All posts by nagaraj11081993

ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿಕೆ ಶಿವಕುಮಾರ್​​ ಎಚ್ಚರಿಕೆ

ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿಕೆ ಶಿವಕುಮಾರ್​​ ಎಚ್ಚರಿಕೆ

ಬೆಂಗಳೂರು, ಮಾರ್ಚ್​ 20: ಬೆಂಗಳೂರಲ್ಲಿ ಇನ್ಮುಂದೆ ಟೋಯಿಂಗ್ (Towing) ಪ್ರಾರಂಭವಾಗಲಿದೆ. ಆ ಮೂಲಕ ಬೆಂಗಳೂರು ಟ್ರಾಫಿಕ್ ನಿಯಂತ್ರಣಕ್ಕೆ ಮಹತ್ವದ ಹೆಜ್ಜೆ ಇಡಲಾಗಿದೆ. ನಾನ್ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲ್ಲಿಸಿದರೆ ಟೋಯಿಂಗ್​ ಮಾಡಲಾಗುವುದು. ಎಲ್ಲಾ ಕಾರ್ಪೊರೇಷನ್​​ಗೂ ಎರಡೆರಡು ಟೋಯಿಂಗ್ ವಾಹನ ನೀಡಿದ್ದು, ಈ ಬಗ್ಗೆ ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್​ (DK Shivakumar) ಹೇಳಿದ್ದಾರೆ.

ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ

ವಿಧಾನಸೌಧದಲ್ಲಿಂದು ಜಿಬಿಎ 5 ನಗರ ಪಾಲಿಕೆಗಳ 2026-27ನೇ ಸಾಲಿನ ಆಯವ್ಯಯದ ಸಿದ್ಧತೆಯ ಕುರಿತು ಅಧಿಕಾರಿಗಳು ಹಾಗೂ ಬೆಂಗಳೂರಿನ ಶಾಸಕರೊಂದಿಗೆ ಡಿಸಿಎಂ ಡಿಕೆ ಶಿವಕುಮಾರ್​​ ಪೂರ್ವಭಾವಿ ಸಭೆ ಮಾಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಹೆಚ್ಚು ಕಾಲ ಹಳೇ ವಾಹನಗಳನ್ನು ನಿಲ್ಲಿಸಿದರೂ ಟೋಯಿಂಗ್ ಮಾಡಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: ನೌಕರರ ವರ್ಗಾವಣೆಗಿಂತ ಮಾಡಬೇಕಾದ ಉತ್ತಮ ಕೆಲಸಗಳಿವೆ: ಸಿಎಂಗೆ ಹೈಕೋರ್ಟ್ ತರಾಟೆ

ನಗರದ ರಸ್ತೆಗಳಲ್ಲಿ ಎಲ್ಲೆಲ್ಲಿ ಹಳೇ ವಾಹನಗಳನ್ನು ನಿಲ್ಲಿಸಿದ್ದಾರೋ ಅದನ್ನು ತುಂಬಿಕೊಂಡು ಹೋಗಿ ನಿರ್ದಿಷ್ಟ ಜಾಗದಲ್ಲಿ ಡಂಪ್ ಮಾಡುತ್ತೇವೆ. ಹಳೇ ವಾಹನಗಳನ್ನು ಟೋಯಿಂಗ್ ಮಾಡಲು ಬೆಳ್ಳಳ್ಳಿ, ಮಿಟಗಾನಹಳ್ಳಿ, ಸೊಂಡೆಕೊಪ್ಪ, ಗಿಡ್ಡೇನಹಳ್ಳಿಗಳಲ್ಲಿ ಜಾಗ ನಿಗದಿ ಮಾಡಲಾಗಿದೆ ಎಂದು ಡಿಕೆ ಶಿವಕುಮಾರ್​ ಮಾಹಿತಿ ನೀಡಿದ್ದಾರೆ.

ಫ್ಲೆಕ್ಸ್ ಹಾಕಿದರೆ 1 ಲಕ್ಷ ರೂ ದಂಡ

ವ್ಯಾಪಾರ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಎಲ್ಲಿ ವ್ಯಾಪಾರ ಮಾಡಬೇಕು ಅಂತ ನಿಗದಿ  ಮಾಡುತ್ತೇವೆ. ಯಾರು ನೋಂದಣಿ ಮಾಡಿದ್ದಾರೆ ಅವರಿಗೆ ಮಾತ್ರ ಅವಕಾಶ ನೀಡಬೇಕು. ಇದಕ್ಕೆ ಎಲ್ಲಾ ಶಾಸಕರು ಸಹಮತ ವ್ಯಕ್ತಪಡಿಸಿದ್ದಾರೆ. ಎಲ್ಲಾ ಪಾರ್ಟಿಯವರು ಫ್ಲೆಕ್ಸ್ ಹಾಕುತ್ತಾರೆ. ಯಾರು ಫ್ಲೆಕ್ಸ್ ಹಾಕ್ತಾರೆ ಅವರಿಗೆ 50 ಸಾವಿರದಿಂದ 1 ಲಕ್ಷ ರೂ ದಂಡ ಹಾಕಬೇಕು. ಈ ಬಗ್ಗೆ ಪೊಲೀಸರಿಗೂ, ಕಾರ್ಪೊರೇಷನ್​ನವರಿಗೆ ತಿಳಿಸಿದ್ದೇನೆ, ಕೇಸ್ ಹಾಕುತ್ತೇವೆ ಎಂದಿದ್ದಾರೆ.

ಬೀದಿ ಬದಿ ವ್ಯಾಪಾರಸ್ಥರು ಅಂಗಡಿ ಹಾಕಬಾರದು, ಯಾರೇ ಇದ್ದರೂ ಎತ್ಕೊಂಡು ಹೋಗಬೇಕು. 30 ಸಾವಿರ ಜನ ತಳ್ಳೋ ಗಾಡಿ ಬೇಕು ಎಂದು ಕೇಳಿದ್ದಾರೆ, ಟೆಂಡರ್ ಕರೆದಿದ್ದೇವೆ. ಎಲ್ಲಿ ಬೇಕು ಅಷ್ಟೇ ವ್ಯಾಪಾರ ಮಾಡಬೇಕು. ಐಡೆಂಟಿಟಿ ಕಾರ್ಡ್ ಇದರೆ ಅಷ್ಟೇ ಮಾರಾಟ ಮಾಡಬೇಕು. ಇನ್ನು ಪಾರ್ಕ್​ನಲ್ಲಿ ಅನಧಿಕೃತ ಕೆಲಸ ನಡೆಯುತ್ತಿವೆ ಅಂತ ಆರೋಪವಿದೆ ಹೀಗಾಗಿ ಪಾರ್ಕ್ ಟೈಮ್ ನಿಗದಿ ಮಾಡುತ್ತೇವೆ. ಈ ಬಗ್ಗೆ ಐದು ಪಾಲಿಕೆಯ ಲೋಕಲ್ ಎಂಎಲ್ಎಗಳು ನಿರ್ಧಾರ ಮಾಡಲಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್​ ಉತ್ತರ ನೋಡಿ

ಫುಟ್ ಪಾತ್ ಪಾಲಿಸಿ ತರಬೇಕು ಅಂತ ಇದೆ. ಬೀದಿ ಬದಿ ವ್ಯಾಪಾರ ಮಾಡುತ್ತಾರೆ. ಇದರಿಂದ ಸಮಸ್ಯೆ ಆಗಿದೆ. ಹೀಗಾಗಿ ನಿಗದಿತ ಸ್ಥಳದಲ್ಲಿ ವ್ಯಾಪಾರ ಮಾಡಬೇಕು. ಈ ಸಮಸ್ಯೆ ನಿಲ್ಲಿಸಬೇಕು ಅಂತ ಪಾಲಿಸಿ ಮಾಡಬೇಕು ಎಂದಿದ್ದಾರೆ.

ವಾರ್ಡ್ ವೈಸ್ ಬಜೆಟ್​ಗೆ ಒತ್ತಾಯ

ಇನ್ನು ಜಿಬಿಎ ಬಜೆಟ್​​ ಸಭೆ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್​​, ಇಂದು ಬೆಂಗಳೂರು ನಗರದ ಶಾಸಕರ ಜೊತೆ ಬಜೆಟ್ ಸಭೆ ಆಗಿದೆ. ಪ್ರಮುಖ ನಿರ್ಣಯ ಆಗಿದೆ. ಅಶೋಕ್ ಕೂಡ ಬಂದಿದ್ದರು. ಅಭಿಪ್ರಾಯ ತಿಳಿಸಿದ್ದಾರೆ. ವಾರ್ಡ್ ವೈಸ್ ಬಜೆಟ್ ನೀಡಬೇಕು ಎಂದು ಒತ್ತಿಯಿಸಿದ್ದಾರೆ ಎಂದರು. ಇನ್ನು ಶಾಸಕರಿಂದ ವಾರ್ಡಿಗೆ 5-10 ಕೋಟಿ ರೂ ಅನುದಾನ ಬೇಡಿಕೆ ವಿಚಾರವಾಗಿ ಮಾತನಾಡಿದ್ದು, ನೋಡೋಣ ಎಷ್ಟಾಗಲಿದೆ. ಅವರು ಆಕಾಶನೂ ಕೇಳ್ತಾರೆ, ಭೂಮಿನೂ ತಂದು ಕೊಡಿ ಅಂತ ಕೇಳುತ್ತಾರೆ. ನಮ್ಮಿಂದ ಎಷ್ಟಾಗಲಿದೆ ಅನ್ನೋದು ನೋಡಿ ಕೊಡುತ್ತೇವೆ ಎಂದರು.

ವರದಿ: ಈರಣ್ಣ ಬಸವ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಐಪಿಎಲ್ ಮುಗಿದ ಕೂಡಲೇ ಟಿ20 ಸರಣಿ ಆಡಲಿದೆ ಭಾರತ; ವೇಳಾಪಟ್ಟಿ ಪ್ರಕಟ

ಕೆಲವೇ ದಿನಗಳ ಹಿಂದೆ ಟಿ20 ವಿಶ್ವಕಪ್ ಗೆದ್ದುಕೊಂಡಿರುವ ಟೀಂ ಇಂಡಿಯಾ (Team India) ಇದೀಗ ಐಪಿಎಲ್‌ನಲ್ಲಿ (IPL 2026) ಕಣಕ್ಕಿಳಿಯಲು ಸಜ್ಜಾಗಿದೆ. ಎರಡು ತಿಂಗಳ ಕಾಲ ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಬೆವರು ಹರಿಸಲಿರುವ ಟೀಂ ಇಂಡಿಯಾ ಆಟಗಾರರು ಆ ಬಳಿಕ ಮತ್ತೆ ರಾಷ್ಟ್ರೀಯ ಕರ್ತವ್ಯಕ್ಕೆ ಮರಳಲಿದ್ದಾರೆ. ಅದಕ್ಕೆ ಪೂರಕವಾಗಿ ಇದೀಗ ಭಾರತದ ಮುಂದಿನ ಟಿ20 ಸರಣಿಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಸೂರ್ಯಕುಮಾರ್ ಯಾದವ್ (Suryakumar Yadav) ನೇತೃತ್ವದ ತಂಡವು ಐರ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ.

