Headlines

nagaraj11081993

ಕೇರಳ ಚುನಾವಣಾ ಪ್ರಚಾರಕ್ಕೆ ಟ್ರಂಪ್​, ಷಿ ಜಿನ್​ಪಿಂಗ್​, ಪುಟಿನ್​!

ಕೇರಳ ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್, ಷಿ ಜಿನ್ಪಿಂಗ್, ಪುಟಿನ್ ಬಂದಿದ್ದಾರೆ ನೋಡಿ. ಇದೇನಿದು ವಿಶ್ವ ನಾಯಕರು ಒಂದು ರಾಜ್ಯದ ಪ್ರಚಾರಕ್ಕೆ ಬಂದ್ಬಿಟ್ರಾ ಎಂದು ಆಲೋಚಿಸುತ್ತಿದ್ದೀರಾ, ಇಲ್ಲ ನಿಜವಾಗಿಗೂ ಬಂದಿಲ್ಲ ಆದರೆ ಎಐ ಅವರೆಲ್ಲರನ್ನೂ ವಿಶಿಷ್ಟ ಕೇರಳದ ಉಡುಗೆಯಲ್ಲಿ ಕರೆತಂದಿದೆ. ಡೊನಾಲ್ಡ್​ ಟ್ರಂಪ್, ಷಿ ಜಿನ್​ಪಿಂಗ್, ಪುಟಿನ್, ವೊಲೊಡಿಮಿರ್ ಝೆಲೆನ್ಸ್ಕಿ ಒಬ್ಬೊಬ್ಬರು ಒಂದೊಂದು ಪಕ್ಷಕ್ಕೆ ಬೆಂಬಲ ನೀಡಿ ಪ್ರಚಾರ ಮಾಡುತ್ತಿರುವಂತೆ ವಿಡಿಯೋವನ್ನು ರಚಿಸಲಾಗಿದೆ. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಯವರನ್ನು ಕೂಡ ನೀವು ಕಾಣಬಹುದು….

Read More

IPL mobile Theft: ಕ್ರೀಡಾಂಗಣ ಮಾತ್ರವಲ್ಲದೆ ಮೆಟ್ರೋ, ಬಸ್ ನಿಲ್ದಾಣಗಳಲ್ಲೂ ಮೊಬೈಲ್ ಕಳ್ಳತನ, ಹುಷಾರಾಗಿರಿ!

ಬೆಂಗಳೂರು, ಮಾರ್ಚ್​ 31: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಐಪಿಎಲ್ ಪಂದ್ಯದ ವೇಳೆ ನಡೆದ ಮೊಬೈಲ್​ಗಳ ಕಳ್ಳತನದ (Mobile Theft) ಬಗ್ಗೆ ಮಹಿಳೆಯೊಬ್ಬರು ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿ ಒಟ್ಟು 21 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಮಾರ್ಚ್ 28ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಒಳಗೆ ಮಾತ್ರವಲ್ಲದೆ, ಮೆಟ್ರೋ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರಸ್ತೆ ಬದಿಗಳಲ್ಲೂ ಆರೋಪಿಯು ಮೊಬೈಲ್ ಕಳವು ಮಾಡುತ್ತಿದ್ದನು ಎಂದು…

Read More

ಸ್ಮಶಾನದಲ್ಲಿ ಸಿಲಿಂಡರ್ ದಂಧೆ

ತೆಲಂಗಾಣ, ಮಾರ್ಚ್​ 31: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗಿ ದೇಶದಲ್ಲಿರುವ ಅನಿಲ ಕೊರತೆ ಭಯವನ್ನೇ ಉಪಯೋಗಿಸಿಕೊಂಡು ಸ್ಮಶಾನದಲ್ಲಿ ಸಿಲಿಂಡರ್(Cylinder) ದಂಧೆ ನಡೆಸುತ್ತಿದ್ದವರ ವಿರುದ್ಧ ತೆಲಂಗಾಣ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಪಂಜಗುಟ್ಟದಲ್ಲಿರುವ ಸ್ಮಶಾನವನ್ನು ದಂಧೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಪಶ್ಚಿಮ ಏಷ್ಯಾದ ಬಿಕ್ಕಟ್ಟಿನಿಂದಾಗಿ ಅನಿಲ ಲಭ್ಯತೆ ಕಡಿಮೆಯಾಗಿದೆ ಮತ್ತು ಮುಂಬರುವ ದಿನಗಳಲ್ಲಿ ಸಿಲಿಂಡರ್‌ಗಳು ಲಭ್ಯವಿರುವುದಿಲ್ಲ ಎಂಬ ಕೃತಕ ಭಯವನ್ನು ಒಡ್ಡಿ ಈ ಗ್ಯಾಂಗ್ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ ಮಾಲೀಕರಿಂದ ಹೆಚ್ಚುವರಿ ಹಣ ಪಡೆದಿದೆ….

