All posts by nagaraj11081993

ಗೃಹಲಕ್ಷ್ಮಿ ಬೆನ್ನಲ್ಲೇ ಗೃಹಜ್ಯೋತಿ ಪರಿಷ್ಕರಣೆಗೆ ತಯಾರಿ: ಅನರ್ಹರಿಗೆ ಭರ್ಜರಿ ಶಾಕ್​​ ಕೊಡಲು ಸರ್ಕಾರದ ಸಿದ್ಧತೆ – Kannada News | After Gruhalakshmi, Karnataka Government Set to Revamp Gruha Jyothi Scheme

ಗೃಹಲಕ್ಷ್ಮಿ ಬೆನ್ನಲ್ಲೇ ಗೃಹಜ್ಯೋತಿ ಪರಿಷ್ಕರಣೆಗೆ ತಯಾರಿImage Credit source: DK Shivakumar X Account

ಬೆಂಗಳೂರು, ಜೂನ್​​ 15: ಗ್ಯಾರಂಟಿ ಯೋಜನೆಗಳ ದುರ್ಬಳಕೆ ತಡೆಯಲು ಮೇಜರ್​​ ಸರ್ಜರಿಗೆ ಮುಂದಾಗಿರುವ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಬೆನ್ನಲ್ಲೇ ಮನೆಗೆ 200 ಯೂನಿಟ್​ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ಪರಿಷ್ಕರಣೆಗೂ ಮುಂದಾಗಿದೆ. 2 ದಿನಗಳಲ್ಲಿ ಸರ್ಕಾರದಿಂದ ಈ ಬಗ್ಗೆ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದ್ದು, ಪರಿಷ್ಕರಣೆ ವಿಚಾರವಾಗಿ ಇಲಾಖೆಗೆ ನಿಖರ ಮಾನದಂಡ ಪ್ರಕಟವಾಗಬಹುದೆಂದು ನಿರೀಕ್ಷಿಸಲಾಗಿದೆ.

ಗೃಹಜ್ಯೋತಿ ಯೊಜನೆಯಡಿ ರಾಜ್ಯದ 1.70 ಕೋಟಿ ಕುಟುಂಬಗಳು ಉಚಿತ ವಿದ್ಯುತ್ ಪಡೆಯುತ್ತಿವೆ. ಮಹತ್ವಾಕಾಂಕ್ಷಿ ಈ ಯೋಜನೆಗೆ ಪ್ರತಿ ತಿಂಗಳು 440 ಕೋಟಿ ರೂಪಾಯಿ ಹಣವನ್ನು ಸರ್ಕಾರ ವೆಚ್ಚ ಮಾಡುತ್ತಿದೆ. ಆದರೆ ಹಲವರು ಗೃಹಬಳಕೆ ಹೆಸರಿನಲ್ಲಿ‌ ವಾಣಿಜ್ಯ ಬಳಕೆಗೂ ಫ್ರೀ ವಿದ್ಯುತ್ ಬಳಕೆ ಮಾಡುತ್ತಿರುವ ಮಾಹಿತಿ ಸಿಕ್ಕಿದೆ. ಹೀಗಾಗಿ ಪ್ರಾಪರ್ಟಿ, ಮಳಿಗೆಗಳಿಗೆ ಫ್ರೀ ವಿದ್ಯುತ್ ‌ಪಡೆದವರಿಗೆ ಬಿಸಿ ಮುಟ್ಟಿಸಲು ಸಿದ್ಧತೆ ನಡೆದಿದ್ದು, ಉಚಿತ ವಿದ್ಯುತ್ ಪಡೆಯುತ್ತಿರುವ ಹೊರ ರಾಜ್ಯದ ಜನರಿಗೂ ಶಾಕ್ ಕೊಡಲು ತಯಾರಿ ನಡೆದಿದೆ.ಆಧಾರ್, ಇ-ಕೆವೈಸಿ, ಮೊಬೈಲ್​ ನಂಬರ್ ಮೂಲಕ ಮರುಪರಿಶೀಲನೆ ನಡೆಯಲಿದ್ದು, ಸೇವಾ ಸಿಂಧು ಪೋರ್ಟಲ್​ನಲ್ಲಿ ಇದಕ್ಕೆ ಅವಕಾಶ ನೀಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಗೃಹಲಕ್ಷ್ಮಿಯರಿಗೆ ಭರ್ಜರಿ ಶಾಕ್​​ ಕೊಟ್ಟ ಸರ್ಕಾರ; ರಾಜ್ಯಾದ್ಯಂತ ಒಟ್ಟು 3.89 ಲಕ್ಷ ಫಲಾನುಭವಿಗಳಿಗೆ ಕೊಕ್​​

‘ವೋಟ್ ಇದ್ದವರಿಗೆ ಮಾತ್ರ ಗ್ಯಾರಂಟಿ ಯೋಜನೆ’

ಇನ್ನು ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಮಾಹಿತಿ ನೀಡಿರುವ ಸಿಎಂ ಡಿ.ಕೆ. ಶಿವಕುಮಾರ್​​, ವೋಟ್ ಇದ್ದವರಿಗೆ ಮಾತ್ರ ಗ್ಯಾರಂಟಿ ಯೋಜನೆ ಕೊಡುತ್ತೇವೆ ಎಂದಿದ್ದಾರೆ. ಈ ಹಿಂದೆ ತರಾತುರಿಯಲ್ಲಿ ಯಾರದ್ದೋ ನಂಬರ್ ಕೊಟ್ಟಿದ್ದಾರೆ. ಹೀಗಾಗಿ ಗೃಹಲಕ್ಷ್ಮಿ ಹಣ ಯಾರದ್ದೋ ಅಕೌಂಟ್​ಗೆ ಹೋಗ್ತಿದೆ. ಅದರ ಬದಲು ಫಲಾನುಭವಿಗಳ ಖಾತೆಗೇ ಹಣ ಸಂದಾಯವಾಗಬೇಕು. ನಾವು ಕರ್ನಾಟಕದವರಿಗೆ ಮಾತ್ರ ಗ್ಯಾರಂಟಿಗಳನ್ನು ಕೋಡೋದು ಎಂದವರು ಸ್ಪಷ್ಟವಾಗಿ ತಿಳಿಸಿದ್ದಾರೆ.

‘ಬಿಜೆಪಿಯವರು ಅಭಿಯಾನ ಮಾಡಲಿ’

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಆಕ್ಷೇಪ ತೆಗೆದಿರುವ ಚಿಪಕ್ಷ ಬಿಜೆಪಿಗರಿಗೆ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ ಕೌಂಟರ್​​ ಕೊಟ್ಟಿದ್ದು, ಬಿಜೆಪಿ ತಮ್ಮ ಕಾರ್ಯಕರ್ತರಿಗೆ ಗ್ಯಾರಂಟಿ ಬೇಡ ಅಂತಾ ಅಭಿಯಾನ ಮಾಡಲಿ. ಅವರಿಗೆ ಗ್ಯಾರಂಟಿ ಬೇಡ ಅಂದ್ರೆ ಬೇಡ, ಬೇರೆಯವರು ಪಡೀತಾರೆ. ಆದರೆ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ. ಅರ್ಹರಿಗೆ ಗ್ಯಾರಂಟಿ ಸಿಗಬೇಕೆಂದು ಪರಿಷ್ಕರಣೆ ಮಾಡಲಾಗ್ತಿದೆ ಎಂದವರು ಹೇಳಿದ್ದಾರೆ.

ವರದಿ: ಲಕ್ಷ್ಮೀನರಸಿಂಹ, ಟಿವಿ9 ಕನ್ನಡ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Video: ಪಾಕಿಸ್ತಾನದಲ್ಲಿ ವಾಯುಸೇನೆಯ ತರಬೇತಿ ವಿಮಾನ ಪತನ: ಇಬ್ಬರು ಪೈಲಟ್‌ಗಳ ದುರ್ಮರಣ, ಮೂವರಿಗೆ ಗಾಯ – Kannada News | Tragedy in Khyber Pakhtunkhwa as Air Force Training Jet Goes Down During Flight

ಇಸ್ಲಾಮಾಬಾದ್, ಜೂನ್ 15: ಪಾಕಿಸ್ತಾನದ ಖೈಬರ್ ಪಖ್ತೂನ್ಖ್ವಾ ಪ್ರಾಂತ್ಯದ ಮರ್ದಾನ್ ಜಿಲ್ಲೆಯ ಕಟ್ಲಂಗ್ ಪ್ರದೇಶದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಪಾಕಿಸ್ತಾನ ವಾಯುಸೇನೆಗೆ (PAF) ಸೇರಿದ ತರಬೇತಿ ವಿಮಾನವೊಂದು (Trainer Aircraft) ಹಾರಾಟದ ವೇಳೆ ಇದ್ದಕ್ಕಿದ್ದಂತೆ ತಾಂತ್ರಿಕ ದೋಷದಿಂದಾಗಿ ಅಪಘಾತಕ್ಕೀಡಾಗಿದೆ.
ಈ ದುರದೃಷ್ಟಕರ ಘಟನೆಯಲ್ಲಿ ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.

