All posts by nagaraj11081993

Vasthu Tips: ಮನೆಯ ಈ ದಿಕ್ಕಿನಲ್ಲಿ ಎಂದಿಗೂ ಕಸದ ಬುಟ್ಟಿಯನ್ನು ಇಡಬೇಡಿ; ಸಮಸ್ಯೆ ತಪ್ಪಿದ್ದಲ್ಲ! – Kannada News | Vastu for Dustbin Placement: Avoid Financial Loss and Boost Home Positivity

ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ಕೂಡಾ ವಾಸ್ತುವಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮನೆ ಕಟ್ಟುವುದರಿಂದ ಹಿಡಿದು ಮನೆಯೊಳಗಿನ ಅಲಂಕಾರಿಕ ವಸ್ತುವಿನ ತನಕ ವಾಸ್ತುವಿನ ಸಲಹೆಯನ್ನು ಪಾಲಿಸುತ್ತಾರೆ. ಆದರೆ ಅನೇಕ ಜನರು ಕಸದ ಬುಟ್ಟಿ ಬಗ್ಗೆ ಹೆಚ್ಚು ಗಮನ ಹರಿಸುವುದಿಲ್ಲ. ಅದನ್ನು ಮನೆಯ ಯಾವುದೋ ಮೂಲೆಯಲ್ಲಿ ಇರಿಸಲಾಗುತ್ತದೆ. ಆದರೆ ವಾಸ್ತು ತಜ್ಞರು ಅದನ್ನು ಎಂದಿಗೂ ತಪ್ಪು ದಿಕ್ಕಿನಲ್ಲಿ ಇಡಬಾರದು ಎಂದು ಎಚ್ಚರಿಸುತ್ತಾರೆ.

ವಾಸ್ತು ಶಾಸ್ತ್ರದ ಪ್ರಕಾರ, ಮನೆಯೊಳಗೆ ಕಸದ ಬುಟ್ಟಿಯನ್ನು ಈಶಾನ್ಯ ಅಥವಾ ವಾಯುವ್ಯ ದಿಕ್ಕಿನಲ್ಲಿ ಇಡಲೇಬಾರದು. ಇದು ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಈ ದಿಕ್ಕುಗಳು ದೇವತೆಗಳಿಗೆ ಸಂಬಂಧಿಸಿವೆ. ಆದ್ದರಿಂದ, ಈ ಎರಡು ದಿಕ್ಕುಗಳಲ್ಲಿ ಕಸದ ಬುಟ್ಟಿಯನ್ನು ಇಡುವುದರಿಂದ ಆರ್ಥಿಕ ಸಮಸ್ಯೆಗಳು ಹೆಚ್ಚಾಗುತ್ತವೆ.

ಅದೇ ರೀತಿ, ಯಾವುದೇ ಸಂದರ್ಭದಲ್ಲಿ ಮುಖ್ಯ ದ್ವಾರದಲ್ಲಿ ಅಥವಾ ಸ್ನಾನಗೃಹದಲ್ಲಿ ಕಸದ ಬುಟ್ಟಿಯನ್ನು ಇಡಬಾರದು. ಇದು ಅನೇಕ ಸಮಸ್ಯೆಗಳನ್ನು ಉಂಟುಮಾಡಬಹುದು ಎಂದು ವಾಸ್ತು ತಜ್ಞರು ಹೇಳುತ್ತಾರೆ. ಮುಖ್ಯ ದ್ವಾರದಲ್ಲಿ ಅಥವಾ ಸ್ನಾನಗೃಹದಲ್ಲಿ ಕಸದ ಬುಟ್ಟಿಯನ್ನು ಇಡುವುದನ್ನು ಅಶುಭವೆಂದು ಪರಿಗಣಿಸಲಾಗುತ್ತದೆ. ಇದು ಮನೆಯೊಳಗೆ ಭಿನ್ನಾಭಿಪ್ರಾಯಕ್ಕೆ ಕಾರಣವಾಗಬಹುದು.

ಇದನ್ನೂ ಓದಿ: ವಾಸ್ತು ಪ್ರಕಾರ, ಮನೆಯಲ್ಲಿ ಕಾಮಧೇನುವಿನ ವಿಗ್ರಹ ಇಡುವುದರಿಂದ ಸಿಗುವ ಅದ್ಭುತ ಲಾಭಗಳಿವು!

ವಾಸ್ತು ಶಾಸ್ತ್ರದ ಪ್ರಕಾರ, ಧನಾತ್ಮಕ ಶಕ್ತಿಯು ಮನೆಗೆ ಪ್ರವೇಶಿಸಬೇಕು, ಆದ್ದರಿಂದ ಪಶ್ಚಿಮ ಅಥವಾ ನೈಋತ್ಯ ದಿಕ್ಕಿನಲ್ಲಿ ಕಸದ ತೊಟ್ಟಿಯನ್ನು ಇಡುವುದು ತುಂಬಾ ಶುಭ. ಇದು ಮನೆಯೊಳಗಿನ ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡುತ್ತದೆ ಮತ್ತು ಶಾಂತಿಯನ್ನು ತರುತ್ತದೆ. ಇದು ಕುಟುಂಬದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Dream Home: ಸ್ವಂತ ಮನೆ ನಿರ್ಮಾಣಕ್ಕೆ ಸಾಕಷ್ಟು ಅಡೆತಡೆ ಬರುತ್ತಿದೆಯೇ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Astrological Remedies to Achieve Your Dream of Owning a Home

ಪ್ರತಿಯೊಬ್ಬ ವ್ಯಕ್ತಿಗೂ ಸ್ವಂತ ಮನೆ ಹೊಂದುವ ಆಸೆ ಇರುತ್ತದೆ. “ಮದುವೆ ಮಾಡಿ ನೋಡು, ಮನೆ ಕಟ್ಟಿ ನೋಡು” ಎಂಬ ಗಾದೆಯು ಸ್ವಂತ ಮನೆ ಕಟ್ಟುವುದರ ಶ್ರಮ ಮತ್ತು ಮಹತ್ವವನ್ನು ತಿಳಿಸುತ್ತದೆ. ಸಾಲ ಮಾಡಿ ಮನೆ ಕಟ್ಟಿದರೂ ಅದರಲ್ಲಿ ಶ್ರಮ ಮತ್ತು ಕಷ್ಟ ಇರುತ್ತದೆ. ಅನೇಕರು ಬಾಡಿಗೆ ಮನೆಗಳಲ್ಲಿ ಅಥವಾ ಅಪಾರ್ಟ್‌ಮೆಂಟ್‌ಗಳಲ್ಲಿ ವಾಸಿಸುತ್ತಿದ್ದು, ಸ್ವಂತ ಮನೆಗಾಗಿ ನಿರಂತರವಾಗಿ ಪ್ರಯತ್ನಿಸುತ್ತಿರುತ್ತಾರೆ. ಕೆಲವರಿಗೆ ಪೂರ್ವಿಕರ ಆಸ್ತಿ, ಭೂಮಿ ಇದ್ದರೂ ಸಹ ಮನೆ ಕಟ್ಟಲು ಸಾಧ್ಯವಾಗದೆ ಅಪಾರ್ಟ್‌ಮೆಂಟ್‌ಗಳಲ್ಲಿ ಅಥವಾ ಬಾಡಿಗೆ ಮನೆಗಳಲ್ಲಿ ಉಳಿದಿರುವುದನ್ನು ಕಾಣಬಹುದು. ಇನ್ನು ಕೆಲವರಿಗೆ ಹಣ ಕೂಡಿಟ್ಟರೂ ಸಹ ಅದನ್ನು ಮನೆ ನಿರ್ಮಾಣಕ್ಕೆ ಬಳಸಲು ಸಾಧ್ಯವಾಗುವುದಿಲ್ಲ. ಸಿಮೆಂಟ್, ಕಬ್ಬಿಣದ ಬೆಲೆ ಏರಿಕೆಯಂತಹ ಕಾರಣಗಳಿಂದ ನಿರ್ಮಾಣ ಕಾರ್ಯ ಮುಂದೂಡಲ್ಪಟ್ಟು, ಅಂತಿಮವಾಗಿ ಅಪಾರ್ಟ್‌ಮೆಂಟ್ ಖರೀದಿಗೆ ಹೋಗುವ ಸನ್ನಿವೇಶಗಳು ಇರುತ್ತವೆ.

ಈ ಎಲ್ಲಾ ಸವಾಲುಗಳ ನಡುವೆ, ಸ್ವಂತ ಮನೆ ಯೋಗವಿದೆಯೇ ಅಥವಾ ಅದನ್ನು ಹೇಗೆ ಪಡೆದುಕೊಳ್ಳಬೇಕು ಎಂಬುದಕ್ಕೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ತಜ್ಞರಾದ ಡಾ. ಬಸವರಾಜ ಗುರೂಜಿ ತಮ್ಮ ನಿತ್ಯ ಭಕ್ತಿಯಲ್ಲಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ.

ಗುರೂಜಿಯವರು ಹೇಳುವಂತೆ, ಜ್ಯೋತಿಷ್ಯದ ಪ್ರಕಾರ, ಒಬ್ಬರ ಜಾತಕದಲ್ಲಿ ಮನೆ ಕಟ್ಟುವುದು ಅಥವಾ ಖರೀದಿಸುವ ಯೋಗವಿದೆಯೇ ಎಂದು ಪರೀಕ್ಷಿಸಿಕೊಳ್ಳುವುದು ಮುಖ್ಯ. ಜಾತಕದಲ್ಲಿ ಮನೆ ಕಟ್ಟುವುದು ಅಥವಾ ಹೊಂದುವುದಕ್ಕೆ ಪ್ರೋತ್ಸಾಹ ನೀಡುವ ಪ್ರಮುಖ ಗ್ರಹಗಳೆಂದರೆ ಕುಜ (ಮಂಗಳ), ಶುಕ್ರ ಮತ್ತು ಬುಧ. ಈ ಮೂರು ಗ್ರಹಗಳ ಅನುಗ್ರಹವು ಸ್ವಂತ ಮನೆ ಕನಸನ್ನು ನನಸಾಗಿಸಲು ಸಹಾಯಕ.

ಕುಜ ಗ್ರಹದ ಅನುಗ್ರಹ ಅತ್ಯಗತ್ಯ. ಕುಜ ಗ್ರಹದ ಅಧಿಪತಿ ಸುಬ್ರಹ್ಮಣ್ಯ ಸ್ವಾಮಿ. ಜಾತಕದಲ್ಲಿ ನಾಲ್ಕನೆಯ ಮನೆಯು ಮನೆ, ಆಸ್ತಿ ಮತ್ತು ವಾಹನಗಳ ಬಗ್ಗೆ ಸೂಚಿಸುತ್ತದೆ. ನಾಲ್ಕನೆಯ ಮನೆಯ ಅಧಿಪತಿ, ನಾಲ್ಕನೆಯ ಮನೆಯಲ್ಲಿರುವ ಗ್ರಹಗಳು, ಅವುಗಳ ಸ್ಥಿತಿಗತಿಗಳು ಮತ್ತು ನಾಲ್ಕನೇ ಮನೆಯ ಮೇಲೆ ಬೀಳುವ ದೃಷ್ಟಿ – ಇವೆಲ್ಲವೂ ಮನೆ ಯೋಗವನ್ನು ನಿರ್ಧರಿಸುತ್ತವೆ. ಮನೆಯನ್ನು ಅಂದವಾಗಿ ನಿರ್ಮಿಸಲು ಶುಕ್ರನ ಅನುಗ್ರಹ ಮತ್ತು ಸರಿಯಾದ ಯೋಜನೆಗೆ ಬುಧನ ಅನುಗ್ರಹ ಬೇಕು.

ಇದನ್ನೂ ಓದಿ: ವಾಸ್ತು ಪ್ರಕಾರ, ಮನೆಯಲ್ಲಿ ಕಾಮಧೇನುವಿನ ವಿಗ್ರಹ ಇಡುವುದರಿಂದ ಸಿಗುವ ಅದ್ಭುತ ಲಾಭಗಳಿವು!

ಮನೆ ಯೋಗ ಪ್ರಾಪ್ತಿಗಾಗಿ ಮಾಡಬೇಕಾದ ಪರಿಹಾರಗಳು:

  • ಮಂಗಳ ಗ್ರಹದ ಆರಾಧನೆ: ಮಂಗಳ ಗ್ರಹವನ್ನು ಸತತವಾಗಿ ಪೂಜಿಸುವುದು ಮುಖ್ಯ. ಮಂಗಳವಾರದಂದು ಮಂಗಳ ಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಬೇಕು.
  • ಸುಬ್ರಹ್ಮಣ್ಯ ಸ್ವಾಮಿ ಪೂಜೆ: ಮಂಗಳ ಗ್ರಹದ ಅಧಿಪತಿಯಾದ ಸುಬ್ರಹ್ಮಣ್ಯ ಸ್ವಾಮಿಯನ್ನು ಪೂಜಿಸುವುದು ಅತಿ ಮುಖ್ಯ. ಪ್ರತಿ ಮಂಗಳವಾರದಂದು ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಬಹುದು. ನಾಗರಕಲ್ಲು ಪೂಜೆ ಸಹ ಫಲಪ್ರದ. ಕನಿಷ್ಠ 5-10 ನಿಮಿಷಗಳ ಕಾಲ ಸುಬ್ರಹ್ಮಣ್ಯ ಸ್ವಾಮಿಯನ್ನು ಶಿರಬಾಗಿ ಪ್ರಾರ್ಥಿಸುವುದರಿಂದ ಮನೆ ಯೋಗ ಪ್ರಾಪ್ತವಾಗುತ್ತದೆ.
  • ಕೃಷ್ಣ ಪಕ್ಷದ ಚತುರ್ಥಿ ಪೂಜೆ: ಕೃಷ್ಣ ಪಕ್ಷದ ಚತುರ್ಥಿಯಂದು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡುವುದರಿಂದ ಮನೆ ಯೋಗ ಆಟೋಮ್ಯಾಟಿಕ್ ಆಗಿ ಪ್ರಾಪ್ತವಾಗುತ್ತದೆ.
  • ಮಂತ್ರ ಜಪ: ಪ್ರತಿನಿತ್ಯ “ಓಂ ಅಂಗಾರಕಾಯ ನಮಃ” ಮಂತ್ರವನ್ನು ಜಪಿಸುವುದರಿಂದ ಕುಜ ಗ್ರಹದ ಅನುಗ್ರಹ ದೊರೆಯುತ್ತದೆ. ಮಂತ್ರ ಜಪಿಸಿದ ನಂತರ ಶುದ್ಧ ಮನಸ್ಸಿನಿಂದ ಮನೆ ಬೇಕೆಂದು ಪ್ರಾರ್ಥಿಸಬೇಕು.
  • ವಿಶೇಷ ಮಂತ್ರಗಳು: ಹೆಚ್ಚು ಪರಿಣಾಮಕಾರಿ ಫಲಿತಾಂಶಗಳಿಗಾಗಿ “ಓಂ ಕ್ರಾಮ್ ಕ್ರೀಮ್ ಕ್ರೌಮ್ ಸಃ ಅಂಗಾರಕಾಯ ನಮಃ” ಅಥವಾ “ಓಂ ಕ್ರಾಮ್ ಕ್ರೀಮ್ ಕ್ರೌಮ್ ಸಃ ಭೌಮಾಯ ನಮಃ” ಮಂತ್ರಗಳನ್ನು ಜಪಿಸಬಹುದು.
  • ಮಂಗಳವಾರ ಉಪವಾಸ: ಮಂಗಳವಾರದಂದು ಉಪವಾಸ ಆಚರಿಸುವುದು ತುಂಬಾನೇ ಒಳ್ಳೆಯದು ಎಂದು ಹೇಳಲಾಗುತ್ತದೆ.

