯಕ್ಕೆ ಚಾಲನೆ ನೀಡುವಿರಿ. ದಾಂಪತ್ಯವು ಪರಸ್ಪರ ಸೌಹಾರ್ದದ ಮಾತುಗಳಿಂದ ನೆಮ್ಮದಿ ಸಿಗುವುದು.‌ ಮಕ್ಕಳ‌ ವಿಚಾರವಾಗಿ ಅನವಶ್ಯಕ ಖರ್ಚು ಮಾಡುವುದು ಬೇಡ. ಅವಶ್ಯಕತೆಯನ್ನು ನೋಡಿ. ಅನಿಶ್ಚಿತ ಕೆಲಸದಲ್ಲಿ ಆದಾಯವನ್ನು ಹೆಚ್ಚು ಪಡೆಯುವಿರಿ. ಸರ್ಕಾರಿ ಕೆಲಸಗಳು ಒತ್ತಡದ ಕಾರಣಕ್ಕೆ ಮುಂದುವರಿಯುವುದು. ನೀವು ಮೌನದಿಂದ ಇದ್ದರೆ ಒಪ್ಪಿಗೆ ಕೊಟ್ಟಿದ್ದೀರಿ ಎಂದಾಗುವುದು. ಸಮಯಕ್ಕೆ ಬೆಲೆ ಕೊಟ್ಟು ಎಲ್ಲವನ್ನೂ ಸಕಾಲಕ್ಕೆ ಮುಗಿಸುವುದು ಉತ್ತಮ. ಕೃಷಿಯಲ್ಲಿ ಅಸಾಧ್ಯದ ಸಾಧನೆಗೆ ಪ್ರಯತ್ನ. ಮಾರಾಟದಲ್ಲಿ ಸಮತೋಲನ ಅಗತ್ಯ. ದಾಂಪತ್ಯದಲ್ಲಿ ಸೌಹಾರ್ದ ವಾತಾವರಣ. ಆಪ್ತರನ್ನು ದೂರ ಮಾಡಿಕೊಳ್ಳಬೇಕಾಗುವುದು. ಒಂಟಿಯಾಗಿ ವಾಹನವನ್ನು ಚಲಾಯಿಸುವುದು ಬೇಡ.

ತುಲಾ ರಾಶಿ:

ಚರಾಸ್ತಿಯಗಳನ್ನ ದುರಸ್ತಿ ಮಾಡಿಸುವಿರಿ. ಸರ್ಕಾರಿ ಉದ್ಯೋಗದಲ್ಲಿ ದಾಖಲೆ ಕೆಲಸ ಹೆಚ್ಚಾಗುತ್ತದೆ. ವ್ಯಾಪಾರದ ಸ್ಥಳದಲ್ಲಿ ಇಕ್ಕಟ್ಟು ಉಂಟಾಗಬಹುದು. ತಾಳ್ಮೆಯನ್ನು ಕಳೆದುಕೊಳ್ಳುವುದು ಬೇಡ. ರಾಜಕೀಯ ಏರಿಳಿತವನ್ನು ನೀವು ಊಹಿಸುವುದು ಕಷ್ಟವಾದೀತು. ಸಾಲದಿಂದ ಬಿಡುಗಡೆ ಸಿಕ್ಕ ಕಾರಣ ಕುಟುಂಬದಲ್ಲಿ ಸೌಖ್ಯವಿರುವುದು. ಎಲ್ಲ ಕೆಲಸಗಳೂ ಅಪೂರ್ಣವಾಗಿದ್ದು ನಿಮಗೆ ಅಸಮಾಧನ ಇರುವುದು. ನೂತನ ವಾಹನ ಖರೀದಿಯಿಂದ ಸಂತೋಷವಾಗಲಿದೆ. ಕಾರ್ಯದ ಒತ್ತಡದಿಂದ ತಾಳ್ಮೆಯನ್ನು ಕಳೆದುಕೊಳ್ಳಬೇಕಾಗುವುದು. ಕೃಷಿಯಲ್ಲಿ ಸಣ್ಣ ಸಣ್ಣ ಲೆಕ್ಕಾಚಾರದಿಂದ ಲಾಭ. ಮಾರಾಟದಲ್ಲಿ ನಿಧಾನ ಪ್ರಗತಿಯನ್ನು ಕಂಡುಕೊಳ್ಳುವಿರಿ. ದಾಂಪತ್ಯದಲ್ಲಿ ಅತಿಯಾದ ವಿಮರ್ಶೆ ಬೇಡ. ವಿದ್ಯಾಭ್ಯಾಸದಲ್ಲಿ ಶಿಸ್ತು ಫಲ ಕೊಡುತ್ತದೆ. ಮಕ್ಕಳ ಚಟುವಟಿಕೆ ಗಮನಿಸಿ. ಯಾವ ಕಾರ್ಯಕ್ಕೂ ಉತ್ಸಾಹವೇ ಇಲ್ಲದಂತಾದೀತು. ಯಾರಿಂದಲಾದರೂ ಪ್ರಚೋದನೆ ಸಿಕ್ಕೀತು. ಮಕ್ಕಳ‌ ವಿಚಾರವಾಗಿ ಅನವಶ್ಯಕ ಖರ್ಚು ಮಾಡುವುದು ಬೇಡ.

