ಕೋಟಾ, ಜನವರಿ 06: ಕಳ್ಳರು ಎಲ್ಲವನ್ನು ದರೋಡೆ ಮಾಡಿ ಓಡಿ ಹೋದ ಬಳಿಕ ಸಿಕ್ಕಿಬಿದ್ದಿರುವ ನಿದರ್ಶನಗಳಿವೆ, ಆದರೆ ಮನೆಯಲ್ಲಿ ಯಾರೂ ಇಲ್ಲದಿದ್ದರೂ ಕಳ್ಳ ಮನೆಯೊಳಗೆ ಸಿಕ್ಕಿಬಿದ್ದಿದ್ಹೇಗೆ ಎನ್ನುವ ಇಂಟರೆಸ್ಟಿಂಗ್ ಸುದ್ದಿ ಇಲ್ಲಿದೆ. ಈ ಘಟನೆ ರಾಜಸ್ಥಾನದ ಕೋಟಾದಲ್ಲಿ ಜನವರಿ 5 ರಂದು ನಡೆದಿದೆ. ಮನೆಮಂದಿಯಲ್ಲಾ ತೀರ್ಥಯಾತ್ರೆಗೆ ಹೋಗಿದ್ದರು. ಕಳ್ಳನೊಬ್ಬ ಅಡುಗೆ ಮನೆಯ ಎಕ್ಸಾಸ್ಟ್ ಒಡೆದು ಅದರಿಂದ ಮನೆಯೊಳಗೆ ಪ್ರವೇಶಿಸಲು ಹೋಗಿ ಸಿಕ್ಕಿಬಿದ್ದ ಘಟನೆ ನಡೆದಿದೆ.
ಆ ದರೋಡೆಕೋರ ಆ ಎಕ್ಸಾಸ್ಟ್ ದ್ವಾರದಲ್ಲಿ ಸಿಲುಕಿ ನರಳಿದ್ದಾನೆ. ಮಾಲೀಕ ಬರುವವರೆಗೂ ಆತ ಅದರಲ್ಲೇ ಸಿಲುಕಿದ್ದು, ದೃಶ್ಯ ಬೆಚ್ಚಿಬಿಳಿಸುವಂತಿದೆ. ಅವನ ಅರ್ಧ ದೇಹವು ಹೊರಗಿದ್ದ ಇನ್ನರ್ಧ ದೇಹ ಒಳಗಿತ್ತು. ಬಳಿಕ ತಪ್ಪಾಯಿತೆಂದು ಮನೆ ಮಾಲೀಕನ ಬಳಿ ಬೇಡಿಕೊಂಡಿದ್ದಾನೆ. ಕೋಟಾದ ಪ್ರತಾಪ್ ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮನೆ ಮಾಲೀಕ ಸುಭಾಷ್ ಕುಮಾರ್ ರಾವತ್ ಎಂದು ಗುರುತಿಸಲಾಗಿದ್ದು, ಜನವರಿ 3 ರಂದು ತಾನು ಮತ್ತು ತನ್ನ ಪತ್ನಿ ಖತು ಶ್ಯಾಮ್ಜಿಯಲ್ಲಿ ದರ್ಶನಕ್ಕೆ ಹೋಗಿದ್ದೆವು ಮತ್ತು ಜನವರಿ 5 ರ ರಾತ್ರಿ ಮನೆಗೆ ಮರಳಿದ್ದೆವು ಎಂದು ಮಾಹಿತಿ ನೀಡಿದ್ದಾರೆ.
ವಿಜಯ ಹಝಾರೆ ಟೂರ್ನಿಯ ಗ್ರೂಪ್-ಡಿ ಪಂದ್ಯದಲ್ಲಿ ದೆಹಲಿ ಪರ ವಿರಾಟ್ ಕೊಹ್ಲಿ ಕಣಕ್ಕಿಳಿದಿಲ್ಲ. ಇದಕ್ಕೂ ಮುನ್ನ ಜನವರಿ 6 ರಂದು ನಡೆಯಲಿರುವ ರೈಲ್ವೇಸ್ ವಿರುದ್ಧದ ಮ್ಯಾಚ್ನಲ್ಲಿ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ದೆಹಲಿ ಕ್ರಿಕೆಟ್ ಅಸೋಸಿಯೇಷನ್ ತಿಳಿಸಿತ್ತು. ಆದರೆ ಬೆಂಗಳೂರಿನ ಆಲೂರಿನಲ್ಲಿ ನಡೆಯುತ್ತಿರುವ ರೈಲ್ವೇಸ್ ವಿರುದ್ಧದ ಮ್ಯಾಚ್ನಿಂದ ವಿರಾಟ್ ಕೊಹ್ಲಿ ಹಿಂದೆ ಸರಿದಿದ್ದಾರೆ.
ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಎರಡು ಪಂದ್ಯಗಳನ್ನಾಡಿದ್ದಾರೆ. ಬೆಂಗಳೂರಿನ ಸಿಇಒ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಆಂಧ್ರ ಪ್ರದೇಶ್ ವಿರುದ್ಧ 131 ರನ್ ಬಾರಿಸಿದ್ದರು. ಇನ್ನುದ್ವಿತೀಯ ಮ್ಯಾಚ್ನಲ್ಲಿ ಗುಜರಾತ್ ವಿರುದ್ಧ 77 ರನ್ ಕಲೆಹಾಕಿದ್ದರು.
ಈ ಪಂದ್ಯದ ಬಳಿಕ ಮುಂಬೈಗೆ ತೆರಳಿದ್ದ ವಿರಾಟ್ ಕೊಹ್ಲಿ ಜನವರಿ 6 ರೊಳಗೆ ಮತ್ತೆ ದೆಹಲಿ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ದೆಹಲಿ ತಂಡದ ಕೋಚ್ ಸರಣ್ದೀಪ್ ಸಿಂಗ್ ತಿಳಿಸಿದ್ದರು. ಆದರೆ ಪ್ರಸ್ತುತ ನಡೆಯುತ್ತಿರುವ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿದಿಲ್ಲ.
ಇದಕ್ಕೆ ಮುಖ್ಯ ಕಾರಣ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಸರಣಿ ಎನ್ನಲಾಗಿದೆ. ಅಂದರೆ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಗಾಗಿ ಜನವರಿ 7 ರಂದು ಬರೋಡಾದಲ್ಲಿ ಭಾರತೀಯ ಆಟಗಾರರು ಕೂಡಿಕೊಳ್ಳಲಿದ್ದಾರೆ. ಹೀಗಾಗಿಯೇ ರೈಲ್ವೇಸ್ ವಿರುದ್ಧದ ಪಂದ್ಯದಿಂದ ವಿರಾಟ್ ಕೊಹ್ಲಿ ಹೊರಗುಳಿದಿದ್ದಾರೆ ಎಂದು ವರದಿಯಾಗಿದೆ.
