nagaraj11081993

Oracle Layoffs: ಒರೇಕಲ್​ನ ಭಾರತೀಯ ಉದ್ಯೋಗಿಗಳಿಗೆ ಶಾಕ್; ಮುನ್ಸೂಚನೆ ಇಲ್ಲದೇ 12,000 ಮಂದಿ ಲೇ ಆಫ್

ನವದೆಹಲಿ, ಏಪ್ರಿಲ್ 1: ವಿಶ್ವದ ಪ್ರಮುಖ ಸಾಫ್ಟ್​ವೇರ್ ಕಂಪನಿಗಳಲ್ಲಿ ಒಂದಾದ ಒರೇಕಲ್ ತನ್ನ ಉದ್ಯೋಗಿಗಳ ಸಂಖ್ಯೆಗೆ ಭಾರೀ ಕತ್ತರಿ (Oracle Layoffs) ಹಾಕಿದೆ. ಜಾಗತಿಕವಾಗಿ 30,000 ಉದ್ಯೋಗಿಗಳನ್ನು ಒರೇಕಲ್ ಲೇ ಆಫ್ ಮಾಡಿದೆ. ಭಾರತವೊಂದರಲ್ಲೇ 12,000 ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಭಾರತದಲ್ಲಿ ಒರೇಕಲ್ ಕಂಪನಿ 30,000 ಉದ್ಯೋಗಿಗಳನ್ನು ಹೊಂದಿದೆ. ಇದರಲ್ಲಿ 12,000 ಮಂದಿ ಎಂದರೆ ಶೇ. 40ರಷ್ಟು ಲೇ ಆಫ್ ಆದಂತಾಗುತ್ತದೆ. ಒರೇಕಲ್ ಸಂಸ್ಥೆಯಿಂದ ಈ ಉದ್ಯೋಗ ಕಡಿತದ ನಿರ್ಧಾರದ ಬಗ್ಗೆ ಅಧಿಕೃತ ಹೇಳಿಕೆ ಬಂದಿಲ್ಲ. ಬೇರೆ…

Read More

ಅಭಿವೃದ್ಧಿ ಹೊಂದಿದ ಭಾರತ, ಅಭಿವೃದ್ಧಿ ಹೊಂದಿದ ಅಸ್ಸಾಂ ನಿರ್ಮಿಸಲು ಈ ಚುನಾವಣೆ: ಪ್ರಧಾನಿ ಮೋದಿ

ಧೇಮಾಜಿ, ಏಪ್ರಿಲ್ 1: ಕಳೆದ ಹತ್ತು ವರ್ಷಗಳಲ್ಲಿ ಅಸ್ಸಾಂನಲ್ಲಿ ಸಾಕಷ್ಟು ಅಭಿವೃದ್ಧಿಗಳನ್ನು ಮಾಡಲಾಗಿದೆ. ಮೊದಲು ಸರ್ಬಾನಂದ ಸೋನೋವಾಲ್ ನಂತರ ಹಿಮಂತ ಬಿಸ್ವಾ ಶರ್ಮಾ ನೇತೃತ್ವದಲ್ಲಿ, ಅಸ್ಸಾಂ ಕಳೆದ 10 ವರ್ಷಗಳಲ್ಲಿ ಸೇವೆ ಮತ್ತು ಉತ್ತಮ ಆಡಳಿತದ ಹೊಸ ಯುಗಕ್ಕೆ ಸಾಕ್ಷಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಅಭಿವೃದ್ಧಿ ಹೊಂದಿದ ಅಸ್ಸಾಂ ನಿರ್ಮಿಸುವ ಚುನಾವಣೆ ಇದಾಗಿದೆ. ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಜ್ಜಾಗಿದೆ ಎಂದರು.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಹಾವೇರಿಯಲ್ಲಿ ಭೀಕರ ದುರಂತ: ನಿಲ್ದಾಣದಲ್ಲಿದ್ದ ಜನರ ಮೇಲೆ ನುಗ್ಗಿದ ಬಸ್, ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ಭಯಾನಕ ವಿಡಿಯೋ

