Headlines

nagaraj11081993

ಮೂತ್ರದ ಬಣ್ಣದಿಂದ ಕ್ಯಾನ್ಸರ್ ಪತ್ತೆ ಹಚ್ಚಬಹುದೇ? ಏನನ್ನುತ್ತಾರೆ ತಜ್ಞರು – Kannada News | Men’s Health Alert: What Urine Color Reveals

ಪ್ರಾಸ್ಟೇಟ್ ಕ್ಯಾನ್ಸರ್ ಬಗ್ಗೆ ಕೇಳಿರಬಹುದು. ಇದು ಒಂದು ರೀತಿಯ ವೃಷಣ ಕ್ಯಾನ್ಸರ್ (Cancer) ಹಿಂದೆ ಮಧ್ಯವಯಸ್ಕ ಪುರುಷರಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದ ಈ ವೃಷಣ ಕ್ಯಾನ್ಸರ್ ಇತ್ತೀಚಿನ ದಿನಗಳಲ್ಲಿ ಸಣ್ಣ ವಯಸ್ಸಿನವರ ಮೇಲೂ ಪರಿಣಾಮ ಬೀರುತ್ತಿದೆ. ಇತ್ತೀಚಿನ ಅಧ್ಯಯನದ ಪ್ರಕಾರ, ವೃಷಣ ಕ್ಯಾನ್ಸರ್ ಅಪಾಯ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪುರುಷರ ವೃಷಣಗಳಲ್ಲಿ ಕಂಡುಬರುವ ಈ ಕ್ಯಾನ್ಸರ್ ಎಷ್ಟೇ ಜಾಗರೂಕರಾಗಿದ್ದರೂ ನಿಯಂತ್ರಿಸುವುದು ಸ್ವಲ್ಪ ಕಷ್ಟ. ಆದ್ದರಿಂದ, ರೋಗಲಕ್ಷಣಗಳನ್ನು ಮೊದಲೇ ಗುರುತಿಸುವುದು ಬಹಳ ಮುಖ್ಯ ಎಂದು ವೈದ್ಯರು ಹೇಳುತ್ತಾರೆ. ಹಾಗಾದರೆ ಇದರ…

Read More

ಗ್ರೇಟರ್ ಬೆಂಗಳೂರು ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು – Kannada News | Greater Bengaluru Authority Employees Calls For Strike Against GBA Special Commissioner Munish Moudgil Alleging Harassment

ಬೆಂಗಳೂರು, (ಡಿಸೆಂಬರ್ 23): ಗ್ರೇಟರ್ ಬೆಂಗಳೂರು ಪ್ರಾಧಿಕಾರದ (Greater Bengaluru Authority) ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ (Munish Moudgil)​ ವಿರುದ್ಧ ನೌಕರರು ಹಾಗೂ ಅಧಿಕಾರಿಗಳ ಪಿತ್ತ ನೆತ್ತಿಗೇರಿದ್ದು, ಕಿರುಕುಳ ಹಾಗೂ ದುರುದ್ದೇಶಪೂರ್ವಕವಾಗಿ ಅಧಿಕಾರಿಗಳನ್ನು ಅಮಾನತು ಮಾಡುವ ಕೆಲಸಕ್ಕೆ ಹಿರಿಯ ಅಧಿಕಾರಿಗಳು ಮುಂದಾಗಿದ್ದಾರೆ ಎಂದು GBA ನೌಕರರು ಪ್ರತಿಭಟನೆಯ ಹಾದಿ ತುಳಿದಿದ್ದಾರೆ. GBA ದಕ್ಷಿಣ ವಲಯ ಉಪ ಆಯುಕ್ತ ಡಿ.ಕೆ.ಬಾಬು ಮತ್ತು ಕಂದಾಯ ಅಧಿಕಾರಿ ಶ್ರೀಮತಿ ವರಲಕ್ಷ್ಮಿ ರವರನ್ನು ಕಾನೂನು ಬಾಹಿರವಾಗಿ ಅಮಾನತ್ತು ಮಾಡಲು…