ಈ ಎಲ್ಲಾ ಪರಿಹಾರಗಳು ನಂಬಿಕೆಯ ಆಧಾರದಲ್ಲಿರುತ್ತವೆ. ಜಾತಕ ಪರಿಶೀಲನೆ ಮಾಡಿಸಿ, ಈ ಕ್ರಮಗಳನ್ನು ಶ್ರದ್ಧೆಯಿಂದ ಅನುಸರಿಸುವುದರಿಂದ ಸ್ವಂತ ಮನೆ ಕನಸು ನನಸಾಗುತ್ತದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Shanku Sthapana: ಯಾವುದೇ ಕಟ್ಟಡ ಕಟ್ಟುವ ಮುನ್ನ ಶಂಕುಸ್ಥಾಪನೆ ಮಾಡುವುದು ಯಾಕೆ ಗೊತ್ತಾ? – Kannada News | Shanku Sthapana Importance: Foundation Ceremony for Land Purification and Prosperity

ಮನೆ, ದೇವಸ್ಥಾನ ಅಥವಾ ಯಾವುದೇ ಸಾಮಾಜಿಕ ಸೇವಾ ಕಟ್ಟಡ ನಿರ್ಮಿಸುವ ಮೊದಲು ಶಂಕುಸ್ಥಾಪನೆ ಮಾಡುವುದು ಹಿಂದೂ ಸಂಪ್ರದಾಯದಲ್ಲಿ ಅತ್ಯಂತ ಮಹತ್ವದ ವಿಧಿಯಾಗಿದೆ. ಕೇವಲ ಹೋಗಿ ಪೂಜೆ ಮಾಡಿ ಮನೆ ಕಟ್ಟಲು ಪ್ರಾರಂಭಿಸುವುದಕ್ಕಿಂತ, ಶಾಸ್ತ್ರೋಕ್ತವಾಗಿ ಶಂಕುಸ್ಥಾಪನೆ ಮಾಡುವುದರಿಂದ ಆ ಭೂಮಿಗೆ ಶತಮಾನಗಳ ಕಾಲ ಬಲ ಸಿಗುತ್ತದೆ ಮತ್ತು ಆಸ್ತಿಯು ವಂಶಪಾರಂಪರ್ಯವಾಗಿ ಉಳಿಯುತ್ತದೆ ಎಂಬುದು ಪ್ರಾಚೀನ ನಂಬಿಕೆ. ಉತ್ತಮ ಮುಹೂರ್ತ, ಆಯ ಮತ್ತು ಭೂಮಿಯ ಬಲವನ್ನು ಗಮನಿಸಿ ಮಾಡುವ ಈ ಕ್ರಿಯೆಯು ಕೇವಲ ಧಾರ್ಮಿಕ ವಿಧಿಯಲ್ಲ, ಇದು ಶುಭ ಸಂಕಲ್ಪದ ಪ್ರತೀಕವಾಗಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ತಜ್ಞರಾದ ಡಾ. ಬಸವರಾಜ ಗುರೂಜಿ ತಮ್ಮ ನಿತ್ಯ ಭಕ್ತಿಯಲ್ಲಿ ನೀಡಿರುವ ಮಾಹಿತಿ ಇಲ್ಲಿದೆ.

ಗುರೂಜಿಯವರು ಹೇಳುವಂತೆ, ಶಂಕುಸ್ಥಾಪನೆ ಎಂದರೆ, ನಾವು ಕಟ್ಟಲು ಉದ್ದೇಶಿಸಿರುವ ಸ್ಥಳದಲ್ಲಿ ನಿರ್ಮಾಣದ ಸದುದ್ದೇಶದಿಂದ ಸಂಕಲ್ಪ ಮಾಡುವುದು. ಇದು ನಿಮ್ಮ ರಾಶಿ, ಜಾತಕಕ್ಕೆ ಅನುಗುಣವಾಗಿ ಶುಭ ಮುಹೂರ್ತದಲ್ಲಿ, ನಿಮ್ಮ ನಾಲ್ಕನೇ ಮನೆಯ ಅಧಿಪತಿಯ ಸ್ಥಾನವನ್ನು ಗಮನಿಸಿ ನಡೆಸುವ ಪೂಜೆ. ಕೈಯಲ್ಲಿ ಹಣವಿಲ್ಲದಿದ್ದರೂ ಅಥವಾ ಸಾಲದ ವ್ಯವಸ್ಥೆ ಇಲ್ಲದಿದ್ದರೂ ಸಹ, ಭೂಮಿಯಲ್ಲಿ ಮನೆ ಕಟ್ಟುವ ಬಲವಾದ ಉದ್ದೇಶದಿಂದ ಮಾಡುವ ಸತ್ಸಂಕಲ್ಪವೇ ಶಂಕುಸ್ಥಾಪನೆ.

ಪ್ರತಿ ಭೂಮಿಗೂ ಮೂರು ಪ್ರಮುಖ ದೋಷಗಳಿರುತ್ತವೆ ಎಂದು ಶಾಸ್ತ್ರಗಳು ಹೇಳುತ್ತವೆ:

  • ಸ್ಪರ್ಶ ದೋಷ: ಭೂಮಿಯಲ್ಲಿ ಓಡಾಡಿರುವ ಹಾವುಗಳು, ಜೀವಜಂತುಗಳು, ಅಥವಾ ಅಲ್ಲಿ ಸತ್ತಿರುವ ಪ್ರಾಣಿಗಳಿಂದ ಉಂಟಾಗುವ ದೋಷ.
  • ದೃಷ್ಟಿ ದೋಷ: ಜಾಗವನ್ನು ನೋಡಿದಾಗ ಜನರಿಗೆ ಉಂಟಾಗುವ ನಕಾರಾತ್ಮಕ ಭಾವನೆಗಳು ಅಥವಾ ಕೆಟ್ಟ ದೃಷ್ಟಿಯಿಂದ ಬರುವ ದೋಷ.
  • ಶಲ್ಯಾ ದೋಷ (ಮೃತ್ಯು ದೋಷ): ಭೂಮಿಯಲ್ಲಿ ಹೂತಿರುವ ಮೃತ ದೇಹಗಳು ಅಥವಾ ಯಾವುದಾದರೂ ಅಶುಭ ವಸ್ತುಗಳಿಂದ ಉಂಟಾಗುವ ದೋಷ. ಅನೇಕ ಜನರು ಸೈಟ್ ಅಥವಾ ಮನೆಯನ್ನು ಕೊಂಡುಕೊಂಡು ನಂತರ ಮಾರಾಟ ಮಾಡುವುದು ಅಥವಾ ಲೋನ್ ಕಟ್ಟಲಾಗದೆ ಹಿಂತಿರುಗಿಸುವುದು ಈ ದೋಷಗಳ ಪರಿಣಾಮವಾಗಿರಬಹುದು.

ಈ ಮೂರು ದೋಷಗಳನ್ನು ನಿವಾರಿಸಲು ಶಂಕುಸ್ಥಾಪನೆ ಅತ್ಯಗತ್ಯ. ಇದನ್ನು ಈಶಾನ್ಯ ದಿಕ್ಕಿನಲ್ಲಿ ಮಾಡಲಾಗುತ್ತದೆ. ಶಂಕುಸ್ಥಾಪನೆಯ ಸಮಯದಲ್ಲಿ, ಬ್ರಾಹ್ಮೀ ಮುಹೂರ್ತದಲ್ಲಿ ಬಿಲ್ವ, ಅತ್ತಿ ಅಥವಾ ತುಳಸಿಯಂತಹ ಸಣ್ಣ ಗಿಡವನ್ನು ನೆಡಲಾಗುತ್ತದೆ. ನಿರ್ಮಾಣದ ಸಮಯದಲ್ಲಿ ಈ ಗಿಡವನ್ನು ತೆಗೆದು ಸುರಕ್ಷಿತ ಸ್ಥಳಕ್ಕೆ ಅಥವಾ ದೇವಸ್ಥಾನಕ್ಕೆ ಸ್ಥಳಾಂತರಿಸಬಹುದು, ಅಥವಾ ಮಡಕೆಯಲ್ಲಿಟ್ಟು ಪೋಷಿಸಬಹುದು. ನವಗ್ರಹ ದೋಷ ನಿವಾರಣೆ ಮತ್ತು ವಾಸ್ತು ಪೂಜೆಗಳನ್ನು ಶಂಕುಸ್ಥಾಪನೆಯೊಂದಿಗೆ ಮಾಡುವುದರಿಂದ ಭೂಶುದ್ಧಿ ಆಗುತ್ತದೆ. ಗಂಗಾಜಲ ಮತ್ತು ಪಂಚಗವ್ಯಗಳನ್ನು ಭೂಮಿಯ ಮೇಲೆ ಸಿಂಪಡಿಸುವುದರಿಂದ ಭೂಮಿಯ ಎಲ್ಲಾ ದೋಷಗಳು ನಿವಾರಣೆಯಾಗಿ ಮನೆ ಕಟ್ಟಿಕೊಳ್ಳಲು ಸುಗಮ ವಾತಾವರಣ ಸೃಷ್ಟಿಯಾಗುತ್ತದೆ.

ಇದನ್ನೂ ಓದಿ: ವಾಸ್ತು ಪ್ರಕಾರ, ಮನೆಯಲ್ಲಿ ಕಾಮಧೇನುವಿನ ವಿಗ್ರಹ ಇಡುವುದರಿಂದ ಸಿಗುವ ಅದ್ಭುತ ಲಾಭಗಳಿವು!

ಇತ್ತೀಚಿನ ದಿನಗಳಲ್ಲಿ, ಕಲ್ಲಹಳ್ಳಿಯ ಭೂವರಾಹ ಸ್ವಾಮಿ ದೇವಸ್ಥಾನಕ್ಕೆ ಹೋಗಿ ಅಲ್ಲಿನ ಇಟ್ಟಿಗೆ ಅಥವಾ ಮಣ್ಣನ್ನು ತಂದು ನಮ್ಮ ಭೂಮಿಗೆ ಹಾಕುವುದರಿಂದಲೂ ಭೂಮಿಗೆ ಬಲ ಬರುತ್ತದೆ ಎಂಬ ನಂಬಿಕೆಯಿದೆ. ಗೌತಮ ಮಹರ್ಷಿಗಳು ಸ್ಥಾಪಿಸಿದ ಆ ಜಾಗದ ಮಣ್ಣು ಮನೆ ನಿರ್ಮಾಣಕ್ಕೆ ಅನುಕೂಲ ಮಾಡಿಕೊಡುತ್ತದೆ ಎಂದು ಹೇಳಲಾಗುತ್ತದೆ. ತಮ್ಮದೇ ಆದ ಸೈಟ್ ಇದ್ದರೂ ಕೂಡ, ಅದರ ಕಡೆಗೆ ಗಮನ ಹರಿಸದೆ ಇರುವುದು ಅಥವಾ ಸೈಟ್ ಅನ್ನು ನೋಡದಿರುವುದು ಆಸ್ತಿಯು ವಂಶಪಾರಂಪರ್ಯವಾಗಿ ಬರದಿರಲು ಕಾರಣವಾಗಬಹುದು.

