All posts by nagaraj11081993

ಪ್ರೇಯಸಿಯನ್ನು ಸೇತುವೆಯಿಂದ ತಳ್ಳಿ ಕೊಂದು, ಅಪಘಾತವೆಂದು ಬಿಂಬಿಸಿದ ಪ್ರೇಮಿ! – Kannada News

ಭುವನೇಶ್ವರ, ಜೂನ್ 11: ಒಡಿಶಾದ ಗಂಜಾಂ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಯುವತಿಯೊಬ್ಬಳು ತನ್ನನ್ನು ಮದುವೆಯಾಗುವಂತೆ ಪದೇ ಪದೇ ಒತ್ತಾಯಿಸುತ್ತಿದ್ದ ಕಾರಣಕ್ಕಾಗಿ ಆಕೆಯ ಪ್ರಿಯಕರನೇ ಆಕೆಯನ್ನು ಕ್ರೂರವಾಗಿ ಕೊಂದಿದ್ದಾನೆ. ಮೃತರನ್ನು ಅಂಬಿಕಾ ಎಂದು ಗುರುತಿಸಲಾಗಿದೆ. ಆರೋಪಿಯು ಈ ಕೊಲೆಯನ್ನು ರಸ್ತೆ ಅಪಘಾತ (Accident) ಎಂದು ಬಿಂಬಿಸಲು ಸಕಲ ಪ್ರಯತ್ನ ನಡೆಸಿದ್ದರೂ, ಪೊಲೀಸರ ಚುರುಕಿನ ತನಿಖೆಯಿಂದಾಗಿ ಸತ್ಯ ಹೊರಬಂದಿದೆ. ದಿಗಪಹಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ನಿಮಖಂಡಿ ಪೆಂತ್ ನಿವಾಸಿ ರಾಕೇಶ್ ಆಚಾರ್ಯ ಎಂಬ ಆರೋಪಿಯನ್ನು ಬಂಧಿಸಲಾಗಿದ್ದು, ಆತನನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ರಾಕೇಶ್ ಮತ್ತು ಅಂಬಿಕಾ ಇಬ್ಬರೂ ದೀರ್ಘಕಾಲದಿಂದ ಪ್ರೀತಿಸುತ್ತಿದ್ದರು. ಅಂಬಿಕಾ ಪಿಯುಸಿ ಮುಗಿಸಿ, ಡಾಕ್ಟರ್ ಆಗಬೇಕೆಂಬ ದೊಡ್ಡ ಕನಸಿನೊಂದಿಗೆ ಬೆಹರಾಂಪುರದಲ್ಲಿ ಉಳಿದುಕೊಂಡು ನೀಟ್ (NEET) ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಳು. ಇತ್ತೀಚಿನ ದಿನಗಳಲ್ಲಿ ಅಂಬಿಕಾ ತಾವಿಬ್ಬರೂ ಮದುವೆಯಾಗೋಣ ಎಂದು ರಾಕೇಶ್‌ಗೆ ಒತ್ತಾಯ ಮಾಡಲಾರಂಭಿಸಿದ್ದಳು. ಆದರೆ ಮದುವೆಯ ಜವಾಬ್ದಾರಿ ತೆಗೆದುಕೊಳ್ಳಲು ಇಷ್ಟವಿಲ್ಲದ ರಾಕೇಶ್, ಆಕೆಯನ್ನು ತನ್ನ ಹಾದಿಯಿಂದ ಶಾಶ್ವತವಾಗಿ ಮುಗಿಸಲು ಸಂಚು ರೂಪಿಸಿದ್ದ.

ಇದನ್ನೂ ಓದಿ: ಐಶಾರಾಮಿ ಜೀವನಕ್ಕಾಗಿ ಉಂಡ ಮನೆಗೇ ಕನ್ನ: 25 ಲಕ್ಷ ಹಣ ಕದ್ದು ಜೈಲುಪಾಲಾದ ನೇಪಾಳಿ ದಂಪತಿ

ಜೂನ್ 7ರಂದು ರಾಕೇಶ್ ಒಟ್ಟಿಗೆ ಸಮಯ ಕಳೆಯುವ ನೆಪದಲ್ಲಿ ಅಂಬಿಕಾಳನ್ನು ತನ್ನ ಬೈಕ್‌ನಲ್ಲಿ ಗೋಪಾಲಪುರಕ್ಕೆ ಕರೆದೊಯ್ದಿದ್ದ. ದಿನವಿಡೀ ಇಬ್ಬರೂ ಒಟ್ಟಿಗೆ ಕಳೆದಿದ್ದಾರೆ. ನಂತರ ಅಂದು ತಡರಾತ್ರಿ ಇಬ್ಬರೂ ಬೈಕ್‌ನಲ್ಲಿ ವಾಪಾಸ್ ಬರುತ್ತಿದ್ದಾಗ, ರಾಕೇಶ್ ಅಂಕುಲಿ ಮೇಲ್ಸೇತುವೆ ಬಳಿ ಬೈಕ್ ನಿಲ್ಲಿಸಿದ್ದಾನೆ. ಆಕೆ ಏನಾಯಿತೆಂದು ಯೋಚಿಸುವಷ್ಟರಲ್ಲೇ ಆಕೆಯನ್ನು ಮೇಲ್ಸೇತುವೆಯಿಂದ ಕೆಳಗೆ ತಳ್ಳಿದ್ದಾನೆ. ಆಕೆ ಸೇತುವೆಯಿಂದ ಕೆಳಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಕೊಲೆಯ ನಂತರ ಆರೋಪಿ ರಾಕೇಶ್ ಇದೊಂದು ಭೀಕರ ರಸ್ತೆ ಅಪಘಾತ ಎಂದು ಜಗತ್ತನ್ನು ನಂಬಿಸಲು ನಾಟಕವಾಡಿದ್ದಾನೆ. ಯಾರಿಗೂ ಅನುಮಾನ ಬರಬಾರದು ಎಂಬ ಕಾರಣಕ್ಕೆ ಆಕಸ್ಮಿಕ ಅಪಘಾತದಲ್ಲಿ ಅಂಬಿಕಾ ತೀರಿಕೊಂಡಿದ್ದಾಳೆ ಎಂದು ಆತನೇ ಸ್ವತಃ ಯುವತಿಯ ಕುಟುಂಬಸ್ಥರಿಗೆ ಫೋನ್ ಮಾಡಿ ತಿಳಿಸಿದ್ದಾನೆ. ಆದರೆ, ಘಟನೆಯ ಬಗ್ಗೆ ಆತ ನೀಡಿದ ಹೇಳಿಕೆಗಳಿಗೂ ಮತ್ತು ಪರಿಸ್ಥಿತಿಗೂ ಹೊಂದಾಣಿಕೆಯಾಗುತ್ತಿರಲಿಲ್ಲ. ರಾಕೇಶ್ ಮಾತಿನಲ್ಲಿದ್ದ ಗೊಂದಲಗಳನ್ನು ಗಮನಿಸಿದ ಅಂಬಿಕಾಳ ಸೋದರಮಾವ ಕನ್ಹೂ ಜೇನಾ ಅವರಿಗೆ ತೀವ್ರ ಅನುಮಾನ ಮೂಡಿ, ಬೈದ್ಯನಾಥಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇದನ್ನೂ ಓದಿ: ಒಂದೇ ಕುಟುಂಬದ ಮೂವರು ನಿಗೂಢ ಸಾವು: ಡೆತ್​​ ನೋಟ್​​ನಿಂದ ಸಾವಿನ ರಹಸ್ಯ ಬಯಲಿಗೆ

ದೂರು ದಾಖಲಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ಘಟನಾ ಸ್ಥಳದಿಂದ ಸಾಕ್ಷ್ಯಗಳನ್ನು ಕಲೆಹಾಕಿದ್ದರು. ತನಿಖೆ ಮುಂದುವರಿದಂತೆ ಇದು ಕೇವಲ ಸಾಮಾನ್ಯ ರಸ್ತೆ ಅಪಘಾತವಲ್ಲ, ಬದಲಿಗೆ ವ್ಯವಸ್ಥಿತವಾಗಿ ನಡೆದ ಕೊಲೆ ಎಂಬುದಕ್ಕೆ ಪೊಲೀಸರಿಗೆ ಗಟ್ಟಿಯಾದ ಸುಳಿವುಗಳು ಸಿಕ್ಕಿತ್ತು. ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ರಾಕೇಶ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Women’s T20 World Cup 2026: ಮಹಿಳಾ ಟಿ20 ವಿಶ್ವಕಪ್ ಬಗ್ಗೆ ನಿಮಗೆ ಗೊತ್ತಿರದ ಸಂಗತಿಗಳು ಇಲ್ಲಿವೆ – Kannada News

10ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್ (Women’s T20 World Cup) ಜೂನ್ 12 ರಂದು ಇಂಗ್ಲೆಂಡ್ ಮತ್ತು ವೇಲ್ಸ್‌ನಲ್ಲಿ ಆರಂಭವಾಗಲಿದೆ. ಮೊದಲ ಪಂದ್ಯ ಆತಿಥೇಯ ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವೆ ನಡೆಯಲಿದೆ. ಫೈನಲ್ ಪಂದ್ಯ ಜುಲೈ 5 ರಂದು ಲಾರ್ಡ್ಸ್‌ನಲ್ಲಿ ನಡೆಯಲಿದೆ. ಈ ಬಾರಿ, 12 ತಂಡಗಳು 24 ದಿನಗಳಲ್ಲಿ 33 ಪಂದ್ಯಗಳನ್ನು ಆಡಲಿವೆ. ಇದು ಇದುವರೆಗೆ ನಡೆದ ಅತಿದೊಡ್ಡ ಮಹಿಳಾ ಟಿ20 ವಿಶ್ವಕಪ್ ಆಗಲಿದ್ದು, ಈ ಟೂರ್ನಿಯಲ್ಲಿ ಏಕದಿನ ಚಾಂಪಿಯನ್ ಭಾರತ ತನ್ನ ಮೊದಲ ಪಂದ್ಯವನ್ನು ಜೂನ್ 14 ರಂದು ಬರ್ಮಿಂಗ್ಹ್ಯಾಮ್‌ನಲ್ಲಿ ಪಾಕಿಸ್ತಾನ ವಿರುದ್ಧ ಆಡಲಿದೆ.

ಮಹಿಳಾ ಟಿ20 ವಿಶ್ವಕಪ್ ಇತಿಹಾಸ

ಮೊದಲ ಮಹಿಳಾ ಟಿ20 ವಿಶ್ವಕಪ್ 2009 ರಲ್ಲಿ ಇಂಗ್ಲೆಂಡ್‌ನಲ್ಲಿ ನಡೆಯಿತು. ಪಂದ್ಯಾವಳಿಯಲ್ಲಿ ಎಂಟು ತಂಡಗಳು ಭಾಗವಹಿಸಿದ್ದವು ಮತ್ತು ಆತಿಥೇಯ ಇಂಗ್ಲೆಂಡ್ ಉದ್ಘಾಟನಾ ಚಾಂಪಿಯನ್ ಆಯಿತು. ಮೊದಲ ಮೂರು ವಿಶ್ವಕಪ್‌ಗಳಲ್ಲಿ ಎಂಟು ತಂಡಗಳು ಸ್ಪರ್ಧಿಸಿದ್ದವು. 2014 ರಲ್ಲಿ ತಂಡಗಳ ಸಂಖ್ಯೆ 10 ಕ್ಕೆ ಏರಿತು. ಇದೀಗ 2026 ರಲ್ಲಿ, ಮೊದಲ ಬಾರಿಗೆ 12 ತಂಡಗಳು ಭಾಗವಹಿಸುತ್ತವೆ. ಇಂಗ್ಲೆಂಡ್ 17 ವರ್ಷಗಳ ನಂತರ ವಿಶ್ವಕಪ್ ಅನ್ನು ಆಯೋಜಿಸುತ್ತಿದೆ.

ಯಾವ ಸ್ವರೂಪದಲ್ಲಿ ಪಂದ್ಯಾವಳಿ ನಡೆಯಲಿದೆ?

12 ತಂಡಗಳನ್ನು ತಲಾ ಆರು ತಂಡಗಳ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಎಲ್ಲಾ ತಂಡಗಳು ಗುಂಪು ಹಂತದಲ್ಲಿ ಪರಸ್ಪರ ಆಡುತ್ತವೆ. ನಂತರ ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೆಮಿಫೈನಲ್‌ಗೆ ಮುನ್ನಡೆಯುತ್ತವೆ. ಸೆಮಿಫೈನಲ್ ವಿಜೇತರು ಫೈನಲ್‌ನಲ್ಲಿ ಪ್ರಶಸ್ತಿಗಾಗಿ ಸೆಣಸಾಡಲಿದ್ದಾರೆ.

ಯಾವ ತಂಡ ಯಾವ ಗುಂಪಿನಲ್ಲಿದೆ?

  • ಎ ಗುಂಪು: ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ನೆದರ್ಲ್ಯಾಂಡ್ಸ್
  • ಬಿ ಗುಂಪು: ಇಂಗ್ಲೆಂಡ್, ವೆಸ್ಟ್ ಇಂಡೀಸ್, ನ್ಯೂಜಿಲೆಂಡ್, ಶ್ರೀಲಂಕಾ, ಐರ್ಲೆಂಡ್, ಸ್ಕಾಟ್ಲೆಂಡ್.

ಪಂದ್ಯಗಳು ಯಾವ ಮೈದಾನದಲ್ಲಿ ನಡೆಯಲಿವೆ?

ಪಂದ್ಯಾವಳಿಯ ಎಲ್ಲಾ 33 ಪಂದ್ಯಗಳು ಇಂಗ್ಲೆಂಡ್‌ನಾದ್ಯಂತ ಏಳು ಕ್ರೀಡಾಂಗಣಗಳಲ್ಲಿ ನಡೆಯಲಿದ್ದು, ಫೈನಲ್ ಪಂದ್ಯ ಲಾರ್ಡ್ಸ್‌ನಲ್ಲಿ ಮತ್ತು ಎರಡೂ ಸೆಮಿಫೈನಲ್ ಪಂದ್ಯಗಳು ದಿ ಓವಲ್‌ನಲ್ಲಿ ನಡೆಯಲಿವೆ.

ODI World Cup 2027: ಈ ದಿನದಿಂದ ಆರಂಭವಾಗಲಿದೆ 2027 ರ ಏಕದಿನ ವಿಶ್ವಕಪ್‌; ವೇಳಾಪಟ್ಟಿ ಬಹಿರಂಗ

ಪಂದ್ಯಾವಳಿಯನ್ನು ಎಲ್ಲಿ ವೀಕ್ಷಿಸಬಹುದು?

ಭಾರತದ ವೀಕ್ಷಕರು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಮತ್ತು ಜಿಯೋಹಾಟ್‌ಸ್ಟಾರ್‌ನಲ್ಲಿ ಎಲ್ಲಾ ವಿಶ್ವಕಪ್ ಪಂದ್ಯಗಳ ನೇರ ಪ್ರಸಾರವನ್ನು ವೀಕ್ಷಿಸಬಹುದಾಗಿದೆ.

ಭಾರತದ ಪ್ರದರ್ಶನ ಹೇಗಿದೆ?

ಭಾರತ ಇದುವರೆಗೆ ನಡೆದಿರುವ ಒಂಬತ್ತು ವಿಶ್ವಕಪ್‌ಗಳಲ್ಲಿಯೂ ಆಡಿದೆ. 2020 ರಲ್ಲಿ, ತಂಡವು ಮೊದಲ ಬಾರಿಗೆ ಫೈನಲ್ ತಲುಪಿತ್ತಾದರೂ ಆಸ್ಟ್ರೇಲಿಯಾ ವಿರುದ್ಧ ಸೋತಿತು. ಆದಾಗ್ಯೂ ಟೀಂ ಇಂಡಿಯಾ ಇದುವರೆಗೆ ನಾಲ್ಕು ಬಾರಿ ಸೆಮಿಫೈನಲ್ ತಲುಪಿದೆ. ಭಾರತವು ಪಂದ್ಯಾವಳಿಯಲ್ಲಿ 40 ಪಂದ್ಯಗಳನ್ನು ಆಡಿದ್ದು, 22 ಪಂದ್ಯಗಳನ್ನು ಗೆದ್ದಿದ್ದರೆ 18 ಪಂದ್ಯಗಳಲ್ಲಿ ಸೋತಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಧರ್ಮಸ್ಥಳಕ್ಕೆ ಕಳಂಕ ತರಲು ಬುರುಡೆ ಗ್ಯಾಂಗ್ ಹುನ್ನಾರ: 200 ಕೋಟಿ ಬಜೆಟ್ ಇಟ್ಟುಕೊಂಡು ಷಡ್ಯಂತ್ರ – Kannada News

ಬೆಂಗಳೂರು,( ಜೂನ್ 11): ಧರ್ಮಸ್ಥಳ ಬುರುಡೆ ಕೇಸ್‌ನ ಮತ್ತೊಂದು ಸ್ಫೋಟಕ ಸಂಗತಿ ಹೊರಬಿದ್ದಿದೆ. ಬುರುಡೆ ಗ್ಯಾಂಗ್ ಹೇಗೆಲ್ಲ ಸಂಚು ರೂಪಿಸಿತ್ತು ಎಂಬ ವಿಚಾರ ಬಯಲಾಗಿದೆ. ಬುರುಡೆ ಚಿನ್ನಯ್ಯ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯಲ್ಲಿ ಹಲವು ಸ್ಫೋಟಕ ಸಂಗತಿ ಹೊರಬಿದ್ದಿದೆ. ಅರ್ಜಿಯಲ್ಲಿ ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖಿಸಿರೋ ಚಿನ್ನಯ್ಯ, ಪ್ರಕಾಶ್ ರಾಜ್ ಮಾತನಾಡಿರೋದ ಸಂಗತಿಯನ್ನ ಉಲ್ಲೇಖಿಸಿದ್ದಾನೆ.

