All posts by nagaraj11081993

IPL 2026: ಲೀಗ್ ಹಂತದಲ್ಲಿ ಆರ್​ಸಿಬಿ ಯಾವ ದಿನ ಯಾರ ವಿರುದ್ಧ ಆಡಲಿದೆ? ಇಲ್ಲಿದೆ ವಿವರ

IPL 2026: ಲೀಗ್ ಹಂತದಲ್ಲಿ ಆರ್​ಸಿಬಿ ಯಾವ ದಿನ ಯಾರ ವಿರುದ್ಧ ಆಡಲಿದೆ? ಇಲ್ಲಿದೆ ವಿವರ

19ನೇ ಆವೃತ್ತಿಯ ಐಪಿಎಲ್​ನ (IPL 2026) ಸಂಪೂರ್ಣ ವೇಳಾಪಟ್ಟಿಯನ್ನು ಬಿಸಿಸಿಐ (BCCI) ಇಂದು ಪ್ರಕಟಿಸಿದೆ. ಅದರಂತೆ ಲೀಗ್​ನ ಮೊದಲ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್‌ (RCB vs SRH) ನಡುವೆ ನಡೆಯಲಿದೆ. ಈ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸಲಿದೆ. ಮಾರ್ಚ್​ 28 ರಂದು ನಡೆಯುವ ಈ ಪಂದ್ಯಕ್ಕೆ ಉಭಯ ತಂಡಗಳು ಸಿದ್ಧವಾಗಿವೆ. ಲೀಗ್ ಹಂತದಲ್ಲಿ ಒಟ್ಟು 70 ಪಂದ್ಯಗಳು ನಡೆಯಲಿವೆ. ಈ 70 ಪಂದ್ಯಗಳಲ್ಲಿ ಆರ್​ಸಿಬಿ ಒಟ್ಟು 14 ಪಂದ್ಯಗಳನ್ನು ಆಡಲಿದೆ. ಈ 14 ಪಂದ್ಯಗಳಲ್ಲಿ 7 ಪಂದ್ಯಗಳು ಆರ್​ಸಿಬಿಯ ತವರು ಮೈದಾನದಲ್ಲಿ ನಡೆದರೆ, ಉಳಿದ 7 ಪಂದ್ಯಗಳು ಎದುರಾಳಿ ತಂಡದ ತವರು ಮೈದಾನದಲ್ಲಿ ನಡೆಯಲಿವೆ.

ಈ ಆವೃತ್ತಿಯಲ್ಲಿ ಆರ್​ಸಿಬಿ ಎರಡು ತವರು ತಂಡಗಳನ್ನು ಘೋಷಿಸಿಕೊಂಡಿದೆ. ಅದರಂತೆ ಆರ್​ಸಿಬಿ, 5 ಪಂದ್ಯಗಳನ್ನು ತನ್ನ ಅಧಿಕೃತ ತವರು ಮೈದಾನವಾದ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲಿದೆ. ಉಳಿದ ಎರಡು ಪಂದ್ಯಗಳನ್ನು ಹೊಸ ತವರು ಮೈದಾನ ಎನಿಸಿಕೊಂಡಿರುವ ರಾಯ್​ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆಡಲಿದೆ.

ಯಾವ ತಂಡದ ವಿರುದ್ಧ ಎಷ್ಟು ಪಂದ್ಯಗಳನ್ನಾಡಲಿದೆ?

ಉಳಿದಂತೆ ಈ 14 ಲೀಗ್ ಪಂದ್ಯಗಳಲ್ಲಿ ಆರ್​ಸಿಬಿ ಕೆಲವು ತಂಡಗಳ ವಿರುದ್ಧ 2 ಪಂದ್ಯಗಳನ್ನು ಆಡಿದರೆ, ಇನ್ನು ಕೆಲವು ತಂಡಗಳ ವಿರುದ್ಧ ಕೇವಲ 1 ಪಂದ್ಯವನ್ನು ಆಡಲಿದೆ. ಅದರಂತೆ ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಟೈಟಾನ್ಸ್, ಮುಂಬೈ ಇಂಡಿಯನ್ಸ್, ಸನ್‌ರೈಸರ್ಸ್ ಹೈದರಾಬಾದ್‌, ಲಕ್ನೋ ಸೂಪರ್‌ಜೈಂಟ್ಸ್ ವಿರುದ್ಧ ಆರ್​ಸಿಬಿ ತಲಾ 2 ಪಂದ್ಯಗಳನ್ನು ಆಡಲಿದೆ. ಉಳಿದಂತೆ ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್​ ವಿರುದ್ಧ ತಲಾ ಒಂದು ಪಂದ್ಯವನ್ನು ಆಡಲಿದೆ.

