Headlines

nagaraj11081993

PSL 2026: ಕೇವಲ 2 ಕ್ರೀಡಾಂಗಣಗಳಲ್ಲಿ ಪ್ರೇಕ್ಷಕರಿಲ್ಲದೆ ನಡೆಯಲಿದೆ ಪಾಕ್ ಸೂಪರ್ ಲೀಗ್

ಮಾರ್ಚ್ 26 ರಿಂದ ಪಾಕಿಸ್ತಾನದಲ್ಲಿ ಪ್ರಾರಂಭವಾಗಬೇಕಿದ್ದ ಪಾಕಿಸ್ತಾನ ಸೂಪರ್ ಲೀಗ್​ಗೆ ಕ್ವಾರಂಟೈನ್ ಪರಿಸ್ಥಿತಿ ಎದುರಾಗಿದೆ. ಅಂದರೆ ಕ್ರೀಡಾಂಗಣದಲ್ಲಿ ಯಾವ ಪ್ರೇಕ್ಷಕರು ಇಲ್ಲದೆ ಪಂದ್ಯಾವಳಿಯನ್ನು ನಡೆಸಬೇಕಾಗಿದೆ. ಪಾಕಿಸ್ತಾನದ ಟಿ20 ಲೀಗ್​ನ 11 ನೇ ಸೀಸನ್ ಮಾರ್ಚ್ 26 ರಂದು ಪ್ರಾರಂಭವಾಗಲಿದೆ, ಆದರೆ ಆರಂಭಕ್ಕೆ ಕೇವಲ ನಾಲ್ಕು ದಿನಗಳ ಮೊದಲು, ಪಂದ್ಯಾವಳಿಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ವಿದೇಶಿ ಆಟಗಾರರು ಲೀಗ್ ತೊರೆಯುತ್ತಿರುವುದರಿಂದ ಮತ್ತು ದೇಶದಲ್ಲಿನ ಭದ್ರತಾ ಪರಿಸ್ಥಿತಿಯಿಂದಾಗಿ, ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಪಿಎಸ್ಎಲ್ 2026 ಸೀಸನ್ ಅನ್ನು ಆರು ಸ್ಥಳಗಳ…

Read More

‘ಧುರಂಧರ್ 2’ ಕತೆ ನಡೆಯುವುದು ಪಾಕಿಸ್ತಾನದಲ್ಲಿ, ಆದರೆ ಚಿತ್ರೀಕರಣ ಆಗಿದ್ದೆಲ್ಲಿ?

ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ (Dhurandahr 2) ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸುತ್ತಿದೆ. ಆದಿತ್ಯ ಧರ್ ನಿರ್ದೇಶಿಸಿರುವ ಈ ಸಿನಿಮಾ ಭಾರತದ ಸೈನಿಕನೊಬ್ಬ ಗೂಢಚಾರಿಯಾಗಿ ಪಾಕಿಸ್ತಾನಕ್ಕೆ ಹೋಗಿ ಅಲ್ಲಿ ಉಗ್ರರ ವಿರುದ್ಧ ಏಕಾಂಗಿಯಾಗಿ ಹೋರಾಡುವ ಕತೆ ಹೊಂದಿದೆ. ಸಹಜವಾಗಿಯೇ ಸಿನಿಮಾದ ಇಡೀ ಕತೆ ನಡೆಯುವುದು ಪಾಕಿಸ್ತಾನದಲ್ಲಿಯೇ. ಅದರಲ್ಲೂ ಪಾಕಿಸ್ತಾನದ ಕರಾಚಿಯ ಲಯಾರಿ ಎಂಬ ಸ್ಥಳದಲ್ಲಿ. ಸಿನಿಮಾ ನೋಡಿದವರು, ನಿರ್ದೇಶಕ ಆದಿತ್ಯ ಧರ್, ಪಾಕಿಸ್ತಾನವನ್ನು ಇರುವ ಹಾಗೆಯೇ ತೋರಿಸಿದ್ದಾರೆ ಎನ್ನುತ್ತಿದ್ದಾರೆ. ಸಿನಿಮಾದ ಕತೆ ನಡೆಯುವುದು ಪಾಕಿಸ್ತಾನದಲ್ಲಿ ಆದರೆ…

