All posts by nagaraj11081993

ಈ ಗಂಡನ ಜತೆ ಸಂಸಾರ ಮಾಡಿದ್ದು ಸಾಕೆಂದು, ಹೊಸ ಗೆಳೆಯನ ಜತೆ ಸೇರಿ ಪತಿ ಹತ್ಯೆಗೆ ಸಂಚು, ಮಹಿಳೆಗೆ 19 ವರ್ಷ ಜೈಲು – Kannada News | UK Court Hands 19 Year Sentence to Woman for Plotting Husband’s Killing

ಲಂಡನ್, ಡಿಸೆಂಬರ್ 20: ಈ ಗಂಡನ ಜತೆ ಸಂಸಾರ ಮಾಡಿದ್ದು ಸಾಕೆಂದು ಹೊಸ ಗೆಳೆಯನ ಜತೆ ಸೇರಿ ಪತಿ ಹತ್ಯೆ(Murder)ಗೆ ಸಂಚು ರೂಪಿಸಿದ್ದ ಮಹಿಳೆಗೆ 19 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಗಾರ್ಡಿಯನ್ ಪ್ರಕಾರ, 46 ವರ್ಷದ ಮಿಚೆಲ್ ಮಿಲ್ಸ್​ ಮತ್ತು ಆಕೆಯ ಪ್ರೇಮಿ ಗೆರೈಂಟ್ ಬೆರ್ರಿ ಸೇರಿ ಕ್ರಿಸ್ಟೋಫರ್ ಮಿಲ್ಸ್ ಅವರ ಕೊಲೆಗೆ ಸಂಚು ರೂಪಿಸಿದ್ದರು. ಈ ಘಟನೆ ಯುಕೆಯಲ್ಲಿ ನಡೆದಿದೆ.

ಕಳೆದ ವರ್ಷ ಸೆಪ್ಟೆಂಬರ್ 20ರಂದು ದಾಳಿಯನ್ನು ನಡೆಸಲು ಸಹಾಯ ಮಾಡಲು ಬೆರ್ರಿ ಸ್ಟೀವನ್ ಥಾಮಸ್ ಎಂಬುವವನನ್ನು ಕೂಡ ತನ್ನೊಂದಿಗೆ ಸೇರಿಸಿಕೊಂಡಿದ್ದ. ಅಕ್ಟೋಬರ್‌ನಲ್ಲಿ ಸ್ವಾನ್ಸೀ ಕ್ರೌನ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯ ನಂತರ ಅವರು ಕೊಲೆಗೆ ಸಂಚು ರೂಪಿಸಿದ್ದಕ್ಕಾಗಿ ತಪ್ಪಿತಸ್ಥರೆಂದು ತೀರ್ಪು ನೀಡಲಾಗಿದೆ.

ಈ ಜೋಡಿ 2024ರಲ್ಲಿ ಪ್ರೀತಿಯಲ್ಲಿ ಬಿದ್ದಿತ್ತು, ತಮ್ಮ ಹೊಸ ಜೀವನ ಆರಂಭಿಸುವ ಹೆಬ್ಬಯಕೆಯಿಂದ ಗಂಡನನ್ನು ಕೊಲೆ ಮಾಡಲು ನಿರ್ಧರಿದ್ದಳು. ಮೂರು ತಿಂಗಳುಗಳ ಕಾಲ ಕ್ರಿಸ್ಟೋಫರ್​ ಅನ್ನು ಕೊಲ್ಲುವ ವಿವಿಧ ಮಾರ್ಗಗಳ ಬಗ್ಗೆ ಚರ್ಚಿಸಿ ಪರಸ್ಪರ ಸಂದೇಶಗಳನ್ನು ಕಳುಹಿಸಿಕೊಂಡಿದ್ದರು. ಗ್ರೇವಿಗೆ ಆಂಟಿಫ್ರೀಜ್‌ನಿಂದ ವಿಷ ಹಾಕುವುದು ಅಥವಾ ದಿಂಬಿನಿಂದ ಅವನನ್ನು ಉಸಿರುಗಟ್ಟಿಸಿ ಕೊಲ್ಲುವುದು ಕೂಡಾ ಅದರಲ್ಲಿ ಸೇರಿತ್ತು.

ಮತ್ತಷ್ಟು ಓದಿ: ಬಾಡಿಗೆಗಿದ್ದ ದಂಪತಿಯಿಂದ ಮನೆ ಮಾಲೀಕರ ಹತ್ಯೆ, ಸೂಟ್​ಕೇಸ್​ನಲ್ಲಿ ತುಂಡು ತುಂಡಾದ ದೇಹ ಪತ್ತೆ

ದಾಳಿ ನಡೆದಿದ್ದು ಯಾವಾಗ?
ಸೆಪ್ಟೆಂಬರ್ 20, 2024 ರಂದು, ಬೆರ್ರಿ ಮತ್ತು ಅವನ ಸಹಚರ ಸ್ಟೀವನ್ ಥಾಮಸ್, ಕಾರ್ಮಾರ್ಥೆನ್‌ಶೈರ್‌ನ ಸೆನಾರ್ಥ್‌ನಲ್ಲಿರುವ ಮನೆಗೆ ಮುಖವಾಡ ಧರಿಸಿ ದಾಳಿ ನಡೆಸಿದ್ದ. ಕ್ರಿಸ್ಟೋಫರ್‌ನನ್ನು ಕೊಂದು ಅವನ ಸಾವು ಆತ್ಮಹತ್ಯೆ ಎಂದು ತೋರಿಸುವುದು ಅವರ ಉದ್ದೇಶವಾಗಿತ್ತು. ದಾಳಿಕೋರರು ಬಂದೂಕುಗಳು, ಗ್ಯಾಸ್ ಮಾಸ್ಕ್‌ಗಳನ್ನು ಧರಿಸಿದ್ದರು ಮತ್ತು ಕೇಬಲ್ ಟೈಗಳನ್ನು ಹೊತ್ತಿದ್ದರು.

ನಿವೃತ್ತ ಯೋಧ ಕ್ರಿಸ್ಟೋಫರ್, ಮುಸುಕುಧಾರಿ ದಾಳಿಕೋರರ ವಿರುದ್ಧ ಹೋರಾಡಿದ್ದರು, ಮುಖಕ್ಕೆ ಹೊಡೆತ ಬಿದ್ದಿದ್ದರೂ ಅವರು ಬಂದೂಕುಗಳನ್ನು ಹಿಮ್ಮೆಟ್ಟಿಸಿದ್ದರು. ದಾಳಿಯ ನಂತರ, ಮಿಚೆಲ್ ಮಿಲ್ಸ್ 999 ಗೆ ಕರೆ ಮಾಡಿ, ತನ್ನ ಪತಿಯ ತಲೆಗೆ ಗಾಯವಾಗಿದೆ ಎಂದು ಮಾಹಿತಿ ನೀಡಿದ್ದರು.

ಶಿಕ್ಷೆ 
ಕೊಲೆಗೆ ಸಂಚು ರೂಪಿಸಿದ್ದಕ್ಕಾಗಿ ಮಿಚೆಲ್ ಮಿಲ್ಸ್‌ಗೆ 19 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ಜೊತೆಗೆ ನ್ಯಾಯದ ಹಾದಿಯನ್ನು ತಿರುಚಿದ್ದಕ್ಕಾಗಿ 18 ತಿಂಗಳ ಏಕಕಾಲಿಕ ಶಿಕ್ಷೆಯನ್ನು ವಿಧಿಸಲಾಯಿತು. ಕೊಲೆಗೆ ಸಂಚು ರೂಪಿಸಿದ್ದಕ್ಕಾಗಿ ಗೆರೈಂಟ್ ಬೆರ್ರಿ ಅವರಿಗೆ 19 ವರ್ಷಗಳ ಜೈಲು ಶಿಕ್ಷೆ ಮತ್ತು ಬಂದೂಕನ್ನು ಹೊಂದಿದ್ದಕ್ಕಾಗಿ 18 ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಲಾಯಿತು. ಕೊಲೆಗೆ ಸಂಚು ರೂಪಿಸಿದ್ದಕ್ಕಾಗಿ ಸ್ಟೀವನ್ ಥಾಮಸ್ ಅವರನ್ನು ಖುಲಾಸೆಗೊಳಿಸಲಾಯಿತು ಆದರೆ ಬಂದೂಕು ಅಪರಾಧಕ್ಕಾಗಿ 12 ತಿಂಗಳ ಜೈಲು ಶಿಕ್ಷೆ ವಿಧಿಸಲಾಯಿತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Weekly Love Horoscope: ಡಿಸೆಂಬರ್​​ನ 4ನೇ ವಾರ ಈ ರಾಶಿಯ ಪ್ರೇಮ ಜೀವನಕ್ಕೆ ಮಹತ್ವದ ತಿರುವು ನೀಡುವ ವಾರ – Kannada News | December 4th Week Love Horoscope: Shukra’s Impact on Your Zodiac and Relationships

ಡಿಸೆಂಬರ್ ತಿಂಗಳ ನಾಲ್ಕನೇ ವಾರ ಪ್ರೀತಿ, ಪ್ರೇಮ, ವಿವಾಹ, ಆಕರ್ಷಣೆ, ಸುಖ, ಭೋಗಗಳಿಗೆ ಮೂಲನಾದ ಶುಕ್ರನು ಕೆಲವನ್ನು ಕೊಟ್ಟು ಕಸಿಯುವುದೂ ಕಸಿದು ಪುನಃ ಕೊಡುವುದೂ ಇದೆ. ಕಸಿದಾಗ ಉತ್ತಮವಾದುದನ್ನು ಕೊಡುತ್ತಾನೆ ಎಂಬ ಸಕಾರಾತ್ಮಕ ಚಿಂತನೆ ನಿಮ್ಮಲ್ಲಿ ಬಂದಾಗ ಮನಸ್ಸು ಹಗುರವಾಗಲಿದೆ. ದುಃಖದಿಂದ ದೂರವುಳಿಯಲು ಸಾಧ್ಯ. ದೈತ್ಯರ ಗುರುವಾದ ಶುಕ್ರನು ಎಲ್ಲರಿಗೂ ಬೇಕಾದ ಸುಖವನ್ನು ಮಾತ್ರ ಕೊಡಲಿ.

