Headlines

nagaraj11081993

ಒಳ ಉಡುಪಿನಲ್ಲಿ ಗಾಂಜಾ ತಂದು ಕೈದಿಗಳಿಗೆ ಸಪ್ಲೈ! ಪರಪ್ಪನ ಅಗ್ರಹಾರದಲ್ಲಿ ವಾರ್ಡನ್​ನಿಂದಲೇ ಕಳ್ಳಾಟ

ಬೆಂಗಳೂರು, ಮಾರ್ಚ್​ 12: ಹಲವು ತಿಂಗಳುಗಳಿಂದ ಒಂದಲ್ಲಾ ಒಂದು ರೀತಿಯ ಅಕ್ರಮಗಳಿಂದ ಸುದ್ದಿಯಾಗುತ್ತಿರುವ ನಗರದ ಪರಪ್ಪನ ಅಗ್ರಹಾರ (Parappana Agrahara)ಕೇಂದ್ರ ಕಾರಾಗೃಹ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಗಾಂಜಾ ಅಕ್ರಮ ಸಾಗಾಟದ ಪ್ರಕರಣ ಬೆಳಕಿಗೆ ಬಂದಿದ್ದು, ಜೈಲಿನಲ್ಲಿರುವ ಆರೋಪಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಜೈಲು ವಾರ್ಡನ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪ್ರಕಾಶ್ ಗಾವಡೆ ಎಂದು ಗುರುತಿಸಲಾಗಿದೆ. ಗಾಂಜಾ ತಂದರೆ 10 ಸಾವಿರ ಕೊಡ್ತೀನಿ ಎಂದಿದ್ದ ಕೈದಿ ಮಾರ್ಚ್ 9 ರಂದು ರಾತ್ರಿ ಸುಮಾರು 8.15ರ ಸುಮಾರಿಗೆ ಈ…

Read More

ಬೆಂಗಳೂರಿಗೆ ಆಗಾಗ ಯಶ್ ಬಂದು ಹೋಗ್ತಿದ್ರು ಯಾರಿಗೂ ಕಾಣಿಸಿಕೊಳ್ಳದೆ ಇದ್ದಿದ್ದು ಹೇಗೆ?

ನಟ ರಾಕಿಂಗ್ ಸ್ಟಾರ್ ಯಶ್ (Yash) ಅವರು ಸದ್ಯ ಬೆಂಗಳೂರು ಹಾಗೂ ಮುಂಬೈ ಮಧ್ಯೆ ಓಡಾಟ ನಡೆಸುತ್ತಿದ್ದಾರೆ. ಮುಂಬೈನಲ್ಲಿ ‘ಟಾಕ್ಸಿಕ್’ ಸಿನಿಮಾ ಹಾಗೂ ‘ರಾಮಾಯಣ’ ಚಿತ್ರದ ಡಬ್ಬಿಂಗ್ ಕೆಲಸಗಳು ನಡೆಯುತ್ತಿವೆ. ಈ ಕಾರಣದಿಂದ ಅವರು ಮುಂಬೈಗೆ ತೆರಳುತ್ತಿದದಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದ್ದು, ಅವರು ಮತ್ತಷ್ಟು ಯಂಗ್ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆಜಿಎಫ್’ ಚಿತ್ರಕ್ಕಾಗಿ ಯಶ್ ಅವರು ಉದ್ದನೆಯ ಕೂದಲು ಹಾಗೂ ಗಡ್ಡ ಬಿಟ್ಟಿದ್ದರು. ಮೊದಲ ಭಾಗ ರಿಲೀಸ್ ಆಗುತ್ತಿದ್ದಂತೆ ಇದಕ್ಕೆ ಕತ್ತರಿ ಹಾಕಿದರು. ಆ…

Read More

ಬೆಂಗಳೂರಿಗರಿಗೆ ಗುಡ್​​ ನ್ಯೂಸ್​​: ದ್ವಿಚಕ್ರ ವಾಹನಗಳಿಗೆ ನೈಸ್​​ ರಸ್ತೆ ಶೀಘ್ರ ಟೋಲ್​​ ಮುಕ್ತ?

