All posts by nagaraj11081993

Video: ಬಣ್ಣ ಎರಚಿದ್ದಕ್ಕೆ 4 ವರ್ಷದ ಮೊಮ್ಮಗನ ಮೇಲೆ ಬಿಸಿನೀರು ಸುರಿದ ಅಜ್ಜಿ: ವಿಲವಿಲನೆ ಒದ್ದಾಡಿದ ಬಾಲಕ – Kannada News | Nagpur Shock: Grandma Arrested After Pouring Boiling Water on Grandson for Color Spill

ಮುಂಬೈ, ಮಾ.5: ಪುಟ್ಟ ಮಕ್ಕಳಿಗೆ ಅಜ್ಜಿ ಅಂದ್ರೆ ಪಂಚ ಪ್ರಾಣ, ಅಜ್ಜಿಗೂ ಅಷ್ಟೇ ಮೊಮ್ಮಕ್ಕಳು ತುಂಬಾ ಪ್ರೀತಿ, ಆದರೆ ಇಲ್ಲೊಂದು ಘಟನೆ ಅದಕ್ಕೆ ವಿರುದ್ಧವಾಗಿದೆ. ನೆನ್ನೆ ದೇಶದ ಎಲ್ಲ ಕಡೆ ಬಣ್ಣಗಳ ಹಬ್ಬ ತುಂಬಾ ಅದ್ದೂರಿಯಾಗಿ ಆಚರಣೆ ಮಾಡಿದ್ದಾರೆ ಹಾಗೂ ಇದನ್ನು ಅತ್ಯಂತ ತಮಾಷೆಯಾಗಿ ಆಡುತ್ತಾರೆ. ಅದರಲ್ಲೂ ಈ ಹಬ್ಬವನ್ನು ಮಕ್ಕಳು ತುಂಬಾ ಖುಷಿಯಿಂದ ಆಚರಣೆ ಮಾಡಿದ್ದಾರೆ. ಆದರೆ ಈ ಬಣ್ಣದ ಹಬ್ಬ ಈ ಪುಟ್ಟ ಬಾಲಕನಿಗೆ ಕರಾಳ ದಿನವಾಗಿದೆ. ತಮಾಷೆಯಾಗಿ ತನ್ನ ಮೇಲೆ ಬಣ್ಣ ಎರಚಿದ್ದ ಎಂದು ಅಜ್ಜಿ ತನ್ನ ಮೊಮ್ಮಗನ ಮೇಲೆ ಬಿಸಿ ಬಿಸಿ ನೀರನ್ನು ಸುರಿದು ವಿಕೃತಿ ಮೆರೆದಿದ್ದಾರೆ. ಈ ಭೀಕರ ಘಟನೆಯು ನಾಗ್ಪುರ ಜಿಲ್ಲೆಯ ಕೋರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಾರ್ಚ್ 3 ರಂದು ಓಂ ಹರೀಶ್ ವಂಗೆ ಎಂಬ ಬಾಲಕ ತನ್ನ ಮನೆಯ ಹೊರಗೆ ಬಣ್ಣದ ಸ್ಪ್ರೇ ಬಾಟಲಿಯೊಂದಿಗೆ ಆಟವಾಡುತ್ತಿದ್ದನು. ಈ ವೇಳೆ ಆಕಸ್ಮಿಕವಾಗಿ ಅಜ್ಜಿ ಸಿಂಧು ಠಾಕ್ರೆ ಅವರ ಮೇಲೆ ಬಣ್ಣದ ನೀರು ಬಿದ್ದಿದೆ. ಇದರಿಂದ ಕೆರಳಿದ ಅಜ್ಜಿ, ಬಕೆಟ್‌ನಲ್ಲಿ ತುಂಬಿದ್ದ ಕುದಿಯುವ ಬಿಸಿನೀರನ್ನು ಮೊಮ್ಮಗನ ಮೇಲೆ ಸುರಿದಿದ್ದಾರೆ. 4 ವರ್ಷದ ಬಾಲಕ ಓಂ ಹರೀಶ್ ವಂಗೆ ಬಿಸಿ ನೀರಿನ ಉರಿಯಲ್ಲಿ ಒದ್ದಾಡಿದ್ದಾನೆ. ಇದೀಗ ಈ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ. ಈ ಕೃತ್ಯದ ವಿಡಿಯೋ ಸಿಸಿಟಿವಿಯಲ್ಲಿ ಸೇರಿಯಾಗಿದೆ.

ಇದನ್ನೂ ಓದಿ: ಇರಾನ್​​​​ ಹೊತ್ತಿ ಉರಿಯಲು ಈ ಹುಡುಗಿಯೇ ಕಾರಣ: 2024ರ ಈ ವಿಡಿಯೋ ನೆನಪಿದ್ಯಾ?

ಇಲ್ಲಿದೆ ನೋಡಿ ವಿಡಿಯೋ:

ಬಿಸಿನೀರು ಸುರಿದ ರಭಸಕ್ಕೆ ಮಗುವಿನ ಸೊಂಟದ ಕೆಳಭಾಗದ ಚರ್ಮ ಸಂಪೂರ್ಣವಾಗಿ ಸುಟ್ಟುಹೋಗಿದೆ. ಸುಮಾರು ಶೇ. 45ರಷ್ಟು ಸುಟ್ಟ ಗಾಯಗಳಾಗಿರುವ ಬಾಲಕನನ್ನು ನಾಗ್ಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಈ ವಿಡಿಯೋ ಮಗು ನೋವಿನಿಂದ ಕಿರುಚುತ್ತಾ ಓಡುತ್ತಿರುವ ದೃಶ್ಯ ಎಂತಹವರನ್ನೂ ಕಣ್ಣೀರು ಹಾಕಿಸುವಂತಿದೆ. ಘಟನೆಗೆ ಸಂಬಂಧಿಸಿದಂತೆ ಕೋರಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಜ್ಜಿ ಸಿಂಧು ಠಾಕ್ರೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಹಬ್ಬದ ದಿನವೇ ಅಜ್ಜಿಯ ಇಂತಹ ಅಮಾನವೀಯ ವರ್ತನೆ ಕಂಡ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Gold Rates: ಚಿನ್ನದ ಬೆಲೆ ಗುರುವಾರ ಮತ್ತೂ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 5th March 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮಾರ್ಚ್ 5: ಯುದ್ಧದ ನಡುವೆಯೂ ಚಿನ್ನದ ಬೆಲೆ (Gold Rates) ಮತ್ತೆ ಇಳಿದಿದೆ. ನಿನ್ನೆ ಬುಧವಾರ ಗ್ರಾಮ್​ಗೆ 500 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ ಇವತ್ತು ಗುರುವಾರ 90 ರೂ ತಗ್ಗಿದೆ. 15,000 ರೂ ಮಟ್ಟಕ್ಕಿಂತ ಕೆಳಗೆ ಬಂದಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಇದರ ಬೆಲೆ ಕಡಿಮೆಗೊಂಡಿದೆ. ಇದೇ ವೇಳೆ, ಬೆಳ್ಳಿ ಬೆಲೆ ಕುಸಿತ ಇವತ್ತು ಆಗಿಲ್ಲ. ನಿನ್ನೆಯ ಬೆಲೆಯೇ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,49,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,63,530 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,49,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 5ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,353 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,990 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,265 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,353 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,990 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,990 ರೂ
  • ಚೆನ್ನೈ: 15,120 ರೂ
  • ಮುಂಬೈ: 14,990 ರೂ
  • ದೆಹಲಿ: 15,005 ರೂ
  • ಕೋಲ್ಕತಾ: 14,990 ರೂ
  • ಕೇರಳ: 14,990 ರೂ
  • ಅಹ್ಮದಾಬಾದ್: 14,995 ರೂ
  • ಜೈಪುರ್: 15,005 ರೂ
  • ಲಕ್ನೋ: 15,005 ರೂ
  • ಭುವನೇಶ್ವರ್: 14,990 ರೂ

