Headlines

nagaraj11081993

ಈ ಕನ್ನಡದ ನಟನಿಗೆ ಸಿಕ್ಕಿತ್ತು ‘ಟಾಕ್ಸಿಕ್’ನಲ್ಲಿ ನಟಿಸುವ ಅವಕಾಶ: ನಿರಾಕರಿಸಿದ್ದೇಕೆ? – Kannada News | Gulshan Devaiah was offered character in Toxic movie but he rejected it

ಯಶ್ (Yash) ನಟಿಸಿರುವ ‘ಟಾಕ್ಸಿಕ್’ ಸಿನಿಮಾ ಭಾರತದ ಅತಿ ಹೆಚ್ಚು ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಸಿನಿಮಾವನ್ನು ಹಾಲಿವುಡ್​ ಗುಣಮಟ್ಟದಲ್ಲಿ ನಿರ್ಮಾಣ ಮಾಡಲಾಗಿದ್ದು, ಇಂದು (ಜನವರಿ 08) ಬಿಡುಗಡೆ ಆಗಿರುವ ಟೀಸರ್​​ನಿಂದ ಇದು ಖಾತ್ರಿ ಆಗುತ್ತಿದೆ. ‘ಟಾಕ್ಸಿಕ್’ ಸಿನಿಮಾನಲ್ಲಿ ಖ್ಯಾತ ನಟ-ನಟಿಯರ ದಂಡೇ ಇದೆ. ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ರುಕ್ಮಿಣಿ ವಸಂತ್ ಅವರುಗಳು ಜೊತೆಗೆ ಕೆಲವು ಹಾಲಿವುಡ್, ಬಾಲಿವುಡ್​​ನ ಜನಪ್ರಿಯ ನಟ-ನಟಿಯರು ಸಹ ಇದ್ದಾರೆ. ಈ ಸಿನಿಮಾನಲ್ಲಿ ನಟಿಸುವ ಅವಕಾಶ ಕರ್ನಾಟಕ ಮೂಲದ ನಟರೊಬ್ಬರಿಗೆ ಸಿಕ್ಕಿತ್ತು…

Read More

Pakistan: ಲಕ್ಷ ರೂ ಸಂಬಳ ಪಡೆಯುತ್ತಿರುವ ಪಾಕಿಸ್ತಾನೀಯರ ಸಂಖ್ಯೆ ಎಷ್ಟು ಗೊತ್ತಾ? – Kannada News | Very few Pakistanis getting monthly salary of over Rs 1 lakh, here what income tax data says

ನವದೆಹಲಿ, ಜನವರಿ 8: ಪಾಕಿಸ್ತಾನದಲ್ಲಿ (Pakistan) ಆದಾಯ ತೆರಿಗೆ ಪಾವತಿದಾರರ ಸಂಖ್ಯೆ ಬಹಳ ಕಡಿಮೆ ಇದೆ. ಒಂದು ಅಂದಾಜು ಪ್ರಕಾರ ಅಲ್ಲಿ ನೊಂದಾಯಿತ ತೆರಿಗೆ ಪಾವತಿದಾರರ ಸಂಖ್ಯೆ ಸುಮಾರು 60 ಲಕ್ಷ ಆಸುಪಾಸು ಇರಬಹುದು. ಅದರಲ್ಲಿ ಅಧಿಕ ಆದಾಯ ತೋರಿಸಿರುವವರ ಸಂಖ್ಯೆ ಬಹಳ ಕಡಿಮೆ. ಭಾರತೀಯ ರುಪಾಯಿ ಲೆಕ್ಕದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಾಸಿಕ ಆದಾಯ ಹೊಂದಿರುವ ಪಾಕಿಸ್ತಾನೀಯರ ಸಂಖ್ಯೆ 4 ಲಕ್ಷದಿಂದ 10 ಲಕ್ಷದಷ್ಟಿರಬಹುದು ಎನ್ನಲಾಗಿದೆ. ಪಾಕಿಸ್ತಾನದಲ್ಲಿ ಸರಾಸರಿ ಸಂಬಳ 39,000 ಪಿಕೆಆರ್ ಇದೆ. ಭಾರತೀಯ…

Read More

ಭಾರತ ನಮ್ಮನ್ನು ಅವಮಾನಿಸಿದೆ… ನಾವು ಶ್ರೀಲಂಕಾದಲ್ಲಿ ಆಡ್ತೀವಿ..!

