ವೇದಿಕೆ ಮೇಲೆ ವಾಂತಿ ಮಾಡಿ ಬಿದ್ರು: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಬೆಂಗಳೂರು, (ಏಪ್ರಿಲ್ 03): ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ (santosh hegde) ಅವರು ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದುಬಿದ್ದಿದ್ದಾರೆ. ಬೆಂಗಳೂರಿನ (Bengaluru) ಮಹಾರಾಣಿ ಕಾಲೇಜಿನ ಸಮೀಪವಿರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸಂತೋಷ್ ಹೆಗ್ಡೆ ಅವರನ್ನು ಆಹ್ವಾನಿಸಲಾಗಿತ್ತು. ವೇದಿಕೆಯ ಮೇಲೆ ಡಯಾಸ್ ಬಳಿ ನಿಂತು ನೆರೆದಿದ್ದವರನ್ನು ಉದ್ದೇಶಿಸಿ ಮಾತಾಡುತ್ತಿದ್ದ ವೇಳೆ ಅಸ್ವಸ್ಥಗೊಂಡಿದ್ದಾರೆ. ಬಳಿಕ ಭಾಷಣ ಮುಗಿಸಿ…