Headlines

nagaraj11081993

ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು: ಮೈ ಜುಮ್ಮೆನಿಸುವ ಸಿಸಿಟಿವಿ ವಿಡಿಯೋ – Kannada News | Belagavi Couple and Child Narrowly Escape Stray Dog Attack, CCTV Video Goes Viral

ಬೆಳಗಾವಿ, ಡಿಸೆಂಬರ್ 27: ದಂಪತಿ ತಮ್ಮ ಪಾಡಿಗೆ ತಾವು ಮಕ್ಕಳೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿದ ಘಟನೆ ಬೆಳಗಾವಿ ನಗರದ ಜೋಶಿಮಾಳಾದಲ್ಲಿ ನಡೆದಿದೆ. ಆರಂಭದಲ್ಲಿ ಒಂದೆರಡು ನಾಯಿಗಳಷ್ಟೇ ಕಾಣ್ತಿವೆ. ಆದರೆ, ಉಳಿದ ಬೀದಿನಾಯಿಗಳ ಪಡೆ ಅದೆಲ್ಲಿದ್ದವೋ ಏನೋ ಒಮ್ಮಿಂದೊಮ್ಮೆಲೇ ಪ್ರತ್ಯಕ್ಷವಾಗಿ ದಂಪತಿ ಮತ್ತು ಮಕ್ಕಳನ್ನು ಸುತ್ತುವರಿದಿವೆ. ಬೀದಿನಾಯಿಗಳು ಅಟ್ಟಹಾಸ ಮೆರೆಯುತ್ತಿತಿದ್ದಂತೆಯೇ ಬೆಚ್ಚಿದ ಪುಟ್ಟ ಮಗು, ಕಿರುಚಾಡತೊಡಗಿದೆ. ಇನ್ನು, ತಂದೆ ನಾಯಿಗಳನ್ನು ಓಡಿಸಿದ್ದಾರೆ. ಕೂದಲೆಳೆ ಅಂತರದಲ್ಲಿ ದಂಪತಿ ಮತ್ತು ಮಕ್ಕಳು ಪಾರಾಗಿದ್ದಾರೆ. ಕರ್ನಾಟಕದ ಇನ್ನಷ್ಟು…

Read More

ಬಿಜೆಪಿಯೊಂದಿಗೆ ಮೈತ್ರಿ ಕಡಿತದ ಹಿಂದಿದೆ ದೇವೇಗೌಡ್ರ ರಾಜಕೀಯ ಲೆಕ್ಕಾಚಾರ, ವಿಜಯೇಂದ್ರ ಹೇಳಿದ್ದೇನು? – Kannada News | BJP President BY Vijayendra Reacts On HD Devegowda Statement JDS alone in local body polls, no alliance with BJP

ಬೆಂಗಳೂರು, (ಡಿಸೆಂಬರ್ 27): ಕರ್ನಾಟಕದಲ್ಲಿ (Karnataka) ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ-ಜೆಡಿಎಸ್ ಮೈತ್ರಿ,  (JDS And BJP alliance)ಸ್ಥಳೀಯ ಸಂಸ್ಥೆಗಳ ಚುನಾವಣೆಗಿಲ್ಲ ಮೈತ್ರಿ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (HD Devegowda) ಸ್ಪಷ್ಟಪಡಿಸಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರೀ ಪರ ವಿರೋಧದ ಚರ್ಚೆಗೆ ಕಾರಣವಾಗಿದೆ. ಎಂಪಿ, ಎಂಎಲ್​​ಎಗಳು ಅನ್ಯೂನ್ಯವಾಗಿರಲಿ. ಸ್ಥಳೀಯವಾಗಿ ಚುನಾವಣೆಗಳು ಕೆಳ ಹಂತದ ಕಾರ್ಯಕರ್ತರು ಹೊಡೆದುಕೊಳ್ಳಲಿ ಎಂದು ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿವೆ. ಹೆಚ್‌ಡಿಡಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಜೆಡಿಎಸ್…

Read More

NCERT Recruitment 2025: ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್​ ನ್ಯೂಸ್​; NCERT ನಲ್ಲಿ 173 ಬೋಧಕೇತರ ಸಿಬ್ಬಂದಿ ನೇಮಕಾತಿ – Kannada News | NCERT Non Teaching Recruitment 2025: 173 Posts Out! Apply Now!

ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಗುಡ್​ ನ್ಯೂಸ್​​ ಇಲ್ಲಿದೆ. ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಬೋಧಕೇತರ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳನ್ನು ಗ್ರೂಪ್ ಎ, ಗ್ರೂಪ್ ಬಿ ಮತ್ತು ಗ್ರೂಪ್ ಸಿ ಅಡಿಯಲ್ಲಿ ಭರ್ತಿ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಇಂದಿನಿಂದ (ಡಿಸೆಂಬರ್ 27) ಪ್ರಾರಂಭವಾಗುತ್ತಿದ್ದು, ಜನವರಿ 16, 2026 ರವರೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು NCERT ಯ ಅಧಿಕೃತ ವೆಬ್‌ಸೈಟ್ ncert.nic.in ಗೆ ಭೇಟಿ ನೀಡುವ ಮೂಲಕ…

Read More

ಕೂದಲು ಉದುರುವ ಸಮಸ್ಯೆ ನಿವಾರಣೆಗೆ ಅಡುಗೆ ಮನೆಯಲ್ಲಿ ಲಭ್ಯವಿರುವ ಈ ವಸ್ತುಗಳೇ ಸಾಕು – Kannada News | Drink these drinks to prevent hair loss

ಇತ್ತೀಚಿನ ದಿನಗಳಲ್ಲಿ ಎಲ್ಲಾ ವಯೋಮಾನದವರು ಸಹ ಕೂದಲು ಉದುರುವಿಕೆ  (hair fall) ಸಮಸ್ಯೆಯಿಂದ ತೊಂದರೆಗೀಡಾಗಿದ್ದಾರೆ. ಕೆಟ್ಟ ಜೀವನಶೈಲಿ, ಅನಾರೋಗ್ಯಕರ ಆಹಾರ ಪದ್ಧತಿ, ಒತ್ತಡ ಇವೆಲ್ಲವೂ ಕೂದಲು ಉದುರುವಿಕೆಗೆ ಮುಖ್ಯ ಕಾರಣ.  ಈ ಕೂದಲು ಉದುರುವಿಕೆ ಸಮಸ್ಯೆಯಿಂದ ಮುಕ್ತಿ ಪಡೆಯಲು, ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸಲು ಹಲವರು ವಿವಿಧ ಹೇರ್‌ ಮಾಸ್ಕ್‌, ಎಣ್ಣೆ ಇತ್ಯಾದಿ ಬಾಹ್ಯ ಆರೈಕೆಯ ಮೊರೆ ಹೋಗ್ತಾರೆ. ಇದರ ಜೊತೆಗೆ ಕೂದಲ ಆರೋಗ್ಯಕ್ಕೆ ಆಂತರಿಕ ಪೋಷಣೆಯೂ ಅಷ್ಟೇ ಮುಖ್ಯ. ನಿಮಗೂ ಹೇರ್‌ ಫಾಲ್‌ ಸಮಸ್ಯೆ ಇದ್ದರೆ, ಅಡುಗೆ…

Read More

ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ಕನ್ನಡದಲ್ಲಿರುವ ಫಲಕಕ್ಕೆ ತೆಲುಗು ಭಾಷಿಕರ ವಿರೋಧ – Kannada News | Mantralaya Language Row: Telugu Speakers Oppose Kannada Signboard at Temple Entrance