ಚಿನ್ನಯ್ಯ ರಿಟ್ ಅರ್ಜಿಯಲ್ಲಿ ಏನಿದೆ
‘ಒಂದು ದಿನ ರಾತ್ರಿ ಸುಮಾರು 8:00 ಗಂಟೆಗೆ, ಗಿರೀಶ್ ಮಟ್ಟಣ್ಣವರ್ ನಟ ಪ್ರಕಾಶ್ ರಾಜ್ ಅವರಿಗೆ ದೂರವಾಣಿ ಕರೆ ಮಾಡಿ ನನಗೆ ಫೋನ್ ನೀಡಿದರು. ಪ್ರಕಾಶ್ ರಾಜ್ ಅವರು ತಮಿಳಿನಲ್ಲಿ ಮಾತನಾಡಿ, ಗಿರೀಶ್ ಮಟ್ಟಣ್ಣವರ್ ಅವರು ಏನು ಹೇಳಬೇಕೆಂದು ಸೂಚಿಸಿದ್ದಾರೋ ಅದನ್ನು ಅಧಿಕಾರಿಗಳ ಮುಂದೆ ಹೇಳಬೇಕು. ಅವರು ಹೇಳಿದಂತೆ ಕೇಳಿದರೆ ಜೂನ್ 29 ರಂದು ಬಂದು ಅಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದರು. ಹೀಗೆಂದು ಹೇಳಿದ್ದಾಗಿ ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖಿಸಿ ಚಿನ್ನಯ್ಯ ರಿಟ್ ಅರ್ಜಿಯಲ್ಲಿ ತಿಳಿಸಿದ್ದಾನೆ. ಅಷ್ಟೇ ಅಲ್ಲ, ಈ ಷಡ್ಯಂತ್ರಕ್ಕಾಗಿ ನಡೆದಿದ್ದು ಬರೋಬ್ಬರಿ 200 ಕೋಟಿ ವಹಿವಾಟು ಅಂತಾ ಸ್ಫೋಟಕ ಸಂಗತಿಯನ್ನ ಉಲ್ಲೇಖಿಸಿದ್ದಾನೆ.

ಧರ್ಮಸ್ಥಳಕ್ಕೆ ಕಳಂಕ ತರಲು ಬುರುಡೆ ಗ್ಯಾಂಗ್‌ ಹುನ್ನಾರ ಮಾಡಿರೋದು ಚಿನ್ನಯ್ಯನ ರಿಟ್ ಅರ್ಜಿಯಲ್ಲಿ ಬಯಲಾಗಿದೆ. 200 ಕೋಟಿ ಬಜೆಟ್ ಇಟ್ಕೊಂಡು ಗ್ಯಾಂಗ್ ಷಡ್ಯಂತ್ರ ಮಾಡಿತ್ತಂತೆ. ಷಡ್ಯಂತ್ರಕ್ಕೆ ಅಂತಾರಾಜ್ಯ ಮಟ್ಟದ ಆರ್ಥಿಕ ವಹಿವಾಟು ನಡೆದಿದೆ ಎಂದಿದ್ದಾನೆ. ಅಷ್ಟೇ ಅಲ್ಲ, ಷಡ್ಯಂತ್ರ ಸಕ್ಸಸ್ ಆದ್ರೆ 50 ಲಕ್ಷ ಕೊಡ್ತೀನಿ ಅಂತಾ ಆಮಿಷ ವೊಡ್ಡಿದ್ರು ಅಂತಾ ಚಿನ್ನಯ್ಯ ರಿಟ್ ಅರ್ಜಿಯಲ್ಲಿ ಹೇಳಿಕೊಂಡಿದ್ದಾನೆ.) ತಿಮರೋಡಿ, ಮಟ್ಟಣ್ಣವರ್, ವಿಠಲಗೌಡ, ಜಯಂತ್ ಷಡ್ಯಂತ್ರದ ರೂವಾರಿಗಳು. ನಿಜವಾದ ಆರೋಪಿಗಳ ಹೆಸರು ಹೇಳಿದ್ರೂ ಎಸ್‌ಐಟಿ ಕ್ರಮ ಕೈಗೊಂಡಿಲ್ಲ ಎಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾನೆ. ವಿಚಾರಣೆಯನ್ನ ಜೂನ್ 29ಕ್ಕೆ ಮುಂದೂಡಿದ ಹೈಕೋರ್ಟ್ ಮುಂದೂಡಿದೆ.

Source link

‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್ ಕುಮಾರ್ – Kannada News

‘ನಾಗುಗೆ ವಧು ಬೇಕಾಗಿದೆ’ (Naaguge Vadhu Bekaagide) ಎಂಬ ಭಿನ್ನ ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಬರುತ್ತಿದೆ. ಈ ಸಿನಿಮಾಗೆ ಆರ್.ಕೆ. ಅವರು ನಿರ್ದೇಶನ ಮಾಡಿದ್ದಾರೆ. ದತ್ತು ಪೂಜಾರಿ, ಸೋನಿಕಾ, ಚಿತ್ರಲ್ ರಂಗಸ್ವಾಮಿ ಅವರು ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಈ ಚಿತ್ರದ ಟೈಟಲ್ ಬಗ್ಗೆ ಖ್ಯಾತ ನಿರ್ದೇಶಕ, ಗೀತಸಾಹಿತಿ ಚೇತನ್ ಕುಮಾರ್ ಅವರು ಮಾತನಾಡಿದರು. ‘ಒಂದು ಸಿನಿಮಾಗೆ ಶೀರ್ಷಿಕೆ ಬಹಳ ಮುಖ್ಯ. ನಿರ್ದೇಶಕರು ಬಂದು ಒಮ್ಮೆ ಭೇಟಿ ಆದರು. ಸಿನಿಮಾ ಮೇಲೆ ಅವರಿಗೆ ಬಹಳ ಪ್ರೀತಿ ಇದೆ. ಸಿನಿಮಾದ ಕಥೆಯ ಎಳೆ ಹೇಳಿದರು. ನನಗೆ ವಿಶೇಷ ಎನಿಸಿತು. ಇಷ್ಟು ವಿಶೇಷವಾದ ಶೀರ್ಷಿಕೆಯನ್ನು ನಾನು ಇದುವರೆಗೂ ಕೇಳಿರಲಿಲ್ಲ. ಇಂದಿನ ಕಾಲದಲ್ಲಿ ಮದುವೆಗೆ ಹುಡುಗಿ ಹುಡುಕುವುದು ಕಷ್ಟ ಇದೆ. ಈ ಸಿನಿಮಾವನ್ನು ಕುಟುಂಬ ಸಮೇತವಾಗಿ ನೋಡಬಹುದು. ಆ ಭರವಸೆ ನನಗೆ ಇದೆ. ಎಲ್ಲರೂ ಈ ಸಿನಿಮಾಗೆ ಹಾರೈಸಿ. ಅನೇಕ ಹಿರಿಯ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ’ ಎಂದು ಚೇತನ್ ಕುಮಾರ್ ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕಾಂಗ್ರೆಸ್​ ಎಡವಟ್ಟಿನಿಂದ ಮಧ್ಯಪ್ರದೇಶದಲ್ಲಿ 3 ರಾಜ್ಯಸಭಾ ಸ್ಥಾನದಲ್ಲೂ ಬಿಜೆಪಿಗೆ ಅವಿರೋಧ ಗೆಲುವು

ಭೋಪಾಲ್, ಜೂನ್ 11: ಮಧ್ಯಪ್ರದೇಶದ ರಾಜಕೀಯ ವಲಯದಲ್ಲಿ ಅತ್ಯಂತ ಪ್ರಮುಖ ಬೆಳವಣಿಗೆಯೊಂದರಲ್ಲಿ, ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ (Meenakshi Natarajan) ಅವರ ನಾಮಪತ್ರ ತಿರಸ್ಕಾರಗೊಂಡ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿಯು (BJP) ರಾಜ್ಯದ ಮೂರೂ ರಾಜ್ಯಸಭಾ ಸ್ಥಾನಗಳನ್ನು ಅವಿರೋಧವಾಗಿ ಗೆದ್ದುಕೊಂಡಿದೆ. ಮಧ್ಯಪ್ರದೇಶದಲ್ಲಿ ತೆರವಾಗಿದ್ದ 3 ರಾಜ್ಯಸಭಾ ಸ್ಥಾನಗಳಿಗೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ.