Read More

Sainik School Recruitment 2026: ಸೈನಿಕ್ ಶಾಲೆಯಲ್ಲಿ ಬೋಧಕ-ಬೋಧಕೇತರ ಹುದ್ದೆಗಳಿಗೆ ನೇಮಕಾತಿ; 10ನೇ ತರಗತಿ ಪಾಸಾದವರಿಗೂ ಅವಕಾಶ!

ನೀವು ಶಿಕ್ಷಣ ಕ್ಷೇತ್ರ ಅಥವಾ ಆಡಳಿತಾತ್ಮಕ ವಿಭಾಗದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುತ್ತಿದ್ದರೆ, ಹರಿಯಾಣದ ರೇವಾರಿಯಲ್ಲಿರುವ ಸೈನಿಕ್ ಶಾಲೆಯು ನಿಮಗಾಗಿ ಒಂದು ಸುವರ್ಣಾವಕಾಶವನ್ನು ತಂದಿದೆ. ಬೋಧಕ ಮತ್ತು ಬೋಧಕೇತರ ವಿಭಾಗದ ವಿವಿಧ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆಯಾಗಿದ್ದು, ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ನೇಮಕಾತಿ ಪ್ರಕ್ರಿಯೆಯು ಮಾರ್ಚ್ 28 ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 17 ವರೆಗೆ ಸಮಯವಕಾಶವಿದೆ. ಈ ನೇಮಕಾತಿ ಅಭಿಯಾನದ ಅಡಿಯಲ್ಲಿ ಒಟ್ಟು ಐದು ಪ್ರಮುಖ ಹುದ್ದೆಗಳನ್ನು ಭರ್ತಿ…

Read More

ಹೊಸ ನಿರ್ಮಾಣ ಸಂಸ್ಥೆ ಆರಂಭಿಸಿದ ಪ್ರೇಮ್-ರಕ್ಷಿತಾ

ನಿರ್ದೇಶಕ ಪ್ರೇಮ್ (Director Prem) ಇತ್ತೀಚೆಗೆ ‘ಕೆಡಿ’ ಸಿನಿಮಾದ ಹಾಡಿನ ವಿವಾದದಿಂದ ಬಹಳ ಸುದ್ದಿಯಲ್ಲಿದ್ದರು. ಅವರು ಬರೆದಿರುವ ‘ಕೆಡಿ’ ಸಿನಿಮಾದ ಹಾಡಿನ ವಿರುದ್ಧ ತೀವ್ರ ಆಕ್ಷೇಪ ಎದ್ದಿತ್ತು. ಸ್ವತಃ ಪ್ರೇಮ್ ಸೇರಿದಂತೆ ಹಲವರಿಗೆ ನೊಟೀಸ್ ಸಹ ಜಾರಿ ಆಗಿತ್ತು. ಇದೀಗ ಆ ವಿವಾದದಿಂದ ಹೊರ ಬಂದಂತಿರುವ ಪ್ರೇಮ್ ಅವರು ತಮ್ಮ ಪತ್ನಿ ರಕ್ಷಿತಾ ಅವರೊಟ್ಟಿಗೆ ಸೇರಿ ಹೊಸ ಸ್ಟುಡಿಯೋ ಕಮ್ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಪ್ರತಿಭಾವಂತ ಹೊರಬರಿಗೆ ಅವಕಾಶ ಕೊಡುವ ಉದ್ದೇಶ ಈ ಸ್ಟುಡಿಯೋ ನಿರ್ಮಾಣದ ಹಿಂದೆ…

