Headlines

nagaraj11081993

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 9ರ ದಿನಭವಿಷ್ಯ

ಈ ದಿನ ಬಿಳಿ ಬಟ್ಟೆ ಧರಿಸುವುದರಿಂದ ಚಂದ್ರ ಬಲ ವೃದ್ಧಿ. ಕೆಲಸ-ಕಾರ್ಯದಲ್ಲಿ ತೊಡಗಿಕೊಳ್ಳಲು ಉತ್ಸಾಹ ಬರುವುದಕ್ಕೆ, ಶೀಘ್ರ ನಿರ್ಧಾರ ಮಾಡುವುದಕ್ಕೆ, ಕ್ರಿಯೇಟಿವ್ ಆಲೋಚನೆಗಳು ಬರುವುದಕ್ಕೆ ಇದರಿಂದ ಸಹಕಾರಿ ಆಗುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಯಾವುದೇ ವಿಚಾರದಲ್ಲಿ ಉಲ್ಲಾಸ- ಉತ್ಸಾಹದಿಂದ ತೊಡಗಿಕೊಳ್ಳಲು ಮನಸ್ಸು ಇರುವುದಿಲ್ಲ. ಆದಾಯದಲ್ಲಿ ಇಳಿಕೆ ಆಗುತ್ತಿದೆ ಎಂಬುದು ಒಂದು ಕಡೆಯ ಚಿಂತೆಯಾದರೆ, ಅದನ್ನು ಹೆಚ್ಚಿಸಲು ಮಾಡುತ್ತಿರುವ ಪ್ರಯತ್ನಗಳು ಫಲ ನೀಡುತ್ತಿಲ್ಲ ಎಂಬುದು ಇನ್ನೊಂದು…

Read More

ವಿಷ್ಣುವರ್ಧನ್ ಸಿನಿಮಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ಗಣೇಶ್

ವಿಷ್ಣುವರ್ಧನ್ (Vishnuvardhan) ನಟನೆಯ ‘ಕೋಟಿಗೊಬ್ಬ’ ಸಿನಿಮಾ ಬಿಡುಗಡೆ ಆಗಿ 25 ವರ್ಷಗಳಾಗಿವೆ. ಇದೇ ಕಾರಣಕ್ಕೆ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ಗೋಲ್ಡನ್ ಸ್ಟಾರ್ ಗಣೇಶ್ ಅವರು ತಾವು ವಿಷ್ಣುವರ್ಧನ್ ಅವರ ದೊಡ್ಡ ಅಭಿಮಾನಿ ಎಂದರು ಮಾತ್ರವಲ್ಲದೆ ಅವರ ಸಿನಿಮಾಗಳನ್ನು ನೋಡಿದ ಕೆಲ ಅನುಭವಗಳನ್ನು ಸಹ ಅವರು ಬಿಚ್ಚಿಟ್ಟರು. ಅಲ್ಲದೆ ‘ಅರಮನೆ’ ಸಿನಿಮಾದ ಶೂಟಿಂಗ್ ಸಮಯದಲ್ಲಿ ತಾವು ವಿಷ್ಣುವರ್ಧನ್ ಅವರನ್ನು ಭೇಟಿ ಆದ ಅನುಭವವನ್ನು ಸಹ ಹಂಚಿಕೊಂಡರು. ಅಲ್ಲದೆ, ತಮಗೆ ವಿಷ್ಣುವರ್ಧನ್ ಜೊತೆಗೆ ನಟಿಸುವ ಬಹಳ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 9ರ ದಿನಭವಿಷ್ಯ

ನೀವು ಬಳಸದೆ ಹಾಗೇ ಇಟ್ಟಿರುವಂಥ ಹಳೇ ಬಟ್ಟೆಗಳನ್ನು ದಾನ ಮಾಡಿ. ಸಾಧ್ಯ ಆದಲ್ಲಿ ಅದರ ಜೊತೆಗೆ ಒಂದು ಜೊತೆ ಹೊಸ ಬಟ್ಟೆಯ ಸಹಿತ ಕೊಡಿ. ನಿರಾಸಕ್ತಿ, ವಿಪರೀತದ ಕೋಪ ಹಾಗೂ ಹಿಂಜರಿಕೆ ಕಾಡುತ್ತಾ ಇದ್ದಲ್ಲಿ ದೂರವಾಗಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಕೋರ್ಟ್- ಕಚೇರಿ ಅಲೆದಾಟ ಮಾಡುತ್ತಿರುವವರಿಗೆ ರಾಜೀ- ಸಂಧಾನದ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳೋಣ ಎಂಬ ಪ್ರಸ್ತಾವವನ್ನು ನಿಮ್ಮ ಎದುರಿನ ಪಾರ್ಟಿಯವರಿಂದ ಬರುವ ಸಾಧ್ಯತೆ ಇದೆ. ಮುಕ್ತ…