ವೃಶ್ಚಿಕ ರಾಶಿ :

ಆಸ್ತಿ ಖರೀದಿಯಲ್ಲಿ ಹಲವು ಯೋಚನೆ. ಅಂತರಂಗದ ಭಯ ನಿವಾರಣೆ ಅನೇಕರ ಪ್ರಯತ್ನ. ಸರ್ಕಾರಿ ಉದ್ಯೋಗ ಪ್ರಯತ್ನಕ್ಕೆ ಪ್ರೋತ್ಸಾಹ. ನಿಮ್ಮ ದಕ್ಷ ಕಾರ್ಯವು ಎಲ್ಲರಿಗೂ ಮಾದರಿಯಾದೀತು. ನಿಮಗೆ ಸಿಗುವ ಸಾಮಾಜಿಕವಾಗಿ ಮನ್ನಣೆಯು ಅಧಿಕ ಕಾರ್ಯವನ್ನು ಮಾಡುವಂತೆ ಮಾಡೀತು. ಸಂತಾನದ ವಿಚಾರದಲ್ಲಿ ಅಶಾಂತಿ ಮೂಡಬಹುದು. ಮೇಲಧಿಕಾರಿಗಳು ನಿಮ್ಮ ಮೇಲೆ ಒತ್ತಡ ತಂದು ಕೆಲಸವನ್ನು ಮಾಡಿಸಿಕೊಳ್ಳುವರು. ವಿರೋಧಿಗಳನ್ನು ಲೆಕ್ಕಿಸದೇ ನಿಮ್ಮಷ್ಟಕ್ಕೆ ಇರುವಿರಿ. ಅನಾರೋಗ್ಯವನ್ನೂ ನೀವು ಲೆಕ್ಕಿಸದೇ ಕಾರ್ಯದಲ್ಲಿ ಪ್ರವೃತ್ತರಾಗುವಿರಿ. ನಿಮ್ಮ ಬಯಕೆಗಳನ್ನು ಯಾರ ಬಳಿಯೂ ಪ್ರಕಟಪಡಿಸುವುದಿಲ್ಲ. ಕೃಷಿಯಲ್ಲಿ ನಾಯಕತ್ವ ತೋರಬಹುದು. ಮಾರಾಟದಲ್ಲಿ ಸ್ಪರ್ಧೆ ಹೆಚ್ಚಾಗುತ್ತದೆ. ದಾಂಪತ್ಯದಲ್ಲಿ ಅಹಂಕಾರ ತಪ್ಪಿಸಿ. ವಿದ್ಯಾಭ್ಯಾಸದಲ್ಲಿ ಸಾಧನೆ. ಮಕ್ಕಳಿಗೆ ಮಾರ್ಗದರ್ಶನ ಅಗತ್ಯ. ಸ್ಪರ್ಧಾತ್ಮಕ ಪರೀಕ್ಷೆಗೆ ಇನ್ನೂ ಹೆಚ್ಚಿನ ಶ್ರಮವು ಬೇಕು. ಎಂದೋ ಕಾಣೆಯಾದ ವಸ್ತುವು ಅನಿರೀಕ್ಷಿತವಾಗಿ ಸಿಗುವುದು. ನಿಮ್ಮನ್ನು ವಿರೋಧಿಸುವವರು ಹೆಚ್ಚಾದಾರು.

ಧನು ರಾಶಿ:

ದಾಂಪತ್ಯದಲ್ಲಿ ಭಾವನಾತ್ಮಕ ಬೆಂಬಲ ಕಡಿಮೆಯಾಗಬಹುದು. ಓದಿನಲ್ಲಿ ಸ್ಮರಣಶಕ್ತಿ ಹೆಚ್ಚಳ. ಮಕ್ಕಳು ಹೆಮ್ಮೆ ತರಿಸುವರು. ಆಸ್ತಿ ವಿಷಯದಲ್ಲಿ ಕುಟುಂಬ ಸಲಹೆ ಪಡೆಯಿರಿ. ಸ್ಪರ್ಧೆಗಾಗಿ ನಡೆಸಿದ ನಿಮ್ಮ ಶ್ರಮವು ವ್ಯರ್ಥವಾದೀತು. ಆಸ್ತಿಯ ವಿಚಾರಕ್ಕೆ ನೆರಮನೆಯವರ ಜೊತೆ ಕಲಹವಾಗಲಿದೆ. ನಿಮ್ಮ ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿ ಇರಲಿದೆ. ಸಂಗಾತಿಯಿಂದ ನಿರೀಕ್ಷಿತ ಬೆಂಬಲವು ಸಿಗದು. ಧಾರ್ಮಿಕ ವಿಷಯದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗಲಿದೆ. ಸಕಾರಾತ್ಮಕ ಚಿಂತನೆಯನ್ನು ದೂರ ಮಾಡಿಕೊಳ್ಳುವಿರಿ.‌ ಸದಾ ಅನುಮಾನದಿಂದಲೇ ಇರುವಿರಿ.‌ ನಿಮ್ಮ ಗೌರವಕ್ಕೆ ತೊಂದರೆಯಾಗುವ ಕಡೆ ನೀವು ಹೋಗುವುದು ಬೇಡ.‌ ಕೃಷಿಯಲ್ಲಿ ನೀರಿನ ನಿರ್ವಹಣೆ ಮುಖ್ಯ. ಮಾರಾಟದಲ್ಲಿ ಹಳೆಯ ಸಂಪರ್ಕ ಲಾಭ. ಸರ್ಕಾರಿ ಉದ್ಯೋಗದಲ್ಲಿ ಶುಭ ಸುದ್ದಿ ಸಾಧ್ಯ. ಕುತೂಹಲದಲ್ಲಿ ಈ ದಿನವನ್ನು ಕಳೆಯುವಿರಿ. ಪತ್ರವ್ಯವಹಾರವನ್ನು ಸರಿಯಾಗಿ ಇಟ್ಟುಕೊಳ್ಳಿ. ಎಲ್ಲದಕ್ಕೂ ಯಾರನ್ನಾದರೂ ಕಾರಣವಾಗಿಸುವಿರಿ.