ಹೀಗಾಗಿ, ಶಂಕುಸ್ಥಾಪನೆಯು ಕೇವಲ ಒಂದು ಸಂಪ್ರದಾಯವಲ್ಲದೆ, ಭೂಮಿಯ ಶುದ್ಧೀಕರಣ, ದೋಷ ನಿವಾರಣೆ ಮತ್ತು ಭವಿಷ್ಯದ ಪೀಳಿಗೆಗೆ ಆಸ್ತಿಯನ್ನು ಸುಭದ್ರವಾಗಿರಿಸುವ ಒಂದು ಆಳವಾದ ಧಾರ್ಮಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ. ಇದು ನಂಬಿಕೆಯ ಆಧಾರದ ಮೇಲೆ ನಡೆಯುವ ಒಂದು ಸತ್ಕಾರ್ಯವಾಗಿದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:57 am, Tue, 23 December 25

Source link

Lokayukta Raid: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ, ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಅಧಿಕಾರಿಗಳು – Kannada News | Lokayukta Raids Across Karnataka: Anti Corruption Sleuths Conduct Early Morning Operations in Multiple Districts

ಬೆಂಗಳೂರು, ಡಿಸೆಂಬರ್ 23: ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ ಮತ್ತು ರಾಯಚೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರದ ಆರೋಪದ ಮೇಲೆ ಈ ದಾಳಿ ನಡೆದಿದೆ. ಭ್ರಷ್ಟ ಅಧಿಕಾರಿಗಳ ಬಂಗಲೆಗಳು, ಮನೆಗಳು ಮತ್ತು ಕಚೇರಿಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಬಾಗಲಕೋಟೆ ಜಿಲ್ಲೆ ಜಿ.ಪಂ. ಯೋಜನಾ ನಿರ್ದೇಶಕರು (DRDA) ಹಾಗೂ ಅಧಿಕಾರಿ ಆಗಿರುವ ಶ್ಯಾಂ ಸುಂದರ್ ಕಾಂಬಳೆ ಅವರ ಬಾಗಲಕೋಟೆ ಮತ್ತು ಗದಗ ಜಿಲ್ಲೆಯ ನರಗುಂದದ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಯಿತು. ಇದೇ ಜಿಲ್ಲೆಯ ಬಾಗೇವಾಡಿಯ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಪ್ಪ ಅವರ ಮನೆಯ ಮೇಲೆಯೂ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಮುಖ್ಯಾಕಾರ್ಯನಿರ್ವಹಣಾ ಅಧಿಕಾರಿ ಮಾರುತಿ ಯಶವಂತ ಮಾಳವಿ ಅವರ ನಿವಾಸದ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಲಾಯಿತು. ರಾಯಚೂರು ಜಿಲ್ಲೆಯಲ್ಲಿ ನಿವೃತ್ತ ಸಹಾಯಕ ಇಂಜಿನಿಯರ್ ವಿಜಯಲಕ್ಷ್ಮೀ ಅವರ ಶ್ರೀ ರೇಣುಕಾ ನಿಲಯದ ಮನೆಯಲ್ಲಿ ಪರಿಶೀಲನೆ ನಡೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗಿಲ್ಲಿ ನಟನ ಮಾಸ್ಟರ್​ ಪ್ಲ್ಯಾನ್​​ಗೆ ಶಾಕ್ ಆದ ಇಡೀ ಮನೆ; ರಾಶಿಕಾ ನಾಮಿನೇಟ್ – Kannada News | Bigg Boss Kannada 12: Gilli Nata’s Master Plan Shocks Rashika in Nomination

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ (Gilli Nata) ಅವರು ಒಳ್ಳೆಯ ರೀತಿಯಲ್ಲಿ ಆಟ ಆಡುತ್ತಿದ್ದಾರೆ. ಅವರು ಎಲ್ಲರನ್ನು ನಗಿಸುವುದರ ಜೊತೆಗೆ ಒಂದಷ್ಟು ಮಾಸ್ಟರ್ ಪ್ಲ್ಯಾನ್​​ಗಳನ್ನು ಮಾಡುತ್ತಿದ್ದಾರೆ. ಈ ಪ್ಲ್ಯಾನ್​​ಗಳು ಅನೇಕರಿಗೆ ಅಚ್ಚರಿ ತರಿಸುತ್ತಿವೆ. ಈ ವಾರದ ನಾಮಿನೇಷನ್ ಟಾಸ್​ಕ್​ನಲ್ಲಿಯೂ ಅದೇ ರೀತಿ ಆಗಿದೆ. ಅವರ ಮಾಸ್ಟರ್ ಪ್ಲ್ಯಾನ್​​ಗೆ ರಾಶಿಕಾ ಅವರು ನಾಮಿನೇಟ್ ಆದರು.

ಬಿಗ್ ಬಾಸ್ ಮನೆಯಲ್ಲಿ ಪ್ರತಿ ವಾರ ಇಬ್ಬರನ್ನು ಮಾತ್ರ ನಾಮಿನೇಟ್ ಮಾಡಲು ಅವಕಾಶ ಇರುತ್ತದೆ. ಆದರೆ, ಈ ಬಾರಿ ಬಿಗ್ ಬಾಸ್ ಹೊಸ ರೀತಿಯ ಅವಕಾಶ ನೀಡಿದರು. ಎಲ್ಲಾ ಸ್ಪರ್ಧಿಗಳು ಎಷ್ಟು ಜನರನ್ನು ಬೇಕಿದ್ದರೂ ನಾಮಿನೇಟ್ ಮಾಡಬಹುದಿತ್ತು. ಇಲ್ಲಿ ಬಿಗ್ ಬಾಸ್ ಒಂದು ಅವಕಾಶ ಕೂಡ ನೀಡಿದರು.

ಪ್ರತಿ ಸ್ಪರ್ಧಿ ಕನ್​​ಫೆಷನ್ ರೂಂಗೆ ಹೋಗಬೇಕು. ಅಲ್ಲಿ ಹೋದ ಬಳಿಕ ಉಳಿದ ಸ್ಪರ್ಧಿಗಳು ನಾಮಿನೇಟ್ ಮಾಡಬೇಕು. ಎಷ್ಟು ಮಂದಿ ನಾಮಿನೇಟ್ ಮಾಡಿದ್ದಾರೆ ಎಂದು ಬಿಗ್ ಬಾಸ್ ಹೇಳುತ್ತಾರೆ. ಅದು ಯಾರು ಎಂಬದನ್ನು ಸರಿಯಾಗಿ ಊಹಿಸಬೇಕು. ರಾಶಿಕಾ ಊಹೆಯನ್ನು ಗಿಲ್ಲಿ ನಟ ಅವರು ತಪ್ಪು ಮಾಡಿದ್ದಾರೆ.

ಹಲವು ಬಾರಿ ರಾಶಿಕಾ ಅವರನ್ನು ಗಿಲ್ಲಿ ನಾಮಿನೇಟ್ ಮಾಡಿದ್ದು ಇದೆ. ಆದರೆ, ಈ ವಾರ ಗಿಲ್ಲಿ ಅವರು ರಾಶಿಕಾನ ನಾಮಿನೇಟ್ ಮಾಡಿಯೇ ಇಲ್ಲ. ರಾಶಿಕಾ ಲೆಕ್ಕಾಚಾರ ತಪ್ಪಾಗಿದ್ದು ಇಲ್ಲೇ. ಅವರು ಗಿಲ್ಲಿ ಹೆಸರನ್ನು ಕೂಡ ತೆಗೆದುಕೊಂಡರು. ಆದರೆ, ಗಿಲ್ಲಿ ಹೆಸರನ್ನು ತಪ್ಪಾಗಿ ಊಹಿಸಿದ್ದರು. ಹೀಗಾಗಿ ರಾಶಿಕಾ ನಾಮಿನೇಟ್ ಆಗಿದ್ದಾರೆ. ಆ ಬಳಿಕ ಗಿಲ್ಲಿ ಅವರು ನಿಮ್ಮ ಹೆಸರು ತೆಗೆದುಕೊಂಡಿಲ್ಲ ಎಂಬುದನ್ನು ಅನೇಕರು ಹೇಳಿದರು. ಇದನ್ನು ಕೇಳಿ ರಾಶಿಕಾ ಶಾಕ್ ಆದರು.

ಇದನ್ನೂ ಓದಿ: ಗಿಲ್ಲಿ ನಟಿಸಿದ್ರೂ ‘ಡೆವಿಲ್’ ಟ್ರೇಲರ್​​ನ ಬಿಗ್ ಬಾಸ್​​ನಲ್ಲಿ ಏಕೆ ಹಾಕಿಲ್ಲ? ಬೇರೆಯದೇ ಕಾರಣ ಕೊಟ್ಟ ರಜತ್

ಈ ವಾರ ಬಿಗ್ ಬಾಸ್ ಮನೆಯಲ್ಲಿ ಫ್ಯಾಮಿಲಿ ವೀಕ್ ಇರಲಿದೆ. ಸ್ಪರ್ಧಿಗಳ ಮನೆ ಸದಸ್ಯರು ಬಿಗ್ ಬಾಸ್ ಮನೆಗೆ ಬರುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ – Kannada News | Gilli Nata Stun After Rashika Mother Sharp Talk In Bigg Boss Kannada

ಈ ವಾರ ಬಿಗ್ ಬಾಸ್ ಮನೆಯಲ್ಲಿ ಫ್ಯಾಮಿಲಿ ವೀಕ್. ಸೂರಜ್ ಹಾಗೂ ರಾಶಿಕಾ ಅವರ ಕುಟುಂಬದವರು ಮೊದಲು ದಿನವೇ ಭಾಗಿ ಆಗಿದ್ದಾರೆ. ಇದು ಸಾಕಷ್ಟು ಭಾವುಕ ಕ್ಷಣಕ್ಕೆ ಸಾಕ್ಷಿ ಆಯಿತು. ರಾಶಿಕಾ ಅವರು ಕುಟುಂಬದವರನ್ನು ನೋಡಿ ಕಣ್ಣಿರು ಹಾಕಿದರು. ಸೂರಜ್ ಅವರು ತಾಯಿಗೋಸ್ಕರ ಅಡುಗೆ ಮಾಡಿ ತೆಗೆದುಕೊಂಡು ಹೋದರು. ಆ ಬಗ್ಗೆ ಇಲ್ಲಿದೆ ವಿವರ. ಗಿಲ್ಲಿ ನಟ ಹಾಗೂ ಕಾವ್ಯಾ ಕುಟುಂಬ ಬರೋದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ರೈಲಿನ ಶೌಚಾಲಯದ ಪಕ್ಕ ಕುಳಿತು ಕುಸ್ತಿ ಚಾಂಪಿಯನ್​ಶಿಪ್​ಗೆ ತೆರಳಿದ ಕ್ರೀಡಾ ಪಟುಗಳು – Kannada News | Odisha Wrestlers Allege Poor Travel Conditions En Route to Championship

ಒಡಿಶಾ, ಡಿಸೆಂಬರ್ 23: ಒಡಿಶಾದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. 69ನೇ ರಾಷ್ಟ್ರೀಯ ಶಾಲಾ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಸ್ಪರ್ಧಿಸಲು ಉತ್ತರ ಪ್ರದೇಶಕ್ಕೆ ಪ್ರಯಾಣಿಸಬೇಕಿದ್ದ ಒಡಿಶಾದ 18 ಯುವ ಕುಸ್ತಿಪಟುಗಳು ಟಾಯ್ಲೆಟ್ ಪಕ್ಕ ಕುಳಿತು ಪ್ರಯಾಣಿಸಿದ್ದಾರೆ. ರಾಜ್ಯ ಶಾಲಾ ಮತ್ತು ಸಾಮೂಹಿಕ ಶಿಕ್ಷಣ ಇಲಾಖೆಯ ಆಡಳಿತಾತ್ಮಕ ಲೋಪಗಳಿಂದಾಗಿ ಟಾಯ್ಲೆಟ್ ಪಕ್ಕ ಕುಳಿತು ಪ್ರಯಾಣಿಸುವಂತಾಯಿತು. 10 ವಿದ್ಯಾರ್ಥಿಗಳು ಮತ್ತು ಎಂಟು ವಿದ್ಯಾರ್ಥಿನಿಯರನ್ನು ಒಳಗೊಂಡ ತಂಡವನ್ನು ರೈಲ್ವೆ ಟಿಕೆಟ್‌ಗಳಿಲ್ಲದೆ ರಾಷ್ಟ್ರೀಯ ಮಟ್ಟದ ಪಂದ್ಯಕ್ಕೆ ಕಳುಹಿಸಲಾಗಿದ್ದು, ಅವರನ್ನು ಸಾಮಾನ್ಯ ವಿಭಾಗಗಳಲ್ಲಿ ಪ್ರಯಾಣಿಸುವಂತೆ ಒತ್ತಾಯಿಸಲಾಗಿದೆ.

ಆರೋಪಗಳ ಪ್ರಕಾರ, ಚಳಿಗಾಲದ ತೀವ್ರ ಚಳಿಯಲ್ಲಿ ಕ್ರೀಡಾಪಟುಗಳನ್ನು ರೈಲು ಶೌಚಾಲಯಗಳ ಬಳಿ ಕೂರಿಸಲಾಗಿದೆ. ಇದು ಅವರ ಸುರಕ್ಷತೆ, ಆರೋಗ್ಯದ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ. ಕೇವಲ ಹೋಗುವಾಗ ಮಾತ್ರವಲ್ಲ ಅಲ್ಲಿಂದ ಬರುವಾಗಲೂ ಇದೇ ಪರಿಸ್ಥಿತಿಯನ್ನು ಎದುರಿಸಿದ್ದಾರೆ. ಪ್ರಯಾಣದ ಎರಡೂ ಹಂತಗಳಿಗೆ ಯಾವುದೇ ದೃಢೀಕೃತ ಟಿಕೆಟ್‌ಗಳನ್ನು ವ್ಯವಸ್ಥೆ ಮಾಡಲಾಗಿಲ್ಲ. ರೈಲು ಶೌಚಾಲಯಗಳ ಬಳಿ ಕುಳಿತಿರುವ ಕ್ರೀಡಾಪಟುಗಳನ್ನು ತೋರಿಸುವ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕಾಂಗ್ರೆಸ್ ಹೈಕಮಾಂಡೇ ‘ಕೈ’ ಚೆಲ್ಲಿ ಕೂತಿತಾ? ಮಲ್ಲಿಕಾರ್ಜುನ ಖರ್ಗೆ ‘ಲೋಕಲ್ ಸೂತ್ರ’ವನ್ನು ಸುತಾರಂ ಒಪ್ಪದ ಸಿಎಂ ಸಿದ್ದರಾಮಯ್ಯ! – Kannada News | Congress High Command Sidelined? CM Siddaramaiah Firmly Rejects Mallikarjun Kharge’s Local Formula

ಬೆಂಗಳೂರು, ಡಿಸೆಂಬರ್ 23: ಕರ್ನಾಟಕ ಕಾಂಗ್ರೆಸ್ (Congress) ನಾಯಕತ್ವ ಬದಲಾವಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್​​ ನಾಯಕರಲ್ಲಿ ಯಾರನ್ನೇ ಕೇಳಿದರೂ ಎಲ್ಲರ ಬೆರಳು ಸೀದಾ ಹೈಕಮಾಂಡ್ ಕಡೆಗೆ ತಿರುಗುತ್ತದೆ. ಆದರೆ ಗೊಂದಲ ಬಗೆಹರಿಸಿಬೇಕಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಅರ್ಥಾತ್ ಹೈಕಮಾಂಡ್​​ನ ಮುಖ್ಯ ನಾಯಕನೇ ‘ಗೊಂದಲ ಸೃಷ್ಟಿ ಮಾಡಿದ್ದು ಹೈಕಮಾಂಡ್ ಅಲ್ಲ. ಅಲ್ಲಿ ಸ್ಥಳೀಯವಾಗಿ ಏನು ಆಗಿದೆಯೋ ಅಲ್ಲೇ ಸೆಟಲ್ ಮಾಡಿಕೊಳ್ಳಿ’ ಎಂದಿದ್ದಾರೆ.