IPL 2026: 12 ಸ್ಥಳ, 50 ಪಂದ್ಯಗಳು; ಐಪಿಎಲ್​ನ ಎರಡನೇ ಹಂತದ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

ಆರ್​ಸಿಬಿ ಲೀಗ್ ಹಂತದ ವೇಳಾಪಟ್ಟಿ

1. ಮಾರ್ಚ್ 28 (ಶನಿವಾರ): ಸನ್‌ರೈಸರ್ಸ್ ಹೈದರಾಬಾದ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಸಂಜೆ 7:30)

2. ಏಪ್ರಿಲ್ 05 (ಭಾನುವಾರ): ಚೆನ್ನೈ ಸೂಪರ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಸಂಜೆ 7:30)

3. ಏಪ್ರಿಲ್ 10 (ಶುಕ್ರವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ ರಾಯಲ್ಸ್ – ಗುವಾಹಟಿ (ಸಂಜೆ 7:30)

4. ಏಪ್ರಿಲ್ 12 (ಭಾನುವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ – ಮುಂಬೈ (ಸಂಜೆ 7:30)

5. ಏಪ್ರಿಲ್ 15 (ಬುಧವಾರ): ಲಕ್ನೋ ಸೂಪರ್‌ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಸಂಜೆ 7:30)

6. ಏಪ್ರಿಲ್ 18 (ಶನಿವಾರ): ಡೆಲ್ಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಮಧ್ಯಾಹ್ನ 3:30)

7. ಏಪ್ರಿಲ್ 24 (ಶುಕ್ರವಾರ): ಗುಜರಾತ್ ಟೈಟಾನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಸಂಜೆ 7:30)

8. ಏಪ್ರಿಲ್ 27 (ಸೋಮವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ದೆಹಲಿ ಕ್ಯಾಪಿಟಲ್ಸ್ – ದೆಹಲಿ (ಸಂಜೆ 7:30)

9. ಏಪ್ರಿಲ್ 30 (ಗುರುವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಸಂಜೆ 7:30)

10. ಮೇ 07 (ಗುರುವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಲಕ್ನೋ ಸೂಪರ್‌ಜೈಂಟ್ಸ್ – ಲಕ್ನೋ (ಸಂಜೆ 7:30)

11. ಮೇ 10 (ಭಾನುವಾರ): ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ರಾಯ್ಪುರ (ಸಂಜೆ 7:30)

12. ಮೇ 13 (ಬುಧವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ರಾಯ್ಪುರ (ಸಂಜೆ 7:30)

13. ಮೇ 17 (ಭಾನುವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ – ಧರ್ಮಶಾಲಾ (ಮಧ್ಯಾಹ್ನ 3:30)

14. ಮೇ 22 (ಶುಕ್ರವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಸನ್ ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಸಂಜೆ 7:30)

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

2027ರ ಜನಗಣತಿ: ಏ 1ರಿಂದ ಕರ್ನಾಟಕದಲ್ಲಿ ಮೊದಲ ಹಂತ ಶುರು, ಸಾರ್ವಜನಿಕರು ಭಾಗಿಯಾಗೋದು ಹೇಗೆ?

ಬೆಂಗಳೂರು, ಮಾರ್ಚ್​ 26: ದೇಶದಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್​ ರೂಪದಲ್ಲಿ ಜನಗಣತಿ ನಡೆಯಲಿದೆ. ಅದರಂತಯೇ ಕರ್ನಾಟಕದಲ್ಲಿ 2027ರ ಜನಗಣತಿಯ (Self-Enumeration) ಮೊದಲ ಹಂತವಾದ ಮನೆಗಳ ಪಟ್ಟಿ ಮತ್ತು ಮನೆ ಗಣತಿಯ ಸ್ವಯಂ ಗಣತಿಯನ್ನು ಏಪ್ರಿಲ್​​ 1ರಿಂದ 15ರವರೆಗೆ ಅಂದರೆ 15 ದಿನ ನಡೆಸಲು ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಆದೇಶದಲ್ಲಿ ಏನಿದೆ? 

2027ರ ಭಾರತದ ಜನಗಣತಿಯ ಮೊದಲ ಹಂತವಾದ ಮನೆಗಳ ಪಟ್ಟಿ ಮತ್ತು ಮನೆ ಗಣತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಸ್ವಯಂ-ಗಣತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲರ ಭಾಗವಹಿಸುವಿಕೆಯನ್ನು ಸುಗಮಗೊಳಿಸಲು ಭಾರತ ಸರ್ಕಾರವು se.census.gov.in ಎಂಬ ವೆಬ್ ಪೋರ್ಟಲ್​ನ್ನು ಅಭಿವೃದ್ಧಿ ಪಡಿಸಿದೆ.

