Headlines

nagaraj11081993

RCB ಬರೋಬ್ಬರಿ 72 ವರ್ಷ ತೆಗೆದುಕೊಳ್ಳಲಿದೆ… ರಾಯುಡು ವ್ಯಂಗ್ಯ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು ನಡುವಿನ “ಸೋಷಿಯಲ್ ಮೀಡಿಯಾ ವಾರ್” ಹೊಸದೇನಲ್ಲ. ಈ ವ್ಯಂಗ್ಯದ ವಾರ್ ಈ ಬಾರಿ ಕೂಡ ಮುಂದುವರೆದಿದೆ. ಆದರೆ, ಈ ಸಲ ರಾಯುಡು “72 ವರ್ಷಗಳ” ಲೆಕ್ಕಾಚಾರದೊಂದಿಗೆ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಏನಿದು 72 ವರ್ಷಗಳ ಲೆಕ್ಕಚಾರ? ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಲಿ ಚಾಂಪಿಯನ್ ಪಟ್ಟದೊಂದಿಗೆ ಕಣಕ್ಕಿಳಿಯುತ್ತಿದೆ. ಈ ಚಾಂಪಿಯನ್ ಪಟ್ಟವನ್ನು…

Read More

ಹುಬ್ಬಳ್ಳಿ ಲವ್ ಜಿಹಾದ್ ಕೇಸ್​ಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್: ವಿಡಿಯೋ ಇರೋದು ನಿಜ, ಆದ್ರೆ… ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಆರೋಪಿ!

ಹುಬ್ಬಳ್ಳಿ, ಏಪ್ರಿಲ್ 4: ಹುಬ್ಬಳ್ಳಿಯಲ್ಲಿನ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಮುಖ ಆರೋಪಿ ಸಮೀರ್ ತನ್ನ ಮೇಲಿನ ಆರೋಪಗಳನ್ನು ಬಲವಾಗಿ ಅಲ್ಲಗಳೆದಿದ್ದಾನೆ. ಪ್ರಕರಣದ ಮಧ್ಯೆ ವೈರಲ್ ಆಗಿರುವ ವಿಡಿಯೋದ ಬಗ್ಗೆ ಮಾತನಾಡಿದ ಸಮೀರ್, ವಿಡಿಯೋ ರೆಕಾರ್ಡ್ ಆಗಿರುವುದು ನಿಜ, ಆದರೆ ಅದನ್ನು ತಾನು ಚಿತ್ರೀಕರಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾನೆ. ಈ ವಿಡಿಯೋವನ್ನು ಯಾರು ಮಾಡಿದ್ದಾರೆ ಎಂಬುದನ್ನು ಪರಿಶೀಲಿಸಲು ತನ್ನ ಮತ್ತು ಆರೋಪಿಯಾದ ಹುಡುಗಿಯ ಮೊಬೈಲ್ ಫೋನ್‌ಗಳನ್ನು ಪರಿಶೀಲಿಸುವಂತೆ ಸಮೀರ್ ಆಗ್ರಹಿಸಿದ್ದಾನೆ. ತಂಪು ಪಾನೀಯದಲ್ಲಿ ಪ್ರಜ್ಞೆ ತಪ್ಪಿಸುವ ಔಷಧ…

Read More

ರಾಣವ್​ಗೆ ನಾನೇ ಮೊದಲು ಪ್ರಪೋಸ್ ಮಾಡಿದ್ದು; ಒಪ್ಪಿಕೊಂಡ ರಾಧಾ ಭಗವತಿ

ರಾಧಾ ಭಗವತಿ ಹಾಗೂ ರಾಣವ್ ಗೌಡ (Ranav Gowda) ಅವರು ವಿವಾಹ ಆಗಲು ರೆಡಿ ಆಗಿರುವುದು ಗೊತ್ತೇ ಇದೆ. ಇತ್ತೀಚೆಗೆ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡರು ಮತ್ತು ಆ ಫೋಟೋ ವೈರಲ್ ಆಗಿ ಗಮನ ಸೆಳೆಯಿತು. ರಾಣವ್ ಬಗ್ಗೆ ಇತ್ತೀಚೆಗೆ ರಾಧಾ ಭಗವತಿ ಅವರು ಮಾತನಾಡಿದರು. ಸಿನಿಮಾ ಒಂದರ ಶೋಗೆ ಬಂದಾಗ ರಾಧಾ ಅವರು ರಾಣವ್ ಬಗ್ಗೆ ಮಾತನಾಡಿದ್ದಾರೆ. ಆ ವಿಷಯ ಇಲ್ಲಿದೆ. ರಾಧಾ ಹಾಗೂ ರಾಣವ್ ಅವರು ‘ಅಮೃತಧಾರೆ’ ಧಾರಾವಾಹಿಯಲ್ಲಿ ಒಟ್ಟಿಗೆ ನಟಿಸಿದ್ದು ಗೊತ್ತೇ ಇದೆ. ರಾಣವ್…

