All posts by nagaraj11081993

ಮಾರ್ಚ್ ತಿಂಗಳಲ್ಲಿ 27 ದಿನಗಳಲ್ಲಿ 1.14 ಲಕ್ಷ ಕೋಟಿ ರೂ ವಿದೇಶೀ ಹೂಡಿಕೆಗಳ ಹೊರಹರಿವು; ಇದು ಹೊಸ ಮಾಸಿಕ ದಾಖಲೆ

ಮಾರ್ಚ್ ತಿಂಗಳಲ್ಲಿ 27 ದಿನಗಳಲ್ಲಿ 1.14 ಲಕ್ಷ ಕೋಟಿ ರೂ ವಿದೇಶೀ ಹೂಡಿಕೆಗಳ ಹೊರಹರಿವು; ಇದು ಹೊಸ ಮಾಸಿಕ ದಾಖಲೆ

ನವದೆಹಲಿ, ಮಾರ್ಚ್ 29: ಭಾರತದ ಈಕ್ವಿಟಿಗಳಿಂದ ಮಾರ್ಚ್ ತಿಂಗಳಲ್ಲಿ 12.3 ಬಿಲಿಯನ್ ಡಾಲರ್​ನಷ್ಟು ಎಫ್​ಪಿಐಗಳ ಹೂಡಿಕೆಗಳು ಹೊರಹೋಗಿವೆ. ಅಂದರೆ, ಮಾರ್ಚ್​ನಲ್ಲಿ ಈವರೆಗೂ (27, ಶುಕ್ರವಾರ) 1.14 ಲಕ್ಷ ಕೋಟಿ ರೂ ಈಕ್ವಿಟಿಗಳನ್ನು ವಿದೇಶೀ ಹೂಡಿಕೆದಾರರು ಮಾರಿದ್ದಾರೆ. ಇನ್ನೂ ಎರಡು ಟ್ರೇಡಿಂಗ್ ಸೆಷನ್​ಗಳು ಉಳಿದಿದ್ದು, ಮತ್ತಷ್ಟು ಸಾವಿರಾರು ಕೋಟಿ ರೂ ಎಫ್​ಪಿಐಗಳ (FPI- Foreign Portfolio Investors) ಹೊರಹರಿವು ಆಗುವ ನಿರೀಕ್ಷೆ ಇದೆ.

ಯಾವುದೇ ಒಂದು ತಿಂಗಳಲ್ಲಿ ಇಷ್ಟು ಮೊತ್ತದ ವಿದೇಶೀ ಹೂಡಿಕೆಗಳ ಹೊರಹರಿವು ಕಂಡಿದ್ದು ಇದೇ ಮೊದಲು. 2024ರ ಅಕ್ಟೋಬರ್ ತಿಂಗಳಲ್ಲಿ 94,017 ಕೋಟಿ ರೂ ಮೊತ್ತದಷ್ಟು ವಿದೇಶೀ ಹೂಡಿಕೆಗಳು ಹೊರಹೋಗಿದ್ದವು. ಅದು ಇಲ್ಲಿಯವರೆಗಿನ ದಾಖಲೆಯಾಗಿತ್ತು. ಮಾರ್ಚ್ ತಿಂಗಳಲ್ಲಿ ಮೊದಲ ಬಾರಿಗೆ 1 ಲಕ್ಷ ಕೋಟಿ ರೂ ಹೊರಹರಿವಿನ ಮೈಲಿಗಲ್ಲು ಸೃಷ್ಟಿಯಾಗಿದೆ.

ಇದನ್ನೂ ಓದಿ: ಅಬಕಾರಿ ಸುಂಕ ಕಡಿತದಿಂದ ಸರ್ಕಾರಕ್ಕೆ ಎರಡೇ ವಾರದಲ್ಲಿ 7,000 ಕೋಟಿ ರೂ ಆದಾಯನಷ್ಟದ ಅಂದಾಜು

ಮಾರ್ಚ್ ತಿಂಗಳಲ್ಲಿ ಎಫ್​ಪಿಐಗಳು ಸತತವಾಗಿ ಹೂಡಿಕೆಗಳನ್ನು ಹಿಂಪಡೆಯುತ್ತಿದ್ದ ಟ್ರೆಂಡ್ ಇತ್ತು. ಈಕ್ವಿಟಿ ಕ್ಯಾಷ್ ಮಾರ್ಕೆಟ್​ನಲ್ಲಿ ಮಾರ್ಚ್ 27ರವರೆಗೆ ವಿದೇಶೀ ಪೋರ್ಟ್​ಫೋಲಿಯೋ ಹೂಡಿಕೆದಾರರು ಮಾರಿದ ಈಕ್ವಿಟಿಗಳ ಮೌಲ್ಯ 1,13,380 ಕೋಟಿ ರೂ ಎನ್ನಲಾಗಿದೆ.

2026ರಲ್ಲಿ, ಅಂದರೆ ಜನವರಿಯಿಂದ ಈಚೆಗೆ ಎಫ್​ಪಿಐಗಳಿಂದ ಆಗಿರುವ ಹೂಡಿಕೆ ನಿರ್ಗಮನ ಒಟ್ಟು 1.27 ಲಕ್ಷ ಕೋಟಿ ರೂ. ಇದರಲ್ಲಿ ಮಾರ್ಚ್ ತಿಂಗಳದ್ದೇ ಸಿಂಹಪಾಲು. ಫೆಬ್ರುವರಿ ತಿಂಗಳಲ್ಲಿ ವಿಭಿನ್ನ ಟ್ರೆಂಡ್ ಇತ್ತು. ಎಫ್​ಪಿಐಗಳು 22,615 ಕೋಟಿ ರೂನಷ್ಟು ಮೊತ್ತದ ಭಾರತೀಯ ಈಕ್ವಿಟಿಗಳನ್ನು ಖರೀದಿ ಮಾಡಿದ್ದವು. ಕಳೆದ 17 ತಿಂಗಳಲ್ಲೇ ಅತಿಹೆಚ್ಚು ಮಾಸಿಕ ಒಳಹರಿವು ಅದಾಗಿತ್ತು.

ಇದನ್ನೂ ಓದಿ: ರಷ್ಯನ್ ಎಲ್​ಎನ್​ಜಿಯನ್ನು ಖರೀದಿಸಲಿರುವ ಭಾರತ; ಎಲ್​ಪಿಜಿ, ಪಿಎನ್​ಜಿ, ಎಲ್​ಎನ್​ಜಿಗಿರುವ ವ್ಯತ್ಯಾಸಗಳೇನು?