ಪ್ರಮುಖ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರದಲ್ಲಿ ತಾಂತ್ರಿಕ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಅವರ ನಾಮಪತ್ರವನ್ನು ರದ್ದುಗೊಳಿಸಿದರು. ಇದರೊಂದಿಗೆ ಚುನಾವಣಾ ಕಣದಲ್ಲಿ ಕೇವಲ ಮೂವರು ಬಿಜೆಪಿ ಅಭ್ಯರ್ಥಿಗಳು ಮಾತ್ರ ಉಳಿದುಕೊಂಡಿದ್ದರಿಂದ, ಮೂವರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಯಿತು. ರಾಜ್ಯಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (BJP) ಅಭ್ಯರ್ಥಿಗಳಾದ ರಜನೀಶ್ ಅಗರ್ವಾಲ್, ತರುಣ್ ಚುಗ್ ಮತ್ತು ಮಹೇಶ್ ಕೇವತ್ ಅವರು ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಮಧ್ಯಪ್ರದೇಶದ ಮೂರೂ ರಾಜ್ಯಸಭಾ ಸ್ಥಾನಗಳನ್ನು ಬಿಜೆಪಿ ತನ್ನದಾಗಿಸಿಕೊಂಡಿದೆ.

ಕಾಂಗ್ರೆಸ್ ಪಕ್ಷದ ಪರವಾಗಿ ಹಿರಿಯ ನಾಯಕಿ ಮತ್ತು ಮಾಜಿ ಸಂಸದರಾದ ಮೀನಾಕ್ಷಿ ನಟರಾಜನ್ ಅವರು ನಾಮಪತ್ರ ಸಲ್ಲಿಸಿದ್ದರು. ನಾಮಪತ್ರಗಳ ಪರಿಶೀಲನೆಯ ಸಮಯದಲ್ಲಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರದಲ್ಲಿ ಕೆಲವು ಪ್ರಮುಖ ತಾಂತ್ರಿಕ ತಪ್ಪುಗಳು ಮತ್ತು ನಿಯಮಾವಳಿಗಳ ಉಲ್ಲಂಘನೆ ಇರುವುದು ಬೆಳಕಿಗೆ ಬಂದಿದೆ. ಬಿಜೆಪಿ ನಾಯಕರು ಈ ತಪ್ಪುಗಳ ವಿರುದ್ಧ ಆಕ್ಷೇಪ ಎತ್ತಿದ ನಂತರ, ಚುನಾವಣಾ ನಿಯಮಗಳ ಪ್ರಕಾರ ಆಕ್ಷೇಪಣೆಯನ್ನು ಮಾನ್ಯ ಮಾಡಿದ ಚುನಾವಣಾಧಿಕಾರಿಗಳು ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರವನ್ನು ಅಸಿಂಧುಗೊಳಿಸಿ, ರದ್ದುಪಡಿಸಿದರು.

ಇದನ್ನೂ ಓದಿ: ರಾಜ್ಯಸಭಾ ನಾಮಪತ್ರ ತಿರಸ್ಕೃತ, ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್

ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ರದ್ದಾದ ತಕ್ಷಣ, ಕಣದಲ್ಲಿ ಯಾವುದೇ ವಿರೋಧ ಪಕ್ಷದ ಪ್ರಬಲ ಅಭ್ಯರ್ಥಿ ಇಲ್ಲದಂತಾಯಿತು. ಇದರ ಫಲವಾಗಿ ಬಿಜೆಪಿಯ ಮೂರೂ ಅಭ್ಯರ್ಥಿಗಳು ಯಾವುದೇ ಮತದಾನವಿಲ್ಲದೆಯೇ ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ರಾಜ್ಯಸಭಾ ಚುನಾವಣೆಯ ನಿಯಮಗಳ ಪ್ರಕಾರ, ಸ್ಥಾನಗಳ ಸಂಖ್ಯೆಗೆ ಸಮನಾಗಿ ಅಭ್ಯರ್ಥಿಗಳು ಕಣದಲ್ಲಿದ್ದರೆ ಮತದಾನದ ಅಗತ್ಯವಿರುವುದಿಲ್ಲ. ಅದರಂತೆ ಚುನಾವಣಾಧಿಕಾರಿಗಳು ಅಧಿಕೃತವಾಗಿ ಬಿಜೆಪಿಯ ಗೆಲುವನ್ನು ಘೋಷಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸೀಟು ಕಳ್ಳತನ ಮಾಡಿದೆ; ರಾಜ್ಯಸಭೆ ನಾಮಪತ್ರ ರದ್ದಾಗಿದ್ದಕ್ಕೆ ಮೀನಾಕ್ಷಿ ನಟರಾಜನ್ ಆಕ್ರೋಶ

ಈ ಗೆಲುವಿನೊಂದಿಗೆ ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆಯಲ್ಲಿ ಬಿಜೆಪಿಯ ಬಲ ಮತ್ತಷ್ಟು ಹೆಚ್ಚಾಗಲಿದೆ. ಪ್ರಮುಖ ಮಸೂದೆಗಳನ್ನು ಪಾಸ್ ಮಾಡಲು ಇದು ಆಡಳಿತ ಪಕ್ಷಕ್ಕೆ ಸಹಕಾರಿಯಾಗಲಿದೆ. ಮಧ್ಯಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್ ಹೊಂದಿರುವ ಸ್ಥಾನಗಳ ಬಲದ ಆಧಾರದ ಮೇಲೆ ಕನಿಷ್ಠ 1 ಸ್ಥಾನವನ್ನು ಗೆಲ್ಲುವ ಅವಕಾಶವಿತ್ತು. ಆದರೆ, ಆಡಳಿತಾತ್ಮಕ ನಿರ್ಲಕ್ಷ್ಯ ಅಥವಾ ತಾಂತ್ರಿಕ ತಪ್ಪಿನಿಂದಾಗಿ ಕಾಂಗ್ರೆಸ್ ಗೆಲ್ಲಬಹುದಾಗಿದ್ದ ಒಂದು ಸ್ಥಾನದಿಂದ ವಂಚಿತವಾಗಿದ್ದು, ಪಕ್ಷದೊಳಗೆ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೇತುವಿನ ಮೇಲಿದೆ ಕುಜನ ದೃಷ್ಟಿ: ಯಾರಿಗೆ ಒಲಿಯಲಿದೆ ಪೂರ್ಣ ರಾಜಯೋಗ? ಯಾರಿಗೆ ಧನಲಾಭ? – Kannada News

ಈ ತಿಂಗಳಲ್ಲಿ ಕೊನೆಯ ಗ್ರಹವಾದ ಕೇತುವು ರವಿ, ಬುಧ, ಶನಿ ಮತ್ತು ಕುಜರ ವಿಶಿಷ್ಟ ಪ್ರಭಾವದಲ್ಲಿ ಇರುವನು. ಮಘಾ ನಕ್ಷತ್ರದಲ್ಲಿ ಸಂಚಾರ ಮಾಡುತ್ತಿದ್ದು ಇದರ ಅಧಿಪತಿ ಕೇತುವೇ ಆಗಿದ್ದಾನೆ. ಕುಜನ ಫಲವನ್ನು ಕೊಡುತ್ತಾನೆ ಎಂಬ ಪ್ರತೀತಿ ಇದೆ‌. ಕುಜನ ದೃಷ್ಟಿ ಈ ಗ್ರಹದ ಮೇಲಿರಲಿದೆ. ಗಣಪತಿಯ ಆರಾಧನೆಯಿಂದ ದೋಷಗಳನ್ನು ಕಡಿಮೆ ಮಾಡಿಕೊಳ್ಳಬಹುದು.

​ಮೇಷ ರಾಶಿ

​ಕುಜನ ದ್ವಾದಶಾಂಶವಿರುವುದರಿಂದ ಧೈರ್ಯ ಹೆಚ್ಚಲಿದೆ. ಶತ್ರುಗಳ ನಾಶ ಹಾಗೂ ದಿಢೀರ್ ಧನಲಾಭವಾಗಲಿದೆ. ರವಿಯ ಪ್ರಭಾವದಿಂದ ಸಮಾಜದಲ್ಲಿ ಗೌರವ ಸಿಗಲಿದ್ದು, ಸರ್ಕಾರಿ ಕೆಲಸಗಳು ಯಶಸ್ವಿಯಾಗಲಿವೆ. ಆದರೆ, ರಕ್ತದೊತ್ತಡ ಮತ್ತು ಕೋಪದ ಮೇಲೆ ನಿಯಂತ್ರಣವಿರಲಿ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗಲಿದೆ.

ವೃಷಭ ರಾಶಿ

​ಆಧ್ಯಾತ್ಮಿಕ ಕ್ಷೇತ್ರಕ್ಕೆ ಹೆಜ್ಜೆಯಿಡಲು ಇದು ಸಕಾಲ. ಬುಧನ ನವಾಂಶದಿಂದಾಗಿ ವ್ಯಾಪಾರದಲ್ಲಿ ಚತುರತೆ ಮೂಡಲಿದೆ. ವಿದೇಶ ಪ್ರಯಾಣದ ಯೋಗವಿದ್ದು, ಹಳೆಯ ಸಾಲಗಳಿಂದ ಮುಕ್ತಿ ಸಿಗಲಿದೆ. ಶನಿಯ ತ್ರಿಂಶಾಂಶವು ನಿಧಾನಗತಿಯ ಪ್ರಗತಿ ನೀಡಿದರೂ, ದೀರ್ಘಕಾಲೀನ ಆಸ್ತಿ ಸಂಪಾದನೆಗೆ ಈ ದಶೆ ಶುಭ ತರಲಿದೆ.

ಮಿಥುನ ರಾಶಿ

​ಬುಧನ ನವಾಂಶವು ನಿಮಗೆ ಬುದ್ಧಿವಂತಿಕೆ ಮತ್ತು ಸಂವಹನ ಕಲೆಯನ್ನು ಹೆಚ್ಚಿಸಲಿದೆ. ಉದ್ಯೋಗದಲ್ಲಿ ದೊಡ್ಡ ಬದಲಾವಣೆ ಕಂಡುಬರಲಿದ್ದು, ಆದಾಯದ ಮೂಲಗಳು ಹೆಚ್ಚಲಿವೆ. ಶನಿಯ ಪ್ರಭಾವದಿಂದ ಕಠಿಣ ಪರಿಶ್ರಮ ಅಗತ್ಯವಿರುತ್ತದೆ. ಚರ್ಮದ ಅಲರ್ಜಿ ಮತ್ತು ನರಗಳ ದೌರ್ಬಲ್ಯದ ಬಗ್ಗೆ ಎಚ್ಚರಿಕೆ ಅಗತ್ಯ.

​ಕರ್ಕಾಟಕ ರಾಶಿ

​ರವಿಯ ರಾಶ್ಯಾಧಿಪತ್ಯದ ಪ್ರಭಾವದಿಂದ ಉದ್ಯೋಗದಲ್ಲಿ ಬಡ್ತಿ ಮತ್ತು ಕೀರ್ತಿ ಲಭಿಸಲಿದೆ. ದೈವಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಲಿದ್ದು, ತೀರ್ಥಯಾತ್ರೆ ಮಾಡುವಿರಿ. ಆರಂಭದಲ್ಲಿ ಕೆಲಸಗಳಲ್ಲಿ ಅಡೆತಡೆಗಳು ಎದುರಾದರೂ, ಅಂತಿಮವಾಗಿ ಉನ್ನತ ಜ್ಞಾನ ಮತ್ತು ಮಾನಸಿಕ ನೆಮ್ಮದಿ ನಿಮ್ಮದಾಗಲಿದೆ. ಆಸ್ತಿ ಖರೀದಿ ಯೋಗವಿದೆ.

ಸಿಂಹ ರಾಶಿ

​ಕೇತು ರವಿಯ ಮನೆ ಮತ್ತು ಹೋರೆಯಲ್ಲೇ ಇರುವುದರಿಂದ ನಿಮಗೆ ಪೂರ್ಣ ರಾಜಯೋಗ ಫಲ ಸಿಗಲಿದೆ. ನಾಯಕತ್ವದ ಗುಣಗಳು ವೃದ್ಧಿಸಲಿವೆ. ತಂದೆಯ ಕಡೆಯಿಂದ ಅಪಾರ ಲಾಭ ಮತ್ತು ಪಿತ್ರಾರ್ಜಿತ ಆಸ್ತಿ ಸಿಗಲಿದೆ. ಕುಜನ ಪ್ರಭಾವದಿಂದ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಭಾರಿ ಧನಲಾಭವಾಗಲಿದ್ದು, ಸಮಾಜದಲ್ಲಿ ಉನ್ನತ ಸ್ಥಾನ ಸಿಗಲಿದೆ.

ಕನ್ಯಾ ರಾಶಿ

​ಬುಧನ ನವಾಂಶವು ಹೊಸ ಉದ್ಯಮ ಆರಂಭಿಸಲು ಪ್ರೇರಣೆ ನೀಡಲಿದೆ. ಸಂಶೋಧನೆ ಮತ್ತು ಗೂಢ ಶಾಸ್ತ್ರಗಳಲ್ಲಿ ಆಸಕ್ತಿ ಮೂಡಲಿದೆ. ಶನಿಯ ತ್ರಿಂಶಾಂಶದಿಂದಾಗಿ ಕೋರ್ಟ್ ಕಚೇರಿ ಕಲಾಪಗಳಲ್ಲಿ ಜಯ ಸಿಗಲಿದೆ. ಆರೋಗ್ಯದ ಕಡೆ ಗಮನವಿರಲಿ. ಹಠಾತ್ ಧನಲಾಭದ ಮೂಲಕ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ.

ತುಲಾ ರಾಶಿ

​ವೈವಾಹಿಕ ಜೀವನದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ, ವ್ಯಾಪಾರ ಪಾಲುದಾರಿಕೆಯಲ್ಲಿ ಲಾಭವಾಗಲಿದೆ. ರವಿಯ ಪ್ರಭಾವದಿಂದ ಸಮಾಜದ ಗಣ್ಯರ ಒಡನಾಟ ಸಿಗಲಿದೆ. ಆಧ್ಯಾತ್ಮಿಕ ಸಾಧನೆಗೆ ಈ ದಶೆ ಪೂರಕವಾಗಿದೆ. ಶನಿಯ ಪ್ರಭಾವದಿಂದ ಆಸ್ತಿ ಹೂಡಿಕೆಯಲ್ಲಿ ಯಶಸ್ಸು ಸಿಗಲಿದ್ದು, ಅನಿರೀಕ್ಷಿತ ಮೂಲಗಳಿಂದ ಧನಾಗಮನವಾಗಲಿದೆ.

ವೃಶ್ಚಿಕ ರಾಶಿ

​ಕುಜನ ದ್ವಾದಶಾಂಶವಿರುವುದರಿಂದ ಸಾಹಸ ಪ್ರವೃತ್ತಿ ಹೆಚ್ಚಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಭೂತಪೂರ್ವ ಯಶಸ್ಸು ಸಿಗಲಿದೆ. ಸಾಲ ಬಾಧೆಗಳು ತೀರಲಿವೆ. ರವಿಯ ಹೋರೆಯು ಸರ್ಕಾರಿ ವಲಯದಿಂದ ಅಪಾರ ಲಾಭ ತಂದುಕೊಡಲಿದೆ. ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸುವುದು ಒಳಿತು. ಕೀರ್ತಿ ಮತ್ತು ಪ್ರತಿಷ್ಠೆ ಹೆಚ್ಚಾಗಲಿದೆ.

ಧನು ರಾಶಿ

​ಬುದ್ಧಿಮತ್ತೆ ಮತ್ತು ಜ್ಞಾನದ ವಿಕಾಸವಾಗಲಿದೆ. ಸಂತಾನ ಭಾಗ್ಯದ ನಿರೀಕ್ಷೆಯಲ್ಲಿದ್ದವರಿಗೆ ಶುಭ ವಾರ್ತೆ ಸಿಗಲಿದೆ. ಧರ್ಮಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ. ರವಿಯ ಪ್ರಭಾವದಿಂದಾಗಿ ದೀರ್ಘಕಾಲದ ತೊಂದರೆಗಳು ಮತ್ತು ಕೌಟುಂಬಿಕ ಕಲಹಗಳು ಕೊನೆಗೊಳ್ಳಲಿವೆ. ಉನ್ನತ ಶಿಕ್ಷಣಕ್ಕಾಗಿ ವಿದೇಶ ಪ್ರಯಾಣದ ಯೋಗವಿದೆ.