ಬೆಂಗಳೂರು, ಮಾರ್ಚ್​​ 12: ನಗರದ ಪ್ರಮುಖ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇ ಆಗಿರುವ ನೈಸ್​​ ರಸ್ತೆಯು, ಸಂಚಾರ ದಟ್ಟಣೆಯನ್ನು ತಪ್ಪಿಸಲು ಮತ್ತು ಪ್ರಮುಖ ಹೆದ್ದಾರಿಗಳನ್ನು ಸಂಪರ್ಕಿಸುವ ನಿಟ್ಟಿನಲ್ಲಿ ಬಹಳ ಉಪಯುಕ್ತ ಎಂದೇ ಭಾವಿಸಲಾಗಿದೆ. ಮೈಸೂರು ರಸ್ತೆಯ ದೀಪಾಂಜಲಿ ನಗರ ಜಂಕ್ಷನ್‌ನಿಂದ ಹೊಸಕೆರೆಹಳ್ಳಿಯ PES ಕಾಲೇಜು ಬಳಿ ನೈಸ್ ರಸ್ತೆಗೆ ಸಂಪರ್ಕ ಕಲ್ಪಿಸುವ 1.5 ಕಿ.ಮೀ ಉದ್ದದ ಹೊಸ ರೋಡ್​​ ಶೀಘ್ರದಲ್ಲೇ ಉದ್ಘಾಟನೆಯಾಗುವ ನಿರೀಕ್ಷೆ ಇರುವ ನಡುವೆ ರಾಜ್ಯ ಸರ್ಕಾರ ಮತ್ತೊಂದು ಗುಡ್​​ ನ್ಯೂಸ್​​ ನೀಡಿದೆ. ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳಿಂದ…

Read More

ವೈಯುಕ್ತಿಕ ದಾಖಲೆಗಾಗಿ ಆಡುವುದನ್ನು ನಿಲ್ಲಿಸಿ… ಗಂಭೀರ್ ಖಡಕ್ ಸೂಚನೆ

ಟೀಮ್ ಇಂಡಿಯಾ ಟಿ20 ವಿಶ್ವಕಪ್​ ಗೆಲುವಿನ ಅಲೆಯಲ್ಲಿ ತೇಲುತ್ತಿದೆ. ಈ ವಿಶ್ವಕಪ್ ಗೆದ್ದ ಬೆನ್ನಲ್ಲೇ ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ನೀಡಿದ ಹೇಳಿಕೆ ಇದೀಗ ಚರ್ಚೆಗೆ ಗ್ರಾಸವಾಗಿದೆ. ಟಿ20 ವಿಶ್ವಕಪ್​ ಗೆದ್ದ ಖುಷಿಯಲ್ಲಿರುವ ಗಂಭೀರ್, ಭಾರತ ತಂಡದಲ್ಲಿರುವ ಆಟಗಾರರು ವೈಯುಕ್ತಿಕ ದಾಖಲೆಗಾಗಿ ಆಡುವುದನ್ನು ನಿಲ್ಲಿಸಬೇಕೆಂದು ಖಡಕ್ ಸೂಚನೆ ನೀಡಿದ್ದಾರೆ. ಭಾರತೀಯ ಕ್ರಿಕೆಟ್‌ನಲ್ಲಿ ವೈಯಕ್ತಿಕ ಮೈಲಿಗಲ್ಲುಗಳ ಯುಗ ಮುಗಿದಿದೆ. ತಮ್ಮ ದಾಖಲೆಗಳಿಗಾಗಿ ಆಡುವುದನ್ನು ನಿಲ್ಲಿಸಬೇಕು. ಶತಕ ಅಥವಾ ಅರ್ಧಶತಕಕ್ಕಾಗಿ ಆಡಿ ಸಂಭ್ರಮಿಸುವುದನ್ನು ನಿಲ್ಲಿಸಿ, ಟ್ರೋಫಿಗಳನ್ನು ಗೆದ್ದು…

