All posts by nagaraj11081993

Bengaluru Air Quality: ಶಿವಮೊಗ್ಗ, ಬಳ್ಳಾರಿ ಏರ್ ಕ್ವಾಲಿಟಿಯಲ್ಲಿ ಕುಸಿತ; ಬೆಂಗಳೂರಿಗಿಂತಲೂ ಕಳಪೆ AQI – Kannada News | Bangalore Air Pollution Crisis: Shivamogga and Ballari have Air quality worse than Bengaluru

ಶಿವಮೊಗ್ಗ ಮತ್ತು ಬಳ್ಳಾರಿಯಲ್ಲಿ ಕಳಪೆ ಏರ್ ಕ್ವಾಲಿಟಿ

ಬೆಂಗಳೂರು, ಜನವರಿ 23: ಬೆಂಗಳೂರಿನ ಗಾಳಿಯ ಗುಣಮಟ್ಟ 162 ಇದ್ದು, ಏರ್ ಕ್ವಾಲಿಟಿ (Bengaluru Air Quality) ಅನಾರೋಗ್ಯಕಾರಿ ಹಂತದಲ್ಲೇ ಇದೆ. ಆದರೆ ಬೆಂಗಳೂರನ್ನೂ ಮೀರಿಸುವ ಹಂತಕ್ಕೆ ತಲುಪಿರುವುದು ಶಿವಮೊಗ್ಗ ಮತ್ತು ಬಳ್ಳಾರಿಯ ವಾಯು ಗುಣಮಟ್ಟ. ಕೆಲ ದಿನಗಳಿಂದ 100ರ ಆಸುಪಾಸಿನಲ್ಲಿದ್ದ ಶಿವಮೊಗ್ಗದ ಏರ್ ಕ್ವಾಲಿಟಿ ಇಂದು ಒಮ್ಮೆಲೇ ಬೆಂಗಳೂರಿಗಿಂತಲೂ ಹೆಚ್ಚಿನ AQIಗೆ ತಲುಪಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಕೆಲ ದಿನಗಳ ಹಿಂದೆ ಶಿವಮೊಗ್ಗದ ಗಾಳಿಯ ಗುಣಮಟ್ಟ ನೂರರ ಆಸುಪಾಸಿನಲ್ಲಿತ್ತು. ಆದರಿಂದು ಏಕಾಏಕಿ 175ಕ್ಕೆ ತಲುಪಿರುವುದು ಆತಂಕ ಸೃಷ್ಟಿಸಿದೆ. ಬಳ್ಳಾರಿಯೂ 178 AQI ಹೊಂದಿದ್ದು, ಬೆಂಗಳೂರಿಗಿಂತ ಕಳಪೆ ಗುಣಮಟ್ಟದ ಏರ್ ಕ್ವಾಲಿಟಿಯಾಗಿದೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ.

ಬೆಂಗಳೂರಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ (WHO) ಮಿತಿಗಿಂತ 5 ಪಟ್ಟು ಹೆಚ್ಚಿರುವ ಸೂಕ್ಷ್ಮ ಕಣಗಳ ಪ್ರಮಾಣ ಆತಂಕಕಾರಿಯಾಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –162
  • ಮಂಗಳೂರು-156
  • ಮೈಸೂರು –94
  • ಬೆಳಗಾವಿ – 138
  • ಕಲಬುರ್ಗಿ-129
  • ಶಿವಮೊಗ್ಗ – 175
  • ಬಳ್ಳಾರಿ – 178
  • ಹುಬ್ಬಳ್ಳಿ- 156
  • ಉಡುಪಿ –157
  • ವಿಜಯಪುರ –111

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ರಾತ್ರಿ 8 ಗಂಟೆಯ ಮೇಲೆ ಯಾರಿಗೂ ಸಿಗಲ್ಲ ಅಮಿತಾಭ್; ಕಾರಣ ಏನು? – Kannada News | Amitabh Bachchan’s Strict Routine: No Industry Meetings After 8 PM and His Unwavering Discipline

ಅಮಿತಾಭ್ ಬಚ್ಚನ್ (Amitabh Bachchan) ಅವರು ಬಾಲಿವುಡ್ ಕಂಡ ಶ್ರೇಷ್ಠ ನಟರಲ್ಲಿ ಒಬ್ಬರು. ಸಿನಿಮಾ ರಂಗದಲ್ಲಿ ಅವರು ಐದು ದಶಕಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಸಿನಿಮಾ ಮಾತ್ರವಲ್ಲದೆ, ಕಿರುತೆರೆಯಲ್ಲೂ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರು ತುಂಬಾನೇ ಶಿಸ್ತಿನ ವ್ಯಕ್ತಿ. ನಟನೆಯ ಜೊತೆಗೆ ಅವರು ಶಿಸ್ತನ್ನು ರೂಢಿಸಿಕೊಂಡು ಬಂದಿದ್ದಾರೆ. ಅವರನ್ನು ರಾತ್ರಿ 8 ಗಂಟೆ ಬಳಿಕ ಇಂಡಸ್ಟ್ರಿಯವರು ಭೇಟಿ ಮಾಡಲು ಸಾಧ್ಯವಿಲ್ಲ.

ಸಾಮಾನ್ಯವಾಗಿ ಬಾಲಿವುಡ್ ಹೀರೋಗಳು ಹೆಚ್ಚೆಚ್ಚು ಪಾರ್ಟಿ ಮಾಡೋಕೆ ಇಷ್ಟಪಡುತ್ತಾರೆ. ಅವರ ರಾತ್ರಿ ಜೀವನವೇ ಬೇರೆ ರೀತಿ ಇರುತ್ತದೆ. ಬೇರೆ ಹೀರೋಗಳು ಕರೆದರು ಎಂದು ಪಾರ್ಟಿಗೆ ಜಾಯಿನ್ ಆಗುತ್ತಾರೆ. ಇಲ್ಲವೇ ಸಿನಿಮಾ ಶೂಟ್​​​ನಲ್ಲಿ ರಾತ್ರಿಯಿಡಿ ಪಾಲ್ಗೊಳ್ಳುತ್ತಾರೆ. ಆದರೆ, ಖಾಸಗಿ ಜೀವನವನ್ನು ಅಮಿತಾಭ್ ತುಂಬಾ ಗಂಭೀರವಾಗಿ ತೆಗೆದುಕೊಂಡಿದ್ದು, ಒಂದಷ್ಟು ನಿಯಮಗಳನ್ನು ಹಾಕಿಕೊಂಡಿದ್ದಾರೆ.

ರಾಜಾ ಬುಂದೇಲಾ ಅವರು ಅಮಿತಾಭ್ ಬಚ್ಚನ್ ಜೊತೆ 1989ರ ‘ಮೇ ಆಜಾದ್ ಹೂ’ ಸಿನಿಮಾದಲ್ಲಿ ನಟಿಸಿದ್ದರು. ಅವರು ಅಮಿತಾಭ್ ಕುರಿತ ಒಂದಷ್ಟು ವಿಷಗಳನ್ನು ಹಂಚಿಕೊಂಡಿದ್ದಾರೆ. ‘ಅಮಿತಾಭ್ ಬಚ್ಚನ್ ಜೊತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ. ನಾನು ಅವರ ಜೊತೆ ಒಂದು ಸಿನಿಮಾ ಮಾಡಿದ್ದೆ. ಅವರಿಗೆ ಎಲ್ಲಾ ಸಂಭಾಷಣೆಗಳು ಚೆನ್ನಾಗಿ ನೆನಪಿದ್ದವು’ ಎಂದಿದ್ದಾರೆ.