ರಿಷಭ್ ಪಂತ್ ನಾಯಕ:
ನ್ಯೂಝಿಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾಗಿರುವ ರಿಷಭ್ ಪಂತ್ ರೈಲ್ವೇಸ್ ವಿರುದ್ಧದ ಪಂದ್ಯದಲ್ಲೂ ನಾಯಕನಾಗಿ ಕಣಕ್ಕಿಳಿದಿದ್ದಾರೆ. ಅಂದರೆ ಈ ಮ್ಯಾಚ್ ಮುಗಿದ ಬಳಿಕವಷ್ಟೇ ಅವರು ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಅದರಂತೆ ದೆಹಲಿ ಹಾಗೂ ರೈಲ್ವೇಸ್ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…
ದೊಡ್ಡ ದೊಡ್ಡ ಸಿನಿಮಾಗಳು ರಿಲೀಸ್ ಆಗುತ್ತವೆ ಎಂದಾಗ ಅದಕ್ಕೆ ಸಾಕಷ್ಟು ಅಡೆತಡೆಗಳು ಎದುರಾಗುತ್ತವೆ. ಈ ರೀತಿ ಆಗಬಾರದು ಎಂಬ ಕಾರಣದಿಂದ ನಿರ್ಮಾಪಕರು ಈ ಬಗ್ಗೆ ಹೆಚ್ಚು ಜಾಗೃತಿವಹಿಸುತ್ತಾರೆ. ಸೆನ್ಸಾರ್ ಪ್ರಕ್ರಿಯೆಯನ್ನು ಬೇಗ ಪೂರ್ಣಗೊಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ‘ಜನ ನಾಯಗನ್’ ಸಿನಿಮಾ (Jana Nayagan Movie) ಕೂಡ ಇದೇ ಕೆಲಸ ಮಾಡಿತ್ತು. ಆದರೆ, ಸೆನ್ಸಾರ್ ಮಂಡಳಿಯವರು ಸಿನಿಮಾ ನೋಡಿ ತಿಂಗಳಾದರೂ ಸೆನ್ಸಾರ್ ಪತ್ರ ಸಿಕ್ಕಿಲ್ಲ. ಸಿನಿಮಾ ರಿಲೀಸ್ಗೆ ಮೂರು ದಿನ ಮಾತ್ರ ಬಾಕಿ ಉಳಿದಿದೆ. ಇದು ತಂಡದ ಚಿಂತೆಗೆ ಕಾರಣ ಆಗಿದೆ. ಈ ಪ್ರಕರಣ ರಾಜಕೀಯ ಬಣ್ಣವನ್ನು ಕೂಡ ಪಡೆದುಕೊಂಡಿದೆ.
‘ಜನ ನಾಯಗನ್’ ಚಿತ್ರ ಜನವರಿ 9ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದಲ್ಲಿ ಪೂಜಾ ಹೆಗ್ಡೆ, ಮಲಯಾಳಂ ನಟಿ ಮಮಿತಾ ಬೈಜು ಮೊದಲಾದವರು ನಟಿಸಿದ್ದಾರೆ. ಎಚ್. ವಿನೋದ್ ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಇದು ತೆಲುಗಿನ ‘ಭಗವಂತ ಕೇಸರಿ’ ಚಿತ್ರದ ರಿಮೇಕ್. ಈ ಚಿತ್ರದಲ್ಲಿ ರಾಜಕೀಯ ಅಂಶ ಕೂಡ ಸೇರಿಸಲಾಗಿದೆ. ಸಿನಿಮಾದ ಕೆಲವು ದೃಶ್ಯಕ್ಕೆ ಸೆನ್ಸಾರ್ ಮಂಡಳಿ ಅಪಸ್ವರ ತೆಗೆದಿದೆ ಎನ್ನಲಾಗಿದೆ.
2025ರ ಡಿಸೆಂಬರ್ 19ರಂದೇ ‘ಜನ ನಾಯಗನ್’ ಚಿತ್ರವನ್ನು ಸೆನ್ಸಾರ್ ಮಂಡಳಿ ವೀಕ್ಷಣೆ ಮಾಡಿದೆ. ಈ ವೇಳೆ ಕೆಲವು ದೃಶ್ಯಗಳಿಗೆ ಕತ್ತರಿ ಹಾಗೂ ಕೆಲವು ಶಬ್ದಕ್ಕೆ ಮ್ಯೂಟ್ ಮಾಡಲು ಸೂಚನೆ ನೀಡಿತ್ತು. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಿರುವ ತಂಡ, ಸಿನಿಮಾನ ಮತ್ತೆ ಮಂಡಳಿಗೆ ತೋರಿಸಿದೆ. ಆದಾಗ್ಯೂ ಸೆನ್ಸಾರ್ ಮಂಡಳಿ ಸೆನ್ಸಾರ್ ಪತ್ರ ನೀಡಿಲ್ಲ.ಇದು ಚರ್ಚೆಗೆ ಕಾರಣ ಆಗಿದೆ.
ಈ ವಿಷಯ ರಾಜಕೀಯ ತಿರುವು ಕೂಡ ಪಡೆದುಕೊಂಡಿದೆ. ಟಿವಿಕೆ ಪ್ರಧಾನ ಕಾರ್ಯದರ್ಶಿಯೊಬ್ಬರು ಸೆನ್ಸಾರ್ ಮಂಡಳಿಯನ್ನು ಟೀಕಿಸಿದ್ದಾರೆ. ಇದು ಉದ್ದೇಶಪೂರ್ವಕ ಎಂದು ಆರೋಪಿಸಿದ್ದಾರೆ. ಇಂದು (ಜನವರಿ 6) ಕೂಡ ಸೆನ್ಸಾರ್ ಪತ್ರ ಸಿಗದಿದ್ದರೆ ಕೋರ್ಟ್ಗೆ ಹೋಗುವ ಬಗ್ಗೆ ತಂಡ ಆಲೋಚಿಸಿದೆ.
ಈ ಸಿನಿಮಾ ಬಳಿಕ ವಿಜಯ್ ರಾಜಕೀಯದಲ್ಲಿ ತೊಡಗಿಕೊಳ್ಳಲಿದ್ದಾರೆ. ಈ ವರ್ಷ ನಡೆಯುವ ತಮಿಳುನಾಡು ಚುನಾವಣೆಯಲ್ಲಿ ಅವರು ಭಾಗಿ ಆಗಲಿದ್ದಾರೆ. ಅವರ ಕೊನೆಯ ಸಿನಿಮಾ ರಿಮೇಕ್ ಎಂಬ ಬೇಸರ ಅಭಿಮಾನಿಗಳಿಗೆ ಇದೆ.
