Headlines

nagaraj11081993

ಗ್ರಹಗತಿಗಳ ಬದಲಾವಣೆ: ಇಂದು ಮಧ್ಯಾಹ್ನ ಮೀನ ರಾಶಿಗೆ ಕುಜ ಸಂಚಾರ; 12 ರಾಶಿಗಳ ಮೇಲೆ ಇದರ ಪ್ರಭಾವವೇನು?

ಬೆಂಗಳೂರು, ಏ.2: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಮಾರ್ಚ್ 2ರಂದು ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ಪರಾಭವನಾ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಪೂರ್ಣಿಮಾ ತಿಥಿ, ಹಸ್ತ ನಕ್ಷತ್ರವನ್ನು ಒಳಗೊಂಡಿರುವ ವಿಶೇಷ ದಿನವಾಗಿದೆ. ಇದು ಚಿತ್ರ ಪೌರ್ಣಮಿ, ದವನದ ಹುಣ್ಣಿಮೆ ಹಾಗೂ ಯುಗಾದಿಯ ನಂತರದ ಮೊದಲ ಹುಣ್ಣಿಮೆಯಾಗಿರುವುದರಿಂದ ಪವಿತ್ರ ದಿನವಾಗಿದೆ. ಅಕ್ಕಮಹಾದೇವಿ ಜಯಂತಿ ಮತ್ತು ಕೆಲವು ಕಡೆ ಹನುಮ ಜಯಂತಿಯನ್ನೂ…

Read More

SSLC ತೃತೀಯ ಭಾಷೆ ವಿವಾದ: ಹೈಕೋರ್ಟ್ ಮೆಟ್ಟಿಲೇರಿದ ಸರ್ಕಾರದ ‘ಗ್ರೇಡಿಂಗ್’ ನಿರ್ಧಾರ

ಬೆಂಗಳೂರು, ಏಪ್ರಿಲ್ 2: ಕರ್ನಾಟಕ ಶೈಕ್ಷಣಿಕ ವಲಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಎಸ್‌ಎಸ್‌ಎಲ್‌ಸಿ (SSLC) ತೃತೀಯ ಭಾಷಾ ಪರೀಕ್ಷೆಯಲ್ಲಿ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ತೀರ್ಮಾನ ಈಗ ಕಾನೂನು ಹೋರಾಟಕ್ಕೆ ನಾಂದಿ ಹಾಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಈ ದಿಢೀರ್ ಘೋಷಣೆಯು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕರಿ ನೆರಳು ಬೀರಲಿದೆ ಎಂದು ಆರೋಪಿಸಿ ಹೈಕೋರ್ಟ್‌ನಲ್ಲಿ (Karnataka High Court) ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ದಾಖಲಾಗಿದೆ. ಬೆಂಗಳೂರಿನ ನಿವಾಸಿಗಳಾದ ಎಚ್.ಎನ್. ಚಂದನಾ ಮತ್ತು…

Read More

ಬೆಂಗಳೂರಿಗರಿಗೆ ಬಿಡದ ಬಿಸಿಲ ಬೇಗೆ: ಉತ್ತರ ಕರ್ನಾಟಕದಲ್ಲಿ ಕೆಂಡದಂತಹ ಬಿಸಿಲು! ಮಲೆನಾಡಿನಲ್ಲಿ ಹೇಗಿದೆ ತಾಪಮಾನ?

ಬೆಂಗಳೂರು, ಏ.2: ರಾಜಧಾನಿ ಬೆಂಗಳೂರಿನಲ್ಲಿ ಇಂದೂ ಕೂಡ ಒಣ ಹವಾಮಾನ ಮುಂದುವರಿಯಲಿದೆ. ಗರಿಷ್ಠ ಉಷ್ಣಾಂಶವು 35°C ನಿಂದ 37°C ವರೆಗೆ ದಾಖಲಾಗುವ ಸಾಧ್ಯತೆಯಿದೆ. ಸಂಜೆಯ ವೇಳೆಗೆ ಆಕಾಶ ಭಾಗಶಃ ಮೋಡದಿಂದ ಕೂಡಿದ್ದರೂ ಮಳೆಯ ಮುನ್ಸೂಚನೆ ತೀರಾ ಕಡಿಮೆ ಇದೆ. ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಬಿಸಿಲ ಧಗೆ ವಿಪರೀತವಾಗಿರಲಿದೆ. ಇಲ್ಲಿನ ಕೆಲವು ಭಾಗಗಳಲ್ಲಿ ಉಷ್ಣಾಂಶವು 41°C ದಾಟುವ ಸಾಧ್ಯತೆಯಿದ್ದು, ಮಧ್ಯಾಹ್ನದ ವೇಳೆ ಬಿಸಿಗಾಳಿ (Heat Wave) ಬೀಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಂಗಳೂರು,…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಸ್ವಾರ್ಥಕ್ಕೆ ದುರ್ಬಲರು ಬಲಿ

