ಸುಚಿತ್ರಾಳ ಮೊಬೈಲ್ ರಹಸ್ಯ ಬಯಲು, ಈಕೆ ಸಂಪರ್ಕದಲ್ಲಿದ್ದವರಿಗೆ ಎಸ್ಪಿ ಮಹತ್ವದ ಕರೆ – Kannada News | Siddapur murder Case: Not Only Kamalakar Bhat Guruji, Suchitra Contact With Some Youths
ಕಾರವಾರ, (ಫೆಬ್ರವರಿ 06): ಕಲರ್ಫುಲ್ ರೀಲ್ಸ್ ಮಾಡಿಕೊಂಡು ಸಂಸಾರದಿಂದ ದೂರವಾಗಿ ನೌಟಂಕಿ ಆಡುತ್ತಿದ್ದ ಕಲಾಕರ್ ಸುಚಿತ್ರಾ (Suchitra) ಕಥೆಗಳೇ ಬೆಚ್ಚಿ ಬೀಳಿಸುವಂತಿವೆ. ಗಂಡ, ಮಕ್ಕಳಿಗಿಂತ ಜ್ಯೋತಿಷಿ ಕಮಲಾಕರ್ನೇ (Kamalakar bhat guruji) ಹೆಚ್ಚು ಅಂತಿದ್ದವಳಿಗೆ ಒಬ್ಬಿಬ್ಬರ ಸಹವಾಸ ಇರಲಿಲ್ವಂತೆ. ಸುಚಿತ್ರಾ ಮೊಬೈಲ್ ಇಣಕಿದ ಪೊಲೀಸರಿಗೆ ಆಕೆಯ ಸಂಪರ್ಕ ಕ್ರಾಂತಿಯೇ ಅನಾವರಣ ಆಗಿವೆ. ಹೌದು.. ವಸಂತ್ ನಾಯ್ಕ್ ಕೊಲೆ ಕೇಸ್ನಲ್ಲಿ ಜೈಲುಪಾಲಾಗಿರುವ ರೀಲ್ಸ್ ರಾಣಿ ಸುಚಿತ್ರಾ ಕರಾಳ ಕಥೆಗಳು ಒಂದೊಂದಾಗಿ ಬಯಲಿಗೆ ಬರುತ್ತಿವೆ. ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ…