All posts by nagaraj11081993

ಅನುಷ್ಕಾ ಜೊತೆ ಪ್ರಭಾಸ್ ಇನ್ನೂ ಎಷ್ಟು ಒಳ್ಳೆಯ ಗೆಳೆತನ ಇಟ್ಟುಕೊಂಡಿದ್ದಾರೆ ನೋಡಿ

ಅನುಷ್ಕಾ ಜೊತೆ ಪ್ರಭಾಸ್ ಇನ್ನೂ ಎಷ್ಟು ಒಳ್ಳೆಯ ಗೆಳೆತನ ಇಟ್ಟುಕೊಂಡಿದ್ದಾರೆ ನೋಡಿ

ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಪರಸ್ಪರ ಪ್ರೀತಿ ಮಾಡಿದರು ನಂತರ ಬೇರೆ ಆದರು, ಈಗ ಒಬ್ಬರ ಮುಖ ಒಬ್ಬರು ನೋಡಿಕೊಳ್ಳುವುದಿಲ್ಲ, ಅನುಷ್ಕಾ ಮೋಸ ಮಾಡಿದರು.. ಹೀಗೆ ವದಂತಿಗಳ ಪಟ್ಟಿ ದೊಡ್ಡದಾಗುತ್ತಲೇ ಹೋಗುತ್ತದೆ. ಆದರೆ, ಯಾವುದಕ್ಕೂ ಇವರು ಸ್ಪಷ್ಟನೆ ನೀಡಿಲ್ಲ. ಈಗ ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಗೆಳೆತನ ಹೇಗಿದೆ ಎಂಬುದರ ಸ್ಪಷ್ಟ ಚಿತ್ರಣ ಸಿಕ್ಕಿದೆ. ಇಬ್ಬರೂ ಒಳ್ಳೆಯ ಬಾಂಧವ್ಯವನ್ನು ಮುಂದುವರಿಸಿಕೊಂಡು ಹೋಗಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ಅನುಷ್ಕಾ ಶೆಟ್ಟಿ ಅವರು ‘ಬಾಹುಬಲಿ’ ಹಾಗೂ ‘ಬಾಹುಬಲಿ 2’ ಬಳಿಕ ಅಪಾರ ಜನಪ್ರಿಯತೆ ಪಡೆದರು. ಅವರಿಗೆ ಸಿಕ್ಕ ಜನಪ್ರಿಯತೆಗೆ ಅವರು ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳಬೇಕಿತ್ತು. ಆದರೆ, ಹಾಗೆ ಮಾಡಿಲ್ಲ. ಬದಲಿಗೆ ಅವರು ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆದರು. ಅಲ್ಲೊಂದು, ಇಲ್ಲೊಂದು ಸಿನಿಮಾ ಒಪ್ಪಿಕೊಂಡು ನಟಿಸಿದರು. ಈಗ ಅನುಷ್ಕಾ ಶೆಟ್ಟಿ ಅವರ ಹೊಸ ಸಿನಿಮಾ ‘ಕಥನಾರ್’ ರಿಲೀಸ್​​ಗೆ ರೆಡಿ ಇದೆ. ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಇದಕ್ಕೆ ಪ್ರಭಾಸ್ ಬೆಂಬಲ ಕೊಟ್ಟಿದ್ದಾರೆ.

ಇದನ್ನೂ ಓದಿ: ಮಲಯಾಳಂಗೆ ಭರ್ಜರಿ ಎಂಟ್ರಿ ಕೊಟ್ಟ ನಟಿ ಅನುಷ್ಕಾ ಶೆಟ್ಟಿ

‘ಕಥನಾರ್’ ಸಿನಿಮಾದ ಟ್ರೇಲರ್ ಅನ್ನು ಪ್ರಭಾಸ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಟ್ರೇಲರ್ ಬಗ್ಗೆ ಅವರು ಮೆಚ್ಚುಗೆ ಸೂಚಿಸಿದ್ದಾರೆ. ಈ ಪೋಸ್ಟ್ ಅಲ್ಲಿ ಅವರು ಅನುಷ್ಕಾ ಶೆಟ್ಟಿ ಅವರನ್ನು ಟ್ಯಾಗ್ ಮಾಡಿದ್ದಾರೆ. ಇವರ ಗೆಳೆತನ ನೋಡಿ ಅನೇಕರು ಸಂತಸ ಹೊರಹಾಕಿದ್ದಾರೆ.