ವಿಡಿಯೋ

ಯಾವುದೇ ದೇಶದ ವಾಯುಸೇನೆಗಾಗಲಿ ಇಂತಹ ತರಬೇತಿ ವಿಮಾನಗಳ ಅಪಘಾತಗಳು ತೀವ್ರ ಆಘಾತವನ್ನು ಉಂಟುಮಾಡುತ್ತವೆ. ಅಮೂಲ್ಯವಾದ ಮಾನವ ಜೀವಗಳು ಮತ್ತು ರಕ್ಷಣಾ ಆಸ್ತಿಯ ನಷ್ಟವು ಯಾವಾಗಲೂ ಅತ್ಯಂತ ಗಂಭೀರ ಹಾಗೂ ಕಳವಳಕಾರಿ ವಿಷಯವಾಗಿದೆ. ಪ್ರಸ್ತುತ ಅಪಘಾತಕ್ಕೆ ನಿಖರವಾದ ಕಾರಣವನ್ನು ತಿಳಿಯಲು ಅಲ್ಲಿನ ರಕ್ಷಣಾ ಇಲಾಖೆ ತನಿಖೆಗೆ ಆದೇಶಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕರ್ನಾಟಕ ಕರಾವಳಿಯ ಸೌಂದರ್ಯಕ್ಕೆ ಮನಸೋತ ಆನಂದ್ ಮಹೀಂದ್ರಾ! ಶರಾವತಿ ಹಿನ್ನೀರಿನ ಸೌಂದರ್ಯ ಬಣ್ಣಿಸಿ ಪೋಸ್ಟ್ – Kannada News | Anand Mahindra Praises Honnavar Backwaters and Sharavathi Mangroves as Karnataka’s Hidden Gem

ಶರಾವತಿ ನದಿ ಹಿನ್ನೀರು ಸೌಂದರ್ಯ (ಚಿತ್ರ ಕೃಪೆ: ಆನಂದ್ ಮಹೀಂದ್ರಾ ಎಕ್ಸ್ ಹ್ಯಾಂಡಲ್)Image Credit source: @anandmahindra

ಬೆಂಗಳೂರು, ಜೂನ್ 15: ಭಾರತದ ಪ್ರಮುಖ ಪ್ರವಾಸಿ ತಾಣಗಳ ಪೈಕಿ ಅಷ್ಟಾಗಿ ಪರಿಚಿತವಲ್ಲದ, ಆದರೆ ಅದ್ಭುತ ಪ್ರಕೃತಿ ಸೌಂದರ್ಯ ಹೊಂದಿರುವ ರಹಸ್ಯ ತಾಣಗಳ ಹುಡುಕಾಟದಲ್ಲಿದ್ದೇನೆ ಎಂದಿರುವ ಖ್ಯಾತ ಉದ್ಯಮಿ, ಮಹೀಂದ್ರಾ ಸಮೂಹದ ಅಧ್ಯಕ್ಷ ಆನಂದ್ ಮಹೀಂದ್ರಾ (Anand Mahindra) ಕಣ್ಣು ಈಗ ಕರ್ನಾಟಕದ ಕರಾವಳಿಯ ಮೇಲಿದೆ. ಉತ್ತರ ಕನ್ನಡ (Uttara Kannada) ಜಿಲ್ಲೆಯ ಹೊನ್ನಾವರದ ಮನಮೋಹಕ ಹಿನ್ನೀರು (Backwaters) ಮತ್ತು ಶರಾವತಿ ನದಿಯ ಸೌಂದರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಅವರು, ಇದು ಕೇರಳದ ಹಿನ್ನೀರಿನಷ್ಟೇ ಪ್ರಚಾರಕ್ಕೆ ಅರ್ಹವಾದ ಅದ್ಭುತ ಜಾಗ ಎಂದು ಬಣ್ಣಿಸಿದ್ದಾರೆ.

  • ಹೊನ್ನಾವರ ಸೌಂದರ್ಯಕ್ಕೆ ಆನಂದ್ ಮಹೀಂದ್ರಾ ಫಿದಾ.
  • ಕೇರಳ ಹಿನ್ನೀರಿಗೆ ಹೊನ್ನಾವರ ಸಮಾನ ಎಂದ ಉದ್ಯಮಿ.
  • ಕಾಂಡ್ಲಾ ವನಗಳ ಪರಿಸರ ಮಹತ್ವಕ್ಕೆ ಶ್ಲಾಘನೆ.

ಆನಂದ್ ಮಹೀಂದ್ರಾ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಹೊನ್ನಾವರದ ಸುಂದರ ಚಿತ್ರಗಳನ್ನು ಹಂಚಿಕೊಳ್ಳುತ್ತಾ, ‘ನಾವು ಯಾವಾಗಲೂ ಕೇರಳದ ಹಿನ್ನೀರನ್ನು ಸಂಭ್ರಮಿಸುತ್ತೇವೆ. ಆದರೆ ಕರ್ನಾಟಕದ ಕರಾವಳಿಯಲ್ಲಿ ಕೇರಳಕ್ಕೆ ಸರಿಸಾಟಿಯಾಗಿ ಗಮನ ಸೆಳೆಯಲು ಅರ್ಹವಾದ ಒಂದು ರಹಸ್ಯ ರತ್ನವಿದೆ. ಜೋಗ್ ಫಾಲ್ಸ್‌ನಲ್ಲಿ ಭೋರ್ಗರೆದು ಹರಿಯುವ ಅದೇ ಶರಾವತಿ ನದಿ, ಕೊನೆಗೆ ಹೊನ್ನಾವರದಲ್ಲಿ ಅತ್ಯಂತ ಶಾಂತವಾಗಿ ಅರಬ್ಬಿ ಸಮುದ್ರವನ್ನು ಸೇರುತ್ತದೆ. ಹೊನ್ನಾವರ ಒಂದು ಮಾಂತ್ರಿಕ ಭೂದೃಶ್ಯವಾಗಿದೆ ಎಂಬುದಂತೂ ಸ್ಪಷ್ಟ’ ಎಂದು ಬರೆದುಕೊಂಡಿದ್ದಾರೆ.

ಪರಿಸರ ರಕ್ಷಕ ಕಾಂಡ್ಲಾ ವನಗಳ ಮಹತ್ವ

ಕೇವಲ ಪ್ರಕೃತಿ ಸೌಂದರ್ಯ ಮಾತ್ರವಲ್ಲದೆ, ಹೊನ್ನಾವರದ ಪರಿಸರ ವ್ಯವಸ್ಥೆಯ ಬಗ್ಗೆಯೂ ಮಹೀಂದ್ರಾ ಮಾತನಾಡಿದ್ದಾರೆ. ‘ಇಲ್ಲಿನ ಕಾಂಡ್ಲಾ ವನಗಳು (Mangrove forests), ಅಂಕುಡೊಂಕಾದ ಜಲಮಾರ್ಗಗಳು ಮತ್ತು ಕನ್ನಡಿಯಂತೆ ಹೊಳೆಯುವ ಹಿನ್ನೀರು ಅದ್ಭುತವಾಗಿದೆ. ಪ್ರಕೃತಿಯ ಅತ್ಯಂತ ಪರಿಣಾಮಕಾರಿ ಕರಾವಳಿ ರಕ್ಷಕರಲ್ಲಿ ಕಾಂಡ್ಲಾ ವನಗಳು ಸಹ ಸೇರಿವೆ. ಹೀಗಾಗಿ ಹೊನ್ನಾವರದ ಸೌಂದರ್ಯಕ್ಕೆ ಅದರ ಪರಿಸರ ಪ್ರಾಮುಖ್ಯತೆಯೂ ಸಮನಾಗಿ ಹೊಂದಿಕೆಯಾಗುತ್ತದೆ’ ಎಂದು ಅವರು ಉಲ್ಲೇಖಿಸಿದ್ದಾರೆ.

ಆನಂದ್ ಮಹೀಂದ್ರಾ ಎಕ್ಸ್ ಸಂದೇಶ

ಆನಂದ್ ಮಹೀಂದ್ರಾರ ಈ ಪೋಸ್ಟ್‌ಗೆ ಎಕ್ಸ್ ಬಳಕೆದಾರರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಪೋಸ್ಟ್‌ಗೆ ಉತ್ತರಿಸಿದ ವ್ಯಕ್ತಿಯೊಬ್ಬರು, ‘ಇದು ತುಂಬಾ ಸತ್ಯ, ನಾನು ಒಂದೆರಡು ವರ್ಷಗಳ ಹಿಂದೆ ಶರಾವತಿ ಮತ್ತು ಹೊನ್ನಾವರಕ್ಕೆ ಭೇಟಿ ನೀಡಿದ್ದೆ. ಅಲ್ಲಿನ ಸೌಂದರ್ಯಕ್ಕೆ ನಾನು ಬೆರಗಾಗಿದ್ದೆ! ನಾನು ಅಲ್ಲಿ ತೆಗೆದ ಈ ಚಿತ್ರ ಯಾವಾಗಲೂ ನನ್ನ ನೆನಪಿನಲ್ಲಿ ಉಳಿಯುತ್ತದೆ’ ಎಂದು ತಾವು ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದ ಹೊನ್ನಾವರದ ಸುಂದರ ದೃಶ್ಯವೊಂದನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಶಿರಸಿ: 36 ವರ್ಷಗಳ ಬಳಿಕ 400 ಕೋಟಿ ರೂ. ಮೌಲ್ಯದ 379 ಎಕರೆ ಅರಣ್ಯ ಭೂಮಿ ವಶಕ್ಕೆ ಪಡೆಯಲು ಇಲಾಖೆ ಸಜ್ಜು

ಆನಂದ್ ಮಹೀಂದ್ರಾ ಅವರ ಈ ಪೋಸ್ಟ್‌ನಿಂದಾಗಿ ಕರ್ನಾಟಕದ ಕರಾವಳಿ ಪ್ರವಾಸೋದ್ಯಮ ಮತ್ತು ಹೊನ್ನಾವರದ ಕಾಂಡ್ಲಾ ವನಗಳಿಗೆ ಮತ್ತಷ್ಟು ಪ್ರಚಾರ ಸಿಕ್ಕಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸರ್ವಿಸ್ ರಸ್ತೆ ಕಳಪೆ ಕಾಮಗಾರಿ ಪ್ರಶ್ನಿಸಿದವರ ವಿರುದ್ಧ ಅಶ್ಲೀಲ ಪದ ಬಳಸಿದ ಕಾಂಗ್ರೆಸ್​​ ಸಂಸದ ಇ. ತುಕಾರಾಂ – Kannada News | Controversy Sparks as Bellary MP E Tukaram Allegedly Abuses Locals Questioning Poor Quality Service Road Work

ಕಳಪೆ ಕಾಮಗಾರಿ ಪ್ರಶ್ನಿಸಿದವರ ವಿರುದ್ಧ ಅಶ್ಲೀಲ ಪದ ಬಳಸಿದ ಕಾಂಗ್ರೆಸ್​​ ಸಂಸದ
Image Credit source: Tv9 Kannada

