All posts by nagaraj11081993

VIDEO: ಸಿಕ್ಸ್ ಹಿಟ್… ಕ್ಯಾಮೆರಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ – Kannada News | Hardik Pandya’s Six Injures Cameraman During IND vs SA Match

ಅಹಮದಾಬಾದ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅದು ಕೂಡ ಸಿಡಿಲಬ್ಬರ ಸಿಕ್ಸ್ ಸಿಡಿಸಿ ಶುಭಾರಂಭ ಮಾಡುವ ಮೂಲಕ. ಆದರೆ ಪಾಂಡ್ಯ ಬಾರಿಸಿದ ಈ ಸಿಕ್ಸ್ ನೇರವಾಗಿ ಹೋಗಿ ಬಿದ್ದದ್ದು ಕ್ಯಾಮೆರಮ್ಯಾನ್ ಅವರ ಕೈಗೆ.

ಕಾರ್ಬಿನ್ ಬಾಷ್​ ಎಸೆದ 13ನೇ ಓವರ್​ನ 2ನೇ ಎಸೆತದಲ್ಲಿ ಮಿಡ್​ ಆಫ್​ನತ್ತ ಸಿಕ್ಸ್ ಬಾರಿಸಿದ್ದರು. ಈ ಫ್ಲಾಟ್ ಸಿಕ್ಸ್ ನೇರವಾಗಿ ಹೋಗಿ ಕ್ಯಾಮೆರಮ್ಯಾನ್​ಗೆ ಬಡಿದಿದೆ. ತಕ್ಷಣವೇ ಟೀಮ್ ಇಂಡಿಯಾದ ವೈದ್ಯಕೀಯ ಸಿಬ್ಬಂದಿಗಳು ಅವರ ಆರೈಕೆ ಮಾಡಿದರು.

ಇನ್ನು ಪಂದ್ಯ ಮುಗಿದ ಬಳಿಕ ಕ್ಯಾಮೆರಮ್ಯಾನ್​ನತ್ತ ಬಂದ ಹಾರ್ದಿಕ್ ಪಾಂಡ್ಯ, ಅವರನ್ನು ತಬ್ಬಿಕೊಳ್ಳುವ ಮೂಲಕ ಕ್ಷಮೆಯಾಚಿಸಿದರು. ಇದೀಗ ಪಾಂಡ್ಯ ಅವರ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಇನ್ನು ಈ ಮ್ಯಾಚ್​ನಲ್ಲಿ 25 ಎಸೆತಗಳನ್ನು ಎದುರಿಸಿದ ಹಾರ್ದಿಕ್ ಪಾಂಡ್ಯ 5 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 63 ರನ್ ಬಾರಿಸಿದರು.

ಈ 63 ರನ್​ಗಳ ನೆರವಿನೊಂದಿಗೆ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 231 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ಕೇವಲ 201 ರನ್ ಗಳಿಸಿ 30 ರನ್ ಗಳಿಂದ ಸೋಲೊಪ್ಪಿಕೊಂಡಿದೆ.

 

 

Source link

ಸ್ಲೀವ್​ಲೆಸ್ ಡ್ರೆಸ್, ಹರಿದ ಜೀನ್ಸ್ ಹಾಕೊಂಡು ಕಚೇರಿಗೆ ಹೋಗುವ ಸರ್ಕಾರಿ ನೌಕರರಿಗೆ ಇನ್ಮುಂದೆ ಕಾದಿದೆ ಸಂಕಷ್ಟ! – Kannada News | Dress Code Warning: Karnataka Government Warns Employees to Wear Decent Clothes or Face Action

ಬೆಂಗಳೂರು, ಡಿಸೆಂಬರ್ 20: ರಾಜ್ಯ ಸರ್ಕಾರಿ ನೌಕರರು ಸಭ್ಯ ಬಟ್ಟೆಗಳನ್ನು (Decent Clothes) ಧರಿಸಿಕೊಂಡು ಕಚೇರಿಗೆ ಬರಬೇಕು. ಸರ್ಕಾರದ ಖ್ಯಾತಿಗೆ ಧಕ್ಕೆ ತರುವ ಬಟ್ಟೆಗಳನ್ನು ಧರಿಸಿ ಕಚೇರಿಗೆ ಬಂದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಕಟ್ಟುನಿಟ್ಟಿನ ಸೂತ್ತೋಲೆ ಹೊರಡಿಸಿದೆ. ವಿವಿಧ ಇಲಾಖೆಗಳ ಮುಖ್ಯಸ್ಥರು, ಜಿಲ್ಲಾಧಿಕಾರಿಗಳು, ಮುಖ್ಯಮಂತ್ರಿ ಕಚೇರಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಇತರರಿಗೆ ಈ ಸಂದೇಶವನ್ನು ಕಳುಹಿಸಿದ್ದು, ಸರ್ಕಾರಿ ಕಚೇರಿಗೆ ಕರ್ತವ್ಯಕ್ಕೆ ಹಾಜರಾಗುವಾಗ ಹೇಗಿರಬೇಕು, ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಕೆಲಸಗಳನ್ನು ಪಟ್ಟಿ ಮಾಡಿದೆ.