Read More

T20 World Cup 2026: ಫೈನಲ್​ನಲ್ಲಿ ಯಾರೇ ಗೆದ್ದರೂ ಹೊಸ ಇತಿಹಾಸ ಸೃಷ್ಟಿ

2026 ರ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಮುಖಾಮುಖಿಯಾಗಲಿವೆ. ಅಹಮದಾಬಾದ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಸೋಲಿಸಿದರೆ ವಿಶಿಷ್ಟ ದಾಖಲೆಯನ್ನು ನಿರ್ಮಿಸಲಿದೆ. ಇತ್ತ ನ್ಯೂಜಿಲೆಂಡ್, ಟೀಂ ಇಂಡಿಯಾವನ್ನು ಸೋಲಿಸಿದರೆ ಅದು ಕೂಡ ಹೊಸ ದಾಖಲೆ ಬರೆಯಲಿದೆ. ಹಾಗಿದ್ದರೆ, ಈ ಪಂದ್ಯದಲ್ಲಿ ಯಾವ್ಯಾವ ದಾಖಲೆಗಳು ಸೃಷ್ಟಿಯಾಗಲಿವೆ ಎಂಬುದನ್ನು ನೋಡುವುದಾದರೆ.. 2026 ರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಸೋಲಿಸುವಲ್ಲಿ ಯಶಸ್ವಿಯಾದರೆ, ನ್ಯೂಜಿಲೆಂಡ್ ತಂಡ ಇದೇ ಮೊದಲ ಬಾರಿಗೆ…

Read More

“ಸರ್ವೋಚ್ಚ ನಾಯಕ ಯಾರೇ ಆಗಲಿ ಜೀವಂತ ಬಿಡುವುದಿಲ್ಲ” : ಇರಾನ್​​​ಗೆ ಎಚ್ಚರಿಕೆ ನೀಡಿದ ಇಸ್ರೇಲ್

ಟೆಹ್ರಾನ್, ಮಾ.8: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಈಗ ಅಂತಿಮ ಹಂತಕ್ಕೆ ತಲುಪಿದಂತಿದೆ. ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ (Supreme Leader) ಯಾರೇ ಆಗಲಿ, ಅವರನ್ನು ಹುಡುಕಿ ಹುಡುಕಿ ಹತ್ಯೆ ಮಾಡುವುದಾಗಿ ಇಸ್ರೇಲ್ ಅತ್ಯಂತ ಖಡಕ್ ಎಚ್ಚರಿಕೆ ನೀಡಿದೆ. ಅಷ್ಟೇ ಅಲ್ಲದೆ, ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಿಯಾಗುವವರನ್ನೂ ಬಿಡುವುದಿಲ್ಲ ಎಂದು ಇಸ್ರೇಲ್ ಗುಡುಗಿದೆ. ಇರಾನ್‌ನಲ್ಲಿ ಸುಪ್ರೀಂ ಲೀಡರ್ ಹುದ್ದೆಗೆ ಯಾರೇ ಆಯ್ಕೆಯಾದರೂ ಅವರನ್ನು ಇಸ್ರೇಲ್ ಸುಮ್ಮನೆ ಬಿಡುವುದಿಲ್ಲ. ಇಸ್ರೇಲ್ ರಕ್ಷಣಾ ಪಡೆಗಳು ಅವರನ್ನು ಗುರಿಯಾಗಿಸಿಕೊಂಡು ದಾಳಿ…