Read More

ಬೆಳ್ಳಂ ಬೆಳಿಗ್ಗೆ ಬಿರಿಯಾನಿ ತಿನ್ನಲು ಹೋದವರಿಗೆ ಭರ್ಜರಿ ಶಾಕ್​​: ಕಾಲೇಜು ವಿದ್ಯಾರ್ಥಿಗಳ ಅಡ್ಡಗಟ್ಟಿ ದರೋಡೆ – Kannada News | Gang Robs Students Returning After Eating Hoskote Biryani

ಬೆಂಗಳೂರು, ಡಿಸೆಂಬರ್​​ 23: ಹೊಸಕೋಟೆ ಬಿರಿಯಾನಿ ತಿನ್ನಲು ತೆರಳಿದ್ದ ಬೆಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳನ್ನ ದರೋಡೆ ಮಾಡಿದ್ದಲ್ಲದೆ, ಒತ್ತೆಯಾಳಾಗಿ ಇಟ್ಟುಕೊಂಡು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ವಿದ್ಯಾರ್ಥಿಗಳ ಸ್ನೇಹಿತರಿಂದಲೂ ಹಣ ಪೀಕಿದ ದುಷ್ಕರ್ಮಿಗಳು ಬಾಗಲೂರು ವ್ಯಾಪ್ತಿಯ ಪ್ರತಿಷ್ಟಿತ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ನಾಲ್ವರು ವಿದ್ಯಾರ್ಥಿಗಳು ಎರಡು ಪ್ರತ್ಯೇಕ ಬೈಕ್‌ಗಳಲ್ಲಿ ಭಾನುವಾರ ಮುಂಜಾನೆ ಹೊಸಕೋಟೆ ಬಿರಿಯಾನಿ ತಿನ್ನಲು ತೆರಳಿದ್ದರು. ಬಿರಿಯಾನಿ ತಿಂದು…

Read More

ಕ್ರಿಸ್ಮಸ್‌, ನ್ಯೂ ಇಯರ್‌ಗೆ ಟ್ರಿಪ್‌ ಹೋಗೋ ಪ್ಲಾನ್‌ ಇದ್ಯಾ? ಹಾಗಿದ್ರೆ ಈ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸಿ – Kannada News | If you are planning a trip during Christmas and New Year do not visit these places

ಕ್ರಿಸ್ಮಸ್‌ (Christmas), ನ್ಯೂ ಇಯರ್‌ ಹಾಲಿಡೇ ಸಂದರ್ಭದಲ್ಲಿ ಹೆಚ್ಚಿನವರು ಫ್ರೆಂಡ್ಸ್‌, ಫ್ಯಾಮಿಲಿ ಜೊತೆ ಎಲ್ಲಾದ್ರೂ ಟ್ರಿಪ್‌ ಹೋಗ್ತಾರೆ.  ಹೌದು ಕೆಲಸದ ಒತ್ತಡದಿಂದ ಸ್ವಲ್ಪ ಬ್ರೇಕ್‌ ತೆಗೆದುಕೊಂಡು ಕ್ರಿಸ್ಮಸ್‌ ಸಂಭ್ರಮವನ್ನು ಸವಿಯಲು, ನ್ಯೂ ಇಯರ್‌ ಪಾರ್ಟಿ ಎಂಜಾಯ್‌ ಮಾಡಲು ಫ್ರೆಂಡ್ಸ್‌, ಫ್ಯಾಮಿಲಿ ಜೊತೆ ಟ್ರಿಪ್‌ ಹೋಗ್ತಾರೆ. ಇದೇ ರೀತಿ ನೀವು ಕೂಡ ಈ ಬಾರಿ ಟ್ರಿಪ್‌ ಪ್ಲಾನ್‌ ಮಾಡಿದ್ದೀರಾ? ಹಾಗಿದ್ರೆ ನಿಮ್ಮ ಈ ಪ್ರವಾಸವನ್ನು ಸ್ಮರಣೀಯವಾಗಿರಿಸಲು, ಜನಸಂದಣಿ, ಟ್ರಾಫಿಕ್‌ ಜಾಮ್‌ ಇತ್ಯಾದಿ ಕಿರಿಕಿರಿಯನ್ನು ಹಾಗೂ ಜೇಬಿಗೆ ಕತ್ತರಿ ಬೀಳುವುದನ್ನು…