2026ರ ಟಿ20 ವಿಶ್ವಕಪ್​ನಲ್ಲಿ ಬಾಂಗ್ಲಾದೇಶ್ ತಂಡ ಕಣಕ್ಕಿಳಿಯುವುದೆಲ್ಲಿ? ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಸದ್ಯಕ್ಕಂತು ಉತ್ತರ ಸಿಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಏಕೆಂದರೆ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲು ಬಾಂಗ್ಲಾದೇಶ್ ಹಿಂದೇಟು ಹಾಕಿದೆ. ಬದಲಾಗಿ ನಮ್ಮ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಯೋಜಿಸುವಂತೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ಮನವಿ ಮಾಡಿದೆ. ಈ ಮನವಿಯನ್ನು ಐಸಿಸಿ ತಿರಸ್ಕರಿಸಿದೆ. ಇದಾಗ್ಯೂ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ತನ್ನ ನಿಲುವು ಬದಲಿಸಿಲ್ಲ. ಕೆಲ ದಿನಗಳ ಹಿಂದೆಯಷ್ಟೇ ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಬಾಂಗ್ಲಾದೇಶ್ ವೇಗಿ ಮುಸ್ತಫಿಝುರ್ ರೆಹಮಾನ್…

Read More

ಕೋಗಿಲು ಅಕ್ರಮ ವಾಸಿಗಳಿಗೆ ಜಮೀರ್ ಗುಡ್ ನ್ಯೂಸ್: ಮೊದಲ ಹಂತದಲ್ಲಿ 26 ಮನೆ ಹಂಚಿಕೆಗೆ ಸಿದ್ಧತೆ – Kannada News | Good News for Kogilu Evictees as Minister Zameer Ahmed says govt Prepares to Allot 26 Houses in First Phase

ಕೋಗಿಲು ಅಕ್ರಮ ವಾಸಿಗಳಿಗೆ ಜಮೀರ್ ಗುಡ್ ನ್ಯೂಸ್ ಬೆಂಗಳೂರು, ಜನವರಿ 8: ಕೋಗಿಲು ಲೇಔಟ್ (Kogilu Layout) ಅಕ್ರಮವಾಸಿಗಳಿಗೆ ಮನೆ ಭಾಗ್ಯ ಸಿಗುವ ಕಾಲ ಸನ್ನಿಹಿತವಾಗುತ್ತಿದೆ. ಬಿಜೆಪಿ ನಾಯಕರ ವಿರೋಧದ ನಡುವೆಯೂ ಸರ್ಕಾರ ಅಕ್ರಮವಾಸಿಗಳಿಗೆ ಮನೆ ಹಂಚಲು ನಿರ್ಧರಿಸಿದೆ. ಇಂದೇ 26 ಮನೆಗಳ ಹಂಚಿಕೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಸುಳಿವು ನೀಡಿರುವ ವಸತಿ ಸಚಿವ ಜಮೀರ್ ಅಹ್ಮದ್ (Zameer Ahmed), 26 ಮನೆಗಳನ್ನು ಕೊಡಬಹುದು. ಉಳಿದ ಅರ್ಜಿಗಳ ಪರಿಶೀಲನೆಯಾಗುತ್ತಿದೆ ಎಂದಿದ್ದಾರೆ. ಹಾಗೆಯೇ ಅರ್ಜಿ ಹಾಕಿದ ಎಲ್ಲರಿಗೂ…

Read More

‘ಟಾಕ್ಸಿಕ್’ ಟೀಸರ್​ನ ಆ​ ಡೈಲಾಗ್​​ನಲ್ಲೇ ಅಡಗಿದೆ ಚಿತ್ರದ ಕಥೆ – Kannada News | Toxic Movie Teaser: Yash’s Daddy’s Home Dialogue and Hollywood Meaning

