All posts by nagaraj11081993

IND vs AFG: ಅರ್ಷದೀಪ್ ಮಾತು ಕೇಳದೆ ಕೆಟ್ಟ ಗಿಲ್; 48 ಎಸೆತಗಳಲ್ಲಿ ಶತಕ ಬಾರಿಸಿದ ಗುರ್ಬಾಜ್ – Kannada News | Rahmanullah Gurbaz Century vs India: Gill’s DRS Blunder Costs Dearly in Dharamshala ODI

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಮೊದಲ ಪಂದ್ಯ ಧರ್ಮಶಾಲಾದಲ್ಲಿ ನಡೆಯುತ್ತಿದೆ. ಮಳೆಯಿಂದ ತಡವಾಗಿ ಆರಂಭವಾದ ಪಂದ್ಯವನ್ನು ತಲಾ 25 ಓವರ್​ಗಳಿಗೆ ನಿಗದಿಪಡಿಸಲಾಗಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಅಫ್ಘಾನಿಸ್ತಾನ ತಂಡದ ಪರ ಅನುಭವಿ ಆರಂಭಿಕ ರಹಮಾನುಲ್ಲಾ ಗುರ್ಬಾಜ್ ಸ್ಫೋಟಕ ಬ್ಯಾಟಿಂಗ್‌ ಮೂಲಕ ಶತಕ ಸಿಡಿಸಿ ಮಿಂಚಿದ್ದಾರೆ. ಕೇವಲ 48 ಎಸೆತಗಳಲ್ಲಿ ಶತಕ ಬಾರಿಸಿದ ಗುರ್ಬಾಜ್ ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 8 ಬೌಂಡರಿ ಹಾಗೂ 8 ಭರ್ಜರಿ ಸಿಕ್ಸರ್‌ಗಳನ್ನು ಬಾರಿಸಿದರು. ಆದಾಗ್ಯೂ ರಹಮಾನುಲ್ಲಾ ಗುರ್ಬಾಜ್ ಅವರ ಈ ಶತಕದ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಮಾಡಿದ ಎಡವಟ್ಟು ಕೂಡ ಪ್ರಮುಖ ಪಾತ್ರವಹಿಸಿತು.

ವಾಸ್ತವವಾಗಿ ಟಾಸ್ ಸೋತು ಬ್ಯಾಟಿಂಗ್‌ ಆರಂಭಿಸಿದ ಅಫ್ಘಾನಿಸ್ತಾನ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ತಂಡ ಕೇವಲ 16 ರನ್​ಗಳಿಗೆ 2 ವಿಕೆಟ್‌ಗಳನ್ನು ಕಳೆದುಕೊಂಡಿತು. ಟೀಂ ಇಂಡಿಯಾ ಪರ ಪಾದಾರ್ಪಣೆಯ ಪಂದ್ಯವನ್ನಾಡಿದ ಗುರ್ನೂರ್ ಬ್ರಾರ್ ತಾವು ಬೌಲ್ ಮಾಡಿದ ಮೊದಲ ಓವರ್​ನಲ್ಲೇ ಇಬ್ರಾಹಿಂ ಜದ್ರಾನ್ ಅವರ ವಿಕೆಟ್ ಉರುಳಿಸಿದರು. ಆ ನಂತರ ಮೂರನೇ ಓವರ್​ನಲ್ಲಿ ದಾಳಿಗಿಳಿದ ಅರ್ಷದೀಪ್ ಸಿಂಗ್ ಓವರ್​ನ ಮೂರನೇ ಎಸೆತದಲ್ಲಿ ಸೆದಿಕುಲ್ಲಾ ಅಟಲ್ ಅವರ ವಿಕೆಟ್ ಉರುಳಿಸಿದರು. ಅದೇ ಓವರ್​ನಲ್ಲಿ ಮತ್ತೊಂದು ವಿಕೆಟ್ ಪಡೆಯುವ ಅವಕಾಶ ಟೀಂ ಇಂಡಿಯಾಕ್ಕಿತ್ತು. ಆದರೆ ನಾಯಕ ಶುಭ್​ಮನ್ ಗಿಲ್ ಮಾಡಿದ ಎಡವಟ್ಟು ತಂಡಕ್ಕೆ ತುಂಬಾ ದುಬಾರಿಯಾಯಿತು.

ಅರ್ಷದೀಪ್ ಸಿಂಗ್ ಎಸೆದ ಮೂರನೇ ಓವರ್​ನ 5ನೇ ಎಸೆತದಲ್ಲಿ ರಹಮಾನುಲ್ಲಾ ಗುರ್ಬಾಜ್ ಅವರ ವಿಕೆಟ್ ಪಡೆಯುವ ಅವಕಾಶವಿತ್ತು. ಅರ್ಷದೀಪ್ ಎಸೆದ 5ನೇ ಎಸೆತ ಗುರ್ಬಾಜ್ ಅವರ ಪ್ಯಾಡ್​ಗೆ ತಗುಲಿತು. ಕೂಡಲೇ ಅರ್ಷದೀಪ್ ವಿಕೆಟ್​ಗಾಗಿ ಅಂಪೈರ್ ಬಳಿ ಮನವಿ ಮಾಡಿದರು. ಆದರೆ ಅಂಪೈರ್ ಔಟ್ ನೀಡಲಿಲ್ಲ. ಇತ್ತ ಅರ್ಷದೀಪ್ ಡಿಆರ್​ಎಸ್ ತೆಗೆದುಕೊಳ್ಳುವಂತೆ ನಾಯಕ ಗಿಲ್ ಬಳಿ ಮನವಿ ಮಾಡಿದರು. ಆದರೆ ಶುಭ್​ಮನ್ ಗಿಲ್ ಅರ್ಷದೀಪ್ ಸಿಂಗ್ ಮಾತು ಕೇಳದೆ ವಿಕೆಟ್ ಕೀಪರ್ ಇಶಾನ್ ಕಿಶನ್ ಹಾಗೂ ಅನುಭವಿ ರೋಹಿತ್ ಶರ್ಮಾ ಅವರ ಮಾತು ಕೇಳಿ ಡಿಆರ್​ಎಸ್ ತೆಗೆದುಕೊಳ್ಳಲಿಲ್ಲ. ಕಿಶನ್ ಹಾಗೂ ರೋಹಿತ್, ಚೆಂಡು ಬ್ಯಾಟ್​ಗೆ ತಾಗಿದೆ ಎಂದು ಸನ್ನೆ ಮಾಡಿದರು. ಇದರಿಂದ ಗಿಲ್ ಡಿಆರ್​ಎಸ್ ತೆಗೆದುಕೊಳ್ಳಲಿಲ್ಲ.

ಆದರೆ ಆ ನಂತರ ತೋರಿಸಿದ ರಿಪ್ಲೆಯಲ್ಲಿ ಚೆಂಡು ಪ್ಯಾಡ್​ಗೆ ತಾಗಿರುವುದು ಸ್ಪಷ್ಟವಾಗಿ ಗೋಚರಿಸಿತು. ಇದನ್ನು ನೋಡಿದ ಅರ್ಷದೀಪ್ ಅಸಮಾಧಾನ ಹೊರಹಾಕಿದರು. ಆ ಸಮಯದಲ್ಲಿ ಗುರ್ಬಾಜ್ ಕೇವಲ 14 ರನ್ ಬಾರಿಸ ಆಡುತ್ತಿದ್ದರು. ಟೀಂ ಇಂಡಿಯಾ ಮಾಡಿದ ಎಡವಟ್ಟಿನಿಂದ ಜೀವದಾನ ಪಡೆದ ಗುರ್ಬಾಜ್ ಕೇವಲ 48 ಎಸೆತಗಳಲ್ಲಿ ಸ್ಫೋಟಕ ಶತಕ ಬಾರಿಸಿದರು. ಅಂದರೆ ಭಾರತ ತಂಡದ ಒಂದು ತಪ್ಪು ನಿರ್ಧಾರದಿಂದ 88 ರನ್​ಗಳ ದಂಡ ತೆರಬೇಕಾಯಿತು.

