Headlines

nagaraj11081993

ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ; ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳಿಯ ಕೃತ್ಯ!

ಅಯೋಧ್ಯೆ, ಏ.3: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬುರ್ಖಾ ಧರಿಸಿದ ಮಹಿಳೆಯೊಬ್ಬಳು ಗ್ರಾಹಕಿಯ ಸೋಗಿನಲ್ಲಿ ಬಂದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿರುವ ಘಟನೆ ನಡೆದಿದೆ. ಅಯೋಧ್ಯೆಯ ಜನನಿಬಿಡ ಪ್ರದೇಶದಲ್ಲಿರುವ ಆಭರಣದ ಅಂಗಡಿಯೊಂದಕ್ಕೆ ಬಂದ ಮಹಿಳೆ, ಆಭರಣಗಳನ್ನು ಖರೀದಿಸುವ ನೆಪದಲ್ಲಿ ಒಳಬಂದಿದ್ದಾಳೆ. ಅಂಗಡಿಯವರು ಆಭರಣಗಳನ್ನು ತೋರಿಸುತ್ತಿದ್ದಾಗ ಸಮಯ ಸಾಧಿಸಿದ ಆಕೆ, ಸುಮಾರು 26 ಗ್ರಾಂ ತೂಕದ ಚಿನ್ನದ ಸರ ಮತ್ತು ನೆಕ್ಲೇಸ್‌ ಅನ್ನು ತನ್ನೊಂದಿಗೆ ತಂದಿದ್ದ ಬಟ್ಟೆಯೊಳಗೆ ಅಡಗಿಸಿಟ್ಟುಕೊಂಡಿದ್ದಾಳೆ. ಕಳುವಾದ ಈ ಆಭರಣಗಳ ಮೌಲ್ಯ ಸುಮಾರು 3,80,000 ರೂಪಾಯಿಗಳಿಗೂ…

Read More

ಮತ್ತೆ ಒಂದಾಗಿ ಸಿನಿಮಾ ಮಾಡ್ತಾರಾ ಅಜಯ್ ದೇವಗನ್, ಓಂ ರಾವುತ್? ಸಿಕ್ತು ಸ್ಪಷ್ಟನೆ

ಬಾಲಿವುಡ್‌ನ ಬ್ಲಾಕ್‌ಬಸ್ಟರ್ ಸಿನಿಮಾ ‘ತನಾಜಿ: ದಿ ಅನ್​ಸಂಗ್ ವಾರಿಯರ್’ ಮೂಲಕ ನಟ ಅಜಯ್ ದೇವಗನ್ ಅವರು ದೊಡ್ಡ ಮಟ್ಟದ ಯಶಸ್ಸು ಕಂಡಿದ್ದರು. ಆ ಸಿನಿಮಾಗೆ ನಿರ್ದೇಶಕ ಓಂ ರಾವುತ್ (Om Raut) ಅವರು ಆ್ಯಕ್ಷನ್-ಕಟ್ ಹೇಳಿದ್ದರು. ಈಗ ಓಂ ರಾವುತ್ ಮತ್ತು ಅಜಯ್ ದೇವಗನ್ ಮತ್ತೆ ಒಂದಾಗಲಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿತ್ತು. ಆದರೆ, ಈ ವರದಿಗಳ ಬಗ್ಗೆ ಈಗ ಅಜಯ್ ದೇವಗನ್ (Ajay Devgn) ಅವರ ಕಡೆಯಿಂದ ಅಧಿಕೃತ ಸ್ಪಷ್ಟನೆ…

Read More

ತೈಲ ಬಿಕ್ಕಟ್ಟು ಹೀಗೇ ಇದ್ದರೆ ಈ ವರ್ಷದ ಜಿಡಿಪಿ ಬೆಳವಣಿಗೆ ಎಷ್ಟಕ್ಕಿಳಿಯಬಹುದು ಗೊತ್ತಾ?

ಮುಂಬೈ, ಏಪ್ರಿಲ್ 3: ಪಶ್ಚಿಮ ಏಷ್ಯಾ ಹೊತ್ತಿ ಉರಿಯುತ್ತಿದ್ದು ಜಾಗತಿಕ ತೈಲ ಬಿಕ್ಕಟ್ಟು ಸ್ಥಿತಿ ಉದ್ಭವವಾಗಿದೆ. ಇದು ಹೆಚ್ಚು ಕಾಲ ಹೀಗೇ ಮುಂದುವರಿದರೆ ಜಾಗತಿಕ ಆರ್ಥಿಕ ಹಿಂಜರಿತ ಶುರುವಾಗುತ್ತದೆ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ. ಭಾರತದ ಆರ್ಥಿಕತೆಯೂ ಈ ಪರಿಣಾಮದಿಂದ ಹೊರತಾಗಿರುವುದಿಲ್ಲ. ಕೇರ್ ಎಡ್ಜ್ ರೇಟಿಂಗ್ಸ್ (CareEdge Ratings) ವರದಿ ಪ್ರಕಾರ ದೀರ್ಘಾವಧಿ ತೈಲ ಬಿಕ್ಕಟ್ಟಿನಿಂದ ಭಾರತದ ಆರ್ಥಿಕ ಬೆಳವಣಿಗೆಯ ವೇಗ ಮಂದಗೊಳ್ಳಬಹುದು ಮತ್ತು ಹಣದುಬ್ಬರ ಹೆಚ್ಚಬಹುದು. ಕಚ್ಛಾ ತೈಲ ಬೆಲೆ 2026-27ರ ವರ್ಷದಲ್ಲಿ ಒಂದು ಬ್ಯಾರಲ್​ಗೆ ಸರಾಸರಿ…

Read More

ಹಿಂದೂ ಯುವತಿಯನ್ನ ಮತಾಂತರಕ್ಕೆ ಯತ್ನ: ಸಮೀರ್ ನನ್ನು ಪೊಲೀಸರಿಗೆ ಒಪ್ಪಿಸಿದ ಹಿಂದು ಸಂಘಟನೆಗಳು

ಹುಬ್ಬಳ್ಳಿ, (ಏಪ್ರಿಲ್ 03): ಛೋಟಾ ಬಾಂಬೆ ಎಂದೇ ಹೆಸರುವಾಸಿಯಾರುವ ಹುಬ್ಬಳ್ಳಿಯಲ್ಲಿ (Hubbli) ಮತ್ತೊಂದು ಲವ್ ಜಿಹಾದ್ (Love Jihad) ಆರೋಪ ಕೇಳಿಬಂದಿದೆ. ಹುಬ್ಬಳಿಯ ವಿಜಯನಗರದ ನಿವಾಸಿ ಸಮೀರ್, ಹಿಂದೂ ಯುವತಿಯನ್ನು ಪರಿಚಯಿಸಿಕೊಂಡು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ್ದಾನೆಂದು ಹಿಂದೂ ಸಂಘಟನೆಗಳು ಆರೋಪಿಸಿದ್ದು, ಈ ಸಂಬಂಧ ಹಿಂದು ಕಾರ್ಯಕರ್ತರು ಸಮೀರ್ ನನ್ನು ಹಿಡಿದು ಹಳೇ ಹುಬ್ಬಳ್ಳಿ ಠಾಣೆಗೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಹುಬ್ಬಳ್ಳಿ ನಗರದ ವಿಕಾಸ ನಗರದ ಯುವತಿಯನ್ನು ಸಮೀರ್​​​ ಜಿಮ್ ನಲ್ಲಿ ಪರಿಚಯಿಸಿಕೊಂಡಿದ್ದು, ಬಳಿಕ ಲವ್ ಜಿಹಾದ್…

Read More

ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ

ಕುವೈತ್, ಏಪ್ರಿಲ್ 3: ಇರಾನ್‌ನ ವಿದ್ಯುತ್ ಸ್ಥಾವರಗಳನ್ನು ಧ್ವಂಸಗೊಳಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಎಚ್ಚರಿಕೆ ನೀಡಿದ ಬೆನ್ನಲ್ಲೇ ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರವಾದ ಮಿನಾ ಅಲ್-ಅಹ್ಮದಿ ಮೇಲೆ ಇರಾನ್‌ ಡ್ರೋನ್ ದಾಳಿ ನಡೆಸಿದೆ. ಡ್ರೋನ್ ದಾಳಿಯ ನಂತರ ಕುವೈತ್‌ನ ರಾಷ್ಟ್ರೀಯ ತೈಲ ಕಂಪನಿ ಮಿನಾ ಅಲ್-ಅಹ್ಮದಿ ಘಟಕಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕುವೈತ್ ಪೆಟ್ರೋಲಿಯಂ ಕಾರ್ಪೊರೇಷನ್ (KPC) ಮಿನಾ ಅಲ್-ಅಹ್ಮದಿ ಸಂಸ್ಕರಣಾಗಾರವನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಲಾಗಿದ್ದು, ಇದರ ಪರಿಣಾಮವಾಗಿ ಹಲವಾರು ಘಟಕಗಳಲ್ಲಿ ಬೆಂಕಿ…

Read More

ಮಗನ ಬಿಗಿದಪ್ಪಿದ ಸೋನಂ; ಎರಡನೇ ಮಗುವಿನ ಫೋಟೋ ಹಂಚಿಕೊಂಡ ನಟಿ

ನಟಿ ಸೋನಂ ಕಪೂರ್ ಹಾಗೂ ಆನಂದ್ ಅಹೂಜ ಇತ್ತೀಚೆಗೆ ತಮ್ಮ ಎರಡನೇ ಮಗುವನ್ನು ಸ್ವಾಗತಿಸಿದರು. ಈ ದಂಪತಿಗೆ ಗಂಡು ಮಗು ಜನಿಸಿದೆ. ಹೀಗಿರುವಾಗಲೇ ಅವರು ಮಗುವಿನ ಫೋಟೋ ಹಂಚಿಕೊಂಡಿದ್ದಾರೆ. ಸೋನಂ ಕಪೂರ್ ಅವರು ಮಾರ್ಚ್ 29ರಂದು ಗಂಡುಮಗುವಿಗೆ ಜನ್ಮನೀಡಿದರು. ಈಗ ಮಗುವಿನ ಜೊತೆ ಇರುವ ಮುದ್ದಾದ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಮಗುವನ್ನು ಬಿಗಿದಪ್ಪಿದ್ದಾರೆ. ಮತ್ತೊಂದು ಫೋಟೋದಲ್ಲಿ ಅವರು ಆಹಾರ ಸೇವನೆ ಮಾಡುತ್ತಿರುವ ಫೋಟೋ ಇದೆ. ಈ ಫೋಟೋದಲ್ಲಿ ಅವರ ಕೈಗೆ ಬ್ಯಾಂಡೇಜ್ ಮಾದರಿಯ ವಸ್ತುವನ್ನು…

Read More

ಗಂಡನ ಮನೆಯವರ ಕಿರುಕುಳಕ್ಕೆ ಜೀವಬಿಟ್ಟ 4 ತಿಂಗಳ ಗರ್ಭಿಣಿ: ಪತಿ ಮನೆಯವರಿಂದಲೇ ಕೊಲೆಯೆಂದು ಪೋಷಕರ ಆರೋಪ

ಶಿವಮೊಗ್ಗ, ಏಪ್ರಿಲ್​​ 03: ಆತ್ಮಹತ್ಯೆಗೆ ಯತ್ನಿಸಿದ್ದ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಡಬಟ್ಟೆ ಗ್ರಾಮದ 4 ತಿಂಗಳ ಗರ್ಭಿಣಿ ಚಿಕಿತ್ಸೆ ಫಲಿಸದೆ ಉಡುಪಿಯ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಶ್ವೇತಾ(30) ಮೃತಳಾಗಿದ್ದು, ಮಾ.29ರಂದು ಹೊಡಬಟ್ಟೆಯಲ್ಲಿ ಇವರು ಆತ್ಮಹತ್ಯೆಗೆ ಯತ್ನಿಸಿದ್ದರು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಹಿನ್ನೆಲೆ ಪೋಷಕರು ಮಗಳನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರೀಗ ಮೃತಪಟ್ಟಿದ್ದಾರೆ. ಪ್ರಕರಣ ಸಂಬಂಧ ನಾಲ್ವರ ಬಂಧನ ಸ್ಟಾಫ್​ ನರ್ಸ್ ಆಗಿ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡ್ತಿದ್ದ ಶ್ವೇತಾ ಅತ್ತೆ ಮತ್ತು…

Read More

Tamil Nadu Assembly elections 2026: ತಮಿಳುನಾಡು ಚುನಾವಣೆಗೆ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ, ಅಣ್ಣಾಮಲೈ ಹೆಸರಿಲ್ಲ

ಚೆನ್ನೈ, ಏಪ್ರಿಲ್ 03: ತಮಿಳುನಾಡು ವಿಧಾನಸಭಾ ಚುನಾವಣೆ(Tamil Nadu Assembly election)ಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೇಂದ್ರ ಚುನಾವಣಾ ಸಮಿತಿಯು 27 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಈ ಪಟ್ಟಿಯಲ್ಲಿ ಹಲವಾರು ಅನುಭವಿ ನಾಯಕರು ಮತ್ತು ಸ್ಥಳೀಯ ಪ್ರಭಾವ ಹೊಂದಿರುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. ಪಟ್ಟಿಯಲ್ಲಿ ಕೇಂದ್ರ ಸಚಿವರಿಂದ ಹಿಡಿದು ಮಾಜಿ ರಾಜ್ಯಪಾಲರವರೆಗೆ ಪ್ರಮುಖ ನಾಯಕರ ಹೆಸರಿದೆ, ಆದರೆ  ಪಕ್ಷದ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರ…

Read More

ಇನ್ಫೋಸಿಸ್​ನ ಹಿರಿಯ ಅಧಿಕಾರಿಗಳಂತೆ ನಟಿಸಿ 6 ಕೋಟಿ ರೂ. ಪಂಗನಾಮ! ನಾಲ್ವರ ಮೇಲೆ ಎಫ್ಐಆರ್

ಬೆಂಗಳೂರು, ಏಪ್ರಿಲ್ 03: ಇನ್ಫೋಸಿಸ್ (Infosys) ಸಂಸ್ಥೆಯ ಹಿರಿಯ ಅಧಿಕಾರಿಗಳಂತೆ ನಟನೆ ಮಾಡಿ 6.3 ಕೋಟಿ ರೂ. ವಂಚನೆ ನಡೆಸಿದ ಆರೋಪ ಕೇಳಿ ಬಂದಿದ್ದು, ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮೈಸೂರು ಮರ್ಕಂಟೈಲ್ ಕಂಪನಿ ನೀಡಿದ ದೂರಿನ ಪ್ರಕಾರ, ಗಗನ್ ಎಂಬಾತ ಇನ್ಫೋಸಿಸ್ ಸಂಸ್ಥೆಯ CSR ಪ್ರಾದೇಶಿಕ ಮುಖ್ಯಸ್ಥನಾಗಿ ತಾನು ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದ ಎಂದು ಆರೋಪಿಸಲಾಗಿದೆ. ನಂಬಿಕೆ ಗಳಿಸಲು ನಕಲಿ ತಂಡ ರಚಿಸಿ ಪರಿಶೀಲನೆ! ತಾನು ಹಿರಿಯ ಅಧಿಕಾರಿಗಳಾದ ನಿಲಾದ್ರಿ ಪ್ರಸಾದ್ ಮಿಶ್ರಾ ಹಾಗೂ…

Read More

ಭಾರತೀಯ ವಿವಾಹಗಳಲ್ಲಿ ಹೊಸ ಟ್ರೆಂಡ್: 13 ರಿಂದ 25 ಸಾವಿರ ರೂ. ಬೆಲೆಯ ಇಂಜೆಕ್ಷನ್ ತಗೊಳ್ತಿದ್ದಾರೆ ವಧುಗಳು!

ಇತ್ತೀಚಿನ ದಿನಗಳಲ್ಲಿ ತೂಕ ಇಳಿಸಿಕೊಳ್ಳುವುದು ಬಹಳ ಕಷ್ಟ, ಅದಕ್ಕೆ ಆಹಾರ ಪದ್ಧತಿಯಲ್ಲಿ ಬದಲಾವಣೆ, ವ್ಯಾಯಾಮ ಇನ್ನು ಅನೇಕ ಕಸರತ್ತುಗಳನ್ನು ಮಾಡಬೇಕು, ಸಾಮಾನ್ಯವಾಗಿ ಜನ ಡಯಟ್ ಮಾಡುತ್ತಾರೆ. ಈ ಕ್ರಮವು ಅನೇಕರಿಗೆ ಒಳ್ಳೆಯ ಫಲಿತಾಂಶವನ್ನು ನೀಡಿದೆ. ಆದರೆ ಇತ್ತೀಚಿನ ದಿನಗಳಲ್ಲಿ ತಕ್ಷಣಕ್ಕೆ ತೂಕ ಇಳಿಸಿಕೊಳ್ಳಲು ಔಷಧಿಗಳ ಕಡೆ ಹೋಗುತ್ತಿದ್ದಾರೆ. ಇಂಜೆಕ್ಷನ್​​ಗಳನ್ನು ತೆಗೆದುಕೊಂಡು ತೂಕ ಇಳಿಸಿಕೊಳ್ಳುತ್ತಾರೆ. ಅದರಲ್ಲೂ ಇದೀಗ ಮದುವೆ ಆಗುತ್ತಿರುವ ನೂತನ ಜೋಡಿಗಳು ಕೂಡ ಹಾದಿಯಲ್ಲೇ ಸಾಗುತ್ತಿದ್ದಾರೆ. ಈ ಬಗ್ಗೆ ಇಲ್ಲೊಂದು ವರದಿಯನ್ನು ನೀಡಲಾಗಿದೆ. ಮದುವೆ ಕಡಿಮೆ ಸಮಯ…

Read More