nagaraj11081993

ಆಯುರ್ವೇದ ಔಷಧಿ ಹೆಸರಲ್ಲಿ ಗೋಧಿ ಹಿಟ್ಟಿನ ಮಾರಾಟ: ದೆಹಲಿ ಮೂಲದ ಆರೋಪಿ ಅರೆಸ್ಟ್​

ತುಮಕೂರು, ಏಪ್ರಿಲ್​​ 02: ಡುಪ್ಲಿಕೇಟ್ ಬ್ರ್ಯಾಂಡಿಂಗ್ ಮಾಡಿ ತೂಕ ಇಳಿಕೆ ಪೌಡರ್ ಮತ್ತು ಇತರ ಉತ್ಪನ್ನಗಳ ಹೆಸರಲ್ಲಿ ನಕಲಿ ಆಯುರ್ವೇದ ಔಷಧ ತಯಾರಿಸಿ ಮಾರಾಟ ಮಾಡುತ್ತಿದ್ದ ದೊಡ್ಡ ರಾಕೆಟ್‌ನ್ನು ತುಮಕೂರು ಪೊಲೀಸರು ಬಯಲಿಗೆಳೆದಿದ್ದಾರೆ. ಪ್ರಕರಣ ಸಂಬಂಧ ದೆಹಲಿ ಮೂಲದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಸಂಸ್ಥೆಯೊಂದರ ಮಾಲಕರು ತಮ್ಮ ಟ್ರೇಡ್‌ಮಾರ್ಕ್ ದುರುಪಯೋಗವಾಗಿದೆ ಎಂದು 2025ರ ಆಗಸ್ಟ್ 14ರಂದು ನೀಡಿದ್ದ ದೂರಿನ ಅನ್ವಯ ಕಾರ್ಯಾಚರಣೆ ನಡೆಸಲಾಗಿತ್ತು ಎನ್ನಲಾಗಿದೆ. ಆರೋಪಿಗಳು ‘RK ಟ್ರೇಡರ್ಸ್’ ಹೆಸರಿನಲ್ಲಿ ಆನ್‌ಲೈನ್ ಮೂಲಕ ಗ್ರಾಹಕರ ಆರೋಗ್ಯಕ್ಕೆ, ವಿಶೇಷವಾಗಿ…

Read More

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾ ವಜಾ

ನವದೆಹಲಿ ಏಪ್ರಿಲ್ 2: ರಾಜ್ಯಸಭಾ ಸಂಸದ ರಾಘವ್ ಚಡ್ಡಾ (Raghav Chadha) ಅವರನ್ನು ರಾಜ್ಯಸಭಾ ಉಪನಾಯಕನ ಸ್ಥಾನದಿಂದ ವಜಾಗೊಳಿಸಲಾಗಿದೆ. ಈ ಬಗ್ಗೆ ಆಮ್ ಆದ್ಮಿ ಪಕ್ಷ (ಎಎಪಿ) ಇಂದು ರಾಜ್ಯಸಭಾ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ರಾಘವ್ ಚಡ್ಡಾ ಅವರಿಗೆ ಸಂಸತ್ತಿನಲ್ಲಿ ಮಾತನಾಡಲು ಸಮಯ ನೀಡಬಾರದು ಎಂದು ಹೇಳಿದೆ. “ಅಶೋಕ್ ಕುಮಾರ್ ಮಿತ್ತಲ್ ಅವರನ್ನು ರಾಜ್ಯಸಭಾ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಈ ಕುರಿತು ಎಎಪಿ ರಾಜ್ಯಸಭಾ ಕಾರ್ಯದರ್ಶಿಗೆ ಅಧಿಕೃತ ಪತ್ರವನ್ನು ಕಳುಹಿಸಿದೆ” ಎಂದು ಆಮ್ ಆದ್ಮಿ ಪಕ್ಷ ಹೇಳಿಕೆಯಲ್ಲಿ ತಿಳಿಸಿದೆ….

Read More

‘ತಟ್ಟೆ ತೊಳೆದ ಪ್ರಿಯಾಂಕಾ ಚೋಪ್ರಾ’, ‘ಕಸ ಗುಡಿಸಿದ ಜಗ್ಗೇಶ್’ ಒಂದೇ ಅಲ್ಲವೇನು?