ಇದನ್ನೂ ಓದಿ: ಜಾತಿ ಗಣತಿ: ಮನೆ ಮನೆ ಸರ್ವೇ ಅಂತ್ಯ, ಒಟ್ಟು 6.13 ಕೋಟಿ ಜನರ ಸಮೀಕ್ಷೆ

ಪ್ರಚುರ ಪಡಿಸಲಾದ ಬಳಕೆದಾರರ ಮಾರ್ಗದರ್ಶಿಯ ಬಗ್ಗೆ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ಸರ್ಕಾರದ ಅಧೀನಕ್ಕೆ ಒಳಪಡುವ ಎಲ್ಲಾ ನಿಗಮ, ಮಂಡಳಿ ಇತ್ಯಾದಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಸೇರಿದಂತೆ ನಾಗರಿಕರು, ಗಣತಿದಾರರಿಗೆ ಅರಿವು ಮೂಡಿಸುವಂತೆ ನಾಗರಿಕರು, ಉದ್ಯೋಗಿಗಳು, ಗಣತಿದಾರರಿಗೆ ಅರಿವು ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಏಪ್ರಿಲ್​ 1ರಿಂದ 15ರವರೆಗೆ ಒಟ್ಟು 15 ದಿನಗಳ ಕಾಲ ಕರ್ನಾಟಕದ ರಾಜ್ಯದಲ್ಲಿ ನಡೆಯಲಿರುವ ಮನೆಗಳ ಪಟ್ಟಿ ಮತ್ತು ಮನೆ ಗಣತಿಯ ಸ್ವಯಂ-ಗಣತಿಯನ್ನು ಯಶಸ್ವಿಗೊಳಿಸಲು ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ.

ಸ್ವಯಂ ಗಣತಿ ಮಾಡುವುದು ಹೇಗೆ?

ಕೇಂದ್ರ ಗೃಹ ಸಚಿವಾಲಯ 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲು ಉದ್ದೇಶಿಸಿದೆ. ಮೊದಲ ಹಂತವಾದ ಮನೆಗಳ ಪಟ್ಟಿ ಮತ್ತು ಮನೆ ಗಣತಿಯಲ್ಲಿ ಮೊದಲ 15 ದಿನ se.census.gov.in ವೆಬ್​ ಸೈಟ್​ ಮೂಲಕ ಸ್ವಯಂ-ಗಣತಿಗೆ ಅವಕಾಶವಿರುತ್ತದೆ.

ಇದನ್ನೂ ಓದಿ: ಅ. 31ರವರೆಗೆ ಜಾತಿ ಗಣತಿ ಅವಧಿ ವಿಸ್ತರಣೆ: ಸಮೀಕ್ಷೆ ಕಾರ್ಯದಿಂದ ಶಿಕ್ಷಕರ ಕೈಬಿಟ್ಟ ಸರ್ಕಾರ

ಅದರಂತೆ ಮನೆಯ ಯಾವುದೇ ಒಬ್ಬ ಸದಸ್ಯರು ಸುಮಾರು 15 ರಿಂದ 20 ನಿಮಿಷಗಳ ಅವಧಿಯಲ್ಲಿ ಸ್ವಯಂ-ಗಣತಿ ಮಾಡಿ ಮನೆಯ ವಿವರಗಳನ್ನು ಒದಗಿಸಬಹುದು ಮತ್ತು ಮೊಬೈಲ್, ಇಮೇಲ್‌ನಲ್ಲಿ ಸ್ವಯಂ-ಗಣತಿ ಐಡಿ ಪಡೆಯಬಹುದಾಗಿದೆ. ಗಣತಿದಾರರು ಮನೆಗೆ ಭೇಟಿ ನೀಡಿದಾಗ, ದೃಢೀಕರಿಸಲು ಮತ್ತು ಸ್ವಯಂ ಗಣತಿ ದಂತ್ತಾಂಶದ ಅಂತಿಮ ಸಲ್ಲಿಕೆಗಾಗಿ ಗಣತಿ ಐಡಿಯನ್ನು ಅವರೊಂದಿಗೆ ಹಂಚಿಕೊಳ್ಳಬೇಕು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ರಿಲೀಸ್ ಆಗಲಿಲ್ಲ: ಅಸಲಿ ಕಾರಣ ತಿಳಿಸಿದ ಪ್ರಥಮ್

ದರ್ಶನ್ (Darshan) ನಟನೆಯ ‘ಡೆವಿಲ್’ ಸಿನಿಮಾದ ಎದುರೇ ತಮ್ಮ ‘ಕರ್ನಾಟಕದ ಅಳಿಯ’ ಚಿತ್ರವನ್ನು ರಿಲೀಸ್ ಮಾಡುವುದಾಗಿ ಪ್ರಥಮ್ ಅವರು ಈ ಮೊದಲು ಸವಾಲು ಹಾಕಿದ್ದರು. ಆದರೆ ಆ ಸಿನಿಮಾ ರಿಲೀಸ್ ಆಗಲೇ ಇಲ್ಲ. ಯಾಕೆ ಎಂಬ ಪ್ರಶ್ನೆ ಇದೆ. ಅದಕ್ಕೆ ಪ್ರಥಮ್ ಅವರು ಉತ್ತರ ನೀಡಿದ್ದಾರೆ. ನಿಜವಾಗಿ ನಡೆದಿದ್ದು ಏನು ಎಂಬುದನ್ನು ಅವರು ವಿವರಿಸಿದ್ದಾರೆ. ‘ನೇರವಾಗಿ ಹೇಳುತ್ತೇನೆ, ಬಿಸ್ನೆಸ್ ಇನ್ನೂ ಆಗಿಲ್ಲ. ಚಿತ್ರೀಕರಣ ಆಗಿತ್ತು. ಕ್ಯಾಮೆರಾಮ್ಯಾನ್ ಮೆಮೋರಿ ಕಾರ್ಡ್ ಹಾಳು ಮಾಡಿದ್ದಾನೆ. ಬೇರೆಯವರಾಗಿದ್ದರೆ ದೊಡ್ಡ ಕಾಂಟ್ರವರ್ಸಿ ಆಗಿರುತ್ತಿತ್ತು. ರಮೇಶ್ ಭಟ್ ಅವರು ಸಮಾಧಾನದಿಂದ ಮಾತನಾಡಿದರು. ಹೊಸದಾಗಿ ಚಿತ್ರೀಕರಣ ಮಾಡಲಾಯಿತು. ಈ ಎಲ್ಲ ಕಾರಣಕ್ಕಾಗಿ ಕರ್ನಾಟಕದ ಅಳಿಯ ಸಿನಿಮಾ ಬಿಡುಗಡೆ ಆಗುವುದು ತಡವಾಯಿತು’ ಎಂದು ಪ್ರಥಮ್ (Pratham) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ

ಹಾವೇರಿ, (ಮಾರ್ಚ್ 26): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (Davanagere South By Election) ಕಾವು ದಿನದಿಂದ ದಿನಕ್ಕೆ ಕಾವೇರುತ್ತಿದೆ. ಇದರ ಮಧ್ಯೆ ಕಾಂಗ್ರೆಸ್​​ಗೆ (Congress) ಮುಸ್ಲಿಂ ಸಮುದಾಯದ ಮತಗಳು ಕೈತಪ್ಪುವ ಭಯ ಶುರುವಾಗಿದೆ. ಯಾಕಂದ್ರೆ, ಟಿಕೆಟ್ ಕೈತಪ್ಪಿದ್ದರಿಂದ ಮುಸ್ಲಿಂ ನಾಯಕರು ಬಂಡಾಯ ಎದ್ದಿದ್ದು, ಇದು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್​​​ಗೆ ಆತಂಕಕ್ಕೆ ಕಾರಣವಾಗಿದೆ. ಇದರ ಮಧ್ಯೆ ಮತ್ತೊಂದೆಡೆ ಶ್ರೀಶೈಲ ಜಗದ್ಗುರು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್​​ ಗೆ ಬೆಂಬಲಿಸುವಂತೆ ಭಕ್ತರಿಗೆ ಕರೆ ಕೊಟ್ಟಿದ್ದಾರೆ. ಇದರಿಂದ ಕಾಂಗ್ರೆಸ್​​ಗೆ ಆನೆಬಲ ಬಂದಂತಾಗಿದೆ.

ಹಾವೇರಿಯ ರಾಣೇಬೆನ್ನೂರು ತಾಲೂಕಿನ ಲಿಂಗದಳ್ಳಿ ಗ್ರಾಮದಲ್ಲಿ ಮಾತನಾಡಿರುವ ಶ್ರೀಶೈಲ ಜಗದ್ಗುರು ಚನ್ನಸಿದ್ಧರಾಮ ಶಿವಾಚಾರ್ಯ, ಸಮಾಜದ ಯಾವುದೇ ವ್ಯಕ್ತಿ ಯಾವುದೇ ಪಕ್ಷದಿಂದ ಸ್ಪರ್ಧಿಸಲಿ. ಸಮಾಜದವರೆಲ್ಲರೂ ಬೆಂಬಲಿಸೋದು ಅವರ ಆದ್ಯ ಕರ್ತವ್ಯ. ಶಾಮನೂರು ಶಿವಶಂಕರಪ್ಪ ಸಮಾಜದ ಒಗ್ಗಟ್ಟಿಗೆ ಶ್ರಮಿಸಿದ್ದಾರೆ. ಅಖಿಲ ಭಾರತ ವೀರಶೈವಸಂಘವನ್ನು ಸುಧೀರ್ಘವಾಗಿ ಮುನ್ನಡೆಸಿದ್ದಾರೆ. ಅವರ ಮೊಮ್ಮಗ ಈಗ ಚುನಾವಣಾ ಎದುರಿಸ್ತಿದ್ದಾರೆ. ಅವರಿಗೆ ಬೆಂಬಲಿಸಬೇಕು ಅಂತೇಳಿ ಸಮಾಜದವರಿಗೆ ಹೇಳಲು ಬಯಸ್ತೀನಿ ಎಂದು ಕರೆ ನೀಡಿದರು.

ಇದನ್ನೂ ನೋಡಿ: ದಾವಣಗೆರೆಯಲ್ಲಿ ತಣ್ಣಗಾಗದ ಅಸಮಾಧಾನ, ಅಖಾಡದಲ್ಲೇ ಉಳಿದ ಪೈಲ್ವಾನ್, ಕಾಂಗ್ರೆಸ್​​ಗೆ ಟೆನ್ಷನ್