‘ಒಮ್ಮೆ ನಾವು ಗೋವಾದಲ್ಲಿ ಚಿತ್ರೀಕರಣ ಮಾಡುತ್ತಿದ್ದಾಗ, ಅಮಿತಾಭ್ ಬಚ್ಚನ್ ಮುಂಬೈನಲ್ಲಿಯೇ ಉಳಿದುಹೋಗಿವೆ ಎಂದು ತಿಳಿದುಬಂತು. ಈ ಹಿಂದೆ ಅದೇ ಶೂನಲ್ಲಿ ಶೂಟ್ ಮಾಡಿದ್ದರಿಂದ ಕಂಟ್ಯೂನಿಟಿಗೆ ಅದೇ ಶೋಗಳು ಬೇಕಾಗಿದ್ದವು. ಆ ದಿನಗಳಲ್ಲಿ ವಿಮಾನದ ಕನೆಕ್ಟಿವಿಟಿ ಇಷ್ಟಾಗಿ ಇರಲಿಲ್ಲ’ ಎಂದಿದ್ದಾರೆ ಅವರು.
‘ಮರುದಿನ ಶೂಟ್ ಇರಲ್ಲ ಎಂದು ಎಲ್ಲರೂ ಖುಷಿಪಟ್ಟರು. ಆದರೆ, ಅಮಿತಾಭ್ ಅದೇ ಶೋಗಳ ಜೊತೆ ಮರುದಿನ 7.30ಕ್ಕೆ ಸೆಟ್​​​ನಲ್ಲಿ ಇದ್ದರು. ಅದು ಶಿಸ್ತು’ ಎಂದಿದ್ದಾರೆ ಬುಂದೇಲಾ.

ಇದನ್ನೂ ಓದಿ: ಅಮಿತಾಭ್ ಬಚ್ಚನ್ ಮನೆಯಲ್ಲಿದೆ ಚಿನ್ನದ ಟಾಯ್ಲೆಟ್

‘ಅವರು ಎಲ್ಲವನ್ನೂ ಸಮಯಕ್ಕೆ ಸರಿಯಾಗಿ ಮಾಡುತ್ತಾರೆ. ನಾವು ಅವರ ಮನೆಯಲ್ಲಿ ಭೇಟಿಯಾದಾಗಲೂ ಅವರು ಎಂದಿಗೂ ಗಾಸಿಪ್ ಮಾಡುತ್ತಿರಲಿಲ್ಲ. ನಾನು ಕೇಳಿರುವಂತೆ, ರಾತ್ರಿ 8 ಗಂಟೆಯ ನಂತರ ಅವರು ಉದ್ಯಮದ ಯಾರನ್ನೂ ತಮ್ಮ ಮನೆಗೆ ಬಿಡುತ್ತಿರಲಿಲ್ಲ. ಅವರು ತಮ್ಮ ಬಾಗಿಲುಗಳಿಗೆ ಬೀಗ ಹಾಕಿಕೊಳ್ಳುತ್ತಿದ್ದರು. ಅವರು ತಮ್ಮ ವ್ಯವಹಾರ ಮತ್ತು ಕುಟುಂಬದ ನಡುವೆ ಆ ಸಮತೋಲನವನ್ನು ಕಾಯ್ದುಕೊಳ್ಳಲು ಇಷ್ಟಪಡುತ್ತಾರೆ’ ಎಂದಿದ್ದಾರೆ ರಾಜಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 8:07 am, Fri, 23 January 26

Source link

ಮನೆಕೆಲಸಕ್ಕೆಂದು 10 ವರ್ಷದ ಬಾಲಕಿಯ ಕರೆತಂದು ಬೆನ್ನು ಮೂಳೆ ಮುರಿಯುವಂತೆ ಚಿತ್ರಹಿಂಸೆ ಕೊಟ್ಟ ಸಿಆರ್​ಪಿಎಫ್ ಕಾನ್​ಸ್ಟೆಬಲ್ – Kannada News | CRPF Couple Arrested: 10 Year Old Maid Severely Tortured, Spine Fractured in Noida

ಬಾಲಕಿ-ಸಾಂದರ್ಭಿಕ ಚಿತ್ರImage Credit source: Vector Solutions

ನೋಯ್ಡಾ, ಜನವರಿ 23: ಮನೆಗೆಲಸಕ್ಕೆಂದು 10 ವರ್ಷದ ಬಾಲಕಿ(Girl)ಯ ಕರೆತಂದು ಸರಿಯಾಗಿ ಆಹಾರವನ್ನೂ ನೀಡದೆ, ಬೆನ್ನು ಮೂಳೆ ಮುರಿಯುವಂತೆ ಹೊಡೆದು ಚಿತ್ರ ಹಿಂಸೆ ಕೊಟ್ಟ ಸಿಆರ್​ಪಿಎಫ್ ಕಾನ್​ಸ್ಟೆಬಲ್ ಮತ್ತವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಗ್ರೇಟರ್ ನೋಯ್ಡಾದಲ್ಲಿ ಘಟನೆ ನಡೆದಿದೆ. ಬಾಲಕಿ ಗಂಭೀರವಾಗಿ ಗಾಯಗೊಂಡು ವೆಂಟಿಲೇಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಬಾಲಕಿಯನ್ನು ದಂಪತಿ ಮನೆಗೆಲಸಕ್ಕೆಂದು ಕರೆತಂದು ತಮ್ಮ ಸೋದರ ಸೊಸೆ ಎಂದು ಸುಳ್ಳು ಹೇಳಿದ್ದರು. ಕೇಂದ್ರ ಮೀಸಲು ಪೊಲೀಸ್ ಪಡೆಯ 235 ನೇ ಬೆಟಾಲಿಯನ್‌ನಲ್ಲಿ ನಿಯೋಜಿತರಾಗಿದ್ದ ಕಾನ್‌ಸ್ಟೆಬಲ್ ಜಿಡಿ ತಾರಿಕ್ ಅನ್ವರ್, ಅವಳು ತನ್ನ ಪತ್ನಿ ರಿಂಪಾ ಖಾತುನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಹಿರಿಯ ಅಧಿಕಾರಿಗಳಿಂದ ಔಪಚಾರಿಕ ಅನುಮತಿಯಿಲ್ಲದೆ ಬಾಲಕಿ ಸಿಆರ್‌ಪಿಎಫ್ ಕ್ಯಾಂಪಸ್‌ನಲ್ಲಿ ದಂಪತಿಯೊಂದಿಗೆ ಬಾಲಕಿ ವಾಸವಿದ್ದಳು.

ಸಿಆರ್‌ಪಿಎಫ್ ಶಿಬಿರದಲ್ಲಿ ನಿಯೋಜಿಸಲಾದ ಸುಬೇದಾರ್ ಮೇಜರ್ ಭಾನುವಾರ ಪೊಲೀಸರಿಗೆ ಲಿಖಿತ ದೂರು ಸಲ್ಲಿಸಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಇಕೋಟೆಕ್ 3 ಸಿಆರ್‌ಪಿಎಫ್ ಕ್ಯಾಂಪಸ್‌ನೊಳಗೆ ಬ್ಲಾಕ್ 60 ರ ಕ್ವಾರ್ಟರ್ ಸಂಖ್ಯೆ 13 ರಲ್ಲಿ ವಾಸಿಸುತ್ತಿದ್ದರು ಮತ್ತು ಬಾಲಕಿಗೆ ತಮ್ಮ ಮಕ್ಕಳನ್ನು ನೋಡಿಕೊಳ್ಳುವುದು ಸೇರಿದಂತೆ ಮನೆಕೆಲಸಗಳನ್ನು ಕೊಡಲಾಗುತ್ತಿತ್ತು ಮತ್ತು ಥಳಿಸಲಾಗುತ್ತಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮತ್ತಷ್ಟು ಓದಿ: ಅಪರಿಚಿತರೊಂದಿಗೆ ನಾನು ಮಾತನಾಡಲ್ಲ ಎಂದಿದ್ದಕ್ಕೆ ಬಾಲಕಿ ಮೇಲೆ ಆ್ಯಸಿಡ್ ಎರಚಿದ ಫೋಟೊಗ್ರಾಫರ್

ಜನವರಿ 15 ರ ಮಧ್ಯರಾತ್ರಿ, ಬಾಲಕಿಯನ್ನು ದಂಪತಿ ಕ್ರೂರವಾಗಿ ಥಳಿಸಿದ್ದರಿಂದ ತೀವ್ರ ಗಾಯಗಳಾಗಿತ್ತ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಆಕೆಯನ್ನು ಸಿಆರ್‌ಪಿಎಫ್ ಆಸ್ಪತ್ರೆಗೆ ಕರೆದೊಯ್ಯುವ ಬದಲು, ಅನ್ವರ್ ಆಕೆಯನ್ನು ಸರ್ವೋದಯ ಆಸ್ಪತ್ರೆಗೆ ದಾಖಲಿಸಿದ್ದರು ಬಾಲಕಿ ಸ್ನಾನ ಮಾಡುವಾಗ ಎಡವಿ ಬಿದ್ದಿದ್ದಾಳೆ ಎಂದು ಕಥೆ ಕಟ್ಟಿದ್ದರು.