ಇದನ್ನೂ ಓದಿ: ಹಾರ್ಮುಜ್ ಮಾರ್ಗದಲ್ಲಿ ಚೀನಾಗೆ ಮಾತ್ರ ಅವಕಾಶ ಎಂದ ಇರಾನ್; ಭಾರತಕ್ಕೆ ನಾವು ತೈಲ ಕೊಡುತ್ತೇವೆ ಎಂದ ರಷ್ಯಾ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 623 ರಿಂಗಿಟ್ (14,466 ರುಪಾಯಿ)
  • ದುಬೈ: 573.50 ಡಿರಾಮ್ (14,297 ರುಪಾಯಿ)
  • ಅಮೆರಿಕ: 161 ಡಾಲರ್ (14,745 ರುಪಾಯಿ)
  • ಸಿಂಗಾಪುರ: 205.30 ಸಿಂಗಾಪುರ್ ಡಾಲರ್ (14,730 ರುಪಾಯಿ)
  • ಕತಾರ್: 570 ಕತಾರಿ ರಿಯಾಲ್ (14,313 ರೂ)
  • ಸೌದಿ ಅರೇಬಿಯಾ: 582 ಸೌದಿ ರಿಯಾಲ್ (14,198 ರುಪಾಯಿ)
  • ಓಮನ್: 61 ಒಮಾನಿ ರಿಯಾಲ್ (14,510 ರುಪಾಯಿ)
  • ಕುವೇತ್: 46.71 ಕುವೇತಿ ದಿನಾರ್ (13,970 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 285 ರೂ
  • ಚೆನ್ನೈ: 295 ರೂ
  • ಮುಂಬೈ: 285 ರೂ
  • ದೆಹಲಿ: 285 ರೂ
  • ಕೋಲ್ಕತಾ: 285 ರೂ
  • ಕೇರಳ: 295 ರೂ
  • ಅಹ್ಮದಾಬಾದ್: 285 ರೂ
  • ಜೈಪುರ್: 285 ರೂ
  • ಲಕ್ನೋ: 285 ರೂ
  • ಭುವನೇಶ್ವರ್: 295 ರೂ
  • ಪುಣೆ: 285

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಸಿನಿಮಾಗಳಿಗೆ ದೇವತೆಗಳ ಹೆಸರಿಡುವಂತಿಲ್ಲ? ಸೆನ್ಸಾರ್ ಅಘೋಷಿತ ನಿರ್ಧಾರ? – Kannada News | No God or Goddess name for Movies Censor new unwritten rule

ಭಾರತದಲ್ಲಿ (India) ದೇವರುಗಳ ಹೆಸರುಗಳನ್ನು ಮನುಷ್ಯರಿಗೆ, ಉದ್ಯಮಗಳಿಗೆ ಹೀಗೆ ಎಲ್ಲದಕ್ಕೂ ಇಡುವ ರೂಢಿ. ದೇವರುಗಳ ಹೆಸರುಗಳನ್ನು ಇರಿಸಿದರೆ ದೇವರ ಆಶೀರ್ವಾದ ಸಿಗುತ್ತದೆ ಎಂಬ ನಂಬಿಕೆ. ನಮ್ಮಲ್ಲಿ ಬಾರುಗಳಿಗೆ, ಕಸದ ಗಾಡಿಗಳಿಗೂ ದೇವರ ಹೆಸರುಗಳನ್ನು ಇರಿಸಲಾಗಿದೆ. ಆದರೆ ಇತ್ತೀಚೆಗೆ ಸಿನಿಮಾಗಳಿಗೆ ದೇವರ ಹೆಸರ ಇರಿಸಿದರೆ ಸೆನ್ಸಾರ್ ಮಂಡಳಿಯವರು ತಕರಾರು ತೆಗೆಯಲು ಆರಂಭಿಸಿದಂತಿದ್ದಾರೆ. ಇತ್ತೀಚೆಗಿನ ಕೆಲ ಸಿನಿಮಾಗಳಿಗೆ ಅವು ದೇವರುಗಳ ಹೆಸರೆಂಬ ಕಾರಣಕ್ಕೆ ಹೆಸರುಗಳನ್ನು ಬದಲಾವಣೆ ಮಾಡಿಸಲಾಗಿದೆ.

ವರಲಕ್ಷ್ಮಿ ಶರತ್​​ಕುಮಾರ್ ನಟನೆಯ ‘ಸರಸ್ವತಿ’ ಹೆಸರಿನ ನಾಳೆ ಬಿಡುಗಡೆ ಆಗಲಿದೆ. ಆದರೆ ಈ ಸಿನಿಮಾದ ಹೆಸರನ್ನು ಕಡ್ಡಾಯವಾಗಿ ಬದಲು ಮಾಡಲೇ ಬೇಕೆಂದು ಸೆನ್ಸಾರ್ ಮಂಡಳಿ ಪಟ್ಟು ಹಿಡಿದು, ಹೆಸರನ್ನು ‘ಎಸ್ ಸರಸ್ವತಿ’ ಎಂದು ಬದಲಾವಣೆ ಮಾಡಿಸಿದೆ. ಅಸಲಿಗೆ ಇದು ಸರಸ್ವತಿ ಹೆಸರಿನ ಸಾಮಾನ್ಯ ಮಹಿಳೆಯೊಬ್ಬಳ ಕತೆ. ಆದರೆ ಸೆನ್ಸಾರ್ ಮಂಡಳಿ ಅತಿ ಸೂಕ್ಷ್ಮತೆ ಪ್ರದರ್ಶಿಸಿ ಸಿನಿಮಾದ ಹೆಸರನ್ನು ಪದಲು ಮಾಡಿ, ತನ್ನ ಬುದ್ಧಿವಂತಿಕೆ ಪ್ರದರ್ಶಿಸಿದೆ.

ಇದನ್ನೂ ಓದಿ:‘ದಿ ಕೇರಳ ಸ್ಟೋರಿ 2’ ಸಿನಿಮಾದ ಶೀರ್ಷಿಕೆ ಬಗ್ಗೆ ತಕರಾರು; ರಾಜ್ಯದ ಹೆಸರು ಕೈಬಿಡಲು ಆಗ್ರಹ

ಇದು ಮೊದಲೇನೂ ಅಲ್ಲ ಈ ಹಿಂದೆ ‘ಹೇ ಭಗವಾನ್’ ಹೆಸರಿನ ಸಿನಿಮಾ ಒಂದು ಇತ್ತೀಚೆಗೆ ಬಿಡುಗಡೆ ಆಗಿತ್ತು. ಆ ಸಿನಿಮಾದ ಹೆಸರಿನಲ್ಲಿ ‘ಭಗವಾನ್’ ಹೆಸರನ್ನು ಸಹ ಸೆನ್ಸಾರ್ ಮಂಡಳಿ ಬದಲಾಯಿಸಿತು. ಸಿನಿಮಾದ ಹೆಸರನ್ನು ‘ಹೇ ಭಗವಂತ್’ ಎಂದು ಬದಲಾಯಿಸಿ ಬಿಡುಗಡೆ ಮಾಡಲಾಯ್ತು. ಒಂದೊಮ್ಮೆ ಸಿನಿಮಾದ ಕತೆಯು ದೇವರ ಕುರಿತಾಗಿಯೇ ಇದ್ದರೆ, ಅಥವಾ ದೇವರ ಭಕ್ತನ ಕುರಿತಾದ ಕತೆ ಇದ್ದರೆ ದೇವರು ಹೆಸರಿಟ್ಟುಕೊಳ್ಳುವುದು ಮಾತ್ರವಲ್ಲ, ಹೆಸರನ್ನು ತಿರುಚಿ ಬಳಸಿದರೂ ಸಹ ಸೆನ್ಸಾರ್ ಮಂಡಳಿ ಆಕ್ಷೇಪ ಎತ್ತುವುದಿಲ್ಲ. ‘ಹನುಮ್ಯಾನ್’ ಸಿನಿಮಾ ಇದಕ್ಕೆ ಉದಾಹರಣೆ.