Source link

Video: ಗಾಂಜಾ ನಶೆಯಲ್ಲಿ ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು

ಚೆನ್ನೈ, ಮಾರ್ಚ್​ 26: ಗಾಂಜಾ ನಶೆಯಲ್ಲಿ ಯುವಕರು ಕಬ್ಬಿಣದ ರಾಡ್ ಹಿಡಿದು ಶಾಲಾ ಬಸ್ ನಿಲ್ಲಿಸಿ ಬೆದರಿಕೆ ಹಾಕಿರುವ ಘಟನೆ ತಮಿಳುನಾಡಿನ ಉತ್ತಂಗರೈನಲ್ಲಿ ನಡೆದಿದೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರನ್ನು ನಿಂದಿಸಿ ಬೆದರಿಸಿಸಿದ್ದಾರೆ. ಉತ್ತಂಗರೈ-ಸೇಲಂ ರಸ್ತೆಯಲ್ಲಿ ಓಡಾಡುವ ಬಸ್, ಲಾರಿಗಳನ್ನು ತಡೆ ಹಿಡಿದು ಬೆದರಿಸಿದ್ದಾರೆ. ಸ್ಥಳೀಯರು ದೂರು ದಾಖಲಿಸಿದ್ದಾರೆ.ಆರೋಪಿಗಳ ವಿರುದ್ಧ ಈ ಹಿಂದೆಯೂ ಕ್ರಿಮಿನಲ್ ಪ್ರಕರಣಗಳಿವೆ.ಆರೋಪಿಗಳ ವಿರುದ್ಧ ಹಿಂದೆಯೂ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಪೊಲೀಸರು ತನಿಖೆ ಆರಂಭಿಸಿದ್ದು, ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

IPL 2026: ಆರ್​ಸಿಬಿಗೆ ಬಂತು ಆನೆ ಬಲ; ಬೆಂಗಳೂರಿಗೆ ಬಂದ ಜೋಶ್ ಹೇಜಲ್​ವುಡ್

Source link

1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ

ಬೆಂಗಳೂರು, (ಮಾರ್ಚ್ 26): ಶಾಲೆ ದಾಖಲಿಗೆ ಮಕ್ಕಳಿಗೆ ನಿಗದಿಪಡಿಸಿದ್ದ ವಯೋಮಿತಿಯನ್ನು ಸರ್ಕಾರ ಸಡಿಲಿಕೆ ಮಾಡಿದೆ. 1 ನೇ ತರಗತಿಗೆ 6 ವರ್ಷ ತುಂಬಿರಬೇಕು ಎಂಬ ನಿಯಮದಲ್ಲಿ 60 ದಿನ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು (ಮಾರ್ಚ್ 26)ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಯುಕೆಜಿ ಮುಗಿಸಿದರೂ 6 ವರ್ಷ ಪೂರ್ಣಗೊಂಡಿಲ್ಲವೆಂದು ಚಿಂತೆಯಲ್ಲಿದ್ದ  ಪೋಷಕರು ನಿರಾಳರಾಗಿದ್ದಾರೆ.

ಗುರುವಾರ ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ, ಪ್ರಸಕ್ತ ವರ್ಷಕ್ಕೆ ಅನ್ವಯವಾಗುವಂತೆ ಮಕ್ಕಳ ಶಾಲಾ ಪ್ರವೇಶಕ್ಕೆ ನಿಗದಿಪಡಿಸಿದ್ದ 6 ವರ್ಷಗಳ ವಯೋಮಿತಿಗೆ 60 ದಿನಗಳ ಕಾಲ ವಿನಾಯಿತಿ ನೀಡಲಾಗಿದೆ. ಪ್ರತಿ ವರ್ಷ ಪೋಷಕರಿಗೆ ಈ ಬಗ್ಗೆ ಗೊಂದಲವಾಗುತ್ತಿದೆ. ಎಲ್‌ಕೆಜಿ ಮತ್ತು ಯುಕೆಜಿ ಸೇರ್ಪಡೆಗೆ ಸೂಕ್ತ ವಯೋಮಿತಿ ಕಾನೂನು ಇಲ್ಲದಿರುವುದು ಇದಕ್ಕೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಎಲ್‌ಕೆಜಿ, ಯುಕೆಜಿ ಸೇರ್ಪಡೆಗೆ ಸಂಬಂಧಿಸಿದಂತೆ ಕಾನೂನು ಜಾರಿ ಮಾಡುತ್ತೇವೆ. ಈ ಬಗ್ಗೆ ಅಗತ್ಯ ಸಭೆ ನಡೆಸಲಾಗುತ್ತದೆ ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್