ಕೆಲವು ನೌಕರರು ಅಸಭ್ಯವಾಗಿ ಉಡುಗೆ ತೊಟ್ಟುಕೊಂಡು ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಾರೆ ಎಂದು ಸಾರ್ವಜನಿಕರು ಮತ್ತು ಕೆಲವು ಸಂಸ್ಥೆಗಳಿಂದ ಇಲಾಖೆಗೆ ದೂರುಗಳು ಬಂದಿವೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ನೌಕರರಿಗೆ ಯೋಗ್ಯವಾದ ಬಟ್ಟೆಗಳನ್ನು ಧರಿಸಲು ಹೇಳಲಾಗಿದ್ದರೂ, ಅನೇಕರು ಸೂಚನೆಗಳನ್ನು ಪಾಲಿಸುತ್ತಿಲ್ಲ. ನಾವು ಅದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್’ ವರದಿ ಮಾಡಿದೆ.

ಸ್ಲೀವ್​ಲೆಸ್ ಡ್ರೆಸ್, ಹರಿದ ಜೀನ್ಸ್ ಹಾಕೊಂಡು ಬರ್ಬೇಡಿ

ಕಾರ್ಪೊರೇಟ್ ಕಚೇರಿಗಳಂತೆ ಸರ್ಕಾರಿ ನೌಕರರಿಗೆ ಯಾವುದೇ ಡ್ರೆಸ್ ಕೋಡ್ ಇಲ್ಲ. ಆದಾಗ್ಯೂ, ಕೆಲವರು ಕಾಲೇಜು ಹೋಗುವವರು ಧರಿಸುವಂತಹ ಉಡುಗೆ ತೊಡುತ್ತಾರೆ, ಇದು ಸ್ವೀಕಾರಾರ್ಹವಲ್ಲ. ಹರಿದ ಜೀನ್ಸ್, ಸ್ಲೀವ್​ಲೆಸ್ ಡ್ರೆಸ್ ಮತ್ತು ತುಂಬಾ ಬಿಗಿಯಾದ ಬಟ್ಟೆಗಳನ್ನು ಧರಿಸುತ್ತಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸರ್ಕಾರಿ ನೌಕರರ ಸಂಘ ಸ್ವಾಗತ

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸುತ್ತೋಲೆಯನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಸ್ವಾಗತಿಸಿದ್ದಾರೆ. ಸರ್ಕಾರಿ ನೌಕರರು ಧರಿಸುವ ಉಡುಗೆ ತೊಡುಗೆ ಇತರರಿಗೆ ಮುಜುಗರ ಉಂಟುಮಾಡಬಾರದು. ಸರ್ಕಾರಿ ಕಚೇರಿಗಳಲ್ಲಿ ಸಭ್ಯತೆಯನ್ನು ಕಾಪಾಡಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದ್ವೇಷ ಭಾಷಣ ವಿಧೇಯಕ ರಿಜೆಕ್ಟ್​ ಮಾಡಲು ಸಾಕಾಗಲಿದೆಯಾ ಆ ಒಂದು ಕಾರಣ! ರಾಜ್ಯಪಾಲರಿಗೆ ಸಲ್ಲಿಕೆಯಾದ ಪತ್ರದಲ್ಲೇನಿದೆ?

ಸರ್ಕಾರಿ ನೌಕರರ ಚಲನವಲನಗಳನ್ನು ಟ್ರ್ಯಾಕ್ ಮಾಡಲು ಸರ್ಕಾರ ಲೆಡ್ಜರ್​ಗಳು ಮತ್ತು ಮೂವ್​ಮೆಂಟ್ ರಿಜಿಸ್ಟರ್ ಅನ್ನು ಅಳವಡಿಸಿದೆ. ಸರ್ಕಾರಿ ನೌಕರರು ಕಚೇರಿಗೆ ಪ್ರವೇಶಿಸುವಾಗ ಮತ್ತು ಹೊರಡುವಾಗ ಈ ಲೆಡ್ಜರ್‌ಗಳಲ್ಲಿ ನಮೂದು ಮಾಡಬೇಕೆಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಆದರೆ ಅನೇಕರು ಈ ನಿಯಮವನ್ನು ಪಾಲಿಸುತ್ತಿಲ್ಲ. ಉದ್ಯೋಗಿಯೊಬ್ಬರು ಬೆಳಿಗ್ಗೆ 10:10 ರೊಳಗೆ ಕಚೇರಿಯಲ್ಲಿರಬೇಕು ಮತ್ತು ಕೆಲಸದ ಸಮಯ ಮುಗಿಯುವವರೆಗೆ ತಮ್ಮ ಸ್ಥಾನದಲ್ಲಿರಬೇಕು. ಅವರು ಅಧಿಕೃತ ಕರ್ತವ್ಯದ ಮೇಲೆ ಹೊರಗೆ ಹೋಗುತ್ತಿದ್ದರೆ, ಅದನ್ನು ರಿಜಿಸ್ಟರ್‌ನಲ್ಲಿ ನಮೂದಿಸಬೇಕು ಎಂದು ಇಲಾಖೆ ಸೂಚನೆ ನೀಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

International Human Solidarity Day 2025: ಒಗ್ಗಟ್ಟಿನಿಂದ ಸಮಾಜದಲ್ಲಿ ಶಾಂತಿ, ಸಾಮರಸ್ಯ, ಸುಸ್ಥಿರ ಅಭಿವೃದ್ಧಿ ಸಾಧ್ಯ – Kannada News | International Human Solidarity Day 2025: Why is International Human Solidarity Day celebrated? Know its history and significance

