nagaraj11081993

ಕೆಎಸ್‌ಆರ್‌ಟಿಸಿಗೆ ಮತ್ತೊಂದು ಗರಿ: ‘ವರ್ಲ್ಡ್ ಹೆಚ್‌ಆರ್‌ಡಿ ಕಾಂಗ್ರೆಸ್’ನ ಪ್ರತಿಷ್ಠಿತ ಪ್ರಶಸ್ತಿ ಮುಡಿಗೆ!

ಬೆಂಗಳೂರು/ಕೊಚ್ಚಿನ್, ಏಪ್ರಿಲ್ 1: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ತರಬೇತಿ ಮತ್ತು ಸಾಂಸ್ಥಿಕ ಅಭಿವೃದ್ಧಿ (Training and Organisation Development) ಕ್ಷೇತ್ರದಲ್ಲಿ ಮಾಡಿರುವ ಅಭೂತಪೂರ್ವ ಸಾಧನೆಗಾಗಿ ಪ್ರತಿಷ್ಠಿತ ‘ವರ್ಲ್ಡ್ ಹೆಚ್‌ಆರ್‌ಡಿ ಕಾಂಗ್ರೆಸ್’ನ (World HRD Congress Award) ‘ಕೇರಳ ಲೀಡರ್‌ಶಿಪ್ ಪ್ರಶಸ್ತಿ-2026’ ಅನ್ನು ತನ್ನದಾಗಿಸಿಕೊಂಡಿದೆ. ಕೇರಳದ ಕೊಚ್ಚಿನ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಈ ಗೌರವವನ್ನು ಪ್ರದಾನ ಮಾಡಲಾಯಿತು. ತರಬೇತಿ ಕ್ಷೇತ್ರದಲ್ಲಿ KSRTC ಕ್ರಾಂತಿ ನಿಗಮದ ವ್ಯಾಪ್ತಿಯ ಐದು ತರಬೇತಿ ಕೇಂದ್ರಗಳಲ್ಲಿ ಕಳೆದ 6 ತಿಂಗಳ…

Read More

ಹೊಸ ರಿಯಾಲಿಟಿ ಶೋ ಒಪ್ಪಿಕೊಂಡ ನಯನಾ ನಾಗರಾಜ್

ನಯನಾ ನಾಗರಾಜ್ ಅವರು ‘ಗಿಣಿ ರಾಮ’ ಧಾರಾವಾಹಿಯಲ್ಲಿ ನಟಿಸಿದ್ದರು. ತಮ್ಮದೇ ಕಾರಣಕ್ಕೆ ಅವರು ಧಾರಾವಾಹಿ ತೊರೆದಿದ್ದರು. ಆ ಬಳಿಕ ಅವರು ಈ ಬಗ್ಗೆ ಸ್ಪಷ್ಟನೆ ಕೊಟ್ಟರು. ಅವರು ಹಲವು ಆರೋಪಗಳನ್ನು ಮಾಡಿದ್ದರು. ಈಗ ನಯನಾ ನಾಗರಾಜ್ ಅವರು ಜೀ ಕನ್ನಡದ ಜೋಡಿ ನಂಬರ್ 1 ರಿಯಾಲಿಟಿ ಶೋನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪ್ರೋಮೋನ ಜೀ ಕನ್ನಡ ಹಂಚಿಕೊಂಡಿದೆ. ಪತಿ ಸುಹಾಸ್ ಜೊತೆ ನಯನಾ ಈ ಶೋಗೆ ಬರುತ್ತಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source…

Read More

ದಾವಣಗೆರೆ: ಹಳೇ ಪೇಟೆ ವೀರಭದ್ರೇಶ್ವರ ಕೊಂಡ ಹಾಯ್ದ ಸಚಿವ ಮಲ್ಲಿಕಾರ್ಜುನ, ಪುತ್ರ ಸಮರ್ಥ್, ಪುತ್ರಿ ಶ್ರೇಷ್ಠ!