ಮಕರ ರಾಶಿ:

ವಿದ್ಯಾಭ್ಯಾಸದಲ್ಲಿ ಗಮನ ಚದುರಬಹುದು. ಮಕ್ಕಳ ಮಾತು ಆಲಿಸಿ. ಆಸ್ತಿ ವ್ಯವಹಾರದಲ್ಲಿ ಎಚ್ಚರಿಕೆ. ಮನಸ್ಸಿನ ಭಯ ಶಮನ. ಸರ್ಕಾರಿ ಉದ್ಯೋಗ ವಿಳಂಬ. ನಿಮ್ಮ ಬೆನ್ನನ್ನೇ ನೀವು ತಟ್ಟಿಕೊಳ್ಳುವುದು ಔಚಿತ್ಯವಿಲ್ಲ. ಆದಾಯವನ್ನು ನಿರೀಕ್ಷಿತ ಖರ್ಚಿನ ಬಗ್ಗೆ ನಿಯಂತ್ರಣ ಬೇಕು. ಅನಗತ್ಯ ಅಲೆದಾಟವನ್ನು ನಿಲ್ಲಿಸಿ ಕಾರ್ಯದಲ್ಲಿ ಮಗ್ನರಾಗಿ. ಅಲ್ಪ ಕಾರ್ಯದಿಂದ ಎಲ್ಲವೂ ಸಿದ್ಧಿಸುವುದಾದರೂ ಅಧಿಕ ಶ್ರಮವಿರುವುದು. ಕಲಾವಿದರು ಹೆಚ್ಚಿನ ಪ್ರಶಂಸೆಗೆ ಪಾತ್ರರಾಗಲಿದ್ದಾರೆ. ಯಾರೋ‌ ಮಾಡಬೇಕಾದ ಕೆಲಸಕ್ಕೆ ನೀವು ಹೋಗಬೇಕಾದೀತು. ಹಣವಿದ್ದರೂ ಸಮಯಕ್ಕೆ ಸರಿಯಾಗಿ ಸಿಗದ ಕಾರಣ ತುರ್ತಾಗಿ ಸಾಲವನ್ನು ಮಾಡಬೇಕಾಗುವುದು. ಕೃಷಿಯಲ್ಲಿ ಹೊಸ ವಿಧಾನ ಪ್ರಯೋಗಿಸಬಹುದು. ಮಾರಾಟದಲ್ಲಿ ಗ್ರಾಹಕರೊಂದಿಗೆ ಗೊಂದಲ ಸಾಧ್ಯ. ದಾಂಪತ್ಯದಲ್ಲಿ ಸಣ್ಣ ಭಿನ್ನಾಭಿಪ್ರಾಯ. ನಿಮ್ಮ ವೃತ್ತಿಯಿಂದ ಹೆಚ್ಚಿನ ಆದಾಯವನ್ನು ನಿರೀಕ್ಷಿಸುವಿರಿ. ಸಂಗಾತಿಯು ನಿಮ್ಮನ್ನು ಬೆಂಬಲಿಸರು.

ಕುಂಭ ರಾಶಿ:

ಓದಿನಲ್ಲಿ ಏಕಾಗ್ರತೆ ಹೆಚ್ಚುತ್ತದೆ. ಮಕ್ಕಳ ಆರೋಗ್ಯ ಗಮನಿಸಿ. ಆಸ್ತಿ ದಾಖಲೆ ಪರಿಶೀಲನೆ ಅಗತ್ಯ. ಭಯ ಕಡಿಮೆಯಾಗುತ್ತದೆ. ಸರ್ಕಾರಿ ಉದ್ಯೋಗದಲ್ಲಿ ನಿರೀಕ್ಷೆ ಜೀವಂತ. ನಿಮ್ಮ ಭಾವನೆಗೇ ಇಂದು ನೇರವಾಗಿ ಪೆಟ್ಟುಬೀಳುವ ಸಾಧ್ಯತೆ ಇದೆ. ಅದನ್ನು ಆ ಸಮಯದಲ್ಲಿ ನಿಭಾಯಿಸುವ ಜಾಣ್ಮೆ ಇರಲಿ. ನಿಮ್ಮ ಗುರಿಯನ್ನು ಬದಲಾಯಿಸುವುದು ಬೇಡ. ಹೇಳಬೇಕಾದ‌ ವಿಷಯದಲ್ಲಿ ಮುಚ್ಚು ಮರೆ ಇಲ್ಲದೇ ಸರಿಯಾಗಿ ಹೇಳಿ.‌ ಬೇರೆಯವರನ್ನು ಗೊಂದಲಕ್ಕೆ ಸಿಕ್ಕಿಹಾಕಿಸುವುದು ಬೇಡ. ನಿಮ್ಮ ಕಾರ್ಯದಲ್ಲಿನ ಶಿಸ್ತು ಉಳಿದವರಿಗೆ ಕಷ್ಟವಾದೀತು. ನೀವು ಹೋದಕಡೆ ನಿಮಗೆ ಬೇಕಾದ ಹಾಗೆ ವಾತಾವರಣವನ್ನು ಸೃಷ್ಟಿಸಿಕೊಳ್ಳುವಿರಿ. ಕೇಳಿ ಬಂದವರಿಗೆ ನೀವು ಇಂದು ಧನ ಸಹಾಯವನ್ನು ಮಾಡುವಿರಿ. ಭೂಮಿ ಸಂಬಂಧಿತ ಕೃಷಿ ಕೆಲಸಗಳು ಅನುಕೂಲ. ಮಾರಾಟದಲ್ಲಿ ಸ್ಥಿರ ಆದಾಯ. ದಾಂಪತ್ಯದಲ್ಲಿ ಮನದಾಳದ ಮಾತು ಹಂಚಿಕೊಳ್ಳಿ. ಹೆಚ್ಚಿ‌ನ ಆದಾಯಕ್ಕೆ ನೀವು ಚಿಂತನೆ ನಡೆಸುವಿರಿ. ಅಧ್ಯಾತ್ಮದಲ್ಲಿ ನಿಮಗೆ ನಿರಾಸಕ್ತಿಯು ಉಂಟಾಗಬಹುದು. ಏಕತಾನತೆಯಿಂದ ಹೊರಬರುವಿರಿ.