Read More

Ministry of Finance Jobs: ಭಾರತ ಸರ್ಕಾರದ ಹಣಕಾಸು ಸಚಿವಾಲಯದಲ್ಲಿ ಉದ್ಯೋಗವಕಾಶ; 18 ಲಕ್ಷ ರೂ. ವಾರ್ಷಿಕ ವೇತನ – Kannada News | Ministry of Finance Jobs: DEA Recruits Young Professionals and Consultants

ಭಾರತ ಸರ್ಕಾರದ ಹಣಕಾಸು ಸಚಿವಾಲಯದೊಂದಿಗೆ ಕೆಲಸ ಮಾಡಲು ನೀವು ಬಯಸಿದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆ (DEA) ಯುವ ವೃತ್ತಿಪರರು ಮತ್ತು ಸಲಹೆಗಾರರನ್ನು ಹುಡುಕುತ್ತಿದೆ. ಹಣಕಾಸು ಸಚಿವಾಲಯವು ಈ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. DEA ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ತಿಂಗಳಿಗೆ 1.5 ಲಕ್ಷ ರೂ. ವೇತನವನ್ನು ಪಡೆಯುತ್ತಾರೆ. ಅಂದರೆ ಹಣಕಾಸು ಸಚಿವಾಲಯದಲ್ಲಿ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ 18 ಲಕ್ಷ ರೂ. ವೇತನ…

Read More

ಪ್ರೇಯಸಿ ಮದ್ವೆ ಮಂಟಪಕ್ಕೆ ಬರುವಷ್ಟರಲ್ಲೇ ಬೇರೊಂದು ಯುವತಿಗೆ ತಾಳಿಕಟ್ಟಿದ್ದ ಪ್ರಿಯಕರ ಅರೆಸ್ಟ್ – Kannada News | Man Arrested For Cheating His Girlfriend And Marrying Other Woman In Chikkamagaluru

ಚಿಕ್ಕಮಗಳೂರು, (ಡಿಸೆಂಬರ್ 23): ಪ್ರೇಯಸಿಗೆ ವಂಚಿಸಿ ಬೇರೆ ಯುವತಿ ಜತೆ ಮದುವೆಯಾಗಿದ್ದ ಶರತ್​ ಎನ್ನುವಾತನ್ನು ಪೊಲೀಸರು ಬಂಧಿಸಿದ್ದು, ಸದ್ಯ ಕೋರ್ಟ್​ ನವವಿವಾಹಿತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಚಿಕ್ಕಮಗಳೂರಿನ (Chikkamagaluru) ಶರತ್ ಎನ್ನುವಾತ ಯುವತಿಯನ್ನು ಪ್ರೀತಿಸಿದ್ದ. ಅಲ್ಲದೇ ಮದುವೆಯಾಗುವುದಾಗಿ ಆಕೆಯನ್ನು ಲೈಂಗಿಕವಾಗಿ ಸಹ ಬಳಿಸಿಕೊಂಡಿದ್ದ. ಆದ್ರೆ, ಏಕಾಏಕಿ ಶರತ್ ಇದೇ ಡಿಸೆಂಬರ್ 14ರಂದು ಚಿಕ್ಕಮಗಳೂರಿನ ದೊಡ್ಡೇಗೌಡ ಕಲ್ಯಾಣಮಂಟಪದಲ್ಲಿ ಬೇರೊಂದು ಯುವತಿ ಜತೆ ಮದುವೆಯಾಗಿದ್ದ. ಪ್ರಿಯಕರನ ಮದುವೆ ವಿಚಾರ ತಿಳಿಯುತ್ತಿದ್ದಂತೆಯೇ ಪ್ರೇಯಸಿ ಮದುವೆ ಮಂಟಪಕ್ಕೆ ಬಂದು ವಿರೋಧ ವ್ಯಕ್ತಪಡಿಸಿದ್ದಳು. ಆದ್ರೆ,…

Read More

ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ: ಬೆಂಗಳೂರು ಬಳಿಕ ಮಂಗಳೂರು ಜೈಲು ಪರಿಶೀಲನೆ – Kannada News | DGP Alok Kumar’s First Inspection In Mangaluru Central Jail Bengaluru