ದಾವಣಗೆರೆ, ಎಪ್ರಿಲ್ 1: ನಗರದ ಹಳೇ ಪೇಟೆಯಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ಕೊಂಡೋತ್ಸವವು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಕುಟುಂಬದೊಂದಿಗೆ ಭಾಗವಹಿಸಿ, ಅಗ್ನಿಕುಂಡ ಹಾಯುವ ಮೂಲಕ ದೈವಭಕ್ತಿ ಮೆರೆದರು. ವಿಶೇಷವೆಂದರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣದಲ್ಲಿರುವ ಸಚಿವರ ಪುತ್ರ ಸಮರ್ಥ್ ಶಾಮನೂರು ಮತ್ತು ಪುತ್ರಿ ಶ್ರೇಷ್ಠ ಕೂಡ ತಂದೆಯೊಂದಿಗೆ ಕೊಂಡ ಹಾಯ್ದರು. ಕೊಂಡೋತ್ಸವಕ್ಕೂ ಮುನ್ನ ಸಚಿವ ಮಲ್ಲಿಕಾರ್ಜುನ ಅವರ ಕುಟುಂಬವು ವೀರಭದ್ರೇಶ್ವರ ಸ್ವಾಮಿಗೆ ವಿಶೇಷ ಪೂಜೆ…

Read More

ಹೊಸ ಸಿಲಿಂಡರ್​​ ಜೋಡಿಸುವ ವೇಳೆ ಅವಘಡ: ಭೀಕರ ಸ್ಫೋಟಕ್ಕೆ ಮನೆ ಛಿದ್ರ ಛಿದ್ರ

ಬೆಂಗಳೂರು, ಏಪ್ರಿಲ್​​ 01: ಲಗ್ಗೆರೆ ರಾಜೀವ್ ನಗರದಲ್ಲಿರುವ ಮನೆಯೊಂದರಲ್ಲಿ ಆಕಸ್ಮಿಕವಾಗಿ ಸಿಲಿಂಡರ್ ಸ್ಫೋಟಗೊಂಡ ಘಟನೆ ವರದಿಯಾಗಿದೆ. ಘಟನೆಯ ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಪ್ರಯತ್ನ ನಡೆಸಿವೆ. ಮೂರು ಅಂತಸ್ತಿನ ಮನೆಯ ಮೊದಲ ಮಹಡಿಯಲ್ಲಿ ಅವಘಡ ನಡೆದಿದ್ದು, ಹರಗಯ್ಯ ಎಂಬುವವರ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಒಂದು ಗಂಟೆ ಮುನ್ನ ಹೊಸ ಎಲ್‌ಪಿಜಿ ಸಿಲಿಂಡರ್ ಬಂದಿತ್ತು. ಅದನ್ನು ಜೋಡಿಸುವ ವೇಳೆ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಮನೆಯವರು ತಕ್ಷಣ ಹೊರಬಂದಿದ್ದು,…

Read More

ಪ್ರೀಮಿಯಮ್ ಪೆಟ್ರೋಲ್, ಡೀಸಲ್ ಬೆಲೆ ಮತ್ತೆ ಏರಿಕೆ; ಲೀಟರ್​ಗೆ 11 ರೂ ದರ ಹೆಚ್ಚಳ

ನವದೆಹಲಿ, ಏಪ್ರಿಲ್ 1: ಹೊಸ ವರ್ಷದ ಮೊದಲ ದಿನದಂದು ಸಾಮಾನ್ಯ ಜನರಿಗೆ ಡಬಲ್ ಶಾಕ್ ಸಿಕ್ಕಿದೆ. ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ 19 ರೂ ಏರಿಕೆಯಾದರೆ, ಪ್ರೀಮಿಯಮ್ ಪೆಟ್ರೋಲ್ ಮತ್ತು ಡೀಸಲ್ ಬೆಲೆಯಲ್ಲೂ (Premium Petrol price) ಭರ್ಜರಿ ಹೆಚ್ಚಳ ಆಗಿದೆ. ಪ್ರೀಮಿಯಮ್ ಪೆಟ್ರೋಲ್ ಬೆಲೆ ಲೀಟರ್​ಗೆ 11 ರೂನಷ್ಟು ಹೆಚ್ಚಿದೆ. ಪ್ರೀಮಿಯಮ್ ಡೀಸಲ್ ಬೆಲೆಯಲ್ಲಿ ಒಂದೂವರೆ ರೂನಷ್ಟು ಅಲ್ಪ ಹೆಚ್ಚಳ ಆಗಿದೆ. ತೈಲ ಬಿಕ್ಕಟ್ಟು ಮುಂದುವರಿದಿರುವ ಹಿನ್ನೆಲೆಯಲ್ಲಿ ತೈಲ ಮಾರುಕಟ್ಟೆ ಕಂಪನಿಗಳು ಈ ದರ ಏರಿಕೆ…