ಇರಾನ್ ಯುದ್ಧದ ಪರಿಣಾಮವು ಮಾರ್ಚ್ ತಿಂಗಳಲ್ಲಿ ಈಕ್ವಿಟಿ ಮಾರುಕಟ್ಟೆ ಮೇಲೆ ತೀವ್ರವಾಗಿ ಬಿದ್ದಿದೆ. ಹಾಗೆಯೇ, ಕಳೆದ 18 ತಿಂಗಳಲ್ಲಿ ಭಾರತದ ಈಕ್ವಿಟಿ ಮಾರುಕಟ್ಟೆಯ ಸಾಧನೆಯು ಇತರ ದೇಶಗಳ ಮಾರುಕಟ್ಟೆಗೆ ಹೋಲಿಸಿದರೆ ದುರ್ಬಲ ಸಾಧನೆ ತೋರಿದೆ. ಹೀಗಾಗಿ, ಎಫ್​ಪಿಐಗಳು ಭಾರತದ ಈಕ್ವಿಟಿಗಳಲ್ಲಿ ಹೂಡಿಕೆ ಕಡಿಮೆ ಮಾಡಿರಬಹುದು. ಇದರ ಜೊತೆಗೆ, ಅಮೆರಿಕದ ಬಾಂಡ್ ಯೀಲ್ಡ್ ಹೆಚ್ಚಿರುವುದು ಮತ್ತು ಜಾಗತಿಕವಾಗಿ ಹಣಕಾಸು ಸ್ಥಿತಿ ಸಂಕುಚಿತಗೊಂಡಿರುವುದು ಕೂಡ ಎಫ್​ಪಿಐಗಳ ಹೊರಹರಿವಿಗೆ ಕಾರಣವಾಗಿರಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Job Opportunities: 10ನೇ ತರಗತಿ ಪಾಸಾದ ಯುವಕ/ಯುವತಿಯರಿಗೆ ಗುಡ್​ನ್ಯೂಸ್​; ಇಲ್ಲಿದೆ ಉದ್ಯೋಗವಕಾಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ನಿರುದ್ಯೋಗಿ ಯುವಕ-ಯುವತಿಯರಿಗೆ ಕರ್ನಾಟಕ ಸರ್ಕಾರ ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಒಂದು ಮಹತ್ವದ ಉದ್ಯೋಗಾವಕಾಶ ಲಭಿಸಿದೆ. ಖ್ಯಾತ ಸಂಸ್ಥೆಯಾದ “ಸ್ವಿಗ್ಗಿ ಇನ್‌ಸ್ಟಾ ಮಾರ್ಟ್” (Swiggy Insta Mart) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಮಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವವರಿಗೆ ಇದೊಂದು ಉತ್ತಮ ವೇದಿಕೆಯಾಗಿದೆ.

ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಪಿಕರ್, ಪ್ಯಾಕರ್ ಮತ್ತು ಲೋಡಿಂಗ್ ವಿಭಾಗದ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗಳಿಗೆ ಕನಿಷ್ಠ ಎಸ್‌ಎಸ್‌ಎಲ್‌ಸಿ ಅಥವಾ ಅದಕ್ಕಿಂತ ಹೆಚ್ಚಿನ ವಿದ್ಯಾಭ್ಯಾಸ ಹೊಂದಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಸಮಾನ ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳ ವಯಸ್ಸು 18 ರಿಂದ 35 ವರ್ಷದೊಳಗಿರಬೇಕು. ವಿಶೇಷವೆಂದರೆ, ಅಭ್ಯರ್ಥಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಪಾರ್ಟ್ ಟೈಮ್ ಅಥವಾ ಫುಲ್ ಟೈಮ್ ಕೆಲಸದ ಆಯ್ಕೆಯನ್ನು ಮಾಡಿಕೊಳ್ಳಬಹುದು.

ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಉದ್ಯೋಗ ಪಡೆಯುವುದು ಹೇಗೆ? ಅರ್ಹತೆ ಮತ್ತು ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ನೇರ ಸಂದರ್ಶನ ನಡೆಯುವ ಸ್ಥಳ:

ನೇರ ಸಂದರ್ಶನವು ಏಪ್ರಿಲ್ 02 ರಂದು ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ನಡೆಯಲಿದೆ. ಆಸಕ್ತರು ಮಂಗಳೂರಿನ ಪಾಂಡೇಶ್ವರದಲ್ಲಿರುವ ಪಿಜ್ಜಾ ಮಾಲ್ ಎದುರಿನ, ಅಲ್ಬುಕರ್ಕ್ ಹೌಸ್‌ನ ಆದಾಯ ತೆರಿಗೆ ಕಚೇರಿ ಕಟ್ಟಡದಲ್ಲಿರುವ “ಸ್ವಿಗ್ಗಿ ಇನ್‌ಸ್ಟಾ ಮಾರ್ಟ್” ಕಚೇರಿಗೆ ನೇರವಾಗಿ ಭೇಟಿ ನೀಡಬಹುದು. ಈ ಸಂದರ್ಶನ ಪ್ರಕ್ರಿಯೆಯು ಸಂಪೂರ್ಣವಾಗಿ ಉಚಿತವಾಗಿದ್ದು, ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸುವ ಅಗತ್ಯವಿಲ್ಲ. ಹೆಚ್ಚಿನ ಮಾಹಿತಿಗಾಗಿ 83107 71171 ಸಂಖ್ಯೆಯನ್ನು ಸಂಪರ್ಕಿಸಿ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕ್ಯಾಚ್ ಮೇಲೆ ಡೌಟ್ ಇದ್ದರೂ ಔಟ್ ನೀಡಲು ಇದುವೇ ಕಾರಣ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮೊದಲ ಪಂದ್ಯದಲ್ಲಿ ಮೂರನೇ ಅಂಪೈರ್ ನೀಡಿದ ತೀರ್ಪಿನ ಬಗ್ಗೆ ಚರ್ಚೆಗಳು ಮುಂದುವರೆದಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್​ಸಿಬಿ ವಿರುದ್ಧ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ಪರ ಹೆನ್ರಿಕ್ ಕ್ಲಾಸೆನ್ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಎಚ್ಚರಿಕೆಯ ಬ್ಯಾಟಿಂಗ್​ಗೆ ಒತ್ತು ನೀಡಿದ್ದ ಕ್ಲಾಸೆನ್ ಪಂದ್ಯದ 14ನೇ ಓವರ್​ನಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿದ್ದರು.

ರೊಮೊರಿಯೊ ಶೆಫರ್ಡ್ ಎಸೆದ 14ನೇ ಓವರ್​ನ ಮೊದಲ ಎಸೆತದಲ್ಲಿ ಲಾಂಗ್ ಆನ್​ನತ್ತ ಭರ್ಜರಿ ಹೊಡೆತ ಬಾರಿಸಿದ್ದರು. ಚೆಂಡು ಇನ್ನೇನು ಬೌಂಡರಿ ಲೈನ್ ದಾಟಲಿದೆ ಅನ್ನುವಷ್ಟರಲ್ಲಿ ಫಿಲ್ ಸಾಲ್ಟ್ ಅದ್ಭುತವಾಗಿ ಚೆಂಡನ್ನು ಹಿಡಿದರು.  ಆದರೆ, ಚೆಂಡನ್ನು ಹಿಡಿಯುವಾಗ ಸಾಲ್ಟ್​ನ ಕಾಲು ಅಥವಾ ಶರೀರ ಬೌಂಡರಿ ಕುಶನ್ (Rope) ಗೆ ತಗುಲಿರಬಹುದು ಎಂಬ ಸಂಶಯವಿತ್ತು.

