ಬೆಂಗಳೂರಿನಲ್ಲಿ ಮಂತ್ರಿ ಬಿಲ್ಡರ್ಸ್ ಮೇಲೆ ಇಡಿ ದಾಳಿ: ಮತ್ತೆ ಶಾಕ್ ಕೊಟ್ಟ ದೆಹಲಿ ಅಧಿಕಾರಿಗಳು
ಬೆಂಗಳೂರು, ಏಪ್ರಿಲ್ 02: ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಗಳಲ್ಲಿ ಒಂದಾದ ಮಂತ್ರಿ ಡೆವಲಪರ್ಸ್ ಮತ್ತು ಬಿಲ್ಡರ್ಸ್ಗೆ (Mantri Developers and Builders) ಸೇರಿದ 8 ಕಡೆಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ದಾಳಿ ಮಾಡಿದ್ದಾರೆ. ದೆಹಲಿಯಿಂದ ಆಗಮಿಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿವಿಧ ಸ್ಥಳಗಳಲ್ಲಿ ಬೆಳಗ್ಗೆಯಿಂದ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದಾಳಿಗೆ ಕಾರಣವೇನು? ಅಕ್ರಮ ಹಣ ವರ್ಗಾವಣೆ ಮತ್ತು ದೆಹಲಿಯಲ್ಲಿ ಫ್ಲ್ಯಾಟ್ ಕೊಡುವುದಾಗಿ ಸಾರ್ವಜನಿಕರಿಂದ ಹಣ ಪಡೆದು ಫ್ಲ್ಯಾಟ್ ನೀಡದೆ ವಂಚಿಸಿರುವ ಆರೋಪ ಕೇಳಿಬಂದಿದೆ. ಮಂತ್ರಿ ಡೆವಲಪರ್ಸ್…