ಆದರೆ ಖರ್ಗೆ ಅವರ ಲೋಕಲ್ ಸೂತ್ರವನ್ನು ಸಿದ್ದರಾಮಯ್ಯ ಸುತರಾಂ ಒಪ್ಪುವ ಹಾಗೆ ಕಾಣಿಸುತ್ತಿಲ್ಲ. ಡಿಕೆ ಶಿವಕುಮಾರ್ ನಿವಾಸಕ್ಕೆ ಬ್ರೇಕ್​ಫಾಸ್ಟ್ ಮೀಟಿಂಗ್​ಗೆ ಬಂದಂದಿನಿಂದ ಅವರು ಹೈಕಮಾಂಡ್ ನಾಯಕರು, ರಾಹುಲ್ ಗಾಂಧಿ ಏನು ನಿರ್ಧಾರ ತೆಗೆದುಕೊಳ್ಳುತ್ತಾರೆಯೋ ಅದಕ್ಕೆ ಬದ್ಧ ಎಂದು ಹೇಳುತ್ತಲೇ ಇದ್ದಾರೆ.

ಅದಾದ ಬಳಿಕ ನಾಯಕತ್ವ ಬದಲಾವಣೆ ವಿಚಾರದಲ್ಲಿ ಏನೆಲ್ಲ ಗೊಂದಲ ಎದ್ದಿದೆ. ಸಿದ್ದರಾಮಯ್ಯ ಬಣ ಹಾಗೂ ಡಿಕೆ ಬಣದ ಆಡಿದ ಮಾತುಗಳೇನು ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದರೆ, ಹೈಕಮಾಂಡ್​ನ ಭಾಗವೇ ಆಗಿರುವ ಮಲ್ಲಿಕಾರ್ಜುನ ಖರ್ಗೆ ಭಾನುವಾರ, ನೀವು ಸೃಷ್ಟಿಮಾಡಿರುವ ಸಮಸ್ಯೆಯನ್ನು ನೀವೇ ಬಗೆಹರಿಸಿಕೊಳ್ಳಿ ಎಂದಿದ್ದಾರೆ. ಆದರೆ, ಸಿದ್ದರಾಮಯ್ಯ ಮತ್ತೆ ಮಾತನಾಡಿ, ರಾಹುಲ್ ಗಾಂಧಿಯೇ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಮತ್ತೊಮ್ಮೆ ದಿಲ್ಲಿಗೆ ತಮ್ಮ ಚೆಂಡು ಎಸೆದಿದ್ದಾರೆ.

ಇನ್ನು ಡಿಸಿಎಂ ಡಿಕೆ ಶಿವಕುಮಾರ್ ಹಿಂದೆ ದೆಹಲಿಗೆ ಹೋಗಿದ್ದಾಗ, ‘ನಾನು ಪಕ್ಷ ಕಟ್ಟಿದ್ದೇನೆ, ಬ್ಲ್ಯಾಕ್ ಮೇಲ್ ಮಾಡಲ್ಲ’ ಎಂದಿದ್ದರು. ಇದಕ್ಕೆ ಸೋಮವಾರ ಪ್ರತಿಕ್ರಿಯೆ ನೀಡಿದ್ದ ಖರ್ಗೆ, ನಾನೇ ಪಕ್ಷ ಕಟ್ಟಿದೆ, ಒಬ್ಬರಿಂದ ಪಕ್ಷ ಎಂಬುದನ್ನು ಬಿಡಬೇಕು ಎಂದಿದ್ದಾರೆ. ಖರ್ಗೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದ್ದಾರೆ. ಖರ್ಗೆ ಅವರು ಹೇಳಿದ್ದು ‘ಎಲ್ಲರೂ ಒಪ್ಪಬೇಕಿರುವ ವಿಚಾರ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದು ನಾನೇ ಎಂದ ಡಿಕೆ: ಸಿದ್ದರಾಮಯ್ಯ ಕೌಂಟರ್

ಡಿಸಿಎಂ ಡಿಕೆ ಶಿವಕುಮಾರ್ ಶನಿವಾರ ರಾತ್ರಿ ಸಿಎಂ ಆಪ್ತ ಕೆಎನ್ ರಾಜಣ್ಣ ನಿವಾಸಕ್ಕೆ ಹೋಗಿ ಭೇಟಿಯಾಗಿದ್ದರು. ನಂತರ ಸೋಮವಾರ ಡಿಕೆ ಶಿವಕುಮಾರ್ ಇದ್ದ ಕಡೆಗೇ ಬಂದು ರಾಜಣ್ಣ ಭೇಟಿಯಾಗಿದ್ದಾರೆ. ಈ ಮಧ್ಯೆ, ಸೋಮವಾರ ಮಾತನಾಡಿದ ಡಿಕೆ ಶಿವಕುಮಾರ್, ರಾಜಣ್ಣಗೆ ಸಿದ್ದರಾಮಯ್ಯಗಿಂತ ನಾನೇ ಆಪ್ತ. ಅವರನ್ನ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದೇ ನಾನು ಎಂದಿದ್ದಾರೆ. ಇದಕ್ಕೆ ಉತ್ತರಿಸಿರುವ ಸಿದ್ದರಾಮಯ್ಯ, ಅಧ್ಯಕ್ಷ ಮಾಡಿದ್ದು ಅಂದಿನ ಸಿಎಂ ಎಸ್​​ಎಂ ಕೃಷ್ಣ ಎಂದಿದ್ದಾರೆ.

ಇಷ್ಟೇ ಅಲ್ಲದೆ ಸಂಕ್ರಾಂತಿ ಕ್ರಾಂತಿ ವಿಚಾರವಾಗಿಯೂ ಮಾತನಾಡಿರುವ ಸಿಎಂ, ಅದೆಲ್ಲ ಮುಗಿದು ಹೋಗಿದೆ. ಏನೇ ಇದ್ದರೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಪುನರುಚ್ಚರಿಸಿದ್ದಾರೆ. ಆಡಳಿತ ಪಕ್ಷದ ಈ ಗೊಂದಲವೇ ವಿಪಕ್ಷ ನಾಯಕರಿಗೆ ಅಸ್ತ್ರವಾಗಿದೆ.

ಇದನ್ನೂ ಓದಿ: ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ

ಮಲ್ಲಿಕಾರ್ಜುನ ಖರ್ಗೆ ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ನಾಯಕತ್ವ ಬದಲಾವಣೆಯ ಗೊಂದಲ ರಾಜ್ಯ ನಾಯಕರ ಸೃಷ್ಟಿ ಎಂದಿದ್ದಾರೆ. ಅಂದರೆ, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರಿಂದಲೇ ಗೊಂದಲ ಸೃಷ್ಟಿಯಾಗಿದೆ ಎಂಬುದು ಅರ್ಥ. ಆದರೆ ಈ ಗೊಂದಲ ಬಗೆಹರಿಸಲು ಹೈಕಮಾಂಡ್ ಯಾಕೆ ಇನ್ನೂ ಮುಂದಾಗುತ್ತಿಲ್ಲ ಎಂಬ ಅನುಮಾನ ಹುಟ್ಟಿದೆ. ಸಿಎಂ ಸ್ಥಾನದ ವಿಚಾರದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಇಬ್ಬರೇ ಕೂತು ಬಗೆಹರಿಸಿಕೊಳ್ಳುವ ಪರಿಸ್ಥಿತಿ ಇದೆಯಾ? ಅಲ್ಲಿಗೆ, ಅತ್ತ ಬದಲಾವಣೆಯೂ ಇಲ್ಲ, ಇತ್ತ ಪರಿಹಾರವೂ ಇಲ್ಲ ಎಂಬಂತಾಗಿದೆ. ಗೊಂದಲ ಬಗೆಹರಿಸಬೇಕಿದ್ದ ಹೈಕಮಾಂಡೇ ತಾವು ಆಟಕ್ಕಿಲ್ಲ ಎಂಬಂತೆ ವರ್ತಿಸುತ್ತಿರುವುದು ಸಮಸ್ಯೆಯ ಗಂಭೀರತೆಯನ್ನು ಹೆಚ್ಚಿಸುವ ಸುಳಿವು ನೀಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Horoscope Today 23 December: ಇಂದು ಈ ರಾಶಿಯವರಿಂದ ಉದ್ಯೋಗವನ್ನು ಕಳೆದುಕೊಳ್ಳುವ ಸ್ಥಿತಿ ಬರಲಿದೆ – Kannada News | Today’s Rashi Bhavishya: Aries, Taurus, Gemini Auspicious Timings

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಶುಕ್ಲ ಪಕ್ಷದ ತೃತೀಯಾ ತಿಥಿ ಮಂಗಳವಾರ ಆತಂಕ, ಇಬ್ಬಂದಿತನ, ಬೇಸರ, ಅಪಪ್ರಚಾರ, ವಿಶ್ವಾಸಘಾಸಿ, ಸಹಾಯ, ಹಗುರ ಮಾತು, ಧನಾಗಮನ ಇವೆಲ್ಲ ಇಂದಿನ ವಿಶೇಷ.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಮೂಲಾ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಉತ್ತರಾಷಾಢ, ಯೋಗ : ವ್ಯಾಘಾತ, ಕರಣ : ಗರಜ, ಸೂರ್ಯೋದಯ – 06 – 46 am, ಸೂರ್ಯಾಸ್ತ – 06 – 01 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15:12 – 16:37, ಯಮಗಂಡ ಕಾಲ 09:35 – 10:59, ಗುಳಿಕ ಕಾಲ 12:24 – 13:48

ಮೇಷ ರಾಶಿ :

ಶತ್ರಗಳು ನಿಮ್ಮ ಕರುಣೆಯಿಂದಲೇ ಶಾಂತಗೊಳ್ಳಬಹುದು. ಭಾವನೆ ಮತ್ತು ವಿವೇಕ ಸಮತೋಲನದಲ್ಲಿದ್ದರೆ ದಿನ ಸುಂದರವಾಗಿ ಸಾಗುತ್ತದೆ. ಬರಬೇಕಾದ ಹಣವನ್ನು ನೀವು ಪಡೆದುಕೊಳ್ಳುವಿರಿ. ‌ನಿಮ್ಮನ್ನು ಅಪಹಾಸ್ಯ ಮಾಡುವವರಿಗೆ ಪ್ರತ್ಯುತ್ತರ ನೀಡುವಿರಿ. ಕಾನೂನಿಗೆ ಸಂಬಂಧಿಸಿದಂತೆ ಹೆಚ್ಚಿನ ಓಡಾಟವಾಗಬಹುದು. ಬರಬೇಕಾದ ಹಣವನ್ನು ನೀವು ಬಹಳ ಶ್ರಮದಿಂದ ಪಡೆಯಬೇಕಾಗಬಹುದು. ನಿಮ್ಮ ಇಂದಿನ ಕೆಲಸಗಳು ಅಡೆತಡೆಯ ನಡೆವೆಯೂ ಮಾಡಿಕೊಳ್ಳುವಿರಿ. ಪರರ ವಸ್ತುವನ್ನು ಬಳಸಿ, ಹಿಂದಿರುಗಿಸಿ. ವಾಹನ ಖರೀದಿಗೆ ಹಣವನ್ನು ಹೊಂದಿಸುವುದು ಸವಾಲಾಗಬಹುದು. ಉದ್ಯಮದಲ್ಲಿ ಅನುಭವವೇ ನಿಮ್ಮ ಮಾರ್ಗದರ್ಶಿ. ಹಣದ ವಿಷಯದಲ್ಲಿ ಎಚ್ಚರಿಕೆ ಸೂಚನೆ. ವಿದೇಶ ಪ್ರಯಾಣ ಕನಸಿನ ಹಂತದಲ್ಲೇ ಉಳಿಯುವುದು. ಕೆಲವು ಭಾವ ಭಿತ್ತಿಯನ್ನು ಒಡೆದರೆ ಮಾರ್ಗ ಸುಲಭ. ನಿಮಗೆ ಸಂಬಂಧವಿಲ್ಲದೇ ಇರುವ ವಿಚಾರಕ್ಕೆ ಮಧ್ಯ ಪ್ರವೇಶ ಬೇಡ. ನಿಮ್ಮ ಬುದ್ಧಿಯು ನಕಾರಾತ್ಮಕ ವಿಚಾರವನ್ನೇ ಯೋಚಿಸುವುದು. ಬಂಧುಗಳ‌ ಜೊತೆ ದೂರ ಪ್ರಯಾಣ ಮಾಡುವಿರಿ.