Read More

ಐತಿಹಾಸಿಕ ಕತಕನಹಳ್ಳಿ ಶ್ರೀಗಳ‌ ಕಾಲಜ್ಞಾನ ಭವಿಷ್ಯ: ಯುದ್ಧ, ಮಳೆ, ರಾಜಕೀಯ ವಿದ್ಯಮಾನಗಳ ಸ್ಫೋಟಕ ಭವಿಷ್ಯ

ವಿಜಯಪುರ, ಮಾರ್ಚ್​ 22: ಯುಗಾದಿ ಅಮಾವಾಸ್ಯೆಯಿಂದ 5 ದಿನಗಳ ಕಾಲ ಕತಕನಹಳ್ಳಿಯ ಶ್ರೀ ಗುರುಚಕ್ರವರ್ತಿ ಸದಾಶಿವ ಜಾತ್ರಾ ಮಹೋತ್ಸವ ನಡೆಯುತ್ತದೆ. ಜಾತ್ಯಾತೀತವಾಗಿ ನಡೆಯುವ ಜಾತ್ರೆಯಲ್ಲಿ ಸಾವಿರಾರು ಜನರನ್ನು ಕಾಣಬಹುದು. ಜಾತ್ರೆಯ ಕೊನೆಯ ದಿನ ಮಠದ ಪೀಠಾಧಿಪತಿಗಳು ನುಡಿಯುವ ಭವಿಷ್ಯವಾಣಿ (Bhavishyavani) ಎಂದಿಗೂ ಸುಳ್ಳಾಗಿಲ್ಲ ಎಂಬ ಪ್ರತೀತಿ ಇದೆ. ಇಂದು ಪ್ರಸಕ್ತ ವರ್ಷದ ಭವಿಷ್ಯವಾಣಿಯನ್ನು ಶ್ರೀಗಳು ನುಡಿದಿದ್ದಾರೆ. ವಿಜಯಪುರ ತಾಲೂಕಿನ ಕತಕನಹಳ್ಳಿಯಲ್ಲಿರೀ ಶ್ರೀ ಗುರುಚಕ್ರವರ್ತಿ ಸದಾಶಿವ ಮಠದ ಜಾತ್ರೆ ಯುಗಾದಿಯಲ್ಲಿ ನಡೆಯುತ್ತದೆ. ಪ್ರತಿ ವರ್ಷ ನಡೆಯುವ ಜಾತ್ರೆಯ ಕೊನೆಯ…

Read More

ಮೂರನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು?

ಬಾಗಲಕೋಟೆ, (ಮಾರ್ಚ್ 22): ಬಾಗಲಕೋಟೆ ಉಪಚುನಾವಣೆಯ (Bagalkot By Election) ಕಾಂಗ್ರೆಸ್ ಟಿಕೆಟ್​ ಎಚ್​​ ವೈ ಮೇಟಿ ಪುತ್ರ ಉಮೇಶ್ ಮೇಟಿ ಅವರಿಗೆ ನೀಡಲಾಗಿದೆ. ಟಿಕೆಟ್ ಗಾಗಿ ನಾಲ್ವರು ಮೇಟಿ ಮಕ್ಕಳ ನಡುವೆ ಕಿತ್ತಾಟ ಶುರುವಾಗಿತ್ತು. ಅಂತಿಮವಾಗಿ ಸಿದ್ದರಾಮಯ್ಯ ಸಂಧಾನಸಭೆ ಮಾಡಿ ಕೊನೆಗೆ ಉಮೇಶ್ ಅವರಿಗೆ ಮಣೆ ಹಾಕಿದ್ದಾರೆ. ಇನ್ನು ಟಿಕೆಟ್​​​​ನ ಪ್ರಬಲ ಆಕಾಂಕ್ಷಿಯಾಗಿದ್ದ ಮಹಾದೇವಿ ಮೇಟಿ ಸಹ ತಣ್ಣಗಾಗಿದ್ದಾರೆ. ಯಾಕಂದ್ರೆ ಕೆಲ ದಿನಗಳಿಂದಷ್ಟೇ ಟಿಕೆಟ್ ಸಿಗದಿದ್ದರೆ ಬಂಡಾಯವಾಗಿ ಸ್ಪರ್ಧೆ ಮಾಡುವ ಬಗ್ಗೆ ಬಹಿರಂಗವಾಗಿ ಹೇಳಿದ್ದರು. ಆದ್ರೆ,…