ಫ್ಯಾಂಟಸಿ ಶೈಲಿಯಲ್ಲಿ ‘ಕಥನಾರ್’ ಸಿನಿಮಾ ಮೂಡಿ ಬಂದಿದೆ. ಈ ಚಿತ್ರದಲ್ಲಿ ಜಯಸೂರ್ಯ ನಾಯಕನಾಗಿ ನಟಿಸಿದ್ದಾರೆ. ಅನುಷ್ಕಾ ಶೆಟ್ಟಿ, ನೀಲಿ ಹೆಸರಿನ ಪಾತ್ರದಲ್ಲಿ ನಟಿಸಿದ್ದಾರೆ. ಪ್ರಭುದೇವ, ವಿನೀತ್ ಮತ್ತು ಸಂದೀಪ್ ಮಾಸ್ಟರ್ ಸೇರಿದಂತೆ ಇನ್ನೂ ಅನೇಕರು ಸಿನಿಮಾದಲ್ಲಿದ್ದು, ಮೋಹನ್‌ಲಾಲ್ ಅವರು ಈ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ರೋಜನ್ ಥಾಮಸ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಂಗಳೂರು ಪೊಲೀಸರಿಂದ ‘ಉಚಿತ ಐಪಿಎಲ್ ಟಿಕೆಟ್’; ಒಮ್ಮೆ ಲಿಂಕ್ ಓಪನ್ ಮಾಡಿ ನೋಡಿ

ಬೆಂಗಳೂರು, ಏ.1: ಬೆಂಗಳೂರು ಸಿಟಿ ಪೊಲೀಸ್ ತನ್ನ ಅಧಿಕೃತ ಎಕ್ಸ್ (X) ಖಾತೆಯಲ್ಲಿ “FREE IPL TICKETS” ಎಂಬ ಪೋಸ್ಟರ್ ಅನ್ನು ಹಂಚಿಕೊಂಡಿದೆ. ಆದರೆ, ಇದು ನಿಜವಾದ ಆಫರ್ ಅಲ್ಲ, ಬದಲಾಗಿ ಸಾರ್ವಜನಿಕರಲ್ಲಿ ಸೈಬರ್ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಲು ಹೂಡಿರುವ ಒಂದು ತಂತ್ರವಾಗಿದೆ. ಇಂದು ಏಪ್ರಿಲ್ 1, ಅಂದರೆ ಏಪ್ರಿಲ್ ಫೂಲ್ ದಿನ. ಇದನ್ನೇ ಬಳಸಿಕೊಂಡಿರುವ ಬೆಂಗಳೂರು ನಗರ ಪೊಲೀಸರು, ಐಪಿಎಲ್ ಕ್ರೇಜ್ ನಡುವೆ ಸಾರ್ವಜನಿಕರಿಗೆ ಹೇಗೆ ಸೈಬರ್ ವಂಚಕರು ಗಾಳ ಹಾಕುತ್ತಾರೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ.

ಪೊಲೀಸರು ಹಂಚಿಕೊಂಡಿರುವ ಪೋಸ್ಟರ್‌ನಲ್ಲಿ “ಬೆಂಗಳೂರು ಸಿಟಿ ಪೊಲೀಸ್ ವತಿಯಿಂದ 2 ಉಚಿತ ಐಪಿಎಲ್ ಟಿಕೆಟ್‌ಗಳನ್ನು ನೀಡಲಾಗುತ್ತಿದೆ, ಭಾಗವಹಿಸಲು ಬಯೋದಲ್ಲಿರುವ ಲಿಂಕ್ ಕ್ಲಿಕ್ ಮಾಡಿ” ಎಂದು ಬರೆಯಲಾಗಿದೆ. ಇದನ್ನು ನೋಡಿದ ಅನೇಕರು ನಿಜವೆಂದು ನಂಬಿ ಲಿಂಕ್ ಹುಡುಕತೊಡಗಿದ್ದಾರೆ. ಆದರೆ, ವಾಸ್ತವದಲ್ಲಿ ಇದು ವಂಚಕರ ಜಾಲದ ಬಗ್ಗೆ ಎಚ್ಚರಿಸುವ ಒಂದು ಪ್ರ್ಯಾಂಕ್ ಆಗಿದೆ.

ಇದನ್ನೂ ಓದಿ: ಬೆಂಗಳೂರು ‘ಪೀಕ್ ಹೆಲ್ತ್‌ಕೇರ್’: ಅಮೆರಿಕದಲ್ಲಿ ಸಿಗದ ಲಸಿಕೆ ಕೋರಮಂಗಲದಲ್ಲಿ 10 ನಿಮಿಷದಲ್ಲಿ ಲಭ್ಯ!

ಇಲ್ಲಿದೆ ನೋಡಿ ಪೋಸ್ಟ್​​;

