Headlines

nagaraj11081993

ಬಾಕ್ಸ್ ಆಫೀಸ್​ನಲ್ಲಿ ‘ಧುರಂಧರ್ 2’ ಸುನಾಮಿ: 3 ದಿನಕ್ಕೆ 300 ಕೋಟಿ ರೂಪಾಯಿ ಮೀರಿದ ಗಳಿಕೆ

ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ (Dhurandhar 2) ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಮೋಡಿ ಮಾಡುತ್ತಿದೆ. ಪ್ರೇಕ್ಷಕರು ಈ ಸಿನಿಮಾವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಪರಿಣಾಮವಾಗಿ ಭರ್ಜರಿ ಕಲೆಕ್ಷನ್ ಆಗುತ್ತಿದೆ. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅದರ ನಡುವೆಯೂ ಗಳಿಕೆ ಜೋರಾಗಿದೆ. ಪ್ರೀಮಿಯರ್ ಶೋ ಸೇರಿಸಿ ಕೇವಲ ಮೂರೇ ದಿನಕ್ಕೆ ‘ಧುರಂಧರ್ 2’ ಸಿನಿಮಾದ ಕಲೆಕ್ಷನ್ (Dhurandhar 2 Box Office Collection) 300 ಕೋಟಿ ರೂಪಾಯಿ ಮೀರಿದೆ. ಆ ಬಗ್ಗೆ ಇಲ್ಲಿದೆ ವಿವರ.. ಮಾರ್ಚ್…

Read More

Horoscope Today 22nd​​ March​: ಇಂದು ಈ ರಾಶಿಯವರ ವಿವಾಹದಲ್ಲಿ ಅಡ್ಡಿ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 22, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ, ಉತ್ತರಾಯಣ, ಚೈತ್ರಮಾಸ, ವಸಂತಋತು, ಶುಕ್ಲಪಕ್ಷದ ಶುಭ ದಿನವಾಗಿದೆ. ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭ ಫಲವಿದ್ದು, ಆರ್ಥಿಕವಾಗಿ ಉತ್ತಮವಾಗಿರುತ್ತದೆ. ಯೋಜನೆಗಳು ಯಶಸ್ವಿಯಾಗುತ್ತವೆ ಮತ್ತು ಹಳೆಯ ಉಳಿತಾಯದಿಂದ ಲಾಭವಿರುತ್ತದೆ. ವೃಷಭ ರಾಶಿಯವರಿಗೆ ಮಾನಸಿಕ ನೆಮ್ಮದಿ, ಹೊಸ ಯೋಜನೆಗಳಿಗೆ ಮನ್ನಣೆ ಮತ್ತು ಗೃಹ ನಿರ್ಮಾಣ ಯೋಗವಿದೆ. ಆದಾಗ್ಯೂ,…

Read More

ಡಿಆರ್​ಐನಿಂದ ಭರ್ಜರಿ ಕಾರ್ಯಾಚರಣೆ: ರೈಲಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಬೆಂಗಳೂರು, ಮಾರ್ಚ್​​ 22: ದೆಹಲಿಯಿಂದ ಬೆಂಗಳೂರಿಗೆ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಸಾಗಾಟ ಮಾಡುತ್ತಿದ್ದ 9 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಲಾಗಿದೆ. DRI ಅಧಿಕಾರಿಗಳು ಯಶಸ್ವಿ ಕಾರ್ಯಾಚರಣೆ ನಡೆಸಿ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ನಾಯಿಗೆ ನೀಡುವ ಆಹಾರದ ಪ್ಯಾಕೆಟ್‌ಗಳಲ್ಲಿ ಅಡಗಿಸಿ, ಯಾರಿಗೂ ಅನುಮಾನ ಬಾರದಂತೆ ಇವನ್ನು ಸಾಗಿಸಲು ಪ್ರಯತ್ನಿಸಲಾಗಿತ್ತು. ಮಾಹಿತಿ ಆಧರಿಸಿ ಕಾರ್ಯಪ್ರವೃತ್ತರಾದ ಡಿಆರ್​ಐ ಅಧಿಕಾರಿಗಳು ರೈಲಿನಲ್ಲಿಯೇ ಈ ದಂಧೆಯನ್ನು ಪತ್ತೆ ಹಚ್ಚಿ, ಡ್ರಗ್ಸ್ ಸಹಿತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ವ್ಯಕ್ತಿಯ ಜೊತೆ ಸಂಪರ್ಕದಲ್ಲಿದ್ದ…

