All posts by nagaraj11081993

ಶಾರುಖ್ ನಟನೆಯ ‘ಕಿಂಗ್’ ಸಿನಿಮಾದಲ್ಲಿ ಚಿತ್ರರಂಗದ ಮುಕ್ಕಾಲು ಭಾಗ ಕಲಾವಿದರು – Kannada News | Saurabh Shukla talks about Shah Rukh Khan starrer King movie cast

ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ (Shah Rukh Khan) ಅಭಿನಯದ ಬಹುನಿರೀಕ್ಷಿತ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ‘ಕಿಂಗ್’ ಅದ್ದೂರಿಯಾಗಿ ನಿರ್ಮಾಣ ಆಗುತ್ತಿದೆ. ಈ ಚಿತ್ರದ ಬಗ್ಗೆ ದಿನದಿಂದ ದಿನಕ್ಕೆ ಕುತೂಹಲ ಹೆಚ್ಚುತ್ತಿದೆ. ಈ ಚಿತ್ರವು ಭಾರತೀಯ ಚಿತ್ರರಂಗದ ಅತಿದೊಡ್ಡ ತಾರಾಗಣವನ್ನು ಹೊಂದಿರುವ ಸಿನಿಮಾ ಆಗಲಿದೆ ಎಂಬ ಸುಳಿವನ್ನು ಹಿರಿಯ ನಟ ಸೌರಭ್ ಶುಕ್ಲಾ ನೀಡಿದ್ದಾರೆ. ‘ಕಿಂಗ್’ (King) ಸಿನಿಮಾದಲ್ಲಿ ನಟಿಸುತ್ತಿರುವ ಸೌರಭ್ ಶುಕ್ಲಾ ಅವರು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿದ್ದಾರೆ.

ಸಿದ್ದಾರ್ಥ್ ಆನಂದ್ ಅವರು ಕಿಂಗ್’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ‘ಈ ಸಿನಿಮಾದಲ್ಲಿ ನಾನು ಮಾತ್ರವಲ್ಲ, ಇಡೀ ಚಿತ್ರೋದ್ಯಮದ ಶೇಕಡ 70ರಷ್ಟು ಕಲಾವಿದರಿದ್ದಾರೆ. ಬಾಲಿವುಡ್‌ನ ಪ್ರತಿಯೊಬ್ಬ ದೊಡ್ಡ ನಟನೂ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ’ ಎಂದು ಹೇಳುವ ಮೂಲಕ ಚಿತ್ರದ ತಾರಾ ಬಳಗದ ಬಗ್ಗೆ ಸೌರಭ್ ಶುಕ್ಲಾ ಸುಳಿವು ನೀಡಿದ್ದಾರೆ.

ವರದಿಗಳ ಪ್ರಕಾರ, ‘ಕಿಂಗ್’ ಸಿನಿಮಾದಲ್ಲಿ ಶಾರುಖ್ ಖಾನ್ ಜೊತೆಗೆ ದೊಡ್ಡ ತಾರಾಗಣ ಇರಲಿದೆ. ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಕೂಡ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈಗಾಗಲೇ ತಿಳಿದಿರುವಂತೆ ದೀಪಿಕಾ ಪಡುಕೋಣೆ, ರಾಣಿ ಮುಖರ್ಜಿ, ಅಭಿಷೇಕ್ ಬಚ್ಚನ್, ಅನಿಲ್ ಕಪೂರ್, ಜಾಕಿ ಶ್ರಾಫ್, ಅರ್ಷದ್ ವಾರ್ಸಿ, ಜೈದೀಪ್ ಅಹಲಾವತ್, ರಾಘವ್ ಜುಯಲ್, ಸೌರಭ್ ಶುಕ್ಲಾ ನಟಿಸುತ್ತಿದ್ದಾರೆ.

ಈ ಸಿನಿಮಾದಲ್ಲಿ ಶಾರುಖ್ ಖಾನ್ ಅವರು ಶಕ್ತಿಶಾಲಿ ಮತ್ತು ರಗಡ್ ಆಂತಹ ಡಾನ್ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ. ಅಪಾಯಕಾರಿ ಜಗತ್ತಿನಲ್ಲಿ ಮಗಳಿಗೆ ಎದುರಾಗುವ ಸವಾಲುಗಳನ್ನು ಎದುರಿಸಲು ಮಾರ್ಗದರ್ಶನ ನೀಡುವ ವ್ಯಕ್ತಿಯಾಗಿ ಅವರು ಕಾಣಿಸಿಕೊಳ್ಳಲಿದ್ದಾರೆ. ‘ದಿ ಆರ್ಚೀಸ್’ ನಂತರ ಸುಹಾನಾ ಖಾನ್ ಅವರಿಗೆ ಇದು ದೊಡ್ಡ ಪರದೆಯ ಮೊದಲ ಸಿನಿಮಾವಾಗಲಿದೆ.

ಇದನ್ನೂ ಓದಿ: ಶಾರುಖ್ ಖಾನ್ ಮಗಳ ವರ್ಕೌಟ್ ವಿಡಿಯೋ ವೈರಲ್

ಅದ್ದೂರಿ ಆ್ಯಕ್ಷನ್ ಜೊತೆಗೆ ಭಾವನಾತ್ಮಕ ಕಥೆಯನ್ನು ಹೊಂದಿರುವ ‘ಕಿಂಗ್’ ಸಿನಿಮಾ 2026ರ ಡಿಸೆಂಬರ್ 24ರಂದು ಕ್ರಿಸ್ಮಸ್ ಪ್ರಯುಕ್ತ ವಿಶ್ವಾದ್ಯಂತ ರಿಲೀಸ್ ಆಗಲಿದೆ. ಸಿದ್ದಾರ್ಥ್ ಆನಂದ್ ಅವರ ಮೇಕಿಂಗ್ ಮತ್ತು ಶಾರುಖ್ ಖಾನ್ ಅವರ ಸ್ಟಾರ್ ಇಮೇಜ್​ ಕಾರಣದಿಂದ ಈ ಚಿತ್ರದ ಮೇಲಿನ ಹೈಪ್ ಹೆಚ್ಚಿದೆ. ಈಗ ತಾರಾಬಳಗದ ವಿವರದಿಂದ ಇನ್ನಷ್ಟು ನಿರೀಕ್ಷೆ ಮೂಡುವಂತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IND vs ENG: ರಣರೋಚಕ ಪಂದ್ಯದಲ್ಲಿ ಇಂಗ್ಲೆಂಡ್‌ ಮಣಿಸಿ ಫೈನಲ್​ಗೇರಿದ ಟೀಂ ಇಂಡಿಯಾ – Kannada News | Team India’s Road to Final: Epic Win vs England in T20 WC 2026 Semifinal Mumbai

