ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಐವರು ಮಹಿಳಾ ಕಾರ್ಮಿಕರು ಅಸ್ವಸ್ಥ; ಒಬ್ಬರ ಸ್ಥಿತಿ ಗಂಭೀರ!
ಸಕಲೇಶಪುರ, ಮಾ.28: ಹಾಸನ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಬಿರುಗಾಳಿ ಮಳೆ ಅಬ್ಬರಿಸುತ್ತಿದ್ದು, ಸಕಲೇಶಪುರ ತಾಲೂಕಿನ ದೀನಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಐವರು ಮಹಿಳಾ ಕಾರ್ಮಿಕರು ಗಂಭೀರವಾಗಿ ಅಸ್ವಸ್ಥಗೊಂಡಿದ್ದಾರೆ. ಕುದರಂಗಿ ಗ್ರಾಮದ ಕಾರ್ಮಿಕ ಮಹಿಳೆಯರಾದ ರೂಪಾ, ಲಕ್ಷ್ಮಿ, ಸುಮಿತ್ರಾ ಮತ್ತು ಜಯಮ್ಮ ಸೇರಿದಂತೆ ಐವರು ದೀನಹಳ್ಳಿ ಗ್ರಾಮದ ಕಾಫಿ ತೋಟವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಬಿರುಗಾಳಿ ಸಹಿತ ಮಳೆ ಆರಂಭವಾಗಿದ್ದು, ಆಕಸ್ಮಿಕವಾಗಿ ಸಿಡಿಲು ಬಡಿದಿದೆ. ಸಿಡಿಲಿನ ತೀವ್ರತೆಗೆ ಐವರು ಮಹಿಳೆಯರು ಸ್ಥಳದಲ್ಲೇ ಪ್ರಜ್ಞೆ…