ಮೇಷ ರಾಶಿ:

ನಾಲ್ಕನೇ ವಾರ ಮೊದಲ ರಾಶಿಯವರಿಗೆ ಶುಕ್ರನ ಸಂಚಾರದಿಂದ ನಿಮ್ಮ ಪ್ರೇಮ ಜೀವನದಲ್ಲಿ ಉತ್ಸಾಹ ಮತ್ತು ತೀವ್ರತೆ ಕಡಿಮೆಯಾಗಲಿದೆ. ಆಕರ್ಷಣೆಯಿಂದ ತಕ್ಷಣ ಹುಟ್ಟುವ ಸ್ವಭಾವದಿಂದ ಹೊಸ ಸಂಬಂಧಗಳು ಆರಂಭವಾಗುವ ಸಾಧ್ಯತೆ ಇದೆ. ಆದರೆ ಅತಿಯಾದ ಆತುರ ಮತ್ತು ಸ್ವಾರ್ಥದಿಂದ ಪ್ರೇಮದಲ್ಲಿ ಸಣ್ಣ ಕಲಹಗಳು ಉಂಟಾಗಬಹುದು. ಈ ವಾರ ಪ್ರಿಯ ವ್ಯಕ್ತಿಯ ಭಾವನೆಗಳನ್ನು ಗೌರವಿಸಿದರೆ ಸಂಬಂಧ ಗಾಢವಾಗುತ್ತದೆ. ವಿವಾಹದ ವಿಚಾರದಲ್ಲಿ ಚರ್ಚೆಗಳು ನಡೆಯಬಹುದು.

ವೃಷಭ ರಾಶಿ:

ಶುಕ್ರನ ಆಧಿಪತ್ಯದ ಈ ರಾಶಿಗೆ ಶುಕ್ರನ ಅನುಗ್ರಹದಿಂದ ಪ್ರೇಮದಲ್ಲಿ ಸ್ಥಿರತೆ ಮತ್ತು ನಂಬಿಕೆ ಹೆಚ್ಚಾಗುತ್ತದೆ. ಹೃದಯದಿಂದ ನೀಡಿದ ಪ್ರೀತಿ ಮತ್ತು ಮೃದುತ್ವ ತರುತ್ತದೆ. ಹಳೆಯ ಸಂಬಂಧಗಳು ಇನ್ನಷ್ಟು ಗಟ್ಟಿಯಾಗಿಸಿಕೊಳ್ಳಿ. ಪ್ರೇಮ ವಿವಾಹ ಅಥವಾ ದಾಂಪತ್ಯ ಸುಖಕ್ಕೆ ಉತ್ತಮ ಕಾಲ. ಪ್ರಿಯರೊಂದಿಗೆ ಕಾಲ ಕಳೆಯಲು ಇದು ಅನುಕೂಲವಾದ ವಾರ.

ಮಿಥುನ ರಾಶಿ:

ನಾಲ್ಕನೇ ವಾರ ಪ್ರೇಮದಲ್ಲಿ ಮಾತುಗಳೇ ಪ್ರಮುಖ ಪಾತ್ರ ವಹಿಸುತ್ತವೆ. ಶುಕ್ರನ ಸಂಚಾರದಿಂದ ನಿಮ್ಮ ಚತುರ ಮಾತುಗಳು ಆಕರ್ಷಣೆಯಾಗುತ್ತವೆ. ಆದರೆ ಅಜಾಗರೂಕ ಮಾತುಗಳು ದೂರವನ್ನೂ ಸೃಷ್ಟಿಸಬಹುದು. ಪ್ರೇಮ ಸಂಬಂಧದಲ್ಲಿ ಸ್ಪಷ್ಟತೆ ಅಗತ್ಯ. ಸಂದೇಶ ಅಥವಾ ಕರೆಗಳ ಮೂಲಕ ಹಳೆಯ ಪ್ರೀತಿ ಮತ್ತೆ ಜೀವ ಪಡೆಯುವ ಸೂಚನೆ.

ಕರ್ಕಾಟಕ ರಾಶಿ:

ಈ ರಾಶಿಯವರಿಗೆ ಡಿಸೆಂಬರ್ ನ ಈ ವಾರ ಭಾವನೆಗಳು ತುಂಬಾ ಆಳವಾಗಿ ಕೆಲಸ ಮಾಡಲಿದೆ. ಶುಕ್ರನ ಪ್ರಭಾವದಿಂದ ಮನಸ್ಸಿನೊಳಗೆ ಮರೆಮಾಚಿದ ಪ್ರೇಮ ಭಾವನೆಗಳು ಹೊರಬರುವ ಸಾಧ್ಯತೆ. ಹಳೆಯ ನೆನಪುಗಳು ಮತ್ತೆ ಕಾಡಬಹುದು. ನಿಮಗೆ ಪ್ರೇಮದಲ್ಲಿ ಭದ್ರತೆ ಬೇಕೆಂಬ ಆಸೆ ಹೆಚ್ಚಾಗುತ್ತದೆ. ಭಾವನಾತ್ಮಕ ಅವಲಂಬನೆ ಹೆಚ್ಚದಂತೆ ಎಚ್ಚರಿಕೆಯೂ ಅಗತ್ಯ.

ಸಿಂಹ ರಾಶಿ:

ಈ ವಾರ ಶುಕ್ರನ ಸಂಚಾರದಿಂದ ನಿಮ್ಮ ವ್ಯಕ್ತಿತ್ವದ ಆಕರ್ಷಣೆ ಹೆಚ್ಚಾಗುತ್ತದೆ. ಪ್ರೇಮದಲ್ಲಿ ಗಮನ ನಿಮ್ಮ‌ ಮೇಲೆ ಕೇಂದ್ರೀಕೃತವಾಗಬೇಕು ಎಂಬ ಬಯಕೆ ಹೆಚ್ಚಬಹುದು. ಪ್ರಿಯ ವ್ಯಕ್ತಿಯಿಂದ ಗೌರವ ನಿರೀಕ್ಷೆ ಅಧಿಕವಾಗುತ್ತದೆ. ಅಹಂಕಾರವನ್ನು ಕಡಿಮೆ ಮಾಡಿ ಪ್ರೀತಿಯನ್ನು ಹಂಚಿಕೊಂಡರೆ ಸಂಬಂಧ ಇನ್ನಷ್ಟು ಹೊಳಪು. ಪ್ರೇಮವನ್ನು ಸಾರ್ವಜನಿಕವಾಗಿ ಘೋಷಣೆ ಮಾಡಬೇಕಾಗಬಹುದು.

ಕನ್ಯಾ ರಾಶಿ:

ಈ ವಾರ ಪ್ರೇಮವನ್ನು ನೀವು ತರ್ಕದ ಕಣ್ಣಿನಿಂದ ನೋಡುವ ಪ್ರವೃತ್ತಿ ಹೆಚ್ಚಾಗುತ್ತದೆ. ಶುಕ್ರನ ಪ್ರಭಾವದಿಂದ ಹೃದಯ ಮತ್ತು ಬುದ್ಧಿಯ ನಡುವೆ ಸಂಘರ್ಷ ಉಂಟಾಗಬಹುದು. ಅತಿಯಾದ ವಿಮರ್ಶೆ ಪ್ರೀತಿಯ ಮಧುರತೆಯನ್ನು ಕಡಿಮೆ ಮಾಡಬಹುದು. ಸಣ್ಣ ತಪ್ಪುಗಳನ್ನು ಕ್ಷಮಿಸುವ ಮನೋಭಾವ ಬೆಳೆಸಿದರೆ ಸಂಬಂಧಕ್ಕೆ ಮಾರ್ಗ ಸುಗಮ.