ಸೆನ್ಸಾರ್ ಮಂಡಳಿ ಇತ್ತೀಚೆಗೆ ಅತಿಯಾದ ಸೂಕ್ಷ್ಮತೆ ಪ್ರದರ್ಶಿಸುತ್ತಿದೆ ಅದರಲ್ಲೂ ಧರ್ಮದ ವಿಷಯಗಳಲ್ಲಿ ಅತಿಯಾದ ಸೂಕ್ಷ್ಮತೆ ಪ್ರದರ್ಶಿಸುತ್ತಿದೆ. ಆದರೆ ಧರ್ಮಗಳ ನಡುವೆ ದ್ವೇಷ ಹುಟ್ಟಿಸುವ ಸಿನಿಮಾಗಳಿಗೆ ಸುಲಭವಾಗಿ ಪ್ರಮಾಣ ಪತ್ರಗಳು ಸಿಗುತ್ತಿವೆ. ಆದರೆ ಅಧಿಕಾರವನ್ನು ಪ್ರಶ್ನಿಸುವ, ವ್ಯವಸ್ಥೆಯನ್ನು ಟೀಕೆ ಮಾಡುವ ಸಿನಿಮಾಗಳಿಗೆ ಸಮಸ್ಯೆ ಎದುರಾಗುತ್ತಿವೆ. ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾಕ್ಕೂ ಸಮಸ್ಯೆ ಎದುರಾಗಿದ್ದು, ಅದು ರಾಜಕೀಯ ಪ್ರೇರಿತ ಎಂಬುದು ಸ್ಪಷ್ಟವಾಗಿ ಗೊತ್ತಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

VIDEO: ಅದ್ಭುತ ಕ್ಯಾಚ್ ಹಿಡಿದ ಪ್ರೇಕ್ಷಕನಿಗೆ ಸಿಕ್ತು 20 ಸಾವಿರ ರೂ..! – Kannada News | Unbelievable catch in tape ball cricket

ಪಂದ್ಯ ವೀಕ್ಷಿಸಲು ಹೋಗಿ ಅದ್ಭುತ ಕ್ಯಾಚ್ ಹಿಡಿದು ಪ್ರೇಕ್ಷಕನೋರ್ವ 20 ಸಾವಿರ ರೂ. ಬಹುಮಾನ ಗಿಟ್ಟಿಸಿಕೊಂಡಿದ್ದಾರೆ. ಇಂತಹದೊಂದು ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಗಿದ್ದು ಪಾಕಿಸ್ತಾನದ ಟೇಪ್​ ​​ಬಾಲ್ ಚಾಂಪಿಯನ್​ಶಿಪ್ ಟೂರ್ನಿ. ಈ ಪಂದ್ಯದಲ್ಲಿ ಮುಲ್ತಾನ್ ಹಾಗೂ ಸಿಯಾಕೋಟ್ ತಂಡಗಳು ಮುಖಾಮುಖಿಯಾಗಿದ್ದವು.

ಮೊದಲು ಬ್ಯಾಟ್ ಮಾಡಿದ ಮುಲ್ತಾನ್ ಪರ ವಿಕ್ಕಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಪ್ರದರ್ಶನದೊಂದಿಗೆ ಬಾರಿಸಿದ ಸಿಕ್ಸರ್​ವೊಂದು ಪ್ರೇಕ್ಷಕರಿದ್ದ ಗ್ಯಾಲರಿಗೆ ಸಾಗಿತ್ತು. ಈ ವೇಳೆ ವ್ಯಕ್ತಿಯೋರ್ವ ಓಡಿ ಬಂದು ಚೆಂಡು ಹಿಡಿದಿದ್ದಾರೆ.

ಓಡಿ ಬಂದ ರಭಸಕ್ಕೆ ನಿಯಂತ್ರಣ ತಪ್ಪಿದರೂ ಗ್ಯಾಲರಿ ವಿಭಜಿಸಲು ಹಾಕಿದ್ದ ಮರಗಳ ಲೈನ್​ ನಡುವೆ ಹಾರಿದ್ದಾರೆ. ಇದಾಗ್ಯೂ ಚೆಂಡನ್ನು ಕೈ ಬಿಟ್ಟಿರಲಿಲ್ಲ. ಈ ಅದ್ಭುತ ಕ್ಯಾಚ್ ನೋಡಿ ಪಾಕಿಸ್ತಾನ್ ಟೇಪ್ ​ಬಾಲ್ ಚಾಂಪಿಯನ್​ಶಿಪ್ ಆಯೋಜಕರು ಆತನಿಗೆ 20 ಸಾವಿರ ರೂ. (PKR) ಬಹುಮಾನ ನೀಡಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಲ್ತಾನ್ ತಂಡವು 6 ಓವರ್​ಗಳಲ್ಲಿ 127 ರನ್ ಬಾರಿಸಿದ್ದರು. ಈ ಗುರಿಯನ್ನು ಬೆನ್ನತ್ತಿದ ಸಿಯಾಲ್​ಕೋಟ್ ತಂಡ 6 ಓವರ್​ಗಳಲ್ಲಿ ಕೇವಲ 70 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಈ ಮೂಲಕ ಮುಲ್ತಾನ್ 57 ರನ್​ಗಳ ಜಯ ಸಾಧಿಸಿದೆ.

Source link

Karnataka Budget 2026: ದಾಖಲೆಯ 17ನೇ ಬಜೆಟ್​ಗೆ ಸಿದ್ದರಾಮಯ್ಯ ಸಿದ್ಧ, ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ – Kannada News | Karnataka Budget 2026: CM Siddaramaiah Set to Present Record 17th Budget, Key Facts You Should Know

ಬೆಂಗಳೂರು, ಮಾರ್ಚ್ 5: ಕರ್ನಾಟಕದ ರಾಜಕೀಯ ಮತ್ತು ಆರ್ಥಿಕ ವಲಯದ ಗಮನ ಸೆಳೆದಿರುವ 2026–27ನೇ ಸಾಲಿನ ರಾಜ್ಯ ಬಜೆಟ್‌ (Karnataka Budget 2026) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಲಿದ್ದಾರೆ. ಇದು ಸಿದ್ದರಾಮಯ್ಯ ಅವರು ಮಂಡಿಸಲಿರುವ 17ನೇ ಬಜೆಟ್ ಆಗಿದ್ದು, ರಾಜ್ಯದ ಇತಿಹಾಸದಲ್ಲೇ ಅತಿಹೆಚ್ಚು ಬಾರಿ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಎಂಬ ದಾಖಲೆಯನ್ನು ಅವರು ನಿರ್ಮಿಸಲಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಅತೀ ಹೆಚ್ಚು ಕಾಲ ಮುಖ್ಯಮಂತ್ರಿಯಾದ ದಾಖಲೆಗೆ ಜನವರಿಯಲ್ಲಿ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ. 7 ವರ್ಷ 239 ದಿನಗಳ ಕಾಲ ಸಿಎಂ ಆಗಿದ್ದ ದೇವರಾಜ ಅರಸು ದಾಖಲೆಯನ್ನು ಸಿದ್ದರಾಮಯ್ಯ ಹಿಂದಿಕ್ಕಿದ್ದಾರೆ. ಇದೀಗ ಬಜೆಟ್ ಮಂಡನೆಯಲ್ಲಿಯೂ ದಾಖಲೆ ನಿರ್ಮಿಸಲಿದ್ದಾರೆ.

ಬಜೆಟ್ ಮಂಡನೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಇಲಾಖೆಗಳೊಂದಿಗೆ ಸಭೆ ನಡೆಸಿ ಆಯವ್ಯಯದ ಅಂತಿಮ ರೂಪುರೇಷೆಗಳನ್ನು ಸಿದ್ಧಪಡಿಸಿದ್ದಾರೆ. ಈ ಬಾರಿ ಬಜೆಟ್‌ನಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ ಆದ್ಯತೆ ನೀಡುವುದರ ಜೊತೆಗೆ, ರಾಜ್ಯದ ಆರ್ಥಿಕ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ಕೆಲವು ಯೋಜನೆಗಳಲ್ಲಿ ಬದಲಾವಣೆಗಳು ಆಗಬಹುದೇ ಎಂಬ ಕುತೂಹಲವೂ ಮೂಡಿದೆ.

ಮೂಲಸೌಕರ್ಯ ಅಭಿವೃದ್ಧಿ, ಶಿಕ್ಷಣ, ಕೃಷಿ, ಆರೋಗ್ಯ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ, ರಾಜ್ಯದ ಜನತೆ ಮತ್ತು ವಿವಿಧ ವಲಯಗಳು ಈ ಬಜೆಟ್‌ ಮೇಲೆ ದೊಡ್ಡ ನಿರೀಕ್ಷೆ ಇಟ್ಟುಕೊಂಡಿವೆ.

