Headlines

nagaraj11081993

IPL 2026: ಬಾಂಗ್ಲಾದಲ್ಲಿ ಹಿಂದೂಗಳ ಹಿಂಸಾಚಾರ; ಕೆಕೆಆರ್ ತಂಡಕ್ಕೆ ಭಾರತೀಯರಿಂದ ಹಿಡಿಶಾಪ

2026 ರ ಐಪಿಎಲ್ ಮಿನಿ ಹರಾಜಿನ ನಂತರ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಅಷ್ಟಕ್ಕೂ ಬಾಲಿವುಡ್ ಬಾದ್​​ಶಾ ಶಾರುಖ್ ಖಾನ್ ಒಡೆತನದ ಕೆಕೆಆರ್ ತಂಡ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಲು ಕಾರಣವೇನು ಎಂದರೆ, ಮಿನಿ ಹರಾಜಿನಲ್ಲಿ ಅದೊಂದು ದೇಶದ ಆಟಗಾರನನ್ನು ತನ್ನ ತಂಡಕ್ಕೆ ಖರೀದಿಸಿದ್ದು. ವಾಸ್ತವವಾಗಿ ಐಪಿಎಲ್ ಮಿನಿ ಹರಾಜಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್​ ಫ್ರಾಂಚೈಸಿ ಬಾಂಗ್ಲಾದೇಶ ತಂಡದ ವೇಗದ ಬೌಲರ್ ಮುಸ್ತಾಫಿಜುರ್ ರೆಹಮಾನ್ ಅವರನ್ನು ತನ್ನ ತಂಡಕ್ಕೆ ಖರೀದಿ ಮಾಡಿತ್ತು. ಹೀಗಾಗಿ ಬಾಂಗ್ಲಾದೇಶದಲ್ಲಿ…

Read More

ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ವಿವೇಕಾನಂದ ಕುಟುಂಬ ಕಂಗಾಲು – Kannada News | Hubballi Incident: Dalit Leaders Demand Justice and Payment of Hospital Bills for Maanya Family

ಹುಬ್ಬಳ್ಳಿ, ಡಿಸೆಂಬರ್​ 23: ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದಕ್ಕೆ ತಂದೆಯಿಂದಲೇ ಮಗಳ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದು 2 ದಿನ ಕಳೆದರೂ ಸರ್ಕಾರ ಸ್ಪಂದಿಸಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತದ ವಿರುದ್ಧ ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕುಟುಂಬ ಸದಸ್ಯರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಸಂತ್ರಸ್ತ ಕುಟುಂಬವು ಆಸ್ಪತ್ರೆ ಬಿಲ್ ಪಾವತಿಸಲು ಪರದಾಡುವಂತ್ತಾಗಿದೆ. ಡಿಸಿ ಸೇರಿದಂತೆ ಅಧಿಕಾರಿಗಳು ಕುಟುಂಬಕ್ಕೆ ನೆರವು ನೀಡುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆಂದು ಆರೋಪ ಕೇಳಿಬಂದಿದೆ….

Read More

VBL Deal: 1,118 ಕೋಟಿ ರೂಗೆ ಸೌತ್ ಆಫ್ರಿಕಾದ ಟ್ವಿಜ್ಜಾ ಖರೀದಿಸಲಿರುವ ಭಾರತದ ವರುಣ್ ಬೆವರೇಜಸ್ – Kannada News | Varun Beverages to acquire Twizza, a beverage firm in South Africa for over 1,118 crore of enterprise value

ನವದೆಹಲಿ, ಡಿಸೆಂಬರ್ 23: ಭಾರತದ ವರುಣ್ ಬೆವರೇಜಸ್ ಲಿಮಿಟೆಡ್ ಸಂಸ್ಥೆಯು ಸೌತ್ ಆಫ್ರಿಕಾ ಮೂಲದ ಟ್ವಿಜ್ಜಾ ಎನ್ನುವ ಕಂಪನಿಯನ್ನು ಪೂರ್ಣವಾಗಿ ಖರೀದಿಸಲಿದೆ. ಈ ವಿಷಯವನ್ನು ಸ್ವತಃ ವರುಣ್ ಬೆವರೇಜಸ್ ಸಂಸ್ಥೆಯೇ ಬಹಿರಂಗಪಡಿಸಿದೆ. ಸೌತ್ ಅಫ್ರಿಕಾದಲ್ಲಿರುವ ತನ್ನ ಅಂಗಸಂಸ್ಥೆಯಾದ ಬೆವ್​ಕೋ (ದಿ ಬೆವರೇಜಸ್ ಕಂಪನಿ ಪ್ರಾಪ್ರಿಯೇಟರಿ ಲಿ) ಮೂಲಕ ಟ್ವಿಜ್ಜಾವನ್ನು ಖರೀದಿಸುತ್ತಿರುವುದಾಗಿ ಹೇಳಿದೆ. ವರದಿ ಪ್ರಕರ 1,118.7 ಕೋಟಿ ರೂ ಬೆಲೆಗೆ (ಎಂಟರ್​ಪ್ರೈಸ್ ಮೌಲ್ಯ) ಖರೀದಿಸಲು ಡೀಲ್ ನಡೆದಿದೆ ಎನ್ನಲಾಗಿದೆ. ವರುಣ್ ಬೆವರೇಜಸ್ ಸಂಸ್ಥೆಯು ಪೆಪ್ಸಿಕೋದ ಅತಿದೊಡ್ಡ ಫ್ರಾಂಚೈಸಿ…