Read More

ಅಲ್ಲು ಅರ್ಜುನ್ ಸಿನಿಮಾ ಮೂಲಕ ಸ್ಟಾರ್ ಕ್ರಿಕೆಟಿಗನ ಪತ್ನಿಯ ರೀ-ಎಂಟ್ರಿ?

ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾ ಮೂಲಕ ಗಳಿಸಿರುವ ಯಶಸ್ಸನ್ನು ಹಾಗೆಯೇ ಮುಂದುವರೆಸಿಕೊಂಡು ಹೋಗುವ ಪ್ರಯತ್ನದಲ್ಲಿದ್ದಾರೆ. ಇದೇ ಕಾರಣಕ್ಕೆ ಅವರು ತ್ರಿವಿಕ್ರಮ್ ಆಫರ್ ಅನ್ನು ತ್ಯಜಿಸಿ ಅಟ್ಲಿ ಕೈ ಹಿಡಿಸಿದ್ದಾರೆ. ಅಟ್ಲಿ, ಅಲ್ಲು ಅರ್ಜುನ್​​ಗಾಗಿ ಭಾರಿ ಬಜೆಟ್​​ನ ಹಾಲಿವುಡ್ ಮಾದರಿಯ ಫ್ಯಾಂಟಸಿ ಮಾದರಿಯ ಕತೆ ಹೆಣೆದಿದ್ದು, ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ. ಸಿನಿಮಾವನ್ನು ಯಶಸ್ಸು ಮಾಡುವ ಹಠಕ್ಕೆ ಬಿದ್ದಿರುವ ಅಟ್ಲಿ, ದೊಡ್ಡ-ದೊಡ್ಡ ಸ್ಟಾರ್ ನಟಿಯರನ್ನು ಸಿನಿಮಾಕ್ಕೆ ಸೇರಿಸಿಕೊಳ್ಳುತ್ತಾ ಸಾಗಿದ್ದಾರೆ. ಸಿನಿಮಾದ…

Read More

Video: ಬೆಂಗ್ಳೂರಿನಲ್ಲಿ ತಿಂಗಳ ಬಾಡಿಗೆಗೆ 40,000 ರೂ ಖರ್ಚು ಮಾಡುವ ಹಿಂದಿನ ಕಾರಣ ವಿವರಿಸಿದ ವ್ಯಕ್ತಿ

ಬೆಂಗಳೂರು, ಮಾರ್ಚ್ 22: ಬೆಂಗಳೂರು (Bengaluru) ಅಂದ್ರೆ ದುಬಾರಿ. ಈ ಬಾಡಿಗೆ ಮನೆ ವಿಷ್ಯದಲ್ಲಿ ಕೇಳುವುದೇ ಬೇಡ. ಸಿಗೋ ಅಲ್ಪ ಸಂಬಳದಲ್ಲಿ ಬಾಡಿಗೆ ಕಟ್ಟಿ ನೆಮ್ಮದಿಯಿಂದ ಇರೋಣ ಅಂದ್ರೆ ಮನೆ ಮಾಲೀಕರ ಡಿಮ್ಯಾಂಡ್ ಹೆಚ್ಚಾಗಿದೆ. ಹೀಗಾಗಿ ದುಡಿದದ್ದೆಲ್ಲವನ್ನು ಮನೆ ಮಾಲೀಕರ ಹೊಟ್ಟೆಗೆ ಹಾಕುವಂತಾಗಿದೆ. ಬೆಂಗಳೂರಿನ ನಿವಾಸಿಯೊಬ್ಬರು ಪ್ರತಿ ತಿಂಗಳು ಸುಮಾರು 40,000 ರೂ ಬಾಡಿಗೆಗೆ ಏಕೆ ಖರ್ಚು ಮಾಡುವೆ ಎಂದು ವಿವರಿಸಿದ್ದಾರೆ. ಇದೇ ವೇಳೆ ತನಗೆ ಬಾಡಿಗೆಗಿಂತ ಜೀವನದ ಅನುಭವ ಮುಖ್ಯ ಎಂದು ತಿಳಿಸಿದ್ದಾರೆ. ಈ ವ್ಯಕ್ತಿ…