Read More

ಫಲಕೊಟ್ಟ ವಯಸ್ಕರ ಶಿಕ್ಷಣ ಅಭಿಯಾನ: ಉಡುಪಿ ಶೀಘ್ರವೇ ಪೂರ್ಣ ಸಾಕ್ಷರ ಜಿಲ್ಲೆ; ಘೋಷಣೆಯೊಂದೇ ಬಾಕಿ

ಉಡುಪಿ, ಮಾರ್ಚ್​​ 31: ಕರ್ನಾಟಕದ ಸಾಕ್ಷರತಾ ಪ್ರಮಾಣ ಶೇ. 82.7ರಷ್ಟಿರುವ ನಡುವೆ ಕರಾವಳಿ ಜಿಲ್ಲೆಗಳು ಪೂರ್ಣ ಸಾಕ್ಷರ ಜಿಲ್ಲೆಗಳಾಗುವತ್ತ ದಾಪುಗಾಲಿಟ್ಟಿವೆ. ಆ ಪೈಕಿ ಉಡುಪಿ ಶೀಘ್ರದಲ್ಲೇ ಪೂರ್ಣ ಸಾಕ್ಷರ ಜಿಲ್ಲೆಯಾಗಿ ಘೋಷಣೆಯಾಗಲಿದ್ದು, ಇದನ್ನು ಜಿಲ್ಲೆಯ ವಯಸ್ಕರ ಶಿಕ್ಷಣ ಅಭಿಯಾನದಲ್ಲಿನ ಮಹತ್ವದ ಮೈಲಿಗಲ್ಲೆಂದೇ ಪರಿಗಣಿಸಲಾಗಿದೆ. ಕಳೆದ ವರ್ಷ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಕ್ಷರಾಸಕ್ತರ ಗುರುತಿಸುವಿಕೆ ಹಾಗೂ ಶಿಕ್ಷಣ ನೀಡುವ ಕಾರ್ಯ ಆರಂಭವಾಗಿತ್ತು. ವಯಸ್ಕರ ಶಿಕ್ಷಣ ಇಲಾಖೆಯ ಮೂಲಗಳ ಪ್ರಕಾರ, ಕಾಪು, ಕಾರ್ಕಳ, ಹೆಬ್ರಿ, ಬ್ರಹ್ಮಾವರ ಮತ್ತು ಬೈಂದೂರು ತಾಲೂಕುಗಳಿಂದ…

Read More

ಬೆಂಗಳೂರಿನಲ್ಲಿ ಭರ್ಜರಿ ಡ್ರಗ್ ಬೇಟೆ: ಬಟ್ಟೆ ವ್ಯಾಪಾರದ ನೆಪದಲ್ಲಿ ಎಂಡಿಎಂಎ ಮಾರುತ್ತಿದ್ದ ನೈಜೀರಿಯಾ ಪ್ರಜೆ ಅಂದರ್!

ಬೆಂಗಳೂರು, ಮಾರ್ಚ್ 31: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bangalore) ಮಾದಕ ವಸ್ತುಗಳ ಜಾಲದ ವಿರುದ್ಧ ಪೊಲೀಸರ ಕಾರ್ಯಾಚರಣೆ ಮುಂದುವರಿದಿದೆ. ಇದೀಗ ಯಲಹಂಕ ಪೊಲೀಸರು, ಸುಮಾರು 2 ಕೋಟಿ ರೂಪಾಯಿ ಮೌಲ್ಯದ 2 ಕೆಜಿ ಎಂಡಿಎಂಎ (MDMA) ಕ್ರಿಸ್ಟಲ್ಸ್ ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದು, ಈ ಸಂಬಂಧ ನೈಜೀರಿಯಾ ಮೂಲದ ಪೆಡ್ಲರ್ ಸ್ಯಾಮುಯೆಲ್ ಇಕ್ಕೆನಾ ಎಂಬಾತನನ್ನು ಬಂಧಿಸಿದ್ದಾರೆ. ಬಿಸಿನೆಸ್ ವೀಸಾದಡಿ ಬಂದು ಡ್ರಗ್ ಡೀಲಿಂಗ್ ಬಂಧಿತ ಆರೋಪಿ ಸ್ಯಾಮುಯೆಲ್ 2012ರಲ್ಲಿ ಬಿಸಿನೆಸ್ ವೀಸಾದಡಿ ಭಾರತಕ್ಕೆ ಬಂದಿದ್ದ. ದೆಹಲಿ ಮತ್ತು ಮುಂಬೈನಲ್ಲಿ…

Read More

Gold Rates: ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 31: ನಿನ್ನೆ ಕಡಿಮೆಗೊಂಡಿದ್ದ ಚಿನ್ನದ ಬೆಲೆ (Gold Rates) ಇವತ್ತು ಮಂಗಳವಾರ ಗ್ರಾಮ್​ಗೆ 185 ರೂಗಳಷ್ಟು ಏರಿಕೆಯಾಗಿದೆ. ವಿದೇಶಗಳಲ್ಲೂ ಬಹುತೇಕ ಕಡೆ ಚಿನ್ನದ ಬೆಲೆಯಲ್ಲಿ ಹೆಚ್ಚಳ ಆಗಿದೆ. ಬೆಳ್ಳಿ ಬೆಲೆಯೂ ಮಂಗಳವಾರ ಹೆಚ್ಚಿದೆ. ಬೆಂಗಳೂರಿನಲ್ಲಿ ಇದರ ಬೆಲೆ ಮತ್ತೊಮ್ಮೆ 250 ರೂ ಗಡಿ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,36,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,49,290 ರುಪಾಯಿ ಆಗಿದೆ. 100 ಗ್ರಾಮ್…