ಭಾರತ ಮೂಲದ ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಇತ್ತೀಚೆಗೆ ಅಮೃತಸರ ಗೋಲ್ಡನ್ ಟೆಂಪಲ್​​ನಲ್ಲಿ ಭಕ್ತರು ತಿಂದುಂಡ ತಟ್ಟೆ, ಲೋಟ ತೊಳೆದಿದ್ದು ದೊಡ್ಡ ಸುದ್ದಿಯಾಯ್ತು. ಇದೀಗ ಆ ಸುದ್ದಿಯನ್ನು ಕನ್ನಡದ ಜನಪ್ರಿಯ ನಟ ಮತ್ತು ರಾಜ್ಯಸಭಾ ಸದಸ್ಯ ಜಗ್ಗೇಶ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಪ್ರಶ್ನೆಯೊಂದನ್ನು ಎತ್ತಿದ್ದಾರೆ. ತಟ್ಟೆ ಲೋಟ ತೊಳೆದ ಪ್ರಿಯಾಂಕಾ ಚೋಪ್ರಾಗೆ ಭೇಷ್ ಎಂದ ರಾಯರ ಮಠದಲ್ಲಿ ಜನ ಕಸ ಗುಡಿಸಿದ ತಮ್ಮನ್ನು ಅಣಕಿಸಿದ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ ಎರಡು…

Read More

ಏಪ್ರಿಲ್ 10ರಿಂದ ಟಿವಿ9 ಕನ್ನಡ ಶಿಕ್ಷಣ ಶೃಂಗಸಭೆ 2026: ಭವಿಷ್ಯದ ಹೆಜ್ಜೆಗಳನ್ನು ಗುರುತಿಸಿ

ಬೆಂಗಳೂರು, ಏಪ್ರಿಲ್ 2: ವಿದ್ಯಾರ್ಥಿ ಜೀವನದಲ್ಲೇ ಸರಿಯಾದ ಕರಿಯರ್ ಆಯ್ಕೆ ಮಾಡಿಕೊಳ್ಳುವುದು ಬಹಳ ಮುಖ್ಯ, ಹಾಗು ಬಹಳ ಕಷ್ಟಕರ ಕೆಲಸವೂ ಹೌದು. ಈ ಕಾರ್ಯವನ್ನು ಸುಲಭವಾಗಿಸಬಲ್ಲುದು ಟಿವಿ9 ಕನ್ನಡ ಎಜುಕೇಶ್ ಸಮಿಟ್ 2026 (TV9 Kannada Education Summit). ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಏಪ್ರಿಲ್ 10ರಿಂದ 12ರವರೆಗೆ ಮೂರು ದಿನಗಳ ಕಾಲ ನಡೆಯುವ ಮಹಾ ಕಾರ್ಯಕ್ರಮ ಶಿಕ್ಷಣದ ಭವಿಷ್ಯ ಹೆಜ್ಜೆಗಳನ್ನು ಗುರುತಿಸಲು ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಅದ್ಭುತವಾದ ವೇದಿಕೆ ಇದಾಗಿದೆ. ನಿಮ್ಮ ಕನಸುಗಳು ತೆರೆಯಲು…

Read More

Optical Illusion: ಬುದ್ಧಿವಂತರಿಗೊಂದು ಸವಾಲ್;‌ ಜಸ್ಟ್ 9 ಸೆಕೆಂಡುಗಳಲ್ಲಿ ಈ ಗಾರ್ಡನ್‌ನಲ್ಲಿರುವ ಚಿಟ್ಟೆಯನ್ನು ಗುರುತಿಸಬಲ್ಲಿರಾ

ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಬ್ರೈನ್ ಟೀಸರ್ ಸೇರಿದಂತೆ ಪಝಲ್‌ಗಳನ್ನು ಬಿಡಿಸುವುದು ಹೇಳಿದ್ದಷ್ಟು ಸುಲಭವಲ್ಲ. ಇಂತಹ ಒಗಟಿನ ಆಟಗಳು ನಿಮ್ಮ ದೃಷ್ಟಿ ಹಾಗೂ ಬುದ್ಧಿವಂತಿಕೆಗೆ ಸವಾಲು ಎಸೆದು ತಾಳ್ಮೆಯನ್ನು ಪರೀಕ್ಷಿಸುತ್ತವೆ. ಇದೀಗ ನಿಮ್ಮ ವೀಕ್ಷಣಾ ಕೌಶಲ್ಯವನ್ನು ಪರೀಕ್ಷಿಸುವ ಸಮಯ. ಈ ಇಲ್ಯೂಷನ್ ಚಿತ್ರದಲ್ಲಿ ಬಣ್ಣದ ಚಿಟ್ಟೆಯೊಂದಿದೆ. ನೀವು ಒಂಬತ್ತು ಸೆಕೆಂಡುಗಳೊಳಗೆ ಚಿಟ್ಟೆಯನ್ನು ಗುರುತಿಸಬೇಕು. ನೀವು ಈ ಒಗಟು ಬಿಡಿಸಲು ರೆಡಿ ಇದ್ರೆ, ಈ ಚಿತ್ರದತ್ತ ಒಮ್ಮೆ ಗಮನ ಹರಿಸಿ. ಈ ಚಿತ್ರ ನೋಡಿದಾಗ ಏನು ಕಾಣಿಸಿತು ?…