ಮಕರ ರಾಶಿ

​ಶನಿಯ ತ್ರಿಂಶಾಂಶದ ಪ್ರಭಾವದಿಂದ ಕಠಿಣ ಶ್ರಮಕ್ಕೆ ತಕ್ಕ ಉತ್ತಮ ಪ್ರತಿಫಲ ಸಿಗಲಿದೆ. ಭೂಮಿ ಅಥವಾ ವಾಹನ ಖರೀದಿ ಯೋಗವಿದೆ. ಕೌಟುಂಬಿಕವಾಗಿ ವೈರಾಗ್ಯ ಭಾವ ಮೂಡಿದರೂ, ವೃತ್ತಿಜೀವನದಲ್ಲಿ ಸ್ಥಿರತೆ ಇರಲಿದೆ. ಕುಜನ ದ್ವಾದಶಾಂಶವು ರಿಯಲ್ ಎಸ್ಟೇಟ್ ಮತ್ತು ಕೃಷಿ ಭೂಮಿಯಿಂದ ಲಾಭ ತಂದುಕೊಡಲಿದೆ.

ಕುಂಭ ರಾಶಿ

​ನಿಮ್ಮ ಆತ್ಮವಿಶ್ವಾಸ ಮತ್ತು ಪರಾಕ್ರಮ ಹೆಚ್ಚಾಗಲಿದೆ. ಸಹೋದರರೊಂದಿಗೆ ಇದ್ದ ಭಿನ್ನಾಭಿಪ್ರಾಯಗಳು ದೂರಾಗಲಿವೆ. ಬುಧನ ನವಾಂಶದಿಂದಾಗಿ ಸಣ್ಣ ಪ್ರಯಾಣಗಳು ಲಾಭದಾಯಕವಾಗಿರಲಿವೆ. ರವಿಯ ಪ್ರಭಾವದಿಂದ ಕೀರ್ತಿ ವೃದ್ಧಿಸಲಿದೆ. ಆಧ್ಯಾತ್ಮಿಕ ಚಿಂತನೆಗಳು ನಿಮ್ಮನ್ನು ಸನ್ಮಾರ್ಗದತ್ತ ಮುನ್ನಡೆಸಲಿದ್ದು, ಸಮಾಜದಲ್ಲಿ ಗೌರವ ಹೆಚ್ಚಾಗಲಿದೆ.

ಇದನ್ನೂ ಓದಿ: ಹಿಂದೂ ಸಂಪ್ರದಾಯದ ಪ್ರಕಾರ ಹುಟ್ಟು ಹಬ್ಬವನ್ನ ಹೇಗೆ ಆಚರಿಸಬೇಕು ಗೊತ್ತಾ?

ಮೀನ ರಾಶಿ

​ಆರ್ಥಿಕವಾಗಿ ಧನಲಾಭ ಮತ್ತು ಕುಟುಂಬದಲ್ಲಿ ಶುಭ ಕಾರ್ಯಗಳು ಜರುಗಲಿವೆ. ಮಾತಿನಲ್ಲಿ ಚತುರತೆ ಮೂಡಲಿದ್ದು, ಬುದ್ಧಿವಂತಿಕೆಯಿಂದ ಕಾರ್ಯಸಿದ್ಧಿಯಾಗಲಿದೆ. ರವಿ ಮತ್ತು ಕುಜನ ಪ್ರಭಾವದಿಂದ ಆಸ್ತಿ ವಿವಾದಗಳು ಬಗೆಹರಿಯಲಿವೆ. ಕಣ್ಣಿನ ಆರೋಗ್ಯದ ಬಗ್ಗೆ ಎಚ್ಚರವಿರಲಿ. ದೈವಿಕ ಅನುಗ್ರಹದಿಂದ ಸರ್ವ ಅಡೆತಡೆಗಳು ದೂರಾಗಿ ಯಶಸ್ಸು ಸಿಗಲಿದೆ.

– ಲೋಹಿತ್ ಹೆಬ್ಬಾರ್

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಒಂದು ಭೇಟಿ, ಹತ್ತಾರು ಬೇಡಿಕೆ: ಪ್ರಧಾನಿ ಮೋದಿ ಮುಂದೆ ಡಿಕೆಶಿ ಇಟ್ಟ ಬೇಡಿಕೆಗಳಾವುವು? ಇಲ್ಲಿದೆ ಪಟ್ಟಿ – Kannada News

ನವದೆಹಲಿ, (ಜೂನ್ 11): ದೆಹಲಿ (New Delhi)ಪ್ರವಾಸದಲ್ಲಿರುವ ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಇಂದು (ಜೂನ್ 11) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿ ಮಾಡಿದ್ದಾರೆ. ಮೊದಲ ನೀತಿ ಆಯೋಗದ ಸಭೆಯ ನಂತರ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಕರ್ನಾಟಕದ (Karnataka) ಸಾಂಸ್ಕೃತಿಕ ರಾಯಭಾರಿ ಬಸವಣ್ಣ ಅವರ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕದ ಅಭಿವೃದ್ಧಿಯ ಆದ್ಯತೆಗಳಾದ ಮೂಲಸೌಕರ್ಯ, ಹೂಡಿಕೆ, ನಗರ ಸಾರಿಗೆ, ನೀರಾವರಿ, ನಾವೀನ್ಯತೆ ಹಾಗೂ ಜನರ ಜೀವನದ ಮೇಲೆ ನೇರ ಪರಿಣಾಮ ಬೀರುವ ಕಲ್ಯಾಣ ಯೋಜನೆಗಳ ಕುರಿತು ಚರ್ಚಿಸಿದ್ದಾರೆ.

ಮುಖ್ಯಾಂಶಗಳು

  • ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
  • ಕರ್ನಾಟಕದ ಅಭಿವೃದ್ಧಿ ಕಾರ್ಯ, ಅನುದಾನ, ಯೋಜನೆಗಳ ಬಗ್ಗೆ ಚರ್ಚೆ
  • ಪ್ರಮುಖ ಯೋಜನೆಗಳಾದ ಮೇಕೆದಾಟು, ಕಳಸಬಂಡೂರಿ, ಭದ್ರಾ ಮೇಲ್ದಂಡೆ, ಕೃಷ್ಣ ಪ್ರಾಜೆಕ್ಟ್​​ಗಳ ಬಗ್ಗೆ ಮಾತುಕತೆ
  • ಇದೇ ವೇಳೆ ವಿವಿಧ ಕಾರ್ಯಗಳಿಗೆ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಿದ ಡಿಕಶಿ

ಮೇಕೆದಾಟು ವಿಚಾರ ಪ್ರಸ್ತಾಪಿಸಿದ ಡಿಕೆಶಿ

ಇನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ವೇಳೆ ಡಿಕೆ ಶಿವಕುಮಾರ್ ಅವರು ಪ್ರಮುಖವಾಗಿ ಮೇಕೆದಾಟು ವಿಚಾರ ಪ್ರಸ್ತಾಪ ಮಾಡಿದ್ದು, CWMA ಮತ್ತು CWC ಯೋಜನೆಯ ಬಗ್ಗೆ ನಿರ್ಧಾರ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈಗಾಗಲೇ ಯೋಜನೆ ಮೌಲ್ಯಮಾಪನ ಮಾಡಲು CWC ಗೆ CWMA ಕೇಳಿದೆ. CWC ಮೂಲಕ ಬೇಗ ಅನುಮತಿ ಕೊಡಿಸಿ ಎಂದು ಮನವಿ ಮಾಡಿದ್ದಾರೆ.

ಇದನ್ನೂ ನೋಡಿ: ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್, ಸರ್ಕಾರಕ್ಕೆ ಎಷ್ಟು ಉಳಿತಾಯ ಗೊತ್ತಾ?

ರಾಜ್ಯದ ಪ್ರಮುಖ ಯೋಜನೆಗಳ ಬಗ್ಗೆ ಚರ್ಚೆ

ಕೃಷ್ಣಾ ನ್ಯಾಯಾಧೀಕರಣದ ತೀರ್ಪು ಬಂದು ಒಂದು ದಶಕ ಕಳೆದಿದೆ. ಆದ್ರೆ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿಲ್ಲ. ಕೃಷ್ಣಾ ಯೋಜನೆಯ ಮೇಲೆ ರಾಜ್ಯ ಸರ್ಕಾರ ಬಹಳಷ್ಟು ಹಣ ಖರ್ಚು ಮಾಡಿದೆ. ನಮ್ಮ ಪಾಲಿನ ನೀರು ಬಳಸಿಕೊಳ್ಳಲು ಕೇಂದ್ರ ಸರ್ಕಾರ ಸಹಕಾರ ಕೊಡಬೇಕು. ಇನ್ನು ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ ಘೋಷಣೆ ಮಾಡಿದ ಹಣ ಬಿಡುಗಡೆ, ಕಳಸಾ ಬಂಡೂರಿ ಯೋಜನೆಗೆ ಬೇಗ ಅನುಮತಿ ಕೊಡಿ ಎಂದು ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ.

