Headlines

nagaraj11081993

‘ರಾಮಾಯಣ’ ಎಐ ಎಂದವರಿಗೆ ಉತ್ತರಿಸಲು ಬಿಟಿಎಸ್​ ವಿಡಿಯೋ ರಿಲೀಸ್ ಮಾಡಿದ ತಂಡ?

ಯಶ್, ರಣಬೀರ್ ಕಪೂರ್ ಮೊದಲಾದವರು ನಟಿಸಿರುವ ‘ರಾಮಾಯಣ’ ಸಿನಿಮಾ (Ramayana Movie) ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಚಿತ್ರದ ಟೀಸರ್ ಏಪ್ರಿಲ್ 2ರಂದು ರಿಲೀಸ್ ಆಗಿದ್ದು ಕೆಲವರಿಂದ ಟೀಕೆ ಎದುರಿಸುತ್ತಿದೆ. ಸಿನಿಮಾದ ಟೀಸರ್ ಉತ್ತಮವಾಗಿಲ್ಲ ಎಂದು ಕೆಲವರು ಹೇಳಿದರೆ, ಇನ್ನೂ ಕೆಲವರು ಇದು ಎಐ ಎಂದಿದ್ದಾರೆ. ಅದಕ್ಕೆ ಪೂರಕವಾದ ಕೆಲವು ಸಾಕ್ಷಿಗಳನ್ನು ಕೂಡ ಒದಗಿಸಲಾಗಿದೆ. ಹೀಗಿರುವಾಗಲೇ ‘ರಾಮಾಯಣ’ ಬಿಹೈಂಡ್​​ ದಿ ಸೀನ್ (ಬಿಟಿಎಸ್​) ವಿಡಿಯೋ ವೈರಲ್ ಆಗಿದೆ. ಇದರ ಅಸಲಿಯತ್ತು ಏನು ಎಂಬ ಬಗ್ಗೆ ಇಲ್ಲಿದೆ ವಿವರ….

Read More

Daily Devotional: ಯಾರು ಬೇಕಾದರೂ ಸನ್ಯಾಸಿ ಆಗಬಹುದಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಯಾರು ಬೇಕಾದರೂ ಸನ್ಯಾಸಿ ಆಗಬಹುದಾ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ಸನಾತನ ಸಂಸ್ಕೃತಿಯಲ್ಲಿ ಸನ್ಯಾಸಿಯಾಗಲು ನಿರ್ದಿಷ್ಟ ವಿಧಿ ವಿಧಾನಗಳು ಮತ್ತು ಕಟ್ಟುಪಾಡುಗಳಿವೆ. ಸನ್ಯಾಸತ್ವವು ಕೇವಲ ಮಠಗಳಿಗೆ ಸೀಮಿತವಲ್ಲ. ಸನ್ಯಾಸಿಯಾಗಲು ಬಯಸುವ ವ್ಯಕ್ತಿಯು ಅರಿಷಡ್ವರ್ಗಗಳಾದ ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರಗಳನ್ನು ಜಯಿಸಿರಬೇಕು. ಒಬ್ಬ ಸನ್ಯಾಸಿಯು ಕುಟುಂಬ ಸಂಬಂಧಗಳಿಂದ ಮುಕ್ತನಾಗಿರಬೇಕು, ಸುಖ-ದುಃಖಗಳನ್ನು ಸಮತೋಲನದಲ್ಲಿ ಸ್ವೀಕರಿಸುವ ಸಮದೃಷ್ಟಿಯುಳ್ಳವನಾಗಿರಬೇಕು. ಆಹಾರದ ವ್ಯಾಮೋಹವಿಲ್ಲದೆ, ಸಿಕ್ಕಿದ್ದನ್ನು ಪ್ರಸಾದ ರೂಪದಲ್ಲಿ ಸ್ವೀಕರಿಸಬೇಕು. ಚಳಿ, ಮಳೆ, ಬಿಸಿಲಿಗೆ ಆತಂಕ…

Read More

ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್: ಎಲ್‌ಪಿಜಿ ಬೆನ್ನಲ್ಲೇ ಈಗ ಡಾಂಬರು ಅಭಾವ, ಸ್ಥಗಿತಗೊಂಡ ರಸ್ತೆ ಕಾಮಗಾರಿಗಳು!

ಕಾರವಾರ, ಏಪ್ರಿಲ್ 4: ಗಲ್ಫ್ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಸತತ ಯುದ್ಧದ ಭೀತಿಯು ಇದೀಗ ಭಾರತದ (India) ಆರ್ಥಿಕತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಯ ಮೇಲೆ ಬಾರೀ ಹೊಡೆತ ನೀಡುತ್ತಿದೆ. ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿ ಬಂದ್ ಆಗಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ಎಲ್‌ಪಿಜಿ ಗ್ಯಾಸ್ ಮಾತ್ರವಲ್ಲದೆ ಕಚ್ಚಾ ಡಾಂಬರು ಬಿಟುಮಿನ್ (Bitumen) ಪೂರೈಕೆಯಲ್ಲೂ ತೀವ್ರ ವ್ಯತ್ಯಯ ಉಂಟಾಗಿದೆ. ಇದರೊಂದಿಗೆ, ಎಲ್​​ಪಿಜಿ ಹಾಗೂ ಆಟೋ ಗ್ಯಾಸ್ ಕೊರತೆ ಜತೆಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ. ಬಿಕೋ ಎನ್ನುತ್ತಿದೆ ಕಾರವಾರ…