Read More

Bihar Stampede: ಬಿಹಾರದ ಶೀತಲ ದೇವಸ್ಥಾನದಲ್ಲಿ ಕಾಲ್ತುಳಿತ, 8 ಮಹಿಳೆಯರು ಸಾವು

ಪಾಟ್ನಾ, ಮಾರ್ಚ್​ 31: ಬಿಹಾರದ ನಳಂದದಲ್ಲಿರುವ ಶೀತಲ ದೇವಸ್ಥಾನದಲ್ಲಿ ಕಾಲ್ತುಳಿತ ಉಂಟಾಗಿದ್ದು, 8 ಮಹಿಳೆಯರು ಪ್ರಾಣ ಕಳೆದುಕೊಂಡಿದ್ದಾರೆ. 6ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.ಚೈತ್ರ ಮಾಸದ ಕೊನೆಯ ಮಂಗಳವಾರದಂದು ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದರು. ಅಪಘಾತದಿಂದ ಮಹಿಳೆಯರು ಸೇರಿದಂತೆ ಅನೇಕ ಜನರು ತೊಂದರೆಗೀಡಾಗಿದ್ದಾರೆ. ದುರಂತದ ಬಗ್ಗೆ ಮಾಹಿತಿ ಪಡೆಯುತ್ತಿದ್ದಂತೆ, ಗ್ರಾಮಸ್ಥರೊಂದಿಗೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದು ರಕ್ಷಣಾ ಕಾರ್ಯ ನಡೆಸಿದರು. ಕಳೆದ ವರ್ಷ, ಆಂಧ್ರಪ್ರದೇಶದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಏಕಾದಶಿಯಂದು ಕಾಲ್ತುಳಿತ ಉಂಟಾಗಿ 9 ಮಂದಿ ಭಕ್ತರು…

Read More

‘ಒಂದು ಗಂಟೆ ಮಳೆ ಬಂದ್ರೆ 20 ಸಲ ಪವರ್ ಕಟ್ ಮಾಡ್ತಾರೆ’: ಬೆಂಗಳೂರಿನ ಖ್ಯಾತ ಹೃದಯ ತಜ್ಞರ ಎಕ್ಸ್ ಪೋಸ್ಟ್ ವೈರಲ್!

ಬೆಂಗಳೂರು, ಮಾರ್ಚ್​ 31: ಮಾರ್ಚ್​ನಲ್ಲಿ ಬಿಸಿಲಿನ ಬೇಗೆ ಅನುಭವಿಸಿದ ನಿವಾಸಿಗಳಿಗೆ ಭಾನುವಾರ ಸುರಿದ ಸಾಧಾರಣ ಮಳೆಯೊಂದಿಗೆ (weather) ಸ್ವಲ್ಪ ಮಟ್ಟಿಗಿನ ತಂಪಿನ ಅನುಭವ ಸಿಕ್ಕಿತು. ಗುಡುಗು ಸಹಿತ ಮಳೆಯು ನಗರವನ್ನು ತಂಪುಗೊಳಿಸಿದರೂ, ವಿದ್ಯುತ್ ವ್ಯತ್ಯಯ ಜನರನ್ನು ಸಂಕಷ್ಟಕ್ಕೆ ದೂಡಿತ್ತು. ಈ ಬಗ್ಗೆ ತಮ್ಮ ಅಸಮಾಧಾನ ಹಂಚಿಕೊಂಡ ಬೆಂಗಳೂರಿನ ಖ್ಯಾತ ಹೃದಯ ತಜ್ಞ ಡಾ. ದೀಪಕ್ ಕೃಷ್ಣಮೂರ್ತಿ, X ಪೋಸ್ಟ್ ಹಂಚಿಕೊಂಡಿದ್ದಾರೆ. ಪೋಸ್ಟ್​ನಲ್ಲೇನಿದೆ? ಒಂದು ಗಂಟೆಯ ಮಳೆ ಸುರಿದರೆ 20 ಬಾರಿ ವಿದ್ಯುತ್ ಹೋಗಿ ಬಂದಿದೆ ಎಂದು ತಮ್ಮ…

Read More