ಶಿಲ್ಲಾಂಗ್, ಜನವರಿ 06: ವಿದೇಶಿ ಹೆಣ್ಣುಮಕ್ಕಳೆಂದರೆ ಸಾಕು ಕೆಟ್ಟ ದೃಷ್ಟಿಯಿಂದ ನೋಡುವ ಸಾಕಷ್ಟು ಜನರಿದ್ದಾರೆ. ಆದರೆ ಶಿಲ್ಲಾಂಗ್ನ ಜನತೆ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ ಆಗಿದ್ದಾರೆ. ಶಿಲ್ಲಾಂಗನ ಬೀದಿಯಲ್ಲಿ ವಿದೇಶಿ ಯುವತಿ ಖುಷಿಯಿಂದ ಕುಣಿದಿದ್ದಾಳೆ, ಆದರೆ ಸ್ಥಳೀಯರು ಯಾರೂ ಕೂಡ ಆಕೆಯನ್ನು ಕೆಟ್ಟದಾಗಿ ನೋಡುವುದು ಹಾಗಿರಲಿ, ಆಕೆಯ ಹತ್ತಿರ ಸುಳಿಯಲು ಕೂಡ ಯಾರಿಗೂ ಬಿಡದೆ ಆಕೆಯನ್ನು ರಕ್ಷಣೆ ಮಾಡಿರುವ ವಿಡಿಯೋ ಎಲ್ಲರ ಹೃದಯ ಗೆದ್ದಿದೆ. ಹೊಸ ವರ್ಷದ ಆಚರಣೆ ಸಂದರ್ಭದಲ್ಲಿ ವಿದೇಶಿ ಯುವತಿಯೊಬ್ಬರು ಶಿಲ್ಲಾಂಗ್ನ ಬೀದಿಯಲ್ಲಿ ನೃತ್ಯ ಮಾಡಿದ್ದಾರೆ. ಅಲ್ಲಿದ್ದ ಜನರು ಆಕೆಯನ್ನು ಸುತ್ತುವರೆದು ಆಕೆಯನ್ನು ರಕ್ಷಣೆ ಮಾಡಿದ್ದಲ್ಲದೆ ಮುಕ್ತವಾಗಿ ಭಯವಿಲ್ಲದೆ ನೃತ್ಯ ಮಾಡಲು ಅವಕಾಶ ಮಾಡಿಕೊಟ್ಟಿರುವ ಘಟನೆ ನಡೆದಿದೆ.
ಇರಾನ್, ಜನವರಿ 06: ಇರಾನ್(Iran)ನ ರಾಜಧಾನಿ ಟೆಹ್ರಾನ್ನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಹಿಂಸಾಚಾರ ತೀವ್ರ ಸ್ವರೂಪವನ್ನು ಪಡೆದಿದ್ದು ಇಲ್ಲಿಯವರೆಗೆ 35ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 1,200 ಮಂದಿಯನ್ನು ಬಂಧಿಸಲಾಗಿದೆ. ಕೇವಲ ನಗರ ಮಾತ್ರವಲ್ಲ ಹಳ್ಳಿಯ ಜನರು ಕೂಡ ಬೀದಿಗಿಳಿದಿದ್ದಾರೆ.ಡಿಸೆಂಬರ್ ಅಂತ್ಯದಲ್ಲಿ ಪ್ರಾರಂಭವಾದ ಪ್ರತಿಭಟನೆಗಳು ಈಗ ದೊಡ್ಡ ಪ್ರಮಾಣದಲ್ಲಿ ಉಲ್ಬಣಗೊಂಡಿವೆ.
ಹದಗೆಡುತ್ತಿರುವ ಆರ್ಥಿಕತೆ, ಹಣದುಬ್ಬರ ಮತ್ತು ನಿರುದ್ಯೋಗ ಸಮಸ್ಯೆ ದೇಶದಲ್ಲಿ ತಾಂಡವವಾಡುತ್ತಿದ್ದು, ಆಯತೊಲ್ಲಾ ಅಲಿ ಖಮೇನಿ ವಿರುದ್ಧ ಜನರು ಬೀದಿಗಿಳಿದಿದ್ದಾರೆ. ಬೀದಿಗಿಳಿಯುತ್ತಿರುವ ಸಾರ್ವಜನಿಕರು ಸರ್ವಾಧಿಕಾರ ವಿರೋಧಿ ಘೋಷಣೆಗಳನ್ನು ಕೂಗುತ್ತಿದ್ದಾರೆ, ಮುಲ್ಲಾ, ಇರಾನ್ ಬಿಟ್ಟು ಹೋಗಿ ಎಂದು ಘೋಷಣೆ ಕೂಗುತ್ತಿದ್ದಾರೆ. ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು, ಕಾಲೇಜು ವಿದ್ಯಾರ್ಥಿಗಳೇ ಪಾಲ್ಗೊಂಡಿದ್ದು, ಬಾಂಗ್ಲಾದೇಶದಂತೆ ಇಲ್ಲೂ ಕೂಡ ಇದು ಜೆನ್ ಝಿ ಪ್ರತಿಭಟನೆ ಎಂದೇ ಕರೆಯಲಾಗುತ್ತಿದೆ.
ಕಳೆದ ಕೆಲವು ದಿನಗಳಿಂದ ಟೆಹ್ರಾನ್ನಿಂದ ಹಿಡಿದು ಇತರ ಹಲವಾರು ಪ್ರಾಂತ್ಯಗಳವರೆಗೆ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ನಡೆಯುತ್ತಿವೆ. ಪ್ರತಿಭಟನೆಗಳು ಹೆಚ್ಚು ಹಿಂಸಾತ್ಮಕವಾಗುತ್ತಿವೆ, ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವಿನ ಘರ್ಷಣೆಯಲ್ಲಿ ಹಲವಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡಿದ್ದಾರೆ.
ಹಣದುಬ್ಬರ
ತೀವ್ರ ಆರ್ಥಿಕ ಬಿಕ್ಕಟ್ಟು ಪ್ರಾಥಮಿಕ ಕಾರಣ, ಇರಾನಿನ ರಿಯಾಲ್ನ ವಿನಿಮಯ ದರದ ಕುಸಿತವೂ ಒಂದು ಅಂಶವಾಗಿದೆ. ಡಾಲರ್ ವಿರುದ್ಧ ರಿಯಾಲ್ನ ಮೌಲ್ಯವು ಈಗ ಐತಿಹಾಸಿಕ ಕನಿಷ್ಠ ಮಟ್ಟದಲ್ಲಿದೆ, ಸಾಮಾನ್ಯ ನಾಗರಿಕರ ಖರೀದಿ ಶಕ್ತಿಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ. ಹಣದುಬ್ಬರವು ಗಗನಕ್ಕೇರುತ್ತಿದೆ. ಪರಿಸ್ಥಿತಿ ಹೇಗಿದೆ ಎಂದರೆ ಒಂದು ಡಾಲರ್ನ ಮೌಲ್ಯವು ಇರಾನಿನ ಕರೆನ್ಸಿಯಲ್ಲಿ 1.4 ಮಿಲಿಯನ್ ರಿಯಾಲ್ಗಳನ್ನು ತಲುಪಿದೆ.