ಮೂರನೇ ಅಂಪೈರ್ ತೀರ್ಪು:

ಕ್ಯಾಚ್ ಮೇಲೆ ಡೌಟ್ ಇದ್ದ ಕಾರಣ ಆನ್-ಫೀಲ್ಡ್ ಅಂಪೈರ್ ಈ ನಿರ್ಧಾರವನ್ನು ಮೂರನೇ ಅಂಪೈರ್ ರೋಹನ್ ಪಂಡಿತ್ ಅವರಿಗೆ ವಹಿಸಿದರು. ಮರುಪರಿಶೀಲನೆಯ ನಂತರ ಟಿವಿ ಅಂಪೈರ್ ಔಟ್ ಎಂದು ತೀರ್ಪು ನೀಡಿದ್ದರು. ಇತ್ತ ಕ್ಯಾಚ್ ಮೇಲೆ ಸಂಶಯಗಳಿದ್ದರೂ ಮೂರನೇ ಅಂಪೈರ್ ಔಟ್ ಎಂದು ತೀರ್ಪು ನೀಡಲು ಇದುವೇ ಮುಖ್ಯ ಕಾರಣ. ಆ ಕಾರಣಗಳೆಂದರೆ…

  • ಸ್ಪಷ್ಟ ಪುರಾವೆಯ ಕೊರತೆ: ಫಿಲ್ ಸಾಲ್ಟ್ ಬೌಂಡರಿ ಲೈನ್ ಮುಟ್ಟುತ್ತಿರುವುದು ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ಕಂಡುಬರಲಿಲ್ಲ.
  • ಕುಶನ್ ಚಲನೆ: ಕುಶನ್ ಸ್ವಲ್ಪ ಅಲುಗಾಡಿದಂತೆ ಕಂಡರೂ, ಅದು ಸಾಲ್ಟ್ ಅವರ ಸಂಪರ್ಕದಿಂದಲೇ ಆಯಿತು ಎಂದು ಸಾಬೀತುಪಡಿಸಲು ಸಾಧ್ಯವಾಗಲಿಲ್ಲ.
  • ಲಭ್ಯವಿದ್ದ ಆ್ಯಂಗಲ್​ಗಳು: ಆ ಸಮಯದಲ್ಲಿ ಕೇವಲ ಎರಡು ಕ್ಯಾಮೆರಾ ಆಂಗಲ್‌ಗಳು ಲಭ್ಯವಿದ್ದವು. ಅದರಲ್ಲಿ ಸಾಲ್ಟ್ ಅವರ ಶೂ ಬೌಂಡರಿ ಲೈನ್‌ಗೆ ತಗುಲಿರುವುದು ಖಚಿತವಾಗಿರಲಿಲ್ಲ. ಇಂತಹ ಸಂದರ್ಭಗಳಲ್ಲಿ ಮೂರನೇ ಅಂಪೈರ್​ನ ತೀರ್ಪು ನಿರ್ಣಾಯಕವಾಗಿರುತ್ತದೆ.
  • ನಿರ್ಣಾಯಕ ಪುರಾವೆ: ಮೂರನೇ ಅಂಪೈರ್ ತೀರ್ಪು ನೀಡುವಾಗ, ಫೀಲ್ಡರ್ ಬೌಂಡರಿ ಗೆರೆಯನ್ನು ಮುಟ್ಟಿದ್ದಾರೆ ಎಂಬುದು ರಿಪ್ಲೇನಲ್ಲಿ ನೂರಕ್ಕೆ ನೂರರಷ್ಟು ಸ್ಪಷ್ಟವಾಗಿ ಕಾಣಿಸಬೇಕು. ಒಂದು ವೇಳೆ ಕ್ಯಾಮೆರಾ ಆ್ಯಂಗಲ್‌ಗಳಲ್ಲಿ ಗೊಂದಲವಿದ್ದರೆ ಅಥವಾ ಸ್ಪಷ್ಟವಾಗಿ ಕಾಣಿಸದಿದ್ದರೆ, ಸಾಫ್ಟ್ ಸಿಗ್ನಲ್ ಅಥವಾ ಲಭ್ಯವಿರುವ ದೃಶ್ಯದ ಆಧಾರದ ಮೇಲೆ ಔಟ್ ನೀಡಲಾಗುತ್ತದೆ. ಅದರಂತೆ ಮೂರನೇ ಅಂಪೈರ್ ಹೆನ್ರಿಕ್ ಕ್ಲಾಸೆನ್ ಅವರನ್ನು ಔಟ್ ಎಂದು ತೀರ್ಪು ನೀಡಿದ್ದಾರೆ.

ಇತ್ತ ಮೂರನೇ ಅಂಪೈರ್​ನ ಈ ತೀರ್ಪಿನಿಂದ ಕ್ಲಾಸೆನ್ ತುಂಬಾ ಅಸಮಾಧಾನಗೊಂಡರು. ಅಲ್ಲದೆ ಮೈದಾನದಿಂದ ಹೊರಹೋಗುವಾಗ ನಾಲ್ಕನೇ ಅಂಪೈರ್ ಜೊತೆ ವಾಗ್ವಾದ ನಡೆಸಿದರು.

ಇದನ್ನೂ ಓದಿ: Virat Kohli: ಒಂದೇ ಪಂದ್ಯದಲ್ಲಿ ಚೇಸ್ ಮಾಸ್ಟರ್​ ಹೆಸರಿಗೆ 10 ದಾಖಲೆಗಳು ಸೇರ್ಪಡೆ

ಆದರೆ ಇಂತಹ ಸಂಶಯಾಸ್ಪದ ಕ್ಯಾಚ್​ಗಳ ವೇಳೆ ಮೂರನೇ ಅಂಪೈರ್ ತೀರ್ಮಾಣವೇ ಅಂತಿಮ ನಿರ್ಮಾಣವಾಗಿರುತ್ತದೆ. ಅಂದರೆ ಬೌಂಡರಿ ಲೈನ್​ಗೆ ಫೀಲ್ಡರ್​ನ ದೇಹದ ಭಾಗದ ತಾಗಿದೆ ಎಂದು ಸಾಬೀತುಪಡಿಸಲು ಸಾಧ್ಯವಾಗದೇ ಇದ್ದರೆ, ಅದನ್ನು ಕ್ಯಾಚ್ ಔಟ್ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿಯೇ ಹೆನ್ರಿಕ್ ಕ್ಲಾಸೆನ್ ಔಟ್ ಎಂದು ಮೂರನೇ ಅಂಪೈರ್ ತೀರ್ಪು ನೀಡಿದ್ದಾರೆ.