ಅಂತಾರಾಷ್ಟ್ರೀಯ ಮಾನವ ಒಗ್ಗಟ್ಟಿನ ದಿನImage Credit source: Freepik

ಈ ಪ್ರಪಂಚವು ಸಾಕಷ್ಟು ವೈವಿಧ್ಯತೆಯಿಂದ ಕೂಡಿದೆ. ಇಲ್ಲಿ ಅನೇಕ ಧರ್ಮಗಳು, ಭಾಷೆಗಳು, ಸಂಸ್ಕೃತಿಗಳ ಜನರು  ವಾಸಿಸುತ್ತಿದ್ದಾರೆ. ಈ ವೈವಿಧ್ಯತೆಯಿಂದಾಗಿ ಜನರಲ್ಲಿ ಸಹಜವಾಗಿ  ಭೇದಭಾವಗಳ ಭಾವನೆ ಮೂಡತ್ತದೆ. ಈ ಕಾರಣದಿಂದಾಗಿ ಸಮಾಜ ಮತ್ತು ದೇಶ ದೇಶಗಳ ನಡುವೆ ಯುದ್ಧ, ಹಿಂಸಾಚಾರ, ಭಯೋತ್ಪಾದನೆ ಮತ್ತು ಇತರ ಸಾಕಷ್ಟು ಸಮಸ್ಯೆಗಳು ಉದ್ಭವಿಸುತ್ತದೆ. ಇದು ಇಡೀ ಮಾನವ ಜನಾಂಗಕ್ಕೆ ಹಾನಿಯುಂಟುಮಾಡುತ್ತದೆ. ಅದೇ ದೇಶ ದೇಶಗಳು ಒಗ್ಗಟ್ಟಿನಿಂದ (Solidarity) ಇದ್ದಾಗ ಅಭಿವೃದ್ಧಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ʼವಸುದೈವ ಕುಟುಂಬಕಂʼ ಅಂದರೆ ಇಡೀ ಜಗತ್ತು ಒಂದೇ ಕುಟುಂಬ ಎಂಬ ಪರಿಕಲ್ಪನೆಯಂತೆ ಅಂತರಾಷ್ಟ್ರೀಯ ಸಂಬಂಧಗಳನ್ನು ಬಲಪಡಿಸುವ, ನಾಗರಿಕರಲ್ಲಿ ಏಕತೆ ಮತ್ತು ಸಹೋದರತ್ವ ಭಾವನೆಯನ್ನು ಮೂಡಿಸುವ ಮತ್ತು ಜಗತ್ತಿನಲ್ಲಿ ಸಾಮರಸ್ಯ ಮತ್ತು ಶಾಂತಿಯನ್ನು ಉತ್ತೇಜಿಸುವ ಉದ್ದೇಶದಿಂದ  ಅಂತಾರಾಷ್ಟ್ರೀಯ ಮಾನವ ಒಗ್ಗಟ್ಟಿನ ದಿನವನ್ನು ಆಚರಿಸಲಾಗುತ್ತದೆ.

ಅಂತಾರಾಷ್ಟ್ರೀಯ ಮಾನವ ಒಗ್ಗಟ್ಟಿನ ದಿನದ ಇತಿಹಾಸವೇನು?

ವಿಶ್ವದಲ್ಲಿ ಪರಸ್ಪರ ಸಹಕಾರ ಮತ್ತು ಸಾಮರಸ್ಯವನ್ನು ಉತ್ತೇಜಿಸಲು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಅಂತಾರಾಷ್ಟ್ರೀಯ ಮಾನವ ಒಗ್ಗಟ್ಟಿನ ದಿನವನ್ನು ಆಚರಿಸಲು ಮೊದಲು ಪ್ರಸ್ತಾಪಿಸಿತು. ಇದರ ನಂತರ 22 ಡಿಸೆಂಬರ್ 2005 ರಂದು 60/209 ನಿರ್ಣಯದ ಅಡಿಯಲ್ಲಿ ಡಿಸೆಂಬರ್ 20 ರಂದು ಅಂತರಾಷ್ಟ್ರೀಯ ಮಾನವ ಒಗ್ಗಟ್ಟಿನ ದಿನವನ್ನು ಆಚರಿಸಲು ನಿರ್ಧರಿಸಲಾಯಿತು. ಅಂದಿನಿಂದ ಪ್ರತಿವರ್ಷ ಡಿಸೆಂಬರ್  20 ರಂದು ಜಾಗತಿಕ ಮಟ್ಟದಲ್ಲಿ ಮಾನವ ಒಗ್ಗಟ್ಟಿನ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಇದನ್ನೂ ಓದಿ: ಅಲ್ಪಸಂಖ್ಯಾತರ ಹಕ್ಕುಗಳ ದಿನವನ್ನು ಆಚರಿಸುವುದರ ಹಿಂದಿನ ಉದ್ದೇಶವೇನು?

ಅಂತಾರಾಷ್ಟ್ರೀಯ ಮಾನವ ಒಗ್ಗಟ್ಟಿನ ದಿನದ ಮಹತ್ವವೇನು?

  • ವಿವಿಧತೆಯಲ್ಲಿ ಏಕತೆಯನ್ನು ಪ್ರದರ್ಶಿಸುವುದು.
  • ಜನರಲ್ಲಿ ಏಕತೆ ಮತ್ತು ಸಹೋದರತ್ವವನ್ನು ಉತ್ತೇಜಿಸುವುದು
  • ಅಂತಾರಾಷ್ಟ್ರೀಯ ಸಂಬಂಧಗಳನ್ನು ಬಲಪಡಿಸುವುದು.
  • ಅಭಿವೃದ್ಧಿಗಾಗಿ ಪರಸ್ಪರ ಸಹಕಾರವನ್ನು ಉತ್ತೇಜಿಸುವುದು.
  • ಸುಸ್ಥಿರ ಅಭಿವೃದ್ಧಿಯನ್ನು ಉತ್ತೇಜಿಸುವುದು.
  • ಜಗತ್ತಿನಲ್ಲಿ ಸಾಮರಸ್ಯ ಮತ್ತು ಶಾಂತಿಯನ್ನು ಉತ್ತೇಜಿಸುವುದು.
  • ಯಾವುದೇ ಯುದ್ಧ, ಹಿಂಸಾಚಾರವಿಲ್ಲದೆ ಜಗತ್ತನ್ನು ಉತ್ತಮ ಸ್ಥಳವನ್ನಾಗಿ ಮಾಡುವುದು.

