ಹುಳಿಯಾರಿನಲ್ಲಿ ಕಳ್ಳರ ಕೈಚಳಕ! ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಹುಳಿಯಾರು, ಮಾ.25: ದೇವರ ದರ್ಶನಕ್ಕೆಂದು ಹೋದ ದಂಪತಿಯ ಮನೆಯೇ ಕಳ್ಳರ ಪಾಲಾಗಿರುವ ದುರ್ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪಟ್ಟಣದಲ್ಲಿ ನಡೆದಿದೆ. ರೋಷನ್ ಎಂಬುವವರ ಮನೆಯ ಬೀಗ ಮುರಿದಿರುವ ಕಳ್ಳರು ಕೈಚಳಕ ತೋರಿಸಿದ್ದಾರೆ. ಹುಳಿಯಾರಿನ ನಿವಾಸಿ ರೋಷನ್ ಅವರು ತಮ್ಮ ಪತ್ನಿಯೊಂದಿಗೆ ನಂಜನಗೂಡಿನ ನಂಜುಂಡೇಶ್ವರ ಸ್ವಾಮಿಯ ದರ್ಶನಕ್ಕಾಗಿ ನಿನ್ನೆ ರಾತ್ರಿ ಮನೆಯಿಂದ ಹೊರಟಿದ್ದರು.ಇಂದು ಮಧ್ಯಾಹ್ನ ರೋಷನ್ ಅವರು ದೇವಸ್ಥಾನದಲ್ಲಿದ್ದಾಗ, ಅವರ ಮನೆಯ ಬಾಗಿಲು ತೆರೆದಿರುವುದನ್ನು ಗಮನಿಸಿದ ನೆರೆಹೊರೆಯವರು ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತಕ್ಷಣವೇ ಮನೆಯೊಳಗೆ…