ಪ್ರಥಮ್ ಅವರು ನಟಿಸಿದ ‘ಫಸ್ಟ್ ನೈಟ್ ವಿತ್ ದೆವ್ವ’ (First Night With Devva) ಸಿನಿಮಾ ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಈ ಸಿನಿಮಾದ ಶೀರ್ಷಿಕೆಗೆ ‘ಸುಬ್ಬ ಸುಬ್ಬಿ ಹಾರರ್ ಸ್ಟೋರಿ’ ಎಂಬ ಟ್ಯಾಗ್ ಲೈನ್ ಇದೆ. ಈ ಕಥೆ ಯಾರಿಗಾದರೂ ಲಿಂಕ್ ಆಗುತ್ತಾ ಎಂಬ ಅನುಮಾನ ಮೂಡಿದೆ. ಆ ಬಗ್ಗೆ ಪ್ರಥಮ್ ಅವರು ಉತ್ತರ ನೀಡಿದ್ದಾರೆ. ‘ಮೊದಲ ದೃಶ್ಯದಲ್ಲೇ ಮದುವೆ. ಮದುವೆ ಆಗಿ 10 ನಿಮಿಷದ ಬಳಿಕ ನನ್ನ ಹೆಂಡತಿ ಮೈ ಮೇಲೆ ದೆವ್ವ ಇದೆ ಎಂಬುದು ಗೊತ್ತಾಗುತ್ತದೆ. ಹನಿಮೂನ್ ಆಗುತ್ತಾ ಅಥವಾ ಆ ದೆವ್ವ ಸೇಡು ತೀರಿಸಿಕೊಳ್ಳುತ್ತಾ ಎಂಬುದೇ ಕಥೆ. ಕಥೆಗೆ ಸೂಕ್ತ ಎಂಬ ಕಾರಣಕ್ಕೆ ಸುಬ್ಬ ಸುಬ್ಬಿ ಅಂತ ಇಟ್ಟಿದ್ದೇವೆ. ಕರ್ನಾಟಕದಲ್ಲಿ 7 ಕೋಟಿ ಜನರು ಇದ್ದಾರೆ. ಒಬ್ಬರ ಕಥೆ, ಮಾತು ಇನ್ನೊಬ್ಬರಿಗೆ ಲಿಂಕ್ ಆಗುತ್ತದೆ’ ಎಂದು ಪ್ರಥಮ್ (Pratham) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬಾಮೈದನೊಂದಿಗೆ ತಂಗಿ ಪರಾರಿ: ಕೋಪದಲ್ಲಿ ಬಾವ ಮಾಡಿದ್ದೇನು ಗೊತ್ತಾ?

ಆನೇಕಲ್​, ಮಾರ್ಚ್​ 26: ಬಾವನಿಂದ ಬಾಮೈದನ ಕೊಲೆ ನಡೆದಿರುವಂತಹ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಲ್ವಾರದಳ್ಳಿಯ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಶ್ರೀನಿವಾಸ್​​ನಿಂದ ರಂಜಿತ್ (24)ನ ಕೊಲೆ (kill) ಮಾಡಲಾಗಿದೆ. ಆಸಾಮಿ ಕೊಲೆ ಮಾಡಿದಲ್ಲದೇ ಮೃತದೇಹವನ್ನು ಕಾರಿನ ಡಿಕ್ಕಿಯಲ್ಲಿ ಹಾಕಿದ್ದಾನೆ. ಬಳಿಕ ಪೊಲೀಸ್​ ಠಾಣೆಗೆ ಹೋಗಿ ಶರಣಾಗಿದ್ದಾನೆ. ಸ್ಥಳಕ್ಕೆ ಬನ್ನೇರುಘಟ್ಟ ಪೋಲಿಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಡೆದಿದ್ದೇನು?

ರಂಜಿತ್​ನ ಸ್ವಂತ ಅಕ್ಕ ಪವಿತ್ರರನ್ನು ಶ್ರೀನಿವಾಸ್​​ ಮದುವೆ ಮಾಡಿಕೊಂಡಿದ್ದಾರೆ. ಶ್ರೀನಿವಾಸ್ ತಂಗಿ ಕೋಮಲ್​ ಜೊತೆಗೆ ರಂಜಿತ್ ಸಂಬಂಧ ಹೊಂದಿದ್ದ. ಕೋಮಲ್​​ನ್ನು ಬೇರೊಬ್ಬರೊಂದಿಗೆ ಮದುವೆ ಮಾಡಿಕೊಡಲಾಗಿತ್ತು. ಆದರೆ ಗಂಡನನ್ನ ಬಿಟ್ಟು ರಂಜಿತ್ ಜೊತೆಗೆ ಪರಾರಿಯಾಗಿದ್ದಳು. ಈ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿತ್ತು.

ಇದನ್ನೂ ಓದಿ: ಅಕ್ರಮ ಸಂಬಂಧ ಪ್ರಶ್ನಿಸಲು ಬಂದ ಅಕ್ಕ, ತಮ್ಮನ ಕೊಲೆ: 16 ವರ್ಷದ ಬಾಲಕನಿಂದ ಕೃತ್ಯ

ಶ್ರೀನಿವಾಸ್​​ ರಂಜಿತ್​​​​ನ ಕರೆದು ವಾರ್ನಿಂಗ್ ಕೂಡ ಮಾಡಿದ್ದ. ಇದೆಲ್ಲದರಿಂದ ಕೋಪಗೊಂಡ ಶ್ರೀನಿವಾಸ್ ರಂಜಿತ್​ ಮೇಲೆ ಸೇಡು ಬೆಳೆಸಿಕೊಂಡಿದ್ದ. ಇಂದು ಸಂಜೆ ವೇಳೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಲ್ವಾರದಹಳ್ಳಿಯ ನಿರ್ಜನ ಪ್ರದೇಶಕ್ಕೆ ರಂಜಿತ್​ನನ್ನು ಕರೆತಂದಿದ್ದ ಶ್ರೀನಿವಾಸ್​​ ಕೊಲೆ ಮಾಡಿದ್ದಾನೆ. ಸದ್ಯ ಬನ್ನೇರುಘಟ್ಟ ಪೊಲೀಸರಿಂದ ಆರೋಪಿ‌ ಶ್ರೀನಿವಾಸನನ್ನು ವಶಕ್ಕೆ ಪಡೆಯಲಾಗಿದೆ.