ಒಟ್ಟಿನಲ್ಲಿ ವೈವಿಧ್ಯತೆಯಲ್ಲಿ ಏಕತೆಯನ್ನು ಆಚರಿಸಲು ಮತ್ತು ಒಗ್ಗಟ್ಟಿನ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಡಿಸೆಂಬರ್ 20 ರಂದು ಜಾಗತಿಕವಾಗಿ ಮಾನವ ಒಗ್ಗಟ್ಟಿನ ದಿನವನ್ನು ಆಚರಿಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಂಡ್ಯ: ಕೊನೆಗೂ ಬಯಲಾಯ್ತು ರಕ್ತ ರಹಸ್ಯ! ಮನೆಯಿಡೀ ನಿಗೂಢವಾಗಿ ಹರಿದಿದ್ದ ನೆತ್ತರು ಯಾರದ್ದು ಗೊತ್ತೇ? – Kannada News | Maddur Blood Stain Mystery Solved: FSL Confirms House Owner’s Blood in Mandya’s Village

ಮಂಡ್ಯ, ಡಿಸೆಂಬರ್ 20: ಮಂಡ್ಯ (Mandya) ಜಿಲ್ಲೆಯ ಮದ್ದೂರು ತಾಲೂಕಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ಸತೀಶ್ ಹಾಗೂ ಸೌಮ್ಯ ದಂಪತಿಯ ಮನೆಯಲ್ಲಿ ಪತ್ತೆಯಾಗಿದ್ದ ನಿಗೂಢ ರಕ್ತದ ಕಲೆಗಳ ಪ್ರಕರಣದ ಸತ್ಯಾಸತ್ಯತೆ ಕೊನೆಗೂ ಬಯಲಾಗಿದೆ. ಎಫ್‌ಎಸ್‌ಎಲ್ (Forensic Science Laboratory) ವರದಿ ಬಹಿರಂಗಗೊಂಡಿದ್ದು, ಮನೆಯೊಳಗೆ ಹರಿದಿದ್ದ ರಕ್ತವು ಮನೆ ಮಾಲೀಕ ಸತೀಶ್ ಅವರದ್ದೇ ಎಂಬುದು ದೃಢಪಟ್ಟಿದೆ! ಅಕ್ಟೋಬರ್ 28ರಂದು ಸತೀಶ್ ದಂಪತಿಯ ಮನೆಯ ಹಾಲ್, ಬಾತ್‌ರೂಂ, ಟಿವಿ ಹಾಗೂ ಫ್ಯಾನ್‌ಗಳ ಮೇಲೆ ರಕ್ತದ ಕಲೆಗಳು ಕಾಣಿಸಿಕೊಂಡು ಗ್ರಾಮದೆಲ್ಲೆಡೆ ಆತಂಕ ಸೃಷ್ಟಿಸಿತ್ತು. ಮೊದಲಿಗೆ ಅದು ಯಾವುದೋ ಪ್ರಾಣಿಯ ರಕ್ತವಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಆದರೆ ಪ್ರಾಥಮಿಕ ತನಿಖೆಯಲ್ಲೇ ಅದು ಮನುಷ್ಯನ ರಕ್ತ ಎಂಬುದು ಗೊತ್ತಾಗಿತ್ತು.

ಎಫ್​ಎಸ್​ಎಲ್ ವರದಿಯಿಂದ ಬಯಲಾಯ್ತು ರಹಸ್ಯ

ಈ ಪ್ರಕರಣದ ಗಂಭೀರತೆಯನ್ನು ಗಮನಿಸಿ ಬೆಸಗರಹಳ್ಳಿ ಠಾಣಾ ಪೊಲೀಸರು, ಎಫ್‌ಎಸ್‌ಎಲ್ ಹಾಗೂ ಶ್ವಾನದಳದ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿ ರಕ್ತದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಇದೀಗ ಬಂದಿರುವ ವರದಿಯಲ್ಲಿ, ಆ ರಕ್ತವು ಮನೆ ಮಾಲೀಕ ಸತೀಶ್ ಅವರದೇ ಎಂದು ಉಲ್ಲೇಖಿಸಲಾಗಿದೆ.

ಗೊತ್ತಾಗದಂತೇ ಹರಿದಿದ್ಹೇಗೆ ನೆತ್ತರು?