Read More

Video: ಎಷ್ಟು ಚಂದ ಈ ಬಾಂಧವ್ಯ; ಅಪ್ಪನಿಗೆ ತನ್ನ ಪುಟ್ಟ ಕೈಗಳಿಂದ ಕೈ ತುತ್ತು ನೀಡಿದ ಪುಟಾಣಿ

ತಾಯಿ ತನ್ನ ಕಂದಮ್ಮನನ್ನು ಒಂಬತ್ತು ತಿಂಗಳು ಗರ್ಭದಲ್ಲಿಟ್ಟುಕೊಂಡರೆ, ತಂದೆ (father) ತನ್ನ ಹೆಗಲ ಮೇಲೆ ಕೂರಿಸಿಕೊಂಡು ಪ್ರಪಂಚವನ್ನು ತೋರಿಸುತ್ತಾನೆ. ಹೀಗಾಗಿ ಪ್ರತಿಯೊಬ್ಬ ಮಗಳಿಗೂ (daughter) ಅಪ್ಪ ಅಂದ್ರೆ ಆಕಾಶನೇ. ತಂದೆಗೂ ತನ್ನ ಮಗಳೆಂದರೆ ಜೀವಕ್ಕಿಂತಲೂ ಹೆಚ್ಚು. ಮಗಳ ಯಾವುದೇ ಬೇಡಿಕೆಗೆ ಇಲ್ಲ ಎನ್ನದೇ ಈಡೇರಿಸುತ್ತಾನೆ.  ಇತ್ತ ತಮದೆಗೆ ಮಗಳು ತಾಯಿ ಪ್ರೀತಿಸುತ್ತಾಳೆ. ಇದೀಗ ಮಗಳೊಬ್ಬಳು ಕೆಲಸದಲ್ಲಿದ್ದ ಬ್ಯುಸಿಯಾಗಿದ್ದ ತಂದೆಗೆ ತನ್ನ ಪುಟ್ಟ ಕೈಗಳಿಂದ ಕೈ ತುತ್ತು ನೀಡಿರುವ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿದ ನೆಟ್ಟಿಗರು…

Read More

ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹದ ಮೇಲಿರುವ ಚಿನ್ನಾಭರಣವನ್ನೇ ಕದ್ದ ಕಳ್ಳ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಕಲಬುರಗಿ, ಏಪ್ರಿಲ್ 01: ಜಿಲ್ಲೆಯಲ್ಲಿ ದೇವಸ್ಥಾನ ಕಳ್ಳತನದ ಘಟನೆ ಬೆಳಕಿಗೆ ಬಂದಿದೆ. ನಗರದ ಕುವೆಂಪು ನಗರದಲ್ಲಿರುವ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕಳ್ಳನು ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹದ ಮೇಲಿದ್ದ ಚಿನ್ನಾಭರಣ ಕದ್ದಿದ್ದಾನೆ. ಕಬ್ಬಿಣದ ರಾಡಿನಿಂದ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಖದೀಮನು ದೇವಿಯ ಕೊರಳಲ್ಲಿದ್ದ ಸುಮಾರು 9 ಗ್ರಾಂ ತೂಕದ ಚಿನ್ನದ ತಾಳಿ ಹಾಗೂ 100 ಗ್ರಾಂ ತೂಕದ ಬೆಳ್ಳಿ ಮುಖವಾಡವನ್ನು ಕಳವು ಮಾಡಿ ಪರಾರಿಯಾಗಿದ್ದಾನೆ. ಈ ಘಟನೆ ದೇವಸ್ಥಾನದ ಸಿಸಿ ಕ್ಯಾಮೆರಾಗಳಲ್ಲಿ ಸೆರೆವಾಗಿದ್ದು, ದೃಶ್ಯಾವಳಿಗಳ ಆಧಾರದಲ್ಲಿ ಪೊಲೀಸರು…