ಮೀನ ರಾಶಿ:

ಕೃಷಿಯಲ್ಲಿ ಪರಿಶ್ರಮದ ಫಲ ತಡವಾಗಿ ಸಿಗುತ್ತದೆ. ಮಾರಾಟದಲ್ಲಿ ಮಾತಿನ ಜಾಣ್ಮೆ ಅಗತ್ಯ. ದಾಂಪತ್ಯದಲ್ಲಿ ಸಹನೆ ಇರಲಿ. ವಿದ್ಯಾಭ್ಯಾಸದಲ್ಲಿ ಹೊಸ ಉತ್ಸಾಹ. ಮಕ್ಕಳಿಂದ ಸಂತೋಷ. ಆಪಾಯದ ಸೂಚನೆಯನ್ನು ಗಮನಿಸಿಕೊಳ್ಳಿ. ನಿಮ್ಮ ಬಗ್ಗೆ ಅತಿಯಾದ ಆತ್ಮವಿಶ್ವಾಸ ಇರಲಿದೆ. ವ್ಯಾಪಾರವನ್ನು ಅಚ್ಚುಕಟ್ಟಾಗಿ ಮುಗಿಸುವ ಕೌಶಲವು ನಿಮ್ಮಲ್ಲಿರುವುದು. ಆಮದು ವ್ಯವಹಾರವು ಸ್ವಲ್ಪ ಲಾಭವನ್ನು ಕೊಡುವುದು. ಉದ್ಯಮಿಗಳ ಭೇಟಿ ಮಾಡುವಿರಿ. ಭೂಮಿಯ ಖರೀದಿಗೆ ಸೂಕ್ತ ಸಮಯವಿದ್ದು ಇಷ್ಟಪಟ್ಟ ಭೂಮಿಯು ಸಿಗುವುದು. ಸಂಗಾತಿಯ ಮಾತಿನಿಂದ ನೀವು ನೆಮ್ಮದಿಯನ್ನು ಕಳೆದುಕೊಳ್ಳುವಿರಿ. ಮನಸ್ಸಿನ ಚಾಂಚಲ್ಯವನ್ನು ಯೋಗವೇ ಮದ್ದಾಗಲಿದೆ. ಆಸ್ತಿ ವ್ಯವಹಾರ ಮುಂದೂಡಿರಿ. ಅಕಾರಣ ಭಯ ಕಡಿಮೆಯಾಗುತ್ತದೆ. ಸರ್ಕಾರಿ ಉದ್ಯೋಗ ಪ್ರಯತ್ನಗಳಿಗೆ ಸಣ್ಣ ಮುನ್ನಡೆ. ಜಾಣ್ಮೆಯಿಂದ ಸವಾಲನ್ನು ಎದುರಿಸಬೇಕಾಗಬಹುದು. ನೀವೇ ಸಮಯವನ್ನು ಹೊಂದಿಸಿಕೊಂಡು ಕಾರ್ಯದಿಂದ ಸಲ್ಪ‌ ವಿಶ್ರಾಂತಿಯನ್ನು ಪಡೆಯಬೇಕು.

24 ಡಿಸೆಂಬರ್​​ 2025ರ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಮೂಲಾ, ವಾರ : ಬುಧ, ಪಕ್ಷ : ಶುಕ್ಲ, ತಿಥಿ : ಚತುರ್ಥೀ, ನಿತ್ಯನಕ್ಷತ್ರ : ಶ್ರವಣಾ, ಯೋಗ : ಹರ್ಷಣ, ಕರಣ : ಭದ್ರ, ಸೂರ್ಯೋದಯ – 06 – 46 am, ಸೂರ್ಯಾಸ್ತ – 06 – 01 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:24 – 13:28, ಯಮಗಂಡ ಕಾಲ 08:11 – 09:35, ಗುಳಿಕ ಕಾಲ 10:59 – 12:24

-ಲೋಹಿತ ಹೆಬ್ಬಾರ್ – 8762924271 (what’s app only)

Source link

ಬಾಂಗ್ಲಾದೇಶ ಮಾರ್ಗದ ಮೂಲಕ ಭಾರತಕ್ಕೆ ಉಗ್ರರನ್ನು ನುಸುಳಿಸಲು ಪಾಕಿಸ್ತಾನ ಪ್ಲಾನ್ – Kannada News | Pakistan plan to infiltrate terrorism in India through Bangladesh route Indian agencies on alert

ನವದೆಹಲಿ, ಡಿಸೆಂಬರ್ 23: ಬಾಂಗ್ಲಾದೇಶದಲ್ಲಿ ಯುವ ನಾಯಕರ ಹತ್ಯೆಯ ನಂತರ ಹೆಚ್ಚುತ್ತಿರುವ ಹಿಂಸಾಚಾರದ ನಡುವೆ ಪಾಕಿಸ್ತಾನ (Pakistan) ಈ ಪರಿಸ್ಥಿತಿಯ ಲಾಭ ಪಡೆಯಲು ಮುಂದಾಗಿದೆ. ಬಾಂಗ್ಲಾದೇಶದ ಮಾರ್ಗವಾಗಿ ಪಾಕಿಸ್ತಾನದ ಭಯೋತ್ಪಾದನಾ ಗುಂಪುಗಳು ಭಾರತದ ಒಳಗೆ ನುಗ್ಗಲು ಪ್ರಯತ್ನಿಸುತ್ತಿವೆ ಎಂಬ ಗುಪ್ತಚರ ಮಾಹಿತಿ ಲಭ್ಯವಾಗುತ್ತಿದ್ದಂತೆ ಭಾರತದ ಭದ್ರತಾ ಸಂಸ್ಥೆಗಳು ಜಾಗರೂಕವಾಗಿವೆ. ಢಾಕಾದಲ್ಲಿ ಹೆಚ್ಚಾದ ಅಶಾಂತಿಯ ನಡುವೆ ಬಾಂಗ್ಲಾದೇಶ ಕಾರಿಡಾರ್ ಮೂಲಕ ಭಾರತಕ್ಕೆ ಭಯೋತ್ಪಾದಕರನ್ನು ನುಸುಳಿಸಲು ಐಎಸ್ಐ ಯೋಜಿಸುತ್ತಿದೆ ಎಂದು ಗುಪ್ತಚರ ವರದಿಗಳು ತಿಳಿಸಿವೆ.