ಬಳ್ಳಾರಿ, ಜೂನ್​​ 15: ನಿರ್ಮಾಣಗೊಂಡ ಕೆಲವೇ ದಿನದಲ್ಲೇ ಸರ್ವಿಸ್ ರಸ್ತೆ ಕುಸಿದ ಹಿನ್ನೆಲೆ ಪರಿಶೀಲನೆಗಾಗಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಬಳ್ಳಾರಿ ಸಂಸದ ಇ. ತುಕಾರಾಂ ಸ್ಥಳೀಯ ನಿವಾಸಿಗಳ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿರುವ ಘಟನೆ ನಡೆದಿದೆ. ಕಳಪೆ ಕಾಮಗಾರಿಗೆ ಬಗ್ಗೆ ಸಂಸದರನ್ನು ಸ್ಥಳೀಯರು ಪ್ರಶ್ನೆ ಮಾಡಿದ ವೇಳೆ ತುಕಾರಾಂ ಗರಂ ಆಗಿದ್ದು, ತುಕಾರಾಂ ನಿಂದನೆ ಮಾಡಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮುಖ್ಯಾಂಶಗಳು

  • ನಿರ್ಮಾಣಗೊಂಡ ಕೆಲವೇ ದಿನದಲ್ಲೇ ಸರ್ವಿಸ್ ರಸ್ತೆ ಕುಸಿತ
  • ಕಳಪೆ ಕಾಮಗಾರಿ ಬಗ್ಗೆ ಕೇಳಿದ್ದಕ್ಕೆ ಸಂಸದ ತುಕಾರಾಂ ಗರಂ
  • ಸ್ಥಳೀಯರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿರುವ ಆರೋಪ

ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಡಣಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 50ರ ಮೇಲ್ಸೆತುವೆ ನಿರ್ಮಾಣದ ಕಾಮಗಾರಿ ನಡೆಯುತ್ತಿದ್ದು, ಕೆಲ ದಿನಗಳ ಹಿಂದೆ ಟ್ರಕ್ ನಿಂತಿದ್ದಾಗ ಸರ್ವಿಸ್ ರಸ್ತೆ ಕುಸಿದುಬಿದ್ದಿತ್ತು. ರಸ್ತೆ ನಿರ್ಮಾಣಗೊಂಡು ಕೇವಲ 10 ದಿನಗಳಲ್ಲಿಯೇ ಘಟನೆ ನಡೆದಿದ್ದ ಕಾರಣ ಕಳಪೆ ಕಾಮಗಾರಿಯಿಂದಲೇ ಈರೀತಿಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದರು. 2 ತಿಂಗಳ ಹಿಂದೆಯಷ್ಟೇ ಕಾಮಗಾರಿಗೆ ಸಂಸದ ತುಕಾರಾಂ ಭೂಮಿ ಪೂಜೆ ನೆರವೇರಿಸಿದ್ದು, 33 ಕೋಟಿ ವೆಚ್ಚದಲ್ಲಿ ಮೆಲ್ಸೇತುವೆ, ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ.

ಇದನ್ನೂ ಓದಿ: 6 ಸಾವಿರ ಕೊಟ್ರೆ ಒಂದು ವಿಷಯ ಪಾಸ್​​; ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮತ್ತೊಂದು ಕಳ್ಳಾಟ ಬಯಲು

ಹಣ ಉಳಿಸಲು ರಸ್ತೆ ನಿರ್ಮಾಣದ ವೇಳೆ ಮಣ್ಣು ಹಾಕದೇ ಪ್ಲೈಯಶ್ ಹಾಕಿ ರಸ್ತೆ ನಿರ್ಮಾಣ ಮಾಡಲಾಗಿದೆ. ಹೀಗಾಗಿಯೇ ರಸ್ತೆ ನಿರ್ಮಿಸಿ ಕೆಲ ದಿನಗಳು ಕಳೆಯುವುದರ ಒಳಗೆ ಅದು ಕುಸಿಯುತ್ತಿದೆ. ಜನರ ಹಣವನ್ನು ಈ ರೀತು ದುರ್ಬಳಕ್ಕೆ ಮಾಡುತ್ತಿರುವ ಕಂಪನಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಡಳಿತ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವನ್ನು ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಸುಪ್ರೀಂ ಮೆಟ್ಟಿಲೇರಿದ ಅಯೋಧ್ಯೆ ರಾಮ ಮಂದಿರದ ದೇಣಿಗೆಯಲ್ಲಿ ಅಕ್ರಮ ಪ್ರಕರಣ, ಯುಪಿ ಸರ್ಕಾರದಿಂದ ‘ಎಸ್‌ಐಟಿ’ ರಚನೆ – Kannada News | Ayodhya Ram Mandir Donation Scam: SC Petition Filed, UP Govt Forms SIT for Probe

ಲಕ್ನೋ, ಜೂನ್ 15: ಅಯೋಧ್ಯೆ(Ayodhya)ಯ ಶ್ರೀರಾಮ ಜನ್ಮಭೂಮಿ ದೇವಸ್ಥಾಬದ ದೇಣಿಗೆ ನಿರ್ವಹಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಆರೋಪ ಈಗ ಸುಪ್ರೀಂಕೋರ್ಟ್​ ಮೆಟ್ಟಿಲೇರಿದೆ. ಸಾರ್ವಜನಿಕರ ವಿಶ್ವಾಸವನ್ನು ಕಾಪಾಡಲು ಈ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಡೆಸಿದೆ.

ಇದೇ ವೇಳೆ, ಪ್ರಕರಣದ ಪಾರದರ್ಶಕತೆ ಮತ್ತು ಸತ್ಯಾಸತ್ಯತೆಯನ್ನು ಬಯಲಿಗೆಳೆಯಲು ಉತ್ತರ ಪ್ರದೇಶ ಸರ್ಕಾರವು ಈಗಾಗಲೇ ಉನ್ನತ ಮಟ್ಟದ ವಿಶೇಷ ತನಿಖಾ ತಂಡವನ್ನು (SIT) ರಚಿಸುವ ಮೂಲಕ ತ್ವರಿತ ಕ್ರಮ ಕೈಗೊಂಡಿದೆ. ವಕೀಲ ಅನೂಪ್ ಅವಸ್ಥಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಅಯೋಧ್ಯೆ ಮಂದಿರದ ದೇಣಿಗೆಗೆ ಸಂಬಂಧಿಸಿದ ಆರೋಪಗಳನ್ನು ನ್ಯಾಯಾಲಯವೇ ನೇರವಾಗಿ ಪರಿಶೀಲಿಸಬೇಕು ಮತ್ತು ಸ್ವತಂತ್ರ ತನಿಖೆಗೆ ಆದೇಶಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರಿಗೆ ಮನವಿ ಮಾಡಿದ್ದಾರೆ.

ಈ ಮನವಿಗೆ ಸ್ಪಂದಿಸಿದ ಸಿಜೆಐ ಸೂರ್ಯ ಕಾಂತ್ ಅವರು, ನ್ಯಾಯಾಲಯದಲ್ಲಿ ಇಂತಹ ವಿಷಯಗಳ ಬಗ್ಗೆ ಕೇವಲ ಮೌಖಿಕವಾಗಿ ಹೇಳುವ ಬದಲು ಅಧಿಕೃತವಾಗಿ ಲಿಖಿತ ಟಿಪ್ಪಣಿಗಳನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ. ಆ ಟಿಪ್ಪಣಿಗಳನ್ನು ಪರಿಶೀಲಿಸಿದ ನಂತರ ಯಾವುದು ಪ್ರಸ್ತುತ ಎಂಬುದನ್ನು ನಿರ್ಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಯುಪಿ ಸರ್ಕಾರದಿಂದ ಮೂವರ ಸದಸ್ಯರ ‘SIT’ ತಂಡ ರಚನೆ
ದೇಣಿಗೆ ಪೆಟ್ಟಿಗೆಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ವದಂತಿಗಳಿಗೆ ಬ್ರೇಕ್ ಹಾಕಲು ಮತ್ತು ಸತ್ಯವನ್ನು ಜನರೆದುರು ತರಲು ‘ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್’ ಸ್ವತಃ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ನಿಷ್ಪಕ್ಷಪಾತ ತನಿಖೆಗಾಗಿ ವಿನಂತಿಸಿತ್ತು. ಟ್ರಸ್ಟ್‌ನ ಕೋರಿಕೆಯ ಮೇರೆಗೆ ಮುಖ್ಯಮಂತ್ರಿಗಳು ಮೂವರು ಉನ್ನತ ಅಧಿಕಾರಿಗಳ ವಿಶೇಷ ತನಿಖಾ ತಂಡವನ್ನು (SIT) ರಚಿಸಿದ್ದಾರೆ.

ಮತ್ತಷ್ಟು ಓದಿ: Video: ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ

ವಿಜಯ್ ವಿಶ್ವಾಸ್ ಪಂತ್: ಹಿರಿಯ ಐಎಎಸ್ (IAS) ಅಧಿಕಾರಿ ಹಾಗೂ ಲಕ್ನೋ ವಿಭಾಗೀಯ ಆಯುಕ್ತರು.

ಕಿರಣ್ ಎಸ್: ಹಿರಿಯ ಐಪಿಎಸ್ (IPS) ಅಧಿಕಾರಿ ಹಾಗೂ ಪೊಲೀಸ್ ಮಹಾನಿರ್ದೇಶಕರು.

ನೀಲ್ ರತನ್: ಹಣಕಾಸು ಇಲಾಖೆಯ ವಿಶೇಷ ಕಾರ್ಯದರ್ಶಿಗಳು.

ಈ ತಂಡವು ಇಡೀ ಪ್ರಕರಣವನ್ನು ಕೂಲಂಕಷವಾಗಿ ತನಿಖೆ ಮಾಡಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಿದೆ.

