All posts by nagaraj11081993

ಹೇಗಿದೆ ನೋಡಿ ರಶ್ಮಿಕಾ ಹಾಗೂ ವಿಜಯ್ ಕುಟುಂಬ – Kannada News | Vijay Devarakonda And Rashmika Mandanna Family In Newly Married reception

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರ ವಿವಾಹ ಕಾರ್ಯ ಫೆಬ್ರವರಿ 26ರಂದು ನಡೆಯಿತು. ಮಾರ್ಚ್ 4ರಂದು ಹೈದರಾಬಾದ್ ಅಲ್ಲಿ ವಿವಾಹ ಆರತಕ್ಷತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವಿಜಯ್ ಹಾಗೂ ರಶ್ಮಿಕಾ ಕುಟುಂಬ ಹಾಜರಿ ಹಾಕಿತ್ತು. ಈ ವಿಡಿಯೋ ಗಮನ ಸೆಳೆದವು. ರಶ್ಮಿಕಾ ಕುಟುಂಬದವರನ್ನು ಕಂಡರೆ ವಿಜಯ್​​ಗೆ ಅಪಾರ ಗೌರವ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮಧ್ಯಪ್ರಾಚ್ಯ ಸಂಘರ್ಷ: ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ‘ರೆಡ್ ಝೋನ್’ ಘೋಷಣೆ, 8 ಕಿಮೀ ವ್ಯಾಪ್ತಿಯಲ್ಲಿ ಡ್ರೋನ್ ನಿಷೇಧ – Kannada News | Belagavi Sambra Airport Declared Red Zone; Drone Flights Banned Within 8 KM Radius Amid Security Alert

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ‘ರೆಡ್ ಝೋನ್’ ಘೋಷಣೆImage Credit source: tv9

ಬೆಳಗಾವಿ, ಮಾರ್ಚ್ 5: ಇಸ್ರೇಲ್, ಇರಾನ್, ಅಮೆರಿಕ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಬೆಳಗಾವಿಯ (Belagavi) ಸಾಂಬ್ರಾ ವಿಮಾನ ನಿಲ್ದಾಣವನ್ನು ‘ರೆಡ್ ಝೋನ್’ ಎಂದು ಘೋಷಿಸಲಾಗಿದೆ. ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (DGCA) ಮಾರ್ಗಸೂಚಿಯಂತೆ ಈ ಕ್ರಮ ಕೈಗೊಳ್ಳಲಾಗಿದೆ. ಸಾಂಬ್ರಾ ವಿಮಾನ ನಿಲ್ದಾಣದ ಸುತ್ತಮುತ್ತ 8 ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಡ್ರೋನ್ ಹಾಗೂ ಅನ್​ಮ್ಯಾನ್ಡ್ ಏರಿಯಲ್ ವಾಹನಗಳ (UAV) ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ರೆಡ್ ಝೋನ್ ಮತ್ತು ಯೆಲ್ಲೋ ಝೋನ್ ವ್ಯಾಪ್ತಿಯಲ್ಲಿ ಅನುಮತಿ ಇಲ್ಲದೆ ಡ್ರೋನ್ ಹಾರಾಟ ನಡೆಸುವುದು ಕಾನೂನುಬಾಹಿರ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಪತ್ರಿಕಾ ಪ್ರಕಟಣೆ ಹೊರಡಿಸಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ವಿಮಾನ ನಿಲ್ದಾಣದ ಭದ್ರತೆ ದೃಷ್ಟಿಯಿಂದ ಈ ಕ್ರಮ ಅತ್ಯಾವಶ್ಯಕವಾಗಿದ್ದು, ಆದೇಶ ಉಲ್ಲಂಘನೆ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪ್ರಸ್ತುತ ಜಾಗತಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.

ಇದನ್ನೂ ಓದಿ: ದುಬೈನಿಂದ ಬೆಂಗಳೂರಿಗೆ ಬಂದಿಳಿದ 5ನೇ ವಿಮಾನ: 3 ದಿನಗಳಲ್ಲಿ 1,500 ಮಂದಿ ಸುರಕ್ಷಿತವಾಗಿ ವಾಪಸ್

ಪೊಲೀಸ್ ಆಯುಕ್ತರ ಪ್ರಕಟಣೆಯಲ್ಲೇನಿದೆ?

ಬೆಳಗಾವಿ ನಗರದ ಸಾಂಬ್ರಾ ವಿಮಾನ ನಿಲ್ದಾಣವನ್ನು ಹಾಗೂ ನಿಲ್ದಾಣದ ಸುತ್ತಮುತ್ತಲಿನ 08 ಕಿಲೋಮೀಟರ್ ವ್ಯಾಪ್ತಿಯನ್ನು ನಾಗರಿಕ ವಿಮಾನಯಾನ ಮಹಾ ನಿರ್ದೇಶಕರು (DGCA) ಈಗಾಗಲೇ ರೆಡ್ ಜೋನ್ (Red Zone) ಎಂದು ಘೋಷಿಸಿರುತ್ತಾರೆ. ವಿಮಾನ ನಿಲ್ದಾಣದ ಸುತ್ತಮುತ್ತಲಿನ 08 ಕಿಲೋಮೀಟರ್ ವ್ಯಾಪ್ತಿಯಲ್ಲಿ (Red Zone/ Yellow Zone) ಯಾವುದೇ ರೀತಿಯ ಪ್ರೋನ್ /ಅನ್​​ಮ್ಯಾನಡ್ ಏರಿಯಲ್ ವಾಹನ (UAV/Drone) ಹಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈ ಆದೇಶ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:45 am, Thu, 5 March 26

Source link

ಮಧ್ಯಪ್ರಾಚ್ಯ ಸಂಘರ್ಷ: ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ‘ರೆಡ್ ಝೋನ್’ ಘೋಷಣೆ, 8 ಕಿಮೀ ವ್ಯಾಪ್ತಿಯಲ್ಲಿ ಡ್ರೋನ್ ನಿಷೇಧ – Kannada News | Belagavi Sambra Airport Declared Red Zone; Drone Flights Banned Within 8 KM Radius Amid Security Alert

