Headlines

nagaraj11081993

ಬೆಂಗಳೂರಿನಲ್ಲಿ ಮನೆ ಹುಡುಕಾಟದಿಂದ ಬೇಸತ್ತು ಕೆಲಸಕ್ಕೆ ರಾಜೀನಾಮೆ ನೀಡಿದ ಯುವಕ

ಬೆಂಗಳೂರು, ಮಾ.18: ಬೆಂಗಳೂರಿನಲ್ಲಿ ಮನೆ ಹುಡುಕುವುದು ಅಷ್ಟೊಂದು ಸುಲಭದ ಮಾತಲ್ಲ, ಅದರಲ್ಲೂ ಬ್ಯಾಚುಲರ್ಸ್​​​​ ಕಥೆ ಕೇಳುವುದೇ ಬೇಡ. ಈಗ ಇಲ್ಲೊಂದು ಅಂತಹದೇ ಪೋಸ್ಟ್​​​ವೊಂದು ವೈರಲ್​​ ಆಗಿದೆ. ಎಲೆಕ್ಟ್ರಾನಿಕ್ ಸಿಟಿಯಿಂದ ಎಂ.ಜಿ. ರಸ್ತೆಯ ಕಚೇರಿಗೆ ಪ್ರತಿದಿನ 52 ಕಿ.ಮೀ ಪ್ರಯಾಣಿಸಿ ಸುಸ್ತಾದ ಯುವಕನೊಬ್ಬ, ಮನೆ ಹುಡುಕಲಾರದೆ ಬೆಸತ್ತು ಕೆಲಸವನ್ನೇ ಬಿಡಲು ನಿರ್ಧರಿಸಿರುವ ಘಟನೆಯ ಬಗ್ಗೆ ಹಂಚಿಕೊಂಡಿದ್ದಾರೆ. ಇದೀಗ ಈ ವೈರಲ್​​ ಪೋಸ್ಟ್​​ ಹೊಸ ಚರ್ಚೆಗೆ ಕಾರಣವಾಗಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಿದ್ದ ಈ ವ್ಯಕ್ತಿ ಎಂ.ಜಿ. ರಸ್ತೆ ಹತ್ತಿರ ಕೆಲಸಕ್ಕೆ…

Read More

“ರಾಜಕೀಯದಲ್ಲಿ ಪೂರ್ಣವಿರಾಮವಿಲ್ಲ”: ನಿವೃತ್ತಿ ಹೊಂದುತ್ತಿರುವ ಸಂಸದರಿಗೆ ಧನ್ಯವಾದ ಹೇಳಿದ ಪ್ರಧಾನಿ ಮೋದಿ

ದೆಹಲಿ, ಮಾ.18: ರಾಜ್ಯಸಭೆಯ 37 ಸದಸ್ಯರ ನಿವೃತ್ತಿಯ ಹಿನ್ನೆಲೆಯಲ್ಲಿ ಸದನವು ಇಂದು ಭಾವುಕ ಕ್ಷಣಕ್ಕೆ ಸಾಕ್ಷಿಯಾಗಿತ್ತು. ನಿವೃತ್ತರಾಗುತ್ತಿರುವ ಸದಸ್ಯರ ಸೇವೆಯನ್ನು ಶ್ಲಾಘಿಸಿದ (Rajya Sabha farewell) ಪ್ರಧಾನಿ ಮೋದಿ, ಸದನಕ್ಕೆ ಅವರು ನೀಡಿದ ಕೊಡುಗೆಗಳು ಮುಂದಿನ ಪೀಳಿಗೆಗೆ ಮಾರ್ಗದರ್ಶಿಯಾಗಿರುತ್ತವೆ ಎಂದು ತಿಳಿಸಿದರು. “ಜ್ಞಾನಕ್ಕಿಂತ ಅನುಭವಕ್ಕೆ ಶಕ್ತಿ ಹೆಚ್ಚು. ಶೈಕ್ಷಣಿಕ ಜ್ಞಾನವು ಸೀಮಿತವಾಗಿರಬಹುದು, ಆದರೆ ಸದಸ್ಯರು ಇಲ್ಲಿ ಕಳೆದ ಸಮಯ ಮತ್ತು ಪಡೆದ ಅನುಭವವು ದೇಶದ ನೀತಿ ನಿರೂಪಣೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ” ಎಂದು ಪ್ರಧಾನಿ ಹೇಳಿದರು. ರಾಜ್ಯಸಭೆಯು…

Read More

ಆಂಬ್ಯುಲೆನ್ಸ್‌ನಲ್ಲೇ ಬಂದು ಸ್ಟ್ರೆಚರ್ ಮೇಲೆ ಮಲಗಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ: ವಿಡಿಯೋ ನೋಡಿ