ಗಗನಕ್ಕೇರಿದ ವಸ್ತುಗಳ ಬೆಲೆಗಳು
ಆಹಾರ, ಔಷಧ ಮತ್ತು ಇಂಧನದಂತಹ ಮೂಲಭೂತ ವಸ್ತುಗಳ ಬೆಲೆಗಳು ಅಭೂತಪೂರ್ವವಾಗಿ ಏರಿವೆ. ನಿರುದ್ಯೋಗ ಸಮಸ್ಯೆ ಒಂದೆಡೆ, ವ್ಯಾಪಾರ ನಷ್ಟ, ನೂರಾರು ಮಾರುಕಟ್ಟೆಗಳು ಬಂದ್, ವ್ಯವಹಾರಗಳನ್ನು ಕೂಡ ತಾತ್ಕಾಲಿಕವಾಗಿ ನಿಲ್ಲಿಸುವ ಪರಿಸ್ಥಿತಿ ಎದುರಾಗಿದೆ. ಆರ್ಥಿಕ ನೋವು ಇನ್ನು ಮುಂದೆ ಉದ್ಯಮಿಗಳು ಅಥವಾ ವಿದ್ಯಾರ್ಥಿಗಳಿಗೆ ಸೀಮಿತವಾಗಿಲ್ಲ. ಇದು ಸಮಾಜದ ಪ್ರತಿಯೊಂದು ವರ್ಗದ ಮೇಲೆ ಪರಿಣಾಮ ಬೀರಿದೆ.
ಆಡಳಿತ ಮತ್ತು ನಾಯಕತ್ವದ ಮೇಲಿನ ನಿರಾಸೆ
ಜನರು ಕೇವಲ ಹಣದುಬ್ಬರವನ್ನು ಸರಿಪಡಿಸುವುದು ಮಾತ್ರವಲ್ಲದೆ, ಇಡೀ ಆಡಳಿತ ರಚನೆಯಲ್ಲಿ ಬದಲಾವಣೆ ತರಲು ಒತ್ತಾಯಿಸುತ್ತಿವೆ. ಏಕೆಂದರೆ ಸಮಸ್ಯೆಗಳು ಆರ್ಥಿಕ ವೈಫಲ್ಯಗಳಿಂದ ಮಾತ್ರವಲ್ಲ, ಆಡಳಿತ ನಿರ್ಧಾರಗಳು, ಮಿಲಿಟರಿ ಖರ್ಚು ಮತ್ತು ಭ್ರಷ್ಟಾಚಾರದಿಂದಲೂ ಉಂಟಾಗುತ್ತವೆ ಎಂಬುದು ಜನರ ವಾದ.
ಇರಾನಿಯನ್ನರು ಸರ್ಕಾರವನ್ನು ಪ್ರಶ್ನಿಸಿದ್ದು ಇದೇ ಮೊದಲಲ್ಲ. 2022 ರಲ್ಲಿ, ಹಿಜಾಬ್ ವಿರೋಧಿ ಪ್ರತಿಭಟನೆಯ ಸಮಯದಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಮಹ್ಸಾ ಅಮಿನಿ ಸಾವನ್ನಪ್ಪಿದ ನಂತರ ಮಹಿಳೆಯರು ಮತ್ತು ಯುವಕರಿಂದ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದಿದ್ದವು.
ಈ ಪ್ರತಿಭಟನೆಗಳು ನೇರವಾಗಿ ಖಮೇನಿ ವಿರುದ್ಧವೇ?
ಇರಾನ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ನೇರವಾಗಿ ಖಮೇನಿ ಆಡಳಿತದ ವಿರುದ್ಧ ಎಂದು ಹೇಳಬಹುದು. ಜನರು ಈಗ ಉನ್ನತ ನಾಯಕತ್ವವನ್ನು, ವಿಶೇಷವಾಗಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರನ್ನು ನೇರವಾಗಿ ಪ್ರಶ್ನಿಸುತ್ತಿದ್ದಾರೆ. ಘೋಷಣೆಗಳು ಮತ್ತು ಸಾರ್ವಜನಿಕ ಹೇಳಿಕೆಗಳು ಅವರ ಅಧಿಕಾರ, ನಿರ್ಧಾರಗಳು ಮತ್ತು ಆಡಳಿತ ಶೈಲಿಯನ್ನು ತೀವ್ರವಾಗಿ ಟೀಕಿಸಿವೆ.ಜನರು ಸರ್ವಾಧಿಕಾರಕ್ಕೆ ಧಿಕ್ಕಾರ ಕೂಗಿದ್ದಾರೆ.
ಸರ್ಕಾರದ ಪ್ರತಿಕ್ರಿಯೆ ಏನು?
ಅಧಿಕಾರಿಗಳು ಭಾರೀ ಭದ್ರತಾ ಪಡೆಗಳನ್ನು ನಿಯೋಜಿಸಿ ಕಠಿಣ ಕ್ರಮ ಕೈಗೊಂಡಿದ್ದಾರೆ. ಪ್ರತಿಭಟನೆಗಳನ್ನು ನಿಯಂತ್ರಿಸಲು ಇಂಟರ್ನೆಟ್ಗೆ ನಿರ್ಬಂಧ ಹೇರಲಾಗಿದೆ. ಕೆಲವು ಗುಂಪುಗಳನ್ನು ವಿದೇಶಿ ಏಜೆಂಟ್ಗಳು ಎಂದು ಹಣೆಪಟ್ಟಿ ಕಟ್ಟುವ ಮೂಲಕ ಸರ್ಕಾರವು ಪ್ರತಿಭಟನೆಗಳನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿದೆ.
ತನ್ನ ಪ್ರಜೆಗಳಿಗೆ ಭಾರತ ಸಲಹೆ
ಇರಾನ್ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿನ್ನೆಲೆ ಭಾರತವು ಇರಾನ್ನಲ್ಲಿರುವ ತನ್ನ ಪ್ರಜೆಗಳಿಗೆ ಸಲಹೆ ನೀಡಿದೆ. ಪ್ರತಿಭಟನಾ ಪ್ರದೇಶಗಳಿಗೆ ತೆರಳದಂತೆ , ಅನಿವಾರ್ಯವಲ್ಲದ ಪ್ರಯಾಣವನ್ನು ತಪ್ಪಿಸುವಂತೆ ಸೂಚಿಸಲಾಗಿದೆ.
ಬೆಂಗಳೂರು, ಜನವರಿ 06: ಖಾಕಿ ಭಯವಿಲ್ಲದೆ ರೌಡಿಶೀಟರ್ಗಳು ಮೇಲಿಂದ ಮೇಲೆ ಅಟ್ಟಹಾಸ ಮೆರೆಯೋದನ್ನು ನಾವು ನೋಡಿದ್ದೇವೆ, ಕೇಳಿದ್ದೇವೆ. ಜೈಲಿಗೆ ಹೋಗಿ ಶಿಕ್ಷೆ ಅನುಭವಿಸಿ ಬಂದರೂ ಕೆಲವರು ಮಾತ್ರ ಬುದ್ಧಿ ಕಲಿಯಲ್ಲ. ಕಾರಾಗೃಹದಿಂದ ಹೊರಬಂದ ಬಳಿಕವೂ ಮತ್ತದೇ ತಮ್ಮ ಹಳೇ ಚಾಳಿ ಮುಂದುವರಿಸುತ್ತಾರೆ. ಕೆಲವೊಮ್ಮೆ ಪೊಲೀಸರ ಕಣ್ಣಿಗೂ ಯಾಮಾರಿಸಿ ಓಡಾಡಿಕೊಂಡು ಇರ್ತಾರೆ. ಇಂತಹುದ್ದೇ ಸಾಲಿಗೆ ಸೇರುವ ರೌಡಿಶೀಟರ್ ಸೈಯದ್ ಅಸ್ಗರ್ ಈಗ ತಾನಾಗಿಯೇ ಪೊಲೀಸರ ಬಳಿ ಓಡೋಡಿ ಬಂದಿದ್ದಾನೆ. ಇದಕ್ಕೆಲ್ಲ ಕಾರಣ ಆತನ ಹೆಂಡತಿ ಅಂದ್ರೆ ನೀವು ನಂಬಲೇ ಬೇಕು.