ಈ ಸರಣಿ ಜೂನ್ ಕೊನೆಯ ವಾರದಲ್ಲಿ ನಡೆಯಲಿದ್ದು, ಸರಣಿಯ ದಿನಾಂಕಗಳನ್ನು ಶೀಘ್ರದಲ್ಲೇ ಘೋಷಿಸಲಾಗುವುದು. ಇಂಗ್ಲೆಂಡ್ ಪ್ರವಾಸ ಕೈಗೊಳ್ಳುವ ಮೊದಲು ಟೀಂ ಇಂಡಿಯಾ ಈ ಸರಣಿಯನ್ನು ಆಡಲಿದೆ. ವಾಸ್ತತವಾಗಿ ಭಾರತ ಹಾಗೂ ಇಂಗ್ಲೆಂಡ್ ನಡುವೆ ಜುಲೈ ತಿಂಗಳಲ್ಲಿ ಐದು ಪಂದ್ಯಗಳ ಟಿ20 ಸರಣಿ ಹಾಗೂ ಆ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಆ ಸರಣಿ ಆರಂಭಕ್ಕೂ ಮುನ್ನ ಐರ್ಲೆಂಡ್ ವಿರುದ್ಧ ಟೀಂ ಇಂಡಿಯಾ ಈ ಟಿ20 ಸರಣಿಯನ್ನು ಆಡಲಿದೆ.

ಭಾರತದ ಇಂಗ್ಲೆಂಡ್ ಪ್ರವಾಸ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿ ಜುಲೈ 1 ರಂದು ಆರಂಭವಾಗಲಿದ್ದು, ಅದಕ್ಕೂ ಮುನ್ನ ಅಂದರೆ ಜೂನ್‌ನಲ್ಲಿ ಟೀಂ ಇಂಡಿಯಾ ಐರ್ಲೆಂಡ್ ವಿರುದ್ಧ ಟಿ20 ಸರಣಿ ಆಡಲಿದೆ. ಈ ಸರಣಿಯ ದಿನಾಂಕಗಳನ್ನು ಬಿಸಿಸಿಐ ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದೆ. ಈ ಸರಣಿಯ ನಂತರ, ಟೀಂ ಇಂಡಿಯಾ ಜುಲೈ 1, 4, 7, 9 ಮತ್ತು 11 ರಂದು ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಈ ಸರಣಿಗಾಗಿ ಇಂಗ್ಲೆಂಡ್‌ಗೆ ಪ್ರಯಾಣ ಬೆಳೆಸಲಿದೆ. ಇದರ ನಂತರ ಜುಲೈ 14 ರಂದು ಏಕದಿನ ಸರಣಿ ಆರಂಭವಾಗಲಿದ್ದು, ಎರಡನೇ ಏಕದಿನ ಪಂದ್ಯ ಜುಲೈ 16 ರಂದು ಮತ್ತು ಮೂರನೇ ಪಂದ್ಯ ಜುಲೈ 19 ರಂದು ನಡೆಯಲಿದೆ.

ತಪ್ಪು ನನ್ನದೇ.. ಟಿ20 ವಿಶ್ವಕಪ್ ಗೆದ್ದು ಅಕ್ಷರ್ ಪಟೇಲ್ ಬಳಿ ಕ್ಷಮೆಯಾಚಿಸಿದ ಸೂರ್ಯ

ಭಾರತ-ಐರ್ಲೆಂಡ್ ಟಿ20 ಸರಣಿ

ಭಾರತ ತಂಡವು ಟಿ20 ಸರಣಿಗಾಗಿ ಐರ್ಲೆಂಡ್​ಗೆ ಭೇಟಿ ನೀಡುತ್ತಿರುವುದು ಇದು ನಾಲ್ಕನೇ ಬಾರಿಯಾಗಲಿದೆ. ಟೀಂ ಇಂಡಿಯಾ ಇದುವರೆಗೆ ಐರ್ಲೆಂಡ್‌ನಲ್ಲಿ ಆರು ಟಿ20 ಪಂದ್ಯಗಳನ್ನು ಆಡಿದ್ದು, ಎಲ್ಲವನ್ನೂ ಗೆದ್ದಿದೆ. ಭಾರತ ಮತ್ತು ಐರ್ಲೆಂಡ್ ನಡುವಿನ ಈ ಎಲ್ಲಾ ಪಂದ್ಯಗಳು ಡಬ್ಲಿನ್‌ನ ಮಲಾಹೈಡ್‌ನಲ್ಲಿ ನಡೆದಿದ್ದವು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇರಾನ್​ಗೆ ಮತ್ತೊಂದು ಹೊಡೆತ; ಅಮೆರಿಕ- ಇಸ್ರೇಲ್ ದಾಳಿಯಲ್ಲಿ ಐಆರ್‌ಜಿಸಿ ವಕ್ತಾರ ಅಲಿ ನೈನಿ ಹತ್ಯೆ

ಟೆಹ್ರಾನ್, ಮಾರ್ಚ್ 20: ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವಿನ ಭೀಕರ ಯುದ್ಧವು 21ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್‌ನ (Iran War) ಪ್ರಮುಖ ನಗರಗಳ ಮೇಲೆ ಇಸ್ರೇಲ್ ಮತ್ತು ಅಮೆರಿಕ ವೈಮಾನಿಕ ದಾಳಿ ನಡೆಸುತ್ತಿದೆ. ಒಂದೊಂದಾಗಿ ಕಮಾಂಡ್‌ನ ಸೇನೆಯ ಪ್ರಮುಖ ನಾಯಕರನ್ನು ಹತ್ಯೆ ಮಾಡುತ್ತಿದೆ. ಇತ್ತೀಚೆಗೆ, ಇಸ್ರೇಲ್ ಮತ್ತೊಮ್ಮೆ ಟೆಹ್ರಾನ್ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಗಳಲ್ಲಿ ಇರಾನ್‌ನ ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ಘೋಷಿಸಿದೆ. ಇರಾನ್ ಕೂಡ ಅಲಿ ಮೊಹಮ್ಮದ್ ನೈನಿಯವರ ಸಾವನ್ನು ದೃಢಪಡಿಸಿದೆ.

ಅಲಿ ಮೊಹಮ್ಮದ್ ನೈನಿ ಸೇರಿದಂತೆ ತನ್ನ ನಾಯಕರ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್ ಘೋಷಿಸಿದೆ. ಅಲಿ ಮೊಹಮ್ಮದ್ ನೈನಿ ಅವರ ಸಾವಿನಿಂದ ತನ್ನ ಪಡೆಗಳ ನೈತಿಕತೆ ದುರ್ಬಲಗೊಳ್ಳುವುದಿಲ್ಲ ಎಂದು ಇರಾನ್ ಹೇಳಿದೆ. ಇರಾನ್ ಕೂಡ ಇಸ್ರೇಲ್ ಮತ್ತು ಅಮೆರಿಕ ಸೇರಿದಂತೆ ಅವುಗಳ ಮಿತ್ರ ರಾಷ್ಟ್ರಗಳ ಮೇಲೆ ದಾಳಿ ಮುಂದುವರಿಸಿದೆ.

ಇದನ್ನೂ ಓದಿ: ಇಸ್ರೇಲ್-ಇರಾನ್ ಸಂಘರ್ಷ:ಈ 9 ವಾಯು ಪ್ರದೇಶಗಳಲ್ಲಿ ಹಾರಾಟ ನಡೆಸದಂತೆ ವಿಮಾನಯಾನ ಸಂಸ್ಥೆಗಳಿಗೆ ಡಿಜಿಸಿಎ ಸಲಹೆ

ಇರಾನ್ ಯುಎಇ, ಕತಾರ್ ಮತ್ತು ಅಬುಧಾಬಿಯಲ್ಲಿರುವ ಅಮೆರಿಕದ ನೆಲೆಗಳ ಮೇಲೆ ಕ್ಷಿಪಣಿಗಳನ್ನು ನಾಶ ಮಾಡುತ್ತಿದೆ. ಇರಾನ್ ವಿಶೇಷವಾಗಿ ತೈಲ ಮತ್ತು ಅನಿಲ ಸಂಸ್ಕರಣಾಗಾರಗಳನ್ನು ಗುರಿಯಾಗಿಸಿಕೊಂಡಿದೆ. ಇರಾನ್ ಮತ್ತೊಮ್ಮೆ ದುಬೈ ಅನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇರಾನಿನ ಕ್ಷಿಪಣಿ ಇಸ್ರೇಲ್‌ನಲ್ಲಿರುವ IIFA ವಿದ್ಯುತ್ ಸ್ಥಾವರದ ಮೇಲೆ ದಾಳಿ ಮಾಡಿದೆ. ಇದರಿಂದ ಎಚ್ಚೆತ್ತ ಇಸ್ರೇಲ್ ತಕ್ಷಣವೇ ವಿದ್ಯುತ್ ಸ್ಥಾವರವನ್ನು ಸ್ಥಗಿತಗೊಳಿಸಿತು. ಇರಾನ್ ದುಬೈನಲ್ಲಿರುವ ಕುವೈತ್‌ನಲ್ಲಿರುವ ಅತಿದೊಡ್ಡ ತೈಲ ಸಂಸ್ಕರಣಾಗಾರವಾದ ಮಿನಾ ಅಲ್ ಅಹ್ಮದಿ ಮೇಲೆಯೂ ದಾಳಿ ಮಾಡಿದೆ.