Read More

Haveri: ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು! – Kannada News | Serial Home Thefts Reported in Nagendramatti, Haveri

ಹಾವೇರಿ, ಡಿಸೆಂಬರ್​​ 23: ನಾಗೇಂದ್ರಮಟ್ಟಿಯಲ್ಲಿ ಮನೆಗಳ‌ ಸರಣಿ ಕಳ್ಳತನ ನಡೆದಿದ್ದು, ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡಿ ಕಳ್ಳರು ಕೈಚಳಕ ತೋರಿದ್ದಾರೆ. 7ಕ್ಕೂ ಅಧಿಕ ಮನೆಗಳಲ್ಲಿ ಕಳ್ಳತನ ನಡೆದಿದ್ದು, ನಗದು ಮತ್ತು ಚಿನ್ನಾಭರಣ ಸೇರಿದಂತೆ ವಿವಿಧ ವಸ್ತುಗಳನ್ನ ಕದ್ದು ಖದೀಮರು ಎಸ್ಕೇಪ್​​ ಆಗಿದ್ದಾರೆ. ಜೊತೆಗೆ ಚಳಿಯ ವಾತಾವರಣ ಹಿನ್ನೆಲೆ ಕಳವು ಮಾಡಿರುವ ಮನೆಯಲ್ಲೇ ಚಹಾ ಮಾಡಿಕೊಂಡು ಸೇವಿಸಿ ಹೋಗಿದ್ದಾರೆ. ಕಳ್ಳರ ಕೃತ್ಯಕ್ಕೆ ನಾಗೇಂದ್ರಮಟ್ಟಿ ಜನ ಕಂಗಾಲಾಗಿದ್ದು, ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಹಾವೇರಿ ನಗರ ಪೊಲೀಸರು…

Read More

Shimoga Zilla Panchayat: ಶಿವಮೊಗ್ಗ ಜಿಲ್ಲಾ ಪಂಚಾಯತ್​ನಲ್ಲಿ ನೇಮಕಾತಿ; MBA / M.Com ಪದವೀಧರರು ಅರ್ಹರು – Kannada News | Shimoga Zilla Panchayat Accounts Manager Recruitment 2025: Apply Online

ಶಿವಮೊಗ್ಗ ಜಿಲ್ಲಾ ಪಂಚಾಯತ್ ಅಧಿಕೃತ ಅಧಿಸೂಚನೆಯ ಮೂಲಕ ಖಾತೆ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಶಿವಮೊಗ್ಗದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 01ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಶೈಕ್ಷಣಿಕ ಅರ್ಹತೆ: ಶಿವಮೊಗ್ಗ ಜಿಲ್ಲಾ ಪಂಚಾಯತ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಹಣಕಾಸು ವಿಷಯದಲ್ಲಿ MBA / M.Com ಅನ್ನು…

Read More

ಪ್ರಿಯಾಂಕಾ ಚೋಪ್ರಾಗೆ ಪತಿ ನಿಕ್ಕಿ ಕೊಟ್ಟ ಸರ್ಪ್ರೈಸ್ ಯಾರೂ ಕೊಡಲಾರರೇನೊ? – Kannada News | Priyanka Chopra talks about her Husaband Nick Jonas’s surprise