ಮೇಷ ರಾಶಿ: ಕುಟುಂಬದ ಆಪ್ತರ ಆರೋಗ್ಯದ ಬಗ್ಗೆ ಕಾಳಜಿ ಇರುವುದು. ಇಂದು ವ್ಯಾಪಾರಿಗಳಿಗೆ ನಷ್ಟ ಹಾಗೂ ಉದ್ವೇಗದ ಉಂಟಾಗಬಹುದು. ವಾಹನ ಖರೀದಿಗೆ ಹೆಚ್ಚು ಒತ್ತಡ ಬರಬಹುದು. ಇಂದು ನಿಮ್ಮ ಮಾತು ಮಿತಿಯನ್ನು ಮೀರಬಹುದು. ನಿಮ್ಮನ್ನು ಇಷ್ಟಪಡುವವರಿಗೆ ಸಮಯವನ್ನು ಕೊಡದೇ ಅಹಂಕಾರ ತೋರಿಸುವಿರಿ. ನಿಮ್ಮ‌ ಸಹಾಯ ಗುಣವನ್ನು ದುರ್ಬಳಕೆ ಮಾಡಿಕೊಳ್ಳಬಹುದು. ವಿಚಾರದಲ್ಲಿ ನಿಮಗೆ ತಾಳ್ಮೆ ಕಡಿಮೆ‌ ಎನಿಸಬಹುದು. ವೃಷಭ ರಾಶಿ: ನಿಮ್ಮ ಬಂಧುಗಳ ನಡುವೆ ವಿವಾಹ ಸಂಬಂಧವು ಆಗಲಿದೆ. ಎಲ್ಲವೂ ವಿಧಿಯಂತೆ ಆಗುತ್ತದೆ ಎಂಬ ಸತ್ಯವನ್ನು ನೀವು ಅರಿತರೂ…

Read More

LSG vs DC: ಡೆಲ್ಲಿಗೆ ಗೆಲುವು ತಂದ ರಿಜ್ವಿ- ಸ್ಟಬ್ಸ್; ತವರಿನಲ್ಲಿ ಸೋತ ಲಕ್ನೋ

ಲಕ್ನೋದ ಏಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ ಐದನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್​ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ತಂಡ, ಡೆಲ್ಲಿ ಬೌಲಿಂಗ್ ದಾಳಿಗೆ ನಲುಗಿ ಪೂರ್ಣ 20 ಓವರ್​ಗಳನ್ನು ಆಡಲಾಗದೆ 18.4 ಓವರ್​ಗಳಲ್ಲಿ ಕೇವಲ 141 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸಮೀರ್ ರಿಜ್ವಿ ಅವರ ಅರ್ಧಶತಕ ಹಾಗೂ ಟ್ರಿಸ್ಟನ್ ಸ್ಟಬ್ಸ್ ಅವರ…