ಹಾವೇರಿ, ಏಪ್ರಿಲ್ 1: ಹಾವೇರಿ ನಗರ ಬಸ್ ನಿಲ್ದಾಣದಲ್ಲಿ ಇಂದು (ಏಪ್ರಿಲ್ 1) ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ನಿಲ್ದಾಣದ ಪ್ಲಾಟ್‌ಫಾರ್ಮ್ ಮೇಲೆ ಬಸ್ಸಿಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಏಕಾಏಕಿ ನುಗ್ಗಿದ್ದು, ಘಟನೆಯಲ್ಲಿ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಳಗ್ಗೆ ಸುಮಾರು 7 ಗಂಟೆಯ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯತನವೇ ಘಟನೆಗೆ ಕಾರಣ ಎಂಬುದು ತಿಳಿದುಬಂದಿದೆ. ಘಟನೆಯಲ್ಲಿ 2 ವರ್ಷದ ಪುಟ್ಟ ಮಗು ಹಜರತ್…

Read More

ಸಿಲಿಂಡರ್​​ಗಳಿಗಾಗಿ ಜನ ಕ್ಯೂ ನಿಲ್ಲುತ್ತಿರುವ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!

ದಾವಣಗೆರೆ, ಏಪ್ರಿಲ್​​ 01: ಆಹಾರ ಸಚಿವ ಕೆ.ಹೆಚ್​. ಮುನಿಯಪ್ಪ ರಾಜ್ಯದಲ್ಲಿ ಎಲ್​ಪಿಜಿ ಸಿಲಿಂಡರ್‌ಗಳ ಅಭಾವವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅನಗತ್ಯವಾಗಿ ಗ್ರಾಹಕರು ಕ್ಯೂ ನಿಲ್ಲುವ ಅಗತ್ಯವಿಲ್ಲ, ಏಕೆಂದರೆ ಬೇಕಾದಷ್ಟು ಎಲ್​ಪಿಜಿ ಸಿಲಿಂಡರ್‌ಗಳು ಲಭ್ಯವಿವೆ ಎಂದು ಅವರು ತಿಳಿಸಿದ್ದಾರೆ. ವಿಶೇಷವಾಗಿ ಎಲ್​ಪಿಜಿ ಆಟೋರಿಕ್ಷಾಗಳಿಗೆ ಪ್ರತಿದಿನ 3000 ಸಿಲಿಂಡರ್‌ಗಳು ಖರ್ಚಾಗುತ್ತಿದ್ದು, ಇಂಡಿಯನ್ ಆಯಿಲ್ ಕಾರ್ಪೊರೇಷನ್, ಬಿಪಿಎಲ್ ಮತ್ತು ಎಚ್‌ಪಿಸಿಎಲ್ ಕಂಪನಿಗಳಿಂದ ಸಮರ್ಪಕವಾಗಿ ಪೂರೈಕೆಯಾಗುತ್ತಿವೆ. ಎಲ್ಲಿಯೂ ಯಾವುದೇ ಕೊರತೆ ಇಲ್ಲ ಎಂದು ಸಚಿವರು ಹೇಳಿದ್ದಾರೆ. ಖಾಸಗಿ ಗ್ಯಾಸ್ ಏಜೆನ್ಸಿಗಳು ಗೊಂದಲಕ್ಕೆ ಕಾರಣವಾಗಿದ್ದು, ಅವು…

Read More

‘ಪಾಕಿಸ್ತಾನ ಒಳ್ಳೆಯ ನೆರೆ ರಾಷ್ಟ್ರ, ಕಸಬ್ ಜೆಂಟಲ್‌ಮನ್’: ಶಾರುಖ್ ಖಾನ್ ಹೇಳಿಕೆಗೆ ನೆಟ್ಟಿಗರು ಫುಲ್ ​​ ಗರಂ

ಮುಂಬೈ ,ಏ.1: ‘ಧುರಂಧರ್ 2’ ಸಿನಿಮಾ ಯಶಸ್ಸು ಆಗುತ್ತಿದ್ದಂತೆ ಬಾಲಿವುಡ್ ನಟ ಶಾರುಖ್ ಖಾನ್ ಅವರ ಹಳೆಯ ಸಂದರ್ಶನದ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿವೆ. ಪಾಕಿಸ್ತಾನವನ್ನು “ಉತ್ತಮ ನೆರೆಹೊರೆಯ ರಾಷ್ಟ್ರ” ಎಂದು ಕರೆದಿರುವ ಮತ್ತು ಉಗ್ರ ಅಜ್ಮಲ್ ಕಸಬ್ ಬಗ್ಗೆ ಮಾತನಾಡಿರುವ ವೀಡಿಯೊಗಳು ಈಗ ದೊಡ್ಡ ವಿವಾದವನ್ನೇ ಸೃಷ್ಟಿಸಿವೆ. ಸೋಶಿಯಲ್​ ಮೀಡಿಯಾದಲ್ಲಿ ಈ ಹೇಳಿಕೆಗೆ ಭಾರೀ ಆಕ್ರೋಶ ಕೂಡ ವ್ಯಕ್ತವಾಗಿದೆ. ವೈರಲ್ ಆಗುತ್ತಿರುವ ವೀಡಿಯೊದಲ್ಲಿ ಶಾರುಖ್ ಖಾನ್ ಪಾಕಿಸ್ತಾನದೊಂದಿಗಿನ ಸಂಬಂಧದ ಕುರಿತು ಮಾತನಾಡುತ್ತಾ, ಆ…

Read More

Karnataka LPG Crisis: ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!

ಬೆಂಗಳೂರು, ಏಪ್ರಿಲ್ 01: ಬೆಂಗಳೂರಿನಲ್ಲಿ ಆಟೋ ಎಲ್‌ಪಿಜಿ ಕೊರತೆ ತೀವ್ರಗೊಂಡಿದ್ದು, ಚಾಲಕರು ಅಭೂತಪೂರ್ವ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಗರದ ಹೆಬ್ಬಾಳದ ಗುಡ್ಡದಹಳ್ಳಿ ವೃತ್ತ ಮತ್ತು ನವರಂಗ್ ಸೇರಿದಂತೆ ವಿವಿಧ ಎಲ್‌ಪಿಜಿ ಬಂಕ್‌ಗಳಲ್ಲಿ ಕಿಲೋಮೀಟರ್‌ಗಟ್ಟಲೆ ಉದ್ದದ ಸರತಿ ಸಾಲುಗಳು ಕಂಡುಬರುತ್ತಿವೆ. ಬೆಳಗ್ಗಿನ ಜಾವ 4-6 ಗಂಟೆಗಳಿಂದಲೇ ಚಾಲಕರು ಗ್ಯಾಸ್‌ಗಾಗಿ ಕಾಯುತ್ತಿದ್ದಾರೆ. ಅನೇಕ ಗ್ಯಾಸ್ ಏಜೆನ್ಸಿಗಳು ಸ್ಟಾಕ್ ಇಲ್ಲ ಎನ್ನುತ್ತಿದ್ದರೆ ಲಭ್ಯವಿರುವ ಕೆಲವು ಬಂಕ್‌ಗಳಲ್ಲೂ, ಪೂರ್ಣ ಟ್ಯಾಂಕ್ ಬದಲಾಗಿ ಪ್ರತಿ ಆಟೋಗೆ 400 ರೂ. ಮೌಲ್ಯದ ಸೀಮಿತ ಪ್ರಮಾಣದ ಗ್ಯಾಸ್ ಮಾತ್ರ…