ವೈದ್ಯರು ಆಕೆಯ ಪಕ್ಕೆಲುಬು ಮುರಿದಿದೆ, ಕಾಲುಗಳಲ್ಲಿ ಊತವಿದೆ, ಕಣ್ಣಿನ ಸುತ್ತ ಚರ್ಮ ಕಪ್ಪುಗಟ್ಟಿದೆ, ತಲೆ ಮತ್ತು ಎದೆಯ ಮೇಲೆ ಆಳವಾದ ಗಾಯಗಳಿವೆ. ಬಾಲಕಿಗೆ ಆಹಾರವನ್ನೂ ಕೊಟ್ಟಿಲ್ಲ ಹಿಮೋಗ್ಲೋಬಿನ್ ಮಟ್ಟವೂ ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ.

ಜನವರಿ 15 ರಂದು ಮಗುವನ್ನು ಗಂಭೀರ ಸ್ಥಿತಿಯಲ್ಲಿ ತುರ್ತು ವಿಭಾಗಕ್ಕೆ ಕರೆತರಲಾಯಿತು, ಈಗಾಗಲೇ ವೆಂಟಿಲೇಟರ್ ಬೆಂಬಲದೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅನ್ವರ್ ಅವರನ್ನು ಅಮಾನತುಗೊಳಿಸಲಾಗಿದೆ. ಬಾಲಕಿಯ ವೈದ್ಯಕೀಯ ಪರೀಕ್ಷೆ ಪೂರ್ಣಗೊಂಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಕ್ಕಳ ಕಲ್ಯಾಣ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಆ ವಿಷಯಕ್ಕೆ ಜಮೀರ್-ಝೈದ್ ಮಧ್ಯೆ ಆಗಿದೆ ಸಾಕಷ್ಟು ಜಗಳ; ವಿವರಿಸಿದ ನಟ – Kannada News | Cult Hero Zaid Khan’s Film Passion Clashes with Zameer’s Business Push

ಸಚಿವ ಜಮೀರ್ ಅಹ್ಮದ್ ಖಾನ್ ಮಗ ಝೈದ್ ಖಾನ್ (Zaid Khan) ಅವರು ‘ಬನಾರಸ್’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಈಗ ಅವರು ‘ಕಲ್ಟ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಇಂದು (ಜನವರಿ 23) ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರ ಎ ಪ್ರಮಾಣ ಪತ್ರ ಪಡೆದುಕೊಂಡಿದೆ. ಸಿನಿಮಾ ಸಖತ್ ರಾ ಆಗಿರೋದು ಇದಕ್ಕೆ ಕಾರಣ. ಈಗ ಝೈದ್ ಖಾನ್ ಅವರು ತಂದೆ ಜೊತೆ ಆಗೋ ಕಿರಿಕ್​​​ಗಳ ಬಗ್ಗೆ ಮಾತನಾಡಿದ್ದಾರೆ. ಒಂದು ವಿಷಯದಲ್ಲಿ ಇಬ್ಬರ ಮಧ್ಯೆ ಸಾಕಷ್ಟು ಜಗಳ ಆಗಿದೆಯಂತೆ.

ಸಾಮಾನ್ಯವಾಗಿ ರಾಜಕಾರಣಿಗಳ ಮಕ್ಕಳು ರಾಜಕೀಯದಲ್ಲೇ ಮುಂದುವರಿಯುವ ಪ್ರಯತ್ನ ಮಾಡುತ್ತಾರೆ. ಪಾಲಕರಿಗೂ ಇದೆ ಹಾರೈಕೆ ಇರುತ್ತದೆ. ಆದರೆ, ಜಮೀರ್​​ಗೆ ಇದು ಇಷ್ಟ ಇಲ್ಲ. ಸದ್ಯಕ್ಕೆ ಅವರು ಸಿನಿಮಾ ರಂಗದಲ್ಲಿ ನಟನಾಗಿ ಮಿಂಚುವ ಪ್ರಯತ್ನ ಮಾಡುತ್ತಿದ್ದಾರೆ. ಈಗ ಝೈದ್ ಖಾನ್ ಅವರು ತಂದೆಯ ಬಗ್ಗೆ ಮಾತನಾಡಿದ್ದಾರೆ.

‘ಕೆಲಸ ಎಂಬುದು ಬಂದರೆ ನಾನು ರಾಕ್ಷಸ. ನನ್ನ ನೂರರಷ್ಟು ಶ್ರಮ ಹಾಕುತ್ತೇನೆ . ಆದರೆ, ಕೆಲಸ ಇಲ್ಲ ಎಂದರೆ ನಾನು ಬೆಡ್ ಮೇಲೆ ಇರುತ್ತೇನೆ. ಯಾವಾಗಲೂ ಸುದ್ದಿಯಲ್ಲಿರಬೇಕು, ಕಾಣಿಸಿಕೊಳ್ಳುತ್ತಾ ಇರಬೇಕು ಎಂಬುದು ನಂಗೆ ಇಲ್ಲ. ನನಗೆ ನನ್ನದೇ ಆದ ಖಾಸಗಿ ಜೀವನ ಇದೆ’ ಎಂದಿದ್ದಾರೆ ಝದ್ ಖಾನ್.

ಇದನ್ನೂ ಓದಿ: ‘ನನ್ನ ಸಿನಿಮಾ ಯಾಕೆ ಕೊಲ್ತೀರ?’ ದುನಿಯಾ ವಿಜಿಯ ಪ್ರಶ್ನಿಸಿದ ಝೈದ್ ಖಾನ್, ಉತ್ತರ ಏನಿತ್ತು?

‘ಸಿನಿಮಾ ಇಂಡಸ್ಟ್ರಿಗೆ ನಾನು ಪ್ಯಾಷನ್​​ಗೆ ಬಂದಿದ್ದು. ನನ್ನ ಮನೆಯ ಬಿಸ್ನೆಸ್​​​ನ ನಡೆಸಿಕೊಂಡು ಹೋಗುವ ಜವಾಬ್ದಾರಿ ನನಗೆ ಇದೆ. ತಂದೆ ದುಡ್ಡು ಕೊಡ್ತಾರೆ ಎಂದು ಬದುಕೋದು ಜೀವನ ಅಲ್ಲ’ ಎಂದಿದ್ದಾರೆ ಅವರು.
‘ಸಿನಿಮಾ ಕರಿಯರ್​​ಗೆ ಹೋಗೋವಾಗ ತಂದೆ ಬಿಸ್ನೆಸ್ ಮಾಡುವಂತೆ ಸೂಚಿಸಿದ್ದರು. ದುಡ್ಡು ಬೇಕಿದ್ರೂ ಕೊಡ್ತೀನಿ ಎಂದರು. ನಾನು ರಾಜಕೀಯಕ್ಕೆ ಬರೋದು ಅವರಿಗೆ ಇಷ್ಟ ಇಲ್ಲ. ಬಿಸ್ನೆಸ್ ಮಾಡಬೇಕು ಎಂಬ ವಿಷಯಕ್ಕೆ ನನ್ನ ತಂದೆ ಹಾಗೂ ನನ್ನ ಮಧ್ಯೆ ಸಾಕಷ್ಟು ಜಗಳ ಆಗಿದೆ’ ಎಂದು ಝೈದ್ ಖಾನ್ ವಿವರಿಸಿದ್ದಾರೆ.