ಕರ್ನಾಟಕ ಬಜೆಟ್ ಅಧಿವೇಶನ ವೇಳಾಪಟ್ಟಿ

ಕರ್ನಾಟಕ ಬಜೆಟ್ ಅಧಿವೇಶನವು ಮಾರ್ಚ್ 6ರಿಂದ ಮಾರ್ಚ್ 27ರವರೆಗೆ ನಡೆಯಲಿದ್ದು, ಒಟ್ಟು 14 ದಿನಗಳ ಕಾಲ ವಿಧಾನಸಭೆ ಮತ್ತು ವಿಧಾನ ಪರಿಷತ್‌ನಲ್ಲಿ ಚರ್ಚೆಗಳು ನಡೆಯಲಿವೆ. ಬಜೆಟ್‌ ಮಂಡನೆಯ ಬಳಿಕ ವಿವಿಧ ಇಲಾಖೆಗಳ ಅನುದಾನಗಳ ಕುರಿತು ಚರ್ಚೆ ನಡೆಯಲಿದೆ.

ಕರ್ನಾಟಕದಲ್ಲಿ ಈವರೆಗೆ ಎಷ್ಟು ಬಜೆಟ್ ಮಂಡನೆಯಾಗಿದೆ?

ಮೂಲಗಳ ಪ್ರಕಾರ, ಕರ್ನಾಟಕದಲ್ಲಿ 1956 ರ ನಂತರ ಇದುವರೆಗೆ ಚುನಾವಣಾ ವರ್ಷಗಳ ಮಧ್ಯಂತರ ಬಜೆಟ್‌ಗಳನ್ನು ಹೊರತುಪಡಿಸಿ 70ಕ್ಕೂ ಹೆಚ್ಚು ವಾರ್ಷಿಕ ಬಜೆಟ್‌ಗಳು ಮಂಡಿಸಲ್ಪಟ್ಟಿವೆ. ರಾಜ್ಯದ ಆರ್ಥಿಕ ವ್ಯಾಪ್ತಿ ವರ್ಷದಿಂದ ವರ್ಷಕ್ಕೆ ವಿಸ್ತರಿಸಿಕೊಂಡಿದ್ದು, 2025–26ನೇ ಹಣಕಾಸು ವರ್ಷದಲ್ಲಿ ಬಜೆಟ್ ಗಾತ್ರ ಮೊದಲ ಬಾರಿಗೆ 4 ಲಕ್ಷ ಕೋಟಿ ರೂ. ಗಡಿ ದಾಟಿತ್ತು.

ಅತಿಹೆಚ್ಚು ಬಜೆಟ್ ಮಂಡಿಸಿದ ಮುಖ್ಯಮಂತ್ರಿಗಳು

ಕರ್ನಾಟಕದ ಇತಿಹಾಸದಲ್ಲಿ ಅತಿಹೆಚ್ಚು ಬಾರಿ ಬಜೆಟ್ ಮಂಡಿಸಿದ ಮುಖ್ಯಮಂತ್ರಿಗಳ ಪಟ್ಟಿ ಹೀಗಿದೆ;

  • ಸಿದ್ದರಾಮಯ್ಯ – 17 (ಮಾರ್ಚ್ 6ರ ಬಜೆಟ್ ಮಂಡನೆ ನಂತರ)
  • ರಾಮಕೃಷ್ಣ ಹೆಗಡೆ – 13
  • ಬಿಎಸ್ ಯಡಿಯೂರಪ್ಪ – 8

ಒಟ್ಟಾರೆಯಾಗಿ, ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್ ರಾಜ್ಯದ ಆರ್ಥಿಕ ಸ್ಥಿತಿ, ಅಭಿವೃದ್ಧಿ ಯೋಜನೆಗಳು ಹಾಗೂ ಜನಪರ ಕಾರ್ಯಕ್ರಮಗಳ ದಿಕ್ಕನ್ನು ನಿರ್ಧರಿಸುವ ಮಹತ್ವದ ಆಯವ್ಯಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಹೀಗಾಗಿ, ಸದ್ಯ ಎಲ್ಲರ ಚಿತ್ತ ಬಜೆಟ್​​ನತ್ತ ನೆಟ್ಟಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Astrological Meaning: ದೇವಸ್ಥಾನಕ್ಕೆ ಹೋದಾಗ ಅಲ್ಲಿ ಚಪ್ಪಲಿ ಕಳೆದುಹೋಗುವುದು ಶುಭವೇ? ಜ್ಯೋತಿಷ್ಯ ಶಾಸ್ತ್ರ ಹೇಳುವುದೇನು? – Kannada News | Temple Shoes Lost? Uncover the Astrological and Spiritual Meaning Behind It

ದೇವಸ್ಥಾನಕ್ಕೆ ಹೋದಾಗ ಅಲ್ಲಿ ಚಪ್ಪಲಿ ಕಳೆದು ಹೋಗಿರುವುದು ನಿಮಗೂ ಅನುಭವವಾಗಿರಬಹುದು. ಈ ಸಮಸ್ಯೆಯೇ ಬೇಡವೆಂದು ದುಡ್ಡು ಕೊಟ್ಟು ಚಪ್ಪಲಿಯನ್ನು ದೇವಸ್ಥಾನದ ಹೊರಗೆ ಸುರಕ್ಷಿತ ಜಾಗದಲ್ಲಿ ಇಟ್ಟು ಹೋಗುವುದುಂಟು. ಆದರೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ದೇವಾಲಯದಂತಹ ಪವಿತ್ರ ಸ್ಥಳದಲ್ಲಿ ಚಪ್ಪಲಿ ಕಳೆದುಹೋಗುವುದು ಶುಭ ಸಂಕೇತವೆಂದು ನಂಬಲಾಗಿದೆ. ಇದಲ್ಲದೇ ಇದರ ಹಿಂದೆ ಕೆಲವು ಆಧ್ಯಾತ್ಮಿಕ ನಂಬಿಕೆಗಳಿವೆ.

ಶನಿ ಗ್ರಹದೊಂದಿಗೆ ಸಂಬಂಧ:

ಜ್ಯೋತಿಷ್ಯಶಾಸ್ತ್ರದ ಪ್ರಕಾರ ಪಾದರಕ್ಷೆಗಳು ಶನಿ ಗ್ರಹವನ್ನು ಸಂಕೇತಿಸುತ್ತವೆ. ಜಾತಕದಲ್ಲಿ ಶನಿ ದೋಷ ಇದ್ದರೆ ಅಥವಾ ಶನಿಯ ಪ್ರಭಾವ ಹೆಚ್ಚು ಇದ್ದರೆ, ದೇವಾಲಯದಲ್ಲಿ ಚಪ್ಪಲಿಗಳು ಕಳೆದುಹೋದರೆ ಶನಿಯಿಂದ ಉಂಟಾಗುವ ತೊಂದರೆಗಳು ಕಡಿಮೆಯಾಗುತ್ತವೆ ಎಂಬ ನಂಬಿಕೆ ಇದೆ. ಅಂದರೆ, ಶನಿಯ ನಕಾರಾತ್ಮಕ ಪರಿಣಾಮಗಳು ಪಾದರಕ್ಷೆಗಳ ಜೊತೆಗೆ ದೂರವಾಗುತ್ತವೆ ಎಂದು ಹೇಳಲಾಗುತ್ತದೆ.

ನಕಾರಾತ್ಮಕ ಶಕ್ತಿಯಿಂದ ಮುಕ್ತಿ:

ದಿನವಿಡೀ ಹೊರಗೆ ಓಡಾಡುವಾಗ ಪಾದರಕ್ಷೆಗಳು ಧೂಳು, ಕೊಳಕು ಮತ್ತು ನಕಾರಾತ್ಮಕ ಶಕ್ತಿಗಳನ್ನು ಹೊತ್ತುಕೊಂಡಿರುತ್ತವೆ ಎಂಬ ನಂಬಿಕೆ ಇದೆ. ದೇವಾಲಯದಂತಹ ಪವಿತ್ರ ಸ್ಥಳದಲ್ಲಿ ಅವುಗಳು ಕಳೆದುಹೋಗುವುದರಿಂದ ಆ ನಕಾರಾತ್ಮಕತೆ ಅಲ್ಲಿಯೇ ಉಳಿದು ಹೋಗುತ್ತದೆ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಈ ಒಂದು ವಸ್ತುವನ್ನು ಎಂದಿಗೂ ಯಾರಿಗೂ ಉಡುಗೊರೆಯಾಗಿ ನೀಡಬೇಡಿ; ಅಪಾಯ ತಪ್ಪಿದ್ದಲ್ಲ!

