All posts by nagaraj11081993

ಬರೋಬ್ಬರಿ 209 ಎಸೆತಗಳು ಬಾಕಿ… ಹೀನಾಯ ಸೋಲುಂಡ ಪಾಕಿಸ್ತಾನ್

ಬರೋಬ್ಬರಿ 209 ಎಸೆತಗಳು ಬಾಕಿ… ಹೀನಾಯ ಸೋಲುಂಡ ಪಾಕಿಸ್ತಾನ್

ಬಾಂಗ್ಲಾದೇಶ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು ಅತ್ಯಂತ ಹೀನಾಯ ಸೋಲನುಭವಿಸಿದೆ. ಢಾಕಾದಲ್ಲಿ ನಡೆದ ಈ ಪಂದ್ಯದಲ್ಲಿ  ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ 30.4 ಓವರ್‌ಗಳಲ್ಲಿ ಕೇವಲ 114 ರನ್‌ಗಳಿಗೆ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ಕೇವಲ 15.1 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗುರಿ ತಲುಪಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಅಂದರೆ ಬರೋಬ್ಬರಿ 209 ಎಸೆತಗಳನ್ನು ಬಾಕಿಯಿಸಿ ಬಾಂಗ್ಲಾ ಪಡೆ ಏಕದಿನ ಪಂದ್ಯ ಗೆದ್ದುಕೊಂಡಿದೆ.  ಇದು ಎಸೆತಗಳ ಆಧಾರದ ಮೇಲೆ (209 ಎಸೆತಗಳು ಬಾಕಿ) ಪಾಕಿಸ್ತಾನದ ವಿರುದ್ಧ ಬಾಂಗ್ಲಾದೇಶ್ ತಂಡದ  ಇದುವರೆಗಿನ ಅತಿದೊಡ್ಡ ಏಕದಿನ ಗೆಲುವಾಗಿದೆ.

ಹಾಗೆಯೇ ಪಾಕಿಸ್ತಾನ ತಂಡವು ಬಾಂಗ್ಲಾದೇಶ್ ವಿರುದ್ಧ ಏಕದಿನ ಪಂದ್ಯಗಳಲ್ಲಿ ದಾಖಲಿಸಿದ ಅತ್ಯಂತ ಕಡಿಮೆ ಮೊತ್ತ (114 ರನ್) ಕೂಡ ಇದಾಗಿದೆ.

ಇನ್ನು ಈ ಪಂದ್ಯದಲ್ಲಿ ಮಾರಕ ದಾಳಿ ಸಂಘಟಿಸಿದ ಬಾಂಗ್ಲಾದೇಶದ ವೇಗಿ ನಹೀದ್ ರಾಣಾ 24 ರನ್ ನೀಡಿ 5 ವಿಕೆಟ್ ಪಡೆಯುವ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಗೆದ್ದರೆ, ಮತ್ತೊಂದೆಡೆ ತಂಝಿದ್ ಹಸನ್ ಕೇವಲ 42 ಎಸೆತಗಳಲ್ಲಿ ಅಜೇಯ 67 ರನ್ ಬಾರಿಸಿ ತಂಡಕ್ಕೆ ಸುಲಭ ಜಯ ತಂದುಕೊಡುವಲ್ಲಿ ಸಫಲರಾಗಿದ್ದಾರೆ.

ಒಟ್ಟಿನಲ್ಲಿ ಟಿ20 ವಿಶ್ವಕಪ್​ನಲ್ಲಿ ಹೀನಾಯ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದ ಪಾಕಿಸ್ತಾನ್ ತಂಡವು ಇದೀಗ ಏಕದಿನ ಸರಣಿಯ ಮೊದಲ ಪಂದ್ಯದಲ್ಲೇ ಅತ್ಯಂತ ಹೀನಾಯ ಸೋಲುಂಡು ಭಾರೀ ಮುಖಭಂಗ ಅನುಭವಿಸಿದೆ.

 

Source link

ಹಾರರ್, ಸಸ್ಪೆನ್ಸ್ ಸಿನಿಮಾ ಮಾಡಿ ಫೇಮಸ್ ಆಗಿದ್ದ ನಿರ್ದೇಶಕ ಬೆಂಗಳೂರಲ್ಲಿ ನಿಧನ

ತಮಿಳಿನ ಹಿರಿಯ ನಿರ್ದೇಶಕ ಹಾಗೂ ಸಂಗೀತ ಸಂಯೋಜಕ ದಕ್ಕಳಿ ಶ್ರೀನಿವಾಸನ್ ಅವರು ನಿಧನ ಹೊಂದಿದ್ದಾರೆ. ಅವರು ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನಲ್ಲಿ ಅವರು ಕೊನೆಯುಸಿರು ಎಳೆದಿದ್ದು, ಅವರಿಗೆ 72 ವರ್ಷ ವಯಸ್ಸಾಗಿತ್ತು. ಸುಮಾರು ಎರಡೂವರೆ ದಶಕಗಳ ಕಾಲ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದರು.

1987ರಲ್ಲಿ ರಿಲೀಸ್ ಆದ ‘ಇವರ್ಗಳ್ ವರುಂಗಳಾ ತೂಂಗಲ್’ ಸಿನಿಮಾದಲ್ಲಿ ಬರಹಗಾರನಾಗಿ ಕೆಲಸ ಮಾಡಿ ಚಿತ್ರರಂಗಕ್ಕೆ ಶ್ರೀನಿವಾಸ ಕಾಲಿಟ್ಟರು. ಈ ಚಿತ್ರವನ್ನು ಅವರು ನಿರ್ಮಾಣವನ್ನೂ ಮಾಡಿದ್ದರು. ಆ ಬಳಿಕ ಕಮಲ್ ಹಾಸನ್ ನಟನೆಯ ‘ನಲಯ ಮಣಿದನ್’ ಸಿನಿಮಾದಲ್ಲಿ ಶ್ರೀನಿವಾಸ್ ನಟಿಸಿದರು. ಈ ಚಿತ್ರಕ್ಕೆ ಅವರು ನಿರ್ಮಾಪಕರೂ ಆಗಿದ್ದರು. 1991ರಲ್ಲಿ ಬಂದ ‘ಜನ್ಮ ನಕ್ಷತ್ರಮ್’ ಚಿತ್ರವನ್ನು ಡೈರೆಕ್ಟ್ ಮಾಡುವ ಮೂಲಕ ನಿರ್ದೇಶಕನ ಕ್ಯಾಪ್ ತೊಟ್ಟರು. ಈ ಚಿತ್ರ ಸಸ್ಪೆನ್ಸ್ ಹಾರರ್ ಥೀಮ್ ಶೈಲಿಯಲ್ಲಿ ಮೂಡಿ ಬಂದಿತ್ತು. ಕಮಲ್ ಹಾಸನ್ ಅವರ ‘ಶೂರ ಸಂಹಾರ’ ಚಿತ್ರದಲ್ಲಿ ವಿಲನ್ ಪಾತ್ರ ಮಾಡಿ ಗಮನ ಸೆಳೆದರು.

