All posts by nagaraj11081993

ಪ್ರೇಯಸಿಯನ್ನು ಮದುವೆಯಾಗಲು ಕರೆದೊಯ್ಯುತ್ತಿದ್ದ ವೇಳೆ ಕಾರು ಪಲ್ಟಿ; ದಾರಿ ಮಧ್ಯೆ ಯುವಕನನ್ನು ಬಿಟ್ಟು ಯುವತಿ ಪರಾರಿ – Kannada News | Bengaluru Elopement Tragedy: Car Crash Injures Groom, Bride Flees Hirekeru

ಹಾವೇರಿ, ಫೆ.21: ಪ್ರೀತಿಸಿದ ಹುಡುಗಿಯನ್ನ ಕೈಹಿಡಿಯಲು ಬೆಂಗಳೂರಿನಿಂದ ಬಾಡಿಗೆ ಕಾರು ಮಾಡಿಕೊಂಡು ಬಂದಿದ್ದ ಯುವಕನ ಮದುವೆ ಕನಸು ರಸ್ತೆ ಮಧ್ಯೆಯೇ ನುಚ್ಚುನೂರಾಗಿದೆ. ಕಾರು ಪಲ್ಟಿಯಾಗಿ ಪ್ರಿಯಕರ ಸೇರಿ ಮೂವರು ಆಸ್ಪತ್ರೆ ಪಾಲಾಗಿದ್ದರೆ, ಯುವತಿ ಮಾತ್ರ ಅಲ್ಲಿಂದ ಪರಾರಿಯಾಗಿ ಬೆಂಗಳೂರು ಸೇರಿಕೊಂಡ ಘಟನೆ ಹಿರೇಕೆರೂರು ತಾಲೂಕಿನ ಚೆನ್ನಹಳ್ಳಿ ತಾಂಡಾ ಬಳಿ ನಡೆದಿದೆ. ಗಾಯಾಳು ಯುವಕ ಇರ್ಫಾನ್ ಮತ್ತು ಹಿರೇಕೆರೂರು ಮೂಲದ ಯುವತಿ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿಯೇ ಅವರಿಬ್ಬರ ನಡುವೆ ಪರಿಚಯವಾಗಿ, ಪ್ರೀತಿ ಅಂಕುರಿಸಿತ್ತು. ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದರು.

ಯುವತಿ ಇತ್ತೀಚೆಗೆ ಜಾತ್ರೆಗಾಗಿ ಹಿರೇಕೆರೂರಿನ ತನ್ನೂರಿಗೆ ಬಂದಿದ್ದಳು. ಆಕೆಯನ್ನು ಅಲ್ಲಿಂದ ಕರೆದುಕೊಂಡು ಹೋಗಿ ಮದುವೆಯಾಗಲು ಇರ್ಫಾನ್ ಪ್ಲಾನ್ ಮಾಡಿದ್ದ. ಇದಕ್ಕಾಗಿ ತನ್ನ ಸ್ನೇಹಿತರಾದ ಚಂದ್ರು ಮತ್ತು ಗುರುರಾಜ್ ಅವರ ಜೊತೆ ಬಾಡಿಗೆ ಕಾರಿನಲ್ಲಿ ಊರಿಗೆ ಬಂದಿದ್ದ ಇರ್ಫಾನ್, ಯುವತಿಯನ್ನು ಕರೆದುಕೊಂಡು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದ.

ಇದನ್ನೂ ಓದಿ: ಕದ್ದ ಚಿನ್ನವನ್ನು ಗೋಲ್ಡ್ ಲೋನ್ ಕಂಪನಿಗೆ ಮಾರುವ ವೇಳೆ ರೆಡ್​​​ ಹ್ಯಾಂಡ್​​​ ಆಗಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ

ಯುವತಿಯ ಪೋಷಕರು ಬೆನ್ನಟ್ಟಬಹುದು ಎಂಬ ಭಯದಲ್ಲಿ ಯುವಕರು ವೇಗವಾಗಿ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದೆ. ಚನ್ನಹಳ್ಳಿ ತಾಂಡಾ ಬಳಿ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದ ಭೀಕರತೆಗೆ ಕಾರು ಸಂಪೂರ್ಣ ನುಜ್ಜುನುಜ್ಜಾಗಿದ್ದು, ಇರ್ಫಾನ್ ಹಾಗೂ ಆತನ ಇಬ್ಬರು ಸ್ನೇಹಿತರಿಗೆ ಗಂಭೀರ ಗಾಯಗಳಾಗಿವೆ. ಕಾರಿನ ಹಿಂಬದಿಯ ಸೀಟಿನಲ್ಲಿದ್ದ ಯುವತಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಅಪಘಾತವಾಗುತ್ತಿದ್ದಂತೆ ಸ್ಥಳೀಯರು ರಕ್ಷಣೆಗೆ ಧಾವಿಸಿದ್ದಾರೆ. ಈ ವೇಳೆ ಜನರ ಗುಂಪು ಸೇರುವುದನ್ನು ಕಂಡು ಮರ್ಯಾದೆಗೆ ಅಂಜಿ, ಯುವತಿ ತನ್ನ ಪ್ರಿಯಕರನನ್ನು ಅಲ್ಲಿಯೇ ಬಿಟ್ಟು ಅವರಿವರ ಬಳಿ ಲಿಫ್ಟ್ ಕೇಳಿ ಬೆಂಗಳೂರು ಬಸ್ ಹತ್ತಿ ಮನೆ ಸೇರಿದ್ದಾಳೆ. ಸದ್ಯ ಗಾಯಾಳು ಯುವಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವಿಚಿತ್ರ ಪ್ರೇಮ ಪ್ರಕರಣ ಹಿರೇಕೆರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವರದಿ : ಅಣ್ಣಪ್ಪ ಬಾರ್ಕಿ 

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಟಾಕ್ಸಿಕ್’ನಲ್ಲಿ ಯಶ್ ಪಾತ್ರದ ಹೆಸರು ಟಿಕೆಟ್; ಮಾಸ್ಟರ್ ಪ್ಲ್ಯಾನ್ ಮಾಡಿದ ರಾಕಿಂಗ್ ಸ್ಟಾರ್ – Kannada News | Toxic Teaser Controversy: Yash’s Dual Role anda Why Heroines Are Missing – A Marketing Ploy?

‘ಟಾಕ್ಸಿಕ್’ ಟೀಸರ್ (Toxic Teaser) ಸದ್ಯ ಹಲ್​ಚಲ್ ಸೃಷ್ಟಿ ಮಾಡುತ್ತಿದೆ. ಈ ಟೀಸರ್​​ನಲ್ಲಿ ಯಶ್ ಮಾತ್ರ ಕಾಣಿಸಿದ್ದಾರೆ. ಯಶ್ ಅವರ ದ್ವಿಪಾತ್ರ ಸಾಕಷ್ಟು ಗಮನ ಸೆಳೆದಿದೆ. ಟೀಸರ್​​ನಲ್ಲಿ ಯಶ್ ಮಾತ್ರ ಕಾಣಿಸಿಕೊಂಡಿದ್ದು ಏಕೆ ಎಂದು ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ. ಸಿನಿಮಾದಲ್ಲಿ ನಯನಾತಾರ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ ಅಂಥವರು ನಟಿಸಿದ್ದಾರೆ. ಆದರೆ, ಇವರನ್ನು ಟೀಸರ್​ ಅಲ್ಲಿ ತೋರಿಸಿಯೇ ಇಲ್ಲ ಎಂಬ ಟೀಕೆ ವ್ಯಕ್ತವಾಗಿದೆ. ಆದರೆ, ಇದರ ಹಿಂದೆ ಮಾಸ್ಟರ್​ ಪ್ಲ್ಯಾನ್ ಇದೆ ಎಂದು ವರದಿ ಆಗಿದೆ.