ಶನಿವಾರದಂದು ನಡೆದರೆ ವಿಶೇಷವೆಂದು ನಂಬಿಕೆ:

ವಿಶೇಷವಾಗಿ ಶನಿವಾರದಂದು ದೇವಾಲಯದಲ್ಲಿ ಚಪ್ಪಲಿಗಳು ಕಳೆದುಹೋದರೆ, ಶನಿಯ ಕೋಪ ಕಡಿಮೆಯಾಗುತ್ತಿದೆ ಎಂಬ ಸಂಕೇತವೆಂದು ಹೇಳಲಾಗುತ್ತದೆ. ಅದಕ್ಕಾಗಿ ಕೆಲ ಕಡೆಗಳಲ್ಲಿ ಹಳೆಯ ಪಾದರಕ್ಷೆಗಳನ್ನು ಶನಿ ದೇವಾಲಯಗಳ ಬಳಿ ಬಿಡುವ ಪದ್ಧತಿಯೂ ಇದೆ.

ಹೊಸ ಆರಂಭದ ಸಂಕೇತ:

ಚಪ್ಪಲಿಗಳು ಕಳೆದುಹೋದರೆ ಕೆಲವೊಮ್ಮೆ ಬರಿ ಪಾದಗಳಲ್ಲಿ ಮನೆಗೆ ಹೋಗಬೇಕಾಗುತ್ತದೆ. ಇದನ್ನು ಕೆಲವರು ಹಳೆಯ ದುಃಖ ಅಥವಾ ದುರಾದೃಷ್ಟ ದೂರಾಗಿ, ಹೊಸ ಅದೃಷ್ಟ ಮತ್ತು ಹೊಸ ಆರಂಭ ನಮ್ಮ ಜೀವನಕ್ಕೆ ಬರುತ್ತಿದೆ ಎಂಬ ಸಂಕೇತವಾಗಿ ನೋಡುತ್ತಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಐಪಿಎಲ್​​ಗಾಗಿ ಕಾಯುತ್ತಿದ್ದಾರೆ ರಾಮ್ ಚರಣ್, ಕಾರಣ ಏನು ಗೊತ್ತೆ? – Kannada News | Ram Charan waiting for IPL 2026 to promote his upcoming Peddi movie

ಆರ್​​ಆರ್​​ಆರ್ ಸಿನಿಮಾದ ಬಳಿಕ ರಾಮ್ ಚರಣ್ (Ram Charan) ಎರಡು ಸಿನಿಮಾಗಳಲ್ಲಿ ನಟಿಸಿದ್ದು, ಎರಡೂ ಸಿನಿಮಾ ಅಟ್ಟರ್ ಫ್ಲಾಫ್ ಆಗಿವೆ. ಆರ್​​ಆರ್​​ಆರ್ ಬಳಿಕ ‘ಆಚಾರ್ಯ’ ಮತ್ತು ‘ಗೇಮ್ ಚೇಂಜರ್’ ಸಿನಿಮಾಗಳಲ್ಲಿ ರಾಮ್ ಚರಣ್ ನಟಿಸಿದ್ದು, ಎರಡೂ ಸಿನಿಮಾಗಳು ಅಟ್ಟರ್ ಫ್ಲಾಫ್ ಆಗಿವೆ. ಇದೀಗ ಹೊಸ ಸಿನಿಮಾದ ಬಿಡುಗಡೆಗೆ ರಾಮ್ ಚರಣ್ ರೆಡಿ ಆಗುತ್ತಿದ್ದು, ಸಿನಿಮಾದ ಬಗ್ಗೆ ಭಾರಿ ನಿರೀಕ್ಷೆಗಳನ್ನು ಇರಿಸಿಕೊಂಡಿದ್ದಾರೆ. ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಚಾಲ್ತಿಯಲ್ಲಿದೆ, ಆದರೆ ರಾಮ್ ಚರಣ್ ಐಪಿಎಲ್ 2026ಗಾಗಿ ಕಾತರದಿಂದ ಎದುರು ನೋಡುತ್ತಿದ್ದಾರೆ.

ರಾಮ್ ಚರಣ್ ನಟಿಸಿರುವ ‘ಪೆದ್ದಿ’ ಸಿನಿಮಾ ಕ್ರಿಕೆಟ್ ಆಟದ ಕುರಿತಾದ ಕತೆಯನ್ನು ಹೊಂದಿದ್ದು, ಸಿನಿಮಾನಲ್ಲಿ ನಾಯಕ ರಾಮ್ ಚರಣ್ ಹಳ್ಳಿಯೊಂದರ ಕ್ರಿಕೆಟ್ ಆಟಗಾರನ ಪಾತ್ರದಲ್ಲಿ ನಟಿಸಿದ್ದಾರೆ. ಹಾಗಾಗಿಯೇ ಸಿನಿಮಾದ ಪ್ರಚಾರವನ್ನು ಭಾರತದ ಕ್ರಿಕೆಟ್ ಹಬ್ಬವೇ ಆಗಿರುವ ಐಪಿಎಲ್​​ನಲ್ಲಿ ಮಾಡಲು ಚಿತ್ರತಂಡ ನಿರ್ಧರಿಸಿದ್ದು, ಇದೇ ಐಪಿಎಲ್ ಅನ್ನು ಗುರಿಯಾಗಿಸಿಕೊಂಡು ಹಲವು ಪ್ರಚಾರದ ಯೋಜನೆಗಳನ್ನು ಚಿತ್ರತಂಡ ಮಾಡಿಕೊಂಡಿದೆ.

ಮೂಲಗಳ ಪ್ರಕಾರ ಐಪಿಎಲ್​​ನ ಮುಖ್ಯ ಇವೆಂಟ್​​ನಲ್ಲಿಯೇ ‘ಪೆದ್ದಿ’ ಸಿನಿಮಾದ ಟ್ರೈಲರ್ ಬಿಡುಗಡೆ ಮಾಡುವ ಯೋಜನೆ ಇದೆಯಂತೆ. ಅದರ ಜೊತೆಗೆ ರಾಮ್ ಚರಣ್ ಸಹ ಹಲವು ಐಪಿಎಲ್ ಪಂದ್ಯಗಳಿಗೆ ತೆರಳಿ ಅಲ್ಲಿಂದಲೇ ಸಿನಿಮಾದ ಪ್ರಚಾರ ಮಾಡಲಿದ್ದಾರೆ. ಹೈದರಾಬಾದ್ ತಂಡದ ಜೊತೆಗೆ ‘ಪೆದ್ದಿ’ ತಂಡ ಪ್ರಚಾರದ ಒಪ್ಪಂದ ಮಾಡಿಕೊಳ್ಳಲಿದೆ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ. ಒಟ್ಟಾರೆ ಐಪಿಎಲ್ ಅನ್ನು ಸಂಪೂರ್ಣವಾಗಿ ತಮ್ಮ ಸಿನಿಮಾ ಪ್ರಚಾರಕ್ಕೆ ಬಳಸಿಕೊಳ್ಳಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಇದನ್ನೂ ಓದಿ:‘ಪೆದ್ದಿ’ ಚಿತ್ರದ ‘ಹೋಯ್ ಹೋಯ್ ವೀರ’ ಹಾಡು ರಿಲೀಸ್; ರಾಮ್ ಚರಣ್ ಸ್ಟೆಪ್ಸ್ ಸೂಪರ್