Source link

Chanakya Niti: ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಈ ಪಾಠಗಳನ್ನು ಕಲಿಸಬೇಕು ಎನ್ನುತ್ತಾರೆ ಚಾಣಕ್ಯ – Kannada News | Chanakya Niti: These are the life lessons every parent should teach their children

ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಪೋಷಕರು (parent) ಬಹುಮುಖ್ಯ ಪಾತ್ರವನ್ನು  ವಹಿಸುತ್ತಾರೆ. ಹಾಗಾಗಿ ಮಕ್ಕಳಿಗೆ ಬಾಲ್ಯದಲ್ಲಿ ಶಿಕ್ಷಣದ ಜೊತೆಗೆ ಒಳ್ಳೆಯ ಮೌಲ್ಯಗಳನ್ನು, ಉತ್ತಮ ಅಭ್ಯಾಸಗಳನ್ನು ಕಲಿಸುವುದು ತುಂಬಾನೇ ಮುಖ್ಯವಾಗಿದೆ. ಪೋಷಕರು ಕಲಿಸುವ ಈ ಪಾಠಗಳು ಮಕ್ಕಳನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ. ಅದರಲ್ಲೂ ಈ ಕೆಲವೊಂದು ವಿಷಯಗಳನ್ನು ಹೆತ್ತವರು ಮಕ್ಕಳಿಗೆ ಕಲಿಸಿಕೊಡಲೇಬೇಕು, ಇದು ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಚಾಣಕ್ಯರು ಹೇಳಿರುವಂತೆ ಹೆತ್ತವರು ತಮ್ಮ ಮಕ್ಕಳಿಗೆ ಬಾಲ್ಯದಲ್ಲಿ ಯಾವೆಲ್ಲಾ ವಿಚಾರಗಳನ್ನು ಕಲಿಸಿಕೊಡಬೇಕು ಎಂಬುದನ್ನು ನೋಡೊಣ ಬನ್ನಿ.

ಪೋಷಕರು ಮಕ್ಕಳಿಗೆ ಕಲಿಸಿಕೊಡಬೇಕಾದ ಪಾಠಗಳು:

ಯಾವಾಗಲೂ ಸ್ನೇಹಿತರನ್ನು ಬುದ್ಧಿವಂತಿಕೆಯಿಂದ ಆರಿಸಿ: ಇದು ಮಕ್ಕಳಿಗೆ ಹೇಳಿಕೊಡಬೇಕಾದ ಅತ್ಯಂತ ಮುಖ್ಯವಾದ ಪಾಠಗಳಲ್ಲಿ ಒಂದಾಗಿದೆ. ಆಚಾರ್ಯ ಚಾಣಕ್ಯರ ಪ್ರಕಾರ, ನಾವು ಜೊತೆಗಿರುವ ಜನರು ನಮ್ಮ ಅಭ್ಯಾಸಗಳು, ನಮ್ಮ ಆಲೋಚನೆ ಮತ್ತು ನಮ್ಮ ಭವಿಷ್ಯದ ಮೇಲೆ ಪ್ರಭಾವ ಬೀರುತ್ತಾರೆ. ಹಾಗಾಗಿ ಯಾವಾಗಲೂ ಒಳ್ಳೆಯವರ ಸಹವಾಸವೇ ಮಾಡಬೇಕು ಎಂದು ಪೋಷಕರು ಮಕ್ಕಳಿಗೆ ತಿಳಿಹೇಳಬೇಕು.

ಕಠಿಣ ಪರಿಶ್ರಮ ಅತ್ಯಗತ್ಯ: ಯಶಸ್ಸಿಗೆ ಶಾರ್ಟ್‌ಕಟ್‌ಗಳು ಇಲ್ಲ ಮತ್ತು ತ್ವರಿತ ಯಶಸ್ಸನ್ನು ಪಡೆಯಲು ಸಾಧ್ಯವಿಲ್ಲ.  ಯಶಸ್ಸು ಯಾವಾಗಲೂ ಸಮರ್ಪಣೆ, ಶಿಸ್ತು ಮತ್ತು ನಿರಂತರ ಪ್ರಯತ್ನದಿಂದ ಬರುತ್ತದೆ. ಕಠಿಣ ಪರಿಶ್ರಮ ಮತ್ತು ದೃಢಸಂಕಲ್ಪವು ವ್ಯಕ್ತಿಯ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ. ಆದ್ದರಿಂದ ಪೋಷಕರು ಮಕ್ಕಳಿಗೆ ಕಠಿಣ ಪರಿಶ್ರಮದಿಂದ ಮಾತ್ರ ಯಶಸ್ಸನ್ನು ಗಳಿಸಲು ಸಾಧ್ಯ ಎಂಬುದನ್ನು ಕಲಿಸಬೇಕು. ಜೊತೆಗೆ ಈ ಯಶಸ್ಸಿನ ಹಾದಿಯಲ್ಲಿ ಶಿಸ್ತು ಎಷ್ಟು ಮುಖ್ಯ ಪಾತ್ರವನ್ನು ವಹಿಸುತ್ತದೆ ಎಂಬುದನ್ನು ಸಹ ಕಲಿಸಬೇಕು.

ಭಾವನೆಗಳನ್ನು ನಿಯಂತ್ರಿಸುವುದು ಹೇಗೆಂದು ಕಲಿಸಿ: ಪೋಷಕರು ತಮ್ಮ ಮಕ್ಕಳಿಗೆ ಭಾವನೆಗಳನ್ನು ಬಹಿರಂಗವಾಗಿ ವ್ಯಕ್ತಪಡಿಸಲು ಮತ್ತು ಕಷ್ಟಕರವಾದ ಕ್ಷಣಗಳನ್ನು ಶಾಂತವಾಗಿ ನಿಭಾಯಿಸುವ ಹೇಗೆ ಎಂಬುದನ್ನು ಕಲಿಸಬೇಕು.

ಶಿಸ್ತಿನ ಮಹತ್ವವನ್ನು ವಿವರಿಸಿ: ಶಿಸ್ತು ಬದುಕುವ ಕಲೆಯನ್ನು ಕಲಿಸುತ್ತದೆ. ಆದ್ದರಿಂದ, ಮಕ್ಕಳಲ್ಲಿ ಮೊದಲಿನಿಂದಲೂ ಶಿಸ್ತನ್ನು ಬೆಳೆಸಿ. ಸಮಯಕ್ಕೆ ಸರಿಯಾಗಿ ಮಲಗುವುದು, ಸಮಯಕ್ಕೆ ಸರಿಯಾಗಿ ಊಟ ಮಾಡುವುದು ಮತ್ತು ಸಮಯಕ್ಕೆ ಸರಿಯಾಗಿ ಆಟವಾಡುವುದು. ಈ ಎಲ್ಲಾ ಚಟುವಟಿಕೆಗಳನ್ನು ಶಿಸ್ತಿನ ಚೌಕಟ್ಟಿನೊಳಗೆ ಮಾಡುವುದನ್ನು ಕಲಿಸಿ.

ಇದನ್ನೂ ಓದಿ:  ಅತಿಯಾದ ಒಳ್ಳೆಯತನ ಒಳ್ಳೆಯದಲ್ಲ; ಏಕೆ ಗೊತ್ತಾ?

ಜ್ಞಾನ ಮತ್ತು ಕಲಿಕೆಯ ಹಸಿವು: ಜ್ಞಾನವು ವ್ಯಕ್ತಿಯ ದೊಡ್ಡ ಶಕ್ತಿ ಎಂದು ಚಾಣಕ್ಯ ನಂಬಿದ್ದರು. ಮಕ್ಕಳಲ್ಲಿ ಚಿಕ್ಕ ವಯಸ್ಸಿನಿಂದಲೇ ಕಲಿಯುವ ಕುತೂಹಲ ಮತ್ತು ಓದುವ ಅಭ್ಯಾಸವನ್ನು ಬೆಳೆಸುವುದು ಮುಖ್ಯ. ಇದು ಅವರ ಪರಿಧಿಯನ್ನು ವಿಸ್ತರಿಸುತ್ತದೆ ಮತ್ತು ಪ್ರತಿಯೊಂದು ಸಂದರ್ಭದಲ್ಲೂ ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳಲು ಅವರಿಗೆ ಅನುವು ಮಾಡಿಕೊಡುತ್ತದೆ.