ಮೂಲಗಳ ಪ್ರಕಾರ, ಅಸ್ಸಾಂ, ತ್ರಿಪುರ ಮತ್ತು ಪಶ್ಚಿಮ ಬಂಗಾಳದ ಮೂಲಕ ಭಾರತಕ್ಕೆ ನುಸುಳಲು ಹಲವಾರು ಭಯೋತ್ಪಾದಕರು ಪಾಕಿಸ್ತಾನಿ ಏಜೆನ್ಸಿಗಳಿಂದ ತರಬೇತಿ ಪಡೆದಿದ್ದಾರೆ ಎನ್ನಲಾಗಿದೆ. ಬಡ ಸಮುದಾಯಗಳು ಮತ್ತು ರೋಹಿಂಗ್ಯಾ ನಿರಾಶ್ರಿತರು ಸೇರಿದಂತೆ ಬಾಂಗ್ಲಾದೇಶದ ದುರ್ಬಲ ಜನರಿಗೆ ಜಿಹಾದ್‌ನಲ್ಲಿ ಭಾಗವಹಿಸಲು ಮತ್ತು ಭಾರತಕ್ಕೆ ಪ್ರವೇಶಿಸಲು ಹಣದ ಆಮಿಷವೊಡ್ಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಭಾರತ ಬಾಂಗ್ಲಾದೇಶದ ತಂಟೆಗೆ ಹೋದರೆ ನಾವು ಉತ್ತರ ನೀಡುತ್ತೇವೆ; ಪಾಕ್​​ನಿಂದ ಯುದ್ಧದ ಬೆದರಿಕೆ

ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ರಾಜಕೀಯ ಕ್ರಾಂತಿಯ ನಂತರ, ಐಎಸ್‌ಐ ಮತ್ತು ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳು, ಲಷ್ಕರ್-ಎ-ತೈಬಾ (ಎಲ್‌ಇಟಿ) ಮತ್ತು ಜೈಶ್-ಎ-ಮೊಹಮ್ಮದ್ (ಜೆಇಎಂ) ಎರಡೂ ಈ ಪ್ರದೇಶದಲ್ಲಿ ಸಕ್ರಿಯವಾಗಿವೆ ಎಂದು ವರದಿಯಾಗಿದೆ. ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಗಳು ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ (ಜೆಎಂಬಿ), ಅನ್ಸಾರುಲ್ಲಾ ಬಾಂಗ್ಲಾ ತಂಡ (ಎಬಿಟಿ), ಮತ್ತು ಹಿಜ್ಬ್-ಉತ್-ತಹ್ರಿರ್ ನಂತಹ ಮೂಲಭೂತ ಬಾಂಗ್ಲಾದೇಶಿ ಗುಂಪುಗಳೊಂದಿಗೆ ಸೇರಿಕೊಂಡಿವೆ ಎಂದು ಗುಪ್ತಚರ ಮೂಲಗಳು ಸೂಚಿಸುತ್ತವೆ.

ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಉಸ್ಮಾನ್ ಹಾದಿ ಹತ್ಯೆ ಬೆನ್ನಲ್ಲೇ ಮತ್ತೊಬ್ಬ ಯುವ ನಾಯಕನ ತಲೆಗೆ ಗುಂಡೇಟು

ಎಲ್‌ಇಟಿ ಮತ್ತು ಜೆಇಎಂಗೆ ಸಂಬಂಧಿಸಿದ ಹಲವಾರು ಉಗ್ರರು ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ಕಾಣಿಸಿಕೊಂಡಿದ್ದಾರೆ. ಅವರಲ್ಲಿ ಜೆಇಎಂ ಜೊತೆ ಸಂಬಂಧ ಹೊಂದಿರುವ ಮಜರ್ ಸಯೀದ್ ಶಾ ಕೂಡ ಸೇರಿದ್ದಾರೆ. ಬಾಂಗ್ಲಾದೇಶದ ಗಡಿಯಲ್ಲಿ ಭದ್ರತಾ ಸಂಸ್ಥೆಗಳು ನಿಕಟ ಕಣ್ಗಾವಲು ವಹಿಸಿವೆ. ಸಶಸ್ತ್ರ ಪಡೆಗಳಿಗೆ ಹೆಚ್ಚಿನ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್​ನಿಂದಲೇ​​​ ನೀಚ ಕೃತ್ಯ – Kannada News | SSLC Student gives birth to baby in Hassan, police book case On School Bus Driver

ಹಾಸನ, (ಡಿಸೆಂಬರ್ 23): 10ನೇ ತರಗತಿ ವಿದ್ಯಾರ್ಥಿನಿ (SSLC Student)  ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಹಾಸನ (Hassan) ಜಿಲ್ಲೆಯ ಚನ್ನರಾಯಪಟ್ಟಣ (Channarayapatna) ತಾಲ್ಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಖಾಸಗಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಅದೇ ಶಾಲೆಯ ಬಸ್ ಚಾಲಕ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಆರೋಪಿಸಲಾಗಿದ್ದು, ಸದ್ಯ ಶಾಲೆ ಬಸ್ ಚಾಲಕ ತಲೆಮರಿಸಿಕೊಂಡಿದ್ದಾನೆ. ನಿತ್ಯ ಬಸ್​​ನಲ್ಲಿರುವ ವಿದ್ಯಾರ್ಥಿನಿಗೆ ಚಾಕೋಲೆಟ್​ ನೀಡಿ ಪುಸಲಾಯಿಸಿ ಆಕೆಯನ್ನು ಲೈಂಗಿಕವಾಗಿ ಬಳಿಸಿಕೊಂಡಿದ್ದಾನೆ. ಪರಿಣಾಮ ಇದೀಗ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು, ಎರಡು ದಿನಗಳ ಹಿಂದೆ ಮಗುವಿಗೆ ಜನ್ಮ ನೀಡಿದ್ದಾಳೆ.