‘ಪೆದ್ದಿ’ ಸಿನಿಮಾವು ಕ್ರಿಕೆಟಿಗನೊಬ್ಬನ ಕತೆಯನ್ನು ಒಳಗೊಂಡಿದೆ. ಕ್ರಿಕೆಟ್ ಅನ್ನು ಅತಿಯಾಗಿ ಪ್ರೀತಿಸುವ ಹಳ್ಳಿ ಯುವಕನೊಬ್ಬನ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾನಲ್ಲಿ ಜಾನ್ಹವಿ ಕಪೂರ್ ನಾಯಕಿ. ಕನ್ನಡದ ಶಿವಣ್ಣ ಸಹ ಈ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಸಿನಿಮಾ ಅನ್ನು ಬುಚ್ಚಿಬಾಬು ಸನಾ ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ ಇವರು ‘ಉಪ್ಪೆನ’ ಸಿನಿಮಾ ನಿರ್ದೇಶಿಸಿದ್ದರು. ಸಿನಿಮಾಕ್ಕೆ ಮೈತ್ರಿ ಮೂವಿ ಮೇಕರ್ಸ್ ಬಂಡವಾಳ ಹೂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

‘ಇದು ನಮ್ಮ ದೌರ್ಭಾಗ್ಯ’; ನಟಿಯರನ್ನು ಅಸಭ್ಯ ಕೋನಗಳಲ್ಲಿ ತೋರಿಸಿದ ಬಗ್ಗೆ ಶಿವಣ್ಣ ಬೇಸರ – Kannada News | Kannada Actresses Objectified: Shivanna’s Outrage and Industry Call for Respect, Dignity

ಸಿನಿಮಾ ಈವೆಂಟ್​​​ಗಳಿಗೆ ಬರುವ ಕೆಲವು ಪಾಪರಾಜಿಗಳು ನಟಿಯರನ್ನು ಅಸಭ್ಯ ಕೋನದಿಂದ ಚಿತ್ರೀಕರಿಸಿ ಅದನ್ನು ಪೋಸ್ಟ್ ಮಾಡುತ್ತಿರುವ ಬಗ್ಗೆ ವಿರೋಧದ ಅಲೆ ಎದ್ದಿದೆ. ಅನೇಕ ನಟಿಯರು ಈ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ. ನಟಿ ಸಪ್ತಮಿ ಗೌಡ (Saptami Gowda) ಅವರು ಈ ಬಗ್ಗೆ ಮೊದಲು ಪ್ರಶ್ನೆ ಮಾಡಿದ್ದರು. ಆ ಬಳಿಕ ರಮ್ಯಾ ಸೇರಿದಂತೆ ಅನೇಕರು ಅವರಿಗೆ ಬೆಂಬಲ ಸೂಚಿಸಿದರು. ಈಗ ಶಿವರಾಜ್​​ಕುಮಾರ್ ಕೂಡ ಈ ಆಂದೋಲನದಲ್ಲಿ ಭಾಗಿ ಆಗಿದ್ದಾರೆ.

ಸಿನಿಮಾ ಈವೆಂಟ್​​​​ಗಳನ್ನು ಕವರ್ ಮಾಡೋಕೆ ಬರುವ ಕೆಲವರು ಅಸಭ್ಯ ರೀತಿಯಲ್ಲಿ ನಟಿಯರ ವಿಡಿಯೋ ಹಾಗೂ ಫೋಟೋ ತೆಗೆದಿದ್ದಾರೆ. ಅದು ಸಾಮಾನ್ಯ ಎಂಬ ರೀತಿಯಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಕೆಲಸ ಆಗಿದೆ. ನಟಿಯರನ್ನು ಕೆಟ್ಟ ರೀತಿಯಲ್ಲಿ ತೋರಿಸಿ ವೀವ್ಸ್ ಪಡೆದುಕೊಳ್ಳುತ್ತಿರುವುದಕ್ಕೆ ಸಪ್ತಮಿ ಗೌಡ, ರಮ್ಯಾ ಮೊದಲಾದವರು ಅಸಮಾಧಾನ ಹೊರಹಾಕಿದ್ದರು. ಕನ್ನಡ ಚಿತ್ರರಂಗದಲ್ಲಿ ಇದು ಆಂದೋಲನವಾಗಿ ಬದಲಾಯಿತು. ಇದಕ್ಕೆ ಶಿವಣ್ಣ ಬೆಂಬಲ ಸೂಚಿಸಿದ್ದಾರೆ.

‘ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ. ದಯವಿಟ್ಟು ಆತ್ಮಸಾಕ್ಷಿ ಇಟ್ಟುಕೊಂಡು ಕೆಲಸ ಮಾಡಿ. ಹೆಣ್ಣು ಮಕ್ಕಳ ಗೌರವಕ್ಕೆ ಚ್ಯುತಿ ತರಬೇಡಿ’ ಎಂದು ಶಿವರಾಜ್​​ಕುಮಾರ್ ಅವರು ಕೋರಿಕೊಂಡಿದ್ದಾರೆ.

ನಟಿಯರು ಹೇಳಿದ್ದು ಏನು?

‘ಚಿತ್ರರಂಗದಲ್ಲಿರುವ ಮಹಿಳೆಯರಾಗಿ, ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ ವಿಡಿಯೋಗಳು ಮತ್ತು ಫೋಟೋಗಳನ್ನು ಅಸಭ್ಯ ಕೋನಗಳಿಂದ ಚಿತ್ರೀಕರಿಸಿ, ನಮ್ಮ ಕಲೆಯಿಗಿಂತ ನಮ್ಮ ದೇಹದ ಮೇಲೆ ಅನಾವಶ್ಯಕವಾಗಿ ಜೂಮ್‌ ಮಾಡಿ ಪ್ರಸಾರ ಮಾಡುವ ಘಟನೆಗಳು ಪುನಃ ಪುನಃ ನಡೆಯುತ್ತಿವೆ’ ಎಂದು ನಟಿಯರು ಹೇಳಿದ್ದಾರೆ.

ಇದನ್ನೂ ಓದಿ: ಅಸಭ್ಯವಾಗಿ ನಟಿಯರ ಫೋಟೋ, ವಿಡಿಯೋ ತೆಗೆದಿದ್ದಕ್ಕೆ ಕನ್ನಡ ಚಿತ್ರರಂಗ ಗರಂ

‘ಇಂತಹ ವರ್ತನೆ, ಕೆಲವರಿಂದ ನಡೆಯುತ್ತಿರುವುದಾದರೂ ಅದು ಅಸಭ್ಯ, ಅವಮಾನಕಾರಿ ಮತ್ತು ಸಂಪೂರ್ಣವಾಗಿ ಅಸ್ವೀಕಾರಾರ್ಹವಾಗಿದೆ. ನಾವು ಇಲ್ಲಿ ನಮ್ಮ ಕಲೆಗಾಗಿ ಬಂದಿದ್ದೇವೆ. ನಾವು ಇಲ್ಲಿ ನಮ್ಮ ಸಿನಿಮಾಕ್ಕಾಗಿ ಬಂದಿದ್ದೇವೆ. ಉದ್ದೇಶಪೂರ್ವಕವಾಗಿ ಜೂಮ್‌ ಮಾಡುವುದು ಮತ್ತು ಅಸಭ್ಯ ಕೋನಗಳಿಂದ ಬಳಸುವುದು ನಮ್ಮ ಗೌರವಕ್ಕೆ ಸ್ಪಷ್ಟ ಧಕ್ಕೆ. ಇದನ್ನು ಸಾಮಾನ್ಯವೆಂದು ಸ್ವೀಕರಿಸುವುದಿಲ್ಲ, ಸಹಿಸುವುದಿಲ್ಲ’ ಎಂದು ಪೋಸ್ಟ್ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

‘ನಾನು ಸುಳ್ಳು ಆರೋಪ ಮಾಡಿದ್ದರೆ ಇಷ್ಟೆಲ್ಲಾ ಕ್ರಮ ಯಾಕೆ?’: ಗಿರೀಶ್ ಮಟ್ಟಣ್ಣನವರ್ ವಿರುದ್ಧ ಸ್ನೇಹಮಯಿ ಕೃಷ್ಣ ಕಿಡಿ – Kannada News | Snehamayi Krishna Challenges Girish Mattannavar on Soujanya Case through Facebook Post

‘ನಾನು ಸುಳ್ಳು ಆರೋಪ ಮಾಡಿದ್ದರೆ ಇಷ್ಟೆಲ್ಲಾ ಕ್ರಮ ಯಾಕೆ?’: ಗಿರೀಶ್ ಮಟ್ಟಣ್ಣನವರ್ ವಿರುದ್ಧ ಸ್ನೇಹಮಯಿ ಕೃಷ್ಣ ಕಿಡಿ

ಮೈಸೂರು, ಮಾರ್ಚ್​ 05: ಶಾಲಿನಿ ರಜನೀಶ್ ಮೇಲೆ ಲಂಚದ ಆರೋಪ ಮಾಡಿ ಪೇಚೆಗೆ ಸಿಲುಕಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪೋಸ್ಟ್ ಈಗ ಚರ್ಚೆಗೆ ಗ್ರಾಸವಾಗಿದೆ. ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಕಿಡಿಕಾರಿರುವ ಕೃಷ್ಣ, ನಾನು ಯಾವಾಗಲೂ ದಾಖಲೆಗಳ ಆಧಾರದಲ್ಲೇ ವಿಷಯಗಳನ್ನು ಬಹಿರಂಗಪಡಿಸುತ್ತೇನೆ. ಆದ್ದರಿಂದಲೇ ಹಲವು ಪ್ರಕರಣಗಳಲ್ಲಿ ಇಷ್ಟೆಲ್ಲಾ ಕ್ರಮ ಕೈಗೊಂಡಿರುವುದು ಎಂದಿದ್ದಾರೆ.