ವಿವಿಧ ಅನುದಾನ ಬಿಡುಗಡೆಗೆ ಮನವಿ

ಗ್ರಾಮಪಂಚಾಯತಿಗಳಿಗೆ 15 ನೇ ಹಣಕಾಸು ಆಯೋಗದ ಅನುದಾನ 2860 ಕೋಟಿ ರೂಪಾಯಿ ಬಿಡುಗಡೆ,
ಬೆಂಗಳೂರು ನಗರ ಅಭಿವೃದ್ಧಿಗೆ 26 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಎಂದು ಮನವಿ ಮಾಡಿದ್ದಾರೆ. ಇನ್ನು ಸರ್ಬಬನ್ ರೈಲ್ವೆ ಮತ್ತು ಬೆಂಗಳೂರು- ಮುಂಬೈ ಹೈಸ್ಪೀಡ್ ರೈಲು ಕಾರಿಡಾರ್ ಗೆ ಅನುದಾನ, ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ಅರಣ್ಯ ಇಲಾಖೆ ಅನುಮತಿ, ಕಲ್ಯಾಣ ಕರ್ನಾಟಕ ದ ಅಭಿವೃದ್ಧಿಗೆ 25 ಸಾವಿರ ಕೋಟಿ ಅನುದಾನ ಹಾಗೂ ರಾಯಚೂರಿಗೆ ಏಮ್ಸ್ ನೀಡಿಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ನಿರ್ಮಲಾ ಸೀತರಾಮನ್ ಮುಂದಿಟ್ಟ ಬೇಡಿಕೆಗಳೇನು?

ಇನ್ನು ಡಿಕೆ ಶಿವಕುಮಾರ್ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತರಾಮನ್ ಅವರನ್ನೂ ಸಹ ಭೇಟಿ ಮಾಡಿದ್ದು, 2023 ರಿಂದ ರಾಜ್ಯವೂ ಕೈಗೊಂಡ ಪ್ರಮುಖ ಆರ್ಥಿಕ ಸುಧಾರಣೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರವೂ 4250 ಕೋಟಿ ನಕಲಿ ವಹಿವಾಟು ಪತ್ತೆ ಹಚ್ಚಿದೆ. ಗುಣಮಟ್ಟದ ಮೂಲಸೌಕರ್ಯ ನಿರ್ಮಿಸಲು ದೀರ್ಘಾವಧಿಯ ಆರ್ಥಿಕ ಬೆಳವಣಿಗೆಗೆ ಬಂಡವಾಳ ಹೆಚ್ಚಿಸಿದೆ. 2025-26 ರಲ್ಲಿ ಹಿಂದಿನ ಹಣಕಾಸು ವರ್ಷಕ್ಕಿಂತ ಶೇಕಡಾ 14% ಬೆಳವಣಿಗೆ ಸಾಧಿಸಿದೆ. ಹೀಗಾಗಿ ಹೆಚ್ಚಿನ ಆರ್ಥಿಕ ಪೂರೈಸಲು ಕೇಂದ್ರ ಬೆಂಬಲಿಸಬೇಕು ಎಂದು ಮನವಿ ಮಾಡಿದ್ದಾರೆ.

ನಗರಗಳ ಮೂಲಸೌಕರ್ಯ ಅಭಿವೃದ್ಧಿ ,ನೀರಾವರಿ, ರಸ್ತೆಗಳ ಅಭಿವೃದ್ಧಿಗೆ ಐದು ಸಾವಿರ ಕೋಟಿ ರೂ. ನೀಡಬೇಕು. ಬ್ರಾಂಡ್ ಬೆಂಗಳೂರು ಮಾಸ್ಟರ್ ಪ್ಲಾನ್ ನನ್ನು ರಾಜ್ಯ ಸರ್ಕಾರ ಆರಂಭಿಸಿದೆ. ಇದಕ್ಕೆ ಯುಐಡಿಎಫ್ ಅಡಿಯಲ್ಲಿ ಐದು ಸಾವಿರ ಕೋಟಿ ಅನುದಾನ, ಗ್ರಾಮೀಣ ರಸ್ತೆಗಳು ಸೇತುವೆಗಳು ನೀರಾವರಿ ಯೋಜನೆ ಗಳಿಗೆ ಆರ್ ಐಡಿಎಫ್ ಅಡಿಯಲ್ಲಿ 2 ಸಾವಿರ ಕೋಟಿ ರೂ., ಗ್ರಾಮೀಣ ಮೂಲಸೌಕರ್ಯಕ್ಕೆ 2026-27 ಹಣಕಾಸು ವರ್ಷಕ್ಕೆ 3500 ಕೋಟಿ ರೂ. ಹಂಚಿಕೆ ಸೇರಿದಂತೆ ಮೋದಿ ಮುಂದಿಟ್ಟ ರಾಜ್ಯದ ಯೋಜನೆಗಳು, ಅನುದಾನಕ್ಕೆ ಬೇಡಿಕೆ ಇಟ್ಟಿದ್ದಾರೆ.

ಒಟ್ಟಿನಲ್ಲಿ ಸಿಎಂ  ಆಗುತ್ತಿದ್ದಂತೆಯೇ ಡಿಕೆ ಶಿವಕುಮಾರ್ ಫುಲ್ ಆ್ಯಕ್ಟಿವ್ ಆಗಿದ್ದು, ದೆಹಲಿ ಪ್ರವಾಸದ ವೇಳೆ ಪ್ರಧಾನಿ ಮೋದಿ ಸೇರಿದಂತೆ  ವಿವಿಧ ಖಾತೆಯ ಕೇಂದ್ರ  ಸಚಿವರನ್ನ ಭೇಟಿ ಮಾಡುತ್ತಿದ್ದು, ರಾಜ್ಯದ ಅಭಿವೃದ್ಧಿ, ಯೋಜನೆ, ಅನುದಾನದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 9:18 pm, Thu, 11 June 26

Source link

‘ಮಹಾನ್ ಕಿಲಾಡಿ’ ರಿಯಾಲಿಟಿ ಶೋ ಆರಂಭಿಸಿದ ಮಿಂಚು: ಏನಿದರ ವಿಶೇಷ? – Kannada News

ಒಂದಷ್ಟು ತಿಂಗಳ ಹಿಂದೆ ನಟಿ ಮಿಂಚು (Minchu) ಅವರು ವಿವಾದದ ಮೂಲಕ ಸುದ್ದಿ ಆಗಿದ್ದರು. ಆದರೆ ಈಗ ಅವರು ಆ ಘಟನೆಗಳಿಂದ ಹೊರಬಂದಿದ್ದಾರೆ. ಸಂಪೂರ್ಣ ಒಳ್ಳೆಯ ಕಾರಣಕ್ಕೆ ಅವರೀಗ ಮಾಧ್ಯಮಗಳ ಮುಂದೆ ಬಂದಿದ್ದಾರೆ. ಈ ಮೊದಲು ರಿಯಾಲಿಟಿ ಶೋಗಳ (Reality Show) ಮೂಲಕವೇ ಮಿಂಚು ಅವರು ಗುರುತಿಸಿಕೊಂಡಿದ್ದರು. ಈಗ ಅವರು ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲು ಮುಂದಾಗಿದ್ದಾರೆ. ಅದಕ್ಕಾಗಿ ತಾವೇ ಸ್ವತಃ ಒಂದು ಹೊಸ ರಿಯಾಲಿಟಿ ಶೋ ಆರಂಭಿಸುತ್ತಿದ್ದಾರೆ. ಆ ಕಾರ್ಯಕ್ರಮಕ್ಕೆ ‘ಮಹಾನ್ ಕಿಲಾಡಿ’ (Mahan Khiladi) ಎಂದು ಟೈಟಲ್ ಇಡಲಾಗಿದೆ. ಆ ಬಗ್ಗೆ ಮಾಹಿತಿ ನೀಡಲು ಇತ್ತೀಚೆಗೆ ಸುದ್ದಿಗೋಷ್ಠಿ ಕರೆಯಲಾಗಿತ್ತು.