ರಾಯಚೂರು, ಡಿಸೆಂಬರ್​​ 27: ಆಂಧ್ರ ಮತ್ತು ರಾಯಚೂರು ಗಡಿಯ ಮಂತ್ರಾಲಯದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭಾಷಾ ವಿವಾದ ತಟ್ಟಿದೆ. ಮಠದ ಮುಖ್ಯ ದ್ವಾರದಲ್ಲಿ ಕನ್ನಡದಲ್ಲಿ ಬರೆಯಲಾಗಿರುವ ಪೂಜ್ಯಾಯ ರಾಘವೇಂದ್ರಾಯ ಸತ್ಯಧರ್ಮ ರತಾಯಚ ಎಂಬ ಶ್ಲೋಕದ ಫಲಕಕ್ಕೆ ತೆಲುಗು ಭಾಷಿಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಮಂತ್ರಾಲಯವು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಗೆ ಸೇರಿದ್ದರಿಂದ, ಇಲ್ಲಿ ತೆಲುಗು ಭಾಷೆಯಲ್ಲಿ ಫಲಕ ಇರಬೇಕು ಎಂದು ಅವರು ವಾದಿಸುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಆಂಧ್ರಪ್ರದೇಶ ಸಿಎಂ ಮತ್ತು ಉಪಮುಖ್ಯಮಂತ್ರಿಗಳಿಗೆ ಟ್ಯಾಗ್ ಮಾಡಿ…

Read More

“ತಾಯಂದಿರಿಗಾಗಿ ಕಾಯ್ದಿರಿಸಲಾಗಿದೆ”: ಬೆಂಗಳೂರು ಮಾಲ್‌ನಲ್ಲಿ ಗರ್ಭಿಣಿಯರಿಗಾಗಿ ವಿಶೇಷ ಪಾರ್ಕಿಂಗ್ ವ್ಯವಸ್ಥೆ – Kannada News | Pregnant Women Parking Goes Viral: Bengaluru Nexus Mall’s Thoughtful Concept

ಬೆಂಗಳೂರು , ಡಿ.27: ಗರ್ಭಿಣಿಯರಿಗೆ (pregnant women) ಮೀಸಲಾದ ಪಾರ್ಕಿಂಗ್ ಸ್ಥಳದ ಒಂದು ವಿಡಿಯೋವನ್ನು ವ್ಯಕ್ತಿಯೊಬ್ಬರು ಹಂಚಿಕೊಂಡಿದ್ದಾರೆ. ಬೆಂಗಳೂರಿನ ಮಾಲ್​​​ವೊಂದರಲ್ಲಿ ಈ ದೃಶ್ಯ ಕಂಡು ಬಂದಿದೆ. ಮಹಿಳೆಯರಿಗಾಗಿ, ಅದರಲ್ಲೂ ಗರ್ಭಿಣಿಯರಿಗೆ ಈ ವಿಶೇಷ ಪಾರ್ಕಿಂಗ್​​ ವ್ಯವಸ್ಥೆಯನ್ನು ಮಾಡಲಾಗಿದೆ. ಇದೀಗ ಮಾಲ್​​ನ ಈ ಪರಿಕಲ್ಪನೆಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಮಾಲ್​​​ನ ಪಾರ್ಕಿಂಗ್ ಪ್ರದೇಶದಲ್ಲಿ ಒಂದು ಸಣ್ಣದಾಗಿ ಗರ್ಭಿಣಿಯರಿಗಾಗಿ ವಿಶೇಷ ಪಾರ್ಕಿಂಗ್​​ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಬಗ್ಗೆ ವಿಡಿಯೋವೊಂದನ್ನು ಅಕ್ಷಯ್ ರೈನಾ ಎಂಬುವವರು ತಮ್ಮ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ….