ಗಿರೀಶ್ ಮಾಡಿದ್ದು ಸರಿಯಲ್ಲ ಎಂದ ಸ್ನೇಹಮಯಿ

ತಮ್ಮ ಪೋಸ್ಟ್‌ನಲ್ಲಿ ಅವರು ಹೇಳಿರುವಂತೆ, ಶಾಲಿನಿ ರಜನೀಶ್ ಅವರ ಹೆಸರು ಉಲ್ಲೇಖಿಸಿದ ಬಗ್ಗೆ ನಾನು ಈಗಾಗಲೇ ಕ್ಷಮೆ ಕೇಳಿದ್ದೇನೆ. ಆದರೆ ಅದನ್ನೇ ಆಧಾರವಾಗಿಟ್ಟುಕೊಂಡು ನಾನು ಯಾವಾಗಲೂ ಯಾವುದೇ ಆಧಾರವಿಲ್ಲದೆ ಸುಳ್ಳು ಆರೋಪ ಮಾಡುತ್ತೇನೆ ಎಂದು ಹೇಳಲಾಗುತ್ತಿದೆ. ಅದರಲ್ಲೂ ಸೌಜನ್ಯ ಪ್ರಕರಣದ ಪರ ಹೋರಾಟಗಾರ ಎಂದು ಹೇಳಿಕೊಳ್ಳುವ ಗಿರೀಶ್ ಮಟ್ಟಣ್ಣನವರ್ ಈ ಬಗ್ಗೆ ವಿಡಿಯೋ ಬಿಡುಗಡೆ ಮಾಡಿರುವುದು ಸರಿಯಲ್ಲ ಎಂದು ಗುಡುಗಿದ್ದಾರೆ.

ನಾನು ಯಾವುದೇ ದಾಖಲೆಗಳಿಲ್ಲದೆ ಆರೋಪ ಮಾಡುತ್ತಿದ್ದರೆ, ನಾನು ಮೊಕದ್ದಮೆ ದಾಖಲಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ಹೆಸರಿನಲ್ಲಿ ಪಡೆದಿದ್ದ ಸುಮಾರು 60 ಕೋಟಿ ರೂಪಾಯಿ ಮೌಲ್ಯದ 14 ನಿವೇಶನಗಳನ್ನು ಏಕೆ ವಾಪಸ್ ಮಾಡಿದರು? ಎಂದು ಕೃಷ್ಣ ಪ್ರಶ್ನಿಸಿದ್ದಾರೆ. ಜಾರಿ ನಿರ್ದೇಶನಾಲಯ (ED) ಇದುವರೆಗೆ ಸುಮಾರು 460 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿರುವುದರ ಜೊತೆಗೆ ಮುಡಾದ ಹಿಂದಿನ ಆಯುಕ್ತರಾದ ಜಿ.ಟಿ. ದಿನೇಶ್ ಕುಮಾರ್ ಸುಮಾರು 70 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವುದನ್ನೂ ತಮ್ಮ ಪೋಸ್ಟ್​ನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ ಸ್ನೇಹಮಯಿ ಕೃಷ್ಣ ದಿಢೀರ್ ಬಂಧನದಿಂದ ಹಲವು ಅನುಮಾನ: ಕೋರ್ಟ್​ಗೆ ಆಡಿಯೋ ಸಲ್ಲಿಸುವ ಮುನ್ನವೇ ಅರೆಸ್ಟ್ ಮಾಡಿದ್ದೇಕೆ?

ಸೌಜನ್ಯ ಸಾವಿಗೆ ಯಾರು ಕಾರಣ ಎಂದು ಖಚಿತಪಡಿಸುತ್ತೇನೆ:ಸ್ನೇಹಮಯಿ ಕೃಷ್ಣ

ನಾನು ದೂರು ದಾಖಲಿಸಿದ ಕೇವಲ ಒಂದೂವರೆ ವರ್ಷದಲ್ಲಿ ಇಷ್ಟೆಲ್ಲಾ ಕ್ರಮಗಳು ನಡೆದಿವೆ. ಆದರೆ ಗಿರೀಶ್ ಮಟ್ಟಣ್ಣನವರ್ ರೀತಿಯಲ್ಲಿ 13 ವರ್ಷಗಳಿಂದ ಸೌಜನ್ಯ ಸಾವಿಗೆ ನ್ಯಾಯ ಕೊಡಿಸುವುದಾಗಿ ಕೇವಲ ಹೇಳಿಕೆ ನೀಡುವುದರಲ್ಲಿ ನಾನು ನಿಲ್ಲುವುದಿಲ್ಲ. ಇದೇ ವೇಳೆ ಸೌಜನ್ಯ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸವಾಲು ಹಾಕಿರುವ ಅವರು, ಸರ್ಕಾರ ಸೌಜನ್ಯ ಪ್ರಕರಣದ ತನಿಖೆಗೆ ಅಧಿಕೃತ ಆದೇಶ ಹೊರಡಿಸಿದರೆ, ಆ ಸಾವಿಗೆ ಯಾರು ಕಾರಣ ಎಂಬುದನ್ನು ಖಚಿತಪಡಿಸುತ್ತೇನೆ ಎಂದು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಇರಾನ್​​​​ ಹೊತ್ತಿ ಉರಿಯಲು ಈ ಹುಡುಗಿಯೇ ಕಾರಣ: 2024ರ ಈ ವಿಡಿಯೋ ನೆನಪಿದ್ಯಾ? – Kannada News | Ahoo Daryaei’s Bold Protest: The Spark for Iran’s Women’s Freedom Movement

ಕೆಲವೊಂದು ಹೋರಾಟ ಒಂದು ಬದಲಾವಣೆಗಳನ್ನು ತರುತ್ತದೆ. ಇರಾನ್​​​ನಲ್ಲಿ ಇದೀಗ ನಡೆಯುತ್ತಿರುವುದು ಅದೇ, ಇರಾನ್​​ನಲ್ಲಿ ಭಾರೀ ದೊಡ್ಡ ಸಂಘರ್ಷ ಶುರುವಾಗಿದೆ. ಒಂದು ಕಡೆ ಇಸ್ರೇಲ್​​​ , ಅಮೆರಿಕ ದಾಳಿ ಮಾಡಿದ್ರೆ ಮತ್ತೊಂದು ಕಡೆ ಇರಾನ್​​​​ನ ಮಹಿಳೆಯರೇ ತಮ್ಮ ಮೇಲಿನ ದಬ್ಬಾಳಿಕೆ ಬಗ್ಗೆ ದಂಗೆ ಎದ್ದಿದ್ದಾರೆ. ಈ ದಂಗೆ ಪ್ರಾರಂಭವಾಗಿರುವುದೇ ಅಹೂ ದರ್ಯಾಯೀ ಎಂಬ ಹುಡುಗಿಯಿಂದ, ಇಡೀ ಜಗತ್ತು ಇದೀಗ ಇರಾನ್​ ಕಡೆ ನೋಡಲು ಈ ಹುಡುಗಿಯೇ ಕಾರಣ ಎಂದು ಸೋಶಿಯಲ್​​ ಮೀಡಿಯಾದಲ್ಲಿ ಹೇಳಲಾಗುತ್ತಿದೆ.  ಅಂದು ಈ ಹುಡುಗಿ ನಡೆಸಿದ ಹೋರಾಟದ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​ ಆಗಿದೆ. ಅಷ್ಟಕ್ಕೂ 2024 ನವೆಂಬರ್​​​​ 3ರಂದು ನಡೆದ ಘಟನೆ ಏನು? ಟೆಹ್ರಾನ್‌ನ ರಸ್ತೆಯ ಮಧ್ಯದಲ್ಲಿ ಈ ಅಹೂ ದರ್ಯಾಯೀ ಮಾಡಿದ್ದೇನು? ಇಂದು ಇರಾನ್​​ ಈ ಸ್ಥಿತಿಗೆ ಬರಲು ಈ ಮಹಿಳೆ ಕಾರಣವೇ ಎಂಬೆಲ್ಲ ಪ್ರಶ್ನೆಗಳು ಮೂಡಿದೆ. ಇದೀಗ ಮತ್ತೆ ಈ ಹುಡುಗಿ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದ್ದಾಳೆ.