ಇದನ್ನೂ ಓದಿ: Video: ಇಸ್ರೇಲ್​​ನ ಹೈಫಾ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಕ್ಷಿಪಣಿ ದಾಳಿ

ಪಶ್ಚಿಮ ಏಷ್ಯಾ ಯುದ್ಧವು ಪ್ರಪಂಚದಾದ್ಯಂತ ಸುಮಾರು 85 ದೇಶಗಳ ಮೇಲೆ ಪರಿಣಾಮ ಬೀರಿತು. ಈ ಯುದ್ಧದ ನಂತರ ಗಲ್ಫ್ ದೇಶಗಳಿಂದ ಜಗತ್ತಿಗೆ ತೈಲ ಪೂರೈಕೆ ನಿಂತುಹೋಯಿತು. ಇದರ ಪರಿಣಾಮವಾಗಿ ಸುಮಾರು 85 ಪೆಟ್ರೋಲಿಯಂ ಮತ್ತು ಅನಿಲದ ಕೊರತೆ ಉಂಟಾಯಿತು. ಇದರಿಂದಾಗಿ ಅನೇಕ ದೇಶಗಳಲ್ಲಿ ಅವುಗಳ ಬೆಲೆಗಳು ಹೆಚ್ಚಾಯಿತು. ಭಾರತದಲ್ಲಿ ವಿದ್ಯುತ್ ಪೆಟ್ರೋಲ್ ಮತ್ತು ಕೈಗಾರಿಕಾ ಡೀಸೆಲ್ ಬೆಲೆಗಳು ಕೂಡ ಹೆಚ್ಚಾಗಿದೆ. ಈ ಯುದ್ಧವು ಇರಾನ್ ಮತ್ತು ಇಸ್ರೇಲ್‌ಗೆ ಹಾಗೂ ಅಮೆರಿಕಕ್ಕೆ ಭಾರಿ ನಷ್ಟವನ್ನುಂಟುಮಾಡಿದೆ. ಇರಾನಿನ ದಾಳಿಯಿಂದಾಗಿ ಅಮೆರಿಕ ಇಲ್ಲಿಯವರೆಗೆ ಸುಮಾರು 16 ಯುದ್ಧವಿಮಾನಗಳನ್ನು ಕಳೆದುಕೊಂಡಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಸಾಯಿ ಪಲ್ಲವಿಗೆ ಕೊಟ್ಟ ಮಾತನ್ನು ಉಳಿಸಿಕೊಂಡ ಮಣಿರತ್ನಂ

ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಅವರು ಈಗ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಲೈಕಾ ಪ್ರೊಡಕ್ಷನ್ ಈ ಚಿತ್ರವನ್ನು ಅನೌನ್ಸ್ ಮಾಡಿದೆ. ಈ ಸಿನಿಮಾ ಬಹಳ ಕುತೂಹಲ ಮೂಡಿಸಿದೆ. ಈ ಚಿತ್ರವನ್ನು ನಿರ್ದೇಶನ ಮಾಡುತ್ತಿರುವುದು ಮಣಿರತ್ನಂ ಅವರು. ಈ ಸಿನಿಮಾಗೆ ಸಾಯಿ ಪಲ್ಲವಿ ನಾಯಕಿ. ಈ ಚಿತ್ರ ಇನ್ನು ಕೆಲವೇ ವಾರಗಳಲ್ಲಿ ಶೂಟಿಂಗ್ ಆರಂಭಿಸಲಿದೆ.

ಮಣಿರತ್ನಂ ಅವರು ‘ಥಗ್ ಲೈಫ್’ ಹೆಸರಿನ ಸಿನಿಮಾ ಮಾಡಿದರು. ಕಮಲ್ ಹಾಸನ್ ಜೊತೆ ಮಾಡಿದ ಈ ಚಿತ್ರ ಅಟ್ಟರ್ ಫ್ಲಾಪ್ ಆಯಿತು. ಕರ್ನಾಟಕದಲ್ಲಿ ಈ ಚಿತ್ರ ಬಿಡುಗಡೆಯನ್ನೇ ಕಂಡಿಲ್ಲ. ಅದಕ್ಕೂ ಮೊದಲು ಬಂದ ‘ಪೊನ್ನಿಯೆನ್ ಸೆಲ್ವನ್’ ಹಾಗೂ ‘ಪೊನ್ನಿಯೆನ್ ಸೆಲ್ವನ್ 2’ ಸಿನಿಮಾಗಳು ತಮಿಳುನಾಡಿನಲ್ಲಿ ಮೆಚ್ಚುಗೆ ಪಡೆಯಿತು. ಈಗ ಅವರು ಗೆಲ್ಲುವ ಕನಸಿನೊಂದಿಗೆ ಹೊಸ ಚಿತ್ರ ಘೋಷಣೆ ಮಾಡಿರೋದು ವಿಶೇಷ.

ಮಣಿರತ್ನಂ ಅವರು ಹಲವು ಅದ್ಭುತ ಚಿತ್ರಗಳನ್ನು ಪ್ರೇಕ್ಷಕರ ಎದುರು ಇಟ್ಟಿದ್ದಾರೆ. ಅವರು ಇತ್ತೀಚೆಗೆ ಕೊಂಚ ಚಾರ್ಮ್ ಕಳೆದುಕೊಂಡಿದ್ದಾರೆ. ಆದರೆ, ಈ ಹೊಸ ಸಿನಿಮಾ ಮೂಲಕ ಅವರಿಗೆ ಗೆಲುವು ಸಿಗುವ ನಿರೀಕ್ಷೆ ಇದೆ.
‘ಮದ್ರಾಸ್ ಟಾಕೀಸ್’ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಇದು ಸಂಸ್ಥೆಯ 23ನೇ ಸಿನಿಮಾ. ಸಾಯಿ ಪಲ್ಲವಿ ಅವರು ಸದ್ಯ ‘ರಾಮಾಯಣ’ ಸಿನಿಮಾ ಶೂಟ್​​ ಅಲ್ಲಿ ಬ್ಯುಸಿ ಇದ್ದು, ಶೀಘ್ರವೇ ಮರಳಲಿದ್ದಾರೆ. ವಿಜಯ್ ಸೇತುಪತಿ ಅವರು ಈ ಚಿತ್ರಕ್ಕಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಮೊದಲು ವಿಜಯ್ ಹಾಗೂ ಮಣಿರತ್ನಂ ಅವರು ‘ಚೆಕ್ಕ ಚಿವಂತ ವಾನಮ್’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು.

ಇದನ್ನೂ ಓದಿ: ಸಾಯಿ ಪಲ್ಲವಿ ಕೈತಪ್ಪಿದ ಮಧುಬಾಲಾ ಬಯೋಪಿಕ್ ಅವಕಾಶ: ಕಾರಣ ಏನು?

ಸಾಯಿ ಪಲ್ಲವಿ ಅವರನ್ನು ಮಣಿರತ್ನಂ ಅವರು ಈ ಮೊದಲು ಹೊಗಳಿದ್ದರು. ಸಾಯಿ ಪಲ್ಲವಿ ಜೊತೆ ಸಿನಿಮಾ ಮಾಡುತ್ತೇನೆ ಎಂದು ಮಣಿರತ್ನಂ ಹೇಳಿದ್ದರು. ಈಗ ಅವರು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ಸಾಯಿ ಪಲ್ಲವಿ ಓರ್ವ ಅದ್ಭುತ ನಟಿ. ಅವರು ಓರ್ವ ಅದ್ಭುತ ನಿರ್ದೇಶಕನ ಜೊತೆ ಸೇರುತ್ತಿದ್ದಾರೆ ಎಂದಾಗ ಸಹಜವಾಗಿಯೇ ಕುತೂಹಲ ಹೆಚ್ಚುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಗದ್ದರ್ ಪ್ರಶಸ್ತಿ: ರಶ್ಮಿಕಾ ಬೌನ್ಸರ್ ಕಿರಿಕ್, ರಾಜಮೌಳಿ ತಂದೆಗೆ ಅವಮಾನ

ತೆಲಂಗಾಣ ಸರ್ಕಾರವು ನಿನ್ನೆಯಷ್ಟೆ (ಮಾರ್ಚ್ 19) ‘ಗದ್ದರ್ ಚಲನಚಿತ್ರ ಪ್ರಶಸ್ತಿ’ (Gaddar) ಎರಡನೇ ಆವೃತ್ತಿಯ ಪ್ರದಾನ ಸಮಾರಂಭವನ್ನು ಆಯೋಜಿಸಿತ್ತು. ನಟಿ ರಶ್ಮಿಕಾ ಮಂದಣ್ಣ ಸೇರಿದಂತೆ ಹಲವಾರು ಸೆಲೆಬ್ರಿಟಿಗಳು, ತಂತ್ರಜ್ಞರಿಗೆ ಪ್ರಶಸ್ತಿಗಳನ್ನು ನೀಡಲಾಯ್ತು. ಸಿಎಂ ರೇವಂತ್ ರೆಡ್ಡಿ ಸೇರಿದಂತೆ ಇನ್ನೂ ಕೆಲವು ಗಣ್ಯರುಗಳು ಅತ್ಯುತ್ತಮ ನಟ, ನಟಿ ಮತ್ತು ತಂತ್ರಜ್ಞರಿಗೆ ಪ್ರಶಸ್ತಿಗಳನ್ನು ವಿತರಣೆ ಮಾಡಲಾಯ್ತು. ಕಾರ್ಯಕ್ರಮ ಚೆನ್ನಾಗಿ ನಡೆಯಿತಾದರೂ ಎರಡು ಪ್ರಮುಖ ವಿಷಯಗಳು ತುಸು ತಡವಾಗಿ ವರದಿ ಆಗಿವೆ. ಕಾರ್ಯಕ್ರದ ವೇಳೆ ರಶ್ಮಿಕಾ ಮಂದಣ್ಣ ಅವರ ಬೌನ್ಸರ್ ಕಿರಿಕ್ ಮಾಡಿಕೊಂಡಿದ್ದಾರೆ ಹಾಗೂ ರಾಜಮೌಳಿ ಅವರ ತಂದೆ ಖ್ಯಾತ ಕತೆಗಾರ ವಿಯೇಂದ್ರ ಪ್ರಸಾದ್ ಅವರಿಗೆ ಅಪಮಾನ ನಡೆದಿದೆ ಎಂದು ಕೆಲ ತೆಲುಗು ಮಾಧ್ಯಮಗಳು ವರದಿ ಮಾಡಿವೆ.