ಶ್ರೀನಿವಾಸ್ ಅವರು ಥ್ರಿಲ್ಲರ್ ಹಾಗೂ ಹಾರರ್ ಸಿನಿಮಾಗಳನ್ನು ಮಾಡುವ ಮೂಲಕ ಫೇಮಸ್ ಆಗಿದ್ದರು. ಶ್ರೀನಿವಾಸ್ 2011ರಲ್ಲಿ ‘ಆಡುದಾದು’ ಹೆಸರಿನ ಸಿನಿಮಾ ನಿರ್ದೇಶನ ಮಾಡಿದರು. ಆ ಬಳಿಕ ಅವರು ಚಿತ್ರರಂಗದ ಕಡೆ ಮುಖ ಮಾಡಿಲ್ಲ.

ಇದನ್ನೂ ಓದಿ: ಉತ್ತರದವರಾದರೂ ಮೊನಾಲಿಸಾ ಕೇರಳದಲ್ಲಿ ಮದುವೆ ಆಗಿದ್ದೇಕೆ? ಮೊಹಮ್ಮದ್ ಫರ್ಮಾನ್ ಹಿನ್ನೆಲೆ ಏನು?

ಶ್ರೀನಿವಾಸ್ ಅವರು ಸಿನಿಮಾ ಕೆಲಸ ಬಿಟ್ಟ ಬಳಿಕ ಸಾಮಾಜಿಕ ಕೆಲಸಗಳನ್ನು ಮಾಡುತ್ತಾ ಬಂದರು. ಅವರು ತಮ್ಮದೇ ಆದ ಆಶ್ರಮ ಆರಂಭಿಸಿದ್ದರು. ಕಳೆದ ಕೆಲವು ವರ್ಷಗಳಿಂದ ಅವರಿಗೆ ತೀವ್ರ ಅನಾರೋಗ್ಯ ಕಾಡಿತ್ತು. ಅವರು ಬೆಂಗಳೂರಿನಲ್ಲಿ ವಾಸವಿದ್ದರು ಎನ್ನಲಾಗಿದೆ. ಮಗುವನ್ನು ದತ್ತು ಪಡೆದು ಅವರ ಜೊತೆ ವಾಸವಿದ್ದರು. ಅವರು ಇಲ್ಲಿಯೇ ನಿಧನ ಹೊಂದಿದ್ದು, ಅಂತಿಮ ಸಂಸ್ಕಾರ ಬೆಂಗಳೂರಿನಲ್ಲೇ ನಡೆದಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಎಲ್‌ಪಿಜಿ ಸಿಲಿಂಡರ್​ ಸಿಗದೆ ಪರದಾಟ: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕೆ

ಬೆಂಗಳೂರು, ಮಾರ್ಚ್​​ 12: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯವು ಎಲ್‌ಪಿಜಿ ಸಿಲಿಂಡರ್ ಬಿಕ್ಕಟ್ಟನ್ನು ಎದುರಿಸುತ್ತಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಿಲಿಂಡರ್ ಸಿಗದೆ ಹೋಟೆಲ್ ಮಾಲೀಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿಲಿಂಡರ್​ಗಳು ಬ್ಲ್ಯಾಕ್​​ ಮಾರ್ಕೆಟ್​​ನಲ್ಲಿ ಮೂರು ಪಟ್ಟು ಹೆಚ್ಚು ಬೆಲೆಗೆ ಮಾರಾಟವಾಗುತ್ತಿದ್ದರೂ ಅವುಗಳ ಲಭ್ಯತೆಯೂ ಕಷ್ಟಸಾಧ್ಯವಾಗಿದೆ. ಇದರಿಂದ ಹಲವು ಹೋಟೆಲ್‌ಗಳು ಮುಚ್ಚುವ ಪರಿಸ್ಥಿತಿ ತಲುಪಿವೆ ಅಥವಾ ತಮ್ಮ ಮೆನುವಿನ ಐಟಂಗಳನ್ನು ಗಣನೀಯವಾಗಿ ಕಡಿಮೆ ಮಾಡಿವೆ. ಇದರಿಂದಾಗಿ ಹೋಟೆಲ್‌ಗಳನ್ನು ಅವಲಂಬಿಸಿರುವ ವಿದ್ಯಾರ್ಥಿಗಳು, ಉದ್ಯೋಗಿಗಳು ಆಹಾರದ ಕೊರತೆ ಎದುರಿಸುತ್ತಿದ್ದಾರೆ. ಈ ಪರಿಸ್ಥಿತಿಯ ನಡುವೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯವು ನಾಗರಿಕರಿಗೆ ಬುಕಿಂಗ್ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದೆ. ಮುಂದಿನ ಎರಡು ದಿನಗಳಲ್ಲಿ ಸಿಲಿಂಡರ್​ಗಳನ್ನು ಮನೆಗಳಿಗೆ ವಿತರಿಸಲಾಗುವುದು. ಅಲ್ಲದೆ, ಎಲ್‌ಪಿಜಿ ಸಿಲಿಂಡರ್ ಉತ್ಪಾದನೆಯನ್ನು ಶೇಕಡಾ 25ರಷ್ಟು ಹೆಚ್ಚಿಸಲಾಗಿದೆ ಮತ್ತು ಹೊಸ ಮೂಲಗಳಿಂದ ಎಲ್‌ಎನ್‌ಜಿ ಸರಕುಗಳನ್ನು ಖರೀದಿಸಲಾಗುತ್ತಿದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

ವರದಿ: ವಿಕಾಸ್​​, ಟಿವಿ9 ಬೆಂಗಳೂರು

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Video: ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ, ಗುಂಡಿನ ದಾಳಿ

ಶ್ರೀನಗರ, ಮಾರ್ಚ್​ 12: ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ತಂದೆ, ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರನ್ನು ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಬುಧವಾರ(ಮಾರ್ಚ್​ 11)ರಂದು ಸಂಜೆ ವಿವಾಹ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ಫಾರೂಕ್ ಅಬ್ದುಲ್ಲಾ ಅವರನ್ನು ಕೊಲೆ ಮಾಡಲು ಸಂಚು ರೂಪಿಸಲಾಗಿತ್ತು. ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ದುಷ್ಕರ್ಮಿಯೊಬ್ಬ ಅವರ ಮೇಲೆ ಗುಂಡು ಹಾರಿಸಿದ್ದಾನೆ.

ದಾಳಿಕೋರ ಅಬ್ದುಲ್ಲಾ ಅವರಿಂದ ಕೆಲವೇ ಕೆಲವು ಹೆಜ್ಜೆಗಳ ಅಂತರದಲ್ಲಿದ್ದ. ಆದರೆ ರಾಷ್ಟ್ರೀಯ ಭದ್ರತಾ ಸಿಬ್ಬಂದಿ (ಎನ್‌ಡಿಜಿ) ಕಮಾಂಡೋಗಳು ಅವನನ್ನು ತಳ್ಳಿದ್ದಾರೆ. ಗುಂಡು ಗುರಿ ತಪ್ಪಿತ್ತು, ಅಬ್ದುಲ್ಲಾ ಕೂದಲೆಳೆಯ ಅಂತರದಲ್ಲಿ ಪಾರಾದರು. ದಾಳಿಕೋರನನ್ನು ಕಮಲ್ ಸಿಂಗ್ ಜಮ್ವಾಲ್ ಎಂದು ಗುರುತಿಸಲಾಗಿದ್ದು, ಆತನನ್ನು ತಕ್ಷಣವೇ ವಶಕ್ಕೆ ಪಡೆಯಲಾಗಿದೆ.