ಯಶ್ ಜನ್ಮದಿನಕ್ಕೆ ರಿಲೀಸ್ ಆದ ‘ಟಾಕ್ಸಿಕ್’ ಟೀಸರ್​ ಅಲ್ಲಿ ಬೋಲ್ಡ್ ದೃಶ್ಯಗಳು ಇದ್ದವು. ಈ ಕಾರಣಕ್ಕೆ ಅವರು ಟೀಕೆ ಎದುರಿಸಿದರು. ರಿಲೀಸ್ ಆದ ಎರಡನೇ ಟೀಸರ್​ ಅಲ್ಲಿಯೂ ಬೋಲ್ಡ್ ದೃಶ್ಯಗಳು ಇವೆ. ಈ ವಿಷಯದಲ್ಲಿ ಟೀಕೆ ಎದುರಿಸುತ್ತಿದ್ದಾರೆ. ಎಲ್ಲಕಿಂತ ಮುಖ್ಯವಾಗಿ ಟೀಸರ್​​ನಲ್ಲಿ ಯಶ್​ಗೆ ಮಾತ್ರ ಆದ್ಯತೆ ನೀಡಲಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಒಂದು ಪಾತ್ರದ ಹೆಸರು ರಾಯ ಆದರೆ, ಮತ್ತೊಂದು ಪಾತ್ರದ ಹೆಸರು ರಾಯ. ಈ ಪಾತ್ರ ರಿಲೀಸ್ ಆಗಿ ಗಮನ ಸೆಳೆದಿದೆ. ಹೀರೋಯಿಗಳನ್ನು ಟೀಸರ್ ಅಲ್ಲಿ ತೋರಿಸದೇ ಇರಲು ಕೆಲವರು ಬೇರೆ ರೀತಿಯಲ್ಲಿ ಹೇಳುತ್ತಿದ್ದಾರೆ. .

ಸಾಮಾನ್ಯವಾಗಿ ದೊಡ್ಡ ಬಜೆಟ್ ಸಿನಿಮಾಗಳು ರಿಲೀಸ್ ಆಗುತ್ತವೆ ಎಂದಾಗ ಟೀಸರ್ ಹಾಗೂ ಸಿನಿಮಾದಲ್ಲಿ ಬಹುತೇಕ ಎಲ್ಲ ವಿಷಯಗಳನ್ನು ತೋರಿಸಲಾಗುತ್ತದೆ. ಸಿನಿಮಾದಲ್ಲಿ ಯಾವ ಕಲಾವಿದರ ಪಾತ್ರ ಯಾವ ರೀತಿ ಇದೆ? ಸಿನಿಮಾ ಎಳೆ ಏನು ಎಂಬುದನ್ನು ತಿಳಿಸಲಾಗುತ್ತದೆ. ಆದರೆ, ‘ಟಾಕ್ಸಿಕ್’ ಟೀಸರ್​ನಲ್ಲಿ ಪ್ರಮುಖವಾಗಿ ತೋರಿಸಿದ್ದು, ಯಶ್ ದ್ವಿಪಾತ್ರದ ಕಥೆ ಮಾತ್ರ. ಇದಕ್ಕೆ ಯಶ್ ಅವರ ಪ್ಲ್ಯಾನ್ ಕಾರಣವಂತೆ.

ಇದನ್ನೂ ಓದಿ: ಮುಂಬೈ ಬೀದಿಗಳಲ್ಲಿ ಯಶ್ ಮುಖ ಮುಚ್ಚಿಕೊಂಡು ಓಡಾಡಿದ್ದಕ್ಕೆ ‘ಟಾಕ್ಸಿಕ್ ಟೀಸರ್​​ನಲ್ಲಿ ಸಿಕ್ತು ಉತ್ತರ

ಎಲ್ಲಾ ಸಿನಿಮಾಗಳ ರೀತಿಯಲ್ಲಿ ಟೀಸರ್ ಇರಬಾರದು ಎಂದು ಯಶ್ ನಿರ್ಧರಿಸಿದ್ದರು. ನಯನತಾರಾ, ಕಿಯಾರಾ ಅಡ್ವಾಣಿ ಮಾಡಿರೋ ಪಾತ್ರಗಳ ಬಗ್ಗೆ ಕುತೂಹಲ ಇದೆ. ಟ್ರೇಲರ್​ವರೆಗೂ ಈ ಕುತೂಹಲ ಸಾಗಬೇಕು ಎಂಬುದು ಯಶ್ ಪ್ಲ್ಯಾನ್ ಹೀಗಾಗಿ, ಟ್ರೇಲರ್ ರಿಲೀಸ್ ಆಗುವವರೆಗೂ ಕಾಯಬೇಕಾದ ಅನಿವಾರ್ಯತೆ ಅಭಿಮಾನಿಗಳಿಗೆ ಇದೆ.
ಈಗಿನ ಯುಗದಲ್ಲಿ ನೆಗೆಟಿವೋ ಅಥವಾ ಪಾಸಿಟಿವೋ ಚರ್ಚೆ ಆದರೆ ಸಾಕು ಎಂದು ಅನೇಕರು ಭಾವಿಸುತ್ತಾರೆ. ಯಶ್ ಕೂಡ ಇದೇ ರೀತಿಯ ಪ್ಲ್ಯಾನ್ ಮಾಡಿದರೇ ಎಂಬ ಪ್ರಶ್ನೆ ಮೂಡಿದೆ. ‘ಟಾಕ್ಸಿಕ್’ ಮೊದಲ ಟೀಸರ್​ ಅಲ್ಲಿ ಬೋಲ್ಡ್ ದೃಶ್ಯದ ಕಾರಣಕ್ಕೆ ಚರ್ಚೆ ಆಯಿತು. ಈ ಬಾರಿ ಹೀರೋಯಿನ್​​ಗಳ ಪರಿಚಯಿಸಿಲ್ಲ ಎಂಬ ಕಾರಣಕ್ಕೆ ಟೀಕೆ ವ್ಯಕ್ತವಾಗುತ್ತಿದೆ. ಒಟ್ಟಿನಲ್ಲಿ ಸಿನಿಮಾ ಬಗ್ಗೆ ಚರ್ಚೆಯಂತೂ ಇದ್ದೇ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್​​ನಿಂದ ಅರೆಬೆತ್ತಲೆ ಪ್ರತಿಭಟನೆ; ಬಂಧಿತ 4 ಆರೋಪಿಗಳು 5 ದಿನ ಪೊಲೀಸ್ ವಶಕ್ಕೆ – Kannada News | AI Summit protest Patiala House Court sends 4 Indian Youth Congress workers to police custody for 5 days