ನಟಿ ರಶ್ಮಿಕಾ ಮಂದಣ್ಣ ಅವರ ವೈಯಕ್ತಿಕ ಬೌನ್ಸರ್ ಒಬ್ಬರು ತೆಲಂಗಾಣದ ಫಿಲ್ಮ್ ಡೆವಲಪ್‌ಮೆಂಟ್ ಕಾರ್ಪೊರೇಷನ್ (FDC) ಅಧ್ಯಕ್ಷ ದಿಲ್ ರಾಜು ಅವರ ಆಪ್ತ ಸಹಾಯಕರೊಂದಿಗೆ ಜಗಳ ಮಾಡಿದ್ದಾರೆಂದು ವರದಿಯಾಗಿದೆ. ಕಾರ್ಯಕ್ರಮದಲ್ಲಿ ರಶ್ಮಿಕಾ ಮತ್ತು ದಿಲ್ ರಾಜು ಅಕ್ಕ-ಪಕ್ಕ ಕೂತಿದ್ದರು. ಆದರೆ ದಿಲ್ ರಾಜು ಅವರ ಆಪ್ತರನ್ನು ಅಭಿಮಾನಿಯೆಂದು ತಪ್ಪಾಗಿ ಭಾವಿಸಿ ರಶ್ಮಿಕಾರ ಬೌನ್ಸರ್ ಕಿರಿಕ್ ಮಾಡಿದ್ದಾರೆ ಎನ್ನಲಾಗಿದ್ದು, ಬೌನ್ಸರ್ ಹೊಸದಾಗಿ ಕೆಲಸಕ್ಕೆ ಸೇರಿದ್ದರಿಂದ ಅಲ್ಲಿನ ಗಣ್ಯರ ಬಗ್ಗೆ ಅವರಿಗೆ ಅಷ್ಟಾಗಿ ತಿಳಿದಿರಲಿಲ್ಲ ಎನ್ನಲಾಗಿದೆ. ಮಾಧ್ಯಮದವರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸುವವರೆಗೂ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ಇದನ್ನೂ ಓದಿ:ಮಗಳಾಗಿ ಬಂದೆ, ಸೊಸೆಯಾಗಿದ್ದೀನಿ: ಪ್ರಶಸ್ತಿ ಸ್ವೀಕರಿಸಿ ಭಾವುಕರಾದ ರಶ್ಮಿಕಾ

ಖ್ಯಾತ ಚಿತ್ರಕಥೆಗಾರರೂ ಆಗಿರುವ ಹಾಗೂ ರಾಜಮೌಳಿ ಅವರ ತಂದೆಯೂ ಆಗಿರುವ ಸಂಸದ ವಿಜಯೇಂದ್ರ ಪ್ರಸಾದ್ ಅವರು ಸಹ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಆದರೆ ಇವೆಂಟ್ ಮ್ಯಾನೇಜ್‌ಮೆಂಟ್ ಕಂಪನಿಯ ಎಡವಟ್ಟಿನಿಂದಾಗಿ ಸಮಾರಂಭದಿಂದ ಅರ್ಧಕ್ಕೇ ಹೊರನಡೆದರು. ಕಾರ್ಯಕ್ರಮದ ಜವಾಬ್ದಾರಿ ಹೊತ್ತಿದ್ದ ಮುಂಬೈ ಮೂಲದ ಕಂಪನಿಗೆ ದಕ್ಷಿಣ ಭಾರತದ ಸೆಲೆಬ್ರಿಟಿಗಳ ಬಗ್ಗೆ ಹೆಚ್ಚಿನ ಮಾಹಿತಿ ಇರಲಿಲ್ಲ. ಅವರು ವಿಜಯೇಂದ್ರ ಪ್ರಸಾದ್ ಅವರನ್ನು ನಟ ಆರ್ ನಾರಾಯಣ ಮೂರ್ತಿ ಎಂದು ತಪ್ಪಾಗಿ ಭಾವಿಸಿ, ಅದೇ ಹೆಸರಿನಿಂದ ಕರೆದರು. ಇದರಿಂದ ಬೇಸರಗೊಂಡ ವಿಜಯೇಂದ್ರ ಪ್ರಸಾದ್ ಅವರು ವೇದಿಕೆಯಿಂದ ಕೋಪದಿಂದಲೇ ನಿರ್ಗಮಿಸಿದರು ಎನ್ನಲಾಗಿದೆ.

‘ಎನ್‌.ಟಿ.ಆರ್ ಜೀವಮಾನ ಸಾಧನೆ’ಯನ್ನು ಮೆಗಾಸ್ಟಾರ್ ಚಿರಂಜೀವಿ ಅವರಿಗೆ ನೀಡಲಾಯ್ತು. ಪ್ರಶಸ್ತಿ ಸ್ವೀಕರಿಸಿದ ಚಿರಂಜೀವಿ ಅವರು, ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ತೆಲಂಗಾಣ ಸರ್ಕಾರವನ್ನು ಶ್ಲಾಘಿಸಿದರು. ಚಲನಚಿತ್ರ ರಂಗಕ್ಕೆ ಸರ್ಕಾರ ನೀಡುತ್ತಿರುವ ಸಹಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಕಲಾವಿದರನ್ನು ಪ್ರೋತ್ಸಾಹಿಸುವ ವಿಷಯದಲ್ಲಿ ಆಂಧ್ರಪ್ರದೇಶ ಸರ್ಕಾರವು ತೆಲಂಗಾಣವನ್ನು ನೋಡಿ ಕಲಿಯಬೇಕು ಎಂದು ಸಹ ಅಭಿಪ್ರಾಯಪಟ್ಟರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಹಿಡನ್ ಕ್ಯಾಮೆರಾ, 58 ಮಹಿಳೆಯರ ಅಶ್ಲೀಲ ವಿಡಿಯೋ; ಬಯಲಾಗುತ್ತಲೇ ಇದೆ ಸಂಖ್ಯಾಶಾಸ್ತ್ರಜ್ಞ ಅಶೋಕ್ ಖರತ್ ಕರ್ಮಕಾಂಡ

ಮುಂಬೈ, ಮಾರ್ಚ್ 20: ಮಹಾರಾಷ್ಟ್ರದ ನಾಸಿಕ್‌ನಲ್ಲಿ (Nasik) ಆಧ್ಯಾತ್ಮಿಕತೆಯ ಸೋಗಿನಲ್ಲಿ 35 ವರ್ಷದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪ್ರಭಾವಿ ಸಂಖ್ಯಾಶಾಸ್ತ್ರಜ್ಞ ಅಶೋಕ್ ಖರತ್ ಅವರನ್ನು ಬಂಧಿಸಲಾಗಿದೆ. ನಿವೃತ್ತ ನೌಕಾ ಅಧಿಕಾರಿಯಾಗಿರುವ 67 ವರ್ಷದ ಅಶೋಕ್ ಖರತ್ ತನಗೆ ಮಾದಕ ದ್ರವ್ಯ ನೀಡಿ, ವಶಪಡಿಸಿಕೊಂಡು, ತನ್ನ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಅವರ ಫಾರ್ಮ್​ಹೌಸ್​ ಮೇಲೆ ದಾಳಿ ನಡೆಸಿದಾಗ ಶಾಕಿಂಗ್ ಸತ್ಯಗಳು ಬೆಳಕಿಗೆ ಬಂದಿವೆ.

ಲೈಂಗಿಕ ಶೋಷಣೆ ಕೇವಲ ಒಬ್ಬ ಮಹಿಳೆಗೆ ಸೀಮಿತವಾಗಿಲ್ಲ ಎಂಬ ಸಂಗತಿ ಪೊಲೀಸ್ ತನಿಖೆ ಬಹಿರಂಗಪಡಿಸಿದೆ. ನಿವೃತ್ತ ಮರ್ಚೆಂಟ್ ನೇವಿ ಅಧಿಕಾರಿಯಾಗಿರುವುದರಿಂದ ತನ್ನನ್ನು ‘ಕ್ಯಾಪ್ಟನ್’ ಎಂದು ಕರೆದುಕೊಳ್ಳುವ ಅಶೋಕ್ ಖರತ್, ಮಹಿಳೆಯರಿಗೆ ಅವರ ವೈಯಕ್ತಿಕ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿ ತನ್ನ ಕಚೇರಿಗೆ ಕರೆಸುತ್ತಿದ್ದರು. ಅಲ್ಲಿಗೆ ಬಂದ ನಂತರ ಮಾದಕ ದ್ರವ್ಯವನ್ನು ನೀಡುವ ಮೂಲಕ ಅವರನ್ನು ಸಮ್ಮೋಹನಗೊಳಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ಅಜ್ಜ

ಇದಾದ ನಂತರ ಆ ಮಹಿಳೆಯರಲ್ಲಿ ಭಯವನ್ನು ಹುಟ್ಟುಹಾಕುವ ಮೂಲಕ, ಅವರ ಗಂಡಂದಿರ ಸಾವಿನ ಬಗ್ಗೆ ಬೆದರಿಕೆ ಹಾಕುವ ಮೂಲಕ ಅವರ ಮೇಲೆ ಅತ್ಯಾಚಾರ ಮಾಡುತ್ತಿದ್ದರು. ಇದಿಷ್ಟೇ ಅಲ್ಲ, ಅಶೋಕ್ ಖರತ್ ತನ್ನ ಕಚೇರಿಯೊಳಗೆ ಗುಪ್ತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದರು. ಅವರ ಮೇಲೆ ದಾಳಿ ನಡೆದ ವೇಳೆ ಆತ ಚಿತ್ರೀಕರಿಸಿದ 58 ಮಹಿಳೆಯರನ್ನು ಒಳಗೊಂಡ ಅಶ್ಲೀಲ ವಿಡಿಯೋಗಳನ್ನು ಒಳಗೊಂಡಿರುವ ಪೆನ್ ಡ್ರೈವ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಫೇಸ್​​ಬುಕ್​ನಲ್ಲಿ ‘ನೀಲಿ ಡ್ರಮ್’ ಪೋಸ್ಟ್ ನೋಡಿ ಹೆಂಡತಿಯನ್ನು ಪ್ರೇಮಿ ಜೊತೆ ಹೋಗಲು ಬಿಟ್ಟ ಗಂಡ!