Read More

Horoscope Today 12​​​​​​th​​ March​: ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 12​​​​​​​, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸದಲ್ಲಿ, ಮೂಲಾ ನಕ್ಷತ್ರ, ಸಿದ್ಧಿ ಯೋಗ ಇರತಕ್ಕಂತಹ ಈ ದಿನದ ಗ್ರಹಗಳ ಸ್ಥಾನ ಮತ್ತು ಅವುಗಳ ಪ್ರಭಾವದ ಬಗ್ಗೆ ವಿವರಿಸಲಾಗಿದೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಧನು ರಾಶಿಯಲ್ಲಿ ಸಂಚಾರ ಮಾಡಲಿದ್ದಾನೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಯವರಿಗೂ…

Read More

ಮದುವೆಯಾಗಿ 3 ತಿಂಗಳೊಳಗೆ ಪತಿಗೆ ಮುಹೂರ್ತ ಇಟ್ಟ ಪತ್ನಿ: ಪ್ರಿಯಕರನ ಜೊತೆ ಸೇರಿ ಕೊಲೆ

ತುಮಕೂರು, ಮಾರ್ಚ್​​ 12: ತಿಪಟೂರು ಗ್ರಾಮಾಂತರದ ಚಿಕ್ಕಕೊಟ್ಟಗಿಹಳ್ಳಿ ಗ್ರಾಮದಲ್ಲಿ ನಡೆದಿದ್ದ ಗುಜರಿ ವ್ಯಾಪಾರಿಯ ಕೊಲೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​ ಸಿಕ್ಕಿದೆ. ಮದುವೆಯಾಗಿ ಮೂರು ತಿಂಗಳು ಕಳೆಯುವುದರ ಒಳಗೆ ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿರುವ ಶಾಕಿಂಗ್​​ ವಿಚಾರ ತನಿಖೆ ವೇಳೆ ಬಯಲಾಗಿದೆ. ಪ್ರಕರಣ ಸಂಬಂಧ ಫರ್ಜಾನ (31), ಧನರಾಜ್ (24) ವೆಂಕಟೇಶ್ (24) ಮತ್ತು ದರ್ಶನ್ (24) ಸೇರಿ ನಾಲ್ಕು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಏನು? ಗುಜರಿ ವ್ಯಾಪಾರಿಯಾಗಿದ್ದ ಮನ್ಸೂರ್ ಪಾಷ…

Read More

ICC T20I Rankings: ಐಸಿಸಿ ಟಿ20 ಬ್ಯಾಟರ್​ಗಳ ರ‍್ಯಾಂಕಿಂಗ್‌ ಪ್ರಕಟ

ICC T20I Rankings: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಐಸಿಸಿ ಟಿ20 ಬ್ಯಾಟರ್​ಗಳ ನೂತನ ರ‍್ಯಾಂಕಿಂಗ್‌ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿಯ ಟಾಪ್-10 ಪಟ್ಟಿಯಲ್ಲಿ ಟೀಮ್ ಇಂಡಿಯಾದ ನಾಲ್ವರು ಬ್ಯಾಟರ್​ಗಳು ಸ್ಥಾನ ಪಡೆದಿದ್ದಾರೆ. ಅವರಲ್ಲಿರಿಬ್ಬರು ಅಗ್ರಸ್ಥಾನಗಳಲ್ಲಿರುವುದು ವಿಶೇಷ. ಐಸಿಸಿ ಟಿ20 ಬ್ಯಾಟರ್​ಗಳ ನೂತನ ಶ್ರೇಯಾಂಕ ಪಟ್ಟಿ ಈ ಕೆಳಗಿನಂತಿದೆ… 1- ಅಭಿಷೇಕ್ ಶರ್ಮಾ: ಟೀಮ್ ಇಂಡಿಯಾದ ಯುವ ದಾಂಡಿಗ ಅಭಿಷೇಕ್ ಶರ್ಮಾ ಈ ಬಾರಿ ಕೂಡ ಅಗ್ರಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಟಿ20 ವಿಶ್ವಕಪ್​ನಲ್ಲಿನ ಕಳಪೆ ಪ್ರದರ್ಶನದ…