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2026 ರ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್‌ ಪಂದ್ಯವನ್ನು 7 ರನ್​ಗಳಿಂದ ಗೆದ್ದುಕೊಂಡ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಫೈನಲ್​ಗೇರಿದೆ. ರನ್​ಗಳ ಮಳೆಯೇ ಹರಿದ ಈ ಪಂದ್ಯ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿತು. ಅದರ ಫಲವಾಗಿ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 253 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ಕೂಡ ಭರ್ಜರಿ ಬ್ಯಾಟಿಂಗ್‌ ಪ್ರದರ್ಶಿಸಿತು. ಗುರಿ ದೊಡ್ಡದಿದ್ದರಿಂದ ಇಂಗ್ಲೆಂಡ್‌, ಭಾರತಕ್ಕೆ ಸುಲಭ ತುತ್ತಾಗಲಿದೆ ಎಂದು ಭಾವಿಸಲಾಗಿತ್ತು. ಆದರೆ ಆಂಗ್ಲರ ಪರ ಕೆಚ್ಚೆದೆಯ ಬ್ಯಾಟಿಂಗ್‌ ಪ್ರದರ್ಶಿಸಿದ ಜೆಕಬ್ ಬೆಥೆಲ್ ಸ್ಫೋಟಕ ಶತಕ ಸಿಡಿಸಿ ಇಂಗ್ಲೆಂಡ್​ ತಂಡವನ್ನು ಗೆಲುವಿನ ಸನಿಹಕ್ಕೆ ತಂದರು. ಆದರೆ ಕೊನೆಯ 4 ಓವರ್​ಗಳಲ್ಲಿ ಪಂದ್ಯದ ದಿಕ್ಕು ಬದಲಿಸಿದ ಭಾರತದ ಬೌಲರ್​ಗಳು ತಂಡವನ್ನು ರಣರೋಚಕ ಗೆಲುವಿನತ್ತ ಕೊಂಡೊಯ್ದರು.

Published On – 10:51 pm, Thu, 5 March 26

Source link

ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು? – Kannada News | SC internal reservation discussion incomplete In Karnataka Cabinet Meeting

ಬೆಂಗಳೂರು, ಮಾರ್ಚ್ 05): ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಒಳ ಮೀಸಲಾತಿ (internal reservation ) ಗೊಂದಲ ಜೋರಾಗಿದ್ದು, ಕಾಂಗ್ರೆಸ್ ನಾಯಕರುಗಳ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಈ ಸಂಬಂಧ ಇಂದು (ಮಾರ್ಚ್ 05) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪೂಟ ಸಭೆಯಲ್ಲೂ ಸಹ ಒಳ ಮೀಸಲಾತಿ ವಿಚಾರವಾಗಿ ಭಾರೀ ಚರ್ಚೆಯಾಗಿದೆ. ಆದ್ರೆ, ಸಂಪುಟದಲ್ಲಿ ಸಹಮತ ಮೂಡದ ಕಾರಣ ಚರ್ಚೆ ಅಪೂರ್ಣಗೊಂಡಿದ್ದು, ಮತ್ತೆ ಸಂಪುಟ ಸಭೆ ಸೇರಿ ತೀರ್ಮಾನಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ನಲ್ಲಿ ಮತ್ತೊಂದು ಬೆಳವಣಿಗೆ: ಸಮುದಾಯದ ನಾಯಕರ ನಡುವೆ ಅಸಮಾಧಾನ ಸ್ಫೋಟ

 

Source link

ಲೋಕಾಯುಕ್ತ ಭರ್ಜರಿ ಬೇಟೆ: ಸರ್ಕಾರಿ ಅಧಿಕಾರಿಗಳ ಬಳಿ ಸಂಪತ್ತಿನ ಕೋಟೆ ಬಯಲು – Kannada News | Karnataka Lokayukta Raids 9 Officials: Disproportionate Assets Worth Crores Uncovered

ಬೆಂಗಳೂರು, ಮಾರ್ಚ್​ 05: ಇಂದು ಕರ್ನಾಟಕ ಲೋಕಾಯುಕ್ತ (Lokayukta raids) ಅಧಿಕಾರಿಗಳು ಕರ್ನಾಟಕದ 8 ಜಿಲ್ಲೆಯಲ್ಲಿ 9 ಅಧಿಕಾರಿಗಳ ಮನೆ ಸೇರಿದಂತೆ 50ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮಾಡಿದ್ದಾರೆ. ಆದಾಯ ಮೀರಿದ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಇಂದು ಬೆಳ್ಳಂಬೆಳಗ್ಗೆ 9 ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಶಾಕ್​ ಕೊಟ್ಟಿದ್ದಾರೆ. ಇನ್ನು ದಾಳಿ ವೇಳೆ ಸಂಪತ್ತಿನ ಕೋಟೆ ಬಯಲಾಗಿದೆ.

ಕರ್ನಾಟಕದಲ್ಲಿ ಇಂದು ಲೋಕಾಯುಕ್ತ ಪೊಲೀಸರು ಭರ್ಜರಿ ಬೇಟೆ ಆಡಿದ್ದಾರೆ. ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ನೀಡಿರುವ ಲೋಕಾಯುಕ್ತ ಪೊಲೀಸರು ಬರೋಬ್ಬರಿ 9 ಅಧಿಕಾರಿಗಳ ಸಂಪತ್ತಿನ ಕೋಟೆ ಬಯಲು ಮಾಡಿದ್ದಾರೆ. ಹಾಗಾದರೆ ಇಂದು ಅಕ್ರಮ ಆಸ್ತಿ ಗಳಿಕೆ ಕೇಸ್​ನಲ್ಲಿ ದಾಳಿಗೆ ಒಳಗಾದ ಸರ್ಕಾರಿ ಅಧಿಕಾರಿಗಳು ಯಾರೆಲ್ಲಾ, ಏನು ಕೆಲಸ ಮಾಡುತ್ತಿದ್ದರು, ಅವರ ಮನೆಯಲ್ಲಿ ಏನೆಲ್ಲಾ ಸಿಕ್ಕಿದೆ ಎಂಬ ಮಾಹಿತಿ ಇಲ್ಲಿದೆ.