ಪ್ರಿಯಾಂಕಾ ಚೋಪ್ರಾ (Priyanka Chopra) ಹಾಲಿವುಡ್​ಗೆ ಹಾರಿ ಬಹು ಸಮಯವಾಗಿದೆ. ಆದರೆ ಇದೀಗ ‘ವಾರಣಾಸಿ’ ಸಿನಿಮಾ ಮೂಲಕ ಮತ್ತೆ ಭಾರತೀಯ ಚಿತ್ರರಂಗಕ್ಕೆ ಅದರಲ್ಲೂ ದಕ್ಷಿಣ ಭಾರತ ಚಿತ್ರರಂಗಕ್ಕೆ ಮರಳಿ ಬಂದಿದ್ದಾರೆ. ಪ್ರಿಯಾಂಕಾ ಚೋಪ್ರಾ ಇತ್ತೀಚೆಗೆ ಕಪಿಲ್ ಶರ್ಮಾ ನಡೆಸಿಕೊಡುವ ಟಾಕ್ ಶೋಗೂ ಬಂದಿದ್ದರು. ಈ ವೇಳೆ ‘ವಾರಣಾಸಿ’ ಸಿನಿಮಾದ ಬಗ್ಗೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಅದೇ ಕಾರ್ಯಕ್ರಮದಲ್ಲಿ ತಮ್ಮ ಪತಿ ನಿಕ್ ಜೋನಸ್ ನೀಡಿದ ವಿಶೇಷ ಸರ್ಪ್ರೈಸ್ ಬಗ್ಗೆಯೂ ಪ್ರಿಯಾಂಕಾ ಚೋಪ್ರಾ ಮಾತನಾಡಿದ್ದಾರೆ. ಪ್ರಿಯಾಂಕಾ…

Read More

ಸಿಎಂ ಕುರ್ಚಿ ಕದನ: ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು – Kannada News | Don’t We Have the Right to Express Our Opinion on Who Should Be CM: Pranavananda Swamiji

ದೆಹಲಿ, ಡಿಸೆಂಬರ್​​ 23: ವೋಟ್‌ಗೆ ನಾವು ಬೇಕು, ಸಿಎಂ ಯಾರಾಗಬೇಕು ಎನ್ನುವ ಅಭಿಪ್ರಾಯ ಹೇಳಬಾರ್ದಾ? ರಾಜಕೀಯ ವಿಷಯಗಳಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಭಾರತದ ಸಂವಿಧಾನ ಸ್ವಾಮೀಜಿಗಳಿಗೆ ಹಕ್ಕು ನೀಡಿದೆ ಎಂದು ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ. ದೆಹಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸ್ವಾಮೀಜಿ, ಡಿ.ಕೆ. ಶಿವಕುಮಾರ್ ಭಾರತೀಯ ಸಂಸ್ಕೃತಿಯನ್ನು ಮೈಗೂಡಿಸಿಕೊಂಡ ರಾಜಕಾರಣಿ. ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಡಿಕೆ ಶಿವಕುಮಾರ್​ರನ್ನು ಸಿಎಂ ಮಾಡುವಂತೆ ಒತ್ತಾಯಿಸಲಾಗುವುದು ಎಂದಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ತೀವ್ರಗೊಂಡ ಕುರ್ಚಿ ಕಿತ್ತಾಟ: ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ – Kannada News | Power Tussle In Karnataka Congress: CM Siddaramaiah supporters plan Ahinda meet in Mysuru

ಮೈಸೂರು, (ಡಿಸೆಂಬರ್ 23): ಹೈಕಮಾಂಡ್.. ಹೈಕಮಾಂಡ್.. ಹೈಕಮಾಂಡ್.. ನಾಯಕತ್ವ ಬದಲಾವಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ (Congress)​​ ನಾಯಕರಲ್ಲಿ ಯಾರನ್ನೇ ಕೇಳಿದರೂ ಸಹ ಎಲ್ಲರ ಬೆರಳು ನೇರವಾಗಿ ಹೈಕಮಾಂಡ್ ಕಡೆಗೆ ತಿರುಗುತ್ತೆ. ಆದ್ರೆ ಗೊಂದಲ ಬಗೆಹರಿಸಿಬೇಕಿದ್ದ ಹೈಕಮಾಂಡ್​ನ ಭಾಗವಾಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಗೊಂದಲ ಸೃಷ್ಟಿ ಮಾಡಿದ್ದು ಹೈಕಮಾಂಡ್ ಅಲ್ಲ.ಇಲ್ಲಿ ಲೋಕಲ್ ಆಗಿ ಏನ್ ಆಗಿದೆಯೋ ಇಲ್ಲೇ ಸೆಟಲ್ ಮಾಡಿಕೊಳ್ಳಿ ಎಂದಿದ್ದಾರೆ. ಇದರಿಂದ ಸಿದ್ದರಾಮಯ್ಯ (Siddaramaiah), ಡಿಕೆ ಶಿವಕುಮಾರ್ (DK Shivakumar) ಬಣಗಳಲ್ಲಿ ಗೊಂದಲ ಸೃಷ್ಟಿಸಿದೆ. ಹೇಗಾದರೂ…