‘ಟಾಕ್ಸಿಕ್’ ಚಿತ್ರದ ಟೀಸರ್ ಬಗ್ಗೆ ಎಲ್ಲೆಡೆ ಚರ್ಚೆ ಆಗುತ್ತಿದೆ. ಈ ಚಿತ್ರದ ಮೇಕಿಂಗ್ ಹೇಗಿರಲಿದೆ ಎಂಬ ಸಣ್ಣ ಝಲಕ್ ಟೀಸರ್​​ನಲ್ಲಿ ತೋರಿಸಲಾಗಿದೆ. ಸಿನಿಮಾದಲ್ಲಿ ಬರೋ ಬೋಲ್ಡ್ ದೃಶ್ಯಗಳನ್ನು ನೋಡಿದರೆ ಇದೊಂದು ‘ಎ’ ಪ್ರಮಾಣಪತ್ರ ಪಡೆಯಲಿರುವ ಚಿತ್ರ ಎಂಬುದು ಅಭಿಮಾನಿಗಳಿಗೆ ಸ್ಪಷ್ಟವಾಗುತ್ತಿದೆ. ಹೀಗಿರುವಾಗೇ ‘ಟಾಕ್ಸಿಕ್’ ಸಿನಿಮಾದ ಟೀಸರ್​​ನಲ್ಲಿ ಬರೋ ಕೊನೆಯ ಡೈಲಾಗ್ ಗಮನ ಸೆಳೆಯುವ ರೀತಿಯಲ್ಲಿದೆ. ಇಡೀ ಚಿತ್ರ ಕಥೆ ಇದರಲ್ಲೇ ಅಡಿಗೆ ಎನ್ನಲಾಗಿದೆ. ‘ಟಾಕ್ಸಿಕ್’ ಚಿತ್ರದ ಓಪನಿಂಗ್ ದೃಶ್ಯ ಆರಂಭ ಆಗೋದು ಸ್ಮಶಾನದ ಮೂಲಕ. ಹೆಣ ಹೂಳುವ…

Read More

ಹೊಸ ಹಾಲಿವುಡ್ ಸಿನಿಮಾನಲ್ಲಿ ಪ್ರಿಯಾಂಕಾ ಚೋಪ್ರಾ, ಪೋಸ್ಟರ್ ನೋಡಿ – Kannada News | Priyanka Chopra’s poster from Hollywood movie The Bluff released

ಪ್ರಿಯಾಂಕಾ ಚೋಪ್ರಾ (Priyanka Chopra) ಭಾರತದ ನಟಿಯಾದರೂ ಮಿಂಚುತ್ತಿರುವುದು ಹಾಲಿವುಡ್​​ನಲ್ಲಿ. 2017 ರಲ್ಲಿ ಹಾಲಿವುಡ್​​ಗೆ ಎಂಟ್ರಿ ಕೊಟ್ಟ ಪ್ರಿಯಾಂಕಾ ಆರಂಭದಲ್ಲಿ ಅಷ್ಟೇನೂ ಪ್ರಾಮುಖ್ಯತೆ ಇಲ್ಲದ ಕೆಲವು ಪಾತ್ರಗಳಲ್ಲಿ ನಟಿಸಿದರಾದರೂ ವರ್ಷಗಳು ಕಳೆದಂತೆ ತಮ್ಮನ್ನು ತಾವು ಹಾಲಿವುಡ್​​ನಲ್ಲಿ ಗಟ್ಟಿಯಾಗಿ ನೆಲೆಗೊಳಿಸಿಕೊಂಡಿದ್ದಾರೆ. ಇತ್ತೀಚೆಗಿನ ವರ್ಷಗಳಲ್ಲಿ ಪ್ರಿಯಾಂಕಾ ಚೋಪ್ರಾ ಅವರಿಗೆ ಪ್ರಮುಖ ನಾಯಕಿಯ ಪಾತ್ರಗಳು ಅದರಲ್ಲೂ ಆಕ್ಷನ್ ನಾಯಕಿಯ ಪಾತ್ರಗಳೇ ಹೆಚ್ಚಾಗಿ ಸಿಗುತ್ತಿವೆ. ಸಿನಿಮಾಗಳು ಯಶಸ್ವಿಯೂ ಆಗುತ್ತಿವೆ. ಇದೀಗ ಪ್ರಿಯಾಂಕಾ ಮುಖ್ಯ ಪಾತ್ರದಲ್ಲಿ ನಟಿಸಿರುವ ಮತ್ತೊಂದು ಆಕ್ಷನ್ ಸಿನಿಮಾ ಬಿಡುಗಡೆಗೆ ರೆಡಿಯಾಗಿದ್ದು,…