ತುಲಾ ರಾಶಿ:

ಶುಕ್ರನ ಸ್ವಾಮಿತ್ವದ ರಾಶಿಯವರಿಗೆ ಅನುಕೂಲ ಸ್ಥಿತಿಯಲ್ಲಿ ಇರುವುದರಿಂದ ಪ್ರೇಮ ಜೀವನ ಅತ್ಯಂತ ಸುಂದರವಾಗಿ ಸಾಗಲು ಬೇಕಾದ ಅವಕಾಶಗಳು ಸಿಗಲಿದೆ. ಆಕರ್ಷಣೆ ಇಬ್ಬರಲ್ಲೂ ಸಮತೋಲನದಲ್ಲಿದ್ದು ಪರಸ್ಪರ ಗೌರವವನ್ನು ಕೊಟ್ಟರೆ ಮಧುರತೆ ಇಬ್ಬರಲ್ಲಿಯೂ ಹೆಚ್ಚಾಗುತ್ತದೆ. ಹೊಸ ಪ್ರೇಮ ಆರಂಭಕ್ಕೂ, ವಿವಾಹ ಸಂಬಂಧದ ಮಾತುಕತೆಗೆ ಅತ್ಯುತ್ತಮ ಕಾಲ. ಅತಿಪ್ರಿಯರೊಂದಿಗೆ ಸೌಂದರ್ಯ ಕ್ಷಣಗಳನ್ನು ಹಂಚಿಕೊಳ್ಳುವಿರಿ.

ವೃಶ್ಚಿಕ ರಾಶಿ:

ಈ ರಾಶಿಯವರಿಗೆ ಪ್ರೇಮದಲ್ಲಿ ಸ್ವಾಮ್ಯಭಾವ ಹೆಚ್ಚಾಗಬಹುದು. ಶುಕ್ರನ ಸಂಚಾರದಿಂದ ಆಂತರಿಕ ಅಸೂಯೆ ಮತ್ತು ಸಂಶಯಗಳು ಮೇಲಕ್ಕೆ ಬರಲಿದೆ. ಇದನ್ನು ನಿಯಂತ್ರಿಸಿದರೆ ಸಂಬಂಧ ಅತ್ಯಂತ ಆಳವಾಗಿ ರೂಪುಗೊಳ್ಳುತ್ತದೆ. ನಿಮ್ಮ ಮೇಲೆ ಗುಪ್ತ ಪ್ರೇಮ ಅಥವಾ ರಹಸ್ಯ ಸಂಬಂಧಗಳ ಸೂಚನೆಯೂ ಸಿಗಲಿದೆ.

ಧನು ರಾಶಿ:

ಇದು ಸ್ವಾತಂತ್ರ್ಯ ಮತ್ತು ಪ್ರೇಮ ಎರಡನ್ನೂ ಸಮತೋಲನದಲ್ಲಿ ಇರಿಸಿಕೊಳ್ಳಬೇಕಾದ ವಾರ. ಶುಕ್ರನು ನಿಮ್ಮ ರಾಶಿಯಲ್ಲಿಯೇ ಇರುವ ಕಾರಣ ದೂರದ ವ್ಯಕ್ತಿಯೊಂದಿಗೆ ಪ್ರೇಮ ಬೆಳೆಯಬಹುದು. ಪ್ರವಾಸ, ಅಧ್ಯಯನ ಅಥವಾ ಧಾರ್ಮಿಕ ಸ್ಥಳಗಳಲ್ಲಿ ಪರಿಚಯವಾಗುವ ಸಾಧ್ಯತೆ. ಪ್ರೇಮದಲ್ಲಿ ತಾತ್ವಿಕ ಚರ್ಚೆಗಳು ಹೆಚ್ಚಾಗಿರುವುದು.

ಮಕರ ರಾಶಿ:

ಈ ವಾರ ಒಪ್ಪಿತ ಪ್ರೇಮದಲ್ಲಿ ಜವಾಬ್ದಾರಿ ಮತ್ತು ಭವಿಷ್ಯದ ಯೋಜನೆಗಳು ಮುಖ್ಯವಾಗುತ್ತವೆ. ಶುಕ್ರನ ಸಂಚಾರದಿಂದ ಗಂಭೀರ ಸಂಬಂಧಗಳು ಸ್ಥಿರ ರೂಪ ಪಡೆಯುತ್ತವೆ. ಪ್ರೇಮ ವಿವಾಹದ ಬಗ್ಗೆ ಕುಟುಂಬದೊಂದಿಗೆ ಮಾತುಕತೆ ನಡೆಯಲಿದ್ದು ಭಾವನೆಗಳನ್ನು ವ್ಯಕ್ತಪಡಿಸಲು ಸ್ವಲ್ಪ ಹಿಂಜರಿಕೆ ಕಾಣಬಹುದು, ಆದರೆ ಅಂತರಂಗ ಗಟ್ಟಿಯಾಗಿರಲಿ.

ಕುಂಭ ರಾಶಿ:

ಪ್ರೇಮದಿಂದ ಸ್ನೇಹಕ್ಕೆ ಬದಲಾವಣೆ ಆಗುವ ಸಾಧ್ಯತೆ ಇರುವ ವಾರ. ಶುಕ್ರನು ವಿಭಿನ್ನ ಆಲೋಚನೆಗಳಿರುವ ವ್ಯಕ್ತಿಯತ್ತ ಆಕರ್ಷಣೆ ಮಾಡಿಸುವನು. ಸಾಮಾಜಿಕ ಜಾಲತಾಣ ಅಥವಾ ಸಮೂಹ ಚಟುವಟಿಕೆಗಳಿಂದ ಪ್ರೇಮ ಆರಂಭ. ಸಂಪ್ರದಾಯ ಬದ್ಧತೆಯಿಂದ ಭಿನ್ನವಾದ ಸಂಬಂಧಗಳಲ್ಲಿ ಭಿನ್ನಮತ ಪ್ರಕಟ.

ಮೀನ ರಾಶಿ:

ಈ ವಾರ ಶುಕ್ರನ ಉನ್ನತ ಪ್ರಭಾವದಿಂದ ಪ್ರೇಮ ಅತ್ಯಂತ ಮೃದು, ಕರುಣಾಮಯ ಅನುಭವವಾಗುತ್ತದೆ. ಈ ವಾರ ಆಕಸ್ಮಿಕವಾಗಿ ಆದ ಪರಿಚಯ ಕಾರಣಾಂತರಗಳಿಂದ ಮುಂದುವರಿಯುವುದು. ಆರಂಭದಲ್ಲಿ ಯಾವ ಭಾವನೆಯೂ ಇಲ್ಲದೇ ಇರುವ ನಿಮಗೆ ಅನಂತರ ಸಂದೇಹ ಆರಂಭವಾಗಲಿದೆ. ಸಹವರ್ತಿಗಳೂ ಅದಕ್ಕೆ ಸಹಕಾರವನ್ನು ನೀಡುವರು. ಗುರು ಹಿರಿಯರ ಸಮಕ್ಷದಲ್ಲಿ ವಿವಾಹಕ್ಕೂ ನಿಶ್ಚಯವಾಗಲಿದೆ.

– ಲೋಹಿತ ಹೆಬ್ಬಾರ್ – 8762924271 (what’s app only)

Source link

Video: ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ, ಮೂವರು ಸಾವು – Kannada News | Three Killed in Taiwan Knife Attack; Smoke Devices Thrown at Taipei Station

ತೈಪೆ, ಡಿಸೆಂಬರ್ 20: ತೈವಾನ್​ನಲ್ಲಿ ವ್ಯಕ್ತಿಯೊಬ್ಬ ತೈಪೆ ರೈಲು ನಿಲ್ದಾಣದ ಬಳಿ ಜನರ ಮೇಲೆ ಮನಬಂದಂತೆ ದಾಳಿ ನಡೆಸಿದ್ದಾನೆ. ಘಟನೆಯಲ್ಲಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಶಂಕಿತನು ಮೊದಲು ತೈಪೆಯ ಮುಖ್ಯ ರೈಲು ನಿಲ್ದಾಣದ ಬಳಿ ಸ್ಮೋಕ್ ಬಾಂಬ್ ಎಸೆದಿದ್ದ.ಇದು ಪ್ರಯಾಣಿಕರಲ್ಲಿ ಭಯವನ್ನು ಉಂಟುಮಾಡಿತು. ಜನರು ಆ ಪ್ರದೇಶದಿಂದ ಓಡಿ ಹೋಗಲು ಮುಂದಾದಾಗ ಆತ ಚಾಕುವಿನಿಂದ ದಾಳಿ ನಡೆಸಿದ್ದಾನೆ. ಕೂಡಲೇ ಮಾಹಿತಿ ಪಡೆದ ಪೊಲೀಸರು ಶಂಕಿತನನ್ನು ಪತ್ತೆಹಚ್ಚಲು ಪೊಲೀಸರು ದೊಡ್ಡ ಪ್ರಮಾಣದ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.