ಹಾಸನ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಾಲಕಿಯ ಮೇಲೆ ಅದೇ ಶಾಲೆಯಲ್ಲಿ ವಾಹನ ಚಾಲಕನಾಗಿದ್ದ ಚನ್ನರಾಯಪಟ್ಟಣ ತಾಲ್ಲೂಕಿನ ಬರಗೂರು ಗ್ರಾಮದ ರಂಜನ್ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದ್ದು, ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ವಿಚಾರ ತಿಳಿಯುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದಾನೆ.

ಇದನ್ನೂ ಓದಿ: ಮಗುವಿಗೆ ಜನ್ಮ ನೀಡಿದ 16ರ ಶಾಲಾ ಬಾಲಕಿ: ಸಂಬಂಧಿಕನಿಂದಲೇ ನೀಚ ಕೃತ್ಯ

ಪ್ರತಿ ದಿನ ಶಾಲೆಗೆ ಬಸ್ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ರಂಜತ್​ ಪುಸಲಾಯಿಸಿ​​ ಶ್ರವಣಬೆಳಗೊಳಕ್ಕೆ ಕರೆದೊಯ್ದು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಇದರಿಂದ ವಿದ್ಯಾರ್ಥಿನಿ ಎರಡು ದಿನದ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇನ್ನು ಬಾಲಕಿ ಮತ್ತು ಮಗುವನ್ನು ಕೆಲ ದಿನಗಳ ಕಾಲ ಆರೈಕೆ ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಾಂತ್ವನ ಕೇಂದ್ರಕ್ಕೆ ಶೀಘ್ರ ಒಪ್ಪಿಸಲು ಅಧಿಕಾರಿಗಳು ತೀರ್ಮಾನಿಸಿದ್ದು, ಈ ಬಗ್ಗೆ ರಂಜತ್ ವಿರುದ್ಧ ನುಗ್ಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲಿಸರು ತನಿಖೆ ನಡೆಸಿದ್ದಾರೆ.

ರಾಜ್ಯ ಹಲವು ಜಿಲ್ಲೆಗಳಲ್ಲಿ ಅಂತಹದ್ದೇ ಪ್ರಕರಣ

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದಲ್ಲಿ 16 ವರ್ಷದ ಶಾಲಾ ಬಾಲಕಿ ಸಂಬಂಧಿಕನಿಂದಲೇ ದೌರ್ಜನ್ಯಕ್ಕೊಳಗಾಗಿ ಗಂಡು ಮಗುವಿಗೆ ಜನ್ಮ ನೀಡಿರುವಂತಹ ಘಟನೆ ನಡೆದಿತ್ತು. ಬಳಿಕ ಪೋಕ್ಸೋ ಪ್ರಕರಣದಡಿ ಆರೋಪಿ ಮಲ್ಲೇಶ್​​ (35)ನನ್ನು ಪೊಲೀಸರು ಬಂಧಿಸಿದ್ದರು.

ಇನ್ನು ಯಾದಗಿರಿ ಜಿಲ್ಲೆಯ ಶಹಪುರದಲ್ಲಿರುವ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಶೌಚಾಲಯಕ್ಕೆ ಹೋದಾಗ ಗಂಡುವಿಗೆ ಜನ್ಮ ನೀಡಿದ್ದಳು. ಈ ಘಟನೆ ವಸತಿ ನಿಲಯದಲ್ಲಿರುವ ಇತರೆ ವಿದ್ಯಾರ್ಥಿನಿಯ ಪೋಷಕರಲ್ಲಿ ಆತಂಕ ಹುಟ್ಟಿಸಿತ್ತು. ಘಟನೆ ಕುರಿತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿತ್ತು.

ಕೊಪ್ಪಳ ಜಿಲ್ಲೆಯ ಕುಕನೂರು ವಸತಿ ನಿಲಯದಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಳು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಅತ್ಯಾಚಾರ ಆರೋಪಿ ಸೇರಿದಂತೆ ನಿರ್ಲಕ್ಷ್ಯ ತೋರಿದ ವಸತಿ ನಿಲಯದ ಸಿಬ್ಬಂದಿ ಸೇರಿ ಒಟ್ಟು 6 ಜನರ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ – Kannada News | KN Rajanna Talks about power tussle In congress after He Met Siddaramaiah