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ‘ರೆಡ್ ಝೋನ್’ ಘೋಷಣೆImage Credit source: tv9

ಬೆಳಗಾವಿ, ಮಾರ್ಚ್ 5: ಇಸ್ರೇಲ್, ಇರಾನ್, ಅಮೆರಿಕ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಬೆಳಗಾವಿಯ (Belagavi) ಸಾಂಬ್ರಾ ವಿಮಾನ ನಿಲ್ದಾಣವನ್ನು ‘ರೆಡ್ ಝೋನ್’ ಎಂದು ಘೋಷಿಸಲಾಗಿದೆ. ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (DGCA) ಮಾರ್ಗಸೂಚಿಯಂತೆ ಈ ಕ್ರಮ ಕೈಗೊಳ್ಳಲಾಗಿದೆ. ಸಾಂಬ್ರಾ ವಿಮಾನ ನಿಲ್ದಾಣದ ಸುತ್ತಮುತ್ತ 8 ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಡ್ರೋನ್ ಹಾಗೂ ಅನ್​ಮ್ಯಾನ್ಡ್ ಏರಿಯಲ್ ವಾಹನಗಳ (UAV) ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ರೆಡ್ ಝೋನ್ ಮತ್ತು ಯೆಲ್ಲೋ ಝೋನ್ ವ್ಯಾಪ್ತಿಯಲ್ಲಿ ಅನುಮತಿ ಇಲ್ಲದೆ ಡ್ರೋನ್ ಹಾರಾಟ ನಡೆಸುವುದು ಕಾನೂನುಬಾಹಿರ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಪತ್ರಿಕಾ ಪ್ರಕಟಣೆ ಹೊರಡಿಸಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ವಿಮಾನ ನಿಲ್ದಾಣದ ಭದ್ರತೆ ದೃಷ್ಟಿಯಿಂದ ಈ ಕ್ರಮ ಅತ್ಯಾವಶ್ಯಕವಾಗಿದ್ದು, ಆದೇಶ ಉಲ್ಲಂಘನೆ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪ್ರಸ್ತುತ ಜಾಗತಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.

ಇದನ್ನೂ ಓದಿ: ದುಬೈನಿಂದ ಬೆಂಗಳೂರಿಗೆ ಬಂದಿಳಿದ 5ನೇ ವಿಮಾನ: 3 ದಿನಗಳಲ್ಲಿ 1,500 ಮಂದಿ ಸುರಕ್ಷಿತವಾಗಿ ವಾಪಸ್

ಪೊಲೀಸ್ ಆಯುಕ್ತರ ಪ್ರಕಟಣೆಯಲ್ಲೇನಿದೆ?

ಬೆಳಗಾವಿ ನಗರದ ಸಾಂಬ್ರಾ ವಿಮಾನ ನಿಲ್ದಾಣವನ್ನು ಹಾಗೂ ನಿಲ್ದಾಣದ ಸುತ್ತಮುತ್ತಲಿನ 08 ಕಿಲೋಮೀಟರ್ ವ್ಯಾಪ್ತಿಯನ್ನು ನಾಗರಿಕ ವಿಮಾನಯಾನ ಮಹಾ ನಿರ್ದೇಶಕರು (DGCA) ಈಗಾಗಲೇ ರೆಡ್ ಜೋನ್ (Red Zone) ಎಂದು ಘೋಷಿಸಿರುತ್ತಾರೆ. ವಿಮಾನ ನಿಲ್ದಾಣದ ಸುತ್ತಮುತ್ತಲಿನ 08 ಕಿಲೋಮೀಟರ್ ವ್ಯಾಪ್ತಿಯಲ್ಲಿ (Red Zone/ Yellow Zone) ಯಾವುದೇ ರೀತಿಯ ಪ್ರೋನ್ /ಅನ್​​ಮ್ಯಾನಡ್ ಏರಿಯಲ್ ವಾಹನ (UAV/Drone) ಹಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈ ಆದೇಶ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪಿಚ್ ನೋಡಿ ಭಾರತಕ್ಕೆ ಆತಂಕ… ಇಂಗ್ಲೆಂಡ್ ಫುಲ್ ಹ್ಯಾಪಿ ಯಾಕೆ? – Kannada News | IND vs ENG: The pitch at Wankhede has a green tinge

T20 World Cup 2026: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು (ಮಾ.5) ಭಾರತ ಮತ್ತು ಇಂಗ್ಲೆಂಡ್ ಮುಖಾಮುಖಿಯಾಗಲಿದೆ. ಟಿ20 ವಿಶ್ವಕಪ್​ನ ಈ ನಿರ್ಣಾಯಕ ಪಂದ್ಯಕ್ಕಾಗಿ ನಿರ್ಮಿಸಲಾಗಿರುವುದು ಗ್ರೀನ್ ಪಿಚ್. ಅಂದರೆ ಪಿಚ್ ಮೇಲ್ಮೈ ಮೇಲೆ ಹಸಿರು ಹುಲ್ಲುಗಳಿವೆ. ಇದುವೇ ಈಗ ಭಾರತ ತಂಡದ ಆತಂಕಕ್ಕೆ ಕಾರಣವಾಗಿದೆ.  ಏಕೆಂದರೆ…

ಹಸಿರು ಪಿಚ್​ನಲ್ಲಿ ವೇಗಿಗಳು ಅತ್ಯುತ್ತಮವಾಗಿ ದಾಳಿ ಸಂಘಟಿಸಬಲ್ಲರು. ಅದರಲ್ಲಿ ಇಂಗ್ಲೆಂಡ್ ಬೌಲರ್​ಗಳು ನಿಸ್ಸೀಮರು. ಇಂಗ್ಲೆಂಡ್​ನ ಬಹುತೇಕ ಪಿಚ್​ ಮೇಲ್ಮೈ ಹಸಿರು ಹುಲ್ಲಿನಿಂದ ಕೂಡಿರುತ್ತದೆ. ಹೀಗಾಗಿ ಅಂತಹ ಪಿಚ್​ನಲ್ಲಿ ಹೇಗೆ ದಾಳಿ ಸಂಘಟಿಸಬೇಕೆಂಬುದು ಆಂಗ್ಲ ಬೌಲರ್​ಗಳಿಗೆ ಚೆನ್ನಾಗಿ ಗೊತ್ತಿದೆ.

