nagaraj11081993

ಮೊಟ್ಟೆ ಸೇವನೆಯಿಂದ ಕ್ಯಾನ್ಸರ್​ ಬರಲ್ಲ: FSSAI ಸ್ಪಷ್ಟನೆ – Kannada News | Eating Eggs Does Not Cause Cancer: FSSAI Clarifies

ದೆಹಲಿ, ಡಿಸೆಂಬರ್​ 21: ಮೊಟ್ಟೆ (Egg) ತಿನ್ನುವುದರಿಂದ ಕ್ಯಾನ್ಸರ್ ಬರುತ್ತೆ ಎನ್ನುವ ವರದಿಗಳನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಆಧಾರ ರಹಿತ ಎಂದು ತಳ್ಳಿ ಹಾಕಿದೆ. ಸದ್ಯ ದೇಶದಲ್ಲಿರುವ ಮೊಟ್ಟೆಗಳು ಸೇವನೆಗೆ ಸುರಕ್ಷಿತವಾಗಿವೆ ಎಂದು ಸ್ಪಷ್ಟನೆ ನೀಡಿದೆ. ಆ ಮೂಲಕ ಜನರ ಗೊಂದಲಗಳಿಗೆ ತೆರೆ ಎಳೆಯಲಾಗಿದೆ. ಈ ಕುರಿತಾಗಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಶನಿವಾರ ಮಾಧ್ಯಮ ಪ್ರಕರಣೆ ಹೊರಡಿಸಿದ್ದು, ಮೊಟ್ಟೆ ತಿನ್ನುವುದರಿಂದ ಕ್ಯಾನ್ಸರ್ ಬರುತ್ತೆ ಎನ್ನುವ ವರದಿಗಳು ಅವೈಜ್ಞಾನಿಕವಾಗಿದ್ದು,…

Read More

World Saree Day 2025: ನೀರೆಯರ ಮನಗೆದ್ದ ಸೀರೆಗೂ ಒಂದು ದಿನ; ಈ ಆಚರಣೆಯ ಮಹತ್ವವನ್ನು ತಿಳಿಯಿರಿ – Kannada News | World Saree Day 2025: What is the purpose of celebrating World Saree Day?

ಸೀರೆ (Saree) ಹೆಣ್ಣಿನ ಚೆಲುವು ಸೌಂದರ್ಯದ ಸಂಕೇತ ಅಂತಾನೇ ಹೇಳಬಹುದು. ಸೊಬಗು ಸೌಂದರ್ಯದ ಪ್ರತಿಬಿಂಬವಾಗಿರುವ ಸೀರೆ ಕೇವಲ ಉಡುಗೆಯಲ್ಲ ಇದು ನಮ್ಮ ಭಾರತೀಯ ಸಂಸ್ಕೃತಿ, ಪರಂಪರೆ ಮತ್ತು ಸಂಪ್ರದಾಯದ ಮೂರ್ತ ರೂಪವಾಗಿದೆ. ಶತಮಾನಗಳಿಂದಲೂ ಭಾರತದಲ್ಲಿ ಮಹಿಳೆಯರು ಸೀರೆಯನ್ನು ಧರಿಸುತ್ತಿದ್ದಾರೆ. ಎಷ್ಟೇ ಫ್ಯಾಶನ್‌, ಟ್ರೆಂಡಿ ಉಡುಗೆಗಳು ಬಂದರೂ ಸೀರೆಯ ಕ್ರೇಜ್‌ ಮಾತ್ರ ಇಂದಿಗೂ ಕಮ್ಮಿಯಾಗಿಲ್ಲ. ಈ ಸೀರೆ ಫ್ಯಾಷನ್‌ಗೂ ಮೀರಿ ಸಾಂಸ್ಕೃತಿಕ ಹೆಮ್ಮೆಯನ್ನು ಪ್ರತಿನಿಧಿಸುವ ಒಂದು ಉಡುಪಾಗಿದ್ದು, ಇದರ ಸಾಂಸ್ಕೃತಿಕ ವೈವಿಧ್ಯತೆ ಮತ್ತು ಐತಿಹಾಸಿಕ ಮಹತ್ವಕ್ಕೆ ಗೌರವ ನೀಡುವ…

Read More

ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ – Kannada News | Pramod Shetty talks about Shetty Gang dispute in Kannada Film Industry

