All posts by nagaraj11081993

ಸಾಮಾನ್ಯ ಪ್ರೇಕ್ಷಕನಂತೆ ಥಿಯೇಟರ್‌ಗೆ ಬಂದು ‘ಧುರಂಧರ್ 2’ ನೋಡಿದ ಆರ್. ಮಾಧವನ್

ಸಾಮಾನ್ಯ ಪ್ರೇಕ್ಷಕನಂತೆ ಥಿಯೇಟರ್‌ಗೆ ಬಂದು ‘ಧುರಂಧರ್ 2’ ನೋಡಿದ ಆರ್. ಮಾಧವನ್

ಬಾಲಿವುಡ್‌ನ ಖ್ಯಾತ ನಟ ಆರ್. ಮಾಧವನ್ ಅವರು ಈಗ ‘ಧುರಂಧರ್: ದಿ ರಿವೇಂಜ್’ (Dhurandhar The Revenge) ಸಿನಿಮಾದ ಭರ್ಜರಿ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರಕ್ಕೆ ಪ್ರೇಕ್ಷಕರಿಂದ ಸಿಗುತ್ತಿರುವ ಪ್ರತಿಕ್ರಿಯೆಯನ್ನು ಖುದ್ದಾಗಿ ನೋಡಲು ಮಾಧವನ್ (R Madhavan) ಅವರು ಯಾರಿಗೂ ಗೊತ್ತಾಗದಂತೆ ಮುಂಬೈನ ಚಿತ್ರಮಂದಿರವೊಂದಕ್ಕೆ ಭೇಟಿ ನೀಡಿದ್ದಾರೆ. ಈ ಸಿನಿಮಾದಲ್ಲಿ ಅವರು ಒಂದು ಪ್ರಮುಖ ಪಾತ್ರವನ್ನು ಮಾಡಿದ್ದಾರೆ. ಅವರ ಅಭಿನಯಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ಸಿಕ್ಕಿದೆ.

ಚಿತ್ರಮಂದಿರದಲ್ಲಿ ಸಾಮಾನ್ಯ ಪ್ರೇಕ್ಷಕರಂತೆ ಯಾರಿಗೂ ಗುರುತು ಸಿಗದ ರೀತಿಯಲ್ಲಿ ಕುಳಿತು ಆರ್. ಮಾಧವನ್ ಅವರು ‘ಧುರಂಧರ್ 2’ ಸಿನಿಮಾವನ್ನು ವೀಕ್ಷಿಸಿದ್ದಾರೆ. ಅಭಿಮಾನಿಗಳ ಶಿಳ್ಳೆ, ಚಪ್ಪಾಳೆ ಮತ್ತು ಸಿನಿಮಾದ ಸನ್ನಿವೇಶಗಳಿಗೆ ಪ್ರೇಕ್ಷಕರು ನೀಡುವ ಪ್ರತಿಕ್ರಿಯೆಯನ್ನು ಕಂಡು ಮಾಧವನ್ ಸಂಭ್ರಮಿಸಿದ್ದಾರೆ. ಬಾಕ್ಸ್ ಆಫೀಸ್​ನಲ್ಲಿ ಈ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.

ಈ ಕುರಿತ ವಿಡಿಯೋವನ್ನು ಪ್ರಸಿದ್ಧ ಚಿತ್ರ ಪ್ರದರ್ಶಕ ಅಕ್ಷಯ್ ರಾಠಿ ಅವರು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಮಾಧವನ್ ಅವರು ಅತ್ಯಂತ ಸರಳವಾಗಿ ಕುಳಿತು ಸಿನಿಮಾವನ್ನು ಎಂಜಾಯ್ ಮಾಡುತ್ತಿರುವುದನ್ನು ಕಾಣಬಹುದು.

ಅಕ್ಷಯ್ ರಾಠಿ ಅವರು ಮಾಧವನ್ ಅವರ ಫೋಟೋ ಹಂಚಿಕೊಂಡು, ಸಿನಿಮಾದಲ್ಲಿನ ಅವರ ಪಾತ್ರವನ್ನು ಉಲ್ಲೇಖಿಸಿ ತಮಾಷೆಯಾಗಿ ಬರೆದುಕೊಂಡಿದ್ದಾರೆ. ‘ISI ಏನೇ ಪ್ಲಾನ್ ಮಾಡಲಿ, ಅಜಯ್ ಸನ್ಯಾಲ್ (ಮಾಧವನ್ ಪಾತ್ರದ ಹೆಸರು) ಕಣ್ಣು ಸದಾ ಅವರ ಮೇಲೆ ಇರುತ್ತದೆ ಎಂದು ಅವರಿಗೆ ತಿಳಿಸಿ’ ಎಂದು ಕಿಚಾಯಿಸಿದ್ದಾರೆ. ನಂತರ ಮಾಧವನ್ ಅವರೊಂದಿಗೆ ತೆಗೆಸಿಕೊಂಡ ಫೋಟೋವನ್ನು ಹಂಚಿಕೊಂಡು ತಮ್ಮ ಅನುಭವವನ್ನು ತಿಳಿಸಿದ್ದಾರೆ.

ಇದನ್ನೂ ಓದಿ: ‘ಧುರಂಧರ್ 2’ ಬಳಿಕ ಮತ್ತೊಂದು ಬ್ಲಾಕ್ ಬಸ್ಟರ್ ನಿರೀಕ್ಷೆಯಲ್ಲಿ ಸಂಜಯ್ ದತ್

ಮಾರ್ಚ್ 19ರಂದು ಬಿಡುಗಡೆ ಆದ ‘ಧುರಂಧರ್ 2’ ಸಿನಿಮಾಗೆ ಆದಿತ್ಯ ಧರ್ ನಿರ್ದೇಶನ ಮಾಡಿದ್ದಾರೆ. ಇದು ‘ಧುರಂಧರ್’ ಚಿತ್ರದ ಸೀಕ್ವೆಲ್ ಆಗಿದ್ದು, ಎಲ್ಲ ಕಡೆಗಳಲ್ಲಿ ಹೌಸ್​ಪುಲ್ ಪ್ರದರ್ಶನ ಕಂಡಿದೆ. ಇದರಿಂದಾಗಿ ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆ ಬರೆದಿದೆ. ಅಜಯ್ ಸನ್ಯಾಲ್ ಆಗಿ ಆರ್. ಮಾಧವನ್ ನಟಿಸಿದ್ದಾರೆ. ಜನರಿಂದ ಈ ಪರಿ ಪ್ರತಿಕ್ರಿಯೆ ಸಿಕ್ಕಿರುವುದಕ್ಕೆ ಅವರು ಖುಷಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಹಲವು ಪ್ರಯಾಣಿಕರ ಸ್ಥಿತಿ ಗಂಭೀರ

ಕಾರವಾರ, (ಏಪ್ರಿಲ್ 03): ಎರಡು ಬಸ್​​ಗಳ ನಡುವೆ ಭೀಕರ ಅಪಘಾತ (Two Bus Accident) ಸಂಭವಿಸಿದ್ದು, ಬಸ್​​​ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆ ಶಿರಸಿ (sirsi) ತಾಲೂಕಿನ ಕೊಳಗಿಬೀಸ್ ಬಳಿ ನಡೆದಿದೆ. ಭಟ್ಕಳದಿಂದ ಬಾಗಲಕೋಟೆಗೆ ತೆರಳುತ್ತಿದ್ದ ಕೆಎಸ್ಆರ್​ಟಿಸಿ ಬಸ್ ಹಾಗೂ ಶಿರಸಿಯಿಂದ ಕುಮಟಾ ಕಡೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಸರ್ಕಾರಿ ಬಸ್, ಖಾಸಗಿ ಬಸ್​ನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಇನ್ನು ಎರಡು ಬಸ್​​ನಲ್ಲಿ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಕೂಡಲೇ ಗಾಯಾಳುಗಳನ್ನು ಶಿರಸಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ಸಿಲಿಂಡರ್​​ ಸಮಸ್ಯೆ: ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!

ದಾವಣಗೆರೆ, ಏಪ್ರಿಲ್​​ 03: ರಾಜ್ಯದಲ್ಲಿ ಸಿಲಿಂಡರ್, ಆಟೋ ಗ್ಯಾಸ್​​ಗೆ ತೀವ್ರ ತೊಂದರೆ ವಿಚಾರವಾಗಿ ಸಚಿವ K.H. ಮುನಿಯಪ್ಪ ವಿರುದ್ಧ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್​ ವಾಗ್ದಾಳಿ ನಡೆಸಿದ್ದಾರೆ. ಅದು ಕೇಂದ್ರದ ಸಮಸ್ಯೆ, ಅಗತ್ಯಕ್ಕೆ ತಕ್ಕಂತೆ ಪೂರೈಸುತ್ತಿಲ್ಲ. ಹೀಗಿರುವಾಗ ಕೇಂದ್ರದವರು ಪೂರೈಸುತ್ತಿಲ್ಲ ಎಂದು ಹೇಳುವುದನ್ನು ಬಿಟ್ಟು, ಸಚಿವರು ಕೇಂದ್ರ ಸರ್ಕಾರದ ಓಲೈಕೆ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಲಕ್ಷ್ಮಣ್​​ ಆರೋಪಿಸಿದ್ದಾರೆ. ಆಟೋ ಚಾಲಕರು ಬಂಕ್​ಗಳಲ್ಲಿಯೇ ಮಲಗುತ್ತಿದ್ದು, ಅವರೆಲ್ಲ ರಾಜ್ಯ ಸರ್ಕಾರವೇ ಸಿಲಿಂಡರ್ ಪೂರೈಸ್ತಿದೆ ಎಂದು ತಿಳಿದಿದ್ದಾರೆ. ಹೀಗಾಗಿ ಹಿರಿಯ ಸಚಿವ, ಏಳು ಸಲ ಸಂಸದರಾಗಿದ್ದ ಮುನಿಯಪ್ಪ ಅವರು ಬಾಯಿ ಮುಚ್ಚಿಕೊಂಡು ಇದ್ದರೆ ಚಂದ. ನಾನು ದಯಮಾಡಿ ಕೈಮುಗಿದು ಬೇಡಿಕೊಳ್ಳುವೆ, ಪದೇಪದೆ ಸಭೆ ಮಾಡುವುದು ನಿಲ್ಲಿಸಿ ಎಂದು ಲಕ್ಷ್ಮಣ್​​ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಆಧಿತ್ಯ ಧರ್ ಮೇಲೆ ಕೃತಿಚೌರ್ಯದ ಆರೋಪ ಮಾಡಿದ ನಿರ್ದೇಶಕನಿಗೆ ಲೀಗಲ್ ನೋಟಿಸ್?

ಬಾಲಿವುಡ್‌ನ ಖ್ಯಾತ ನಿರ್ದೇಶಕ ಆದಿತ್ಯ ಧರ್ ಮತ್ತು ನಿರ್ದೇಶಕ ಸಂತೋಷ್ ಕುಮಾರ್ ಆರ್.ಎಸ್. (Santosh Kumar RS) ನಡುವೆ ಈಗ ಕಾನೂನು ಸಮರ ಶುರುವಾಗಿದೆ. ರಣವೀರ್ ಸಿಂಗ್ ಅಭಿನಯದ ‘ಧುರಂಧರ್: ದಿ ರಿವೇಂಜ್’ ಸಿನಿಮಾ ತಂಡದ ಮೇಲೆ ಸಂತೋಷ್ ಕುಮಾರ್ ಅವರು ಆರೋಪ ಹೊರಿಸಿದ್ದಾರೆ. ತಮ್ಮ ಚಿತ್ರಕಥೆಯನ್ನು ನಕಲು (Plagiarism) ಮಾಡಿ ‘ಧುರಂಧರ್ 2’ ಮಾಡಲಾಗಿದೆ ಎಂದು ಸಂತೋಷ್ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಹಾಗಾಗಿ ಸಂತೋಷ್ ಕುಮಾರ್ ವಿರುದ್ಧ ಆದಿತ್ಯ ಧರ್ (Aditya Dhar) ಅವರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

ಸಂತೋಷ್ ಕುಮಾರ್ ಪ್ರಕಾರ, ಅವರು 2023ರಲ್ಲಿ ನೋಂದಾಯಿಸಿದ ‘ಡಿ ಸಾಹೇಬ್’ ಎಂಬ ಚಿತ್ರಕಥೆಯನ್ನು ಆದಿತ್ಯ ಧರ್ ತಂಡ ಕೃತಿಚೌರ್ಯ ಮಾಡಿದೆ. ‘ನನ್ನ ಪ್ರಾಜೆಕ್ಟ್ ಮತ್ತು ಸ್ಕ್ರಿಪ್ಟ್ ಅನ್ನು ಅವರು ದುರ್ಬಳಕೆ ಮಾಡಿಕೊಂಡಿದ್ದಾರೆ. ನನ್ನ ಬಳಿ ಚಿತ್ರಕಥೆ ಬರಹಗಾರರ ಸಂಘದ ಎಲ್ಲ ದಾಖಲೆಗಳಿವೆ’ ಎಂದು ಸಂತೋಷ್ ಹೇಳಿದ್ದಾರೆ. ಅವರ ಹೇಳಿಕೆ ದೊಡ್ಡ ಸುದ್ದಿ ಆಗಿದೆ.