ಧರ್ಮ ಮತ್ತು ನಂಬಿಕೆಯ ಬಗ್ಗೆ ಜಾಗೃತಿ ಮೂಡಿಸಿ: ಮಕ್ಕಳಿಗೆ ಧರ್ಮ ಮತ್ತು ನಂಬಿಕೆಯ ಬಗ್ಗೆ ಪೋಷಕರು ಮಕ್ಕಳಿಗೆ ಕಲಿಸಬೇಕು ಎನ್ನುತ್ತಾರೆ ಚಾಣಕ್ಯ. ಇದು ಅವರಿಗೆ ಸರಿ ಮತ್ತು ತಪ್ಪುಗಳ ಪ್ರಜ್ಞೆಯನ್ನು ಬೆಳೆಸಿಕೊಳ್ಳಲು ಸಹಾಯ ಮಾಡುತ್ತದೆ.

ವಿಧೇಯತೆಯನ್ನು ಬೆಳೆಸಿಕೊಳ್ಳಿ: ಹಿರಿಯರಿಗೆ ಗೌರವ ಕೊಡುವುದು ಹೇಗೆ, ಸಮಾಜದಲ್ಲಿ ಹೇಗಿರಬೇಕು ಇತ್ಯಾದಿ ವಿಧೇಯತೆಯ ಪಾಠವನ್ನು ಮಾಡಬೇಕು. ಉತ್ತಮ ನಡವಳಿಕೆ ಎಷ್ಟು ಮುಖ್ಯ ಎಂಬುದನ್ನು ಹೇಳಬೇಕು. ಮುಖ್ಯವಾಗಿ ಪೋಷಕರು ತಮ್ಮ ಮಕ್ಕಳಿಗೆ ಮಾನವೀಯ ಮೌಲ್ಯಗಳನ್ನು ಕಲಿಸಬೇಕು. ಇವು ಮಕ್ಕಳನ್ನು ಸಮಾಜದಲ್ಲಿ ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುತ್ತವೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಧೀರಜ್ ಸೇಠ್ ನೇಮಕ – Kannada News | Lt General Dhiraj Seth appointed as next Chief of Army Staff; who is he?

ನವದೆಹಲಿ, ಜೂನ್ 13: ಭಾರತೀಯ ಸೇನೆಯ (Indian Army) ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರನ್ನು ನೇಮಿಸಲಾಗಿದೆ. ಭಾರತ ಸರ್ಕಾರದ ರಕ್ಷಣಾ ಸಚಿವಾಲಯವು ಸೇನೆಯ ಅತ್ಯಂತ ಹಿರಿಯ ಮತ್ತು ಅನುಭವಿ ಅಧಿಕಾರಿಯಾದ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರನ್ನು ಮುಂದಿನ ಸೇನಾ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಿದೆ. ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರು ಭಾರತೀಯ ಸೇನೆಯಲ್ಲಿ ಅತ್ಯಂತ ಸುದೀರ್ಘ ಅನುಭವ ಹೊಂದಿರುವ ಅಧಿಕಾರಿಯಾಗಿದ್ದಾರೆ.

ನೂತನ ಸೇನಾ ಮುಖ್ಯಸ್ಥರಾಗಿ ನೇಮಕಗೊಳ್ಳುವ ಮುನ್ನ ಅವರು ಭಾರತೀಯ ಸೇನೆಯ ಅತ್ಯಂತ ಪ್ರಮುಖ ಕಮಾಂಡ್ ಆಯಕಟ್ಟಿನ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರು ರಾಷ್ಟ್ರೀಯ ರಕ್ಷಣಾ ಅಕಾಡೆಮಿ (NDA) ಮತ್ತು ವೆಲ್ಲಿಂಗ್ಟನ್‌ನ ಡಿಫೆನ್ಸ್ ಸರ್ವಿಸಸ್ ಸ್ಟಾಫ್ ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿದ್ದಾರೆ. ಧೀರಜ್ ಸೇಠ್ 1986ರಲ್ಲಿ ಭಾರತೀಯ ಸೇನೆಯ ಪ್ರತಿಷ್ಠಿತ ‘ಆರ್ಮರ್ಡ್ ಕಾರ್ಪ್ಸ್’ಗೆ ನಿಯೋಜನೆಗೊಂಡಿದ್ದರು.

ಇದನ್ನೂ ಓದಿ: Operation Sindoor 2.0: ಭಾರತ ಆಪರೇಷನ್ ಸಿಂಧೂರ್ 2.0ಗೆ ತಯಾರಿ ನಡೆಸುತ್ತಿದೆ:ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ

ಧೀರಜ್ ಸೇಠ್ ಅವರು ಭಾರತೀಯ ಸೇನೆಯಲ್ಲಿ ಹಲವಾರು ಪ್ರಮುಖ ಕಾರ್ಯಾಚರಣೆ ಹಾಗೂ ನಾಯಕತ್ವದ ಪಾತ್ರಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ‘ಆಪರೇಷನ್ ಸಿಂಧೂರ್’ ಸಂದರ್ಭದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು, ಭಾರತದ ಪಶ್ಚಿಮ ಗಡಿಯಲ್ಲಿ ನಡೆದ ಪ್ರಮುಖ ತ್ರಿ-ಸೇವಾ (ಭೂಸೇನೆ, ವಾಯುಸೇನೆ ಮತ್ತು ನೌಕಾಸೇನೆ ಜಂಟಿ) ಮಿಲಿಟರಿ ಸಮರಾಭ್ಯಾಸಗಳ ಉಸ್ತುವಾರಿಯನ್ನೂ ನೋಡಿಕೊಂಡಿದ್ದರು.

ಇದನ್ನೂ ಓದಿ: ಭಾರತದ ವಾಯುಸೇನಾ ಬಲದ ಕೊರತೆ ನೀಗಿಸಲಿರುವ 114 ರಫೇಲ್ ಯುದ್ಧವಿಮಾನಗಳು

ಪ್ರಸ್ತುತ ಸೇನಾ ಮುಖ್ಯಸ್ಥರಾಗಿರುವ ಜನರಲ್ ಉಪೇಂದ್ರ ದ್ವಿವೇದಿ ಜೂನ್ 30ರಂದು ನಿವೃತ್ತಿ ಹೊಂದಲಿದ್ದು, ಅದೇ ದಿನ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರು ಭಾರತದ 31ನೇ ಸೇನಾ ಮುಖ್ಯಸ್ಥರಾಗಿ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ. ಇವರ ಅಧಿಕಾರಾವಧಿ ಆಗಸ್ಟ್ 31, 2028ರವರೆಗೆ ಇರಲಿದೆ. ಪ್ರಸ್ತುತ ಜಾಗತಿಕ ಬಿಕ್ಕಟ್ಟು ಹಾಗೂ ಚೀನಾ-ಭಾರತ ಗಡಿ ಉದ್ವಿಗ್ನತೆಯ ನಡುವೆ, ಭಾರತೀಯ ಸೇನೆಯ ಆಧುನೀಕರಣ ಮತ್ತು ರಕ್ಷಣಾ ಸನ್ನದ್ಧತೆಯನ್ನು ಹೆಚ್ಚಿಸುವ ಪ್ರಮುಖ ಜವಾಬ್ದಾರಿ ನೂತನ ಸೇನಾ ಮುಖ್ಯಸ್ಥರ ಹೆಗಲೇರಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜೂ ಎನ್​​ಟಿಆರ್ ಬಳಿಕ ಮತ್ತೊಬ್ಬ ಟಾಲಿವುಡ್ ಸ್ಟಾರ್ ಸಿನಿಮಾನಲ್ಲಿ ರುಕ್ಮಿಣಿ ವಸಂತ್ – Kannada News | Rukmini Vasanth to act as heroine in Nani’s new movie

ರುಕ್ಮಿಣಿ ವಸಂತ್ (Rukmini Vasanth) ಕನ್ನಡದ ಸ್ಟಾರ್ ನಟಿ. ‘ಸಪ್ತ ಸಾಗರದಾಚೆ ಎಲ್ಲೊ’ ಮತ್ತು ‘ಕಾಂತಾರ: ಚಾಪ್ಟರ್ 1’ ಸಿನಿಮಾಗಳ ಬಳಿಕ ರುಕ್ಮಿಣಿ ವಸಂತ್ ಪ್ಯಾನ್ ಇಂಡಿಯಾ ಸ್ಟಾರ್ ಆಗುತ್ತಿದ್ದಾರೆ. ತೆಲುಗು, ತಮಿಳು ಸಿನಿಮಾಗಳಲ್ಲಿ ಈಗಾಗಲೇ ನಟಿಸಿರುವ ರುಕ್ಮಿಣಿ ವಸಂತ್, ಹಿಂದಿ ಸಿನಿಮಾ ಒಂದರ ಬಗ್ಗೆಯೂ ಮಾತುಕತೆ ಮಾಡಿದ್ದರು. ತೆಲುಗಿನ ‘ಅಪ್ಪುಡೊ ಇಪ್ಪುಡೊ ಎಪ್ಪುಡೊ’ ಸಿನಿಮಾನಲ್ಲಿ ನಟಿಸಿದ್ದ ರುಕ್ಮಿಣಿ ವಸಂತ್, ಜೂ ಎನ್​​ಟಿಆರ್ ಜೊತೆಗೆ ‘ಡ್ರ್ಯಾಗನ್’ ಸಿನಿಮಾನಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದರ ನಡುವೆ ಇದೀಗ ಮತ್ತೊಬ್ಬ ಟಾಲಿವುಡ್ ಸ್ಟಾರ್ ಹೀರೋ ಅವರ ಸಿನಿಮಾನಲ್ಲಿ ನಟಿಸಲು ಸಜ್ಜಾಗಿದ್ದಾರೆ.