ನವದೆಹಲಿ, ಫೆಬ್ರವರಿ 21: ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯ (AI Impact Summit) ಸಭಾಂಗಣದೊಳಗೆ ಶರ್ಟ್ ಬಿಚ್ಚಿ, ಮೋದಿ-ಟ್ರಂಪ್ ಫೋಟೋ ಇದ್ದ ಟಿ-ಶರ್ಟ್ ಹಿಡಿದುಕೊಂಡು, ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದದ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯರ್ತರನ್ನು ಬಂಧಿಸಲಾಗಿತ್ತು. ಬಂಧಿತರಲ್ಲಿ ನಾಲ್ವರನ್ನು ಇಂದು ಪಟಿಯಾಲ ಹೌಸ್ ನ್ಯಾಯಾಲಯದೆದುರು ಹಾಜರುಪಡಿಸಲಾಗಿತ್ತು. ಆ ನಾಲ್ವರನ್ನೂ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ನೇಪಾಳದ ಜೆನ್‌ಝಡ್ ಪ್ರತಿಭಟನೆಯಿಂದ ಪ್ರೇರಿತರಾದ ಕಾಂಗ್ರೆಸ್ ಕಾರ್ಯಕರ್ತರು ಎಐ ಶೃಂಗಸಭೆಯಲ್ಲಿ ಗಲಭೆ ಸೃಷ್ಟಿಸಲು ಪಿತೂರಿ ನಡೆಸಿದ್ದರು ಎಂದು ಪೊಲೀಸ್ ತನಿಖೆ ವೇಳೆ ಬಯಲಾಗಿದೆ. “ಪ್ರಧಾನಿ ಮೋದಿ ರಾಜಿ ಮಾಡಿಕೊಂಡಿದ್ದಾರೆ” ಎಂಬ ಸ್ಲೋಗನ್ ಹೊಂದಿರುವ ಟಿ-ಶರ್ಟ್‌ಗಳನ್ನು ಹೈಯಲ್ಲಿ ಹಿಡಿದು ಬೀಸುವ ಮೂಲಕ ಯುವ ಕಾಂಗ್ರೆಸ್ ಕಾರ್ಯಕರ್ತರು ಮೆರವಣಿಗೆ ನಡೆಸಿ, ಅಲ್ಲಿ ಸೇರಿದ್ದ ಸಾವಿರಾರು ಜನರ ಗಮನ ಸೆಳೆದಿದ್ದರು. ಜಾಗತಿಕ ನಾಯಕರು ಭಾಗವಹಿಸಿದ್ದ ಈ ಶೃಂಗಸಭೆಯಲ್ಲಿ ಈ ರೀತಿಯ ಅಸಭ್ಯ ವರ್ತನೆ ತೋರಿದ್ದರಿಂದ ಕೇಂದ್ರ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿತ್ತು.

ಇದನ್ನೂ ಓದಿ: ಎಐ ಶೃಂಗಸಭೆಯಲ್ಲಿ ಶರ್ಟ್ ತೆಗೆದು ಘೋಷಣೆ ಕೂಗಿದ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಈ ಕಾಂಗ್ರೆಸ್ ಪ್ರತಿಭಟನಾಕಾರರು ನೇಪಾಳದ ಜೆನ್‌ಝಡ್ ಪ್ರತಿಭಟನೆಯಿಂದ ಪ್ರೇರಿತರಾಗಿದ್ದಾರೆ. ಶೃಂಗಸಭೆಯಲ್ಲಿ ಅದೇ ರೀತಿಯ ಚಳವಳಿಯನ್ನು ನಡೆಸಲು ಬಯಸಿದ್ದರು. ಹೀಗಾಗಿ, ಬಂಧಿತ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು 5 ದಿನಗಳ ಕಸ್ಟಡಿಗೆ ನೀಡುವಂತೆ ದೆಹಲಿ ಪೊಲೀಸರು ನ್ಯಾಯಾಲಯದ ಮುಂದೆ ಕೋರಿದ್ದರು. ದೇಶವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ತಲೆತಗ್ಗಿಸುವಂತೆ ಮಾಡಲು ಸಂಚು ರೂಪಿಸಲಾಗುತ್ತಿದೆ ಎಂದು ಪೊಲೀಸರು ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ತಿಳಿಸಿದ್ದರು. ಇದಾದ ಬಳಿಕ ನ್ಯಾಯಾಲಯವು ಆರೋಪಿಗಳನ್ನು 5 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.

“ಪ್ರತಿಭಟನೆ ಶಾಂತಿಯುತವಾಗಿತ್ತು. ಯಾವುದೇ ವೀಡಿಯೊಗಳಲ್ಲಿ ಹಿಂಸಾಚಾರ ಕಂಡುಬಂದಿಲ್ಲ. ಅವರೆಲ್ಲರೂ ಪದವೀಧರರು, ಸುಶಿಕ್ಷಿತರು. ರಾಜಕೀಯ ಪ್ರೇರಣೆಯಿಂದ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಆರೋಪಿಯ ಪರ ವಕೀಲರು ವಾದ ಮಂಡಿಸಿದ್ದರು.

ಇದನ್ನೂ ಓದಿ: ದೆಹಲಿಯ ಎಐ ಶೃಂಗಸಭೆಯಲ್ಲಿ ಹೈಡ್ರಾಮಾ; ಶರ್ಟ್ ಬಿಚ್ಚಿ ಮೋದಿ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

“ಆರೋಪಿಗಳು ರಾಷ್ಟ್ರವಿರೋಧಿ ಘೋಷಣೆಗಳನ್ನು ಕೂಗಿದರು. ಪ್ರಧಾನಿ ವಿರುದ್ಧ ಸಂದೇಶಗಳನ್ನು ಹೊಂದಿರುವ ಟಿ- ಶರ್ಟ್‌ಗಳನ್ನು ಧರಿಸಿದ್ದರು” ಎಂದು ಸರ್ಕಾರಿ ವಕೀಲರು ವಾದಿಸಿದರು.