“ಉಚಿತವಾಗಿ ಏನಾದರೂ ಸಿಗುತ್ತದೆ ಎಂಬ ಆಸೆಗೆ ಬಿದ್ದು ಅಪರಿಚಿತ ಲಿಂಕ್‌ಗಳನ್ನು ಕ್ಲಿಕ್ ಮಾಡಬೇಡಿ. ಐಪಿಎಲ್ ಸೀಸನ್‌ನಲ್ಲಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ನಿಮ್ಮ ವೈಯಕ್ತಿಕ ಮಾಹಿತಿ ಹಾಗೂ ಹಣವನ್ನು ದೋಚುವ ಸೈಬರ್ ಕ್ರಿಮಿನಲ್‌ಗಳ ಬಗ್ಗೆ ಎಚ್ಚರದಿಂದಿರಿ” ಎಂದು ಪೊಲೀಸರು ಈ ಪೋಲ್ ಮತ್ತು ಪೋಸ್ಟ್ ಮೂಲಕ ಸಂದೇಶ ನೀಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Oracle Layoffs: ಒರೇಕಲ್​ನ ಭಾರತೀಯ ಉದ್ಯೋಗಿಗಳಿಗೆ ಶಾಕ್; ಮುನ್ಸೂಚನೆ ಇಲ್ಲದೇ 12,000 ಮಂದಿ ಲೇ ಆಫ್

ನವದೆಹಲಿ, ಏಪ್ರಿಲ್ 1: ವಿಶ್ವದ ಪ್ರಮುಖ ಸಾಫ್ಟ್​ವೇರ್ ಕಂಪನಿಗಳಲ್ಲಿ ಒಂದಾದ ಒರೇಕಲ್ ತನ್ನ ಉದ್ಯೋಗಿಗಳ ಸಂಖ್ಯೆಗೆ ಭಾರೀ ಕತ್ತರಿ (Oracle Layoffs) ಹಾಕಿದೆ. ಜಾಗತಿಕವಾಗಿ 30,000 ಉದ್ಯೋಗಿಗಳನ್ನು ಒರೇಕಲ್ ಲೇ ಆಫ್ ಮಾಡಿದೆ. ಭಾರತವೊಂದರಲ್ಲೇ 12,000 ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಭಾರತದಲ್ಲಿ ಒರೇಕಲ್ ಕಂಪನಿ 30,000 ಉದ್ಯೋಗಿಗಳನ್ನು ಹೊಂದಿದೆ. ಇದರಲ್ಲಿ 12,000 ಮಂದಿ ಎಂದರೆ ಶೇ. 40ರಷ್ಟು ಲೇ ಆಫ್ ಆದಂತಾಗುತ್ತದೆ.

ಒರೇಕಲ್ ಸಂಸ್ಥೆಯಿಂದ ಈ ಉದ್ಯೋಗ ಕಡಿತದ ನಿರ್ಧಾರದ ಬಗ್ಗೆ ಅಧಿಕೃತ ಹೇಳಿಕೆ ಬಂದಿಲ್ಲ. ಬೇರೆ ಬೇರೆ ವೇದಿಕೆಗಳಲ್ಲಿ ಸಂತ್ರಸ್ತ ಉದ್ಯೋಗಿಗಳು ಹಾಕಿರುವ ಪೋಸ್ಟ್​ಗಳಿಂದ ಇದರ ಮಾಹಿತಿ ಬಹಿರಂಗವಾಗಿದೆ. ನಿನ್ನೆಯಿಂದಲೇ (ಮಾರ್ಚ್ 31) ಲೇ ಆಫ್ ಕಾರ್ಯ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ರೆಡ್ಡಿಟ್, ಟೀಮ್​ಬ್ಲೈಂಡ್ ಮುಂತಾದ ಆನ್​ಲೈನ್ ಪ್ಲಾಟ್​ಫಾರ್ಮ್​ಗಳಲ್ಲಿ ಕಣ್ಣೀರ ಕಥೆಗಳು ಹರಿದಾಡುತ್ತಿವೆ.

ಇದನ್ನೂ ಓದಿ: Commercial LPG Cylinder Price: ಗಾಯದ ಮೇಲೆ ಬರೆ; ಕಮರ್ಷಿಯಲ್​​ ಸಿಲಿಂಡರ್​​ ದರ 195ರೂ. ಹೆಚ್ಚಳ

ಫೋನ್ ಕೂಡ ಇಲ್ಲ… ಇಮೇಲ್​ನಲ್ಲಿ ಬಂತು ಲೇ ಆಫ್ ನೋಟೀಸ್

ಯಾವ ಪೂರ್ವಸೂಚನೆ ಇಲ್ಲದೆ, ರಾತ್ರೋರಾತ್ರಿ ಕೆಲಸ ಕಳೆದುಕೊಂಡ ಅನೇಕರು ಆನ್​ಲೈನ್ ಪ್ಲಾಟ್​ಫಾರ್ಮ್​ಗಳಲ್ಲಿ ಕಣ್ಣೀರು ಹಾಕುತ್ತಿದ್ದಾರೆ. ಕಂಪನಿಯಲ್ಲಿ ಲೇ ಆಫ್ ಮಾಡುವಾಗ ಸಾಮಾನ್ಯವಾಗಿ ಅದರ ಸುಳಿವನ್ನು ಮುಂಚಿತವಾಗಿ ನೀಡಲಾಗಿರುತ್ತದೆ. ಲೇ ಆಫ್ ಮಾಡಿದಾಗ ಫೋನ್ ಮಾಡಿಯೋ, ಮೀಟಿಂಗ್ ಮಾಡಿಯೋ ಅಥವಾ ಎಚ್​​ಆರ್ ಕರೆಸಿಯೋ ತಿಳಿಸುವುದುಂಟು. ಆದರೆ, ಒರೇಕಲ್ ಉದ್ಯೋಗಿಗಳಿಗೆ ಒಂದು ಇಮೇಲ್​ನಲ್ಲಿ ಲೇ ಆಫ್ ನೋಟೀಸ್ ಬಂದಿತಂತೆ.