ಆ ವ್ಯಕ್ತಿ ಕಟ್ಟಡದ ಮೇಲಿನ ಮಹಡಿಯಿಂದ ಕೆಳಗೆ ಬಿದ್ದಿದ್ದು ಗಂಭೀರ ಗಾಯಗಳಾಗಿತ್ತು, ನಂತರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಆತನ ಒಬ್ಬನೇ ದಾಳಿ ನಡೆಸಿದ್ದಾನೆ ಎಂದು ಪೊಲೀಸರು ಹೇಳಿದ್ದು, ಇಲ್ಲಿಯವರೆಗೆ ಯಾವ ಸಹಚರನೂ ಪತ್ತೆಯಾಗಿಲ್ಲ. ದಾಳಿ ಮಾತ್ರ ಭಯಾನಕವಾಗಿತ್ತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Midday Naps: ಮಧ್ಯಾಹ್ನ ನಿದ್ರಿಸುವುದು ಗ್ರಹ ದೋಷಕ್ಕೆ ಕಾರಣವಾಗುತ್ತದೆಯೇ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Midday Naps: An Astrological and Spiritual Perspective on Daytime Sleep

ಮಧ್ಯಾಹ್ನದ ಹೊತ್ತು ನಿದ್ರಿಸುವುದು

ಪ್ರತಿಯೊಬ್ಬ ಮನುಷ್ಯನ ದೇಹಕ್ಕೆ ನಿದ್ರೆ ಅತ್ಯಗತ್ಯ. ನಿದ್ರೆಯು ದೇಹದ ಆರೋಗ್ಯ, ಆಯುಷ್ಯ ವೃದ್ಧಿ ಮತ್ತು ಮನಸ್ಸಿನ ಶಾಂತಿಗೆ ಅವಶ್ಯಕವಾಗಿದೆ. ಆದರೆ, ನಾವು ಮಾಡುವ ನಿದ್ರೆಯು ರಾತ್ರಿ ನಿದ್ರೆಯೇ ಅಥವಾ ಹಗಲು ನಿದ್ರೆಯೇ ಎಂಬುದನ್ನು ಅವಲಂಬಿಸಿ ಅದರ ಶುಭಾಶುಭ ಪರಿಣಾಮಗಳು ನಿರ್ಧಾರವಾಗುತ್ತವೆ. ಜ್ಯೋತಿಷ್ಯ ಮತ್ತು ಧರ್ಮಶಾಸ್ತ್ರಗಳ ಪ್ರಕಾರ, ಮಧ್ಯಾಹ್ನದ ಹೊತ್ತು ನಿದ್ರಿಸುವುದು ಒಳ್ಳೆಯದೇ, ಅಥವಾ ಕೆಟ್​ಟದೇ ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ.

ವೃದ್ಧರು, ರೋಗಿಗಳು, ಸಣ್ಣ ಮಕ್ಕಳು ಮತ್ತು ಮಕ್ಕಳನ್ನು ಹಡೆದಿರುವ ತಾಯಂದಿರು ಮಧ್ಯಾಹ್ನ ನಿದ್ರೆ ಮಾಡಬಹುದು. ಇವರು ತಮ್ಮ ಆರೋಗ್ಯ ಮತ್ತು ದೇಹದ ಅಗತ್ಯಗಳಿಗಾಗಿ ಹಗಲಿನಲ್ಲಿ ನಿದ್ರಿಸಬಹುದಾಗಿದೆ. ಆದರೆ, ದೇಹಪುಷ್ಟಿಯಿಂದ ಕೂಡಿದ್ದು, ಕರ್ಮನಿರತರಾಗಿ ತಮ್ಮ ವೃತ್ತಿಗಳಲ್ಲಿ ತೊಡಗಿರುವ ವ್ಯಕ್ತಿಗಳು, ಕಾಯಕವೇ ಕೈಲಾಸ ಎಂಬ ಮಾತನ್ನು ಅನುಸರಿಸುವವರು ಹಗಲಿನಲ್ಲಿ ಅಥವಾ ಮಧ್ಯಾಹ್ನದ ಸಮಯದಲ್ಲಿ ನಿದ್ರಿಸುವುದು ಸೂಕ್ತವಲ್ಲ ಎಂದು ಶಾಸ್ತ್ರಗಳು ತಿಳಿಸುತ್ತವೆ. ಸೂರ್ಯೋದಯದಿಂದ ಸೂರ್ಯಾಸ್ತದವರೆಗಿನ ಮಧ್ಯಭಾಗ, ನಿರ್ದಿಷ್ಟವಾಗಿ ಮಧ್ಯಾಹ್ನ 12 ರಿಂದ ಸಂಜೆ 3 ಗಂಟೆಯ ಅವಧಿಯಲ್ಲಿ ನಿದ್ರಿಸುವುದನ್ನು ನಿಷಿದ್ಧವೆಂದು ಪರಿಗಣಿಸಲಾಗುತ್ತದೆ.

ಈ ಸಮಯದಲ್ಲಿ ನಿದ್ರಿಸುವುದರಿಂದ ಹಲವು ನಕಾರಾತ್ಮಕ ಪರಿಣಾಮಗಳು ಉಂಟಾಗಬಹುದು. ಗ್ರಹಕಾಟ ಅಥವಾ ನವಗ್ರಹಗಳ ಅಶುಭ ಪ್ರಭಾವಕ್ಕೆ ಒಳಗಾಗುವ ಸಾಧ್ಯತೆ ಇರುತ್ತದೆ. ಇದು ನಮ್ಮ ದೈನಂದಿನ ಕೆಲಸ ಕಾರ್ಯಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಅಲ್ಲದೆ, ಋಣಾತ್ಮಕ ಶಕ್ತಿಗಳು ಆವರಿಸಿಕೊಳ್ಳುವ ಸಾಧ್ಯತೆ, ದೈವಬಲ ಕಡಿಮೆಯಾಗುವುದು ಮತ್ತು ಮೆದುಳಿನ ಜಾಗರೂಕತೆ ಕುಗ್ಗುವ ಸಾಧ್ಯತೆ ಇರುತ್ತದೆ. ಇಂತಹ ನಿದ್ರೆಯಿಂದ ಪೂರ್ವಜರ ಅನುಗ್ರಹವೂ ದೊರೆಯುವುದಿಲ್ಲ ಎಂದು ಶಾಸ್ತ್ರಗಳು ಹೇಳುತ್ತವೆ.

ಇದನ್ನೂ ಓದಿ: ವಾಸ್ತು ಪ್ರಕಾರ, ಮನೆಯಲ್ಲಿ ಕಾಮಧೇನುವಿನ ವಿಗ್ರಹ ಇಡುವುದರಿಂದ ಸಿಗುವ ಅದ್ಭುತ ಲಾಭಗಳಿವು!

ಕೆಲವರು ಕಚೇರಿಗಳಲ್ಲಿ ತಮ್ಮ ಕುರ್ಚಿಯಲ್ಲಿ ಕುಳಿತು ನಿದ್ರೆಗೆ ಜಾರುವುದನ್ನು ನಾವು ನೋಡುತ್ತೇವೆ. ಇದು ಮಹಾದೋಷವೆಂದು ಪರಿಗಣಿಸಲಾಗುತ್ತದೆ. ಕಚೇರಿಯ ಕುರ್ಚಿ ಒಂದು ರೀತಿಯ ಸಿಂಹಾಸನವಿದ್ದಂತೆ; ರಾಜರು ಸಿಂಹಾಸನದ ಮೇಲೆ ನಿದ್ರಿಸುತ್ತಾರೆಯೇ? ಇಲ್ಲ. ಹಾಗೆಯೇ, ಕರ್ತವ್ಯ ನಿರ್ವಹಿಸುವ ಸ್ಥಳದಲ್ಲಿ ನಿದ್ರಿಸುವುದು ಸರಿಯಲ್ಲ. ಒಂದು ವೇಳೆ ನಿದ್ರೆ ಬಂದಲ್ಲಿ, ತಕ್ಷಣ ಎದ್ದು ಸ್ವಲ್ಪ ಓಡಾಡಿ, ಮುಖ ತೊಳೆದುಕೊಂಡು ಮತ್ತೆ ಕೆಲಸಕ್ಕೆ ಮರಳುವುದು ಉತ್ತಮ. ಕಚೇರಿಯಲ್ಲಿ ನಿದ್ರಿಸುವುದು ಅಶುಭ ಫಲಗಳನ್ನು ತರುತ್ತದೆ. ರಾಜಕೀಯ ನಾಯಕರು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ನಿದ್ರೆಗೆ ಜಾರುವುದೂ ಸಹ ಅಶಕ್ತತೆಯ ಸಂಕೇತವಾಗಿ ಅಶುಭ ಫಲಿತಾಂಶಗಳನ್ನು ತೋರಿಸುತ್ತದೆ. ಒಟ್ಟಾರೆ, ಮಧ್ಯಾಹ್ನದ ನಿದ್ರೆಯು ವೈಯಕ್ತಿಕ ನಂಬಿಕೆಗಳು ಮತ್ತು ಧರ್ಮಶಾಸ್ತ್ರಗಳ ದೃಷ್ಟಿಯಿಂದ ಶುಭವಲ್ಲ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:54 am, Sat, 20 December 25