ಪೊಲೀಸ್ ತನಿಖೆಯಲ್ಲಿ ತಿಳಿದುಬಂದಂತೆ, ಸತೀಶ್ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ರಕ್ತ ತೆಳುಗೊಳಿಸುವ (ಬ್ಲಡ್ ಥಿನ್ನರ್) ಮಾತ್ರೆಗಳನ್ನು ಸೇವಿಸುತ್ತಿದ್ದರು. ಅವರಿಗೆ ದೇಹದ ಮೇಲೆ ಸೂಜಿ ಗಾತ್ರದ ಸಣ್ಣ ಗಾಯವಾಗಿದ್ದು, ಅದು ಅವರಿಗೂ ತಿಳಿಯದಂತೆ ರಕ್ತ ಚಿಮ್ಮಿ ಮನೆಯೊಳಗೆ ಹರಿದಿದೆ ಎನ್ನಲಾಗಿದೆ. ಆದರೆ ಇದರ ಅರಿವು ಅವರಿಗೂ ಆಗಿಲ್ಲದೇ ಇದ್ದುದರಿಂದ ಯಾರೋ ದುಷ್ಕೃತ್ಯ ಎಸಗಿರಬಹುದು, ಅಥವಾ ಮಾಟ ಮಂತ್ರಕ್ಕಾಗಿ ರಕ್ತ ಚೆಲ್ಲಿರಬಹುದು ಎಂಬ ಅನುಮಾನಗಳು ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ಮೂಡಿದ್ದವು. ಯಾಕೆಂದರೆ, ಕೇವಲ ಒಂದು ಕಡೆ ಅಲ್ಲದೆ ಮನೆ ಹಾಲ್, ಬಾತ್‌ರೂಂ, ಟಿವಿ ಹಾಗೂ ಫ್ಯಾನ್‌ಗಳ ಮೇಲೆಲ್ಲ ರಕ್ತದ ಕಲೆ ಕಾಣಿಸಿತ್ತು. ಹೀಗಾಗಿ ಸಹಜವಾಗಿಯೇ ಅನುಮಾನಗಳು ಹೆಚ್ಚಾಗಿದ್ದವು. ಇದರಿಂದ ಗ್ರಾಮದಲ್ಲಿ ಕೆಲಕಾಲ ಭಯ ಮತ್ತು ಕುತೂಹಲ ವಾತಾವರಣ ನಿರ್ಮಾಣವಾಗಿತ್ತು.

ಇದನ್ನೂ ಓದಿ: ಮಂಡ್ಯ: ನೆತ್ತರ ನಿಗೂಢತೆಗೆ ನಡುಗಿದ ದಂಪತಿ, ಮನೆಯಲ್ಲಿ ಎಲ್ಲಿ ನೋಡಿದರೂ ರಕ್ತದ ಕಲೆ!

ಆದರೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿದ ಬಳಿಕ ಇದೀಗ ರಕ್ತ ರಹಸ್ಯ ಸಂಪೂರ್ಣವಾಗಿ ಬಯಲಾಗಿದ್ದು, ಯಾವುದೇ ಅಪರಾಧ ಅಥವಾ ಹೊರಗಿನ ದುರುದ್ದೇಶ ಇಲ್ಲ ಎಂಬುದು ಸ್ಪಷ್ಟವಾಗಿದೆ. ಎಫ್‌ಎಸ್‌ಎಲ್ ವರದಿಯಿಂದ ಸತೀಶ್ ದಂಪತಿ ಮತ್ತು ಗ್ರಾಮಸ್ಥರು ಕೊನೆಗೂ ನಿಟ್ಟುಸಿರು ಬಿಟ್ಟಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:48 am, Sat, 20 December 25

Source link

ಶ್ವಾನಕ್ಕೆ ಮಡಿಲು ತುಂಬಿ ಅದ್ಧೂರಿ ಸೀಮಂತ; 500 ಜನರಿಗೆ ಭರ್ಜರಿ ಭೋಜನ ಹಾಕಿದ ಮಾಲೀಕ! – Kannada News | Tumakuru Owner Hosts Grand Baby Shower for Pet Dog Khushi

ತುಮಕೂರು, ಡಿಸೆಂಬರ್ 20: ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ದಸರಿಘಟ್ಟದಲ್ಲಿ ಪ್ರವೀಣ್ ಎಂಬುವವರು ತಮ್ಮ ಸಾಕು ನಾಯಿ ‘ಖುಷಿ’ಗೆ ಅದ್ಧೂರಿ ಸೀಮಂತ ಕಾರ್ಯಕ್ರಮ ಆಯೋಜಿಸಿದ್ದರು. ತನ್ನ ಪ್ರೀತಿಯ ನಾಯಿಯ ಸೀಮಂತಕ್ಕಾಗಿ 20 ಸಾವಿರ ರೂಪಾಯಿ ವೆಚ್ಚದಲ್ಲಿ 50 ಕೆಜಿ ಗೀ ರೈಸ್, 50 ಕೆಜಿ ಚಿಕನ್ ಗ್ರೇವಿ ಮಾಡಿಸಿ 500 ಜನರಿಗೆ ಭೋಜನ ಏರ್ಪಡಿಸಿದ್ದ ಮಾಲೀಕ, ಹೊಸ ಬಟ್ಟೆ, ಹೂವಿನ ಸಿಂಗಾರ, ಕೇಕ್ ಕಟಿಂಗ್ ಮೂಲಕ ಖುಷಿಯ ಗರ್ಭಧಾರಣೆಯನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಮಾಲೀಕನ ಈ ವಿಶಿಷ್ಟ ಶ್ವಾನ ಪ್ರೀತಿಗೆ ಇಡೀ ಊರೇ ಮೆಚ್ಚುಗೆ ವ್ಯಕ್ತಪಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ನಿಮ್ಮಿಂದ ನಮಗೆ ಎಲ್ಲಾ ಕಡೆ ನೋವಾಗ್ತಿದೆ ಎಂದ ಸುದೀಪ್ – Kannada News | Kichcha Sudeep Says He face Too Much Headache from Rakshita And Dhruvanth