ಭಾರತ್ ಮಂಟಪದಲ್ಲಿ ನಡೆದ AI ಶೃಂಗಸಭೆಯ ಸಂದರ್ಭದಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಬಂಧಿಸಲಾದ ನಾಲ್ವರು ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಇಂದು ಬೆಳಿಗ್ಗೆ ಪಟಿಯಾಲ ಹೌಸ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಬಂಧಿತ ವ್ಯಕ್ತಿಗಳನ್ನು ಕೃಷ್ಣ ಹರಿ, ಕುಂದನ್ ಯಾದವ್, ಅಜಯ್ ಕುಮಾರ್ ಮತ್ತು ನರಸಿಂಹ ಯಾದವ್ ಎಂದು ಗುರುತಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:22 pm, Sat, 21 February 26

Source link

ಗದಗ: 11 ಲಕ್ಷ ರೂ ಲಂಚಕ್ಕೆ ಬೇಡಿಕೆ; ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಬಿಜೆಪಿ ಶಾಸಕ – Kannada News | Gadag: BJP MLA Chandru Lamani Lokayukta Trap: Caught Taking Lakhs Bribe

ಬಿಜೆಪಿ ಶಾಸಕ ಚಂದ್ರು ಲಮಾಣಿImage Credit source: tv9 kannada

ಗದಗ, ಫೆಬ್ರವರಿ 21: ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ನಡೆದಿದೆ. 11 ಲಕ್ಷ ರೂ ಲಂಚ ಬೇಡಿಕೆ ಇಡಲಾಗಿದ್ದು, ಮುಂಗಡವಾಗಿ 5 ಲಕ್ಷ ರೂ ಕಮಿಷನ್ ಪಡೆಯುವಾಗ ಶಾಸಕ ಸೇರಿದಂತೆ ಪಿಎಗಳಾದ ಮಂಜುನಾಥ್ ಮತ್ತು ಗುರು ಸಿಕ್ಕಿಬಿದ್ದಿದ್ದು, ಮೂವರನ್ನು ವಶಕ್ಕೆ ಪಡೆದು ಲೋಕಯುಕ್ತ ಪೊಲೀಸರಿಂದ ವಿಚಾರಣೆ ಮಾಡಲಾಗುತ್ತಿದೆ.

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ.

Source link

‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ – Kannada News | Niranjan thanked for response getting for Seetha Payanam movie

ಅರ್ಜುನ್ ಸರ್ಜಾ (Arjun Sarja) ನಿರ್ದೇಶಿಸಿ, ನಿರ್ಮಾಣ ಮಾಡಿರುವ ‘ಸೀತಾಪಯಣ’ ಸಿನಿಮಾ ಕಳೆದ ವಾರವಷ್ಟೆ ಬಿಡುಗಡೆ ಆಗಿದೆ. ಸಿನಿಮಾನಲ್ಲಿ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಸರ್ಜಾ ನಾಯಕಿ, ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ನಾಯಕ. ಕನ್ನಡ ಮಾತ್ರವಲ್ಲದೆ ತೆಲುಗು ಮತ್ತು ತಮಿಳು ಭಾಷೆಗಳಲ್ಲಿಯೂ ಈ ಪ್ರೇಮಕಥಾ ಸಿನಿಮಾ ಬಿಡುಗಡೆ ಆಗಿದೆ. ಸಿನಿಮಾದ ಪ್ರೀಮಿಯರ್ ಶೋ ಅನ್ನು ಇತ್ತೀಚೆಗಷ್ಟೆ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಶಿವಣ್ಣ ಸಹ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ತಮ್ಮ ಸಿನಿಮಾಕ್ಕೆ ಸಿಗುತ್ತಿರುವ ಪ್ರತಿಕ್ರಿಯೆ ಬಗ್ಗೆ ಖುಷಿಯಾಗಿರುವ ನಿರಂಜನ್, ಎಲ್ಲರಿಗೂ ಧನ್ಯವಾದ ಹೇಳಿದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರಿಷಬ್ ತೆಲುಗು ಸಿನಿಮಾಗೆ ಕರ್ನಾಟಕದಲ್ಲಿ ಮುಹೂರ್ತ; ಇದಕ್ಕಿದೆ ವಿಶೇಷ ಕಾರಣ – Kannada News | Rishab Shetty’s ‘Jai Hanuman’ Muhurtha in Hampi: Kantara’ Star’s Next Big Role

ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಕೂಡ ಹೇಳಿದ್ದರು. ಈ ಚಿತ್ರದ ಬಳಿಕ ಅವರು ಒಂದು ದೀರ್ಘ ಗ್ಯಾಪ್ ತೆಗೆದುಕೊಂಡರು. ಕುಟುಂಬದ ಜೊತೆ ಸಮಯ ಕಳೆದರು. ಈಗ ಅವರು ಮತ್ತೆ ಸಿನಿಮಾ ಕೆಲಸಕ್ಕೆ ಮರಳಿದ್ದಾರೆ. ‘ಹನುಮಾನ್ 2’ ಚಿತ್ರದ ಶೂಟ್​​ನಲ್ಲಿ ಅವರು ಬ್ಯುಸಿ ಆಗಲಿದ್ದಾರೆ. ಈ ಚಿತ್ರಕ್ಕೆ ಕರ್ನಾಟಕದಲ್ಲೇ ಮುಹೂರ್ತ ನಡೆಯಲಿದೆ ಎಂಬುದು ವಿಶೇಷ.

‘ಹನುಮಾನ್’ ಸಿನಿಮಾ 2024ರಲ್ಲಿ ರಿಲೀಸ್ ಆಯಿತು. ಈ ಚಿತ್ರ ಸೂಪರ್ ಹಿಟ್ ಆಯಿತು. ಪ್ರಶಾಂತ್ ವರ್ಮ ಅವರು ಇದನ್ನು ನಿರ್ದೇಶನ ಮಾಡಿದ್ದರು. ಈಗ ಈ ಚಿತ್ರದ ಸೀಕ್ವೆಲ್​​ ‘ಜೈ ಹನುಮಾನ್’ ಸಿನಿಮಾಗೆ ಅವರೇ ನಿರ್ದೇಶನ ಮಾಡಲು ರೆಡಿ ಆಗಿದ್ದಾರೆ. ಈ ಸಿನಿಮಾ ಇದೇ ವರ್ಷ ತೆರೆಗೆ ತರುವ ನಿರೀಕ್ಷೆ ಇದೆ. ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಕೂಡ ನಟಿಸುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಭಾನುವಾರ (ಫೆಬ್ರವರಿ 22) ನಡೆಯಲಿದೆ.

ಹಂಪಿಯ ಅಂಜನಾದ್ರಿ ಬೆಟ್ಟದಲ್ಲಿ ‘ಜೈ ಹನುಮಾನ್’ ಸಿನಿಮಾದ ಮುಹೂರ್ತ ನಡೆಯಲಿದೆ. ಇದು ತೆಲುಗು ಸಿನಿಮಾ ಆದರೂ, ಕರ್ನಾಟಕದಲ್ಲಿ ಮುಹೂರ್ತ ನಡೆಯಲು ಕಾರಣವೂ ಇದೆ. ಹನುಮ ಹುಟ್ಟಿದ್ದು, ಹಂಪಿಯಲ್ಲಿ ಎಂಬುದು ಪುರಾಣದಲ್ಲಿ ಇದೆ. ಈ ಕಾರಣದಿಂದ ಈ ಜಾಗವನ್ನು ಮುಹೂರ್ತಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಸಿನಿಮಾನ ತೆಲುಗಿನಲ್ಲಿ ‘ಪುಷ್ಪ’ದಂತಹ ಚಿತ್ರಗಳನ್ನು ನೀಡಿದ ಮೈತ್ರಿ ಮೂವೀ ಮೇಕರ್ಸ್ ಚಿತ್ರವನ್ನು ನಿರ್ಮಿಸುತ್ತಿದೆ.