Source link

ಕುದುರೆಗಳಲ್ಲಿ ಗ್ಲಾಂಡರ್ಸ್ ರೋಗ ಭೀತಿ; ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ರೇಸ್‌ಗಳಿಗೆ ತಾತ್ಕಾಲಿಕ ಬ್ರೇಕ್ – Kannada News | Bengaluru Turf Club Halts Races: Glanders Disease Prompts Precautionary Measures

ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ರೇಸ್‌ಗಳಿಗೆ ತಾತ್ಕಾಲಿಕ ಬ್ರೇಕ್

ಬೆಂಗಳೂರು, ಡಿಸೆಂಬರ್ 20: ಹೈದರಾಬಾದ್‌ನಲ್ಲಿ ಕುದುರೆಗಳಿಗೆ ಮಾರಣಾಂತಿಕ ಗ್ಲಾಂಡರ್ಸ್ ರೋಗ ಪತ್ತೆಯಾಗಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿಷ್ಠಿತ ಬೆಂಗಳೂರು ಟರ್ಫ್ ಕ್ಲಬ್ (Bengaluru Turf Club) ಕಳೆದ ಎರಡು ವಾರಗಳಿಂದ ಎಲ್ಲಾ ರೇಸ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಕುದುರೆಗಳಲ್ಲಿ ಜೀವಕ್ಕೆ ಅಪಾಯಕಾರಿಯಾದ ಈ ಸೋಂಕು ಮನುಷ್ಯರಿಗೂ ಹರಡುವ ಸಾಧ್ಯತೆ ಇರುವುದರಿಂದ ಟರ್ಫ್ ಕ್ಲಬ್ ಆಡಳಿತ ಮಂಡಳಿ ಗಂಭೀರ ಕ್ರಮ ಕೈಗೊಂಡಿದೆ.

700ಕ್ಕೂ ಹೆಚ್ಚು ಕುದುರೆಗಳಿಗೆ ವೈದ್ಯಕೀಯ ಪರೀಕ್ಷೆ

ಹೈದರಾಬಾದ್‌ನಲ್ಲಿ ಮೊದಲಿಗೆ ಗ್ಲಾಂಡರ್ಸ್ ರೋಗದ ಪ್ರಕರಣಗಳು ವರದಿಯಾದ ತಕ್ಷಣ ಎಚ್ಚೆತ್ತ ಬಿಟಿಸಿ, ತನ್ನಲ್ಲಿರುವ 700ಕ್ಕೂ ಹೆಚ್ಚು ಕುದುರೆಗಳನ್ನು ಸಂಪೂರ್ಣ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿತ್ತು. ಕುದುರೆಗಳ ಸಲೈವಾ ಮಾದರಿಗಳನ್ನು ಹರಿಯಾಣದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ಪ್ರಕಾರ ಒಂದು ಕುದುರೆಯಲ್ಲಿ ಮಾತ್ರ ಗ್ಲಾಂಡರ್ಸ್ ಪಾಸಿಟಿವ್ ಕಂಡುಬಂದಿದೆ. ಆ ಕುದುರೆಯನ್ನು ಈಗಾಗಲೇ ಸಂಪೂರ್ಣವಾಗಿ ಬೇರ್ಪಡಿಸಿ ಚಿಕಿತ್ಸೆಗೊಳಪಡಿಸಲಾಗಿದೆ. ಉಳಿದ ಎಲ್ಲಾ ಕುದುರೆಗಳು ಸುರಕ್ಷಿತವಾಗಿದ್ದು, ವಿಶೇಷ ಆರೈಕೆಯೊಂದಿಗೆ ಅವುಗಳ ಮೇಲೆ ನಿರಂತರವಾಗಿ ನಿಗಾವಹಿಸಲಾಗುತ್ತಿದೆ ಎಂದು ಬಿಟಿಸಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಜಿಬಿಎ ಅಧಿಕಾರಿಗಳು ಹಾಗೂ ಪಶುವೈದ್ಯಕೀಯ ಸಿಬ್ಬಂದಿ ಟರ್ಫ್ ಕ್ಲಬ್‌ಗೆ ನಿರಂತರ ಭೇಟಿ ನೀಡಿ ನೈರ್ಮಲ್ಯತೆ ಹಾಗೂ ಸುರಕ್ಷತಾ ಕ್ರಮಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಕುದುರೆಗಳಿಗೆ ಸೋಂಕಿಲ್ಲವೆಂದು ತಿಳಿದ ನಂತರ ರೆಸ್ ಪುನರಾರಂಭ

ಕರ್ನಾಟಕ ಕುದುರೆಗಳ ಟ್ರೈನರ್ಸ್ ಅಸೋಸಿಯೇಷನ್ ಅಧ್ಯಕ್ಷ ಪ್ರದೀಪ್ ಅಣ್ಣಯ್ಯ ಮಾತನಾಡಿ, ಯಾವುದೇ ವದಂತಿಗಳಿಗೆ ಆಸ್ಪದ ನೀಡಬೇಕಿಲ್ಲ. ವರದಿಗಳು ಸ್ಪಷ್ಟವಾಗಿದ್ದು, ಮುನ್ನೆಚ್ಚರಿಕೆಗಾಗಿ ಮಾತ್ರ ರೇಸ್‌ಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಪ್ರತಿ ಕುದುರೆಯನ್ನು ನಿಗದಿತ ಅವಧಿಯಲ್ಲಿ ಮೂರು ಬಾರಿ ಪರೀಕ್ಷಿಸಿ ಯಾವುದೇ ಸೋಂಕಿಲ್ಲ ಎಂಬ ವರದಿ ಬಂದ ಬಳಿಕವೇ ರೇಸ್‌ಗಳನ್ನು ಪುನರಾರಂಭಿಸಲಾಗುವುದು ಎಂದು ಬೆಂಗಳೂರು ಟರ್ಫ್ ಕ್ಲಬ್ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮೊದಲ ದಿನ ಬಾಕ್ಸ್ ಆಫೀಸ್​​ನಲ್ಲಿ ಸೊರಗಿದ ‘ಅವತಾರ್ 3’; ‘ಧುರಂಧರ್’ ಮೇಲುಗೈ – Kannada News | Avatar 3 Fire and Ash Struggles Indian Box Office Amid Dhurandhar’s Rise

ಜೇಮ್ಸ್ ಕ್ಯಾಮೆರೂನ್ ನಿರ್ದೇಶನದ ‘ಅವತಾರ್’ ಹಾಗೂ ‘ಅವತಾರ್ 2’ ಸಿನಿಮಾಗಳು ಸೂಪರ್ ಹಿಟ್ ಆಗಿವೆ. ಡಿಸೆಂಬರ್ 19ರಂದು ‘ಅವತಾರ್: ಫೈರ್ ಆ್ಯಂಡ್ ಆ್ಯಶ್’ ಸಿನಿಮಾ ತೆರೆಗೆ ಬಂದಿದೆ. ಈ ಸಿನಿಮಾ ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಈ ಚಿತ್ರದ ಕಲೆಕ್ಷನ್ ಸೊರಗಿದೆ. ಈ ಸಿನಿಮಾದ ಭಾರತದ ಕಲೆಕ್ಷನ್ ಎಷ್ಟು? ಈ ಹಿಂದಿನ ಭಾಗ ಎಷ್ಟು ಗಳಿಕೆ ಮಾಡಿತ್ತು? ಧುರಂಧರ್ ಗಳಿಕೆ ವಿವರ ಇಲ್ಲಿದೆ.

‘ಅವತಾರ್ 2’ ಸಿನಿಮಾ ಭಾರತದಲ್ಲಿ ಮೊದಲ ದಿನ ಗಳಿಕೆ ಮಾಡಿದ್ದು 48 ಕೋಟಿ ರೂಪಾಯಿ. ಆದರೆ, ‘ಅವತಾರ್ 3’ ಸಿನಿಮಾದ ಮೊದಲ ದಿನದ ಕಲೆಕ್ಷನ್ ಕೇವಲ 20 ಕೋಟಿ ರೂಪಾಯಿ. ‘ಅವತಾರ್ 2’ ಸಿನಿಮಾ ಬಗ್ಗೆ ಎಲ್ಲರಿಗೂ ನಿರೀಕ್ಷೆ ಇತ್ತು. ಈ ಚಿತ್ರ ಸಾಕಷ್ಟು ಮೆಚ್ಚುಗೆ ಪಡೆದಿತ್ತು. ಆದರೆ, ‘ಅವತಾರ್ 3’ ಸಿನಿಮಾ ಹೈಪ್ ಸೃಷ್ಟಿಸಲು ವಿಫಲವಾಗಿದೆ.