ವೃಷಭ ರಾಶಿ :

ವಿರೋಧಿಗಳು ಅಜ್ಞಾತವಾಗಿ ಸಹಕಾರ ತೋರಬಹುದು. ತೆರೆದ ಮನಸ್ಸು ಇಂದು ನಿಮಗೆ ಉತ್ಸಾಹವನ್ನೂ ಸಂತೋಷವನ್ನೂ ಕೊಡುತ್ತದೆ. ಸತ್ಯದ ನಡುವೆ ಇರುವ ಸುಳ್ಳಿಗೆ ಸತ್ಯದಷ್ಟೇ ಬೆಲೆ. ಅದನ್ನೇ ಮುಂದುವರಿಸಿದರೆ ನಿಮಗೂ ಬೆಲೆ ಇರದು. ಸಮಯದ ಹೊಂದಾಣಿಕೆಯಿಂದ ಕಾರ್ಯವನ್ನು ಸಾಧಿಸಬಹುದು. ನಿಮ್ಮ ಒರಟಾದ ಮಾತು ಇನ್ನೊಬ್ಬರಿಗೆ ಬೇಸರವನ್ನು ಕೊಡುವುದು. ವಸ್ತುಗಳ ಖರೀದಿಗೆ ಹಣವನ್ನು ಖರ್ಚು ಮಾಡಬಹುದು. ಪರೀಕ್ಷಿಸಿ ಖರೀದಿಸಿ. ವಿರೋಧಿಗಳು ಊಹಿಸಿದಂತೆ ನಿಮ್ಮ ಆಲೋಚ‌ನೆ ಇರುವುದು. ಏಕಾಂತದಲ್ಲಿ ಇರುವುದು ನಿಮಗೆ ಇಷ್ಟವಾಗುವುದು. ಸಹೋದರಿಯ ನಡುವೆ ವಾಗ್ವಾದ ಮಾಡುವಿರಿ. ವಿಭಿನ್ನ ಆಲೋಚನೆಗಳಿಂದ ನೀವು ಇತರರ ಗಮನ ಸೆಳೆಯುವಿರಿ. ಉದ್ಯಮದಲ್ಲಿ ಹೊಸ ವಿಧಾನ ಪ್ರಯೋಗಿಸಲು ಮನಸ್ಸಾಗುವುದು. ಸ್ನೇಹದ ಮೂಲಕ ವಿದೇಶ ಸಂಪರ್ಕ ನಡೆಯುವುದು. ಒತ್ತಾಯಕ್ಕೆ ಮಣಿದು ಇಷ್ಟವಿಲ್ಲದ ಕೆಲಸವನ್ನು ಮಾಡುವಿರಿ. ಆತ್ಮಪ್ರಶಂಸೆಯಿಂದ ಸೋಲಾಗುವುದು. ನಿಮ್ಮ ಬಗ್ಗೆ ಹಿಂದಿನಿಂದ‌ ಮಾತನಾಡಿಕೊಳ್ಳುವುದು ಗೊತ್ತಾದೀತು.

ಮಿಥುನ ರಾಶಿ :

ವಿದೇಶ ಪ್ರಯಾಣದ ವಿಷಯದಲ್ಲಿ ಕಚೇರಿಯಿಂದ ವಿಳಂಬ. ಶತ್ರುಕಾಟದಲ್ಲಿ ನಿಯಮ ಮತ್ತು ಶಿಸ್ತು ಜಯ ತರುತ್ತದೆ. ತಪ್ಪಿಸಿಕೊಳ್ಳುವ ಪ್ರಯತ್ನಕ್ಕಿಂತ ಎದುರಿಸುವ ಧೈರ್ಯ ಒಳಿತು. ಶಿಸ್ತನ್ನು ಬಿಡದೇ ಪಾಲಿಸುವುದು ನಿಮಗೆ ಗೌರವವನ್ನು ತಂದು ಕೊಡುವುದು. ಅಲಂಕಾರಿಕ ವಸ್ತುಗಳ ಖರೀದಿಯಿಂದ ಲಾಭವಾಗಲಿದೆ. ಹಲವು ಪ್ರಯತ್ನದ ಬಳಿಕ ಮಾನಸಿಕ ಕಿರಿಕಿರಿಯನ್ನು ನೀವು ದೂರ ಮಾಡಿಕೊಳ್ಳುವಿರಿ. ನಿರೀಕ್ಷಿತ ಸ್ಥಾನವನ್ನು ಪಡೆದುಕೊಳ್ಳುವ ಸಾಧ್ಯತೆ ಇದೆ. ಸಹೋದ್ಯೋಗಿಗಳ ಸಹಕಾರವು ಸಿಗಬಹುದು. ನಿಮ್ಮ ವಿದ್ಯಾಭ್ಯಾಸವನ್ನು ಕಂಡು ಆಚ್ವರಿಯಾಗಬಹುದು. ಪ್ರತಿಷ್ಠೆಗೋಸ್ಕರ ಹೊಣೆಗಾರಿಕೆಯನ್ನು ಹೆಚ್ಚು ಮಾಡಿಕೊಳ್ಳುವಿರಿ. ಉದ್ಯಮದಲ್ಲೂ ಕೆಲಸದ ಒತ್ತಡ ಜಾಸ್ತಿ. ಸಾಲ ಇಂದು ಅತ್ಯವಶ್ಯಕವಾಗಬಹುದು. ಪ್ರಯೋಜನವಿಲ್ಲದ ಮಾತುಕತೆಯಲ್ಲಿ ದಿನ‌ವನ್ನು ಕಳಯುವಿರಿ.‌ ನಿಮ್ಮದೇ ವಸ್ತುವಾದರೂ ನಿಮಗೆ ಬೇಕಾದ ಸಮಯಕ್ಕೆ ಲಭ್ಯವಾಗದು. ವೇತನವು ಹೆಚ್ಚಾಗುವ ಸಾಧ್ಯತೆ ಇದೆ.

ಕರ್ಕಾಟಕ ರಾಶಿ :

ಹಣಕಾಸಿನಲ್ಲಿ ಸುಧಾರಣೆ ಸೂಚನೆ ತಳ್ಳಿಹಾಕುವಂತಿಲ್ಲ. ವಿದೇಶದ ಗಮನಕ್ಕೆ ಹಿರಿಯರ ನೆರವು ಸಾಧ್ಯ. ವಿರೋಧಿಗಳೊಂದಿಗೆ ಸಂಘರ್ಷಕ್ಕಿಂತ ಸಂಧಾನ ಸರಳ ಮತ್ತು ಲಾಭ. ಸಂದೇಹದಿಂದ ಮನಸ್ಸು ಹಾಳಾಗುತ್ತದೆ. ಹಾಳಾದ ಮನಸ್ಸಿನಿಂದ ಕೆಲಸವೂ ಹಾಳು. ಗ್ರಾಹಕರಿಗೆ ಅನುಕೂಲವಾಗುವಂತೆ ನಡೆದುಕೊಳ್ಳುವಿರಿ. ಸಾಹಿತ್ಯ ಕ್ಷೇತ್ರದಲ್ಲಿ ನಿಮ್ಮನ್ನು ಗುರುತಿಸುವರು. ನಿಮ್ಮ‌ ವರ್ತನೆಯನ್ನು ಬದಲಿಸಿಕೊಳ್ಳಬೇಕು ಎನಿಸುವುದು. ಸ್ಪರ್ಧೆಯಲ್ಲಿ ಸೋಲನ್ನು ಒಪ್ಪಿಕೊಳ್ಳಲಾರಿರಿ. ಭೂಮಿಯ ವ್ಯವಹಾರವು ಪಾಲುದಾರರ ಸಹಕಾರದಿಂದ ಸುಗಮವಾಗಿ ಸಾಗಲಿದೆ. ಆರ್ಥಿಕ ಸಮಸ್ಯೆಯನ್ನು ಹೆಚ್ಚಿಸಿಕೊಳ್ಳುವಿರಿ. ಮಕ್ಕಳ ವಿದ್ಯಾಭ್ಯಾಸಕ್ಕೆ ಹಣವನ್ನು ಹಿಂದಿಸುವುದು ಕಷ್ಟವಾದೀತು. ಹೊಸ ದಿಕ್ಕು ಮನಸ್ಸಿನಲ್ಲಿ ಮೂಡುತ್ತದೆ. ಉದ್ಯಮದಲ್ಲಿ ವಿಸ್ತರಣೆ ಅಥವಾ ಬದಲಾವಣೆಯ ಯೋಚನೆ ಆರಂಭವಾಗಲಿದೆ. ಇಂದಿನ ಮಾತು ನಿಮ್ಮ ಮುಂದಿನ ಹೆಜ್ಜೆಗೆ ದಾರಿ ತೋರಿಸುತ್ತದೆ.

ಸಿಂಹ ರಾಶಿ :

ವಿದೇಶ ಪ್ರಯಾಣದ ಯತ್ನ ನಿಮ್ಮಲ್ಲಿ ಅನೇಕ ಗೊಂದಲವನ್ನು ಸೃಷ್ಟಿ ಮಾಡುವುದು. ಶತ್ರುಕಾಟದಲ್ಲಿ ಸತ್ಯವೇ ನಿಮ್ಮ ಆಯುಧವಾಗಿರಲಿ. ಯಾವುದೇ ತೀರ್ಮಾನಕ್ಕೆ ಮುನ್ನ ಎರಡು ಬಾರಿ ಯೋಚನೆ ಅಗತ್ಯ. ಸಿಟ್ಟನ್ನು ಮಾಡಿಕೊಳ್ಳುವುದು ಸರಿ ಎನಿಸಿದರೂ ಇದರಿಂದ ಆಗುವ ತೊಂದರೆಯಿಂದ ಸುಮ್ಮನಿರುವುದೇ ಒಳ್ಳೆಯದು. ಪ್ರವಾಸದಲ್ಲಿ ಇರುವವರಿಗೆ ಆಹಾರದ ವ್ಯತ್ಯಾಸದಿಂದ ಕಷ್ಟವಾಗುವುದು. ಸಂಶೋಧನೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಕಾರ್ಯದಲ್ಲಿ ಪ್ರವೃತ್ತರಾಗುವರು. ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಯಶಸ್ಸು ಸಿಗುವುದು. ಸಾಲದ ವಿಷಯದಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ಜಾರಿಗೆ ತರುವಿರಿ. ವಿದೇಶ ಪ್ರಯಾಣ ತಾತ್ಕಾಲಿಕವಾಗಿ ನಿಲ್ಲುತ್ತದೆ. ಶತ್ರುಗಳು ನಿಮ್ಮ ದೃಷ್ಟಿಯಿಂದಲೇ ಅಲುಗಾಡುತ್ತಾರೆ. ವೃತ್ತಿಯ ಕೆಲಸಗಳ ನಡುವೆ ಮನೆಯ ಕೆಲಸವೂ ನಿಮಗೆ ಕಷ್ಟವಾದೀತು‌. ಪರಿಶ್ರಮವಿಲ್ಲದೇ ಆದಾಯವು ಸಿಗಲಿ ಎನ್ನುವ ಮನೋಭಾವ ಇರಲಿದೆ. ಮೇಲಧಿಕಾರಿಗಳ ಹೊಸ ಯೋಜನೆಯನ್ನು ನಿರ್ವಹಿಸಲು ನಿಮ್ಮ ತಲೆಗೆ ಬರುವುದು.

ಕನ್ಯಾ ರಾಶಿ :

ಭಾವನೆಗಳನ್ನು ಕದಡುವ ಪರಿಸ್ಥಿತಿ ಎದುರಾಗಬಹುದು. ಉದ್ಯಮದಲ್ಲಿ ಮಧ್ಯಸ್ಥಿಕೆ ಪಾತ್ರ ವಹಿಸಬೇಕಾಗುತ್ತದೆ. ಹಣಕಾಸು ವ್ಯವಹಾರದಲ್ಲಿ ನ್ಯಾಯ ಮುಖ್ಯ. ನಿಮ್ಮವರೇ ನಿಮಗೆ ಶತ್ರುಗಳಂತೆ ಕಾಣಬಹುದು. ಇಂದು ನಿಮ್ಮ ಸಹಾಯಕರೇ ನಿಮಗೆ ತೊಂದರೆ ಕೊಟ್ಟಾರು. ಬಂಧುಗಳ ಆಶ್ರಯದಲ್ಲಿ ಇಂದು ನೀವು ಇರಬೇಕಾದೀತು. ಸಂಗಾತಿಗೆ ನೀವು ಉತ್ತಮ ಕೆಲಸವು ಕೊಡಿಸುವಿರಿ. ಕಛೇರಿಯಲ್ಲಿ ನಿಮ್ಮ ಕಾರ್ಯವನ್ನು ಪ್ರಶಂಸಿಸಬಹುದು. ಕೆಟ್ಟ ಆಲೋಚನೆಗಳು ಬಂದರೂ ಅದನ್ನು ದೂರ ಮಾಡಿಕೊಳ್ಳುವ ತಂತ್ರವನ್ನು ತಿಳಿಯಿರಿ. ಹೂಡಿಕೆಯ ವಿಚಾರದಲ್ಲಿ ಯಾರಾದರೂ ಒತ್ತಾಯ ಮಾಡಬಹುದು. ದೂರದಲ್ಲಿ ಉದ್ಯೋಗ ಮಾಡುತ್ತಿರುವವರಿಗೆ ಮನೆಯ ನೆನಪಾಗಬಹುದು. ಆಲಂಕಾರಿಕ ಉದ್ಯಮವನ್ನು ಮಾಡಿದರೆ ಆದಾಯ ಸಿಗಲಿದೆ. ರಹಸ್ಯವಾಗಿ ರೂಪಿಸಿದ ಯೋಜನೆ ಫಲ ಕೊಡುತ್ತದೆ. ಉದ್ಯಮದಲ್ಲಿ ಎಲ್ಲರಿಗೂ ನಿಮ್ಮ ಉದ್ದೇಶ ತಿಳಿಯಬೇಕಿಲ್ಲ. ತಂತ್ರ ಮತ್ತು ಸಹನೆಯ ಸಂಯೋಜನೆ ಜಯ ತರುತ್ತದೆ. ವಾಸ್ತವದಲ್ಲಿ ಜೀವಿಸುವುದನ್ನು ಕಲಿಯುವಿರಿ.