ಹಾಗೆಯೇ ಗ್ರೀನ್ ಪಿಚ್​ನಲ್ಲಿ ಆಡಿದ ಅನುಭವ ಕೂಡ ಇಂಗ್ಲೆಂಡ್ ಆಟಗಾರರ ಜೊತೆಗಿದೆ. ಇದರಿಂದ ಅವರು ಬ್ಯಾಟಿಂಗ್​ನಲ್ಲೂ ಯಶಸ್ಸು ಸಾಧಿಸುವ ಸಾಧ್ಯತೆಯಿದೆ. ಇತ್ತ ಟೀಮ್ ಇಂಡಿಯಾ ಆಟಗಾರರಿಗೆ ಗ್ರೀನ್ ಪಿಚ್​ನಲ್ಲಿ ಆಡಿದ ಅನುಭವ ತುಂಬಾ ಕಡಿಮೆ. ಹೀಗಾಗಿಯೇ ವಾಂಖೆಡೆ ಮೈದಾನದಲ್ಲಿ ನಿರ್ಮಿಸಲಾಗಿರುವ ಹೊಸ ಪಿಚ್ ಭಾರತೀಯರ ಆತಂಕಕ್ಕೆ ಕಾರಣವಾಗಿದೆ.

ಗ್ರೀನ್ ಪಿಚ್ ವಿಶೇಷತೆ:

  • ಹಸಿರು ಹೊದಿಕೆ: ಪಿಚ್ ಮೇಲೆ ಹೆಚ್ಚಿನ ಪ್ರಮಾಣದ ಹಸಿರು ಹುಲ್ಲು ಇದೆ. ಇದು ಆರಂಭದಲ್ಲಿ ವೇಗದ ಬೌಲರ್‌ಗಳಿಗೆ ಹೆಚ್ಚಿನ ಸ್ವಿಂಗ್ ನೀಡುತ್ತದೆ.
  • ಕೆಂಪು ಮಣ್ಣಿನ ಗುಣ: ವಾಂಖೆಡೆ ಪಿಚ್ ಕೆಂಪು ಮಣ್ಣಿನಿಂದ ಕೂಡಿದ್ದು, ಇದು ಪಂದ್ಯದ ಉದ್ದಕ್ಕೂ ಉತ್ತಮ ಬೌನ್ಸ್ ಮತ್ತು ವೇಗವನ್ನು ಕಾಪಾಡಿಕೊಳ್ಳುತ್ತದೆ.

ಇಂಗ್ಲೆಂಡ್ ತಂಡವು ಮೂಲತಃ ಇಂತಹ ಹಸಿರು ಮತ್ತು ವೇಗದ ಪಿಚ್‌ಗಳಲ್ಲಿ ಆಡಿ ರೂಢಿ ಮಾಡಿಕೊಂಡಿದೆ. ಅವರ ವೇಗಿಗಳಾದ ಜೋಫ್ರಾ ಆರ್ಚರ್ ಮತ್ತು ಜೇಮಿ ಓವರ್ಟನ್ 145-150 kmph ವೇಗದಲ್ಲಿ ಬೌಲಿಂಗ್ ಮಾಡಬಲ್ಲರು. ಪಿಚ್‌ನಲ್ಲಿ ಹುಲ್ಲು ಇರುವುದರಿಂದ ಅವರಿಗೆ ಸ್ವಿಂಗ್ ಮತ್ತು ಸೀಮ್ ಮೂವ್‌ಮೆಂಟ್ ಹೆಚ್ಚು ಸಿಗುತ್ತದೆ.

ಇಂಗ್ಲೆಂಡ್ ತಂಡದ ಬ್ಯಾಟರ್‌ಗಳಾ ಫಿಲ್ ಸಾಲ್ಟ್, ಜೋಸ್ ಬಟ್ಲರ್, ಲಿಯಾಮ್ ಲಿವಿಂಗ್‌ಸ್ಟೋನ್, ವಿಲ್ ಜ್ಯಾಕ್ಸ್​ ಚೆಂಡು ವೇಗವಾಗಿ ಬ್ಯಾಟ್‌ಗೆ ಬರುವ ಪಿಚ್‌ಗಳನ್ನು ಇಷ್ಟಪಡುತ್ತಾರೆ. ಹಸಿರು ಪಿಚ್‌ಗಳಲ್ಲಿ ಚೆಂಡು ನಿಲ್ಲದೆ ನೇರವಾಗಿ ಬ್ಯಾಟ್‌ಗೆ ಬರುವುದರಿಂದ ಅವರಿಗೆ ದೊಡ್ಡ ಹೊಡೆತಗಳನ್ನು ಹೊಡೆಯಲು ಸುಲಭವಾಗುತ್ತದೆ.

ವಾಂಖೆಡೆಯಲ್ಲಿ ನಿರ್ಮಿಸಲಾಗಿರುವ ಗ್ರೀನ್ ಪಿಚ್​  ಇಂಗ್ಲೆಂಡ್‌ನ ಲಾರ್ಡ್ಸ್ ಅಥವಾ ಓವಲ್ ಮೈದಾನದ ಪರಿಸ್ಥಿತಿಯನ್ನು ಹೋಲುತ್ತದೆ. ಇದು ಅವರ ಆಟಗಾರರಿಗೆ ತಮ್ಮ ದೇಶದಲ್ಲೇ ಆಡುತ್ತಿರುವಂತಹ ಆತ್ಮವಿಶ್ವಾಸ ನೀಡುತ್ತದೆ.