ತಂದೆಯ ಜೊತೆಗಿನ ಜಗಳದ ಬಗ್ಗೆ ವಿಡಿಯೋ ಅಂತ್ಯದಲ್ಲಿ ಝೈದ್ ಮಾತನಾಡಿದ್ದಾರೆ

ಝೈದ್ ಖಾನ್ ಅವರು ಚಿತ್ರರಂಗಕ್ಕೆ ಬರುತ್ತಾರೆ ಎಂದಾಗ ಅವರೇ ಎಲ್ಲವನ್ನೂ ಪ್ಲ್ಯಾನ್ ಮಾಡಿಕೊಂಡು ಬಂದರು. ಅವರಿಗೆ ತಂದೆಯ ಬೆಂಬಲ ಅಷ್ಟಾಗಿ ಸಿಕ್ಕಿಲ್ಲವಂತೆ. ತಂದೆ ಕೂಡ ಅವರ ಸಿನಿಮಾ ಕಾರ್ಯಕ್ರಮಗಳಿಗೆ ಬರೋದು ಕಡಿಮೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸಾಧಕರಿಗೆ ಉದಯ ಟಿವಿ ಗೌರವ; ಶನಿವಾರ-ಭಾನುವಾರ ʼಉದಯ ಕನ್ನಡಿಗ-2025ʼ ಪುರಸ್ಕಾರ – Kannada News | Udaya Kannadiga 2025 Awards: Udaya TV Honors Kannada Achievers with different field

ಎಲ್ಲಾ ವಾಹಿನಿಗಳೂ ವೀಕ್ಷಕರನ್ನು ಸೆಳೆದುಕೊಳ್ಳಲು ಹೊಸ ಹೊಸ ಕಾರ್ಯಕ್ರಮ ಮಾಡೋದು ಗೊತ್ತೇ ಇದೆ. ಈಗ ಉದಯ ವಾಹಿನಿಯಲ್ಲಿ (Udaya TV) ಇದೇ ಶನಿವಾರ ಮತ್ತು ಭಾನುವಾರ ಸಂಜೆ 6ಕ್ಕೆ ʼಉದಯ ಕನ್ನಡಿಗ-2025ʼ ಪುರಸ್ಕಾರ ಪ್ರಸಾರ ಕಾಣಲಿದೆ. ಝಗಮಗಿಸುವ ವೇದಿಕೆ ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಲಿದ್ದಾರೆ ಎಂಬುದು ವಿಶೇಷ.

ವರ್ಣರಂಜಿತ ಡ್ಯಾನ್ಸ್ ಕಾರ್ಯಕ್ರಮಗಳ ಜೊತೆ ಹ್ಯಾಟ್ರಿಕ್ ಹೀರೊ ಶಿವರಾಜ್‌ ಕುಮಾರ್‌, ಡಾಲಿ ಧನಂಜಯ್, ಪ್ರಕಾಶ್‌ ರಾಜ್‌, ಹಿರಿಯ ನಟ ಶ್ರೀನಾಥ್, ಉಮಾಶ್ರೀ, ಸಾಧುಕೋಕಿಲ, ಸಾಹಿತಿ ಜೋಗಿ, ಕವಿ ಬಿ.ಆರ್.ಲಕ್ಷ್ಮಣರಾವ್‌ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸುವ ಕೆಲಸ ಇದರಲ್ಲಿ ಆಗಲಿದೆ.

ಗಾಯಕ ಸಂಜಿತ್‌ ಹೆಗ್ಡೆ, ಕಬ್ಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ, ಕಾರ್ಗಿಲ್‌ ಯೋಧ ಕ್ಯಾಪ್ಟನ್‌ ನವೀನ್ ನಾಗಪ್ಪ, ಉದ್ಯಮಿ ಕಿಶೋರ್ ಕುಮಾರ್‌ ರೈ, ಪರಿಸರವಾದಿ ಶಿವಾನಂದ ಕಳವೆ, ಸುರಂಗ ಕೊರೆದು ನೀರು ಉಕ್ಕಿಸಿದ ಕೃಷಿಕ ಅಮೈ ಮಹಾಲಿಂಗ ನಾಯ್ಕ, ಐದು ರೂ.ವೈದ್ಯ ಎಂದೇ ಖ್ಯಾತರಾದ ಡಾ. ಶಂಕರೇ ಗೌಡ, ಪತ್ರಕರ್ತೆ ಶೋಭಾ ಮಳವಳ್ಳಿ, ಜಾನಪದ ಗಾಯಕ ಪದ್ಮಶ್ರೀ ವೆಂಕಟಪ್ಪ ಸುಗತೇಕರ್ ʻಉದಯ ಕನ್ನಡಿಗ – 2025ʼ ಪುರಸ್ಕಾರ ಸ್ವೀಕರಿಸಿದ ಸಾಧಕರ ಪಟ್ಟಿಯಲ್ಲಿ ಇದ್ದಾರೆ.

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಕಲಾವಿದರು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌, ಬರಗೂರು ರಾಮಚಂದ್ರಪ್ಪ, ನಿರ್ಮಾಪಕ ಚಿನ್ನೇಗೌಡ, ಸಾ.ರಾ.ಗೋವಿಂದು, ನಟ ಶಶಿಕುಮಾರ್‌, ಓಂ ಸಾಯಿಪ್ರಕಾಶ್, ಕೆ. ಎಮ್‌. ಚೈತನ್ಯ, ಸಿಂಪಲ್‌ ಸುನಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಗಿರಿಜಾ ಲೋಕೇಶ್‌, ರಮೇಶ್‌ ಭಟ್‌, ಮಂಡ್ಯ ರಮೇಶ್‌, ರಾಗು ನಿಡುವಾಳ್‌, ಅರುಣ್‌ ಸಾಗರ್‌ ಅತಿಥಿಗಳಾಗಿ ಆಗಮಿಸಿದ್ದಾರೆ. ಇವರು ಸಾಧಕರಿಗೆ ʻಉದಯ ಕನ್ನಡಿಗʼ ಟ್ರೋಫಿ ನೀಡಿ ಗೌರವಿಸಲಿದ್ದಾರೆ.

ಇದನ್ನೂ ಓದಿ: ಧಮ್ಕಿಗಳಿಗೆ ಬಗ್ಗದೇ ‘ಸೂರ್ಯವಂಶ’ ಧಾರಾವಾಹಿ ಶುರು ಮಾಡಿದ ಅನಿರುದ್ಧ್; ಉದಯ ಟಿವಿಯಲ್ಲಿ ಪ್ರಸಾರ

ಶಿವರಾಜ್​​ಕುಮಾರ್ ಅವರು ಈ ಅವಾರ್ಡ್ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ‘ಕನ್ನಡ ಚಿತ್ರೋದ್ಯಮಕ್ಕೆ ದಶಕಗಳಿಂದ ಬೆಂಬಲವಾಗಿರುವ ಉದಯ ಟಿವಿ ನೀಡಿದ ಈ ಪುರಸ್ಕಾರ ಅತ್ಯಂತ ಮಹತ್ವದ್ದು’ ಎದರು. ಶಿವಾನಂದ ಕಳವೆ ರಾಕಿಂಗ್‌ ಸ್ಟಾರ್‌ ಯಶ್‌ ಅವರ ʻಯಶೋಮಾರ್ಗʼದ ವಿವರ ನೀಡಿದರು. ವೇದಿಕೆ ಮೇಲೆ ರಚನಾ ಇಂದರ್‌, ನಿಧಿ ಸುಬ್ಬಯ್ಯ, ಮೋಕ್ಷಾ ಕುಶಾಲ್, ಅನುಷಾ ರೈ, ಅಂಕಿತಾ ಅಮರ್‌, ಪೃಥ್ವಿ ಅಂಬರ್‌ ಡ್ಯಾನ್ಸ್ ಮಾಡಿ ವೀಕ್ಷಕರನ್ನು ರಂಜಿಸಿದ್ದಾರೆ. ವಾಸುಕಿ ವೈಭವ್‌, ಅಲೋಕ್‌ ಬಾಬು ಕಂಠಸಿರಿ ಕಾರ್ಯಕ್ರಮಕ್ಕೆ ಮೆರುಗು ಹೆಚ್ಚಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:49 am, Fri, 23 January 26