Read More

ಸಾಲದ ಸುಳಿಯಲ್ಲಿರುವ ರಾಜ್​​ಪಾಲ್​​ಗೆ ಅತ್ಯಮೂಲ್ಯ ಸಲಹೆ ನೀಡಿದ ಅಕ್ಷಯ್ ಕುಮಾರ್

ತಮ್ಮ ಹಾಸ್ಯಪ್ರಜ್ಞೆಯಿಂದ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿದ ನಟ ರಾಜ್‌ಪಾಲ್ ಯಾದವ್, ತಿಹಾರ್ ಜೈಲಿನಲ್ಲಿ ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಚಿತ್ರ ನಿರ್ಮಿಸಲು ಅವರು 5 ಕೋಟಿ ರೂ. ಸಾಲ ಪಡೆದಿದ್ದರು, ಆದರೆ ಚಿತ್ರ ವಿಫಲವಾದ ಕಾರಣ, ಅವರು ಸಾಲವನ್ನು ಮರುಪಾವತಿಸಲು ಸಾಧ್ಯವಾಗಲಿಲ್ಲ. ಅವರು ನೀಡಿದ ಎಲ್ಲಾ ಚೆಕ್‌ಗಳು ಬೌನ್ಸ್ ಆದ ನಂತರ, ಅವರು ಅಂತಿಮವಾಗಿ ತಿಹಾರ್ ಜೈಲಿನಲ್ಲಿ ಶರಣಾಗಬೇಕಾಯಿತು. ಅದರ ನಂತರ, ಬಾಲಿವುಡ್ ಉದ್ಯಮದ ಅನೇಕ ನಟರು ಅವರಿಗೆ ಸಹಾಯ…

Read More

ಪೊಲೀಸ್ ಇಲಾಖೆಗೆ ಸೇರಿದ 80 ಕೋಟಿ ರೂ. ಮೌಲ್ಯದ ಆಸ್ತಿ ಕಬಳಿಕೆ! ಬೆಸ್ಕಾಂ ಅಧಿಕಾರಿಗಳು ಸೇರಿ ಹಲವರ ಮೇಲೆ ಎಫ್ಐಆರ್

ಬೆಂಗಳೂರು, ಏಪ್ರಿಲ್ 01: ಪೊಲೀಸ್ ಇಲಾಖೆಗೆ ಸೇರಿದ ಸುಮಾರು 80 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಕಬಳಿಸಲು ಯತ್ನಿಸಿರುವ ಗಂಭೀರ ಆರೋಪ ಬೆಳಕಿಗೆ ಬಂದಿದೆ. ಈ ಸಂಬಂಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಸ್ಕಾಂ, ಬಿಬಿಎಂಪಿ ಅಧಿಕಾರಿಗಳು ಹಾಗೂ ಖಾಸಗಿ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಮಹಿಳೆಯ ಹೆಸರಲ್ಲಿ ಬಂದ ವಿದ್ಯುತ್ ಬಿಲ್ ಹಳೆಯ ಮಲ್ಲೇಶ್ವರಂ ಪೊಲೀಸ್ ಠಾಣೆ ಹಾಗೂ ಪೊಲೀಸ್ ವಸತಿ ಗೃಹಗಳಿರುವ ಈ ಜಾಗಕ್ಕೆ 100 ವರ್ಷಕ್ಕೂ ಹೆಚ್ಚು ಇತಿಹಾಸವಿದೆ. 1913ರ ಮಾಪನ…

Read More

IPL 2026: ಈ 4 ತಂಡಗಳೇ ಪ್ಲೇಆಫ್ ಆಡಲಿದೆ: ಮೊಹಮ್ಮದ್ ಶಮಿ ಭವಿಷ್ಯ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 4 ದಿನಗಳು ಕಳೆದಿವೆ. ಈ ನಾಲ್ಕು ದಿನಗಳಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿದಿವೆ. ಈ ಎಂಟು ತಂಡಗಳಲ್ಲಿ ನಾಲ್ಕು ತಂಡಗಳು ಜಯ ಸಾಧಿಸಿದೆ. ಈ ನಾಲ್ಕು ಗೆಲುವುಗಳ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಟಗಾರ ಮೊಹಮ್ಮದ್ ಶಮಿ ಈ ಬಾರಿ ಪ್ಲೇಆಫ್ ಆಡಲಿರುವ 4 ತಂಡಗಳನ್ನು ಹೆಸರಿಸಿದ್ದಾರೆ. ಆ ತಂಡಗಳೆಂದರೆ… ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ಮೊಹಮ್ಮದ್ ಶಮಿ ಪ್ರಕಾರ, ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್…

Read More