Read More

ಇಂಧನ ಪರಿಸ್ಥಿತಿ ಅವಲೋಕಿಸಲು ಉನ್ನತ ಮಟ್ಟದ ಸಭೆ ನಡೆಸಿದ ಪಿಎಂ ಮೋದಿ

ನವದೆಹಲಿ, ಮಾರ್ಚ್ 22: ಇರಾನ್ ಯುದ್ಧ ಮುಂದುವರಿಯುತ್ತಲೇ ಇರುವುದರಿಂದ ಜಾಗತಿಕ ತೈಲ ಬಿಕ್ಕಟ್ಟು (Oil crisis) ತೀವ್ರಗೊಳ್ಳುತ್ತಿದೆ. ಭಾರತದಲ್ಲಿ ಸರ್ಕಾರವು ಇಂಧನ ಪೂರೈಕೆಗೆ ಹರಸಾಹಸ ಮಾಡುತ್ತಿದೆ. ಈ ಮುಂದುವರಿದ ಸಂಕಷ್ಟ ಎದುರಿಸಲು ನಡೆದಿರುವ ಸಿದ್ಧತೆಗಳನ್ನು ಪರಿಶೀಲಿಸಲು ಪ್ರಧಾನಿಗಳು ಉನ್ನತ ಮಟ್ಟದ ಸಭೆ ನಡೆಸಿದರು. ಪೆಟ್ರೋಲಿಯಂ, ಕಚ್ಚಾ ತೈಲ, ನೈಸರ್ಗಿಕ ಅನಿಲ್, ವಿದ್ಯುತ್, ರಸಗೊಬ್ಬರ ಸೆಕ್ಟರ್​ಗಳಲ್ಲಿ ಪರಿಸ್ಥಿತಿ ಅವಲೋಕಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಈ ಸಭೆ ಮಾಡಿದರು. ಅತಿರೇಕದ ಸ್ಥಿತಿ ಬಂದರೆ ದೇಶದಲ್ಲಿ ಈ ವಿವಿಧ ಇಂಧನ…

Read More

ಪ್ರವಾಸೋದ್ಯಮಕ್ಕೂ ತಟ್ಟಿದ LPG ಅಭಾವ: ಕರಾವಳಿ ಖಾದ್ಯಗಳಿಗೆ ಬ್ರೇಕ್; ಪ್ರವಾಸಿಗರಿಗೆ ನಿರಾಶೆ​

ಕಾರವಾರ, ಮಾರ್ಚ್​ 22: ಎಲ್​ಪಿಜಿ ಗ್ಯಾಸ ಸಿಲಿಂಡರ್ (gas cylinder) ಅಭಾವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಇದರ ಎಫೆಕ್ಟ್ ಬೇರೆ ಉದ್ಯಮಗಳ ಮೇಲೂ ಬೀರಿದೆ. ಪ್ರವಾಸಿ ತಾಣಗಳಲ್ಲಿ ಸಮರ್ಪಕ ಎಲ್.ಪಿ.ಜಿ ಗ್ಯಾಸ್ ಸಿಗದೆ ಎಲ್ಲಾ ಬಗೆಯ ಅಡುಗೆ ಮಾಡಲಾಗುತ್ತಿಲ್ಲ. ಹೀಗಾಗಿ ಸಾಲು ಸಾಲು ರಜೆ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವ ಪ್ರವಾಸಿಗರಿಗೆ ಕರಾವಳಿಯ ಖಾದ್ಯ ಸವಿಯಲು ಸಿಗದೇ ನಿರಾಸೆ ಆಗಿದ್ದಾರೆ. ಇನ್ನೂ ಕೆಲವರು  ಬುಕ್ಕಿಂಗ್ ಮಾಡಿರುವುದನ್ನ ಕ್ಯಾನ್ಸಲ್ ಮಾಡಿಕೊಳ್ಳುತ್ತಿದ್ದಾರೆ. ಇರಾನ್​​-ಇಸ್ರೇಲ್ ಯುದ್ಧ ಆರಂಭವಾಗಿ ಇಂದಿಗೆ 23 ದಿನ….