ಹೌದು, ಪುಂಡರಿಗೆ ಅಂಜದ ಮತ್ತು ಪೊಲೀಸರು ಅಂದ್ರೂ ಭಯ ಪಡದ ರೌಡಿಶೀಟರ್ ಸೈಯದ್ ಅಸ್ಗರ್ ಹೆಂಡತಿ ಅಂದ್ರೆ ಬೆಚ್ಚಿ ಬೀಳ್ತಾನೆ. ಗಾಂಜಾ ಪೆಡ್ಲಿಂಗ್, ಕಳ್ಳತನ, ಕೊಲೆ ಯತ್ನದಂತಹ ಗಂಭೀರ ಆರೋಪ ಹೊಂದಿರೋ ಈತ ಕೇಸ್ಗಳಾದ ಪೊಲೀಸರಿಗೂ ಚಳ್ಳೆಹಣ್ಣು ತಿನ್ನಿಸಿ ಎಸ್ಕೇಪ್ ಆಗ್ತಿದ್ದ. ಹೀಗಿರುವಾಗ ಇತ್ತೀಚೆಗಷ್ಟೇ ಜೈಲಿನಿಂದ ಹೊರ ಬಂದಿರೋ ಈತ ಮತ್ತೆ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದಾನೆ. ವಿಶೇಷ ಅಂದ್ರೆ ಪ್ರತಿಬಾರಿ ಆರೋಪಿಯಾಗಿ ಬರ್ತಿದ್ದ ಈತ ಈ ಬಾರಿ ಸಂತ್ರಸ್ತನಾಗಿ ಬಂದಿದ್ದಾನೆ. 2ನೇ ಪತ್ನಿಯನ್ನ ಬಿಡು ಎಂದು ಮೊದಲ ಹೆಂಡತಿ ರೌಡಿಶೀಟರ್ ಶೀಟರ್ ಕೈ ಮುರಿದಿದ್ದಲ್ಲದೆ, ಕಣ್ಣಿಗೆ ಚಾಕು ಕೂಡ ಇರಿದಿದ್ದಾಳೆ. ಹೀಗಾಗಿ ಪತ್ನಿ ವಿರುದ್ಧ ಜೆಜೆ ನಗರ ಠಾಣೆಗೆ ಸೈಯದ್ ಅಸ್ಗರ್ ದೂರು ನೀಡಿದ್ದಾರೆ. ಆತನಿಗೆ ಎರಡನೇ ಪತ್ನಿ ಸಾಥ್ ಕೊಟ್ಟಿದ್ದಾಳೆ.
ರೌಡಿಶೀಟರ್ ಸೈಯದ್ ಅಸ್ಗರ್ ಮೊದಲ ಪತ್ನಿ ಈ ಮೊದಲು ಕೂಡ ವಿಡಿಯೋ ಮಾಡಿ ಬೆದರಿಕೆ ಹಾಕಿದ್ದಳು. ನಿನ್ನ ತಲೆ ಕಡಿಯುತ್ತೇನೆ, ಎರಡು ದಿನ ಕಾಯ್ತಿರು ಎಂದು ವಾರ್ನಿಂಗ್ ಮಾಡಿದ್ದಳು. ಮಚ್ಚು ಮತ್ತು ಬಾಕು ಹಿಡಿದು ವಿಡಿಯೋ ಮಾಡಿದ್ದ ಬೆನ್ನಲ್ಲೇ ಪತಿಯ ಮೇಲೆ ಆಕೆ ಅಟ್ಯಾಕ್ ಮಾಡಿದ್ದಾಳೆ. ಸದ್ಯ ರೌಡಿಶೀಟರ್ನಿಂದ ದೂರು ಪಡೆದಿರುವ ಪೊಲೀಸರು, ಘಟನೆ ಸಂಬಂಧ ಕೇಸ್ ದಾಖಲಿಸಿಕೊಂಡಿದ್ದಾರೆ. ಇಷ್ಟು ದಿನ ಬೇರೆಯವರಿಗೆ ಬೆದರಿಕೆ ಹಾಕುತ್ತಿದ್ದ ಸೈಯದ್ ಅಸ್ಗರ್ ಈಗ ಪತ್ನಿ ಬೆದರಿಕೆಗೆ ಅಂಜಿರೋದಿಲ್ಲಿ ಗಮನಾರ್ಹ.
ಕುಂಕುಮಾರ್ಚನೆಯ ಮಹತ್ವ ಮತ್ತು ಅದನ್ನು ಯಾರು ಆಚರಿಸಬಹುದು ಎಂಬ ಕುರಿತು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ದೇವಸ್ಥಾನಗಳಲ್ಲಿ, ಮನೆಯಲ್ಲಿ ದೇವಿಗೆ ಕುಂಕುಮಾರ್ಚನೆ ಮಾಡಿಸುವುದು ಸಾಮಾನ್ಯ. ಆದರೆ ಈ ಪೂಜಾ ವಿಧಿಯನ್ನು ವಯಸ್ಸಾದವರು, ದೇವ ಭಕ್ತಿ ಇರುವವರು ಅಥವಾ ಆಧ್ಯಾತ್ಮಿಕ ಕ್ಷೇತ್ರದಲ್ಲಿ ಇರುವವರು ಮಾತ್ರ ಮಾಡಬೇಕೇ ಎಂಬ ಪ್ರಶ್ನೆ ಹಲವರಲ್ಲಿದೆ. ಇದಕ್ಕೆ ಗುರೂಜಿಯವರು ‘ಕುಂಕುಮಾರ್ಚನೆಯನ್ನು ಎಲ್ಲರೂ ಮಾಡಿಸಬಹುದು’ ಎಂದು ಸ್ಪಷ್ಟ ಉತ್ತರವನ್ನು ನೀಡಿದ್ದಾರೆ.