ಈ ವಿಷಯದ ತನಿಖೆಗಾಗಿ ಮಹಾರಾಷ್ಟ್ರ ಸರ್ಕಾರವು ಐಪಿಎಸ್ ಅಧಿಕಾರಿ ತೇಜಸ್ವಿನಿ ಸತ್ಪುಟೆ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ)ವನ್ನು ರಚಿಸಿದೆ. ಈ ಆಶೋಕ್ ಖರತ್ ದೆಹಲಿಯಿಂದ ಮಹಾರಾಷ್ಟ್ರದ ಸರ್ಕಾರದವರೆಗೆ ಅನೇಕ ರಾಜಕೀಯ ಸಂಪರ್ಕಗಳನ್ನು ಹೊಂದಿದ್ದಾರೆಂದು ವದಂತಿಗಳಿವೆ. ಉದ್ಯಮಿಗಳು, ರಾಜಕಾರಣಿಗಳು, ಸೆಲಬ್ರಿಟಿಗಳಿಗೆ ಸಂಖ್ಯಾಶಾಸ್ತ್ರ ಹೇಳುವ ಜ್ಯೋತಿಷಿಯೆಂದು ಪರಿಚಿತರಾಗಿದ್ದ ಅಶೋಕ್ ಖರತ್ ದೊಡ್ಡ ಜಾಲವನ್ನೇ ಹೊಂದಿದ್ದರು. ನಾಸಿಕ್‌ನ ಸಿನ್ನಾರ್‌ನಲ್ಲಿರುವ ಶ್ರೀ ಈಶಾನ್ಯೇಶ್ವರ ದೇವಸ್ಥಾನ ಟ್ರಸ್ಟ್‌ನ ಅಧ್ಯಕ್ಷರಾಗಿ, ಖರತ್ ಪ್ರಮುಖ ರಾಜಕಾರಣಿಗಳು, ಸೆಲೆಬ್ರಿಟಿಗಳು ಮತ್ತು ವ್ಯಾಪಾರ ಉದ್ಯಮಿಗಳಿಗೆ ಆಧ್ಯಾತ್ಮಿಕ ಮಾರ್ಗದರ್ಶಕರಾಗಿ ಗುರುತಿಸಲ್ಪಟ್ಟಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

SECL Apprentice Recruitment 2026: 1600 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ; ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಪದವೀಧರರಿಗೆ ಸುವರ್ಣವಕಾಶ

ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ (SECL) ಅಪ್ರೆಂಟಿಸ್ ಹುದ್ದೆಗಳಿಗೆ ದೊಡ್ಡ ನೇಮಕಾತಿ ಅಭಿಯಾನವನ್ನು ಘೋಷಿಸಿದೆ. ಈ ಅಭಿಯಾನವು ಒಟ್ಟು 1,600 ಹುದ್ದೆಗಳನ್ನು ಭರ್ತಿ ಮಾಡಲಿದ್ದು, ಎಂಜಿನಿಯರಿಂಗ್ ಪದವೀಧರರು ಮತ್ತು ಡಿಪ್ಲೊಮಾ ಹೊಂದಿರುವವರಿಗೆ ಅವಕಾಶಗಳನ್ನು ನೀಡುತ್ತದೆ. ಆಸಕ್ತ ಅಭ್ಯರ್ಥಿಗಳು ಮಾರ್ಚ್ 31 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಮತ್ತು ಪ್ರತಿಷ್ಠಿತ PSU ನಲ್ಲಿ ಕೆಲಸದ ಅನುಭವವನ್ನು ಪಡೆಯಬಹುದು.

ಪದವೀಧರರು ಮತ್ತು ಡಿಪ್ಲೊಮಾ ಪಡೆದವರಿಗೆ ಪ್ರತ್ಯೇಕ ಹುದ್ದೆಗಳು:

ಈ ನೇಮಕಾತಿಯನ್ನು ಎರಡು ವಿಭಾಗಗಳಾಗಿ ವಿಂಗಡಿಸಲಾಗಿದೆ. ಮೊದಲ ವರ್ಗವು ಪದವೀಧರ ಅಪ್ರೆಂಟಿಸ್‌ಗಳಿಗೆ ಆಗಿದ್ದು, ಗಣಿಗಾರಿಕೆ, ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಮತ್ತು ಸಿವಿಲ್‌ನಂತಹ ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಎರಡನೇ ವರ್ಗವು ತಂತ್ರಜ್ಞ ಅಪ್ರೆಂಟಿಸ್‌ಗಳಿಗೆ ಆಗಿದ್ದು, ಎಂಜಿನಿಯರಿಂಗ್ ಡಿಪ್ಲೊಮಾ ಹೊಂದಿರುವ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಒಟ್ಟು ಹುದ್ದೆಗಳಲ್ಲಿ ಗಣಿಗಾರಿಕೆ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹೆಚ್ಚಿನ ಪಾಲನ್ನು ಹೊಂದಿದ್ದಾರೆ.

ಅರ್ಹತೆಗಳ ವಿವರ:

ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಸಂಬಂಧಿತ ವ್ಯಾಪಾರದಲ್ಲಿ ಬಿಇ/ಬಿ.ಟೆಕ್ ಅಥವಾ ಡಿಪ್ಲೊಮಾ ಹೊಂದಿರಬೇಕು. NATS ಪೋರ್ಟಲ್‌ನಲ್ಲಿ ನೋಂದಣಿ ಕೂಡ ಕಡ್ಡಾಯವಾಗಿದೆ. 2023, 2024, ಅಥವಾ 2025 ರಲ್ಲಿ ತಮ್ಮ ಅಧ್ಯಯನವನ್ನು ಪೂರ್ಣಗೊಳಿಸಿದವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು. ಈ ಹಿಂದೆ ಅಪ್ರೆಂಟಿಸ್‌ಶಿಪ್ ಪೂರ್ಣಗೊಳಿಸಿದವರು ಅಥವಾ ಒಂದು ವರ್ಷಕ್ಕಿಂತ ಹೆಚ್ಚು ಅನುಭವ ಹೊಂದಿರುವವರು ಅರ್ಹರಾಗಿರುವುದಿಲ್ಲ.

ವಿದ್ಯಾರ್ಥಿವೇತನ ಮತ್ತು ಸೌಲಭ್ಯಗಳು:

ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿಯ ಸಮಯದಲ್ಲಿ ಮಾಸಿಕ ಸ್ಟೈಫಂಡ್ ನೀಡಲಾಗುತ್ತದೆ. ಪದವೀಧರ ಅಪ್ರೆಂಟಿಸ್‌ಗಳು ಸುಮಾರು 9,000ರೂ. ಮತ್ತು ಡಿಪ್ಲೊಮಾ ಪಡೆದವರಿಗೆ ತಿಂಗಳಿಗೆ 8,000ರೂ. ನೀಡಲಾಗುತ್ತದೆ. ಈ ಮೊತ್ತವನ್ನು ಭಾರತ ಸರ್ಕಾರದ ನಿಯಮಗಳಿಗೆ ಅನುಸಾರವಾಗಿ ನಿರ್ಧರಿಸಲಾಗುತ್ತದೆ.

ಇದನ್ನೂ ಓದಿ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​​ನಲ್ಲಿ ಉದ್ಯೋಗವಕಾಶ; ಪದವೀಧರರಿಗೆ ಸುವರ್ಣವಕಾಶ

ಪರೀಕ್ಷೆಯಿಲ್ಲದೆ ಆಯ್ಕೆ:

ಈ ನೇಮಕಾತಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಅಭ್ಯರ್ಥಿಗಳನ್ನು ಅವರ ಶೈಕ್ಷಣಿಕ ಅರ್ಹತೆಯ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯಿಂದ ಆಯ್ಕೆ ಮಾಡಲಾಗುತ್ತದೆ. ಇಬ್ಬರು ಅಭ್ಯರ್ಥಿಗಳು ಒಂದೇ ಅಂಕಗಳನ್ನು ಗಳಿಸಿದರೆ, ಹಿರಿಯ ಅಭ್ಯರ್ಥಿಗೆ ಆದ್ಯತೆ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಮೊದಲು NATS ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು. ನಂತರ, ಅಧಿಕೃತ SECL ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ. ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಅಪ್‌ಲೋಡ್ ಮಾಡಿ. ಅಂತಿಮವಾಗಿ, ಫಾರ್ಮ್ ಅನ್ನು ಸಲ್ಲಿಸಿ ಮತ್ತು ಪ್ರಿಂಟ್​ ಕಾಪಿ ತೆಗೆದಿಟ್ಟಯಕೊಳ್ಳಿ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Bank Job: ಬ್ಯಾಂಕ್ ಉದ್ಯೋಗ ಪಡೆಯಲು ಇನ್ಮುಂದೆ ಪರೀಕ್ಷೆಯ ಜೊತೆಗೆ ‘ಸಿಬಿಲ್ ಸ್ಕೋರ್’ ಕೂಡ ಮುಖ್ಯ!

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಬ್ಯಾಂಕಿನಲ್ಲಿ ಕೆಲಸ ಪಡೆಯುವುದು ಸುಲಭದ ಮಾತಲ್ಲ. ಇದುವರೆಗೆ ಅಭ್ಯರ್ಥಿಗಳು ಕೇವಲ ಕಠಿಣ ಅಧ್ಯಯನ, ಲಿಖಿತ ಪರೀಕ್ಷೆ ಮತ್ತು ಸಂದರ್ಶನಗಳ ಮೇಲೆ ಮಾತ್ರ ಗಮನ ಹರಿಸುತ್ತಿದ್ದರು. ಆದರೆ ಈಗ ಬ್ಯಾಂಕಿಂಗ್ ವಲಯವು ನೇಮಕಾತಿ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ ಮತ್ತು ಜವಾಬ್ದಾರಿಯುತವಾಗಿಸಲು ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಇದರ ಅಡಿಯಲ್ಲಿ, ಅಭ್ಯರ್ಥಿಗಳ ಕ್ರೆಡಿಟ್ ಸ್ಕೋರ್ (CIBIL Score) ಅನ್ನು ಪರಿಶೀಲಿಸುವುದು ಈಗ ಕಡ್ಡಾಯವಾಗಿದೆ.