20 ಕೋಟಿ ರೂಪಾಯಿ ದೊಡ್ಡ ಮೊತ್ತವೇ ಎಂದು ಕೆಲವರು ಹೇಳಬಹುದು. ಆದರೆ, ‘ಅವತಾರ್’ ಸರಣಿ ಎಂದು ಪರಿಗಣಿಸಿದಾಗ ಈ ಗಳಿಕೆ ತುಂಬಾನೇ ಸಣ್ಣದು. ಈ ವೀಕೆಂಡ್, ಕ್ರಿಸ್​ಮಸ್ ಹಾಗೂ ಹೊಸ ವರ್ಷದ ರಜೆಗಳು ಚಿತ್ರಕ್ಕೆ ಸಹಕಾರಿ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ: ರಿಲೀಸ್​ಗೂ ಮೊದಲೇ ವಿಮರ್ಶಕರಿಂದ ಕೆಟ್ಟ ವಿಮರ್ಶೆ ಪಡೆದ ‘ಅವತಾರ್: ಫೈರ್ ಆ್ಯಂಡ್ ಆ್ಯಶ್’

‘ಅವತಾರ್: ಫೈರ್ ಆ್ಯಂಡ್ ಆ್ಯಶ್’ ಚಿತ್ರಕ್ಕೆ ಭಾರತದ ಬಾಕ್ಸ್ ಆಫೀಸ್​​ನಲ್ಲಿ ದೊಡ್ಡ ಸ್ಪರ್ಧೆ ಏರ್ಪಟ್ಟಿದೆ. ಡಿಸೆಂಬರ್ 5ರಂದು ತೆರೆಗೆ ಬಂದ ‘ಧುರಂಧರ್’ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಈ ಸಿನಿಮಾದ ಬಹುತೇಕ ಶೋ ಹೌಸ್​ಫುಲ್ ಆಗುತ್ತಿದೆ. ಹೀಗಾಗಿ, ‘ಅವಾತಾರ್ 3’ ಚಿತ್ರಕ್ಕೆ ಸಿಗುತ್ತಿರೋ ಪರದೆಗಳ ಸಂಖ್ಯೆಯಲ್ಲಿ ಇಳಿಕೆ ಕಂಡಿದೆ. ಡಿಸೆಂಬರ್ 19ರಂದು ಈ ಚಿತ್ರ 22.5 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಅವತಾರ್ ಚಿತ್ರಕ್ಕಿಂತ ಮೇಲುಗೈ ಸಾಧಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

VIDEO: ಸಿಕ್ಸ್ ಹಿಟ್… ಕ್ಯಾಮೆರಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ – Kannada News | Hardik Pandya’s Six Injures Cameraman During IND vs SA Match

ಅಹಮದಾಬಾದ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅದು ಕೂಡ ಸಿಡಿಲಬ್ಬರ ಸಿಕ್ಸ್ ಸಿಡಿಸಿ ಶುಭಾರಂಭ ಮಾಡುವ ಮೂಲಕ. ಆದರೆ ಪಾಂಡ್ಯ ಬಾರಿಸಿದ ಈ ಸಿಕ್ಸ್ ನೇರವಾಗಿ ಹೋಗಿ ಬಿದ್ದದ್ದು ಕ್ಯಾಮೆರಮ್ಯಾನ್ ಅವರ ಕೈಗೆ.

ಕಾರ್ಬಿನ್ ಬಾಷ್​ ಎಸೆದ 13ನೇ ಓವರ್​ನ 2ನೇ ಎಸೆತದಲ್ಲಿ ಮಿಡ್​ ಆಫ್​ನತ್ತ ಸಿಕ್ಸ್ ಬಾರಿಸಿದ್ದರು. ಈ ಫ್ಲಾಟ್ ಸಿಕ್ಸ್ ನೇರವಾಗಿ ಹೋಗಿ ಕ್ಯಾಮೆರಮ್ಯಾನ್​ಗೆ ಬಡಿದಿದೆ. ತಕ್ಷಣವೇ ಟೀಮ್ ಇಂಡಿಯಾದ ವೈದ್ಯಕೀಯ ಸಿಬ್ಬಂದಿಗಳು ಅವರ ಆರೈಕೆ ಮಾಡಿದರು.

ಇನ್ನು ಪಂದ್ಯ ಮುಗಿದ ಬಳಿಕ ಕ್ಯಾಮೆರಮ್ಯಾನ್​ನತ್ತ ಬಂದ ಹಾರ್ದಿಕ್ ಪಾಂಡ್ಯ, ಅವರನ್ನು ತಬ್ಬಿಕೊಳ್ಳುವ ಮೂಲಕ ಕ್ಷಮೆಯಾಚಿಸಿದರು. ಇದೀಗ ಪಾಂಡ್ಯ ಅವರ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಇನ್ನು ಈ ಮ್ಯಾಚ್​ನಲ್ಲಿ 25 ಎಸೆತಗಳನ್ನು ಎದುರಿಸಿದ ಹಾರ್ದಿಕ್ ಪಾಂಡ್ಯ 5 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 63 ರನ್ ಬಾರಿಸಿದರು.

ಈ 63 ರನ್​ಗಳ ನೆರವಿನೊಂದಿಗೆ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 231 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ಕೇವಲ 201 ರನ್ ಗಳಿಸಿ 30 ರನ್ ಗಳಿಂದ ಸೋಲೊಪ್ಪಿಕೊಂಡಿದೆ.

 

 

Source link

ಸ್ಲೀವ್​ಲೆಸ್ ಡ್ರೆಸ್, ಹರಿದ ಜೀನ್ಸ್ ಹಾಕೊಂಡು ಕಚೇರಿಗೆ ಹೋಗುವ ಸರ್ಕಾರಿ ನೌಕರರಿಗೆ ಇನ್ಮುಂದೆ ಕಾದಿದೆ ಸಂಕಷ್ಟ! – Kannada News | Dress Code Warning: Karnataka Government Warns Employees to Wear Decent Clothes or Face Action

ಬೆಂಗಳೂರು, ಡಿಸೆಂಬರ್ 20: ರಾಜ್ಯ ಸರ್ಕಾರಿ ನೌಕರರು ಸಭ್ಯ ಬಟ್ಟೆಗಳನ್ನು (Decent Clothes) ಧರಿಸಿಕೊಂಡು ಕಚೇರಿಗೆ ಬರಬೇಕು. ಸರ್ಕಾರದ ಖ್ಯಾತಿಗೆ ಧಕ್ಕೆ ತರುವ ಬಟ್ಟೆಗಳನ್ನು ಧರಿಸಿ ಕಚೇರಿಗೆ ಬಂದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಕಟ್ಟುನಿಟ್ಟಿನ ಸೂತ್ತೋಲೆ ಹೊರಡಿಸಿದೆ. ವಿವಿಧ ಇಲಾಖೆಗಳ ಮುಖ್ಯಸ್ಥರು, ಜಿಲ್ಲಾಧಿಕಾರಿಗಳು, ಮುಖ್ಯಮಂತ್ರಿ ಕಚೇರಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಇತರರಿಗೆ ಈ ಸಂದೇಶವನ್ನು ಕಳುಹಿಸಿದ್ದು, ಸರ್ಕಾರಿ ಕಚೇರಿಗೆ ಕರ್ತವ್ಯಕ್ಕೆ ಹಾಜರಾಗುವಾಗ ಹೇಗಿರಬೇಕು, ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಕೆಲಸಗಳನ್ನು ಪಟ್ಟಿ ಮಾಡಿದೆ.

ಕೆಲವು ನೌಕರರು ಅಸಭ್ಯವಾಗಿ ಉಡುಗೆ ತೊಟ್ಟುಕೊಂಡು ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಾರೆ ಎಂದು ಸಾರ್ವಜನಿಕರು ಮತ್ತು ಕೆಲವು ಸಂಸ್ಥೆಗಳಿಂದ ಇಲಾಖೆಗೆ ದೂರುಗಳು ಬಂದಿವೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ನೌಕರರಿಗೆ ಯೋಗ್ಯವಾದ ಬಟ್ಟೆಗಳನ್ನು ಧರಿಸಲು ಹೇಳಲಾಗಿದ್ದರೂ, ಅನೇಕರು ಸೂಚನೆಗಳನ್ನು ಪಾಲಿಸುತ್ತಿಲ್ಲ. ನಾವು ಅದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್’ ವರದಿ ಮಾಡಿದೆ.