ಕೇವಲ ನಿರ್ಮಾಣ ಕಾರ್ಯಕ್ಕೆ ನನ್ನ ಪಾತ್ರ ಸೀಮಿತ: ನೃಪೇಂದ್ರ ಮಿಶ್ರಾ
ದೇಣಿಗೆ ವಿಷಯದ ಬಗ್ಗೆ ಕೇಳಲಾದ ಪ್ರಶ್ನೆಗಳಿಗೆ ರಾಮ ಮಂದಿರ ನಿರ್ಮಾಣ ಸಮಿತಿಯ ಮುಖ್ಯಸ್ಥ ನೃಪೇಂದ್ರ ಮಿಶ್ರಾ ಅವರು ಸ್ಪಷ್ಟನೆ ನೀಡಿದ್ದಾರೆ. ನನ್ನ ಜವಾಬ್ದಾರಿಯು ಕೇವಲ ಮಂದಿರದ ನಿರ್ಮಾಣ ಕಾರ್ಯಗಳ ಮೇಲ್ವಿಚಾರಣೆಗೆ ಮಾತ್ರ ಸೀಮಿತವಾಗಿದೆ. ಆ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಲು ನಾನು ಅಯೋಧ್ಯೆಗೆ ಬಂದಿದ್ದೇನೆ, ಹಣಕಾಸಿನ ವಿಷಯಗಳಿಗೂ ನನಗೂ ಸಂಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ವಿಷಯದ ಬಗ್ಗೆ ರಾಜಕೀಯ ವಲಯದಲ್ಲೂ ಚರ್ಚೆಗಳು ಆರಂಭವಾಗಿವೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಈ ದೂರುಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದರೆ, ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರು ವಿರೋಧ ಪಕ್ಷಗಳು ವದಂತಿಗಳನ್ನು ಹರಡುತ್ತಿವೆ ಎಂದು ಪ್ರತ್ಯುತ್ತರ ನೀಡಿದ್ದಾರೆ. ಸದ್ಯಕ್ಕೆ ಸರ್ಕಾರದ ಎಸ್‌ಐಟಿ (SIT) ತನಿಖೆಯು ಆರಂಭವಾಗಿರುವುದರಿಂದ ಶೀಘ್ರದಲ್ಲೇ ವದಂತಿಗಳಿಗೆ ತೆರೆ ಬೀಳಲಿದ್ದು, ಪಾರದರ್ಶಕತೆ ಹೊರಬರಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಇರಾನ್-ಅಮೆರಿಕ ಒಪ್ಪಂದದ ಎಫೆಕ್ಟ್; ತೈಲ ಬೆಲೆ ಇಳಿಕೆ; ರೂಪಾಯಿಗೆ ಜೀವ; ಚಿನ್ನ, ಷೇರುಗಳ ಜಿಗಿತ – Kannada News | Hormuz Peace Deal: Crude Oil Drops, Indian Stocks Soar – Global Market Impact

ಭಾರತೀಯ ಷೇರು ಮಾರುಕಟ್ಟೆImage Credit source: Shutterstock

ನವದೆಹಲಿ, ಜೂನ್ 15: ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಜಗತ್ತಿನ ಶಾಂತಿ ಮತ್ತು ಆರ್ಥಿಕತೆಗೆ ಧಕ್ಕೆ ಹಾರ್ಮುಜ್ ಜಲಸಂಧಿ (Strait of Hormuz) ಸಂಘರ್ಷ ಕೊನೆಗೂ ಅಂತ್ಯಗೊಳ್ಳುತ್ತಿದೆ. ಇರಾನ್ ಮತ್ತು ಅಮೆರಿಕ ನಡುವೆ ಶಾಂತಿ ಒಪ್ಪಂದ (Iran-US peace deal) ಏರ್ಪಡುತ್ತಿದೆ. ಒಪ್ಪಂದಕ್ಕೆ ಸಹಿ ಹಾಕಲು ಎರಡೂ ದೇಶಗಳು ಒಪ್ಪಿವೆ. ಇದು ಜಾಗತಿಕ ಮಾರುಕಟ್ಟೆಗಳಿಗೆ ಸಿಹಿ ತಂದಿರುವ ಬೆಳವಣಿಗೆ. ಅದರಲ್ಲೂ ಭಾರತದಂತಹ ದೇಶಗಳಿಗೆ ತುಸು ನೆಮ್ಮದಿ ತರುವ ಸುದ್ದಿ. ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ಉದ್ವಿಗ್ನತೆ ಕಡಿಮೆಯಾಗಿರುವುದು ಹೂಡಿಕೆದಾರರಲ್ಲಿ ಹೊಸ ಭರವಸೆ ಮೂಡಿಸಿದೆ.

ಕಚ್ಚಾ ತೈಲ (Crude Oil) ಬೆಲೆಯಲ್ಲಿ ಭಾರಿ ಕುಸಿತ

ಜಾಗತಿಕ ತೈಲ ಪೂರೈಕೆಗೆ ಎದುರಾಗಿದ್ದ ಆತಂಕ ದೂರವಾಗಿರುವುದರಿಂದ ಕಚ್ಚಾ ತೈಲ ಬೆಲೆ ತೀವ್ರವಾಗಿ ಕುಸಿದಿದೆ. ಅಮೆರಿಕದ ಕಚ್ಚಾ ತೈಲ ಬೆಲೆಯು ಶೇ. 4.3 ರಷ್ಟು ಕುಸಿದು ಬ್ಯಾರೆಲ್‌ಗೆ $81.23 ತಲುಪಿದೆ. ವಿಶ್ವದ ಒಟ್ಟು ತೈಲ ಬಳಕೆಯ ಸುಮಾರು ಐದನೇ ಒಂದು ಭಾಗ ಹಾರ್ಮುಜ್ ಜಲಸಂಧಿಯ ಮೂಲಕವೇ ಸಾಗುವುದರಿಂದ, ಇಲ್ಲಿನ ದಿಗ್ಬಂಧನ ತೆರವಾಗಿರುವುದು ಮಾರುಕಟ್ಟೆಗೆ ನಿರಾಳತೆ ತಂದಿದೆ.

ಭಾರತವು ತನ್ನ ಕಚ್ಚಾ ತೈಲದ ಅಗತ್ಯತೆಯ ಶೇಕಡಾ 85 ಕ್ಕಿಂತ ಹೆಚ್ಚಿನ ಭಾಗವನ್ನು ಆಮದು ಮಾಡಿಕೊಳ್ಳುತ್ತದೆ. ತೈಲ ಬೆಲೆ ಇಳಿಕೆಯಿಂದ ದೇಶದ ಹಣದುಬ್ಬರ ನಿಯಂತ್ರಣಕ್ಕೆ ಬರಲಿದ್ದು, ಆಮದು ವೆಚ್ಚ ಹಾಗೂ ಚಾಲ್ತಿ ಖಾತೆ ಕೊರತೆ (CAD) ಕಡಿಮೆಯಾಗಲಿದೆ.

ಇದನ್ನೂ ಓದಿ: ಭಾರತೀಯ ಪ್ರತಿಭೆ ಮತ್ತು ಐರೋಪ್ಯ ಪರಿಣಿತಿಗೆ ಸೇತುವಾಗಿರುವ ಭಾರತ್ ಇನ್ನೋವೇಟ್ಸ್: ಪ್ರಧಾನಿ ಮೋದಿ

ಸೆನ್ಸೆಕ್ಸ್ ಮತ್ತು ನಿಫ್ಟಿ ಭರ್ಜರಿ ಜಿಗಿತ

ಏಷ್ಯಾದಲ್ಲಿ ಶಾಂತಿ ನೆಲೆಸುವ ಮುನ್ಸೂಚನೆ ಸಿಗುತ್ತಿದ್ದಂತೆ ಭಾರತೀಯ ಷೇರು ಮಾರುಕಟ್ಟೆಗಳು ಸೋಮವಾರ ಭರ್ಜರಿ ಲಾಭದೊಂದಿಗೆ ವಹಿವಾಟು ಆರಂಭಿಸಿದವು. ಆರಂಭಿಕ ವಹಿವಾಟಿನಲ್ಲಿ ಬಿಎಸ್‌ಇ ಸೆನ್ಸೆಕ್ಸ್ 1,144 ಅಂಕಗಳ (ಶೇ 1.51) ಏರಿಕೆ ಕಂಡು 76,672 ಕ್ಕೆ ತಲುಪಿದರೆ, ಎನ್‌ಎಸ್‌ಇ ನಿಫ್ಟಿ 351 ಅಂಕಗಳ (ಶೇ 1.49) ಜಿಗಿತದೊಂದಿಗೆ 23,974 ರ ಮಟ್ಟ ಮುಟ್ಟಿತು. ಬ್ಯಾಂಕಿಂಗ್ ಮತ್ತು ಹಣಕಾಸು ವಲಯದ ಷೇರುಗಳು ಮಾರುಕಟ್ಟೆಯನ್ನು ಮುನ್ನಡೆಸಿದವು. ಮಾರುಕಟ್ಟೆಯ ಏರಿಳಿತವನ್ನು ಅಳೆಯುವ ಇಂಡಿಯಾ ವಿಐಎಕ್ಸ್ (India VIX) ಕುಸಿದಿದ್ದು, ಹೂಡಿಕೆದಾರರ ಆತಂಕ ದೂರವಾಗಿರುವುದನ್ನು ಇದು ತೋರಿಸುತ್ತದೆ.

ಬಲಗೊಂಡ ಭಾರತೀಯ ರೂಪಾಯಿ

ಕಚ್ಚಾ ತೈಲದ ಬೆಲೆ ಇಳಿಕೆಯ ನೇರ ಸಕಾರಾತ್ಮಕ ಪರಿಣಾಮ ರೂಪಾಯಿಯ ಮೇಲಾಗಿದೆ. ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯವು 53 ಪೈಸೆ ಬಲಗೊಂಡು 94.65 ಮಟ್ಟದಲ್ಲಿ ವಹಿವಾಟು ಆರಂಭಿಸಿತು (ಹಿಂದಿನ ಶುಕ್ರವಾರದ ಮುಕ್ತಾಯದ ಮೌಲ್ಯ 95.18 ಆಗಿತ್ತು). ತೈಲ ಬೆಲೆ ಕಡಿಮೆಯಾದಾಗ ಭಾರತೀಯ ತೈಲ ಕಂಪನಿಗಳಿಂದ ಡಾಲರ್ ಬೇಡಿಕೆ ತಗ್ಗುತ್ತದೆ. ಇದರಿಂದ ವಿದೇಶಿ ಸಾಂಸ್ಥಿಕ ಹೂಡಿಕೆದಾರರು (FII) ಮತ್ತೆ ಭಾರತೀಯ ಮಾರುಕಟ್ಟೆಗೆ ಮರಳುವ ನಿರೀಕ್ಷೆಯಿದೆ.