ಆತನನ್ನು ಹಿಡಿದ ಕೂಡಲೇ ಜನರು ಆತನನ್ನು ಥಳಿಸುತ್ತಿರುವುದನ್ನು ವೀಡಿಯೊಗಳು ತೋರಿಸಿವೆ. ದಾಳಿಕೋರ ಕುರ್ಚಿಯ ಮೇಲೆ ಕುಳಿತು, ತಾನು ಜಮ್ಮುವಿನ ಪುರಾಣಸ್ ಮಂಡಿಯ ನಿವಾಸಿ ಎಂದು ಪೊಲೀಸರಿಗೆ ಹೇಳುತ್ತಿರುವುದು ಕಾಣಬಹುದು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Daily Devotional: ಮನೆಯಲ್ಲಿ ಸೂರ್ಯ ರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?

ಬೆಂಗಳೂರು, ಮಾರ್ಚ್​​ 1 2​​: ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಸೂರ್ಯನ ರಶ್ಮಿಯು ಮನೆ, ಕಚೇರಿ ಅಥವಾ ದೇವಾಲಯಗಳಂತಹ ಯಾವುದೇ ಸ್ಥಳಕ್ಕೆ ಪ್ರವೇಶಿಸುವುದು ಅತ್ಯಂತ ಮಹತ್ವದ್ದಾಗಿದೆ. ವಾಸ್ತು ಪ್ರಕಾರ, ಸೂರ್ಯನ ಬೆಳಕು ಮನೆಯಲ್ಲಿ ಹರಿಯುವುದರಿಂದ ಅನೇಕ ಸಕಾರಾತ್ಮಕ ಪರಿಣಾಮಗಳುಂಟಾಗುತ್ತವೆ. ಪೂರ್ವ ದಿಕ್ಕಿನಿಂದ ಸೂರ್ಯರಶ್ಮಿ ಪ್ರವೇಶಿಸುವುದು ಮನೆಗೆ ಶುಭ, ಮಾನಸಿಕ ನೆಮ್ಮದಿ, ಉತ್ತಮ ಆರೋಗ್ಯ, ಕೆಲಸ ಕಾರ್ಯಗಳಲ್ಲಿ ಯಶಸ್ಸು ಮತ್ತು ಆದಾಯದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ. ವಿಶೇಷವಾಗಿ ಪೂರ್ವ ಮತ್ತು ಈಶಾನ್ಯ ದಿಕ್ಕುಗಳಿಂದ ಬರುವ ಬೆಳಕು ಅತ್ಯಂತ ಶುಭವೆಂದು ಪರಿಗಣಿಸಲಾಗುತ್ತದೆ. ಪಶ್ಚಿಮ ದಿಕ್ಕಿನಿಂದ ಸೂರ್ಯಾಸ್ತದ ಸಮಯದಲ್ಲಿ ಬರುವ ಬೆಳಕು ಸಹ ಶುಭಕಾರಿಯಾಗಿದೆ. ಸೂರ್ಯನನ್ನು “ಆತ್ಮಕಾರಕ” ಮತ್ತು “ಆರೋಗ್ಯಂ ಭಾಸ್ಕರಾದಿಚ್ಛೇತ್” ಎಂಬಂತೆ ಆರೋಗ್ಯದಾತ ಎಂದು ಕರೆಯಲಾಗುತ್ತದೆ. ಮನೆಯಲ್ಲಿ ಸೂರ್ಯನ ಕಿರಣಗಳು ಬೀಳುವುದರಿಂದ ಆ ಮನೆಯ ವಾಸ್ತು ಬಲಗೊಂಡು, ಶುಭ ಫಲಗಳನ್ನು ನೀಡುತ್ತದೆ ಎಂದು ಡಾ.ಬಸವರಾಜ ಗುರೂಜಿ ಹೇಳಿದ್ದಾರೆ.

 

 

 

Source link

ಉತ್ತರದವರಾದರೂ ಮೊನಾಲಿಸಾ ಕೇರಳದಲ್ಲಿ ಮದುವೆ ಆಗಿದ್ದೇಕೆ? ಮೊಹಮ್ಮದ್ ಫರ್ಮಾನ್ ಹಿನ್ನೆಲೆ ಏನು?

ಕುಂಭ ಮೇಳದಲ್ಲಿ ಮಿಂಚಿ ಆಲ್ಬಂ ವಿಡಿಯೋ ಸಾಂಗ್ ಹಾಗೂ ಸಿನಿಮಾ ಆಫರ್ ಪಡೆದ ಮೊನಾಲಿಸಾ ಭೋಸ್ಲೆ  (Monalisa) ಅವರು ಈಗ ಸುದ್ದಿಯಲ್ಲಿದ್ದಾರೆ. ಕುಟುಂಬದ ವಿರೋಧದ ನಡುವೆಯೂ ಅವರು ವೈವಾಹಿಕ ಜೀವನಕ್ಕೆ ಕಾಲಿಟಟಿದ್ದಾರೆ. ಮೊಹ್ಮದ್ ಫರ್ಮಾನ್ ಜೊತೆ ಅವರ ವಿವಾಹ ನಡೆದಿದೆ. ಈ ಮದುವೆಗೆ ಮೊನಾಲಿಸಾ ಕುಟುಂಬದವರು ಸಾಕಷ್ಟು ವಿರೋಧ ಹೊರ ಹಾಕಿದ್ದರು. ಮನೆಯವರನ್ನು ಧಿಕ್ಕರಿಸಿ ಮೊನಾಲಿಸಾ ದೇವಸ್ಥಾನದಲ್ಲಿ ವಿವಾಹ ಆಗಿದ್ದಾರೆ. ಅದು ಕೂಡ ಕೇರಳದ ತಿರುವನಂತಪುರದಲ್ಲಿ ಅನ್ನೋದು ವಿಶೇಷ.

ಮೊನಾಲಿಸಾ ಇಂದೋರ್​​ ಅವರು. ಮೊಹಮ್ಮದ್ ಫರ್ಮಾನ್ ಅವರು ಮಹಾರಾಷ್ಟ್ರದವರು. ಇವರ ಪರಿಚಯ ಸಿನಿಮಾ ಸೆಟ್ ಅಲ್ಲಿ ಆಯಿತು. ಇಬ್ಬರು ಸಾಕಷ್ಟು ಕ್ಲೋಸ್ ಆದರು. ಆರು ತಿಂಗಳಲ್ಲಿ ನಮಗೆ 60 ವರ್ಷಗಳ ಬಾಂಧವ್ಯ ಬೆಳೆದಿದೆ ಎಂದೆನಿಸುತ್ತಿದೆ ಎಂದು ಅವರು ಹೇಳಿದ್ದಾರೆ. ಇಬ್ಬರದ್ದೂ ಬೇರೆ ಬೇರೆ ರಾಜ್ಯ. ಇವರಿಗೂ ಕೇರಳಕ್ಕೂ ಯಾವುದೇ ಸಂಬಂಧ ಇಲ್ಲ. ಆದಾಗ್ಯೂ ಇವರು ಕೇರಳಕ್ಕೆ ಬಂದು ಮದುವೆ ಆಗಲು ಒಂದು ಕಾರಣ ಇದೆ.