ಠಾಣೆ ಇನ್ಸ್‌ಪೆಕ್ಟರ್ ಕೃಷ್ಣಕುಮಾರ್ ಹೇಳಿದ್ದಿಷ್ಟು

ಘಟನಾ ಸ್ಥಳಕ್ಕೆ ಡಿವೈಎಸ್​​ಪಿ ಮೋಹನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಬಗ್ಗೆ ಬನ್ನೇರುಘಟ್ಟ ಠಾಣೆ ಇನ್ಸ್‌ಪೆಕ್ಟರ್ ಕೃಷ್ಣಕುಮಾರ್​ ಮಾಹಿತಿ ನೀಡಿದ್ದು, ಸೋಕೋ ಟೀಮ್​ನಿಂದ ಸಾಕ್ಷ್ಯ ಸಂಗ್ರಹಿಸಲಾಗಿದೆ. ಕಬ್ಬಿಣದ ರಾಡ್​ನಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. ಮೃತದೇಹದ ಜೊತೆ ಕಬ್ಬಿಣದ ರಾಡ್ ಪತ್ತೆ ಆಗಿದೆ ಎಂದರು.

ಇದನ್ನೂ ಓದಿ: ಹಾಡಹಗಲೇ ಕತ್ತು ಕೊಯ್ದು ಪತ್ನಿಯನ್ನ ಹತ್ಯೆಗೈದ ಪತಿ: ಬಳಿಕ ಕಾರು ಹಾಯಿಸಿ ವಿಕೃತಿ

ಕೊಲೆ ಬಳಿಕ ಮೃತದೇಹ ಕಾರಿನ ಡಿಕ್ಕಿಗೆ ಹಾಕಲಾಗಿದೆ. ರಂಜಿತ್​​ನ ಕೊಲೆ ಮಾಡಿದ ಶ್ರೀನಿವಾಸ್​​ ನೇರವಾಗಿ ಬನ್ನೇರುಘಟ್ಟ ಠಾಣೆಗೆ ಬಂದಿದ್ದಾನೆ ಎಂದು ಬನ್ನೇರುಘಟ್ಟ ಠಾಣೆ ಇನ್ಸ್‌ಪೆಕ್ಟರ್ ಕೃಷ್ಣಕುಮಾರ್​ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಇರಾನ್​ಗೆ ತೈಲ ಮಾರಾಟದಿಂದ ದಿನಕ್ಕೆ 7,000 ಕೋಟಿ ರೂ ಆದಾಯ; ಇರಾನ್​ಗೂ ಭರ್ಜರಿ ಆಯಿಲ್ ಬ್ಯುಸಿನೆಸ್

ನವದೆಹಲಿ, ಮಾರ್ಚ್ 26: ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ವಿರುದ್ಧ ಶುರು ಮಾಡಿದ ಯುದ್ಧದಿಂದ ಯಾರಿಗೆ ಲಾಭ, ಯಾರಿಗೆ ನಷ್ಟ ಆಗುತ್ತಿದೆಯೋ ಸ್ಪಷ್ಟ ಇಲ್ಲ, ಆದರೆ ರಷ್ಯಾ ಮತ್ತು ಇರಾನ್​ನ ಆಯಿಲ್ ಬ್ಯುಸಿನೆಸ್ ಬಹಳ ಜೋರಾಗಿ ನಡೆಯುತ್ತಿದೆ. ಎರಡೂ ದೇಶಗಳು ತೈಲ ಮಾರಾಟದಿಂದ ಸಾವಿರಾರು ಕೋಟಿ ರೂ ಲಾಭ ಮಾಡುತ್ತಿವೆ. ತಂತಮ್ಮ ಯುದ್ಧ ಮುಂದುವರಿಸಲು ಈ ದೇಶಗಳಿಗೆ ಫಂಡಿಂಗ್ ಸಿಕ್ಕಂತಾಗಿದೆ.

ವಿಶ್ವದ ಶೇ. 20ಕ್ಕಿಂತಲೂ ಹೆಚ್ಚು ತೈಲ ಪೂರೈಕೆಯಾಗುವ ಹಾರ್ಮುಜ್ ಜಲಸಂಧಿಯ ಸಂಪೂರ್ಣ ನಿಯಂತ್ರಣವು ಈಗ ಇರಾನ್ ಬಳಿ ಇದೆ. ಈ ಕಿರು ಜಲಮಾರ್ಗದಲ್ಲಿ ಇರಾನ್ ಬಿಟ್ಟು ಬೇರೆ ದೇಶಗಳ ಹಡಗುಗಳು ಸಾಗುತ್ತಿಲ್ಲ. ಯುದ್ಧ ಶುರುವಾದಾಗಿನಿಂದ ತೈಲಕ್ಕೆ ಬಂದಿರುವ ಬೇಡಿಕೆಯು ಇರಾನ್​ಗೆ ಒಳ್ಳೆಯ ಬ್ಯುಸಿನೆಸ್ ತಂದಿದೆ.

ಇದನ್ನೂ ಓದಿ: ತೈಲ ಪೂರೈಕೆ ಕುರಿತು ಅಭಯ ನೀಡಿ, ವದಂತಿ ಹರಡುವವರಿಗೆ ಎಚ್ಚರಿಕೆ ಕೊಟ್ಟ ಕೇಂದ್ರ ಸರ್ಕಾರ

ಇರಾನ್ ಈಗ ದಿನಕ್ಕೆ 16 ಲಕ್ಷ ಬ್ಯಾರಲ್ ಕಚ್ಛಾ ತೈಲವನ್ನು ಮಾರುತ್ತಿದೆ. ಯುದ್ಧಕ್ಕೆ ಮುಂಚೆ ಇರಾನ್​ಗೆ ವಿವಿಧ ನಿಷೇಧಗಳನ್ನು ಹಾಕಿದ್ದ ಅಮೆರಿಕವು ಈಗ ತೈಲ ಮಾರುವಂತೆ ಇರಾನ್​ಗೆ ದುಂಬಾಲು ಬಿದ್ದಿದೆ. ಯುದ್ಧ ಮುಂದುವರಿಸಲು ಬೇಕಾದ ಫಂಡಿಂಗ್ ಅನ್ನು ಇರಾನ್​ಗೆ ಸಿಗುತ್ತಿರಬಹುದು. ಇರಾನ್​ನಿಂದ ಅತಿಹೆಚ್ಚು ತೈಲ ಪಡೆಯುತ್ತಿರುವುದು ಚೀನಾ.

ರಷ್ಯಾ ತೈಲಕ್ಕೆ ಬಹಳ ಡಿಮ್ಯಾಂಡ್

ಇರಾನ್ ಯುದ್ಧ ಶುರುವಾದ ಬಳಿಕ ರಷ್ಯಾ ತೈಲಕ್ಕೆ ವಿಪರೀತ ಬೇಡಿಕೆ ಬಂದಿದೆ. ರಷ್ಯನ್ ತೈಲ ಖರೀದಿಸಲು ಎಲ್ಲಾ ದೇಶಗಳಿಗೂ ಅಮೆರಿಕವೇ ಹಸಿರು ನಿಶಾನೆ ತೋರಿದೆ. ವರದಿ ಪ್ರಕಾರ ರಷ್ಯಾಗೆ ದಿನವೊಂದಕ್ಕೆ 760 ಮಿಲಿಯನ್ ಡಾಲರ್ ಆದಾಯವು ಸಿಗುತ್ತಿದೆ. ಅಂದರೆ, ತೈಲ ಮಾರಾಟದಿಂದ ರಷ್ಯಾ ದಿನಕ್ಕೆ 7,000 ಕೋಟಿ ರೂ ಹಣ ಗಳಿಸುತ್ತಿದೆ.

ಇದನ್ನೂ ಓದಿ: ಪೆಟ್ರೋಲ್, ಡೀಸಲ್ ಕೊರತೆ ಇಲ್ಲ, ಗಾಬರಿ ಬೇಡ: ಪೆಟ್ರೋಲಿಯಂ ಕಂಪನಿಗಳಿಂದ ಸ್ಪಷ್ಟನೆ

ಉಕ್ರೇನ್ ಯುದ್ಧ ಶುರುವಾದ ಬಳಿಕ ರಷ್ಯಾ ಮೇಲೆ ಅಮೆರಿಕ ನಿಷೇಧ ಹಾಕಿದ ಪರಿಣಾಮ ರಷ್ಯಾ ಕಡಿಮೆ ಬೆಲೆಗೆ ತೈಲ ಪೂರೈಕೆ ಮಾಡುತ್ತಿತ್ತು. ಚೀನಾ ಮತ್ತು ಭಾರತ ಹಾಗೂ ಇನ್ನೂ ಇತರ ಕೆಲ ದೇಶಗಳು ಅಗ್ಗದ ಬೆಲೆಗೆ ರಷ್ಯನ್ ತೈಲ ಪಡೆಯುತ್ತಿದ್ದವು. ಈಗ ತೈಲಕ್ಕೆ ಬೇಡಿಕೆ ಹೆಚ್ಚಿರುವುದರಿಂದ ರಷ್ಯನ್ ತೈಲ ಡಿಸ್ಕೌಂಟ್​ನಲ್ಲಿ ಸಿಗುತ್ತಿಲ್ಲ. ಹೆಚ್ಚುವರಿ ಬೆಲೆಗೆ ರಷ್ಯಾ ತನ್ನ ತೈಲವನ್ನು ಮಾರುತ್ತಿದೆ. ಭಾರತಕ್ಕೆ ಈ ಹಿಂದೆ ಸಿಗುತ್ತಿದ್ದ ಡಿಸ್ಕೌಂಟ್ ಈಗ ಇಲ್ಲ. ಚೀನಾಗೆ ನೀಡಿದ್ದ ಡಿಸ್ಕೌಂಟ್ ಅರ್ಧದಷ್ಟು ಕಡಿಮೆ ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link