ಇದನ್ನೂ ಓದಿ: ರಿಷಬ್ ಶೆಟ್ಟಿಗಾಗಿ ಪ್ರಭಾಸ್ ಸಿನಿಮಾ ಕೈಬಿಟ್ಟರೆ ಯುವ ನಿರ್ದೇಶಕ

ರಿಷಬ್ ಶೆಟ್ಟಿ ಹಾಗೂ ತಂಡ ಈಗಾಗಲೇ ಹಂಪಿ ತಲುಪಿದೆ. ರಿಷಬ್ ಅವರನ್ನು ಹನುಮಂತನ ಲುಕ್​ನಲ್ಲಿ ನೋಡಲು ಅಭಿಮಾನಿಗಳೂ ಕಾತುರದಿಂದ ಕಾಯುತ್ತಿದ್ದಾರೆ. ‘ಕಾಂತಾರ’ ಹಿಟ್ ಆದ ಬಳಿಕ ರಿಷಬ್ ಅವರನ್ನು ಇದೇ ಮಾದರಿಯ ಪಾತ್ರಗಳು ಅರಸಿ ಬರುತ್ತಿವೆ ಅನ್ನೋದು ವಿಶೇಷ. ಅವರು ಖುಷಿ ಖುಷಿಯಿಂದಲೇ ಈ ರೀತಿಯ ಪಾತ್ರಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಅವರ ಸಿನಿಮಾ ಆಯ್ಕೆ ಬಗ್ಗೆ ಅವರ ಅಭಿಮಾನಿಗಳಿಗೂ ಖುಷಿ ಇದೆ. ‘ಜೈ ಹನುಮಾನ್’ ಮಾತ್ರವಲ್ಲದೆ, ಶಿವಾಜಿ ಕುರಿತ ಸಿನಿಮಾದಲ್ಲೂ ರಿಷಬ್ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕಾಂಗ್ರೆಸ್ ಕುರ್ಚಿ ಕದನ: ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಸತೀಶ್ ಜಾರಕಿಹೊಳಿ ಸ್ಫೋಟಕ ಮಾಹಿತಿ – Kannada News | Congress Leadership Tussle: Satish Jarkiholi Meets Mallikarjun Kharge in Delhi, Hints at Early Decision

ನವದೆಹಲಿ, ಫೆಬ್ರವರಿ 21: ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಹಾಗೂ ಕೆಲ ಶಾಸಕರು ಭೇಟಿ ಮಾಡಿದರು. ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳು, ಆಗಿರುವ ಮತ್ತು ಮುಂದಾಗುವ ಬೆಳವಣಿಗೆಗಳ ಕುರಿತು ಈ ವೇಳೆ ಚರ್ಚಿಸಲಾಯಿತು ಎಂದು ಜಾರಕಿಹೊಳಿ ತಿಳಿಸಿದ್ದಾರೆ. ಕರ್ನಾಟಕದಲ್ಲಿನ ಗೊಂದಲಗಳ ಕುರಿತು ಖರ್ಗೆ ಅವರ ಗಮನಕ್ಕೆ ತಂದಿರುವುದಾಗಿ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಗೊಂದಲಗಳನ್ನು ಆದಷ್ಟು ಬೇಗ ಇತ್ಯರ್ಥಪಡಿಸುವಂತೆ ಮನವಿ ಮಾಡಿರುವುದಾಗಿ ಜಾರಕಿಹೊಳಿ ಹೇಳಿದ್ದಾರೆ.

ಆದಷ್ಟು ಬೇಗ ನಿರ್ಣಯ ಕೈಗೊಳ್ಳುವುದಾಗಿ ಮತ್ತು ಗೊಂದಲಗಳನ್ನು ತ್ವರಿತವಾಗಿ ಬಗೆಹರಿಸುವುದಾಗಿ ಖರ್ಗೆ ಭರವಸೆ ನೀಡಿದ್ದಾರೆ. ಈ ಕುರಿತು ಈಗಾಗಲೇ ಒಂದು ತೀರ್ಮಾನಕ್ಕೆ ಬರಲಾಗಿದೆ ಎಂದೂ ಖರ್ಗೆ ಮಾಹಿತಿ ನೀಡಿದ್ದಾರೆ ಎಂದು ಜಾರಕಿಹೊಳಿ ತಿಳಿಸಿದ್ದಾರೆ. ಪದೇ ಪದೇ ಅಧಿಕಾರದ ಗೊಂದಲಗಳು ಮತ್ತು ಹೇಳಿಕೆಗಳು ಬರದಂತೆ ಪೂರ್ಣವಿರಾಮ ಹಾಕಿ ಈ ಸಮಸ್ಯೆಗೆ ಶೀಘ್ರ ಇತ್ಯರ್ಥ ಸಿಗಬೇಕೆಂಬುದು ನಮ್ಮ ನಿರೀಕ್ಷೆ. ಯಾವುದೇ ವಿಳಂಬವಿಲ್ಲದೆ ಇದು ಬೇಗ ಮುಗಿದರೆ ಒಳ್ಳೆಯದು ಎಂದು ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಐಎಎಸ್ ಅಧಿಕಾರಿಗೆ ಹೈಕೋರ್ಟ್ ಶಾಕ್; ಮಾನನಷ್ಟ ಪ್ರಕರಣದಲ್ಲಿ ರೋಹಿಣಿ ಸಿಂಧೂರಿಗೆ ಹಿನ್ನಡೆ – Kannada News | Rohini Sindhuri Defamation Case: High Court Rejects Plea, D. Roopa’s Complaint to Proceed

ಮಾನನಷ್ಟ ಪ್ರಕರಣದಲ್ಲಿ ರೋಹಿಣಿ ಸಿಂಧೂರಿಗೆ ಹಿನ್ನಡೆ

ಬೆಂಗಳೂರು, ಫೆಬ್ರವರಿ 21: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ (Rohini Sindhuri) ಮಾನನಷ್ಟ ಪ್ರಕರಣದಲ್ಲಿ ಹಿನ್ನಡೆ ಉಂಟಾಗಿದೆ. ರೋಹಿಣಿ ಮಾಧ್ಯಮಗಳ ಮುಂದೆ ತಮ್ಮ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ, ಅದನ್ನು ಸಾಮಾಜಿಕ ಜಾಲತಾಣದಲ್ಲಿಯೂ ಹಂಚಿಕೊಂಡಿದ್ದಾರೆ ಎಂದು ರೂಪಾ ಮೌದ್ಗಿಲ್ ಬೆಂಗಳೂರಿನ 7ನೇ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ದಾಖಲಿಸಿದ್ದ ಖಾಸಗಿ ದೂರು ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಐಎಎಸ್ ಅಧಿಕಾರಿಯ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ವಜಾಗೊಳಿಸಿದೆ.

