nagaraj11081993

ಪತಿಗೆ ಡಿವೋರ್ಸ್ ಕೊಟ್ಟಿದ್ದೇಕೆ ಪದ್ಮಜಾ ರಾವ್? ವಿವರಿಸಿದ ಹಿರಿಯ ನಟಿ

ಪದ್ಮಜಾ ರಾವ್ (Padmaja Rao) ಅವರು ಕನ್ನಡದಲ್ಲಿ ಹಲವು ಸಿನಿಮಾಗಳನ್ನು ಮಾಡಿದ್ದಾರೆ. ಇದರ ಜೊತೆಗೆ ಧಾರಾವಾಹಿಗಳಲ್ಲೂ ಪದ್ಮಜಾ ನಟಿಸಿದ್ದಾರೆ. ‘ಭಾಗ್ಯಲಕ್ಷ್ಮೀ’ ಧಾರಾವಾಹಿಯಲ್ಲಿ ಭಾಗ್ಯಾಳ ಅತ್ತೆ ಪಾತ್ರ ಮಾಡುತ್ತಿದ್ದಾರೆ. ಖಡಕ್ ಅತ್ತೆಯಾಗಿ, ಮಗ ತಪ್ಪು ಮಾಡಿದಾಗ ಶಿಕ್ಷೆ ಕೊಡುವಾಗ ಅಮ್ಮನಾಗಿ ಕಾಣಿಸಿಕೊಂಡಿದ್ದಾರೆ. ಪದ್ಮಜಾ ಅವರು ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ಮೊದಲ ಮದುವೆ ಹಾಗೂ ಅದರ ವಿಚ್ಛೇದನದ ಬಗ್ಗೆ ಹೇಳಿದ್ದಾರೆ ಪದ್ಮಾಜಾ. ರ‍್ಯಾಪಿಡ್ ರಶ್ಮಿ ಯೂಟ್ಯೂಬ್​ ಚಾನೆಲ್​​ಗೆ ನೀಡಿದ ಸಂದರ್ಶನದಲ್ಲಿ ಪದ್ಮಜಾ ಹೇಳಿದ್ದಾರೆ. ‘ನಾನು ಸಣ್ಣ ವಯಸ್ಸಿಗೆ…

Read More

ಶೆಟ್ಟಿ ಗ್ಯಾಂಗ್​​ನಲ್ಲಿ ಬಿರುಕು? ಪ್ರಮೋದ್ ಶೆಟ್ಟಿ ಹೇಳಿದ್ದೇನು?

ಕನ್ನಡ ಚಿತ್ರರಂಗದ ಪ್ರತಿಭಾವಂತ ಮತ್ತು ಯಶಸ್ವಿ ಗ್ಯಾಂಗ್ ಆಗಿರುವ ‘ಶೆಟ್ಟಿ ಗ್ಯಾಂಗ್’ನಲ್ಲಿ ಬಿರುಕು ಮೂಡಿದೆ. ರಿಷಬ್ ಶೆಟ್ಟಿ, ರಾಜ್ ಶೆಟ್ಟಿ ಮತ್ತು ರಕ್ಷಿತ್ ಶೆಟ್ಟಿ ಅವರು ಪರಸ್ಪರ ದೂರಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ರಿಷಬ್ ಶೆಟ್ಟಿ ಇತ್ತೀಚೆಗೆ ಹೊಂಬಾಳೆಯನ್ನು ಅನ್​ಫಾಲೋ ಮಾಡಿದರು. ರಾಜ್ ಬಿ ಶೆಟ್ಟಿಯನ್ನು ಅನ್​​ಫಾಲೋ ಮಾಡಿದರು ಎಂದೆಲ್ಲ ಸುದ್ದಿ ಹರಿದಾಡುತ್ತಿದೆ. ಇದೀಗ ಇದೇ ಗ್ಯಾಂಗಿನ ಸದಸ್ಯರಾಗಿರುವ ಪ್ರಮೋದ್ ಶೆಟ್ಟಿ ಅವರು ಟಿವಿ9 ಜೊತೆಗೆ ಮಾತನಾಡಿದ್ದು, ‘ಶೆಟ್ಟಿ ಗ್ಯಾಂಗಿ’ನಲ್ಲಿ ಏನೇನಾಗುತ್ತಿದೆ ಎಂಬ ಬಗ್ಗೆ ವಿವರವಾಗಿ…

Read More

RailTel Recruitment 2026: ಕೇಂದ್ರ ಸರ್ಕಾರಿ ಸ್ವಾಮ್ಯದ ರೈಲ್‌ಟೆಲ್‌ನಲ್ಲಿ ನೇಮಕಾತಿ; ಹಿಂದಿ ಅನುವಾದಕ ಹುದ್ದೆಗೆ ಅರ್ಜಿ ಆಹ್ವಾನ

ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (RailTel) 2026ನೇ ಸಾಲಿನ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಜೂನಿಯರ್ ಹಿಂದಿ ಅನುವಾದಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಹುದ್ದೆಗಳು ಖಾಲಿ ಇದ್ದು, ಆಯ್ಕೆಯಾದ ಅಭ್ಯರ್ಥಿಗಳು ಹೈದರಾಬಾದ್ (ತೆಲಂಗಾಣ) ಅಥವಾ ಮುಂಬೈ (ಮಹಾರಾಷ್ಟ್ರ) ನಗರಗಳಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಸಂಸ್ಥೆಯಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಅರ್ಹತೆ ಮತ್ತು ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ…

Read More

ಪೆಟ್ರೋಕೆಮಿಕಲ್ ಉತ್ಪನ್ನಗಳಿಗೆ ಆಮದು ಸುಂಕದಿಂದ ವಿನಾಯಿತಿ; ಹಲವು ಉದ್ಯಮಗಳಿಗೆ ಅನುಕೂಲ

ನವದೆಹಲಿ, ಏಪ್ರಿಲ್ 2: ಪಶ್ಚಿಮ ಏಷ್ಯಾದಲ್ಲಿ ಯುದ್ಧ ಭೀತಿ ತಪ್ಪದ ಹಿನ್ನೆಲೆಯಲ್ಲಿ ತೈಲ, ಅನಿಲ ಹಾಗೂ ಪೆಟ್ರೋಕೆಮಿಕಲ್ ಪೂರೈಕೆ ವ್ಯವಸ್ಥೆಕ್ಕೆ ಧಕ್ಕೆಯಾಗಿದೆ. ಪೆಟ್ರೋಕೆಮಿಕಲ್ (petrochemicals) ಆಮದು ವೆಚ್ಚ ಬಹಳ ಹೆಚ್ಚಾಗುತ್ತಿದ್ದು, ಇದರ ಮೇಲೆ ಅವಲಂಬಿತವಾಗಿರುವ ಉದ್ಯಮಗಳಿಗೆ ರಿಲೀಫ್ ನೀಡುವ ಸಲುವಾಗಿ ಸರ್ಕಾರ ಆಮದು ಸುಂಕ ವಿನಾಯಿತಿ ಕ್ರಮ ತೆಗೆದುಕೊಳ್ಳುತ್ತಿದೆ. ಇಂದು ಗುರುವಾರ (ಏ. 2) ಸರ್ಕಾರ ಹೊರಡಿಸಿರುವ ಅಧಿಸೂಚನೆ ಪ್ರಕಾರ, ಕೆಲ ಪ್ರಮುಖ ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲೆ ಪೂರ್ಣ ಆಮದು ಸುಂಕ (Customs Duty) ವಿನಾಯಿತಿ ಕೊಡಲಿದೆ….