ರುಕ್ಮಿಣಿ ವಸಂತ್ ಅವರು ಇದೀಗ ತೆಲುಗು ಚಿತ್ರರಂಗದ ಸ್ಟಾರ್ ನಟ ನಾನಿ ನಿರ್ಮಾಣ ಮಾಡುತ್ತಿರುವ ಹೊಸ ಸಿನಿಮಾನಲ್ಲಿ ನಾಯಕಿಯಾಗಿ ನಟಿಸಲಿದ್ದಾರೆ. ರುಕ್ಮಿಣಿ ವಸಂತ್ ಅವರನ್ನು ಸಿನಿಮಾದ ನಾಯಕಿಯಾಗಿ ಖುದ್ದು ನಾನಿ ಅವರೇ ಆಯ್ಕೆ ಮಾಡಿದ್ದಾರೆ. ರುಕ್ಮಿಣಿ ಅವರಿಗೂ ಕತೆ ಇಷ್ಟವಾಗಿದ್ದು, ಈ ಅವಕಾಶದ ಬಗ್ಗೆ ಉತ್ಸುಕರಾಗಿದ್ದಾರೆ. ರುಕ್ಮಿಣಿ ಅವರು ತಮ್ಮ ಅಭಿನಯಕ್ಕಾಗಿ ಗಮನ ಸೆಳೆಯುತ್ತಿದ್ದು, ದಕ್ಷಿಣ ಭಾರತದ ಚಲನಚಿತ್ರ ನಿರ್ಮಾಪಕ, ನಿರ್ದೇಶಕರ ಜನಪ್ರಿಯ ಆಯ್ಕೆ ಆಗಿದ್ದಾರೆ. ಅಂದಹಾಗೆ ಈ ಸಿನಿಮಾನಲ್ಲಿ ನಾನಿ ನಾಯಕನಲ್ಲ, ಬದಲಿಗೆ ಮತ್ತೊಬ್ಬರು ನಾಯಕ ಎನ್ನಲಾಗಿದ್ದು, ಆ ನಾಯಕನ ಹುಡುಕಾಟವನ್ನು ಚಿತ್ರತಂಡ ಮುಂದುವರೆಸಿದೆ.

ಇದನ್ನೂ ಓದಿ:ಬೆಂಗಳೂರಲ್ಲಿ ವರುಣಾರ್ಭಟ: ನಗರದ ಹಲವೆಡೆ ಧಾರಾಕಾರ ಮಳೆ; ಸಂಚಾರ ಅಸ್ತವ್ಯಸ್ತ

ಈ ಹಿಂದೆ ‘ದಂಡೋರ’ ಹೆಸರಿನ ಸಿನಿಮಾ ನಿರ್ದೇಶಿಸಿದ್ದ ಮುರಳಿಕಾಂತ್ ದೇವಸೋತ್ ನಾನಿ-ರುಕ್ಮಿಣಿ ವಸಂತ್ ಅವರ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಯಾವ ದೊಡ್ಡ ಸ್ಟಾರ್ ನಟರೂ ಇಲ್ಲದಿದ್ದರೂ ಕೇವಲ ಕಂಟೆಂಟ್​​ನಿಂದ ಆ ಸಿನಿಮಾ ಗಮನ ಸೆಳೆದಿತ್ತು. ಸದ್ಯ ತಂಡವು ಚಿತ್ರಕಥೆ ಮತ್ತು ಇತರ ಪ್ರೀ ಪ್ರೊಡಕ್ಷನ್​​ನಲ್ಲಿ ತೊಡಗಿಕೊಂಡಿದ್ದು, ಮುರಳಿಕಾಂತ್ ಅವರು ಚಿತ್ರಕತೆಗೆ ಅಂತಿಮ ರೂಪ ನೀಡುತ್ತಿದ್ದಾರಂತೆ. ಅದರೊಂದಿಗೆ ಪೋಷಕ ನಟರು ಮತ್ತು ತಾಂತ್ರಿಕ ತಂಡವನ್ನು ಅಂತಿಮಗೊಳಿಸುತ್ತಿದ್ದಾರೆ.

ನಾನಿ ಅವರು ವಾಲ್ ಪೋಸ್ಟರ್ ಸಿನೆಮಾ ಸಂಸ್ಥೆಯ ಮೂಲಕ ಹೊಸ ರೀತಿಯ ಕಥೆಗಳನ್ನು ಹೇಳುತ್ತಾ ಬರುತ್ತಿದ್ದಾರೆ ಜೊತೆಗೆ ಪ್ರತಿಭಾನ್ವಿತ ನಿರ್ದೇಶಕರನ್ನು ಬೆಂಬಲಿಸುವ ಕಾರ್ಯವನ್ನೂ ಮಾಡುತ್ತಿದ್ದಾರೆ. ಈಗಾಗಲೇ ‘ಹಿಟ್ 3’ ಮತ್ತು ಇತರೆ ಸಿನಿಮಾಗಳನ್ನು ನಿರ್ಮಿಸಿರುವ ನಾನಿ, ಮೆಗಾಸ್ಟಾರ್ ಚಿರಂಜೀವಿ ನಟನೆಯ ಹೊಸ ಸಿನಿಮಾ ಒಂದಕ್ಕೆ ಬಂಡವಾಳ ಹೂಡಿದ್ದಾರೆ. ರುಕ್ಮಿಣಿ ವಸಂತ್ ಅವರ ಈ ಸಿನಿಮಾದ ಚಿತ್ರೀಕರಣವು ಆಗಸ್ಟ್ ತಿಂಗಳಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IND vs AFG: ಏಕದಿನದಲ್ಲಿ 37 ವರ್ಷಗಳ ಹಳೆಯ ದಾಖಲೆ ಮುರಿದ ರೋಹಿತ್ ಶರ್ಮಾ – Kannada News | Rohit Sharma Breaks 37 Year ODI Record: Oldest Indian Player in India Afghan Match

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More

Source link

Bidadi Township Project Row: ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!

ರಾಮನಗರ, ಜೂನ್ 13: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕನಸಿನ ಯೋಜನೆಯಾದ ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು, ಭೂಸ್ವಾಧೀನ ಪ್ರಕ್ರಿಯೆಯನ್ನು ಆರಂಭಿಸಿದೆ. ಆದರೆ, ಈ ಯೋಜನೆಗೆ ಅನ್ನದಾತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಯೋಜನೆಯ ಅಂತಿಮ ಅಧಿಸೂಚನೆ ಹೊರಡಿಸಿರುವ ಸರ್ಕಾರದ ನಡೆ ಖಂಡಿಸಿ ರೈತರು ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ. ರಾಮನಗರದ ಎಪಿಎಂಸಿ ಆವರಣದ ರೈತಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ, ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಜೂನ್ 22ರಂದು ‘ಬೈರಮಂಗಲ ಚಲೋ’ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಬಿಡದಿಯ ಬಿಜಿಎಸ್ ವೃತ್ತದಿಂದ ಬೈರಮಂಗಲ ಗ್ರಾಮದವರೆಗೂ ಬೃಹತ್ ಬೈಕ್ ರ್ಯಾಲಿ ಮತ್ತು ಮೆರವಣಿಗೆಯನ್ನು ಆಯೋಜಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಡಿವೋರ್ಸ್ ಬಗ್ಗೆ ಮನಬಿಚ್ಚಿ ಮಾತನಾಡಿದ ನಟಿ ನಿವೇದಿತಾ ಗೌಡ – Kannada News | Niveditha Gowda talks about her divorce with Chandan Shetty