Read More

ದಿನ ಭವಿಷ್ಯ : ಇಂದು ಈ ರಾಶಿಯವರಿಗೆ ತಮ್ಮ ವ್ಯವಹಾರದ ಆಳ ಸ್ಪಷ್ಟವಾಗಿ ಅರ್ಥವಾಗಲಿದೆ

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ದ್ವಿತೀಯಾ ತಿಥಿಯ ಶನಿವಾರದಂದು ವ್ಯಕ್ತಿತ್ವದ ಪರೀಕ್ಷೆ, ಕಾರ್ಯಕ್ಕೆ ಕೃತಜ್ಞತೆ, ಹಣಕಾಸಿನ ಶಿಸ್ತು, ಪರರ ನಿಂದನೆ ಇವೆಲ್ಲ ಈ ದಿನದ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ :…

Read More

CSK vs PBKS: ಸತತ 2ನೇ ಸೋಲು; ಸಿಎಸ್​ಕೆಗೆ ತವರಿನಲ್ಲೂ ಧಕ್ಕಲಿಲ್ಲ ಗೆಲುವು

ಚೆನ್ನೈನ ಚೆಪಾಕ್​ ಮೈದಾನದಲ್ಲಿ ನಡೆದ ಐಪಿಎಲ್ 2026 ರ7ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡವು 20 ಓವರ್‌ಗಳಲ್ಲಿ ಐದು ವಿಕೆಟ್‌ಗಳಿಗೆ 209 ರನ್ ಗಳಿಸಿತು. ತಂಡದ ಪರ ಆಯುಷ್ ಮ್ಹಾತ್ರೆ 73 ರನ್‌ಗಳೊಂದಿಗೆ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಈ ಗುರಿ ಬೆನ್ನಟ್ಟಿದ ಪಂಜಾಬ್ ನಾಯಕ ಶ್ರೇಯಸ್ ಅವರ ಅರ್ಧಶತಕದ ನೆರವಿನಿಂದ 18.4 ಓವರ್​ಗಳಲ್ಲಿ 5 ವಿಕೆಟ್‌ಗಳನ್ನು ಕಳೆದುಕೊಂಡು…

Read More

ಸಿಂಪಲ್ ಸುನಿ ನಿರ್ದೇಶನದ ಹೊಸ ಸಿನಿಮಾಗೆ ಶುಭ ಕೋರಿದ ರಶ್ಮಿಕಾ ಮಂದಣ್ಣ

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಕನ್ನಡ ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದಾರೆ. ಹಲವು ವರ್ಷಗಳಿಂದ ಅವರು ಯಾವುದೇ ಹೊಸ ಕನ್ನಡ ಸಿನಿಮಾವನ್ನು ಒಪ್ಪಿಕೊಂಡಿಲ್ಲ. ಸದ್ಯಕ್ಕೆ ಅವರು ಟಾಲಿವುಡ್, ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಕನ್ನಡದ ಸೆಲೆಬ್ರಿಟಿಗಳ ಜೊತೆಗೂ ಅವರು ಅಷ್ಟಾಗಿ ಕಾಣಿಸಿಕೊಳ್ಳುವುದಿಲ್ಲ. ಆದರೆ ಈಗ ಅವರು ಸಿಂಪಲ್ ಸುನಿ (Simple Suni) ನಿರ್ದೇಶನದ ಹೊಸ ಸಿನಿಮಾಗೆ ಶುಭ ಕೋರಿದ್ದಾರೆ. ‘ಮೋಡ ಕವಿದ ವಾತಾವರಣ’ (Moda Kavida Vaatavarana) ಸಿನಿಮಾಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ವಿಶ್ ಮಾಡಿದ್ದಾರೆ….

Read More

ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ

ಬಾಗಲಕೋಟೆ, ಏಪ್ರಿಲ್​ 03: ಏ.9ರಂದು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ ಐಹೊಳೆ ಗ್ರಾಮದಲ್ಲಿ ಬಿಜೆಪಿ ಪ್ರಚಾರ ಸಭೆ ಮಾಡಲಾಗಿದೆ. ಈ ವೇಳೆ ಮಾತನಾಡಿದ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಸಿದ್ದರಾಮಯ್ಯ ಯುಗಾದಿ ಹಬ್ಬದಂದೂ ಮಾಂಸ ತಿಂತೀನಿ ಅಂತಾರೆ. ಸಿದ್ರಾಮಣ್ಣ ನೀನು ಮಾಂಸನಾದ್ರೂ ತಿನ್ನು, ಸುನ್ನತ್​​ ಆದರೂ ಮಾಡಿಕೋ, ಏನ್ಬೇಕಾದರೂ ಮಾಡು ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ನೀನು ಯುಗಾದಿ, ದೀಪಾವಳಿ ಹಬ್ಬಕ್ಕೆ ಮಾಂಸ ತಿಂತೀನಿ ಅಂದರೆ 15%…