ಹಣಕಾಸಿನ ಶಿಸ್ತಿಗೆ ಆದ್ಯತೆ:

ಸಾರ್ವಜನಿಕರ ಹಣ ಮತ್ತು ಬ್ಯಾಂಕಿನ ಆರ್ಥಿಕ ವಹಿವಾಟುಗಳನ್ನು ನಿರ್ವಹಿಸುವ ಜವಾಬ್ದಾರಿಯುತ ಸ್ಥಾನಕ್ಕೆ ಬರುವವರು ಸ್ವಚ್ಛವಾದ ಹಣಕಾಸಿನ ದಾಖಲೆಯನ್ನು ಹೊಂದಿರಬೇಕು ಎಂಬುದು ಬ್ಯಾಂಕುಗಳ ಆಶಯವಾಗಿದೆ. ಒಬ್ಬ ಅಭ್ಯರ್ಥಿಯು ಈ ಹಿಂದೆ ಪಡೆದ ಸಾಲವನ್ನು ಮರುಪಾವತಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದರೆ ಅಥವಾ ಕ್ರೆಡಿಟ್ ಕಾರ್ಡ್ ಬಿಲ್‌ಗಳನ್ನು ಸರಿಯಾದ ಸಮಯಕ್ಕೆ ಪಾವತಿಸದಿದ್ದರೆ, ಅಂತಹವರ ವಿಶ್ವಾಸಾರ್ಹತೆಯ ಮೇಲೆ ಬ್ಯಾಂಕುಗಳು ಸಂಶಯ ವ್ಯಕ್ತಪಡಿಸುತ್ತವೆ. ಕಳಪೆ ಸಾಲದ ದಾಖಲೆ ಹೊಂದಿರುವವರಿಗೆ ಕೆಲಸ ನೀಡುವುದು ಬ್ಯಾಂಕಿನ ದೃಷ್ಟಿಯಲ್ಲಿ ಅಪಾಯಕಾರಿ ಎಂದು ಪರಿಗಣಿಸಲಾಗುತ್ತದೆ.

ಯಾರ ಮೇಲೆ ಈ ನಿಯಮದ ಪರಿಣಾಮ?

ಈ ಹೊಸ ಬದಲಾವಣೆಯು ಬ್ಯಾಂಕಿಂಗ್ ಪರೀಕ್ಷೆಗಳ ಮೂಲಕ ಉದ್ಯೋಗ ಪಡೆಯಲು ಬಯಸುವ ಎಲ್ಲಾ ಅಭ್ಯರ್ಥಿಗಳಿಗೆ ಅನ್ವಯಿಸುತ್ತದೆ. ವಿಶೇಷವಾಗಿ ಈ ಹಿಂದೆ ಸಾಲ ಪಡೆದು ಇಎಂಐ (EMI) ಪಾವತಿಸದವರು ಅಥವಾ ಕ್ರೆಡಿಟ್ ಕಾರ್ಡ್ ಬಾಕಿಯನ್ನು ಉಳಿಸಿಕೊಂಡಿರುವವರು ಸಂಕಷ್ಟಕ್ಕೆ ಸಿಲುಕಬಹುದು. ಪರಿಶೀಲನಾ ಪ್ರಕ್ರಿಯೆಯ ಸಮಯದಲ್ಲಿ ಅಭ್ಯರ್ಥಿಗಳು ತಮ್ಮ ಸಿಬಿಲ್ ವರದಿಯನ್ನು ಸಲ್ಲಿಸಬೇಕಾಗುತ್ತದೆ. ಒಂದು ವೇಳೆ ದಾಖಲೆಗಳಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಅಥವಾ ತೃಪ್ತಿದಾಯಕ ವಿವರಣೆ ನೀಡಲು ವಿಫಲರಾದಲ್ಲಿ, ಅಂತಿಮವಾಗಿ ಆಯ್ಕೆಯಾಗಿದ್ದರೂ ಸಹ ಉದ್ಯೋಗದ ಅವಕಾಶವನ್ನು ಕಳೆದುಕೊಳ್ಳಬೇಕಾಗಬಹುದು.

ಇದನ್ನೂ ಓದಿ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​​ನಲ್ಲಿ ಉದ್ಯೋಗವಕಾಶ; ಪದವೀಧರರಿಗೆ ಸುವರ್ಣವಕಾಶ

ಶಿಕ್ಷಣ ಸಾಲ ಪಡೆದವರಿಗೆ ವಿನಾಯಿತಿ:

ಆದರೆ, ಶಿಕ್ಷಣಕ್ಕಾಗಿ ಸಾಲ (Education Loan) ಪಡೆದ ವಿದ್ಯಾರ್ಥಿಗಳಿಗೆ ಬ್ಯಾಂಕುಗಳು ಸ್ವಲ್ಪ ಮಟ್ಟಿನ ರಿಯಾಯಿತಿಯನ್ನು ನೀಡಿವೆ. ಕೇವಲ ಹಣಕಾಸಿನ ಅಡಚಣೆಯಿಂದಾಗಿ ಶಿಕ್ಷಣ ಸಾಲದ ಮರುಪಾವತಿ ವಿಳಂಬವಾಗಿದ್ದರೆ ಮತ್ತು ಅಭ್ಯರ್ಥಿಯು ಉದ್ದೇಶಪೂರ್ವಕವಾಗಿ ಸಾಲಗಾರನಾಗಿ ಉಳಿದಿಲ್ಲದಿದ್ದರೆ, ಅಂತಹ ಸಂದರ್ಭಗಳನ್ನು ಮಾನವೀಯ ನೆಲೆಯಲ್ಲಿ ಪರಿಶೀಲಿಸಲಾಗುತ್ತದೆ. ಶಿಕ್ಷಣ ಸಾಲದ ವಿಷಯದಲ್ಲಿ ಬ್ಯಾಂಕುಗಳು ಮೃದು ಧೋರಣೆ ತಳೆಯುವುದಾಗಿ ತಿಳಿಸಿವೆ.

ಅಭ್ಯರ್ಥಿಗಳಿಗೆ ತಜ್ಞರ ಕಿವಿಮಾತು:

ಬ್ಯಾಂಕಿಂಗ್ ವಲಯದ ಉದ್ಯೋಗಾಕಾಂಕ್ಷಿಗಳು ಕೇವಲ ಪುಸ್ತಕದ ಜ್ಞಾನಕ್ಕೆ ಸೀಮಿತವಾಗದೆ ತಮ್ಮ ಹಣಕಾಸಿನ ಶಿಸ್ತಿನ ಬಗ್ಗೆಯೂ ಜಾಗರೂಕರಾಗಿರಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ. ಅಭ್ಯರ್ಥಿಗಳು ನಿಯಮಿತವಾಗಿ ತಮ್ಮ ಕ್ರೆಡಿಟ್ ಸ್ಕೋರ್ ಅನ್ನು ಪರಿಶೀಲಿಸಿಕೊಳ್ಳುತ್ತಿರಬೇಕು. ಹಳೆಯ ಸಾಲದ ಬಾಕಿಗಳಿದ್ದರೆ ತಕ್ಷಣ ಪಾವತಿಸಿ ಬ್ಯಾಂಕಿನಿಂದ ‘ಬಾಕಿ ಇಲ್ಲದ ಪ್ರಮಾಣಪತ್ರ’ (NOC) ಪಡೆಯುವುದು ಸೂಕ್ತ. ಇದರಿಂದ ಭವಿಷ್ಯದಲ್ಲಿ ಉದ್ಯೋಗದ ಹಂತದಲ್ಲಿ ಎದುರಾಗಬಹುದಾದ ತಾಂತ್ರಿಕ ಅಡೆತಡೆಗಳನ್ನು ತಪ್ಪಿಸಬಹುದು.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಸನ್‌ ಉದಯ’ ವಾಹಿನಿಯಲ್ಲಿ ಮಾರ್ಚ್‌ 23ರಿಂದ ಹೊಸ ಧಾರಾವಾಹಿ ‘ಮೂಗುತಿ ಮಲ್ಲಿ’

ಪ್ರೇಕ್ಷಕರ ನೆಚ್ಚಿನ ‘ಉದಯ’ ಟಿವಿ ಈಗ ‘ಸನ್ ಉದಯ’ (Sun Udaya) ಎಂಬ ಹೊಸ ಹೆಸರಿನೊಂದಿಗೆ ಪ್ರೇಕ್ಷಕರನ್ನು ರಂಜಿಸುತ್ತಿದೆ. ಯುಗಾದಿ ಹಬ್ಬ ಎಂದರೆ ಹೊಸ ವರ್ಷದ ಆರಂಭ. ಉದಯ ಟಿವಿಯು ಯುಗಾದಿಯ ದಿನವೇ ‘ಸನ್ ಉದಯ’ವಾಗಿ ಬದಲಾಗಿದೆ. ಕಳೆದ ಮೂರು ದಶಕಗಳಿಂದ ಕನ್ನಡಿಗರನ್ನು ರಂಜಿಸುತ್ತಿರುವ ಈ ವಾಹಿನಿಯಲ್ಲಿ ಈಗ ಸಾಕಷ್ಟು ಹೊಸತನವನ್ನು ಪರಿಚಯಿಸಲಾಗುತ್ತಿದೆ. ಅದರ ಮೊದಲ ಹಂತವಾಗಿ ಸೋಮವಾರದಿಂದ (ಮಾರ್ಚ್‌ 23) ಹೊಸ ಸೀರಿಯಲ್ ‘ಮೂಗುತಿ ಮಲ್ಲಿ’ (Muguthi Malli) ಪ್ರಸಾರ ಆರಂಭ ಆಗುತ್ತಿದೆ.

ಹೌದು, ಮಾರ್ಚ್‌ 23ರಿಂದ ಸೋಮವಾರದಿಂದ ಶನಿವಾರ ರಾತ್ರಿ 8 ಗಂಟೆಗೆ ‘ಮೂಗುತಿ ಮಲ್ಲಿ’ ಸೀರಿಯಲ್ ಬರಲಿದೆ. ಇದೊಂದು ಲವ್‌ ಸ್ಟೋರಿ ಹೊಂದಿರುವ ಧಾರಾವಾಹಿ. ಶ್ರೀಮಂತರು ಎಂದರೆ ದೂರ ಓಡಿ ಹೋಗುವ ಹುಡುಗಿಯ ಕಥೆ ಇದು. ಕಷ್ಟದಲ್ಲಿ ಬೆಳೆದ ಮಲ್ಲಿ ಎಂಬ ಹುಡುಗಿ ಚೂಟಿ, ಘಾಟಿ ಮತ್ತು ಸ್ವಾಭಿಮಾನಿ. ಆಕೆಯ ಮೇಲೆ ಶ್ರೀಮಂತ ಹುಡುಗನಿಗೆ ಲವ್ ಆದರೆ? ಅದೇ ಈ ಧಾರಾವಾಹಿಯ ಕಹಾನಿ.

