Headlines

nagaraj11081993

ಬೆಂಗಳೂರಲ್ಲಿ ಮಾತನಾಡಲು ಬಿಡದ ಫ್ಯಾನ್ಸ್​​ಗೆ ಎಚ್ಚರಿಕೆ ನೀಡಿದ ಜೂ.ಎನ್​ಟಿಆರ್

ಟಾಲಿವುಡ್ ನಟ ಜೂನಿಯರ್ ಎನ್​​ಟಿಆರ್ (JR NTR) ಅವರು ಭಾನುವಾರ (ಮಾರ್ಚ್ 8) ಬೆಂಗಳೂರಿಗೆ ಆಗಮಿಸಿದ್ದರು. ಕಿಮ್ಸ್ ಆಸ್ಪತ್ರೆಯ ಹೊಸ ಘಟಕದ ಉದ್ಘಾಟನೆಗಾಗಿ ಅವರು ಇಲ್ಲಿಗೆ ಬಂದಿದ್ದರು. ಈ ವೇಳೆ ವೇದಿಕೆ ಮೇಲೆ ಮಾತನಾಡುವಾಗ ಅಭಿಮಾನಿಗಳು ಇದಕ್ಕೆ ಅವಕಾಶ ಕೊಡಲಿಲ್ಲ. ಒಂದೇ ಸಮನೆ ಕೂಗುತ್ತಿದ್ದರು. ಆಗ ಜೂನಿಯರ್ ಎನ್​​ಟಿಆರ್ ಅವರು ಖಡಕ್ ಎಚ್ಚರಿಕೆ ನೀಡಿದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಜೂನಿಯರ್​ ಎನ್​​ಟಿಆರ್ ಕಿಮ್ಸ್ ಘಟಕ ಉದ್ಘಾಟನೆಗೆ ಬರಲು ಒಂದು ಕಾರಣವೂ ಇತ್ತು. 1983ರಲ್ಲಿ ಜೂ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇಂದೂ ಒಣ ಹವೆ, ತಾಪಮಾನದಲ್ಲಿ ಏರಿಕೆ

ಬೆಂಗಳೂರು, ಮಾರ್ಚ್​ 09: ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ (Weather Forecast) ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದು ಬೆಂಗಳೂರಿನಲ್ಲಿ ತಾಪಮಾನದಲ್ಲಿ ಕೊಂಚ ಏರಿಕೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಎಲ್ಲೆಲ್ಲಿ ಒಣ ಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು…

Read More

ಹಿಸ್ಟರಿ… ಹಿಸ್ಟರಿ… ಹಿಸ್ಟರಿ… ವಿಶ್ವಕಪ್​ನಲ್ಲೂ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ

T20 World Cup 2026: ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಟೀಮ್ ಇಂಡಿಯಾ (Team India) ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಒಂದೇ ಬಾರಿ ಮೂರು ದಾಖಲೆಗಳನ್ನು ಬರೆಯುವ ಮೂಲಕ ಎಂಬುದೇ ವಿಶೇಷ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ…

Read More

Daily Devotional: ಶುಭಕಾರ್ಯಗಳಲ್ಲಿ ಗಂಡಸರು ಅಂಗವಸ್ತ್ರ ಯಾಕೆ ಧರಿಸಬೇಕು?