Read More

ಏಪ್ರಿಲ್ ಮೂರ್ಖರ ದಿನವಲ್ಲ, ಬುದ್ಧಿವಂತರ ದಿನ: ಉಪೇಂದ್ರ

ಏಪ್ರಿಲ್ 1ರಂದು ಮೂರ್ಖರ ದಿನ ಎಂದು ಆಚರಣೆ ಮಾಡಲಾಗುತ್ತದೆ. ಜನರನ್ನು ಮೂರ್ಖರನ್ನಾಗಿ ಮಾಡುವ ಕೆಲಸ ಇಂದು ಆಗುತ್ತದೆ. ಆದರೆ, ಈ ದಿನವನ್ನು ಬುದ್ಧಿವಂತರ ದಿನವನ್ನಾಗಿ ಆಚರಿಸಬೇಕು ಎಂದು ಉಪೇಂದ್ರ ಹೇಳಿದ್ದಾರೆ. ‘ಪ್ರಜಾಕೀಯ’ ಪಕ್ಷದ ಆ್ಯಪ್ ಲಾಂಚ್ ಮಾಡುವ ಸಂದರ್ಭದಲ್ಲಿ ಅವರು ಈ ಮಾತನ್ನು ಹೇಳಿದರು. ‘ಮಾತನಾಡುವಾಗ ಎಚ್ಚರಿಕೆ ಬೇಕು. ಇಲ್ಲವಾದರೆ, ಇವರು ಎಡ, ಬಲ ಎಂದು ನಿರ್ಧರಿಸಿ ಬಿಡುತ್ತಾರೆ’ ಎಂದಿದ್ದಾರೆ ಉಪೇಂದ್ರ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

‘ಪ್ರಜಾಕೀಯ’ ಆಪ್ ಬಿಡುಗಡೆ ಮಾಡಿದ ಉಪ್ಪಿ, ವಿಶೇಷತೆಯೇನು? ವಿಡಿಯೋ ನೋಡಿ

ಉಪೇಂದ್ರ (Upendra) ಅವರು ನಟ, ನಿರ್ದೇಶಕ ಆಗಿರುವ ಜೊತೆಗೆ ರಾಜಕಾರಣಿಯೂ ಸಹ. ರಾಜಕೀಯದಲ್ಲಿ ಭಿನ್ನತೆ, ಹೊಸತನ ತರಬೇಕೆಂದು ತಮ್ಮ ಪ್ರಜಾಕೀಯ ಪಕ್ಷದಿಂದ ಹೊಸ-ಹೊಸ ರೀತಿಯ ಐಡಿಯಾಗಳನ್ನು ತರುತ್ತಲೇ ಇರುತ್ತಾರೆ. ಇದೀಗ ‘ದಿ ರಿಯಲ್ ಪ್ರಜಾಕೀಯ’ ಆನ್​​ಲೈನ್ ಆಪ್​ ಬಿಡುಗಡೆ ಮಾಡಿರುವ ಉಪೇಂದ್ರ, ಜನ ಹೇಗೆ ತಮ್ಮ ಆಳುವ ನಾಯಕನನ್ನು ಆಯ್ಕೆ ಮಾಡಬೇಕು, ತಮ್ಮ ಪಕ್ಷದ ಅಭ್ಯರ್ಥಿಯನ್ನಾಗಿ ಯಾರನ್ನು, ಹೇಗೆ ಆಯ್ಕೆ ಮಾಡಬೇಕು, ಪ್ರಜಾಕೀಯ ಟಿಕೆಟ್ ಬೇಕಾದವರು ಹೇಗೆ ಆಪ್ ಬಳಸಿ ಟಿಕೆಟ್ ಪಡೆಯಬಹುದು ಇತ್ಯಾದಿಗಳನ್ನು ವಿವರಿಸಿದ್ದಾರೆ. ವಿಡಿಯೋ…

Read More

ಖಾಸಗಿ ಶಾಲಾ ಬಸ್ ಕೆಳಗೆ ಸಿಲುಕಿ ಎರಡೂವರೆ ವರ್ಷದ ಮಗು ಸಾವು!

