ಗಲ್ಫ್ ದೇಶಗಳೊಂದಿಗಿನ ಭಾರತದ ಸಂಬಂಧ ಹಾಳು ಮಾಡುವುದೇ ಕಾಂಗ್ರೆಸ್ ಉದ್ದೇಶ; ಪ್ರಧಾನಿ ಮೋದಿ ವಾಗ್ದಾಳಿ
ನವದೆಹಲಿ, ಏಪ್ರಿಲ್ 4: ಕೇರಳದಲ್ಲಿ ವಿಧಾನಸಭಾ ಚುನಾವಣೆ (Keralam Assembly Elections) ನಡೆಯಲಿರುವುದರಿಂದ ಪ್ರಧಾನಿ ನರೇಂದ್ರ ಮೋದಿ (PM Modi) ತಿರುವಲ್ಲಾದಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಕಾಂಗ್ರೆಸ್ ಪಕ್ಷದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. “ಪಶ್ಚಿಮ ಏಷ್ಯಾದ ದೇಶಗಳು ಭಾರತವನ್ನು ತಮ್ಮ ಶತ್ರುವೆಂದು ಪರಿಗಣಿಸಬೇಕೆಂದು ಕಾಂಗ್ರೆಸ್ ಬಯಸುತ್ತದೆ. ಅದೇ ಕಾರಣದಿಂದ ಕಾಂಗ್ರೆಸ್ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದೆ. ನಾವು ಇಲ್ಲಿ ಅಂತಹ ಹೇಳಿಕೆ ನೀಡಿದರೆ ಭಾರತೀಯರನ್ನು ಗಲ್ಫ್ ದೇಶಗಳಿಂದ ಹೊರಹಾಕಲಾಗುತ್ತದೆ. ಅದೇ ಕಾರಣದಿಂದ…