ಬೆಂಗಳೂರು, ಮಾರ್ಚ್​​ 09​​​​​: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಶುಭಕಾರ್ಯಗಳಲ್ಲಿ ಗಂಡಸರು ಅಂಗವಸ್ತ್ರ ಯಾಕೆ ಧರಿಸಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಶುಭಕಾರ್ಯಗಳಲ್ಲಿ ಪುರುಷರು ಅಂಗವಸ್ತ್ರ ಧರಿಸುವುದರ ಮಹತ್ವವು ಅನಾದಿಕಾಲದಿಂದಲೂ ಆಚರಣೆಯಲ್ಲಿರುವ ಸಂಪ್ರದಾಯವಾಗಿದೆ. ಪೂಜೆ, ಹೋಮ, ಹವನ, ವಿವಾಹ ಹಾಗೂ ಗೃಹಪ್ರವೇಶದಂತಹ ಸಂದರ್ಭಗಳಲ್ಲಿ ಪುರುಷರು ಭುಜದ ಮೇಲೆ ಅಂಗವಸ್ತ್ರವನ್ನು ಧರಿಸುತ್ತಾರೆ. ಈ ವಸ್ತ್ರವು ಕೇಸರಿ ಅಥವಾ ಬಿಳಿ ಬಣ್ಣದ್ದಾಗಿರಬಹುದು. ಅಂಗವಸ್ತ್ರ ಧರಿಸುವುದು ಕೇವಲ ಸಂಪ್ರದಾಯವಲ್ಲ, ಬದಲಿಗೆ ಸಂಕಲ್ಪ, ವ್ರತ ಹಾಗೂ ಗುರಿಯ ಸಂಕೇತವಾಗಿದೆ. ಇದು ಸೂರ್ಯ ಮತ್ತು…

Read More

Horoscope Today 9​​​​​th​​ March​: ಇಂದು ಈ ರಾಶಿಯವರಿಗೆ ಅಪಾಯಗಳಿಂದ ಮುಕ್ತಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 9​​​​​, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಪಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಷಷ್ಠಿ, ವಿಶಾಖ ನಕ್ಷತ್ರ, ವ್ಯಾಗತ ಯೋಗ ಮತ್ತು ಗಜ ಕರಣ ಇರತಕ್ಕಂತಹ ಈ ದಿನದ ರಾಹುಕಾಲ ಬೆಳಗಿನ 7 ಗಂಟೆ 59 ನಿಮಿಷದಿಂದ 9 ಗಂಟೆ 29 ನಿಮಿಷದವರೆಗೆ ಇರಲಿದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ…

Read More

ಸಿಎಂ ನಿತೀಶ್ ಕುಮಾರ್ ಪುತ್ರ ನಿಶಾಂತ್ ರಾಜಕೀಯ ಪ್ರವೇಶ; ಜೆಡಿಯು ಪಕ್ಷಕ್ಕೆ ಸೇರ್ಪಡೆ

ಪಾಟ್ನಾ, ಮಾರ್ಚ್ 8: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ, 50 ವರ್ಷದ ನಿಶಾಂತ್ ಕುಮಾರ್ (Nishant Kumar) ರಾಜಕೀಯ ಪ್ರಯಾಣ ಆರಂಭಿಸಿದ್ದಾರೆ. ಇಂದು ಭಾನುವಾರ ಜೆಡಿಯು ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ನಿತೀಶ್ ಕುಮಾರ್ ಅವರು ದಶಕಗಳ ನಂತರ ರಾಜ್ಯ ರಾಜಕಾರಣ ತೊರೆದು ರಾಜ್ಯಸಭೆಗೆ ಹೋಗಲು ಅಣಿಯಾಗಿರುವ ಹೊತ್ತಲ್ಲಿ ಅವರ ಪುತ್ರನ ರಾಜಕೀಯ ಪ್ರವೇಶವಾಗಿದೆ. ‘ಸಕ್ರಿಯ ಸದಸ್ಯನಾಗಿ ಪಕ್ಷವನ್ನು ನೋಡಿಕೊಳ್ಳಲು ಪ್ರಯತ್ನಿಸುತ್ತೇನೆ. ನನ್ನ ತಂದೆ ರಾಜ್ಯಸಭೆಗೆ ಹೋಗಲು ನಿರ್ಧರಿಸಿದ್ದಾರೆ. ಅದು ಅವರ ವೈಯಕ್ತಿಕ ನಿರ್ಧಾರ. ಅದನ್ನು…

Read More

1 ರೂಪಾಯಿಯ ನೋಟು ನೀಡಿದ್ರೆ ಬ್ರಾಂಡೆಡ್ ಶೂ: ಮಳಿಗೆ ಮುಂದೆ ಜನಜಂಗುಳಿ, ನಂತರ ಆಗಿದ್ದೇನು?