‘ನಾವು ಒರೇಕಲ್​ನಲ್ಲಿ 26 ವರ್ಷ ಕೆಲಸ ಮಾಡಿದ್ದೇನೆ. ನನಗೆ ಬೆಳಗ್ಗೆ 6 ಗಂಟೆಗೆ ಇಮೇಲ್ ಬಂತು. ಫೋನ್ ಕರೆ ಮಾಡಿ ತಿಳಿಸುವ ಸೌಜನ್ಯವೂ ಇಲ್ಲ, ಎಂಥ ಕಚಡ ಇದು’ ಎಂದು ಒಬ್ಬ ವ್ಯಕ್ತಿ ಅಲವತ್ತುಕೊಂಡಿದ್ದಾರೆ.

‘20 ವರ್ಷದ ಕೆಲಸ ಮಾಡಿದ ನನ್ನ ತಂದಗೆ ನಿವೃತ್ತಿಯಾಗಲು 2 ವರ್ಷ ಇತ್ತು. ಅವರಿಗೆ ಇಮೇಲ್ ಮೂಲಕ ಲೇ ಆಫ್ ಮಾಡಿದ್ದಾರೆ. ಅವರಿಗೆ ಕ್ಯಾನ್ಸರ್ ಇದೆ. ಆದರೆ, ಹೆಲ್ತ್ ಇನ್ಷೂರೆನ್ಸ್ ಇರೋದಿಲ್ಲ’ ಎಂದು ಮತ್ತೊಬ್ಬ ವ್ಯಕ್ತಿ ಗೋಳಿಟ್ಟಿದ್ದಾನೆ.

ಇದನ್ನೂ ಓದಿ: ಪ್ರೀಮಿಯಮ್ ಪೆಟ್ರೋಲ್, ಡೀಸಲ್ ಬೆಲೆ ಮತ್ತೆ ಏರಿಕೆ; ಲೀಟರ್​ಗೆ 11 ರೂ ದರ ಹೆಚ್ಚಳ

ಓರೇಕಲ್ ಇಂಡಿಯಾ ಡೆಲಪ್ಮೆಂಟ್ ಸೆಂಟರ್​ಗಳಲ್ಲಿ ಹೆಚ್ಚಿನ ಜಾಬ್ ಕಟ್ ಆಗಿದೆ. ಅದರಲ್ಲೂ ಇಂಟರ್ನಲ್ ಟೀಮ್​ಗಳಲ್ಲಿ ಭರ್ಜರಿ ಕತ್ತರಿ ಬಿದ್ದಿದೆ. ಲೇ ಆಫ್ ಆದ ಉದ್ಯೋಗಿಗಳಿಗೆ ತತ್​ಕ್ಷಣವೇ ಜಾರಿಗೆ ಬರುವಂತೆ ಸ್ಲ್ಯಾಕ್, ವಿಪಿಎನ್, ಇಮೇಲ್ ಇತ್ಯಾದಿ ಸೌಲಭ್ಯವನ್ನು ಕಡಿತಗೊಳಿಸಲಾಗಿದೆ. ಉದ್ಯೋಗಿ ತತ್​ಕ್ಷಣವೇ ರಿಲೀವ್ ಆದಂತಾಗಿದೆ.

ಎನ್+2 ತಿಂಗಳ ವೇತನ

ಲೇ ಆಫ್ ಆದ ಒರೇಕಲ್ ಉದ್ಯೋಗಿಗಳಿಗೆ ಪರಿಹಾರವಾಗಿ ಕನಿಷ್ಠ ಎರಡು ತಿಂಗಳ ವೇತನ ಕೊಡಲಾಗುತ್ತದೆ. ಎನ್ + 2 ಸೂತ್ರದ ಪ್ರಕಾರ ವೇತನದ ಪರಿಹಾರ ಇರುತ್ತದೆ. ಎನ್ ಎಂಬುದು ಉದ್ಯೋಗಿ ಕೆಲಸ ಮಾಡಿರುವ ವರ್ಷಗಳ ಸಂಖ್ಯೆ. ಇದರ ಜೊತೆಗೆ ನೋಟೀಸ್ ಪೇ ಮತ್ತಿತರ ಪರಿಹಾರಗಳನ್ನು ಕೊಟ್ಟು ಉದ್ಯೋಗಿಗಳನ್ನು ಮನೆಗೆ ಕಳುಹಿಸುತ್ತಿದೆ ಒರೇಕಲ್.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಅಭಿವೃದ್ಧಿ ಹೊಂದಿದ ಭಾರತ, ಅಭಿವೃದ್ಧಿ ಹೊಂದಿದ ಅಸ್ಸಾಂ ನಿರ್ಮಿಸಲು ಈ ಚುನಾವಣೆ: ಪ್ರಧಾನಿ ಮೋದಿ