ವಿದ್ಯಾರ್ಥಿಗಳು, ವ್ಯಾಪಾರಸ್ಥರು, ರೈತರು, ಮತ್ತು ಉದ್ಯೋಗಿಗಳು ಸೇರಿದಂತೆ ತಮ್ಮ ವೃತ್ತಿಗಳಲ್ಲಿ ಇರುವ ಪ್ರತಿಯೊಬ್ಬರೂ ಈ ಪೂಜೆಯನ್ನು ಆಚರಿಸಬಹುದು. ಇದು ಅವರವರ ಜೀವನದಲ್ಲಿ ಸಕಾರಾತ್ಮಕ ಪರಿಣಾಮಗಳನ್ನು ತರುತ್ತದೆ. ವಿಶೇಷವಾಗಿ, ಮಕ್ಕಳಿಂದ ಕುಂಕುಮಾರ್ಚನೆ ಮಾಡಿಸುವುದಕ್ಕೆ ಹೆಚ್ಚಿನ ಮಹತ್ವವಿದೆ. ಮಕ್ಕಳು, ಪುಟ್ಟ ಮಕ್ಕಳು, ಹತ್ತು ವರ್ಷದ ಗಂಡು ಮಕ್ಕಳು, ಮತ್ತು ಋತುಮತಿ ಆಗುವ ಹಂತದಲ್ಲಿರುವ ಹೆಣ್ಣು ಮಕ್ಕಳಿಂದ (ಅದಕ್ಕೆ ಸೂಕ್ತವಲ್ಲದ ಕಾಲವನ್ನು ಹೊರತುಪಡಿಸಿ) ಕುಂಕುಮಾರ್ಚನೆ ಮಾಡಿಸಿದರೆ, ಅವರಿಗೆ ಸಂಸ್ಕಾರ, ಸಪ್ತ ಚಕ್ರಗಳ ಜಾಗೃತಿ, ಜ್ಞಾನ ವೃದ್ಧಿ, ತಾಳ್ಮೆ, ಸಹನೆ ಮತ್ತು ದುಷ್ಟ ಶಕ್ತಿಗಳಿಂದ ರಕ್ಷಣೆ ದೊರೆಯುತ್ತದೆ. ಮಕ್ಕಳು ಗುರುವಾರಗಳಂದು ಈ ಪೂಜೆಯನ್ನು ಮಾಡಿದರೆ ಹೆಚ್ಚು ಶುಭ.
ಕುಂಕುಮಾರ್ಚನೆಯನ್ನು ಪುರುಷರು ಮಾಡಬಹುದೇ ಎಂಬ ಪ್ರಶ್ನೆಗೆ, ಹೌದು ಎಂದು ಉತ್ತರ ನೀಡಲಾಗಿದೆ. ಪುರುಷರು ಕುಂಕುಮಾರ್ಚನೆ ಮಾಡಿದರೆ, ವಿಶೇಷವಾಗಿ ವಾರಕ್ಕೊಮ್ಮೆ ಶುಕ್ರವಾರದಂದು, ತಾಯಿಯ ಅನುಗ್ರಹ ಬೇಗ ಸಿಗುತ್ತದೆ ಎಂದು ನಂಬಲಾಗಿದೆ. ವ್ಯಾಪಾರದಲ್ಲಿ ನಷ್ಟ ಅನುಭವಿಸಿದವರು, ಸಾಲದ ಹೊರೆಯಿಂದ ಬಳಲುತ್ತಿರುವವರು (ಬ್ಯಾಂಕ್ ಸಾಲ, ಬಡ್ಡಿ ಸಾಲ), ಮತ್ತು ವ್ಯವಸಾಯಕ್ಕೆ ಸಾಲ ಮಾಡಿದ ಪುರುಷರು ಶುಕ್ರವಾರದ ದಿನ ಸಂಧ್ಯಾಕಾಲದಲ್ಲಿ ಮನೆಯಲ್ಲಿ ಅಥವಾ ದೇವಸ್ಥಾನದಲ್ಲಿ ಅಷ್ಟೋತ್ತರ ಸಹಿತ ಕುಂಕುಮಾರ್ಚನೆ ಮಾಡಿದರೆ ಬಹಳ ಶುಭವಾಗುತ್ತದೆ. ತಾಯಿಗೆ ಮಗುವಿನ ರೂಪವಾಗಿ ಕಾಣಿಸಿ ಬೇಗ ಫಲ ಸಿಗುತ್ತದೆ ಎಂದು ಹೇಳಲಾಗುತ್ತದೆ.
ಮಹಿಳೆಯರು ಕುಂಕುಮಾರ್ಚನೆ ಮಾಡುವುದರಿಂದ ದೀರ್ಘ ಸೌಮಂಗಲ್ಯ, ಮಕ್ಕಳೊಂದಿಗೆ ಉತ್ತಮ ಬಾಂಧವ್ಯ, ಗಂಡನ ದುರಭ್ಯಾಸಗಳ ನಿವಾರಣೆ, ಆಸ್ತಿ ಕಲಹಗಳ ಇತ್ಯರ್ಥ, ಆಸ್ತಿ ವೃದ್ಧಿ, ಹಣಕಾಸಿನ ಅನುಕೂಲ, ಅಪವಾದಗಳ ನಿವಾರಣೆ, ಮತ್ತು ಗಂಡನಿಗೆ ಅಧಿಕಾರ ಪ್ರಾಪ್ತಿ ಸೇರಿದಂತೆ ಹಲವು ಶುಭ ಫಲಗಳು ದೊರೆಯುತ್ತವೆ. ಲಲಿತಾ ಸಹಸ್ರನಾಮ ಅಥವಾ ಅಷ್ಟೋತ್ತರ ಹೇಳಿಕೊಂಡು ಕುಂಕುಮಾರ್ಚನೆ ಮಾಡಿದಾಗ ಈ ಫಲಗಳು ಹೆಚ್ಚಾಗುತ್ತವೆ.
ರೋಗಿಗಳು ಮತ್ತು ದೇಹದಲ್ಲಿ ಯಾವುದಾದರೂ ಕಂಟಕ ಹೊಂದಿರುವವರೂ ಕುಂಕುಮಾರ್ಚನೆ ಮಾಡುವುದರಿಂದ ಸಾಕಷ್ಟು ಶುಭ ಫಲಗಳನ್ನು ಪಡೆಯುತ್ತಾರೆ. ಸಕಾರಾತ್ಮಕ ಆಲೋಚನೆಗಳೊಂದಿಗೆ ಗುರುವಾರ, ಶುಕ್ರವಾರ, ಬುಧವಾರದಂದು ಈ ಪೂಜೆಯನ್ನು ಆಚರಿಸುವವರಿಗೆ ಆಜ್ಞಾಚಕ್ರದ ಜಾಗೃತಿ, ರಕ್ತ ಸಂಚಾರ ಸುಧಾರಣೆ, ಮನಸ್ಸಿನ ಭಾವನೆಗಳಲ್ಲಿ ಸಕಾರಾತ್ಮಕ ಬದಲಾವಣೆಗಳು ಉಂಟಾಗುತ್ತವೆ. ಮಕ್ಕಳು, ಗಂಡಸರು, ವೃದ್ಧರು, ಅಶಕ್ತರು ಸೇರಿದಂತೆ ಎಲ್ಲರೂ ನಂಬಿಕೆಯಿಂದ ಕುಂಕುಮಾರ್ಚನೆ ಮಾಡಿದಾಗ ಅವರ ಆಸೆ ಆಕಾಂಕ್ಷೆಗಳು ಈಡೇರಿ, ಸಮಾಜದಲ್ಲಿ ಗುರುತಿಸಿಕೊಳ್ಳುವ ಅವಕಾಶ ಸಿಗುತ್ತದೆ. ಶನಿ ಕಾಟ ಮತ್ತು ದುಷ್ಟ ಶಕ್ತಿಗಳ ಕಾಟ ನಿವಾರಣೆಯಾಗಿ ಆತ್ಮಸ್ಥೈರ್ಯ ವೃದ್ಧಿಸುತ್ತದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬಾಂಗ್ಲಾದೇಶ್ ಸರ್ಕಾರವುಇಂಡಿಯನ್ ಪ್ರೀಮಿಯರ್ ಲೀಗ್ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳ ಪ್ರಸಾರವನ್ನುಅನಿರ್ದಿಷ್ಟಾವಧಿಗೆನಿಷೇಧಿಸಿದೆ. ಐಪಿಎಲ್ನಿಂದ ಬಾಂಗ್ಲಾ ಆಟಗಾರ ಮುಸ್ತಫಿಝುರ್ ರೆಹಮಾನ್ ಅವರನ್ನು ಹೊರಗಿಟ್ಟ ಬೆನ್ನಲ್ಲೇ ಬಾಂಗ್ಲಾದೇಶ್ ತನ್ನ ದೇಶದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ನ ಪ್ರಸಾರಕ್ಕೆ ನಿಷೇಧ ಹೇರಿದೆ.