2024 ನವೆಂಬರ್ 3 ರ ಭಾನುವಾರದಂದು ಟೆಹ್ರಾನ್‌ನ ರಸ್ತೆಯ ಮಧ್ಯದಲ್ಲಿ ತನ್ನ ಬಟ್ಟೆಗಳನ್ನು ತೆಗೆದು ಬಿಕಿನಿಯಲ್ಲಿ ಪ್ರತಿಭಟಿಸಿದ ಇರಾನ್‌ನ ಅಹೂ ದರಾಯೈ ಎಂಬ ಹುಡುಗಿ, ದೇಶದ ಕಟ್ಟುನಿಟ್ಟಾದ ಇಸ್ಲಾಮಿಕ್ ಡ್ರೆಸ್ ಕೋಡ್ ವಿರುದ್ಧ ಪ್ರತಿಭಟನೆ ನಡೆಸಿದ್ದಳು. ಅಹೂ ದರಾಯೈ ಇಸ್ಲಾಮಿಕ್ ಆಜಾದ್ ವಿಶ್ವವಿದ್ಯಾಲಯದ ನಿಯಮ ಹಾಗೂ ಹಿಂಸೆಯನ್ನು ವಿರೋಧಿಸಲು ತನ್ನ ಬಟ್ಟೆಗಳನ್ನು ತೆಗೆದು ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದ್ದು ಈ ಹುಡುಗಿ ಎಂದು ವರದಿಗಳು ಹೇಳುತ್ತದೆ. ಇಲ್ಲಿಂದಲ್ಲೇ ಈ ಇರಾನ್​​​​​ ಪತನಕ್ಕೆ ಕಾರಣವಾಗಿದ್ದು ಎಂದು ಸೋಶಿಯಲ್​​ ಮೀಡಿಯಾದಲ್ಲಿ ನೆಟ್ಟಿಗರು ಹೇಳುತ್ತಿದ್ದಾರೆ.

ಇಲ್ಲಿದೆ ನೋಡಿ ವಿಡಿಯೋ:

ಟೆಹ್ರಾನ್‌ನ ರಸ್ತೆಯ ಮಧ್ಯ ತನ್ನ ಬಟ್ಟೆಗಳು ಎಸೆದು, ಸಾರ್ವಜನಿಕವಾಗಿ ಸರ್ಕಾರ ಹಾಗೂ ಇಸ್ಲಾಮಿಕ್ ಆಜಾದ್ ವಿಶ್ವವಿದ್ಯಾಲಯದ ವಿರುದ್ಧ ಪ್ರತಿಭಟನೆ ಮಾಡಿದ್ದಳು. ಇದನ್ನು ನೋಡಿದ ಅಲ್ಲಿನ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ಇನ್ನು ಕೆಲವು ಸಾಮಾಜಿಕ ಜಾಲತಾಣದ ಪೋಸ್ಟ್​​ಗಳು ಈಕೆಯನ್ನು ಅತ್ಯಾಚಾರ ಮಾಡಲಾಗಿದೆ ಎಂದು ಸುದ್ದಿ ಕೂಡ ಹರಡಿತು. ಆದರೆ ಈ ಸುದ್ದಿಯನ್ನು ಅಲ್ಲಿನ ಪೊಲೀಸರು ತಳ್ಳಿಹಾಕಿದ್ದರು. ಅಂತರಾಷ್ಟ್ರೀಯ ಸುದ್ದಿ ಸಂಸ್ಥೆಗಳಾದ ಬಿಬಿಸಿ (BBC) ಮತ್ತು ಅಮ್ನೆಸ್ಟಿ ಇಂಟರ್ನ್ಯಾಷನಲ್ ಪ್ರಕಾರ, ಆಕೆಯನ್ನು ಪೊಲೀಸರು ಮಾನಸಿಕ ಚಿಕಿತ್ಸಾ ಕೇಂದ್ರಕ್ಕೆ ದಾಖಲಿಸಿದ್ದಾರೆ ಎಂದು ಹೇಳಲಾಗಿತ್ತು.

ಇದನ್ನೂ ಓದಿ: ಇರಾನ್ ಮೇಲೆ ದಾಳಿ ನಡೆಸಲು ಅಮೆರಿಕವು ಭಾರತದ ಬಂದರುಗಳನ್ನು ಬಳಸುತ್ತಿದೆಯೇ? ನಿಜಾಂಶವೇನು?

ವೈರಲ್​​ ಪೋಸ್ಟ್​​​:

ಇರಾನ್‌ನ ನ್ಯಾಯಾಂಗ ಇಲಾಖೆಯ ಇತ್ತೀಚಿನ ಮಾಹಿತಿಯ ಪ್ರಕಾರ, ಆಕೆಗೆ ಯಾವುದೇ ಶಿಕ್ಷೆ ವಿಧಿಸದೆ ಆಕೆಯ ಕುಟುಂಬದ ಜೊತೆ ಕಳುಹಿಸಲಾಗಿದೆ ಎಂದು ಹೇಳಲಾಗಿದೆ. ಆದರೆ, ಇರಾನ್‌ನಂತಹ ದೇಶಗಳಲ್ಲಿ ಇಂತಹ ಮಾಹಿತಿಗಳ ಪಾರದರ್ಶಕತೆಯ ಬಗ್ಗೆ ಮಾನವ ಹಕ್ಕುಗಳ ಹೋರಾಟಗಾರರು ಇಂದಿಗೂ ಸಂಶಯ ವ್ಯಕ್ತಪಡಿಸುತ್ತಿದ್ದಾರೆ. ಇರಾನ್‌ನಲ್ಲಿ ಮಹಿಳೆಯರ ಮೇಲಿನ ದಬ್ಬಾಳಿಕೆ ಮತ್ತು ಕಟ್ಟುನಿಟ್ಟಿನ ಹಿಜಾಬ್ ನಿಯಮಗಳ ವಿರುದ್ಧದ ಹೋರಾಟಕ್ಕೆ ಆಹೂ ದರ್ಯಾಯಿ ಈಗ ಒಂದು ಪ್ರಬಲ ಶಕ್ತಿಯಾಗಿದ್ದಾರೆ ಎಂದು ಅನೇಕ ಮಹಿಳೆಯರು ಹೇಳಿದ್ದಾರೆ. ಇನ್ನು ಇರಾನ್​​ನಲ್ಲಿ ಇಂದಿಗೂ ಮಹಿಳೆಯರ ಮೇಲಿನ ದಬ್ಬಾಳಿಕೆ ಮತ್ತು ಕಟ್ಟುನಿಟ್ಟಿನ ಹಿಜಾಬ್ ನಿಯಮದ ಬಗ್ಗೆ ಹೋರಾಟಗಳು ನಡೆಯುತ್ತಿದೆ. ಅಮೆರಿಕದ ಅಧ್ಯಕ್ಷ ಟ್ರಂಪ್​​​ ಕೂಡ ಅಲ್ಲಿನ ಮಹಿಳೆ ಹಕ್ಕಿಗಾಗಿ ಹಾಗೂ ರಕ್ಷಣೆಗಾಗಿ ಈ ಯುದ್ಧ ಎಂದು ಹೇಳಿದ್ದರು.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link