ಸ್ಲೀವ್​ಲೆಸ್ ಡ್ರೆಸ್, ಹರಿದ ಜೀನ್ಸ್ ಹಾಕೊಂಡು ಬರ್ಬೇಡಿ

ಕಾರ್ಪೊರೇಟ್ ಕಚೇರಿಗಳಂತೆ ಸರ್ಕಾರಿ ನೌಕರರಿಗೆ ಯಾವುದೇ ಡ್ರೆಸ್ ಕೋಡ್ ಇಲ್ಲ. ಆದಾಗ್ಯೂ, ಕೆಲವರು ಕಾಲೇಜು ಹೋಗುವವರು ಧರಿಸುವಂತಹ ಉಡುಗೆ ತೊಡುತ್ತಾರೆ, ಇದು ಸ್ವೀಕಾರಾರ್ಹವಲ್ಲ. ಹರಿದ ಜೀನ್ಸ್, ಸ್ಲೀವ್​ಲೆಸ್ ಡ್ರೆಸ್ ಮತ್ತು ತುಂಬಾ ಬಿಗಿಯಾದ ಬಟ್ಟೆಗಳನ್ನು ಧರಿಸುತ್ತಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸರ್ಕಾರಿ ನೌಕರರ ಸಂಘ ಸ್ವಾಗತ

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸುತ್ತೋಲೆಯನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಸ್ವಾಗತಿಸಿದ್ದಾರೆ. ಸರ್ಕಾರಿ ನೌಕರರು ಧರಿಸುವ ಉಡುಗೆ ತೊಡುಗೆ ಇತರರಿಗೆ ಮುಜುಗರ ಉಂಟುಮಾಡಬಾರದು. ಸರ್ಕಾರಿ ಕಚೇರಿಗಳಲ್ಲಿ ಸಭ್ಯತೆಯನ್ನು ಕಾಪಾಡಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದ್ವೇಷ ಭಾಷಣ ವಿಧೇಯಕ ರಿಜೆಕ್ಟ್​ ಮಾಡಲು ಸಾಕಾಗಲಿದೆಯಾ ಆ ಒಂದು ಕಾರಣ! ರಾಜ್ಯಪಾಲರಿಗೆ ಸಲ್ಲಿಕೆಯಾದ ಪತ್ರದಲ್ಲೇನಿದೆ?

ಸರ್ಕಾರಿ ನೌಕರರ ಚಲನವಲನಗಳನ್ನು ಟ್ರ್ಯಾಕ್ ಮಾಡಲು ಸರ್ಕಾರ ಲೆಡ್ಜರ್​ಗಳು ಮತ್ತು ಮೂವ್​ಮೆಂಟ್ ರಿಜಿಸ್ಟರ್ ಅನ್ನು ಅಳವಡಿಸಿದೆ. ಸರ್ಕಾರಿ ನೌಕರರು ಕಚೇರಿಗೆ ಪ್ರವೇಶಿಸುವಾಗ ಮತ್ತು ಹೊರಡುವಾಗ ಈ ಲೆಡ್ಜರ್‌ಗಳಲ್ಲಿ ನಮೂದು ಮಾಡಬೇಕೆಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಆದರೆ ಅನೇಕರು ಈ ನಿಯಮವನ್ನು ಪಾಲಿಸುತ್ತಿಲ್ಲ. ಉದ್ಯೋಗಿಯೊಬ್ಬರು ಬೆಳಿಗ್ಗೆ 10:10 ರೊಳಗೆ ಕಚೇರಿಯಲ್ಲಿರಬೇಕು ಮತ್ತು ಕೆಲಸದ ಸಮಯ ಮುಗಿಯುವವರೆಗೆ ತಮ್ಮ ಸ್ಥಾನದಲ್ಲಿರಬೇಕು. ಅವರು ಅಧಿಕೃತ ಕರ್ತವ್ಯದ ಮೇಲೆ ಹೊರಗೆ ಹೋಗುತ್ತಿದ್ದರೆ, ಅದನ್ನು ರಿಜಿಸ್ಟರ್‌ನಲ್ಲಿ ನಮೂದಿಸಬೇಕು ಎಂದು ಇಲಾಖೆ ಸೂಚನೆ ನೀಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

International Human Solidarity Day 2025: ಒಗ್ಗಟ್ಟಿನಿಂದ ಸಮಾಜದಲ್ಲಿ ಶಾಂತಿ, ಸಾಮರಸ್ಯ, ಸುಸ್ಥಿರ ಅಭಿವೃದ್ಧಿ ಸಾಧ್ಯ – Kannada News | International Human Solidarity Day 2025: Why is International Human Solidarity Day celebrated? Know its history and significance

ಅಂತಾರಾಷ್ಟ್ರೀಯ ಮಾನವ ಒಗ್ಗಟ್ಟಿನ ದಿನImage Credit source: Freepik

ಈ ಪ್ರಪಂಚವು ಸಾಕಷ್ಟು ವೈವಿಧ್ಯತೆಯಿಂದ ಕೂಡಿದೆ. ಇಲ್ಲಿ ಅನೇಕ ಧರ್ಮಗಳು, ಭಾಷೆಗಳು, ಸಂಸ್ಕೃತಿಗಳ ಜನರು  ವಾಸಿಸುತ್ತಿದ್ದಾರೆ. ಈ ವೈವಿಧ್ಯತೆಯಿಂದಾಗಿ ಜನರಲ್ಲಿ ಸಹಜವಾಗಿ  ಭೇದಭಾವಗಳ ಭಾವನೆ ಮೂಡತ್ತದೆ. ಈ ಕಾರಣದಿಂದಾಗಿ ಸಮಾಜ ಮತ್ತು ದೇಶ ದೇಶಗಳ ನಡುವೆ ಯುದ್ಧ, ಹಿಂಸಾಚಾರ, ಭಯೋತ್ಪಾದನೆ ಮತ್ತು ಇತರ ಸಾಕಷ್ಟು ಸಮಸ್ಯೆಗಳು ಉದ್ಭವಿಸುತ್ತದೆ. ಇದು ಇಡೀ ಮಾನವ ಜನಾಂಗಕ್ಕೆ ಹಾನಿಯುಂಟುಮಾಡುತ್ತದೆ. ಅದೇ ದೇಶ ದೇಶಗಳು ಒಗ್ಗಟ್ಟಿನಿಂದ (Solidarity) ಇದ್ದಾಗ ಅಭಿವೃದ್ಧಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ʼವಸುದೈವ ಕುಟುಂಬಕಂʼ ಅಂದರೆ ಇಡೀ ಜಗತ್ತು ಒಂದೇ ಕುಟುಂಬ ಎಂಬ ಪರಿಕಲ್ಪನೆಯಂತೆ ಅಂತರಾಷ್ಟ್ರೀಯ ಸಂಬಂಧಗಳನ್ನು ಬಲಪಡಿಸುವ, ನಾಗರಿಕರಲ್ಲಿ ಏಕತೆ ಮತ್ತು ಸಹೋದರತ್ವ ಭಾವನೆಯನ್ನು ಮೂಡಿಸುವ ಮತ್ತು ಜಗತ್ತಿನಲ್ಲಿ ಸಾಮರಸ್ಯ ಮತ್ತು ಶಾಂತಿಯನ್ನು ಉತ್ತೇಜಿಸುವ ಉದ್ದೇಶದಿಂದ  ಅಂತಾರಾಷ್ಟ್ರೀಯ ಮಾನವ ಒಗ್ಗಟ್ಟಿನ ದಿನವನ್ನು ಆಚರಿಸಲಾಗುತ್ತದೆ.

ಅಂತಾರಾಷ್ಟ್ರೀಯ ಮಾನವ ಒಗ್ಗಟ್ಟಿನ ದಿನದ ಇತಿಹಾಸವೇನು?

ವಿಶ್ವದಲ್ಲಿ ಪರಸ್ಪರ ಸಹಕಾರ ಮತ್ತು ಸಾಮರಸ್ಯವನ್ನು ಉತ್ತೇಜಿಸಲು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಅಂತಾರಾಷ್ಟ್ರೀಯ ಮಾನವ ಒಗ್ಗಟ್ಟಿನ ದಿನವನ್ನು ಆಚರಿಸಲು ಮೊದಲು ಪ್ರಸ್ತಾಪಿಸಿತು. ಇದರ ನಂತರ 22 ಡಿಸೆಂಬರ್ 2005 ರಂದು 60/209 ನಿರ್ಣಯದ ಅಡಿಯಲ್ಲಿ ಡಿಸೆಂಬರ್ 20 ರಂದು ಅಂತರಾಷ್ಟ್ರೀಯ ಮಾನವ ಒಗ್ಗಟ್ಟಿನ ದಿನವನ್ನು ಆಚರಿಸಲು ನಿರ್ಧರಿಸಲಾಯಿತು. ಅಂದಿನಿಂದ ಪ್ರತಿವರ್ಷ ಡಿಸೆಂಬರ್  20 ರಂದು ಜಾಗತಿಕ ಮಟ್ಟದಲ್ಲಿ ಮಾನವ ಒಗ್ಗಟ್ಟಿನ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಇದನ್ನೂ ಓದಿ: ಅಲ್ಪಸಂಖ್ಯಾತರ ಹಕ್ಕುಗಳ ದಿನವನ್ನು ಆಚರಿಸುವುದರ ಹಿಂದಿನ ಉದ್ದೇಶವೇನು?

ಅಂತಾರಾಷ್ಟ್ರೀಯ ಮಾನವ ಒಗ್ಗಟ್ಟಿನ ದಿನದ ಮಹತ್ವವೇನು?