ಶಿವಮೊಗ್ಗ, ಏಪ್ರಿಲ್ 01: ಜಿಲ್ಲೆಯಲ್ಲಿ ಮನಕಲುಕುವ ಘಟನೆಯೊಂದು ಸಂಭವಿಸಿದೆ. ನಗರದ ಗೋಪಾಲಗೌಡ ಬಡಾವಣೆಯ ಚಂದನ ಪಾರ್ಕ್ ಸಮೀಪ ಮಾರ್ಚ್ 31ರ ಮಧ್ಯಾಹ್ನ ಒಂದೂವರೆ ವರ್ಷದ ಪುಟ್ಟ (Toddler Death) ಮಗು ಶಾಲಾ ಬಸ್ ಚಕ್ರಕ್ಕೆ ಸಿಲುಕಿ ಮೃತಪಟ್ಟಿದೆ. ಮಗು ಶಾಲೆಯಿಂದ ಬಂದ ತನ್ನ ಅಣ್ಣನನ್ನು ಕರೆತರಲು ಪೋಷಕರೊಂದಿಗೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಅಣ್ಣನಿಗಾಗಿ ಕಾಯುತ್ತಿದ್ದ ಮಗು 18 ತಿಂಗಳ ಮಗು ಆರ್ಯನ್, ತನ್ನ ಅಣ್ಣನನ್ನು ಕರೆತರಲು ಪೋಷಕರೊಂದಿಗೆ ಸ್ಥಳಕ್ಕೆ ಬಂದಿದ್ದ. ಖಾಸಗಿ ಶಾಲಾ ಬಸ್‌ನಲ್ಲಿ…

Read More

ಭಕ್ತರು ತಿಂದುಂಡ ತಟ್ಟೆ-ಲೋಟ ತೊಳೆದ ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ

ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಪ್ರಸ್ತುತ ಹಾಲಿವುಡ್​​ನಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್​​ನೊಂದಿಗೆ ಸಂಬಂಧ ಕಡಿದುಕೊಂಡು ಹಲವು ವರ್ಷಗಳಾಗಿದ್ದು ಇದೀಗ ‘ವಾರಣಾಸಿ’ ಸಿನಿಮಾ ಮೂಲಕ ಭಾರತೀಯ ಚಿತ್ರರಂಗಕ್ಕೆ ವಾಪಸ್ಸಾಗಿದ್ದಾರೆ. ಸ್ಟಾರ್ ನಟಿಯಾಗಿರುವ ಪ್ರಿಯಾಂಕಾ ಚೋಪ್ರಾ ಅವರ ಜೀವನ ಶೈಲಿಯೂ ಸ್ಟಾರ್ ಮಾದರಿಯಲ್ಲಿಯೇ ಇದೆ. ಪತಿ ನಿಕ್ ಜೋನಸ್ ಜೊತೆಗೆ ಅಮೆರಿಕದ ಪ್ರತಿಷ್ಠಿತ ಬೆವರ್ಲಿ ಹಿಲ್ಸ್​​ನ ಐಶಾರಾಮಿ ಮನೆಯಲ್ಲಿ ವಾಸಿಸುತ್ತಾರೆ. ಆದರೆ ಇದೀಗ ಪ್ರಿಯಾಂಕಾ ಚೋಪ್ರಾ, ಸಾಮಾನ್ಯರಂತೆ, ಸಾಮಾನ್ಯ ಜನ ತಿಂದುಂಡು ಬಿಟ್ಟು ಹೋದ ತಟ್ಟೆ-ಲೋಟಗಳನ್ನು ತೊಳೆದಿದ್ದು, ಆ ವಿಡಿಯೋ…

Read More