Read More

Ayush Department Recruitment 2026: ಕರ್ನಾಟಕ ಸರ್ಕಾರದ ಆಯುಷ್ ಇಲಾಖೆಯಲ್ಲಿ ನೇಮಕಾತಿ; ಬೆಂಗಳೂರಿನಲ್ಲಿ ನೇರ ಸಂದರ್ಶನ

ಬೆಂಗಳೂರು: ಕರ್ನಾಟಕ ಸರ್ಕಾರದ ಆಯುಷ್ ಇಲಾಖೆಯು (AYUSH Department Karnataka) ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಖಾಲಿ ಇರುವ ಖಾತೆ ಸಹಾಯಕ (Accounts Assistant) ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ವಾಣಿಜ್ಯ ಪದವೀಧರರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಅಭ್ಯರ್ಥಿಗಳು ಯಾವುದೇ ಆನ್‌ಲೈನ್ ಅರ್ಜಿ ಸಲ್ಲಿಸುವ ಅಗತ್ಯವಿಲ್ಲದೆ ಮಾರ್ಚ್ 25 ರಂದು ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹುದ್ದೆಯ ವಿವರ ಮತ್ತು ವೇತನ ಶ್ರೇಣಿ: ಪ್ರಸ್ತುತ ಆಯುಷ್ ನಿರ್ದೇಶನಾಲಯದಲ್ಲಿ ಒಂದು ಖಾತೆ…

Read More

IND vs IRE: ಭಾರತ- ಐರ್ಲೆಂಡ್ ನಡುವೆ ಟಿ20 ಸರಣಿ; ವೇಳಾಪಟ್ಟಿ ಪ್ರಕಟ

2026 ರ ಐಪಿಎಲ್ (IPL 2026) ಪ್ರಾರಂಭವಾಗುವ ಮೊದಲೇ ಬಿಸಿಸಿಐ (BCCI), ಟೀಂ ಇಂಡಿಯಾದ ಮುಂದಿನ ವೇಳಾಪಟ್ಟಿಯ ಬಗ್ಗೆ ಮಹತ್ವದ ಮಾಹಿತಿ ನೀಡಿದೆ. ಎರಡು ತಿಂಗಳ ಕಾಲ ಐಪಿಎಲ್​ನಲ್ಲಿ ಬ್ಯುಸಿಯಾಗಲಿರುವ ಟೀಂ ಇಂಡಿಯಾ ಆ ಬಳಿಕ ಒಂದರ ಹಿಂದೆ ಒಂದರಂತೆ ಸರಣಿಗಳನ್ನು ಆಡಲಿದೆ. ಮೊದಲಿಗೆ ಅಫ್ಘಾನಿಸ್ತಾನವನ್ನು ಎದುರಿಸಲಿರುವ ಭಾರತ ತಂಡ ಆ ಬಳಿಕ ವಿದೇಶಿ ಪ್ರವಾಸ ಮಾಡಲಿದೆ. ಆ ವಿದೇಶಿ ಪ್ರವಾಸಗಳಲ್ಲಿ ಮೊದಲನೆಯದ್ದಾಗಿ ಐರ್ಲೆಂಡ್ (India vs Ireland) ದೇಶಕ್ಕೆ ಕಾಲಿಡಲಿದೆ. ಉಭಯ ತಂಡಗಳ ನಡುವೆ ಎರಡು…

Read More