Read More

ಭಾರತ ಬಾಂಗ್ಲಾದೇಶದ ತಂಟೆಗೆ ಹೋದರೆ ನಾವು ಉತ್ತರ ನೀಡುತ್ತೇವೆ; ಪಾಕ್​​ನಿಂದ ಯುದ್ಧದ ಬೆದರಿಕೆ – Kannada News | If India dares to attack Bangladesh Pakistan leader Kamran Saeed Usmanis war threat

ನವದೆಹಲಿ, ಡಿಸೆಂಬರ್ 23: ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರ ಪಕ್ಷವಾದ ಪಾಕಿಸ್ತಾನ ಮುಸ್ಲಿಂ ಲೀಗ್ (ಪಿಎಂಎಲ್)ನ ಯುವ ವಿಭಾಗದ ನಾಯಕ ಕಮ್ರಾನ್ ಸಯೀದ್ ಉಸ್ಮಾನಿ ಇಂದು ಭಾರತಕ್ಕೆ ಬೆದರಿಕೆ ಹಾಕಿದ್ದು, ಬಾಂಗ್ಲಾದೇಶದ ಮೇಲೆ ಭಾರತದಿಂದ ಯಾವುದೇ ದಾಳಿ ನಡೆದರೆ ಪಾಕಿಸ್ತಾನದ ಸೈನ್ಯ ಮತ್ತು ಕ್ಷಿಪಣಿಗಳು ಅದಕ್ಕೆ ಪ್ರತಿಕ್ರಿಯಿಸುತ್ತವೆ ಎಂದು ಹೇಳಿದ್ದಾರೆ. ಅಲ್ಲದೆ, ಅವರು ಪಾಕಿಸ್ತಾನ (Pakistan) ಮತ್ತು ಬಾಂಗ್ಲಾದೇಶದ ನಡುವೆ ಮಿಲಿಟರಿ ಮೈತ್ರಿಗೆ ಕರೆ ನೀಡಿದ್ದಾರೆ. ಈ ಬಗ್ಗೆ ವಿಡಿಯೋ ಹೇಳಿಕೆ ನೀಡಿರುವ ಪಾಕಿಸ್ತಾನದ ನಾಯಕ…

Read More

ಬಿಸಿಸಿಐ ಐತಿಹಾಸಿಕ ನಿರ್ಧಾರ; ವರ್ಷಾಂತ್ಯದಲ್ಲಿ ಮಹಿಳಾ ಆಟಗಾರ್ತಿಯರಿಗೆ ಭರ್ಜರಿ ಗಿಫ್ಟ್ – Kannada News | BCCI Hikes Women’s Domestic Match Fees: Equal Pay for Cricketers

ಭಾರತ ಮಹಿಳಾ ಕ್ರಿಕೆಟ್ ತಂಡ ಇತ್ತೀಚೆಗಷ್ಟೇ ನಡೆದಿದ್ದ 2025 ರ ಏಕದಿನ ವಿಶ್ವಕಪ್​ ಫೈನಲ್​ನಲ್ಲಿ ದಕ್ಷಿಣ ಆಫ್ರಿಕಾವನ್ನು ಮಣಿಸಿ ಮೊಟ್ಟ ಮೊದಲ ಬಾರಿಗೆ ವಿಶ್ವಕಪ್ ಎತ್ತಿಹಿಡಿದಿತ್ತು. ಇದಾದ ಬಳಿಕ ಬಿಸಿಸಿಐ ಕೂಡ ಮಹಿಳಾ ತಂಡಕ್ಕೆ ಭಾರಿ ಮೊತ್ತದ ಬಹುಮಾನ ಘೋಷಿಸಿತ್ತು. ಇದೆಲ್ಲದರ ನಡುವೆ ಇದೀಗ ಬಿಸಿಸಿಐ ಭಾರತದ ಮಹಿಳಾ ಆಟಗಾರ್ತಿಯರಿಗೆ ಮಹತ್ವದ ಉಡುಗೊರೆಯನ್ನು ನೀಡಿದೆ. ಅದೆನೆಂದರೆ ಬಿಸಿಸಿಐ, ದೇಶೀಯ ಮಹಿಳಾ ಕ್ರಿಕೆಟ್ ಆಟಗಾರ್ತಿಯರ ಪಂದ್ಯ ಶುಲ್ಕದಲ್ಲಿ ಭಾರಿ ಹೆಚ್ಚಳ ಮಾಡಿದೆ. ಈಗ, ದೇಶೀಯ ಕ್ರಿಕೆಟ್‌ನಲ್ಲಿ ಮಹಿಳಾ ಆಟಗಾರ್ತಿಯರ…

Read More