ಕೇಸ್ ರದ್ದು ಕೋರಿದ್ದ ರೋಹಿಣಿ ಸಿಂಧೂರಿ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ದಾಖಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿತ್ತು. ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ವಿಚಾರಣೆಗೆ ತಡೆ ನೀಡಿ, ರಾಜಿ ಸಂಧಾನಕ್ಕೆ ಪ್ರಯತ್ನಿಸುವಂತೆ ಸಲಹೆ ನೀಡಿದ್ದರು. 19-02-2023ರಂದು ನೀಡಿದ್ದ ಹೇಳಿಕೆಯಲ್ಲಿ ಅವಹೇಳನಕಾರಿ ಆರೋಪಗಳಿವೆ ಎಂದು ರೂಪಾ ಆರೋಪಿಸಿ 7ನೇ ಎಸಿಎಂಎಂ ಕೋರ್ಟ್‌ನಲ್ಲಿ ದೂರು ದಾಖಲಿಸಿದ್ದರು. ಈ ವಿವಾದ ಎರಡು ವರ್ಷಗಳಿಂದ ಮುಂದುವರಿದಿದ್ದು, ಸುಪ್ರೀಂ ಕೋರ್ಟ್‌ನಿಂದ ಮತ್ತೆ ವಿಚಾರಣಾ ನ್ಯಾಯಾಲಯಕ್ಕೆ ವಾಪಸ್ ಕಳುಹಿಸಲಾಗಿತ್ತು. ಈ ಪ್ರಕರಣ ರದ್ದುಪಡಿಸುವಂತೆ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ತಿರಸ್ಕರಿಸಿದೆ.

ಇದನ್ನೂ ಓದಿ ಐಎಎಸ್​ ವರ್ಸಸ್ ಐಪಿಎಸ್​: ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್ ನೀಡಿದ ಕೋರ್ಟ್​​

2023ರ ಫೆಬ್ರವರಿ 19ರಂದು ರೋಹಿಣಿ ಸಿಂಧೂರಿ ಮಾಧ್ಯಮಗಳಿಗೆ ನೀಡಿದ ಹೇಳಿಕೆಯನ್ನು ನಂತರ ‘ಎಕ್ಸ್’ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಆರೋಪಗಳನ್ನು ಮಾಡಿದ್ದಾರೆ ಎಂದು ರೂಪಾ ಆರೋಪಿಸಿದ್ದರು. ಈ ಹೇಳಿಕೆಯನ್ನು ಸುಮಾರು 1.8 ಲಕ್ಷ ಮಂದಿ ವೀಕ್ಷಿಸಿದ್ದರೆಂದು ದೂರುದಲ್ಲಿ ಉಲ್ಲೇಖಿಸಲಾಗಿದೆ. ಈ ಹೇಳಿಕೆಯ ನಂತರ ತಮಗೆ ವರ್ಗಾವಣೆ ಆಗಿದ್ದು, ಆರು ತಿಂಗಳ ಕಾಲ ಸಂಬಳವಿಲ್ಲದೆ ಹುದ್ದೆ ರಹಿತ ಸ್ಥಿತಿ ಉಂಟಾಯಿತು ಎಂದು ರೂಪಾ ತಿಳಿಸಿದ್ದಾರೆ. ಜೊತೆಗೆ ಕುಟುಂಬದ ಸದಸ್ಯರು ಮಾನಸಿಕ ಯಾತನೆ ಅನುಭವಿಸಿದ್ದಾರೆ ಎಂಬ ಕಾರಣ ನೀಡಿ ಮಾನನಷ್ಟ ಪ್ರಕರಣ ದಾಖಲಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

47 ವರ್ಷಗಳ ಬಳಿಕ ಒಂದಾದ ಕಮಲ್-ರಜನೀಕಾಂತ್ ಆದರೆ ನಾಯಕ ಯಾರು? – Kannada News | Rajinikanth and Kamal Haasan new movie announced here is the detail

ರಜನೀಕಾಂತ್ (Rajinikanth) ಮತ್ತು ಕಮಲ್ ಹಾಸನ್ ಭಾರತ ಚಿತ್ರರಂಗದ ಇಬ್ಬರು ಸೂಪರ್ ಸ್ಟಾರ್​​ ನಟರು. ಬಹುತೇಕ ಒಟ್ಟಿಗೆ ಚಿತ್ರರಂಗಕ್ಕೆ ಕಾಲಿಟ್ಟ ಇವರು ದಶಕಗಳಿಂದಲೂ ಸ್ಟಾರ್ ಗಿರಿಯನ್ನು ಅನುಭವಿಸುತ್ತಿದ್ದಾರೆ. ಬೇರೆ ಚಿತ್ರರಂಗಗಳಲ್ಲಿ ಸ್ಟಾರ್ ನಟರುಗಳ ನಡುವೆ ಪರಸ್ಪರ ಸ್ಪರ್ಧೆ, ವೈರತ್ನ ಇದ್ದರೆ ರಜನೀಕಾಂತ್ ಮತ್ತು ಕಮಲ್ ಹಾಸನ್ ಹಲವು ವರ್ಷಗಳಿಂದಲೂ ಬಲು ಆತ್ಮೀಯ ಗೆಳೆಯರು ಎಂಬದು ವಿಶೇಷ. ಆರಂಭದ ಕೆಲವು ವರ್ಷ ಒಟ್ಟಿಗೆ ನಟಿಸಿದ ರಜನೀಕಾಂತ್ ಮತ್ತು ಕಮಲ್ ಹಾಸನ್ ಸ್ಟಾರ್​​ ನಟರುಗಳು ಎನಿಸಿಕೊಂಡ ಬಳಿಕ ಒಟ್ಟಿಗೆ ನಟಿಸಿದ್ದಿಲ್ಲ. ಇದೀಗ ಬರೋಬ್ಬರಿ 47 ವರ್ಷಗಳ ಬಳಿಕ ರಜನೀಕಾಂತ್ ಮತ್ತು ಕಮಲ್ ಹಾಸನ್ ಒಟ್ಟಿಗೆ ಒಂದೇ ಸಿನಿಮಾನಲ್ಲಿ ನಟಿಸಲಿದ್ದಾರೆ ಆದರೆ ಒಂದು ಅನುಮಾನ ಮೂಡಿದೆ ಈ ಸಿನಿಮಾನಲ್ಲಿ ನಾಯಕ ಯಾರು?

ರಜನೀಕಾಂತ್ ಮತ್ತು ಕಮಲ್ ಹಾಸನ್ ಒಟ್ಟಿಗೆ ನಟಿಸಲಿರುವ ಸಿನಿಮಾವನ್ನು ‘ಜೈಲರ್’ ಸಿನಿಮಾ ಖ್ಯಾತಿಯ ನಿರ್ದೇಶಕ ನೆಲ್ಸನ್ ನಿರ್ದೇಶಿಸಲಿದ್ದಾರೆ. ಈ ಸಿನಿಮಾಕ್ಕೆ ಸದ್ಯಕ್ಕೆ ‘ಕೆಎಚ್-ಆರ್​​ಕೆ’ ಎಂದು ತಾತ್ಕಾಲಿಕ ಹೆಸರಿಡಲಾಗಿದ್ದು, ಸಿನಿಮಾದ ಘೋಷಣೆಗೆಂದು ಒಂದು ತಮಾಷೆಯಾದ ಪ್ರೋಮೊ ಸಹ ಬಿಡುಗಡೆ ಮಾಡಲಾಗಿದೆ. ಈ ಪ್ರೊಮೊ ವಿಡಿಯೋ ಎಷ್ಟು ಮಜವಾಗಿದೆ ಎಂದರೆ, ಇಲ್ಲಿ ಸಿನಿಮಾದ ಕಥೆಗಿಂತ ಹೆಚ್ಚಾಗಿ ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಹಾಗೂ ಸಂಗೀತ ನಿರ್ದೇಶಕ ಅನಿರುದ್ಧ್ ಅವರ ಗೊಂದಲವೇ ಹೈಲೈಟ್.