ಕೇರಳದ ಪೂವಾರ್ ಬಳಿಯ ಅರುಮನೂರ್ ದೇವಸ್ಥಾನದಲ್ಲಿ ಇವರ ಮದುವೆ ನಡೆದಿದೆ. ಕೇರಳ ಎಂದರೆ ಇಬ್ಬರಿಗೂ ಇಷ್ಟವಂತೆ. ಅಲ್ಲಿ ಸೌಂದರ್ಯ ಹಾಗೂ ಸುರಕ್ಷತೆಗೆ ಇವರು ಮಾರುಹೋದರಂತೆ. ವಿಶೇಷ ಎಂದರೆ ಇವರ ವಿವಾಹಕ್ಕೆ ಕೇರಳದ ಅನೇಕ ರಾಜಕೀಯ ಗಣ್ಯರೇ ಬೆಂಬಲ ನೀಡಿದರು. ವಿವಾಹಕ್ಕೆ ಕೇರಳದ ಸಚಿವ ವಿ. ಶಿವನ್​ಕುಟ್ಟಿ, ಸಂಸದ ರಹೀಮ್ ಸೇರಿ ಅನೇಕರು ಭಾಗಿ ಆದರು. ಹೀಗಾಗಿ ಇವರ ಮದುವೆಗೆ ಯಾವುದೇ ತೊಂದರೆ ಆಗಿಲ್ಲ.

ಇದನ್ನೂ ಓದಿ: ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ ಮೊನಾಲಿಸಾ

ಇನ್ನು, ಮೊನಾಲಿಸಾ ತಂದೆಗೆ ಈ ವಿವಾಹ ಇಷ್ಟ ಇರಲಿಲ್ಲ. ಈ ಕಾರಣಕ್ಕೆ ಮಗಳನ್ನು ಬೇರೆಯವರ ಜೊತೆ ಒತ್ತಾಯಪೂರ್ವಕವಾಗಿ ವಿವಾಹ ಮಾಡಲು ನಿರ್ಧರಿಸಿದ್ದರು. ಈ ಹಿನ್ನೆಲೆಯಲ್ಲಿ ಮೊನಾಲಿಸಾ ಬಾಯ್​​ಫ್ರೆಂಡ್ ಜೊತೆ ಕೇರಳಕ್ಕೆ ಓಡಿ ಬಂದಿದ್ದಾರೆ. ಅವರಿಗೆ ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಲಕ್ಕುಂಡಿ ನಿಧಿ ಪ್ರಕರಣಕ್ಕೆ ಟ್ವಿಸ್ಟ್​​: ರಿತ್ತಿ ಕುಟುಂಬದಿಂದ ಹೊಸ ಡಿಮ್ಯಾಂಡ್​​

ಗದಗ, ಮಾರ್ಚ್​ 12: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮನೆಗಾಗಿ ಅಡಿಪಾಯ ತೆಗೆಯುವಾಗ ಸುಮಾರು 470 ಗ್ರಾಂ ಚಿನ್ನಾಭರಣಗಳು ಪತ್ತೆಯಾಗಿದ್ದವು. ಸಿಕ್ಕ ನಿಧಿಯನ್ನು ಪ್ರಜ್ವಲ್ ರಿತ್ತಿ ಕುಟುಂಬ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿತ್ತು. ಆ ಬಳಿಕ ಬಹಳ ಬೆಳವಣಿಗೆಗಳು ನಡೆದಿದ್ದವು. ಈ ನಡುವೆ ಪ್ರಕರಣಕ್ಕೆ ಹೊಸ ಟ್ವಿಸ್ಟ್​​ ಸಿಕ್ಕಿದೆ. ಅಂದು ಸಿಕ್ಕಿದ್ದ ಬಂಗಾರದ ಬೆಲೆ ಇಂದಿಗೆ ಸುಮಾರು 80 ಲಕ್ಷ ರೂಪಾಯಿಗಳಾಗಿದ್ದು, ಆ್ಯಂಟಿಕ್​​ ಮೌಲ್ಯ ಸುಮಾರು 8 ಕೋಟಿ ಎಂದು ತಜ್ಞರು ಹೇಳಿದ್ದಾರೆ. ಈ ಬೆನ್ನಲ್ಲೇ ಪ್ರಜ್ವಲ್ ರಿತ್ತಿ‌ ಕುಟುಂಬ ಹೊಸ ಬೇಡಿಕೆ ಮುಂದಿಟ್ಟಿದ್ದು, 8 ಕೋಟಿ ಮೊತ್ತಕ್ಕೆ ಐದರಲ್ಲಿ ಒಂದು  ಪಾಲು ತಮಗೆ ಬೇಕು ಎಂದಿದೆ.

ಪ್ರಜ್ವಲ್ ರಿತ್ತಿ‌ ಕುಟುಂಬ ಹೇಳಿದ್ದೇನು?

ಸಿಕ್ಕ ನಿಧಿಯನ್ನು ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ್ದೇವೆ. ಹೀಗಾಗಿ ತಜ್ಞರು ಹೇಳಿರುವ ಸಿಕ್ಕ ಬಂಗಾರದ ಆ್ಯಂಟಿಕ್​​ ಮೌಲ್ಯದಲ್ಲಿ ತಮಗೆ ಐದರಲ್ಲಿ ಒಂದು ಭಾಗ ಪಾಲು ನೀಡಬೇಕು. ಸರ್ಕಾರ ಕೂಡ ನಮಗೆ ಪ್ರಾಮಾನಿಕವಾಗಿ ಪರಿಹಾರ ನೀಡಬೇಕು. ಈಗಿನ ಬೆಲೆಯನ್ನು ಕೊಡುತ್ತೇವೆ ಎಂದರೆ ನಾವು ಅದನ್ನು ಒಪ್ಪಲ್ಲ. ಸಚಿವ ಎಚ್. ಕೆ. ಪಾಟೀಲ್, ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ರಾಜ್ಯ ಸಲಹಾ ಸಮಿತಿ ಸದಸ್ಯ ಸಿದ್ದು ಪಾಟೀಲ್ ನಮಗೆ ಭರವಸೆ ನೀಡಿದ್ದರು. ಹೀಗಾಗಿ ಅವರ ಮೇಲೆ ನಮಗೆ ನಂಬಿಕೆ ಇದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಇದನ್ನೂ ಓದಿ: ಲಕ್ಕುಂಡಿಯಲ್ಲಿ ಸಿಕ್ಕ ಚಿನ್ನದ ನಿಧಿ ಯಾರ ಕಾಲದ್ದು ಗೊತ್ತಾ? ಇದರ ಬೆಲೆ ಕೇಳಿದ್ರೆ ಶಾಕ್​​​ ಆಗುವುದು ಗ್ಯಾರಂಟಿ!

ಪುರಾತತ್ವ ತಜ್ಞರು ಏನು ಹೇಳಿದ್ದರು?