ಸುದೀಪ್ ಅವರು ಪ್ರತಿ ಶನಿವಾರದ ಎಪಿಸೋಡ್​ನ ಗಂಭೀರವಾಗಿ ನಡೆಸಿಕೊಡುತ್ತಾರೆ. ಆದರೆ, ಈ ವಾರ ಅವರು ಫನ್ ಮೂಡ್​ನಲ್ಲಿ ಇದ್ದಂತೆ ಕಾಣಿಸಿದೆ. ರಕ್ಷಿತಾ ಅವರು ಸೀಕ್ರೇಟ್ ರೂಂ ಅನುಭವ ಬಿಚ್ಚಿಟ್ಟರು.ಧ್ರುವಂತ್ ಸಹವಾಸ ಮಾಡಿ ನನಗೆ ತಲೆ ನೋವು ಬರುತ್ತಿದೆ ಎಂದರು ರಕ್ಷಿತಾ. ಆದರೆ, ನಮಗೆ ಎಲ್ಲಾ ಕಡೆಗಳಲ್ಲೂ ನೋವಾಗುತ್ತಿದೆ ಎಂದರು ಸುದೀಪ್. ಕಲರ್ಸ್ ಕನ್ನಡ ವಾಹಿನಿ ಈ ಪ್ರೋಮೋನ ಹಂಚಿಕೊಂಡಿದೆ. ಆ ಸಂದರ್ಭದ ಫನ್ ವಿಟಿ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Train Accident: ಅಸ್ಸಾಂನಲ್ಲಿ ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದ ರೈಲು, 8 ಆನೆಗಳು ಸಾವು, ಹಳಿ ತಪ್ಪಿದ ಬೋಗಿಗಳು – Kannada News | Assam Train Accident: 8 Elephants Dead, Rajdhani Express Derails in Hojai

ಗುವಾಹಟಿ, ಡಿಸೆಂಬರ್ 20: ಇಂದು ಮುಂಜಾನೆ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಾಂಗ್ ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ಆನೆ(Elephant)ಗಳ ಹಿಂಡಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 8 ಆನೆಗಳು ಸಾವನ್ನಪ್ಪಿವೆ. ಹಾಗೆಯೇ ಐದು ಬೋಗಿಗಳು ಹಳಿ ತಪ್ಪಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಬೆಳಗಿನ ಜಾವ 2.17 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹೊಜೈ ಜಿಲ್ಲೆಯ ಚಾಂಗ್ಜುರೈ ಪ್ರದೇಶದಲ್ಲಿ ಈ ಡಿಕ್ಕಿ ಸಂಭವಿಸಿದೆ ಎಂದು ನಾಗಾಂವ್ ವಿಭಾಗೀಯ ಅರಣ್ಯ ಅಧಿಕಾರಿ ಸುಹಾಶ್ ಕದಮ್ ಪಿಟಿಐಗೆ ತಿಳಿಸಿದ್ದಾರೆ. ಘಟನೆಯ ನಂತರ ಕದಮ್ ಮತ್ತು ಇತರ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ. ಜಮುನಾಮುಖ್ ಕಂಪೂರ್ ವಿಭಾಗದಲ್ಲಿ ರೈಲು ಸೇವೆಗಳು ಅಸ್ತವ್ಯಸ್ತಗೊಂಡಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಮಾರ್ಗದ ಮೂಲಕ ಹಾದುಹೋಗಬೇಕಾದ ರೈಲುಗಳನ್ನು ಯುಪಿ ಮಾರ್ಗದ ಮೂಲಕ ತಿರುಗಿಸಲಾಗುತ್ತಿದೆ, ಆದರೆ ಪುನಃಸ್ಥಾಪನೆ ಕಾರ್ಯ ನಡೆಯುತ್ತಿದೆ ಎಂದು ಕದಮ್ ಹೇಳಿದರು.

ಸಾಯಿರಂಗ್ ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್ ಮಿಜೋರಾಂನ ಸಾಯಿರಾಂಗ್ ಅನ್ನು ಐಜ್ವಾಲ್ ಬಳಿ ದೆಹಲಿಯ ಆನಂದ್ ವಿಹಾರ್ ಟರ್ಮಿನಲ್‌ನೊಂದಿಗೆ ಸಂಪರ್ಕಿಸುತ್ತದೆ. ಅಪಘಾತ ಸ್ಥಳವು ಗುವಾಹಟಿಯಿಂದ ಸುಮಾರು 126 ಕಿ.ಮೀ ದೂರದಲ್ಲಿದೆ. ಘಟನೆಯ ನಂತರ, ಅಪಘಾತ ಪರಿಹಾರ ರೈಲುಗಳು ಮತ್ತು ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.

ರೈಲು ಹಳಿತಪ್ಪಿದ್ದರಿಂದ ಮತ್ತು ಆನೆಯ ದೇಹದ ಭಾಗಗಳು ಹಳಿಗಳ ಮೇಲೆ ಚದುರಿಹೋಗಿದ್ದರಿಂದ, ಅಸ್ಸಾಂ ಮತ್ತು ಈಶಾನ್ಯದ ಇತರ ಭಾಗಗಳಿಗೆ ರೈಲು ಸೇವೆಗಳು ಬಾಧಿತವಾಗಿವೆ ಎಂದು ಮೂಲಗಳು ತಿಳಿಸಿವೆ. ಪರಿಣಾಮ ಬೀರಿದ ಬೋಗಿಗಳ ಪ್ರಯಾಣಿಕರನ್ನು ತಾತ್ಕಾಲಿಕವಾಗಿ ರೈಲಿನ ಇತರ ಬೋಗಿಗಳಲ್ಲಿ ಲಭ್ಯವಿರುವ ಖಾಲಿ ಬರ್ತ್‌ಗಳಲ್ಲಿ ಇರಿಸಲಾಯಿತು.