ಸಾಮಾನ್ಯವಾಗಿ ಭಾರತೀಯ ಪಿಚ್‌ಗಳು ಒಣಗಿದ್ದರೆ ನಮ್ಮ ಸ್ಪಿನ್ನರ್‌ಗಳು ಟೀಮ್ ಇಂಡಿಯಾ ಸ್ಪಿನ್ನರ್​ಗಳು ಪಂದ್ಯವನ್ನು ನಿಯಂತ್ರಿಸುತ್ತಾರೆ. ಆದರೆ ಹುಲ್ಲು ಹೆಚ್ಚಿದ್ದರೆ ಸ್ಪಿನ್ನರ್‌ಗಳಿಗೆ ಅಷ್ಟಾಗಿ ತಿರುವು ಸಿಗುವುದಿಲ್ಲ. ಇದು ಭಾರತದ ಪ್ರಮುಖ ಅಸ್ತ್ರವಾದ ಸ್ಪಿನ್ ದಾಳಿಯ ತೀವ್ರತೆಯನ್ನು ಕಡಿಮೆ ಮಾಡಬಹುದು.

ಇನ್ನು ಗ್ರೀನ್ ಪಿಚ್​ ಬೌಲರ್‌ಗಳಿಗೆ ಸಹಾಯ ಮಾಡಿದರೂ, ಬ್ಯಾಟರ್‌ಗಳು ಒಮ್ಮೆ ನೆಲೆಯೂರಿದರೆ ರನ್ ಗಳಿಸುವುದು ಸುಲಭ. ಆದರೆ ಅದಕ್ಕೆ ತಾಳ್ಮೆ ಇರಬೇಕಾಗುತ್ತದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಉಭಯ ತಂಡಗಳು ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರೆ ಹೈ-ಸ್ಕೋರಿಂಗ್ ಪಂದ್ಯವನ್ನು ನಿರೀಕ್ಷಿಸಬಹುದು.

ಗ್ರೀನ್ ಪಿಚ್ ಮಾಡಿದ್ದೇಕೆ?

ಮುಂಬೈನ ತಾಪಮಾನಕ್ಕೆ ಪಿಚ್ ಬೇಗನೆ ಒಣಗಿ ಬಿರುಕು ಬಿಡಬಾರದು ಎಂಬ ಕಾರಣಕ್ಕೆ ಐಸಿಸಿ ಕ್ಯುರೇಟರ್‌ಗಳು ಈ ಬಾರಿ ಹೆಚ್ಚಿನ ಹುಲ್ಲನ್ನು ಉಳಿಸಿಕೊಂಡಿದ್ದಾರೆ. ಇದರಿಂದಾಗಿ ದ್ವಿತೀಯ ಸೆಮಿಫೈನಲ್ ಪಂದ್ಯಕ್ಕೆ ಗ್ರೀನ್ ಪಿಚ್ ಕಾಣಿಸಿಕೊಂಡಿದೆ.

ಇದನ್ನೂ ಓದಿ: ಅಲೆನ್ ಆರ್ಭಟಕ್ಕೆ 11 ವಿಶ್ವ ದಾಖಲೆಗಳು ಉಡೀಸ್

ಟಾಸ್ ಫ್ಯಾಕ್ಟರ್:

ಗ್ರೀನ್ ಪಿಚ್ ಇಂಗ್ಲೆಂಡ್​ಗೆ ಅನುಕೂಲವಾಗಿದ್ದರೂ ಮುಂಬೈನಲ್ಲಿ ಟಾಸ್ ನಿರ್ಣಾಯಕ ಪಾತ್ರವಹಿಸುತ್ತದೆ. ಏಕೆಂದರೆ ವಾಂಖೆಡೆ ಸ್ಟೇಡಿಯಂನಲ್ಲಿ ದ್ವಿತೀಯ ಇನಿಂಗ್ಸ್ ಆಡುವ ವೇಳೆ ಇಬ್ಬನಿ ಕಂಡು ಬರುತ್ತವೆ. ಇದರಿಂದ ಒದ್ದೆ ಚೆಂಡಿನ ಮೇಲೆ ಬೌಲರ್​ಗಳಿಗೆ ಗ್ರಿಪ್ ಸಿಗುವುದಿಲ್ಲ. ಹೀಗಾಗಿ ಟಾಸ್ ಗೆಲ್ಲುವ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಳ್ಳಲಿದೆ.

Source link

ಬಾಗಲಕೋಟೆ: ಲೋಕಾಯುಕ್ತ ದಾಳಿ ವೇಳೆ ಮನೆಗೆ ನುಗ್ಗಿದ ಹಾವು! – Kannada News | Snake Slithers into House During Lokayukta Raid in Bagalkote; Video Goes Viral

ಬಾಗಲಕೋಟೆ, ಮಾರ್ಚ್​ 5: ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಲೋಕಾಯುಕ್ತ ಅಧಿಕಾರಿಗಳು ಬಾಗಲಕೋಟೆಯಲ್ಲಿ ನಡೆಸಿದ ದಾಳಿಯ ವೇಳೆ ಅಚ್ಚರಿಯ ಘಟನೆ ನಡೆದಿದೆ. ಮನೆಯೊಂದರಲ್ಲಿ ಶೋಧ ಕಾರ್ಯ ನಡೆಯುತ್ತಿದ್ದಾಗ ಕೆಳಮಹಡಿಗೆ ಕೆರೆ ಹಾವು ನುಗ್ಗಿ ಕೆಲಕಾಲ ಗೊಂದಲ ಉಂಟುಮಾಡಿತು. ಬಳಿಕ ಮನೆಯವರು ಹಾವನ್ನು ಹೊಡೆದು ದೂರ ಸಾಗಿಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಮುಖ್ಯ ಎಂಜಿನಿಯರ್ ವಸಂತ್ ವಾಲಪ್ಪ ನಾಯಕ್ ಅವರ ವಿರುದ್ಧ ದಾಖಲಾಗಿದ್ದ ದೂರಿನ ಆಧಾರದಲ್ಲಿ ಅವರ ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆಸಿದರು. ಬಾಗಲಕೋಟೆಯ ಪೋಸ್ಟಲ್ ಕಾಲೋನಿಯಲ್ಲಿರುವ ವಸಂತ್ ಅವರ ಸಹೋದರ ಭೀಮಸಿಂಗ್ ನಾಯಕ್ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡರು.