Source link

ನಮ್ಮ ಸೈನಿಕರ ದೊಡ್ಡ ಪಡೆ ಸಾಗುತ್ತಿದೆ, ಇರಾನ್​ಗೆ ಹೊಸ ಎಚ್ಚರಿಕೆ ಕೊಟ್ಟ ಡೊನಾಲ್ಡ್​ ಟ್ರಂಪ್ – Kannada News | Trump Warns Iran: US Military Deployment Escalates Tensions in Middle East

ವಾಷಿಂಗ್ಟನ್, ಜನವರಿ 23: ಇರಾನ್​ ಕಡೆಗೆ ನಮ್ಮ ಸೈನಿಕರ ದೊಡ್ಡ ಪಡೆ ಸಾಗುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಇರಾನ್​ಗೆ ಹೊಸ ಎಚ್ಚರಿಕೆ ನೀಡಿದ್ದಾರೆ. ಅಮೆರಿಕವು ಈ ಪ್ರದೇಶಕ್ಕೆ ಬೃಹತ್ ನೌಕಾಪಡೆಯನ್ನು ನಿಯೋಜಿಸಿದೆ, ಆದರೆ ಅದನ್ನು ಬಳಸುವ ಅಗತ್ಯವಿಲ್ಲ ಎಂದು ನಾನು ಭಾವಿಸುತ್ತೇನೆ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ಇತ್ತೀಚಿನ ಅಶಾಂತಿಯ ಸಂದರ್ಭದಲ್ಲಿ ಪ್ರತಿಭಟನಾಕಾರರ ಹತ್ಯೆಗೆ ಸಂಬಂಧಿಸಿದಂತೆ ಇರಾನ್ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳುವುದಾಗಿ ಟ್ರಂಪ್ ಪದೇ ಪದೇ ಬೆದರಿಕೆ ಹಾಕಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಪ್ರತಿಭಟನೆಗಳು ಕಡಿಮೆಯಾಗುತ್ತಿದ್ದಂತೆ ಅವರ ಸ್ವರ ಮೃದುವಾಗಿದೆ.
ನೂರಾರು ಪ್ರತಿಭಟನಾಕಾರರನ್ನು ಗಲ್ಲಿಗೇರಿಸುವ ಯೋಜನೆಯನ್ನು ಇರಾನ್ ಅಧಿಕಾರಿಗಳು ರದ್ದುಗೊಳಿಸಲು ವಾಷಿಂಗ್ಟನ್ ಒತ್ತಡ ಕಾರಣ ಎಂಬ ಹೇಳಿಕೆಯನ್ನು ಅಮೆರಿಕ ಅಧ್ಯಕ್ಷರು ಪುನರಾವರ್ತಿಸಿದ್ದಾರೆ.

ಆರ್ಥಿಕ ಸಂಕಷ್ಟದ ಕುರಿತು ಡಿಸೆಂಬರ್ ಅಂತ್ಯದಲ್ಲಿ ಇರಾನ್‌ನಲ್ಲಿ ಪ್ರತಿಭಟನೆಗಳು ಪ್ರಾರಂಭವಾದವು, ನಂತರ ಅದು ರಾಷ್ಟ್ರವ್ಯಾಪಿ ಹರಡಿತ್ತು. ಎರಡು ದಿನಗಳ ಹಿಂದಷ್ಟೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್​ಗೆ ಬಲವಾದ ಎಚ್ಚರಿಕೆ ನೀಡಿದ್ದರು. ಇರಾನ್ ತನ್ನನ್ನು ಕೊಲ್ಲಲು ಪ್ರಯತ್ನಿಸಿದರೆ, ಅಮೆರಿಕ ಇರಾನ್ ಅನ್ನು ವಿಶ್ವ ಭೂಪಟದಿಂದ ಅಳಿಸಿಹಾಕುತ್ತದೆ ಎಂದು ಡ್ರಂಪ್ ಹೇಳಿದ್ದಾರೆ.

ನ್ಯೂಸ್ ನೇಷನ್ ನ ‘ಕೇಟೀ ಪಾವ್ಲಿಚ್ ಟುನೈಟ್’ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ್ದಾರೆ.ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಉತ್ತುಂಗದಲ್ಲಿರುವ ಸಮಯದಲ್ಲಿ ಟ್ರಂಪ್ ಅವರ ಈ ಹೇಳಿಕೆ ಬಂದಿದೆ.
ಟ್ರಂಪ್ ಅವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ, ಇರಾನ್ ಮಿಲಿಟರಿ ವಕ್ತಾರ ಜನರಲ್ ಅಬುಲ್ ಫಜಲ್ ಶೇಕರ್ಚಿ, ನಮ್ಮ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಕಡೆಗೆ ಯಾರಾದರೂ ಕೆಟ್ಟ ಉದ್ದೇಶದಿಂದ ಕೈ ಚಾಚಿದರೆ, ನಾವು ಆ ಕೈಯನ್ನು ಕತ್ತರಿಸುವುದಲ್ಲದೆ, ಅವರ ಇಡೀ ದೇಶವನ್ನೇ ಸುಟ್ಟು ಹಾಕುತ್ತೇವೆ ಎಂದು ಟ್ರಂಪ್‌ಗೆ ತಿಳಿದಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ನನ್ನನ್ನು ಕೊಲೆ ಮಾಡಿದ್ರೆ, ಇರಾನ್​ ಅನ್ನು ವಿಶ್ವದ ಭೂಪಟದಿಂದಲೇ ಅಮೆರಿಕ ಅಳಿಸಿ ಹಾಕುತ್ತೆ: ಟ್ರಂಪ್

ಖಮೇನಿಯವರ ಸುಮಾರು 40 ವರ್ಷಗಳ ಆಡಳಿತವನ್ನು ಕೊನೆಗೊಳಿಸುವ ಬಗ್ಗೆ ಮಾತನಾಡಿದ ಟ್ರಂಪ್ ಅವರ ಹೇಳಿಕೆಯ ನಂತರ ಈ ಎಚ್ಚರಿಕೆ ಬಂದಿದೆ.ಟ್ರಂಪ್ ಈ ಹಿಂದೆ ಇರಾನ್‌ಗೆ ಎಚ್ಚರಿಕೆ ನೀಡಿದ್ದರು ಮತ್ತು ಇರಾನ್ ತನ್ನ ವಿರುದ್ಧ ಯಾವುದೇ ಹತ್ಯೆಗೆ ಸಂಚು ರೂಪಿಸಿದರೆ ಇರಾನ್ ಅನ್ನು ಸಂಪೂರ್ಣವಾಗಿ ನಾಶಮಾಡುವಂತೆ ತಮ್ಮ ಸಲಹೆಗಾರರಿಗೆ ಸೂಚಿಸಿದ್ದರು.