ಶೇ 2 ಕ್ಕಿಂತ ಹೆಚ್ಚು ಜಿಗಿದ ಚಿನ್ನದ ಬೆಲೆ

ಭೌಗೋಳಿಕ ಉದ್ವಿಗ್ನತೆ ಕಡಿಮೆಯಾಗಿದ್ದರೂ ಚಿನ್ನದ ಬೆಲೆ ಮಾತ್ರ ತೈಲಕ್ಕೆ ತದ್ವಿರುದ್ಧವಾಗಿ ತೇಜಿ ಕಂಡಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸ್ಪಾಟ್ ಗೋಲ್ಡ್ ಶೇಕಡಾ 2.5 ರಷ್ಟು ಏರಿಕೆಯಾಗಿ ಔನ್ಸ್‌ಗೆ $4,322.87 ತಲುಪಿದೆ. ತೈಲ ಬೆಲೆ ಕುಸಿತದಿಂದಾಗಿ ಜಾಗತಿಕವಾಗಿ ಹಣದುಬ್ಬರ ನಿಯಂತ್ರಣಕ್ಕೆ ಬಂದು, ಮುಂಬರುವ ದಿನಗಳಲ್ಲಿ ಕೇಂದ್ರೀಯ ಬ್ಯಾಂಕ್‌ಗಳು ಬಡ್ಡಿದರಗಳನ್ನು ಕಡಿತಗೊಳಿಸಬಹುದು ಎಂಬ ನಿರೀಕ್ಷೆಯಿಂದ ಹೂಡಿಕೆದಾರರು ಚಿನ್ನದ ಕಡೆಗೆ ಒಲವು ತೋರುತ್ತಿದ್ದಾರೆ. ಜೊತೆಗೆ ವಿವಿಧ ದೇಶಗಳ ಕೇಂದ್ರೀಯ ಬ್ಯಾಂಕ್‌ಗಳು ದೊಡ್ಡ ಪ್ರಮಾಣದಲ್ಲಿ ಚಿನ್ನವನ್ನು ಖರೀದಿಸುತ್ತಿರುವುದು ಸಹ ಇದರ ಬೆಲೆ ಏರಿಕೆಗೆ ಕಾರಣವಾಗಿದೆ.

ಇದನ್ನೂ ಓದಿ: ಮೋದಿ 5 ದಿನಗಳ ಐರೋಪ್ಯ ಪ್ರವಾಸದಲ್ಲಿ ‘ಭಾರತ್ ಇನ್ನೋವೇಟ್ಸ್’; ಹೂಡಿಕೆದಾರರೊಂದಿಗೆ ಪ್ರಧಾನಿ ಸಂವಾದ

$65,000 ಗಡಿ ದಾಟಿದ ಬಿಟ್‌ಕಾಯಿನ್

ಜಾಗತಿಕ ಮಾರುಕಟ್ಟೆಗಳಲ್ಲಿ ಹೂಡಿಕೆದಾರರು ರಿಸ್ಕ್ ತೆಗೆದುಕೊಳ್ಳಲು (Risk Appetite) ಮುಂದಾಗಿರುವುದು ಕ್ರಿಪ್ಟೋಕರೆನ್ಸಿ ಮಾರುಕಟ್ಟೆಗೆ ಪೂರಕವಾಗಿದೆ. ವಿಶ್ವದ ಅತಿ ದೊಡ್ಡ ಕ್ರಿಪ್ಟೋಕರೆನ್ಸಿ ಬಿಟ್‌ಕಾಯಿನ್ ಶೇಕಡಾ 2 ಕ್ಕಿಂತ ಹೆಚ್ಚು ಲಾಭ ಗಳಿಸಿ $65,783 ಮಟ್ಟದಲ್ಲಿ ವಹಿವಾಟು ನಡೆಸುತ್ತಿದೆ. ಇದರ ಒಟ್ಟು ಮಾರುಕಟ್ಟೆ ಮೌಲ್ಯ ಸುಮಾರು $1.3 ಟ್ರಿಲಿಯನ್ ತಲುಪಿದೆ.

ಜಾಗತಿಕ ಮಾರುಕಟ್ಟೆಗಳಲ್ಲಿ ಹರ್ಷ

ಈ ಶಾಂತಿ ಒಪ್ಪಂದವನ್ನು ಇಡೀ ವಿಶ್ವದ ಮಾರುಕಟ್ಟೆಗಳು ಸ್ವಾಗತಿಸಿವೆ. ಜಪಾನ್‌ನ ನಿಕೈ (Nikkei) ಮತ್ತು ದಕ್ಷಿಣ ಕೊರಿಯಾದ ಕೋಸ್ಪಿ (Kospi) ಸೂಚ್ಯಂಕಗಳು ತಲಾ ಶೇಕಡಾ 4 ಕ್ಕಿಂತ ಹೆಚ್ಚು ಜಿಗಿತ ಕಂಡರೆ, ಆಸ್ಟ್ರೇಲಿಯಾದ ಎಎಸ್‌ಎಕ್ಸ್ 200 ಶೇ 1.4 ರಷ್ಟು ಏರಿಕೆ ಕಂಡಿದೆ. ಪ್ರಸ್ತುತ ಹೂಡಿಕೆದಾರರು ಮುಂದಿನ 60 ದಿನಗಳ ಬೆಳವಣಿಗೆಯನ್ನು ಗಮನಿಸುತ್ತಿದ್ದಾರೆ, ಏಕೆಂದರೆ ಇರಾನ್ ಅಧಿಕಾರಿಗಳ ಪ್ರಕಾರ ಔಪಚಾರಿಕ ಅಂತಿಮ ಒಪ್ಪಂದಕ್ಕೆ ಸಹಿ ಹಾಕುವ ಮುನ್ನ ಮುಂದಿನ 60 ದಿನಗಳ ಕಾಲ ಮಾತುಕತೆಗಳು ಮುಂದುವರಿಯಲಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

‘ಕರುಪ್ಪು’ ಚಿತ್ರ ಥಿಯೇಟರ್​​​ನಲ್ಲಿ ಹಿಟ್​, ಒಟಿಟಿಯಲ್ಲಿ ಫ್ಲಾಪ್ – Kannada News | Karuppu Movie: Theater Hit, OTT Flop? Suriya Trisha Film’s Unexpected Fate Explained

ಸೂರ್ಯ ಹಾಗೂ ತ್ರಿಷಾ ನಟನೆಯ ‘ಕರುಪ್ಪು’ ಸಿನಿಮಾ (Karuppu Movie) ಥಿಯೇಟರ್​​​ನಲ್ಲಿ ರಿಲೀಸ್ ಆಗಿ ಬರೋಬ್ಬರಿ 300 ಕೋಟಿ ರೂಪಾಯಿ ಬಾಚಿಕೊಂಡಿತು. ರಿಲೀಸ್ ಆದ ಒಂದೇ ತಿಂಗಳಿಗೆ ಸಿನಿಮಾ ಒಟಿಟಿಗೆ ಕಾಲಿಟ್ಟಿದೆ. ಈ ಚಿತ್ರ ಥಿಯೇಟರ್​​ನಲ್ಲಿ ಹಿಟ್ ಆಗಿತ್ತು ನಿಜ, ಆದರೆ, ಒಟಿಟಿಯಲ್ಲಿ ಈ ಚಿತ್ರ ಫ್ಲಾಪ್ ಆಗಿದೆ. ಈ ಚಿತ್ರವನ್ನು ಒಟಿಟಿಯಲ್ಲಿ ನೋಡಿದ ಅನೇಕರು ಚಿತ್ರದ ಬಗ್ಗೆ ಅಪಸ್ವರ ತೆಗೆದಿದ್ದಾರೆ.

ಕರುಪ್ಪು ಚಿತ್ರವನ್ನು ಆರ್​​ಜೆ ಬಾಲಾಜಿ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರೇ ವಿಲನ್ ಪಾತ್ರ ಕೂಡ ಮಾಡಿದ್ದಾರೆ. ಈ ಸಿನಿಮಾ ನೋಡಿದ ಫ್ಯಾನ್ಸ್ ಹಾಡಿ ಹೊಗಳಿದ್ದರು. ಬಾಯ್ಮಾತಿನ ಪ್ರಚಾರದಿಂದ ಸಿನಿಮಾ 300 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಆದರೆ, ಒಟಿಟಿಗೆ ಬರುತ್ತಿದ್ದಂತೆ ಜನರು ಚಿತ್ರವನ್ನು ತೆಗಳುತ್ತಿದ್ದಾರೆ. ಇದಕ್ಕೆ ಕಾರಣವೂ ಇದೆ.

‘ಕರುಪ್ಪು’ ಸಿನಿಮಾದಲ್ಲಿ ಸೂರ್ಯ ಪಾತ್ರ ಕಾಣಿಸಿಕೊಳ್ಳೋದು ಕೇವಲ 30 ನಿಮಿಷ ಮಾತ್ರ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಇನ್ನು, ಚಿತ್ರಕ್ಕೆ ಸಿಕ್ಕ ಸಾಯಿ ಅಭಯಂಕರ್ ಮ್ಯೂಸಿಕ್ ಅದ್ಭುತವಾಗಿದೆ. ಇಡೀ ಚಿತ್ರವನ್ನು ಮೇಲಕ್ಕೆ ಎತ್ತೋದು ಅವರ ಮ್ಯೂಸಿಕ್. ಇದು ಚಿತ್ರಮಂದಿರಗಳಲ್ಲಿ ಒಳ್ಳೆಯ ಫೀಲ್ ಕೊಟ್ಟಿದೆ ನಿಜ. ಆದರೆ, ಒಟಿಟಿಯಲ್ಲಿ ಥಿಯೇಟರ್​ ಫೀಲ್ ಸಿಗಲು ಸಾಧ್ಯವಿಲ್ಲ. ಹೀಗಾಗಿ, ಜನರಿಗೆ ಸಿನಿಮಾ ಇಷ್ಟ ಆಗಿಲ್ಲ.