ತುಲಾ ರಾಶಿ :

ಸೂಕ್ಷ್ಮ ಗಮನವೇ ಇಂದು ಯಶಸ್ಸಿನ ಕೀಲಿಕೈ. ಉದ್ಯಮದಲ್ಲಿ ಸಣ್ಣ ತಪ್ಪು ದೊಡ್ಡ ಪರಿಣಾಮ ತರಬಹುದು. ಸಾಲದ ವಿಷಯದಲ್ಲಿ ಲೆಕ್ಕಾಚಾರ ಅಗತ್ಯ. ವಿದೇಶ ಸಂಪರ್ಕ ತಾಂತ್ರಿಕ ಕಾರಣಕ್ಕೆ ತಡೆ. ಇಂದು ನಿಮಗೆ ನಿಮ್ಮವರುಲೇ ಬಯಸದೇ ಇದ್ದರೂ ಸಹಾಯ ಮಾಡುವವರಿದ್ದಾರೆ. ವಕೀಲವೃತ್ತಿಯವರಿಗೆ ಹೆಚ್ಚಿನ ಕಾರ್ಯವು ಬರಲಿದ್ದು ನಿಭಾಯಿಸುವ ಕಲೆಯನ್ನು ಕಲಿತಿರುವಿರಿ. ನಿಮ್ಮ ಪ್ರೀತಿ ಪಾತ್ರರು ನಿಮಗೆ ಉಡುಗೊರೆಯನ್ನು ಕೊಡಬಹುದು. ಸಂಗಾತಿಯ ಪ್ರೀತಿಯಿಂದ ಖುಷಿಯಾಗಲಿದೆ.‌ ಮನಸ್ಸಿನಲ್ಲಿ ಹತಾಶೆ, ಗೊಂದಲಗಳಿಂದ ಏನನ್ನೂ ಮಾಡಲಾಗದ ಸ್ಥಿತಿಯು ಬರಲಿದೆ. ಹೊಸ ವಸ್ತುಗಳ ಖರೀದಿಗೆ ಉತ್ಸಾಹವು ಅಧಿಕವಾಗಿರಲಿದೆ. ಯಾರಾದರೂ ನಿಮಗೆ ಬೆಂಬಲವಾಗಬೇಕಿದೆ. ಮಾತನ್ನೂ ವಿರೋಧಿಗಳ ಟೀಕೆ ನಿಮ್ಮನ್ನು ಇನ್ನಷ್ಟು ಜಾಗ್ರತೆಯನ್ನಾಗಿಸುತ್ತದೆ. ಶಿಸ್ತು ಪಾಲಿಸಿದರೆ ಈ ದಿನ ನಿಮ್ಮ ಪರವಾಗಿರುವುದು. ನಿಮ್ಮ ಎಲ್ಲ ನಿರ್ಧಾರಗಳೂ ನಿಮಗೇ ನಕಾರಾತ್ಮಕವಾಗಿ ಇರುವಂತೆ ತೋರುವುದು. ನಿಮಗೆ ಸುಮ್ಮನೇ ಕುಳಿತರೇ ಹತ್ತಾರು ಆಲೋಚನೆಗಳಿಂದ ನಿಮ್ಮ ಮನಸ್ಸು ದುರ್ಬಲವಾಗುವುದು.‌

ವೃಶ್ಚಿಕ ರಾಶಿ :

ಉದ್ಯಮದಲ್ಲಿ ಅಧಿಕಾರದ ಹೊಣೆ ಹೆಚ್ಚಾಗುತ್ತದೆ. ಹಣದ ವಿಚಾರದಲ್ಲಿ ಗೌರವ ಬರುವಂತೆ ಇರಲಿ. ವಿದೇಶ ಸಂಬಂಧದಿಂದ ಮಾನ್ಯತೆ ಸಿಗಬಹುದು. ಶತ್ರುಗಳು ನಿಮ್ಮ ಆತ್ಮವಿಶ್ವಾಸಕ್ಕೆ ಹೆದರುತ್ತಾರೆ. ಶಿಕ್ಷಣಕ್ಷೇತ್ರದಲ್ಲಿ ಯಶಸ್ಸು ಸಿಗುವುದು. ಧಾರ್ಮಿಕ ಮುಖಂಡರಿಗೆ ಅಪವಾದ ಬರುವ ಸಾಧ್ಯತೆ ಇದೆ. ಸಕಾಲಕ್ಕೆ ಆರ್ಥಿಕ ನೆರವು ಸಿಗಲಿದ್ದು ಸ್ವಲ್ಪ ನೆಮ್ಮದಿ ಸಿಗುವುದು. ಸಾಲದ ಕಾರಣಕ್ಕೆ ತಲೆ ಮರೆಸಿಕೊಳ್ಳಬಹುದು. ದಾಂಪತ್ಯ ಜೀವನದಲ್ಲಿ ಕೆಲವು ಅನಿರೀಕ್ಷಿತ ತಿರುವುಗಳು ಬರಲಿದ್ದು ಅದಕ್ಕೆ ಹೊಂದಿಕೊಳ್ಳುವುದು ಅನಿವಾರ್ಯವಾದೀತು. ವೃತ್ತಿಯ ಸ್ಥಳದಲ್ಲಿ ರೋಚಕ ಅನುಭವವು ಇರಲಿದೆ. ಅನ್ನಿಸಿದ್ದನ್ನು ಹೇಳಲು ನಿಮಗೆ ಅವಕಾಶವು ಸಿಗದೇ ಹೋಗಬಹುದು. ಕೆಲವವುದರಿಂದ ಬಿಡುಗಡೆಯಾದರೆ ಸಮಾಧಾನ. ಪ್ರೇಮಪ್ರಕರಣವು ಬಿಸಿಯ ತುಪ್ಪದಂತಾಗುವುದು. ನಾಯಕತ್ವ ಇಂದು ಪರೀಕ್ಷೆಗೆ ಒಳಗಾಗುತ್ತದೆ. ಮಾತಿಗಿಂತ ಕಾರ್ಯದಿಂದ ನಿಮ್ಮ ಶಕ್ತಿ ತೋರಿಸುವ ದಿನ. ದೂರದ ಬಂಧುಗಳ ಭೇಟಿಯ ನಿರೀಕ್ಷೆಯಲ್ಲಿ ಇರುವಿರಿ. ಪೂರ್ವಾಪರ ಯೋಚನೆ ಇಲ್ಲದೇ ಮಾತನಾಡಿ ಸಂಬಂಧ ಹಾಳುಮಾಡಿ.

ಧನು ರಾಶಿ :

ವಿರೋಧಿಗಳು ನಿಮ್ಮ ದುರ್ಬಲತೆಯನ್ನು ಪರೀಕ್ಷಿಸುತ್ತಾರೆ. ದೃಢ ನಿಲುವು ಮತ್ತು ಸ್ಪಷ್ಟ ಮಾತು ನಿಮ್ಮನ್ನು ರಕ್ಷಿಸುತ್ತದೆ. ಇಂದು ಶಾಂತಿ ಉಳಿಸಿಕೊಂಡರೆ ನಷ್ಟ ತಪ್ಪಿಸಬಹುದು. ಹಿತಶತ್ರುಗಳಿಂದ ನಿಮಗೆ ನೆಮ್ಮದಿ ಕಡಿಮೆಯಾಗಬಹುದು. ಇಕ್ಕಟ್ಟಿನಿಂದ ಹೊರಬರಲು ಮನಸ್ಸು ಮಾಡುವಿರಿ. ಆದರೂ ಕಷ್ಟವಾದೀತು. ಕುಟುಂಬದ ಸದಸ್ಯರನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಆಪ್ತರ ಒಡನಾಟವು ಖುಷಿಯನ್ನು ಕೊಡಬಹುದು. ವಿದ್ಯಾರ್ಥಿಗಳ ಪ್ರಗತಿಯಲ್ಲಿ ಮಂದಗತಿ ಇರುವುದು. ನಂಬಿಕೆಯನ್ನು ಉಳಿಸಿಕೊಳ್ಳಲು ಕಷ್ಟವಾದೀತು. ನಿಮ್ಮ ಬಳಿ‌ ಕೇಳಿದರೆ ಮಾತ್ರ ಸಲಹೆಯನ್ನು ಕೊಡಿ.‌ ಉದ್ಯಮದಲ್ಲಿ ಮನಸ್ಸು ಗೊಂದಲಗೊಳ್ಳಬಹುದು. ಹಣಕಾಸಿನಲ್ಲಿ ಕುಟುಂಬದ ಚರ್ಚೆ ಅಗತ್ಯ. ವಿದೇಶ ಸಂಬಂಧದಲ್ಲಿ ವಿಳಂಬ. ಶುಭ ಸಮಾರಂಭಗಳಿಗೆ ಭೇಟಿ ಮಾಡುವಿರಿ. ವ್ಯಾಪಾರದಲ್ಲಿ ಚಾಣಕ್ಷತೆಯಿಂದ ಲಾಭವನ್ನು ಪಡೆಯುವಿರಿ. ಇಂದು ನೀವು ಯಾವುದೋ ಚಿಂತೆಯಲ್ಲಿ ಇರುವಿರಿ. ಹೂಡಿಕೆದಾರರಿಗೆ ಮೇಲಿಂದಮೇಲೆ ಒತ್ತಡ ಕಾಣಿಸುವುದು.

ಮಕರ ರಾಶಿ :

ಶತ್ರು ನಿಮ್ಮ ಯೋಜನೆಗಳನ್ನು ಊಹಿಸಲಾರ. ಮಾಹಿತಿ ಹಂಚಿಕೆಯಲ್ಲಿ ಜಾಗ್ರತೆ ವಹಿಸಿದರೆ ಲಾಭ ಹೆಚ್ಚಾಗುತ್ತದೆ. ನಿಮ್ಮ ಹಳೆಯ ನೌಕರರನ್ನು ಕೈಬಿಡುವ ಯೋಚನೆ ಮಾಡುವಿರಿ. ಇಂದು ನಿಮ್ಮ ಆಲೋಚನಗಳಿಗೆ ಉತ್ತಮ ಪ್ರತಿಕ್ರಿಯೆ ಸಿಗಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣವು ಇದ್ದು ಉತ್ಸಾಹದಿಂದ ಇರುವಿರಿ.‌ ವಾಹನವನ್ನು ಚಲಾಯಿಸುವ ಬೇರೆಯ ಯಾವ ಚಟುವಟಿಕೆಗಳನ್ನು ಮಾಡುವುದು ಬೇಡ. ನಿಮ್ಮ ಕುಶಲ ಕಾರ್ಯಗಳು ಮೇಲಧಿಕಾರಿಗಳಿಗೆ ತಿಳಿಯುವುದು. ವೇತನವು ಹೆಚ್ಚಾಗುವ ಸಾಧ್ಯತೆ ಇದೆ. ತಾಯಿಗೆ ಏನಾದರೂ ಕೊಟ್ಟು ಖಷಿಪಡಿಸುವಿರೊ. ಮಾತಿನ ಚಾತುರ್ಯದಿಂದ ಕೆಲಸ ಮುನ್ನಡೆಯುತ್ತದೆ. ಉದ್ಯಮದಲ್ಲಿ ಹೊಸ ಪರಿಚಯಗಳು ಉಪಯುಕ್ತ. ವಿದೇಶ ಪ್ರಯಾಣ ಯೋಚನೆ ಬದಲಾಗಬಹುದು. ಸಂಗಾತಿಗೆ ನೀವು ಸಹಾಯವನ್ನು ಮಾಡುವಿರಿ. ಸಂಪತ್ತಿನ ಉಳಿತಾಯದ ದಾರಿಯನ್ನು ನೀವೇ ಕಂಡುಕೊಳ್ಳುವಿರಿ. ಮುಚ್ಚು ಮರೆ ಇಲ್ಲದೇ ಎಲ್ಲವನ್ನೂ ಆಪ್ತರ ಜೊತೆ ಹಂಚಿಕೊಳ್ಳಿ.

ಕುಂಭ ರಾಶಿ :

ಸಾಲದ ವಿಚಾರ ತಾತ್ಕಾಲಿಕ ಒತ್ತಡ ತರುತ್ತದೆ. ವಿದೇಶದ ವಿಚಾರದಲ್ಲಿ ಸ್ಪಷ್ಟತೆ ಇಲ್ಲ. ಶತ್ರುಕಾಟ ನೇರವಾಗಿರದು. ನಿಮ್ಮ ಸಹನೆ ಮತ್ತು ಸಮಯಪಾಲನೆ ಎಲ್ಲ ಸಮಸ್ಯೆಗಳನ್ನು ನಿಧಾನವಾಗಿ ಸರಿಪಡಿಸುತ್ತದೆ. ಇಂದು ನಿಮ್ಮ ಕಾರ್ಯಗಳು ನಿಧಾನಗತಿಯಲ್ಲಿ ಇರಲಿದೆ. ಸಂಗಾತಿಯಿಂದ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ. ಬಂಗಾರದ ಖರೀದಿಗೆ ಉತ್ಸಾಹವನ್ನು ತೋರುವಿರಿ. ಅಸಾಧ್ಯವಾದ ಕಾರ್ಯವನ್ನು ಮಾಡಬೇಕು ಎನಿಸಬಹುದು. ಬರುವ ಅಲ್ಪ ಆದಾಯವನ್ನು ಉಳಿಸಿಕೊಳ್ಳಲು ಪ್ರಯತ್ನಿಸಿ. ಕುಟುಂಬದ ಪ್ರೀತಿಯು ಸಿಗಲಿದೆ. ದುಡುಕುವುದು ಕಾರ್ಯದ ನಿಮಿತ್ತ ಓಡಾಟವು ಹೆಚ್ಚಾಗುವುದು. ಸ್ಥಿರತೆ ಇಂದು ನಿಮ್ಮ ದೊಡ್ಡ ಶಕ್ತಿ. ವ್ಯವಹಾರದಲ್ಲಿ ಹಳೆಯ ಸಂಪರ್ಕಗಳಿಂದ ಲಾಭ. ಆಲಸ್ಯದಿಂದ ನಿಮ್ಮ ಎಲ್ಲ ಕಾರ್ಯಗಳೂ ಉಳಿಯಬಹುದು. ಯಾವುದನ್ನೂ ನೀವು ಅತಿಯಾಗಿ ಆಸೆ ಪಡುವುದು ಬೇಡ.‌ ನಿಮ್ಮ ಪರೀಕ್ಷೆಯ ಕಾಲವೂ ಇಂದು ಆಗಿರುವುದು. ಆಪ್ತರ ಮೇಲೆ ಹುಸಿ ಮುನಿಸು ಇರಲಿದೆ.