ಕೋಯಿಕ್ಕೋಡ್, ಮಾ.8: ಕೇವಲ ಒಂದು ರೂಪಾಯಿಯ ನೋಟು ನೀಡಿದರೆ ಬ್ರಾಂಡೆಡ್ ಶೂಗಳನ್ನು ನೀಡುವುದಾಗಿ ಘೋಷಿಸಿದ್ದ ಮಳಿಗೆಯೊಂದರ ಮುಂದೆ ಸಾವಿರಾರು ಜನ ಜಮಾಯಿಸಿದ್ದು, ಪರಿಸ್ಥಿತಿ ಕೈಮೀರಿದ ಕಾರಣ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಕೋಯಿಕ್ಕೋಡ್‌ನ ಮಾನಂಚಿರ ಪ್ರದೇಶದಲ್ಲಿರುವ ‘ಟ್ರೆಂಡ್ ಫ್ಯಾಕ್ಟರಿ’ (Trend Factory) ಎಂಬ ಪಾದರಕ್ಷೆ ಮಳಿಗೆಯು ತನ್ನ ಪುನರಾರಂಭದ ಪ್ರಯುಕ್ತ ಈ ವಿಚಿತ್ರ ಆಫರ್ ಘೋಷಿಸಿತ್ತು. ಇನ್‌ಸ್ಟಾಗ್ರಾಮ್ ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ವ್ಲಾಗರ್‌ಗಳ ಮೂಲಕ ಈ ಸುದ್ದಿ ಭಾರಿ ವೈರಲ್ ಆಗಿತ್ತು. ಇದನ್ನು ನೋಡಿ ಮಲಪ್ಪುರಂ,…

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ಕನ್ಯಾ ರಾಶಿಗೆ ಈ ವರ್ಷ ಹೇಗಿರಲಿದೆ?

2026ರ ಪರಾಭವ ನಾಮ ಸಂವತ್ಸರದ ಯುಗಾದಿಯ ಕನ್ಯಾ ರಾಶಿ ಫಲಾಫಲಗಳನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರು ವಿವರಿಸಿದ್ದಾರೆ. ಉತ್ತರಾ, ಹಸ್ತಾ, ಚಿತ್ತಾ ನಕ್ಷತ್ರದವರಿಗೆ ಈ ಭವಿಷ್ಯ ಅನ್ವಯಿಸುತ್ತದೆ. ಈ ವರ್ಷ ಕನ್ಯಾ ರಾಶಿಯವರಿಗೆ ಮಿಶ್ರಫಲಗಳು ಇರಲಿವೆ. ಆದಾಯ 8 ಇದ್ದರೆ, ವ್ಯಯ 9 ಇರಲಿದೆ. ಆರೋಗ್ಯ ಉತ್ತಮವಾಗಿರುತ್ತದೆ. ಸುಖ-ದುಃಖಗಳು ಸಮ ಪ್ರಮಾಣದಲ್ಲಿರುತ್ತವೆ. ಗುರು ಗ್ರಹದ ಸಂಚಾರ ಮತ್ತು ರಾಶ್ಯಾಧಿಪತಿ ಬುಧನ ಪ್ರಭಾವದಿಂದ ಆರ್ಥಿಕವಾಗಿ ಪ್ರಗತಿ, ಉದ್ಯೋಗದಲ್ಲಿ ಯಶಸ್ಸು, ಬಡ್ತಿ, ಪ್ಯಾಕೇಜ್ ಬದಲಾವಣೆ, ವಿದೇಶ ಯೋಗ, ಮತ್ತು…

Read More

ಕಾರಿನಲ್ಲಿದ್ದ ಹಣದ ಬ್ಯಾಗ್​​ ಎಗರಿಸಿ ಪರಾರಿಯಾಗುವಷ್ಟರಲ್ಲಿ ಸಿಕ್ಕಿಬಿದ್ದ ಕಳ್ಳರು: ಕಂಬಕ್ಕೆ ಕಟ್ಟಿಹಾಕಿ ಸ್ಥಳೀಯರಿಂದ ಥಳಿತ​​