ಕೋಲಾರ, ಮಾರ್ಚ್ 18: ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ವಿದ್ಯಾರ್ಥಿನಿ ಕುಸುಮಾ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದರೂ, ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್ ಮೇಲೆ ಮಲಗಿಕೊಂಡೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಎಲ್ಲರ ಗಮನ ಸೆಳೆದಿದ್ದಾಳೆ. ಈ ಮೂಲಕ ಆಕೆ, ಅಸಾಧಾರಣ ಧೈರ್ಯ ಮತ್ತು ಮನೋಬಲಕ್ಕೆ ಮಾದರಿಯಾಗಿದ್ದಾಳೆ. ಕೆಜಿಎಫ್ ತಾಲೂಕಿನ ಚಿನ್ನನಾಗನಹಳ್ಳಿ ನಿವಾಸಿಯಾದ 16 ವರ್ಷದ ಕುಸುಮಾ, ಸೆಂಟ್ ಮೇರಿಸ್ ಹೈಸ್ಕೂಲ್ ವಿದ್ಯಾರ್ಥಿನಿ. ಇತ್ತೀಚೆಗೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಒಂದು ಕಾಲು ಕಳೆದುಕೊಂಡಿದ್ದಾಳೆ. ಸದ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು,…

Read More

BOB Capital Markets: 103 ಬಿಸಿನೆಸ್ ಡೆವಲಪ್‌ಮೆಂಟ್ ಮ್ಯಾನೇಜರ್ ಹುದ್ದೆಗೆ ನೇಮಕಾತಿ; ಪದವೀಧರರಿಗೆ ಸುವರ್ಣಕಾಶ

ಬ್ಯಾಂಕ್ ಆಫ್ ಬರೋಡಾದ ಅಂಗಸಂಸ್ಥೆಯಾದ ‘ಬಿಒಬಿ ಕ್ಯಾಪಿಟಲ್ ಮಾರ್ಕೆಟ್ಸ್ ಲಿಮಿಟೆಡ್’ (BOB Capital Markets Ltd), ದೇಶಾದ್ಯಂತ ಖಾಲಿ ಇರುವ ಬಿಸಿನೆಸ್ ಡೆವಲಪ್‌ಮೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಒಟ್ಟು 103 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಬ್ಯಾಂಕಿಂಗ್ ಮತ್ತು ಬಂಡವಾಳ ಮಾರುಕಟ್ಟೆ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಈ ನೇಮಕಾತಿಯಡಿ ಉತ್ತರ ವಲಯಕ್ಕೆ 37, ಪಶ್ಚಿಮ ವಲಯಕ್ಕೆ 44 ಹಾಗೂ ದಕ್ಷಿಣ ಮತ್ತು ಪೂರ್ವ ವಲಯಗಳಿಗೆ ಒಟ್ಟು…

Read More

ದೆಹಲಿಯಲ್ಲಿ ಕಟ್ಟಡಕ್ಕೆ ಬೆಂಕಿ; ಮೂರು ಮಕ್ಕಳು ಸೇರಿ ಆರು ಮಂದಿ ಬಲಿ

ನವದೆಹಲಿ, ಮಾರ್ಚ್ 18: ದೆಹಲಿಯ ಪಲಮ್ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದರಲ್ಲಿ ಬೆಂಕಿ ತಗುಲಿರುವ ದುರ್ಘಟನೆ (Fire Accident) ಸಂಭವಿಸಿದೆ. ಆರಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಮಾಹಿತಿ ಸದ್ಯಕ್ಕೆ ತಿಳಿದುಬಂದಿದೆ. ಇನ್ನೂ ಹಲವಾರು ಜನರಿಗೆ ಗಾಯಗಳಾಗಿವೆ. ದುರಂತದಲ್ಲಿ ಮೃತಪಟ್ಟಿರುವವರ ಪೈಕಿ ಮೂವರು ಮಕ್ಕಳಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಂಕಿ ದುರಂತಕ್ಕೆ ಏನು ಕಾರಣ ಎಂದು ಸದ್ಯಕ್ಕೆ ತಿಳಿದುಬಂದಿಲ್ಲ. ಕಟ್ಟಡಕ್ಕೆ ಬೆಂಕಿ ತಗುಲಿರುವ ಬಗ್ಗೆ ಅಗ್ನಿಶಾಮಕ ವಿಭಾಗಕ್ಕೆ ಬೆಳಗ್ಗೆ 7:30ಕ್ಕೆ ಮಾಹಿತಿ ಹೋಗಿದೆ. ಕೂಡಲೇ 30 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ…