ಮೀನ ರಾಶಿ :

ವಿದೇಶ ಸಂಬಂಧಿತ ಕನಸುಗಳಿಗೆ ಇನ್ನೂ ಕಾಲ ಬೇಕು. ವಿರೋಧಿಗಳ ಮಾತು ಮನಸ್ಸಿಗೆ ತಾಗದಂತೆ ಗಮನ ವಹಿಸಿ. ಮೌನವೇ ನಿಮ್ಮ ರಕ್ಷಣೆ. ಇಂದು ನಿಮ್ಮ ಸ್ವಂತ ಉದ್ಯಮದಲ್ಲಿ ನಿಮಗೆ ಲಾಭವಿದೆ. ಸ್ನೇಹಿತರ ಉತ್ಸಾಹದ ಮಾತಿಗೆ ಮರುಳಾಗುವ ಸಾಧ್ಯತೆ ಇದೆ. ಪ್ರೇಮಿಯನ್ನು ಭೇಟಿಯಾಗಲು ದೂರದ ಊರಿಗೆ ಪ್ರಯಾಣ ಮಾಡಬೇಕಾಗುವುದು.‌ ಹೂಡಿಕೆಯ ಬಗ್ಗೆ ತಜ್ಞರಿಂದ ಮಾಹಿತಿ ಪಡೆದು ಮುಂದುವರಿಯಿರಿ. ಸಾಮಾಜಿಕ ಮುಖಂಡರು ಸಂಘಟನೆಯಲ್ಲಿ ತೊಡಗುವರು. ಮಕ್ಕಳಿಂದ ಹಣವನ್ನು ಪಡೆಯುವಿರಿ. ಇಂದು ಮಾತುಗಳನ್ನು ಕಡಿಮೆ ಆಡುವಿರಿ. ಆತ್ಮವಿಶ್ವಾಸ ಹೆಚ್ಚಿದರೂ ಆತುರ ಕಡಿಮೆ ಇರಲಿ. ಉದ್ಯಮದಲ್ಲಿ ಹೊಸ ನಿರ್ಧಾರ ತೆಗೆದುಕೊಳ್ಳುವ ಮುನ್ನ ಸಲಹೆ ಅಗತ್ಯ. ಅಪರಿಚಿತರು ನಿಮ್ಮನ್ನು ಭೇಟಿಯಾಗಬಹುಸು. ಮನೆಗೆ ಬೇಕಾದ ವಸ್ತುಗಳನ್ನು ನೀವು ಖರೀದಿಸುವಿರಿ. ಕೃಷಿಯಲ್ಲಿ ನಿಮಗೆ ಇಂದು ನಿರಾಸಕ್ತಿಯು ಇರುವುದು. ಸುಮ್ಮನೇ ಇದ್ದಷ್ಟೂ ನಿಮ್ಮ ಮೇಲೆ ಗೂಬೆ‌ ಕೂರಿಸಬಹುದು. ತಂತ್ರಜ್ಞಾನದಲ್ಲಿ ನಿಮಗೆ ಒಳ್ಳೆಯ ಹಿಡಿತ ಗೊತ್ತಾಗುವುದು.

-ಲೋಹಿತ ಹೆಬ್ಬಾರ್ – 8762924271 (what’s app only)

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 23ರ ದಿನಭವಿಷ್ಯ – Kannada News | Birth Number Horoscope Dec 23, Tuesday: What Awaits You Today?

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 23ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಮನೆಯಲ್ಲಿ ಖುಷಿಯ ವಾತಾವರಣ ಇರುತ್ತದೆ. ಅಲಂಕಾರದ ದೃಷ್ಟಿಯಿಂದ ಏನೇನು ಬದಲಾವಣೆ ಮಾಡಬೇಕು ಅಂದುಕೊಂಡಿರುತ್ತೀರೋ ಆ ಎಲ್ಲವನ್ನು ಮಾಡಲು ಸಾಧ್ಯ ಆಗಲಿದೆ. ನಿಮಗೆ ಇರುವಂಥ ಬದ್ಧತೆಯನ್ನು ಸಾಬೀತು ಮಾಡಿಸಿಕೊಳ್ಳಲು ಅವಕಾಶಗಳು ಉದ್ಭವ ಆಗಲಿವೆ. ಕೆಲವು ಹಣಕಾಸಿನ ವಿಚಾರದ ನಿರ್ಧಾರಗಳು ಮುಂದಕ್ಕೆ ಹಾಕಿಕೊಳ್ಳಬೇಕಾಗುತ್ತದೆ. ಮೆಡಿಕಲ್ ಶಾಪ್ ನಡೆಸುತ್ತಾ ಇರುವವರು ಇದಕ್ಕೆ ಪೂರಕವಾಗಿ ಕೆಲವು ಹೊಸ ವ್ಯವಹಾರ ನಡೆಸುವ ಚಿಂತನೆ ನಡೆಸುತ್ತೀರಿ. ಉದ್ಯೋಗ ಸ್ಥಳದಲ್ಲಿ ನೀವು ಯಾವುದನ್ನು ಕೊನೆ ಆಯ್ಕೆ ಎಂದು ಭಾವಿಸಿರುತ್ತೀರೋ ಅದನ್ನೇ ಆರಿಸಿಕೊಳ್ಳುವಂತೆ ಆಗಲಿದೆ. ನಾಲಗೆ ಹುಣ್ಣು, ಗಂಟಲು ನೋವಿನ ಸಮಸ್ಯೆ ಈ ದಿನ ವಿಪರೀತ ಬಾಧಿಸಬಹುದು. ಆಹಾರ ಪಥ್ಯವನ್ನು ಯಾವುದೇ ಕಾರಣಕ್ಕೂ ತಪ್ಪಿಸಬೇಡಿ. ಆಕಸ್ಮಿಕವಾಗಿ ನಿಮಗೆ ಸಿಗುವಂಥ ಅವಕಾಶಗಳನ್ನು ಹೇಗೆ ಬಳಸಿಕೊಳ್ಳಬೇಕು ಎಂಬ ಕಡೆಗೆ ಗಮನ ನೀಡಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ನಿಮ್ಮ ಪಾಲಿನ ಜವಾಬ್ದಾರಿಯನ್ನು ಶ್ರದ್ಧೆಯಿಂದ ಮಾಡಿದ್ದರ ಉತ್ತಮ ಫಲಿತವನ್ನು ಪಡೆದುಕೊಳ್ಳಲಿದ್ದೀರಿ. ನಿಮ್ಮಲ್ಲಿ ಕೆಲವರು ಹೆಚ್ಚಿನ ಬಡ್ಡಿದರಕ್ಕೆ ತಂದಿದ್ದ ಸಾಲವನ್ನು ಹಿಂತಿರುಗಿಸುವುದಕ್ಕೆ ಪ್ರಯತ್ನ ಮಾಡಲಿದ್ದೀರಿ. ಮಿನರಲ್ ವಾಟರ್ ವಿತರಣೆಯ ವ್ಯವಹಾರ ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಹೆಚ್ಚಳ ಆಗಲಿದೆ. ಉದ್ಯೋಗ ಸ್ಥಳದಲ್ಲಿ ಸವಾಲು ಎನಿಸಿದಂ ಕೆಲವು ಕೆಲಸಗಳನ್ನು ನೀವಾಗಿಯೇ ಮುಂದೆ ಹೋಗಿ ವಹಿಸಿಕೊಳ್ಳಲಿದ್ದೀರಿ. ಇದರಿಂದ ಯಶಸ್ಸು ಹಾಗೂ ಭವಿಷ್ಯದಲ್ಲಿ ಬಡ್ತಿ ಇತ್ಯಾದಿ ವಿಷಯಗಳಿಗೆ ಅನುಕೂಲ ಒದಗಿ ಬರುತ್ತದೆ. ಸಾದ್ಯಂತವಾಗಿ ಪರೀಕ್ಷೆ ಮಾಡದ ಹೊರತು ಯಾವುದೇ ಮುಖ್ಯ ಕಾಗದ- ಪತ್ರಗಳಿಗೆ ಸಹಿ ಮಾಡುವುದಕ್ಕೆ ಹೋಗಬೇಡಿ. ಅಣ್ಣ- ತಮ್ಮ, ಅಕ್ಕ- ತಂಗಿಯರ ಮಕ್ಕಳ ಮದುವೆಗಾಗಿ ಹಣಕಾಸಿನ ನೆರವು ಕೇಳಿಕೊಂಡು ಬರಲಿದ್ದಾರೆ. ನಿಮ್ಮ ಒಳಮನಸ್ಸಿಗೆ ಹೇಗೆ ನಡೆದುಕೊಳ್ಳಬೇಕು ಅನ್ನಿಸುತ್ತದೆಯೋ ಅದರಂತೆಯೇ ನಡೆದುಕೊಳ್ಳಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಇತರರ ವೈಯಕ್ತಿಕ ಅಭಿಪ್ರಾಯಗಳನ್ನು ತೆಗೆದುಹಾಕಲು ಹೋಗಬೇಡಿ. ಉದ್ಯೋಗ, ವೃತ್ತಿ- ವ್ಯವಹಾರಗಳಲ್ಲಿ ನೀಡುವಂಥ ಎಚ್ಚರಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳಿ. ದೂರ ಪ್ರಯಾಣಕ್ಕೆ ಅಚಾನಕ್ ಆಗಿ ತೆರಳಲೇ ಬೇಕಾದ ಸನ್ನಿವೇಶ ಸೃಷ್ಟಿ ಆಗಲಿದೆ. ಹಳೇ ಒಪ್ಪಂದಗಳನ್ನು ಮುಂದುವರಿಸುವುದು ಬೇಡ ಎಂದುಕೊಳ್ಳಲಿದ್ದೀರಿ. ತರಕಾರಿ- ಹಣ್ಣುಗಳ ಸರಬರಾಜು ವಾಹನವನ್ನು ಚಾಲನೆ ಮಾಡುವವರು ಇದ್ದಲ್ಲಿ ಅದರದೇ ವ್ಯಾಪಾರವನ್ನು ಶುರು ಮಾಡುವ ಆಲೋಚನೆ ಮೂಡಲಿದೆ. ದುಡಿಮೆಯು ನಿರೀಕ್ಷೆ ಮಟ್ಟದಲ್ಲಿ ಇಲ್ಲ ಎಂಬುದು ಬಹಳವಾಗಿ ಕೊರೆಯಲು ಆರಂಭವಾಗುತ್ತದೆ. ಸ್ನೇಹಿತರ ಪೈಕಿ ಕೆಲವರು ನಿಮ್ಮ ಉದ್ದೇಶಕ್ಕೆ ಕೈ ಜೋಡಿಸಲು ಮುಂದೆ ಬರಲಿದ್ದಾರೆ. ಒಂದು ಕೆಲಸವನ್ನು ಮುಗಿಸುವುದಕ್ಕೆ ಇತರರಿಗೆ ಒಪ್ಪಿಸುವುದರಿಂದ ಅವರಿಗೆ ಸಲಹೆ- ಸೂಚನೆ, ಮಾರ್ಗದರ್ಶನ ನೀಡುವುದಕ್ಕೆ ಹೆಚ್ಚಿನ ಸಮಯವನ್ನು ಮೀಸಲಿಡುವಂತೆ ಆಗಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಈ ದಿನ ಚಂಚಲತೆ ವಿಪರೀತ ಕಾಡುತ್ತದೆ. ಆತುರದಲ್ಲಿ ನಿಮ್ಮ ಯಾವುದೇ ತೀರ್ಮಾನ ಹೇಳುವುದಕ್ಕೆ ಹೋಗಬೇಡಿ. ಇನ್ನು ನಿಮ್ಮ ಬಳಿ ಇರುವ ಹಣಕ್ಕೆ ಎಷ್ಟು ಅಷ್ಟಕ್ಕೆ ಮಾತ್ರ ಯೋಜನೆ ಹಾಕಿಕೊಳ್ಳಿ. ಏನನ್ನಾದರೂ ದಕ್ಕಿಸಿಕೊಳ್ಳ ಬಲ್ಲೆ ಎಂಬ ಆಲೋಚನೆ ಅಪಾಯಕಾರಿ ಆಗಲಿದೆ. ಸರ್ಕಾರಿ ಮಟ್ಟದಲ್ಲಿ ಆಗಬೇಕಾದ ಕೆಲಸಗಳನ್ನು ಮುಗಿಸಿಕೊಳ್ಳುವುದಕ್ಕೆ ಎಲ್ಲ ಪ್ರಯತ್ನ ಮಾಡಿದ ನಂತರವೂ ಕೊನೆ ಹಂತದಲ್ಲಿ ಅದು ನಿಂತು ಬಿಡಲಿದೆ. ಬೆನ್ನು ನೋವು ವಿಪರೀತವಾಗಿ ಕಾಡಬಹುದು. ಅದರಲ್ಲಿಯೂ ದ್ವಿಚಕ್ರ ವಾಹನವನ್ನು ಹೆಚ್ಚಾಗಿ ಬಳಸುತ್ತೀರಿ ಅಂತಾದಲ್ಲಿ ವೈದ್ಯರ ಬಳಿ ತೆರಳಿ, ಸಲಹೆ ತೆಗೆದುಕೊಳ್ಳುವುದು ಕ್ಷೇಮ. ಯಾವುದಕ್ಕೂ ಇರಲಿ ಎಂದುಕೊಂಡು, ಬಹಳ ಹಿಂದೆ ಸಣ್ಣ ಪ್ರಮಾಣದಲ್ಲಿ ಮಾಡಿದ್ದ ಹೂಡಿಕೆಯೊಂದು ಈಗ ಭಾರೀ ದೊಡ್ಡ ಲಾಭ ತಂದುಕೊಡಲಿದೆ ಎಂಬುದು ನಿಮ್ಮ ಗಮನಕ್ಕೆ ಬರಲಿದೆ. ಆದರೆ ಈ ಬಗ್ಗೆ ಎಲ್ಲ ಕಡೆ ಹೇಳಿಕೊಂಡು ಬರಬೇಡಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಕೃಷಿಯಲ್ಲಿ ತೊಡಗಿಕೊಂಡವರು ಜಮೀನಿನಲ್ಲಿ ಕೆಲವು ದೀರ್ಘಾವಧಿ ಕೆಲಸಗಳನ್ನು ಕೈಗೆತ್ತಿಕೊಳ್ಳಲು ಯೋಜನೆ ರೂಪಿಸಲಿದ್ದೀರಿ. ಕೊಟ್ಟಿಗೆ, ಗೋದಾಮು, ಇತರೆ ನಿಮ್ಮ ಚಟುವಟಿಕೆಗೆ ಅನುಕೂಲ ಆಗುವ ರೀತಿ ಯೋಜನೆ ಮಾಡಿಕೊಳ್ಳಲಿದ್ದೀರಿ. ಕುಟುಂಬ ಸದಸ್ಯರು ನಿಮ್ಮ ಆಲೋಚನೆಗಳಿಗೆ ಆರ್ಥಿಕವಾಗಿ ನೆರವು ನೀಡಲಿದ್ದಾರೆ. ತಕ್ಷಣಕ್ಕೆ ಬೇಡ ಅಂದುಕೊಂಡಂಥ ಕೆಲವು ಕೆಲಸಗಳನ್ನು ನಿರ್ಧಾರ ಬದಲಿಸಿ, ಆರಂಭ ಮಾಡಿಬಿಡುತ್ತೀರಿ. ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದಂಥವರು ಅದನ್ನು ಹಿಂತೆಗೆದುಕೊಳ್ಳವ ಆಲೋಚನೆ ಬಂದರೆ ಅದರಂತೆಯೇ ನಡೆದುಕೊಳ್ಳುವುದು ಉತ್ತಮ. ನಿಮಗೆ ಉದ್ಯೋಗ ಸ್ಥಳದಲ್ಲಿ ನೀಡಿದ್ದ ಭರವಸೆಗಳನ್ನು ಮೇಲಧಿಕಾರಿಗಳು ಈಡೇರಿಸುವ ಸೂಚನೆ ದೊರೆಯಲಿದೆ. ಇಂಥ ಸಮಯದಲ್ಲಿ ಮನಸ್ಸಿಗೆ ಬೇಸರ ಆಗುವಂಥ ಹಳೇ ಘಟನೆಗಳನ್ನು ನೆನಪಿಸಿಕೊಂಡು, ಸಿಟ್ಟು ಮಾಡಿಕೊಳ್ಳುವುದಕ್ಕೆ ಹೋಗಬೇಡಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ತುಂಬ ಉತ್ಸಾಹದಿಂದ ಕೆಲಸ- ಕಾರ್ಯಗಳಲ್ಲಿ ತೊಡಗಿಕೊಳ್ಳುವುದಕ್ಕೆ ಆಗಲ್ಲ. ಮುಖ್ಯವಾಗಿ ಮೈ- ಕೈ ನೋವು, ಜ್ವರ, ತಲೆನೋವು ಇಂಥವು ನಿಮ್ಮನ್ನು ಈ ದಿನ ಬಹುವಾಗಿ ಕಾಡಲಿವೆ. ಯಾಕೆ- ಏನು ಎಂಬುದನ್ನು ವಿಚಾರಿಸದೆ ಸ್ನೇಹಿತರು ಹೇಳುವಂತಹ ಕೆಲಸಗಳನ್ನು ಮಾಡುವುದಕ್ಕೆ ಒಪ್ಪಿಕೊಳ್ಳಬೇಡಿ. ಸಂಘ- ಸಂಸ್ಥೆಗಳನ್ನು ಮುನ್ನಡೆಸುತ್ತಾ ಇರುವವರಿಗೆ ದೊಡ್ಡ ಜವಾಬ್ದಾರಿಯೊಂದು ಹೆಗಲು ಏರಲಿದೆ. ಇನ್ನು ಬಿಡಿ ಬಿಡಿಯಾಗಿ ಕೆಲಸ ಮುಗಿಸುವ ಬದಲಿಗೆ ಒಂದೇ ಸಲಕ್ಕೆ ಎಲ್ಲವನ್ನೂ ಮಾಡಿಬಿಡೋಣ ಎಂದುಕೊಂಡು ಮುಂದಕ್ಕೆ ಹಾಕಿಕೊಂಡು ಹೋಗಬೇಡಿ. ಕಾಂಡಿಮೆಂಟ್ಸ್, ಚಾಟ್ಸ್ ಮಾರಾಟದ ವ್ಯವಹಾರ ಮಾಡುತ್ತಾ ಇರುವವರಿಗೆ ಹೊಸ ಅವಕಾಶಗಳು ಕಾಣಿಸಿಕೊಳ್ಳಲು ಶುರು ಆಗುತ್ತವೆ. ಮಳಿಗೆ ರಿನೊವೇಷನ್ ಮಾಡಿಸಬೇಕು ಎಂದುಕೊಳ್ಳುತ್ತಾ ಇದ್ದಲ್ಲಿ ಅದಕ್ಕೆ ಬೇಕಾದ ಆರ್ಥಿಕ ವ್ಯವಸ್ಥೆ ಆಗಲಿದ್ದು, ಇದರಿಂದ ಆತ್ಮವಿಶ್ವಾಸ ಹೆಚ್ಚಾಗುತ್ತದೆ.