ಭೀಮಸಿಂಗ್ ನಾಯಕ್ ಬಾಗಲಕೋಟೆ ಡಿಎಆರ್‌ನಲ್ಲಿ ಎಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲದೆ, ಬಾಗಲಕೋಟೆ ತಾಲೂಕಿನ ಬಿಲ್ ಕೆರೂರು ಗ್ರಾಮದ ಮನೆಯಲ್ಲೂ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ವಸಂತ್ ಅವರ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿನ ಆಧಾರದಲ್ಲಿ ಈ ದಾಳಿ ನಡೆದಿದೆ. ಆಸ್ತಿ, ದಾಖಲೆಗಳು ಮತ್ತು ಬ್ಯಾಂಕ್ ವ್ಯವಹಾರಗಳ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಲಾಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Fact Check: ಇರಾನ್ ಮೇಲೆ ದಾಳಿ ನಡೆಸಲು ಅಮೆರಿಕವು ಭಾರತದ ಬಂದರುಗಳನ್ನು ಬಳಸುತ್ತಿದೆಯೇ? ನಿಜಾಂಶವೇನು? – Kannada News | Fact Check: India Denies US Used Its Ports for Iran Attack Amidst Tensions

ನವದೆಹಲಿ, ಮಾರ್ಚ್​ 05: ಇರಾನ್(Iran) ಮೇಲೆ ದಾಳಿ ನಡೆಸಲು ಅಮೆರಿಕವು ಭಾರತದ ಬಂದರು(Port)ಗಳನ್ನು ಬಳಸುತ್ತಿದೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಆದರೆ ಈ ವರದಿಯನ್ನು ಭಾರತ ತಿರಸ್ಕರಿಸಿದೆ. ಅಮೆರಿಕ ಮೂಲದ ಒನ್ ಅಮೇರಿಕ ನ್ಯೂಸ್ ನೆಟ್‌ವರ್ಕ್‌ಗೆ ನೀಡಿದ ಸಂದರ್ಶನದಲ್ಲಿ ಅಮೆರಿಕದ ಮಾಜಿ ಸೇನಾ ಕರ್ನಲ್ ಡೌಗ್ಲಾಸ್ ಮ್ಯಾಕ್‌ಗ್ರೆಗರ್, ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಭಾರತೀಯ ನೌಕಾ ನೆಲೆಗಳನ್ನು ಬಳಸುತ್ತಿದೆ ಎಂದು ಹೇಳಿಕೆ ಕೊಟ್ಟ ನಂತರ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯೆ ನೀಡಿದೆ.

ಭಾರತದ ಬಂದರುಗಳ ಬಳಕೆಯ ಬಗ್ಗೆ ಹರಡುತ್ತಿರುವ ಹೇಳಿಕೆಗಳನ್ನು ಭಾರತದ ವಿದೇಶಾಂಗ ಸಚಿವಾಲಯ ಸಂಪೂರ್ಣವಾಗಿ ತಿರಸ್ಕರಿಸಿದ್ದು, ಇದನ್ನು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದೆ. ಫೆಬ್ರವರಿ 28 ರಂದು, ಅಮೆರಿಕ ಮತ್ತು ಇಸ್ರೇಲ್ ಹಲವಾರು ಇರಾನಿನ ನಗರಗಳ ಮೇಲೆ ಸಂಘಟಿತ ವೈಮಾನಿಕ ದಾಳಿ ನಡೆಸಿದ್ದವು. ಈ ದಾಳಿಗಳು ಮಿಲಿಟರಿ ಕಮಾಂಡ್ ಕೇಂದ್ರಗಳು, ವಾಯು ರಕ್ಷಣಾ ವ್ಯವಸ್ಥೆಗಳು, ಕ್ಷಿಪಣಿ ನೆಲೆಗಳು ಹಾಗೂ ಇತರ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಳ್ಳಲಾಗಿತ್ತು.

ಈ ದಾಳಿಗಳಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ನಾಲ್ವರು ಹಿರಿಯ ಮಿಲಿಟರಿ ಮತ್ತು ಭದ್ರತಾ ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಟೆಹ್ರಾನ್ ಮತ್ತು ಇತರ ಪ್ರಮುಖ ನಗರಗಳಲ್ಲಿ ದೊಡ್ಡ ಸ್ಫೋಟಗಳು ದಾಖಲಾಗಿದ್ದು, ಈ ಪ್ರದೇಶದ ಪರಿಸ್ಥಿತಿಯನ್ನು ಮತ್ತಷ್ಟು ಉಲ್ಬಣಗೊಳಿಸಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ, ಇರಾನ್ ಅಮೆರಿಕದ ನೆಲೆಗಳು ಮತ್ತು ಅದರ ಮಿತ್ರರಾಷ್ಟ್ರಗಳನ್ನು ಗುರಿಯಾಗಿಸಿಕೊಂಡು ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು ಡ್ರೋನ್‌ಗಳ ಮೂಲಕ ಪ್ರತೀಕಾರ ತೀರಿಸಿಕೊಂಡಿತು.

ಮತ್ತಷ್ಟು ಓದಿ: ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ; ಟೆಹ್ರಾನ್​ ತುಂಬ ದಟ್ಟ ಹೊಗೆ