Read More

ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್ – Kannada News | Bigg Boss Kannada 12: This week there will be double elimination

ಬಿಗ್​​ಬಾಸ್​​ನಲ್ಲಿ (Bigg Boss) ಈ ವಾರ ಫ್ಯಾಮಿಲಿ ವಾರವಾಗಿತ್ತು. ಸ್ಪರ್ಧಿಗಳು ಕುಟುಂಬ ಸದಸ್ಯರೊಡನೆ ಮಜವಾಗಿ ಸಮಯ ಕಳೆದರು. ಆದರೆ ವಾರಾಂತ್ಯದಲ್ಲಿ ಬಿಗ್​​ಬಾಸ್, ಸ್ಪರ್ಧಿಗಳಿಗೆ ಸಖತ್ ಶಾಕ್ ನೀಡಿದ್ದಾರೆ. ಈ ವಾರ ಮನೆಯಿಂದ ಒಬ್ಬರಲ್ಲ ಬದಲಿಗೆ ಇಬ್ಬರು ಹೊರಗೆ ಹೋಗಲಿದ್ದಾರೆ. ಬಿಗ್​​ಬಾಸ್ ಮನೆಗೆ ಈ ವಾರ ಕೆಲವು ಸೆಲೆಬ್ರಿಟಿಗಳು ಬಂದಿದ್ದಾರೆ, ನಿರ್ದೇಶಕ ಪ್ರೇಮ್ ಸೇರಿದಂತೆ ಇನ್ನೂ ಕೆಲವರು ಬಿಗ್​​ಬಾಸ್ ಮನೆಗೆ ಬಂದಿದ್ದು, ಸ್ಪರ್ಧಿಗಳು ಸಹ ಸಖತ್ ಎಂಜಾಯ್ ಮಾಡಿದ್ದಾರೆ. ಆದರೆ ಎಲ್ಲದರ ಅಂತ್ಯದಲ್ಲಿ ಡಬಲ್ ಎಲಿಮಿನೇಷನ್ ಎಂಬುದು ಮನೆ…

Read More

ದೆವ್ವ ಹಿಡಿದಿದೆ ಎಂದು ಕಟ್ಟಿಗೆಯಿಂದ ಹೊಡೆದು ಕೊಲೆ: ಕಲಬುರಗಿ ಮೂಲದ ಮಹಿಳೆ ಮಹಾರಾಷ್ಟ್ರದಲ್ಲಿ ಸಾವು – Kannada News | Kalaburagi Woman Beaten to Death Over ‘Devil Possession’

ದೆವ್ವ ಹಿಡಿದಿದೆ ಎಂದು ಕಟ್ಟಿಗೆಯಿಂದ ಹೊಡೆದ ಪಾಪಿಗಳು! ಕಲಬುರಗಿ, ಡಿಸೆಂಬರ್ 27: ತಂತ್ರಜ್ಞಾನ ಯುಗದಲ್ಲಿಯೂ ಮೂಢನಂಬಿಕೆಗಳ ಅಂಧಕಾರ ಇನ್ನೂ ಜೀವಂತವಾಗಿರುವುದಕ್ಕೆ ಕಲಬುರಗಿಯ (Kalaburagi) ಮಹಿಳೆಯೊಬ್ಬರ ದಾರುಣ ಸಾವು ಸಾಕ್ಷಿಯಾಗಿದೆ. ದೆವ್ವ ಹಿಡಿದಿದೆ ಎಂಬ ಅಸಂಬದ್ಧ ನಂಬಿಕೆಯ ಹೆಸರಿನಲ್ಲಿ ಮಹಿಳೆಯನ್ನು ಬೇವಿನ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಭೀಕರ ಘಟನೆ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಮುರುಮ್ ಗ್ರಾಮದಲ್ಲಿ ನಡೆದಿದೆ. ಬೇವಿನ ಕಟ್ಟಿಗೆಯಿಂದ ಹಲ್ಲೆ ಕೊಲೆಯಾದ ಮಹಿಳೆಯನ್ನು ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ವೆಂಕಟೇಶ್ವರ ನಗರ ನಿವಾಸಿ ಮುಕ್ತಬಾಯಿ ಎಂದು…