Read More

‘ಧುರಂಧರ್ 2’ ಸಿನಿಮಾದ ಭೀಕರ ದೃಶ್ಯಗಳಿಗೆ ಸೆನ್ಸಾರ್ ಕತ್ತರಿ: ತಗ್ಗಿತು ಚಿತ್ರದ ಅವಧಿ

ರಣವೀರ್ ಸಿಂಗ್, ಅರ್ಜುನ್ ರಾಮ್​ಪಾಲ್, ಸಾರಾ ಅರ್ಜುನ್, ಆರ್. ಮಾಧವನ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಧುರಂಧರ್ 2’ (Dhurandhar 2) ಸಿನಿಮಾದ ಹೈಪ್ ಹೆಚ್ಚಾಗಿದೆ. ನಿರ್ದೇಶಕ ಆದಿತ್ಯ ಧಾರ್ ಸಾರಥ್ಯದಲ್ಲಿ ಮೂಡಿಬಂದಿರುವ ಈ ಚಿತ್ರದ ಪೇಯ್ಡ್ ಪ್ರಿವ್ಯೂಗಳು ಇಂದು (ಮಾರ್ಚ್ 18) ಆರಂಭ ಆಗುತ್ತಿವೆ. ಅದಕ್ಕೂ ಮುನ್ನ ಸೆನ್ಸಾರ್ ಮಂಡಳಿಯ (CBFC) ವರದಿ ಹೊರಬಿದ್ದಿದ್ದು, ಸಿನಿಮಾದಲ್ಲಿನ ಹಲವು ದೃಶ್ಯಗಳಿಗೆ ಕತ್ತರಿ ಹಾಕಲಾಗಿದೆ. ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಸದಸ್ಯರು ‘ಎ’ ಸರ್ಟಿಫಿಕೇಟ್ ನೀಡಿ, 21 ಬದಲಾವಣೆಗಳನ್ನು ಮಾಡುವಂತೆ…

Read More

ಬೆಂಗಳೂರಲ್ಲೊಂದು ವಿಚಿತ್ರ ಘಟನೆ: ರೀಲ್ಸ್​​ ಹುಚ್ಚಿಗೆ ತಂದೆಯನ್ನೇ ಚೀಲಕ್ಕೆ ತುಂಬಿ ಕೊರಿಯರ್​​ ಮಾಡಲು ಬಂದ ಮಗಳು!

ಬೆಂಗಳೂರು, ಮಾರ್ಚ್​​ 18: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್​​ ಮಾಡಿ ಜನರಿಗೆ ಬುದ್ಧಿ ಹೇಳುವವರ ಸಂಖ್ಯೆ ದೊಡ್ಡದಾಗಿದ್ದು, ಏನೋ ಮಾಡಲು ಹೋಗಿ ಇನ್ನೆನೋ ಆಗಿ ಪೇಚಿಗೆ ಸಿಲುಕುವ ಘಟನೆಗಳೂ ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇಂತಹುದದ್ದೇ ಒಂದು ಪ್ರಸಂಗ ಬೆಂಗಳೂರಲ್ಲಿಯೂ ನಡೆದಿದೆ. ರೀಲ್ಸ್​​ ಮಾಡುವ ಚಟಕ್ಕೆ ವೃದ್ಧ ವ್ಯಕ್ತಿಯನ್ನು ಚೀಲದಲ್ಲಿ ಹಾಕಿ ಕೂರಿಯರ್ ಮಾಡಲು ಕುಟುಂಬವೊಂದು ಯತ್ನಿಸಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡಬೇಕೆಂಬ ಹುಚ್ಚು ಈ ಮಟ್ಟಕ್ಕೂ ಹೋಗಬಹುದಾ ಎಂಬ ಪ್ರಶ್ನೆಯನ್ನೀಗ…

Read More

Vaibhav Suryavanshi: ಕ್ರಿಸ್​ ಗೇಲ್​ನ ಆ ಒಂದು ದಾಖಲೆಯನ್ನು ಮುರಿಯಲೇಬೇಕು..!

IPL 2026:  ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ದಿನಗಣನೆ ಬೆನ್ನಲ್ಲೇ ಬಾಸ್ ಬೇಬಿ ಖ್ಯಾತಿಯ ವೈಭವ್ ಸೂರ್ಯವಂಶಿ (Vaibhav Suryavanshi) ತಮ್ಮ ಗುರಿಯನ್ನು ಸ್ಪಷ್ಟಪಡಿಸಿದ್ದಾರೆ. ಅದು ಕೂಡ ಯುನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಹೆಸರಿನಲ್ಲಿರುವ ಭರ್ಜರಿ ದಾಖಲೆಯನ್ನು ಮುರಿಯುವ ಟಾರ್ಗೆಟ್​ನೊಂದಿಗೆ ಎಂಬುದು ವಿಶೇಷ. ನವದೆಹಲಿಯಲ್ಲಿ ನಡೆದ ಬಿಸಿಸಿಐ ನಮನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ 14 ವರ್ಷದ ಯಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ, ಐಪಿಎಲ್‌ನಲ್ಲಿ ಕ್ರಿಸ್ ಗೇಲ್ ಅವರ 175 ರನ್‌ಗಳ…