Read More

ಅಂಗಡಿಯಲ್ಲಿ ಸಿಗುವ 5 ರೂ. ಬೋಟಿಗೆ ಬೆಂಗಳೂರು ಪಬ್​​ನಲ್ಲಿ 150 ರೂ. ಪಾವತಿಸಿದ ಯುವಕ: ಇದು ದೋಚುವ ಒಂದು ಕಲೆ

ಬೆಂಗಳೂರು, ಏ.2: ಬೆಂಗಳೂರಿನಲ್ಲಿ ಅಣಬೆಯಂತೆ ಅಲ್ಲಲ್ಲಿ ಪಬ್​​​ಗಳು ಇದೆ. ಅದರಲ್ಲೂ ಕೆಲವೊಂದು ಪಬ್​​​​ ತುಂಬಾ ದುಬಾರಿಯಾಗಿರುತ್ತದೆ. ಇದೀಗ ಈ ದುಬಾರಿ ಪಬ್​​ಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಈ ಬಗ್ಗೆ ಎಕ್ಸ್​​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಳ್ಳಲಾಗಿದೆ. ಜನಪ್ರಿಯ ಪಬ್‌ಗೆ ಭೇಟಿ ನೀಡಿದಾಗ, ಮೆನುವಿನಲ್ಲಿ ಹೆಚ್ಚು ವಿವರವಾದ ಖಾದ್ಯದ ಬದಲಿಗೆ ಫ್ರೈಯಮ್‌ಗಳನ್ನು ನೀಡಲಾಗಿದೆ ಎಂದು ಗ್ರಾಹಕರೊಬ್ಬರು ಹೇಳಿಕೊಂಡಿದ್ದಾರೆ. ಇದೀಗ ಇಂದಿರಾನಗರದ ಪಬ್​​ ಆಗಿರುವ ಅನುಭವದ ಬಗ್ಗೆ ಅರುಣ್‌ರಾಜ್ ಪತ್ತಾರ್ ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ. ಮೆನು ಮತ್ತು ಸ್ವೀಕರಿಸಿದ ಖಾದ್ಯದ ಚಿತ್ರವನ್ನು ಹಂಚಿಕೊಂಡ…

Read More

ಕರ್ನಾಟಕ ಗಡಿಯ ಪಾಲಾರ್ ಚೆಕ್ ಪೋಸ್ಟ್ ಬಳಿ ರಾತ್ರಿ ವೇಳೆ ಪ್ರತ್ಯಕ್ಷವಾದ ಕಾಡಾನೆ!

ಚಾಮರಾಜನಗರ, ಏಪ್ರಿಲ್​​ 02: ಜಿಲ್ಲೆಯ ಪಾಲಾರ್ ಚೆಕ್ ಪೋಸ್ಟ್ ಬಳಿ ಇತ್ತೀಚೆಗೆ ರಾತ್ರಿ ವೇಳೆ ಕಾಡಾನೆ ಓಡಾಟ ಕಂಡುಬಂದಿದೆ. ಕರ್ನಾಟಕ ಮತ್ತು ತಮಿಳುನಾಡಿನ ಗಡಿಯಲ್ಲಿರುವ ಪಾಲಾರ್ ಚೆಕ್ ಪೋಸ್ಟ್ ಪ್ರದೇಶದಲ್ಲಿ ಆನೆಯೊಂದು ಸಂಚರಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಗಡಿ ಪ್ರದೇಶಗಳಲ್ಲಿ ಇಂತಹ ವನ್ಯಜೀವಿಗಳ ಸಂಚಾರವು ಸಾಮಾನ್ಯವಾಗಿದ್ದರೂ, ಚೆಕ್ ಪೋಸ್ಟ್ ಬಳಿ ಆನೆಯ ಓಡಾಟವು ಜನರಲ್ಲಿ ಅಚ್ಚರಿ ಮೂಡಿಸಿದೆ. ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source…

Read More

Video: ಹೈಕೋರ್ಟ್​ ಎದುರು ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಮಹಿಳೆ

ಒಡಿಶಾ, ಏಪ್ರಿಲ್ 02: ಒಡಿಶಾದ ಹೈಕೋರ್ಟ್​ ಎದುರು ನಿಲ್ಲಿಸಿದ್ದ ವಾಹನಗಳಿಗೆ ಮಹಿಳೆಯೊಬ್ಬಳು ಬೆಂಕಿ ಹಚ್ಚಿರುವ ವಿಡಿಯೋ ವೈರಲ್ ಆಗಿದೆ. ಒಡಿಶಾದ ಕಟಕ್‌ನಲ್ಲಿರುವ ಒರಿಸ್ಸಾ ಹೈಕೋರ್ಟ್ ಬಳಿ ಈ ಘಟನೆ ನಡೆದಿದೆ. ಪ್ರಧಾನಿ ಮೋದಿಯವರ ಗಮನ ಸೆಳೆಯಲು ಈ ರೀತಿ ಮಾಡಿದ್ದಾಗಿ ಮಹಿಳೆ ಪೊಲೀಸರಿಗೆ ತಿಳಿಸಿದ್ದಾಳೆ. ಮಿನಾತಿ ಸಾಹು ಎಂದು ಗುರುತಿಸಲಾದ ಆರೋಪಿಯನ್ನು ಬಂಧಿಸಲಾಗಿದೆ. ವಾಹನಗಳಿಗೆ ಬೆಂಕಿ ಹಚ್ಚಲು ಪೆಟ್ರೋಲ್ ಬಳಸಿದ್ದಾಗಿ ಆಕೆ ಒಪ್ಪಿಕೊಂಡಿದ್ದಾಳೆ. ಮೊದಲು ಎರಡು ಬೈಕ್​ಗಳಿಗೆ ತಗುಲಿದ್ದು ಬೆಂಕಿ ನಂತರ ಕಾರಿಗೂ ಆವರಿಸಿತ್ತು.ಆಕೆ ಮಾನಸಿಕ ಅಸ್ವಸ್ಥೆ…

Read More

ಕರಾವಳಿ ಜನತೆಗೆ ಸಿಹಿ ಸುದ್ದಿ: ಏಪ್ರಿಲ್ 8 ರಿಂದ ಕುವೈತ್-ಮಂಗಳೂರು ನಡುವೆ ವಿಮಾನಯಾನ ಆರಂಭ, ಇಲ್ಲಿದೆ ವೇಳಾಪಟ್ಟಿ

ಮಂಗಳೂರು, ಏಪ್ರಿಲ್ 2: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉದ್ಯೋಗದಲ್ಲಿರುವ ದಕ್ಷಿಣ ಭಾರತದ ಪ್ರಯಾಣಿಕರಿಗೆ, ಅದರಲ್ಲೂ ವಿಶೇಷವಾಗಿ ಕರಾವಳಿ ಭಾಗದ ಜನರಿಗೆ ಜಜೀರಾ ಏರ್‌ವೇಸ್ (Jazeera Airways) ಭರ್ಜರಿ ಸಿಹಿ ಸುದ್ದಿ ನೀಡಿದೆ. ಏಪ್ರಿಲ್ 8ರಿಂದ ಸೌದಿ ಅರೇಬಿಯಾದ ದಮ್ಮಮ್ ಮೂಲಕ ಕುವೈತ್ ಮತ್ತು ಮಂಗಳೂರು (Mangalore) ನಡುವೆ ವಾರಕ್ಕೆ ಎರಡು ಬಾರಿ ವಿಶೇಷ ವಿಮಾನಯಾನ ಸೇವೆ ಆರಂಭವಾಗಲಿದೆ. ಭಾರತದ ನಾಲ್ಕು ನಗರಗಳಿಗೂ ಹೊಸ ವಿಮಾನಯಾನ ಸಂಪರ್ಕ ಜಜೀರಾ ಏರ್‌ವೇಸ್ ಭಾರತದ ನಾಲ್ಕು ಪ್ರಮುಖ ನಗರಗಳಾದ ಮಂಗಳೂರು, ಕೋಝಿಕ್ಕೋಡ್ (ಕ್ಯಾಲಿಕಟ್),…