Read More

ಮಧ್ಯರಾತ್ರಿ ಜವರಾಯನ ಅಟ್ಟಹಾಸ: ಕಾಶಿಗೆಂದು ಹೊರಟಿದ್ದ ಮೂವರು ಮಹಿಳೆಯರು ಭೀಕರ ಅಪಘಾತಕ್ಕೆ ಬಲಿ

ದೇವನಹಳ್ಳಿ, ಮಾರ್ಚ್​​ 22: ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಬಳಿ ಮಧ್ಯರಾತ್ರಿ ನಡೆದ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ದಾರುಣವಾಗಿ ಮೃತಪಟ್ಟಿದ್ದಾರೆ. ಹೈವೆಯಿಂದ ಸರ್ವೀಸ್ ರಸ್ತೆಗೆ‌ ಬರುತ್ತಿದ್ದ ಟಿಟಿಗೆ ಲಾರಿ ಡಿಕ್ಕಿಯಾದ ಪರಿಣಾಮ ಟಿಟಿ ವಾಹನದಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಜಯಮ್ಮ(60), ಯಶೋದಮ್ಮ(60), ಗಂಗಾ(38) ಮೃತರು. ಟಿಟಿ ವಾಹನ ಚಾಲಕ ಸೇರಿದಂತೆ 8 ಜನರಿಗೆ ಅಪಘಾತದಲ್ಲಿ ಗಾಯಗಳಾಗಿವೆ. ದೇವನಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಕೆಂಪಮ್ಮ‌ ಎಂಬುವವರಿಗೆ ಗಂಭೀರ ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 22ರ ದಿನಭವಿಷ್ಯ

ಈ ದಿನ ಹಳದಿ ಬಣ್ಣದ ಕರವಸ್ತ್ರವನ್ನು ನಿಮ್ಮ ಬಳಿ ಇಟ್ಟುಕೊಳ್ಳಿ, ಹೀಗೆ ಮಾಡುವುದರಿಂದ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಮಕ್ಕಳ ಶಿಕ್ಷಣಕ್ಕೆ ಅಗತ್ಯವಾದ ಹಣಕಾಸನ್ನು ಹೊಂದಾಣಿಕೆ ಮಾಡುವ ಬಗ್ಗೆ ಸಂಗಾತಿ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಈ ದಿನ ಭಾರವಾದ ವಸ್ತುಗಳನ್ನು ಎತ್ತುವಾಗ ಎಚ್ಚರಿಕೆಯನ್ನು ವಹಿಸಿ. ಇಲ್ಲದಿದ್ದರೆ ಬೆನ್ನು ಹಿಡಿದುಕೊಳ್ಳುವಂತೆ ಆಗುವುದು ಅಥವಾ ಉಳುಕುವುದು ಈ ರೀತಿಯ ತೊಂದರೆಗಳು ಕಾಣಿಸಿಕೊಳ್ಳಬಹುದು. ಬಾಡಿಗೆ ಮನೆಯಲ್ಲಿದ್ದು,…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 22ರ ದಿನಭವಿಷ್ಯ