Read More

ಶಾಮನೂರು ಶಿವಶಂಕರಪ್ಪ ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ? – Kannada News | Davangere South Bye Election: Minister Zameer Ahmed Demands Congress Ticket for Muslims

ದಾವಣಗೆರೆ, ಜನವರಿ 08: ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರೋ ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆ ಕುರಿತು ಸಚಿವ ಜಮೀರ್ ಅಹ್ಮದ್ ಖಾನ್ ಮಹತ್ವದ ಹೇಳಿಕೆ ನೀಡಿದ್ದಾರೆ. ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯ ಮುಸ್ಲಿಂ ಮತದಾರರಿದ್ದು, ಈ ಉಪಚುನಾವಣೆ ಸಂದರ್ಭದಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ನೀಡುವ ಕುರಿತು ಚರ್ಚೆ ನಡೆದಿದೆ. ಶಾಮನೂರು ಶಿವಶಂಕರಪ್ಪ ಅವರು ಹಿಂದಿನ ಚುನಾವಣೆಯ ಸಂದರ್ಭದಲ್ಲಿ ತಾವು 2023ರ ಚುನಾವಣೆಯನ್ನು ತಮ್ಮ ಕೊನೆಯ ಚುನಾವಣೆ ಎಂದು ಘೋಷಿಸಿದ್ದರು. ಮುಂದಿನ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಸಮುದಾಯದವರಿಗೆ…

Read More

Weekly Love Horoscope: ಈ ವಾರ ಈ ರಾಶಿಯವರಿಗೆ ಪ್ರೀತಿಯಲ್ಲಿ ಗಾಢ ಭಾವನೆ ಮತ್ತು ಆತ್ಮೀಯತೆ ಹೆಚ್ಚಾಗಲಿದೆ – Kannada News | Weekly Love Horoscope: Jan 11 17 Zodiac Predictions for Stronger Relationships

ಜನವರಿ 11ರಿಂದ ಜನವರಿ 17ರ ವರೆಗೆ ಪ್ರೇಮವು ವಿವಿಧ ಆಯಾಮಗಳಲ್ಲಿ ವಿಸ್ತರಿಸಬಹುದು. ಆದರೆ ಅವರವರ ಮೇಲೆ ನಿಯಂತ್ರಣದ ಮೇಲೆ ಅದರ ವ್ಯಾಪಕತೆ, ಗುಣಮಟ್ಟದ ನಿರ್ಧಾರವಾಗಲಿದೆ. ಯಾವುದೇ ಆದರು ಮಿತಿಯನ್ನು ಮೀರದಂತೆ ನೋಡಿಕೊಳ್ಳಿ. ಈ ವಾರ ಅನುರಾಗವು ಸರಿಯಾದ ಲಯದಲ್ಲಿ ಇರಲಿ. ಮೇಷ ರಾಶಿ: ಈ ವಾರ ನಿಮ್ಮ ಆತ್ಮವಿಶ್ವಾಸ ಪ್ರೀತಿ ಜೀವನಕ್ಕೆ ಬೆಳಕು ತರುವುದು. ಬಹಳ ಸೆರೆಹರಿಸುವ ಬಗೆಗೆ ಅಲ್ಲ, ಆದರೆ ಗಂಭೀರ ಮಾತೃಕೆಯ ಸಂವಾದಗಳು ಸಂಬಂಧವನ್ನು ಗಟ್ಟಿಗೊಳಿಸಬಹುದು. ಹೊಸ ಸಂಪರ್ಕಗಳು ಸಹ ಸ್ಥಿರವಾಗಿ ಪ್ರಗತಿಯಾಗಬಹುದು. ವೃಷಭ…

Read More

ಗದಗ: ಬಸ್​​ಗಳಿಗೆ ಕ್ಲಚ್ ಇಲ್ಲ, ಬ್ರೇಕ್ ಇಲ್ಲ, ಕಂಡೀಷನ್ ಇಲ್ಲ: ಪ್ರಯಾಣಿಕರ ಜೀವಕ್ಕೆ ದೇವರೇ ಗತಿ – Kannada News | Gadags Dangerous Government Buses: A Deep Dive into Their Unsafe Condition.