ನಿವೇದಿತಾ ಗೌಡ (Niveditha Gowda) ಮತ್ತು ಚಂದನ್ ಶೆಟ್ಟಿ ಅವರ ದಾಂಪತ್ಯ ಮತ್ತು ವಿಚ್ಛೇದನ ಎರಡೂ ಸಹ ಬಹಳ ಚರ್ಚೆಯಲ್ಲಿದ್ದವು. ಬಿಗ್​​ಬಾಸ್​​ ಸೀಸನ್ 5ರ ಸ್ಪರ್ಧಿಗಳಾಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅಲ್ಲಿಯೇ ಪ್ರೀತಿಸಿ ಬಳಿಕ 2020ರ ಫೆಬ್ರವರಿ 24ರಂದು ವಿವಾಹವಾದರು. ಸಾಮಾಜಿಕ ಜಾಲತಾಣದಲ್ಲಿ ಇಬ್ಬರೂ ಕ್ಯೂಟ್ ವಿಡಿಯೋಗಳನ್ನು ಸಹ ಆಗಾಗ್ಗೆ ಹಂಚಿಕೊಳ್ಳುತ್ತಿದ್ದರು. ವಿಡಿಯೋ ನೋಡಿದ ಅಭಿಮಾನಿಗಳು ಇಬ್ಬರದ್ದೂ ಸಿಹಿ ದಾಂಪತ್ಯ ಎಂದುಕೊಂಡಿದ್ದರು. ಆದರೆ ಮದುವೆಯಾಗಿ ನಾಲ್ಕು ವರ್ಷಗಳ ಬಳಿಕ ಅಂದರೆ 2024ರಲ್ಲಿ ಇಬ್ಬರೂ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದುಕೊಂಡರು. ಇಬ್ಬರೂ ಈಗ ಸ್ವತಂತ್ರ್ಯ ಜೀವನ ನಡೆಸುತ್ತಿದ್ದಾರೆ. ಇದೀಗ ಸಂದರ್ಶನವೊಂದರಲ್ಲಿ ನಿವೇದಿತಾ ಗೌಡ ಅವರು ತಮ್ಮ ವಿಚ್ಛೇದನದ ಬಗ್ಗೆ ಮಾತನಾಡಿದ್ದಾರೆ.

ನಿವೇದಿತಾ ಗೌಡ ಮತ್ತು ಚಂದನ್ ಶೆಟ್ಟಿ ಅವರಿಗೆ ಈಗಲೂ ವಿಚ್ಛೇದನದ ಬಗ್ಗೆ ಪ್ರಶ್ನೆಗಳು ಎದುರಾಗುತ್ತಲೇ ಇರುತ್ತವೆ. ಸಾಮಾಜಿಕ ಜಾಲತಾಣದಲ್ಲಿ ಬಹಳ ಸಕ್ರಿಯರಾಗಿರುವ ನಿವೇದಿತಾ ಗೌಡ ಅವರಿಗೆ ನೆಟ್ಟಿಗರು ಥರವೇವಾರಿ ಕಮೆಂಟ್​​ಗಳನ್ನು ಹಾಕುತ್ತಿರುತ್ತಾರೆ. ವಿಚ್ಛೇದನಕ್ಕೆ ನಿವೇದಿತಾ ಕಾರಣ, ನಿವೇದಿತಾಗೆ ಪ್ರೀತಿಯ ಮಹತ್ವ ಗೊತ್ತಿಲ್ಲ ಎಂದೆಲ್ಲ ಕಮೆಂಟ್​​ಗಳನ್ನು ಹಾಕುತ್ತಿರುತ್ತಾರೆ. ಇದೀಗ ಮೊದಲ ಬಾರಿಗೆ ಯೂಟ್ಯೂಬ್ ಸಂದರ್ಶನವೊಂದರಲ್ಲಿ ವಿಚ್ಛೇದನದ ಬಗ್ಗೆ ನಿವೇದಿತಾ ಗೌಡ ಮಾತನಾಡಿದ್ದಾರೆ.

‘ವಿಚ್ಛೇದನ ಪಡೆಯಬೇಕು ಎಂದು ಯಾರೂ ಮದುವೆ ಆಗುವುದಿಲ್ಲ. ಚೆನ್ನಾಗಿರಬೇಕು, ಚೆನ್ನಾಗಿರ್ತೀವಿ ಅಂತಲೇ ಎಲ್ಲರೂ ಮದುವೆ ಆಗುವುದು. ನಾವೂ ಸಹ ಹಾಗೆಯೇ ಅಂದುಕೊಂಡಿದ್ದೆವು. ಆದರೆ ನಮ್ಮಿಬ್ಬರಿಗೂ ಹೊಂದಾಣಿಕೆ ಇರಲಿಲ್ಲ. ಡಿವೋರ್ಸ್ ಏಕೆ ಆಯಿತು ಎಂದು ಕಾರಣ ಹೇಳೋಕೆ ನಾನು ಹೋಗುವುದಿಲ್ಲ. ಅದು ನಮ್ಮಿಬ್ಬರ ವೈಯಕ್ತಿಕ ವಿಷಯ. ಆದರೆ ವಿಚ್ಛೇದನದ ಬಳಿಕ ಸಂಬಂಧ ಇಲ್ಲದೋರೆಲ್ಲ ಬಂದು ಏನೇನೋ ಹೇಳೋಕೆ ಶುರು ಮಾಡಿದರು. ಎಲ್ಲದಕ್ಕೂ ಫುಲ್​​ಸಸ್ಟಾಪ್ ಇಡಬೇಕೆಂದು ನಾವು ಸುದ್ದಿಗೋಷ್ಠಿ ನಡೆಸಿದ್ದೆವು’ ಎಂದು ನಿವೇದಿತಾ ಹೇಳಿದ್ದಾರೆ.

ಇದನ್ನೂ ಓದಿ:ಕ್ಯೂಟ್ ಟ್ರಾನ್ಸಿಷನ್ ವಿಡಿಯೋ ಹಂಚಿಕೊಂಡ ನಿವೇದಿತಾ ಗೌಡ

‘ನಮ್ಮಿಬ್ಬರ ನಡುವೆ ಪರಸ್ಪರ ಗೌರವ ಇದೆ. ಬೇರೆಯವರ ಖಾಸಗಿ ಜೀವನದ ಬಗ್ಗೆ ಗೌರವ ಸಹ ಇದೆ. ಇದೇ ಕಾರಣಕ್ಕೆ ನಾವು ವಿಚ್ಛೇದನದ ಬಗ್ಗೆ ನಾವು ಮಾತನಾಡಿಲ್ಲ. ಅದು ಅನಗತ್ಯ ಸಹ, ನನ್ನ ಹತ್ತಿರದವರಿಗೆ ಗೊತ್ತಾದರೆ ಸಾಕು, ಎಲ್ಲರಿಗೂ ಗೊತ್ತಾಗುವ ಅಗತ್ಯ ಇಲ್ಲ. ಜನರು ಅವರಿಗೆ ಏನು ಬೇಕೋ ಅದನ್ನು ನಂಬುತ್ತಾರೆ. ಅದು ಅವರಿಗೆ ಬಿಟ್ಟಿದ್ದು, ಎಲ್ಲರನ್ನೂ ಕನ್ವಿನ್ಸ್ ಮಾಡೋಕೆ ಆಗಲ್ಲ’ ಎಂದು ನಿವೇದಿತಾ ಹೇಳಿದ್ದಾರೆ.