ಈ ದಿನ ಯಾವುದೇ ಮುಖ್ಯ ಕೆಲಸ- ಕಾರ್ಯ, ಹಣಕಾಸಿನ ಮಾತುಕತೆ ಮಾಡಬೇಕು ಎಂದಿದ್ದಲ್ಲಿ ರಾಘವೇಂದ್ರ ಸ್ವಾಮಿಗಳು ಅಥವಾ ಸಾಯಿಬಾಬಾರವರನ್ನು ಸ್ಮರಿಸಿ ಮುಂದುವರಿಯಿರಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಮೇಲಿಂದ ಮೇಲೆ ಭಾವನಾತ್ಮಕವಾಗಿ ಭಾರವಾದ ಮಾತುಗಳನ್ನು ಕೇಳಿಸಿಕೊಳ್ಳುವ ಸನ್ನಿವೇಶಗಳು ಉದ್ಭವ ಆಗಲಿವೆ. ನಾಲ್ಕು ಗೋಡೆಯ ಮಧ್ಯೆ ಮಾತನಾಡಿ ಮುಗಿಸಿಕೊಳ್ಳಬೇಕಾದ ವಿಷಯಗಳನ್ನು ಅದೇ ರೀತಿ ಮಾತಾಡಿ ಮುಗಿಸಿಕೊಳ್ಳಿ. ಹೆಚ್ಚು ಕಷ್ಟ ಆಗಬಹುದಾದಂಥ ವಿಷಯಗಳು ಅಥವಾ ವಿಚಾರಗಳನ್ನು ಪ್ರಭಾವ ಬಳಸಿಕೊಂಡು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 22ರ ದಿನಭವಿಷ್ಯ

ವ್ಯಾಪಾರ- ವ್ಯವಹಾರ ಮಾಡುವಂಥವರು ಈ ದಿನ ಬಿಳಿ ಬಣ್ಣದ ಹೂವುಗಳನ್ನು ಲಕ್ಷ್ಮಿ ದೇವಿಗೆ ಅರ್ಪಿಸಿ ವ್ಯಾಪಾರವನ್ನು ಆರಂಭಿಸಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಕೆಮ್ಮು, ಕಫ, ಗಂಟಲು ನೋವು ಇಂಥ ಆರೋಗ್ಯ ಸಮಸ್ಯೆಗಳು ನಿಮ್ಮಲ್ಲಿ ಕೆಲವರನ್ನು ಕಾಡಬಹುದು. ದಿಢೀರ್ ಅಂತ ದೂರ ಪ್ರಯಾಣ ಮಾಡುವ ಅನಿವಾರ್ಯ ಸೃಷ್ಟಿ ಆಗಲಿದೆ. ದೈಹಿಕ ಆಯಾಸ, ದಣಿವು ಕಾಡುವುದರಿಂದ ಕೆಲಸಗಳಲ್ಲಿ ತೊಡಗಿಕೊಳ್ಳಲು ಸಾಧ್ಯವಾಗುವುದಿಲ್ಲ. ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವವರಿಗೆ ಅಗತ್ಯ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಅಸಾಧ್ಯವನ್ನೇ ಸಾಧಿಸುವ ಹಠ, ಸಮಾಧಾನ

ಮೇಷ ರಾಶಿ: ಪಾಲುದಾರಿಕೆಯಲ್ಲಿ ತಾಳ್ಮೆಯನ್ನು ಕಳೆದುಕೊಳ್ಳುವಿರಿ. ಆಸ್ತಿ ಖರೀದಿ ವಿಚಾರದಲ್ಲಿ ಎಚ್ಚರಿಕೆ ಇರಲಿ. ಆಚಾತುರ್ಯದಿಂದ ಏನನ್ನೂ ಮಾಡಲು ಹೋಗುವುದು ಬೇಡ. ದಿನದ ಕಾರ್ಯವನ್ನು ನೀವು ಅವಲೋಕಿಸಿಕೊಂಡು ಹೆಜ್ಜೆ ಇಡುವುದು ಉತ್ತಮ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಸಂದೇಹ ಬರಬಹುದು. ಅಂದುಕೊಂಡಿದ್ದರ ಕಡೆಗೆ ಗಮನ ಹರಿಸಲು ಸಾಧ್ಯವಾಗದು. ಅಗಬೇಕಾದ ಕಾರ್ಯಕ್ಕೆ ಒತ್ತಡವನ್ನು ಹೇರಿ ಮಾಡಿಸಿಕೊಳ್ಳುವಿರಿ. ಇಂದು ಮಾಡುವ ಕೆಲಸದಲ್ಲಿ ಶ್ರದ್ಧೆ ಅವಶ್ಯ ಬೇಕು. ವೃಷಭ ರಾಶಿ: ನಿಮ್ಮದಾದ ಸ್ವಂತ ಉದ್ಯೋಗವನ್ನು ಬೆಳೆಸುವ ಕಡೆ ನಿಮ್ಮ ಗಮನವಿರಲಿ. ಇಂದಿನ ಗುರಿಯನ್ನು ಬೇಗ…