ಬೆಂಗಳೂರು, (ಡಿಸೆಂಬರ್ 23): ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ (Siddaramaiah)  ಹಾಗೂ ಡಿಕೆ ಶಿವಕುಮಾರ್ (DK Shivakumar) ನಡುವಿನ ಮುಸುಕಿನ ಗುದ್ದಾಟ ಮುಂದುವರೆದಿದೆ. ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆಂದು ಸಿದ್ದರಾಮಯ್ಯ ಕಡ್ಡಿ ಮುರಿದಂತೆ ಹೇಳಿದ್ದಾರೆ. ಇತ್ತ ಡಿಕೆ ಶಿವಕುಮಾರ್ ಹೈಕಮಾಂಡ್ ನಾಯರನ್ನು ಭೇಟಿ ಮಾಡಿ ಮನವೊಲಿಸವು ಕಸರತ್ತು ನಡೆಸಿದ್ದಾರೆ. ಇದರ ನಡುವೆ ಇತ್ತ ರಾಜ್ಯ ಕಾಂಗ್ರೆಸ್​​ನಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿವೆ. ರಾಜಕೀಯ ವಿರೋಧಿಯಾಗಿದ್ದ ಸಿದ್ದರಾಮಯ್ಯನವರ ಅತ್ಯಾಪ್ತ ಕೆಎನ್ ರಾಜಣ್ಣ ಅವರನ್ನು ಡಿಕೆ ಶಿವಕುಮಾರ್ ಎರಡು ಬಾರಿ ಭೇಟಿ ಗಾಳ ಹಾಕಲು ಯತ್ನಿಸಿದ್ದಾರೆ. ಆದ್ರೆ ಇದಕ್ಕೆ ರಾಜಣ್ಣ ಸೊಪ್ಪು ಹಾಕಿಲ್ಲ. ಡಿಕೆಶಿ ಭೇಟಿ ಬಳಿಕ ಇದೀಗ ರಾಜಣ್ಣ ಇಂದು (ಡಿಸೆಂಬರ್ 23) ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ರಹಸ್ಯ ಮಾತುಕತೆ ಮಾಡಿದ್ದಾರೆ.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಾಜಣ್ಣ, ರಾಜ್ಯದಲ್ಲಿ ಗೊಂದಲ ನಿವಾರಣೆ ಮಾಡುವ ಕೆಲಸ ಆಗಬೇಕು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದು ಸರಿಯಾಗಿದೆ. ಹೈಕಮಾಂಡ್ ಗೊಂದಲ ಬಗೆಹರಿಸಬೇಕಾಗಿದೆ. ರಾಹುಲ್ ಗಾಂಧಿ ಹೇಳಿದ್ರೆ ಸಿಎಂ ಸ್ಥಾನ ಬಿಡುವುದಾಗಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಹೇಳಿದ್ದಾರೆ. ಹಾಗೆಯೇ ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಹೇಳಿಕೆ ನೀಡಿದ್ದಾರೆ. ಗೊಂದಲದಿಂದ ಆಡಳಿತದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಒಪ್ಪಂದ ಆಗಿಲ್ಲವೆಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ. ಒಪ್ಪಂದ ಆಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳುತ್ತಿದ್ದಾರೆ. ಒಪ್ಪಂದದ ವಿಚಾರವನ್ನು ತಳ್ಳಿ ಹಾಕುವಂತಿಲ್ಲ. ಎಐಸಿಸಿ ಅಧ್ಯಕ್ಷರು ಬಂದಾಗ ಎಲ್ಲರೂ ಭೇಟಿಯಾಗುವುದು ಸಹಜ.
ಡಿಸಿಎಂ ಡಿ.ಕೆ.ಶಿವಕುಮಾರ್ ಆಗಿದ್ದು ಬೇರೆ, ಪತ್ರ ಬರೆದಿದ್ದು ಬೇರೆ ಎಂದಿದ್ದಾರೆ.

ಒಂದು ವೇಳೆ ರಾಹುಲ್ ಗಾಂಧಿ ಹೇಳಿದ್ರೆ ಸಿದ್ದರಾಮಯ್ಯನವರ ಸಿಎಂ ಸ್ಥಾನವನ್ನು ಬಿಟ್ಟುಕೊಡುತ್ತಾರಾ?  ಸಿಎಂ ಬಿಟ್ಟು ಕೊಡುವಂತೆ ರಾಹುಲ್ ಗಾಂಧಿ ಹೇಳಿದರೆ ಸಿದ್ದರಾಮಯ್ಯ ಬೆಂಬಲಿಗರು ಸುಮ್ನೆ ಇರುತ್ತಾರೆಯೇ? ಹೀಗೆ ಹತ್ತು ಹಲವು ಪ್ರಶ್ನೆಗಳು ಉದ್ಭವಿಸಿದ್ದು, ಬೀಸೋ ದೊಣ್ಣೆಯಿಂದ ಪಾರಾಗಲು ಸಿದ್ದರಾಮಯ್ಯ ರಾಹುಲ್ ಹೆಸರೇಳುಕೊಂಡು ಹೋಗುತ್ತಿದ್ದಾರೆ. ಹೀಗಾಗಿ ಡಿಕೆಶಿ ಸಹ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕ ಕಡೆಯಿಂದ ರಾಹುಲ್ ಗಾಂಧಿ ಮನವೊಲಿಸುವ ಯತ್ನ ನಡೆಸಿದ್ದಾರೆ ಎನ್ನುವುದು ತಿಳಿದುಬಂದಿದ್ದು, ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ಬಂದು ನಿಲ್ಲಲಿದೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭಾರೀ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ – Kannada News | Violence erupts in Assam Karbi Anglong district government temporarily suspended internet services

ನವದೆಹಲಿ, ಡಿಸೆಂಬರ್ 23: ಅಸ್ಸಾಂನಲ್ಲಿ ಅಕ್ರಮ ಅತಿಕ್ರಮಣದ ವಿರುದ್ಧ ಪ್ರತಿಭಟನೆಯ ನಂತರ ಕರ್ಬಿ ಅಂಗ್ಲಾಂಗ್‌ನಲ್ಲಿ ಭಾರಿ ಭದ್ರತೆಯನ್ನು ನಿಯೋಜಿಸಲಾಗಿದೆ. ನಿನ್ನೆ ಭುಗಿಲೆದ್ದ ಹಿಂಸಾತ್ಮಕ ಪ್ರತಿಭಟನೆಯ ನಂತರ ಇಂದು ಅಸ್ಸಾಂನ (Assam) ಕರ್ಬಿ ಅಂಗ್ಲಾಂಗ್ ಜಿಲ್ಲೆಯಾದ್ಯಂತ ಭಾರೀ ಭದ್ರತೆಯನ್ನು ನಿಯೋಜಿಸಲಾಗಿತ್ತು. ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ರಾಜ್ಯ ಸರ್ಕಾರವು ಕರ್ಬಿ ಅಂಗ್ಲಾಂಗ್ ಮತ್ತು ಪಶ್ಚಿಮ ಕರ್ಬಿ ಅಂಗ್ಲಾಂಗ್ ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಚಂಡಮಾರುತದಿಂದ ನಲುಗಿದ ಶ್ರೀಲಂಕಾಕ್ಕೆ 4,000 ಕೋಟಿ ರೂ. ಆರ್ಥಿಕ ಪ್ಯಾಕೇಜ್ ಘೋಷಿಸಿದ ಭಾರತ – Kannada News | India Announces Rs 4000 Crore Reconstruction Package To Rebuild Sri Lanka as Cyclone Relief Package