ಅಲ್ಲದೆ, ತಮ್ಮ ಮದುವೆಯ ಮೇಲೆ ಸಾಮಾಜಿಕ ಜಾಲತಾಣದ ಪ್ರಭಾವ ಹೆಚ್ಚಾಗಿತ್ತು ಎಂದಿರುವ ನಿವೇದಿತಾ, ‘ನಾವು ಬಿಗ್​​ಬಾಸ್​​​ಗೆ ಹೋಗಿದ್ದಕ್ಕೆ ಅಲ್ಲಿಯೇ ನಮ್ಮನ್ನು ‘ಜೋಡಿ’ ಎಂದು ಬ್ರ್ಯಾಂಡ್ ಮಾಡಿದ್ದರು. ಸಾಮಾಜಿಕ ಜಾಲತಾಣದಲ್ಲೂ ಅದೇ ತುಂಬಿತ್ತು, ಹೋದಲ್ಲೆಲ್ಲ ನೀವು ಮದುವೆ ಆಗಬೇಕು ಎಂದು ಹೇಳುತ್ತಿದ್ದರು. ನಾವು ಆ ಪ್ರಭಾವಕ್ಕೆ ಒಳಗಾದೆವು. ಮದುವೆ ಆದೆವು, ಆದರೆ ನಮ್ಮ ನಡುವೆ ಕಂಪಾಟಿಬಿಲಿಟಿ ಇರಲಿಲ್ಲ’ ಎಂದಿದ್ದಾರೆ ನಟಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಲ್ಲಿ ವರುಣಾರ್ಭಟ: ನಗರದ ಹಲವೆಡೆ ಧಾರಾಕಾರ ಮಳೆ; ಸಂಚಾರ ಅಸ್ತವ್ಯಸ್ತ – Kannada News | Bengaluru Rain: Heavy Downpour Lashes Several Parts of City, Triggers Major Traffic Congestion

ಬೆಂಗಳೂರು, ಜೂನ್​​ 13: ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲೂ (Karnataka) ಮುಂಗಾರು ಚುರುಕುಗೊಂಡಿದೆ. ಅದರಲ್ಲೂ ಸಿಲಿಕಾನ್​ ಸಿಟಿಯ ವಾತಾವರಣ ಸಂಪೂರ್ಣ ಬದಲಾಗಿದೆ. ಸಂಜೆಯಾಗುತ್ತಿದ್ದಂತೆ ನಗರದ ಹಲವೆಡೆ ಧಾರಾಕಾರ ಮಳೆ (Rain) ಆರಂಭವಾಗಿದ್ದು, ಸಾರ್ವಜನಿಕರ ಜನಜೀವನ ಮತ್ತು ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಇನ್ನು ಮಳೆಯಿಂದಾಗಿ ಹಲವೆಡೆ ಟ್ರಾಫಿಕ್ ಜಾಮ್​​ ಕೂಡ ಉಂಟಾಗಿದೆ.

ಮುಖ್ಯಾಂಶಗಳು

  • ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ
  • ಮಳೆಯಿಂದ ಮಂದಗತಿಯಲ್ಲಿ ವಾಹನಗಳ ಸಂಚಾರ
  • ಫ್ಲೈಓವರ್, ಸ್ಕೈವಾಕ್ ಕೆಳಗೆ ಆಶ್ರಯ ಪಡೆದ ಸವಾರರು

ಎಲ್ಲೆಲ್ಲಿ ಮಳೆ?

ಮೆಜೆಸ್ಟಿಕ್, ಕಾರ್ಪೊರೇಷನ್, ಶಾಂತಿನಗರ, ರಿಚ್‌ಮಂಡ್ ಸರ್ಕಲ್, ಕೋರಮಂಗಲ, ವಿಲ್ಸನ್ ಗಾರ್ಡನ್, ಕೆ.ಆರ್. ಮಾರ್ಕೆಟ್, ಜಯನಗರ, ಜೆ.ಪಿ. ನಗರ, ಶಿವಾನಂದ ಸರ್ಕಲ್, ಗಾಂಧಿನಗರ ಬಜಾರ್, ಲಾಲ್ ಬಾಗ್, ಚಿಕ್ಕಪೇಟೆ ಸುತ್ತಮುತ್ತ ಮತ್ತು ಮಲ್ಲೇಶ್ವರಂ ಸೇರಿದಂತೆ ಹಲವೆಡೆ ಮಳೆರಾಯ ಆರ್ಭಟಿಸಿದೆ. ಮಳೆಯಿಂದಾಗಿ ಗಾಂಧಿ ಬಜಾರ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಇದನ್ನೂ ಓದಿ: Karnataka Weather Forecast: ನಾಳೆಯಿಂದ ರಾಜ್ಯದಲ್ಲಿ ಮುಂದಿನ ಮೂರು ದಿನ ವರುಣದ್ದೇ ಹಾವಳಿ!

ಮಳೆಯ ತೀವ್ರತೆಯಿಂದಾಗಿ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನಗಳ ಸಂಚಾರ ಅತ್ಯಂತ ಮಂದಗತಿಯಲ್ಲಿ ಸಾಗುತ್ತಿರುವುದರಿಂದ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ದಿಢೀರ್‌ ಆರಂಭವಾದ ಮಳೆಯಿಂದಾಗಿ ರಸ್ತೆ ಬದಿಯಲ್ಲಿ ಹೋಗುತ್ತಿದ್ದ ಪಾದಚಾರಿಗಳು ಹಾಗೂ ದ್ವಿಚಕ್ರ ವಾಹನ ಸವಾರರು ಆಶ್ರಯಕ್ಕಾಗಿ ಫ್ಲೈ ಓವರ್‌ಗಳು ಮತ್ತು ಬಸ್ ನಿಲ್ದಾಣಗಳ ಕೆಳಗೆ ಆಶ್ರಯ ಪಡೆದಿರುವುದು ಕಂಡುಬಂತು.

ಇನ್ನು ನಿನ್ನೆ ತಡರಾತ್ರಿ ಕೂಡ ನಗರದಲ್ಲಿ ಸುರಿದ ಮಳೆಗೆ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿತ್ತು. ಎಲೆಕ್ಟ್ರಾನಿಕ್ ಸಿಟಿಯಲ್ಲಿ ರಾತ್ರಿ ಸುರಿದ ಮಳೆಗೆ ಬೆಂಗಳೂರು-ಹೊಸೂರು ರಸ್ತೆಯಲ್ಲಿ ಸಂಪೂರ್ಣವಾಗಿ ನೀರು ನಿಂತಿತ್ತು. ರಸ್ತೆ ಮೇಲೆ ನೀರು ನದಿಯಂತೆ ಹರಿದಿತ್ತು. ಹೆಣ್ಣೂರು-ಬಾಗಲೂರು ರಸ್ತೆಯೂ ಜಲಾವೃತವಾಗಿತ್ತು. ನ್ಯೂ ಏರ್ ರ್ಪೋರ್ಟ್ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು.

ರೈತರ ಮೊಗದಲ್ಲಿ ಮಂದಹಾಸ

ಇತ್ತ ಬೆಂಗಳೂರು ದಕ್ಷಿಣ ಜಿಲ್ಲೆ ರೇಷ್ಮೆನಗರಿ ರಾಮನಗರದಲ್ಲೂ ಧಾರಾಕಾರ ಮಳೆ ಸುರಿದಿದೆ. ಅರ್ಧಗಂಟೆ ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ವರದಿ: ನಟರಾಜ್​​ 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 6:16 pm, Sat, 13 June 26

Source link

ಅಭಿಷೇಕ್ ಬ್ಯಾನರ್ಜಿ ನನ್ನ ಮಗನಿದ್ದಂತೆ; ಯು-ಟರ್ನ್ ಹೊಡೆದ ಕಲ್ಯಾಣ್ ಬ್ಯಾನರ್ಜಿ – Kannada News | Abhishek Banerjee is Like my son TMC Leader Kalyan Banerjees takes U turn

ನವದೆಹಲಿ, ಜೂನ್ 13: ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಹಿರಿಯ ಸಂಸದ ಕಲ್ಯಾಣ್ ಬ್ಯಾನರ್ಜಿ (Kalyan Banerjee) ಅವರು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ವಿರುದ್ಧ ನಿನ್ನೆಯಷ್ಟೇ ವಾಗ್ದಾಳಿ ನಡೆಸಿದದರು. ನಿಮಗೆ ನಾನು ಬೇಕಾ ಅಥವಾ ಅಭಿಷೇಕ್ ಬ್ಯಾನರ್ಜಿ ಬೇಕಾ ಎಂದು ನಿರ್ಧರಿಸಿ ಎಂದು ಮಮತಾ ಬ್ಯಾನರ್ಜಿಗೆ ಸವಾಲು ಹಾಕಿದ್ದರು. ಆದರೆ, ಇಂದು ಯು-ಟರ್ನ್ ಹೊಡೆದಿರುವ ಅವರು ಅಭಿಷೇಕ್ ಬ್ಯಾನರ್ಜಿ ನನ್ನ ಮಗನಿದ್ದಂತೆ. ಆತ ತಪ್ಪು ಮಾಡಿದಾಗ ಕ್ಷಮಿಸುವುದು ನನ್ನ ಕರ್ತವ್ಯ ಎಂದಿದ್ದಾರೆ. ನಿನ್ನೆ ಅಭಿಷೇಕ್ ಬ್ಯಾನರ್ಜಿ ಕೂಡ ಕಲ್ಯಾಣ್ ಬ್ಯಾನರ್ಜಿಯ ಆರೋಪಗಳಿಗೆ ಪ್ರತಿಕ್ರಿಯಿಸುತ್ತಾ, ಕಲ್ಯಾಣ್ ಬ್ಯಾನರ್ಜಿ ನನ್ನ ತಂದೆಯಿದ್ದಂತೆ. ನಾನು ತಪ್ಪು ಮಾಡಿದಾಗ ಗದರುವ ಹಕ್ಕು ಅವರಿಗಿದೆ ಎಂದಿದ್ದರು.