 

Source link

ಅಣ್ಣಮ್ಮ ಸಾಂಗ್​ಗೆ ಮಚ್ಚು ಹಿಡಿದು ರೌಡಿಶೀಟರ್ ಡ್ಯಾನ್ಸ್ ! ಇಬ್ಬರ ಬಂಧನ

ಬೆಂಗಳೂರು, ಮಾರ್ಚ್​ 29: ನಗರದಲ್ಲಿ ರೌಡಿಶೀಟರ್ ಮಚ್ಚು ಹಿಡಿದು ಡ್ಯಾನ್ಸ್ ಮಾಡಿದ ವೀಡಿಯೋ ವೈರಲ್ ಆದ ಹಿನ್ನೆಲೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ರಂಜಿತ್ ಅಲಿಯಾಸ್ ರಂಜು ಮತ್ತು ನಂದೀಶ್ ಬಂಧಿತರು. ಕರಗದ ವೇಳೆ ಬಳಸುವ ದೇವಿಯ ಹಾಡಿಗೆ ಎಣ್ಣೆ ಪಾರ್ಟಿಯಲ್ಲಿ ಮಚ್ಚು ಹಿಡಿದು ಸ್ಟೆಪ್ಸ್ ಹಾಕಿರುವುದು ವೀಡಿಯೋದಲ್ಲಿ ಕಂಡುಬಂದಿದೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಬ್ಯಾಟರಾಯನಪುರ ಪೊಲೀಸರು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ. ರಂಜಿತ್ ವಿರುದ್ಧ ರಾಜರಾಜೇಶ್ವರಿ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಹಲವು ಪ್ರಕರಣಗಳಿದ್ದು, ಕೊಲೆ ಪ್ರಕರಣವೂ ಸೇರಿದೆ. ಆರೋಪಿಗಳು ವೀಡಿಯೋ ಹಳೆಯದು ಎಂದು ಹೇಳಿದರೂ, ಪೊಲೀಸರು ಗಂಭೀರವಾಗಿ ಪರಿಗಣಿಸಿ ಇಬ್ಬರನ್ನೂ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

ಡಾ. ವಿಷ್ಣುವರ್ಧನ್ ರಸ್ತೆಯಲ್ಲಿ ಕಸದ ರಾಶಿ: ಅಧಿಕಾರಿಗಳ ಗಮನಕ್ಕೆ ತಂದ ಅನಿರುದ್ಧ್

ನಟ ಅನಿರುದ್ಧ್ ಜತ್ಕರ್ (Anirudh Jatkar) ಅವರು ‘ಸ್ವಚ್ಛತೆಗಾಗಿ ನಾನೂ ಸಹಭಾಗಿ’ ಎಂಬ ಅಭಿಯಾನವನ್ನು ಕಳೆದ ಐದು ವರ್ಷಗಳಿಂದ ಮಾಡುತ್ತಿದ್ದಾರೆ. ಎಲ್ಲಿಯೇ ಕಸದ ರಾಶಿ ಕಂಡರೂ ಅಧಿಕಾರಿಗಳ ಗಮನಕ್ಕೆ ತರುತ್ತಾರೆ. ಸಮಸ್ಯೆ ಪರಿಹಾರ ಆಗಬೇಕು ಎಂಬ ಉದ್ದೇಶದಿಂದ ಜನರಲ್ಲಿ ಮತ್ತು ಜನಪ್ರತಿನಿಧಿಗಳಲ್ಲಿ ಮನವಿ ಮಾಡಿಕೊಳ್ಳುತ್ತಾರೆ. ಸಿನಿಮಾ, ಸೀರಿಯಲ್ ಕೆಲಸಗಳ ನಡುವೆಯೂ ಅವರು ಈ ಸ್ವಚ್ಛತೆಯ ಅಭಿಯಾನ ನಿಲ್ಲಿಸಿಲ್ಲ. ಈಗ ಬೆಂಗಳೂರಿನ ‘ಡಾ. ವಿಷ್ಣುವರ್ಧನ್ ರಸ್ತೆ’ಯಲ್ಲಿ ಬಿದ್ದ ಕಸದ ರಾಶಿಯ ವಿಡಿಯೋವನ್ನು ಅವರು ಪೋಸ್ಟ್ ಮಾಡಿದ್ದಾರೆ. ಕಸ ಹಾಕಬಾರದು ಎಂಬ ಎಚ್ಚರಿಕೆ ಫಲದ ಎದುರಲ್ಲೇ ಜನರು ಕಸ ಸುರಿದಿರುವುದನ್ನು ಅನಿರುದ್ಧ್ ಅವರು ಟೀಕಿಸಿದ್ದಾರೆ. ಈ ವಿಡಿಯೋ ವೈರಲ್ ಆದ ಬಳಿಕ ಸಂಬಂಧಪಟ್ಟವರು ಕ್ರಮ ತೆಗೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IDBI Bank Recruitment 2026: ಆಕರ್ಷಕ ವೇತನದ ಜೊತೆಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಇಲ್ಲಿದೆ ಸುವರ್ಣಾವಕಾಶ

ಐಡಿಬಿಐ ಬ್ಯಾಂಕ್‌ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವನ್ನು ಒದಗಿಸುತ್ತಿದೆ. ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ತಜ್ಞ ಅಧಿಕಾರಿ (Specialist Officer) ಹುದ್ದೆಗಳ ಭರ್ತಿಗೆ ಬ್ಯಾಂಕ್ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಮೂಲಕ ಅವಕಾಶ ಕಲ್ಪಿಸಲಾಗಿದೆ.

ಒಟ್ಟು 33 ತಜ್ಞ ಅಧಿಕಾರಿ ಹುದ್ದೆಗಳಿಗಾಗಿ ಈ ನೇಮಕಾತಿ ನಡೆಯುತ್ತಿದ್ದು, ಇದರಲ್ಲಿ ಐಟಿ & ಎಂಐಎಸ್ ವಿಭಾಗಕ್ಕೆ 19 ಹುದ್ದೆಗಳು, ಭದ್ರತಾ ಅಧಿಕಾರಿ (ಗ್ರೇಡ್-ಡಿ) ವಿಭಾಗಕ್ಕೆ 8 ಹುದ್ದೆಗಳು, ಅಪಾಯ ನಿರ್ವಹಣೆ – ಮಾಹಿತಿ ವ್ಯವಸ್ಥೆ ವಿಭಾಗಕ್ಕೆ 4 ಹುದ್ದೆಗಳು ಹಾಗೂ ಆಡಿಟ್ – ಮಾಹಿತಿ ವ್ಯವಸ್ಥೆಗಳ (ಗ್ರೇಡ್-ಸಿ) ವಿಭಾಗಕ್ಕೆ 2 ಹುದ್ದೆಗಳನ್ನು ಮೀಸಲಿಡಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 25 ರಿಂದಲೇ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತರು ಏಪ್ರಿಲ್ 8, 2026ರ ಒಳಗೆ ಐಡಿಬಿಐ ಬ್ಯಾಂಕಿನ ಅಧಿಕೃತ ವೆಬ್‌ಸೈಟ್ idbibank.in ಗೆ ಭೇಟಿ ನೀಡಿ ತಮ್ಮ ಅರ್ಜಿಯನ್ನು ಸಲ್ಲಿಸಬೇಕಿದೆ.