ಲಕ್ಕುಂಡಿಯಲ್ಲಿ ಸಿಕ್ಕ ಚಿನ್ನದ ನಿಧಿ‌ಯ ಇಂದಿನ ವ್ಯಾಲ್ಯೂ ಸುಮಾರು 80 ಲಕ್ಷ ರೂ., ಆ್ಯಂಟಿಕ್ ಮೌಲ್ಯ ಹತ್ತು ಪಟ್ಟು ಹಾಕಿದ್ರೆ ಬಹಳ ಆಗುತ್ತೆ ಎಂದು ಗದಗದಲ್ಲಿ ಪುರಾತತ್ವ ತಜ‌್ಞೆ ಚೂಡಾಮಣಿ ಹೇಳಿದ್ದರು. ಲಕ್ಕುಂಡಿಯ ದೇವರಿಗೆ ಹಾಕುವ ಆಭರಣದ ಮೌಲ್ಯ ಹೇಳೋಕೆ ಆಗಲ್ಲ. ಇಲ್ಲಿಯ ಆಭರಣ ಬಹಳ ಅತ್ಯಮೂಲ್ಯವಾಗಿದ್ದು, ಸೂಕ್ಷ್ಮ ಕೆತ್ತನೆ ಮತ್ತು ಕುಸುರಿಯಿಂದ ಕೂಡಿವೆ. ಹರಳು ಮಾಣಿಕ್ಯ, ನೀಲಮಣಿ, ಪಚ್ಚೆ ಸೇರಿ ಹಲವಾರು ಅತ್ಯಮೂಲ್ಯವಾಗಿವೆ. ಕಿವಿಗೆ ಧರಿಸುವ ನಾಗಹೆಡೆಯ ಆಭರಣ ಸೂಕ್ಷ್ಮ ಕೆತ್ತನೆ ಹೊಂದಿದೆ. ಈ ರೀತಿ ಆಭರಣಗಳನ್ನು ಮಾಡಲು ಬೇರೆಯವರಿಂದ ಸಾಧ್ಯವಿಲ್ಲ. ಆದರೆ ನೂರಾರು ವರ್ಷ ಭೂಮಿಯಲ್ಲಿ ಸಿಲುಕಿ ಅವುಗಳು ಆಕಾರ ಕಳೆದುಕೊಂಡಿವೆ ಎಂದು ತಿಳಿಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 12ರ ದಿನಭವಿಷ್ಯ

ಈ ದಿನ ಸಂಜೆಯ ಹೊತ್ತಿಗೆ ಅಶ್ವತ್ಥ ಮರದ ಕೆಳಗೆ ಕಡಲೆ ಹಿಟ್ಟಿನಿಂದ ಮಾಡಿದ ದೀಪ ಹಚ್ಚುವುದು ವಿಶೇಷ ಫಲ ನೀಡುತ್ತದೆ. ನಿಮ್ಮನ್ನು ಕಾಡುತ್ತಿರುವ ಗೊಂದಲಗಳು ಹಾಗೂ ಅಡೆತಡೆಗಳು ನಿವಾರಣೆ ಆಗಲಿವೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಹಣಕಾಸು ವಿಚಾರದಲ್ಲಿ ಕಾಡುತ್ತಿರುವ ಗೊಂದಲಗಳು ಬಗೆಹರಿಯುವ ಎಲ್ಲ ಸಾಧ್ಯತೆಗಳು ಕಂಡುಬರುತ್ತಿವೆ. ನಿಮ್ಮೊಬ್ಬರಿಂದ ಏನಾದೀತು ಎಂಬಂತೆ ಇತರರು ಆಡಿದ ಮಾತುಗಳಿಗೆ ಉತ್ತರ ಎಂಬಂತೆ ಕೆಲವು ಅಸಾಧ್ಯವಾದ ಕೆಲಸ- ಕಾರ್ಯಗಳನ್ನು ಮಾಡಿ, ಮುಗಿಸುವುದಕ್ಕೆ ಸಫಲರಾಗುತ್ತೀರಿ. ವಿದೇಶಗಳಿಗೆ ಉದ್ಯೋಗ ನಿಮಿತ್ತವಾಗಿ ತೆರಳಬೇಕು ಎಂದಿರುವವರಿಗೆ ಈ ತನಕ ಏನಾದರೂ ಅಡೆತಡೆಗಳು ಕಾಡುತ್ತಿದ್ದಲ್ಲಿ ಅವುಗಳನ್ನು ನಿವಾರಿಸಿಕೊಳ್ಳುವುದಕ್ಕೆ ಅವಕಾಶಗಳಿವೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಮನೆ ಅಥವಾ ಸೈಟು ಖರೀದಿ ಮಾಡಬೇಕು ಎಂದು ಹುಡುಕಾಟ ನಡೆಸುತ್ತಿರುವವರಿಗೆ ಮನಸ್ಸಿಗೆ ಒಪ್ಪುವಂಥದ್ದು ದೊರೆಯುವ ಅವಕಾಶಗಳು ಹೆಚ್ಚಿವೆ. ತರಕಾರಿ, ಹೂವು- ಹಣ್ಣಿನ ವ್ಯವಹಾರ, ಬ್ಯಾಂಗಲ್ ಸ್ಟೋರ್ಸ್ ನಡೆಸುತ್ತಿರುವವರಿಗೆ ಆದಾಯದಲ್ಲಿ ಭಾರೀ ಪ್ರಮಾಣದ ಏರಿಕೆ ಕಂಡುಬರಬಹುದು. ಇನ್ನು ದೀರ್ಘಾವಧಿಯ ಆರ್ಡರ್ ಗಳು ಸಹ ದೊರೆಯುವ ಅವಕಾಶಗಳು ಹೆಚ್ಚಿವೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಕುಟುಂಬದ ವ್ಯವಹಾರದಲ್ಲಿ ಪಾಲ್ಗೊಂಡಿರುವವರಿಗೆ ಸ್ವತಂತ್ರವಾಗಿ ವ್ಯಾಪಾರ- ವ್ಯವಹಾರ ಆರಂಭಿಸುವ ಬಗ್ಗೆ ಆಲೋಚನೆ ಮೂಡಬಹುದು. ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಮಾಡುತ್ತಿರುವವರಿಗೆ ನಿಮಗೆ ಇಷ್ಟ ಇಲ್ಲದ ವಿಭಾಗಕ್ಕೆ ವರ್ಗಾವಣೆ ಮಾಡುವ ಸಾಧ್ಯತೆಗಳಿವೆ. ಅಥವಾ ನಿಮಗೆ ಯಾರ ಜತೆಗೆ ಈಗಾಗಲೇ ವೈಮನಸ್ಯ ಇರುತ್ತದೋ ಅಂಥ ವ್ಯಕ್ತಿಗಳ ಕೈಕೆಳಗೆ ಅಥವಾ ಜತೆಯಲ್ಲಿ ಕೆಲಸ ಮಾಡಲೇಬೇಕಾದ ಅನಿವಾರ್ಯ ಸೃಷ್ಟಿ ಆಗಲಿದೆ.

ಲೇಖನ- ಸ್ವಾತಿ ಎನ್.ಕೆ.