ಮತ್ತಷ್ಟು ಓದಿ: Video: ಶ್ವಾನಕ್ಕೆ ಸೊಂಡಿಲಿನಿಂದ ನೀರು ಎರಚುತ್ತಾ ಖುಷಿ ಪಟ್ಟ ಕಂಜನ್‌ ಆನೆ

ರೈಲು ಗುವಾಹಟಿ ತಲುಪಿದ ನಂತರ, ಎಲ್ಲಾ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತದೆ, ನಂತರ ರೈಲು ತನ್ನ ಮುಂದಿನ ಪ್ರಯಾಣವನ್ನು ಪುನರಾರಂಭಿಸುತ್ತದೆ. ಈ ಘಟನೆ ಆನೆ ಕಾರಿಡಾರ್ ಅಲ್ಲದ ಸ್ಥಳದಲ್ಲಿ ಸಂಭವಿಸಿದೆ. ಹಳಿಗಳ ಮೇಲೆ ಹಿಂಡು ನಿಂತಿರುವುದನ್ನು ಗಮನಿಸಿದ ಲೋಕೋ ಪೈಲಟ್ ತುರ್ತು ಬ್ರೇಕ್ ಹಾಕಿದರು. ಇದರ ಹೊರತಾಗಿಯೂ, ಆನೆಗಳಿಗೆ ರೈಲು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಆಸ್ಟ್ರೇಲಿಯಾ ದಾಂಡಿಗರ ಸಿಡಿಲಬ್ಬರ… ಟಿ20 ದಾಖಲೆಗಳು ಧೂಳೀಪಟ – Kannada News | Renshaw, Wildermuth Creates New World Record in T20 Cricket

BBL 2025: ಬಿಗ್ ಬ್ಯಾಷ್​ ಲೀಗ್​ನ 6ನೇ ಪಂದ್ಯವು ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಅದು ಕೂಡ ಟಿ20 ಇತಿಹಾಸದಲ್ಲೇ ಚೇಸಿಂಗ್ ವೇಳೆ ಇಬ್ಬರು ಬ್ಯಾಟರ್​ಗಳು ಶತಕ ಸಿಡಿಸುವ ಮೂಲಕ. ಇದರೊಂದಿಗೆ ಬಿಗ್ ಬ್ಯಾಷ್​ ಲೀಗ್​ನ ಹಲವು ದಾಖಲೆಗಳು ಕೂಡ ಧೂಳೀಪಟವಾಗಿದೆ.

Source link

ಮೆಟ್ರೋ ಪ್ರಯಾಣಿಕರೇ ಗಮನಿಸಿ: ಯೆಲ್ಲೋ ಮಾರ್ಗದಲ್ಲಿ ಭಾನುವಾರ ರೈಲು ಸಂಚಾರ ಶುರುವಾಗೋದು ಲೇಟ್ – Kannada News | Bangalore Metro Alert: Yellow Line Services to Start Late Tomorrow, BMRCL Announces

ಬೆಂಗಳೂರು, ಡಿಸೆಂಬರ್ 20: ಬೆಂಗಳೂರಿನ ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ ಭಾನುವಾರ (ಡಿಸೆಂಬರ್ 21) ಮೆಟ್ರೋ ರೈಲು ಸಂಚಾರ ವಿಳಂಬವಾಗಿ ಶುರುವಾಗಲಿದೆ. ನವೀಕರಣ ಕಾರ್ಯದ ಹಿನ್ನೆಲೆಯಲ್ಲಿ ಬೆಳಗ್ಗೆ ಮೆಟ್ರೋ ಸೇವೆಗಳು ಒಂದು ಗಂಟೆ ತಡವಾಗಿ ಆರಂಭವಾಗಲಿವೆ. ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗುವ ಬದಲಾಗಿ, ಯೆಲ್ಲೋ ಲೈನ್ ರೈಲುಗಳು 8 ಗಂಟೆಗೆ ಸಂಚಾರವನ್ನು ಪ್ರಾರಂಭಿಸುತ್ತವೆ. ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಮಾಹಿತಿ ನೀಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿಗರೇ ಮಾಸ್ಕ್ ಧರಿಸದೆ ಹೊರಬಂದರೆ ಎಚ್ಚರ! ಕಳಪೆ ಏರ್ ಕ್ವಾಲಿಟಿಯಿಂದ ಶುರುವಾಗುತ್ತೆ ಅಸ್ತಮಾ, ಅಲರ್ಜಿ – Kannada News | Bangalore AQI: Bengaluru Air Quality Crosses 190, Asthma, Heart disease can be caused by poor air quality

ಬೆಂಗಳೂರಿಗರೇ ಮಾಸ್ಕ್ ಧರಿಸದೆ ಹೊರಬಂದರೆ ಎಚ್ಚರ!