ಅರ್ಹತಾ ಮಾನದಂಡಗಳ ಕುರಿತು ನೋಡುವುದಾದರೆ, ಐಟಿ ಮತ್ತು ಎಂಐಎಸ್ ಹುದ್ದೆಗಳಿಗೆ ಕಂಪ್ಯೂಟರ್ ಸೈನ್ಸ್, ಐಟಿ ಅಥವಾ ಎಲೆಕ್ಟ್ರಾನಿಕ್ಸ್‌ನಲ್ಲಿ ಪದವಿ ಪಡೆದಿರುವುದು ಕಡ್ಡಾಯವಾಗಿದ್ದು, ಸ್ನಾತಕೋತ್ತರ ಪದವೀಧರರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಅನುಭವದ ವಿಚಾರದಲ್ಲಿ, ಗ್ರೇಡ್ ಡಿ ಹುದ್ದೆಗೆ 10 ವರ್ಷ, ಗ್ರೇಡ್ ಸಿ ಗೆ 7 ವರ್ಷ ಮತ್ತು ಗ್ರೇಡ್ ಬಿ ಗೆ 4 ವರ್ಷಗಳ ವೃತ್ತಿ ಅನುಭವ ಅಗತ್ಯವಿರುತ್ತದೆ. ಇನ್ನು ಸೆಕ್ಯುರಿಟಿ ಆಫೀಸರ್ ಹುದ್ದೆಗೆ 12ನೇ ತರಗತಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆಯೊಂದಿಗೆ ಭಾರತೀಯ ಸಶಸ್ತ್ರ ಪಡೆಗಳಲ್ಲಿ ಕನಿಷ್ಠ 15 ವರ್ಷಗಳ ಕಾಲ ಜೆಸಿಒ ಆಗಿ ಸೇವೆ ಸಲ್ಲಿಸಿ ನಿವೃತ್ತರಾದವರು ಅರ್ಹರಾಗಿರುತ್ತಾರೆ. ಅಪಾಯ ನಿರ್ವಹಣೆ ಮತ್ತು ಆಡಿಟ್ ವಿಭಾಗದ ಹುದ್ದೆಗಳಿಗೆ ಸಂಬಂಧಿತ ತಾಂತ್ರಿಕ ಪದವಿ ಹಾಗೂ ನಿಗದಿಪಡಿಸಿದ ವರ್ಷಗಳ ವೃತ್ತಿ ಅನುಭವವನ್ನು ಕೇಳಲಾಗಿದೆ.

ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಉದ್ಯೋಗ ಪಡೆಯುವುದು ಹೇಗೆ? ಅರ್ಹತೆ ಮತ್ತು ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 25 ರಿಂದ 45 ವರ್ಷದೊಳಗಿರಬೇಕು. ಸರ್ಕಾರದ ನಿಯಮಾನುಸಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಅರ್ಜಿ ಶುಲ್ಕದ ವಿಚಾರವಾಗಿ, ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗದವರಿಗೆ 1050 ರೂಪಾಯಿ ನಿಗದಿಪಡಿಸಲಾಗಿದ್ದು, ಎಸ್‌ಸಿ, ಎಸ್‌ಟಿ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಕೇವಲ 250 ರೂಪಾಯಿ ಶುಲ್ಕವಿರುತ್ತದೆ. ಆಯ್ಕೆ ಪ್ರಕ್ರಿಯೆಯು ಮೊದಲು ಅಭ್ಯರ್ಥಿಗಳ ಕಿರುಪಟ್ಟಿ (Shortlisting) ತಯಾರಿಸುವುದರೊಂದಿಗೆ ಆರಂಭವಾಗುತ್ತದೆ. ನಂತರ ಗುಂಪು ಚರ್ಚೆ, ವೈಯಕ್ತಿಕ ಸಂದರ್ಶನ, ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆಗಳ ಮೂಲಕ ಅಂತಿಮ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 1,24,000 ರೂಪಾಯಿಯಿಂದ ಹಿಡಿದು 1,97,000 ರೂಪಾಯಿಯವರೆಗೆ ಆಕರ್ಷಕ ವೇತನ ದೊರೆಯಲಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Virat Kohli: ಒಂದೇ ಪಂದ್ಯದಲ್ಲಿ ಚೇಸ್ ಮಾಸ್ಟರ್​ ಹೆಸರಿಗೆ 10 ದಾಖಲೆಗಳು ಸೇರ್ಪಡೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದ ಮೂಲಕವೇ ವಿರಾಟ್ ಕೊಹ್ಲಿ ದಾಖಲೆಗಳ ಮೇಲೆ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಕೇವಲ 38 ಎಸೆತಗಳಲ್ಲಿ 69 ರನ್ ಸಿಡಿಸುವ ಮೂಲಕ. ಈ 69 ರನ್​ಗಳೊಂದಿಗೆ ಕಿಂಗ್ ಕೊಹ್ಲಿ ಬರೆದಿರುವ ದಾಖಲೆಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…