Source link

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಯಾರಿಂದಲಾದರೂ ಅನಿರೀಕ್ಷಿತ ಸಹಾಯ ಲಭ್ಯ

ಮೇಷ ರಾಶಿ:

ಇಷ್ಟಪಟ್ಟವರನ್ನು ದೂರ ಮಾಡಿಕೊಳ್ಳುವಿರಿ. ಅನ್ಯರ ವಿಚಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗುವುದು. ಸರ್ಕಾರದ ಕೆಲಸಕ್ಕಾಗಿ ಅಧಿಕ ಓಡಾಟವಾಗುವುದು. ಆರ್ಥಿಕ ನೆರವನ್ನು ಯಾರಿಂದಲಾದರೂ ನೀವು ಬಯಸುವಿರಿ. ಸಮಾಧನ ಚಿತ್ತದಿಂದ ಇರಬೇಕು ಎಂದು ಅನಿಸಿದರೂ ಅದನ್ನು ಕಾರ್ಯರೂಪಕ್ಕೆ ತರಲಾಗದು. ಅನಿರೀಕ್ಷಿತ ಘಟನೆಯಿಂದ‌ ಸ್ತಬ್ಧವಾಗುವಿರಿ. ವ್ಯವಹಾರದ ವಿಷಯದಲ್ಲಿ ನಿಮಗೆ ಯಾವುದೇ ಔದಾರ್ಯ ಬೇಡ. ಸಹೋದರನ ಪ್ರೀತಿಯಿಂದ ಸಂತೋಷಪಡುವಿರಿ. ಬೇಕಾದವರ ಪ್ರೀತಿ ಸಿಗದೇ ಬೇಸರ.

ವೃಷಭ ರಾಶಿ:

ನಿಮ್ಮ ಪುಟ್ಟ ಪ್ರಪಂಚದಿಂದ ಹೊರಬರಲು ತಯಾರಾಗುವಿರಿ‌. ಸ್ವಾರ್ಥಕ್ಕಾಗಿ ಯಾರನ್ನೂ ಕಳೆದುಕೊಳ್ಳುವಿರಿ. ವಿದ್ಯಾರ್ಥಿಗಳಿಗೆ ವೈದ್ಯಕೀಯ ವೃತ್ತಿಯ ಬಗ್ಗೆ ಆಸಕ್ತಿ ಅಧಿಕವಾಗುವುದು. ವೃತ್ತಿಪರ ವ್ಯವಹಾರಗಳು ಲಾಭದಾಯಕ. ನಿಮ್ಮ ಗೌಪ್ಯ ವಿಚಾರವನ್ನು ಮುಚ್ಚಿಡಲು ಪ್ರಯತ್ನಿಸುವಿರಿ. ಹಳೆಯ ಹೂಡಿಕೆಯಿಂದ‌ ಲಾಭವು ಸಿಗಲಿದೆ. ಯಾವುದೂ ಕರಗತ ಆಗದೇ ಪ್ರದರ್ಶನಕ್ಕೆ ಒಪ್ಪಿಗೆ ಕೊಡುವುದು ಬೇಡ. ಶುದ್ಧತೆಯ ಬಗ್ಗೆ ಕಾಳಜಿ ಅಧಿಕವಾಗಿರುವುದು.

ಮಿಥುನ ರಾಶಿ:

ಉದ್ಯೋಗದಲ್ಲಿ ಭಡ್ತಿಗಾಗಿ ಕಾಯುತ್ತಿದ್ದು ಇಂದು ಸಿಗಬಹುದು. ಸ್ನೇಹಿತರಿಂದ ನಿಮಗೆ ಬಹುಮಾನ ಸಿಗಬಹುದು. ದೂರದ ಊರಿಗೆ‌ ಒಬ್ಬರೇ ವಾಹನ ಚಲಾಯಿಸುವಿರಿ. ಆಭರಣಗಳನ್ನು ಖರೀದಿಸಲು ಹಣವನ್ನು ಖರ್ಚು ಮಾಡುವ ಅವಕಾಶ ಎದುರಾಗಬಹುದು.‌ ಅಪ್ರಸ್ತುತ ಆಲೋಚನೆಗೆ ಬ್ರೇಕ್ ಹಾಕಿಕೊಂಡಷ್ಟು ಒಳ್ಳೆಯದು. ಕಲಾವಿದರು ಅವಕಾಶದ ನಿರೀಕ್ಷೆಯಲ್ಲಿ ಇರುವರು. ಹಳೆಯ ಪ್ರೇಮಿಯ ಭೇಟಿಯಾಗಿ ಮುಜುಗರಕ್ಕೆ ಸಿಕ್ಕಿಕೊಳ್ಳಬಹುದು.

ಕರ್ಕಾಟಕ ರಾಶಿ:

ಯಾರ ಬಳಿಯೂ ಸಹಾಯ ಹಸ್ತವನ್ನು ಚಾಚದೇ ಸ್ವಂತ ಬಲದ ಮೇಲೆ ಬರುವ ಆಸೆ ಇರಲಿದೆ. ಪರಿಚಿತರ ಜೊತೆ ಸಾಮಾಜಿಕ ಚಟುವಟಿಕೆಯಲ್ಲಿ ಭಾಗಿ. ನಿಮ್ಮ ನಿಷ್ಕಾಳಜಿಯಿಂದ ಅನಾಯಾಸವಾಗಿ ಬರುವ ಆದಾಯವು ಸಿಗದೇ ಹೋಗುವುದು. ವೃತ್ತಿಯಲ್ಲಿ ಬಂದ ಮಾತಿನಿಂದ ನೀವು ಉದ್ವೇಗಗೊಳ್ಳುವ ಅವಶ್ಯಕತೆ ಇರುವುದಿಲ್ಲ. ಕೆಲವರ ವಿಚಾರದಲ್ಲಿ ನಿಮ್ಮ ದೃಷ್ಟಿಯನ್ನು ಬದಲಿಸಿಕೊಳ್ಳುವುದೇ ಯೋಗ್ಯವಾದುದು. ನಿಮಗೆ ಮೇಲಧಿಕಾರಿಗಳ ಬಗ್ಗೆ ಸದ್ಭಾವವು ಇರದು.‌

ಸಿಂಹ ರಾಶಿ:

ಅಲ್ಪ ಕಾಲ ಮನೆಯಿಂದ ದೂರ ಉಳಿಯವಿರಿ. ಸಂಗಾತಿಯ ಸಣ್ಣ ಮಾತೂ ನಿಮಗೆ ದೋಷವಾಗಿ ಕಾಣಬಹುದು. ಸಣ್ಣ ಆರೋಗ್ಯದ ತೊಂದರೆಯೂ ನಿಮ್ಮ‌ ಮನಸ್ಸಿಗೆ ಕಿರಿಕಿರಿಯನ್ನು ಉಂಟುಮಾಡುವುದು. ಕಾರ್ಯದಲ್ಲಿ ವೇಗವು ಕುಂಠಿತವಾಗುವುದು. ನೀವು ನೋಡಿದ್ದೇ ಸತ್ಯ ಎಂದು ತಿಳಿದುಕೊಳ್ಳುವುದು ಬೇಡ. ಉತ್ತಮ ವಸ್ತುವಿನ ದಾನದಿಂದ ಯಶಸ್ಸು ಪ್ರಾಪ್ತವಾಗುವುದು. ಇಂದು ಯಾರಿಗೂ ನಿಮ್ಮ ಅವಶ್ಯಕತೆ ಇಲ್ಲದೇ ಹೋಗಬಹುದು.