ಮಲ್ಲಿಯ ಅಣ್ಣ ಉಂಡಾಡಿ ಗುಂಡ ಆದ್ದರಿಂದ ಮನೆ ಹೊಣೆಗಾರಿಕೆ ಆಕೆ ಹೆಗಲ ಮೇಲಿದೆ. ಅಪ್ಪನಿಂದ ಬಳುವಳಿಯಾಗಿ ಬಂದ ಅಡುಗೆ ಕೆಲಸವೇ ಈಕೆಯ ಕೈಹಿಡಿದಿದೆ. ಮನೆ ಮನೆಗೆ ಹೋಗಿ ಅಡುಗೆ ಮಾಡುವ ಮಲ್ಲಿಯ ಕೈಯಲ್ಲಿ ಅದೇನೋ ಜಾದೂ ಇದೆ. ಹಸಿದವರಿಗೆ ಮಾತ್ರ ಅನ್ನದ ಬೆಲೆ ಗೊತ್ತಿರೋದು ಎಂಬುದು ಅವಳ ನಂಬಿಕೆ. ಆದರೆ ಬಡವರನ್ನು ಕಣ್ಣೆತ್ತೆಯೂ ನೋಡದ ಶ್ರೀಮಂತ ಕುಟುಂಬದ ವಿರಾಜ್​​ಗೆ ಮಲ್ಲಿ ಮೇಲೆ ಪ್ರೀತಿ ಚಿಗುರುತ್ತದೆ.

ಮಸಾಲೆ ಕಂಪನಿ ನಡೆಸುವ, ಹಸಿವನ್ನೇ ಕಂಡಿದರ ಕುಟುಂಬದ ಹುಡುಗನೇ ಕಥಾನಾಯಕ ವಿರಾಜ್. ಮಲ್ಲಿಯನ್ನು ನೋಡಿದ ತಕ್ಷಣ ಅವನಿಗೆ ಪ್ರೀತಿ ಹುಟ್ಟುತ್ತದೆ. ಆದರೆ ಆಕೆಗೆ ಶ್ರೀಮಂತರನ್ನು ಕಂಡರೆ ಆಗುವುದಿಲ್ಲ. ಹೀಗಿರುವಾಗ ಮಲ್ಲಿ ಮತ್ತು ವಿರಾಜ್‌ ಲವ್‌ ಸ್ಟೋರಿ ಎತ್ತ ಸಾಗುತ್ತದೆ ಎಂಬುದನ್ನು ತಿಳಿಯಲು ಮಾರ್ಚ್ 23ರಿಂದ ರಾತ್ರಿ 8 ಗಂಟೆಗೆ ‘ಮೂಗುತಿ ಮಲ್ಲಿ’ ಸೀರಿಯಲ್ ನೋಡಬೇಕು.

ಇದನ್ನೂ ಓದಿ: 50 ದಿನ ಪೂರೈಸಿದ ಖುಷಿಯಲ್ಲಿ ‘ಭಾರತಿ ಟೀಚರ್ 7ನೇ ತರಗತಿ’ ಸಿನಿಮಾ ತಂಡ

‘ಕೋಟಿ’ ಸಿನಿಮಾದಲ್ಲಿ ಡಾಲಿ ಧನಂಜಯ ತಂಗಿಯಾಗಿ ಅಭಿನಯಿಸಿದ್ದ ತನುಜಾ ವೆಂಕಟೇಶ್‌ ಅವರು ‘ಮೂಗುತಿ ಮಲ್ಲಿ’ ಧಾರಾವಾಹಿಗೆ ನಾಯಕಿ ಆಗಿದ್ದಾರೆ. ‘ಅಂತರಪಟ’ ಖ್ಯಾತಿಯ ಚಂದನ್‌ ಗೌಡ ಅವರು ಹೀರೋ ಆಗಿದ್ದಾರೆ. ಹಿರಿಯ ನಟಿ ಅಂಬಿಕಾ, ತೆಲುಗು ಬಿಗ್‌ಬಾಸ್‌ ಖ್ಯಾತಿಯ ಕನ್ನಡದ ನಟಿ ಕೀರ್ತಿ ಭಟ್‌, ಆರ್ಯ, ವೀಣಾ ಪೊನ್ನಪ್ಪ, ಮರೀನಾ, ಪುನೀತ್‌ ಮುಂತಾದವರು ಈ ಧಾರಾವಾಹಿಯ ಪಾತ್ರವರ್ಗದಲ್ಲಿ ಇದ್ದಾರೆ. ಆರವ್‌ ಕಾರ್ತಿಕ್‌ ಅವರು ನಿರ್ದೇಶನ ಮಾಡುತ್ತಿದ್ದಾರೆ. ಪುನೀತ್‌ ಛಾಯಾಗ್ರಹಣ ಮಾಡುತ್ತಿದ್ದಾರೆ. ಅಜಯ್‌ ರವಿ ಅವರು ಈ ಧಾರಾವಾಹಿ ನಿರ್ಮಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕೆಂಪೇಗೌಡ ಏರ್​ಪೋರ್ಟ್​​ಗೆ 3ನೇ ಬಾರಿಗೆ ಭಾರತ ಮತ್ತು ದಕ್ಷಿಣ ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ ಪ್ರಶಸ್ತಿ

ಬೆಂಗಳೂರು, ಮಾರ್ಚ್​ 20: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Kempegowda Airport) ಮತ್ತೊಂದು ಗರಿಮೆಯನ್ನು ಮುಡಿಗೇರಿಸಿಕೊಂಡಿದೆ. ಕೆಂಪೇಗೌಡ  ಏರ್​ಪೋರ್ಟ್​ ಬೆಂಗಳೂರು ಸ್ಕೈಟ್ರಾಕ್ಸ್ ವರ್ಲ್ಡ್ ಏರ್‌ಪೋರ್ಟ್ ಅವಾರ್ಡ್ಸ್ 2026ರಲ್ಲಿ ಸತತ ಮೂರನೇ ಬಾರಿಗೆ ‘ಭಾರತ ಮತ್ತು ದಕ್ಷಿಣ ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ’ ಎಂದು ಗುರುತಿಸಲ್ಪಟ್ಟಿದೆ.

ಈ ಮನ್ನಣೆಯು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಪ್ರಮುಖ ಪ್ರಯಾಣ ಕೇಂದ್ರಗಳಲ್ಲಿ ಒಂದಾಗಿರುವುದನ್ನು ಪುನರುಚ್ಚರಿಸುತ್ತದೆ. ಜಾಗತಿಕ ಮಟ್ಟದಲ್ಲಿ ಗಮನಾರ್ಹ ಪ್ರಗತಿ ಸಾಧಿಸಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ವಿಶ್ವ ವಿಮಾನ ನಿಲ್ದಾಣಗಳ ಶ್ರೇಯಾಂಕದಲ್ಲಿ 48ನೇ ಸ್ಥಾನದಿಂದ 41ನೇ ಸ್ಥಾನ ಪಡೆದಿದೆ. ಆ ಮೂಲಕ ವಿಶ್ವದ ಅಗ್ರ 50 ವಿಮಾನ ನಿಲ್ದಾಣಗಳ ಪಟ್ಟಿಯಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳುವುದರ ಜೊತೆಗೆ, ಪ್ರಯಾಣಿಕರಿಗೆ ವಿಶ್ವದರ್ಜೆಯ ಅನುಭವವನ್ನು ನೀಡುವ ಬದ್ಧತೆಯನ್ನು ಎತ್ತಿಹಿಡಿದಿದೆ.

ಕೆಂಪೇಗೌಡ  ಏರ್​ಪೋರ್ಟ್ ಟ್ವೀಟ್​

ವಿಮಾನ ನಿಲ್ದಾಣದ ಶ್ರೇಷ್ಠತೆಗೆ ಜಾಗತಿಕ ಮಾನದಂಡವೆಂದು ವ್ಯಾಪಕವಾಗಿ ಪರಿಗಣಿಸಲ್ಪಟ್ಟ ‘ಸ್ಕೈಟ್ರಾಕ್ಸ್ ವರ್ಲ್ಡ್ ಏರ್‌ಪೋರ್ಟ್ ಅವಾರ್ಡ್ಸ್’, ಚೆಕ್-ಇನ್, ಆಗಮನ, ವರ್ಗಾವಣೆ, ಚಿಲ್ಲರೆ ವ್ಯಾಪಾರ, ಭದ್ರತೆ, ವಲಸೆ ಮತ್ತು ನಿರ್ಗಮನ ಸೇರಿದಂತೆ ಪ್ರಮುಖ ಅಂಶಗಳಲ್ಲಿ ಅತ್ಯುತ್ತಮ ಗ್ರಾಹಕ ಅನುಭವವನ್ನು ನೀಡುವ ವಿಮಾನ ನಿಲ್ದಾಣಗಳನ್ನು ಗುರುತಿಸುತ್ತದೆ.

ಇದನ್ನೂ ಓದಿ: ಮಳೆಯ ನಡುವೆ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ‘ಮಿನಿ ವಾಟರ್ ಫಾಲ್ಸ್’? ಚರ್ಚೆಗೆ ಗ್ರಾಸವಾದ ವೈರಲ್ ವಿಡಿಯೋ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಿರವಾದ ಕಾರ್ಯಕ್ಷಮತೆಯನ್ನು ಆಧರಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಕೆಂಪೇಗೌಡ ಏರ್​ಪೋರ್ಟ್ ಇತ್ತೀಚಿನ ದಿನಗಳಲ್ಲಿ ಸತತವಾಗಿ ಜಾಗತಿಕ ಮನ್ನಣೆಗಳನ್ನು ಪಡೆಯುತ್ತಿದ್ದು, ನಾಲ್ಕನೇ ಬಾರಿಗೆ ‘ವಿಶ್ವದ ಅತ್ಯುತ್ತಮ ಆಗಮನದ ವಿಮಾನ ನಿಲ್ದಾಣ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದರೊಂದಿಗೆ, ಟರ್ಮಿನಲ್ 2 ಸ್ಕೈಟ್ರಾಕ್ಸ್‌ನಿಂದ ‘5-ಸ್ಟಾರ್’ ರೇಟಿಂಗ್ ಪಡೆದ ಭಾರತದ ಮೊದಲ ಟರ್ಮಿನಲ್ ಎಂಬ ದಾಖಲೆ ಬರೆದಿದೆ. ಹಾಗೆಯೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಮಂಡಳಿಯಿಂದ ವಿಮಾನ ನಿಲ್ದಾಣ ಕಾರ್ಬನ್ ಮಾನ್ಯತೆ ಕಾರ್ಯಕ್ರಮದಡಿ ಅತ್ಯುನ್ನತ ಮಟ್ಟದ 5ನೇ ಹಂತವನ್ನು ಮತ್ತು ಪ್ರವೇಶ ಸಾಧ್ಯತೆ ಮಾನ್ಯತೆಯ ಅಡಿಯಲ್ಲಿ 3ನೇ ಹಂತವನ್ನು ಸಾಧಿಸಿದೆ.