ಚಿಕ್ಕಬಳ್ಳಾಪುರ, ಮಾರ್ಚ್​ 08: ಸಂಬಂಧಿಕರ ಮದುವೆ ಕಾರ್ಯದ ಪ್ರಯುಕ್ತ ಎಲ್ಲಾ ಚಿನ್ನಾಭರಣವನ್ನು ಒತ್ತೆಯಿಟ್ಟು ಅದರಿಂದ ಬಂದ ಹಣವನ್ನು ತೆಗೆದುಕೊಂಡ ಕುಟುಂಬವೊಂದು ಬೆಂಗಳೂರಿನತ್ತ ಹೊರಟಿತ್ತು. ದಾರಿ ಮಧ್ಯೆ ಟೀ ಕುಡಿಯಲು ಕಾರು ನಿಲ್ಲಿಸಿ ಬಾಗಿಲು ತೆಗೆದಿದ್ದೆ ತಡ, ಫಿಲ್ಮಿ ಸ್ಟೈಲ್​​ನಲ್ಲಿ ಬಂದ ಕಳ್ಳರ ಗ್ಯಾಂಗ್ ಕಾರಿನಲ್ಲಿದ್ದ ಹಣದ ಬ್ಯಾಗ್ ಕದ್ದು (Robbery) ಎಸ್ಕೇಪ್ ಆಗುತ್ತಿದ್ದರು. ಇದನ್ನು ನೋಡಿದ ಸ್ಥಳೀಯರು ಇಬ್ಬರು ಕಳ್ಳರನ್ನು ಹಿಡಿದು ಕಂಬಕ್ಕೆ ಕಟ್ಟಿ ಹಾಕಿದ್ದಾರೆ. ಆದರೆ ಮತ್ತೊಬ್ಬ ಹಣದ ಸಮೇತ ಪರಾರಿ ಆಗಿದ್ದಾನೆ. ಚಿಕ್ಕಬಳ್ಳಾಪುರ ನಗರ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಪರಾಜಯವನ್ನು ಸಹಿಸಲಾಗದು

ಮೇಷ ರಾಶಿ: ಹೂಡಿಕೆಯನ್ನು ಮಾಡಲು ಒತ್ತಡ ಬರಬಹುದು. ದುರಾಸೆ ಪಡದೆ ಬಂದಿದ್ದನ್ನು ಸುಮ್ಮನೇ ಸ್ವೀಕರಿಸಿ. ಜೀವನಕ್ಕೆ ಹೊಸ ತಿರುವು ಸಿಗುವ ಸಾಧ್ಯತೆ ಇದೆ. ನಿಮಗೆ ತಿಳಿದ ವಿಚಾರವನ್ನು ಬೇರೆಯವರಿಗೆ ಯಾವುದೇ ನಿರೀಕ್ಷೆಯಿಲ್ಲದೆ ಹೇಳಿಕೊಡುವಿರಿ. ಸಂಗಾತಿ ಮತ್ತು ಮಕ್ಕಳ ಜೊತೆ ಅನವಶ್ಯಕ ವಾದ ವಿವಾದವು ಆಗಬಹುದು. ನಿಮ್ಮ ತಪ್ಪಿಗೆ ಬೇರೆಯವರನ್ನು ಬೆರಳು ಮಾಡುವಿರಿ. ತಪ್ಪನ್ನು ಒಪ್ಪಿಕೊಂಡು ಮೆಚ್ಚುಗೆ ಪಡೆಯುವಿರಿ. ವೃಷಭ ರಾಶಿ: ಭೂಮಿಗೆ ಸಂಬಂಧಿತ ಕೆಲಸವನ್ನು ಪೂರ್ಣಮಾಡಿಕೊಳ್ಳುವಿರಿ. ವ್ಯಾಪಾರದಲ್ಲಿ ಬೆಳವಣಿಗೆಗೆ ಹೊಸ ಅವಕಾಶಗಳಿವೆ. ನಿಮ್ಮ ಸಂಗಾತಿಯ ಆರೋಗ್ಯದ ಕಡೆ…

Read More