Read More

ಪ್ರಯಾಣಿಕರ ಗಮನಕ್ಕೆ: ಏ 5ರಂದು ಈ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು, ಏಪ್ರಿಲ್​ 02: ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್​​) ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಏಪ್ರಿಲ್​ 5ರಂದು ಅಂದರೆ ಭಾನುವಾರ ಬೆಳಿಗ್ಗೆ 2 ಗಂಟೆ ನೆರಳೆ ಮಾರ್ಗದಲ್ಲಿ ಮೆಟ್ರೋ ಸೇವೆ (Namma Metro) ತಾತ್ಕಾಲಿಕ ಸ್ಥಗಿತವಾಗಲಿದೆ. ವಿಜಯನಗರ ಮತ್ತು ಅತ್ತಿಗುಪ್ಪೆ ನಿಲ್ದಾಣಗಳಲ್ಲಿ ಅಗತ್ಯ ನಿರ್ವಹಣೆ ಕಾಮಗಾರಿ ಹಿನ್ನೆಲೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಬಿಎಂಆರ್​ಸಿಎಲ್​​ ತಿಳಿಸಿದೆ. ಭಾನುವಾರದಂದು ಮೆಟ್ರೋ ರೈಲು ಸೇವೆ ತಾತ್ಕಾಲಿಕ ಸ್ಥಗಿತ ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬಿಎಂಆರ್​ಸಿಎಲ್, ನೇರಳೆ ಮಾರ್ಗದ ವಿಜಯನಗರ…

Read More

ಪ್ರವಾಸಿಗರ ಸ್ವರ್ಗದಲ್ಲಿ ಹೊಸ ರೂಲ್ಸ್: ಚಿಕ್ಕಮಗಳೂರು ಟ್ರಿಪ್ ಹೋಗುವವರು ತಿಳಿದುಕೊಳ್ಳಲೇಬೇಕು

ಚಿಕ್ಕಮಗಳೂರು, (ಏಪ್ರಿಲ್ 02):  ಕರ್ನಾಟಕದ ನೆಚ್ಚಿನ ಪ್ರವಾಸಿ ತಾಣವಾದ ಕಾಫಿನಾಡು ಚಿಕ್ಕಮಗಳೂರಿನ (Chikmagalur) ಪ್ರಸಿದ್ಧ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹೊಸ ನಿಯಮ ಜಾರಿ ಮಾಡಲಾಗಿದೆ. ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ವಿಶ್ವ ಪ್ರಸಿದ್ಧ ಎತ್ತರದ ಶಿಖರ ಮುಳ್ಳಯ್ಯನಗಿರಿ (Mullayanagiri) ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಹೊಸ ರೂಲ್ಸ್ ಮಾಡಲಾಗಿದೆ. ಹೌದು…ಮುಳ್ಳಯ್ಯನಗಿರಿಯಲ್ಲಿ ಕಾಲ ಕಳೆಯಲು ಪ್ರವಾಸಿಗರಿಗೆ ಮೂರು ಗಂಟೆಗಳ ಸಮಯ ನಿಗದಿ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಹಾಗೇ ಮುಳ್ಳಯ್ಯನಗಿರಿ ,ಸೀತಾಳಯ್ಯನಗಿರಿ ಭಾಗದಲ್ಲಿ ಅಡುಗೆ ಮಾಡುವುದು ಹಾಗೂ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ….