ಟಿಎಂಸಿ ಪಕ್ಷದೊಳಗೆ ಆಂತರಿಕ ಭಿನ್ನಮತ ಹೆಚ್ಚಾಗುತ್ತಿದೆ ಎಂಬ ವರದಿಗಳ ನಡುವೆ ಇಂದು ಸುದ್ದಿ ಸಂಸ್ಥೆ ANI ಜೊತೆ ಮಾತನಾಡಿದ ಕಲ್ಯಾಣ್ ಬ್ಯಾನರ್ಜಿ, “ಅಭಿಷೇಕ್ ನನ್ನ ಮಗನಿದ್ದಂತೆ. ಮಗ ಮಾಡುವ ಎಲ್ಲಾ ತಪ್ಪುಗಳನ್ನು ಕ್ಷಮಿಸುವುದು ತಂದೆಯ ಕೆಲಸ” ಎಂದು ಹೇಳಿದ್ದಾರೆ. ಈ ಮೂಲಕ ತಾವು ರಾಜಿಯಾಗಿದ್ದೇವೆ ಎಂದು ಸುಳಿವು ನೀಡಿದ್ದಾರೆ.

ಇದನ್ನೂ ಓದಿ: ನಾನು ಬೇಕಾ, ಅಭಿಷೇಕ್ ಬ್ಯಾನರ್ಜಿ ಬೇಕಾ ನಿರ್ಧರಿಸಿ; ಮಮತಾಗೆ ಟಿಎಂಸಿ ನಾಯಕ ಕಲ್ಯಾಣ್ ಬ್ಯಾನರ್ಜಿ ಸವಾಲು

ನಿನ್ನೆ ಮಾತನಾಡಿದ್ದ ಕಲ್ಯಾಣ್ ಬ್ಯಾನರ್ಜಿ, “ಅಭಿಷೇಕ್ ಅಹಂಕಾರದ ವ್ಯಕ್ತಿ. ಅವನಿಂದಾಗಿಯೇ ಇಂದು ಪಕ್ಷವು ನಾಶವಾಗುತ್ತಿದೆ ಎಂಬುದನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು. ನಾವು ಎಲ್ಲವನ್ನೂ ಕಳೆದುಕೊಂಡಿದ್ದೇವೆ. ಪ್ರತಿಯೊಬ್ಬರೂ ಇದನ್ನೇ ಹೇಳುತ್ತಿದ್ದಾರೆ. ನಾನು ಬೇಕಾ ಅಥವಾ ಅಭಿಷೇಕ್ ಬೇಕಾ ಎಂದು ಮಮತಾ ಬ್ಯಾನರ್ಜಿ ನಿರ್ಧರಿಸಬೇಕು” ಎಂದು ಕಲ್ಯಾಣ್ ಬ್ಯಾನರ್ಜಿ ಕಿಡಿಕಾರಿದ್ದರು.

ಕೊಲ್ಕತ್ತಾದ ಕಾಳೀಘಾಟ್‌ನಲ್ಲಿರುವ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ನಿವಾಸದ ಮೇಲೆ ಅಪರಾಧ ತನಿಖಾ ಇಲಾಖೆ (CID) ಅಧಿಕಾರಿಗಳು ಶೋಧ ನಡೆಸಿದ ಕೆಲವು ಗಂಟೆಗಳ ನಂತರ ಕಲ್ಯಾಣ್ ಬ್ಯಾನರ್ಜಿ ಅವರಿಂದ ಈ ಹೇಳಿಕೆ ಹೊರಬಿದ್ದಿದೆ. ಇಂದು ಮುಂಜಾನೆ ಸುಮಾರು 3 ಗಂಟೆಗೆ ಪೊಲೀಸರು ಅಭಿಷೇಕ್ ಬ್ಯಾನರ್ಜಿ ಅವರ ನಿವಾಸಕ್ಕೆ ಆಗಮಿಸಿದ್ದರು. ನಂತರ ಬೀಗಗಳನ್ನು ಒಡೆಯಲು ವಿಪತ್ತು ನಿರ್ವಹಣಾ ತಂಡವನ್ನು ಕರೆಯಿಸಲಾಯಿತು ಎಂದು ಟಿಎಂಸಿ ರಾಜ್ಯಸಭಾ ಸಂಸದ ಸಾಗರಿಕಾ ಘೋಷ್ ಆರೋಪಿಸಿದ್ದಾರೆ. ಸುಮಾರು 90 ನಿಮಿಷಗಳ ಕಾಲ ನಡೆದ ಈ ಶೋಧ ಕಾರ್ಯದಲ್ಲಿ ಯಾವುದೇ ಪುರಾವೆಗಳು ಪತ್ತೆಯಾಗಿಲ್ಲ ಎಂದು ಸಾಗರಿಕಾ ಘೋಷ್ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಮತಾ ಬ್ಯಾನರ್ಜಿ ಮಾತ್ರ ನಮ್ಮ ನಾಯಕಿ, ಅಭಿಷೇಕ್ ಅಲ್ಲ; ಟಿಎಂಸಿ ಬಂಡಾಯದ ನಡುವೆ ಶತ್ರುಘ್ನ ಸಿನ್ಹಾ ಹೇಳಿಕೆ

ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಕೋಮು ಪ್ರಚೋದಕ ಹೇಳಿಕೆ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಈಗಾಗಲೇ ಎಫ್‌ಐಆರ್ ದಾಖಲಾಗಿದೆ. ಅಲ್ಪಸಂಖ್ಯಾತ ಸಮುದಾಯದ ಸುರಕ್ಷತೆಯು ತಮ್ಮ ನಾಯಕತ್ವದ ಮೇಲೆ ಅವಲಂಬಿತವಾಗಿದೆ ಮತ್ತು ಬಿಜೆಪಿಯ ದಾರಿ ತಪ್ಪಿಸುವ ಹೇಳಿಕೆಗಳಿಗೆ ಮರುಳಾಗಬೇಡಿ ಎಂದು ಮಮತಾ ಬ್ಯಾನರ್ಜಿ ಕರೆ ನೀಡಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಾರ ಭವಿಷ್ಯ: ಜೂನ್ 14 ರಿಂದ 20 ರವರೆಗೆ ಈ 4 ರಾಶಿಯವರಿಗೆ ಒಲಿಯಲಿದೆ ಧನಲಕ್ಷ್ಮಿ ಯೋಗ! – Kannada News | Weekly Horoscope June 14 to 20: Planetary Changes to Bring Fortune for These Zodiac Signs

2026ರ ಜೂನ್ 14ರಿಂದ ಜೂನ್ 20ರವರೆಗೆ ಮೂರನೇ ವಾರವಾಗಿದ್ದು, ಈ ಅವಧಿಯಲ್ಲಿ ಸೂರ್ಯ ಮತ್ತು ಬುಧ ಮಿಥುನದಲ್ಲೂ, ಶುಕ್ರ ಮತ್ತು ಗುರು ಕರ್ಕಾಟಕದಲ್ಲೂ, ಶನಿ ಮೀನ ರಾಶಿಯಲ್ಲೂ ಸಂಚರಿಸುತ್ತಿದ್ದಾರೆ. ಸ್ವಕ್ಷೇತ್ರ ಹಾಗೂ ಉಚ್ಚಕ್ಷೇತ್ರದಲ್ಲಿ ಇರುವ ಗ್ರಹಗಳು ಶುಭಫಲವನ್ನು ನೀಡುವರು.