ಇಸ್ರೇಲ್, ಬಹ್ರೇನ್, ಕುವೈತ್, ಕತಾರ್, ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಜೋರ್ಡಾನ್‌ನಂತಹ ದೇಶಗಳಲ್ಲಿನ ಗುರಿಗಳ ವರದಿಗಳು ಇಡೀ ಮಧ್ಯಪ್ರಾಚ್ಯವನ್ನು ಸಂಘರ್ಷಕ್ಕೆ ಎಳೆದಿವೆ. ಏತನ್ಮಧ್ಯೆ, ಗಲ್ಫ್ ಪ್ರದೇಶದಲ್ಲಿ ವಾಸಿಸುವ ಭಾರತೀಯ ನಾಗರಿಕರ ಸುರಕ್ಷತೆಯು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ವಿದೇಶಾಂಗ ಸಚಿವಾಲಯ ಪುನರುಚ್ಚರಿಸಿದೆ. ಸುಮಾರು 10 ಮಿಲಿಯನ್ ಭಾರತೀಯ ನಾಗರಿಕರು ಗಲ್ಫ್ ದೇಶಗಳಲ್ಲಿ ವಾಸಿಸುತ್ತಿದ್ದಾರೆ ಮತ್ತು ಕೆಲಸ ಮಾಡುತ್ತಿದ್ದಾರೆ, ಇದು ಆರ್ಥಿಕ ಮತ್ತು ರಾಜತಾಂತ್ರಿಕ ದೃಷ್ಟಿಕೋನದಿಂದ ಭಾರತಕ್ಕೆ ಈ ಪ್ರದೇಶವನ್ನು ಅತ್ಯಂತ ಮುಖ್ಯವಾಗಿದೆ.

ಪಶ್ಚಿಮ ಏಷ್ಯಾದಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಭಾರತ ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಅದರ ರಾಷ್ಟ್ರೀಯ ಹಿತಾಸಕ್ತಿಗಳಿಗೆ ಅನುಗುಣವಾಗಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಸಚಿವಾಲಯ ತಿಳಿಸಿದೆ. ಯಾವುದೇ ತಪ್ಪು ಮಾಹಿತಿ ಅಥವಾ ಪರಿಶೀಲಿಸದ ವಿಚಾರಗಳ ಆಧಾರದ ಮೇಲೆ ಭಾರತ ತನ್ನ ವಿದೇಶಾಂಗ ನೀತಿಯನ್ನು ನಡೆಸುವುದಿಲ್ಲ ಮತ್ತು ರಾಷ್ಟ್ರೀಯ ಸಾರ್ವಭೌಮತ್ವಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಅದರ ನಿಲುವು ಸಂಪೂರ್ಣವಾಗಿ ಸ್ಪಷ್ಟ ಮತ್ತು ಸ್ವತಂತ್ರವಾಗಿದೆ ಎಂದು ಸರ್ಕಾರ ಸ್ಪಷ್ಟವಾಗಿ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಅಪಾರ್ಟ್​ಮೆಂಟೇ ಡ್ರಗ್ಸ್ ಸ್ಟೋರ್, ದೇವರ ಫೋಟೊಗಳ ಫ್ರೇಮ್​ನಲ್ಲಿಟ್ಟು ಮಾರಾಟ: ಬಯಲಾಯ್ತು ಜೋಡಿಯ ಮೋಜು-ಮಸ್ತಿ ರಹಸ್ಯ – Kannada News | Luxury Apartment Turned Drug Den in Bangalore: Couple Hid Narcotics in Photo Frames, CCB Busts Interstate Racket

ಬೆಂಗಳೂರು, ಮಾರ್ಚ್ 5: ಅಂತಾರಾಜ್ಯ ಡ್ರಗ್ ಪೆಡ್ಲರ್ ಜೋಡಿ ಅಶ್ವಿನ್ ಮತ್ತು ಮೊಬೀನಾರನ್ನು ಸಿಸಿಬಿ ನಾರ್ಕೋಟಿಕ್ಸ್ ತಂಡವು ಬಂಧಿಸಿದ್ದು, ಇದರ ಬೆನ್ನಲ್ಲೇ ಒಂದೊಂದೇ ರೋಚಕ ರಹಸ್ಯಗಳು ಹೊರಬರತೊಡಗಿವೆ. ಈ ಜೋಡಿ ಐಷಾರಾಮಿ ಜೀವನ ನಡೆಸುತ್ತಿದ್ದು, ಪದೇ ಪದೇ ವಿಮಾನದಲ್ಲಿ ಪ್ರಯಾಣಿಸುತ್ತಾ ಮೋಜು-ಮಸ್ತಿಯಲ್ಲಿ ತೊಡಗಿರುತ್ತಿದ್ದರು. ಇದೀಗ ಇವರ ಶೋಕಿ ಜೀವನವನ್ನು ಸಿಸಿಬಿ ಬಯಲು ಮಾಡಿದೆ. ಕೇರಳದ ಅಶ್ವಿನ್ ಮತ್ತು ಮೊಬೀನಾ ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಓದಿದ್ದರು. ಆರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇವರು, ಕಳೆದ ವರ್ಷ ಥೈಲ್ಯಾಂಡ್‌ನ ವಿನ್ಸೆಂಟ್ ಪರಿಚಯದ ನಂತರ ತಮ್ಮ ದಂಧೆಯನ್ನು ವಿಸ್ತರಿಸಿದ್ದರು. ವಿನ್ಸೆಂಟ್ ಆಮಿಷವೊಡ್ಡಿ ಹೆಚ್ಚಿನ ಹಣಕ್ಕಾಗಿ ಕಾಸ್ಟ್ಲಿ ಡ್ರಗ್ ಪೆಡ್ಲಿಂಗ್ ಮಾಡಲು ಪ್ರೇರೇಪಿಸಿದ್ದ. ಥೈಲ್ಯಾಂಡ್‌ನಿಂದ ಕೇರಳ ಪ್ರವಾಸಿಗರ ಮೂಲಕ ಡ್ರಗ್ಸ್ ಪಾರ್ಸೆಲ್‌ಗಳನ್ನು ಬೆಂಗಳೂರಿಗೆ ತರಿಸಿಕೊಳ್ಳುತ್ತಿದ್ದರು.