ಕನ್ಯಾ ರಾಶಿ:

ಮನಸ್ಸಿಗೆ ಬೇಕಾದ ನೆಮ್ಮದಿಯಿಂದ ಹುಡುಕಾಟದಲ್ಲಿ ಇರುವಿರಿ. ಧಾರ್ಮಿಕ ಕ್ಷೇತ್ರದ ಭೇಟಿಕೊಡುವಿರಿ. ಅಕಾಲದಲ್ಲಿ ಸೇವಿಸಿದ ಆಹಾರದಿಂದ ನಿಮಗೆ ಆರೋಗ್ಯವು ಹಾಳಾಗುವುದು. ನಿಮ್ಮ ಮಾತುಗಳು ಪಾಲನೆಯಗದೇ ಇರಬಹುದು. ಮನೆಯಲ್ಲಿ ನೌಕರರ ಕಾರಣಕ್ಕೆ ಸಿಟ್ಟಾಗುವಿರಿ. ವೈವಾಹಿಕ ಸಂಬಂಧವನ್ನು ಸರಿಯಾಗಿ ಇಟ್ಟುಕೊಳ್ಳಿ. ಉದ್ಯಮದಲ್ಲಿ ನಿರಂತರ ಸಂಪರ್ಕವಿರಲಿ. ಹಣಕಾಸಿನ ಉಳಿತಾಯದ ಬಗ್ಗೆ ಅಧಿಕ ಗಮನ ಕೊಡುವಿರಿ.

ತುಲಾ ರಾಶಿ:

ಆರ್ಥಿಕತೆಯ ಬಲಕ್ಕಾಗಿ ಗೊತ್ತಿಲ್ಲದ ಕಾರ್ಯವನ್ನೂ ಮಾಡುವಿರಿ. ವಿದೇಶದ ಮಿತ್ರರ ಸಹಾಯದಿಂದ ನೀವು ಉದ್ಯಮವು ವಿಸ್ತಾರವಾಗಬಹುದು. ಆಗುತ್ತದೆ ಎಂದು ಏನನ್ನಾದರೂ ಮಾಡುವುದು ಉಚಿತವಾಗದು. ಅಧಿಕ ಓಡಾಟದಿಂದ ನೀವು ಆಯಾಸಗೊಳ್ಳುವಿರಿ. ಬೇಕಾದಷ್ಟು ಅವಕಾಶಗಳನ್ನು ಬಿಡುವುದು ನಿಮಗೆ ಅಭ್ಯಾಸಬಾಗಬಹುದು. ಪ್ರೇಮಿಯ ಜೊತೆ ಹರಟೆ ಹೊಡೆಯುತ್ತ ದಿನವನ್ನು ಕಳೆಯುವಿರಿ. ಅತಿಥಿಗಳನ್ನು ಮನೆಗೆ ಆಹ್ವಾನಿಸುವಿರಿ.

ವೃಶ್ಚಿಕ ರಾಶಿ:

ಬಂದ ಹಣವನ್ನು ಸಂಗ್ರಹಿಸಲು ಪ್ರಯತ್ನಿಸಿ. ಇಲ್ಲವಾದರೆ ಸಂಪತ್ತನ್ನು ಉಳಿಸಿಕೊಳ್ಳುವುದು ಕಷ್ಟವಾದೀತು. ಅಸಾಧ್ಯವನ್ನು ಸಾಧಿಸುವ ಹಠವು ಬೇಡವಾದೀತು. ಭೂಮಿಯಿಂದ ಆದಾಯ ಸಿಗುಂತೆ ಕಾರ್ಯ. ಒಡಹುಟ್ಟಿದವರ ಜೊತೆ ಅನಗತ್ಯ ಮಾತುಗಳು ಬರಬಹುದು. ಉದ್ಯೋಗದಲ್ಲಿ ಚಂಚಲತೆ ಇರುವುದು. ಅನಪೇಕ್ಷಿಯ ವಿಚಾರವನ್ನು ಪ್ರಸ್ತಾಪಿಸಿಕೊಂಡು ಕಾಲಹರಣ ಮಾಡುವಿರಿ. ಆಪ್ತರಿಂದ ನಿಮಗಾಗದವರ ಬಗ್ಗೆ ಮಾಹಿತಿಯನ್ನು ಪಡೆಯುವಿರಿ.

ಧನು ರಾಶಿ:

ಮಾತನ್ನು ಉಳಿಸಿಕೊಳ್ಳಲು ಪ್ರಯತ್ನಿಸಿ. ಪ್ರೇಮವು ನಿಮಗೆ ಬೇಕಾದಂತೆ ತಿರುವು ಪಡೆಯಬಹುದು. ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುವ ಸಂಭವಿದೆ.‌ ಸಿಟ್ಟನ್ನು ವೃತ್ತಿಯಲ್ಲಿ ತೋರಿಸುವುದು ಬೇಡ. ನೀವು ಆಯ್ಕೆ ಆಗಿದ್ದು ಯಾವುದಕ್ಕೋ ಕೆಲಸವು ಮತ್ಯಾವುದೋ ಆಗಲಿದೆ. ಅಪಾಯಯಕ್ಕೆ ಸಿಕ್ಕಿಕೊಳ್ಳುವ ಸಂಭವವಿತ್ತು. ಧನವ್ಯಯವನ್ನು ನಿಮ್ಮ ಜಾಣ್ಮೆಯಿಂದ ತಪ್ಪಿಸಿಕೊಳ್ಳುವಿರಿ‌. ಸ್ತ್ರೀಯರಿಂದ‌ ಕೆಲವು ಸಮಸ್ಯೆಯು ಬರಲಿದೆ. ಆಗಬೇಕೆಂದುಕೊಂಡ ಕಾರ್ಯವನ್ನು ಪೂರ್ಣ ಮಾಡಲಾಗದು.‌

ಮಕರ ರಾಶಿ:

ಇಂದು ನಿಮಗೆ ಪ್ರಯಾಣದ ಆಯಾಸವು ಇರಲಿದೆ. ಶತ್ರುಗಳನ್ನು ಕ್ಷಮಿಸಿ, ಅವರ ಮೇಲೆ ನಿಮ್ಮ ದೃಷ್ಟಿಯು ಬೇಕಾಗುವುದು. ಉದ್ಯೋಗವನ್ನು ಬಿಟ್ಟು ಬೇರೆಯದನ್ನು ಯೋಚಿಸಲಾಗದು. ಪಾಲುದಾರಿಕೆಯಲ್ಲಿ ನಿಮ್ಮದೇ ಅಧಿಕವಾಗಿರುವುದು. ಪ್ರೀತಿಯಲ್ಲಿ ನಿಮಗೆ ಮೋಸವಾಗುವುದು. ಉದ್ಯಮಕ್ಕೆ ಬೇಕಾದ ವಿವರಗಳನ್ನು ಅನುಭವಿಗಳಿಂದ ಪಡೆಯಿರಿ. ಸ್ನೇಹಿತನ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳುವಿರಿ. ಹೊಸ ಸಂಶೋಧನೆಯ ಬಗ್ಗೆ ಆಸಕ್ತಿ ಇರುವುದು. ‌

ಕುಂಭ ರಾಶಿ:

ನಿಮ್ಮ‌ ಸಮ್ಮುಖದಲ್ಲಿ ಕುಟುಂಬದ ಸಮಸ್ಯೆಗಳು ಬಗೆಹರಿಯಬಹುದು. ಅನಿರೀಕ್ಷಿತವಾಗಿ ದೊರೆತವರು ನಿಮ್ಮ ಉದ್ಯಮದ ಭಾಗವಾಗಬಹುದು. ಆಸ್ತಿಯ ವಿಚಾರ ಬಂದಾಗ ಮೌನ ತಾಳುವಿರಿ. ಬಹಳ ದಿನಗಳ ಅನಂತರ ಸಾರ್ವಜನಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವಿರಿ. ಆಪತ್ತಿಗೆ ಪ್ರತಿಯಾಗಿ ಆಪತ್ತು ಕೊಡುವ ಮನಸ್ಥಿತಿಯನ್ನು ತಂದುಕೊಳ್ಳುವಿರಿ. ಕಳೆದುಕೊಂಡ ಹಣವನ್ನು ಪಡೆಯಲು ಛಲ ಬರಬಹುದು.‌ ನಿಮ್ಮ ಯೋಜನೆಗೆ ಬೆನ್ನೆಲುಬಾಗಿ ನಿಲ್ಲುವವರು ಬೇಕಾಗಿದ್ದರೆ.