Read More

ಪ್ರಧಾನಿ ಮೋದಿಗಾಗಿ ಹಾಡು ಹಾಡಿದ ಅಸ್ಸಾಂ ಚಹಾ ತೋಟದ ಕಾರ್ಮಿಕರು

ಅಸ್ಸಾಂ, ಏಪ್ರಿಲ್ 1: ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ (PM Modi Assam Visit) ಇಂದು ಅಸ್ಸಾಂಗೆ ತೆರಳಿದ್ದು, ಅಸ್ಸಾಂನ ಚಹಾ ತೋಟಗಳಿಗೂ ಭೇಟಿ ನೀಡಿದರು. ಈ ವೇಳೆ ಚಹಾ ಎಲೆಗಳನ್ನು ಕಿತ್ತು, ಅಲ್ಲಿದ್ದ ಮಹಿಳಾ ಕೆಲಸಗಾರರೊಂದಿಗೆ ಮಾತುಕತೆ ನಡೆಸಿದರು. ಆ ಮಹಿಳೆಯರು ಪ್ರಧಾನಿ ನರೇಂದ್ರ ಮೋದಿಯವರಿಗಾಗಿ ಹಾಡನ್ನು ಹಾಡಿದರು. ಮಹಿಳೆಯರು ಜಗತ್ ಜನನಿ ಮಾತೆಗೆ ಗೌರವ ಸಲ್ಲಿಸುವ ಹಾಡನ್ನು ಮೋದಿಗಾಗಿ ಹಾಡಿದರು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

‘ಕತ್ತರಿಗುಪ್ಪೆಯಲ್ಲಿ ನಾನು ಚುನಾವಣೆಗೆ ನಿಲ್ಲಬಹುದು’: ಏನಿದು ಉಪೇಂದ್ರ ಪ್ಲ್ಯಾನ್?

ನಟ ಉಪೇಂದ್ರ ಅವರು ಹೊಸ ಆಲೋಚನೆಗಳ ಮೂಲಕ ಹೆಸರಾದವರು. ಈಗ ಅವರು ಪ್ರಜಾಕೀಯ (Prajakeeya) ಮೂಲಕ ಮತ್ತೆ ಜನರ ಎದುರು ಬಂದಿದ್ದಾರೆ. ತಮ್ಮ ಪಕ್ಷದ ಹೊಸ ಆ್ಯಪ್ ಶುರು ಮಾಡಿದ್ದಾರೆ. ಆದರೆ ಈವರೆಗೂ ಅವರು ಚುನಾವಣೆಗೆ ಸ್ಪರ್ಧಿಸಿಲ್ಲ. ಮುಂದಿನ ದಿನಗಳಲ್ಲಿ ಅವರು ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದೆ. ಇಂದು (ಏಪ್ರಿಲ್ 1) ಆ್ಯಪ್ ಬಿಡುಗಡೆ ಬಳಿಕ ಅವರು ಸುದ್ದಿಗೋಷ್ಠಿ ನಡೆಸಿದರು. ‘ಮುಂದೆ ನಾನು ಕೂಡ ಕತ್ತರಿಗುಪ್ಪೆಯಿಂದ ಚುನಾವಣೆಗೆ ನಿಂತುಕೊಳ್ಳಬಹುದು. ಗೊತ್ತಿಲ್ಲ. ಸದ್ಯಕ್ಕೆ ಜಿಬಿಎ ಎಲೆಕ್ಷನ್ ಸುಲವಾಗಿ ಈ ಆ್ಯಪ್…

Read More

‘ರಾಜಾ ಶಿವಾಜಿ’ ಪಾತ್ರದಲ್ಲಿ ಅಬ್ಬರಿಸಿದ ರಿತೇಶ್ ದೇಶ್‌ಮುಖ್; ಟೀಸರ್ ಹೇಗಿದೆ ನೋಡಿ

ಮರಾಠ ಸಾಮ್ರಾಜ್ಯದ ಸಂಸ್ಥಾಪಕ, ಭಾರತದ ಶ್ರೇಷ್ಠ ಯೋಧ ರಾಜ ಛತ್ರಪತಿ ಶಿವಾಜಿ ಮಹಾರಾಜರ ಜೀವನ ಆಧಾರಿತ ಬಹುನಿರೀಕ್ಷಿತ ‘ರಾಜಾ ಶಿವಾಜಿ’ (Raja Shivaji) ಸಿನಿಮಾದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ನಟ ರಿತೇಶ್ ದೇಶ್‌ಮುಖ್ (Riteish Deshmukh) ಅವರು ಈ ಐತಿಹಾಸಿಕ ಕಥಾಹಂದರದ, ಸಾಹಸ ಪ್ರಧಾನ ಚಿತ್ರವನ್ನು ನಿರ್ದೇಶಿಸಿದ್ದಾರೆ. ಅಲ್ಲದೇ ಮುಖ್ಯ ಭೂಮಿಕೆಯಲ್ಲಿ ಅವರೇ ನಟಿಸುತ್ತಿದ್ದಾರೆ. 2 ನಿಮಿಷ 31 ಸೆಕೆಂಡುಗಳ ಈ ಟೀಸರ್ ಪ್ರೇಕ್ಷಕರಲ್ಲಿ ರೋಮಾಂಚನ ಉಂಟುಮಾಡಿದೆ. ಸಂಜಯ್ ದತ್ ಈ ಸಿನಿಮಾದಲ್ಲಿ ಕ್ರೂರ ಅಫ್ಜಲ್ ಖಾನ್…