ಯಾವೆಲ್ಲಾ ಅಧಿಕಾರಿಗಳು: ಏನೆಲ್ಲಾ ಸಿಕ್ತು

1) ಶಶಿಧರ್: ಸಿಇಒ, ಸಿಂಗನಾಯಕನಹಳ್ಳಿ ರೈತ ಸೇವ ಸಹಕಾರ ಸಂಘ ಯಲಹಂಕ, ಬೆಂಗಳೂರು.  5,15,86,000 ರೂ. ಮೌಲ್ಯದ ಚರ ಮತ್ತು ಸ್ಥಿರ ಆಸ್ತಿ ಪತ್ತೆ ಆಗಿದೆ. ಅಸಮತೋಲನ ಆಸ್ತಿ 3,43,86,000 ರೂ.

2) ಹೆಚ್ ಸಿ ಇಂದರೇಶ್ ಗೌಡ: ಅಸಿಸ್ಟೆಂಟ್ ಪ್ರೊಫೆಸರ್, ವೆಟರ್ನರಿ ಕಾಲೇಜು ಹೆಬ್ಬಾಳ, ಬೆಂಗಳೂರು. 2,53,04,600 ರೂ. ಮೌಲ್ಯದ ಚರ ಮತ್ತು ಸ್ಥಿರ ಆಸ್ತಿ ಪತ್ತೆ. ಅಸಮತೋಲನ ಆಸ್ತಿ 1,88,04,600 ರೂ.

ಇದನ್ನೂ ಓದಿ: ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು!

3) ವಸಂತ್ ನಾಯ್ಕ್: ಚೀಫ್ ಇಂಜಿನಿಯರ್ ಕೆ ಆರ್ ಡಿ ಎಲ್, ಬೆಂಗಳೂರು.
6,40,49,680 ರೂ. ಮೌಲ್ಯದ ಚರ, ಸ್ಥಿರ ಆಸ್ತಿ ಪತ್ತೆ. ಅಸಮತೋಲನ ಆಸ್ತಿ 4,41,00,212 ರೂ.

4) ವಿರೇಶ್ ಹಿರೇಮಠ್: ಡೆಪ್ಯೂಟಿ ಎಲೆಕ್ಟ್ರಿಕ್ ಇನ್ಸ್ಪೆಕ್ಟರ್, ಎಲೆಕ್ಟ್ರಿಕಲ್ ಡಿಪಾರ್ಟ್ಮೆಂಟ್, ಯಾದಗಿರಿ. 1,54,53,193 ರೂ. ಮೌಲ್ಯದ ಚರ ಮತ್ತು ಸ್ಥಿರ ಆಸ್ತಿ ಪತ್ತೆ. ಅಸಮತೋಲನ ಆಸ್ತಿ- 1,54,53,192 ರೂ.

5) ಎಸ್ ಸತೀಶ್, AEE, PWD ಇಲಾಖೆ, ಮಂಡ್ಯ.
4,46,58,976 ರೂ. ಮೌಲ್ಯದ ಚರ, ಸ್ಥಿರ ಆಸ್ತಿ ಪತ್ತೆ. ಅಸಮತೋಲನ ಆಸ್ತಿ- 3,01,58,976 ರೂ.

6) ಎಂ ಕೆ ಸುರಕೋಡ: ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ, ಧಾರವಾಡ.
2,12,33,566 ರೂ. ಮೌಲ್ಯದ ಚರ ಮತ್ತು ಸ್ಥಿರ ಆಸ್ತಿ ಪತ್ತೆ. ಅಸಮತೋಲನ ಆಸ್ತಿ- 1,82,33,566 ರೂ.

7) ಎಂ ಸಿ ಸತ್ಯನಾರಾಯಣ: ಎಇಇ , ಮಹಾನಗರ ಪಾಲಿಕೆ ಹಾಸನ.
7,45,08,390 .ರೂ. ಮೌಲ್ಯದ ಚರ ಮತ್ತು ಸ್ಥಿರಾಸ್ಥಿ ಪತ್ತೆ, ಅಸಮತೋಲನ ಆಸ್ತಿ- 6,82,54,406 ರೂ.

8) ಆಶಿಫ್ ಇಕ್ಬಾಲ್: ಎಇಇ ಮತ್ತು ಇಇ ಜಲಮಂಡಳಿ. ಜಲಭವನ ಮೈಸೂರು. ‌
8,81,31,851 ರೂ. ಮೌಲ್ಯದ ಚರ, ಸ್ಥಿರ ಆಸ್ತಿ ಪತ್ತೆ. ಅಸಮತೋಲನ ಆಸ್ತಿ- 6,89,44,806 ರೂ.

9) ಪ್ರಕಾಶ್ ಪಿ ಜಿ: ಜೂನಿಯರ್ ಇಂಜಿನಿಯರ್​​ ಕೃಷ್ಣ ಭಾಗ್ಯ ಜಲ ನಿಗಮ, ವಿಜಯಪುರ
4,60,97,500 ರೂ. ಮೌಲ್ಯದ ಚರ, ಸ್ಥಿರ ಆಸ್ತಿ ಪತ್ತೆ. ಅಸಮತೋಲನ ಆಸ್ತಿ- 4,60,97,500 ರೂ.

ಇದನ್ನೂ ಓದಿ: ಲೋಕಾಯುಕ್ತ ಅಧಿಕಾರಿಗಳನ್ನೇ 4 ಗಂಟೆ ಕಾಯಿಸಿ ಮನೆ ಬಾಗಿಲು ತೆರೆದ ಹಾಸನ ಮಹಾನಗರಪಾಲಿಕೆ ಇಂಜಿನಿಯರ್!