Read More

ಬೆಂಗಳೂರಿಗರೇ ಗಮನಿಸಿ: ಫ್ರೀಡಂ ಪಾರ್ಕ್​​ ಸುತ್ತಮುತ್ತ ಇಂದು ಸಂಚಾರ ಮಾರ್ಗ ಬದಲಾವಣೆ

ಬೆಂಗಳೂರು, ಮಾರ್ಚ್​​ 12: ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಫ್ರೀಡಂ ಪಾರ್ಕ್​​​ನಲ್ಲಿ ಪ್ರತಿಭಟನೆ ಹಿನ್ನೆಲೆ ಶೇಷಾದ್ರಿ ರಸ್ತೆಯ ಮೂಲಕ ಜನರು ಮತ್ತು ವಾಹನಗಳು ಹೆಚ್ಚಾಗಿ ಆಗಮಿಸುವ ಕಾರಣ ಫ್ರೀಡಂ ಪಾರ್ಕ್ ಸುತ್ತ ಮುತ್ತ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಫ್ರೀಡಂಪಾರ್ಕ್​ ಸುತ್ತಮುತ್ತ ತಾತ್ಕಾಲಿಕ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ಟ್ರಾಫಿಕ್​​ ಪೊಲೀಸರು ಮಾಹಿತಿ ನೀಡಿದ್ದು, ಶಾಂತಲಾ ಜಂಕ್ಷನ್, ಖೋಡ್ ಸರ್ಕಲ್​ನಿಂದ ಆನಂದ ರಾವ್ ಫ್ಲೈಓವರ್​, ಓಲ್ಡ್ JDS ಕಚೇರಿ…

Read More

ಮದ್ಯದ ನಶೆಯಲ್ಲಿದ್ದವ ಹರಿಸಿದ್ದು ರಕ್ತದಕೋಡಿ: ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ

ಮಡಿಕೇರಿ/ ಚಿಕ್ಕಮಗಳೂರು, ಮಾರ್ಚ್​​ 12: ಮದ್ಯದ ನಶೆಯಲ್ಲಿ ವ್ಯಕ್ತಿಯೋರ್ವ ಅಣ್ಣ, ತಂಗಿಯನ್ನ ಬರ್ಬರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಭಾಗಮಂಡಲದಲ್ಲಿ ನಡೆದಿದೆ. ಯಶೋಧಾ(45), ಕುಂಞರಾಮ(47) ಮೃತ ದುರ್ದೈವಿಗಳಾಗಿದ್ದು, ಆರೋಪಿ ಚಂದು(65) ಎಂಬಾತನನ್ನು ಬಂಧಿಸಲಾಗಿದೆ. ಕುಡಿದ ಮತ್ತಿನಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಒಡ ಹುಟ್ಟಿದವರನ್ನು ಆರೋಪಿ ಕೊಂದಿದ್ದು, ಸ್ಥಳಕ್ಕೆ ಕೊಡಗು ಎಸ್​​ಪಿ ಬಿಂದುಮಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭಾಗಮಂಡಲ‌ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅವಳಿ ಕೊಲೆ ಆರೋಪಿಗೆ ಮರಣದಂಡನೆ ಮಹಿಳೆಯೋರ್ವಳ…

Read More

ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ

ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ಸಹೋದರ ಆನಂದ್ ಜೊತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಆನಂದ್ ಜೊತೆ ರಶ್ಮಿಕಾ ಅವರು ಆಗಾಗ ಪೋಸ್ ಕೊಡುತ್ತಾ ಇರುತ್ತಾರೆ. ಈಗ ಅವರ ಹೊಸ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿವೆ. ಇದರಲ್ಲಿ ರಶ್ಮಿಕಾ ಮಂದಣ್ಣ ಹಾಗೂ ಆನಂದ್ ಅವರು ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More