‘ಧುರಂಧರ್ ಚಿತ್ರದ ಮುಖ್ಯ ಪಾತ್ರ ಮತ್ತು ಕಥೆಯ ಎಳೆ ನನ್ನ ಸ್ಕ್ರಿಪ್ಟ್‌ನಿಂದ ಬಂದಿದೆ. ಒಬ್ಬ ಮಾಜಿ ಸೇನಾಧಿಕಾರಿಯ ಮಗ ತನ್ನ ಕುಟುಂಬದ ಮೇಲಿನ ದಾಳಿಗೆ ಸೇಡು ತೀರಿಸಿಕೊಳ್ಳಲು ಪಾಕಿಸ್ತಾನಕ್ಕೆ ರಾ ಏಜೆಂಟ್ ಆಗಿ ಹೋಗುವ ಕಥೆ ತನ್ನದಾಗಿತ್ತು. ಆದಿತ್ಯ ಧರ್ ನನ್ನ ಕಥೆಯ ಮುಖ್ಯ ಸಾಲುಗಳನ್ನು ತೆಗೆದುಕೊಂಡು ಅದಕ್ಕೆ ರಾಜಕೀಯ ಪ್ರೊಪಗಾಂಡದ ಬಣ್ಣ ಹಚ್ಚಿದ್ದಾರೆ’ ಎಂಬುದು ಸಂತೋಷ್ ಆರೋಪ.

ಈ ಆರೋಪಗಳನ್ನು ಆದಿತ್ಯ ಧರ್ ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಆದಿತ್ಯ ಅವರ ಕಾನೂನು ತಂಡವು ಈಗಾಗಲೇ ಸಂತೋಷ್ ಕುಮಾರ್ ಅವರಿಗೆ ನೋಟಿಸ್ ನೀಡಿದ್ದು, ಸುಳ್ಳು ಆರೋಪಗಳನ್ನು ಮಾಡುವುದನ್ನು ನಿಲ್ಲಿಸುವಂತೆ ಸೂಚಿಸಿದೆ. ‘ಸಂತೋಷ್ ಅವರು ಪ್ರಚಾರಕ್ಕಾಗಿ ಇಂತಹ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಆದಿತ್ಯ ಧರ್ ಆಪ್ತ ಮೂಲಗಳು ತಿಳಿಸಿವೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ.

ಇದನ್ನೂ ಓದಿ: ಶಿವಣ್ಣ ಬೆನ್ನು ತಟ್ಟಿದ್ದಕ್ಕೆ ಖುಷಿಯಾದ ‘ಧುರಂಧರ್ 2’ ನಿರ್ದೇಶಕ ಆದಿತ್ಯ ಧರ್

ಆದಿತ್ಯ ಧರ್ ತಂಡದ ನೋಟಿಸ್ ಬಗ್ಗೆ ಪ್ರತಿಕ್ರಿಯಿಸಿರುವ ಸಂತೋಷ್, ‘ಅವರು ನನಗೆ ಕಳುಹಿಸಿರುವುದು ನೋಟಿಸ್ ಅಲ್ಲ. ಕೇವಲ ಒಂದು ಮೇಲ್ ಅಷ್ಟೇ. ನನ್ನನ್ನು ಬೆದರಿಸಲು ಮತ್ತು ನನ್ನ ಬಾಯಿ ಮುಚ್ಚಿಸಲು ಅವರು ಪ್ರಯತ್ನಿಸುತ್ತಿದ್ದಾರೆ. ನಾನು ಈ ಪ್ರಕರಣವನ್ನು ನ್ಯಾಯಾಲಯಕ್ಕೆ ಕೊಂಡೊಯ್ಯುತ್ತಿದ್ದೇನೆ. ಜಿಯೋ ಸ್ಟುಡಿಯೋಸ್ ಮತ್ತು ಬಿ62 ಸ್ಟುಡಿಯೋಸ್ ವಿರುದ್ಧ ಕೇಸ್ ದಾಖಲಿಸುತ್ತೇನೆ’ ಎಂದು ಸವಾಲು ಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ತನ್ನ ಕಂದಮ್ಮನಿಗೆ ನೀರು ಕೊಟ್ಟು ಬಾಯಾರಿಕೆ ನೀಗಿಸಿದ ಯುವಕನಿಗೆ ಧನ್ಯವಾದ ತಿಳಿಸಿದ ಯುವಕ

ಆನೆಗಳ (elephants) ಆಟ ತುಂಟಾಟಗಳನ್ನು ಕಣ್ತುಂಬಿಸಿಕೊಳ್ಳುವುದೇ ಚಂದ. ಆನೆಗಳು ತನ್ನ ಸಹಜ ಗುಣದಿಂದಲೇ ಮನುಷ್ಯರಿಗೆ ಹತ್ತಿರವಾಗುತ್ತದೆ. ಅದರಲ್ಲೂ ಈ ತಾಯಾನೆಗಳು ಸಹಾಯ ಮಾಡಿದ ಮನುಷ್ಯರಿಗೆ ಕೃತಜ್ಞತೆ ಸಲ್ಲಿಸುವುದನ್ನು ನೋಡುವುದಕ್ಕೆ ಖುಷಿಯಾಗುತ್ತದೆ. ಅಂತಹದ್ದೇ ದೃಶ್ಯವೊಂದು ವೈರಲ್ ಆಗಿದ್ದು, ಬಾಯಾರಿದ್ದ ತನ್ನ ಕಂದಮ್ಮನಿಗೆ ನೀರು ಕೊಟ್ಟದ್ದಕ್ಕೆ ಯುವಕನಿಗೆ ತಾಯಾನೆಯೊಂದು ಧನ್ಯವಾದ ತಿಳಿಸಿದೆ. ಈ ಹೃದಯ ಸ್ಪರ್ಶಿ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಯೋಗ್ (Yog) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ತಾಯಾನೆ ಗುಣವನ್ನು ಕಾಣಬಹುದು. ತಾಯಾನೆ ಹಾಗೂ ಮರಿಯಾನೆ ಅದರ ಮಾವುತನ ಜತೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುವುದನ್ನು ಕಾಣಬಹುದು. ಇದೇ ವೇಳೆ ಮರಿಯಾನೆಗೆ ವಿಪರೀತ ಬಾಯಾರಿಕೆ ಆದಂತೆ ಕಾಣುತ್ತಿದೆ. ಹೀಗಾಗಿ ರಸ್ತೆ ಬದಿಯಲ್ಲಿ ಗಿಡಗಳಿಗೆ ಪೈಪ್ ನಲ್ಲಿ ನೀರು ಹಾಕುತ್ತಿದ್ದ ಯುವಕನ ಹತ್ತಿರ ಓಡೋಡಿ ಹೋಗಿದೆ. ಆತ ಕೂಡ ನೀರು ಕುಡಿಯಲು ಅನುವು ಮಾಡಿಕೊಟ್ಟಿದ್ದಾನೆ. ನೀರಿನ ಪೈಪ್ ಬಾಯಿಯೊಳಗಿಟ್ಟು ಮರಿಯಾನೆ ಬಾಯಾರಿಕೆ ನೀಗುವಷ್ಟು ನೀರು ಕುಡಿದಿದೆ. ಅದಾದ ಬಳಿಕ ತಾಯಾನೆ ಯುವಕನಿಗೆ ಸೊಂಡಿಲೆತ್ತಿ ಧನ್ಯವಾದ ಸಲ್ಲಿಸಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ರಸ್ತೆ ದಾಟಲು ಸಹಾಯ ಮಾಡಿದ ವ್ಯಕ್ತಿಗೆ ಸೊಂಡಿಲೆತ್ತಿ ಧನ್ಯವಾದ ತಿಳಿಸಿದ ಆನೆಗಳ ಹಿಂಡು