Read More

ಫ್ಲೈಟ್​ನಲ್ಲಿ ಶುಲ್ಕರಹಿತ ಸೀಟುಗಳು ಕನಿಷ್ಠ ಶೇ. 60 ಇರಬೇಕು; ಸರ್ಕಾರದಿಂದ ಹೊಸ ನಿಯಮಗಳು

ನವದೆಹಲಿ, ಮಾರ್ಚ್ 18: ಜನಸಾಮಾನ್ಯರಿಗೆ ವಿಮಾನ ಪ್ರಯಾಣ ಮತ್ತಷ್ಟು ಸುಲಭಗೊಳ್ಳಲಾಗುವಂತೆ ಸರ್ಕಾರ ಕೆಲ ಗಮನಾರ್ಹ ಕ್ರಮಗಳನ್ನು ಕೈಗೊಂಡಿದೆ. ಫ್ಲೈಟ್​ನ ಶೇ. 60ಕ್ಕೂ ಹೆಚ್ಚು ಸೀಟುಗಳಿಗೆ ಶುಲ್ಕ ಉಚಿತಗೊಳಿಸಿರುವುದು ಸೇರಿದಂತೆ ವಿವಿಧ ನಿಯಮಗಳನ್ನು ಕೇಂದ್ರ ನಾಗರಿಕ ವಿಮಾನ ಸಚಿವಾಲಯ (civil aviation ministry) ಪ್ರಕಟಿಸಿದೆ. ಸಚಿವಾಲಯ ಬುಧವಾರ ಪತ್ರಿಕಾ ಹೇಳಿಕೆ ಮೂಲಕ ಈ ಹೊಸ ನಿಯಮಗಳನ್ನು ಬಹಿರಂಗಪಡಿಸಿದೆ. ಶೇ. 60ಕ್ಕೂ ಹೆಚ್ಚು ಸೀಟುಗಳಿಗೆ ಶುಲ್ಕ ಇರಲ್ಲ… ಫ್ಲೈಟ್​ನಲ್ಲಿ ನೀವು ಟಿಕೆಟ್ ಬುಕ್ ಮಾಡಿದಾಗ ಟಿಕೆಟ್ ದರದ ಜೊತೆಗೆ ಸೀಟುಗಳಿಗೆ…

Read More

Lizard Omens: ದೇವರ ಕೋಣೆಯಲ್ಲಿ ಹಲ್ಲಿ ಕಾಣಿಸಿಕೊಂಡರೆ ಏನರ್ಥ? ಶಾಸ್ತ್ರಗಳು ಹೇಳುವುದೇನು?

ಭಾರತೀಯ ಸನಾತನ ಧರ್ಮ ಹಾಗೂ ಶಾಸ್ತ್ರಗಳ ಪ್ರಕಾರ, ಪ್ರತಿಯೊಂದು ಜೀವಿಗೂ ತನ್ನದೇ ಆದ ವಿಶೇಷ ಮಹತ್ವವಿದೆ. ಅದರಲ್ಲಿಯೂ ಮನೆಯ ಗೋಡೆಗಳ ಮೇಲೆ ಓಡಾಡುವ ಹಲ್ಲಿಯನ್ನು ಸಾಕ್ಷಾತ್ ಲಕ್ಷ್ಮಿ ದೇವಿಯ ಸಂಕೇತವೆಂದೇ ಪರಿಗಣಿಸಲಾಗುತ್ತದೆ. ಕೇವಲ ಕೀಟಗಳನ್ನು ತಿಂದು ಮನೆಯನ್ನು ಸ್ವಚ್ಛವಾಗಿಡುವ ಜೀವಿಯಷ್ಟೇ ಅಲ್ಲದೆ, ಹಲ್ಲಿಯು ನಮ್ಮ ಭವಿಷ್ಯದ ಏಳುಬೀಳುಗಳ ಬಗ್ಗೆ ಮುನ್ಸೂಚನೆ ನೀಡುವ ಸಂಕೇತವೂ ಹೌದು ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಹಲ್ಲಿಯು ಮೈಮೇಲೆ ಬೀಳುವ ಜಾಗ ಮತ್ತು ಅದು ಕಾಣಿಸಿಕೊಳ್ಳುವ ಸಮಯದ ಮೇಲೆ ಶುಭ-ಅಶುಭ ಫಲಗಳು ನಿರ್ಧಾರವಾಗುತ್ತವೆ….

Read More