Read More

IPL 2026: 6,6,6,6,6.. ಸತತ 5 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿದ ಸಲೀಲ್ ಅರೋರಾ

ಹೈದರಾಬಾದ್‌ನಲ್ಲಿರುವ ತನ್ನ ತವರು ಮೈದಾನದಲ್ಲಿ ಕಳೆದ ಕೆಲವು ದಿನಗಳಿಂದ ತಯಾರಿ ನಡೆಸುತ್ತಿರುವ ಸನ್‌ರೈಸರ್ಸ್ ಹೈದರಾಬಾದ್‌ ತಂಡ ಮಾರ್ಚ್ 21 ರಂದು ತನ್ನ ಮೊದಲ ಇಂಟ್ರಾ-ಸ್ಕ್ವಾಡ್ ಪಂದ್ಯವನ್ನು ಆಡಿತು. ಈ ಪಂದ್ಯದಲ್ಲಿ ಅಭಿಷೇಕ್ ಶರ್ಮಾ 94 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರೆ, ಹೆನ್ರಿಕ್ ಕ್ಲಾಸೆನ್ ಕೂಡ ಭರ್ಜರಿ ಪ್ರದರ್ಶನ ನೀಡಿದರು. ಇವರ ಜೊತೆಗೆ 23 ವರ್ಷದ ಸಲೀಲ್ ಅರೋರಾ ಕೂಡ ಸಿಕ್ಸರ್​ಗಳ ಮಳೆಗರೆದು ಎಲ್ಲರ ಗಮನ ಸೆಳೆದರು. ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಸಲೀಲ್ ಅರೋರಾ, ಇಂದು…

Read More

‘ಧುರಂಧರ್ 2’ ಸಿನಿಮಾ ಪ್ರದರ್ಶನದ ವೇಳೆ ಹೈಡ್ರಾಮಾ: ಚಿತ್ರಮಂದಿರ ಧ್ವಂಸ, ಪೊಲೀಸರ ಎಂಟ್ರಿ

ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ (Ranveer Singh) ನಟಿಸಿ, ಆದಿತ್ಯ ಧರ್ ನಿರ್ದೇಶನ ಮಾಡಿರುವ ಬಹುನಿರೀಕ್ಷಿತ ಆ್ಯಕ್ಷನ್ ಸಿನಿಮಾ ‘ಧುರಂಧರ್: ದಿ ರಿವೆಂಜ್’ ಭಾರತ ಮಾತ್ರವೇ ಅಲ್ಲದೆ ವಿದೇಶದಲ್ಲಿಯೂ ಸಹ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಬಿಡುಗಡೆ ಆಗಿ ಕೆಲವೇ ದಿನಳಲ್ಲಿ 300 ಕೋಟಿಗೂ ಹೆಚ್ಚಿನ ಮೊತ್ತ ಗಳಿಕೆ ಮಾಡಿದೆ. ಸಿನಿಮಾ ಅನ್ನು ಪ್ರೇಕ್ಷಕರು ಮುಗಿಬಿದ್ದು ವೀಕ್ಷಿಸುತ್ತಿದ್ದಾರೆ. ಆದರೆ ‘ಧುರಂಧರ್ 2’ ಸಿನಿಮಾ ಪ್ರದರ್ಶನ ಮಾಡುತ್ತಿದ್ದ ಚಿತ್ರಮಂದಿರ ಒಂದರಲ್ಲಿ ಘಟನೆಯೊಂದು ನಡೆದಿದ್ದು, ಇದರಿಂದಾಗಿ ಸಿನಿಮಾ ಪ್ರದರ್ಶನ ನಿಲ್ಲಿಸಿದ್ದು…

Read More