ಕೆಂಪೇಗೌಡ ಏರ್​ಪೋರ್ಟ್​ನ ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕ ಹರಿ ಮರಾರ್‌ ಹೇಳಿದ್ದಿಷ್ಟು 

ಇನ್ನು ಈ ಕುರಿತು ಕೆಂಪೇಗೌಡ ಏರ್​ಪೋರ್ಟ್​ನ ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕ ಹರಿ ಮರಾರ್‌ ಮಾತನಾಡಿದ್ದು, ಸ್ಕೈಟ್ರಾಕ್ಸ್ ವರ್ಲ್ಡ್ ಏರ್ಪೋರ್ಟ್ ಅವಾರ್ಡ್ಸ್‌ನಲ್ಲಿ ನಮಗೆ ಸತತವಾಗಿ ಸಂದ ಈ ಮಾನ್ಯತೆಯು ನಮ್ಮ ದೀರ್ಘಕಾಲೀನ ದೃಷ್ಟಿಕೋನ ಮತ್ತು ಪ್ರಯಾಣಿಕರ ಅನುಭವದ ಮೇಲೆ ನಾವು ಹೊಂದಿರುವ ನಿರಂತರ ಗಮನವನ್ನು ಪ್ರತಿಬಿಂಬಿಸುತ್ತದೆ. ಇದು ನಮ್ಮ ತಂಡ ಮತ್ತು ಸಹಭಾಗಿ ಸಂಸ್ಥೆಗಳ ಸಾಮೂಹಿಕ ಪ್ರಯತ್ನಕ್ಕೆ ಸಂದ ಜಯ ಎಂದರು.

ಆಧುನಿಕ ವಿಮಾನ ನಿಲ್ದಾಣದ ಅನುಭವ ಹೇಗಿರಬೇಕೆಂಬುದರ ಮಿತಿಯನ್ನು ಇವೆರೆಲ್ಲರೂ ಸದಾ ವಿಸ್ತರಿಸುತ್ತಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿನ್ಯಾಸ, ತಂತ್ರಜ್ಞಾನ ಮತ್ತು ಸುಸ್ಥಿರತೆಗಳನ್ನು ಒಗ್ಗೂಡಿಸಿ ಪ್ರಯಾಣಿಕರಿಗೆ ಸುಗಮ ಪ್ರಯಾಣವನ್ನು ಒದಗಿಸುವ ಭವಿಷ್ಯದ ನಿರ್ಮಾಣದತ್ತ ನಮ್ಮ ಗಮನವಿದೆ. ಈ ಪ್ರದೇಶದ ಪ್ರಮುಖ ಪ್ರಯಾಣ ಕೇಂದ್ರವಾಗಿ ಬೆಳೆಯುತ್ತಾ ನಮ್ಮ ಸ್ಥಾನವನ್ನು ಬಲಪಡಿಸುತ್ತಿರುವ ಈ ಸಂದರ್ಭದಲ್ಲಿ, ಸೇವೆ ಮತ್ತು ಅನುಭವದ ಗುಣಮಟ್ಟವನ್ನು ಸದಾ ಉನ್ನತ ಮಟ್ಟಕ್ಕೇರಿಸಲು ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ.

ಸ್ಕೈಟ್ರಾಕ್ಸ್‌ನ ಸಿಇಒ ಎಡ್ವರ್ಡ್ ಪ್ಲಾಸ್ಟೆಡ್ ಅವರು ಮಾತನಾಡಿ, ಸತತ ಮೂರನೇ ವರ್ಷ ಈ ಪ್ರಶಸ್ತಿಯನ್ನು ಗೆದ್ದಿರುವುದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣನದ ಅದ್ಭುತ ಸಾಧನೆ. ಪ್ರಯಾಣಿಕರು ತೋರಿದ ಮೆಚ್ಚುಗೆಯನ್ನು ಎತ್ತಿತೋರಿಸುತ್ತದೆ. ಜೊತೆಗೆ, ಟರ್ಮಿನಲ್ 2 ವಿಮಾನ ನಿಲ್ದಾಣದ ಖ್ಯಾತಿಯನ್ನು ಬಲಪಡಿಸಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಸ್ತುತ ಈ ಪ್ರದೇಶದ ಅತ್ಯಂತ ಗುರುತಿಸಬಹುದಾದ ವಿಮಾನ ನಿಲ್ದಾಣಗಳಲ್ಲಿ ಸ್ಥಾನ ಪಡೆದಿದೆ ಎಂದು ತಿಳಿಸಿದರು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣಿಕರ ಮತ್ತು ಸರಕು ಸಾಗಣೆ ಕಾರ್ಯಾಚರಣೆಗಳಲ್ಲಿ ಬಲವಾದ ಬೆಳವಣಿಗೆಯನ್ನು ಹೊಂದುತ್ತಿದೆ. 2025 ರಲ್ಲಿ 43.82 ದಶಲಕ್ಷ ಪ್ರಯಾಣಿಕರಿಗೆ ಸೇವೆ ಸಲ್ಲಿಸಿ 520,985 ಮೆಟ್ರಿಕ್ ಟನ್ ಸರಕುಗಳನ್ನು ಸಾಗಿಸಿದೆ. ಸಂಪರ್ಕ ಜಾಲದ ವಿಸ್ತರಣೆ ಮತ್ತು ಮೂಲಸೌಕರ್ಯ ವರ್ಧನೆಗಳಿಂದ ಬೆಂಬಲಿತವಾಗಿರುವ ಈ ವಿಮಾನ ನಿಲ್ದಾಣವು ಈ ಪ್ರದೇಶದಲ್ಲಿ ಪ್ರಮುಖ ವರ್ಗಾವಣೆ ಕೇಂದ್ರವಾಗಿ ತನ್ನ ಸ್ಥಾನವನ್ನು ಮತ್ತಷ್ಟು ಬಲಪಡಿಸುತ್ತಿದೆ. ಇದು ಪ್ರಯಾಣಿಕರ ನಿರೀಕ್ಷೆಗಳೊಂದಿಗೆ ವಿಕಸನಗೊಳ್ಳುವ ವಿಭಿನ್ನ ವಿಮಾನ ನಿಲ್ದಾಣ ಅನುಭವವನ್ನು ಒದಗಿಸುವ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

ಬಿಐಎಎಲ್‌ ಕುರಿತು:

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತವು (ಬಿಐಎಎಲ್‌) ನಿರ್ವಹಿಸುತ್ತಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಪ್ರಮುಖ ಮೆಟ್ರಿಕ್‌ಗಳಲ್ಲಿ ಉತ್ತಮ ಕಾರ್ಯಕ್ಷಮತೆಯೊಂದಿಗೆ 2025ರ ಹಣಕಾಸು ವರ್ಷವನ್ನು ಪೂರ್ಣಗೊಳಿಸಿದೆ. ಈ ವಿಮಾನ ನಿಲ್ದಾಣವು 43.82 ದಶಲಕ್ಷ ಪ್ರಯಾಣಿಕರಿಗೆ ಸೇವೆ ಸಲ್ಲಿಸಿದ ದಕ್ಷಿಣ ಭಾರತದ ಮೊದಲ ಸಂಸ್ಥೆ.

ಎಸಿಐ ದೊಡ್ಡ ವಿಮಾನ ನಿಲ್ದಾಣ ವಿಭಾಗದಲ್ಲಿ ಸ್ಥಾನ ಗಳಿಸಿದ್ದು. 520,985 ಮೆಟ್ರಿಕ್ ಟನ್ ಸರಕುಗಳನ್ನು ಸಾಗಣೆ ಮಾಡಿದೆ. ದಕ್ಷಿಣ ಭಾರತದ ಅತ್ಯಂತ ಜನನಿಬಿಡ ಮತ್ತು ದೇಶದಲ್ಲಿ ಮೂರನೇ ಅತಿದೊಡ್ಡ ವಿಮಾನ ನಿಲ್ದಾಣವಾಗಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಫೆಬ್ರವರಿ 2025 ರಲ್ಲಿ ಗಮನಾರ್ಹ ಮೈಲಿಗಲ್ಲನ್ನು ತಲುಪಿತ್ತು. ಇದು ಪ್ರಾರಂಭವಾದಾಗಿನಿಂದ 390 ದಶಲಕ್ಷಕ್ಕಿಂತ ಹೆಚ್ಚು ಪ್ರಯಾಣಿಕರಿಗೆ ಸೇವೆ ಒದಗಿಸಿದೆ.

ಇದನ್ನೂ ಓದಿ: ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆ: ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳು ಬೇರೆಡೆಗೆ ಡೈವರ್ಟ್

ಸರಕು ಸಾಗಣೆಯಲ್ಲಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸತತ ನಾಲ್ಕನೇ ವರ್ಷವೂ ಭಾರತದಲ್ಲಿ ಕೊಳೆಯುವ ಸರಕುಗಳನ್ನು ಸಂಸ್ಕರಿಸುವಲ್ಲಿ ನಂ. 1 ವಿಮಾನ ನಿಲ್ದಾಣವಾಗಿದೆ. ಬಿಐಎಎಲ್‌ನ ಬೆಳವಣಿಗೆಗೆ ಅದರ ಬಹುಪಾಲು ಖಾಸಗಿ ಪ್ರವರ್ತಕರಾದ ಫೇರ್‌ಫ್ಯಾಕ್ಸ್ ಇಂಡಿಯಾ ಹೋಲ್ಡಿಂಗ್ಸ್ ಕಾರ್ಪೊರೇಷನ್ ಶಕ್ತಿ ನೀಡುತ್ತಿದೆ. ಗಮನಾರ್ಹ ಹೂಡಿಕೆಯ ಮೂಲಕ, ವಿಮಾನ ನಿಲ್ದಾಣದ ಅಭಿವೃದ್ಧಿ ಮತ್ತು ರೂಪಾಂತರವನ್ನು ವೇಗಗೊಳಿಸುವಲ್ಲಿ ಫೇರ್‌ಫ್ಯಾಕ್ಸ್ ಪ್ರಮುಖ ಪಾತ್ರ ವಹಿಸುತ್ತದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link