ಖಮೇನಿ ಅವರನ್ನು ಅಸ್ವಸ್ಥ ವ್ಯಕ್ತಿ ಎಂದು ಬಣ್ಣಿಸಿರುವ ಅವರು, ಅವರು ತನ್ನ ದೇಶವನ್ನು ಸರಿಯಾಗಿ ನಡೆಸಬೇಕು ಮತ್ತು ಜನರನ್ನು ಕೊಲ್ಲುವುದನ್ನು ನಿಲ್ಲಿಸಬೇಕು, ಇರಾನ್‌ಗೆ ಹೊಸ ನಾಯಕತ್ವ ಬೇಕು ಎಂದು ಹೇಳಿದ್ದಾರೆ. ಡಿಸೆಂಬರ್ 28 ರಂದು ಪ್ರಾರಂಭವಾದ ಪ್ರತಿಭಟನೆಗಳ ನಂತರ ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಇರಾನ್‌ನ ಕಳಪೆ ಆರ್ಥಿಕತೆಯ ವಿರುದ್ಧ ಈ ಪ್ರತಿಭಟನೆಗಳನ್ನು ಪ್ರಾರಂಭಿಸಲಾಯಿತು. ತಿಭಟನೆಗಳ ನಡುವೆ ಅಮೆರಿಕದ ಮಿಲಿಟರಿಯೂ ಸಕ್ರಿಯವಾಗಿದ್ದು, ಇದು ಎರಡೂ ದೇಶಗಳ ನಡುವಿನ ಉದ್ವಿಗ್ನತೆಯ ನಿರಂತರ ಏರಿಕೆಗೆ ಕಾರಣವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಶುಷ್ಕ ವಾತಾವರಣ – Kannada News | Bengaluru temperature: Dry weather all over karnataka for next 4 days

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಶುಷ್ಕ ವಾತಾವರಣ

ಬೆಂಗಳೂರು, ಜನವರಿ 23: ನಗರದಲ್ಲಿ ಚಳಿಯ ಪ್ರಮಾಣದಲ್ಲಿ ಏರಿಳಿಕೆಯಾಗುತ್ತಿದ್ದು, ಒಣ ಹವೆಯ ವಾತಾವರಣವಿದೆ (Weather Forecast) . ಇಂದು ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದೆಲ್ಲೆಡೆ ಕಳೆದ ಕೆಲ ದಿನಗಳಿಂದ ಒಣ ಹವೆಯ ವಾತಾವರಣವಿದ್ದು, ಇನ್ನೂ ನಾಲ್ಕು ದಿನ ಇದೇ ಹವಾಮಾನ ಇರಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಎಲ್ಲೆಲ್ಲಿ ಒಣಹವೆ?

ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು ಮೈಸೂರು ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮಂಜು

ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 30°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ. ಇಂದು ನಗರದಲ್ಲಿ ಎಂದಿನಂತೆ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಖಾಸಗಿ ಭೇಟಿ ವೇಳೆ ಗಿಲ್ಲಿಗೆ ಒಂದೊಳ್ಳೆ ಕಿವಿಮಾತು ಹೇಳಿದ ಸುದೀಪ್; ಅಳವಡಿಸಿಕೊಂಡರೆ ಬಾಳು ಬಂಗಾರ – Kannada News | English:** Kiccha Sudeep’s Golden Advice to Bigg Boss Winner Gilli: Think Before You Step!

ಗಿಲ್ಲಿ ನಟ (Gilli Nata) ಅವರು ಬಿಗ್ ಬಾಸ್ ವಿನ್ನರ್ ಆಗಿದ್ದಾರೆ. ಇದರ ಹಿಂದೆ ಕಿಚ್ಚ ಸುದೀಪ್ ಶ್ರಮ ಕೂಡ ಇದೆ ಎಂದರೂ ತಪ್ಪಾಗಲಾರದು. ಬಿಗ್ ಬಾಸ್ ಮನೆಯಲ್ಲಿ ಇರುವಾಗ ಯಾವ ರೀತಿಯಲ್ಲಿ ಆಡುತ್ತಿದ್ದೇವೆ ಎಂಬುದು ಗೊತ್ತೇ ಆಗೋದಿಲ್ಲ. ಮಾತು, ಆಟ, ವ್ಯಕ್ತಿತ್ವ ಹೀಗೆಯೇ ಎಲ್ಲವೂ ತಪ್ಪುತ್ತದೆ. ಆಗ ಸುದೀಪ್ ಅದನ್ನು ತಿದ್ದೋ ಕೆಲಸ ಸುದೀಪ್ ಮಾಡುತ್ತಾರೆ. ಗಿಲ್ಲಿ ವಿಷಯದಲ್ಲೂ ಸುದೀಪ್ ಅನೇಕ ಸಲಹೆ ನೀಡಿದ್ದಾರೆ. ಇತ್ತೀಚೆಗೆ ಖಾಸಗಿಯಾಗಿ ಇಬ್ಬರ ಭೇಟಿ ನಡೆದಿದೆ. ಈ ವೇಳೆ ಸುದೀಪ್ ಕೊಟ್ಟ ಸಲಹೆ ಬಗ್ಗೆ ಗಿಲ್ಲಿ ನಟ ಮಾತನಾಡಿದ್ದಾರೆ.

ಈ ಬಾರಿಯ ಬಿಗ್ ಬಾಸ್ ಅಲ್ಲಿ ಗಿಲ್ಲಿ ಅನೇಕ ಬಾರಿ ತಪ್ಪು ಮಾಡಿದ್ದರು. ಆಗ ಗಿಲ್ಲಿಗೆ ಸುದೀಪ್ ಕಿವಿಮಾತುಗಳನ್ನು ಹೇಳಿದರು. ತಪ್ಪು ಮಾಡಿದಾಗ ಅವರನ್ನು ತಿದ್ದೋ ಕೆಲಸ ಮಾಡಿದ್ದಾರೆ. ಫಿನಾಲೆ ದಿನ ಸುದೀಪ್ ಎದುರು ಧನ್ಯವಾದ ಅರ್ಪಿಸಿದ್ದರು ಗಿಲ್ಲಿ. ‘ಸಾಯೋವರೆಗೂ ನಿಮ್ಮನ್ನು ಮರೆಯಲ್ಲ’ ಎಂದಿದ್ದರು. ಬಿಗ್ ಬಾಸ್ ಗೆದ್ದ ಬಳಿಕ ಗಿಲ್ಲಿ ಅವರು ಸುದೀಪ್ ಅವರನ್ನು ಭೇಟಿ ಮಾಡಿದ್ದಾರೆ.

ಸುದೀಪ್ ಅವರು ಗಿಲ್ಲಿಗೆ ಸಲಹೆ ನೀಡಿದ್ದಾರೆ. ‘ಯೋಚಿಸಿ ಹೆಜ್ಜೆ ಇಡಬೇಕು’ ಎಂದು ಗಿಲ್ಲಿಗೆ ಕಿವಿಮಾತು ಹೇಳಿದ್ದಾರೆ ಸುದೀಪ್. ಇದನ್ನು ಗಿಲ್ಲಿ ಅಳವಡಿಸಿಕೊಳ್ಳುವ ಭರವಸೆ ನೀಡಿದ್ದಾರೆ. ದೊಡ್ಡ ಗೆಲುವು ಸಿಕ್ಕಾಗ ಮನಸ್ಸು ನಮ್ಮ ಹಿಡಿತದಲ್ಲಿ ಇರೋದಿಲ್ಲ. ಗೆದ್ದಿದ್ದೇವೆ ಎಂಬ ಖುಷಿಯಲ್ಲಿ ಕೆಲವೊಮ್ಮೆ ತಪ್ಪು ಹೆಜ್ಜೆಗಳನ್ನು ಇಡೋ ಸಾಧ್ಯತೆ ಇರುತ್ತದೆ. ಆ ರೀತಿ ಆಗದಿರಲಿ ಎಂಬುದು ಸುದೀಪ್ ಬಯಕೆ.