Read More

Pickle Health Risks: ಉಪ್ಪಿನಕಾಯಿ ಹೆಚ್ಚು ತಿನ್ನಬಾರದು ಏಕೆ ಗೊತ್ತಾ? ಆರೋಗ್ಯ ತಜ್ಞರ ಸಲಹೆ ಇಲ್ಲಿದೆ – Kannada News | Pickle Health Risks: Understanding Side Effects and Safe Consumption

ಉಪ್ಪಿನಕಾಯಿ ಕೇವಲ ಉಪ್ಪು ಮತ್ತು ಮೆಣಸಿನಕಾಯಿ ಮಾತ್ರವಲ್ಲ. ಅದರ ತಯಾರಿಕೆ ಮತ್ತು ಸಂರಕ್ಷಣೆಯ ಪ್ರಕ್ರಿಯೆಯಲ್ಲಿ ಹಲವು ರಾಸಾಯನಿಕ ಬದಲಾವಣೆಗಳು ನಡೆಯುತ್ತವೆ. ಇವುಗಳಲ್ಲಿ ಕೆಲವು ಸಹಜ ಹಾಗೂ ಅಗತ್ಯವಾಗಿದ್ದರೆ, ಕೆಲವು ಅತಿಯಾದಾಗ ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಉಪ್ಪಿನಕಾಯಿಯ ಮುಖ್ಯ ಅಂಶವೇ ಸೋಡಿಯಂ ಕ್ಲೋರೈಡ್ (ಉಪ್ಪು). ಇದು ಸೂಕ್ಷ್ಮಾಣುಗಳ ಬೆಳವಣಿಗೆಯನ್ನು ತಡೆಯುವ ಮೂಲಕ ಆಹಾರವನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಆದರೆ ಉಪ್ಪಿನ ಅತಿಸೇವನೆಯಿಂದ ರಕ್ತದೊತ್ತಡ, ಹೃದಯ ಹಾಗೂ ಕಿಡ್ನಿ ಸಮಸ್ಯೆಗಳ ಅಪಾಯ ಹೆಚ್ಚಾಗುತ್ತದೆ. ಅದೇ ರೀತಿ ವಿನೆಗರ್ ಅಥವಾ ಹುಳಿ ದ್ರಾವಣದಲ್ಲಿರುವ…

Read More

ಹೊಸ ವರ್ಷಾಚರಣೆ ವೇಳೆ ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ? – Kannada News | Bengaluru Police Commissioner Seemant Kumar Singh Talks flyover Open And Close On December 31 During New Year Celebration

ಬೆಂಗಳೂರು, ಡಿಸೆಂಬರ್ 26): ಹೊಸವರ್ಷಕ್ಕೆ (New Year 2026) ಕೌಂಟ್‌ಡೌನ್ ಶುರುವಾಗಿದ್ದು, ಬೆಂಗಳೂರಿನಲ್ಲಿ ಖಾಕಿ ಪಡೆ ಫುಲ್ ಅಲರ್ಟ್ ಆಗಿದೆ. ಈಗಾಗಲೇ ನಗರದ ಪ್ರಮುಖ ಪ್ರದೇಶಗಳಲ್ಲಿ ರೌಂಡ್ಸ್ ಮಾಡಿ, ಪರಿಶೀಲನೆ ನಡೆಸಿದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್‌ (Seemant Kumar Singh), ಬಳಿಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದ್ದು, ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಹಿಸಿದ್ದಾರೆ. ಇನ್ನೂ ಹೊಸ ವರ್ಷಾಚರಣೆ ರಾತ್ರಿ ಬೆಂಗಳೂರಿ ಕೆಲವೆಡೆ ರಸ್ತೆ ನಿರ್ಬಂಧಿಸಲಾಗಿದೆ. ಇನ್ನು ಫ್ಲೈಓವರ್ ಓಪನ್…

Read More