ಗದಗ , ಜ.8: ಟಿವಿ9 ಕನ್ನಡ ಮಾಡುತ್ತಿರುವ ಡಕೋಟಾ ಬಸ್ ರಿಯಾಲಿಟಿ ಚೆಕ್ ಅಭಿಯಾನದಲ್ಲಿ ಇದೀಗ ಗದಗ ಜಿಲ್ಲೆಯ ಬಸ್​​ಗಳ ದುಸ್ಥಿತಿ ಬಯಲಾಗಿದೆ. ಗದಗ ನಗರದ ಬಸ್ ನಿಲ್ದಾಣದಲ್ಲಿ ಗದಗ-ಹುಲಕೋಟಿ ಮತ್ತು ಹೊಸಳ್ಳಿಗೆ ಸಂಚರಿಸುವ ಬಸ್ಸುಗಳ ಸ್ಥಿತಿಗತಿ ಆತಂಕಕಾರಿಯಾಗಿದೆ. ಬಸ್​​ಗಳ ಪ್ರಮುಖ ಭಾಗಗಳಾದ ಶಾಕ್ ಅಬ್ಸಾರ್ಬರ್‌ಗಳು ಸಂಪೂರ್ಣವಾಗಿ ಕಿತ್ತು ಹೋಗಿದೆ. ಬಲೂನ್ ರೀತಿಯ ಶಾಕ್ ಅಬ್ಸಾರ್ಬರ್​​ಗಳಿಗೆ ಸಪೋರ್ಟ್ ಆಗಿ ಇರಬೇಕಾದ ಭಾಗಗಳು ಹೊರಬಂದಿವೆ. ಹಿಂಭಾಗದ ಶಾಕ್ ಅಬ್ಸಾರ್ಬರ್‌ಗಳೂ ಕೂಡ ಇದೇ ಸ್ಥಿತಿಯಲ್ಲಿದ್ದು, ಅವುಗಳಿಗೆ ಇರಬೇಕಾದ ಬೆಂಬಲ ಕಳೆದುಹೋಗಿದೆ….

Read More

ಕಬ್ಬಿನ ಗದ್ದೆಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಅರೆ ನಗ್ನ ದೇಹ ಪತ್ತೆ – Kannada News | Uttar Pradesh Burnt Woman’s Body Found In Hapur Sugarcane Field

ಹಾಪುರ್, ಜನವರಿ 08: ಕಬ್ಬಿನ ಗದ್ದೆಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಅರೆ ಬೆತ್ತಲೆ ದೇಹ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶ(Uttar Pradesh)ದ ಹಾಪುರ್ ಜಿಲ್ಲೆಯ ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದಲ್ಲಿ ನಡೆದಿದೆ. ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ ಮಹಿಳೆಯ  ದೇಹ ಪತ್ತೆಯಾಗಿದೆ. ಮಹಿಳೆಯ ಮುಖ ಸುಟ್ಟು ಕರಕಲಾಗಿದ್ದು, ಗುರುತು ಪತ್ತೆ ಹಚ್ಚುವುದು ಅಸಾಧ್ಯವಾಗಿತ್ತು. ಗ್ರಾಮಸ್ಥರ ಪ್ರಕಾರ, ಶವ ಗಬ್ಬಿನ ಗದ್ದೆಯಲ್ಲಿ ಪತ್ತೆಯಾಗಿತ್ತು, ನಂತರ ಪೊಲೀಸರಿಗೆ ಮಾಹಿತಿ ನೀಡಲಾಯಿತು….

Read More