ಧೇಮಾಜಿ, ಏಪ್ರಿಲ್ 1: ಕಳೆದ ಹತ್ತು ವರ್ಷಗಳಲ್ಲಿ ಅಸ್ಸಾಂನಲ್ಲಿ ಸಾಕಷ್ಟು ಅಭಿವೃದ್ಧಿಗಳನ್ನು ಮಾಡಲಾಗಿದೆ. ಮೊದಲು ಸರ್ಬಾನಂದ ಸೋನೋವಾಲ್ ನಂತರ ಹಿಮಂತ ಬಿಸ್ವಾ ಶರ್ಮಾ ನೇತೃತ್ವದಲ್ಲಿ, ಅಸ್ಸಾಂ ಕಳೆದ 10 ವರ್ಷಗಳಲ್ಲಿ ಸೇವೆ ಮತ್ತು ಉತ್ತಮ ಆಡಳಿತದ ಹೊಸ ಯುಗಕ್ಕೆ ಸಾಕ್ಷಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಅಭಿವೃದ್ಧಿ ಹೊಂದಿದ ಅಸ್ಸಾಂ ನಿರ್ಮಿಸುವ ಚುನಾವಣೆ ಇದಾಗಿದೆ. ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಜ್ಜಾಗಿದೆ ಎಂದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಹಾವೇರಿಯಲ್ಲಿ ಭೀಕರ ದುರಂತ: ನಿಲ್ದಾಣದಲ್ಲಿದ್ದ ಜನರ ಮೇಲೆ ನುಗ್ಗಿದ ಬಸ್, ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ಭಯಾನಕ ವಿಡಿಯೋ

ಹಾವೇರಿ, ಏಪ್ರಿಲ್ 1: ಹಾವೇರಿ ನಗರ ಬಸ್ ನಿಲ್ದಾಣದಲ್ಲಿ ಇಂದು (ಏಪ್ರಿಲ್ 1) ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ನಿಲ್ದಾಣದ ಪ್ಲಾಟ್‌ಫಾರ್ಮ್ ಮೇಲೆ ಬಸ್ಸಿಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಏಕಾಏಕಿ ನುಗ್ಗಿದ್ದು, ಘಟನೆಯಲ್ಲಿ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಳಗ್ಗೆ ಸುಮಾರು 7 ಗಂಟೆಯ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯತನವೇ ಘಟನೆಗೆ ಕಾರಣ ಎಂಬುದು ತಿಳಿದುಬಂದಿದೆ.

ಘಟನೆಯಲ್ಲಿ 2 ವರ್ಷದ ಪುಟ್ಟ ಮಗು ಹಜರತ್ ಅಲಿಗೆ ತೀವ್ರವಾಗಿ ಗಾಯಗಳಾಗಿದ್ದು, ಸದ್ಯ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಉಳಿದ ಗಾಯಾಳುಗಳಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿದ್ದು, ಅಪಘಾತದ ಭೀಕರತೆಯನ್ನು ಸಾರಿ ಹೇಳುತ್ತಿವೆ. ಸಾರ್ವಜನಿಕರು ಚಾಲಕನ ಬೇಜವಾಬ್ದಾರಿತನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವರದಿ, ವಿಡಿಯೋ: ಅಣ್ಣಪ್ಪ ಬಾರ್ಕಿ, ಟಿವಿ9 ಹಾವೇರಿ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಿಲಿಂಡರ್​​ಗಳಿಗಾಗಿ ಜನ ಕ್ಯೂ ನಿಲ್ಲುತ್ತಿರುವ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!