Read More

Bengaluru Air Quality: ಬೆಂಗಳೂರು, ಹುಬ್ಬಳ್ಳಿ ವಾಯು ಗುಣಮಟ್ಟದಲ್ಲಿ ಸುಧಾರಣೆ

ಬೆಂಗಳೂರು, ಏಪ್ರಿಲ್ 04: ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ಬಳ್ಳಾರಿ, ಮಂಗಳೂರಿನ ವಾಯುಗುಣಮಟ್ಟವೂ (Bengaluru Air Quality) ಹದಗೆಟ್ಟಿತ್ತು. ಆದರೆ ಇಂದು ಸ್ವಲ್ಪ ಮಟ್ಟಿಗೆ ಏರ್ ಕ್ವಾಲಿಟಿ ಸುಧಾರಿಸಿದ್ದು, ನಿಟ್ಟುಸಿರು ಬಿಡುವಂತಾಗಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 124ಕ್ಕೆ ತಲುಪಿದೆ. ಬೆಂಗಳೂರಿನ…

Read More

‘ಈಗ ನಾವು ಮೂವರು’; ಅಚ್ಚರಿ ಮೂಡಿಸಿದ ರಶ್ಮಿಕಾ ಮಂದಣ್ಣ ಪೋಸ್ಟ್

ಖ್ಯಾತ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ನಟ ವಿಜಯ್ ದೇವರಕೊಂಡ ಫೆಬ್ರವರಿ 26ರಂದು ಅದ್ದೂರಿಯಾಗಿ ವಿವಾಹವಾದರು. ಈ ವಿವಾಹದ ಕೆಲವು ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ವಿವಾಹ ಸಮಾರಂಭಕ್ಕೆ ಅವರು ಅಲಂಕಾರ ಮತ್ತು ಉಡುಗೆ ತೊಡುಗೆಗಾಗಿ ಆಯ್ಕೆ ಮಾಡಿದ ವಿಷಯ ದೇಶಾದ್ಯಂತ ಚರ್ಚೆಯಾಯಿತು. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ವಿವಾಹ ಸಮಾರಂಭದಲ್ಲಿ ರಾಜ ಮತ್ತು ರಾಣಿಯಂತೆ ಕಾಣುತ್ತಿದ್ದರು. ಅತ್ಯಂತ ರಾಜ ವೈಭವದಲ್ಲಿ ನಡೆದ ಈ ವಿವಾಹದ ಚರ್ಚೆಯ ನಂತರ,…

Read More

ಬೆಂಗಳೂರು: ಮನೆ ಕಟ್ಟುವವರಿಗೆ ಜಿಬಿಎ ಬಂಪರ್ ಗಿಫ್ಟ್! ಸೆಟ್ ಬ್ಯಾಕ್ ಉಲ್ಲಂಘನೆ ಮಿತಿ ವಿಸ್ತರಣೆ

ಬೆಂಗಳೂರು, ಏಪ್ರಿಲ್ 4: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿನ ಕಟ್ಟಡ ಉಪವಿಧಿಗಳ ಕುರಿತು ಮಹತ್ವದ ಕರಡು ಅಧಿಸೂಚನೆ ಪ್ರಕಟಗೊಂಡಿದೆ. ಇದರೊಂದಿಗೆ ಬೆಂಗಳೂರಿನಲ್ಲಿ (Bangalore) ಮನೆ ಕಟ್ಟುವವರಿಗೆ ಸರ್ಕಾರದಿಂದ ಅತಿ ದೊಡ್ಡ ಪರಿಹಾರ ಒದಗಿಸಿದಂತಾಗಿದೆ. ಹೊಸ ಪ್ರಸ್ತಾವನೆಯಲ್ಲಿ ಸೆಟ್ ಬ್ಯಾಕ್ ಉಲ್ಲಂಘನೆ ವಿನಾಯಿತಿ ಮಿತಿಯನ್ನು ಶೇಕಡ 5ರಿಂದ ಶೇಕಡ 15ಕ್ಕೆ ಏರಿಸಲು ನಿರ್ಧರಿಸಲಾಗಿದೆ. ಈ ಹಿಂದೆ, ಕಟ್ಟಡ ನಿರ್ಮಾಣದಲ್ಲಿ ಶೇಕಡ 5ರಷ್ಟು ಮಾತ್ರ ಸೆಟ್ ಬ್ಯಾಕ್ ಉಲ್ಲಂಘನೆಗಳನ್ನು ಸಕ್ರಮಗೊಳಿಸಲು ಅವಕಾಶವಿತ್ತು. ಹೆಚ್ಚಿನ ಕಟ್ಟಡಗಳು ಈ ಮಿತಿಯನ್ನು ಮೀರಿ…