ಕೊಲಂಬೊ, ಡಿಸೆಂಬರ್ 23: ಭಾರತದ ನೆರೆಹೊರೆ ಮೊದಲು ಮತ್ತು ಮಹಾಸಾಗರ್ ನೀತಿಗಳ ಅಡಿಯಲ್ಲಿ ಶ್ರೀಲಂಕಾಕ್ಕೆ (Sri Lanka) ಭಾರತ ಸಹಾಯಹಸ್ತ ಚಾಚಿದೆ. ದಿತ್ವಾ ಚಂಡಮಾರುತದಿಂದ ತತ್ತರಿಸಿರುವ ಶ್ರೀಲಂಕಾದ ಪುನರ್ಮಿರ್ಮಾಣಕ್ಕೆ ಭಾರತ 4 ಸಾವಿರ ಕೋಟಿ ರೂ. ಪರಿಹಾರ ಪ್ಯಾಕೇಜ್ ಘೋಷಿಸಿದೆ. ಈ ಬಗ್ಗೆ ಎಕ್ಸ್​​ನಲ್ಲಿ ಪೋಸ್ಟ್ ಮಾಡಿರುವ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ದಿತ್ವ ಚಂಡಮಾರುತದ ನಂತರ ದ್ವೀಪ ರಾಷ್ಟ್ರದಲ್ಲಿ ಬಿಕ್ಕಟ್ಟಿನ ಸಮಯದಲ್ಲಿ ಸಹಾಯ ಮಾಡಬೇಕಿರುವುದು ನಮ್ಮ ಕರ್ತವ್ಯ ಎಂದು ಹೇಳಿದ್ದಾರೆ.

ಶ್ರೀಲಂಕಾ ದೇಶಕ್ಕೆ ಚಂಡಮಾರುತದಿಂದ ಅಪಾರ ಹಾನಿಯಾಗಿದೆ. ಈ ಸಂದರ್ಭದಲ್ಲಿ ಭಾರತವು ನೆರೆಯ ದೇಶಕ್ಕೆ ನಿರಂತರವಾಗಿ ಸಹಾಯವನ್ನು ನೀಡುತ್ತಿದೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಶ್ರೀಲಂಕಾಕ್ಕೆ 450 ಮಿಲಿಯನ್ ಯುಎಸ್ ಡಾಲರ್ ನೆರವು ಘೋಷಿಸಿದ್ದಾರೆ.

ಇದನ್ನೂ ಓದಿ: ಭಯೋತ್ಪಾದನೆ ಬಗ್ಗೆ ಸಮರ್ಥನೆಗೆ ಅವಕಾಶವೇ ಇಲ್ಲ; SCO ಶೃಂಗಸಭೆಯಲ್ಲಿ ಸಚಿವ ಜೈಶಂಕರ್ ಸಂದೇಶ

ದಿತ್ವ ಚಂಡಮಾರುತವು ಶ್ರೀಲಂಕಾದಲ್ಲಿ ಅಪಾರ ಹಾನಿಯನ್ನುಂಟುಮಾಡಿದ್ದು, ಅದು ಚೇತರಿಸಿಕೊಳ್ಳಲು ವರ್ಷಗಳೇ ಬೇಕಾಗುತ್ತದೆ. ಚಂಡಮಾರುತದ ಸಮಯದಲ್ಲಿ ಭಾರತ ಶ್ರೀಲಂಕಾದೊಂದಿಗೆ ನಿಂತಿದೆ ಮತ್ತು 450 ಮಿಲಿಯನ್ ಯುಎಸ್ ಡಾಲರ್ ನೆರವು ಪ್ಯಾಕೇಜ್ ನೀಡಿದೆ ಎಂದು ಅವರು ಹೇಳಿದ್ದಾರೆ.

ಜೈಶಂಕರ್ ಎರಡು ದಿನಗಳ ಶ್ರೀಲಂಕಾ ಭೇಟಿಯಲ್ಲಿದ್ದಾರೆ. ಇಂದು (ಡಿಸೆಂಬರ್ 23) ಶ್ರೀಲಂಕಾದ ವಿದೇಶಾಂಗ ಸಚಿವೆ ವಿಜಿತಾ ಹೆರಾತ್ ಅವರೊಂದಿಗಿನ ಸಂಭಾಷಣೆಯ ಸಂದರ್ಭದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಪ್ರಧಾನಿ ಮೋದಿ ಬರೆದ ಪತ್ರವನ್ನು ಅವರು ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಅವರಿಗೆ ನೀಡಿದರು. “ದಿತ್ವ ಚಂಡಮಾರುತದ ಸಮಯದಲ್ಲಿ ಭಾರತ ಶ್ರೀಲಂಕಾದೊಂದಿಗೆ ನಿಲ್ಲಲು ಹೆಮ್ಮೆಪಡುತ್ತದೆ” ಎಂದು ಜೈಶಂಕರ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link