ಏಪ್ರಿಲ್ 1 ರಂದು ಹಂಚಿಕೊಳ್ಳಲಾದ ಈ ವಿಡಿಯೋ 2.1 ಮಿಲಿಯನ್‌ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಮನುಷ್ಯರಿಗೆ ಹೋಲಿಸಿದ್ರೆ ಪ್ರಾಣಿಗಳೇ ಗುಣದಲಿ ಮೇಲು ಎಂದಿದ್ದಾರೆ. ಇನ್ನೊಬ್ಬರು, ತುಂಬಾ ಬಾಯಾರಿಕೆಯಾದಂತೆ ಕಾಣುತ್ತಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು ತಾಯಿ ಪ್ರೀತಿ ಮುಂದೆ ಏನು ಇಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಐಪಿಎಲ್‌ನಲ್ಲಿ ಮೊದಲ ಡಬಲ್ ಹೆಡರ್; ಯಾವ 4 ತಂಡಗಳ ನಡುವೆ ಪಂದ್ಯ?

ಮಾರ್ಚ್​ 28 ರಂದು ಆರಂಭವಾದ 2026 ರ ಐಪಿಎಲ್‌ನಲ್ಲಿ (IPL 2026) ಇದುವರೆಗೆ 6 ಪಂದ್ಯಗಳು ನಡೆದಿವೆ. 7ನೇ ಪಂದ್ಯ ಇಂದು, ಸಿಎಸ್​ಕೆ ಹಾಗೂ ಪಂಜಾಬ್ (CSK vs PBKS) ನಡುವೆ ನಡೆಯಲಿದೆ. ಅಂದಹಾಗೆ ಈ ಆವೃತ್ತಿಯಲ್ಲಿ ಐಪಿಎಲ್‌ನಲ್ಲಿ 12 ಡಬಲ್ ಹೆಡರ್ (Double Header) ಪಂದ್ಯಗಳು ನಡೆಯಲಿವೆ. ಅಂದರೆ ಒಂದೇ ದಿನ ಎರಡು ಪಂದ್ಯಗಳು ನಡೆಯಲಿವೆ. ಅದರಲ್ಲಿ ಮೊದಲ ಡಬಲ್ ಹೆಡರ್ ಪಂದ್ಯ ಏಪ್ರಿಲ್ 4 ರಂದು ನಡೆಯಲಿದೆ. ದಿನದ ಮೊದಲ ಪಂದ್ಯ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದ್ದು, ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿವೆ. ಹಾಗೆಯೇ ದಿನದ ಎರಡನೇ ಪಂದ್ಯದಲ್ಲಿ ಗುಜರಾತ್ ತಂಡಕ್ಕೆ ರಾಜಸ್ಥಾನ್ ರಾಯಲ್ಸ್ ಎದುರಾಗಲಿದೆ.

ಮುಂಬೈ-ಡೆಲ್ಲಿ ಮುಖಾಮುಖಿ ದಾಖಲೆ

ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಇದುವರೆಗೆ 37 ಪಂದ್ಯಗಳು ನಡೆದಿವೆ. ಇದರಲ್ಲಿ ಮುಂಬೈ ಇಂಡಿಯನ್ಸ್ 21 ಪಂದ್ಯಗಳನ್ನು ಗೆದ್ದಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ 16 ಪಂದ್ಯಗಳನ್ನು ಗೆದ್ದಿದೆ. ಅಂದರೆ ಈ ಮುಖಾಮುಖಿಯಲ್ಲಿ ಮುಂಬೈ ಮೇಲುಗೈ ಸಾಧಿಸಿರುವುದನ್ನು ಕಾಣಬಹುದಾಗಿದೆ. ಇನ್ನು ಈ ಅವೃತ್ತಿಯಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಆಡಿವೆ. ಅದರಲ್ಲಿ ಮುಂಬೈ ಇಂಡಿಯನ್ಸ್, ಕೆಕೆಆರ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದರೆ, ಇತ್ತ ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ತಂಡವನ್ನು ಮಣಿಸಿದೆ. ಹೀಗಾಗಿ ಗೆದ್ದ ತಂಡಗಳ ನಡುವಿನ ಕಾಳಗ ತೀವ್ರ ಕುತೂಹಲ ಕೆರಳಿಸಿದೆ.

ಡೆಲ್ಲಿ ಕ್ಯಾಪಿಟಲ್ಸ್: ಪಾತುಮ್ ನಿಸ್ಸಾಂಕ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ರಾಣಾ, ಟ್ರಿಸ್ಟಾನ್ ಸ್ಟಬ್ಸ್, ಡೇವಿಡ್ ಮಿಲ್ಲರ್, ಅಕ್ಸರ್ ಪಟೇಲ್ (ನಾಯಕ), ವಿಪ್ರಜ್ ನಿಗಮ್, ಕುಲ್ದೀಪ್ ಯಾದವ್, ಲುಂಗಿ ಎನ್‌ಗಿಡಿ, ಮುಖೇಶ್ ಕುಮಾರ್, ಟಿ ನಟರಾಜನ್.