ಮಂಗಳೂರು, ಡಿಸೆಂಬರ್ 23: ಇತ್ತೀಚೆಗೆ ಪರಪ್ಪನ ಅಗ್ರಹಾರ, ಕಾರವಾರ ಜೈಲು ಸೇರಿದಂತೆ ಬಳ್ಳಾರಿಯಲ್ಲಿಯೂ ಹಲವು ಅಕ್ರಮಗಳು ನಡೆದಿದದ್ದವು. ಕೈದಿಗಳ ಬಳಿ ಮೊಬೈಲ್ ಫೋನ್​ಗಳು ಸಿಕ್ಕಿದ್ದಲ್ಲದೆ, ಜಗಳ, ರಂಪಾಟಗಳೂ ನಡೆದಿದದ್ದವು. ಈ ಎಲ್ಲದರ ನಡುವೆ ಕಾರಾಗೃಹದ ಭದ್ರತೆ ಮತ್ತು ಆಡಳಿತಾತ್ಮಕ ವ್ಯವಸ್ಥೆಗಳನ್ನು ಪರಿಶೀಲಿಸುವ ಉದ್ದೇಶದಿಂದ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದರು. ಕಾರಾಗೃಹ ಡಿಜಿಪಿಯಾದ ಬಳಿಕ ಅಲೋಕ್ ಕುಮಾರ್ ಅವರಿಗೆ ಮಂಗಳೂರು ಜೈಲಿಗೆ ಇದು ಮೊದಲ ಭೇಟಿಯಾಗಿದೆ. ಮಂಗಳೂರು ನಗರದ ಪಿವಿಎಸ್…

Read More

WhatsApp vs Govt: ತಿಂಗಳಿಗೆ ಕೋಟಿ ನಂಬರ್ಸ್ ನಿಷೇಧಿಸಿದರೂ ಸರ್ಕಾರಕ್ಕೆ ಗುಟ್ಟು ಬಿಟ್ಟುಕೊಡದ ವಾಟ್ಸಾಪ್ – Kannada News | WhatsApp ban 1 crore numbers in a month, but refusing to share details bothers government

ನವದೆಹಲಿ, ಡಿಸೆಂಬರ್ 23: ವಿಶ್ವದ ನಂಬರ್ ಒನ್ ಮೆಸೇಜಿಂಗ್ ಆ್ಯಪ್ ಎನಿಸಿರುವ ವಾಟ್ಸಾಪ್ (WhatsApp) ಭಾರತದಲ್ಲಿ ಈ ವರ್ಷ ಪ್ರತೀ ತಿಂಗಳು ಹತ್ತಿರಹತ್ತಿರ ಒಂದು ಕೋಟಿ ನಂಬರ್​ಗಳನ್ನು ಬ್ಲಾಕ್ ಮಾಡಿದೆ ಅಥವಾ ನಿಷೇಧಿಸಿದೆ. ಇಷ್ಟು ಪ್ರಮಾಣದಲ್ಲಿ ನಂಬರ್​ಗಳನ್ನು ನಿಷೇಧಿಸುತ್ತಿದ್ದೀರಲ್ಲ, ಯಾಕಾಗಿ ಬ್ಯಾನ್ ಮಾಡುತ್ತಿದ್ದೀರಿ ಎಂದು ಹೇಳಿದರೆ ಕಾನೂನು ಸುವ್ಯವಸ್ಥೆಗೂ ಸಹಾಯವಾಗುತ್ತದೆ ಎಂದು ಸರ್ಕಾರ ಬಾರಿ ಬಾರಿ ವಿನಂತಿಸುತ್ತಿದೆ. ಆದರೂ ಕೂಡ ವಾಟ್ಸಾಪ್ ತನ್ನ ಡಾಟಾ ಗುಟ್ಟು ಬಿಟ್ಟುಕೊಡುತ್ತಿಲ್ಲ. ಇದು ಸರ್ಕಾರಕ್ಕೆ ಇರಿಸು ಮುರುಸು ತರುತ್ತಿದೆ. ದೇಶದಲ್ಲಿ ಜರುಗುತ್ತಿರುವ…