ಇದನ್ನೂ ಓದಿ: ‘ಹೊಸ ದಾರಿ ಕಡೆ ಮುಖ ಮಾಡೋ ಹೊತ್ತು’; ದೊಡ್ಡ ಘೋಷಣೆ ಮಾಡಿದ ಗಿಲ್ಲಿ ನಟ

ಗಿಲ್ಲಿ ಅವರು ‘ಬಿಗ್ ಬಾಸ್’ ಗೆದ್ದ ಬಳಿಕ ಶಿವರಾಜ್​​​ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಗಿಲ್ಲಿ ಗೆದ್ದೇ ಗೆಲ್ಲುತ್ತಾನೆ ಎಂದು ಶಿವಣ್ಣ ಹೇಳಿದ್ದರು. ಅದೇ ದಿನ ಸಂಜೆ ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ಅವರು ಶಿವಣ್ಣನ ಬಗ್ಗೆ ಮಾತನಾಡಿದ್ದರಂತೆ. ಈ ವಿಷಯಗಳನ್ನು ಇವರು ಚರ್ಚೆ ಮಾಡಿದ್ದಾರೆ. ಶಿವಣ್ಣನ ಭೇಟಿ ವೇಳೆ ಸುದೀಪ್​​ಗೆ ವಿಡಿಯೋ ಕರೆ ಮಾಡಿ ಮಾತನಾಡಲಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕರಾವಳಿಯಲ್ಲಿ ಮತ್ತೆ ಎಂಡೋಸಲ್ಫಾನ್ ಭೀತಿ: ಆರೋಗ್ಯ ಇಲಾಖೆಯಿಂದ ಆಘಾತಕಾರಿ ವರದಿ – Kannada News | Endosulfan Fear Returns to Karnataka Coast: unexpected Health Department Report Raises Alarm

ಎಂಡೋಸಲ್ಫಾನ್ ಪರಿಣಾಮ ವೈಕಲ್ಯಕ್ಕೆ ತುತ್ತಾಗಿರುವ ಮಗು

ಕಾರವಾರ, ಜನವರಿ 23: ಮಹಾಮಾರಿ ಎಂಡೋಸಲ್ಫಾನ್​ (Endosulfan) ಕರಾವಳಿ (Coastal Karnataka) ಭಾಗದ ಸಾವಿರಾರು ಮನೆಗಳ ನೆಮ್ಮದಿಯನ್ನೇ ಕದಡಿತ್ತು. ಗೇರುಬೀಜ ಇಳುವರಿಗೆ ಅಡ್ಡಿಯಾಗಿದ್ದ ಸೊಳ್ಳೆಗಳ ನಾಶಕ್ಕಾಗಿ ಸಿಂಪಡಿಸಿದ್ದ ಎಂಡೋಸಲ್ಫಾನ್, ಜನರ ಮೇಲೆ ಪರಿಣಾಮ ಬೀರಿತ್ತು. ಹುಟ್ಟುತ್ತಲೇ ಬುದ್ಧಿ ಭ್ರಮಣೆ ,ಬಹು ಅಂಗಾಂಗ ವೈಫಲ್ಯದಿಂದಾಗಿ ಅದೆಷ್ಟೋ ಮಕ್ಕಳು ನರಕಯಾತನೆ ಅನುಭವಿಸಿದ್ದರು. ಇದೀಗ ಮತ್ತೆ ಕರಾವಳಿ ಜನತೆಯಲ್ಲಿ ಎಂಡೋಸಲ್ಫಾನ್ ಭಯ ಆವರಿಸಿದೆ.

ಅಂದಹಾಗೆ 1986ರಿಂದ 2011 ರ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಸುಮಾರು 11,794 ಹೆಕ್ಟೇರ್ ಗೇರು ಬೆಳೆದ ಭೂಮಿಗೆ ಎಂಡೋಸಲ್ಫಾನ್​ ವಿಷದ್ರಾವಣವನ್ನು ಸಿಂಪಡಿಸಲಾಗಿತ್ತು. ಇದು ಗರ್ಭಿಣಿಯರ ಮೇಲೆ ನೇರ ಪರಿಣಾಮ ಬೀರಿತ್ತು. ಮಕ್ಕಳು ಹುಟ್ಟುತ್ತಲೇ ಬುದ್ಧಿಮಾಂದ್ಯ, ಅಂಗವೈಕಲ್ಯ, ನರ ದೌರ್ಬಲ್ಯಕ್ಕೆ ತುತ್ತಾಗಿದ್ದರು. ಇನ್ನು ಪುರುಷರೂ ಕೂಡಾ ಉಸಿರಾಟ ಸಮಸ್ಯೆ, ಪಾರ್ಶ್ವವಾಯು, ನರದೌರ್ಬಲ್ಯದಂತಹ ಸಮಸ್ಯೆ ಎದುರಿಸಿದ್ದರು. 2023-24 ರಲ್ಲಿ ಒಟ್ಟು 1554 ಜನರನ್ನು ಎಂಡೋಸಲ್ಫಾನ್ ಪೀಡಿತರನ್ನಾಗಿ ಗುರುತಿಸಲಾಗಿತ್ತು. ಇದೀಗ ಹೊಸ ಸರ್ವೆಯಲ್ಲಿ ಮಕ್ಕಳು ಸೇರಿ 543 ಜನರನ್ನು ಎಂಡೋ ಪೀಡಿತರನ್ನಾಗಿ ಗುರುತಿಸಲಾಗಿದೆ.

ವಂಶವಾಹಿ ಮೂಲಕ ಹರಡುತ್ತಿರುವ ಕಾಯಿಲೆಗಳು

ವಿಜ್ಞಾನಿಗಳ ಪ್ರಕಾರ, ಎಂಡೋಸಲ್ಫಾನ್ ಅಡ್ಡಪರಿಣಾಮದಿಂದ ಬರುವ ನ್ಯೂನತೆಗಳು ವಂಶವಾಹಿ ಮೂಲಕ ಒಬ್ಬರಿಂದ ಒಬ್ಬರಿಗೆ ಹಬ್ಬುತ್ತಿವೆ. ಎಂಡೋ ಬಾಧಿತರ ಸಂಖ್ಯೆ ಕಡಿಮೆಯಾಗಿದೆ ಎಂದು ಈ ಹಿಂದೆಯೇ ಸರ್ಕಾರ ಪೀಡಿತರಿಗೆ ನೀಡುವ ಸೌಲಭ್ಯವನ್ನು ನಿಲ್ಲಿಸಿತ್ತು. ಇದರಿಂದಾಗಿ ಎಂಡೋ ಪೀಡಿತರಿಗೆ ಯಾವ ಸೌಲತ್ತು ಇಲ್ಲದೇ ತೊಂದರೆ ಪಡುವಂತಾಗಿತ್ತು. ಆದರೆ ಈಗ ಮತ್ತೆ ಎಂಡೋ ಪೀಡಿತರ ಸಂಖ್ಯೆ ಹೆಚ್ಚಾಗಿರುವುದು ಆತಂಕ ತಂದಿದೆ. ಸರ್ಕಾರ ಈ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮೋಜು ಮಸ್ತಿಗಾಗಿ ಅರಣ್ಯ ಅಧಿಕಾರಿಗಳಿಂದಲೇ ಮರಗಳ ಮಾರಣ ಹೋಮ? ತನಿಖೆಗೆ ಆದೇಶ

ಈ ಎಂಡೋ ಸಲ್ಫಾನ್ ಪರಿಣಾಮದಿಂದ ಬರುವ ಕಾಯಿಲೆಗಳು ಹುಟ್ಟಿದಾಗಿನಿಂದ ಸಾಯುವ ವರೆಗೂ ಜೀವ ಹಿಂಡುತ್ತವೆ. ಇದೀಗ ಮೂರನೇ ತಲೆಮಾರಿಗೂ ನರಕ ತೋರಿಸುತ್ತಿರುವುದು ವಿಪರ್ಯಾಸ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಯುಎಇಯಲ್ಲಿ ಇಂದು ರಷ್ಯಾ, ಅಮೆರಿಕ, ಉಕ್ರೇನ್ ನಡುವೆ ಮೊದಲ ತ್ರಿಪಕ್ಷೀಯ ಸಭೆ – Kannada News | A First at the Table: Russia, US and Ukraine Set for Trilateral Talks in UAE