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ರಿಯಾನ್ ರಿಕಲ್ಟನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಶೆರ್ಫಾನೆ ರುದರ್‌ಫೋರ್ಡ್, ಶಾರ್ದೂಲ್ ಠಾಕೂರ್, ಮಯಾಂಕ್ ಮಾರ್ಕಾಂಡೆ, ಗಜಾನಫರ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್

ಗುಜರಾತ್- ರಾಜಸ್ಥಾನ್ ಮುಖಾಮುಖಿ

ಐಪಿಎಲ್‌ನಲ್ಲಿ ಗುಜರಾತ್ ಮತ್ತು ರಾಜಸ್ಥಾನ್ ನಡುವೆ ಇದುವರೆಗೆ 8 ಪಂದ್ಯಗಳು ನಡೆದಿವೆ. ಇದರಲ್ಲಿ ಗುಜರಾತ್ ಟೈಟನ್ಸ್ 6 ಪಂದ್ಯಗಳನ್ನು ಗೆದ್ದಿದ್ದರೆ, ರಾಜಸ್ಥಾನ್ ಉಳಿದ 2 ಪಂದ್ಯಗಳನ್ನು ಗೆದ್ದಿದೆ. ಅಂದರೆ ಈ ಮುಖಾಮುಖಿಯಲ್ಲಿ ಗುಜರಾತ್ ಮೇಲುಗೈ ಸಾಧಿಸಿರುವುದನ್ನು ಕಾಣಬಹುದಾಗಿದೆ. ಇನ್ನು ಈ ಅವೃತ್ತಿಯಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಆಡಿವೆ. ಅದರಲ್ಲಿ ಗುಜರಾತ್ ಟೈಟನ್ಸ್, ಪಂಜಾಬ್ ವಿರುದ್ಧ ಸೋತಿದ್ದರೆ, ಇತ್ತ ರಾಜಸ್ಥಾನ್, ಸಿಎಸ್​ಕೆ ತಂಡವನ್ನು ಮಣಿಸಿದೆ.

IPL 2026: ಮೊದಲ ಗೆಲುವಿನ ಹುಡುಕಾಟದಲ್ಲಿ ಸಿಎಸ್​ಕೆ; ತಂಡದಲ್ಲಿ ಏನೆಲ್ಲಾ ಬದಲಾವಣೆ?

ಗುಜರಾತ್ ಟೈಟಾನ್ಸ್ ಸಂಭಾವ್ಯ ಪ್ಲೇಯಿಂಗ್ XI: ಸಾಯಿ ಸುದರ್ಶನ್, ಶುಭ್​ಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ವಾಷಿಂಗ್ಟನ್ ಸುಂದರ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ರಾಜಸ್ಥಾನ್ ರಾಯಲ್ಸ್ ಸಂಭಾವ್ಯ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಾಂದ್ರೆ ಬರ್ಗರ್, ಸಂದೀಪ್ ಶರ್ಮಾ, ರವಿ ಬಿಷ್ಣೋಯ್, ಬ್ರಿಜೇಶ್ ಶರ್ಮಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರೈತರಿಗೂ ತಟ್ಟಿದ್ದ ಯುದ್ಧದ ಬಿಸಿ: ಗಗನಕ್ಕೇರಿದ್ದ ತರಕಾರಿ ದರದಲ್ಲಿ ಭಾರೀ ಕುಸಿತ

ಚಿಕ್ಕಬಳ್ಳಾಪುರ, ಏಪ್ರಿಲ್​ 03: ವಾಣಿಜ್ಯ ಸಿಲಿಂಡರ್​ಗಳ ಕೊರತೆಯಿಂದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಹಲವು ಹೋಟೆಲ್‍ಗಳು ಬಂದ್ ಆಗಿವೆ. ಇತ್ತ ಚಿಕ್ಕಬಳ್ಳಾಪುರದಲ್ಲೂ ಗ್ಯಾಸ್​ ಅಭಾವ ಮುಂದುವರೆದಿದೆ. ಹೋಟೆಲ್​ಗಳು ಬಂದ್ ಆಗುತ್ತಿವೆ. ಹೀಗಾಗಿ ಸದ್ಯ ನಗರದಲ್ಲಿ ತರಕಾರಿಗೆ (vegetable) ಬೆಲೆ ಇಲ್ಲದಂತಾಗಿದ್ದು, ರಾಶಿ-ರಾಶಿ ತರಕಾರಿ ಮಾರುಕಟ್ಟೆಯಲ್ಲಿ ಕೊಳೆಯುವಂತಾಗಿವೆ.

ಚಿಕ್ಕಬಳ್ಳಾಪುರದಲ್ಲಿ ತರಕಾರಿಗಿಲ್ಲ ಬೆಲೆ

ಚಿಕ್ಕಬಳ್ಳಾಪುರ ಹೂವು, ಹಣ್ಣು, ತರಕಾರಿಗೆ ಖ್ಯಾತಿ ಪಡೆದಿದೆ. ಅಲ್ಲಿ ಬೆಳೆಯುವ ತರಕಾರಿಗಳು ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಮೆಟ್ರೋ ನಗರಗಳಿಗೆ ದಿನನಿತ್ಯ ರಫ್ತಾಗುತ್ತದೆ. ಆದರೆ ವಾಣಿಜ್ಯ ಸಿಲಿಂಡರ್​ಗಳ ಕೊರತೆಯಿಂದ ಬೆಂಗಳೂರು ಸೇರಿದಂತೆ ವಿವಿಧಡೆ ಹೋಟೆಲ್‍ಗಳು ಬಂದ್ ಆಗಿವೆ.

ಇದನ್ನೂ ಓದಿ: ಚಿಯಾ, ಕಲ್ಲಂಗಡಿ ಬೆನ್ನಲ್ಲೇ ಕರಬೂಜಕ್ಕೂ ತಟ್ಟಿದ ಯುದ್ಧದ ಬಿಸಿ: ದರ ಕುಸಿತ, ಹೊಲದಲ್ಲೇ ಕೊಳೆಯುತ್ತಿರುವ ಹಣ್ಣು

ಇದರಿಂದ ಚಿಕ್ಕಬಳ್ಳಾಪುರದ ತರಕಾರಿಗೆ ಬೆಲೆ ಇಲ್ಲದಂತಾಗಿದೆ. ಹಾಗಾಗಿ ತರಕಾರಿಗಳ ಬೆಲೆ ತೀವ್ರ ಕುಸಿತವಾಗಿದೆ. ಬೆಸಿಗೆಯಲ್ಲಿ ಕೆ.ಜಿ ಬೀನ್ಸ್ ಬೆಲೆ ಬರೋಬ್ಬರಿ 80 ರೂಪಾಯಿಯಿಂದ 100 ರೂಪಾಯಿವರೆಗೂ ಇರುತ್ತೆ, ಆದರೆ ಈ ಭಾರಿ ಮೂಟೆ ಬೀನ್ಸ್ ಬೆಲೆ 300 ರೂಪಾಯಿಯಿಂದ 400 ನೂರು ರೂಪಾಯಿಗೆ ಬಿಕಾರಿಯಾಗುತ್ತಿದೆ.

ಯಾವ ತರಕಾರಿಗೆ ಎಷ್ಟು ಬೆಲೆ?

ಇರಾನ್, ಇಸ್ರೇಲ್-ಅಮೇರಿಕ ಯುದ್ಧ ಆರಂಭವಾಗುವುದಕ್ಕೂ ಮುನ್ನ ತರಕಾರಿಗಳಿಗೆ ಒಳ್ಳೆಯ ಬೆಲೆಯಿತ್ತು. ಕಳೆದ 20 ದಿನಗಳಿಂದ ತರಕಾರಿಗಳ ಬೆಲೆ ತೀವ್ರ ಕುಸಿತಿದೆ. ಬೀನ್ಸ್ ಕೆಜಿಗೆ 20 ರೂ, ಕ್ಯಾರೆಟ್ 8 ರೂ, ಸೋರೆಕಾಯಿ 5 ರೂ, ಆಲೂಗಡ್ಡೆ 6 ರೂ, ಬೆಂಡೆಕಾಯಿ 10 ರೂ, ಈರುಳ್ಳಿ 12 ರೂ, ಮೂಲಂಗಿ 5 ರೂ, ಆಗಲಕಾಯಿ 15 ರೂ, ಕ್ಯಾಪ್ಸಿಕಂ 20 ರೂ, ಬದನೇಕಾಯಿ 2 ರೂ, ದರ ಕುಸಿದಿದೆ. ಇನ್ನು ಹಗಲು-ರಾತ್ರಿ ಕಷ್ಟಪಟ್ಟು ತರಕಾರಿ ಬೆಳೆದ ರೈತರು ಕಣ್ಣೀರು ಹಾಕುವಂತಾಗಿದೆ.

ಇದನ್ನೂ ಓದಿ: ಮಧ್ಯಪ್ರಾಚ್ಯದ ವಾರ್​​ ಎಫೆಕ್ಟ್​​: ರೈತರ ಕಣ್ಣಲ್ಲಿ ನೀರು ತರಿಸಿದ ಈರುಳ್ಳಿ; ಪಾತಾಳಕ್ಕಿಳಿದ ಬೆಲೆ

ಒಟ್ಟಿನಲ್ಲಿ ಗಲ್ಫ್​ ಯುದ್ಧ ಎಫೆಕ್ಟ್​ನಿಂದ ವಾಣಿಜ್ಯ ಸಿಲಿಂಡರ್ ಸಿಗದೇ ಹೋಟೆಲ್​​ ಉದ್ಯಮ ಕುಂಟುತ್ತಾ ಸಾಗಿದೆ. ಇದರಿಂದ ಹೋಟೆಲ್ ಉದ್ಯಮ ನಂಬಿಕೊಂಡಿದ್ದ ತರಕಾರಿ ವ್ಯಾಪಾರಕ್ಕೂ ಭಾರಿ ಹೊಡೆತ ಬಿದ್ದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಪೇಪರ್ ಪ್ಲೇಟ್‌ನಲ್ಲಿ ಊಟ ಮಾಡುವುದು ಒಳ್ಳೆಯದೋ, ಅಲ್ಲವೋ? ತಜ್ಞರು ನೀಡಿದ ಮಾಹಿತಿ ಇಲ್ಲಿದೆ

ಇತ್ತೀಚಿನ ದಿನಗಳಲ್ಲಿ ಪೇಪರ್ ಪ್ಲೇಟ್‌ಗಳ ಬಳಕೆ ಗಣನೀಯವಾಗಿ ಹೆಚ್ಚಾಗಿದೆ. ಮನೆಗಳಲ್ಲಿ ನಡೆಯುವ ಕಾರ್ಯಕ್ರಮ, ಹುಟ್ಟುಹಬ್ಬ, ಮದುವೆ ಸೇರಿದಂತೆ ವಿವಿಧ ರೀತಿಯ ಸಮಾರಂಭಗಳಲ್ಲಿ ಆಹಾರ ಸೇವನೆಗೆ ಬಾಳೆ ಎಲೆ ಅಥವಾ ಸ್ಟೀಲ್ ಪ್ಲೇಟ್ ಬದಲು ಜನ ಪೇಪರ್ ಪ್ಲೇಟ್‌ಗಳನ್ನು ಬಳಸುವುದಕ್ಕೆ ಆರಂಭಿಸಿದ್ದಾರೆ. ಆದರೆ ಆರೋಗ್ಯ ತಜ್ಞರು ಹೇಳುವ ಪ್ರಕಾರ, ಬಿಸಿ ಬಿಸಿ ಆಹಾರವನ್ನು ಇಂತಹ ಪ್ಲೇಟ್‌ಗಳಲ್ಲಿ ಸೇವಿಸುವುದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು, ಅಷ್ಟೇಅಲ್ಲ, ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಈ ಬಗ್ಗೆ ಹಲವು ರೀತಿಯ ವಿಡಿಯೋ ವೈರಲ್ ಆಗುತ್ತಿದ್ದು, ಅದರಲ್ಲಿ ಡಾ. ವಿಕ್ರಾಂತ್ ಸಿಂಗ್ ಠಾಕೂರ್ ಹೇಳಿರುವ ಮಾಹಿತಿ ಕೂಡ ವೈರೆಲ್ ಆಗಿದೆ. ಅವರು ಪೇಪರ್ ಪ್ಲೇಟ್ (Paper Plates) ಬಳಕೆಯಿಂದ ಉಂಟಾಗುವ ಅಪಾಯಗಳ ಬಗ್ಗೆ ಅದರಲ್ಲಿ ತಿಳಿಸಿದ್ದಾರೆ.