ಬೆಂಗಳೂರು, ಡಿಸೆಂಬರ್ 20: ದಿನೇ ದಿನೇ ಹಡಗೆಡುತ್ತಿರುವ ಬೆಂಗಳೂರಿನ ಗಾಳಿಯ ಗುಣಮಟ್ಟ (Bengaluru Air Quality) , ಸಾರ್ವಜನಿಕರಿಗೆ ಸಂಕಷ್ಟ ತಂದೊಡ್ಡಿದೆ. ಕಳೆದ ಹಲವು ದಿನಗಳಿಂದ 170 ರಿಂದ 200ರವೆಗೂ ಏರಿಳಿತ ಕಾಣುತ್ತಿರುವ ಗುಣಮಟ್ಟ ವಾಯು ಮಾಲಿನ್ಯ, ಇಂದೂ ಸಹ 196ಕ್ಕೆ ತಲುಪಿದೆ. ನಗರದ ಈ ವಾತಾರಣ ದೆಹಲಿಯನ್ನು ನೆನಪಿಸುತ್ತಿದ್ದು, ಇದು ಹೀಗೆ ಮುಂದುವರೆದರೆ ಜನರ ಜೀವಕ್ಕೇ ಕುತ್ತು ಬರುವ ಸಂಭವವಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಕಳಪೆ ಗುಣಮಟ್ಟದ ಗಾಳಿಯಿಂದ ಶ್ವಾಸಕೋಶ ಸಂಬಂಧಿ ಕಾಯಿಲೆ

ರಾಜ್ಯದೆಲ್ಲೆಡೆ ಉಂಟಾಗುತ್ತಿರುವ ಶೀತದಲೆಯ ಪರಿಣಾಮ ಈಗಾಗಲೇ ಮಕ್ಕಳು, ವೃದ್ಧರು ಸೇರಿದಂತೆ ಎಲ್ಲರಿಗೂ ಉಸಿರಾಟದ ಸಮಸ್ಯೆಗಳು ಎದುರಾಗುತ್ತಿವೆ. ಅದರೊಂದಿಗೆ ವಾಯು ಮಾಲಿನ್ಯ ಮತ್ತು ಹದಗೆಟ್ಟ ಗಾಳಿಯೂ ಸೇರಿ ಅನಾರೊಗ್ಯ ಉಂಟುಮಾಡಬಹುದೆಂದು ತಜ್ಞರು ಹೇಳುತ್ತಾರೆ. ಇಂದೂ ಬೆಂಗಳೂರಿನಲ್ಲಿ PM2.5 ಪ್ರಮಾಣ 121ಕ್ಕೆ ತಲುಪಿದ್ದು, PM10 ಪ್ರಮಾಣ 167ಕ್ಕೆ ಇಳಿದಿದೆ.

ಇದರಿಂದಾಗಿ ಅಸ್ತಮಾ, ಅಲರ್ಜಿ ಸೇರಿದಂತೆ ಹೃದಯ ಸಂಬಂಧಿ ಖಾಯಿಲೆಗಳೂ ಎದುರಾಗಬಹುದು. 150ಕ್ಕಿಂತ ಹೆಚ್ಚಿನ ಗಾಳಿಯ ಗುಣಮಟ್ಟ ಜನರಲ್ಲಿ ಅಸ್ತಮಾ ತಂದೊಡ್ಡಬಹುದಾಗಿದ್ದು, ಈ ಸಮಸ್ಯೆಯಿಂದ ಬಚಾವಾಗಲು ಏರ್ ಪ್ಯೂರಿಫೈಯರ್ ಬಳಸುವುದರ ಜೊತೆಗೆ ಆದಷ್ಟು ಮನೆಯಿಂದ ಹೊರಹೋಗದಿರೊ ಎಂದು ತಜ್ಞರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ ಬೆಂಗಳೂರಿನಲ್ಲಿ ಉಸಿರಾಡೋದು, ದಿನಕ್ಕೆ ಮೂರು ಸಿಗರೇಟ್ ಸೇದೋದು ಎರಡೂ ಒಂದೇ!

ಕಳೆದ ನಾಲ್ಕು ವರ್ಷಗಳಲ್ಲೇ ಕಳಪೆ ಏರ್ ಕ್ವಾಲಿಟಿ

ಕಳೆದ ನಾಲ್ಕು ವರ್ಷಗಳಿಗಿಂತ ಈ ವರ್ಷವೇ ಗಾಳಿಯ ಗುಣಮಟ್ಟ ಹೆಚ್ಚು ಹದಗೆಟ್ಟಿದೆ. 2025ರಲ್ಲಿ ಸುಮಾರು 90ಕ್ಕೂ ಹೆಚ್ಚು ದಿನಗಳ ಕಾಲ ಬೆಂಗಳೂರಿನ ಏರ್ ಕ್ವಾಲಿಟಿ ಅನಾರೋಗ್ಯಕರವಾಗಿತ್ತು ಎಂದು AQI ತಿಳಿಸಿದೆ. ಉಳಿದಂತೆ 2 ದಿನ ಉತ್ತಮ ಗಾಳಿಯ ಗುಣಮಟ್ಟವಿದ್ದರೆ, 253 ದಿನ ಸಾಧಾರಣ ಏರ್ ಕ್ವಾಲಿಟಿ ಕಂಡು ಬಂದಿದೆ. ಇಂದಿನ ದಿನಗಳಲ್ಲಿ ಶೀತದಲೆಯ ಜೊತೆಗೆ ಕಳಪೆ ಗುಣಮಟ್ಟದ ಗಾಳಿಯೂ ಸೇರಿ ಸಾರ್ವಜನಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index):

  • ಬೆಂಗಳೂರು –196
  • ಮಂಗಳೂರು – 140
  • ಮೈಸೂರು – 136
  • ಬೆಳಗಾವಿ – 144 ಕ
  • ಲಬುರ್ಗಿ – 94
  • ಶಿವಮೊಗ್ಗ – 73
  • ಬಳ್ಳಾರಿ – 166
  • ಹುಬ್ಬಳ್ಳಿ- 101
  • ಉಡುಪಿ – 111
  • ವಿಜಯಪುರ –68

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link