ಇದನ್ನೂ ಓದಿ: ‘ಕರುಪ್ಪು’ ಸಿನಿಮಾಕ್ಕೆ ಹೀಗಿತ್ತು ನಟ ಸೂರ್ಯ ತಯಾರಿ: ವಿಡಿಯೋ

ಇನ್ನು, ಸೂರ್ಯ ಹಾಗೂ ತ್ರಿಷಾ ಅವರನ್ನು ಹೆಚ್ಚು ಹೊತ್ತು ತೋರಿಸಿಲ್ಲ ಎಂಬ ಬೇಸರವೂ ಅಭಿಮಾನಿಗಳಿಗೆ ಕಾಡುತ್ತಾ ಇದೆ. ಈ ಎಲ್ಲಾ ಕಾರಣದಿಂದ ‘ಕರುಪ್ಪು’ ಸಿನಿಮಾ ಒಟಿಟಿಯಲ್ಲಿ ಫ್ಲಾಪ್ ಆಗುವ ಲಕ್ಷಣ ಗೋಚರವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ನನ್ನ ಜೀವನದ ತಪ್ಪು ನಿರ್ಧಾರವಿದು; ಗುರುಗ್ರಾಮದಿಂದ ಬೆಂಗಳೂರಿಗೆ ಸ್ಥಳಾಂತರಗೊಂಡ ಮಹಿಳೆ ಹೀಗೆಂದಿದ್ದೇಕೆ? – Kannada News | Bengaluru: Woman expresses regret over her decision to come to Bengaluru, says she made a big mistake

ಬೆಂಗಳೂರು, ಜೂನ್ 14: ಕೆಲಸದ ಕಾರಣಕ್ಕೆ ಒಂದು ಊರಿನಿಂದ ಮತ್ತೊಂದು ಊರಿಗೆ ಹೋಗೋದು ಅನಿರ್ವಾಯ. ಆದರೆ ಈ ರೀತಿಯ ನಿರ್ಧಾರಗಳು ಕೆಲವೊಮ್ಮೆ ಪಶ್ಚಾತಾಪ ಭಾವನೆಯನ್ನು ಉಂಟು ಮಾಡಬಹುದು. ಗುರುಗ್ರಾಮದಿಂದ ಬೆಂಗಳೂರಿಗೆ (Bengaluru) ಸ್ಥಳಾಂತರಗೊಂಡ ಮಹಿಳೆಗೂ ಅದೇ ರೀತಿಯಾಗಿದೆ. ಇದಕ್ಕೆ ಕಾರಣವಾಗಿದ್ದು ಬೆಂಗಳೂರಿನ ಬಾಡಿಗೆ ದರ. ಹೌದು, ಈ ದಂಪತಿ ಬೆಂಗಳೂರಿನಲ್ಲಿ ಬಾಡಿಗೆ ದರ 52,000 ರೂ ಇರುವ ಫ್ಲಾಟ್‌ಗೆ ಸ್ಥಳಾಂತರಗೊಂಡಿದ್ದು, ಅವರು ಮಾಡಿದ ಪೋಸ್ಟ್ ಸದ್ಯ ಆನ್ಲೈನ್ ನಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ.

ಪಾರುಲ್‌ ಅಸೀಮ್‌ (@parul___aseem) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಗುರುಗ್ರಾಮದಿಂದ ಬೆಂಗಳೂರಿಗೆ ಸ್ಥಳಾಂತರಗೊಂಡ ದಂಪತಿ ವಿಡಿಯೋ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ನಲ್ಲಿ ನೀವು ಬೆಂಗಳೂರಿಗೆ ಸ್ಥಳಾಂತರಗೊಳ್ಳುತ್ತಿದ್ದರೆ , ಕೇವಲ ಫೇಮಸ್ ಆಗಿರುವ ಪ್ರದೇಶಗಳಿಗೆ ಮಾತ್ರ ಬಲಿಯಾಗಬೇಡಿ. ನಾವು ಆ ತಪ್ಪನ್ನು ಮಾಡಿದ್ದೇವೆ… ಹೆಚ್ಚಿನ ಬಾಡಿಗೆ, ಹೆಚ್ಚಿನ ಠೇವಣಿ ಪಾವತಿಸಿದ್ದೇವೆ. ಆದರೆ ಬಹುತೇಕ ಯಾವುದೇ ಸೌಲಭ್ಯಗಳನ್ನು ಪಡೆಯಲಿಲ್ಲ. ಆದರೆ ನಾವು ಸ್ಥಳಾಂತರಗೊಂಡ ನಂತರ ಇದುನಮಗೆ ಅರಿವಾಯಿತು. ನೀವು ನಿಜವಾಗಿಯೂ ಬಜೆಟ್ ಸ್ನೇಹಿ ಸ್ಥಳಗಳಲ್ಲಿ ಉತ್ತಮವಾಗಿ ಬದುಕಬಹುದು ಎಂದು ಬರೆದುಕೊಂಡಿದ್ದಾರೆ.

ವೈರಲ್‌ ವಿಡಿಯೋ ಇಲ್ಲಿದೆ

ಬೆಂಗಳೂರಿನಲ್ಲಿ ಅತ್ಯುತ್ತಮ ಬಜೆಟ್ ಸ್ನೇಹಿ ಪ್ರದೇಶಗಳು ಇವು. ಯಲಹಂಕ – ಶಾಂತಿಯುತ, ವಿಶಾಲವಾದ ಮನೆಗಳು ಹಾಗೂ ಕುಟುಂಬಗಳಿಗೆ ಉತ್ತಮವಾಗಿದೆ. ಎಲೆಕ್ಟ್ರಾನಿಕ್ ಸಿಟಿ – ಕೈಗೆಟುಕುವ ಹಾಗೂ ಐಟಿ ಜನರಿಗೆ ಉತ್ತಮ. ಕನಕಪುರ ರಸ್ತೆ – ವೇಗವಾಗಿ ಬೆಳೆಯುತ್ತಿದೆ. ಸರ್ಜಾಪುರ ಹೊರವಲಯ – ಸರ್ಜಾಪುರಕ್ಕಿಂತ ಉತ್ತಮ ಡೀಲ್‌ಗಳು. ವೈಟ್‌ಫೀಲ್ಡ್ ಹೊರವಲಯ – ಹೆಚ್ಚು ಸ್ಥಳಾವಕಾಶ, ಕಡಿಮೆ ಬಾಡಿಗೆಗೆ ಮನೆ ಸಿಗುತ್ತದೆ ಎಂದಿದ್ದಾರೆ. ನಿಮ್ಮ ಕೆಲಸವು ಹೈಬ್ರಿಡ್ ರಿಮೋಟ್ ಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದರೆ, ‘ಪ್ರೈಮ್’ ಸ್ಥಳಗಳಿಗೆ ಹೆಚ್ಚು ಪಾವತಿಸುವುದನ್ನು ತಪ್ಪಿಸಿ. ಬದಲಿಗೆ ಉತ್ತಮ ಜೀವನಶೈಲಿಗಾಗಿ ಆ ಹಣವನ್ನು ಬಳಸಿ ಎಂದು ಪ್ರೋ ಟಿಪ್ ನೀಡಿದ್ದಾರೆ.

ಈ ಪೋಸ್ಟ್ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಬೆಂಗಳೂರನ್ನು ದೂರುವುದು ಸರಿಯಲ್ಲ. ಇಲ್ಲಿನ ಎಲ್ಲಾ ಸ್ಥಳಗಳು ದುಬಾರಿಯಲ್ಲ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಸ್ಥಳಾಂತರಗೊಂಡ ಬಳಿಕ ದೂರುವುದು ಸರಿಯಲ್ಲ, ಹೊಂದಿಕೊಂಡು ಹೋಗಬೇಕು ಅಷ್ಟೇ ಎಂದಿದ್ದಾರೆ.

ಇದನ್ನೂ ಓದಿ: ಹೆತ್ತವರಿಗೆ ತಾನು ಕೆಲಸ ಮಾಡುವ ಬೆಂಗಳೂರಿನ ಮೈಕ್ರೋಸಾಫ್ಟ್ ಆಫೀಸ್ ತೋರಿಸಿದ ಉದ್ಯೋಗಿ

ಇನ್ನೊಬ್ಬರು, ಸೌಕರ್ಯಗಳು ಮತ್ತು ಸ್ಥಳವನ್ನು ಪರಿಶೀಲಿಸಿದ ನಂತರ ನೀವು ಇಲ್ಲಿಗೆ ಬಂದಿದ್ದೀರಾ ಅಥವಾ ಇಲ್ಲವೇ? ಬುದ್ಧಿವಂತಿಕೆಯಿಂದ ವಲಯವನ್ನು ಆರಿಸಿ… ಪ್ರತಿಯೊಂದು ಪ್ರದೇಶದಂತೆಯೇ, ಹೆಚ್ ಎಸ್ ಆರ್ ನ ಪ್ರತಿಯೊಂದು ಭಾಗವು ಐಷಾರಾಮಿಯಾಗಿಲ್ಲ. ಹೆಚ್ಚು ಬ್ರೌಸ್ ಮಾಡಿ ಮತ್ತು ಸುತ್ತಾಡಿ. ಹೆಚ್ ಎಸ್ ಆರ್ ನ ಉತ್ತಮ ವಲಯಗಳು ಎಲ್ಲವನ್ನೂ ಹೊಂದಿವೆ. ನೀವು ನಿಮ್ಮಷ್ಟಕ್ಕೆ ನೋಡಬೇಕು ಮತ್ತು ದಲ್ಲಾಳಿಗಳನ್ನು ಅವಲಂಬಿಸಬಾರದು ಎಂದು ಸಲಹೆ ನೀಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:47 am, Mon, 15 June 26

Source link

‘ಎನ್‌ಸಿಪಿಐ’ ಜೊತೆ 20 ಟಿಎಂಸಿ ಬಂಡಾಯ ಸಂಸದರ ವಿಲೀನ, ಸಂಸತ್ತಿನಲ್ಲಿ ಹೊಸ ಬಣದ ಉದಯ – Kannada News | TMC Rebel MPs Merge with NCPI: New Parliament Faction Boosts NDA Support Amid Anti Defection Debate

ಕೋಲ್ಕತ್ತಾ, ಜೂನ್ 15: ಭಾರತೀಯ ರಾಜಕೀಯ ಇತಿಹಾಸದಲ್ಲೇ ಅತ್ಯಂತ ರೋಮಾಂಚನಕಾರಿ ಮತ್ತು ನಾಟಕೀಯ ರಾಜಕೀಯ ಬೆಳವಣಿಗೆಯೊಂದಕ್ಕೆ ದೇಶದ ಸಂಸತ್ತು ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗಿನ ಭಿನ್ನಮತವು ಹೊಸ ಮೈಲಿಗಲ್ಲು ತಲುಪಿದ್ದು, ಬರೋಬ್ಬರಿ 20 ಬಂಡಾಯ ಸಂಸದರು ಒಟ್ಟಾಗಿ ಬಂದು, ನೋಂದಾಯಿತ ರಾಜಕೀಯ ಪಕ್ಷವಾದ ‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ ಜೊತೆ ತಾವೂ ಅಧಿಕೃತವಾಗಿ ವಿಲೀನಗೊಂಡಿರುವುದಾಗಿ ಘೋಷಿಸಿದ್ದಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಎರಡೂ ಸ್ಥಾನಗಳಲ್ಲಿ ಠೇವಣಿ ಕಳೆದುಕೊಂಡಿತ್ತು. ಎನ್​ಸಿಪಿಐ ಇತ್ತೀಚಿನ ವರ್ಷಗಳಲ್ಲಿ ಅಸ್ಸಾಂ ಮತ್ತು ತ್ರಿಪುರಾದಲ್ಲಿ ಸಕ್ರಿಯವಾಗಿದೆ.