ವೈದ್ಯರು ಹೇಳುವ ಪ್ರಕಾರ, ಸಾಮಾನ್ಯವಾಗಿ ನಾವು ಬಿಸಿ ಆಹಾರವನ್ನು ಪೇಪರ್ ಪ್ಲೇಟ್ ಅಥವಾ ಪ್ಲಾಸ್ಟಿಕ್ ಲೇಪಿತ ಪ್ಲೇಟ್‌ಗಳಲ್ಲಿ ಸೇವಿಸುತ್ತೇವೆ. ಆದರೆ ಇವು ಸಾಮಾನ್ಯ ಪ್ಲೇಟ್‌ಗಳಲ್ಲ, ಇವುಗಳನ್ನು “ಕ್ಯಾನ್ಸರ್ ಪ್ಲೇಟ್‌ಗಳು” ಎಂದು ಕರೆಯಬಹುದು ಎಂದು ಹೇಳಿದ್ದಾರೆ. ಏಕೆಂದರೆ ಬಿಸಿ ಆಹಾರದಿಂದ ಪ್ಲೇಟ್‌ನ ಮೇಲಿನ ಪ್ಲಾಸ್ಟಿಕ್ ಲೇಪ ಕರಗಿ, ಮೈಕ್ರೋಪ್ಲಾಸ್ಟಿಕ್‌ಗಳು ಮತ್ತು ಹಾನಿಕಾರಕ ರಾಸಾಯನಿಕಗಳು ಆಹಾರದಲ್ಲಿ ಬೆರೆತು ನಮ್ಮ ದೇಹಕ್ಕೆ ಪ್ರವೇಶಿಸುವ ಸಾಧ್ಯತೆ ಇರುತ್ತದೆ.

ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ?

  • ಕ್ಯಾನ್ಸರ್ ಅಪಾಯ ಹೆಚ್ಚಾಗುತ್ತದೆ
  • ಹಾರ್ಮೋನ್ ಅಸಮತೋಲನ
  • ರೋಗನಿರೋಧಕ ಶಕ್ತಿ ಕಡಿಮೆಯಾಗುವುದು
  • ಪರಿಸರದ ಮೇಲೂ ಹಾನಿ

ಇಂತಹ ಪ್ಲೇಟ್‌ಗಳನ್ನು ಬಳಸಿ ಬಿಸಾಡಿದಾಗ, ಅವುಗಳನ್ನು ಹಸು ಮುಂತಾದ ಪ್ರಾಣಿಗಳು ತಿಂದರೆ ಸಾವಿಗೆ ದಾರಿಮಾಡಿಕೊಡಬಹುದು. ಇನ್ನು, ಇವುಗಳನ್ನು ಸುಟ್ಟರೆ ವಿಷಕಾರಿ ಹೊಗೆ ಉಂಟಾಗಿ ಗಾಳಿ ಮಾಲಿನ್ಯವಾಗಬಹುದು. ಇದರಿಂದ ಉಸಿರಾಟ ಸಂಬಂಧಿ ಸಮಸ್ಯೆಗಳು ಮತ್ತಷ್ಟು ಹೆಚ್ಚಾಗಬಹುದು.

ಇದನ್ನೂ ಓದಿ: ಊಟ ಮಾಡುವಾಗ ಅಥವಾ ಊಟವಾದ ಎಷ್ಟು ಹೊತ್ತಿನ ನಂತರ ನೀರು ಕುಡಿಯಬೇಕು? ಆಯುರ್ವೇದ ಏನು ಹೇಳುತ್ತದೆ?

ತಜ್ಞರು ಹೇಳುವುದೇನು?

ಪರಿಸರ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಪೇಪರ್ ಪ್ಲೇಟ್‌ಗಳ ಬದಲು ನೈಸರ್ಗಿಕ ವಸ್ತುಗಳಿಂದ ತಯಾರಾದ ಪ್ಲೇಟ್‌ಗಳನ್ನು ಬಳಸುವುದು ಉತ್ತಮ. ಉದಾಹರಣೆಗೆ:

  • ಅಡಿಕೆ (Areca) ಎಲೆ ಪ್ಲೇಟ್‌ಗಳು
  • ಬಾಳೆ ಎಲೆಗಳು
  • ಬಿದಿರಿನ ಪ್ಲೇಟ್‌ಗಳು
    ಒಟ್ಟಿನಲ್ಲಿ, ಸಣ್ಣ ಅಭ್ಯಾಸಗಳು ನಮ್ಮ ಆರೋಗ್ಯ ಮತ್ತು ಪರಿಸರದ ಮೇಲೆ ದೊಡ್ಡ ಪರಿಣಾಮ ಬೀರುತ್ತವೆ. ಆದ್ದರಿಂದ ಪೇಪರ್ ಪ್ಲೇಟ್ ಬಳಕೆಯಲ್ಲಿ ಎಚ್ಚರಿಕೆ ಅಗತ್ಯ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾರ್ಯಕ್ರಮದಲ್ಲಿ ಕುಸಿದುಬಿದ್ದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ

ಬೆಂಗಳೂರು, (ಏಪ್ರಿಲ್ 03): ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆಯವರು (Lokayukta retired justice santosh hegde ) ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಇಂದು (ಏಪ್ರಿಲ್ 03) ಸ್ಕೌಟ್ಸ್ & ಗೈಡ್ಸ್ ಆಯುಕ್ತ PGR ಸಿಂಧ್ಯಾಗೆ ಅಭಿನಂದನಾ ಸಮಾರಂಭದಲ್ಲಿ ಸಂತೋಷ್ ಹೆಗ್ಡೆ ಭಾಗವಹಿಸಿದ್ದು, ಈ ವೇಳೆ ಭಾಷಣ ಮಾಡುವಾಗ ಅಸ್ವಸ್ಥಗೊಂಡಿದ್ದಾರೆ. ಬಳಿಕ ಭಾಷಣ ಮುಗಿಸಿ ವೇದಿಕೆ ಮೇಲಿನ ಕುರ್ಚಿ ಮೇಲೆ ಕುಳಿತುಕೊಳ್ಳುವಾಗ ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಸದ್ಯ ಅವರಿಗೆ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಕಿತ್ಸೆ ನೀಡಲಾಗುತ್ತಿದೆ.

Source link

ಏಪ್ರಿಲ್​ನಲ್ಲಿ ಚಿನ್ನ ಸಖತ್ ದುಬಾರಿ? ಕಳೆದ 45 ವರ್ಷದಲ್ಲೆ ಬಂಗಾರಕ್ಕೆ ಗರಿಷ್ಠ ಡಿಮ್ಯಾಂಡ್; 20,000 ರೂಗೆ ಏರುತ್ತಾ ಬೆಲೆ?