ಕನ್ನಡ ಚಿತ್ರರಂಗದಲ್ಲಿ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ರಾಜ್ ಬಿ. ಶೆಟ್ಟಿ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಈ ಕಲಾವಿದರು ಜೊತೆಜೊತೆಯಾಗಿ ಸಿನಿಮಾ ಕೆಲಸಗಳನ್ನು ಮಾಡುತ್ತಿದ್ದಾರೆ. ಆ ಕಾರಣದಿಂದ ಅಭಿಮಾನಿಗಳು ಇವರನ್ನು ಶೆಟ್ಟಿ ಗ್ಯಾಂಗ್ (Shetty Gang) ಎಂದು ಕರೆಯುತ್ತಾರೆ. ಇತ್ತೀಚಿನ ದಿನಗಳಲ್ಲಿ ಒಂದು ವದಂತಿ ಹಬ್ಬಿತ್ತು. ಶೆಟ್ಟಿ ಗ್ಯಾಂಗ್​ನಲ್ಲಿ ಬಿರುಕು ಮೂಡಿದೆ ಎಂಬ ಅನುಮಾನ ವ್ಯಕ್ತವಾಗಿತ್ತು. ಆ ಬಗ್ಗೆ ನಟ ಪ್ರಮೋದ್ (Pramod Shetty) ಅವರು ಮಾತನಾಡಿದ್ದಾರೆ. ‘45’ ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಅವರು ಈ…

Read More

ಇಶಾನ್ ಕಿಶನ್ ಅಬ್ಬರದಿಂದ ರಿಂಕು ಸಿಂಗ್​ಗೆ ಖುಲಾಯಿಸಿದ ಅದೃಷ್ಟ – Kannada News | T20 World Cup 2026: Rinku Singh Selected in place of Jitesh Sharma

ಟಿ೨೦ ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ ಸ್ಥಾನಗಿಟ್ಟಿಸಿಕೊಳ್ಳುವಲ್ಲಿ ರಿಂಕು ಸಿಂಗ್ ಯಶಸ್ವಿಯಾಗಿದ್ದಾರೆ. ಆದರೆ ರಿಂಕು ಸಿಂಗ್​ಗೆ ದಿಢೀರ್ ಅದೃಷ್ಟ ಖುಲಾಯಿಸಿದ್ದು ಇಶಾನ್ ಕಿಶನ್ ಅಬ್ಬರದಿಂದ ಎಂಬುದು ವಿಶೇಷ. ಇತ್ತೀಚೆಗೆ ಮುಗಿದ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಇಶಾನ್ ಕಿಶನ್ ಭರ್ಜರಿ ಪ್ರದರ್ಶನ ನೀಡಿದ್ದರು. ಜಾರ್ಖಂಡ್ ಪರ ಕಣಕ್ಕಿಳಿದಿದ್ದ ಕಿಶನ್ 2 ಶತಕ ಹಾಗೂ 2 ಅರ್ಧಶತಕಗಳೊಂದಿಗೆ ಬರೋಬ್ಬರಿ 51 ರನ್ ಕಲೆಹಾಕಿದ್ದರು. ಈ ಭರ್ಜರಿ ಪ್ರದರ್ಶನದೊಂದಿಗೆ ಇಶಾನ್ ಕಿಶನ್ ಟೀಮ್ ಇಂಡಿಯಾದ…

Read More

Daily Devotional: ಒಂದೇ ಗೋತ್ರದಲ್ಲಿ ಮದುವೆ ಆದರೆ ಏನಾಗುತ್ತೆ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Gotra and Marriage: An Astrological, Spiritual, and Scientific Perspective

ವಿವಾಹ ಹೊಂದಾಣಿಕೆ ಪ್ರಕ್ರಿಯೆಯಲ್ಲಿ ನಾಮಬಲ ಮತ್ತು ಜನ್ಮದಿನಾಂಕಗಳ ಜೊತೆಗೆ ಗೋತ್ರಕ್ಕೂ ಮಹತ್ವ ನೀಡಲಾಗುತ್ತದೆ. ಒಂದೇ ಗೋತ್ರದವರ ನಡುವೆ ವಿವಾಹ ಸಾಧ್ಯವೇ ಅಥವಾ ಸೂಕ್ತವೇ ಎಂಬ ಪ್ರಶ್ನೆ ಹಲವು ಕುಟುಂಬಗಳಲ್ಲಿ ಆಗಾಗ್ಗೆ ಉದ್ಭವಿಸುತ್ತದೆ. ಗೋತ್ರವನ್ನು ವ್ಯಕ್ತಿಯ ಜೀವಾ ನಾಡಿ ಎಂದು ಪರಿಗಣಿಸಲಾಗುತ್ತದೆ ಮತ್ತು ಇದು ವ್ಯಕ್ತಿಯ ಹುಟ್ಟಿಗೆ ಮಹತ್ತರ ಸಂಬಂಧ ಹೊಂದಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ತಜ್ಞರಾದ ಡಾ. ಬಸವರಾಜ ಗುರೂಜಿ ತಮ್ಮ ನಿತ್ಯ ಭಕ್ತಿಯಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಜ್ಯೋತಿಷ್ಯ…