ಮೀನ ರಾಶಿ:

ಬೋಧನ ಕಲೆಯು ಸಿದ್ಧಿಯಾಗುವುದು. ಮಕ್ಕಳ‌ ಜೊತೆ ಸಾಮರಸ್ಯದ ಮಾತನಾಡಿ. ಸಾಲದ ಮರುಪಾವತಿಗೆ ಸೂಕ್ತ ಕ್ರಮದ ಅಗತ್ಯವಿರಲಿದೆ. ಯಾವ ಬದಲಾವಣೆಯನ್ನೂ ಸ್ವೀಕರಿಸುವ ಮನೋಭಾವ ಬರಬಹುದು. ಆಲಸ್ಯದಿಂದ ಕಛೇರಿಯ ಕೆಲಸಗಳು ವಿಳಂಬವಾಗುವುದು. ಸುಮ್ಮನೇ ಆಪ್ತರ ಮೇಲೆ‌ ಸಂಶಯವನ್ನು ಇಟ್ಟುಕೊಳ್ಳುವುದು ಬೇಡ. ಹೂಡಿಕೆಯ ವಿಚಾರದಲ್ಲಿ ಇಂದು ಸಕಾರಾತ್ಮಕ ಆಲೋಚನೆಯು ಇರದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಗುರು, ಪಕ್ಷ : ಕೃಷ್ಣ, ತಿಥಿ : ನವಮೀ, ನಿತ್ಯನಕ್ಷತ್ರ : ಮೂಲಾ ಯೋಗ : ಸಿದ್ಧಿ, ಕರಣ : ಗರಜ, ಸೂರ್ಯೋದಯ – 06 – 35 am, ಸೂರ್ಯಾಸ್ತ – 06 – 33 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 14:04 – 15:34, ಯಮಗಂಡ ಕಾಲ 09:35 – 08:05, ಗುಳಿಕ ಕಾಲ 09:35 – 11:04

-ಲೋಹಿತ ಹೆಬ್ಬಾರ್ – 8762924271 (what’s app only)

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 12ರ ದಿನಭವಿಷ್ಯ

ಪಾರಿಜಾತ ಅಥವಾ ಮಲ್ಲಿಗೆ ಹೂವುಗಳನ್ನು ಬಳಸಿ ದೇವರ ಪೂಜೆಯನ್ನು ಮಾಡುವುದರಿಂದ ನಿಮ್ಮ ಮಾನಸಿಕ ಒತ್ತಡಗಳಿಂದ ಹೊರಬಂದು ಉತ್ಸಾಹದಿಂದ ಕೆಲಸ- ಕಾರ್ಯಗಳಲ್ಲಿ ತೊಡಗಿಕೊಳ್ಳಲು ಸಾಧ್ಯವಾಗಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಸಣ್ಣ ತಪ್ಪು ಮಾತು ಕೂಡ ದೊಡ್ಡ ಅವಮಾನಕ್ಕೆ ಕಾರಣ ಆಗುವಂಥ ಕಡೆಗೆ ಸುಮ್ಮನೆ ಇದ್ದರೆ ಒಳಿತು. ಪ್ರೀತಿ- ಪ್ರೇಮ ವಿಚಾರಗಳು ಪ್ರಾಮುಖ್ಯ ಪಡೆದುಕೊಳ್ಳಲಿದ್ದು, ಹಳೇ ಪ್ರೇಮ ಪ್ರಕರಣಗಳು ಮತ್ತೆ ಜೀವ ಪಡೆದುಕೊಳ್ಳಲಿವೆ. ನೀವಾಗಿಯೇ ಕರೆ ಮಾಡುವುದರ ಮೂಲಕ ಸಮಸ್ಯೆಯೊಂದನ್ನು ಮೈ ಮೇಲೆ ಎಳೆದುಕೊಳ್ಳಲಿದ್ದೀರಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಗ್ಯಾಜೆಟ್, ಲ್ಯಾಪ್ ಟಾಪ್, ಡೆಸ್ಕ್ ಟಾಪ್ ಮೊದಲಾದವುಗಳನ್ನು ಖರೀದಿ ಮಾಡುವುದಕ್ಕೆ ಹಣ ಖರ್ಚು ಮಾಡುವಂಥ ಯೋಗ ಈ ದಿನ ನಿಮ್ಮ ಪಾಲಿಗಿದೆ. ಇದಕ್ಕಾಗಿ ಹಣಕಾಸಿನ ಕೊರತೆ ಕಂಡುಬಂದಲ್ಲಿ ನಿಮ್ಮ ಸ್ನೇಹಿತರು ಅಥವಾ ಸಂಬಂಧಿಗಳು ನೆರವಿಗೆ ನಿಲ್ಲಲಿದ್ದಾರೆ. ನೀವೇನಾದರೂ ಈಗ ಇರುವಂಥ ಮನೆಯನ್ನು ಖಾಲಿ ಮಾಡಿ, ಹೊಸ ಮನೆಗೆ ಹೋಗಬೇಕು ಎಂದುಕೊಳ್ಳುತ್ತಿದ್ದಲ್ಲಿ ಅಂದುಕೊಂಡಂಥ ಮನೆ ದೊರೆಯುವ ಅವಕಾಶ ಹೆಚ್ಚಿಗೆ ಇದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ನೀವು ನಿರ್ಧಾರ ತೆಗೆದುಕೊಳ್ಳುವುದರಲ್ಲಿ ತಡ ಮಾಡಿದ್ದರಿಂದಾಗಿ ಕೆಲವು ಉದ್ಯೋಗಾವಕಾಶಗಳು ಕೈ ತಪ್ಪಿ ಹೋಗುವಂಥ ಸಾಧ್ಯತೆಗಳಿದ್ದು, ಅತಿ ಮುಖ್ಯವಾದ ವಿಚಾರಗಳು ಇದ್ದಲ್ಲಿ ತಡ ಮಾಡದೆ ತೀರ್ಮಾನಗಳನ್ನು ತೆಗೆದುಕೊಳ್ಳಿ. ಇನ್ನು ಮದುವೆ ನಿಶ್ಚಯ ಆಗಿರುವಂಥವರು ಸಣ್ಣ- ಪುಟ್ಟ ವಿಚಾರಗಳಿಗೂ ಸಿಟ್ಟು ಮಾಡುವುದು, ಮಾತು ಬಿಡುವುದು ಇಂಥದ್ದನ್ನು ಮಾಡಬೇಡಿ.

ಲೇಖನ- ಸ್ವಾತಿ ಎನ್.ಕೆ.

Source link