Read More

ಚಿನ್ನದ ಚೈನ್​ಗಾಗಿ ನಟಿಯ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಕ್ರಿಕೆಟಿಗ

ಶ್ರೀಲಂಕಾದ ಖ್ಯಾತ ಕ್ರಿಕೆಟಿಗ ಭಾನುಕ ರಾಜಪಕ್ಸೆ ಅವರು ನಟಿ ಹರ್ಷಿ ರಸಂಗ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಸುಳ್ಳು ಮತ್ತು ದಾರಿ ತಪ್ಪಿಸುವ ಹೇಳಿಕೆಗಳನ್ನು ನೀಡಿದ್ದಾರೆ ಎಂಬುದು ರಾಜಪಕ್ಸೆ ನಟಿಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಇದಕ್ಕೆಲ್ಲಾ ಮುಖ್ಯ ಕಾರಣ ಒಂದು ಚಿನ್ನದ ಸರ ಎಂಬುದು ವಿಶೇಷ. ಏನಿದು ಪ್ರಕರಣ? ಭಾನುಕ ರಾಜಪಕ್ಸೆ ಹಾಗೂ ನಟಿ ಹರ್ಷಿ ರಸಂಗ ನಡುವೆ ಈ ಹಿಂದೆ ಪ್ರೇಮ ಸಂಬಂಧವಿತ್ತು. ಆ ಸಮಯದಲ್ಲಿ ರಾಜಪಕ್ಸೆ ಅವರು ಚಿನ್ನದ ಸರ ಮತ್ತು…

Read More

ತೆಲುಗು ನಟರಿಗೆ ಡ್ರಗ್ಸ್ ಪರೀಕ್ಷೆ ಕಡ್ಡಾಯ ಮಾಡಿ: ವಿವಾದ ಎಬ್ಬಿಸಿದ ಶಾಸಕನ ಹೇಳಿಕೆ

ಚಿತ್ರರಂಗದವರು (Movie Industry) ಎಂದೊಡನೆ ಪಾರ್ಟಿ ಮಾಡುವವರು, ಐಶಾರಾಮಿ, ಸ್ವೇಚ್ಛೆಯ ಜೀವನ ನಡೆಸುವವರ ಎಂಬ ಕಲ್ಪನೆ ಹಲವರಿಗಿದೆ. ಅದರಲ್ಲೂ ಡ್ರಗ್ಸ್ ಜೊತೆಗೆ ಚಿತ್ರರಂಗವನ್ನು ಸದಾ ಲಿಂಕ್ ಮಾಡಲಾಗುತ್ತದೆ. ಇದು ಒಂದು ಹಂತಕ್ಕೆ ನಿಜವಾದರೂ ಎಲ್ಲರೂ ಹೀಗೆಯೇ ಇರುತ್ತಾರೆ ಎಂದೇನೂ ಇಲ್ಲ. ಇದೀಗ ತೆಲಂಗಾಣದ ಶಾಸಕನೋರ್ವ ತೆಲುಗು ಚಿತ್ರರಂಗದ ಸ್ಟಾರ್ ನಟರುಗಳ ಬಗ್ಗೆ ನೀಡಿರುವ ಹೇಳಿಕೆ ತೀವ್ರ ವಿವಾದ ಎಬ್ಬಿಸಿದೆ. ಶಾಸಕನ ಹೇಳಿಕೆಗೆ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ತೆಲಂಗಾಣದ ಕಾಂಗ್ರೆಸ್ ಶಾಸಕ ಅನಿರುದ್ಧ್ ರೆಡ್ಡಿ ಇತ್ತೀಚೆಗೆ ಮಾತನಾಡಿ, ‘ತೆಲುಗು…

Read More