ನವದೆಹಲಿ, ಏಪ್ರಿಲ್ 3: ಕಳೆದ 1 ವರ್ಷದಿಂದ ಚಿನ್ನದ ಬೆಲೆ (Gold Rates) ಬಹಳ ಏರಿದೆ. 2025ರ ಏಪ್ರಿಲ್ 3ರಂದು ಅಪರಂಜಿ ಚಿನ್ನದ ಬೆಲೆ 9,164 ರೂ ಇತ್ತು. ಒಂದು ವರ್ಷದ ನಂತರ ಇವತ್ತು ಅದರ ಬೆಲೆ 15,093 ರೂಗೆ ಏರಿದೆ. ಒಂದು ವರ್ಷದಲ್ಲಿ ಬೆಲೆಯಲ್ಲಿ ಶೇ. 65ರಷ್ಟು ಏರಿಕೆ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಔನ್ಸ್ ಚಿನ್ನದ ಬೆಲೆ 4,700 ಡಾಲರ್ ದಾಟಿ, 4,800 ಡಾಲರ್ ಗಡಿಯತ್ತ ಸಾಗಿದೆ. ಒಂದು ಔನ್ಸ್ ಎಂದರೆ 28.35 ಗ್ರಾಮ್.

ಫೆಬ್ರುವರಿ 28ರಂದು ಯುದ್ಧ ಶುರುವಾದಾಗ ಚಿನ್ನ, ಬೆಳ್ಳಿ ಬೆಲೆ ತೀರಾ ಹೆಚ್ಚಬಹುದು ಎಂದು ಭಾವಿಸಲಾಗಿತ್ತು. ಆದರೆ, ಬೆಲೆ ಇಳಿಕೆಯಾಗಿದೆ. ಮಾರ್ಚ್ 1ರಂದು 17,309 ರೂ ಇದ್ದ ಚಿನ್ನದ ಬೆಲೆ ಇವತ್ತು 15,093 ರೂಗೆ ಇಳಿದಿದೆ. ಮಾರ್ಚ್ 1ರಿಂದೀಚೆ ಶೇ. 12ರಷ್ಟು ಬೆಲೆ ಇಳಿಕೆ ಆಗಿದೆ. ಖ್ಯಾತ ಹೂಡಿಕೆದಾರ ಪೀಟರ್ ಶಿಫ್ ಪ್ರಕಾರ ಚಿನ್ನದ ಇಳಿಕೆಯ ಆಟ ಮುಕ್ತಾಯವಾಗಿದೆ. ಇನ್ನೇನಿದ್ದರೂ ಪವರ್​ಫುಲ್ ಜಂಪ್.

ಇದನ್ನೂ ಓದಿ: ಚಿನ್ನದ ಬೆಲೆ ಗ್ರಾಮ್​ಗೆ 180 ರೂ ಏರಿಕೆ; ಇಲ್ಲಿದೆ ದರಪಟ್ಟಿ

ಮಾರ್ಚ್​ನಲ್ಲಿ ಇಳಿದಿದ್ದ ಚಿನ್ನದ ಬೆಲೆ ಏಪ್ರಿಲ್​ನಲ್ಲಿ ಸತತವಾಗಿ ಏರಿಕೆಯಾಗುವ ಟ್ರೆಂಡ್ ಇದೆ. ಇದು ಯುದ್ಧದ ಪರಿಣಾಮದಿಂದ ಮಾತ್ರವೇ ಆಗುತ್ತಿರುವ ಏರಿಕೆಯಲ್ಲ. ಬದಲಾಗಿ, ಹೂಡಿಕೆದಾರರು ಅಮೆರಿಕನ್ ಡಾಲರ್​ನಿಂದ ದೂರವಾಗಿ, ನೈಜ ಆಸ್ತಿಯತ್ತ ವಾಲತೊಡಗಿರುವುದರ ಕುರುಹು ಇದು ಎಂಬುದು ಪೀಟರ್ ಶಿಫ್ ಅವರ ಅನಿಸಿಕೆ.

ಏಪ್ರಿಲ್​ನಲ್ಲಿ ಚಿನ್ನದ ಬೆಲೆ 20,000 ರೂ ದಾಟುತ್ತಾ?

ಪೀಟರ್ ಶಿಫ್ ಪ್ರಕಾರ, ಮಾರ್ಚ್ ತಿಂಗಳು 2008ರ ನಂತರ ಚಿನ್ನದ ಸಾಧನೆ ಅತ್ಯಂತ ಕಳಪೆ ಸಾಧನೆ ಕಂಡ ತಿಂಗಳೆನಿಸಿದೆ. ಹಾಗೆಯೇ, ಏಪ್ರಿಲ್ ತಿಂಗಳು ಕಳೆದ ನಾಲ್ಕೂವರೆ ದಶಕದಲ್ಲೇ ಚಿನ್ನಕ್ಕೆ ಬೆಸ್ಟ್ ಮಂತ್ ಆಗಿರಲಿದೆಯಂತೆ.

ಇದನ್ನೂ ಓದಿ: ಬೆಂಗಳೂರಿನ ಶೇ. 80 ಐಟಿ ಕೂಲಿಗಳಿಗೆ ಇನ್ನು 3 ವರ್ಷದಲ್ಲಿ ಕೆಲಸ ಇರೋದಿಲ್ಲ: ಶಾಕ್ ಕೊಟ್ಟಿದೆ ರೆಡ್ಡಿಟ್ ಪೋಸ್ಟ್

ಚಿನ್ನದ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಔನ್ಸ್​ಗೆ 4,700 ಡಾಲರ್ ಬೆಲೆ ದಾಟಿ, 4,800 ಡಾಲರ್​ನತ್ತ ಸಾಗಿದೆ. ಮಾರ್ಚ್ 23ರ ನಂತರ ಚಿನ್ನದ ಬೆಲೆ ಶೇ. 15ರಷ್ಟು ಹೆಚ್ಚಾಗಿದೆ. ಇದೇ ಟ್ರೆಂಡ್ ಏಪ್ರಿಲ್​ನಲ್ಲಿ ಮುಂದುವರಿಯಲಿದ್ದು, ಒಂದು ಔನ್ಸ್ ಚಿನ್ನದ ಬೆಲೆ 6,000 ಡಾಲರ್ ದಾಟಬಹುದು. ಅಂದರೆ, ಒಂದು ಗ್ರಾಮ್ ಚಿನ್ನದ ಬೆಲೆ 19,616 ರೂ ಮುಟ್ಟಬಹುದು. 20,000 ರೂ ದಾಟಿದರೂ ಅಚ್ಚರಿ ಇಲ್ಲ ಎನ್ನುವ ಅಭಿಪ್ರಾಯ ಇವರದ್ದು. ಅಂದರೆ ಮುಂದಿನ ನಾಲ್ಕು ವಾರದಲ್ಲಿ ಬಂಗಾರದ ಬೆಲೆ ಶೇ 20ಕ್ಕಿಂತಲೂ ಹೆಚ್ಚಿನ ಪ್ರಮಾಣದಷ್ಟು ಏರಿಕೆ ಆಗಬಹುದು.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link