Read More

CSKಗೆ ಸೋಲುಣಿಸಿ ಆಸ್ಟ್ರೇಲಿಯಾದ ವಿಶ್ವ ದಾಖಲೆ ಮುರಿದ ಪಂಜಾಬ್ ಕಿಂಗ್ಸ್

ಟಿ20 ಕ್ರಿಕೆಟ್​ನಲ್ಲಿ ಪಂಜಾಬ್ ಕಿಂಗ್ಸ್ (Punjab Kings) ತಂಡವು ಹೊಸ ವಿಶ್ವ ದಾಖಲೆ ಬರೆದಿದೆ. ಅದು ಸಹ ಆಸ್ಟ್ರೇಲಿಯಾ (Australia) ಬರೆದಿಟ್ಟಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಐಪಿಎಲ್​ನ 7ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್…

Read More

ಇಲ್ಲಿವರೆಗೆ ಒಂದು ಲೆಕ್ಕ, ಇನ್ಮೇಲೆ ಮತ್ತೊಂದು ಲೆಕ್ಕ; ವರ್ಕೌಟ್ ಶುರು ಮಾಡಿದ ಗಿಲ್ಲಿ ನಟ

ಗಿಲ್ಲಿ ನಟ ಅವರು (Gilli Nata) ‘ಬಿಗ್ ಬಾಸ್ ಕನ್ನಡ ಸೀಸನ್ 12’ ಗೆದ್ದ ಬಳಿಕ ಅಪಾರ ಜನಪ್ರಿಯತೆ ಪಡೆದುಕೊಂಡರು. ಅವರಿಗೆ ಇನ್​​ಸ್ಟಾಗ್ರಾಮ್ ಅಲ್ಲಿ 2.2 ಮಿಲಿಯನ್ ಫಾಲೋವರ್ಸ್ ಇದ್ದಾರೆ. ಬಿಗ್ ಬಾಸ್​​ಗೆ ಬಂದು ಸ್ಪರ್ಧಿಯೊಬ್ಬರು ಇಷ್ಟು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದಿದ್ದು ಇದೇ ಮೊದಲು. ಈಗ ಗಿಲ್ಲಿ ನಟ ಅವರು ಹೀರೋ ಆಗಿ ಬಡ್ತಿ ಪಡೆಯುತ್ತಿದ್ದಾರಾ ಎಂಬ ಕುತೂಹಲ ಮೂಡಿದೆ. ಏಕೆಂದರೆ ಅವರು ಜಿಮ್​​ನಲ್ಲಿ ವರ್ಕೌಟ್ ಶುರು ಮಾಡಿದ್ದಾರೆ. ಗಿಲ್ಲಿ ನಟ ಅವರು ತಮ್ಮ ಫಿಟ್ನೆಸ್​​ಗೆ…

Read More

ಕರ್ನಾಟಕ ಹವಾಮಾನ ವರದಿ: ಇಂದೂ ಹಲವೆಡೆ ಇರಲಿದೆ ಮಳೆಯ ಆರ್ಭಟ; 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ಬೆಂಗಳೂರು, ಏಪ್ರಿಲ್ 04: ಹಲವು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾರ್ಭಟ (Weather Forecast)  ಕಾಣಸಿಗುತ್ತಿದೆ. ಅಂತೆಯೇ ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ವಿಜಯನಗರ, ಬಳ್ಳಾರಿ, ದಾವಣಗೆರೆ, ಉತ್ತರ ಕನ್​ನಡ, ಶಿವಮೊಗ್ಗ, ಹಾವೇರಿ, ಉಡುಪಿ, ದಕ್ಷಿಣ…

Read More

Horoscope Today: ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 4, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಬಿದಿಗೆ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.   Source link

Read More