ವಿಡಿಯೋದ ಆರಂಭದಲ್ಲಿ ನೆಲ್ಸನ್ ಕಾರಿಡಾರ್‌ನಲ್ಲಿ ಅತ್ತಿತ್ತ ಅಡ್ಡಾಡುತ್ತಾ, ‘ಯಾರ ರೂಮಿಗೆ ಮೊದಲು ಹೋಗಲಿ? ರಜನಿ ಸಾರ್ ರೂಮಿಗೋ ಅಥವಾ ಕಮಲ್ ಸಾರ್ ರೂಮಿಗೋ?’ ಎಂದು ತಲೆ ಕೆರೆದುಕೊಳ್ಳುತ್ತಿರುತ್ತಾರೆ. ಅಷ್ಟರಲ್ಲಿ ಮ್ಯೂಸಿಕ್ ಡೈರೆಕ್ಟರ್ ಅನಿರುದ್ಧ್ ರವಿಚಂದರ್ ಎಂಟ್ರಿ ಕೊಟ್ಟು, “ಗುರುಗಳೇ, ಯಾವ ರಾಗ ಸೆಲೆಕ್ಟ್ ಮಾಡಲಿ?” ಎಂದು ಇನ್ನೊಂದು ಕನ್ಫ್ಯೂಷನ್ ಎಸೆಯುತ್ತಾರೆ. ಪಾಪ ನೆಲ್ಸನ್, ಇಬ್ಬರು ಸೂಪರ್‌ಸ್ಟಾರ್‌ಗಳನ್ನು ಮ್ಯಾನೇಜ್ ಮಾಡೋಕೆ ಪಡುತ್ತಿರುವ ಪಾಡು ನೋಡಿ ಪ್ರೇಕ್ಷಕರು ನಗುವಂತಿದೆ.

ಇದನ್ನೂ ಓದಿ:ಸ್ವಚ್ಛತಾ ಕಾರ್ಮಿಕ ಮಹಿಳೆ ಪದ್ಮಮ್ಮನ ಸನ್ಮಾನಿಸಿದ ರಜನೀಕಾಂತ್: ಕಾರಣ?

ವಿಡಿಯೋ ಮುಂದುವರೆದಂತೆ, ರಜನೀ ಮತ್ತು ಕಮಲ್ ಅವರುಗಳು ಒಬ್ಬರಿಗಿಂತಲೂ ಇನ್ನೊಬ್ಬರು ಸ್ಟೈಲ್ ಆಗಿ ಕಾಣಬೇಕು ಎಂದು ಸ್ಪರ್ಧೆಗೆ ಬಿದ್ದವರಂತೆ ತೋರಿಸಲಾಗಿದೆ. ವಿಡಿಯೋದ ಕೊನೆಯಲ್ಲಿ ಅಸಲಿ ಟ್ವಿಸ್ಟ್ ಇದೆ. ಇಬ್ಬರೂ ಲೆಜೆಂಡರಿ ನಟರು ಫುಲ್ ರೆಟ್ರೋ ಸ್ಟೈಲ್‌ನಲ್ಲಿ, ಲೆದರ್ ಜಾಕೆಟ್ ತೊಟ್ಟು ಮಸ್ತ್ ಆಗಿ ನಡೆದುಕೊಂಡು ಬರುತ್ತಾರೆ. ವಿಂಟೇಜ್ ಮರ್ಸಿಡೀಜ್ ಕಾರಿನಲ್ಲಿ ಕಮಲ್ ಹಾಸನ್ ಡ್ರೈವಿಂಗ್ ಸೀಟಿನಲ್ಲಿ ಕೂತರೆ, ರಜನಿ ಪಕ್ಕದ ಸೀಟಿನಲ್ಲಿ ಆಸೀನರಾಗುತ್ತಾರೆ. ಇವರ ಹಿಂಬದಿಯ ಸೀಟಿನಲ್ಲಿ ನೆಲ್ಸನ್ ಮತ್ತು ಅನಿರುದ್ಧ್ ಇರುತ್ತಾರೆ. ಈ ಸಮಯದಲ್ಲಿ ಇಬ್ಬರೂ ಗಂಭೀರವಾಗಿ ನೆಲ್ಸನ್ ಕಡೆ ನೋಡಿ, ‘ಅಂದಹಾಗೆ, ನಮ್ಮಿಬ್ಬರಲ್ಲಿ ಈ ಸಿನಿಮಾಕ್ಕೆ ಹೀರೋ ಯಾರು?’ ಎಂದು ಕೇಳುತ್ತಾರೆ. ಇಬ್ಬರು ಸ್ಟಾರ್ ನಟರ ಈ ಪ್ರಶ್ನೆಗೆ ನೆಲ್ಸನ್ ಮತ್ತಷ್ಟು ಗಾಬರಿ ಆಗುತ್ತಾರೆ.

ರಜನೀಕಾಂತ್ ಮತ್ತು ಕಮಲ್ ಹಾಸನ್ ಒಟ್ಟಿಗೆ ಏಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ರಜನೀಕಾಂತ್ ಅವರ ಮೊದಲ ಸಿನಿಮಾ ‘ಅಪೂರ್ವರಾಗಂಗಳ್’ನಲ್ಲಿ ಕಮಲ್ ಹಾಸನ್ ನಾಯಕ. ಆ ಬಳಿಕ ‘ಮೂದ್ರು ಮುದಿಚ್ಚು’, ‘ಆವರ್ಗಳ್’, ‘ಪದಿನಾರು ವಯತ್ತಿನಿಲೆ’, ‘ಇಳಮಾಯ್ ಊಂಜಿಲ್ ಆಡುಕಿರಾತ್ತು’, ‘ನಿನ್ನೈತಾಲೆ ಇನಿಕ್ಕುಂ’ ಮತ್ತು 1979 ರಲ್ಲಿ ಬಿಡುಗಡೆ ಆದ ‘ಅಲ್ಲಾವುದ್ದೀನ್ ಅಲ್ಬುತ ವಿಲಕ್ಕುಂ’ ಕಮಲ್ ಹಾಗೂ ರಜನೀಕಾಂತ್ ಒಟ್ಟಿಗೆ ನಟಿಸಿದ ಕೊನೆಯ ಸಿನಿಮಾ. ಅದಾದ ಬಳಿಕ ಈ ಇಬ್ಬರು ಒಟ್ಟಿಗೆ ನಟಿಸಿರಲೇ ಇಲ್ಲ ಇದೀಗ 47 ವರ್ಷಗಳ ಬಳಿಕ ಮತ್ತೆ ಒಟ್ಟಿಗೆ ನಟಿಸುತ್ತಿದ್ದಾರೆ. ಈ ಸಿನಿಮಾಕ್ಕೆ ಕಮಲ್ ಹಾಸನ್ ಅವರೇ ಬಂಡವಾಳ ಹೂಡುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕೊಲೆ ಆರೋಪಿ ರೌಡಿಶೀಟರ್ ಜತೆ ವರ್ತೂರು ಇನ್ಸ್‌ಪೆಕ್ಟರ್ ಯೋಗಾನಂದ್ ದೋಸ್ತಿ: ಗಂಭೀರ ಆರೋಪ – Kannada News | Bangalore Crime: Inspector Yoganand Under Fire for Alleged Collusion in Revanth Murder