Read More

IND vs NZ: ಫೈನಲ್​ನಲ್ಲಿ ಟಾಸ್ ಸೋತ ಭಾರತ; ಪ್ರಶಸ್ತಿ ಪಂದ್ಯಕ್ಕೆ ಪ್ಲೇಯಿಂಗ್ 11 ಹೀಗಿದೆ

ಹಾಲಿ ಚಾಂಪಿಯನ್ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಿನ ಟಿ20 ವಿಶ್ವಕಪ್ ಫೈನಲ್ (T20 World Cup Final) ಪಂದ್ಯ ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಟಿ20 ವಿಶ್ವಕಪ್ ಫೈನಲ್‌ನಲ್ಲಿ ಈ ಎರಡೂ ತಂಡಗಳು ಪರಸ್ಪರ ಎದುರಾಗುತ್ತಿರುವುದು ಇದೇ ಮೊದಲು. ಎರಡು ಬಾರಿಯ ಚಾಂಪಿಯನ್ ಭಾರತ ನಾಲ್ಕನೇ ಫೈನಲ್ ತಲುಪಿದ್ದು, ಮೂರನೇ ಬಾರಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಲು ನೋಡುತ್ತಿದ್ದರೆ, ಇತ್ತ ನ್ಯೂಜಿಲೆಂಡ್ ಎರಡನೇ ಬಾರಿಗೆ ಫೈನಲ್‌ಗೆ ತಲುಪಿದ್ದು, ಮೊದಲ ಟ್ರೋಫಿಯನ್ನು…

Read More

ಮಹಿಳೆಯರಲ್ಲಿ ಐರನ್ ಕೊರತೆ ಇದ್ದಾಗ ಪ್ರೆಗ್ನೆನ್ಸಿಗೆ ಪ್ಲಾನ್ ಮಾಡ್ಬಾರ್ದು ಯಾಕೆ?

ಗರ್ಭಧಾರಣೆ ಅಥವಾ ಪ್ರೆಗ್ನೆನ್ಸಿಗೆ (Pregnancy) ಪ್ಲಾನ್ ಮಾಡುವ ಮೊದಲು ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಸಂಪೂರ್ಣವಾಗಿ ಗಮನ ಹರಿಸುವುದು ಅತ್ಯಂತ ಅಗತ್ಯ. ದೇಹದಲ್ಲಿ ಯಾವುದೇ ಪೋಷಕಾಂಶಗಳ ಕೊರತೆ ಇದ್ದರೆ ಮೊದಲು ಅದನ್ನು ಸರಿಪಡಿಸಿಕೊಳ್ಳಬೇಕಾಗುತ್ತದೆ. ಅದರಲ್ಲಿಯೂ ದೇಹದಲ್ಲಿ ಐರನ್ (Iron) ಕೊರತೆ ಇದ್ದರೆ ಗರ್ಭಧಾರಣೆಗೂ ಮೊದಲು ಅದನ್ನು ಸರಿಪಡಿಸಿಕೊಳ್ಳಬೇಕು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಆದರೆ ಹಲವು ಸಂದರ್ಭಗಳಲ್ಲಿ ಮಹಿಳೆಯರು ಈ ವಿಷಯಗಳ ಬಗ್ಗೆ ಗಮನಹರಿಸುವುದಿಲ್ಲ. ತಜ್ಞರ ಪ್ರಕಾರ, ಐರನ್ ಕೊರತೆ ತಾಯಿ ಮತ್ತು ಮಗುವಿನ ಆರೋಗ್ಯದ…

Read More

“ನಮ್ಮನ್ನು ಮುಸ್ಲಿಂ, ಕ್ರಿಶ್ಚಿಯನ್ನರು ಸೋಲಿಸಿಲ್ಲ ಹಿಂದೂಗಳು ಸೋಲಿಸಿದ್ದು”: ಭಟ್ಕಳದಲ್ಲಿ ಅಬ್ಬರಿಸಿದ ಅನಂತಕುಮಾರ್ ಹೆಗಡೆ