ಇದಕ್ಕೂ ಮುನ್ನವೇ ಬಾಂಗ್ಲಾದೇಶ್ನ ಕ್ರೀಡಾ ಸಚಿವಾಲಯದ ಉಸ್ತುವಾರಿ ಸಚಿವ ಆಸಿಫ್ನಜ್ರುಲ್ ಬಾಂಗ್ಲಾದಲ್ಲಿ ಐಪಿಎಲ್ ಬ್ಯಾನ್ ಮಾಡುವ ಸೂಚನೆ ನೀಡಿದ್ದರು.ಬಾಂಗ್ಲಾದೇಶ್ಆಟಗಾರನಿಗೆ ಮಾಡಲಾದ ಅವಮಾನಕ್ಕೆಪ್ರತೀಕಾರವಾಗಿ ನಮ್ಮ ದೇಶದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ನ ಪಂದ್ಯಗಳ ಪ್ರಸಾರವನ್ನುನಿಲ್ಲಿಸುವಂತೆ ನಾನು ಮಾಹಿತಿ ಮತ್ತು ಪ್ರಸಾರ ಸಚಿವರನ್ನುವಿನಂತಿಸಿದ್ದೇನೆ ಎಂದು ತಿಳಿಸಿದ್ದರು.
ಅಲ್ಲದೆ ಯಾವುದೇ ಸಂದರ್ಭದಲ್ಲೂಬಾಂಗ್ಲಾದೇಶ್, ಬಾಂಗ್ಲಾದೇಶ್ ಕ್ರಿಕೆಟ್ ಅಥವಾ ಬಾಂಗ್ಲಾದೇಶ ಕ್ರಿಕೆಟಿಗರಅವಮಾನವನ್ನು ನಾವು ಸಹಿಸುವುದಿಲ್ಲ. ಗುಲಾಮಗಿರಿಯ ದಿನಗಳು ಮುಗಿದಿವೆ. ಹೀಗಾಗಿ ನಮ್ಮ ದೇಶದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ನ ಪ್ರಸಾರ ನಿಷೇಧಿಸಲು ಮನವಿ ಸಲ್ಲಿಸಿದ್ದೇನೆ ಎಂದು ನಜ್ರುಲ್ ಬಹಿರಂಗ ಹೇಳಿಕೆ ನೀಡಿದ್ದರು.
ಈ ಹೇಳಿಕೆ ಬೆನ್ನಲ್ಲೇ ಇದೀಗ ಬಾಂಗ್ಲಾದೇಶ್ನಲ್ಲಿ ಐಪಿಎಲ್ ಪ್ರಸಾರವನ್ನು ನಿಷೇಧಿಸಲಾಗಿದೆ. ಈಗಾಗಲೇ ಐಪಿಎಲ್ ಪಂದ್ಯಗಳಿಗೆ ಪಾಕಿಸ್ತಾನ್ ಸರ್ಕಾರ ನಿಷೇಧ ಹೇರಿದ್ದಾರೆ. ಇತ್ತ ಬಾಂಗ್ಲಾದೇಶ್ ಕೂಡ ಪಾಕ್ ಮಾದರಿಯಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್ ಲೈವ್ಪ್ರಸಾರಕ್ಕೆಬ್ರೇಕ್ ಹಾಕಿದ್ದಾರೆ.
ಮುಂದೇನು?
ಭಾರತದಲ್ಲಿ ನಡೆಯಲಿರುವ ಬಾಂಗ್ಲಾದೇಶ್ ತಂಡದ ಟಿ20 ವಿಶ್ವಕಪ್ ಪಂದ್ಯಗಳನ್ನುಸ್ಥಳಾಂತರಿಸುವಂತೆಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ಈಗಾಗಲೇ ಮನವಿ ಸಲ್ಲಿಸಿದೆ. ಇಂಡಿಯನ್ ಪ್ರೀಮಿಯರ್ ಲೀಗ್ನಿಂದ ಬಾಂಗ್ಲಾ ಆಟಗಾರ ಮುಸ್ತಫಿಝುರ್ರೆಹಮಾನ್ ಅವರನ್ನು ಹೊರಗಿಟ್ಟ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದ್ದು, ಹೀಗಾಗಿ ಬಾಂಗ್ಲಾದೇಶ್ ತಂಡದ ಟಿ20 ವಿಶ್ವಕಪ್ಪಂದ್ಯಗಳು ಭಾರತದಲ್ಲಿ ನಡೆಯುವುದು ಅನುಮಾನ.
ಈ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕಪ್ರತಿಕ್ರಿಯಿಸಿರುವಬಾಂಗ್ಲಾದೇಶದಕ್ರೀಡಾಸಲಹೆಗಾರಆಸಿಫ್ನಜ್ರುಲ್, ಬಾಂಗ್ಲಾತಂಡದಪಂದ್ಯಗಳಿಗೆಪರ್ಯಾಯಸ್ಥಳವಾಗಿಶ್ರೀಲಂಕಾವನ್ನುಪ್ರಸ್ತಾಪಿಸಲುಮಧ್ಯಂತರ ಸರ್ಕಾರವು ಬಿಸಿಬಿಗೆ ನಿರ್ದೇಶನ ನೀಡಿದೆ ಎಂದು ತಿಳಿಸಿದ್ದಾರೆ.
ಬಾಂಗ್ಲಾದೇಶ್ಕ್ರಿಕೆಟಿಗರಅವಮಾನವನ್ನು ನಾವು ಸಹಿಸುವುದಿಲ್ಲ. ತೀವ್ರವಾದಿ ಕೋಮುವಾದಿ ಶಕ್ತಿಗಳಿಗೆಮಣಿದು, ಭಾರತೀಯ ಕ್ರಿಕೆಟ್ ಮಂಡಳಿಯುಬಾಂಗ್ಲಾದೇಶದಕ್ರಿಕೆಟಿಗಮುಸ್ತಾಫಿಝುರ್ರೆಹಮಾನ್ ಅವರನ್ನು ತಂಡದಿಂದ ಕೈ ಬಿಟ್ಟಿದ್ದಾರೆ.