ಬಂಡಾಯ ಸಂಸದರ ತಂತ್ರ: ತೃಣಮೂಲ ಕಾಂಗ್ರೆಸ್‌ನ (TMC) 20 ಬಂಡಾಯ ಸಂಸದರು ‘ಎನ್‌ಸಿಪಿಐ’ ಪಕ್ಷದ ಜೊತೆ ವಿಲೀನವಾಗಿರುವುದು ತಾವೇ “ನಿಜವಾದ ಟಿಎಂಸಿ” ಎಂದು ಸಾಬೀತುಪಡಿಸಲು ಸಮಯ ಕೇಳುವ ಒಂದು ಕಾನೂನು ತಂತ್ರವಾಗಿದೆ. ಹೀಗೆ ಮಾಡುವುದರಿಂದ ಅವರು ಸಂಸದ ಸ್ಥಾನದಿಂದ ಅನರ್ಹಗೊಳ್ಳುವುದನ್ನು ಸದ್ಯಕ್ಕೆ ತಪ್ಪಿಸಿಕೊಳ್ಳಬಹುದು.

ಮ್ಮ ಸಂವಿಧಾನದ ಕಾನೂನಿನ ಪ್ರಕಾರ, ಒಂದು ಪಕ್ಷದ ಒಟ್ಟು ಸಂಸದರ ಪೈಕಿ ಮೂರನೇ ಎರಡರಷ್ಟು ಸದಸ್ಯರು ಒಟ್ಟಾಗಿ ಮತ್ತೊಂದು ರಾಜಕೀಯ ಪಕ್ಷದೊಂದಿಗೆ ವಿಲೀನಗೊಂಡರೆ, ಅವರ ಮೇಲೆ ಪಕ್ಷಾಂತರ ವಿರೋಧಿ ಕಾನೂನು ಅನ್ವಯಿಸುವುದಿಲ್ಲ. ನಮ್ಮ ಬಳಿ ಮೂರನೇ ಎರಡರಷ್ಟು ಬಹುಮತ ಇರುವುದರಿಂದ ಜುಲೈನಲ್ಲಿ ಸಂಸತ್ತು ಆರಂಭವಾದಾಗ ‘ತೃಣಮೂಲ ಕಾಂಗ್ರೆಸ್’ ಹೆಸರನ್ನು ನಮಗೇ ನೀಡುವಂತೆ ಸ್ಪೀಕರ್ ಬಳಿ ಬೇಡಿಕೆ ಇಡುತ್ತೇವೆ. ಆಮೇಲೆ ನ್ಯಾಯಾಲಯವೇ ನಿಜವಾದ ಟಿಎಂಸಿ ಯಾವುದು ಎಂದು ನಿರ್ಧರಿಸುತ್ತದೆ.

ಟಿಎಂಸಿ ಮುಖ್ಯಸ್ಥರು ಸುಪ್ರೀಂ ಕೋರ್ಟ್‌ನ ಹಳೆಯ ತೀರ್ಪನ್ನು ಉಲ್ಲೇಖಿಸಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಅವರ ಪ್ರಕಾರ, ಕೇವಲ ಸಂಸತ್ತಿನಲ್ಲಿರುವ ಸಂಸದರು ವಿಲೀನಗೊಂಡರೆ ಸಾಲದು, ಮೂಲ ರಾಜಕೀಯ ಪಕ್ಷವೇ ಸಂಪೂರ್ಣವಾಗಿ ವಿಲೀನಗೊಳ್ಳಬೇಕು. ಹಾಗಾಗದಿದ್ದರೆ ಈ ಬಂಡಾಯಗಾರರ ಸಂಸದ ಸ್ಥಾನ ರದ್ದಾಗುತ್ತದೆ.

ಮತ್ತಷ್ಟು ಓದಿ: ಕಾಂಗ್ರೆಸ್ ಜೊತೆ ವಿಲೀನವಾಗುತ್ತಾ ಟಿಎಂಸಿ? ಮಮತಾ ಬ್ಯಾನರ್ಜಿಗೆ ದೊಡ್ಡ ಹುದ್ದೆಯ ಆಫರ್

ಸಂಸತ್ತಿನಲ್ಲಿ ಮೂರನೇ ಎರಡರಷ್ಟು ಬಹುಮತ: ಪಕ್ಷಾಂತರ ವಿರೋಧಿ ಕಾನೂನಿಗೆ ತಡೆ
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿದ ಬಂಡಾಯ ಸಂಸದರ ನಿಯೋಗವು, ಸದನದಲ್ಲಿ ತಮಗೆ ಪ್ರತ್ಯೇಕ ಬಣವಾಗಿ ಆಸನ ವ್ಯವಸ್ಥೆ ಕಲ್ಪಿಸಿಕೊಡುವಂತೆ ಅಧಿಕೃತ ಪತ್ರ ಸಲ್ಲಿಸಿದೆ. ಬಂಡಾಯ ಸಂಸದರ ಪ್ರಮುಖ ನಾಯಕಿ ಕಾಕೋಲಿ ಘೋಷ್ ದಸ್ತಿದಾರ್ ಮಾತನಾಡಿ, ಲೋಕಸಭೆಯಲ್ಲಿರುವ ಒಟ್ಟು ಟಿಎಂಸಿ ಸಂಸದರ ಪೈಕಿ ಮೂರನೇ ಎರಡರಷ್ಟು ಸದಸ್ಯರು ಒಟ್ಟಾಗಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದಿದ್ದಾರೆ. ಈ ಪಕ್ಷದಲ್ಲಿ ಒಂದೇ ಒಂದು ಸಂಸದರಿಲ್ಲ.

ನಾವು ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾದೊಂದಿಗೆ ವಿಲೀನಗೊಂಡಿದ್ದು, ಕೇಂದ್ರದ ಎನ್‌ಡಿಎ (NDA) ಸರ್ಕಾರಕ್ಕೆ ನಮ್ಮ ಬೆಂಬಲವನ್ನು ಘೋಷಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಮೂರನೇ ಎರಡರಷ್ಟು ಸಂಸದರು ಒಟ್ಟಾಗಿ ವಿಲೀನಗೊಂಡಿರುವುದರಿಂದ ಇವರ ವಿರುದ್ಧ ಯಾವುದೇ ಪಕ್ಷಾಂತರ ವಿರೋಧಿ ಕಾನೂನು ಅನ್ವಯಿಸುವುದಿಲ್ಲ ಎಂಬುದು ಈ ಬಣದ ವಿಶ್ವಾಸವಾಗಿದೆ.

ಪ್ರಾದೇಶಿಕ ಮಟ್ಟದಿಂದ ರಾಷ್ಟ್ರೀಯ ಸ್ಪಾಟ್‌ಲೈಟ್‌ಗೆ ಬಂದ ‘ಎನ್‌ಸಿಪಿಐ’
2023 ರ ತ್ರಿಪುರಾ ವಿಧಾನಸಭಾ ಚುನಾವಣೆಗೆ ಮುನ್ನ ಸಾಮಾಜಿಕ ಕಾರ್ಯಕರ್ತರಾದ ಶಿಯುಲಿ ಕುಂಡು ಅವರ ನೇತೃತ್ವದಲ್ಲಿ ಸ್ಥಾಪನೆಯಾದ ಎನ್‌ಸಿಪಿಐ (NCPI), ಭಾರತೀಯ ಚುನಾವಣಾ ಆಯೋಗದಲ್ಲಿ ನೋಂದಾಯಿತ (ಮಾನ್ಯತೆ ಪಡೆಯದ) ಪಕ್ಷವಾಗಿ ದಾಖಲಾಗಿದೆ.

2023 ರಲ್ಲಿ ಈ ಪಕ್ಷದಿಂದ ಸ್ಪರ್ಧಿಸಿದ್ದ ಸಾಮಾನ್ಯ ದಿನಗೂಲಿ ಕಾರ್ಮಿಕ ಹಾಗೂ ಸಮಾಜ ಸೇವಕ ಬರ್ಜೇಡಾ ತ್ರಿಪುರಾ (62) ಅವರಂತಹ ನಾಯಕರಿಗೆ ಜಾಗತಿಕ ಮನ್ನಣೆ ತಂದುಕೊಟ್ಟಿದೆ. ತಾವು ಸ್ಪರ್ಧಿಸಿದ್ದ ಪಕ್ಷಕ್ಕೆ ದೇಶದ 20 ಪ್ರಭಾವಿ ಸಂಸದರು ಸೇರ್ಪಡೆಯಾಗಿರುವ ವಿಷಯ ತಿಳಿದು ಅವರು ಅಪಾರ ಆಶ್ಚರ್ಯ ಮತ್ತು ಸಂತಸ ವ್ಯಕ್ತಪಡಿಸಿದ್ದಾರೆ. 2023 ರ ಚುನಾವಣೆಯಲ್ಲಿ ಕೇವಲ 822 ಒಟ್ಟು ಮತಗಳನ್ನು ಗಳಿಸಿದ್ದ ಈ ಮುಗ್ಧ ಪಕ್ಷ, ಇಂದು ಭಾರತದ ಸಂಸತ್ತನ್ನು ನಿಯಂತ್ರಿಸುವ ಶಕ್ತಿಯಾಗಿ ಹೊರಹೊಮ್ಮಿರುವುದು ಪ್ರಜಾಪ್ರಭುತ್ವದ ಸುಂದರ ವಿಸ್ಮಯವಾಗಿದೆ.