ಭಟ್ಕಳ ಮಾ.8: ಲೋಕಸಭಾ ಚುನಾವಣೆಯ ಟಿಕೆಟ್ ಕೈತಪ್ಪಿದ ಬಳಿಕ ಸಾರ್ವಜನಿಕವಾಗಿ ಮೌನಕ್ಕೆ ಶರಣಾಗಿದ್ದ ಮಾಜಿ ಸಂಸದ ಅನಂತಕುಮಾರ್ ಹೆಗಡೆ, ಬರೋಬ್ಬರಿ ಎರಡು ವರ್ಷಗಳ ಬಳಿಕ ಇಂದು ಭಟ್ಕಳದ ಸಾರ್ವಜನಿಕ ವೇದಿಕೆಯಲ್ಲಿ ಕಾಣಿಸಿಕೊಂಡರು. ನಗರದ ಹಳೆ ಬಸ್ ನಿಲ್ದಾಣದ ಬಳಿ ನಡೆದ ‘ಹಿಂದೂ ಸಂಗಮ’ ಸಮಾವೇಶದಲ್ಲಿ ಭಾಗವಹಿಸಿ ಅವರು ತಮ್ಮ ಎಂದಿನ ಶೈಲಿಯಲ್ಲೇ ಘರ್ಜಿಸಿದ್ದಾರೆ. “90% ಋಷಿಗಳು ಬ್ರಾಹ್ಮಣರಲ್ಲ. ವಾಲ್ಮೀಕಿ, ವಿಶ್ವಾಮಿತ್ರ ಬ್ರಾಹ್ಮಣರಲ್ಲ. ಈ ದೇಶದಲ್ಲಿ ಜಾತಿಗೆ ಎಂದಿಗೂ ಬೆಲೆಯಿರಲಿಲ್ಲ, ಯೋಗ್ಯತೆಗೆ ಮಾತ್ರ ಬೆಲೆಯಿತ್ತು. ಇಂದು ಜಾತಿಗೆ ಬೆಲೆ…

Read More

IND vs NZ: ತಂಡದಿಂದಲೇ ಹೊರಗಿದ್ದವ ಟೂರ್ನಮೆಂಟ್ ಆಟಗಾರ ಪ್ರಶಸ್ತಿ ಗೆದ್ದ; ಸಂಜು ಸೂಪರ್ ಸ್ಯಾಮ್ಸನ್

ಸಂಜು ಸ್ಯಾಮ್ಸನ್‌… ಸಾಮರ್ಥ್ಯ, ಧೃಡ ಸಂಕಲ್ಪ ಬಿಟ್ಟು ಕೊಡದ ಮನೋಭಾವ ಇದ್ದರೆ ಏನು ಬೇಕಾದರು ಸಾಧಿಸಬಹುದು ಎಂಬುದಕ್ಕೆ ತಕ್ಕ ಉದಾಹರಣೆ. ಟಿ20 ವಿಶ್ವಕಪ್ ಆರಂಭಕ್ಕೆ ಕೆಲವೇ ದಿನಗಳ ಮೊದಲು ತಂಡದ ಆರಂಭಿಕ ಬ್ಯಾಟ್ಸ್‌ಮನ್ ಆಗಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದ ಸ್ಯಾಮ್ಸನ್‌, ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ತೋರಿದ ಕೆಟ್ಟ ಪ್ರದರ್ಶನದ ಪರಿಣಾಮವಾಗಿ ಟಿ20 ವಿಶ್ವಕಪ್ ತಂಡದಲ್ಲಿ ಎರಡನೇ ಆರಂಭಿಕ ಆಟಗಾರನಾಗಬೇಕಾಯಿತು. ಈ ಎಲ್ಲಾ ಅವಮಾನಗಳ ನಡುವೆಯೂ ಸಿಕ್ಕ ಅವಕಾಶವನ್ನು ದೋಚಿಕೊಂಡ ಸಂಜು ಸ್ಯಾಮ್ಸನ್‌ ಸತತ ಮೂರು ಪಂದ್ಯಗಳಲ್ಲಿ…

Read More

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

ಬೆಂಗಳೂರು, ಮಾರ್ಚ್​ 08: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ (by-election) ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar)​ ಎರಡೂ  ಕ್ಷೇತ್ರಕ್ಕೆ 16-16 ನಾಯಕರನ್ನೊಳಗೊಂಡ ಉಸ್ತುವಾರಿ ಸಮಿತಿ ರಚನೆ ಮಾಡಿದ್ದಾರೆ. ಬಾಗಲಕೋಟೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತ್ ಕುಮಾರ್ ಮತ್ತು ದಾವಣಗೆರೆಗೆ ಕಾಱಧ್ಯಕ್ಷ ಮಂಜುನಾಥ್ ಭಂಡಾರಿ ಸಂಚಾಲಕರಾಗಿದ್ದಾರೆ. ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನದಿಂದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಮತ್ತು ಮತ್ತೋರ್ವ ಮಾಜಿ ಸಚಿವ ವಿಎಸ್​​​…

Read More