  • ವಿವಿಧತೆಯಲ್ಲಿ ಏಕತೆಯನ್ನು ಪ್ರದರ್ಶಿಸುವುದು.
  • ಜನರಲ್ಲಿ ಏಕತೆ ಮತ್ತು ಸಹೋದರತ್ವವನ್ನು ಉತ್ತೇಜಿಸುವುದು
  • ಅಂತಾರಾಷ್ಟ್ರೀಯ ಸಂಬಂಧಗಳನ್ನು ಬಲಪಡಿಸುವುದು.
  • ಅಭಿವೃದ್ಧಿಗಾಗಿ ಪರಸ್ಪರ ಸಹಕಾರವನ್ನು ಉತ್ತೇಜಿಸುವುದು.
  • ಸುಸ್ಥಿರ ಅಭಿವೃದ್ಧಿಯನ್ನು ಉತ್ತೇಜಿಸುವುದು.
  • ಜಗತ್ತಿನಲ್ಲಿ ಸಾಮರಸ್ಯ ಮತ್ತು ಶಾಂತಿಯನ್ನು ಉತ್ತೇಜಿಸುವುದು.
  • ಯಾವುದೇ ಯುದ್ಧ, ಹಿಂಸಾಚಾರವಿಲ್ಲದೆ ಜಗತ್ತನ್ನು ಉತ್ತಮ ಸ್ಥಳವನ್ನಾಗಿ ಮಾಡುವುದು.

ಒಟ್ಟಿನಲ್ಲಿ ವೈವಿಧ್ಯತೆಯಲ್ಲಿ ಏಕತೆಯನ್ನು ಆಚರಿಸಲು ಮತ್ತು ಒಗ್ಗಟ್ಟಿನ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಡಿಸೆಂಬರ್ 20 ರಂದು ಜಾಗತಿಕವಾಗಿ ಮಾನವ ಒಗ್ಗಟ್ಟಿನ ದಿನವನ್ನು ಆಚರಿಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಂಡ್ಯ: ಕೊನೆಗೂ ಬಯಲಾಯ್ತು ರಕ್ತ ರಹಸ್ಯ! ಮನೆಯಿಡೀ ನಿಗೂಢವಾಗಿ ಹರಿದಿದ್ದ ನೆತ್ತರು ಯಾರದ್ದು ಗೊತ್ತೇ? – Kannada News | Maddur Blood Stain Mystery Solved: FSL Confirms House Owner’s Blood in Mandya’s Village

ಮಂಡ್ಯ, ಡಿಸೆಂಬರ್ 20: ಮಂಡ್ಯ (Mandya) ಜಿಲ್ಲೆಯ ಮದ್ದೂರು ತಾಲೂಕಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ಸತೀಶ್ ಹಾಗೂ ಸೌಮ್ಯ ದಂಪತಿಯ ಮನೆಯಲ್ಲಿ ಪತ್ತೆಯಾಗಿದ್ದ ನಿಗೂಢ ರಕ್ತದ ಕಲೆಗಳ ಪ್ರಕರಣದ ಸತ್ಯಾಸತ್ಯತೆ ಕೊನೆಗೂ ಬಯಲಾಗಿದೆ. ಎಫ್‌ಎಸ್‌ಎಲ್ (Forensic Science Laboratory) ವರದಿ ಬಹಿರಂಗಗೊಂಡಿದ್ದು, ಮನೆಯೊಳಗೆ ಹರಿದಿದ್ದ ರಕ್ತವು ಮನೆ ಮಾಲೀಕ ಸತೀಶ್ ಅವರದ್ದೇ ಎಂಬುದು ದೃಢಪಟ್ಟಿದೆ! ಅಕ್ಟೋಬರ್ 28ರಂದು ಸತೀಶ್ ದಂಪತಿಯ ಮನೆಯ ಹಾಲ್, ಬಾತ್‌ರೂಂ, ಟಿವಿ ಹಾಗೂ ಫ್ಯಾನ್‌ಗಳ ಮೇಲೆ ರಕ್ತದ ಕಲೆಗಳು ಕಾಣಿಸಿಕೊಂಡು ಗ್ರಾಮದೆಲ್ಲೆಡೆ ಆತಂಕ ಸೃಷ್ಟಿಸಿತ್ತು. ಮೊದಲಿಗೆ ಅದು ಯಾವುದೋ ಪ್ರಾಣಿಯ ರಕ್ತವಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಆದರೆ ಪ್ರಾಥಮಿಕ ತನಿಖೆಯಲ್ಲೇ ಅದು ಮನುಷ್ಯನ ರಕ್ತ ಎಂಬುದು ಗೊತ್ತಾಗಿತ್ತು.

ಎಫ್​ಎಸ್​ಎಲ್ ವರದಿಯಿಂದ ಬಯಲಾಯ್ತು ರಹಸ್ಯ

ಈ ಪ್ರಕರಣದ ಗಂಭೀರತೆಯನ್ನು ಗಮನಿಸಿ ಬೆಸಗರಹಳ್ಳಿ ಠಾಣಾ ಪೊಲೀಸರು, ಎಫ್‌ಎಸ್‌ಎಲ್ ಹಾಗೂ ಶ್ವಾನದಳದ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿ ರಕ್ತದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಇದೀಗ ಬಂದಿರುವ ವರದಿಯಲ್ಲಿ, ಆ ರಕ್ತವು ಮನೆ ಮಾಲೀಕ ಸತೀಶ್ ಅವರದೇ ಎಂದು ಉಲ್ಲೇಖಿಸಲಾಗಿದೆ.

ಗೊತ್ತಾಗದಂತೇ ಹರಿದಿದ್ಹೇಗೆ ನೆತ್ತರು?

ಪೊಲೀಸ್ ತನಿಖೆಯಲ್ಲಿ ತಿಳಿದುಬಂದಂತೆ, ಸತೀಶ್ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ರಕ್ತ ತೆಳುಗೊಳಿಸುವ (ಬ್ಲಡ್ ಥಿನ್ನರ್) ಮಾತ್ರೆಗಳನ್ನು ಸೇವಿಸುತ್ತಿದ್ದರು. ಅವರಿಗೆ ದೇಹದ ಮೇಲೆ ಸೂಜಿ ಗಾತ್ರದ ಸಣ್ಣ ಗಾಯವಾಗಿದ್ದು, ಅದು ಅವರಿಗೂ ತಿಳಿಯದಂತೆ ರಕ್ತ ಚಿಮ್ಮಿ ಮನೆಯೊಳಗೆ ಹರಿದಿದೆ ಎನ್ನಲಾಗಿದೆ. ಆದರೆ ಇದರ ಅರಿವು ಅವರಿಗೂ ಆಗಿಲ್ಲದೇ ಇದ್ದುದರಿಂದ ಯಾರೋ ದುಷ್ಕೃತ್ಯ ಎಸಗಿರಬಹುದು, ಅಥವಾ ಮಾಟ ಮಂತ್ರಕ್ಕಾಗಿ ರಕ್ತ ಚೆಲ್ಲಿರಬಹುದು ಎಂಬ ಅನುಮಾನಗಳು ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ಮೂಡಿದ್ದವು. ಯಾಕೆಂದರೆ, ಕೇವಲ ಒಂದು ಕಡೆ ಅಲ್ಲದೆ ಮನೆ ಹಾಲ್, ಬಾತ್‌ರೂಂ, ಟಿವಿ ಹಾಗೂ ಫ್ಯಾನ್‌ಗಳ ಮೇಲೆಲ್ಲ ರಕ್ತದ ಕಲೆ ಕಾಣಿಸಿತ್ತು. ಹೀಗಾಗಿ ಸಹಜವಾಗಿಯೇ ಅನುಮಾನಗಳು ಹೆಚ್ಚಾಗಿದ್ದವು. ಇದರಿಂದ ಗ್ರಾಮದಲ್ಲಿ ಕೆಲಕಾಲ ಭಯ ಮತ್ತು ಕುತೂಹಲ ವಾತಾವರಣ ನಿರ್ಮಾಣವಾಗಿತ್ತು.

ಇದನ್ನೂ ಓದಿ: ಮಂಡ್ಯ: ನೆತ್ತರ ನಿಗೂಢತೆಗೆ ನಡುಗಿದ ದಂಪತಿ, ಮನೆಯಲ್ಲಿ ಎಲ್ಲಿ ನೋಡಿದರೂ ರಕ್ತದ ಕಲೆ!

ಆದರೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿದ ಬಳಿಕ ಇದೀಗ ರಕ್ತ ರಹಸ್ಯ ಸಂಪೂರ್ಣವಾಗಿ ಬಯಲಾಗಿದ್ದು, ಯಾವುದೇ ಅಪರಾಧ ಅಥವಾ ಹೊರಗಿನ ದುರುದ್ದೇಶ ಇಲ್ಲ ಎಂಬುದು ಸ್ಪಷ್ಟವಾಗಿದೆ. ಎಫ್‌ಎಸ್‌ಎಲ್ ವರದಿಯಿಂದ ಸತೀಶ್ ದಂಪತಿ ಮತ್ತು ಗ್ರಾಮಸ್ಥರು ಕೊನೆಗೂ ನಿಟ್ಟುಸಿರು ಬಿಟ್ಟಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:48 am, Sat, 20 December 25

Source link