ನಮ್ಮ ಕಾಲದಲ್ಲೂ ಹಿಂದಿ ಕಡ್ಡಾಯವಾಗಿರಲಿಲ್ಲ ಎಂದ ಸಿಎಂ ಸಿದ್ದರಾಮಯ್ಯ
ಮೈಸೂರು, ಮಾರ್ಚ್ 28: ರಾಜ್ಯ ಸರ್ಕಾರ SSLC ಪರೀಕ್ಷೆಯಲ್ಲಿ ಹಿಂದಿ ತೃತೀಯ ಭಾಷೆಯನ್ನು ಕಡ್ಡಾಯವಲ್ಲ ಎಂದು ಘೋಷಿಸಿದೆ. ಸದ್ಯ ಈ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಹಿಂದಿ ಕಲಿಯಬಾರದು ಎಂದು ಹೇಳುತ್ತಿಲ್ಲ. ಕಡ್ಡಾಯ ಬೇಡ ಎಂದು ಹೇಳುತ್ತಿದ್ದೇನೆ. ಸುಮ್ಮನೆ ಹಿಂದಿ ಹೇರಿಕೆಯಾಗಬಾರದು ಎಂದಿದ್ದಾರೆ. ವಿರೋಧ ವಿಚಾರವಾಗಿ ಮಾತನಾಡಿದ ಅವರು, ಸರ್ಕಾರದ ಈ ನಿರ್ಧಾರವನ್ನ ಎಲ್ಲರೂ ಒಪ್ಪಿಕೊಳ್ಳಬೇಕು. ಯಾರೋ ಕೆಲವರು ವಿರೋಧಿಸಿದರೆ ಹಿಂದೆ ಸರಿಯಲ್ಲ. ಎಲ್ಲ ರೀತಿ ಪರಾಮರ್ಶಿಸಿ ಸರ್ಕಾರ ನಿರ್ಧಾರ ಮಾಡಿದೆ. ಎಲ್ಲರೂ…