Read More

CSK vs PBKS: 6,6,6,6.. ಸಿಎಸ್​ಕೆ ಬೌಲರ್​ಗಳ ಬೆವರಿಳಿಸಿದ ಪ್ರಿಯಾಂಶ್

ಚೆನ್ನೈನ ಚೆಪಾಕ್​ ಮೈದಾನದಲ್ಲಿ ನಡೆದ ಐಪಿಎಲ್ 2026 ರ7ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​ಕೆ, ಪಂಜಾಬ್ ತಂಡಕ್ಕೆ 210 ರನ್‌ಗಳ ಗುರಿ ನೀಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡವು 20 ಓವರ್‌ಗಳಲ್ಲಿ ಐದು ವಿಕೆಟ್‌ಗಳಿಗೆ 209 ರನ್ ಗಳಿಸಿತು. ಪಂಜಾಬ್ ಪರ ಆಯುಷ್ ಮ್ಹಾತ್ರೆ 73 ರನ್‌ಗಳೊಂದಿಗೆ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಈ ಗುರಿ ಬೆನ್ನಟ್ಟಿದ ಪಂಜಾಬ್​ಗೆ ಆರಂಭಿಕ ಪ್ರಿಯಾಂಶ್ ತಮ್ಮ ಸ್ಫೋಟಕ ಬ್ಯಾಟಿಂಗ್‌ ಮೂಲಕ ಉತ್ತಮ ಆರಂಭ ಒದಗಿಸಿಕೊಟ್ಟರು. ಪ್ರಿಯಾಂಶ್…

Read More

ಗ್ಯಾಸ್​ ಇಲ್ಲಿದೇ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು: ಬೆಂಗಳೂರು ಜೀವನಾಡಿ ಸಾರಥಿಗಳಿಗೆ ಸಂಕಷ್ಟ

ಬೆಂಗಳೂರು, (ಏಪ್ರಿಲ್ 03): ಇಸ್ರೆಲ್ ಅಮೆರಿಕಾ-ಇರಾನ್ ಯುದ್ಧದಿಂದಾಗಿ ಭಾರತದಲ್ಲಿ ಗ್ಯಾಸ್ ಅಭಾಯ ಸೃಷ್ಟಿಯಾಗಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಲ್‌ಪಿಜಿ (LPG) ಸಮಸ್ಯೆ ಉದ್ಭವಿಸಿದೆ. ಆಟೋ ದುಡಿಮೆಯನ್ನು ನಂಬಿ ಜೀವನ ಮಾಡುತ್ತಿರುವಾಗ ಗ್ಯಾಸ್ ಸಿಗುತ್ತಿಲ್ಲ. ಹೀಗಾಗಿ ಆಟೋವನ್ನು ನಿಲ್ಲಿಸುವ ಸ್ಥಿತಿ ಬಂದಿದ್ದು, ಸಂಸಾರದ ಬಂಡಿ ಸಾಗಿಸಲು ಸಾರಥಿಗಳು ಒದ್ದಾಡುತ್ತಿದ್ದಾರೆ. ಯಾಕಂದ್ರೆ, ಹಗಲು-ರಾತ್ರಿ ಗ್ಯಾಸ್‌ಗಳ ಮುಂದೆ ಕ್ಯೂ ನಿಲ್ಲೋದೇ ಆಯ್ತು. ಗ್ಯಾಸ್ ತುಂಬಿ ಆಟೋ (Auto) ಓಡಿಸೋದೆ ಆಮೇಲಿನ ಮಾತು. ಯಾವ ಬಂಕ್ ಮುಂದೆ ನೋಡಿದ್ರೂ ಕಿಲೋಮೀಟರ್‌ಗಟ್ಟಲೇ ಹನುಮನ…

Read More

ಹೊಸ ತಿರುವು ಪಡೆದ ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ

ಬಳ್ಳಾರಿ, ಏಪ್ರಿಲ್​ 03: ಬಳ್ಳಾರಿ ಪಾಲಿಕೆಯ 39ನೇ ವಾರ್ಡ್​ ಕಾಂಗ್ರೆಸ್ ಸದಸ್ಯ ವಿ. ಕುಬೇರರಿಂದ AEE ವೀರೇಶ್​ ಮೇಲೆ ಹಲ್ಲೆ ಪ್ರಕರಣ ಸದ್ಯ ರಾಜಕೀಯ ತಿರುವು ಪಡೆದುಕೊಂಡಿದೆ. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರ ಸಲಾಂ ಬಳ್ಳಾರಿ ಕಾರ್ಯಕ್ರಮದ ವೇಳೆ ಹಲ್ಲೆ ಮಾಡಿದ್ದಾರೆ. ಇನ್ನು ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ನಾರಾ ಭರತ್‌ ರೆಡ್ಡಿ, ಅದೇ ವಾರ್ಡಿನಲ್ಲಿ ನಾನು ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಅದನ್ನ…

Read More