ಅಪಾರ್ಟ್‌ಮೆಂಟ್ ಅನ್ನು ಡ್ರಗ್ಸ್ ಸಂಗ್ರಹಣಾ ಕೇಂದ್ರವನ್ನಾಗಿ ಮಾಡಿಕೊಂಡಿದ್ದ ಈ ಜೋಡಿ, ಡ್ರಗ್ಸ್ ವಾಸನೆ ಹೊರಗೆ ಬರದಂತೆ ನಾಯಿಗಳ ಮೂತ್ರವನ್ನು ಸ್ವಚ್ಛಗೊಳಿಸುತ್ತಿರಲಿಲ್ಲ ಎಂಬ ವಿಚಿತ್ರ ಸಂಗತಿ ಬೆಳಕಿಗೆ ಬಂದಿದೆ. ದೇವರ ಫೋಟೋ ಫ್ರೇಮ್‌ಗಳಲ್ಲಿ ಡ್ರಗ್ಸ್ ಅಡಗಿಸಿಟ್ಟು ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಮಾರಾಟ ಮಾಡುತ್ತಿದ್ದರು. ಸುಮಾರು ಎರಡು ತಿಂಗಳುಗಳ ಕಾಲ ಇವರ ಚಟುವಟಿಕೆಗಳನ್ನು ಗಮನಿಸುತ್ತಿದ್ದ ಸಿಸಿಬಿ ನಾರ್ಕೋಟಿಕ್ಸ್ ತಂಡವು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ 10 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಸಮೇತ ಅಶ್ವಿನ್ ಮತ್ತು ಮೊಬೀನಾರನ್ನು ಬಂಧಿಸಿದೆ.

ವರದಿ: ಪ್ರದೀಪ್ ಚಿಕ್ಕಾಟಿ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹಾಸನ: ಲೋಕಾಯುಕ್ತರು ದಾಳಿ ನಡೆಸಿದ್ರೂ ಬಾಗಿಲು ತೆರೆಯದೇ ಅಧಿಕಾರಿ ಹೈಡ್ರಾಮಾ! – Kannada News | Lokayukta Raid Drama in Hassan: Engineer Refuses to Open Door for Over an Hour in DA Case

ಹಾಸನ, ಮಾರ್ಚ್​ 5: ಹಾಸನ ಮಹಾನಗರಪಾಲಿಕೆ ಎಂಜಿನಿಯರ್ ಸತ್ಯನಾರಾಯಣ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಹಾಸನದ ರವೀಂದ್ರ ನಗರದಲ್ಲಿರುವ ಸತ್ಯನಾರಾಯಣ ಅವರ ನಿವಾಸಕ್ಕೆ ಲೋಕಾಯುಕ್ತ ಡಿವೈಎಸ್ಪಿ ಸುರೇಶ್ ಕುಮಾರ್ ಮತ್ತು ಇನ್ಸ್‌ಪೆಕ್ಟರ್ ಶಿಲ್ಪಾ ನೇತೃತ್ವದ ತಂಡ ಭೇಟಿ ನೀಡಿದೆ. ಬೆಳಗ್ಗೆ 5:30ರ ಸುಮಾರಿಗೆ ಅಧಿಕಾರಿಗಳು ಮನೆಗೆ ಆಗಮಿಸಿದರೂ, ಸುಮಾರು ಒಂದುವರೆ ಗಂಟೆಗೂ ಹೆಚ್ಚು ಕಾಲ ಬಾಗಿಲು ತೆರೆಯದೆ ಸತಾಯಿಸಲಾಗಿದೆ.

ಅಧಿಕಾರಿಗಳು ಮನೆ ಬೆಲ್ ಮಾಡಿ, ಬಾಗಿಲು ಬಡಿದು, ಪರಿಶೀಲನೆಗಾಗಿ ಬಾಗಿಲು ತೆರೆಯುವಂತೆ ಸೂಚನೆ ನೀಡಿದರೂ, ಮನೆಯೊಳಗಿನಿಂದ ಯಾರೂ ಪ್ರತಿಕ್ರಿಯಿಸಿಲ್ಲ. ಅಧಿಕಾರಿಗಳು ಆಗಮಿಸಿದಾಗ ಮನೆಯಲ್ಲಿ ಲೈಟ್ ಆನ್ ಆಗಿದ್ದು, ನಂತರ ಆಫ್ ಆಗಿದೆ. ಎಸಿ ಕೂಡ ಆನ್ ಆಗಿ ನಂತರ ಆಫ್ ಆಗಿರುವ ಮಾಹಿತಿ ಲಭ್ಯವಾಗಿದೆ. ಸತ್ಯನಾರಾಯಣ ಅವರು ಈ ಹಿಂದೆ ಹಾಸನ ಹೂಡಾದಲ್ಲಿ, ನಂತರ ಮಹಾನಗರಪಾಲಿಕೆಯಲ್ಲಿ ಕಾರ್ಯನಿರ್ವಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸೆಮಿಫೈನಲ್​ಗೂ ಮುನ್ನ ಟೀಮ್ ಇಂಡಿಯಾದ ಅತೀ ದೊಡ್ಡ ‘ಚಿಂತೆ’ ಬಹಿರಂಗ – Kannada News | Team India’s ‘Big Concern’ For T20 World Cup Semifinal vs England

ಮಾರ್ಚ್ 5, 2026 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ನಿಮಿತ್ತ ನಡೆದ ಸುದ್ಧಿಗೋಷ್ಠಿಯಲ್ಲಿ ಟೀಮ್ ಇಂಡಿಯಾ ಬೌಲಿಂಗ್ ಕೋಚ್ ಮೊರ್ನೆ ಮೊರ್ಕೆಲ್ ಕಾಣಿಸಿಕೊಂಡಿದ್ದರು. ಈ ವೇಳೆ ಮಾತನಾಡಿದ ಅವರು ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ನಿರ್ಣಾಯಕ ಪಾತ್ರವಹಿಸಲಿದೆ ಎಂದಿದ್ದಾರೆ.

ವಾಖೆಂಡೆಯಂತಹ ಕ್ರೀಡಾಂಗಣದಲ್ಲಿ ಇಬ್ಬನಿಯು “ದೊಡ್ಡ ಆತಂಕ”ವಾಗಿದೆ. ಇದನ್ನು ನಿಯಂತ್ರಿಸಲು ಸಾಧ್ಯವಿಲ್ಲ, ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಇದು ಆಟದ ಮೇಲೆ ಭಾರಿ ಪ್ರಭಾವ ಬೀರುತ್ತದೆ ಎಂದು ಮೊರ್ಕೆಲ್ ಹೇಳಿದ್ದಾರೆ.