  • 4000 ರನ್​: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಚೇಸಿಂಗ್​ನಲ್ಲಿ 4000 ರನ್​ ಕಲೆಹಾಕಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಕಿಂಗ್ ಕೊಹ್ಲಿಯನ್ನು ಹೊರತುಪಡಿಸಿ ಬೇರೆ ಯಾವುದೇ ಬ್ಯಾಟರ್ ಐಪಿಎಲ್​ನಲ್ಲಿ ಚೇಸಿಂಗ್​ ವೇಳೆ 4 ಸಾವಿರ ರನ್​ಗಳ ಗಡಿ ಮುಟ್ಟಿಲ್ಲ ಎಂಬುದು ವಿಶೇಷ.
  • ಟಾಪ್ ಸ್ಕೋರರ್: ಐಪಿಎಲ್‌ ಪಂದ್ಯಗಳಲ್ಲಿ ಅತಿ ಹೆಚ್ಚು ಬಾರಿ ತಂಡದ ಪರ ಅತ್ಯಧಿಕ ರನ್ ಗಳಿಸಿದ ದಾಖಲೆ ಕೂಡ ವಿರಾಟ್ ಕೊಹ್ಲಿ ಪಾಲಾಗಿದೆ. ಈ ಹಿಂದೆ ಈ ದಾಖಲೆ ಡೇವಿಡ್ ವಾರ್ನರ್ (66) ಹೆಸರಿನಲ್ಲಿತ್ತು. ಇದೀಗ 67ನೇ ಬಾರಿ ಟಾಪ್ ಸ್ಕೋರರ್ ಆಗಿ ಹೊರಹೊಮ್ಮುವ ಮೂಲಕ ಕೊಹ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.
  • ಗೆಲುವಿನ ಸರದಾರ: ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ 50+ ಸ್ಕೋರ್​ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟ ಆಟಗಾರ ಎಂಬ ಹೆಗ್ಗಳಿಕೆಗೂ ಕೊಹ್ಲಿ ಪಾತ್ರರಾಗಿದ್ದಾರೆ. ಈ ಹಿಂದೆ ಈ ದಾಖಲೆ ಡೇವಿಡ್ ವಾರ್ನರ್ (41) ಹೆಸರಿನಲ್ಲಿತ್ತು. ಇದೀಗ ಆರ್‌ಸಿಬಿ ಗೆದ್ದ ಪಂದ್ಯಗಳಲ್ಲಿ ಕೊಹ್ಲಿ 42 ಬಾರಿ 50+ ಸ್ಕೋರ್​ಗಳಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.
  • ಅಜೇಯ ದಾಂಡಿಗ: ಐಪಿಎಲ್‌ನಲ್ಲಿ 50+ ಸ್ಕೋರ್​ಗಳಿಸಿ ಅತ್ಯಧಿಕ ಬಾರಿ ಅಜೇಯರಾಗಿ ಉಳಿದ ಬ್ಯಾಟರ್ ಎಂಬ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಈ ಹಿಂದೆ ಈ ದಾಖಲೆ ಎಬಿ ಡಿವಿಲಿಯರ್ಸ್ (23) ಹೆಸರಿನಲ್ಲಿತ್ತು. ಇದೀಗ 24ನೇ ಬಾರಿ ಅಜೇಯರಾಗಿ ಉಳಿಯುವ ಮೂಲಕ ಕೊಹ್ಲಿ ಹೊಸ ದಾಖಲೆ ಬರೆದಿದ್ದಾರೆ.
  • ಚೇಸಿಂಗ್​ನಲ್ಲಿ ಫಿಫ್ಟಿ: ಯಶಸ್ವಿ ಚೇಸಿಂಗ್ ವೇಳೆ ಅತೀ ಹೆಚ್ಚು ಬಾರಿ 50+ ಸ್ಕೋರ್​ಗಳಿಸಿದ ದಾಖಲೆ ಕೂಡ ಕಿಂಗ್ ಕೊಹ್ಲಿಯ ಹೆಸರಿಗೆ ಸೇರ್ಪಡೆಯಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಡೇವಿಡ್ ವಾರ್ನರ್ (20) ಹಾಗೂ ಶಿಖರ್ ಧವನ್ (20) ಹೆಸರಿನಲ್ಲಿತ್ತು. ಇದೀಗ 21ನೇ ಬಾರಿ ಯಶಸ್ವಿ ಚೇಸಿಂಗ್​​ನಲ್ಲಿ 50 ಕ್ಕಿಂತ ಅಧಿಕ ಸ್ಕೋರ್​ಗಳಿಸಿ ಕೊಹ್ಲಿ ಹೊಸ ಇತಿಹಾಸ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.
  • ಎಸ್‌ಆರ್‌ಹೆಚ್​ ವಿರುದ್ಧ ಅತ್ಯಧಿಕ ರನ್: ಸನ್​ರೈಸರ್ಸ್​ ಹೈದರಾಬಾದ್ ತಂಡದ ವಿರುದ್ಧ ಅತಿ ಹೆಚ್ಚು ರನ್ (874) ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೂ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ.
  • ಸಿಕ್ಸರ್ ಸರದಾರ: ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಭಾರತೀಯ ಓಪನರ್ ಎಂಬ ದಾಖಲೆ ಕೂಡ ವಿರಾಟ್ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಕೆಎಲ್ ರಾಹುಲ್ (179) ಹೆಸರಿನಲ್ಲಿತ್ತು. ಇದೀಗ 181 ಸಿಕ್ಸ್ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಸಿಕ್ಸರ್ ಸರದಾರ ಎನಿಸಿಕೊಂಡಿದ್ದಾರೆ.
  • ಅತ್ಯುತ್ತಮ ಸ್ಟ್ರೈಕ್ ರೇಟ್‌: ಐಪಿಎಲ್ ಇತಿಹಾಸದಲ್ಲಿ 150+ ಸ್ಟ್ರೈಕ್ ರೇಟ್​ನಲ್ಲಿ ಅತಿ ಹೆಚ್ಚು ಬಾರಿ ಟಾಪ್ ಸ್ಕೋರರ್ ಆಗಿ ಹೊರಹೊಮ್ಮಿದ್ದ ಬ್ಯಾಟರ್ ಎಂಬ ಹೆಗ್ಗಳಿಕೆಗೂ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಕಿಂಗ್ ಕೊಹ್ಲಿ 150 ಕ್ಕಿಂತ ಹೆಚ್ಚಿನ ಸ್ಟ್ರೈಕ್​ ರೇಟ್​ನಲ್ಲಿ 31ನೇ ಬಾರಿ 50+ ಸ್ಕೋರ್​​ ಗಳಿಸುವ ಮೂಲಕ ರೋಹಿತ್ ಶರ್ಮಾ (30) ಅವರ ದಾಖಲೆ ಮುರಿದಿದ್ದಾರೆ.

ಇದಲ್ಲದೆ ಐಪಿಎಲ್​ ಇತಿಹಾಸದಲ್ಲಿ ಒಂದೇ ತಂಡದ ಪರ 19 ಸೀಸನ್​ ಆಡಿದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಹಾಗೆಯೇ ಎಸ್​ಆರ್​ಹೆಚ್ ವಿರುದ್ಧ ಗಳಿಸಿದ 69 ರನ್​ಗಳೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಆರನೇ ಸ್ಥಾನಕ್ಕೇರಿದ್ದಾರೆ.

ಇದನ್ನೂ ಓದಿ: ಅದ್ಭುತ ಕ್ಯಾಚ್ ಅನ್ನೇ​ ಮರೆತ ಡಿಕೆ: ‘ನಾಚಿಕೆಗೇಡು’ ಎಂದ ಫಿಲ್ ಸಾಲ್ಟ್

ಸದ್ಯ 13,612  ರನ್​ಗಳೊಂದಿಗೆ ಆರನೇ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ 951 ರನ್​ಗಳಿಸಿದರೆ ಕ್ರಿಸ್ ಗೇಲ್​ ( 14562) ವಿಶ್ವ ದಾಖಲೆ ಮುರಿದು ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಅತ್ಯಧಿಕ ರನ್​ಗಳಿಸಿದ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.

Source link

ಬಾಗಲಕೋಟೆ ಉಪಚುನಾವಣೆ: BJP ಅಭ್ಯರ್ಥಿ ಸಹೋದರನಿಂದ ಕಾಂಗ್ರೆಸ್​​ ಪರ ಮತಯಾಚನೆ!

ಬಾಗಲಕೋಟೆ, ಮಾರ್ಚ್​​ 29: ಉಪಚುನಾವಣಾ ಕಣ ರಂಗೇರಿದ್ದು, ಎಲ್ಲಾ ಅಭ್ಯರ್ಥಿಗಳು ಹಾಗೂ ಬೆಂಬಲಿಗರು ಮನೆ ಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಸಹೋದರ ಮಲ್ಲಿಕಾರ್ಜುನ ಚರಂತಿಮಠ ಅವರು ತಮ್ಮ ಸಹೋದರನ ವಿರುದ್ಧವಾಗಿ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸುತ್ತಿರುವುದು ವಿಶೇಷವಾಗಿದೆ. ಮಲ್ಲಿಕಾರ್ಜುನ ಚರಂತಿಮಠ ಅವರು ತಮ್ಮ ಪ್ರಚಾರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ತಿಳಿಸಿದ್ದಾರೆ. ಉಮೇಶ್ ಮೇಟಿ ಅವರಿಗೆ ಅವರ ತಂದೆಯವರ ಅಕಾಲಿಕ ಮರಣದಿಂದಾಗಿ ಒಂದು ಸಹಾನುಭೂತಿಯ ಅಲೆ ಇದೆ. ಜನ ಅವರಿಗೆ ಮತ ಹಾಕಲು ನಿರ್ಧರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಮುಖ್ಯಮಂತ್ರಿಗಳು ಐದು ದಿನಗಳ ಕಾಲ ಬಾಗಲಕೋಟೆಯಲ್ಲಿ ಪ್ರಚಾರ ನಡೆಸಲು ಬರುತ್ತಿದ್ದು, ಇದು ಪಕ್ಷಕ್ಕೆ ಮತ್ತಷ್ಟು ಬಲ ತರಲಿದೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Tamil Nadu Elections: ತಮಿಳುನಾಡು ಚುನಾವಣೆ: ಟಿವಿಕೆ ಮತ್ತು ಡಿಎಂಕೆ ನಡುವೆ ನೇರ ಹಣಾಹಣಿ, ಎರಡು ಕ್ಷೇತ್ರಗಳಲ್ಲಿ ದಳಪತಿ ವಿಜಯ್ ಸ್ಪರ್ಧೆ