Read More

ಸುಳ್ಳು ಮತ್ತು ಆಧಾರರಹಿತ; ಕದನ ವಿರಾಮದ ಕುರಿತ ಟ್ರಂಪ್ ಹೇಳಿಕೆಯನ್ನು ನಿರಾಕರಿಸಿದ ಇರಾನ್

ಟೆಹ್ರಾನ್, ಏಪ್ರಿಲ್ 1: ಇರಾನ್ ಜೊತೆಗಿನ ಅಮೆರಿಕ ಮತ್ತು ಇಸ್ರೇಲ್ ಯುದ್ಧ ಸದ್ಯಕ್ಕೆ ನಿಲ್ಲುವ ಲಕ್ಷಣಗಳೇ ಕಾಣುತ್ತಿಲ್ಲ. ಇರಾನ್ (Iran War) ಕದನ ವಿರಾಮವನ್ನು ಕೋರಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಹೇಳಿಕೆಗಳನ್ನು ಇರಾನ್ ಬಲವಾಗಿ ನಿರಾಕರಿಸಿದೆ. ಇರಾನ್ ರಾಜ್ಯ ಟಿವಿ ಜೊತೆ ಮಾತನಾಡಿದ ಇರಾನ್ ದೇಶದ ವಿದೇಶಾಂಗ ಸಚಿವಾಲಯದ ವಕ್ತಾರರು ಈ ಹೇಳಿಕೆಯನ್ನು “ಸುಳ್ಳು ಮತ್ತು ಆಧಾರರಹಿತ” ಎಂದು ಕರೆದಿದ್ದಾರೆ. ಕದನವಿರಾಮದ ಯಾವುದೇ ವಿನಂತಿಯನ್ನು ಇರಾನ್ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ಯುನೈಟೆಡ್ ಸ್ಟೇಟ್ಸ್…

Read More

ರಾಷ್ಟ್ರಪತಿಗಳ ಗಮನಸೆಳೆದ ಬೆಂಗಳೂರು ಕರಗ: ಅಧ್ಯಕ್ಷರನ್ನ ಕರೆಯಿಸಿ ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?

ಬೆಂಗಳೂರು, ಏಪ್ರಿಲ್​ 01: ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವ ಇಂದು ನಡೆಯಲಿದೆ. ಸಕಲ ಸಿದ್ಧತೆ ಮಾಡಲಾಗಿದೆ. ಈ ಮಧ್ಯೆ ಕರಗ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕರಗ ಸಮಿತಿಯ ಅಧ್ಯಕ್ಷ ಚಲಕರಿ ನಾರಾಯಣಸ್ವಾಮಿಯನ್ನು ಬೆಂಗಳೂರಿನ ಹೆಚ್​ಎಎಲ್ ಏರ್​ಪೋರ್ಟ್​​ನಲ್ಲಿ ಭೇಟಿ ಮಾಡಿ ಶುಭ ಹಾರೈಸಿದ್ದಾರೆ. ಮುಂದಿನ ದಿನಗಳಲ್ಲಿ ದೇಗುಲಕ್ಕೆ ಭೇಟಿ ನೀಡುವ ಭರವಸೆ ಕೂಡ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮುರ್ಮು ಅವರಿಗೆ ಶ್ರೀಧರ್ಮರಾಯ ಸ್ವಾಮಿ ದೇವಾಲಯದಿಂದ ಕರಗದ ವಸ್ತ್ರವನ್ನು ನೀಡಲಾಗಿದೆ. ಈ ಬಗ್ಗೆ ಅಧ್ಯಕ್ಷ…

Read More