ಸರ್ಕಾರಿ ಅಧಿಕಾರಿಗಳ ಬಳಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕ ನಗದು, ಚಿನ್ನ, ಐಶಾರಾಮಿ ಮನೆ, ಕಾರು, ಸೈಟ್​​ ದಾಖಲಗಳನ್ನು ಜಪ್ತಿ ಮಾಡಿದ್ದಾರೆ. ಅದರಲ್ಲೂ ಹಾಸನದ ಸತ್ಯನಾರಾಯಣ ಮನೆಯಲ್ಲಿ ಇನ್ನೂ ಪರಿಶೀಲನೆ ಮುಂದುವರಿದಿದ್ದು, ಅವರ ಆಸ್ತಿ ಬಗ್ಗೆ ನಾಳೆ ಸಂಪೂರ್ಣ ಮಾಹಿತಿ ಸಿಗಲಿದೆ. ಸದ್ಯ ಈ ಸರ್ಕಾರಿ ಅಧಿಕಾರಿಗಳ ಬಳಿ ಪತ್ತೆಯಾದ ಆಸ್ತಿಯಲ್ಲಿ ಕಂಡು ಬಂದ ಅಸಮತೋಲನ ಆಸ್ತಿ ಬಗ್ಗೆ ಲೋಕಾಯುಕ್ತ ಅಧಿಕಾರಿಗಳ ತನಿಖೆ ಮುಂದುವರಿಸಲಿದ್ದು, ಕಾನೂನಿ ಸಂಕಷ್ಟ ಕಟ್ಟಿಟ್ಟ ಬುತ್ತಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಅಸ್ಸಾಂನಲ್ಲಿ ಸುಖೋಯ್ Su-30 MKI ಯುದ್ಧ ವಿಮಾನ ನಾಪತ್ತೆ; ಐಎಎಫ್​​ನಿಂದ ಶೋಧ ಕಾರ್ಯಾಚರಣೆ ಆರಂಭ – Kannada News | Sukhoi Su 30 MKI Fighter Jet goes missing in Assam IAF Launches Search Operation

ನವದೆಹಲಿ, ಮಾರ್ಚ್ 5: ಭಾರತೀಯ ವಾಯುಪಡೆಯ (ಐಎಎಫ್) ಸುಖೋಯ್ Su-30 MKI ಫೈಟರ್ ಜೆಟ್ ರಾಡಾರ್‌ನಿಂದ ಕಣ್ಮರೆಯಾಗಿದೆ. ಅದರ ಸ್ಥಳವನ್ನು ಕಂಡುಹಿಡಿಯಲು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಭಾರತೀಯ ಯುದ್ಧ ವಿಮಾನವಾದ Su-30 MKI ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಹಾರಾಟ ನಡೆಸುತ್ತಿದ್ದಾಗ ಇಂದು ಸಂಜೆ 7 ಗಂಟೆ ಸುಮಾರಿಗೆ ನಾಪತ್ತೆಯಾಗಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಕೆಲವು ವರದಿಗಳು ವಿಮಾನ ಅಪಘಾತಕ್ಕೀಡಾಗಿದೆ ಮತ್ತು ಸ್ಥಳೀಯರು ದೊಡ್ಡ ಸ್ಫೋಟವನ್ನು ಸಹ ಕೇಳಿದ್ದಾರೆ ಎಂದು ಕೂಡ ತಿಳಿಸಿವೆ.

ಭಾರತೀಯ ವಾಯುಪಡೆ ಅಥವಾ ರಕ್ಷಣಾ ಸಚಿವಾಲಯ ಇದನ್ನು ಇನ್ನೂ ದೃಢಪಡಿಸಿಲ್ಲ. ಪೈಲಟ್ ಕೂಡ ನಾಪತ್ತೆಯಾಗಿದ್ದು, ಪ್ರಸ್ತುತ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಳಪತಿ ವಿಜಯ್ ವಿಚ್ಛೇದನಕ್ಕೆ ದೊಡ್ಡ ಟ್ವಿಸ್ಟ್: ತ್ರಿಷಾ ಜತೆ ಮದುವೆಗೆ ಹಾಜರಿ – Kannada News | Thalapthy Vijay Trisha seen together at wedding amidst divorce proceedings with Sangeetha

ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ (Thalapthy Vijay) ಮತ್ತು ಅವರ ಪತ್ನಿ ಸಂಗೀತಾ 27 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡುತ್ತಿದ್ದಾರೆ. ಸಂಗೀತಾ ಅವರು ವಿಚ್ಛೇದನಕ್ಕೆ (Divorce) ಅರ್ಜಿ ಸಲ್ಲಿಸಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ, ವಿಜಯ್ ಅವರು ಖ್ಯಾತ ನಟಿ ತ್ರಿಷಾ ಕೃಷ್ಣನ್ ಜೊತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಚೆನ್ನೈನಲ್ಲಿ ಇಂದು (ಮಾರ್ಚ್ 5) ಸಂಜೆ ನಡೆದ ಎಸ್‌. ಕಲ್ಪತಿ ಸುರೇಶ್ ಮತ್ತು ಮೀನಾಕ್ಷಿ ಸುರೇಶ್ ಅವರ ಪುತ್ರನ ವಿವಾಹ ಸಮಾರಂಭದಲ್ಲಿ ವಿಜಯ್ ಹಾಗೂ ತ್ರಿಷಾ (Trisha) ಒಟ್ಟಾಗಿ ಭಾಗವಹಿಸಿದ್ದರು.

ವಿಚ್ಛೇದನದ ವದಂತಿಗಳು ಮತ್ತು ಟೀಕೆಗಳು ಜೋರಾಗಿರುವ ಈ ಸಮಯದಲ್ಲಿ, ವಿಜಯ್ ಮತ್ತು ತ್ರಿಷಾ ಅವರು ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಂಡಿರುವುದು ಅಭಿಮಾನಿಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಈ ವಿಡಿಯೋ ಸದ್ಯ ಇಂಟರ್ನೆಟ್‌ನಲ್ಲಿ ಸಖತ್ ವೈರಲ್ ಆಗುತ್ತಿದೆ. ನೆಟ್ಟಿಗರು ಹಲವು ಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ವಿಜಯ್ ಅವರ ಪತ್ನಿ ಸಂಗೀತಾ ಸಲ್ಲಿಸಿದ್ದಾರೆ ಎನ್ನಲಾದ ವಿಚ್ಛೇದನ ಅರ್ಜಿಯಲ್ಲಿ, ವಿಜಯ್ ಅವರಿಗೆ ಓರ್ವ ನಟಿಯೊಂದಿಗೆ ಸಂಬಂಧವಿದೆ ಎಂದು ಆರೋಪಿಸಲಾಗಿತ್ತು. ಈ ನಟಿ ಬೇರೆ ಯಾರೂ ಅಲ್ಲ, ಅದು ತ್ರಿಷಾ ಕೃಷ್ಣನ್ ಎಂದೇ ನೆಟ್ಟಿಗರು ಊಹಿಸುತ್ತಿದ್ದಾರೆ. ಇವರಿಬ್ಬರೂ ದೀರ್ಘಕಾಲದಿಂದ ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿದ್ದಾರೆ ಎಂಬ ಗಾಳಿಸುದ್ದಿಗಳು ಈ ಹಿಂದೆಯೇ ಹರಿದಾಡುತ್ತಿದ್ದವು. ಇಂದಿನ ಘಟನೆಯು ಆ ವದಂತಿ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಂತಾಗಿದೆ.

ತ್ರಿಷಾ ಕೃಷ್ಣನ್,  ದಳಪತಿ ವಿಜಯ್ ವೈರಲ್ ವಿಡಿಯೋ:

ಈ ವಿವಾದದ ಬಗ್ಗೆ ತಮಿಳುನಾಡಿನ ಜನತೆ ಬೇರೆ ಬೇರೆ ಅಭಿಪ್ರಾಯ ಹೊಂದಿದ್ದಾರೆ. ಟೀಕೆ ಮಾಡುವವರು ವಿಜಯ್ ಅವರ ನೈತಿಕತೆಯ ಬಗ್ಗೆ ಪ್ರಶ್ನೆ ಎತ್ತುತ್ತಿದ್ದು, ಸಂಗೀತಾಗೆ ಆದ ಅನ್ಯಾಯದ ಬಗ್ಗೆ ಮಾತನಾಡುತ್ತಿದ್ದಾರೆ. ಬೆಂಬಲಿಗರು ಮತ್ತು ವಿಜಯ್ ಅವರ ಅಭಿಮಾನಿಗಳು ಇದೊಂದು ರಾಜಕೀಯ ಪಿತೂರಿ ಎನ್ನುತ್ತಿದ್ದಾರೆ. ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ವಿಜಯ್ ಅವರ ರಾಜಕೀಯ ಜೀವನಕ್ಕೆ ಅಡ್ಡಿಪಡಿಸಲು ವಿರೋಧ ಪಕ್ಷಗಳು ಈ ವಿಚ್ಛೇದನದ ವಿಚಾರವನ್ನು ದಾಳವಾಗಿ ಬಳಸಿಕೊಳ್ಳುತ್ತಿವೆ ಎಂಬುದು ಫ್ಯಾನ್ಸ್ ವಾದ.

ಇದನ್ನೂ ಓದಿ: ವಿಚ್ಛೇದನಕ್ಕೆ ಅರ್ಜಿ: ದಳಪತಿ ವಿಜಯ್ ಪತ್ನಿಗೆ 250 ಕೋಟಿ ರೂ. ಜೀವನಾಂಶ?

ಸಾಮಾನ್ಯವಾಗಿ ವೈಯಕ್ತಿಕ ಜೀವನದ ಬಗ್ಗೆ ಗಾಸಿಪ್ ಕೇಳಿಬಂದಾಗ ಅದನ್ನು ತಳ್ಳಿಹಾಕಲು ಸೆಲೆಬ್ರಿಟಿಗಳು ಬಯಸುತ್ತಾರೆ. ಆದರೆ ತ್ರಿಷಾ ಮತ್ತು ವಿಜಯ್ ಅವರು ಆ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಧೈರ್ಯವಾಗಿಯೇ ಅವರು ಮದುವೆ ಸಮಾರಂಭಕ್ಕೆ ಜೊತೆಯಾಗಿ ಬಂದಿದ್ದಾರೆ. ಹಾಗಾದರೆ ಅವರು ಸದ್ಯದಲ್ಲೇ ಏನಾದರೂ ಅಧಿಕೃತ ಘೋಷಣೆ ಮಾಡುತ್ತಾರಾ ಎಂಬ ಪ್ರಶ್ನೆ ಕೂಡ ಜನರಲ್ಲಿ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಫೋಕ್ಸೋ ಕೇಸ್: ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು – Kannada News | Pocso Case: shorapur Police sized Mallikarjun mutya four Mobile Phones

ಯಾದಗಿರಿ, (ಮಾರ್ಚ್ 05): ಫೋಕ್ಸೋ ಪ್ರಕರಣ ಸಂಬಂಧ ನಾಪತ್ತೆಯಾಗಿದ್ದ ಯಾದಗಿರಿಯ (Yadagir) ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ (Mallikarjun mutya) ಪ್ರತ್ರಕ್ಷರಾಗಿದ್ದು, ಇಂದು (ಮಾರ್ಚ್ 25) ಪೊಲೀಸ್ ವಿಚಾರಣೆಗೆ ಹಾಜರಾಗಿದ್ದಾರೆ. ಸಂಜೆ ಆರು ಗಂಟೆಯಿಂದ ಮುತ್ಯಾನನ್ನು ಶಹಾಪುರ ಸರ್ಕಲ್ ಇನ್ಸ್ಪೆಕ್ಟರ್ ಶರಣಗೌಡ ನ್ಯಾಮಣ್ಣ ಅವರು ವಿಚಾರಣೆ ನಡೆಸಿದ್ದಾರೆ. ಬಳಿಕ ಮುತ್ಯಾನ ನಾಲ್ಕು ಮೊಬೈಲ್​​ಗಳನ್ನು ವಶಕ್ಕೆ ಪಡೆದುಕೊಂಡು ಕಳುಹಿಸಿದ್ದಾರೆ.

ಇನ್ನು ವಿಚಾರಣೆ ಬಳಿಕ ಪೊಲೀಸ್ ಠಾಣೆಯಿಂದ ಹೊರ ಬಂದ ಮಲ್ಲಿಕಾರ್ಜುನ ಮುತ್ಯಾ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ನನಗೆ ನೋಟೀಸ್ ಕೊಟ್ಟಿದ್ದರಿಂದ ವಿಚಾರಣೆಗೆ ಬಂದಿದ್ದೆನೆ. ಪೊಲೀಸರು ಕರೆದ್ರೆ ವಿಚಾರಣೆಗೆ ಬರುತ್ತೆನೆ ಅಂತ ನಾನು ಮೊದಲೇ ವಿಡಿಯೋ ಹೇಳಿಕೆ‌ ನೀಡಿದ್ದೆ. ಆದ್ರೆ, ನೋಟೀಸ್ ಕೊಟ್ಟ ಬಳಿಕ ನನಗೆ ಹುಷಾರಿರಲಿಲ್ಲ. ಅದಕ್ಕೆ ಮೂರು ದಿನ ತಡವಾಗಿ ವಿಚಾರಣೆಗೆ ಹಾಜರಾಗಿದ್ದೆ‌ನೆ. ಪೊಲೀಸರ ವಿಚಾರಣೆಗೆ ಸಹಕಾರ ನೀಡಿದ್ದು, ಅವರು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದೆನೆ. ಮತ್ತೆ ಕರೆದ್ರೆ ವಿಚಾರಣೆಗೆ ಹಾಜರಾಗುತ್ತೆನೆ ಎಂದು ಸ್ಪಷ್ಟಪಡಿಸಿದರು.

ಕರ್ನಾಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಜಾಗತಿಕವಾಗಿ ಭಾರತ ನಿರ್ಣಾಯಕ ಪಾತ್ರ ವಹಿಸುತ್ತಿದೆ; ಫಿನ್ಲೆಂಡ್ ಅಧ್ಯಕ್ಷ ಮೆಚ್ಚುಗೆ – Kannada News | India and Finland sign 11 major outcomes during Finnish President visit Raisina Dialogue

ನವದೆಹಲಿ, ಮಾರ್ಚ್ 5: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ನವದೆಹಲಿಯಲ್ಲಿ ರೈಸಿನಾ ಸಂವಾದದ 11ನೇ ಆವೃತ್ತಿಯನ್ನು ಉದ್ಘಾಟಿಸಿದರು. ಮುಖ್ಯ ಭಾಷಣ ಮಾಡಿದ ಫಿನ್ಲೆಂಡ್ ಅಧ್ಯಕ್ಷ ಡಾ. ಅಲೆಕ್ಸಾಂಡರ್ ಸ್ಟಬ್ ಜಾಗತಿಕ ದಕ್ಷಿಣವು ಮುಂದಿನ ವಿಶ್ವ ಕ್ರಮವನ್ನು ನಿರ್ಧರಿಸುತ್ತದೆ. ಭಾರತವು ಅದರಲ್ಲಿ ನಿರ್ಣಾಯಕ ಅಂಶವನ್ನು ವಹಿಸುತ್ತದೆ ಎಂದು ಹೇಳಿದರು. ಜಾಗತಿಕ ಶಕ್ತಿ ಸಮತೋಲನವು ಬದಲಾಗಿದೆ. ಪಾಶ್ಚಿಮಾತ್ಯ ಪ್ರಾಬಲ್ಯದ ಪ್ರಪಂಚದ ಯುಗ ಮುಗಿದಿದೆ, ಇಂದು ವಿಶ್ವ ರಾಜಕೀಯದಲ್ಲಿ ಪ್ರಮುಖ ಸವಾಲುಗಳಿವೆ ಎಂದು ಅವರು ಒಪ್ಪಿಕೊಂಡರು.

ಪ್ರಧಾನಿ ನರೇಂದ್ರ ಮೋದಿ ಇಂದು ಹೈದರಾಬಾದ್ ಹೌಸ್‌ನಲ್ಲಿ ಫಿನ್ಲೆಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಡಿಜಿಟಲೀಕರಣ, ಸುಸ್ಥಿರತೆ, ಶುದ್ಧ ಇಂಧನ, ಕ್ವಾಂಟಮ್ ಕಂಪ್ಯೂಟಿಂಗ್ ಮತ್ತು ಸೆಮಿಕಂಡಕ್ಟರ್‌ಗಳಂತಹ ಕ್ಷೇತ್ರಗಳಲ್ಲಿ ಸಹಕಾರವನ್ನು ವಿಸ್ತರಿಸಲು, ರಕ್ಷಣೆ ಮತ್ತು ಬಾಹ್ಯಾಕಾಶದಲ್ಲಿ ತೊಡಗಿಸಿಕೊಳ್ಳುವಿಕೆಯನ್ನು ಗಾಢವಾಗಿಸಲು ಇಬ್ಬರೂ ನಾಯಕರು ಒಪ್ಪಿಕೊಂಡರು.

ದ್ವಿಪಕ್ಷೀಯ ಮಾತುಕತೆಯ ನಂತರ ಜಂಟಿ ಪತ್ರಿಕಾ ಹೇಳಿಕೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತ ಮತ್ತು ಫಿನ್ಲೆಂಡ್ ತಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಡಿಜಿಟಲೀಕರಣ ಮತ್ತು ಸುಸ್ಥಿರತೆಯ ಮೇಲೆ ಕೇಂದ್ರೀಕರಿಸಿದ ಕಾರ್ಯತಂತ್ರದ ಪಾಲುದಾರಿಕೆಯಾಗಿ ರೂಪಿಸಲು ನಿರ್ಧರಿಸಿವೆ. ಇದು ಹೈ-ಟೆಕ್ ವಲಯಗಳಲ್ಲಿ ಸಹಯೋಗವನ್ನು ವೇಗಗೊಳಿಸುತ್ತದೆ ಎಂದು ಹೇಳಿದರು. “ಈ ಪಾಲುದಾರಿಕೆಯು AIನಿಂದ 6G ಟೆಲಿಕಾಂ, ಶುದ್ಧ ಇಂಧನದಿಂದ ಕ್ವಾಂಟಮ್ ಕಂಪ್ಯೂಟಿಂಗ್‌ವರೆಗೆ ಅನೇಕ ಹೈಟೆಕ್ ಕ್ಷೇತ್ರಗಳಲ್ಲಿ ನಮ್ಮ ಸಹಕಾರವನ್ನು ವೇಗಗೊಳಿಸುತ್ತದೆ ಎಂದು ಮೋದಿ ಹೇಳಿದರು.