Read More

ಹಣಕಾಸಿನ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ: ಪತಿಯಿಂದಲೇ ದಾರುಣವಾಗಿ ಪತ್ನಿಯ ಹತ್ಯೆ

ಬೆಂಗಳೂರು, ಏಪ್ರಿಲ್​​ 02: ಹಣಕಾಸಿನ ವಿಚಾರಕ್ಕೆ ಪತ್ನಿ ಮತ್ತು ಗಂಡನ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ (Bengaluru) ಪೀಣ್ಯಾ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಸಂದ್ರದಲ್ಲಿ ನಡೆದಿದೆ. ಕಾವ್ಯಾ (34) ಮೃತಳಾಗಿದ್ದು, ಹೆಂಡ್ತಿ ಕುತ್ತಿಗೆ ಮೇಲೆ ಕಾಲಿಟ್ಟು ತುಳಿದು ಪತಿ ದರಿಯಪ್ಪ ಎಂಬಾತ ಹತ್ಯೆ ಮಾಡಿದ್ದಾನೆ. ಹಣಕಾಸಿನ ವಿಚಾರಕ್ಕೆ ದಂಪತಿ ನಡುವೆ ಒಂದು ವಾರದಿಂದ ಗಲಾಟೆ ನಡೆಯುತ್ತಿತ್ತು. ನಿನ್ನೆ ಎರಡು ಲಕ್ಷ ಹಣವನ್ನು ಮನೆಯಲ್ಲಿ ತಂದು ಗಂಡ ದರಿಯಪ್ಪಇಟ್ಟಿದ್ದ. ಆ ಹಣವನ್ನು ತನ್ನ ಅಣ್ಣನಿಗೆ…

Read More

KKR vs SRH IPL 2026 Live Score: ಸೋತ ತಂಡಗಳ ನಡುವೆ ಪಂದ್ಯ

ಐಪಿಎಲ್ 2026 ರ ಆರನೇ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆಯುತ್ತಿದೆ. ಎರಡೂ ತಂಡಗಳು ತಮ್ಮ ಆರಂಭಿಕ ಪಂದ್ಯಗಳಲ್ಲಿ ಕಳಪೆ ಆರಂಭವನ್ನು ಪಡೆದಿದ್ದು, ಸೋಲುಗಳನ್ನು ಅನುಭವಿಸಿವೆ. ಆದ್ದರಿಂದ, ಎರಡು ತಂಡಗಳು ಮೊದಲ ಗೆಲುವನ್ನು ಎದುರು ನೋಡುತ್ತಿವೆ. Source link

Read More

ಚಿತ್ರಮಂದಿರಗಳ ಗಟ್ಟಿ ನಿರ್ಧಾರ, ‘ಪೆದ್ದಿ’, ‘ಟಾಕ್ಸಿಕ್’ಗೆ ಸಮಸ್ಯೆ?

ಸಿಂಗಲ್ ಸ್ಕ್ರೀನ್ (Single screen) ಚಿತ್ರಮಂದಿರಗಳು (Theater) ಕಳೆದ ಕೆಲ ವರ್ಷಗಳಿಂದಲೂ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿ ಮಾಡುತ್ತಲೇ ಇವೆ. ಕೇರಳದಲ್ಲಿ ಈ ಬಗ್ಗೆ ಸ್ವತಃ ರಾಜ್ಯದ ಸಚಿವರು ಮಧ್ಯಸ್ಥಿಕೆ ವಹಿಸಿ ಮಾತುಕತೆ ನಡೆಸಿದ್ದು ಸುದ್ದಿ ಆಗಿತ್ತು. ತೆಲುಗು ರಾಜ್ಯಗಳಲ್ಲಿಯೂ ಸಹ ಸಿಂಗಲ್ ಸ್ಕ್ರೀನ್ ಚಿತ್ರಮಂದಿರ ಮಾಲೀಕರು ನಿರ್ಮಾಪಕರ ಸಂಘ ಇನ್ನಿತರೆಗಳ ಕದ ತಟ್ಟುತ್ತಲೇ ಇದ್ದರು. ಅವರ ಬೇಡಿಕೆಯಲ್ಲಿ ಪ್ರಮುಖವಾದ ಬೇಡಿಕೆ ಲಾಭ ಹಂಚಿಕೆಯದ್ದಾಗಿತ್ತು. ಇದೀಗ ತೆಲಂಗಾಣದ ಪ್ರದರ್ಶಕರು ಇನ್ನು ಮುಂದೆ ತಾವು ಬಾಡಿಗೆ ಮಾದರಿಯಲ್ಲ…

Read More