ಇದನ್ನೂ ಓದಿ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 21ರಿಂದ 27ರ ತನಕ ವಾರಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಬಂದದ್ದು ಬರಲಿ ಎಂದು ಧೈರ್ಯವಾಗಿ ನೀವು ತೆಗೆದುಕೊಂಡ ತೀರ್ಮಾನಗಳು ಲಾಭದಾಯಕ ಆಗಲಿದೆ. ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸುವುದಕ್ಕಾಗಿ ವಿರೋಧಿಗಳು ಮಾಡುವ ಪ್ರಯತ್ನಗಳು ಅವರಿಗೇ ಉಲ್ಟಾ ಹೊಡೆಯಲಿದೆ. ನಿಧಾನವಾಗಿ ಬದಲಾವಣೆಗೆ ಹೊಂದಾಣಿಕೆ ಮಾಡಿಕೊಳ್ಳಲಿದ್ದೀರಿ. ಉದ್ಯೋಗ ಸ್ಥಳದಲ್ಲಿ ಕೆಲವು ತಾಂತ್ರಿಕ ತರಬೇತಿಗಳನ್ನು ಅನಿವಾರ್ಯವಾಗಿ ಕಲಿಯಬೇಕು ಎಂಬ ಸ್ಥಿತಿ ನಿರ್ಮಾಣ ಆಗಲಿದೆ. ಆದರೆ ಇದರಿಂದ ಭವಿಷ್ಯದಲ್ಲಿ ನಿಮಗೆ ಅನುಕೂಲ ಆಗಲಿದೆ. ಕ್ರೀಡಾಪಟುಗಳಿಗೆ ಪ್ರಾಯೋಜಕರು ದೊರೆಯುವಂಥ ಯೋಗ ಇದೆ. ಪ್ರತಿಷ್ಠಿತ ಸಂಸ್ಥೆ ಅಥವಾ ವ್ಯಕ್ತಿಗಳು ಅವರಾಗಿಯೇ ಭೇಟಿ ಆಗುವಂತೆ ತಿಳಿಸಿದಲ್ಲಿ ನಿಧಾನ ಮಾಡಬೇಡಿ. ಇನ್ನು ಯುಪಿಐ ಮೂಲಕ ದೊಡ್ಡ ಮೊತ್ತದ ಪಾವತಿ ಮಾಡುವಂಥ ಸನ್ನಿವೇಶದಲ್ಲಿ ಸರಿಯಾದ ಸಂಖ್ಯೆಯನ್ನು ಬಳಸಿದ್ದೀರಾ ಎಂಬುದನ್ನು ಸಾವಕಾಶವಾಗಿ ಪರೀಕ್ಷಿಸಿಕೊಳ್ಳುವುದು ಕ್ಷೇಮ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ನೀವು ನಂಬಿದ ವ್ಯವಹಾರ ಬೆಳವಣಿಗೆಗೆ ಸಹಕಾರಿ ಆಗುವ ಸುಳಿವು ನೀಡಲಿದೆ. ಸಂಗಾತಿ ಕುಟುಂಬದ ಕಡೆಯಿಂದ ದೊಡ್ಡ ಮಟ್ಟದಲ್ಲಿ ಬೆಂಬಲ ದೊರೆಯಲಿದೆ. ನಿಮ್ಮ ಜೊತೆಗೆ ಓದಿದಂಥ ಸ್ನೇಹಿತರ ಸಲಹೆಯಿಂದ ಆಲೋಚನಾ ವಿಧಾನವನ್ನು ಬದಲಾವಣೆ ಮಾಡಿಕೊಳ್ಳಲಿದ್ದೀರಿ. ನಿಮಗೆ ಗೊತ್ತಿರುವ ಕೌಶಲಕ್ಕೆ ಬೇಡಿಕೆ ಹೆಚ್ಚಾಗಲಿದ್ದು, ಕೆಲವು ಪ್ರಾಜೆಕ್ಟ್ ಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣ ಮಾಡಿಕೊಟ್ಟಲ್ಲಿ ಮಾರುಕಟ್ಟೆಯಲ್ಲಿ ಇರುವುದಕ್ಕಿಂತ ಹೆಚ್ಚಿನ ಮೊತ್ತವನ್ನು ನೀಡುವುದಾಗಿ ಕೆಲವರು ಪ್ರಸ್ತಾವ ಇಡಲಿದ್ದಾರೆ. ನೀವು ಹಾಕಿದ್ದ ಪ್ಲಾನ್ ಗೆ ಸಂಬಂಧಿಸಿದಂತೆ ಇರುವ ಅನಿಶ್ಚಿತತೆ ದೂರ ಆಗಲಿದ್ದು, ಕುಟುಂಬದ ಎಲ್ಲ ಸದಸ್ಯರು ಬೆಂಬಲವನ್ನು ನೀಡಲಿದ್ದಾರೆ. ಸೆಕೆಂಡ್ ಹ್ಯಾಂಡ್ ವಸ್ತುಗಳು ಬಹಳ ಕಡಿಮೆಗೆ ಸಿಗುತ್ತಿದೆ, ಅದು ನಿಮಗೆ ಬಹಳ ಅಗತ್ಯವಾದ ವಸ್ತುಗಳು ಎಂದಾದಲ್ಲಿ ಖರೀದಿ ಮಾಡುವುದಕ್ಕೆ ಯಾವುದೇ ರೀತಿಯ ಹಿಂಜರಿಕೆ ಮಾಡಬೇಡಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ನಿಮ್ಮ ಬುದ್ಧಿವಂತಿಕೆ ಹಾಗೂ ಚೌಕಾಶಿ ಮಾಡುವ ಸಾಮರ್ಥ್ಯ ಅತ್ಯುತ್ತಮವಾದ ಫಲ ನೀಡುವ ದಿನ ಇದಾಗಿರುತ್ತದೆ. ನಿಮ್ಮ ಜಮೀನು, ಸೈಟು ಅಥವಾ ಯಾವುದೇ ಅಸ್ತಿಗೆ ಸಂಬಂಧಿಸಿದ ಕಾಗದ ಪತ್ರದ ವ್ಯವಹಾರಕ್ಕೆ ಬಹಳ ಸಮಯದಿಂದ ಓಡಾಡುತ್ತಾ ಇದ್ದೀರಿ ಅಂತಾದರೆ ಅದು ಪೂರ್ಣಗೊಳ್ಳುವ ಯೋಗ ಇದೆ. ನಿಮ್ಮಿಂದ ಸಾಲ ಪಡೆದು ಬಹಳ ಸಮಯದಿಂದ ಅದನ್ನು ಹಿಂತಿರುಗಿಸಲ್ಲ ಅಂತಾದಲ್ಲಿ ಅದನ್ನು ವಸೂಲಿ ಮಾಡುವಂಥ ಯೋಗ ಈ ದಿನ ಇದೆ. ಬೇಕರಿ ಪದಾರ್ಥಗಳಿಂದ ದೂರ ಇರುವುದು ಒಳ್ಳೆಯದು. ಅದರಲ್ಲೂ ಇತ್ತೀಚೆಗೆ ನಿಮಗೆ ಹೊಟ್ಟೆನೋವಿನ ಸಮಸ್ಯೆ ತೀವ್ರ ಆಗಿದೆ ಅಂತಾದಲ್ಲಿ ಈ ಸಲಹೆಯನ್ನು ಕಡ್ಡಾಯವಾಗಿ ಪಾಲಿಸಿ. ಸಂಗಾತಿ ಜತೆಗೆ ಮುಖ್ಯವಾದ ಸಂಗತಿಯನ್ನು ಚರ್ಚೆ ಮಾಡಲಿದ್ದೀರಿ. ಮಕ್ಕಳ ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆ ತೃಪ್ತಿ, ಸಮಾಧಾನ ಹಾಗೂ ನೆಮ್ಮದಿಯನ್ನು ನೀಡಲಿದೆ.

ಲೇಖನ- ಎನ್‌.ಕೆ.ಸ್ವಾತಿ

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link