​ಮೇಷ ರಾಶಿ:

ಮಂಗಳನ ಸ್ವಕ್ಷೇತ್ರ ಸಂಚಾರದಿಂದ ಧೈರ್ಯ ಹೆಚ್ಚಲಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ಸಿಗಲಿವೆ. ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಂಡರೆ ಕಾರ್ಯಕ್ಷೇತ್ರದಲ್ಲಿ ಯಶಸ್ಸು ನಿಮ್ಮದಾಗಲಿದ್ದು, ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ.

​ವೃಷಭ ರಾಶಿ:

ಧನಲಾಭದ ಯೋಗವಿದ್ದರೂ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವುದು ಅಗತ್ಯ. ಕೌಟುಂಬಿಕ ಜೀವನದಲ್ಲಿ ಸಾಮರಸ್ಯವಿರಲಿದೆ. ಆರೋಗ್ಯದ ಕಡೆಗೆ ಗಮನ ಹರಿಸಿ, ಪ್ರಮುಖ ನಿರ್ಧಾರಗಳನ್ನು ಯೋಚಿಸಿ ತೆಗೆದುಕೊಳ್ಳಿ.

​ಮಿಥುನ ರಾಶಿ:

ನಿಮ್ಮ ರಾಶಿಯಲ್ಲಿ ಸೂರ್ಯ-ಬುಧರ ಯುತಿಯಿಂದ ಬುದ್ಧಿಮತ್ತೆ ಮತ್ತು ಗೌರವ ಹೆಚ್ಚುತ್ತದೆ. ವ್ಯಾಪಾರದಲ್ಲಿ ಲಾಭದಾಯಕ ಅವಕಾಶಗಳು ಬರಲಿವೆ. ಹಿರಿಯ ಅಧಿಕಾರಿಗಳಿಂದ ಪ್ರಶಂಸೆ ಸಿಗಲಿದ್ದು, ನೆಮ್ಮದಿಯ ವಾರವಿದು.

​ಕರ್ಕಾಟಕ ರಾಶಿ:

ಗುರು ಹಾಗೂ ಶುಕ್ರರ ಶುಭ ಸಂಚಾರದಿಂದ ಆಧ್ಯಾತ್ಮಿಕ ಚಿಂತನೆ ಹೆಚ್ಚುತ್ತದೆ. ಆಸ್ತಿ ಖರೀದಿ ಯೋಗವಿದೆ. ದೂರದ ಪ್ರಯಾಣದಿಂದ ಲಾಭವಾಗಲಿದ್ದು, ಕುಟುಂಬದಲ್ಲಿ ಶುಭ ಕಾರ್ಯಗಳು ಜರುಗುವ ಸಾಧ್ಯತೆ ದಟ್ಟವಾಗಿದೆ.

​ಸಿಂಹ ರಾಶಿ:

ಚಂದ್ರ ಮತ್ತು ಕೇತುಗಳ ಪ್ರಭಾವದಿಂದ ಮನಸ್ಸಿನಲ್ಲಿ ಸಣ್ಣಗಿನ ಗೊಂದಲಗಳಿರಬಹುದು. ಆದಾಗ್ಯೂ, ಆರ್ಥಿಕವಾಗಿ ಆದಾಯದ ಮೂಲಗಳು ಹೆಚ್ಚಲಿವೆ. ಸ್ನೇಹಿತರ ಸಹಕಾರದಿಂದ ಬಾಕಿ ಉಳಿದ ಕೆಲಸಗಳು ಸುಲಭವಾಗಿ ಪೂರ್ಣಗೊಳ್ಳುತ್ತವೆ.

​ಕನ್ಯಾ ರಾಶಿ:

ಉದ್ಯೋಗಿಗಳಿಗೆ ಬಡ್ತಿ ಅಥವಾ ವರ್ಗಾವಣೆಯ ಶುಭ ಸೂಚನೆಗಳಿವೆ. ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದ್ದು, ಕೌಟುಂಬಿಕವಾಗಿ ಸಂತಸದ ವಾತಾವರಣವಿರುತ್ತದೆ.

​ತುಲಾ ರಾಶಿ:

ಭಾಗ್ಯಸ್ಥಾನದಲ್ಲಿ ಗ್ರಹಗಳ ಅನುಕೂಲತೆಯಿಂದ ಅಂದುಕೊಂಡ ಕಾರ್ಯಗಳು ಸಫಲವಾಗುತ್ತವೆ. ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ ಯಶಸ್ಸು ಸಿಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಲಿದ್ದು, ಸಮಾಜದಲ್ಲಿ ಕೀರ್ತಿ ಲಭಿಸುತ್ತದೆ.

​ವೃಶ್ಚಿಕ ರಾಶಿ:

ಅಷ್ಟಮದಲ್ಲಿ ಸೂರ್ಯನಿರುವುದರಿಂದ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ. ಅನಗತ್ಯ ವಾದವಿವಾದಗಳಿಂದ ದೂರವಿರಿ. ಕಠಿಣ ಪರಿಶ್ರಮದಿಂದ ಮಾತ್ರ ಕೆಲಸಗಳಲ್ಲಿ ಯಶಸ್ಸು ಸಾಧಿಸಲು ಸಾಧ್ಯ, ತಾಳ್ಮೆ ಇರಲಿ.

​ಧನು ರಾಶಿ:

ಸಪ್ತಮ ಭಾವದ ಶುಭ ದೃಷ್ಟಿಯಿಂದ ವೈವಾಹಿಕ ಜೀವನ ಸುಖಮಯವಾಗಿರುತ್ತದೆ. ಪಾಲುದಾರಿಕೆ ವ್ಯವಹಾರದಲ್ಲಿ ಉತ್ತಮ ಲಾಭ ನಿರೀಕ್ಷಿಸಬಹುದು. ಸಾರ್ವಜನಿಕ ರಂಗದಲ್ಲಿ ಗುರುತಿಸಿಕೊಳ್ಳುವ ಅವಕಾಶಗಳು ಒದಗಿ ಬರಲಿವೆ.

​ಮಕರ ರಾಶಿ:

ಶತ್ರುಗಳ ಮೇಲಿನ ಜಯ ನಿಮ್ಮದಾಗಲಿದೆ. ಹಳೆಯ ಸಾಲಗಳಿಂದ ಮುಕ್ತಿ ಸಿಗುವ ಸಾಧ್ಯತೆ ಇದೆ. ಕಚೇರಿಯಲ್ಲಿ ನಿಮ್ಮ ಕೆಲಸಕ್ಕೆ ಮನ್ನಣೆ ದೊರೆಯಲಿದ್ದು, ದೈನಂದಿನ ಆದಾಯವು ಸ್ಥಿರವಾಗಿ ಮುಂದುವರಿಯುತ್ತದೆ.

​ಕುಂಭ ರಾಶಿ:

ರಾಹುವಿನ ಸಂಚಾರವಿದ್ದರೂ ಬುಧನ ಅನುಕೂಲತೆಯಿಂದ ವಿದ್ಯಾರ್ಥಿಗಳಿಗೆ ಉತ್ತಮ ಪ್ರಗತಿ ಕಂಡುಬರುತ್ತದೆ. ಹೊಸ ಹೂಡಿಕೆಗಳಿಗೆ ಈ ವಾರ ಸೂಕ್ತವಾಗಿದೆ. ಮಕ್ಕಳ ಕಡೆಯಿಂದ ಶುಭ ವಾರ್ತೆಗಳನ್ನು ಕೇಳುವಿರಿ.

​ಮೀನ ರಾಶಿ:

ನಿಮ್ಮ ರಾಶಿಯಲ್ಲಿ ಶನಿಯಿರುವುದರಿಂದ ಕೆಲಸದಲ್ಲಿ ಕೊಂಚ ವಿಳಂಬವಾಗಬಹುದು. ಆದರೆ ಸುಖಸ್ಥಾನದ ಗ್ರಹಬಲದಿಂದ ವಾಹನ ಅಥವಾ ಭೂಮಿ ಖರೀದಿಯ ಯೋಗವಿದೆ. ತಾಯಿಯ ಆರೋಗ್ಯದ ಕಡೆ ಗಮನವಿರಲಿ.

– ಲೋಹಿತ್ ಹೆಬ್ಬಾರ್

Source link