ಪುಟಿನ್, ಟ್ರಂಪ್, ಝೆಲೆನ್ಸ್ಕಿImage Credit source: ABC News

ಯುಎಇ, ಜನವರಿ 23: ರಷ್ಯಾ-ಉಕ್ರೇನ್ ನಡುವಿನ ಉದ್ವಿಗ್ನತೆ ಬಗೆಹರಿಯುವಂತೆ ಕಾಣುತ್ತಿಲ್ಲ, ಡೊನಾಲ್ಡ್​ ಟ್ರಂಪ್(Donald Trump) ಎರಡು ದೇಶಗಳ ನಡುವೆ ಮಧ್ಯಸ್ಥಿಕೆವಹಿಸುವುದನ್ನು ಬಿಡುತ್ತಿಲ್ಲ. ಟ್ರಂಪ್ ಒಮ್ಮೆ ಉಕ್ರೇನ್ ಅಧ್ಯಕ್ಷರ ಬಳಿ ಒಮ್ಮೆ ರಷ್ಯಾ ಅಧ್ಯಕ್ಷರ ಬಳಿ ಮಾತನಾಡುತ್ತಿದ್ದರೂ ಸಮಸ್ಯೆ ಅಂತ್ಯ ಕಂಡಿಲ್ಲ. ಹೀಗಾಗಿ ಮೊದಲ ಬಾರಿಗೆ ರಷ್ಯಾ, ಅಮೆರಿಕ, ಉಕ್ರೇನ್ ಒಟ್ಟಾಗಿ ತ್ರಿಪಕ್ಷೀಯ ಸಭೆ ನಡೆಸಲು ನಿರ್ಧರಿಸಿದ್ದು, ಅದು ಯುಎಇ(ಯುನೈಟೆಡ್ ಅರಬ್ ಎಮಿರೇಟ್ಸ್​)ನಲ್ಲಿ ಇಂದು(ಜನವರಿ 23) ನಡೆಯಲಿದೆ. ಈ ಕುರಿತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮಾಹಿತಿ ನೀಡಿದ್ದಾರೆ.

ಈ ಸಭೆ ತಾಂತ್ರಿಕ ಮಟ್ಟದಲ್ಲಿ ನಡೆಯುತ್ತಿದೆ. ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯಲ್ಲಿ ತಮ್ಮ ಭಾಷಣದ ನಂತರ ಝೆಲೆನ್ಸ್ಕಿ ಈ ಘೋಷಣೆ ಮಾಡಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧ ಪ್ರಾರಂಭವಾದ ನಂತರ ಮೂರು ದೇಶಗಳು ಒಟ್ಟಾಗಿ ಮಾತುಕತೆ ನಡೆಸುತ್ತಿರುವುದು ಇದೇ ಮೊದಲು ಎಂದು ಝೆಲೆನ್ಸ್ಕಿ ಹೇಳಿದರು. ಈ ಮಾತುಕತೆ ಯುದ್ಧವನ್ನು ಕೊನೆಗೊಳಿಸಲು ಸಹಾಯಕವಾಗಬಹುದು ಎಂದು ಅವರು ಆಶಿಸಿದ್ದಾರೆ. ಪಕ್ಷೀಯ ಸಭೆ ಎರಡು ದಿನಗಳಲ್ಲಿ ನಡೆಯಲಿದೆ ಎಂದು ಅವರು ಹೇಳಿದರು.

ಯಾವುದೇ ಸಂವಾದವಿಲ್ಲದಿರುವುದಕ್ಕಿಂತ ಕನಿಷ್ಠ ಕೆಲವು ಮಾತುಕತೆ ಉತ್ತಮ ಎಂದು ಅವರು ಹೇಳಿದರು.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಸುಮಾರು ಒಂದು ಗಂಟೆ ಕಾಲ ನಡೆದ ಸಭೆಯ ನಂತರ ಝೆಲೆನ್ಸ್ಕಿ ಈ ಹೇಳಿಕೆ ನೀಡಿದ್ದಾರೆ . ಈ ಸಭೆಯನ್ನು ಟ್ರಂಪ್ ಚೆನ್ನಾಗಿ ನಡೆಸಿದ್ದರು ಎಂದು ಬಣ್ಣಿಸಿದ್ದಾರೆ.

ಮತ್ತಷ್ಟು ಓದಿ: ತಾನೊಬ್ಬ ಸರ್ವಾಧಿಕಾರಿ ಎಂದು ಒಪ್ಪಿಕೊಂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್

ಉಕ್ರೇನಿಯನ್ ತಂಡವು ಮೊದಲು ಅಮೆರಿಕದ ಅಧಿಕಾರಿಗಳನ್ನು ಭೇಟಿ ಮಾಡಿ, ನಂತರ ಅಮೆರಿಕದ ನಿಯೋಗ ರಷ್ಯಾಕ್ಕೆ ಪ್ರಯಾಣಿಸಲಿದೆ ಎಂದು ಝೆಲೆನ್ಸ್ಕಿ ಹೇಳಿದರು. ಯುದ್ಧವನ್ನು ಕೊನೆಗೊಳಿಸಲು ಎಲ್ಲಾ ಪಕ್ಷಗಳು ರಾಜಿ ಮಾಡಿಕೊಳ್ಳಲು ಸಿದ್ಧರಿರಬೇಕು ಎಂದು ಝೆಲೆನ್ಸ್ಕಿ ಹೇಳಿದ್ದಾರೆ.

ಉಕ್ರೇನ್‌ನಿಂದ ಮಾತ್ರ ರಾಜಿ ನಿರೀಕ್ಷಿಸುವುದು ನ್ಯಾಯವಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ; ರಷ್ಯಾ ಕೂಡ ಮುಂದೆ ಬರಬೇಕು. ಆದಾಗ್ಯೂ, ಮಾತುಕತೆಯ ಸ್ವರೂಪ ಅಥವಾ ಅಧಿಕಾರಿಗಳು ಮುಖಾಮುಖಿಯಾಗಿ ಭೇಟಿಯಾಗುತ್ತಾರೆಯೇ ಎಂಬುದನ್ನು ಝೆಲೆನ್ಸ್ಕಿ ನಿರ್ದಿಷ್ಟಪಡಿಸಿಲ್ಲ.
ದಾವೋಸ್‌ಗೆ ಆಗಮಿಸಿದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗ್ರೀನ್‌ಲ್ಯಾಂಡ್‌ನಿಂದ ಹಿಡಿದು ಯುರೋಪಿಯನ್ ಒಕ್ಕೂಟದ ಅಸಮಾಧಾನದವರೆಗೆ ಹಲವಾರು ಸಮಸ್ಯೆಗಳನ್ನು ಪರಿಹರಿಸುವತ್ತ ಸಾಗಿದರು.

ಈ ಸಭೆಯ ನಂತರ, ರಷ್ಯಾ-ಉಕ್ರೇನ್ ಯುದ್ಧದ ಅಂತ್ಯವು ಕೆಲವೇ ಗಂಟೆಗಳಲ್ಲಿದೆ ಎಂದು ಟ್ರಂಪ್ ಸ್ಪಷ್ಟಪಡಿಸಿದರು. ಅವರು ಪುಟಿನ್ ಅವರೊಂದಿಗಿನ ಸಭೆಯನ್ನು ಸಹ ಘೋಷಿಸಿದರು, ಅದರ ನಂತರ ಎರಡೂ ದೇಶಗಳ ನಡುವಿನ ಪರಿಸ್ಥಿತಿ ಸ್ಪಷ್ಟವಾಗುತ್ತದೆ. ಇದರರ್ಥ ಇಂದು ಎರಡೂ ದೇಶಗಳಿಗೆ ನಿರ್ಣಾಯಕ ದಿನವಾಗಿರುತ್ತದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link