All posts by nagaraj11081993

ಇಂದಿನಿಂದ ಫಿಫಾ ವಿಶ್ವಕಪ್​ ಟೂರ್ನಿ ಆರಂಭ! – Kannada News

ವಿಶ್ವದ ಅತ್ಯಂತ ದೊಡ್ಡ ಫುಟ್‌ಬಾಲ್ ಟೂರ್ನಮೆಂಟ್ ಫಿಫಾ ವಿಶ್ವಕಪ್ 2026 ಆರಂಭಕ್ಕೆ ದಿನಗಣನೆ ಮುಗಿದಿದೆ. ಅದರಂತೆ ಅಮೆರಿಕ, ಕೆನಡಾ ಹಾಗೂ ಮೆಕ್ಸಿಕೋ ಜಂಟಿಯಾಗಿ ಆಯೋಜಿಸಲಿರುವ ಫಿಫಾ ವಿಶ್ವಕಪ್​ಗೆ ಇಂದು ಚಾಲನೆ ದೊರೆಯಲಿದೆ. ಆದರೆ ಕ್ರೀಡಾಭಿಮಾನಿಗಳಲ್ಲಿ ಈ ಬಾರಿಯ ವಿಶ್ವಕಪ್ ಜೂನ್ 11 ಕ್ಕೆ ಶುರುವಾಗುತ್ತದೆಯೇ ಅಥವಾ ಜೂನ್ 12 ಕ್ಕೆ ಎಂಬ ಸಣ್ಣ ಗೊಂದಲವಿದೆ. ಇದಕ್ಕೆ ಮುಖ್ಯ ಕಾರಣ ಉತ್ತರ ಅಮೆರಿಕ ಮತ್ತು ಭಾರತದ ನಡುವಿನ ಭೌಗೋಳಿಕ ಸಮಯದ ವ್ಯತ್ಯಾಸ.

ಆತಿಥೇಯ ದೇಶವಾದ ಮೆಕ್ಸಿಕೋದಲ್ಲಿ ಪಂದ್ಯಾವಳಿಯು ಗುರುವಾರ, ಜೂನ್ 11, 2026 ರಂದು ಅಧಿಕೃತವಾಗಿ ಆರಂಭವಾಗಲಿದೆ.

ಮೆಕ್ಸಿಕೋ ನಗರವು ಭಾರತಕ್ಕಿಂತ 11.5 ಗಂಟೆಗಳಷ್ಟು ಹಿಂದೆ ಇರುವುದರಿಂದ, ಅಲ್ಲಿ ಜೂನ್ 11 ರ ಮಧ್ಯಾಹ್ನ ನಡೆಯುವ ಉದ್ಘಾಟನಾ ಪಂದ್ಯವು ಭಾರತದಲ್ಲಿ ಶುಕ್ರವಾರ, ಜೂನ್ 12, 2026 ರ ಮುಂಜಾನೆ 12:30 ಕ್ಕೆ ನೇರಪ್ರಸಾರವಾಗುತ್ತದೆ. ಇದೇ ಕಾರಣಕ್ಕೆ ಭಾರತದ ವೇಳಾಪಟ್ಟಿಗಳಲ್ಲಿ ಜೂನ್ 12 ರ ದಿನಾಂಕ ಕಾಣಿಸಿಕೊಳ್ಳುತ್ತಿದೆ.

ಮೆಕ್ಸಿಕೋದ ಐತಿಹಾಸಿಕ ಎಸ್ಟಾಡಿಯೊ ಅಜ್ಟೆಕಾ ಕ್ರೀಡಾಂಗಣದಲ್ಲಿ ಅದ್ಧೂರಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಈ ಉದ್ಘಾಟನಾ ಕಾರ್ಯಕ್ರಮದ ಬಳಿಕ ಮೊದಲ ಪಂದ್ಯದಲ್ಲಿ ಆತಿಥೇಯ ಮೆಕ್ಸಿಕೋ ಮತ್ತು ಸೌತ್ ಆಫ್ರಿಕಾ ತಂಡಗಳು ಕಣಕ್ಕಿಳಿಯಲಿವೆ. ಈ ಪಂದ್ಯವನ್ನು ಭಾರತೀಯ ಕಾಲಮಾನ ಮಧ್ಯರಾತ್ರಿ 12.30 AM ವೀಕ್ಷಿಸಬಹುದು.

 

Source link

Bengaluru Traffic advisory: ವಾಹನ ಸವಾರರ ಗಮನಕ್ಕೆ, ಬೆಂಗಳೂರಿನ ಈ ರಸ್ತೆಗಳಲ್ಲಿಂದು ಸಂಚಾರ ಬದಲಾವಣೆ – Kannada News

ಬೆಂಗಳೂರು, ಜೂನ್ 11: ಬೆಂಗಳೂರಿನ (Bengaluru) ಫ್ರೀಡಂ ಪಾರ್ಕ್‌ನಲ್ಲಿ ಇಂದು (ಜೂನ್ 11, ಗುರುವಾರ) ಕರ್ನಾಟಕ ದಲಿತ ಸಂಘಟನೆಗಳ ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರತಿಭಟನೆ ನಡೆಯಲಿದ್ದು, ಸುಗಮ ವಾಹನ ಸಂಚಾರಕ್ಕಾಗಿ ಬೆಂಗಳೂರು ಸಂಚಾರ ಪೊಲೀಸರು ತಾತ್ಕಾಲಿಕ ಸಂಚಾರ ನಿರ್ಬಂಧ ಹಾಗೂ ಸಂಚಾರಕ್ಕೆ ಪರ್ಯಾಯ ಮಾರ್ಗಗಳಳನ್ನು ಪ್ರಕಟಿಸಿದ್ದಾರೆ. ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವಂತೆ ಕೋರಲಾಗಿದೆ.

ಮುಖ್ಯಾಂಶಗಳು

  • ಫ್ರೀಡಂ ಪಾರ್ಕ್ ಸುತ್ತಮುತ್ತ ಸಂಚಾರ ಮಾರ್ಗ ಬದಲಾವಣೆ.
  • ಮುಂಜಾನೆ 8 ರಿಂದ ಸಂಜೆ 6 ರವರೆಗೆ ನಿರ್ಬಂಧ.
  • ಪ್ರಮುಖ ರಸ್ತೆಗಳಲ್ಲಿ ವಾಹನ ಪಾರ್ಕಿಂಗ್ ನಿಷೇಧ.

ಪ್ರತಿಭಟನಾ ಮೆರವಣಿಗೆ ಮತ್ತು ಮಾರ್ಗ ಬದಲಾವಣೆ ವಿವರ

ಪ್ರತಿಭಟನೆಯಲ್ಲಿ ಭಾಗವಹಿಸುವ ಸಾರ್ವಜನಿಕರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ಸಿಟಿ ರೈಲ್ವೆ ನಿಲ್ದಾಣದಿಂದ ಫ್ಲೈಓವರ್ ರಸ್ತೆಯ ಮೂಲಕ ಫ್ರೀಡಂ ಪಾರ್ಕ್ ಕಡೆಗೆ ಕಾಲ್ನಡಿಗೆಯಲ್ಲಿ ಮೆರವಣಿಗೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಖೋಡೆ ಜಂಕ್ಷನ್‌ನಿಂದ ಕೆಆರ್ ಸರ್ಕಲ್ ಕಡೆಗೆ ಸಂಚರಿಸುವ ವಾಹನ ಸವಾರರು ಸಂಚಾರ ದಟ್ಟಣೆಯನ್ನು ತಪ್ಪಿಸಲು ಹಳೇ ಜೆಡಿಎಸ್ ಕಚೇರಿ ರಸ್ತೆಯನ್ನು ಬಳಸುವಂತೆ ಸೂಚಿಸಲಾಗಿದೆ. ಇನ್ನು ಮೈಸೂರು ಬ್ಯಾಂಕ್ ವೃತ್ತದಿಂದ ಕೆ.ಜಿ. ರಸ್ತೆ ಮೂಲಕ ಫ್ರೀಡಂ ಪಾರ್ಕ್ ಕಡೆಗೆ ಬರುವ ವಾಹನಗಳು ಕಡ್ಡಾಯವಾಗಿ ಬಲತಿರುವು ಪಡೆದು, ಮಹಾರಾಣಿ ಅಂಡರ್‌ಪಾಸ್ ರಸ್ತೆ ಹಾಗೂ ಪ್ಯಾಲೇಸ್ ಕ್ರಾಸ್ ರಸ್ತೆ ಮೂಲಕ ಮುಂದೆ ಸಾಗಬೇಕಾಗುತ್ತದೆ.

ಟ್ರಾಫಿಕ್ ಪೊಲೀಸ್ ಎಕ್ಸ್ ಸಂದೇಶ

ದ್ವಿಮುಖ ಸಂಚಾರ ಹಾಗೂ ಸಂಚಾರ ಸಂಪೂರ್ಣ ನಿಷೇಧಿತ ರಸ್ತೆಗಳು

ಪ್ರತಿಭಟನೆಯ ತೀವ್ರತೆಯ ಕಾರಣದಿಂದಾಗಿ ಫ್ರೀಡಂ ಪಾರ್ಕ್ ಜಂಕ್ಷನ್‌ನಿಂದ ಕನಕದಾಸ ವೃತ್ತದ ನಡುವಿನ ರಸ್ತೆಯಲ್ಲಿ ಎರಡೂ ಕಡೆಯಿಂದಲೂ ಎಲ್ಲಾ ಮಾದರಿಯ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇನ್ನು ಗಾಂಧಿನಗರದ ಕಡೆಗೆ ತೆರಳುವ ಸವಾರರ ಅನುಕೂಲಕ್ಕಾಗಿ, ಸಾಮಾನ್ಯವಾಗಿ ಒನ್‌ವೇ (ಏಕಮುಖ ಸಂಚಾರ) ಆಗಿರುತ್ತಿದ್ದ ಸುಬ್ಬಣ್ಣ ಜಂಕ್ಷನ್‌ನಿಂದ ಎಂಟಿಆರ್ (MTR) ಜಂಕ್ಷನ್ ವರೆಗಿನ ರಸ್ತೆಯನ್ನು ಇಂದು ತಾತ್ಕಾಲಿಕವಾಗಿ ಟೂ-ವೇ (ದ್ವಿಮುಖ ಸಂಚಾರ) ಮಾರ್ಗವಾಗಿ ಪರಿವರ್ತಿಸಲಾಗಿದೆ.

ಎಲ್ಲೆಲ್ಲಿ ಪಾರ್ಕಿಂಗ್ ನಿಷೇಧ?

ಸಂಚಾರಕ್ಕೆ ಅಡ್ಡಿಯಾಗದಂತೆ ಮುನ್ನೆಚ್ಚರಿಕೆ ವಹಿಸಿರುವ ಪೊಲೀಸರು, ಪ್ರಮುಖ ರಸ್ತೆಗಳ ಇಕ್ಕೆಲಗಳಲ್ಲಿ ವಾಹನ ನಿಲ್ಲಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದ್ದಾರೆ. ಖೋಡೆ ಜಂಕ್ಷನ್‌ನಿಂದ ಮಹಾರಾಣಿ ಜಂಕ್ಷನ್‌ವರೆಗೆ, ವಿ. ರಾಮಚಂದ್ರ ರಸ್ತೆ, ಕಾಳಿದಾಸ ರಸ್ತೆ, ಪ್ಯಾಲೇಸ್ ರಸ್ತೆ ಹಾಗೂ ಕೆ.ಜಿ. ರಸ್ತೆಯಲ್ಲಿ ಯಾವುದೇ ರೀತಿಯ ವಾಹನಗಳ ಪಾರ್ಕಿಂಗ್ ಮಾಡುವಂತಿಲ್ಲ ಎಂದು ಸಂಚಾರ ಪೊಲೀಸರು ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪತಿ ಬಗ್ಗೆ ಇರೋ ಆತಂಕ ಹೇಳಿದ ಅಮೃತವರ್ಷಿಣಿ ರಜಿನಿ

ನಟಿ ರಜಿನಿ ಹಾಗೂ ಅರುಣ್ ಗೌಡ ಅವರ ಮಧ್ಯೆ ಜಿಮ್​​ನಲ್ಲಿ ಪ್ರೀತಿ ಮೂಡಿತು. ಆ ಬಳಿಕ ಇಬ್ಬರೂ ಮದುವೆ ಆದರು. ಈಗ ಪತಿ ಅರುಣ್ ಕುಮಾರ್ ಬಗ್ಗೆ ಇರುವ ಭಯದ ಬಗ್ಗೆ ರಜಿನಿ ಹೇಳಿಕೊಂಡಿದ್ದಾರೆ. ‘ಜೋಡಿ ನಂಬರ್ 1’ ಶೋನಲ್ಲಿ ಇವರು ಸ್ಪರ್ಧಿಗಳಾಗಿದ್ದಾರೆ. ಈ ಸ್ಪರ್ಧೆಯಲ್ಲಿ ಮನದಾಳದ ಮಾತನ್ನು ಹೇಳಿಕೊಳ್ಳುವ ಅವಕಾಶ ಇತ್ತು. ಈ ವೇಳೆ ರಜಿನಿ ಅವರು, ‘ಬಾಡಿ ಬಿಲ್ಡರ್​​ಗಳಿಗೆ ಆಯಸ್ಸು ಕಡಿಮೆ ಎಂಬ ಮಾತಿದೆ’ ಎಂದು ಆತಂಕ ಹೊರಹಾಕಿದ್ದಾರೆ. ಆಗ ಅರುಣ್ ಕುಮಾರ್ ಅವರು ಪತ್ನಿಗೆ ಧೈರ್ಯ ತುಂಬಿದ್ದಾರೆ. (VIDEO Source: Zee Kannada)

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಧಾರವಾಡ ಜಿಲ್ಲೆಯಲ್ಲಿ ಹಳ್ಳ ಹಿಡಿದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ?: ಇಂದಿರಾ ಕ್ಯಾಂಟೀನ್​​ ಆಹಾರ ಗುಣಮಟ್ಟದ ಬಗ್ಗೆ ಆಕ್ರೋಶ – Kannada News

ಇಂದಿರಾ ಕ್ಯಾಂಟೀನ್​Image Credit source: Tv9 Kannada

ಹುಬ್ಬಳ್ಳಿ, ಜೂನ್​​ 11: ನಗರ ಮತ್ತು ಪಟ್ಟಣದಲ್ಲಿನ ಕಾರ್ಮಿಕರು, ವಿದ್ಯಾರ್ಥಿಗಳು, ಬಡಜನರು ಹಸಿವಿನಿಂದ ಇರಬಾರದು ಎಂಬ ಸದುದ್ದೇಶದಿಂದ ಈ ಹಿಂದೆ ಸಿಎಂ ಆಗಿದ್ದ ಸಿದ್ದರಾಮಯ್ಯ ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್​​ಗಳನ್ನು ಆರಂಭಿಸಿದ್ದರು. ಹುಬ್ಬಳ್ಳಿ-ಧಾರವಾಡದಲ್ಲಿಯೂ  ಅನೇಕ ಇಂದಿರಾ ಕ್ಯಾಂಟೀನ್​​ಗಳು ತಲೆ ಎತ್ತಿದ್ದವು. ಆದರೆ ಇತ್ತೀಚೆಗೆ ಇಂದಿರಾ ಕ್ಯಾಂಟೀನ್​​ಗಳ ಆಹಾರದ ಗುಣಮಟ್ಟದ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಮೊದಲು ಇಂದಿರಾ ಕ್ಯಾಂಟೀನ್​​ಗಳಲ್ಲಿ ಅನ್ನ ಸಾರು, ಮೊಸರನ್ನ, ಪಲಾವ್​, ಮುಂಜಾನೆ ಉಪಹಾರಕ್ಕೆ ಉಪ್ಪಿಟ್ಟು, ಪೊಂಗಲ್ ಸೇರಿದಂತೆ ಕೆಲವೇ ಆಹಾರ ಪದಾರ್ಥಗಳನ್ನು ನೀಡಲಾಗುತ್ತಿತ್ತು. ಆ ಬಳಿಕ ಇವುಗಳ ಮೆನುವಿನಲ್ಲಿ ಹೆಚ್ಚಳ ಮಾಡಲಾಗಿತ್ತು. ಉತ್ತರ ಕರ್ನಾಟಕದಲ್ಲಿ ರೊಟ್ಟಿ, ಚಪಾತಿ, ಪಲ್ಯವನ್ನು ಊಟದಲ್ಲಿ ನೀಡಿದ್ರೆ, ಇಡ್ಲಿ, ಪೊಂಗಲ್​​, ಉಪ್ಪಿಟ್ಟು ಸೇರಿದಂತೆ ಅನೇಕ ಖಾದ್ಯಗಳು ಸೇರ್ಪಡೆಯಾಗಿದ್ದವು.  ಮುಂಜಾನೆ ಉಪಹಾರಕ್ಕೆ ಐದು ರೂಪಾಯಿ ಮತ್ತು ಮಧ್ಯಾಹ್ನದ ರೊಟ್ಟಿ ಊಟಕ್ಕೆ ಇಪ್ಪತ್ತು ರೂಪಾಯಿ ಬೆಲೆ ನಿಗದಿ ಮಾಡಲಾಗಿತ್ತು. ಕೇವಲ ಅನ್ನ ಸಾಂಬಾರ್​​ ತಗೆದುಕೊಂಡರೆ ಹತ್ತು ರೂಪಾಯಿ ದರವಿತ್ತು. ಇದೇ ಕಾರಣಕ್ಕೆ ಆಟೋ ಚಾಲಕರು, ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು ಸೇರಿದಂತೆ ಮಧ್ಯಮ ಹಾಗೂ ಬಡತನ ರೇಖೆಗಿಂತ ಕೆಳಗಿರೋ ನೂರಾರು ಜನರು ಮುಂಜಾನೆ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟಕ್ಕೆ ಇಂದಿಗೂ ಇಂದಿರಾ ಕ್ಯಾಂಟೀನ್​​ಗಳನ್ನು ಅವಲಂಬಿಸಿದ್ದಾರೆ. ಆದ್ರೆ ಇತ್ತೀಚೆಗೆ ಇಲ್ಲಿನ ಊಟ, ಉಪಹಾರಗಳು ಗುಣಮಟ್ಟ ಕಳೆದುಕೊಂಡಿರುವ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ವಾಯುವ್ಯ ಸಾರಿಗೆಗೆ ಡೀಸೆಲ್ ಬೆನ್ನಲ್ಲೇ ಬಿಡಿಭಾಗಗಳ ದರ ಏರಿಕೆ ಶಾಕ್; ಸ್ಪೇರ್ ಪಾರ್ಟ್ಸ್ ಸಿಗದೆ ಸಂಕಷ್ಟ

‘ಬೇಕಾದ್ರೆ ತಿನ್ನಿ, ಇಲ್ಲದಿದ್ದರೆ ಹೋಗಿ’

ನೀರಿನಂತಿರುವ ಸಾರು, ಸರಿಯಾಗಿ ಬೆಂದಿರದ ಅನ್ನವನ್ನು ಇಂದಿರಾ ಕ್ಯಾಂಟೀನ್​​ಗಳಲ್ಲಿ ನೀಡಲಾಗ್ತಿದೆ. ಚಪಾತಿ ಮತ್ತು ರೊಟ್ಟಿ ಕೂಡ ತಿನ್ನಲು ಯೋಗ್ಯವಾಗಿರಲ್ಲ. ಮುಂಜಾನೆ ಉಪಹಾರದಲ್ಲಿ ನೀಡುವ ಇಡ್ಲಿ, ಸಾಂಬಾರು ಕೂಡ ಚೆನ್ನಾಗಿರಲ್ಲ. ಮೊದಲು ಉತ್ತಮ ಗುಣಮಟ್ಟದ ಆಹಾರ ಇಲ್ಲಿ ಸಿಗುತ್ತಿದ್ದ ಹಿನ್ನೆಲೆ ಊಟ, ಉಪಹಾರ ಸೇವಿಸಿದಾಗ ಸಂತೃಪ್ತಿಯಾಗುತಿತ್ತು. ಆದ್ರೆ ಇದೀಗ ಕಷ್ಟಪಟ್ಟು ತಿನ್ನಬೇಕಾಗಿದೆ. ಇನ್ನು ಆಹಾರ ಪ್ರಮಾಣವನ್ನು ಕೂಡ ಕಡಿಮೆ ನೀಡ್ತಿದ್ದಾರೆ. ಮಧ್ಯಾಹ್ನ ಮತ್ತು ರಾತ್ರಿ ನೀಡೋ ರೈಸ್ ಪ್ರಮಾಣ ಮುನ್ನೂರು ಗ್ರಾಂನಷ್ಟಿರಬೇಕು ಅಂತಿದೆ. ಆದರೆ ಅಷ್ಟು ಕೊಡೋದಿಲ್ಲ. ಸಿಬ್ಬಂದಿ ಕೇಳಿದ್ರೆ ಬೇಕಾದ್ರೆ ತಿನ್ನಿ, ಇಲ್ಲದಿದ್ದರೆ ಹೋಗಿ ಎನ್ನುತ್ತಾರೆ. ಹೀಗಾಗಿ ಸಂಬಂಧಪಟ್ಟವರು ಇತ್ತಕಡೆ ಗಮನಹರಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

MI ಮೀಟಿಂಗ್: ಹಾರ್ದಿಕ್ ಪಾಂಡ್ಯ ಭವಿಷ್ಯ ನಿರ್ಧಾರ! – Kannada News

ಐಪಿಎಲ್ 2026ರ ಸೀಸನ್ ಮುಕ್ತಾಯಗೊಂಡ ಬೆನ್ನಲ್ಲೇ, ಮುಂಬೈ ಇಂಡಿಯನ್ಸ್ (MI) ತಂಡದಲ್ಲಿ ಭಾರಿ ಬದಲಾವಣೆಯಾಗುವ ಸೂಚನೆ ಸಿಗುತ್ತಿದೆ. ಬ್ಯಾಕ್ ಟು ಬ್ಯಾಕ್ ಮೂರು ಸೀಸನ್​ಗಳಲ್ಲಿ ತೀವ್ರ ನಿರಾಶಾದಾಯಕ ಪ್ರದರ್ಶನದ ಬಳಿಕ, ನಾಯಕ ಹಾರ್ದಿಕ್ ಪಾಂಡ್ಯ ಅವರ ಭವಿಷ್ಯದ ಕುರಿತು ಮುಂಬೈ ಇಂಡಿಯನ್ಸ್ ಮ್ಯಾನೇಜ್‌ಮೆಂಟ್ ಶೀಘ್ರದಲ್ಲೇ ಒಂದು ಪ್ರಮುಖ ಸಭೆ ನಡೆಸಲಿದೆ ಎಂದು ವರದಿಯಾಗಿದೆ.

ಈ ಸಭೆಯಲ್ಲಿ ಆಟಗಾರ ಮತ್ತು ಫ್ರಾಂಚೈಸಿ ಇಬ್ಬರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿದು ಬಂದಿದೆ. ಅಂದರೆ ಈ ಸಭೆಯಲ್ಲಿ ಹಾರ್ದಿಕ್ ಪಾಂಡ್ಯ ಅವರ ಭವಿಷ್ಯ ನಿರ್ಧಾರವಾಗಲಿದೆ. ಏಕೆಂದರೆ ಪಾಂಡ್ಯ ನಾಯಕನಾದ ಬಳಿಕ ಮುಂಬೈ ಇಂಡಿಯನ್ಸ್ ತಂಡದ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ.

ಇದನ್ನೇ ಗಂಭೀರವಾಗಿ ಪರಿಗಣಿಸಿರುವ ಮುಂಬೈ ಇಂಡಿಯನ್ಸ್ ಟೀಮ್ ಮ್ಯಾನೇಜ್ಮೆಂಟ್ ತಂಡಕ್ಕೆ ಮೇಜರ್ ಸರ್ಜರಿ ಮಾಡಲು ಚಿಂತಿಸಿದ್ದಾರೆ. ಈ ಮೇಜರ್ ಸರ್ಜರಿಯೊಂದಿಗೆ ಹಾರ್ದಿಕ್ ಪಾಂಡ್ಯ ಹೊರಬೀಳುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಏಕೆಂದರೆ ಹಾರ್ದಿಕ್ ಪಾಂಡ್ಯ ನಾಯಕತ್ವ ವಹಿಸಿಕೊಂಡ ಕೇವಲ ಮೂರು ವರ್ಷಗಳಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪ್ರದರ್ಶನ ತಳಮಟ್ಟಕ್ಕೆ ಕುಸಿದಿದೆ. 2024ರಲ್ಲಿ 10ನೇ ಸ್ಥಾನ, 2025ರಲ್ಲಿ ಪ್ಲೇಆಫ್ ಹಂತಕ್ಕೇರಿದ್ದರೂ, ಇತ್ತೀಚಿನ 2026ರ ಸೀಸನ್‌ನಲ್ಲಿ ತಂಡ ಮತ್ತೊಮ್ಮೆ ಕೇವಲ 4 ಪಂದ್ಯಗಳನ್ನು ಗೆದ್ದು 9ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.

ಇದರೊಂದಿಗೆ ನಾಯಕನಾಗಿ ಮತ್ತು ಆಟಗಾರನಾಗಿ ಹಾರ್ದಿಕ್ ಪಾಂಡ್ಯ (206 ರನ್ ಮತ್ತು 4 ವಿಕೆಟ್) ಈ ಬಾರಿ ಕೂಡ ಸಂಪೂರ್ಣ ವಿಫಲರಾಗಿದ್ದಾರೆ. ಹೀಗಾಗಿ ಮುಂಬರುವ ಸೀಸನ್​ಗೂ ಮುನ್ನ ಪಾಂಡ್ಯರನ್ನು ಮುಂಬೈ ಇಂಡಿಯನ್ಸ್​ ಕೈ ಬಿಟ್ಟರೂ ಅಚ್ಚರಿಪಡಬೇಕಿಲ್ಲ.

ಡ್ರೆಸ್ಸಿಂಗ್ ರೂಮ್ ಭಿನ್ನಾಭಿಪ್ರಾಯ!

ವರದಿಗಳ ಪ್ರಕಾರ, ಹಾರ್ದಿಕ್ ಪಾಂಡ್ಯ ಅವರು ಕೇವಲ ಮೈದಾನದಲ್ಲಿ ಮಾತ್ರವಲ್ಲದೆ, ಡ್ರೆಸ್ಸಿಂಗ್ ರೂಮ್​ನಲ್ಲಿಯೂ ತೀವ್ರ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಸತತ ಸೋಲುಗಳು, ಅಭಿಮಾನಿಗಳಿಂದ ಎದುರಾದ ಟೀಕೆಗಳು ಮತ್ತು ತಂಡದ ಕೆಲವು ಹಿರಿಯ ಆಟಗಾರರಿಂದ ಸರಿಯಾದ ಸಹಕಾರ ಸಿಗದೇ ಇರುವುದು ಹಾರ್ದಿಕ್ ಅವರನ್ನು ತೀವ್ರ ಮಾನಸಿಕ ಒತ್ತಡಕ್ಕೆ ದೂಡಿದೆ.

ಹೀಗಾಗಿಯೇ ಐಪಿಎಲ್​ ಸೀಸನ್‌ನ ಮಧ್ಯಭಾಗದಲ್ಲೇ ಹಾರ್ದಿಕ್ ಪಾಂಡ್ಯ ತಂಡದಿಂದ ಹೊರಹೋಗುವ ಇಚ್ಛೆಯನ್ನು ಮ್ಯಾನೇಜ್‌ಮೆಂಟ್‌ಗೆ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಸೂರ್ಯಕುಮಾರ್ ಯಾದವ್ ಮತ್ತು ಜಸ್​ಪ್ರೀತ್ ಬುಮ್ರಾ ಅವರಂತಹ ಹಿರಿಯ ಆಟಗಾರರೊಂದಿಗೆ ಹಾರ್ದಿಕ್ ಅವರ ಸಂಬಂಧ ಸೌಹಾರ್ದಯುತವಾಗಿಲ್ಲ ಎಂಬ ಚರ್ಚೆಗಳೂ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿವೆ.

ಈ ಎಲ್ಲಾ ವಿಷಯಗಳನ್ನು ಮುಂಬೈ ಇಂಡಿಯನ್ಸ್ ಮ್ಯಾನೇಜ್ಮೆಂಟ್ ಶೀಘ್ರದಲ್ಲೇ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಈ ಸಭೆಯ ಬಳಿಕ ಎಂಐ ಫ್ರಾಂಚೈಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಮುಂಬೈ ಇಂಡಿಯನ್ಸ್ ಮತ್ತು ಹಾರ್ದಿಕ್ ಪಾಂಡ್ಯ ನಡುವಿನ ಈ ಸಭೆಯು ಕೇವಲ ಒಂದು ಫ್ರಾಂಚೈಸಿಯ ಆಂತರಿಕ ವಿಷಯವಾಗಿ ಉಳಿದಿಲ್ಲ. ಇದು ಮುಂಬರುವ ಐಪಿಎಲ್ 2027ರ ಮೆಗಾ ಹರಾಜಿನ ಚಿತ್ರಣವನ್ನೇ ಬದಲಿಸುವ ಶಕ್ತಿ ಹೊಂದಿದೆ.

ಇದನ್ನೂ ಓದಿ: ರಿಚಾ ಘೋಷ್ ಸಿಡಿಲಬ್ಬರ: ಸ್ಟಂಪ್ ಔಟ್​ನಿಂದ ಕೈತಪ್ಪಿದ ಗೆಲುವು!

ಹಾರ್ದಿಕ್ ಪಾಂಡ್ಯ ಮುಂಬೈ ತಂಡದಲ್ಲೇ ಮುಂದುವರಿಯುತ್ತಾರಾ ಅಥವಾ ಹೊಸ ಹಾದಿ ಹಿಡಿಯುತ್ತಾರಾ ಎಂಬ ಕುತೂಹಲಕ್ಕೆ ಜೂನ್ ತಿಂಗಳ ಅಂತ್ಯದೊಳಗೆ ತೆರೆ ಬೀಳಲಿದೆ. ಏನೇ ಆದರೂ, ಈ ನಿರ್ಧಾರವು ಮುಂಬೈ ಇಂಡಿಯನ್ಸ್‌ನ ಭವಿಷ್ಯದ ಯಶಸ್ಸು ಮತ್ತು ಹಾರ್ದಿಕ್ ಪಾಂಡ್ಯ ಅವರ ಕ್ರಿಕೆಟ್ ವೃತ್ತಿಜೀವನ—ಇಬ್ಬರಿಗೂ ಅತ್ಯಂತ ನಿರ್ಣಾಯಕವಾಗಲಿದೆ.

Source link

ಸಲ್ಮಾನ್ ಖಾನ್- ಸಂದೀಪ್ ರೆಡ್ಡಿ ವಂಗಾ ಸಿನಿಮಾ ಸೆಟ್ಟೇರೋದು ಯಾವಾಗ? – Kannada News

ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ (Salman Khan) ಮತ್ತು ಸದ್ಯ ಸೌತ್ ಇಂಡಸ್ಟ್ರಿಯಲ್ಲಿ ಸೆನ್ಸೇಷನ್ ಸೃಷ್ಟಿಸುತ್ತಿರುವ ಸ್ಟಾರ್ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾವೊಂದು ಬರಲಿದೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ. ‘ಅನಿಮಲ್’ ಚಿತ್ರದ ಭರ್ಜರಿ ಯಶಸ್ಸಿನ ಬಳಿಕ ಸಂದೀಪ್ ವಂಗಾ ಅವರ ಡಾರ್ಕ್ ಮತ್ತು ಇಂಟೆನ್ಸ್ ಸಿನಿಮ್ಯಾಟಿಕ್ ಜಗತ್ತಿನಲ್ಲಿ ಸಲ್ಮಾನ್ ಖಾನ್ ಅವರನ್ನು ನೋಡಲು ಅಭಿಮಾನಿಗಳು ಕ್ಯೂರಿಯಾಸಿಟಿಯಿಂದ ಕಾಯುತ್ತಿದ್ದಾರೆ. ಆದರೆ, ಈ ಪ್ರಾಜೆಕ್ಟ್ ಸದ್ಯಕ್ಕೆ ಸೆಟ್ಟೇರುವುದು ಅಸಾಧ್ಯ ಎನ್ನಲಾಗುತ್ತಿದೆ.

ಸದ್ಯ ಸಲ್ಮಾನ್ ಖಾನ್ ಅವರು ಬಾಲಿವುಡ್‌ನಲ್ಲಿ ಬ್ಯಾಕ್ ಟು ಬ್ಯಾಕ್ ಹಿಟ್ ನೀಡಲು ಸೌತ್‌ನ ಮೋಸ್ಟ್ ವಾಂಟೆಡ್ ಮತ್ತು ಟ್ರೆಂಡಿಂಗ್‌ನಲ್ಲಿರುವ ನಿರ್ದೇಶಕರ ಹುಡುಕಾಟದಲ್ಲಿದ್ದಾರೆ. ಈಗಾಗಲೇ ತಮಿಳಿನ ಖ್ಯಾತ ನಿರ್ದೇಶಕ ಎ.ಆರ್. ಮುರುಗದಾಸ್ ಜೊತೆ ‘ಸಿಕಂದರ್’ ಸಿನಿಮಾ ಮಾಡಿರೋ ಅವರು ಈಗ ಸಂದೀಪ್ ರೆಡ್ಡಿ ವಂಗಾ ಅವರ ಮೇಲೂ ಕಣ್ಣಿಟ್ಟಿದ್ದಾರೆ. ಆದರೆ ಚಿತ್ರರಂಗದ ಒಳಗಿನ ಮಾಹಿತಿ ಪ್ರಕಾರ, ಈ ಕಾಂಬಿನೇಷನ್ ಸದ್ಯದ ಪರಿಸ್ಥಿತಿಯಲ್ಲಿ ಕಾರ್ಯರೂಪಕ್ಕೆ ಬರುವುದು ಅನುಮಾನ.

ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರ ಮುಂಬರುವ ಸಿನಿಮಾಗಳ ಲೈನಪ್ ನೋಡಿದರೆ, ಮುಂದಿನ ಕೆಲವು ವರ್ಷಗಳ ಕಾಲ ಅವರು ಬೇರೆ ಯಾವುದೇ ಹೊಸ ಚಿತ್ರವನ್ನು ಕೈಗೆತ್ತಿಕೊಳ್ಳಲು ಸಾಧ್ಯವೇ ಇಲ್ಲದಷ್ಟು ಬ್ಯುಸಿಯಾಗಿದ್ದಾರೆ. ಸದ್ಯ ಅವರು ರೆಬೆಲ್ ಸ್ಟಾರ್ ಪ್ರಭಾಸ್ ನಟನೆಯ ‘ಸ್ಪಿರಿಟ್’ ಚಿತ್ರದ ಕೆಲಸಗಳಲ್ಲಿ ಸಂಪೂರ್ಣವಾಗಿ ಮುಳುಗಿದ್ದಾರೆ. ಇದು ಅವರ ಮೊದಲ ಆದ್ಯತೆಯಾಗಿದ್ದು, ಭಾರಿ ನಿರೀಕ್ಷೆ ಮೂಡಿಸಿರುವ ಪ್ಯಾನ್-ಇಂಡಿಯಾ ಪ್ರಾಜೆಕ್ಟ್ ಆಗಿದೆ.

ಸಾಲು ಸಾಲು ಬಿಗ್ ಬಜೆಟ್ ಚಿತ್ರಗಳು:

‘ಸ್ಪಿರಿಟ್’ ಚಿತ್ರ ಮುಗಿಯುತ್ತಿದ್ದಂತೆಯೇ ಸಂದೀಪ್ ವಂಗಾ ಅವರು ರಣಬೀರ್ ಕಪೂರ್ ನಟನೆಯ ಬ್ಲಾಕ್‌ಬಸ್ಟರ್ ಚಿತ್ರ ‘ಅನಿಮಲ್’ನ ಸೀಕ್ವೆಲ್ ಆದ ‘ಅನಿಮಲ್ ಪಾರ್ಕ್’ ಕೆಲಸಗಳನ್ನು ಕೈಗೆತ್ತಿಕೊಳ್ಳಲಿದ್ದಾರೆ. ಇದರ ಜೊತೆಗೆ, ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಜೊತೆಗೂ ಸಂದೀಪ್ ಒಂದು ಬಿಗ್ ಪ್ರಾಜೆಕ್ಟ್‌ಗೆ ಕಮಿಟ್ ಆಗಿದ್ದಾರೆ. ಈ ಎಲ್ಲಾ ಸಿನಿಮಾಗಳ ಕಮಿಟ್‌ಮೆಂಟ್‌ಗಳು ಈಗಾಗಲೇ ಲಾಕ್ ಆಗಿರುವುದರಿಂದ, ಇವೆಲ್ಲವನ್ನೂ ಮುಗಿಸಲು ಅವರಿಗೆ ಕನಿಷ್ಠ 3 ರಿಂದ 4 ವರ್ಷಗಳು ಬೇಕಾಗಬಹುದು.

ಇದನ್ನೂ ಓದಿ: 370 ರೂ. ಬಿರಿಯಾನಿ ವಿವಾದ: ಕಾಮಿಡಿಯನ್ ಪ್ರಣೀತ್‌ಗೆ ಮೊದಲೇ ವಾರ್ನಿಂಗ್ ನೀಡಿದ್ದ ಸಲ್ಮಾನ್ ಖಾನ್

ಸಲ್ಮಾನ್ ಖಾನ್ ಮತ್ತು ಸಂದೀಪ್ ರೆಡ್ಡಿ ವಂಗಾ ಒಂದಾದರೆ ಬಾಕ್ಸ್ ಆಫೀಸ್ ಧೂಳೀಪಟವಾಗುವುದು ಗ್ಯಾರಂಟಿ. ಆದರೆ, ಸಂದೀಪ್ ಅವರ ಬಿಡುವಿಲ್ಲದ ಶೆಡ್ಯೂಲ್ ಹಾಗೂ ಸಲ್ಮಾನ್ ಖಾನ್ ಅವರ ಇತರೆ ಸಿನಿಮಾಗಳ ದಿನಾಂಕಗಳ ಕಾರಣದಿಂದಾಗಿ ಈ ಕ್ರೇಜಿ ಕಾಂಬಿನೇಷನ್ ಸದ್ಯದ ಮಟ್ಟಿಗಂತೂ ಕೇವಲ ಪೇಪರ್ ಮೇಲಿನ ಸುದ್ದಿಯಾಗಿಯೇ ಉಳಿಯುವ ಸಾಧ್ಯತೆ ಹೆಚ್ಚಿದೆ. ಆಫೀಷಿಯಲ್ ಅನೌನ್ಸ್‌ಮೆಂಟ್ ಬರುವವರೆಗೂ ಅಭಿಮಾನಿಗಳು ಕಾಯಲೇಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಚಲಿಸುತ್ತಿರುವ ರೈಲಿನಿಂದ ಪ್ಯಾಕ್ ಮಾಡಿದ ಆಹಾರ ಪೊಟ್ಟಣಗಳನ್ನು ಎಸೆದ ರೈಲ್ವೆ ಸಿಬ್ಬಂದಿ – Kannada News

ನವದೆಹಲಿ, ಜೂನ್ 11: ಚಲಿಸುತ್ತಿರುವ ರೈಲಿನಿಂದ ರೈಲ್ವೆ ಸಿಬ್ಬಂದಿ ಪ್ಯಾಕ್ ಮಾಡಿದ ಆಹಾರ(Food) ಪೊಟ್ಟಣಗಳನ್ನು ಎಸೆದಿರುವ ವಿಡಿಯೋ ವೈರಲ್ ಆಗಿದೆ. ರೈಲಿನಲ್ಲಿ ಮಾರಾಟಕ್ಕೆ ಇಡಲಾಗಿದ್ದ ಆಹಾರ ಹಳಸಿತ್ತು ಅದರಿಂದ ದುರ್ವಾಸನೆ ಬರುತ್ತಿತ್ತು ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. ಆಹಾರದ ಗುಣಮಟ್ಟ ಕಳಪೆಯಾಗಿದ್ದ ಕಾರಣ ಅನೇಕರು ಊಟ ಖರೀದಿಸಲು ನಿರಾಕರಿಸಿದ್ದದ್ದರಿಂದ, ತಯಾರಿಸಿದ ಆಹಾರ ಹಾಗೆಯೇ ಉಳಿದಿತ್ತು.

ಎಕ್ಸ್​ನಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ರೈಲು ಅತಿ ವೇಗದಲ್ಲಿ ಚಲಿಸುತ್ತಿರುವುದು ಕಾಣಿಸುತ್ತದೆ. ಆದರೆ, ಅದರ ಬಾಗಿಲ ಬಳಿ ನಿಂತಿರುವ ಪ್ಯಾಂಟ್ರಿ ಕಾರ್‌ನ ಸಿಬ್ಬಂದಿ, ದೊಡ್ಡ ದೊಡ್ಡ ತಟ್ಟೆಗಳಲ್ಲಿದ್ದ ನೂರಾರು ಜನರ ಹೊಟ್ಟೆ ತುಂಬಿಸಬಹುದಾಗಿದ್ದ ಉಳಿದ ಆಹಾರವನ್ನು ಯಾವುದೇ ಹಿಂಜರಿಕೆಯಿಲ್ಲದೆ ಹೊರಗೆ ಎಸೆಯುತ್ತಿದ್ದಾರೆ.

ಅನ್ನ, ಸಾರು ಹಳಿಗಳ ಮೇಲೆಲ್ಲಾ ಸಿಡಿದು ಬೀಳುವ ಈ ದೃಶ್ಯವನ್ನು ಕಂಡ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ದೇಶದಲ್ಲಿ ಹಸಿವು ಮತ್ತು ಬಡತನವನ್ನು ಹೋಗಲಾಡಿಸಲು ರೈಲ್ವೆ ಇಲಾಖೆ ಹೊಸ ವಿಲೇವಾರಿ ಕಾರ್ಯಾಚರಣೆ ಆರಂಭಿಸಿದಂತಿದೆ” ಎಂದು ಕೆಲವರು ವ್ಯವಸ್ಥೆಯ ವಿರುದ್ಧ ವ್ಯಂಗ್ಯವಾಗಿ ಹೇಳಿದ್ದಾರೆ. ಅರವಿಂದ್ ಶರ್ಮಾ ಎಂಬುವವರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಮತ್ತಷ್ಟು ಓದಿ: World Food Safety Day 2026: ಉತ್ತಮ ಆರೋಗ್ಯಕ್ಕಾಗಿ ಸೇವಿಸಿ ಶುದ್ಧ, ಸುರಕ್ಷಿತ ಆಹಾರ

ಸಾಮಾನ್ಯವಾಗಿ ರೈಲು ಪ್ರಯಾಣಿಕರಿಗೆ ರೈಲು ಮತ್ತು ನಿಲ್ದಾಣಗಳನ್ನು ಸ್ವಚ್ಛವಾಗಿಡಿ, ಕಸವನ್ನು ಕಸದ ಬುಟ್ಟಿಗೇ ಹಾಕಿ ಎಂದು ಸ್ವಚ್ಛ ಭಾರತ ಅಭಿಯಾನದ ಅಡಿಯಲ್ಲಿ ನಿರಂತರವಾಗಿ ಜಾಗೃತಿ ಮೂಡಿಸಲಾಗುತ್ತದೆ. ಆದರೆ, ಸ್ವತಃ ನಿಯಮ ಪಾಲಿಸಬೇಕಾದ ರೈಲ್ವೆ ನೌಕರರೇ ಈ ರೀತಿ ವರ್ತಿಸಿದರೆ ಸಾಮಾನ್ಯ ಜನರಿಗೆ ಯಾವ ಸಂದೇಶ ಹೋಗುತ್ತದೆ? ಎಂಬುದು ಸಾರ್ವಜನಿಕರ ನೇರ ಪ್ರಶ್ನೆಯಾಗಿದೆ.

ವಿಡಿಯೋ

ನಾವು ಕಸದ ಬುಟ್ಟಿ ಹುಡುಕಿ ಕಸ ಹಾಕುತ್ತೇವೆ. ಆದರೆ ಇವರು ಇಡೀ ಪ್ಯಾಂಟ್ರಿಯ ಕಸವನ್ನು ಹಳಿಗಳ ಮೇಲೆ ಸುರಿಯುತ್ತಿದ್ದಾರೆ. ಇವರನ್ನು ನೋಡಿ ಸಾಮಾನ್ಯ ಪ್ರಯಾಣಿಕರೂ ಕಸ ಹೊರಗೆ ಎಸೆಯಲು ಪ್ರೇರೇಪಿತರಾಗುವುದಿಲ್ಲವೇ? ಎಂದು ಪ್ರಯಾಣಿಕರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

ಹಳಿಗಳ ಮೇಲೆ ಆಹಾರವನ್ನು ಎಸೆಯುವುದು ಕೇವಲ ಸ್ವಚ್ಛತೆಯ ಸಮಸ್ಯೆಯಲ್ಲ, ಇದು ಮೂಕ ಪ್ರಾಣಿಗಳ ಜೀವಕ್ಕೆ ಕುತ್ತು ತರುವ ಕೃತ್ಯ. ಆಹಾರದ ವಾಸನೆಗೆ ಆಕರ್ಷಿತವಾಗಿ ಹಸುಗಳು, ನಾಯಿಗಳು ಮತ್ತು ಇತರ ಪ್ರಾಣಿಗಳು ಹಳಿಗಳ ಬಳಿ ಬರುತ್ತವೆ. ವೇಗವಾಗಿ ಬರುವ ರೈಲುಗಳಿಗೆ ಸಿಲುಕಿ ಅವು ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ.

ತ್ಯಾಜ್ಯವನ್ನು ನಿಗದಿತ ನಿಲ್ದಾಣಗಳಲ್ಲಿ ಸೂಕ್ತವಾಗಿ ವಿಲೇವಾರಿ ಮಾಡುವ ಬದಲು, ಈ ರೀತಿ ಕಾಡು-ಮೇಡುಗಳ ಮಧ್ಯೆ ಎಸೆಯುವುದರಿಂದ ಪರಿಸರವೂ ಸಂಪೂರ್ಣವಾಗಿ ಕಲುಷಿತಗೊಳ್ಳುತ್ತದೆ ಎಂಬ ಕಳಕಳಿ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

ವಿಡಿಯೋ ಗಮನಕ್ಕೆ ಬಂದ ತಕ್ಷಣ ಕಾರ್ಯಪ್ರವೃತ್ತರಾಗಿ ನಿಯಮ ಉಲ್ಲಂಘಿಸಿದ ನಿರ್ದಿಷ್ಟ ಅಡುಗೆ ಸಿಬ್ಬಂದಿಯನ್ನು (Catering Staff) ಗುರುತಿಸಬೇಕು, ರೈಲ್ವೆ ಆಸ್ತಿ ಮತ್ತು ಪರಿಸರವನ್ನು ಕಲುಷಿತಗೊಳಿಸಿದ್ದಕ್ಕಾಗಿ ಇಲಾಖೆಯು ಸಂಬಂಧಪಟ್ಟ ಕಂಟ್ರ್ಯಾಕ್ಟರ್ ಹಾಗೂ ಸಿಬ್ಬಂದಿಗೆ ಭಾರಿ ಮೊತ್ತದ ದಂಡ ವಿಧಿಸಬೇಕು ಎಂದು ಮನವಿ ಮಾಡಿದ್ದಾರೆ.

ಈ ಘಟನೆಯನ್ನು ಒಂದು ಪಾಠವಾಗಿ ತೆಗೆದುಕೊಂಡಿರುವ ರೈಲ್ವೆ ಇಲಾಖೆ, ತನ್ನ ಎಲ್ಲಾ ವಲಯಗಳ ಪ್ಯಾಂಟ್ರಿ ಉದ್ಯೋಗಿಗಳಲ್ಲಿ ಆಹಾರದ ಅಪವ್ಯಯ ತಡೆಗಟ್ಟುವಿಕೆ ಮತ್ತು ಪ್ರಾಣಿಗಳ ಸುರಕ್ಷತೆಯ ಬಗ್ಗೆ ವಿಶೇಷ ಜಾಗೃತಿ ಮೂಡಿಸಬೇಕು. ನೌಕರರೇ ಪ್ರಯಾಣಿಕರಿಗೆ ಮಾದರಿಯಾಗಬೇಕೆಂಬ ಸಂದೇಶವನ್ನು ರವಾನಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ನಿಮಗೆ ಸಹಾಯ ಬೇಕಿದ್ದರೆ ಕೇಳಿ; ಬಾಲಿವುಡ್​​ ನಟನಿಗೆ ನೇರ ಆಫರ್ ಕೊಟ್ಟಿದ್ದ ದಾವೂದ್ – Kannada News

ಬಾಲಿವುಡ್ ಚಿತ್ರರಂಗ ಹಾಗೂ ಭೂಗತ ಲೋಕದ ಲಿಂಕ್ ಬಗ್ಗೆ ಆಗಾಗ ಒಂದಿಲ್ಲೊಂದು ಸುದ್ದಿಗಳು ಕೇಳಿಬರುತ್ತಲೇ ಇರುತ್ತವೆ. ಈ ಹಿಂದೆ ಹಿರಿಯ ನಟ ದಿವಂಗತ ರಿಷಿ ಕಪೂರ್ ಕೂಡ ತಾವು ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ದಾವೂದ್ ಇಬ್ರಾಹಿಂನನ್ನು ಭೇಟಿಯಾಗಿದ್ದ ವಿಷಯವನ್ನು ಬಹಿರಂಗಪಡಿಸಿದ್ದರು. ತಮ್ಮ ಆತ್ಮಕಥೆ ‘ಖುಲ್ಲಂ ಖುಲ್ಲಾ’ ಪುಸ್ತಕದಲ್ಲಿ ದುಬೈನಲ್ಲಿ ತಾವು ದಾವೂದ್‌ನನ್ನು ಎರಡು ಬಾರಿ ಮುಖಾಮುಖಿಯಾಗಿದ್ದ ಸಂಗತಿಯನ್ನು ಅವರು ಮುಕ್ತವಾಗಿ ಹಂಚಿಕೊಂಡಿದ್ದರು. 1993 ರ ಮುಂಬೈ ಸರಣಿ ಬಾಂಬ್ ಸ್ಫೋಟಕ್ಕೂ ಮುನ್ನ ಈ ಭೇಟಿಗಳು ನಡೆದಿದ್ದರಿಂದ, ತಾವು ಇದನ್ನು ಮುಚ್ಚಿಡುವ ಪ್ರಯತ್ನ ಮಾಡಲಿಲ್ಲ ಎಂದು ರಿಷಿ ಕಪೂರ್ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ. ಆ ಸಮಯದಲ್ಲಿ ದಾವೂದ್‌ನನ್ನು ದೇಶದ ಶತ್ರು ಎಂದು ಯಾರೂ ಬಿಂಬಿಸಿರಲಿಲ್ಲ, ಹಾಗಾಗಿ ಆತನ ಆಹ್ವಾನವನ್ನು ಒಪ್ಪಿಕೊಳ್ಳುವುದರಲ್ಲಿ ತಮಗೆ ಯಾವುದೇ ತಪ್ಪು ಕಾಣಿಸಲಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದರು.

ಭೇಟಿ ನಡೆದಿದ್ದು 1988ರಲ್ಲಿ. ರಿಷಿ ಕಪೂರ್ ತಮ್ಮ ಸ್ನೇಹಿತ ಬಿಟ್ಟು ಆನಂದ್ ಅವರೊಂದಿಗೆ ಆಶಾ ಭೋಸ್ಲೆ ಮತ್ತು ಆರ್. ಡಿ. ಬರ್ಮನ್ ಅವರ ಸಂಗೀತ ಕಾರ್ಯಕ್ರಮಕ್ಕಾಗಿ ದುಬೈಗೆ ಹೋಗಿದ್ದರು. ಅವರು ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ, ಅಪರಿಚಿತ ವ್ಯಕ್ತಿಯೊಬ್ಬರು ಬಂದು ರಿಷಿ ಕಪೂರ್ ಕೈಗೆ ಫೋನ್ ನೀಡಿದ್ದರು. ‘ದಾವೂದ್ ಸಾಹೇಬರು ನಿಮ್ಮ ಜೊತೆ ಮಾತನಾಡುತ್ತಾರೆ’ ಎಂದು ಆ ವ್ಯಕ್ತಿ ಹೇಳಿದ್ದನು. ಫೋನ್‌ನಲ್ಲಿ ಮಾತನಾಡಿದ ದಾವೂದ್, ರಿಷಿ ಕಪೂರ್ ಅವರನ್ನು ಖುದ್ದಾಗಿ ಚಹಾ ಕೂಟಕ್ಕೆ ಆಹ್ವಾನಿಸಿದ್ದನು. ಗ್ಯಾಂಗ್‌ಸ್ಟರ್‌ನಿಂದ ಬಂದ ಈ ದಿಢೀರ್ ಆಹ್ವಾನ ಕಂಡು ನಟನಿಗೆ ಆಶ್ಚರ್ಯವಾದರೂ, ಕೊನೆಗೆ ಭೇಟಿಯಾಗಲು ಒಪ್ಪಿಕೊಂಡಿದ್ದರು.

ಆ ಮೊದಲ ಭೇಟಿಯ ದಿನದ ನೆನಪನ್ನು ಹಂಚಿಕೊಂಡಿದ್ದ ರಿಷಿ ಕಪೂರ್, ತಮಗೆ ದಾವೂದ್ ಇದ್ದ ಜಾಗದ ದಾರಿ ತಿಳಿಯಬಾರದು ಎಂಬ ಕಾರಣಕ್ಕೆ ಒಂದು ಹೊಳೆಯುವ ರೋಲ್ಸ್ ರಾಯ್ಸ್ ಕಾರಿನಲ್ಲಿ ಕೂರಿಸಿಕೊಂಡು ಸುತ್ತಿ ಬಳಸಿ ಕರೆದುಕೊಂಡು ಹೋಗಲಾಗಿತ್ತು ಎಂದು ಬರೆದಿದ್ದಾರೆ. ಅಲ್ಲಿ ದಾವೂದ್ ಇಬ್ರಾಹಿಂ ಇವರನ್ನು ನಗುತ್ತಾ ಬರಮಾಡಿಕೊಂಡಿದ್ದನು. ಅವರೆಲ್ಲರೂ ಒಟ್ಟಿಗೆ ಸುಮಾರು ನಾಲ್ಕು ಗಂಟೆಗಳ ಕಾಲ ಸಮಯ ಕಳೆದಿದ್ದರು. ಅಲ್ಲಿ ಅವರಿಗೆ ಚಹಾ ಮತ್ತು ಬಿಸ್ಕತ್‌ಗಳನ್ನು ನೀಡಲಾಗಿತ್ತು. ದಾವೂದ್ ಸ್ವತಃ ಮದ್ಯಪಾನ ಮಾಡುವುದಿಲ್ಲ ಮತ್ತು ಬೇರೆಯವರಿಗೂ ಅಲ್ಲಿ ಮದ್ಯವನ್ನು ನೀಡುವುದಿಲ್ಲ ಎಂದು ರಿಷಿ ಕಪೂರ್ ನೆನಪಿಸಿಕೊಂಡಿದ್ದಾರೆ. ಮಾತುಕತೆಯ ನಡುವೆ ದಾವೂದ್ ಅತ್ಯಂತ ಆತ್ಮೀಯವಾಗಿ ನಡೆದುಕೊಂಡು, ‘ನಿಮಗೆ ಏನೇ ಸಹಾಯ ಬೇಕಿದ್ದರೂ, ಹಣಕಾಸಿನ ನೆರವು ಬೇಕಿದ್ದರೂ ಯಾವುದೇ ಮುಜುಗರವಿಲ್ಲದೆ ನನ್ನನ್ನು ಕೇಳಿ’ ಎಂದು ಆಫರ್ ಕೊಟ್ಟಿದ್ದನು. ಆ ವಾತಾವರಣ ಹೆದರಿಸುವಂತಿರದೆ, ಮರ್ಯಾದೆ ಕೊಡುವಂತಿತ್ತು ಎಂದು ನಟ ಹೇಳಿದ್ದಾರೆ.

ಇದಾದ ನಂತರ 1989 ರಲ್ಲಿ ಇವರಿಬ್ಬರ ಎರಡನೇ ಭೇಟಿ ಅನಿರೀಕ್ಷಿತವಾಗಿ ನಡೆದಿತ್ತು. ರಿಷಿ ಕಪೂರ್ ತಮ್ಮ ಪತ್ನಿ ನೀತು ಕಪೂರ್ ಅವರೊಂದಿಗೆ ದುಬೈನ ಶೂ ಅಂಗಡಿಯೊಂದರಲ್ಲಿ ಶಾಪಿಂಗ್ ಮಾಡುತ್ತಿದ್ದಾಗ, ದಾವೂದ್ ತನ್ನ 8 ರಿಂದ 10 ಮಂದಿ ಬಾಡಿಗಾರ್ಡ್‌ಗಳ ಜೊತೆ ಅದೇ ಅಂಗಡಿಗೆ ಬಂದಿದ್ದನು. ನಟನನ್ನು ಗುರುತಿಸಿದ ದಾವೂದ್, ತಾನೇ ಮುಂದೆ ಬಂದು ಪ್ರೀತಿಯಿಂದ ಮಾತನಾಡಿಸಿದ್ದನು. ಅಷ್ಟೇ ಅಲ್ಲದೆ, ಆ ಅಂಗಡಿಯಲ್ಲಿ ರಿಷಿ ಕಪೂರ್ ದಂಪತಿ ಏನನ್ನು ಖರೀದಿಸಲು ಬಯಸುತ್ತಾರೋ, ಅದನ್ನೆಲ್ಲಾ ತಾನೇ ಕೊಡಿಸುವುದಾಗಿ ಹೇಳಿದ್ದನು. ಆದರೆ ರಿಷಿ ಕಪೂರ್ ನಯವಾಗಿಯೇ ಆ ಆಫರ್ ಅನ್ನು ತಿರಸ್ಕರಿಸಿದ್ದರು. ಅದೇ ಸಮಯದಲ್ಲಿ ದಾವೂದ್, ತನಗೆ ಭಾರತದಲ್ಲಿ ನ್ಯಾಯ ಸಿಗುವುದಿಲ್ಲ ಎಂದಿದ್ದಲ್ಲದೆ, ತನಗೆ ಹಲವು ರಾಜಕಾರಣಿಗಳ ಬೆಂಬಲವಿದೆ ಎಂದು ಹೇಳಿಕೊಂಡಿದ್ದನು. ಆದರೆ ರಿಷಿ ಕಪೂರ್, ‘ನನ್ನನ್ನು ಈ ರಾಜಕೀಯದ ವಿಷಯಗಳಿಂದ ದೂರವಿಡು ಗೆಳೆಯಾ, ನಾನು ಕೇವಲ ಒಬ್ಬ ನಟ’ ಎಂದು ಹೇಳಿ ಅಲ್ಲಿಂದ ಹೊರಟಿದ್ದರು.

ಇದನ್ನೂ ಓದಿ: ಆಲಿಯಾ, ದೀಪಿಕಾ, ಕತ್ರಿನಾ​ ಅಲ್ಲ, ರಣಬೀರ್​ ಕಪೂರ್ ಮದುವೆಯನ್ನು​ ಬೇರೆಯವರ ಜತೆ ನಿಶ್ಚಯಿಸಿದ್ದ ರಿಷಿ ಕಪೂರ್​

ಡಿ-ಕಂಪನಿ ಎಂಬ ಕ್ರಿಮಿನಲ್ ನೆಟ್‌ವರ್ಕ್ ಹುಟ್ಟುಹಾಕಿರುವ ದಾವೂದ್ ಇಬ್ರಾಹಿಂ, ಪ್ರಸ್ತುತ ಭಾರತಕ್ಕೆ ಬೇಕಾಗಿರುವ ಅತ್ಯಂತ ಅಪಾಯಕಾರಿ ತಲೆಮರೆಸಿಕೊಂಡಿರುವ ಅಪರಾಧಿಯಾಗಿದ್ದಾನೆ. ವಿಶ್ವಸಂಸ್ಥೆ (UN) ಕೂಡ ಇವನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸಿದೆ. 250 ಕ್ಕೂ ಹೆಚ್ಚು ಜನರ ಪ್ರಾಣ ಬಲಿಪಡೆದ ಮತ್ತು ನೂರಾರು ಜನರನ್ನು ಗಾಯಗೊಳಿಸಿದ 1993 ರ ಮುಂಬೈ ಸರಣಿ ಬಾಂಬ್ ಸ್ಫೋಟದ ಮಾಸ್ಟರ್ ಮೈಂಡ್ ಇದೇ ದಾವೂದ್ ಆಗಿದ್ದಾನೆ. ಇದರ ಜೊತೆಗೆ ಸಂಘಟಿತ ಅಪರಾಧಗಳು, ಹಣ ವಸೂಲಿ, ಕಳ್ಳಸಾಗಣೆ ಹಾಗೂ ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸು ಒದಗಿಸುವ ಹತ್ತಾರು ಕೃತ್ಯಗಳಲ್ಲಿ ಈ ಭೂಗತ ದೊರೆ ಭಾಗಿಯಾಗಿದ್ದಾನೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ರಿಚಾ ಘೋಷ್ ಸಿಡಿಲಬ್ಬರ: ಸ್ಟಂಪ್ ಔಟ್​ನಿಂದ ಕೈತಪ್ಪಿದ ಗೆಲುವು!

172 ರನ್​​ಗಳ ಕಠಿಣ ಗುರಿ… ಟೀಮ್ ಇಂಡಿಯಾ ಮೊದಲ 10 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 64 ರನ್​ಗಳು. ಪರಿಣಾಮ ಭಾರತ ತಂಡಕ್ಕೆ ಗೆಲ್ಲಲು 60 ಎಸೆತಗಳಲ್ಲಿ 108 ರನ್​ಗಳ ಅವಶ್ಯಕತೆಯಿತ್ತು. ಅಷ್ಟರಲ್ಲಾಗಲೇ ಟೀಮ್ ಇಂಡಿಯಾದ ಟಾಪ್ ಆರ್ಡರ್ ಬ್ಯಾಟರ್​ಗಳಾದ ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ ಹಾಗೂ ಹರ್ಮನ್​ಪ್ರೀತ್ ಕೌರ್ ಪೆವಿಲಿಯನ್ ಸೇರಿದ್ದರು. ಹೀಗಾಗಿಯೇ ಇಂಗ್ಲೆಂಡ್​ ಈ ಅಭ್ಯಾಸ ಪಂದ್ಯದಲ್ಲಿ ಸುಲಭವಾಗಿ ಗೆಲ್ಲಲಿದೆ ಎಂದು ಎಲ್ಲರೂ ಷರಾ ಬರೆದಿದ್ದರು.

ಆದರೆ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಚಾ ಘೋಷ್ ಅಕ್ಷರಶಃ ಅಬ್ಬರಿಸಿದರು. ಇಂಗ್ಲೆಂಡ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದರು. ಪರಿಣಾಮ ಮೈದಾನದ ಮೂಲೆ ಮೂಲೆಗೆ ಸಿಕ್ಸ್-ಫೋರ್​ಗಳ ಸುರಿಮಳೆಯಾಯಿತು.

ಈ ಸಿಡಿಲಬ್ಬರದೊಂದಿಗೆ ಟೀಮ್ ಇಂಡಿಯಾ 19 ಓವರ್ ಮುಕ್ತಾಯದ ವೇಳೆಗೆ 8 ವಿಕೆಟ್ ಕಳೆದುಕೊಂಡು 155 ರನ್​ ಕಲೆಹಾಕಿತು. ಅದರಂತೆ ಅಂತಿಮ ಓವರ್​ನಲ್ಲಿ 17 ರನ್​ ಬೇಕಿದ್ದವು. ಲಿನ್ಸೆ ಸ್ಮಿತ್ ಎಸೆದ 20ನೇ ಓವರ್​ನ ಮೊದಲ ಎಸೆತ ಎದುರಿಸಿದ ಶ್ರೀ ಚರಣಿ ಸಿಂಗಲ್ ತೆಗೆದರು.

ಸ್ಟ್ರೈಕ್​ಗೆ ಬಂದ ರಿಚಾ ಘೋಷ್ 2ನೇ ಎಸೆತದಲ್ಲಿ ಫೋರ್ ಬಾರಿಸಿದರು. ಮೂರನೇ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದರು. ಪರಿಣಾಮ ಕೊನೆಯ 3 ಎಸೆತಗಳಲ್ಲಿ ಕೇವಲ 6 ರನ್​ ಮಾತ್ರ ಬೇಕಿತ್ತು. ಈ ಹಂತದಲ್ಲಿ ಮತ್ತೊಂದು ಭರ್ಜರಿ ಸಿಕ್ಸರ್​ ಬಾರಿಸಲು ಮುನ್ನುಗ್ಗಿ ಬಂದ ರಿಚಾ ಘೋಷ್ ಸ್ಟಂಪ್ ಔಟ್ ಆದರು.

ಅಲ್ಲಿಗೆ 36 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 68 ರನ್ ಬಾರಿಸಿದ ರಿಚಾ ಘೋಷ್ ಇನಿಂಗ್ಸ್ ಅಂತ್ಯವಾಯಿತು. ಇದಾಗ್ಯೂ ಕೊನೆಯ 2 ಎಸೆತಗಳಲ್ಲಿ ಟೀಮ್ ಇಂಡಿಯಾ 6 ರನ್​ಗಳಿಸಿದ್ದರೆ ಈ ಪಂದ್ಯದಲ್ಲಿ ಜಯ ಸಾಧಿಸಬಹುದಿತ್ತು. ಆದರೆ ಲಿನ್ಸೆ ಸ್ಮಿತ್ ಎಸೆದ ಕೊನೆಯ ಓವರ್​ನ 5ನೇ ಎಸೆತದಲ್ಲಿ ರೇಣುಕಾ ಸಿಂಗ್ ಕ್ಯಾಚ್ ನೀಡಿದರು.

ಈ ಮೂಲಕ ಟೀಮ್ ಇಂಡಿಯಾ 19.5 ಓವರ್​ಗಳಲ್ಲಿ 166 ರನ್​ಗಳಿಸಿ ಆಲೌಟ್ ಆಗಿ 5 ರನ್​ಗಳಿಂದ ವಿರೋಚಿತವಾಗಿ ಸೋಲೊಪ್ಪಿಕೊಂಡಿದೆ. ಇಲ್ಲಿ ಇದು ವಿರೋಚಿತ ಸೋಲು ಎನ್ನಲು ಮುಖ್ಯ ಕಾರಣ ರಿಚಾ ಘೋಷ್ ಅವರ ಏಕಾಂಗಿ ಹೋರಾಟ. ಅದರಲ್ಲೂ ಮೊದಲ 10 ಓವರ್​ಗಳಲ್ಲಿ ಕೇವಲ 64 ರನ್​ಗಳಿಸಿ, ಆ ಬಳಿಕ 59 ಎಸೆತಗಳಲ್ಲಿ 102 ರನ್​ ಚಚ್ಚಿರುವುದು ಕೆಳ ಕ್ರಮಾಂಕದ ಬ್ಯಾಟರ್​ಗಳ ದಿಟ್ಟ ಹೋರಾಟ.

ಅಭ್ಯಾಸ ಪಂದ್ಯದಲ್ಲೇ ಇಂತಹದೊಂದು ಹೋರಾಟ ಮೂಡಿಬಂದಿರುವುದು ಟೀಮ್ ಇಂಡಿಯಾಗೆ ಶುಭ ಸೂಚನೆ. ಹೀಗಾಗಿ ಈ ಬಾರಿ ಮಹಿಳಾ ಟಿ20 ವಿಶ್ವಕಪ್​ನಲ್ಲಿ ಭಾರತ ಮಹಿಳಾ ತಂಡದಿಂದ ಭರ್ಜರಿ ಪ್ರದರ್ಶನವನ್ನು ನಿರೀಕ್ಷಿಸಬಹುದು.

 

 

 

Source link

IPL ‘ತಿಂಗಳ’ ಬದಲಾವಣೆಗೆ ಭರ್ಜರಿ ಪ್ಲ್ಯಾನ್

Source link