ಅಂದರೆ ವಾಂಖೆಡೆ ಸ್ಟೇಡಿಯಂನಲ್ಲಿ ಟಾಸ್ ಗೆಲ್ಲುವುದು ಮುಖ್ಯ. ಆದರೆ ಅದು ನಮ್ಮ ಕೈಯಲ್ಲಿ ಇಲ್ಲ. ಇದುವೇ ನಮ್ಮ ತಂಡದ ದೊಡ್ಡ ಚಿಂತೆ. ಏಕೆಂದರೆ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಕೂಡ ಮುಖ್ಯವಾಗುತ್ತದೆ. ಅದರಲ್ಲೂ ವಾಂಖೆಡೆ ಸ್ಟೇಡಿಯಂನಲ್ಲಿ ಟಾಸ್ ಗೆಲ್ಲುವುದು ಅನಿವಾರ್ಯ.

ಆದರೆ ಟಾಸ್ ಗೆಲ್ಲುವುದು ನಮ್ಮ ಕೈಯಲ್ಲಿ ಇಲ್ಲ. ಹೀಗಾಗಿ ಸೆಮಿಫೈನಲ್​ನಲ್ಲಿ ನಮ್ಮ ದೊಡ್ಡ ಆತಂಕವೇ ಅದದು. ಏಕೆಂದರೆ ಈ ಮೈದಾನದಲ್ಲಿ ದ್ವಿತೀಯ ಇನಿಂಗ್ಸ್​ನಲ್ಲಿ ಬೌಲಿಮಡಗ್ ಮಾಡುವುದು ಕಷ್ಟಕರ ಎಂದು ಮೊರ್ನೆ ಮೊರ್ಕೆಲ್ ಹೇಳಿದ್ದಾರೆ.

ಇನ್ನು ವಾಂಖೆಡೆ ಮೈದಾನದ ಆಯಾಮಗಳು ಚಿಕ್ಕದಾಗಿರುವುದರಿಂದ ಬೌಲರ್‌ಗಳಿಗೆ ತಪ್ಪು ಮಾಡಲು ಇಲ್ಲಿ ಅವಕಾಶ ಕಡಿಮೆ. ಚೆಂಡು ಇಲ್ಲಿ ವೇಗವಾಗಿ ಸಾಗುತ್ತದೆ. ಹಾಗೆಯೇ ಪಿಚ್‌ನಲ್ಲಿ “ಹೆಚ್ಚುವರಿ ಬೌನ್ಸ್” ಕೂಡ ಇರುತ್ತದೆ.

ಬೌಲರ್‌ಗಳು ಸರಿಯಾದ ಲೈನ್ ಮತ್ತು ಲೆಂಗ್ತ್‌ನಲ್ಲಿ ಬೌಲಿಂಗ್ ಮಾಡಿದರೆ ಇದು ಸಹಕಾರಿ. ಇಲ್ಲದಿದ್ದರೆ ಬ್ಯಾಟರ್‌ಗಳು ಸುಲಭವಾಗಿ ರನ್ ಗಳಿಸಲಿದ್ದಾರೆ ಎಂದು ಮೊರ್ನೆ ಮೊರ್ಕೆಲ್ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಟಾಸ್ ಹೊರತುಪಡಿಸಿ, ಭಾರತವು ಫೀಲ್ಡಿಂಗ್‌ನಲ್ಲಿ 15-20 ರನ್‌ಗಳನ್ನು ಬಿಟ್ಟುಕೊಡುತ್ತಿರುವುದು ದೊಡ್ಡ ಹಿನ್ನಡೆ ಎಂದು  ಒಪ್ಪಿಕೊಂಡಿರುವ ಮೊರ್ನೆ ಮೊರ್ಕೆಲ್, ನಿರ್ಣಾಯಕ ಪಂದ್ಯದಲ್ಲಿ ಕ್ಷೇತ್ರ ರಕ್ಷಣೆ ಕೂಡ ಪ್ರಧಾನ ಪಾತ್ರವಹಿಸಲಿದೆ ಎಂದಿದ್ದಾರೆ.

ಒಟ್ಟಿನಲ್ಲಿ ವಾಂಖೆಡೆ ಮೈದಾನದ ಪಂದ್ಯಗಳಲ್ಲಿ ಟಾಸ್ ನಿರ್ಣಾಯಕ ಪಾತ್ರವಹಿಸುವುದರಿಂದ, ಟೀಮ್ ಇಂಡಿಯಾ ಟಾಸ್ ಗೆದ್ದ ಬೌಲಿಂಗ್ ಆಯ್ಕೆ ಮಾಡಿಕೊಳ್ಳಲಿದೆ ಎಂದು ಮೊರ್ನೆ ಮೊರ್ಕೆಲ್ ಪರೋಕ್ಷ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: IND vs ENG: ‘ನಾಣ್ಯ’ದಲ್ಲೇ ನಿರ್ಧಾರವಾಗಲಿದೆ ಪಂದ್ಯದ ಅರ್ಧ ಫಲಿತಾಂಶ

ಇದಾಗ್ಯೂ ಈ ಪಂದ್ಯದಲ್ಲಿ ಟಾಸ್ ಸೋತರೆ ಟೀಮ್ ಇಂಡಿಯಾ ಬೃಹತ್ ಮೊತ್ತ ಪೇರಿಸಿದರೆ ಪಂದ್ಯವನ್ನು ಗೆದ್ದುಕೊಳ್ಳಬಹುದು. ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಬ್ಯಾಟರ್​ಗಳ ಅಬ್ಬರವನ್ನು ನಿರೀಕ್ಷಿಸಬಹುದಾಗಿದೆ.

Published On – 8:53 am, Thu, 5 March 26

Source link

ವಿರೋಶ್ ರಿಸೆಪ್ಶನ್: ಮಹೇಶ್ ಬಾಬು ಮಗಳ ಕಂಡಾಗ ರಶ್ಮಿಕಾಗೆ ಬಂತು ಹಳೆಯ ನೆನಪು

Source link