ಬಂಡಾಯ ಟಿಎಂಸಿ ಸಂಸದರಾದ ಶತಾಬ್ದಿ ರಾಯ್ ಮತ್ತು ಸುದೀಪ್ ಬಂಡೋಪಾಧ್ಯಾಯ ಅವರ ಪ್ರಕಾರ, ಈ ವಿಲೀನವು ಕೇಂದ್ರದಲ್ಲಿ ಆಡಳಿತಾರೂಢ ಸರ್ಕಾರಕ್ಕೆ ಮತ್ತಷ್ಟು ಸ್ಥಿರತೆಯನ್ನು ಒದಗಿಸಲಿದೆ. ಸದ್ಯಕ್ಕೆ ಚುನಾವಣಾ ಚಿಹ್ನೆಯ ಹಕ್ಕನ್ನು ಸ್ಪೀಕರ್ ಅವರ ವಿವೇಚನೆಗೆ ಬಿಡಲಾಗಿದ್ದು, ಮುಂಬರುವ ದಿನಗಳಲ್ಲಿ ಸಂಸತ್ತಿನ ಒಳಗೆ ಎನ್‌ಸಿಪಿಐ ಬಣವು ಪ್ರಮುಖ ನೀತಿ ನಿರೂಪಣೆಗಳಲ್ಲಿ ಮಹತ್ವದ ರಾಜಕೀಯ ಪಾತ್ರ ವಹಿಸಲಿದೆ. ಇದು ಭಾರತೀಯ ಪ್ರಜಾಪ್ರಭುತ್ವದಲ್ಲಿ ಪ್ರಾದೇಶಿಕ ಧ್ವನಿಗಳಿಗೆ ಸಿಕ್ಕ ಹೊಸ ವೇದಿಕೆಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

‘ಸಲ್ಮಾನ್​ಗೆ ಹೆದರಿ ಪಾದದ ಧೂಳನ್ನು ನೆಕ್ಕಲು ಹೊರಟಿದ್ದಾರೆ’; ಕಾಲಾ ಹಿರಣ್ ನಿರ್ಮಾಪಕರ ಆರೋಪ – Kannada News | Kaala Hiran Film Controversy: Govind Namdev vs. Producer on Salman Khan Blackbuck Case

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಕೃಷ್ಣಮೃಗ ಬೇಟೆ ಪ್ರಕರಣವನ್ನು ಆಧರಿಸಿ ಸಿದ್ಧವಾಗುತ್ತಿರುವ ‘ಕಾಲಾ ಹಿರಣ್’ ಚಿತ್ರದ ಸುತ್ತಲಿನ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇತ್ತೀಚೆಗೆ ಬಿಡುಗಡೆಯಾದ ಈ ಚಿತ್ರದ ಟೀಸರ್ ಭಾರಿ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಚಿತ್ರದಲ್ಲಿ ವಕೀಲರ ಪಾತ್ರ ಮಾಡಿರುವ ಹಿರಿಯ ನಟ ಗೋವಿಂದ್ ನಾಮ್‌ದೇವ್ ನಿರ್ಮಾಪಕರ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಆದರೆ, ಈಗ ನಿರ್ಮಾಪಕ ಅಮಿತ್ ಜಾನಿ ಅವರು ನಟನ ಆರೋಪಗಳಿಗೆ ಖಡಕ್ ತಿರುಗೇಟು ನೀಡಿದ್ದು, ಕಾನೂನು ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ಗೋವಿಂದ್ ನಾಮ್‌ದೇವ್ ಮಾಡಿದ್ದ ಆರೋಪವೇನು?

ಸಲ್ಮಾನ್ ಖಾನ್ ಅವರೊಂದಿಗೆ ಹಲವು ಸಿನಿಮಾಗಳಲ್ಲಿ ಕೆಲಸ ಮಾಡಿರುವ ಗೋವಿಂದ್ ನಾಮ್‌ದೇವ್, “ಈ ಚಿತ್ರವು ಸಲ್ಮಾನ್ ಅವರ ಕೃಷ್ಣಮೃಗ ಬೇಟೆ ಪ್ರಕರಣವನ್ನು ಆಧರಿಸಿದೆ ಎಂಬ ಸತ್ಯವನ್ನು ನಿರ್ಮಾಪಕರು ನನ್ನಿಂದ ಮರೆಮಾಚಿದ್ದರು. ಸುಳ್ಳು ಹೇಳಿ ನನ್ನಿಂದ ಶೂಟಿಂಗ್ ಮಾಡಿಸಿಕೊಂಡಿದ್ದಾರೆ. ಒಂದು ವೇಳೆ ಈ ವಿಷಯ ನನಗೆ ಮೊದಲೇ ತಿಳಿದಿದ್ದರೆ, ನಾನು ಖಂಡಿತ ಈ ಸಿನಿಮಾದಲ್ಲಿ ನಟಿಸುತ್ತಿರಲಿಲ್ಲ. ಸಲ್ಮಾನ್ ನನ್ನ ಆತ್ಮೀಯ ಸ್ನೇಹಿತ, ಅವರ ವಿರುದ್ಧ ಹೋಗುವ ಯಾವುದೇ ಕೆಲಸವನ್ನು ನಾನು ಮಾಡುವುದಿಲ್ಲ’ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದರು.

ನಟನ ಈ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ನಿರ್ಮಾಪಕ ಅಮಿತ್ ಜಾನಿ, ’ಇದೆಲ್ಲ ಶುದ್ಧ ಸುಳ್ಳು. ಅವರು ಎಷ್ಟು ದುರ್ಬಲರಾಗಿದ್ದಾರೆ ಎಂದರೆ, ಈಗ ಸೂಪರ್‌ಸ್ಟಾರ್ ಸಲ್ಮಾನ್ ಖಾನ್‌ಗೆ ಹೆದರಿ ಅವರ ಪಾದದ ಧೂಳನ್ನು ನೆಕ್ಕಲು ಹೊರಟಿದ್ದಾರೆ. ಚಿತ್ರೀಕರಣಕ್ಕೂ ಮುನ್ನ ಇಡೀ ಸ್ಕ್ರಿಪ್ಟ್ ಅನ್ನು ಅವರಿಗೆ ಓದಿಸಲಾಗಿತ್ತು. 1998 ರಿಂದ 2018 ರವರೆಗೆ ಜೋಧ್‌ಪುರ ನ್ಯಾಯಾಲಯದಲ್ಲಿ ನಡೆದ 20 ವರ್ಷಗಳ ಹಳೆಯ ಕೃಷ್ಣಮೃಗ ಬೇಟೆ ಪ್ರಕರಣದ ಸನ್ನಿವೇಶಗಳನ್ನೇ ಆ ವ್ಯಕ್ತಿ ಸತತ ಮೂರು-ನಾಲ್ಕು ದಿನಗಳ ಕಾಲ ಶೂಟಿಂಗ್ ಮಾಡಿದ್ದಾರೆ. ಜೀಪಿನ ಮೇಲಿದ್ದ ರಕ್ತದ ಕಲೆ, ಟೈರ್‌ನಲ್ಲಿ ಸಿಲುಕಿಕೊಂಡಿದ್ದ ಕೃಷ್ಣಮೃಗದ ಕೂದಲು.. ಇವೆಲ್ಲ ಕಣ್ಣಿಗೆ ಕಾಣುತ್ತಿದ್ದರೂ ತಮಗೆ ಏನೂ ಗೊತ್ತಿರಲಿಲ್ಲ ಎನ್ನುತ್ತಿರುವುದು ನಗು ತರಿಸುತ್ತದೆ’ ಎಂದು ಟೀಕಿಸಿದ್ದಾರೆ.

ಬಂದೂಕು ತೋರಿಸಿ ಶೂಟಿಂಗ್ ಮಾಡಿಸಿಲ್ಲ!

ಚಿತ್ರದಲ್ಲಿ ಅಯಾನ್ ಖಾನ್ ಎಂಬ ಪಾತ್ರ ಮಾಡಿರುವ ಗೋವಿಂದ್ ನಾಮ್‌ದೇವ್, ಸೆಟ್‌ನಲ್ಲಿ ತಾವೇ ಸ್ವತಃ ಈ ಪ್ರಕರಣಕ್ಕೆ ಸಂಬಂಧಿಸಿದ ಹಲವು ವಿಷಯಗಳನ್ನು ಕೂಲಂಕಷವಾಗಿ ವಿಚಾರಿಸಿದ್ದರು ಎಂದು ನಿರ್ಮಾಪಕರು ಹೇಳಿದ್ದಾರೆ. “ಅವರು ಚಿತ್ರದ ಪ್ರಮುಖ ಸಂಭಾಷಣೆಗಳನ್ನು ಪದೇ ಪದೇ ಹೇಳಿ ಅಭ್ಯಾಸ ಮಾಡಿದ್ದರು. ಅಷ್ಟೊಂದು ದೊಡ್ಡ ನಟರು ಸ್ಕ್ರಿಪ್ಟ್ ಇಲ್ಲದೆ ಕೆಲಸ ಮಾಡಲು ಸಾಧ್ಯವೇ ಇಲ್ಲ. ನಾವೇನು ಅವರ ತಲೆಗೆ ಬಂದೂಕು ಇಟ್ಟು, ಬಲವಂತವಾಗಿ ಶೂಟಿಂಗ್ ಮಾಡಿಸಿದ್ದೇವಾ? ಚಿತ್ರದ ಹೆಸರೇ ‘ಕಾಲಾ ಹಿರಣ್’ (ಕೃಷ್ಣಮೃಗ) ಎಂದಿರುವಾಗ ಇಲ್ಲಿ ಮೋಸ ಮಾಡುವ ಪ್ರಶ್ನೆಯೇ ಬರುವುದಿಲ್ಲ. ಗೋವಿಂದ್ ನಾಮ್‌ದೇವ್ ಅವರು ಸಿನಿಮಾ ಮತ್ತು ನಮ್ಮ ಪ್ರೊಡಕ್ಷನ್ ಹೌಸ್ ವಿರುದ್ಧ ಸುಳ್ಳು ಆರೋಪ ಮಾಡುವ ಮೂಲಕ ಒಪ್ಪಂದವನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ ನಾವು ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿದ್ದೇವೆ’ ಎಂದು ಅಮಿತ್ ಜಾನಿ ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link