‘ಮಿಂಚು ಎಂಟರ್‌ಟೈನ್​ಮೆಂಟ್ಸ್ ಯೂಟ್ಯೂಬ್’ ಮೂಲಕ ‘ಮಹಾನ್ ಕಿಲಾಡಿ’ ಶೋ ಪ್ರಸಾರವಾಗಲಿದೆ. ಪ್ರಚಾರದ ಮೊದಲ ಹಂತವಾಗಿ ಪೋಸ್ಟರ್, ಟೈಟಲ್ ಸಾಂಗ್ ಹಾಗೂ ಟ್ರೇಲರ್ ಅನಾವರಣ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸದಸ್ಯ ಟಿ. ಶರವಣ, ಉದ್ಯಮಿ ಡಾ. ಎನ್. ನರಸಿಂಹಮೂರ್ತಿ, ಶ್ರೀಕಾಂತ್, ಡಾ. ಮೋಕ್ಷಗುಂಡಂ ಗುರೂಜಿ, ಭಾರ್ಗವ ಅವರು ಸಾಕ್ಷಿಯಾದರು. ಈ ವೇಳೆ ಮಾತಾಡಿದ ಶರವಣ ಅವರು, ‘ಕಲಾವಿದರಿಗೆ ಮೊದಲಿನಿಂದಲೂ ಸಹಕಾರ ನೀಡುತ್ತಾ ಬಂದಿದ್ದೇನೆ. ಇಂಥವರು ಮುನ್ನೆಲೆಗೆ ಬರಬೇಕು. ನಿಮಗೆ ಸರ್ಕಾರದಿಂದಲೂ ಅನುದಾನ ಬರಲು ಶಿಪಾರಸ್ಸು ಮಾಡುತ್ತೇನೆ’ ಎಂದು ಭರವಸೆ ನೀಡಿದರು.

ರಿಯಾಲಿಟಿ ಶೋ ಬಗ್ಗೆ ಮಿಂಚು ಅವರು ಮಾಹಿತಿ ಹಂಚಿಕೊಂಡರು. ‘ಒಂದಷ್ಟು ವಿಷಯಗಳಿಂದ ಅವಕಾಶಗಳು ಇಲ್ಲದೆ ಇರುವಾಗ ಹೊಸತನದೊಂದಿಗೆ ನನ್ನ ಅವಕಾಶವನ್ನು ನಾನೇ ರೂಪಿಸಿಕೊಳ್ಳಬೇಕು. ನಾನು ಕಲಿತದ್ದನ್ನು ಬೇರೆಯವರಿಗೆ ಹೇಳಿಕೊಡಬೇಕು ಎಂಬ ಕಲ್ಪನೆಯನ್ನು ಗೆಳಯ ಪ್ರವೀಣ್ ಗಸ್ತಿಗೆ ಹೇಳಿದಾಗ, ಆತ ಬೆನ್ನಲುಬಾಗಿ ನಿಂತುಕೊಂಡಿದ್ದರಿಂದ ಇಲ್ಲಿಯವರೆಗೂ ಬರಲು ಸಾಧ್ಯವಾಯಿತು’ ಎಂದು ಅವರು ಹೇಳಿದರು.

‘ಸಣ್ಣ ಬಜೆಟ್‌ನೊಂದಿಗೆ ಆರಂಭಿಸಿ, ಮುಂದೆ ದೊಡ್ಡದಾಗಿ ಬೆಳೆಯುತ್ತಾ ಹೋಯಿತು. ಅಕ್ಷರ ಸ್ಟುಡಿಯೋದ ಗೌರಿಪ್ರಸಾದ್ ಚಿತ್ರೀಕರಿಸಲು ಅನುವು ಮಾಡಿಕೊಟ್ಟರು. ಸಾಮಾಜಿಕ ಜಾಲತಾಣದಲ್ಲಿ ಜಾಹಿರಾತು ಕೊಟ್ಟಾಗ ಕರ್ನಾಟಕದಾದ್ಯಂತ ಸಾವಿರಕ್ಕೂ ಹೆಚ್ಚು ಆಕಾಂಕ್ಷಿಗಳು ಬಂದರು. ಇದರಲ್ಲಿ 3 ಸಲ ಆಡಿಷನ್ ಮಾಡಿ, ಅಂತಿಮವಾಗಿ 22 ಪ್ರತಿಭೆಗಳು ಆಯ್ಕೆಯಾಗಿದ್ದಾರೆ. ಅವರಿಗೆಲ್ಲ 7 ವಾರಗಳ ತರಬೇತಿ ನೀಡಲಾಗಿದೆ’ ಎಂದಿದ್ದಾರೆ ಮಿಂಚು.

ಇದನ್ನೂ ಓದಿ: ಹೊಸ ರಿಯಾಲಿಟಿ ಶೋಗೆ ಜಡ್ಜ್​ ಆಗಿ ಬಂದ ಮೇಘನಾ ರಾಜ್

ಕಿರಣ್‌ಕುಮಾರ್ ಅವರು ಈ ರಿಯಾಲಿಟಿ ಶೋ ನಿರ್ದೇಶನ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ದಿಲೀಪ್ ಕುಮಾರ್ ಹೆಚ್.ಆರ್. ಅವರು ಕ್ರಿಯೇಟೀವ್ ಹೆಡ್ ಆಗಿ ಕೆಲಸ ಮಾಡುತ್ತಿದ್ದಾರೆ. ಪುಟ್ಟರಾಜು ಡಿಜಿಟಲ್ ಪ್ರಮೋಟರ್ ಆಗಿದ್ದಾರೆ. ಚಿದಂಬರ ಪೂಜಾರಿ ಮೆಂಟರ್ ಆಗಿದ್ದು, ಪಲ್ಲವಿ ಸ್ಕ್ರಿಪ್ಟ್ ರೈಟರ್ ಆಗಿರುತ್ತಾರೆ. ಮಿಂಚು, ಮಹೇಶ್ ಕೃಷ್ಣ, ಪ್ರವೀಣ್ ಗಸ್ತಿ ತೀರ್ಪುಗಾರರಾಗಿರುತ್ತಾರೆ ಎಂಬ ಮಾಹಿತಿಯನ್ನು ಸುದ್ದಿಗೋಷ್ಠಿಯಲ್ಲಿ ನೀಡಲಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IND vs AFG: ಏಕದಿನ ಪಂದ್ಯದಲ್ಲಿ ‘ಅತ್ಯಂತ ಹಿರಿಯ’ ದಾಖಲೆ ಬರೆಯಲಿದ್ದಾರೆ ರೋಹಿತ್ ಶರ್ಮಾ

Source link

ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ – Kannada News

ಬೆಂಗಳೂರು, ಜೂ.11: ಗೊರಗುಂಟೆಪಾಳ್ಯದ ಟಿಎಂಟಿ ಜಂಕ್ಷನ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಗರಬಾವಿ ನಿವಾಸಿಗಳಾದ ದಂಪತಿ ಶಬ್ರಾಜ್ (28) ಮತ್ತು ಶಬ್ರೀನ್ (24) ಸಾವನ್ನಪ್ಪಿದ್ದಾರೆ. ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಿಗ್ಗೆ 11:50ರ ಸುಮಾರಿಗೆ ಗ್ಯಾಸ್ ತುಂಬಿದ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಈ ಅಪಘಾತ ಸಂಭವಿಸಿದೆ. ದಂಪತಿ ಗೊರಗುಂಟೆಪಾಳ್ಯ ಸಿಗ್ನಲ್ ದಾಟಿ ಯಶವಂತಪುರ ಕಡೆಗೆ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಗ್ಯಾಸ್ ಲಾರಿ ಚಾಲಕ ಬೊಮ್ಮರಾಜೇಗೌಡ (60) ತನಗೆ ಬ್ರೇಕ್ ಹಿಡಿಯಲಿಲ್ಲ ಎಂದು ಪೊಲೀಸರ ಪ್ರಾಥಮಿಕ ವಿಚಾರಣೆಯಲ್ಲಿ ತಿಳಿಸಿದ್ದಾನೆ. ಇನ್ನೊಂದು ವಾಹನವನ್ನು ತಪ್ಪಿಸಲು ಪ್ರಯತ್ನಿಸುವಾಗ ನಿಯಂತ್ರಣ ಕಳೆದುಕೊಂಡು ದಂಪತಿ ಸಾಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ ಎಂದು ಹೇಳಲಾಗಿದೆ. ಅಪಘಾತದಲ್ಲಿ ದಂಪತಿ ಲಾರಿ ಚಕ್ರಗಳ ಅಡಿಗೆ ಸಿಲುಕಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆ ನಡೆದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಸಂಬಂಧ ಯಶವಂತಪುರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಈ ಬಗ್ಗೆ ಡಿಸಿಪಿ ಅವರು ಹೇಳಿಕೆ ನೀಡಿದ್ದಾರೆ. ಚಾಲಕ ಮದ್ಯಪಾನ ಮಾಡಿದ್ದನೇ ಎಂಬ ಪ್ರಶ್ನೆಗೆ, ಪೊಲೀಸರು ಕೇವಲ ವಾಸನೆ ಆಧಾರದ ಮೇಲೆ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. ಈ ಬಗ್ಗೆ ನಿಖರ ಮಾಹಿತಿ ಪಡೆಯಲು ವೈದ್ಯಕೀಯ ಪರೀಕ್ಷೆಗಾಗಿ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ. ಯಶವಂತಪುರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಲಾರಿ ಚಾಲಕ ಬೊಮ್ಮರಾಜೇಗೌಡನನ್ನು ಬಂಧಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link