ದಾವಣಗೆರೆ, ಏಪ್ರಿಲ್​​ 01: ಆಹಾರ ಸಚಿವ ಕೆ.ಹೆಚ್​. ಮುನಿಯಪ್ಪ ರಾಜ್ಯದಲ್ಲಿ ಎಲ್​ಪಿಜಿ ಸಿಲಿಂಡರ್‌ಗಳ ಅಭಾವವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅನಗತ್ಯವಾಗಿ ಗ್ರಾಹಕರು ಕ್ಯೂ ನಿಲ್ಲುವ ಅಗತ್ಯವಿಲ್ಲ, ಏಕೆಂದರೆ ಬೇಕಾದಷ್ಟು ಎಲ್​ಪಿಜಿ ಸಿಲಿಂಡರ್‌ಗಳು ಲಭ್ಯವಿವೆ ಎಂದು ಅವರು ತಿಳಿಸಿದ್ದಾರೆ. ವಿಶೇಷವಾಗಿ ಎಲ್​ಪಿಜಿ ಆಟೋರಿಕ್ಷಾಗಳಿಗೆ ಪ್ರತಿದಿನ 3000 ಸಿಲಿಂಡರ್‌ಗಳು ಖರ್ಚಾಗುತ್ತಿದ್ದು, ಇಂಡಿಯನ್ ಆಯಿಲ್ ಕಾರ್ಪೊರೇಷನ್, ಬಿಪಿಎಲ್ ಮತ್ತು ಎಚ್‌ಪಿಸಿಎಲ್ ಕಂಪನಿಗಳಿಂದ ಸಮರ್ಪಕವಾಗಿ ಪೂರೈಕೆಯಾಗುತ್ತಿವೆ. ಎಲ್ಲಿಯೂ ಯಾವುದೇ ಕೊರತೆ ಇಲ್ಲ ಎಂದು ಸಚಿವರು ಹೇಳಿದ್ದಾರೆ. ಖಾಸಗಿ ಗ್ಯಾಸ್ ಏಜೆನ್ಸಿಗಳು ಗೊಂದಲಕ್ಕೆ ಕಾರಣವಾಗಿದ್ದು, ಅವು ಎಲ್​ಪಿಜಿ ದರವನ್ನು ಹೆಚ್ಚಿಸಿವೆ. ಈ ಸಂಬಂಧ ಪೆಟ್ರೋಲಿಯಂ ಸಚಿವರಿಗೆ ಮನವಿ ಮಾಡಿದ್ದು, ಖಾಸಗಿಯವರೂ ಸಹ ಸರ್ಕಾರ ನಿಗದಿಪಡಿಸಿದ ದರದಲ್ಲೇ ಎಲ್​ಪಿಜಿ ಪೂರೈಸಬೇಕು ಎಂದು ಮುನಿಯಪ್ಪ ಒತ್ತಾಯಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Source link

‘ಪಾಕಿಸ್ತಾನ ಒಳ್ಳೆಯ ನೆರೆ ರಾಷ್ಟ್ರ, ಕಸಬ್ ಜೆಂಟಲ್‌ಮನ್’: ಶಾರುಖ್ ಖಾನ್ ಹೇಳಿಕೆಗೆ ನೆಟ್ಟಿಗರು ಫುಲ್ ​​ ಗರಂ

ಮುಂಬೈ ,ಏ.1: ‘ಧುರಂಧರ್ 2’ ಸಿನಿಮಾ ಯಶಸ್ಸು ಆಗುತ್ತಿದ್ದಂತೆ ಬಾಲಿವುಡ್ ನಟ ಶಾರುಖ್ ಖಾನ್ ಅವರ ಹಳೆಯ ಸಂದರ್ಶನದ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿವೆ. ಪಾಕಿಸ್ತಾನವನ್ನು “ಉತ್ತಮ ನೆರೆಹೊರೆಯ ರಾಷ್ಟ್ರ” ಎಂದು ಕರೆದಿರುವ ಮತ್ತು ಉಗ್ರ ಅಜ್ಮಲ್ ಕಸಬ್ ಬಗ್ಗೆ ಮಾತನಾಡಿರುವ ವೀಡಿಯೊಗಳು ಈಗ ದೊಡ್ಡ ವಿವಾದವನ್ನೇ ಸೃಷ್ಟಿಸಿವೆ. ಸೋಶಿಯಲ್​ ಮೀಡಿಯಾದಲ್ಲಿ ಈ ಹೇಳಿಕೆಗೆ ಭಾರೀ ಆಕ್ರೋಶ ಕೂಡ ವ್ಯಕ್ತವಾಗಿದೆ.

ವೈರಲ್ ಆಗುತ್ತಿರುವ ವೀಡಿಯೊದಲ್ಲಿ ಶಾರುಖ್ ಖಾನ್ ಪಾಕಿಸ್ತಾನದೊಂದಿಗಿನ ಸಂಬಂಧದ ಕುರಿತು ಮಾತನಾಡುತ್ತಾ, ಆ ದೇಶವನ್ನು ಶ್ಲಾಘಿಸಿದ್ದಾರೆ ಎನ್ನಲಾಗಿದೆ. ಮತ್ತೊಂದು ವೀಡಿಯೊದಲ್ಲಿ 26/11 ಮುಂಬೈ ದಾಳಿಯ ಉಗ್ರ ಅಜ್ಮಲ್ ಕಸಬ್‌ನನ್ನು “ಜೆಂಟಲ್‌ಮನ್” ಎಂದು ಉಲ್ಲೇಖಿಸಿರುವ ಬಗ್ಗೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇಲ್ಲಿದೆ ನೋಡಿ ವಿಡಿಯೋ:

ಎಲ್ಲರಿಗೂ ಶಾರುಖ್ ಖಾನ್​​ ಅವರ ಉಗ್ರ ಅಜ್ಮಲ್ ಕಸಬ್‌ನನ್ನು “ಜೆಂಟಲ್‌ಮನ್” ಎಂದಿರುವುದೇ ದೊಡ್ಡ ಅಚ್ಚರಿಯಾಗಿದೆ. ಉಗ್ರಗಾಮಿಗಳ ಸಿದ್ಧಾಂತವನ್ನು ಕಟುವಾಗಿ ಟೀಕಿಸುತ್ತಾ, “ಜೈಲಿನಲ್ಲಿರುವ ಆ ವ್ಯಕ್ತಿ (ಕಸಬ್)… ಅವನು ಯಾವ ತರ್ಕದ ಮೇಲೆ ಜನರನ್ನು ಕೊಂದಿದ್ದಾನೆ? ಅವನಿಗೆ ಶಿಕ್ಷಣ ಎಲ್ಲಿದೆ?” ಎಂದು ಪ್ರಶ್ನಿಸಿದ್ದರು. ಆದರೆ, ಕಸಬ್‌ನನ್ನು ‘Gentleman’ (ಸಂಭಾವಿತ ವ್ಯಕ್ತಿ) ಎಂಬ ಪದವನ್ನು ಬಳಸಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪದವನ್ನೇ ಈಗ ಕೆಲವರು ಗುರಿಯಾಗಿಸಿಕೊಂಡು, “ಶಾರುಖ್ ಒಬ್ಬ ಉಗ್ರನನ್ನು ಸಂಭಾವಿತ ಎಂದು ಕರೆದಿದ್ದಾರೆ” ಎಂದು ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಧುರಂಧರ್ 2’ ಬಳಿಕ ಬರ್ತಿದೆ ಏಳೂವರೆ ಗಂಟೆ ಸಿನಿಮಾ; ಎರಡು ಇಂಟರ್​​ವಲ್

ಇಲ್ಲಿದೆ ನೋಡಿ ವಿಡಿಯೋ:

ಈ ವೀಡಿಯೊಗಳನ್ನು ಹಂಚಿಕೊಳ್ಳುತ್ತಿರುವ ಅನೇಕರು ಶಾರುಖ್ ಖಾನ್ ಅವರನ್ನು “ದೇಶವಿರೋಧಿ” ಎಂದು ಕರೆದು ಟೀಕಿಸುತ್ತಿದ್ದಾರೆ. “ಸಿನಿಮಾ ಯಶಸ್ವಿಯಾಗುತ್ತಿರುವಾಗ ಇಂತಹ ಹೇಳಿಕೆಗಳು ಹೊರಬರುತ್ತಿರುವುದು ಆಘಾತಕಾರಿ” ಎಂದು ಹಲವರು ಕಮೆಂಟ್ ಮಾಡುತ್ತಿದ್ದಾರೆ. ಆದರೆ, ಶಾರುಖ್ ಅಭಿಮಾನಿಗಳು ಇದು ಹಳೆಯ ವೀಡಿಯೊ ಮತ್ತು ಸಂದರ್ಭಕ್ಕೆ ತಕ್ಕಂತೆ ತಿರುಚಲಾಗಿದೆ ಎಂದು ನಟನ ಬೆಂಬಲಕ್ಕೆ ನಿಂತಿದ್ದಾರೆ.

ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Karnataka LPG Crisis: ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!

ಬೆಂಗಳೂರು, ಏಪ್ರಿಲ್ 01: ಬೆಂಗಳೂರಿನಲ್ಲಿ ಆಟೋ ಎಲ್‌ಪಿಜಿ ಕೊರತೆ ತೀವ್ರಗೊಂಡಿದ್ದು, ಚಾಲಕರು ಅಭೂತಪೂರ್ವ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಗರದ ಹೆಬ್ಬಾಳದ ಗುಡ್ಡದಹಳ್ಳಿ ವೃತ್ತ ಮತ್ತು ನವರಂಗ್ ಸೇರಿದಂತೆ ವಿವಿಧ ಎಲ್‌ಪಿಜಿ ಬಂಕ್‌ಗಳಲ್ಲಿ ಕಿಲೋಮೀಟರ್‌ಗಟ್ಟಲೆ ಉದ್ದದ ಸರತಿ ಸಾಲುಗಳು ಕಂಡುಬರುತ್ತಿವೆ. ಬೆಳಗ್ಗಿನ ಜಾವ 4-6 ಗಂಟೆಗಳಿಂದಲೇ ಚಾಲಕರು ಗ್ಯಾಸ್‌ಗಾಗಿ ಕಾಯುತ್ತಿದ್ದಾರೆ.