Read More

Video: ದಂಪತಿ ರೈಲಿನಿಂದ ಹಾರುವ ಮುನ್ನ ಇಬ್ಬರ ನಡುವೆ ರೈಲಿನಲ್ಲಿ ಏನಾಗಿತ್ತು ನೋಡಿ – Kannada News | Unexpected Scene on Moving Train After Young Man’s Actions Draw Attention

ಆಂಧ್ರಪ್ರದೇಶ, ಡಿಸೆಂಬರ್ 23: ದಂಪತಿ ರೈಲಿನಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ರೈಲಿನಿಂದ ಹಾರುವ ಮುನ್ನ ದಂಪತಿ ನಡುವೆ ಜಗಳವಾಗಿತ್ತು, ಪತಿ ಆಕೆಯನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಂಡು ಮನವೊಲಿಸಲು ಯತ್ನಿಸಿರುವ ವಿಡಿಯೋ ವೈರಲ್ ಆಗಿದೆ. ದಂಪತಿ ಮದುವೆಯಾಗಿ ಕೇವಲ ಎರಡು ತಿಂಗಳಾಗಿತ್ತು. ಎಷ್ಟೇ ಆತ ಪತ್ನಿಯ ಮನವೊಲಿಸಲು ಪ್ರಯತ್ನಿಸಿದರೂ ಪತ್ನಿ ಒಪ್ಪಲು ತಯಾರಿರಲಿಲ್ಲ ಇದಾದ ಸ್ವಲ್ಪ ಹೊತ್ತಲ್ಲೇ ಇಬ್ಬರೂ ಸಾವನ್ನಪ್ಪಿದ್ದಾರೆ. ಯಾದಗಿರಿಗುಟ್ಟ ವಿಭಾಗದ ಬಂಗಾಳಿ ರೈಲು ನಿಲ್ದಾಣದ ಮೂಲಕ ಹಾದುಹೋಗುವಾಗ ದಂಪತಿಗಳು ರೈಲಿನ…

Read More

ಉಡುಪಿ ಬೀಚ್​ನಲ್ಲಿ ಪವಾಡ! ಕಡಲಲ್ಲಿ ತೇಲಿಬಂತೇ ಕೃಷ್ಣನ ವಿಗ್ರಹ? ಅಸಲಿಯತ್ತು ಇಲ್ಲಿದೆ – Kannada News | Malpe Beach Viral Idol: Debunking Krishna Miracle, Unveiling Jaya Vijaya Truth

ಉಡುಪಿ, ಡಿ.23: ಕೆಲವೊಂದನ್ನು ಕಣ್ಣಾರೆ ಕಂಡರೂ ಪರಾಂಬರಿಸಿ ನೋಡಬೇಕು ಎಂಬ ಮಾತಿದೆ. ನೋಡಿದ ತಕ್ಷಣ ಅದನ್ನು ನಿರ್ಧಾರಿಸುವುದಲ್ಲ. ಅದರ ಬಗ್ಗೆ ವಿಚಾರ ಮಾಡಬೇಕು. ಅದರಲ್ಲೂ ಈ ಸಾಮಾಜಿಕ ಜಾಲತಾಣದಲ್ಲಿ ಬರುವ ಎಲ್ಲ ವಿಷಯಗಳನ್ನು ನಂಬಬಾರದು. ಕೆಲವೊಂದನ್ನು ಪರಿಶೀಲನೆ ಮಾಡಬೇಕಾಗುತ್ತದೆ. ಯಾಕೆಂದರೆ ಅದರಲ್ಲಿ ಎಲ್ಲವೂ ಸತ್ಯವಾಗಿರುವುದಿಲ್ಲ. ಇದೀಗ ಇಲ್ಲೊಂದು ಅಂತಹದೇ ಘಟನೆಯೊಂದು ನಡೆದಿದೆ.  ಇತ್ತೀಚಿಗೆ ಉಡುಪಿಗೆ ಸಂಬಂಧಿಸಿದ  ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿತ್ತು. ಆದರೆ ಈ ವೈರಲ್​​ ಆಗಿರುವ ವಿಡಿಯೋದಲ್ಲಿರುವ ಸತ್ಯವೇ ಬೇರೆ. ಅಷ್ಟಕ್ಕೂ ವೈರಲ್​​​ ಆಗಿರುವ…

Read More