ಚೆನ್ನೈ, ಮಾರ್ಚ್​ 29: ತಮಿಳುನಾಡು ಚುನಾವಣೆ(Tamil Nadu Election)ಗೆ ದಿನಗಣನೆ ಆರಂಭವಾಗಿದೆ. ಏಪ್ರಿಲ್ 23ರಂದು ನಡೆಯಲಿರುವ ಚುನಾವಣೆಯಲ್ಲಿ ನಟ-ರಾಜಕಾರಣಿ ಮತ್ತು ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ದಳಪತಿ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಜತೆಗೆ ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದ್ದಾರೆ.

ಸಿ ಜೋಸೆಫ್ ವಿಜಯ್ ಅವರು ಚೆನ್ನೈನ ಪೆರಂಬೂರು ಮತ್ತು ತಿರುಚಿರಾಪಳ್ಳಿ ಪೂರ್ವದಿಂದ ಸ್ಪರ್ಧಿಸಲಿದ್ದಾರೆ, ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಿಗೂ ಏಪ್ರಿಲ್ 23 ರಂದು ಮತದಾನ ನಡೆಯಲಿದೆ. ಟಿ ನಗರದಿಂದ ಎನ್ ಆನಂದ್, ಮೈಲಾಪುರದಿಂದ ವೆಂಕಟ್ ರಾಮನ್, ವಿಲ್ಲಿವಕ್ಕಂನಿಂದ ಆಧವ್ ಅರ್ಜುನ, ಗೋಬಿಚೆಟ್ಟಿಪಾಳ್ಯಂನಿಂದ ಕೆಎ ಸೆಂಗ್ಕೊಟ್ಟೈಯನ್, ತಿರುಚೆಂಗೋಡ್ನಿಂದ ಕೆ ಜಿ ಅರುಣ್ರಾಜ್ ಮತ್ತು ತಿರುಪ್ಪರಂಕುಂದ್ರಂನಿಂದ ಸಿಟಿಆರ್ ನಿರ್ಮಲ್ ಕುಮಾರ್ ಈ ಪಟ್ಟಿಯಲ್ಲಿದ್ದಾರೆ.

ಥೌಸಂಡ್ ಲೈಟ್ಸ್‌ನಿಂದ ಜೆಸಿಡಿ ಪ್ರಭಾಕರ್, ಕೊಳತ್ತೂರಿನಿಂದ ವಿಎಸ್ ಬಾಬು ಮತ್ತು ಆರ್‌ಕೆ ನಗರದ ಡಾ. ಮಾರಿಯಾ ವಿಲ್ಸನ್ ಅವರುಗಳು ಹೆಸರಿಸಲಾದ ಇತರ ಅಭ್ಯರ್ಥಿಗಳಾಗಿದ್ದಾರೆ. ನಿಮ್ಮ ಪ್ರಶ್ನೆಗಳಿಗೆ ಉತ್ತರಿಸುವವರನ್ನು ನಾನು ಆಯ್ಕೆ ಮಾಡಿದ್ದೇನೆ ಎಂದು ಹೇಳಿದ್ದು, ಒಂದು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದ್ದಾರೆ. ಸ್ಪರ್ಧೆಯನ್ನು ನೇರ ಹೋರಾಟ ಎಂದು ಹೇಳುತ್ತಾ, ಇದು ನಮ್ಮ ಮತ್ತು ಸ್ಟಾಲಿನ್ ಸರ್ ಮೈತ್ರಿಕೂಟದ ನಡುವೆ ಮಾತ್ರ ಎಂದು ವಿಜಯ್ ಹೇಳಿದರು.

ಉದ್ಯೋಗ ಪಡೆಯಲು ಸಾಧ್ಯವಾಗದ 29 ವರ್ಷಕ್ಕಿಂತ ಮೇಲ್ಪಟ್ಟವರಿಗೆ ತಿಂಗಳಿಗೆ 4,000 ರೂ. ಮತ್ತು ಡಿಪ್ಲೊಮಾ ಹೊಂದಿರುವವರಿಗೆ 2,500 ರೂ. ನೀಡುವುದಾಗಿ ಪಕ್ಷ ಭರವಸೆ ನೀಡಿತು. 12 ನೇ ತರಗತಿಯಿಂದ ಪಿಎಚ್‌ಡಿ ಹಂತದವರೆಗೆ 20 ಲಕ್ಷ ರೂ.ಗಳವರೆಗೆ ಮೇಲಾಧಾರ ರಹಿತ ಸಾಲ ಖಾತರಿಗಳನ್ನು ಸಹ ಇದು ಪ್ರಸ್ತಾಪಿಸಿದೆ.

ಮತ್ತಷ್ಟು ಓದಿ: Video: ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ, ಟಿವಿಕೆಗೆ ಪೂರ್ಣ ಬಹಮತ ಸಿಗಲಿದೆ: ವಿಜಯ್

ನಾವು ಎಂದಿಗೂ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಳ್ಳುವುದಿಲ್ಲ ಅಥವಾ ಭ್ರಷ್ಟಾಚಾರದಲ್ಲಿ ತೊಡಗುವುದಿಲ್ಲ. ನಾವು ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸುತ್ತೇವೆ, ಮಾದಕವಸ್ತು ಮುಕ್ತ ತಮಿಳುನಾಡನ್ನು ಸೃಷ್ಟಿಸುತ್ತೇವೆ ಮತ್ತು ಕಠಿಣ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುತ್ತೇವೆ ಎಂದು ಭರವಸೆ ನೀಡಿದರು. ನಾನು ನಿಮಗೆ ಭರವಸೆ ನೀಡುತ್ತೇನೆ, ನಾವು ಎಂದಿಗೂ ಜನರ ಹಿತಾಸಕ್ತಿಗಳಿಗೆ ವಿರುದ್ಧವಾಗಿ ವರ್ತಿಸುವುದಿಲ್ಲ. ಇದು ನನ್ನ ಭರವಸೆ. ನಮಗೆ ಒಂದು ಅವಕಾಶ ಕೊಟ್ಟು ನೋಡಿ ಎಂದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

‘ಧುರಂಧರ್ 2’ ಆರ್ಭಟಕ್ಕೆ ಬೆದರಿದ ‘ಭೂತ್ ಬಂಗ್ಲ’: ಅಕ್ಷಯ್ ಕುಮಾರ್ ಚಿತ್ರದ ಬಿಡುಗಡೆ ಮುಂದೂಡಿಕೆ

ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ಮತ್ತು ಖ್ಯಾತ ನಿರ್ದೇಶಕ ಪ್ರಿಯದರ್ಶನ್ ಕಾಂಬಿನೇಶನ್‌ನ ಬಹುನಿರೀಕ್ಷಿತ ಹಾರರ್-ಕಾಮಿಡಿ ಚಿತ್ರ ‘ಭೂತ್ ಬಂಗ್ಲ’ (Bhooth Bangla) ಬಿಡುಗಡೆ ದಿನಾಂಕದಲ್ಲಿ ಮಹತ್ವದ ಬದಲಾವಣೆಯಾಗಿದೆ. ಈ ಹಿಂದೆ ಘೋಷಿಸಿದಂತೆ ಏಪ್ರಿಲ್ 10ರಂದು ತೆರೆಗೆ ಬರಬೇಕಿದ್ದ ಈ ಚಿತ್ರ, ಈಗ ಏಪ್ರಿಲ್ 17ಕ್ಕೆ ಮುಂದೂಡಲ್ಪಟ್ಟಿದೆ ಎಂಬ ಮಾಹಿತಿ ಕೇಳಿಬಂದಿದೆ. ಅಂದಹಾಗೆ, ಈ ಬದಲಾವಣೆಗೆ ಕಾರಣ ಆಗಿರುವುದು ‘ಧುರಂಧರ್ 2’ (Dhurandhar 2) ಸಿನಿಮಾದ ಅಬ್ಬರ. ಈ ಸಿನಿಮಾದ ಆರ್ಭಟಕ್ಕೆ ಅಕ್ಷಯ್ ಕುಮಾರ್ ಅವರಂತಹ ಸ್ಟಾರ್ ಹೀರೋ ಕೂಡ ಸೈಲೆಂಟ್ ಆಗಬೇಕಾಗಿದೆ.

ಬಾಕ್ಸ್ ಆಫೀಸ್‌ನಲ್ಲಿ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಸಿನಿಮಾ ಸುನಾಮಿ ಎಬ್ಬಿಸಿದೆ. ಚಿತ್ರಮಂದಿರಗಳಲ್ಲಿ ಬಹುತೇಕ ಸ್ಕ್ರೀನ್‌ಗಳನ್ನು ಈ ಚಿತ್ರವೇ ಆಕ್ರಮಿಸಿಕೊಂಡಿದೆ. ಆದ್ದರಿಂದ, ಹೊಸ ಸಿನಿಮಾಗಳಿಗೆ ಜಾಗ ಸಿಗುವುದು ಕಷ್ಟವಾಗಿದೆ. ಹಾಲಿವುಡ್ ಸ್ಟಾರ್ ಹೀರೋ ರಿಯಾನ್ ಗೋಸ್ಲಿಂಗ್ ಅವರ ‘ಪ್ರಾಜೆಕ್ಟ್ ಹೇಲ್ ಮೇರಿ’ ಚಿತ್ರ ಕೂಡ ಈ ಕಾರಣದಿಂದ ಪ್ರದರ್ಶನ ಕಾಣಲು ಪರದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಯಾವುದೇ ರಿಸ್ಕ್ ತೆಗೆದುಕೊಳ್ಳಲು ಇಷ್ಟಪಡದ ‘ಭೂತ್ ಬಂಗ್ಲ’ ತಂಡ, ಬಿಡುಗಡೆಯನ್ನು ಒಂದು ವಾರ ಮುಂದಕ್ಕೆ ಹಾಕಿದೆ.

ಇದು ಅತ್ಯಂತ ಬುದ್ಧಿವಂತಿಕೆಯ ನಿರ್ಧಾರ ಎಂಬ ಅಭಿಪ್ರಾಯ ಕೇಳಿಬಂದಿದೆ. ದೊಡ್ಡ ಚಿತ್ರಗಳ ನಡುವೆ ಪೈಪೋಟಿಗಿಂತ ಲಾಭ ಮುಖ್ಯ. ಈ ಹಿಂದೆ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರ ಕೂಡ ‘ಧುರಂಧರ್ 2’ ಜೊತೆಗಿನ ಸಂಘರ್ಷವನ್ನು ತಪ್ಪಿಸಿತ್ತು. ಈಗ ‘ಭೂತ್ ಬಂಗ್ಲ’ ಮುಂದಕ್ಕೆ ಹೋಗುತ್ತಿರುವುದಕ್ಕೆ ಈ ಸಿನಿಮಾದ ನಿರ್ಮಾಪಕರು ಕೂಡ ಸಮ್ಮತಿಸಿದ್ದಾರೆ ಎಂದು ವರದಿ ಆಗಿದೆ.

ವಿಶೇಷವೆಂದರೆ, ಏಪ್ರಿಲ್ 17ರಂದು ಈ ಹಿಂದೆ ಸಲ್ಮಾನ್ ಖಾನ್ ಅಭಿನಯದ ‘ಮಾತೃಭೂಮಿ’ ಚಿತ್ರ ಬಿಡುಗಡೆ ಆಗಬೇಕಿತ್ತು. ಆದರೆ ಆ ಚಿತ್ರದ ಕೆಲಸಗಳು ವಿಳಂಬವಾಗಿ ಮುಂದೂಡಲ್ಪಟ್ಟಿದೆ. ಈಗ ಆ ದಿನಾಂಕವನ್ನು ‘ಭೂತ್ ಬಂಗ್ಲಾ’ ಆಕ್ರಮಸಿಕೊಳ್ಳುತ್ತಿದೆ. ಸದ್ಯಕ್ಕಂತೂ ಎಲ್ಲ ಚಿತ್ರಮಂದಿರಗಳಲ್ಲಿ ‘ಧುರಂಧರ್ 2’ ಸಿನಿಮಾದ ಹವಾ ಜೋರಾಗಿದೆ. ಹಾಗಾಗಿ ಹೊಸ ಸಿನಿಮಾಗಳ ಬಿಡುಗಡೆಗೆ ಹಿಂದೇಟು ಹಾಕುವಂತಾಗಿದೆ.

ಇದನ್ನೂ ಓದಿ: ‘ಧುರಂಧರ್ 2’ ಅಬ್ಬರ: ಭಾರತದಲ್ಲಿ 10 ದಿನಕ್ಕೆ 700 ಕೋಟಿ ರೂಪಾಯಿ ದಾಟಿದ ಕಲೆಕ್ಷನ್

‘ಭೂತ್ ಬಂಗ್ಲ’ ಸಿನಿಮಾದ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟಿದ್ದರಿಂದ ಟ್ರೇಲರ್ ಬಿಡುಗಡೆಯಲ್ಲೂ ಬದಲಾವಣೆಯಾಗಿದೆ. ಈ ಮೊದಲು ಮಾರ್ಚ್ 30ರಂದು ಟ್ರೇಲರ್ ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಲಾಗಿತ್ತು. ಅದರ ಬದಲು ಏಪ್ರಿಲ್ ಮೊದಲ ವಾರದಲ್ಲಿ ಟ್ರೇಲರ್ ಬಿಡುಗಡೆ ಮಾಡಲು ಚಿತ್ರತಂಡ ಆಲೋಚಿಸಿದೆ ಎನ್ನಲಾಗಿದೆ. ಈಗಾಗಲೇ ಟೀಸರ್ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link