ಅನೇಕ ಗ್ಯಾಸ್ ಏಜೆನ್ಸಿಗಳು ಸ್ಟಾಕ್ ಇಲ್ಲ ಎನ್ನುತ್ತಿದ್ದರೆ ಲಭ್ಯವಿರುವ ಕೆಲವು ಬಂಕ್‌ಗಳಲ್ಲೂ, ಪೂರ್ಣ ಟ್ಯಾಂಕ್ ಬದಲಾಗಿ ಪ್ರತಿ ಆಟೋಗೆ 400 ರೂ. ಮೌಲ್ಯದ ಸೀಮಿತ ಪ್ರಮಾಣದ ಗ್ಯಾಸ್ ಮಾತ್ರ ತುಂಬಲಾಗುತ್ತಿದೆ. ಒಂದು ವಾರದ ಸ್ಟಾಕ್ ಕೇವಲ ಒಂದು ದಿನದಲ್ಲಿ ಖಾಲಿಯಾಗುತ್ತಿದೆ ಎಂದು ಬಂಕ್ ಮಾಲೀಕರು ಹೇಳಿದ್ದಾರೆ. ಇದರಿಂದಾಗಿ ಆಟೋ ಚಾಲಕರು ದಿನದ ದುಡಿಮೆಯನ್ನು ಕಳೆದುಕೊಳ್ಳುತ್ತಿದ್ದು, ಆಕ್ರೋಶ ಹೊರಹಾಕಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಏಪ್ರಿಲ್ ಮೂರ್ಖರ ದಿನವಲ್ಲ, ಬುದ್ಧಿವಂತರ ದಿನ: ಉಪೇಂದ್ರ

ಏಪ್ರಿಲ್ 1ರಂದು ಮೂರ್ಖರ ದಿನ ಎಂದು ಆಚರಣೆ ಮಾಡಲಾಗುತ್ತದೆ. ಜನರನ್ನು ಮೂರ್ಖರನ್ನಾಗಿ ಮಾಡುವ ಕೆಲಸ ಇಂದು ಆಗುತ್ತದೆ. ಆದರೆ, ಈ ದಿನವನ್ನು ಬುದ್ಧಿವಂತರ ದಿನವನ್ನಾಗಿ ಆಚರಿಸಬೇಕು ಎಂದು ಉಪೇಂದ್ರ ಹೇಳಿದ್ದಾರೆ. ‘ಪ್ರಜಾಕೀಯ’ ಪಕ್ಷದ ಆ್ಯಪ್ ಲಾಂಚ್ ಮಾಡುವ ಸಂದರ್ಭದಲ್ಲಿ ಅವರು ಈ ಮಾತನ್ನು ಹೇಳಿದರು. ‘ಮಾತನಾಡುವಾಗ ಎಚ್ಚರಿಕೆ ಬೇಕು. ಇಲ್ಲವಾದರೆ, ಇವರು ಎಡ, ಬಲ ಎಂದು ನಿರ್ಧರಿಸಿ ಬಿಡುತ್ತಾರೆ’ ಎಂದಿದ್ದಾರೆ ಉಪೇಂದ್ರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

‘ಪ್ರಜಾಕೀಯ’ ಆಪ್ ಬಿಡುಗಡೆ ಮಾಡಿದ ಉಪ್ಪಿ, ವಿಶೇಷತೆಯೇನು? ವಿಡಿಯೋ ನೋಡಿ

ಉಪೇಂದ್ರ (Upendra) ಅವರು ನಟ, ನಿರ್ದೇಶಕ ಆಗಿರುವ ಜೊತೆಗೆ ರಾಜಕಾರಣಿಯೂ ಸಹ. ರಾಜಕೀಯದಲ್ಲಿ ಭಿನ್ನತೆ, ಹೊಸತನ ತರಬೇಕೆಂದು ತಮ್ಮ ಪ್ರಜಾಕೀಯ ಪಕ್ಷದಿಂದ ಹೊಸ-ಹೊಸ ರೀತಿಯ ಐಡಿಯಾಗಳನ್ನು ತರುತ್ತಲೇ ಇರುತ್ತಾರೆ. ಇದೀಗ ‘ದಿ ರಿಯಲ್ ಪ್ರಜಾಕೀಯ’ ಆನ್​​ಲೈನ್ ಆಪ್​ ಬಿಡುಗಡೆ ಮಾಡಿರುವ ಉಪೇಂದ್ರ, ಜನ ಹೇಗೆ ತಮ್ಮ ಆಳುವ ನಾಯಕನನ್ನು ಆಯ್ಕೆ ಮಾಡಬೇಕು, ತಮ್ಮ ಪಕ್ಷದ ಅಭ್ಯರ್ಥಿಯನ್ನಾಗಿ ಯಾರನ್ನು, ಹೇಗೆ ಆಯ್ಕೆ ಮಾಡಬೇಕು, ಪ್ರಜಾಕೀಯ ಟಿಕೆಟ್ ಬೇಕಾದವರು ಹೇಗೆ ಆಪ್ ಬಳಸಿ ಟಿಕೆಟ್ ಪಡೆಯಬಹುದು ಇತ್ಯಾದಿಗಳನ್ನು ವಿವರಿಸಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link