Read More

ನಾಯಕತ್ವ ಬದಲಾವಣೆ ಗೊಂದಲ ಆದಷ್ಟು ಬೇಗ ಬಗೆಹರಿಸಿ: ಮಲ್ಲಿಕಾರ್ಜುನ ಖರ್ಗೆಗೆ VR ಸುದರ್ಶನ್ ಪತ್ರ – Kannada News | Karnataka Power Tussle: KPCC Vice President Appeals to AICC President Kharge Over Political Uncertainty in State

ಬೆಂಗಳೂರು, ಡಿಸೆಂಬರ್​ 21: ಕರ್ನಾಟಕ ಕಾಂಗ್ರೆಸ್‌ನಲ್ಲಿನ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಂದು ಬೆಳವಣಿಗೆ ನಡೆದಿದೆ. ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್.ಸುದರ್ಶನ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ. ಕೆಪಿಸಿಸಿ ಪದಾಧಿಕಾರಿಗಳ ಪರವಾಗಿ ಬರೆದ ಈ ಪತ್ರದಲ್ಲಿ, ರಾಜ್ಯದಲ್ಲಿರುವ ರಾಜಕೀಯ ಗೊಂದಲಗಳನ್ನು ಆದಷ್ಟು ಬೇಗ ಬಗೆಹರಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯದ ಆಡಳಿತ ಮತ್ತು ಪಕ್ಷದ ಪ್ರತಿಷ್ಠೆಗೆ ಈ ಗೊಂದಲಗಳು ಧಕ್ಕೆ ತರುತ್ತಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್…

Read More

ಬಿಗ್ ಬಾಸ್ ಮನೆಯೊಳಗೆ ಗಿಲ್ಲಿಗೆ ಬಂತ ಕೊರೊನಾ? ಮೂಡಿದೆ ಅನುಮಾನ – Kannada News | Gilli Nata doubts about Corona Virus in Bigg Boss Kannada Season 12

ಕೊರನಾ ವೈರಸ್ ಹಾವಳಿ ಹೆಚ್ಚಿದಾಗ ಜನಜೀವನ ಅಸ್ತವ್ಯಸ್ತ ಆಗಿತ್ತು. ಬಿಗ್ ಬಾಸ್ ಶೋ ಕೂಡ ಅರ್ಧಕ್ಕೆ ನಿಲ್ಲುವಂತೆ ಆಗಿತ್ತು. ಈಗ ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋನಲ್ಲಿ ಕೊರೊನಾ ಬಗ್ಗೆ ಮಾತನಾಡಿದ್ದಾರೆ. ಡಿಸೆಂಬರ್ 21ರ ಸಂಚಿಕೆಯಲ್ಲಿ ಕಿಚ್ಚ ಸುದೀಪ್ ಅವರು ಎಲ್ಲ ಸ್ಪರ್ಧಿಗಳಿಗೆ ಒಂದು ಟಾಸ್ಕ್ ನೀಡಿದರು. ಕಣ್ಣಿಗೆ ಬಟ್ಟೆ ಕಟ್ಟಿಕೊಂಡು, ತಮ್ಮ ಎದುರು ಇರುವ ಆಹಾರವನು ತಿಂದು, ಅದೇನು ಎಂಬುದನ್ನು ಪತ್ತೆ ಹಚ್ಚಬೇಕು….

Read More

ನಾನು ಬಾಯಿ ಮುಚ್ಕೊಂಡು ಇದ್ದೆ, ಯಾಕಂದ್ರೆ; ಹುಬ್ಬಳಿಯಿಂದ ಇಡೀ ರಾಜ್ಯಕ್ಕೆ ಸುದೀಪ್ ಖಡಕ್ ಸಂದೇಶ – Kannada News | Kichcha Sudeep speech in Mark Movie pre release event in Hubballi

ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ (Mark Movie) ಡಿಸೆಂಬರ್ 25ರಂದು ಅದ್ದೂರಿಯಾಗಿ ತೆರೆಕಾಣಲಿದೆ. ಈ ಪ್ರಯುಕ್ತ ಡಿಸೆಂಬರ್ 20ರ ಸಂಜೆ ಹುಬ್ಬಳ್ಳಿಯಲ್ಲಿ ಪ್ರೀ-ರಿಲೀಸ್ ಇವೆಂಟ್ ಮಾಡಲಾಗಿದೆ. ಅಪಾರ ಸಂಖ್ಯೆಯ ಅಭಿಮಾನಿಗಳು ಇದರಲ್ಲಿ ಭಾಗಿ ಆಗಿದ್ದಾರೆ. ಚಿತ್ರತಂಡದ ಕಲಾವಿದರು, ತಂತ್ರಜ್ಞರು ಹಾಗೂ ಆಪ್ತರ ಸಮ್ಮುಖದಲ್ಲಿ ಕಿಚ್ಚ ಸುದೀಪ್ (Kichcha Sudeep) ಅವರು ಮಾತನಾಡಿದರು. ಈ ವೇದಿಕೆಯಲ್ಲಿ ತಮ್ಮ ಅಭಿಮಾನಿಗಳಿಗೆ ಅವರು ಖಡಕ್ ಸಂದೇಶ ನೀಡಿದರು. ‘ಎಲ್ಲರೂ ಹೇಗಿದ್ದೀರಿ? 2003ರಲ್ಲಿ ಇಲ್ಲಿ ಒಂದು ಪ್ರೋಗ್ರಾಂ ಮಾಡಿದ ಬಳಿಕ ಮತ್ತೆ…

Read More

ನ್ಯೂಝಿಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ – Kannada News | India Squad For New Zealand Series

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 8 ಪಂದ್ಯಗಳ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲಿಗೆ ಏಕದಿನ ಪಂದ್ಯಗಳನ್ನಾಡಲಾಗುತ್ತಿದ್ದು, ಇದಾದ ಬಳಿಕ ಟಿ20 ಸರಣಿ ಜರುಗಲಿದೆ. ಇದೀಗ ಟಿ20 ಸರಣಿಗಾಗಿ 15 ಸದಸ್ಯರುಗಳ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡರೆ, ಉಪನಾಯಕನಾಗಿ ಅಕ್ಷರ್ ಪಟೇಲ್ ಕಣಕ್ಕಿಳಿಯಲಿದ್ದಾರೆ. ಇದಕ್ಕೂ ಮುನ್ನ ನಡೆದ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಶುಭ್​ಮನ್ ಗಿಲ್ ಉಪನಾಯಕನಾಗಿ ಕಾಣಿಸಿಕೊಂಡಿದ್ದರು. ಇದೀಗ ಅವರನ್ನು ಟಿ20 ತಂಡದಿಂದ…

Read More

ಚಾಮರಾಜನಗರದಲ್ಲಿ ಶುರುವಾಯ್ತು ಆಪರೇಶನ್ ಬೀಸ್ಟ್! ಹುಲಿ ಸೆರೆಗೆ ಈಗಲ್ ಡ್ರೋನ್ ಕ್ಯಾಮರಾ ಮೂಲಕ ಕಾರ್ಯಾಚರಣೆ – Kannada News | Operation Beast: Chamarajanagar Eagle Drone Tiger Combing and Capture

ಚಾಮರಾಜನಗರ, ಡಿಸೆಂಬರ್ 21: ಚಾಮರಾಜನಗರದಲ್ಲಿ ಇತ್ತೀಚೆಗೆ ಹುಲಿಗಳ ಹಾವಳಿ ಹೆಚ್ಚಿರುವ ಕಾರಣ, ಅರಣ್ಯ ಇಲಾಖೆಯು ಆಪರೇಷನ್ ಬೀಸ್ಟ್ ಹೆಸರಿನಲ್ಲಿ ಬೃಹತ್ ಕೂಂಬಿಂಗ್ ಕಾರ್ಯಾಚರಣೆಯನ್ನು ಹಮ್ಮಿಕೊಂಡಿದೆ. ಬಂಡೀಪುರ ಹುಲಿ ಮೀಸಲು ಅರಣ್ಯ ಸಿಬ್ಬಂದಿ ಹುಲಿ ಸೆರೆ ಹಿಡಿಯಲು ಮುಂದಾಗಿದ್ದು, ಈ ಕಾರ್ಯಾಚರಣೆಯಲ್ಲಿ ಡ್ರೋನ್ ಕ್ಯಾಮೆರಾಗಳು ಪ್ರಮುಖ ಪಾತ್ರ ವಹಿಸುತ್ತಿವೆ. ಸಿಎಫ್ ಪ್ರಭಾಕರನ್ ಅವರ ಸೂಚನೆಯ ಮೇರೆಗೆ, ವಿಶೇಷವಾಗಿ ಟೈಗರ್ ಕೂಂಬಿಂಗ್‌ಗಾಗಿಯೇ ಸಿದ್ಧಪಡಿಸಲಾದ ಈಗಲ್ ಡ್ರೋನ್ ಕ್ಯಾಮೆರಾವನ್ನು ಬಳಸಲಾಗುತ್ತಿದೆ. ಭೀಮನ ಬೀಡು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಹುಲಿಯ ಚಲನವಲನವನ್ನು ಪತ್ತೆಹಚ್ಚಲು…

Read More