ಬಾಂಗ್ಲಾದೇಶದಕ್ರಿಕೆಟಿಗನೊಬ್ಬನಿಗೆ ಭಾರತದಲ್ಲಿ ಆಡಲು ಸಾಧ್ಯವಾಗದಿದ್ದರೆ, ಬಾಂಗ್ಲಾದೇಶ್ ತನ್ನ ಇಡೀ ಕ್ರಿಕೆಟ್ ತಂಡವುವಿಶ್ವಕಪ್ ಆಡಲು ಭಾರತಕ್ಕೆ ಪ್ರಯಾಣಿಸುವುದುಸುರಕ್ಷಿತವೆಂದುಪರಿಗಣಿಸಲು ಸಾಧ್ಯವಿಲ್ಲ. ಹೀಗಾಗಿ ಟಿ20 ವಿಶ್ವಕಪ್ನ ಪಂದ್ಯಗಳನ್ನು ಸ್ಥಳಾಂತರಿಸುವಂತೆ ಬಿಸಿಬಿ ಐಸಿಸಿಗೆ ಪತ್ರ ಬರೆದಿದೆ.
ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ನ ಈ ಮನವಿಯನ್ನು ಐಸಿಸಿ ಪರಿಗಣಿಸುವ ಸಾಧ್ಯತೆಯಿದೆ. ಅದರಂತೆ ಮುಂಬರುವ ಟಿ20 ವಿಶ್ವಕಪ್ನ ಬಾಂಗ್ಲಾದೇಶದ ಪಂದ್ಯಗಳಿಗೆ ಶ್ರೀಲಂಕಾ ಆತಿಥ್ಯವಹಿಸುವ ಸಾಧ್ಯತೆ ಹೆಚ್ಚಿದೆ.
ನವದೆಹಲಿ, ಜನವರಿ 06: ಕೇಂದ್ರದ ಮಾಜಿಸ ಚಿವ, ಕಾಂಗ್ರೆಸ್ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ(Suresh Kalmadi) ನಿಧನರಾಗಿದ್ದಾರೆ. ಸುರೇಶ್ ಕಲ್ಮಾಡಿ ದೀರ್ಘಕಾಲದ ಅನಾರೋಗ್ಯದಿಂದ ಮಂಗಳವಾರ ಪುಣೆಯ ದೀನನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಪಾರ್ಥಿವ ಶರೀರವನ್ನು ಪುಣೆಯ ಎರಾಂಡ್ವಾನೆಯಲ್ಲಿರುವ ಕಲ್ಮಾಡಿ ಹೌಸ್ನಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಇರಿಸಲಾಗುವುದು. ಮಧ್ಯಾಹ್ನ 3.30 ಕ್ಕೆ ವೈಕುಂಠ ಸ್ಮಶಾನಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಅವರು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ನ ಮಾಜಿ ಅಧ್ಯಕ್ಷರಾಗಿದ್ದರು.ಕಳೆದ ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿದ್ದರು. ಸುರೇಶ್ ಕಲ್ಮಾಡಿ ಮೇ 1, 1944 ರಂದು ಜನಿಸಿದ್ದರು.ರಾಜಕೀಯಕ್ಕೆ ಪ್ರವೇಶಿಸುವ ಮೊದಲು ಅವರು ಆರು ವರ್ಷಗಳಿಗೂ ಹೆಚ್ಚು ಕಾಲ ಭಾರತೀಯ ವಾಯುಪಡೆಯಲ್ಲಿ ಪೈಲಟ್ ಆಗಿ ಸೇವೆ ಸಲ್ಲಿಸಿದ್ದರು.
ವಾಯುಪಡೆಯಿಂದ ನಿವೃತ್ತರಾದ ನಂತರ, ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದೊಂದಿಗೆ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. ಅವರು ಪುಣೆಯಿಂದ ದೀರ್ಘಕಾಲ ಸಂಸತ್ ಸದಸ್ಯರಾಗಿದ್ದರು ಮತ್ತು ಪಿ.ವಿ. ನರಸಿಂಹರಾವ್ ಸರ್ಕಾರದಲ್ಲಿ ರೈಲ್ವೆ ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಅವರು ರೈಲ್ವೆ ಬಜೆಟ್ ಮಂಡಿಸಿದ ಏಕೈಕ ರಾಜ್ಯ ಸಚಿವರಾಗಿದ್ದರು.
ಹಿರಿಯ ಕಾಂಗ್ರೆಸ್ ನಾಯಕ ಸುರೇಶ್ ಕಲ್ಮಾಡಿ ಅವರನ್ನು ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖ ವ್ಯಕ್ತಿ ಎಂದು ಪರಿಗಣಿಸಲಾಗಿತ್ತು, ಹೈಕಮಾಂಡ್ ಜೊತೆ ಉತ್ತಮ ಸಂಬಂಧ ಹೊಂದಿದ್ದರು. ಅವರು ರೈಲ್ವೆ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು ಮತ್ತು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಅಧ್ಯಕ್ಷರೂ ಆಗಿದ್ದರು.
2010 ರ ಕಾಮನ್ವೆಲ್ತ್ ಕ್ರೀಡಾಕೂಟದ ಸಂದರ್ಭದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣದಲ್ಲಿ ಐಒಎಯಲ್ಲಿ ಅವರನ್ನು ಪ್ರಶ್ನಿಸಲಾಗಿತ್ತು ಮತ್ತು ಹಣ ದುರುಪಯೋಗದ ಆರೋಪದ ಮೇಲೆ ಭ್ರಷ್ಟಾಚಾರ ತಡೆ ಕಾಯ್ದೆಯಡಿಯಲ್ಲಿ ಅವರ ಮೇಲೆ ಆರೋಪ ಹೊರಿಸಲಾಯಿತು. ಅವರನ್ನು ಏಪ್ರಿಲ್ 2011 ರಲ್ಲಿ ಬಂಧಿಸಲಾಯಿತು, ನಂತರ ಕಾಂಗ್ರೆಸ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿತ್ತು.
ಆ್ಯಶಸ್ ಸರಣಿಯಲ್ಲಿ ಟ್ರಾವಿಸ್ ಹೆಡ್ (Travis Head) ಸಿಡಿಲಬ್ಬರ ಮುಂದುವರೆದಿದೆ. ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆಯುತ್ತಿರುವ ಈ ಸರಣಿಯ 5ನೇ ಪಂದ್ಯದಲ್ಲೂ ಹೆಡ್ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಅದು ಕೂಡ ಅತೀ ವೇಗದಲ್ಲಿ ಎಂಬುದು ವಿಶೇಷ. ಈ ಮ್ಯಾಚ್ನಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಪ್ರಥಮ ಇನಿಂಗ್ಸ್ನಲ್ಲಿ 384 ರನ್ ಕಲೆಹಾಕಿದ್ದರು.