ಇದನ್ನೂ ಓದಿ: Video: 25 ವರ್ಷಗಳಿಂದ ಒಂದು ದಿನವೂ ರಜೆ ತೆಗೆದುಕೊಳ್ಳದ ಪ್ರಧಾನಿ ಮೋದಿಯನ್ನು ಹೊಗಳಿದ ಕೆನಡಾ ಪ್ರಧಾನಿ ಮಾರ್ಕ್​

ಭಾರತ ಮತ್ತು ಫಿನ್ಲೆಂಡ್ ಇಂದು ಎರಡೂ ದೇಶಗಳ ನಾವೀನ್ಯತೆ ಪರಿಸರ ವ್ಯವಸ್ಥೆಗಳನ್ನು ಸಂಪರ್ಕಿಸಲು ಸಮಗ್ರ ವಲಸೆ ಮತ್ತು ಚಲನಶೀಲತೆ ಒಪ್ಪಂದಕ್ಕೆ ಸಹಿ ಹಾಕಿದವು. ಇದಾದ ಬಳಿಕ ಪ್ರಧಾನಿ ಮೋದಿ ಫಿನ್ಲೆಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಫಿನ್ಲೆಂಡ್ ಭಾರತೀಯ ವಿದ್ಯಾರ್ಥಿಗಳು ಮತ್ತು ಪ್ರತಿಭೆಗಳಿಗೆ ಆದ್ಯತೆಯ ತಾಣವಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಈ ಪಾಲುದಾರಿಕೆಯು ಉದ್ಯಮಶೀಲತಾ ಕ್ಷೇತ್ರಕ್ಕೂ ವಿಸ್ತರಿಸಲಿದೆ ಎಂದು ಅವರು ಒತ್ತಿ ಹೇಳಿದರು.

ಶೈಕ್ಷಣಿಕ ವಲಯದಲ್ಲಿ ಫಿನ್ಲೆಂಡ್​​ನ ಜಾಗತಿಕ ಸ್ಥಾನವನ್ನು ಒಪ್ಪಿಕೊಂಡ ಪ್ರಧಾನಿ ಮೋದಿ, “ಇಂದು, ಶಿಕ್ಷಕರ ತರಬೇತಿ, ಶಾಲೆಯಿಂದ ಶಾಲೆಗೆ ಪಾಲುದಾರಿಕೆ ಮತ್ತು ಶಿಕ್ಷಣದ ಭವಿಷ್ಯದಲ್ಲಿ ಸಂಶೋಧನಾ ಸಹಕಾರವನ್ನು ವಿಸ್ತರಿಸಲು ನಾವು ಒಪ್ಪಿಕೊಂಡಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: ಮಿಲಿಟರಿ ಸಂಘರ್ಷ ಯಾವುದೇ ಸಮಸ್ಯೆಗೆ ಪರಿಹಾರ ಅಸಾಧ್ಯ; ಅಮೆರಿಕ-ಇರಾನ್ ಯುದ್ಧದ ಬಗ್ಗೆ ಪ್ರಧಾನಿ ಮೋದಿ ಹೇಳಿಕೆ

ಭಾರತ ಮತ್ತು ಫಿನ್ಲೆಂಡ್ ನಡುವಿನ ಐತಿಹಾಸಿಕ ಭಾರತ-ಯುರೋಪಿಯನ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದವು ವ್ಯಾಪಾರ, ಹೂಡಿಕೆ ಮತ್ತು ತಂತ್ರಜ್ಞಾನ ಸಹಕಾರವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. “ಇಂದು ಜಗತ್ತು ಅಸ್ಥಿರತೆ ಮತ್ತು ಅನಿಶ್ಚಿತತೆಯ ಅವಧಿಯನ್ನು ಎದುರಿಸುತ್ತಿದೆ. ಉಕ್ರೇನ್‌ನಿಂದ ಪಶ್ಚಿಮ ಏಷ್ಯಾದವರೆಗೆ ಪ್ರಪಂಚದ ಅನೇಕ ಭಾಗಗಳಲ್ಲಿ ಸಂಘರ್ಷ ಮುಂದುವರೆದಿದೆ. 2026ರ ಆರಂಭದಲ್ಲಿ ಐತಿಹಾಸಿಕ ಭಾರತ-ಯುರೋಪಿಯನ್ ಒಕ್ಕೂಟದ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಈ ಒಪ್ಪಂದವು ಭಾರತ ಮತ್ತು ಫಿನ್ಲೆಂಡ್ ನಡುವಿನ ವ್ಯಾಪಾರ, ಹೂಡಿಕೆ ಮತ್ತು ತಂತ್ರಜ್ಞಾನ ಸಹಕಾರವನ್ನು ಮತ್ತಷ್ಟು ಬಲಪಡಿಸುತ್ತದೆ. ಡಿಜಿಟಲ್ ತಂತ್ರಜ್ಞಾನ, ಮೂಲಸೌಕರ್ಯ ಮತ್ತು ಸುಸ್ಥಿರತೆಯಂತಹ ಕ್ಷೇತ್ರಗಳಲ್ಲಿ ಭಾರತ ಮತ್ತು ಫಿನ್ಲೆಂಡ್ ಪ್ರಮುಖ ಪಾಲುದಾರರು” ಎಂದು ಮೋದಿ ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs ENG: ರೋಹಿತ್ ದಾಖಲೆಯ ಜೊತೆಗೆ 19 ವರ್ಷಗಳ ಹಳೆಯ ದಾಖಲೆ ಮುರಿದ ಕಿಶನ್ – Kannada News | Ishan Kishan T20 World Cup: Record Breaking Performance & Partnership with Sanju Samson

ಈ 263 ರನ್‌ಗಳೊಂದಿಗೆ, ಇಶಾನ್ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿದರು. ಕಳೆದ ಟಿ20 ವಿಶ್ವಕಪ್‌ನಲ್ಲಿ ರೋಹಿತ್ 257 ರನ್‌ ಬಾರಿಸಿದ್ದರು. ಇದೀಗ ರೋಹಿತ್ ದಾಖಲೆ ಮುರಿದಿರುವ ಕಿಶನ್, ಒಂದು ಆವೃತ್ತಿಯ ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ರನ್ ಗಳಿಸಿದ ಭಾರತದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಇನ್ನು ಈ ಪಟ್ಟಿಯಲ್ಲಿ (3 ಆವೃತ್ತಿಗಳಲ್ಲಿ 319, 296, 273 ರನ್) ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ

Source link

ಮುಂಬೈನಲ್ಲಿ ‘ರಾಮಾಯಣ 2’ ಶೂಟಿಂಗ್ ಶುರು ಮಾಡಿದ ನಟ ರಣಬೀರ್ ಕಪೂರ್ – Kannada News | Ranbir Kapoor starts Ramayana 2 shoot Sunny Deol joins as hanuman soon