, ವರ್ತೂರು ಪೊಲೀಸ್ ಇನ್ಸ್‌ಪೆಕ್ಟರ್

ಬೆಂಗಳೂರು, ಫೆ.21: ನಗರದ ವರ್ತೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ (Varthur Police corruption) ಯೋಗಾನಂದ್ ಅವರು ರೌಡಿಶೀಟರ್‌ಗಳೊಂದಿಗೆ ಕೈಜೋಡಿಸಿ, ಕೊಲೆ ಪ್ರಕರಣವೊಂದನ್ನು ಹಳ್ಳ ಹಿಡಿಸುತ್ತಿದ್ದಾರೆ ಎಂಬ ಆತಂಕಕಾರಿ ಆರೋಪ ಕೇಳಿಬಂದಿದೆ. ಎಲ್ ಎಲ್ ಬಿ ವಿದ್ಯಾರ್ಥಿ ರೇವಂತ್ ಕೊಲೆ ಪ್ರಕರಣದ ತನಿಖೆಯಲ್ಲಿ ಉದ್ದೇಶಪೂರ್ವಕ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ಸಂತ್ರಸ್ತ ಕುಟುಂಬ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. 2024ರ ಸೆಪ್ಟೆಂಬರ್ 18ರಂದು ತಮಿಳುನಾಡಿನ ಬಾಗಲೂರಿನಲ್ಲಿ 24 ವರ್ಷದ ಎಲ್ ಎಲ್ ಬಿ ವಿದ್ಯಾರ್ಥಿ ರೇವಂತ್‌ನನ್ನು ರೌಡಿಶೀಟರ್ ರೇವಾ ಮತ್ತು ಗ್ಯಾಂಗ್ ಭೀಕರವಾಗಿ ಹತ್ಯೆ ಮಾಡಿತ್ತು.

ರೇವಂತ್ ತನ್ನ ಸ್ನೇಹಿತ ಸ್ಟಾಲಿನ್ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ದಾಖಲಿಸಲು ಸಹಕರಿಸಿದ್ದ. ಈ ಕೇಸ್ ವಾಪಸ್ ಪಡೆಯುವಂತೆ ರೇವಾ ಗ್ಯಾಂಗ್ ರೇವಂತ್ ಮೇಲೆ ಒತ್ತಡ ಹೇರಿತ್ತು. ರಾಜಿ ಮಾಡಿಕೊಳ್ಳೋಣ ಎಂದು ನಂಬಿಸಿ ಕರೆಸಿಕೊಂಡ ದುಷ್ಕರ್ಮಿಗಳು, ರೇವಂತ್‌ನ ಚಿಕ್ಕಪ್ಪನ ಕಣ್ಣೆದುರೇ ಆತನನ್ನು ಕೊಚ್ಚಿ ಕೊಂದಿದ್ದರು.

ತಮಿಳುನಾಡು ಪೊಲೀಸರಿಂದ ವರ್ಗಾವಣೆಯಾದ ಈ ಪ್ರಕರಣದ ತನಿಖೆ ನಡೆಸಿದ ವರ್ತೂರು ಪೊಲೀಸರು, ನಿಯಮದಂತೆ 90 ದಿನಗಳೊಳಗೆ ಚಾರ್ಜ್‌ಶೀಟ್ ಸಲ್ಲಿಸಿಲ್ಲ. ಜೈಲಿನಲ್ಲಿದ್ದ ರೌಡಿಶೀಟರ್ ರೇವಾ ಸೇರಿದಂತೆ ಏಳು ಮಂದಿ ಆರೋಪಿಗಳು ಸುಲಭವಾಗಿ ಜಾಮೀನು ಪಡೆದು ಹೊರಬಂದಿದ್ದಾರೆ. ಜಾಮೀನಿನ ಮೇಲೆ ಹೊರಬಂದ ರೌಡಿಶೀಟರ್ ರೇವಾಗೆ ಪ್ರತಿದಿನ ಠಾಣೆಗೆ ಬಂದು ಸಹಿ ಹಾಕುವಂತೆ ನ್ಯಾಯಾಲಯ ಆದೇಶಿಸಿತ್ತು. ಆದರೆ, ಇನ್ಸ್‌ಪೆಕ್ಟರ್ ಯೋಗಾನಂದ್ ಪ್ರಭಾವದಿಂದ ರೇವಾ ಠಾಣೆಗೆ ಬರುತ್ತಿಲ್ಲ. ಬದಲಾಗಿ, ಪೊಲೀಸರೇ ರೇವಾನ ಅಪಾರ್ಟ್‌ಮೆಂಟ್‌ಗೆ ಹೋಗಿ ಸಹಿ ಮಾಡಿಸಿಕೊಂಡು ಬರುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಸೋಶಿಯಲ್ ಮೀಡಿಯಾದಲ್ಲಿ ಕಾಡಿಸುತ್ತಿದ್ದ ಕಾನ್ಸ್‌ಟೇಬಲ್‌; ಕಿರುಕುಳ ತಾಳಲಾರದೆ ಮಹಿಳೆ ಆತ್ಮಹತ್ಯೆ!

ಕೊಲೆಯಾದ ರೇವಂತ್ ಕುಟುಂಬದವರಿಗೆ ಮತ್ತು ಸಾಕ್ಷಿಗಳಿಗೆ ರೌಡಿಗಳಿಂದ ಜೀವ ಬೆದರಿಕೆ ಇತ್ತು. ಈ ಬಗ್ಗೆ ರಕ್ಷಣೆ ಕೋರಿದರೂ ಇನ್ಸ್‌ಪೆಕ್ಟರ್ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ ಎನ್ನಲಾಗಿದೆ. ನ್ಯಾಯ ಸಿಗಬೇಕಿದ್ದ ಠಾಣೆಯೇ ಆರೋಪಿಗಳ ಪರವಾಗಿ ನಿಂತಿರುವುದು ಕುಟುಂಬದವರನ್ನು ಕಂಗಾಲಾಗಿಸಿದೆ. ರೌಡಿಶೀಟರ್ ಜೊತೆ ಸಖ್ಯ ಬೆಳೆಸಿರುವ ಇನ್ಸ್‌ಪೆಕ್ಟರ್ ವಿರುದ್ಧ ಹಿರಿಯ ಅಧಿಕಾರಿಗಳು ತನಿಖೆ ನಡೆಸಿ, ನ್ಯಾಯ ಒದಗಿಸಬೇಕೆಂದು ರೇವಂತ್ ಪೋಷಕರು ಒತ್ತಾಯಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link