ನಟ ರಣಬೀರ್ ಕಪೂರ್ ಅವರು ಈಗಾಗಲೇ ‘ರಾಮಾಯಣ’ ಸಿನಿಮಾದ ಮೊದಲ ಪಾರ್ಟ್ ಚಿತ್ರೀಕರಣ ಮುಗಿಸಿದ್ದಾರೆ. ಈಗ ಅವರು ‘ರಾಮಾಯಣ 2’ (Ramayana 2) ಚಿತ್ರೀಕರಣ ಶುರು ಮಾಡಿದ್ದಾರೆ. ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾ ಎರಡು ಪಾರ್ಟ್​​ಗಳಲ್ಲಿ ರಿಲೀಸ್ ಆಗಲಿದೆ. ಶ್ರೀರಾಮನ ಪಾತ್ರದಲ್ಲಿ ನಟಿಸುತ್ತಿರುವ ರಣಬೀರ್ ಕಪೂರ್ (Ranbir Kapoor) ಈಗಾಗಲೇ ‘ರಾಮಾಯಣ 2’ ಸೆಟ್‌ಗೆ ಬಂದಿದ್ದು, ಚಿತ್ರದ ಪ್ರಮುಖ ದೃಶ್ಯಗಳ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಶೀಘ್ರದಲ್ಲೇ ಸನ್ನಿ ಡಿಯೋಲ್ ಕೂಡ ಶೂಟಿಂಗ್ ಸೆಟ್ ಸೇರಿಕೊಳ್ಳಲಿದ್ದಾರೆ.

ರಣಬೀರ್ ಕಪೂರ್ ಮಾರ್ಚ್ ತಿಂಗಳಲ್ಲಿ ಸಂಜಯ್ ಲೀಲಾ ಬನ್ಸಾಲಿ ಅವರ ‘ಲವ್ ಆ್ಯಂಡ್ ವಾರ್’ ಚಿತ್ರದ ಶೂಟಿಂಗ್‌ನಲ್ಲಿ ಭಾಗವಹಿಸಬೇಕಿತ್ತು. ಆದರೆ, ಬನ್ಸಾಲಿ ಅವರ ಆರೋಗ್ಯ ಸಮಸ್ಯೆಯ ಕಾರಣದಿಂದಾಗಿ ಆ ಚಿತ್ರದ ಚಿತ್ರೀಕರಣವು ಮೇ ತಿಂಗಳಿಗೆ ಮುಂದೂಡಲ್ಪಟ್ಟಿದೆ. ಈ ಬಿಡುವಿನ ಸಮಯವನ್ನು ಸದುಪಯೋಗಪಡಿಸಿಕೊಳ್ಳಲು ನಿರ್ಧರಿಸಿರುವ ರಣಬೀರ್, ತಮ್ಮ ಸಂಪೂರ್ಣ ಗಮನವನ್ನು ಈಗ ‘ರಾಮಾಯಣ 2’ ಕಡೆಗೆ ಹರಿಸಿದ್ದಾರೆ.

‘ರಾಮಾಯಣ’ ಚಿತ್ರದ ಎರಡನೇ ಭಾಗದಲ್ಲಿ ಶ್ರೀರಾಮ ಮತ್ತು ಹನುಮಂತನ ಭೇಟಿಯ ದೃಶ್ಯಗಳು ಅತ್ಯಂತ ಪ್ರಮುಖವಾಗಿವೆ. ಹನುಮಂತನ ಪಾತ್ರದಲ್ಲಿ ಬಾಲಿವುಡ್‌ನ ಹಿರಿಯ ನಟ ಸನ್ನಿ ಡಿಯೋಲ್ ಕಾಣಿಸಿಕೊಳ್ಳುತ್ತಿದ್ದು, ಅವರು ಮಾರ್ಚ್ 20ರ ಸುಮಾರಿಗೆ ಚಿತ್ರೀಕರಣಕ್ಕೆ ಬರಲಿದ್ದಾರೆ. ಮಾರ್ಚ್‌ನಿಂದ ಮೇ ತಿಂಗಳವರೆಗೆ ರಣಬೀರ್ ಮತ್ತು ಸನ್ನಿ ಡಿಯೋಲ್ ಅವರ ಕಾಂಬಿನೇಶನ್ ದೃಶ್ಯಗಳನ್ನು ಚಿತ್ರೀಕರಿಸಲು ಪ್ಲಾನ್ ಮಾಡಲಾಗಿದೆ ಎಂಬ ಮಾಹಿತಿ ಕೇಳಿಬಂದಿದೆ.

ನಿತೇಶ್ ತಿವಾರಿ ನಿರ್ದೇಶನದ ಈ ಸಿನಿಮಾದಲ್ಲಿ ರಣಬೀರ್ ಕಪೂರ್ ಅವರಿಗೆ ಜೋಡಿಯಾಗಿ ಸಾಯಿ ಪಲ್ಲವಿ ಅವರು ನಟಿಸುತ್ತಿದ್ದು, ಸೀತೆಯ ಪಾತ್ರ ಮಾಡುತ್ತಿದ್ದಾರೆ. ನಮಿತ್ ಮಲ್ಹೋತ್ರಾ ಅವರು ಈ ಬೃಹತ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಚಿತ್ರದ ಮೊದಲ ಭಾಗ ಈ ವರ್ಷ ದೀಪಾವಳಿ ಹಬ್ಬದ ಪ್ರಯುಕ್ತ ಅದ್ದೂರಿಯಾಗಿ ಬಿಡುಗಡೆ ಆಗಲಿದೆ.

ಇದನ್ನೂ ಓದಿ: ನಾನ್ ವೆಜ್ ತಿನ್ನಲ್ಲ ಎಂದು ಸುಳ್ಳು ಹೇಳಿದ್ರಾ ರಣಬೀರ್? ಫೋಟೋ ವೈರಲ್

ಘಟಾನುಘಟಿ ಕಲಾವಿದರು ‘ರಾಮಾಯಣ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ನಟ ಯಶ್ ಅವರು ರಾವಣನ ಪಾತ್ರ ಮಾಡುತ್ತಿರುವುದು ವಿಶೇಷ. ಈ ಸಿನಿಮಾದಲ್ಲಿ ಗ್ರಾಫಿಕ್ಸ್ ದೃಶ್ಯಗಳು ಹೇರಳವಾಗಿರಲಿವೆ. ಹಾಲಿವುಡ್ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಅವರು ಈ ಸಿನಿಮಾದ ಫೈನಲ್ ಕಟ್ ನೋಡಿ ಸಲಹೆ ನೀಡಲಿದ್ದಾರೆ ಎಂಬ ಸುದ್ದಿ ಕೂಡ ಹರಿದಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link